ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಶಿಕ್ಷಣ

“ಶಿಕ್ಷಕರ ಪ್ರೀತಿ ಮಮತೆ ಕಾಳಜಿಗೆ ಬೆಲೆಯೇ ಇಲ್ಲವೇ?!” ವಿಶೇಷಬರಹ ಜಯಲಕ್ಷ್ಮಿ .ಕೆ

ಶಿಕ್ಷಣ ಸಂಗಾತಿ “ಕ್ಷಕರ ಪ್ರೀತಿ ಮಮತೆ ಕಾಳಜಿಗೆ ಬೆಲೆಯೇ ಇಲ್ಲವೇ?!” ವಿಶೇಷಬರಹ ಜಯಲಕ್ಷ್ಮಿ .ಕೆ ಜಯಲಕ್ಷ್ಮಿ .ಕೆ “ಶಿಕ್ಷಕರ ಪ್ರೀತಿ ಮಮತೆ ಕಾಳಜಿಗೆ ಬೆಲೆಯೇ ಇಲ್ಲವೇ?!” ಶಿಕ್ಷಕರ ಪ್ರೀತಿ ಮಮತೆ ಕಾಳಜಿಗೆ ಬೆಲೆಯೇ ಇಲ್ಲವೇ?!!! ಒಮ್ಮೆ ದಿನಸಿ ಅಂಗಡಿಗೆ ಹೋಗಿದ್ದೆ. ಆಗ ಸರಕಾರಿ ಶಾಲಾ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ನನ್ನ ಪರಿಚಿತರೊಬ್ಬರು ಅಲ್ಲಿಗೆ ಬಂದು ನಾಲ್ಕು ಪುಟ್ಟ ಬ್ರಷ್ ಗಳನ್ನು ಕೊಂಡುಕೊಂಡರು. ಆ ಶಿಕ್ಷಕಿಯ ಮಕ್ಕಳು ಪಿ ಯು ಸಿ ಯಲ್ಲಿ ಓದುತ್ತಿದ್ದ ಕಾರಣ ನಾನು ಕುತೂಹಲದಿಂದ ಮತ್ತು ಬ್ರಷ್ ನ ಸೈಜ್ ಅವರು ಗಮನಿಸಿಲ್ಲ ವೇನೋ ಎಂಬ ಕಾಳಜಿಯಿಂದ ” ಇಷ್ಟು ಸಣ್ಣ ಬ್ರಷ್ ಯಾರಿಗೆ ” ಎಂದು ಕೇಳಿದೆ. ಅದಕ್ಕವರು ” ನಮ್ಮ ಶಾಲೆಯಲ್ಲಿ 4-5 ಮಕ್ಕಳಿದ್ದಾರೆ, ಅವರು ಹಲ್ಲು ಉಜ್ಜದೇ ಶಾಲೆಗೆ ಬರುತ್ತಾರೆ. ಅವರಿಗೆ ಬ್ರಷ್ ಪೇಸ್ಟ್ ಕೊಟ್ಟು ಶಾಲೆಯಲ್ಲಿಯೇ ಹಲ್ಲುಜ್ಜಿಸುತ್ತೇವೆ. ” ಎಂದರು! ನನಗೆ ಅಚ್ಚರಿ ಎನಿಸಿ ಇನ್ನೂ ಒಂದಷ್ಟು ಹೊತ್ತು ಅವರ ಶಾಲಾ ಮಕ್ಕಳ ಬಗ್ಗೆ ಕೇಳುತ್ತಾ ನಿಂತೆ. ” ಅಯ್ಯೋ ಮೇಡಂ, ಹಲ್ಲು ಉಜ್ಜಿಸೋದು, ಕೈ -ಕಾಲು ತೊಳೆಸೋದು ಇಷ್ಟೇ ಅಲ್ಲ…ನಾವು ಸೋಪ್ ಕೊಟ್ಟು ಅವರ ಸ್ಕೂಲ್ ಬ್ಯಾಗ್ ನನ್ನೂ ತೊಳೆಸಿ ಒಣ ಹಾಕಿಸುತ್ತೇವೆ. ಮಕ್ಕಳು ಶಾಲೆಗೆ ದೀರ್ಘ ಕಾಲ ಗೈರು ಹಾಜರಾದರೆ ಅವರ ಮನೆ ಹುಡುಕಿಕೊಂಡು ಹೋಗುತ್ತೇವೆ.. ಮಕ್ಕಳ ತಂದೆ ತಾಯಿಯರಿಂದ ಬಾಯಿಗೆ ಬಂದಂತೆ ಬೈಸಿಕೊಳ್ಳುತ್ತೇವೆ. ಕೆಲವೊಮ್ಮೆಅಂಥ ಮಕ್ಕಳ ಮನೆ ಮಂದಿ ‘ ನಮ್ಮ ಮಕ್ಕಳನ್ನು ಕರೆದುಕೊಂಡು ಹೋಗಲು ನೀವು ಯಾರು? ” ಎಂದು ಶಿಕ್ಷಕರಾದ ನಮ್ಮನ್ನು ಓಡಿಸಿದ್ದೂ ಇದೆ ‘ ಎಂದರು. ಇಷ್ಟೆಲ್ಲಾ ಕಾಳಜಿ ತೋರುವ ಶಿಕ್ಷಕರು ಒಂದು ಏಟು ಕೊಟ್ಟರೆ ಮಾತ್ರ ತಕ್ಷಣ ಅದು ಸುದ್ದಿಯಾಗುತ್ತದೆ. ಶಿಕ್ಷಕರಿಗೆ “ರಾಕ್ಷಸ ” ಬಿರುದು ಪ್ರಾಪ್ತಿಯಾಗುತ್ತದೆ!! ಇದೇ ವರ್ಷ ಒಂದು ಸಂಘಟನೆಯ ವತಿಯಿಂದ ಸಮೂಹ ನೃತ್ಯ ಸ್ಪರ್ಧೆ ಆಯೋಜನೆಯಾಗಿತ್ತು. ಅಂದು ನೃತ್ಯ ಮಾಡಿದ ಮಕ್ಕಳು ಬಹುಮಾನ ವಿತರಣೆ ಆಗುವ ಮುನ್ನವೇ ಮನೆಗೆ ಹೋಗಿದ್ದರು. ಕಾರ್ಯಕ್ರಮ ಭಾನುವಾರ ಆಗಿದ್ದರೂ ನೃತ್ಯ ಕಲಿಸಿದ ಆ ಶಿಕ್ಷಕಿ ಮಕ್ಕಳನ್ನು ಕರೆ ತಂದು ಅವರಿಗೆ ಡ್ರೆಸ್ ಮಾಡಿಸಿ ( ಇಲ್ಲಿಯೂ ಡ್ರೆಸ್ ಜವಾಬ್ದಾರಿ ಕೂಡಾ ಶಿಕ್ಷಕರದ್ದೇ ) ಮತ್ತೆ ಸ್ಪರ್ಧೆ ಮುಗಿದ ಮೇಲೆ ಮನೆಗೆ ಹೋದರು. ಅವರ ಬಹುಮಾನಗಳನ್ನು ಸಂಚಾಲಕರ ಜಾಗ್ರತೆಯಿಂದ ತೆಗೆದು ಇರಿಸಿದ್ದರು. ಆ ನಂತರ ಒಂದು ರಾತ್ರಿ ಎಂಟು ಗಂಟೆಗೆ ಆ ಶಿಕ್ಷಕಿ ಮಕ್ಕಳ ಬಹುಮಾನ ಮತ್ತು ಪ್ರಶಂಸನಾ ಪತ್ರ ಸಂಗ್ರಹಿಸಿಕೊಂಡರು. ‘ ಶಾಲೆಯಿಂದ ಬರುವಾಗ ಬಸ್ ಸರಿಯಾಗಿ ಸಿಗದೆ ಇಷ್ಟು ಹೊತ್ತಾಯಿತು, ನಾಳೆ ಒಂದು ಸಭೆ ಇದೆ. ಅಲ್ಲಿ ಬಹುಮಾನ ಕೊಟ್ಟರೆ ಮಕ್ಕಳಿಗೆ ಖುಷಿಯಾಗುತ್ತದೆ ಎಂದು ಆಟೋ ಮಾಡಿಕೊಂಡು ಇಲ್ಲಿಗೆ ಬಂದೆ ” ಎಂದರು. ಮಕ್ಕಳ ಖುಷಿಗಾಗಿ ಶಿಕ್ಷಕರು ಪಾಠ -ಪ್ರವಚನ ಅಲ್ಲದೆ ಮಕ್ಕಳ ಎಷ್ಟೋ ಸೇವೆಗಳನ್ನು ಮುಕ್ತ ಮನಸಿನಿಂದ, ಮಕ್ಕಳ ಮೇಲಿನ ಪ್ರೀತಿಯಿಂದ ಮಾಡುತ್ತಾರೆ. ಅವು ಯಾವುವೂ ಬೆಳಕಿಗೆ ಬರುವುದಿಲ್ಲ.ಅದೇ ಶಿಕ್ಷಕಿ ಶಾಲೆಯ ಕೈ ತೋಟಕ್ಕೆ ಒಂದು ಬಕೆಟ್ ನೀರನ್ನು ಮಕ್ಕಳಲ್ಲಿ ತರಿಸಿ ಹಾಕಿದರೆ ಅದು ಮಹಾ ಅಪರಾಧವಾಗುತ್ತದೆ!!ಗುರುದೇವ ರವೀಂದ್ರನಾಥ ಟಾಗೋರ್ ರವರ ಶಿಕ್ಷಣದ ಪರಿಕಲ್ಪನೆಯಲ್ಲಿ ಕ್ರಿಯಾಶೀಲ ಚಟುವಟಿಕೆಗಳಿಗೆ ಮೊದಲ ಆದ್ಯತೆ. ಮಕ್ಕಳ ಪಾಲಿಗೆ” ಜೀವಂತ ಪ್ರಯೋಗಾಲಯಗಳು ” ಎನಿಸಿರುವ ಶಾಲಾ ಕೈತೋಟಗಳು ಅವರಲ್ಲಿ ಪರಿಸರ ಪ್ರೇಮ ಬೆಳೆಸುವ ಮೂಲ ತಾಣಗಳು. ಅಲ್ಲಿ ಗಿಡ ನೆಡುವ, ಗಿಡಗಳಿಗೆ ನೀರುಣಿಸುವ, ಕಳೆ ಗಿಡಗಳನ್ನು ಕೀಳುವುದೇ ಮೊದಲಾದ ಚಿಕ್ಕ-ಪುಟ್ಟ ಕೆಲಸಗಳನ್ನು ಮಾಡಿಸುವುದು ಖಂಡಿತ ಅಪರಾಧವಲ್ಲ. ಸಸಿಗಳ ಬಗ್ಗೆ ಅರಿವು ಪಡೆದುಕೊಳ್ಳಲು ಇದು ಸಹಕಾರಿ. ಇದರಿಂದ ಮಕ್ಕಳು ಚಿಕ್ಕ ಪುಟ್ಟ ಜವಾಬ್ದಾರಿ ಗಳನ್ನು ನಿಭಾಯಿಸುವುದನ್ನೂ ಕಲಿಯುತ್ತಾರೆ. ಇದು ಪರಿಸರ ವಿಜ್ಞಾನದ ಕಲಿಕೆಯೇ ಅಲ್ಲವೇ? ಅಲ್ಲದೆ ನೀರಿನ ಬಕೆಟ್ ಹಿಡಿದ ಮಾತ್ರಕ್ಕೆ ಮಕ್ಕಳ ಕೈ ಪೆನ್ನು ಹಿಡಿಯಲು ಆಗದಷ್ಟು ಒರಟಾ ಗುವುದೂ ಇಲ್ಲ ( ಸತತವಾಗಿ ಕೆಲಸ ಮಾಡಿಸುವುದಿಲ್ಲ ತಾನೇ)ನಾವು ಬಾಲ್ಯದಲ್ಲಿ ಸರಕಾರಿ ಶಾಲೆಯಲ್ಲಿ ಓದುತ್ತಿದ್ದಾಗ ಶಾಲಾ ಕೈತೋಟಕ್ಕೆ ನೀರು ಹಾಕುವುದರ ಜೊತೆಗೆ ಎಲ್ಲ ಕೆಲಸಗಳನ್ನು ಕೂಡಾ ಕ್ರಾಫ್ಟ್ ಫಿರೀಡ್ ಗಳಲ್ಲಿ ಬಹಳ ಖುಷಿಯಾಗಿಯೇ ಮಾಡುತ್ತಿದ್ದೆವು. ಯಾವ ಪೋಷಕರು ಕೂಡಾ ಅದು ತಪ್ಪು ಎಂದು ದೂರುತ್ತಿರಲಿಲ್ಲ. ಆದರೆ ಇಂದು ಮಕ್ಕಳಿಂದ ಯಾವುದೇ ಶಾಲಾ ಕೆಲಸ ಮಾಡಿಸುವುದು ಕೂಡಾ ಅಪರಾಧ ಎನಿಸುತ್ತಿದೆ. ಶಿಕ್ಷಕರು ಮಾಡುವ ಎಲ್ಲ ಕೆಲಸಗಳಲ್ಲೂ ತಪ್ಪನ್ನೇ ಹುಡುಕುವ ಮನೋಭಾವ ಬದಲಾಗಬೇಕಿದೆ.ಇಂದಿನ ದಿನ ಗಳಲ್ಲಿ ಶಾಲೆಯಲ್ಲಾಗಲೀ ಮನೆಗಳಲ್ಲಾಗಲೀ ಮಕ್ಕಳು ಓದುವುದು ಬಿಟ್ಟು ಕಲಿಕೆಗೆ ಪೂರಕವಾಗುವ , ಬೇರೆ ಯಾವುದೇ ಉಪಯುಕ್ತ ಕೆಲಸ ಗಳನ್ನು ಮಾಡುವುದಿಲ್ಲ.ಯಾವುದೇ ಸಾಮಾನ್ಯ ಜ್ಞಾನ ಸುಮ್ಮನೆ ಬರುವುದಿಲ್ಲ.ಅದಕ್ಕೇ ಇರಬೇಕು ಪಿಯುಸಿ ಗೆ ಬಂದರೂ ಬಹಳಷ್ಟು ಮಕ್ಕಳಿಗೆ 5 ಹೂಗಳ ಹೆಸರು, ಐದು ಹಣ್ಣುಗಳ ಹೆಸರು, ಗಿಡ ಮರಗಳ ಹೆಸರು ಯಾವುದೂ ಗೊತ್ತಿಲ್ಲ. ಕರು ಎನ್ನುವಲ್ಲಿ ದನದ ಮರಿ ಎನ್ನುವವರು ಪಿಯುಸಿಯಲ್ಲಿದ್ದಾರೆ. ಶಿಕ್ಷಕರ ಕೊರತೆ, ಮೂಲಭೂತ ಸೌಲಭ್ಯಗಳ ಅಭಾವ, ಭೋದನೇತರ ಕೆಲಸ ಕಾರ್ಯಗಳ ಹೊರೆ, ಮಕ್ಕಳ ಗೈರುಹಾಜರಿ,ಅವರನ್ನು ಮರಳಿ ಶಾಲೆಗೆ ಕರೆತರಬೇಕಾದ ಜವಾಬ್ದಾರಿ, ಆಡಳಿತಾತ್ಮಕ ಕೆಲಸ – ಕಾರ್ಯ ಗಳ ಒತ್ತಡದ ಇವೆಲ್ಲವುಗಳ ನಡುವೆಯೂ ಮಕ್ಕಳನ್ನು ಪ್ರೀತಿ ಮಮತೆಯಿಂದ ನೋಡಿಕೊಳ್ಳುವ ಅದೆಷ್ಟೋ ಶಿಕ್ಷಕ – ಶಿಕ್ಷಕಿಯರಿದ್ದಾರೆ. ಅವರನ್ನು ಶಾಘನೆಗೈಯದೆ ಎಲ್ಲಿಯೋ ಯಾರೋ ಒಬ್ಬ ಶಿಕ್ಷಕ ಎಲ್ಲಿಯೋ ಮಾಡಿದ ತಪ್ಪನ್ನು ಮತ್ತೆ ಮತ್ತೆ ಭಿತ್ತರಿಸುತ್ತಾ ಮಕ್ಕಳು ಶಾಲೆಯಲ್ಲಿ ಬಿದ್ದರೂ, ಎದ್ದರೂ ” ಶಿಕ್ಷಕರಿಗೆ ಜವಾಬ್ದಾರಿ ಇಲ್ಲ ” ಎಂದು ಶಿಕ್ಷಕ ಕುಲವನ್ನು ಜರೆಯುವುದು ಎಷ್ಟು ಸರಿ? ಅವರ ಪ್ರೀತಿ ಮಮತೆ ಕಾಳಜಿಗೆ ಬೆಲೆಯೇ ಇಲ್ಲವೇ? ಜಯಲಕ್ಷ್ಮಿ ಕೆ

“ಶಿಕ್ಷಕರ ಪ್ರೀತಿ ಮಮತೆ ಕಾಳಜಿಗೆ ಬೆಲೆಯೇ ಇಲ್ಲವೇ?!” ವಿಶೇಷಬರಹ ಜಯಲಕ್ಷ್ಮಿ .ಕೆ Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ ಕಂತು-ಎಂಟು ಸವಿತಾ ದೇಶಮುಖ ಅವರಿಂದ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದಮಹಾನ್‌ ಚೇತನ ಲೇ-ಸವಿತಾ ದೇಶಮುಖಜಯದೇವಿತಾಯಿಲಿಗಾಡೆಯವರ ಮೊಮ್ಮಗಳು ೧೯೩೨ರ ಸಮಯ….. ಜಯದೇವಿ ತಾಯಿಯವರು ತಮ್ಮ 20ನೆಯ ವಯಸ್ಸಿನಲ್ಲಿ ಪಾದಾರ್ಪಣೆ ಮಾಡಿದ್ದರು…… ಮೂರು ಮಕ್ಕಳ ತಾಯಿಯಾಗಿ ಜೀವನದ ಕೆಲವು ಹಂತಗಳಲ್ಲಿ ತೇರ್ಗಡೆಯಾದ ನಂತರ…ಮನೆ, ಮಕ್ಕಳು, ಜವಾಬ್ದಾರಿಗಳ ಮಧ್ಯೆ … ಬಿಡುವಿನ ಸಮಯ ಸಿಕ್ಕಾಗಲೆಲ್ಲ ಜಯದೇವಿತಾಯಿಯ ಹೃದಯದಲ್ಲಿ ಒಂದು ಹೊಸ ಆಸೆ ಮೊಳಕೆಯೊಡೆದು ಅದು ಫಲ ಕೊಡುವ ಕಾಲ ಬಂದಿತ್ತು …ಮರಾಠಿ ಭಾಷೆ ಬರೆಯಲು ಓದಲು ಕಲಿತವರಾಗಿದ್ದರು .ಮನೆಯಲ್ಲಿ ಮಾತ್ರ ಕನ್ನಡದಲ್ಲಿ ಮಾತನಾಡಿದವರು,ಹಾಡುವರು.. ಮನೆಯ ಕೆಲಸ ಆಳುಗಳ ವಹಿವಾಟುವೂ ಕನ್ನಡದಲ್ಲಿ ನಡೆದಿರುತ್ತಿತ್ತು.ಮಕ್ಕಳೊಂದಿಗೂ ಕನ್ನಡ ಭಾಷೆಯಲಿ ಮಾತನಾಡುತಿದ್ದರು…….  ಆದರೆ ಮನದೊಳಗೊಂದು ಅತಿ ದೊಡ್ಡ ಕೊರಗು —“ಕನ್ನಡ ಭಾಷೆ ಓದಲು ಬರೆಯಲು ಬರದ ಕೊರಗು ….??!! ಆ ಸಮಯದಲ್ಲಿ ಪ್ರತಿದಿನ “ವಾರದ” ಪಾಠಶಾಲೆಯಿಂದ ಇಬ್ಬರು ಜಂಗಮರು ಪ್ರಸಾದಕ್ಕೆ ಎಂದು ಮನೆಗೆ ಬರುತ್ತಿದ್ದರು.   ಜಂಗಮ ವಿದ್ಯಾರ್ಥಿಳಿಗೆ ತಮಗೆ ಕನ್ನಡ ಭಾಷೆಯ ಜ್ಞಾನವನ್ನು ಕೊಡಬೇಕು ಎಂದು ಕೇಳಿದಾಗ ಅವರು ಸಂತಸದಿಂದ ಒಪ್ಪಿಕೊಂಡರು . *ಕೇವಲ ಎಂಟು ದಿನಗಳಲ್ಲಿ ಕನ್ನಡದ ಅಕ್ಷರ ಮಾಲೆಗಳನ್ನು ಅವರು ಕಲಿತರು ಮೂರು ಮಕ್ಕಳು ಆದ ನಂತರ…!!!* “ಜಂಗಮರು ಹಾಕಿ ಕೊಡುತ್ತಿದ್ದ  ಅಕ್ಷರವನ್ನು ಬಹಳ ಸರಾಗವಾಗಿ, ಸರಳ- ಸಹಜವಾಗಿ ಕನ್ನಡವನ್ನು ನಾನು ಕಲಿತೆ ಅದು ನನ್ನ ತಾಯಿ ಭಾಷೆಯ ಮರ್ಮ…. ಬಲು ಬೇಗ   ಒತ್ತಕ್ಷರಗಳನ್ನು ವರ್ಣಮಾಲೆಗಳನ್ನು ಬರೆಯಲು ಪ್ರಾರಂಭಿಸಿದೆ” ಅಂತ ಹೇಳ್ತಿದ್ದರು.   ಕಲಿತ ಕನ್ನಡ ಭಾಷೆಯನ್ನು ಅದೆಷ್ಟು ಸಂಭ್ರಮಿಸಿದರು ಅಂದರೆ ಕೈಗೆ ಸಿಕ್ಕ ಎಲ್ಲ ವಚನಗಳ ಪುಸ್ತಕಗಳನ್ನು ತೆಗೆದುಕೊಂಡು ಓದಲು ಶುರು ಮಾಡಿದರು ಅವುಗಳನ್ನು ಚೆನ್ನಾಗಿ ಓದುತ್ತಿದ್ದೇನಾ ಇಲ್ಲವಾ  ಅನ್ನೋದನ್ನ ತಿಳಿದುಕೊಳ್ಳಲು ಬಹಳ ಸಮಯವೇನು ಬೇಕಾಗಲಿಲ್ಲ ಅಂತ ಹೇಳುವರು… ಮೊದಲ ದಿನ ಕನ್ನಡದ “ಅ” ಅಕ್ಷರವನ್ನು ಬರೆಯುವಾಗ ಅವರ ಕೈ ಕಂಪಿಸಿತು…ವಯಸ್ಸು ಅಡ್ಡಬಂತು…ಮಕ್ಕಳು ನಗಬಹುದು ಅತ್ತೆ ಗಂಡ ಮುನಿಸಿಕೊಳ್ಳಬಹುದು ಎನ್ನುವ ಭಯವೂ ಬಂದಿತು…ಆದರೆ ಹೃದಯದ ಉತ್ಸಾಹ ಆ ಭಯಕ್ಕಿಂತ ದೊಡ್ಡದಾಗಿತ್ತು.“ಸಿದ್ದರಾಮ” ಎಂಬ ಪದವನ್ನು ಕನ್ನಡದಲ್ಲಿ ಓದಿದಾಗಅವರು ಕಣ್ಣೀರಿಟ್ಟರು…ಅದು ಕೇವಲ ಪದವಲ್ಲ,ಅದು ಅವರ “ಗುರುವಿನ ನಾಮ”…. “ಭಕ್ತಿಯ ರೂಪ ಒಡಮೂಡಿ ಕನ್ನಡ ಭಾಷೆಯಲ್ಲಿ ನೋಡಿ ಸಂತೋಷವಾಯಿತು…..ಆ ದಿನ ಅವರು ಮತ್ತೆ ಒಂದು ಬಾಲಕಿ ಆಗಿದ್ದರು —ಹೊಸ ಅಕ್ಷರಗಳ ಮುಂದೆ ಕುತೂಹಲದಿಂದಪ್ರತಿ ಪದವು ಮುತ್ತಿನಂತೆ ಸಂಗ್ರಹಿಸುತ್ತಿದ್ದರು.ಕನ್ನಡದಲ್ಲಿ ಮೊದಲ ಅಕ್ಷರ ಮಾಲೆಗಳ ನೋಡಿ ಕ್ಷಣಅವರ ಮುಖದಲ್ಲಿ ಮೂಡಿದ ಆ ನಗುಮಕ್ಕಳು ಹುಟ್ಟಿದಾಗ ಕಂಡ ನಗುವಿನಷ್ಟೇ ಪವಿತ್ರವಾಗಿತ್ತು.ಅದು ಕೇವಲ ಭಾಷೆ ಕಲಿತ ಸಂತಸವಲ್ಲ…ಅದು ತನ್ನ ಆತ್ಮವನ್ನು ಶರಣ ಸಂಸ್ಕೃತಿಗೆ- ಜೋಡಿಸಿದ ಸಂತಸ,ವಚನಗಳ ಹೆದ್ದಾರಿ,ತನ್ನ ಅನುಭಾವದ ಬಾಗಿಲು ತೆರೆದ ಸಂತಸ,…..ತಾನು ತಾಯಿಯಾಗಿದ್ದರೂ ತಾನೂ ಇನ್ನೂ ಕಲಿಯಬಲ್ಲೆ ಎಂಬ ಆತ್ಮವಿಶ್ವಾಸದ ಜಯಘೋಷ ಸಾರಿತ್ತು. ….ಅದೇಷ್ಟೋತ್ತು ಕಂಬನಿ ಸುರಿದವು ಅಂತ  ಅಭಿಮಾನದಿಂದ ಹೇಳುತಿದ್ದರು.ಕಣ್ಣೀರಿನಲ್ಲಿ ಹೆಮ್ಮೆ  ಇತ್ತು. ಮರಾಠಿಯ ಮಗಳಾಗಿ,,ಕನ್ನಡದ ಸೊಸೆಯಾಗಿ….,ಎರಡು ಭಾಷೆಗಳ ಸೇತುವೆಯಾದರು ಮುಂದೆ  ….ಕನ್ನಡಿಗರ ತಾಯಾಗಿ ನಿಂದರು ಅಂತೇನು ಹೇಳಬೇಕಾಗಿ ಆಗಿಲ್ಲವೇ..!! ಎಲ್ಲ‌ ಬಲ್ಲವಳೆಂಬ /ಇಲ್ಲವದು ಭ್ರಮೆಯೆನಗೆಬಲ್ಲವರ ಪಾದಹಿಡಿಯುವೆ -ಬಲ್ಲಿದರುಕಲಿಸಿರಿ ಮತ್ತು ನುಡಿಸಿರಿ!! ಅಂತ ಹೇಳತಾಬಲ್ಲವರಿಂದ‌ ಕಲಿಯುತ ಮುಂದೆ ನಡೆದರು. 16-09-1895 ರಲ್ಲಿ ಸೊಲ್ಲಾಪುರದ ಮಹಾದಾನಿಯಾದ ರಾವ್ ಬಹದ್ದೂರ್ ಮಲ್ಲಪ್ಪ ವಾರದರು “ಸರಸ್ವತಿ ಸದನ “.ಎಂಬ ಶೈಕ್ಷಣಿಕ ಸಂಸ್ಕೃತಿಕ ಸಂಸ್ಥೆ ಸ್ಥಾಪನೆ ಮಾಡಿದ್ದರು . ಸರಸ್ವತಿ ಸದನ ಇಲ್ಲಿ ಮಹಿಳೆಯರಲ್ಲಿ ಸ್ವಾವಲಂಬಿ ಜೀವನದ ಅರಿವು, ಶಿಕ್ಷಣದ ಮಹತ್ವ,ಆರೋಗ್ಯದ ಬಗ್ಗೆ ತಿಳುವಳಿಕೆ ಮೂಡಿಸುವ ಕಾರ್ಯಕ್ರಮಗಳ ಅನುಷ್ಠಾನ ಮಾಡಲಾಗುತ್ತಿತ್ತು.  ೧೯೧೦ ರಲ್ಲಿ ಸರಸ್ವತಿ ಸದನ ಮೂರು ವಿಭಾಗದಲ್ಲಿ ತನ್ನ ಕೆಲಸ ಹಮ್ಮಿಕೊಂಡಿತ್ತು. ಕನ್ನಡ ಮಾತನಾಡುವವರಿಗಾಗಿ ವಾರದ ಮಲ್ಲಪ್ಪನವರ ಮನೆಯಲ್ಲಿ “ವೀರಶೈವ ಮಹಿಳಾ  ಜ್ಞಾನ” ಮಂದಿರ ಕಟ್ಟಲಾಗಿತ್ತು.  ಇನ್ನು ಮರಾಠಿ ಮಾತನಾಡುವವರಿಗಾಗಿ ಶ್ರೀ ಶಂಕರ ರಾವ ದೇವಾಂಕರ್ ಅವರ ಮನೆಯಲ್ಲಿ “ಸರಸ್ವತಿ ಮಂದಿರ “ಕಟ್ಟಲಾಗಿತ್ತು . ಗುಜರಾತಿ ಭಾಷಿಕರಿಗಾಗಿ ಹಿರಾಚಂದ್ರ ನೇಮಿಚಂದ್ರ ಮನೆಯಲ್ಲಿ ಶ್ರಾವೀಕಾಶ್ರಮ ಸಂಸ್ಥೆಗಳನ್ನು ಸ್ಥಾಪನೆ ಮಾಡಿದ್ದರು.ಮಹಿಳೆಯರ ಒಳತಿಗಾಗಿ ಪ್ರತಿ  ವಾರಕ್ಕೊಮ್ಮೆ ಸಭೆ ಸೇರಿ.. ಮೊದಮೊದಲಿಗೆ ಅರಿಶಿಣ ಕುಂಕುಮ ಕೊಡುವ ಕಾರ್ಯಕ್ರಮವನ್ನು ಹಮ್ಮಿಕೊಂಡರು.ಎಡಬಿಡದೆ ಚಟುವಟಿಕೆಗಳು ನಡೆಯುತ್ತಿದ್ದವು. ಅಲ್ಲಿ ಪ್ರಾರ್ಥನೆ, ಕೀರ್ತನೆ ,ಪುರಾಣ ಪ್ರವಚನ ಸಂಪ್ರದಾಯ ಮಡಿ-ಮೈಲಿಗೆ ಅಂಥ ಮೂಢ ನಂಬಿಕೆಗಳಿಂದ ಮುಕ್ತರಾಗಿ ..ಧಾರ್ಮಿಕ ಸರಿಯಾದ ತಿಳುವಳಿಕೆ ಕೊಡುವುದು…ಅವರ ಕಾಳಜಿ‌ ಅವರೇ ವಹಿಸುವುದನ್ನು ಕಲಿಸುತ್ತಿದ್ದರು.  ಸ್ವಾವಲಂಬನೆಯ ಜೀವನ ನಡೆಸುವುದು ಬಗ್ಗೆ ತಿಳುವಳಿಕೆಯನ್ನು ಹೇಳಿಕೊಡಲಾಗುತ್ತಿತ್ತು .ವಾರದ ಮಲ್ಲಪ್ಪನವರ ಪತ್ನಿಯರಾದ ಗೌರವ್ವಬಾಯಿ ಮತ್ತು ಬಸವ್ವಬಾಯಿ ಹಾಗೂ ಅವರ ಮಗಳು ಸಂಗವ್ವನವರು ಮೇಲ್ವಿಚಾರಣೆ ವಹಿಸಿಕೊಂಡಿದ್ದರು.  ತಾಯಿಯೊಂದಿಗೆ ಜಯದೇವಿ ತಾಯಿಯವರು ಸರಸ್ವತಿ ಸದನದಲ್ಲಿ ತಮ್ಮ ಸೇವೆಯನ್ನು ಸಲ್ಲಿಸುತ್ತಿದ್ದರು.  ಮುಂದೆ 1932 ರಲ್ಲಿ ಮಹಿಳಾ ಜ್ಞಾನ ಮಂದಿರದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡರು ಏಕೆಂದರೆ ಪತಿ ಚೆನ್ನಮಲ್ಲಪ್ಪ ಲಿಗಾಡೆ ಅವರು ತಾಯಿಯವರ ಹೆಸರ ಮೇಲೆ ಜಗವನ್ನು ಖರೀದಿಸಿ ತಾಯಿಯವರ ಹೆಸರಿನಲ್ಲಿಯೇ ಕನ್ಯಾ ಶಾಲೆಯನ್ನು ಪ್ರಾರಂಭಿಸಿದರು. ಈ ಶಾಲೆಯು ಸೊಲ್ಲಾಪುರದಲ್ಲಿ 25 ವರ್ಷಗಳ ಕಾಲ ತಾಯಿಯವರ ಹೆಸರಿನಲ್ಲಿಯೇ ನಡೆದಿತ್ತು.  ತಾಯಿಯವರು ಈ ಶಾಲೆ ಗೆ ಸಿದ್ದರಾಮನ ಹೆಸರನ್ನೇ ಇಡಬೇಕೆಂದು ಒತ್ತಾಯಿಸಿದರು. “ಸಿದ್ದೇಶ್ವರ” ಶಾಲೆಯಾಗಿ ಪರಿವರ್ತನೆಗೊಂಡಿತು. ಈ ಶಾಲೆಯಲ್ಲಿ ಅವಿಶ್ರಾಂತವಾಗಿ ಓದುವುದನ್ನು ಕನ್ನಡದಲ್ಲಿ ಬರೆಯುವುದನ್ನು ರೂಢಿಸಿಕೊಂಡರು. ಸಿದ್ದೇಶ್ವರ ಕನ್ಯಾ ಪಾಠಶಾಲೆ ಸಿದ್ದೇಶ್ವರ ಕನ್ಯಾ ಪಾಠಶಾಲೆ ಜಯದೇವಿತಾಯಿಯವರ ಕಾರ್ಯ ಮಾಡುವ ಮುಖ್ಯವಾದ ಕಾರ್ಯ ಕ್ಷೇತ್ರಗಳು ಅಂದರೆ …ವಾರದ ಸಂಸ್ಕೃತ ಪಾಠಶಾಲೆ ,ಮಹಿಳಾ ಜ್ಞಾನ ಮಂದಿರ, ಸರಸ್ವತಿ ಸದನ ಹಾಗೂ ಸಿದ್ದೇಶ್ವರ ಕನ್ಯಾ ಶಾಲೆ, ಬಾಲ ಶ್ರಾವಿಕಾಶ್ರಮ ಮಂದಿರ  ಈ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲಿ ನಿರಂತರವಾಗಿ ದುಡಿದರು .ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದರು. ಮಹಿಳೆಯರಲ್ಲಿ ಶಿಕ್ಷಣದ ಅರಿವು ,ರಾಷ್ಟ್ರೀಯ ಚಿಂತನೆ ,ನಾಡ ನುಡಿ ಪ್ರಜ್ಞೆ ಸಮಾಜದ ಚಟುವಟಿಕೆಯ ಮೂಲಕ ಸ್ವಾವಲಂಬನೆಯ ಬದುಕು, ದೇಶಿಯ ಚಿಂತನೆಗಳನ್ನು ಬೆಳೆಸುತ್ತಿದ್ದರು.  ಈ ಕಾಲಕ್ಕೆ ಗಾಂಧೀಜಿಯವರು ಭಾರತಾರದಾದ್ಯಂತ ಸ್ವಾತಂತ್ರ್ಯದ ಹೋರಾಟದಲ್ಲಿ ಜನರನ್ನು ಒಂದು ಗುಡಿಸುತ್ತಿದ್ದರು ಅವರ ಅಹಿಂಸಾವಾದ ,ಸ್ವದೇಶಿ ಚಿಂತನೆಯ  ಚಟುವಟಿಕೆಗಳಲ್ಲಿ ಜಯದೇವಿ ತಾಯಿಯವರು ಸಕ್ರಿಯವಾಗಿ ಭಾಗಿಯಾಗುತ್ತಿದ್ದರು. ಗಾಂಧೀಜಿ ಚಿಂತನೆಗಳು ಜಯದೇವಿಯವರಿಗೆ ತುಂಬಾ ಆಕರ್ಷಣೆ ಮಾಡಿದ್ದವು . ಇದೇ ಕಾಲಕ್ಕೆ ತಿಲಕರು ಸ್ವದೇಶಿ ಚಳುವಳಿಯ ನಾಲ್ಕು ಅಂಕಗಳಾದ ಸ್ವರಾಜ್ಯ ,ರಾಷ್ಟ್ರೀಯ ಶಿಕ್ಷಣ, ಸ್ವದೇಶಿ ಚಳುವಳಿ ,ವಿದೇಶಿ ಬಹಿಷ್ಕಾರ …..ಮೌಲ್ಯಗಳ ಪ್ರಚಾರಕ್ಕಾಗಿ ಮುಂಬೈ ಕರ್ನಾಟಕದಲ್ಲಿ ಪ್ರವಾಸ ಕೈಗೊಂಡಿದ್ದರುಆ ಕಾಲದಲ್ಲಿ ತಿಲಕರು ವಾರದವರ ಮನೆತನದಲ್ಲಿ ಗಣೇಶೋತ್ಸವವನ್ನು ಬಹಳ ವಿಜೃಂಭಣೆಯಿಂದ ಮಾಡುತ್ತಿರುವುದನ್ನು ನೋಡಿ ತಿಲಕರು ಸಾಮೂಹಿಕವಾಗಿ ಈ ರೀತಿಯಲ್ಲಿ ಗಣೇಶನನ್ನು ಪೂಜಿಸಿದರೆ ಸ್ವಾತಂತ್ರ ಹೋರಾಟದಲಿ ಎಲ್ಲ ಮತೀಯರು ಎಲ್ಲ ಜಾತಿಯವರು ಒಂದು ಸೇರಿ ಭಾರತೀಯರು ಒಂದಾಗಿ ಬ್ರಿಟಿಷರ ವಿರುದ್ಧ ಹೋರಾಡಬಹುದು ಎನ್ನುವ ವೈಚಾರಿಕತೆಯನ್ನು ಪಡೆದುಕೊಳ್ಳುತ್ತಾರೆ. ಭಾರತದಾದ್ಯಂತ ಗಣೇಶ ಉತ್ಸವವನ್ನು ಪ್ರಾರಂಭಿಸುವುದನ್ನು ಶುರು ಮಾಡಿದರು. ತಿರಕರು ವಾರದ ಮಲ್ಲಪ್ಪನವರಿಗೆ ಧನ್ಯವಾದ ಹೇಳಿರುವ ಆಕರ‌ ಲಭ್ಯವಾಗಿವೆ. ಅಂತೆಯೇ  ಜಯದೇವಿ ತಾಯಿಯವರು ಕೂಡ ಗಣೇಶನ ಪೂಜೆಯನ್ನು ಅತಿ ಸಂಭ್ರಮದಿಂದ ಅನುಸರಿಸುತ್ತಿದ್ದರು ಹಾಗೆ ಗಾಂಧೀಜಿಯವರ  ಆಚಾರ ವಿಚಾರಗಳನ್ನು ಕಾರ್ಯರೂಪದಲ್ಲಿ ತರುತ್ತಿದ್ದರು .ಅವರಲ್ಲಿಯ ರಾಷ್ಟ್ರ ಪ್ರೇಮವು ಉತ್ಕಟವಾಗಿತ್ತು.  ರಾಷ್ಟ್ರೀಯ ಚಟುವಟಿಕೆ ಹಾಗೆ ಚರ್ಚೆಗಳಲ್ಲಿ ಭಾಗವಹಿಸುತ್ತಿದ್ದರು .   ಕರ್ನಾಟಕದಲ್ಲಿ ಸುಮಾರು 48 ರಾಷ್ಟ್ರೀಯ ಶಾಲೆಗಳದ್ದವು. ಜಯದೇವಿ ತಾಯಿಯವರು ರಾಷ್ಟ್ರೀಯ ಶಾಲೆಗಳನ್ನು ಪ್ರೋತ್ಸಾಹಿಸುತ್ತಿದ್ದರು…  ಸೊಲ್ಲಾಪುರದಲ್ಲಿ ಬಾಲ “ವಿದ್ಯಾ ಮಂದಿರ, ಶ್ರಾವಿಕಾಶ್ರಮ ಶಾಲೆ ,ಹುಬ್ಬಳ್ಳಿಯಲ್ಲಿ ‘ಭಾರತೀಯ ಹೈಸ್ಕೂಲ್,” ಧಾರವಾಡದಲ್ಲಿ “ಜಯದೇವಿತಾಯಿ ಲಿಗಾಡೆ” ಹೈಸ್ಕೂಲ್ ಶಾಲೆಗಳನ್ನು ಆರಂಭಿಸಿದ್ದರು. ಅಲ್ಲಿ ರಾಷ್ಟ್ರೀಯ ವಿಚಾರಗಳ ಕುರಿತು ಚರ್ಚೆಗಳು ನಡೆಯುತ್ತಿದ್ದವು. *ಸರಸ್ವತಿ ವಿದ್ಯಾ ಮಂದಿರ*  ತಾಯಿ ಸಂಗವ್ವ ಮಡಿಕೆ ,ಭಾಗೀರಥಿಬಾಯ್, ಪಂಚವ್ವಬಾಯಿ ಅವರು ಅಸಹಕಾರ ಚಳುವಳಿಯಲ್ಲಿ ಧುಮುಕಿದ್ದರೂ ಅದೇ ರೀತಿಯಾಗಿ ತಾಯಿಯವರು ಗಂಡನ ಮನೆಯಲ್ಲಿ ಇದ್ದುಕೊಂಡು ಗಾಂಧೀಜಿಯವರು ಕರೆ ಕೊಡುತ್ತಿದ್ದ ಎಲ್ಲ ರಾಷ್ಟ್ರೀಯ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದರು. ಕನ್ನಡವನ್ನು ಕಲಿಯುತ್ತಲೇ ಮುಂದೆ ಕನ್ನಡದ ವೇಧಾವಿ ಭಾಷಣಕಾರ್ತಿಯಾಗಿ ಪರಿವರ್ತಿಸಿದರು.ಮೊಟ್ಟ ಮೊದಲ ಬಾರಿ ಜಯದೇವಿ ತಾಯಿಯವರು ಭಾಷಣವನ್ನು ಮಾಡಿದ ನೆನಪನ್ನು ಮಾಡಿಕೊಳ್ಳುತ್ತಿದ್ದರು…… *ಮೊಟ್ಟ ಮೊದಲ ಬಾರಿ ಭಾಷಣ ಮಾಡಿದ ವಾರದ ವಾಡೆ* ಮೊದಲಸಲ ಬಾಷಣ ಮಾಡಿದ ವಾಡೆ ಮನೆಯ ಎದುರುಗಡೆ ಸ್ಥಿತವಾದ ವಾರದವರ ಮನೆಯಲ್ಲಿ ತಿಂಗಳಿಗೊಮ್ಮೆ  ಅಕ್ಕಮಹಾದೇವಿಯ  ಪುರಾಣ ಪಠಣ ಮಾಡಿದ ಗುರುಗಳು ಜಯದೇವಿ ತಾಯಿಯವರನ್ನು ಕರೆದು “ನಾಳೆ ನೀನೇ ಭಾಷಣವನ್ನು ಮಾಡಿ ಪುರಾಣದ ಸಮಾಪ್ತಿಯನ್ನು ಮಾಡಬೇಕು “ಎಂದು ಕೇಳಿಕೊಂಡರು…  ಜಯದೇವಿ ತಾಯಿಯವರಿಗೆ  ಕೈ ಕಾಲು ಕಂಪಿಸಿದವು ಹೊಟ್ಟೆಯಲ್ಲಿ ಚಿಟ್ಟೆ ಓಡಾಡಿದಂಗ ಆಯಿತುಅಂತ ಹೇಳುತ್ತಿದ್ದರು. ಮೊಟ್ಟ ಮೊದಲ ಬಾರಿಗೆ ಭಾಷಣ ಮಾಡುವುದು ಸಾಮಾನ್ಯ ಕೆಲಸವಾಗಿರಲಿಲ್ಲ ಏಕೆಂದರೆ ಕೇವಲ ತಾಯಿ ಭಾಷಣ ಮಾಡುವುದನ್ನು ಕೇಳುತ್ತಿದ್ದರು… ಆದರೆ ಭಾಷಣ ಮಾಡಿದವರಾಗಿರಲಿಲ್ಲ.. ತಂದೆಯ ಹತ್ತಿರ ಹೋಗಿ ಏನನ್ನು ಮಾತನಾಡಬೇಕು ಅನ್ನೋದನ್ನ ಸುಮಾರು 9 -10 ಪುಟಗಳಷ್ಟು ಭಾಷಣವನ್ನು ಬರೆದುಕೊಂಡು ಬಂದು…. ಪುಟಗಳಲ್ಲಿನ ಒಂದು ಅಕ್ಷರವನ್ನು ಕೂಡ ಬಿಡದಂತೆ ಮರು ದಿವಸವೇ  ಭಾಷಣ ಮಾಡಿದರು.ಆ ಭಾಷಣವು ಎಲ್ಲರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಹಾಗೂ ಪೂರ್ತಿಯಾಗಿ ಎಲ್ಲರ ಮನ ಗೆದ್ದಿದ್ದರು.ತಾಯಿಯವರು ಮಾಡುತ್ತಿದ್ದ ಭಾಷಣವನ್ನು ಕೇಳಿದ ತಂದೆ ಕಣ್ಣುನೀರು ಉರಿದವು… ತಾಯಿ  ಮಗಳನ್ನು ತಬ್ಬಿಕೊಂಡಿದ್ದರು .ಹಾಗೆ ಗೌರವ್ವಬಾಯಿಯು   ಬೆರಳುಗಳಿಂದ ನಿವಾಳಿಸಿ ಲಟ್ಟಿ ಮುರದಿದ್ದರು.ಇನ್ನೂ ಸಮಾಜದ ಸ್ತ್ರೀಯರೆಲ್ಲರೂ …ಬಂದಂತಹ ಎಲ್ಲ ಅತಿಥಿಗಳು ಅತ್ಯಂತ ಹೆಮ್ಮೆಯಿಂದ ನೋಡುತ್ತಿರುವ ದೃಶ್ಯ ಮನಸ್ಸಿಗೆ ಬಹಳ ಪ್ರಫುಲ್ಲತೆ ತಂದಿದ್ದು ….. ಮನದಲ್ಲಿ ಸಾವಿರ ಬಾರಿ ಸಿದ್ದರಾಮಯ್ಯನವರು ನೆನೆಸಿ ಧನ್ಯವಾದಗಳು ಹೇಳಿದ್ದರು.ಹಾಗೆ ಅತ್ತೆಯು ಭಾಷಣಗಾರತೀಯ ಮಗಳು ಅಂತ  ಅಣುಕಿಸುತ್ತಿರುವ ಮಾತುಗಳು ಕೂಡ  ನೆನಪಿಗೆ ಬಾರದೇ ಇರಲಿಲ್ಲ ಅಂತ ಹೇಳಿದರು.  ಮುಂದೆ ಪ್ರಯಾಗಬಾಯಿ ಅತ್ತೆಯು ಕೂಡ ತಾಯಿಯವರು ಮಾಡುವ ಭಾಷಣದ ಅಭಿಮಾನಿಗಳಾದರು.ಗಂಡ ಚೆನ್ನಮಲ್ಲಪ್ಪನವರು ತುಂಬಾ ಅಭಿಮಾನ ಪಡುವಂತ ಆಯ್ತು. *ಶರಣರ ಕರುಣೆಯು ಕಾಸರಕವಲೊಡೆದು ಹರೆದು ಹಾಯದಿತ್ತಎನ ಮೇಲೆ ಸಿದ್ದನ ವರವಾಗಿತ್ತು ..*… ಮುಂದೆ ಅವರ ಜನಜಾಗೃತಿಯ ಕಾರ್ಯ-ಭಾಷಣ ಗಾರ್ತಿಯ ಪಯಣ ಸಾಗುತ್ತಲೇ ನಡೆಯಿತು. ಅಲ್ಲಲ್ಲಿ ಎಲ್ಲ ಸಮಾಜದಲ್ಲಿ ಭಾಷಣಗಳನ್ನು ಮಾಡುತ್ತಿದ್ದರು.  ಸುತ್ತಲಿನ ಹಳ್ಳಿಗಳಿಂದ ಊರುಗಳಿಂದ ಭಾಷಣ ಮಾಡುವುದಕ್ಕಾಗಿ ಆಮಂತ್ರಣ ಬರಲಾರಂಸಿದವು .ಅನೇಕ ಶರಣ ಅನುಭಾವಿಗಳ ಒಡನಾಟ ಬೆಳೆಯ ಲಾರಂಭಿಸಿತು. ಕನ್ನಡ ಮೇರು ಸಾಹಿತ್ಯದ ಅಧ್ಯಯನ, ಶರಣ ಸಂಸ್ಕೃತಿಯ ಪರಂಪರೆಯ ಆಚರಣೆಮಾಡುತ್ತಾ ನಾಡಿನ ಮೂಲೆ ಮೂಲೆಗಳಲ್ಲಿ ಹೋಗಿ ಭಾಷಣವನ್ನು ಕೊಡುವುದು ಸಮಾಜದ ಸೇವೆಯನ್ನು ಮಾಡುವುದು ರಾಜ್ಯದ ರಾಷ್ಟ್ರದ ಅನೇಕ ಸಂತರು ಮಹಾತ್ಮರು, ಶಿವಯೋಗಿಗಳು, ಮಹಾನುಭಾವರೊಂದಿಗೆ ಜೊತೆ ಗೂಡಿ ಅನೇಕ ಕಾರ್ಯಗಳನ್ನು ಹಮ್ಮಿಕೊಳ್ಳಲಾರಂಬಿಸಿದರು. ಜಯದೇವಿ ತಾಯಿ ಅವರ ಸರ್ವತೋಮುಖ ಸಮಾಜದ ಕಾರ್ಯಗಳಿಗೆ ಹೇಗೆ ಮುಂದುವರೆದವು ಅನ್ನುವದ ಮುಂದಿನ ವಾರ ನೋಡೋಣ ಬನ್ನಿ….. ಸವಿತಾ ದೇಶಮುಖ

Read Post »

ಅನುವಾದ, ಕಥಾಗುಚ್ಛ

ತೆಲುಗು ಕಥೆ “ನಾಸ್ತಿಕ ದೇವರು”ಕನ್ನಡಾನುವಾದ ರಂಗನಾಥ ರಾಮಚಂದ್ರರಾವು

ಅನುವಾದ ಸಂಗಾತಿ ನಾಸ್ತಿಕ ದೇವರು ತೆಲುಗು ಮೂಲ : ಜಿ. ಉಮಾಮಹೇಶ್ವರ್ಕನ್ನಡಕ್ಕೆ : ರಂಗನಾಥ ರಾಮಚಂದ್ರರಾವು ಶ್ರೀಶೈಲಂ ಪ್ರಾಜೆಕ್ಟ್ ಕಾಲೋನಿಯಲ್ಲಿ ಎಲ್ಲರನ್ನೂ ಅತ್ತೆ-ಮಾಮಾ ಎಂದು ಕರೆಯುವುದುವಾಡಿಕೆ. ಹಾಗಾಗಿ ಅವರು ಯಾವದೇ ಪ್ರದೇಶದವರಾಗಲಿ, ಯಾವುದೇ ಧರ್ಮದವರಾಗಲಿ, ಯಾವುದೇ ಜಾತಿಯವರಾಗಲಿ ಅಲ್ಲಿ ಅತ್ತೆ-ಮಾವ. ಮಕ್ಕಳು ನಮಗಿಂತ ದೊಡ್ಡವರಾಗಿದ್ದರೆ, ಅಣ್ಣ ಮತ್ತು ಅಕ್ಕಾ ಎಂದೇ ಕರೆಯುತ್ತಿದ್ದೆವು.  ಹಾಗೆ ನನ್ನ ತಂದೆಯ ಕಛೇರಿಯಲ್ಲಿ ಕೆಲಸಮಾಡುವ ಲಕ್ಷ್ಮೀರೆಡ್ಡಿ ಅವರು ನಮಗೆ ಮಾಮವಾದರು. .ಸ್ವಲ್ಪ ತೆಳ್ಳಗಿನ ಗುಂಗುರು ಕೂದಲನ್ನು ಹಿಂದಕ್ಕೆ ಬಾಚಿಕೊಂಡು ಬಿಳಿಅಂಗಿ ಹಾಕಿಕೊಂಡು ಮೊಣಕೈಯ ವರೆಗೆ ಮಡಚಿ ಸೈಕಾಲ್ ತುಳಿಯುತ್ತಿದ್ದರು. ಅವರು ನನ್ನ ತಂದೆಯ ಕಛೇರಿಯ ಅಕೌಂಟ್ಸ್ ವಿಭಾಗದಲ್ಲಿ ಕೆಲಸಮಾಡುತ್ತಿದ್ದರು. ಆ ದಿನಗಳಲ್ಲಿ ಪ್ರಾಜೆಕ್ಟ್  ಕೆಲಸಗಳು  ಬಿರುಸಿನಿಂದ ನಡೆಯುತ್ತಿದ್ದರಿಂದ ಕೆಲಸದ ಒತ್ತಡ ಹೆಚ್ಚಿತ್ತು. ಎಲ್ಲರೂ  ತಪಾಸಣೆಗೆ ಹೋಗಿ ನೋಟ್ ಮಾಡಿದ ಎಂ.ಬುಕ್ಸ್ ಗಳಲ್ಲಿನ (ಮೇಸರ್ಮೆಂಟ್ಸ್ ಬುಕ್ಸ್)  ವಿವರಗಳನ್ನು ಪರಿಶೀಲಿಸಿ, ಅವುಗಳನ್ನು ಎಣಿಸಿ ಅವು ಸರಿಯಾಗಿವೆಯೇ ಅಥವಾ ಇಲ್ಲವೇ ಎಂಬುದನ್ನು  ನಿರ್ಧರಿಸಿದರು. ಇದಲ್ಲದೆ ಅವರು ಕ್ಲೆಯಿಮ್  ಮಾಡಿದ ಮೊತ್ತವೂ, ಈ ವಿವರಗಳಿಗ ಅನುಗುಣವಾಗಿಯಿದಯೆ  ಅಥವಾ ಇಲ್ಲವೇ ಎಂಬುದನ್ನೂ ಸಹಾ ಪರಿಶೀಲಿಸುತ್ತಿದ್ದರು. ಕ್ಷೇತ್ರದಲ್ಲಿ ಕೆಲಸ ಮಾಡುವವರೆಲ್ಲರೂ ದಿನವಿಡೀ ಕೆಲಸ ಮಾಡುತ್ತಿದ್ದರು ಮತ್ತು ಸಂಜೆಯ ಹೊತ್ತಿಗೆ, ಅವರು ಆ ಪುಸ್ತಕಗಳನ್ನು  ಅಕೌಂಟ್ಸ್ ವಿಭಾಗಕ್ಕೆ ಸಲ್ಲಿಸುತ್ತಿದ್ದರು ಮತ್ತು ಉಳಿದ ಕೆಲಸವನ್ನು ನನ್ನ ತಂದೆ ಮನೆಗೆ ತರುತ್ತಿದ್ದರು.  ಅವುಗಳಲ್ಲಿ ಹೆಚ್ಚಿನವು ಘನ ಪರಿಮಾಣದ ಲೆಕ್ಕಾಚಾರಗಳಲ್ಲಿ ಇರುತ್ತಿದ್ದವು . ಎತ್ತರ, ಉದ್ದ, ಅಗಲ ಇರುತ್ತಿದ್ದವು- ಅದರ ಆಧಾರದಮೇಲೆ ಅವರು ಎಷ್ಟು ಘನಅಡಿ ಕೆಲಸ ಮಾಡಲಾಗಿದೆ ಎಂದು ಲೆಕ್ಕಹಾಕಿ ಅದನ್ನು ಯೂನಿಟ್ ರೇಟ್  ನಿಂದ  ಗುಣಿಸುತ್ತಿದ್ದರು.  ಆ ಲೆಕ್ಕಾಚಾರಗಳನ್ನು ಆಗಾಗ ಕಲಿತಿದ್ದರಿಂದ ನಾನು ಆಗಾಗ ಅಪ್ಪನ ಜೊತೆ ಕುಳಿತು ಕೆಲವು ಲೆಕ್ಕಾಚಾರಗಳನ್ನು ಮಾಡುತ್ತಿದ್ದೆ. ತುಂಬಾ ಕೆಲಸವಿದ್ದಾಗ, ಲಕ್ಷ್ಮಿರೆಡ್ಡಿ ಮಾಮ ಭಾನುವಾರ ಬೆಳಿಗ್ಗೆ ಟಿಫಿನ್  ಮಾಡಿದ ನಂತರ ಸೈಕಲ್‌ನಲ್ಲಿ ನಮ್ಮ ಮನೆಗೆ ಬರುತ್ತಿದ್ದರು. ಅವರು ಬರುತ್ತಾರೆಂದು ತಿಳಿದ ದಿನ ನಾನು ಅವರ ಆಗಮನಕ್ಕಾಗಿ ಸಾವಿರ ಕಣ್ಣುಗಳಿಂದ ಕಾಯುತ್ತಿದ್ದೆ. ನಾನು ಕಾಯುತ್ತಿದ್ದೇನೆ ಎಂದು ಗ್ರಹಿಸಿದ ಅವರು ಬಂದೊಡನೆ ‘ಮಾಸ್ಟರ್’ಎಂದು ಕರೆಯುತ್ತಿದ್ದರು. ಅದು ಕೇಳಿದ ತಕ್ಷಣ  ಎಲ್ಲಿದ್ದರೂ  ಓಡೋಡಿ ಬಂದು ಚಾಚಿದ  ಅವರ ಕೈಯಲ್ಲಿನ ಸೈಕಲ್ ಕೀಲಿಗಳನ್ನು ನಾಯಿ ಮರಿಯಂತೆ ಗಪ್ಪೆಂದು ಹಿಡಿದುಕೊಂಡು ಸರ್ರ್  ಎಂದು ಓಡಿಹೋಗುತ್ತಿದ್ದೆ. ಅಷ್ಟು ಆಸೆ ಯಾಕೆ  ನಮ್ಮ ಮನೆಯಲ್ಲಿ  ಸೈಕಲ್ಇರಲಿಲ್ಲ. ಆಫೀಸು ಅರ್ಧಕಿಲೋ ಮೀಟರ್ ಇರಲಿ  ಅಥವಾ  ಆರು ಕಿಲೋ ಮೀಟರ್ ಇದ್ದರೂ ನಮ್ಮ  ಅಪ್ಪ   ಆಫೀಸಿಗೆ ನಡೆದುಕೊಂಡೇ ಹೋಗುತ್ತಿದ್ದರು. ಬಾಡಿಗಗೆ  ಸೈಕಾಲ್ ಪಡೆದರೂ, ಒಂದು ಗಂಟೆಗಿಂತ ಹೆಚ್ಚು ಸಮಯ ಸವಾರಿ ಮಾಡಲು ನನಗೆ ಹಣ ಕೊಡುತ್ತಿರಲಿಲ್ಲ. ಅದಕ್ಕಾಗಿಯೇ ಲಕ್ಷ್ಮಿರೆಡ್ಡಿ ಮಾಮ ಬಂದಾಗ, ನಾನು ಕೀಲಿಗಳನ್ನು ತೆಗೆದುಕೊಂಡು, ಸೈಕಲ್ ಹತ್ತಿ ಅಡ್ಡ ಕಾಲಿಂದ ಫೆಡಲ್ ತುಳಿಯುತ್ತಾ ಕ್ಲಬ್ ಬಳಿಯ ಗ್ರೌಂಡ್ ಗೆ ಓಡಿಹೋಗುತ್ತಿದ್ದೆ!  ಅಡ್ಡ ಕಾಲು ಹಾಕಿ ಸೈಕಲ್ ತುಳಿಯುತ್ತಾ ಊರೆಲ್ಲಾ ತಿರುಗುತ್ತಿದ್ದೆ. ಒಂದೊಂದು ದಿನ ಒಂದೊಂದು ದಾರಿಯಲ್ಲಿ ಪ್ರಯಾಣ ಸಾಗುತ್ತಿತ್ತು.  ಮೂರನೇ ಸಾಲಿನಿಂದ ಕೆಳಗಿಳಿಯುವಾಗ ಡೌನ್ ನಲ್ಲಿ ಹೋಗುತ್ತಿರುವಾಗ  ತುಂಬಾ ಸಂತೋಷದಿಂದ ಗಾಳಿಯಲ್ಲಿ ತೇಲುತ್ತಿರುವಂತೆ ಭಾಸವಾಯಿತು. ಮತ್ತೆ ನಾನು ಹಿಂತಿರುಗಿ ಅಪ್  ಏರುವಾಗ ಬೆವರು ಸುರಿಸುತ್ತಿದ್ದೆ. ಅಲ್ಲದೆ ನಾನು ವಾಟರ್ ವರ್ಕ್ಸ್ ನಿಂದ   ಎಡಕ್ಕೆ ತಿರುಗಿ, ವರ್ಕ್ ಷಾಪ್ ದಾಟಿ, ನಂತರ ಬರುವ ಮುಂದಿನ ತಿರುವುಗಳಿಗೆ ಹೆದರಿ ಹಿಂತಿರುಗುತ್ತಿದ್ದೆ. ಸ್ಕೂಲ್ , ಪಾರ್ಕ್, ಬಸ್ ಸ್ಟಾಂಡ್ ನಿಂದ  ನೇರವಾಗಿ ಉಮಾಮಹೇಶ್ವರ ಟಾಕಿಸ್ ತನಕ, ಎಲ್ಲಿಯೂ ಕಾಲು ಕೆಳಗೆ ಇಡದೆ ಸೈಕಲ್ ತುಳಿಯುವುದು ಸಾಧ್ಯವಾಗುತ್ತಿರವಿಲ್ಲ. SBI ಬಳಿ ಒಂದು ಸಣ್ಣ ಬೆಟ್ಟವಿತ್ತು. ಸೈಕಲ್ ತುಳಿಯುವ ಮತ್ತು ಕಾಲುಗಳನ್ನು ಕೆಳಗೆಇಡದೆ ಮೇಲಕ್ಕೆ ಏರುವ ಸ್ಪರ್ಧೆಗಳು ಸಹ ನಡೆಯುತ್ತಿದ್ದೆವು.  ನಮ್ಮ ತರಗತಿಯಲ್ಲಿ ಈಗಾಗಲೇ ಎತ್ತರವಾಗಿದ್ದ ಅನೇಕ ಮಕ್ಕಳು ತಮ್ಮ ಸೈಕಲ್‌ಗಳಲ್ಲಿ  ಚೆಕ್‌ಪೋಸ್ಟ್‌ ವರೆಗೆ ಸುಲಭವಾಗಿ ಹೋಗಿ ಬರುತ್ತಿದ್ದರು. ಅವರಲ್ಲಿ ಕೆಲವರು  ಶ್ರೀಶೈಲಕ್ಕೂ ಹೋಗಿ ಬಂದಿವೆ ಎಂದು ಹೇಳುತ್ತಿದ್ದರು. ಅವೆಲ್ಲವೂ ನನ್ನ ಪಾಲಿಗೆ ದೊಡ್ಡ ಸಾಹಸ ಕೃತ್ಯ ಗಳೆಂದು ಎನಿಸುತ್ತವೆ. ರಾಮಮಂದಿರ, ಕಾಗೆಗಳ ಸೆಂಟರ್, ಐ.ಟಿ.ಐ.. ಹೀಗೆ ಇಡೀ ಇಡೀ ಊರು ಸೈಕಲ್ ಮೇಲೆ ಎಷ್ಟು ರೌಂಡ್ಸ್ ಹಾಕಿದ್ದೇವೋ ಆ  ಹೀರೋ  ಸೈಕಲ್ ಗೂ, ನನಗೂ ಗೊತ್ತು. ಮತ್ತೆ ಯಾವಾಗಲೋ ಮಧ್ಯಾಹ್ನದ  ಊಟದ ಸಮಯಕ್ಕೆ ಅವರಿಗೆ ಸೈಕಲ್ ಹಿಂತಿರುಗಿಸುತ್ತಿದ್ದೆ. ನಾನೆಂದರೆ ಅವರಿಗೆ ತುಂಬಾ ಪ್ರೀತಿ ಮತ್ತು ಅಭಿಮಾನ. ನನ್ನನ್ನು ಮುದ್ದಾಗಿ,  ಇಷ್ಟದಿಂದ ‘ಮಾಸ್ಟರ್’  ಎಂದು ಕರೆಯುತ್ತಿದ್ದರು. ಅವರು  ದೊಡ್ಡ ಆಚರಣೆವಾದಿ ಎಂದು, ತಾವು ಏನು ಹೇಳುವರೋ  ಅದೇ  ಮಾಡುತ್ತಾರೆಂದು, ಏನು ಮಾಡುತ್ತಾರೋ ಅದೇ ಹೇಳುತ್ತಾರೆಂದು  ಅಪ್ಪ ಅಮ್ಮನೊಂದಿಗೆ ಹೇಳುವುದನ್ನು ಕೇಳುತ್ತಿದ್ದೆ. ಆ ಮಾತುಗಳಿಗೆ  ನಿಜವಾದ ಅರ್ಥವೇನೋ ಆ   ಸಮಯದಲ್ಲಿ ನನಗೆ ಅರ್ಥವಾಗಲಿಲ್ಲ. ಆದರೆ  ಆ ಮಾತುಗಳು ಎಲ್ಲೋ ಮನದಲ್ಲಿ  ನೆಲೆಗೊಂಡಿವೆ ಎಂದು ದೊಡ್ಡವನು ಆದಮೇಲೆ ವಿವಿಧ ಹಂತಗಳಲ್ಲಿ ನನಗೆ ತಿಳಿಯಿತು. ಸದಾ  ವೈಟ್ ಅಂಡ್ ವೈಟ್ ನಲ್ಲಿ ಕಾಣುತ್ತಿದ್ದ ಲಕ್ಷ್ಮೀರೆಡ್ಡಿ ಮಾವನ ಮನವೂ ಅಷ್ಟೇ ಬೆಳ್ಳಗಿತ್ತು. ಜೀವನವನ್ನು ಹೇಗೆ ಸುಲಭವಾಗಿ ಮತ್ತು ಸರಳವಾಗಿ ಬದುಕಬೇಕು ಎಂಬುದನ್ನು ನೀವು ಅವರನ್ನು  ನೋಡಿದರೆ ಅರ್ಥವಾಗುವುದು . ಸುನ್ನಿಪೆಂಟದಿಂದ , ಶ್ರೀಶೈಲದೇವಸ್ಥಾನ ಒಂಬತ್ತು, ಹತ್ತು ಕಿಲೋಮೀತರ್ ದೂರದಲ್ಲಿತ್ತು. ಪ್ರಾಜೆಕ್ಟ್ ನಲ್ಲಿ  ಕೆಲಸ ಮಾಡುವವರಿಗೆ ನೇರವಾಗಿ ಗರ್ಭಗುಡಿಗೆ ಪ್ರವೇಶವಿತ್ತು. ನಮ್ಮಪ್ಪ ವಾರಕ್ಕೊಮ್ಮೆಯಾದರೂ ದೇವರ ದರ್ಶನಕ್ಕೆ ಹೋಗುತ್ತಿದ್ದರು.  ಆಗ ಇಡೀ ಪ್ರಾಜೆಕ್ಟ್   ತುಂಬಾ , ಟಿಪ್ಪರ್ ಗಳು , ಜೀಪುಗಳು ವಿಪರೀತವಾಗಿ ಓಡಾಡುತ್ತಿದ್ದವು. ನನ್ನ ತಂದೆ ಡ್ಯಾಮ್  ಡಿವಿಜನ್  ಒಂದರಲ್ಲಿ ಡಿವಿಜಿನಲ್ ಅಕೌಂಟ್  ಆಫೀಸರ್ ಕೆಲಸ ಮಾಡುತ್ತಿದ್ದರು.  ಹಾಗೆ ಡ್ಯಾಮ್ ಸೈಟ್ ಗೆ ಹೋಗುವಾಗಯೋ, ಹೀಗೆ ಬರುವಾಗಯೋ  ಯಾವುದೋ ಒಂದು ವೆಹಿಕಲ್ ನಲ್ಲಿ ದೇವಸ್ಥಾನಕ್ಕೆ ಹೋಗಿ ದರ್ಶನ  ಮಾಡಿಕೊಂಡು ಬರುತ್ತಿದ್ದ ರು. ನಮ್ಮ ಮನೆಗೆ ಬಂಧುಗಳು ಬಂದರೆ ಅವರಿಗೆ ದೇವಾಸ್ಥಾನದಲ್ಲಿ ಸ್ವಾಮಿ ಮತ್ತು ಅಮ್ಮನ ದರ್ಶನ, ಹಾಗೂ ಸುತ್ತಮುತ್ತಲಿರುವ ಶಿಖರೇಶ್ವರಂ, ಹಠಕೇಶ್ವರಂ, ಪಾಲಧಾರ-ಪಂಚದಾರ, ಸಾಕ್ಷಿಗಣಪತಿ, ಡ್ಯಾಮ್ ಸೈಟ್ ಸ್ಥಳಗಳನ್ನು ತೋರಿಸುವುದು ಒಂದು ಸಂಪ್ರದಾಯ. ನಮಗಷ್ಟೇಅಲ್ಲ, ಅಲ್ಲಿರುವ ಎಲ್ಲರಿಗೂ ಇದು ಅನ್ವಯಿಸುತ್ತದೆ. ಒಂದುದಿನ, ನನ್ನ ತಂದೆಯ ಕಡೆಯ ಸಂಬಂಧಿಯೊಬ್ಬರು, ನನ್ನಚಿಕ್ಕಪ್ಪನಾಗುವರು, ನಮ್ಮನ್ನು ಭೇಟಿಮಾಡಲು ಬಂದರು.  ಅವರನ್ನು ದರ್ಶನಕ್ಕೆ ಕರೆದುಕೊಂಡು ಹೋಗಲು ನನ್ನ ತಂದೆ ಕಚೇರಿಯಿಂದ ಮನೆಗೆ ಬಂದು ಅವರನ್ನು ರೆಡೀ ಮಾಡಿಕೊಂಡು ಹೋಗುವಾಗ  ಜೀಪಿನಲ್ಲಿ ಲಕ್ಷ್ಮೀರೆಡ್ಡಿ ಮಾಮ ಕೂಡ ಕಾಣಿಸಿದರು. ಎಲ್ಲೋ ಹೋಗುವ ಮಧ್ಯದಲ್ಲಿ ಈ ಕಾರ್ಯಕ್ರಮವನ್ನು ಏರ್ಪಡಿಸಿದ್ದರು. ನಾನು  ಹೊರಗೆ ಕಾಣಿಸಿಕೊಂಡರೆ ನನ್ನನ್ನು ಬರಲು ಕರೆದರು ಲಕ್ಷ್ಮೀರೆಡ್ಡಿ ಮಾಮ. ಹಾಗಾಗಿ ಅಪ್ಪ, ಚಿಕ್ಕಪ್ಪ,ಮಾಮ, ನಾನು, ಸೇರಿ ಎಂದಿನಂತೆ ಹಠಕೇಶ್ವರಂ, ಫಾಲಧರ-ಪಂಚಧರ, ಸಾಕ್ಷಿಗಣಪತಿಯನ್ನು ನೋಡಿಕೊಂಡ ದೇವಸ್ಥಾನಕ್ಕೆ ಹೋದೆವು.  ಶಿಖರವು ಬೇರೆ ದಿಕ್ಕಿನಲ್ಲಿರುವುದರಿಂದ, ಅದು ರಿಟರ್ನ್ ನಲ್ಲಿ ಕವರ್ ಮಾಡುತ್ತಾರೆ. ಅಲ್ಲಿನ ಡ್ರೈವರ್ ಗಳಿಗೆ   ಇವೆಲ್ಲ ಕಟ್ಟಿಟ್ಟ ಬುತ್ತಿ. ದೇವಸ್ಥಾನದ ಮುಖ್ಯದ್ವಾರದ ಬಳಿ ಜೀಪು ನಿಂತಿತು. ನಾವೆಲ್ಲ ಇಳಿದೆವು. ಅರ್ಧಗಂಟೆಯ ನಂತರ ಬರುತ್ತೇನೆ ಎಂದು ಡ್ರೈವರ್  ಹೊರಟುಹೋದ. ಎಲ್ಲರೂ ದೇವಸ್ಥಾನದ ಒಳಗೆ ಹೋಗಲು ತಯಾರಾಗುತ್ತಿದ್ದಾಗ ಲಕ್ಷ್ಮೀರೆಡ್ಡಿ ಮಾಮ  ‘ಮಾಸ್ಟರ್ ನೀನು ಇರು’ ಎಂದ. ನಾನು ನಿಂತುಬಿಟ್ಟೆ. ನನ್ನ ತಂದೆ ಮತ್ತು ಇತರರು ಮುಂದೆಕ್ಕೆ ಹೋದರು.  ನನ್ನ ಕೈಹಿಡಿದು ಸ್ವಲ್ಪದೂರಕ್ಕೆ ಕರೆದೊಯ್ದರು. ಅಲ್ಲಿ ತನ್ನ ಜೇಬಿನಿಂದ ಐದು ರೂಪಾಯಿಯ ನೋಟನ್ನು ತೆಗೆದು,ಒಬ್ಬ ವ್ಯಕ್ತಿ ಯಿಂದ   ಐದು ಮತ್ತು ಹತ್ತು ಪೈಸೆ ಚಿಲ್ಲೆರೆಯಾಗಿ ಬದಲಾಯಿಸಿದನು.ಅದರಲ್ಲಿ ಕೆಲವನ್ನು ನನಗೆ ಕೊಟ್ಟನು, ಕೆಲವನ್ನು ತಮ್ಮ  ಬಳಿಯೇ ಇಟ್ಟುಕೊಂಡು ಭಿಕ್ಷುಕರ ಕಡೇಗೆ ಹೋಗಿ,ನನ್ನನ್ನು ಒಂದು ಕಡೆ ಯಿಂದ ಹಾಕಲು ಹೇಳಿ, ಅವರು ಇನ್ನೊಂದು ಕಡೆ ಯಿಂದ ಹಾಕುತ್ತಾ ಬಂದರು. ನಾವು ಎಲ್ಲವನ್ನೂ ಖರ್ಚು ಮಾದುತ್ತಾ,ವಿತರಣೆಮಾಡಿ ಕೈಖಾಲಿಮಾಡಿ ಮುಖ್ಯದ್ವಾರಕ್ಕೆ ಹಿಂತಿರುಗಿದೆವು. ವ “ನೀವು ಎಂದಾದರೂ  ಈ ಇಡೀ ಪ್ರಾಕಾರವನ್ನು ನೋಡಿದ್ದೀಯಾ?” ಎಂದು ಕೇಳಿದರು. ನಾನು ಇಲ್ಲ ಅಂದೆ. “ಹೋಗೋಣ ಬಾ ” ಎಂದು  ಕೈ ಹಿಡಿದು ಇಡೀ ಪ್ರಾಕಾರವನ್ನು  ಎಡಭಾಗದಿಂದ ಸುತ್ತಲು ಪ್ರಾರಂಭಿಸಿದೆವು. ಅವರು  ದೇವಸ್ಥಾನದ ಒಳಗೆ ಯಾಕೆ ಹೋಗಲಿಲ್ಲ ಅಂತ ಮನದಲ್ಲಿ ಒಂದು ಅನುಮಾನ ಕಾಡಿಸಿತು.  ಎಲ್ಲೆಲ್ಲಿಂದಲೋ ಸಾವಿರಾರು ಕಿಲೋಮೀಟರ್ ಗಳು  ಪ್ರಯಾಣಿಸಿ ಸ್ವಾಮಿಯ ದರ್ಶನಕ್ಕೆ  ಬರುತ್ತಾರೇ , ಇವರು ಇಷ್ಟು ಹತ್ತಿರದಲ್ಲಿದ್ದು  ಯಾಕೆ ಹೋಗುವು ದಿಲ್ಲವೋ ಅನ್ನಿಸಿತು.  ಅದಕ್ಕೂ ಮುನ್ನ ಕೂಡಾ ಒಮ್ಮೆ ಮಾತುಗಳಲ್ಲಿ  ಅಪ್ಪ, ಅಮ್ಮನೊಂದಿಗೆ ಹೇಳಿರುವಂತೆ  ನೆನಪಿದೆ – ಅವರು  ದೇವಸ್ಥಾನದೊಳಗೆ ಬರುವುದಿಲ್ಲ ಎಂದು. ನಾನೇ ಮೊದಲು ಮೌನವನ್ನು ಮುರಿದೆ “ಮಾಮ, ನೀವು ಯಾಕೆ  ದೇವಸ್ಥಾನದೊಳಗೆ ಹೋಗಿಲ್ಲ. ದೇವರನ್ನು ನೋಡಲಿಲ್ಲ?” ಎಂದು ಕೇಳಿದೆ.  ಅದಕ್ಕೆ ಅವರು “ನಾನು ನಾಸ್ತಿಕ” ಎಂದು ಉತ್ತರಿಸಿದರು. ನಾಸ್ತಿಕ ಎಂದರೆ ಏನು ಎಂದು ನನಗೆ ತಿಳಿದಿದೆ ಎಂಬ ನಂಬುಗೆಯಿಂದ.  “ಅಂದರೆ ನಾಸ್ತಿಕರು ದೇವರನ್ನು ನಂಬುವುದಿಲ್ಲವೇ?’’ ನಾನುಕೇಳಿದೆ.  “ಹೌದು” ಎಂದರು. “ಏಕೆ” “ನಿಮ್ಮ ದೃಷ್ಟಿಯಲ್ಲಿ ದೇವರು ಒಳ್ಳೆಯವನಾ? ಕೆಟ್ಟವನಾ?” ಅವರು ಕೇಳಿದರು. ಸಾಕ್ಷಾತ್ ದೇವರ ಬಗ್ಗೆ ಇಂಥದೊಂದು  ಪ್ರಶ್ನೆ ಕೇಳಿದರೆ ದೇವರನ್ನು ಹೀಗೆ  ಕ್ಯಾಟಗರೈಜ್  ಮಾಡಿದರೆ ಇನ್ನೇನಾದರೂ ಇದೆಯಾ? ಯಾವುದೇ ಕಾರಣಕ್ಕಾಗಿ ಅದು ಉತ್ತಮವೆಂದು ನಾನು ಮೌನವಹಿಸಿದ್ದೆ. ಅವರು ಮಾತು  ಮುಂದು ವರಿಸಿದರು- “ಸಿಂಪುಲ್ ಮಾಸ್ಟರ್, ದೇವರು ಒಳ್ಳೆಯವನಾಗಿದ್ದರೆ, ನಾವುಒಳ್ಳೆಯದನ್ನುಮಾಡಿದರೆ, ಅವನು ಅದನ್ನು ಗುರುತಿಸುತ್ತಾನೆ, ನಾವು ತಿಳಿಯದೆ ತಪ್ಪುಮಾಡಿದರೆ, ಅವನು ನಮ್ಮನ್ನು ಕ್ಷಮಿಸುತ್ತಾನೆ, ಮತ್ತು ನಾವು ತಿಳಿದೂ ತಪ್ಪುಮಾಡಿದರೆ, ಅವನು ನಮ್ಮನ್ನು ಶಿಕ್ಷಿಸುತ್ತಾನೆ ಎಂದು ನಂಬಿದರೆ, ಒಳ್ಳೆಯದನ್ನು ಮಾಡುತ್ತಲೇ ಇರಿ, ಮತ್ತು ತಪ್ಪುಗಳನ್ನು ಮಾಡಬೇಡಿ. ಒಂದು ಸಮಯ ದೇವರು ಕೆಟ್ಟವನಾಗಿದ್ದರೆ,” ಅವರು ಸ್ವಲ್ಪ ಸಮಯದ ನಂತರ ಹೇಳಿದರು, “ಕೆಟ್ಟ ಜನರಿಂದ ದೂರವಿರುವುದು ಉತ್ತಮ. ಅಲ್ಲವೇ” ಅದಕ್ಕಾಗಿಯೇ ಅವನೊಂದಿಗೆ ನಮಗೆ ಯಾವುದೇ ಕೆಲಸ ವಿಲ್ಲ. ಅವನಿಗೆ ನಮ್ಮೊಂದಿಗೆ ಯಾವುದೇ ಕೆಲಸ ವಿಲ್ಲ, ಎಲ್ಲರೂ ತಮ್ಮ ತಮ್ಮ ಕೆಲಸವನ್ನು ಮಾಡುತ್ತಲೇ ಹೋಗಬೇಕು” ಎಂದ, ನಾನು ಬಹಳ ಸಮಯ ಯೋಚಿಸಿದೆ. ಈಬಾರಿ ಅವರು ಮೌನವನ್ನು ಮುರಿದು, “ಪೂರ್ವ ಕಾಲದಲ್ಲಿ ಅವರು ಇಷ್ಟಿಷ್ಟು ದೊಡ್ಡ ದೇವಾಲಯಗಳನ್ನು , ಗೋಪುರಗಳನ್ನು , ಶಿಲ್ಪಗಳನ್ನು ಏಕೆ ನಿರ್ಮಿಸಿದರೋ ನಿಮಗೆ ತಿಳಿದಿದೆಯೇ?”  ಎಂದು ಕೇಳಿದ. ನಾನು ತಲೆಯನ್ನು  ಅಡ್ಡವಾಗಿ ತಿರುವುದರೊಳಗೆ- “ಆ ಸಮಯದಲ್ಲಿ  ಈ ದೇವಾಲಯಗಳು ಮತ್ತು ದೇವಸ್ಥಾನಗಳು. ಸಂಸ್ಕೃತಿಕ  ಕೇಂದ್ರಗಳು. ಹತ್ತು ಜನ ಸೇರಿ ಏನಾದರೂ ಮಾಡಬೇಕಾದರೆ,  ಏನಾದರೂ ಚರ್ಚಿಸಬೇಕಾದರೆ  ಇರುವ ವೇದಿಕೆಗಳಿವು. ಅದೂ ಅಲ್ಲದೆ ಆ ಕಾಲದಲ್ಲಿ ಬೇರೆ ಕೆಲಸಗಳೂ ಯಾವು ಇರಲಿಲ್ಲ ಅಲ್ಲವೇ. ಅದಕ್ಕೆ ಇಂತಹ  ದೊಡ್ಡ ಕಟ್ಟಡಗಳನ್ನು ಕಟ್ಟಿಸಿ  ಅದಕ್ಕೆ ತಕ್ಕಷ್ಟು ಕೂಲೀ   ಹಣ ಕೊಡುವವರೇನೋ ? ” ಎಂದು ಉತ್ತರಿಸಿದರು. “ಮೇಲೆ ನೋಡು ಎಷ್ಟು ಬೆಳೆದಿಂಗಳು ಇದೀಯೋ ” ಎಂದು ಮೇಲೆ ತೋರಿಸಿದರು. ಹೌದು,ಬಹುಶಾ ಹುಣ್ಣಿಮೆಯ ದಿನ ವಾಗಿರಬಹುದು,  ಅಷ್ಟೊತ್ತಿಗೆ ಬೆಳಕು ಮರೆಯಾಗುತ್ತಾ ಕತ್ತಲಾಗುತ್ತಿತ್ತು. ಮೇಲೆ ಹಳದಿ ಹೂವಿನಂತೆ ಬೆಳದಿಂಗಳು. ಹಾಗೆ  ಆಕಾಶದತ್ತಾ ನೋಡುತ್ತಾ  ಎಷ್ಟೋ ತನ್ಮಯದಿಂದ ,ಇಂತಹ  ಬೆಳದಿಂಗಳ ರಾತ್ರಿಗಳಲ್ಲಿ ಕೆಲವು ಯಾವುದೋ ಝಾಮುದಲ್ಲಿ  ಶಿಲೆಗಳು ಮೃದುವಾಗುತ್ತವೆಯಂತೆ.  ಆಗ ಮಾತ್ರ ಅತ್ಯಂತ ಸಂಕೀರ್ಣವಾದ ಶಿಲ್ಪಗಳನ್ನು ಕೆತ್ತಲಾಗುತ್ತದೆಯಂತೆ. ದೇವತಾ  ವಿಗ್ರಹಗಳ ಮುಖಗಳು, ಆಭರಣಗಳು, ಇತ್ಯಾದಿಗಳನ್ನು ಆ ಸಮಯದಲ್ಲಿ ಮಾಡತ್ತಾರಂತೆ.  ಆ ಸಮಯಕ್ಕಾಗಿ  ಪೂರ್ತಿ ತಿಂಗಳು ಕಾಯುತ್ತಾರಂತೆ” ಎಂದು ಹೇಳಿದರು ಲಕ್ಷ್ಮೀರೆಡ್ಡಿ ಮಾಮ – ತನಗೆ ಯಾರೋ ಹೇಳಿದ ವಿಷಯ  ನೆನೆಪಿಸಿ ಕೊಳ್ಳುತ್ತಿದ್ದಂತೆಯೇ , ನನಗೆ ಹೇಳುತ್ತಿದ್ದಂತೆಯೇ  ಹೇಳಿದರು. ನನಗೆ ಅದು ತುಂಬಾ ಆಸಕ್ತಿದಾಯಕವಾಗಿ ಅನಿಸಿತು.  ಅದೇ ಸಂಭ್ರಮದಲ್ಲಿ ‘‘ಅಷ್ಟು ಎತ್ತರವಿರುವ ರಾಜಗೋಪುರಗಳು ಹೇಗೆ ಕಟ್ಟಿರುತ್ತಾರೆ? ಒಂದೇ ಶಿಲೆಯಲ್ಲಿ ಕೆತ್ತಿರ ಬಹುದೇ? ಅಥವಾ ಬಿಡಿಬಿಡಿ ಯಾಗಿ ಕೆಟ್ಟಿರುವವುಗಳನ್ನು ಒಂದರ ಮೇಲೆ ಒಂದರಂತೆ  ಜೋಡಿಸಲಾಗಿದೆಯೇ? ” ಎಂಬ ಪ್ರಶ್ನೆಯನ್ನು ತನ್ನಷ್ಟಕ್ಕೆ   ಕೇಳಿಕೊಂಡು ಮತ್ತು ಉತ್ತರವನ್ನೂ  ತಾನೇ ಹೇಳಲು ಆರಂಭಿಸಿದರು. “ಅರ್ಧ ಕೆತ್ತಿದ ಶಿಲೆಗಳನ್ನು ಬಲವಾಗಿ ಹೆಣಿದ ಹಗ್ಗಗಳಿಂದ ಕಟ್ಟಿ ಆನೆಗಲಿಂದ ಎಳೆದರು. ಮತ್ತು ಅವರು ಅಷ್ಟು ಎತ್ತರಕ್ಕೆ ಹೇಗೆ ಹತ್ತಿದರು ಎಂದು ನಿಮಗೆ ತಿಳಿದಿದೆಯೇ? ಅದನ್ನು ಸ್ಕಾ ಫೋಲ್ಡಿಂಗ್ ಎಂದು ಕರೆಯಲಾಗುತ್ತದೆ. ಅವರು ಅದರ ಎದುರಿನಲ್ಲಿ ತಾತ್ಕಾಲಿಕ ಕಟ್ಟಡವನ್ನು  ಇಳಿಜಾರಿನಲ್ಲಿ ನಿರ್ಮಿಸಿ,  ಭಾರವನ್ನು ಹೊತ್ತಿರುವ ಆನೆಗಳನ್ನು ಆ ಮಾರ್ಗದಲ್ಲಿ ಮುನ್ನಡೆಸಿ ಅವರಿಗೆ ಬೇಕಾದ ಎತ್ತರಕ್ಕೆ ಸೇರಿದ ತಕ್ಷಣ ಅವುಗಳನ್ನು ಅಲ್ಲಿ ಇಳಿಸುತ್ತಿದ್ದರು”, ಅವುಗಳನ್ನುಅಲ್ಲಿಇಳಿಸುತ್ತಿದ್ದರು.” ನಾನು ಆ ಸನ್ನಿವೇಶವನ್ನು ಊಹಿಸಿಕೊಳ್ಳಲು ಸ್ವಲ್ಪ ಗ್ಯಾಪ್ ಕೊಟ್ಟೆ. “ಈ ಎಲ್ಲಾ ಕಥೆಗಳನ್ನು ತಿಳಿದುಕೊಳ್ಳಲು ಬಯಸಿದರೆ, ಒಂದು ಮಧ್ಯಾಹ್ನ ಬಂದು ಗಮನಿಸಿ ನೋಡು. ಒಂದು ಭಾವವನ್ನು ತಿಳಿಸಲು ಶಿಲ್ಪಿಗಳು  ಎಷ್ಟು ಪ್ರಯತ್ನಿಸಿದರೋ ಅರ್ಥವಾಗುತ್ತದೆ. ಅವರ ಇಡೀ ಜೀವನವನ್ನು ಇವುಗಳಿಗೆ ಮೀಸಲಾಗಿಟ್ಟಿರಬೇಕು ಮತ್ತು ಅವುಗಳನ್ನು ಜೀವಂತಗೊಳಿಸಲು ಶ್ರಮಿಸಿರಬೇಕು. ಇವು ಐತಿಹಾಸಿಕ ಕಾಲ ಬಿಟ್ಟು ಹೋಗಿರುವ ಸಾಮಾಜಿಕ-ಸಾಂಸ್ಕೃತಿಕ ಕುರುಹುಗಳಾಗಿವೆ, ”ಎಂದುಅವರು ಹೇಳಿದರು. ಪ್ರಾಕಾರ ಸುತ್ತಲೂ ಕೆತ್ತಿರುವ ಅನೇಕ ಶಿವಪುರಾಣಗಳ ಕಥೆಗಳನ್ನು, ಶಿವಭಕ್ತರ ಇತಿಹಾಸಗಳನ್ನು ಅವರು ವಿವರಿಸುವಾಗ, ಅವರಿಗೆ ಇಷ್ಟು ವಿಷಯಗಳು ಹೇಗೆ ತಿಳಿದಿವೆ ಎಂದು ಆಶ್ಚರ್ಯವಾಯಿತು. ಅಕ್ಕಮಹಾದೇವಿಕಥೆ, ದಕ್ಷಯಜ್ಞ, ತ್ರಿಪುರಾಂತಕ

ತೆಲುಗು ಕಥೆ “ನಾಸ್ತಿಕ ದೇವರು”ಕನ್ನಡಾನುವಾದ ರಂಗನಾಥ ರಾಮಚಂದ್ರರಾವು Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-112 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಅನಾಥಾಶ್ರಮದ ಕೆಲಸಕ್ಕೆ ಹೊರಟ ಮಗಳು ಬಂಗಲೆಯಿಂದ ಇಬ್ಬರೂ ಮನೆಗೆ ಬಂದ ನಂತರ ಮೂರನೇ ಮಗಳ ಜೊತೆಗೆ ಕುಳಿತು ಅಮ್ಮ ಹೇಳಿದ ವಿಷಯದ ಬಗ್ಗೆ ಚರ್ಚಿಸಿದರು. ಇಷ್ಟು ಸಣ್ಣ ವಯಸ್ಸಿನಲ್ಲಿಯೇ ಅನಾಥಾಶ್ರಮದ ಮಕ್ಕಳ ಮೇಲ್ವಿಚಾರಣೆ ನನ್ನ ಮಗಳಿಂದ ಸಾಧ್ಯವೇ? ಕಲಿಸುವ ವಿಷಯದಲ್ಲಿ ಎರಡು ಮಾತಿಲ್ಲ. ಅವಳು ಖಂಡಿತ ಅಲ್ಲಿನ ಮಕ್ಕಳ ಶಾಲೆಯ ಪಠ್ಯ ವಿಷಯಗಳ ಕಲಿಕೆಯ ಸಹಾಯಕ್ಕೆ ತನ್ನನ್ನು ಸಂಪೂರ್ಣವಾಗಿ ತೊಡಗಿಸಿಕೊಳ್ಳುತ್ತಾಳೆ. ಅದರಲ್ಲಿ ನನಗೆ ಸಂಶಯವಿಲ್ಲ. ಆದರೆ ಅಲ್ಲಿನ ಕೆಲಸ ಕಾರ್ಯಗಳನ್ನು ನೋಡಿಕೊಳ್ಳಲು, ಮಕ್ಕಳ ವಿಷಯದಲ್ಲಿ ಕಟ್ಟುನಿಟ್ಟಾಗಿ ಇರಲು ನನ್ನ ಮಗಳು ಸಮರ್ಥಳೇ? ಈ ಚಿಕ್ಕ ಹುಡುಗಿಯ ಮಾತನ್ನು ಅಲ್ಲಿನ ಮಕ್ಕಳು ಅನುಸರಿಸಿಯಾರೇ? ಆ ಮಕ್ಕಳ ನಡುವೆ ಈಕೆಯು ಕೂಡ ಮಕ್ಕಳಂತೆ ಅಲ್ಲವೇ? ಅಲ್ಲಿನ  ಖರ್ಚು- ವೆಚ್ಚ, ಉಳಿತಾಯ ಇತರೆ ವಿಷಯಗಳ ಬಗ್ಗೆ ಇವಳಿಗೆ ಯಾವುದೇ ಅರಿವಿಲ್ಲ. ಅಮ್ಮ ಹೇಳಿದಂತೆ ಅವಳಿಗೆ ಸಹಾಯಕ್ಕಾಗಿ ಅಲ್ಲಿ ಎಲ್ಲರೂ ಇರುತ್ತಾರೆ. ಅವಳು ಕೂಡ ಅಲ್ಲಿ ಇದ್ದುಕೊಂಡು ತನ್ನ ವಿದ್ಯಾಭ್ಯಾಸ ಮುಂದುವರಿಸಬಹುದು ಎಂದು ಹೇಳಿದ್ದಾರೆ. ಮೂರು ವರ್ಷದ ಪದವಿ ತರಗತಿಯನ್ನು ಮುಗಿಸಿದ ನಂತರ ಅವಳಿಗೆ ಯಾವುದಾದರೂ ಒಳ್ಳೆಯ ಕೆಲಸ ಸಿಗಬಹುದು. ಬಿ ಎಡ್ ತರಬೇತಿ ಪಡೆದು ಹೈ ಸ್ಕೂಲ್ ಶಿಕ್ಷಕಿಯೂ ಆಗಬಹುದು. ಅಲ್ಲದೇ ಕನ್ನಡ ಮತ್ತು ಇಂಗ್ಲಿಷ್ ಎರಡು ಭಾಷೆಗಳಲ್ಲಿ ಟೈಪಿಂಗ್ ಸಹ ಕಲಿತಿದ್ದಾಳೆ. ನಮಗೂ ಈಗ ಹಣದ ಅಗತ್ಯವಿದೆ. ಇವಳಿಗೊಂದು ಒಳ್ಳೆಯ ಕೆಲಸ ಸಿಕ್ಕರೆ ಮುಂದೆ ನಾವು ಒಳ್ಳೆಯ ದಿನಗಳನ್ನು ನೋಡಬಹುದು.  ನನಗೆ ಸಹಾಯ ಮಾಡುವುದಕ್ಕಾಗಿ ನನ್ನ ಮಕ್ಕಳು ಯಾವುದೇ ರೀತಿಯ ಕೆಲಸವನ್ನು ಮಾಡಲು ತಯಾರಿದ್ದಾರೆ. ಹೈಸ್ಕೂಲ್ ಹಂತದಲ್ಲಿರುವಾಗಲೇ ತಮಗೆ ರಜೆ ಇದ್ದಾಗ ಕಾಫಿ ತೋಟಕ್ಕೆ ಹೋಗಿ, ಕಾಫಿ ಹಣ್ಣುಗಳನ್ನು ಕೊಯ್ದು ತಮಗೆ ಸಾಧ್ಯವಾದಷ್ಟು ಹಣವನ್ನು ಗಳಿಸಿ ನನ್ನ ಕೈಲಿಟ್ಟಿದ್ದಾರೆ. ನಾವು ಓದುತ್ತಿರುವ ಮಕ್ಕಳು ಎನ್ನುವ ಅಹಂಭಾವವಿಲ್ಲದೆ ಸೊಂಟಕ್ಕೆ ಗೋಣಿ ಚೀಲವನ್ನು ಕಟ್ಟಿ, ನಾನು ತುಂಬಿಸಿಕೊಟ್ಟ ಊಟದ ಬುತ್ತಿಯನ್ನು ತೆಗೆದುಕೊಂಡು ಹೋಗಿ, ಹಣ್ಣು ಕೊಯ್ಯುವ ಅಭ್ಯಾಸ ಇಲ್ಲದಿದ್ದರೂ ಕೂಲಿ ಕೆಲಸಗಾರರ ಜೊತೆ ಸೇರಿ ಹುಮ್ಮಸ್ಸಿನಿಂದ ನನ್ನ ಮೂವರು ಮಕ್ಕಳೂ ಅವರ ಜೊತೆ ಹಣ್ಣುಗಳನ್ನು ಕೊಯ್ದು ದೊಡ್ಡ ಚೀಲದಲ್ಲಿ ತುಂಬಿಸಿ ಟ್ರ್ಯಾಕ್ಟರ್ ಗೆ ಹಾಕಿ, ಕಾಫಿ ಕಣದಲ್ಲಿ ಅವರ ಚೀಲಗಳನ್ನು ಗುರುತಿಸಿ ತೆಗೆದು ಅದನ್ನು ತೂಕ ಹಾಕಿಸಿ, ಪಲ್ಪರ್ ಮಾಡುವಲ್ಲಿಗೆ ತೆಗೆದುಕೊಂಡು ಹೋಗಿ ಕೊಟ್ಟು ಸಂಬಳವನ್ನು ಪಡೆದು ಖುಷಿಯಿಂದ ತಮ್ಮ ಸಂಪಾದನೆಯನ್ನು…. ‘ಅಮ್ಮಾ…..ನೋಡು…. ನಾವೆಷ್ಟು ಸಂಪಾದನೆ ಮಾಡಿದ್ದೇವೆ…. ಎಂದು ಕಣ್ಣರಳಿಸಿ ಸಂತೋಷದಿಂದ ನನ್ನ ಕೈಲಿಟ್ಟಿದ್ದಾರೆ….. ಒಂದು ಬಿಡಿಗಾಸನ್ನು ಕೂಡಾ ನಮಗಾಗಿ ಕೊಡಿ ಎಂದು ಆ ಮಕ್ಕಳು ಕೇಳಿಲ್ಲ….”ಬೇಡ ಮಕ್ಕಳೇ ನಿಮಗಿದು ಅಭ್ಯಾಸವಿಲ್ಲದ ಕೆಲಸ…. ನೀವಿನ್ನೂ ಚಿಕ್ಕವರು…..ತೋಟದ ಗಿಡಗಳ ನಡುವೆ ಇಳಿಜಾರಿನಲ್ಲಿ ಕೂಡ ಇಳಿದು ಹಣ್ಣುಗಳನ್ನು ಕೊಯ್ಯಬೇಕು…. ನಿಮ್ಮಿಂದ ಇದು ಸಾಧ್ಯವಾಗದು…. ಎಂದು ನಾನು ಹೇಳಿದಾಗ…. ಏನು ಆಗೋದಿಲ್ಲ ಅಮ್ಮಾ… ಅಲ್ಲಿ ಕೆಲಸ ಮಾಡುವ ಕೆಲಸಗಾರರು ನಮಗೆ ಪರಿಚಿತರಲ್ಲವೇ?…. ರೈಟರ್ ಕೂಡ ಹೇಗೆ ಹಣ್ಣುಗಳನ್ನು ಕೊಯ್ಯಬೇಕೆಂದು ನಮಗೆ ತಿಳಿಸುತ್ತಾರೆ”…. ಎಂದು ಹೇಳಿ ನನ್ನ ಸಮ್ಮತಿಯನ್ನು ಪಡೆದುಕೊಂಡು ಹಣ್ಣು ಕೊಯ್ಯುವ ಕೆಲಸಕ್ಕೆ ಕೂಡ ಹೋಗಿದ್ದಾರೆ. ಆದರೆ ಅನಾಥಾಶ್ರಮದ ಕೆಲಸ ಹೆಚ್ಚು ಜವಾಬ್ದಾರಿಯುತವಾದದ್ದು. ಇದನ್ನು ನಿಭಾಯಿಸಲು ನನ್ನ ಈ ಮಗಳ ಕೈಲಿ ಸಾಧ್ಯವೇ? ಇವಳಿಂದೇನಾದರೂ ಪ್ರಮಾದವಾದರೆ ಕಷ್ಟವಲ್ಲವೇ? ನಾನು ‘ಹೂಂ’ ಅಂದರೆ ಇವಳು ಖಂಡಿತ ಈ ಕೆಲಸಕ್ಕೆ ಹೋಗುತ್ತಾಳೆ. ನೋಡೋಣ ಅವಳ ತೀರ್ಮಾನ ಏನೆಂದು ಎಂದು ಯೋಚಿಸುತ್ತಾ…. ಮಗಳೇ, ನೀನು ಅಮ್ಮ ಹೇಳಿದ ಈ ಕೆಲಸವನ್ನು ಮಾಡಬಲ್ಲೆಯೇ? ನಿನ್ನಿಂದ ಇದು ಸಾಧ್ಯವೇ? ಎಂದು ಸುಮತಿ ಕೇಳಿದಾಗ…. ಅಮ್ಮಾ …ಸ್ವಲ್ಪ ದಿನ ಹೋಗಿ ಅಲ್ಲಿ ಇದ್ದು ಕೆಲಸ ಮಾಡಿ ನೋಡುತ್ತೇನೆ…. ಸಾಧ್ಯವಾದರೆ ಮುಂದುವರೆಸುತ್ತೇನೆ… ಇಲ್ಲದಿದ್ದರೆ ಆ ಕೆಲಸವನ್ನು ಬಿಟ್ಟು ಬಂದು ಇಲ್ಲಿ ನಿನ್ನ ಜೊತೆ ಇರುತ್ತೇನೆ….. ನನ್ನ ಡಿಗ್ರಿ ಮುಗಿದ ಕೂಡಲೇ ಯಾವುದಾದರೂ ಸಣ್ಣ ಪುಟ್ಟ ಕೆಲಸ ಸಿಕ್ಕರೂ ಸೇರಿಕೊಂಡು ನಿನ್ನ ಜವಾಬ್ದಾರಿಯನ್ನು ಸ್ವಲ್ಪವಾದರೂ ಕಡಿಮೆ ಮಾಡಬೇಕು ಎನ್ನುವ ಹಂಬಲ ನನಗೆ ಇದೆ ಅಮ್ಮ…. ನಾನು ಅನಾಥಾಶ್ರಮಕ್ಕೆ ಹೋಗುತ್ತೇನೆ …. ಹೇಗಿದ್ದರೂ ಅದು ನಾನು ಕಳೆದ ಪರಿಸರವಲ್ಲವೇ? ವಾರಕ್ಕೊಮ್ಮೆ ಬಂದು ನಿನ್ನನ್ನು ನೋಡಬಹುದಲ್ಲವೇ?…. ಎಂದಾಗ ಸುಮತಿ ಮಗಳನ್ನು ಅಪ್ಪಿಕೊಂಡಳು. ಅವಳ ಕಣ್ಣುಗಳು ತುಂಬಿ ಬಂತು. ಈ ಮಗಳು ನನ್ನ ಜೊತೆ ಇದ್ದಿದ್ದೇ ಕಡಿಮೆ. ಇವಳಿಗೆ ನಾಲ್ಕುವರೆ ವರ್ಷವಿದ್ದಾಗ ಅನಾಥಾಶ್ರಮಕ್ಕೆ ಸೇರಿದ ಹುಡುಗಿ, ಎಂಟನೇ ತರಗತಿಯಿಂದ 10ನೇ ತರಗತಿವರೆಗೂ ನನ್ನ ಹಿರಿಯ ಮಗಳ ಮನೆಯಲ್ಲಿದ್ದಳು. ಈಗ ಒಂದೆರಡು ವರ್ಷದಿಂದ ನನ್ನ ಜೊತೆ ಇದ್ದಾಳಷ್ಟೇ…. ಹೆಣ್ಣು ಮಕ್ಕಳು ಹೇಗಿದ್ದರೂ ಮುಂದೆಯಾದರೂ ನನ್ನನ್ನಗಲಿ ಇನ್ನೊಬ್ಬರ ಮನೆಗೆ ಹೋಗಬೇಕಾದವರೇ…. ಆದರೆ ಅಲ್ಲಿಯವರೆಗೂ ನನ್ನ ಜೊತೆಗಿರುವ ಅದೃಷ್ಟವಿಲ್ಲವೇ ದೇವರೇ?…. ಮಗಳ ಜೊತೆ ಇದ್ದು ಆಸೆ ಪೂರೈಸಿಲ್ಲ…. ಇಷ್ಟು ಬೇಗ ಮತ್ತೊಮ್ಮೆ ಅಗಲಿಕೆಯೇ? ಎಂದು ತನ್ನಲ್ಲೇ ಸ್ವಗತ ಹೇಳಿಕೊಂಡಳು. ತನ್ನ ಮಗಳನ್ನು ಅನಾಥಾಶ್ರಮದಲ್ಲಿ ಕೆಲಸಕ್ಕೆ ಕಳುಹಿಸದೆ ಬೇರೆ ದಾರಿ ಇರಲಿಲ್ಲ. ಅಕ್ಕನ ತೀರ್ಮಾನ ಕೇಳಿದಾಗ ತಂಗಿಗೆ ಬಹಳ ದುಃಖವಾಯಿತು. ಏಕೆಂದರೆ ಅಕ್ಕ ಎಂದರೆ ಅವಳಿಗೆ ಬಹಳ ಪ್ರೀತಿ. ಅಕ್ಕನ ಜೊತೆ ಕಾಲ ಕಳೆಯುವುದೆಂದರೆ ಅವಳಿಗೆ ಎಲ್ಲಿಲ್ಲದ ಸಂತೋಷ. ಅಕ್ಕನ ಜೊತೆ ಕಳೆದ ಕ್ಷಣಗಳು ಅವಳ ಅತ್ಯಂತ ಸಂತೋಷದ ಸಮಯವಾಗಿದ್ದವು. ಕೊನೆಯ ತಂಗಿಯು ಜೊತೆಯಲ್ಲಿಲ್ಲ ಅವಳು ದೂರದ ನವೋದಯ ಶಾಲೆಯಲ್ಲಿ ಓದುತ್ತಿರುವಳು. ವಾರ್ಷಿಕ ರಜೆ ಇದ್ದಾಗ ಮಾತ್ರ ಮನೆಗೆ ಬರುವಳು. ಈಗ ಅಕ್ಕ ಅನಾಥಾಶ್ರಮದ ಮೇಲ್ವಿಚಾರಕಿ ಹಾಗೂ ಶಿಕ್ಷಕಿಯಾಗಿ ಕೆಲಸಕ್ಕೆ ಸೇರಿಕೊಳ್ಳುತ್ತಿದ್ದಾಳೆ. ತಾಯಿಯ ಜೊತೆ ಇರುವುದೆಂದರೆ ಅವಳಿಗೆ ಸಂತೋಷದ ವಿಚಾರವೇ, ಆದರೂ ಸಣ್ಣ ವಯಸ್ಸಿನಿಂದ ಅಕ್ಕನ ಜೊತೆ ಅಕ್ಕನ ಪ್ರೀತಿಯಲ್ಲಿ ಕಳೆದ ಅವಳಿಗೆ ಈಗ ಅವಳು ಮತ್ತೆ ದೂರ ಹೋಗುತ್ತೇನೆ ಎಂದಾಗ ಸಂಕಟವಾಯಿತು. ಆದರೂ ಅವಳಿಗೂ ತಮ್ಮ ಮನೆಯ ಪರಿಸ್ಥಿತಿಯ ಅರಿವಿದ್ದ ಕಾರಣ ಏನೂ ಮಾತನಾಡದೆ ಸಮ್ಮತಿ ಸೂಚಿಸಿದಳು. ಸುಮತಿ ಬಂಗಲೆಗೆ ಹೋಗಿ ಅಮ್ಮನನ್ನು ಭೇಟಿ ಮಾಡಿ, ನನ್ನ ಮಗಳು ಅನಾಥಾಶ್ರಮದಲ್ಲಿ ಕೆಲಸಕ್ಕೆ ಸೇರಿಕೊಳ್ಳಲು ಸಮ್ಮತಿಸಿದ್ದಾಳೆ ಎನ್ನುವ ವಿಚಾರವನ್ನು ಅಮ್ಮನಿಗೆ ತಿಳಿಸಿದಳು. ವಿಷಯ ತಿಳಿದು ಅಮ್ಮನಿಗೆ ಸಂತೋಷವಾಯಿತು. ಶಾಲೆ ಪ್ರಾರಂಭವಾಗುವ ಮೊದಲೇ ಆದಷ್ಟು ಬೇಗ ಮುಂದಿನ ವಾರವೇ ಅಲ್ಲಿಗೆ ಹೋಗುವ ತಯಾರಿಯನ್ನು ಮಾಡಿಕೊಳ್ಳಲು ಮಗಳಿಗೆ ತಿಳಿಸಲು ಅಮ್ಮ ಸುಮತಿಗೆ ಹೇಳಿದರು.

Read Post »

ಕಾವ್ಯಯಾನ, ಗಝಲ್

“ಗಜಲ್‌ ಜುಗಲ್‌ ಬಂದಿ”ಅರುಣಾ ನರೇಂದ್ರ ಮತ್ತು ವೈ ಎಂ ಯಾಕೊಳ್ಳಿ

ಕಾವ್ಯ ಸಂಗಾತಿ “ಗಜಲ್‌ ಜುಗಲ್‌ ಬಂದಿ” ಅರುಣಾ ನರೇಂದ್ರ ವೈ ಎಂ ಯಾಕೊಳ್ಳಿ ಬಾಡದ ಹೂವ ಕಿತ್ತೆಸೆಯಬಹುದೇ ಮುಡಿಯಿಂದ ತೆಗೆದುಜಿಗಿತ ಪ್ರೀತಿ ಚಿವುಟಿ ಒಗೆಯಬಹುದೇ ಎದೆಯಿಂದ ತೆಗೆದು ಹೆಣ್ಣು ಮಣ್ಣು ಹೊನ್ನಿ ಗಾಗಿ ನೆತ್ತರು ಹರಿದಿದೆ ಈ ಭೂಮಿ ಮೇಲೆನೋವಾಯಿತೆಂದು ಕರುಳ ಕಿತ್ತು ಹಾಕಬಹುದೇ ಒಡಲಿಂದ ತೆಗೆದು ಗಿಡದಲ್ಲಿ ಅರಳಿದ ಹೂವಿಗಿಂತ ಕೃತಕ ಹೂಗಳೆ ಚಂದ ತೋರುತ್ತವೆಬೆಂಕಿ ಸುಟ್ಟಿತೆಂದು ದೀಪವನು ಗಾಳಿಗಿಡಬಹುದೇ ಒಳಗಿಂದ ತೆಗೆದು ಇಲ್ಲಿ ಮುಖವಾಡಗಳೇ ಮಾತಾಡುತ್ತಿವೆ ಯಾವುದನ್ನು ನಂಬುವುದು ಸತ್ಯ ಕಹಿಯೆಂದು ಸುಳ್ಳನ್ನೇ ಮೆರೆಸಬಹುದೇ ಪಾಪದಿಂದ ತೆಗೆದು ಅವ ಇಟ್ಟಂತೆ ಇರಬೇಕು ನಾವೆಲ್ಲ ಇರುವಷ್ಟು ದಿನ ನಗು ನಗುತ ಮೌನವಾದ ಅರುಣಾಗೆ ಮೂಗಿ ಅನ್ನಬಹುದೇ ಯಾದಿಯಿಂದ ತೆಗೆದು —- ಎದೆಯ ಮಾತನು ಬಿಚ್ಚಿ ಆಡಬಹುದೇ ಆಳದಿಂದ ತಗೆದುಮೂಡಿದ ಒಲವನು ತೊರೆಯಬಹುದೇ ಎದೆಯಿಂದ ತಗೆದು ಜಾತಿ‌ಮತ ಪಂಥಗಳ ಹೆಸರಲ್ಲಿ ಉಸಿರಾಡುತ್ತಿದೆ ಜಗವುಮನುಜ‌ಮತ ಉಳಿಯಬಹುದೇ ಮೋಸದಿಂದ ತಗೆದು ಒಡಲ ಕೂಸೆ ಒಮ್ಮೊಮ್ಮೆ ದೂರ ವಾಗಬಹುದು ಮರೆತುಕರುಳ ಕುಡಿಯನು ದೂರ ತಳ್ಳಬಹುದೆ ಸಿಟ್ಟಿನಿಂದ ತಗೆದು ತೋರಿಕೆಯ ಮಾತುಗಳು ಆಡಂಬರದ ಆಟಗಳು ಮೆರೆಯುತ್ತಿವೆಕೃತ್ರಿಮತೆಯೆದುರು ನಿಜ ಮರೆಸಬಹುದೆ  ಹುಸಿಯಿಂದ ತಗೆದು ಲೋಕವನಾಳುವ ಮಾಲೀಕನೊಬ್ಬ‌ ಮೇಲಿಹನು ಜೋಗಿಅವನ ತಕ್ಕಡಿಯಲ್ಲಿದೆ ನಮ್ಮ ಆಟ ಗೆಲ್ಲಬಹುದೆ ತಂತ್ರದಿಂದ ತಗೆದು ಡಾ ವೈ ಎಮ್ ಯಾಕೊಳ್ಳಿ

“ಗಜಲ್‌ ಜುಗಲ್‌ ಬಂದಿ”ಅರುಣಾ ನರೇಂದ್ರ ಮತ್ತು ವೈ ಎಂ ಯಾಕೊಳ್ಳಿ Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ-“ಶ್ರೇಷ್ಠ ನೀರಾವರಿ ತಜ್ಞ ಎಸ್ ಜಿ ಬಾಳೆಕುಂದ್ರಿ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣರ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ “ಶ್ರೇಷ್ಠ ನೀರಾವರಿ ತಜ್ಞ ಎಸ್ ಜಿ ಬಾಳೆಕುಂದ್ರಿ” ದೇಶವುಕಂಡ ಅಪರೂಪದ ಶ್ರೇಷ್ಠ ನೀರಾವರಿ ತಜ್ಞ ಕರ್ನಾಟಕಕ್ಕೆ ನೀರಿನ ಹಕ್ಕಿನ ಹಕ್ಕಿನ. ಬಗ್ಗೆ ನಿರಂತರ ಹೋರಾಟ ಮಾಡುತ್ತಲೆ ನ್ಯಾಯ ಒದಗಿಸುತ್ತಿದ್ದ ಉತ್ತರ ಕರ್ನಾಟಕದ ಬೆಳಗಾವಿ ಮೂಲದ ಲಿಂಗೈಕ್ಯ ಶ್ರೀ ಎಸ್ ಜಿ ಬಾಳೆಕುಂದ್ರಿ ಅವರು. ಶಿವಪ್ಪ ಗುರುಸಿದ್ದಪ್ಪ ಬಾಳೆಕುಂದ್ರಿ ಎಸ್. ಜಿ. ಬಾಳೆಕುಂದ್ರಿಯವರು ಕರ್ನಾಟಕದ ಶ್ರೇಷ್ಠ ನೀರಾವರಿ ತಜ್ಞ ಇಂಜನಿಯರರು. ತಮ್ಮ ಬುದ್ದಿಮತ್ತೆ,ದಕ್ಷತೆ, ಪರಿಶ್ರಮ ಹಾಗು ಪ್ರಾಮಾಣಿಕ ಸೇವೆ ಇವುಗಳಿಗಾಗಿ ಬಾಳೆಕುಂದ್ರಿಯವರು ಕರ್ನಾಟಕದಲ್ಲಿ ಎರಡನೆಯ ವಿಶ್ವೇಶ್ವರಯ್ಯ ಎಂದೇ ಖ್ಯಾತರಾಗಿದ್ದಾರೆ  ಕರ್ನಾಟಕ ಕಂಡ ಅತ್ಯಂತ ಶ್ರೇಷ್ಠ ನೀರಾವರಿ ತಜ್ಞರಲ್ಲಿ ನೆನಪಿಗೆ ಬರುವ ಒಂದೇ ಒಂದು ಹೆಸರೆಂದರೆ ಸರ್ ಎಂ ವಿಶ್ವೇಶ್ವರಯ್ಯನವರದು. ಆದರೆ ಅವರಷ್ಟೇ ಸಮರ್ಥರಾದ ಇಂಜಿನಿಯರೊಬ್ಬರು ಉತ್ತರ ಕರ್ನಾಟಕದಲ್ಲಿ ಕನ್ನಡಿಗರಿಗಾಗಿ ನೀರಿನ ಹೋರಾಟ ಮಾಡಿದ್ದರು ಎಂಬುದು ಅನೇಕರಿಗೆ ಗೊತ್ತಿಲ್ಲ. ಅವರೇ ಎಸ್ ಜಿ ಬಾಳೆಕುಂದ್ರಿ.  ಉತ್ತರ ಕರ್ನಾಟಕದ ಮಹಾದಾಯಿಯ ಬಗ್ಗೆ ಕೂಡ ಆಲೋಚನೆ ಅಧ್ಯಯನ ಮಾಡಿದ್ದರು. ಜನನ ಶಿವಪ್ಪ ಬಾಳೆಕುಂದ್ರಿಯವರು 1922  ಮೇ 5 ರಂದು ಬೆಳಗಾವಿಯಲ್ಲಿ ಜನಿಸಿದರು. ಇವರ ತಾಯಿ ಲಕ್ಷ್ಮೀದೇವಿ; ತಂದೆ ಗುರುಸಿದ್ದಪ್ಪ. ಶಿಕ್ಷಣ ಪ್ರಾಥಮಿಕ ವಿದ್ಯಾಭ್ಯಾಸವನ್ನು ಹುಬ್ಬಳ್ಳಿಯ ಅಕ್ಕಿಹೊಂಡದ ಮುನಿಸಿಪಾಲಿಟಿ ಕನ್ನಡ ಶಾಲೆಯಲ್ಲಿ ಮುಗಿಸಿ, ಕೊಪ್ಪೀಕರ ಪ್ರೌಢಶಾಲೆಯಲ್ಲಿ ಎರಡು ವರ್ಷ ಕಲಿತು, ತರವಾಯ ಬೆಳಗಾವಿಯ ಸರದಾರ ಹೈಸ್ಕೂಲ್ ಸೇರಿದರು.  ಲಿಂಗರಾಜ ಕಾಲೇಜಿನಿಂದ ಇಂಟರ ಸಾಯನ್ಸ್ ವಿಷಯದ ಮೇಲೆ ಅಧ್ಯಯನ ನಡೆಸಿ ತೇರ್ಗಡೆಯಾದರು. ಆ ಬಳಿಕ ಪುಣೆಯಲ್ಲಿದ್ದ ಸರಕಾರಿ ಇಂಜನಿಯರಿಂಗ್ ಕಾಲೇಜಿಗೆ ಪ್ರವೇಶ ಪಡೆದು 1944 ರಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದರು. 1947 ರಲ್ಲಿ ಎಡಿನ್ಬರೊ ವಿಶ್ವವಿದ್ಯಾಲಯದಿಂದ ಪ್ರಥಮ ಶ್ರೇಣಿಯಲ್ಲಿ ಪದವಿ ಸಂಪಾದಿಸಿಕೊಂಡರು. ವೃತ್ತಿ ಮತ್ತು ಉದ್ಯೋಗ 1945 ರಲ್ಲಿ ಆಗಿನ ಮುಂಬಯಿ ರಾಜ್ಯದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಇಂಜನಿಯರ ಆದರು. ಮುಂಬಯಿ ಸರಕಾರ ಇವರನ್ನು ನೀರಾವರಿ ವಿಷಯದಲ್ಲಿ ಹೆಚ್ಚಿನ ವಿದ್ಯಾಭ್ಯಾಸಕ್ಕಾಗಿ ಎಡಿನ್ಬರೊ ವಿಶ್ವವಿದ್ಯಾಲಯಕ್ಕೆ ಕಳುಹಿಸಿತು. ಅನಂತರ ಹಾಲಂಡ್, ಸ್ವಿಡನ್, ಮತ್ತು ಇತರ ಕೆಲವು ಬಾಲ್ಟಿಕ್ ರಾಜ್ಯಗಳನ್ನು ಸಂದರ್ಶಿಸಿದರು. ವಿದೇಶದಿಂದ ಹಿಂದಿರುಗಿದ ನಂತರ ಪುಣೆ ವಿಭಾಗದ ನೀರಾವರಿ ಕಾಲುವೆಗಳ ಕೆಲಸವನ್ನುನಿರ್ವಹಿಸಿದರು. ನಂತರ ನಾಸಿಕ ಬಳಿ ನಿರ್ಮಾಣವಾಗುತ್ತಿದ್ದ ಗಂಗಾ ಆಣೆಕಟ್ಟಿನ ಉಸ್ತುವಾರಿ ಮಾಡಿದರು. ಆ ಬಳಿಕ ಧೂಲಿಯಾ ಆಣೆಕಟ್ಟು ಮತ್ತು ಅಹ್ಮದ ನಗರ ವಿಭಾಗದ ಉಸ್ತುವಾರಿ ನಿರ್ವಹಿಸಿದರು. 1956 ರಲ್ಲಿ ರಾಜ್ಯಗಳ ಪುನರ್ವಿಂಗಡಣೆಯ ನಂತರ ಕರ್ನಾಟಕಕ್ಕೆ ಬಂದ ಬಾಳೆಕುಂದ್ರಿಯವರು ಕೆಲಕಾಲ ಉಪಪ್ರಧಾನ ಇಂಜನಿಯರ ಆಗಿ ಸೇವೆ ಸಲ್ಲಿಸಿದರು. ಆ ನಂತರ ಇವರ ಸೇವೆಯನ್ನು ಕೇಂದ್ರ ಸರಕಾರಕ್ಕೆ ಎರವಲು ನೀಡಲಾಯಿತು. ಅಲ್ಲಿ ಇವರು ಭಾರತ ಸರಕಾರದ ಪ್ಲ್ಯಾನಿಂಗ್ ಕಮಿಶನ್ “ನೀರಾವರಿ ಮತ್ತು ಚೈತನ್ಯ” ತಂಡದ ಸಹಾಯಕರಾಗಿಕಾರ್ಯನಿರ್ವಹಿಸಿದರು. ಈ ಸಮಯದಲ್ಲಿ ನದಿ ನೀರಿನ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆಗುತ್ತಿದ್ದ ಅನ್ಯಾಯವನ್ನು ಬಾಳೆಕುಂದ್ರಿಯವರು ಗಮನಿಸಿ ಕರ್ನಾಟಕದ ಲೋಕಸಭಾ ಸದಸ್ಯರ ಗಮನಕ್ಕೆ ತಂದರು. ಇದರಿಂದ ಪ್ರಭಾವಿತರಾದ ಕರ್ನಾಟಕದ ಮುಖ್ಯ ಮಂತ್ರಿ ಶ್ರೀ ಬಿ.ಡಿ.ಜತ್ತಿಯವರು ಬಾಳೆಕುಂದ್ರಿಯವರನ್ನು ರಾಜ್ಯಕ್ಕೆ ಮರಳಿ ಕರೆಯಿಸಿಕೊಂಡರು. 1959 ರಲ್ಲಿ ಮರಳಿ ರಾಜ್ಯಕ್ಕೆ ಬಂದ ನಂತರ ಅಂತರರಾಜ್ಯ ನದಿ ವಿವಾದ ವಿಷಯದ ಹೊಣೆ ಹೊತ್ತುಕೊಂಡ ಬಾಳೆಕುಂದ್ರಿಯವರು ಕರ್ನಾಟಕದ ನ್ಯಾಯಬದ್ಧ ಹಕ್ಕಿಗಾಗಿ ಸಮರ್ಥವಾಗಿ ಹೋರಾಡಿದರು. 1964 ರಲ್ಲಿ ಮುಖ್ಯ ಇಂಜನಿಯರ ಆಗಿ ಪದೋನ್ನತಿ ಪಡೆದು, ಬೃಹತ್ ನೀರಾವರಿ ಯೋಜನೆಗಳ ಸಹಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 1967 ರಿಂದ 1972 ರ ವರೆಗೆ ನೀರಾವರಿ ಇಲಾಖೆಯ ಉತ್ತರ ವಿಭಾಗದ ಮುಖ್ಯ ಇಂಜನಿಯರ ಎಂದು ಸೇವೆ ಸಲ್ಲಿಸಿದರು. ಈ ಅವಧಿಯಲ್ಲಿ ಬಾಳೆಕುಂದ್ರಿಯವರು ಘಟಪ್ರಭಾ, ಮಲಪ್ರಭಾ ಹಾಗು ಕೃಷ್ಣಾ ನೀರಾವರಿ ಯೋಜನೆ ಹಾಗು ನಿರ್ಮಾಣಗಳಲ್ಲಿ ಮಹತ್ವದ ಪಾತ್ರ ವಹಿಸಿದರು. 1974 ರಿಂದ 1976 ರ ವರೆಗೆ ಮಲಪ್ರಭಾ ಮತ್ತು ಘಟಪ್ರಭಾ ಯೋಜನೆಗಳ ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮತ್ತು ಆಡಳಿತಾಧಿಕಾರಿಯಾಗಿ ಹಾಗು 1976 ರಿಂದ 1977ರ ವರೆಗೆ ನೀರಾವರಿ ಇಲಾಖೆಯ ವಿಶೇಷ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ, 1977 ಮೇದಲ್ಲಿ, ಅಂದರೆ ತಮ್ಮ 55 ನೆಯ ವಯಸ್ಸಿನಲ್ಲಿ ಸರಕಾರಿ ಸೇವೆಯಿಂದ ನಿವೃತ್ತರಾದರು. ನಿವೃತ್ತಿಯ ನಂತರವೂ, ತುಂಗಭದ್ರಾ ಯೋಜನೆಯ ಮಾರ್ಪಾಡಿನ ತಜ್ಞ ಸಲಹಾ ಸಮಿತಿಯ ಅಧ್ಯಕ್ಷ, ಬಾಗಲಕೋಟೆ ಪುನರ್ನಿರ್ಮಾಣ ಮತ್ತು ಪುನರ್ವಸತಿ ಪರಿಶೀಲನಾ ಸಮಿತಿ ಅಧ್ಯಕ್ಷ, ಬೃಹತ್ ನೀರಾವರಿ ಯೋಜನೆಗಳ ನಿಯಂತ್ರಣ ಮಂಡಳದ ಅಧ್ಯಕ್ಷ ಕರ್ನಾಟಕದಲ್ಲಿ ತಾಂತ್ರಿಕ ವಿಶ್ವವಿದ್ಯಾಲಯ ಪ್ರಾರಂಭಿಸುವ ಕುರಿತು ನೇಮಿಸಿದ ಏಕಸದಸ್ಯ ಸಮಿತಿ ಅಧ್ಯಕ್ಷ ಹೀಗೆ ವಿವಿಧ ಸಾಮರ್ಥ್ಯಗಳಲ್ಲಿ ಕರ್ನಾಟಕಕ್ಕೆ ಸೇವೆಸಲ್ಲಿಸಿದರು. (ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು 1-4-1998 ರಲ್ಲಿ ಸಾಕಾರಗೊಂಡಿತು). ದುರಂತ ಮರಣ ದಿನಾಂಕ 4-1-1993 ರಂದು ಸಂಜೆ ಬಾಳೆಕುಂದ್ರಿಯವರು ವಾಯುವಿಹಾರಕ್ಕೆ ಹೋದ ಸಮಯದಲ್ಲಿ ಬೇಜವಾಬ್ದಾರಿ ಆಟೊ ಚಾಲಕನೊಬ್ಬ ಡಿಕ್ಕಿ ಹೊಡೆದ ಪರಿಣಾಮವಾಗಿ ಪ್ರಜ್ಞಾಹೀನ ಅವಸ್ಥೆಯಲ್ಲಿ ಅಸ್ಪತ್ರೆಗೆ ಸೇರಿಸಲ್ಪಟ್ಟರು. 1993 ಜನೆವರಿ 8 ರಂದು ಅದೇ ಅವಸ್ಥೆಯಲ್ಲಿಯೆ ಬಾಳೆಕುಂದ್ರಿಯವರು ಕೊನೆಯುಸಿರೆಳೆದರು. ಬಡ ವಿದ್ಯಾರ್ಥಿಗಳಿಗಾಗಿ ಶಿವಕಮಲ ಟ್ರಸ್ಟ್ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ, ವಿಶೇಷತಃ ತಾಂತ್ರಿಕ ಶಿಕ್ಷಣದಲ್ಲಿ ಧನಸಹಾಯ ಮಾಡಲು ಒಂದು ಟ್ರಸ್ಟ ಅನ್ನು ರೂಪಿಸುವದು ಶ್ರೀ ಬಾಳೆಕುಂದ್ರಿ ಹಾಗು ಶ್ರೀಮತಿ ಬಾಳೆಕುಂದ್ರಿಯವರ ಕನಸಾಗಿತ್ತು. ಶ್ರೀಬಾಳೆಕುಂದ್ರಿಯವರ ನಿಧನದ ನಂತರ ಶ್ರೀಮತಿ ಕಮಲಾ ಬಾಳೆಕುಂದ್ರಿಯವರು “ ಶಿವಕಮಲ ಟ್ರಸ್ಟ್ ” ಸ್ಥಾಪಿಸುವ ಮೂಲಕ ತಮ್ಮೀರ್ವರ ಕನಸನ್ನು ನನಸಾಗಿಸಿದರು. ಗೌರವ ಸನ್ಮಾನ ತಮ್ಮ ಪ್ರತಿಭೆ, ದಕ್ಷತೆ ಹಾಗು ಸಚ್ಚಾರಿತ್ರ್ಯದಿಂದ ಬಾಳೆಕುಂದ್ರಿಯವರು ಕರ್ನಾಟಕದ ನೀರಾವರಿ ಯೋಜನೆಗಳಿಗೆ ಮಹತ್ವಪೂರ್ಣ ಕಾಣಿಕೆ ನೀಡಿದ್ದಾರೆ ಹಾಗು ಕರ್ನಾಟಕ ನೀರಾವರಿ ಇಲಾಖೆಯಲ್ಲಿ ಎರಡನೆಯ ವಿಶ್ವೇಶ್ವರಯ್ಯ ಎಂದು ಹೆಸರಾಗಿದ್ದಾರೆ. ಮಲಪ್ರಭಾಎಡದಂಡೆಕಾಲುವೆಗೆಬಾಳೆಕುಂದ್ರಿಕಾಲುವೆಎಂದುಹೆಸರಿಟ್ಟುಸರಕಾರಇವರನ್ನುಗೌರವಿಸಿದೆ. 1987 ರಲ್ಲಿ ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಯಿತು. 1998 ರಲ್ಲಿ ಬೆಂಗಳೂರಿನ ಇನ್ಸ್ಟಿಟ್ಯೂಶನ್ ಆಫ್ ಇಂಜನಿಯರ್ಸ್ ಸಂಸ್ಥೆಯ ಎದುರಿನ ವೃತ್ತಕ್ಕೆ ಬಾಳೆಕುಂದಿ ವೃತ್ತ ಎಂದು ನಾಮಕರಣ ಮಾಡಲಾಯಿತು. 1999ರಲ್ಲಿಘಟಪ್ರಭಾಜಲಾಶಯದಲ್ಲಿಬಾಳೆಕುಂದ್ರಿಯವರಪ್ರತಿಮೆಯನ್ನುಅನಾವರಣ ಮಾಡಲಾಯಿತು. 2004 ರಲ್ಲಿ ಧಾರವಾಡದ ಇನ್ಸ್ಟಿಟ್ಯೂಶನ್ ಆಫ್ ಇಂಜನಿಯರ್ಸ್ ಸಂಸ್ಥೆಯ ಮುಂದಿನ ರಸ್ತೆಗೆ ಎಸ್.ಜಿ.ಬಾಳೆಕುಂದ್ರಿ ಮಾರ್ಗ ಎಂದು ಹೆಸರಿಡಲಾಯಿತು. ಕರ್ನಾಟಕಸರಕಾರವು 2001 ರಿಂದ ಪ್ರತಿ ವರ್ಷನೀರಾವರಿ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಇಲಾಖೆಯ ಇಂಜನಿಯರರಿಗೆ ಬಾಳೆಕುಂದ್ರಿಯವರ ಹೆಸರಿನಲ್ಲಿ ಪ್ರಶಸ್ತಿ ನೀಡುತ್ತಿದೆ. 5 ಮೇ , 2006 ರಂದು ಅಂದರೆ ಬಾಳೆಕುಂದ್ರಿಯವರ 85 ನೆಯ ಜನ್ಮದಿನದಂದು ಕೃಷ್ಣಾ ಮೇಲ್ದಂಡೆ ಯೋಜನೆಯ ಆಲಮಟ್ಟಿ ಆಣೆಕಟ್ಟಿನ ವೃತ್ತದಲ್ಲಿ ಅವರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಯಿತು. ಘಟಪ್ರಭಾ, ಮಲಪ್ರಭಾ ಹಾಗು ಕೃಷ್ಣಾ ನೀರಾವರಿ ಯೋಜನೆ ಹಾಗು ಆಣೆಕಟ್ಟು ನಿರ್ಮಾಣದಲ್ಲಿ ಶ್ರೀ ಎಸ್ ಜಿ ಬಾಳೆಕುಂದ್ರಿ ಅವರ ಪಾತ್ರ ಬಹಳ ದೊಡ್ದದು. ಸಮಗ್ರಹಸಿರುಕ್ರಾಂತಿಯಹರಿಕಾರನೀರಾವರಿಯತಜ್ಞಸಾಮಾಜಿಕಚಿಂತಕಎಸ್ಜಿಬಾಳೆಕುಂದ್ರಿ ಅವರಿಗೆ ನಮ್ಮ ನೂರು ನಮನಗಳು. ________________________ *ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ಸಾವಿಲ್ಲದ ಶರಣರು ಮಾಲಿಕೆ-“ಶ್ರೇಷ್ಠ ನೀರಾವರಿ ತಜ್ಞ ಎಸ್ ಜಿ ಬಾಳೆಕುಂದ್ರಿ”ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಇತರೆ

ಹಾಸ್ಯಬರಹ ಗೊರೂರು ಅನಂತರಾಜು ಅವರ ಲೇಖನಿಯಿಂದ “ನಿಮ್ಮಪ್ಪ ಏನಂತಾ ಕರೀತಾರೆ..ಈಡಿಯಟ್..ಸ್ಟುಪಿಡ್..!”

ಹಾಸ್ಯ ಸಂಗಾತಿ ಗೊರೂರು ಅನಂತರಾಜು “ನಿಮ್ಮಪ್ಪ ಏನಂತಾ ಕರೀತಾರೆ.. ಈಡಿಯಟ್..ಸ್ಟುಪಿಡ್..!” ಮುದ್ದಣ್ಣ: ಮನೋರಮೆ, ನೀನು ಯುಗಾದಿ ಹಬ್ಬಕ್ಕೆ ಮಾಡಿರುವ ಪಾಯಸ ತುಂಬಾ ರುಚಿಯಾಗಿದೆ ಕಣೆ.ಮನೋರಮೆ: ಅದಕ್ಕೆ ಬೆಕ್ಕು ಬಾಯಿ ಹಾಕಿರದೆ ಇದ್ದಿದ್ರೇ..ಚೆನ್ನಾಗಿರುತ್ತಿತ್ತು. ಮು: ರಾತ್ರಿ ಒಂಭತ್ತು ಗಂಟೇಲಿ ಎಲ್ಲಿಗ್ಹೊರಟೆ..?ಮ: ನರಕಕ್ಕೆ.. ಇಲ್ಲಿ ಮೂರ‍್ಹೊತ್ತು ನಿಮ್ಮತ್ರ ಜಗಳ ಆಡ್ಕೊಂಡು ಇರೋದಕ್ಕಿಂತ ಅಲ್ಲಿ ಇರೋದೆ ವಾಸಿ.ಮು: ನರಕದಲ್ಲಿರುವ ನಿನ್ನ ಅಮ್ಮನಿಗೆ ನನ್ನ ನಮಸ್ಕಾರ ತಿಳಿಸು. ಸದ್ಯ ಸರ್ಕಾರದ ಉಚಿತ ಬಸ್ಸಿನಲ್ಲಿಯೇ ಸಾವಕಾಶವಾಗಿ ಹೋಗಿ ಬಾ. ಮ: ರೀ, ನೀವು ಈ ರೀತಿ ಜಗಳ ಆಡ್ತಿದ್ರೆ ಅಕ್ಕಪಕ್ಕ ಮನೆಯವರಿಗೆ ಕೇಳಿಸುತ್ತೆ..ಮು: ಸರಿ ಹಾಗಾದ್ರೇ, ಬೇರೆ ಯಾವ ರೀತಿ ಜಗಳ ಆಡಬೇಕು ಅಂತ ನೀನೇ ಹೇಳು. ದಿನಾ ರಾತ್ರಿ ಬಿಗ್ ಬಾಸ್ ಹಾಕ್ಕೊಂಡು ನೋಡ್ತ ಇರ‍್ತಿಯಲ್ಲಾ.. ಅದು ಅಕ್ಕಪಕ್ಕ ಮನೆಗೆ ಹಾಗೇ ಕೇಳಿಸುತ್ತೇ ತಾನೇ.. ಮ: ರೀ, ನಾನು ಮುಂದೆ ದಪ್ಪ ಆದ್ರೂ ನೀವು ಇದೇ ರೀತಿ ಪ್ರೀತಿ ಮಾಡ್ತೀರಾ..?ಮು: ಅದ್ಹೇಗೆ ಸಾಧ್ಯ..?ಮ: ತಾಳಿ ಕಟ್ಟುವ ವೇಳೆ ಅಗ್ನಿಸಾಕ್ಷಿಯಾಗಿ ಪ್ರಮಾಣ ಮಾಡಿದ್ರಿ..!ಮು: ನಿನ್ನ ಕಷ್ಟಗಳಲ್ಲಿ ಭಾಗಿಯಾಗುತ್ತೇನೆ ಎಂದಷ್ಟೇ ಪ್ರಮಾಣ ಮಾಡಿದ್ದೇನೆ. ಆದರೆ ನೀನು ದಪ್ಪ ಆಗುವ ವಿಚಾರದಲ್ಲಿ ಮಾತು ಕೊಟ್ಟಿಲ್ಲ..ದಯವಿಟ್ಟು ಒಂದ್ಹೊತ್ತು ಊಟ ಬಿಟ್ಟು ಡಯಾಟ್ ಮಾಡು. ಐದು ವರ್ಷದಲ್ಲಿ ನೀನು ಗ್ಯಾರಂಟಿ ತೆಳ್ಳಗಾಗ್ತಿಯಾ.. ಮ: ರೀ, ನೀವು ಪಿಹೆಚ್‌ಡಿ ಮಾಡಿದ್ರಲ್ಲಾ. ನಿಮ್ಮನ್ನೀಗ ಡಾಕ್ಟರ್ ಅಂತ ಕರಿಲೋ ಫ್ರೊಫೆಸರ್ ಅಂತ್ಲೇ ಕರಿಲೋ..?ಮು: ನಿನ್ನಿಷ್ಟ ಬಂದಾಗೆ ಕರಿ..ಮ: ನಿಮ್ಮಪ್ಪ ಏನಂತ ಕರೀತಾರೆ..?ಮು: ಈಡಿಯಟ್.. ಸ್ಟುಪಿಡ್..! ಮ: ಏಳ್ರೀ ಹತ್ತು ಗಂಟೆಗ ಗೊರಕೆ ಹೊಡಿತ್ತಿದ್ದೀರಾ..ಮು: ಯಾಕೆ ನನ್ನನ್ನು ಎಬ್ಬಿಸಿದೆ..?ಮ: ರಾತ್ರಿ ಹತ್ತು ಗಂಟೆಗೆ ಸರಿಯಾಗಿ ನಿದ್ರೆ ಮಾತ್ರೆ ಕೊಡಿ ಅಂತ ಡಾಕ್ಟರ್ ಹೇಳಿದ್ರಲ್ಲಾ..! ಮು: ಇದೇ ತಿಂಗಳು ಇಪ್ಪತ್ತಕ್ಕೆ ನನ್ನ ಫ್ರೆಂಡ್ ಮಗನ ಮದುವೆ ಇದೆ. ನಾವಿಬ್ರೂ ಹೋಗಲೇಬೇಕು. ನನಗೆ ಅವರು ಆತ್ಮೀಯ ಮಿತ್ರರು. ಮರೆಯದೆ ನೆನಪು ಮಾಡು.ಮ: ಇವತ್ತು ತಾರೀಖು ಇಪ್ಪತ್ತೆರೆಡು..!ಮು: ಹಾಗಾದರೇ ನಾವು ಮದುವೆ ಫಂಕ್ಷನ್ ಮಿಸ್ ಮಾಡ್ಕೊಂಡ್ವಿ ಅಲ್ಲವಾ..?ಮ: ನೀವು ನಾನು ಮೊನ್ನೆ ಮದುವೆಗೆ ಹೋಗಿ ಗಡದ್ದಾಗಿ ತಿಂದು ಬಂದಿಲ್ವಾ..! ಮ: ಇದೇನ್ರೀ ಮನೆಗೆ ಇಷ್ಟು ಬೇಗ ಬಂದ್ರೀ..?ಮು: ನಮ್ಮ ಬಾಸ್ ನರಕಕ್ಕೆ ಹೋಗು ಅಂತ ಬೈದ್ರು.. ಅದಕ್ಕೆ ಇಲ್ಲಿಗೆ ಬಂದೆ. ಮ: ರೀ, ಒಂದು ನಿಮಿಷ ಬಂದು ಬಿಡ್ತಿನಿ. ಮನೇಲಿರಿ.ಮು: ಎಲ್ಲಿಗೆ ಹೋಗ್ತಿದ್ದಿಯಾ..?ಮ: ಪಕ್ಕದ್ಮನೆ ಪದ್ಮಕ್ಕನ ಮನೆಗೆ ಸಕ್ಕರೆ ಸಾಲ ತರ‍್ಲಿಕ್ಕೆ..ಮು: ಸಾಲ ಯಾಕೆ ತರಬೇಕು. ನಿನ್ನೆ ತಾನೇ ೨ ಕೆಜಿ ಸಕ್ಕರೆ ತಂದಿದ್ದೀನಲ್ಲ.ಮ: ಈಗ ನಾನು ಹೋಗ್ದೆ ಇದ್ರೇ ಅವಳೇ ಸಾಲ ಕೇಳ್ಕೊಂಡು ಇಲ್ಲಿಗೆ ಬಂದುಬಿಡ್ತಾಳೆ..! ಮ: ರೀ, ನೀವು ನನಗೆ ಮುತ್ತಿನ ಹಾರ ಕೊಡಿಸುತ್ತಿದ್ದಂತೆ ಕನಸು ಬಿತ್ತು.ಮು: ಹೌದಾ..! ಅದನ್ನು ಭದ್ರವಾಗಿ ಬೀರುನಲ್ಲಿ ಇಡು. ಮ: ರೀ, ನಮಗೆ ಮಕ್ಕಳಿಲ್ಲ. ಅದಕ್ಕೆ ನನ್ನ ತಾಯಿ ಮನೆಯಿಂದ ಕೊಟ್ಟ ಮನೆಯನ್ನು ಯಾರಾದ್ರೂ ಸನ್ಯಾಸಿಗೆ ಮಾರಿಬಿಡೋಣವೆಂದುಕೊಂಡಿದ್ದೇನೆ..ಮು: ಬಾಗಿಲು ತೆಗಿಮ: ಎಲ್ಲಿಗೆ ಹೋಗ್ತಿರಾ..?ಮು: ಸನ್ಯಾಸಿಯಾಗಲಿಕ್ಕೆ..! ಮ: ರೀ, ನಾಳೆ ನಿಮ್ಮ ಹ್ಯಾಪಿ ಬರ್ತಡೆ. ಏನ್ ಗಿಫ್ಟ್ ಕೊಡ್ಲಿ..?ಮು: ಡ್ಯೆವೋರ್ಸ್ ಕೊಟ್ಟುಬಿಡು.. ಗೊರೂರು ಅನಂತರಾಜು,

ಹಾಸ್ಯಬರಹ ಗೊರೂರು ಅನಂತರಾಜು ಅವರ ಲೇಖನಿಯಿಂದ “ನಿಮ್ಮಪ್ಪ ಏನಂತಾ ಕರೀತಾರೆ..ಈಡಿಯಟ್..ಸ್ಟುಪಿಡ್..!” Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-14 ಅರ್ಜುನ ಉವಾಚ ವಿಶ್ವನಾಥ್‌ ಎನ್‌ ನೇರಳೆಕಟ್ಟೆ ಅನಲ ಅಳಿಯನಾದ ಬಗೆ ಹೀಗೆ ಅನಲ ಅಳಿಯನಾದ ಬಗೆ ಹೀಗೆ‘ಮೇಧಾಶ್ವವನ್ನು ಯಾವ ಕಾರಣಕ್ಕೂ ಬಿಡಲಾರೆ. ನನ್ನ ಜೊತೆಗೆ ಹೋರಾಟ ಮಾಡಿಯೇ ಕುದುರೆಯನ್ನುಕರೆದೊಯ್ಯಬೇಕು ನೀನು. ಇದು ಖಚಿತ’ ಎಂಬ ನೀಲಧ್ವಜ ಉದ್ಘೋಷಿತ ಸಂದೇಶ ನನ್ನನ್ನು ಬಂದು ತಲುಪಿತು.ನನಗಾದದ್ದು ಅಚ್ಚರಿ.ಅಗ್ನಿಯ ಮಾತಿನಂತೆ ಯುದ್ಧವನ್ನು ನಿಲ್ಲಿಸಿದ್ದವನು ನೀಲಧ್ವಜ. ಕುದುರೆಯನ್ನವನು ಬಿಟ್ಟುಕೊಡುತ್ತಾನೆಎನ್ನುವುದು ನನಗಿದ್ದ ಸರಳ ಸಹಜ ಅಂದಾಜು. ಆದರೆ ಇದ್ದಕ್ಕಿದ್ದಂತೆಯೇ ಅವನು ಮನಸ್ಸು ಬದಲಾಯಿಸಿದ್ದ.ಮಾಹಿಷ್ಮತಿಯರಸನ ಮನ ತಕ್ಷಣ ಬದಲಾದುದಕೆ ಏನದು ಕಾರಣ ಎಂಬ ಮೂಲ ಮರ್ಮಲತೆಯನ್ನು ಹುಡುಕಿಹೊರಟನನಗೆ ತಿಳಿದುಬಂದದ್ದು ಜ್ವಾಲೆಯೆಂಬವಳ ಮಾತು.ಜ್ವಾಲೆ, ನೀಲಧ್ವಜನ ಪ್ರೀತಿಯ ರಾಣಿ. ಅರ್ಜುನನ ಕುದುರೆಯನ್ನು ಬಿಟ್ಟು ಕಳುಹಿಸಬೇಕು ಎಂದು ಮಂತ್ರಿಗಳಲ್ಲಿನೀಲಧ್ವಜ ಮಾತನಾಡುತ್ತಿದ್ದುದು ಅವಳಿಗೆ ತಿಳಿಯಿತಂತೆ. ಅವಳಿಗದು ಮೆಚ್ಚುಗೆಯಾಗಲಿಲ್ಲ. “ಹೆದರಿಕೆ ಅದೇತಕೆ!ಬಿಡದಿರು ಕುದುರೆಯನ್ನು. ನಿಲ್ಲಿಸದಿರು ಯುದ್ಧವನ್ನು. ಅರ್ಜುನನಿಗೆದುರಾಗಿ ನಿಂತು ಕದನವ ಮಾಡು” ಎಂಬ ಸಲಹೆಇತ್ತಳಂತೆ ತನ್ನೊಡೆಯನಿಗೆ. ಅದಾವ ಮಾಯೆಯಲ್ಲಿ ಅವಳ ಮಾತಿನ ಸುಳಿಗೆ ಸಿಲುಕಿದನೋ ಆ ನೀಲಧ್ವಜ! ಹಯವಬಿಟ್ಟುಕೊಡದಿರುವ ಛಲವ ಹೊತ್ತುಮೆರೆಯುತಿಹ ಸಂದೇಶವ ನನಗೆ ಕಳುಹಿಸಿಕೊಟ್ಟ.ಜ್ವಾಲೆಯ ಮನೋಭೂಮಿಕೆ ಹೊಸದೆನಿಸಿತು ನನಗೆ. ಸಾಮಾನ್ಯವಾಗಿ ಕ್ಷಾತ್ರಪುರುಷರು ಕಲಹದೆಡೆಗೆಕುತೂಹಲಿಗಳಾಗಿರುತ್ತಾರೆ. ಅವರ ಆಸಕ್ತಿಯದು ಸಹಜ. ಹೆಂಗಳೆಯರು ಯುದ್ಧ ಬೇಡವೆಂದು ಗಂಡಂದಿರನ್ನು ತಡೆಯುವಪ್ರಯತ್ನ ಮಾಡುತ್ತಾರೆ. ಕದನವಾದರೆ ತನ್ನವನಿಗೆ ಅದೇನಾದೀತೋ ಎಂಬ ಆತಂಕ ಅವರಲ್ಲಿರುತ್ತದೆ. ಆದರೆ ಈ ಜ್ವಾಲೆಯುದ್ಧದಿಂದ ವಿಮುಖನಾಗಿ ಶಾಂತಿಯೆಡೆಗೆ ಮನಸ್ಸು ಮಾಡಿದ ರಮಣನ ಮನಸ್ಸನ್ನು ಮತ್ತೆ ಕ್ರಾಂತಿಯೆಡೆಗೆ ಸೆಳೆಯುವಮನಸ್ಸು ಮಾಡಿದ್ದಳು. ರಮಣನ ಪ್ರಾಣದೆಡೆಗೆ ಅವಳಿಗೆ ಮಮಕಾರ ಭಾವ ಇರಲಿಲ್ಲವೇ?! ಗೊತ್ತಿಲ್ಲ.ಅವಳಿಗೆ ನನ್ನ ಮೇಲೇನಾದರೂ ದ್ವೇಷವಿತ್ತೇ! ನನಗೆ ಅರಿವಿಲ್ಲ. ನಾನ್ಯಾವತ್ತೂ ಅವಳಲ್ಲಿ ಮಾತನಾಡಿದ್ದಿಲ್ಲ.ಜಗಳ ಆಡಿದ್ದಿಲ್ಲ. ಹಾಗಿರುವಾಗ ನನ್ನ ಮೇಲೆ ಅವಳಿಗೆ ದ್ವೇಷ ಇರಲು ಸಾಧ್ಯವೇ! ತಿಳಿಯಲಿಲ್ಲ.ಇನ್ನೊಂದು ಬಗೆಯ ಯೋಚನೆ ಮೂಡಿತು ನನಗೆ ಆ ಕ್ಷಣದಲ್ಲಿ. ಯುದ್ಧ ಸಂಧಾನಕಾರನಾಗಿ ನಡೆದುಕೊಂಡವನುಅಗ್ನಿ. ಅವನು ನೀಲಧ್ವಜನ ಅಳಿಯ. ಮಾಹಿಷ್ಮತಿಯಲ್ಲಿಯೇ ನೆಲೆನಿಂತು ಆ ನಗರದ ಅಳಿಯನಂತೆ ಗುರುತಿಸಿಕೊಂಡವನು.ಮಗಳನ್ನು ಮದುವೆಯಾದ ಅಳಿಯನ ಮೇಲೇನಾದರೂ ಕೋಪ ಇರಬಹುದೇ ಜ್ವಾಲೆಗೆ?! ಎಂಬ ಆಲೋಚನೆ ನನ್ನಲ್ಲಿಉದಯಿಸಿತು.ಈ ಬಗೆಯ ಚಿಂತನೆ ನನ್ನಲ್ಲಿ ಮೂಡುವುದಕ್ಕೆ ಸಕಾರಣವಿತ್ತು. ನೀಲಧ್ವಜನ ಮಗಳು ಅಗ್ನಿಯನ್ನು ಪ್ರೀತಿಸಿಮದುವೆ ಆದವಳು.ನೀಲಧ್ವಜ ಜ್ವಾಲೆಯರ ಮಗಳು ಅಪ್ರತಿಮ ರೂಪವತಿಯಾಗಿದ್ದಳು. ಗುಣಶೀಲೆ ಎನಿಸಿಕೊಂಡಿದ್ದಳು. ಹೀಗಿದ್ದಚೆಲುವೆ ಯೌವ್ವನಾವಸ್ಥೆಯನ್ನು ತಲುಪಿದಾಗ ನೀಲಧ್ವಜನಲ್ಲಿ ಮಗಳ ಮದುವೆಯ ಯೋಚನೆ ಮೂಡಿತು. ಮೂರೂ ಲೋಕಗಳಲ್ಲಿ ಖ್ಯಾತಿ ಗಳಿಸಿದ, ವೀರರೆಂದು ಹೆಸರು ಪಡೆದ, ಸಿರಿವಂತರೆAದು ಗುರುತಿಸಿಕೊಂಡ ಪುರುಷರ ಚಿತ್ರವನ್ನುಅವಳೆದುರು ಹಿಡಿದು, “ಇವರಲ್ಲಿ ನಿನ್ನ ಪತಿಯಾಗುವವರು ಯಾರೆಂದು ನೀನೇ ಹೇಳು ಮುದ್ದು ಮಗಳೇ” ಎಂದ.ತಂದೆಯ ಮಾತಿನಂತೆ ಚಿತ್ರಪಟದೆಡೆಗೆ ಹರಿಣಿನೇತ್ರವನ್ನು ಹರಿಸಿದ ಸುಂದರಿಗೆ ಚೆಲುವನಾಗಿ ಕಂಡದ್ದು ಅಗ್ನಿದೇವ.ತಂದೆ ತಂದು ಕೈಗಿಟ್ಟಿದ್ದ ಚಿತ್ರಪಟದಲ್ಲಿ ಅಗ್ನಿ ಗಂಧರ್ವ ಯಕ್ಷ ದೇವತೆಗಳನ್ನು ತನ್ನ ಚೆಲುವಿನಿಂದಲೇ ಅಪಹಾಸ್ಯ ಮಾಡಿನಗುತ್ತಿದ್ದ. ಸಕಲ ಭೂಮಂಡಲದ ರಾಜಾಧಿರಾಜರನ್ನು ಮೀರುವಂತೆ ತೋರುತ್ತಿದ್ದ. ಮನ್ಮಥರಾಜ ವಸಂತರಾಜರನ್ನೂಮೀರಿದ ಸೌಂದರ್ಯವನ್ನು ಆವಾಹಿಸಿಕೊಂಡು ಕುಳಿತಿದ್ದ. ತಕ್ಷಣವೇ ನೀಲಧ್ವಜಕುವರಿಯ ಚಿತ್ತ ಚಿತ್ರಪಟದಲ್ಲಿದ್ದಅಗ್ನಿದೇವನ ಹೃದಯವನ್ನು ಕೂಡಿಕೊಂಡಿತು. “ಎನಗಿನ್ನು ಇವನೇ ರಮಣ” ಎಂದಳು ತಂದೆಯಲ್ಲಿ, ನಸುನಾಚಿಕೆತೋರುತ್ತ.ನಡೆಯಲಾರದ್ದರೆಡೆಗೆ, ಸಾಧ್ಯವಾಗದ್ದರ ಕಡೆಗೆ ಮಗಳು ಮನಸ್ಸು ಹರಿಸಿದ್ದಾಳೆ ಎನಿಸಿತು ನೀಲಧ್ವಜನಿಗೆ.ಅದನ್ನೇ ತನುಜೆಗೆ ಹೇಳಿದ. ತಂದೆಯ ಮಾತು ಅಪಥ್ಯವಾಯಿತು ಆ ಚೆಲುವೆಗೆ. ಜನಕನನ್ನು ಜರಿದವಳು ಅರಮನೆಯನ್ನುತೊರೆದುಹೋದಳು.ತಾರುಣ್ಯವೆಂದರೆ ಹಾಗೆಯೇ. ಹೃದಯ ಏನನ್ನು ಬಯಸುತ್ತದೆಯೋ ಅದು ದಕ್ಕದಾದಾಗ ನಿರಾಸೆ ಮೂಡುತ್ತದೆ;ಹಠ ಕುಡಿಯೊಡೆಯುತ್ತದೆ. ಪಡೆಯದಿರಲಾರೆ ಮನ ಬಯಸಿದ ಅನಲನನ್ನು ಎಂದುಕೊಂಡಳು ನೀಲಧ್ವಜಸುತೆ.ಅರಮನೆಯನ್ನು ತೊರೆದವಳು ನರ್ಮದಾ ತೊರೆಯ ತೀರವನ್ನು ಸೇರಿದಳು, ತೀರದಾಸೆಯನ್ನು ಎದೆಯಲ್ಲಿಹೊತ್ತುಕೊಂಡು. ನಾನಾ ವಿಧಗಳಲ್ಲಿ ಅಗ್ನಿದೇವನನ್ನು ಅರ್ಚಿಸಿದಳು.ಅವಳ ಪೂಜೆಯ ಸೊಗಸದು ಅಗ್ನಿಗೆ ಮೆಚ್ಚುಗೆಯಾಯಿತು. ಅವಳನ್ನು ಮದುವೆಯಾಗುವ ಇಚ್ಛೆ ಅವನಲ್ಲಿಯೂಮೂಡಿತು.ಬ್ರಾಹ್ಮಣ ವೇಷವನ್ನು ತಾಳಿದ ಅನಲ ಕಾಣಿಸಿಕೊಂಡದ್ದು ನೀಲಧ್ವಜನ ಆಸ್ಥಾನದಲ್ಲಿ. ಸಭೆಗೆ ಬಂದಭೂಸುರನನ್ನು ಸ್ವಾಗತಿಸಿದ ನೀಲಧ್ವಜ. ಬಂದ ಕಾರಣವನ್ನು ನಯವಾಗಿ ಕೇಳಿದ. “ಕನ್ಯೆಯನ್ನು ಬಯಸಿ ಬಂದಿದ್ದೇನೆ.ನಿನ್ನ ಸುತೆಯನ್ನು ಕೊಡು ಎನಗೆ. ರಾಜನಾಗಿರುವ ನೀನು ಬ್ರಾಹ್ಮಣನಾದ ನನಗೆ ಮಗಳನ್ನು ಮದುವೆಮಾಡಿಕೊಡಬಹುದು. ಶಾಸ್ತçದ ಅಭ್ಯಂತರವಿಲ್ಲ” ಎಂದ ಬ್ರಾಹ್ಮಣ ವೇಷದ ಅನಲ.ಮಗಳು ಅಗ್ನಿಯನ್ನು ಮದುವೆಯಾಗುವ ಮನಸ್ಸು ಮಾಡಿದ್ದಾಳೆ. ಏನು ಮಾಡಲಿ! ಎಂದು ಅಸಹಾಯಕತೆತೋರಿದ ನೀಲಧ್ವಜ. ತಕ್ಷಣವೇ ತಾನೇ ಅಗ್ನಿ ಎಂಬ ಸತ್ಯವನ್ನು ಅರುಹಿದ ಅನಲ.ನೀಲಧ್ವಜನ ಆಪ್ತಮಂತ್ರಿ ಪರೀಕ್ಷಿಸಿದ. ಅವನು ಅಗ್ನಿಯೆನ್ನುವುದು ಸಾಬೀತಾಯಿತು. ನೀಲಧ್ವಜನ ಸತಿಯೂಪರೀಕ್ಷೆ ಮಾಡಿದಳು. ವಿಪ್ರ ವೇಷವದು ನಕಲು. ನಿಜವಾಗಿಯೂ ಅಗ್ನಿಯವನು ಎನ್ನುವುದವರ ಅರಿವಿಗೆ ಬಂತು. ನೀಲಧ್ವಜಅಗ್ನಿಯಲ್ಲಿ “ಮಗಳನ್ನು ನಿನಗೆ ಮದುವೆ ಮಾಡಿಕೊಡುತ್ತೇನೆ. ಆದರೆ ನೀನು ಇದೇ ನಗರದಲ್ಲಿ ಇರಬೇಕು” ಎಂದ. ಅಗ್ನಿಒಪ್ಪಿದ. ಅನಲ ನೀಲಧ್ವಜನ ಅಳಿಯ ಎನಿಸಿಕೊಂಡ.ಹೀಗೆ ಅಳಿಯನಾದ ಅಗ್ನಿಯ ಮೇಲೆ ರಾಣಿ ಜ್ವಾಲೆಗೆ ಏನಾದರೂ ಅಸಮಾಧಾನ ಇತ್ತೋ ಏನೋ! ಈಕಾರಣದಿಂದಲೇ ಅವನು ಏರ್ಪಡಿಸಿದ ಸಂಧಾನವದು ಅವಳಿಗೆ ಸಹ್ಯವಾಗಲಿಲ್ಲವೋ ಏನೋ! ನೀಲಧ್ವಜ ಸೇನೆಯೊಡನೆ ಮತ್ತೆ ಕದನ ಹೂಡುವುದೀಗ ಅನಿವಾರ್ಯವಾಗಿಬಿಟ್ಟಿತ್ತು ನಮಗೆ. ಕುದುರೆಯಕಾಲುಗಳು ಮಾಹಿಷ್ಮತಿ ನಗರವನ್ನು ತೊರೆದು ಮುಂದೆ ಚಲಿಸಬೇಕಾದರೆ ನಮ್ಮ ಕಾಲುಗಳು ಕದನರಂಗಕ್ಕಿಳಿಯಬೇಕಿತ್ತು. ಡಾ. ವಿಶ್ವನಾಥ ಎನ್ ನೇರಳಕಟ್ಟೆ

Read Post »

ನಿಮ್ಮೊಂದಿಗೆ

ಪರವಿನಬಾನು ಯಲಿಗಾರ ಅವರ ಕವಿತೆ”ಪ್ರೀತಿ”

ಕಾವ್ಯ ಸಂಗಾತಿ ಪರವಿನಬಾನು ಯಲಿಗಾರ “ಪ್ರೀತಿ” ಪ್ರೀತಿ ಎಂದರೆ ಅಂಬರ ,ಅಲ್ಲಿ ಮೇಘದ ತಂಪು ಸಿಂಚನ ,ಜೊತೆಗೆ ಗುಡುಗು , ಕೋಲ್ಮಿಂಚಿನಅಬ್ಬರವು ಇದೆ….. ಪ್ರೀತಿ ಎಂದರೆ ಇಳೆ ,ಕರುಣೆಯ ಹಸಿರು ಇದೆ ,ಬದುಕು ಕಸಿಯುವ ಜ್ವಾಲೆಯಕಂಪನವೂ ಇದೆ….. ಪ್ರೀತಿ ಎಂದರೆ ಸಾಗರ ,ವಡಲಿನಲ್ಲಿ ಮುತ್ತು ಮಾಣಿಕ್ಯ ಇವೆ ,ರಕ್ಕಸ ರೂಪದ ಅಲೆಗಳಆರ್ಭಟದ ಸುನಾಮಿ ಇದೆ….. ಪ್ರೀತಿ ಎಂದರೆ  ಗಾಳಿ ,ಉಸಿರು ಕಟ್ಟುವ ಬಿರುಗಾಳಿ ಇದೆ,ಜೀವ ಕೊಡುವ ಪ್ರಾಣವಾಯುವು ಹೌದು  ….. ಪ್ರೀತಿ ಎಂದರೆ  ಬೆಂಕಿ ,ಬೆಳಗುವ ನಂದಾ ದೀಪವು ಆಗುವುದು,ಸರ್ವನಾಶಕ್ಕೆ ಚಾಚುವಕೆನ್ನಾಲಿಗೆಯೂ ಇದೆ …. ಪರವಿನಬಾನು ಯಲಿಗಾರ.

ಪರವಿನಬಾನು ಯಲಿಗಾರ ಅವರ ಕವಿತೆ”ಪ್ರೀತಿ” Read Post »

ಇತರೆ, ಶಿಕ್ಷಣ

“ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ನಾಗರತ್ನ. ಹೆಚ್ ಗಂಗಾವತಿ

ವಿದ್ಯಾರ್ಥಿ ಸಂಗಾತಿ ನಾಗರತ್ನ. ಹೆಚ್ ಗಂಗಾವತಿ “ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ಪರೀಕ್ಷೆಗಳು ವಿದ್ಯಾರ್ಥಿಗಳ ಜ್ಞಾನ ಕೌಶಲ್ಯ ಮತ್ತು ವಿಷಯದ ಆಳವಾದ ತಿಳುವಳಿಕೆಯನ್ನು ಅಳೆಯುವ ಪ್ರಮುಖ ಶೈಕ್ಷಣಿಕ ಮೌಲ್ಯಮಾಪನ ಸಾಧನವಾಗಿದೆ ಇವು ಶಿಸ್ತು ,ಸಮಯ, ನಿರ್ವಹಣೆ ಮತ್ತು ಕಠಿಣ ಪರಿಶ್ರಮವನ್ನು ಉತ್ತೇಜಿಸುತ್ತವೆ. ವೈಯಕ್ತಿಕ ಬೆಳವಣಿಗೆಗೆ ಮತ್ತು ಮುಂದಿನ ಹಂತದ ಶಿಕ್ಷಣದ ಅಗತ್ಯವಾದ ತಾರ್ಕಿಕ ಚಿಂತನೆಗಳನ್ನು ಬೆಳೆಸುವಲ್ಲಿ ಸಹಾಯ ಮಾಡುತ್ತವೆ ಅಷ್ಟೇ ಅಲ್ಲದೆ ಇದು ಕಲಿಕೆಯ ಪ್ರಕ್ರಿಯೆ ಪ್ರಮುಖ ಭಾಗವಾಗಿದೆ ಮತ್ತು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಸಾಧನವಾಗಿದೆ. ಪರೀಕ್ಷೆಗಳು ವಿದ್ಯಾರ್ಥಿ ಒಂದು ನಿರ್ದಿಷ್ಟ ಅವಧಿಯಲ್ಲಿ ಎಷ್ಟು ವಿಷಯವನ್ನು ಕಲಿತಿದ್ದಾನೆ ಮತ್ತು ವಿಷಯವನ್ನು ಎಷ್ಟರಮಟ್ಟಿಗೆ ಅರ್ಥಮಾಡಿಕೊಂಡಿದ್ದಾನೆ ಎಂಬುದನ್ನು ನಿರ್ಣಯಿಸುವುದು ಹಾಗೂ ಕೇವಲ ಅಂಕ ಗಳಿಗಾಗಿ ಅಲ್ಲ ಬದಲಿಗೆ ವಿಷಯದ ಮೇಲಿನ ಹಿಡಿತವನ್ನು ಪರೀಕ್ಷಿಸುತ್ತದೆ. ಹಾಗೂ ಪರೀಕ್ಷೆಗಳು ವಿದ್ಯಾರ್ಥಿಯ ಭವಿಷ್ಯವನ್ನು ನಿರ್ಧರಿಸುವುದಷ್ಟೇ ಅಲ್ಲದೆ ಅವನ ಜ್ಞಾನವನ್ನು ಅಳೆಯುವಂತಹ ಒಂದು ಸಾಧನವು ಕೂಡ ಹೌದು. ಮತ್ತು ವಿದ್ಯಾರ್ಥಿಗೆ ಸಮಯವನ್ನು ಹಾಗೂ ಬರವಣಿಗೆ ಕೌಶಲ್ಯವನ್ನು ಯಾವ ರೀತಿ ಉಪಯೋಗ ಸುವಂತಹ ಕಲೆಯನ್ನ ಬಳಸುತ್ತದೆ ಮತ್ತು ಎಷ್ಟೇ ಸವಾಲುಗಳು ಇದ್ದರೂ ಸಹ ಪರೀಕ್ಷೆಯಲ್ಲಿ ಉತ್ತಮ ಬರೆಯಬೇಕು ಎಂಬ ಛಲವನ್ನ ಮೂಡಿಸುತ್ತದೆ. ಹಾಗೂ ವಿಷಯದ ಕಲ್ಪನೆಯನ್ನು ಅರ್ಥ ಮಾಡಿಕೊಳ್ಳುವಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ . ವೈಯಕ್ತಿಕ ಬೆಳವಣಿಗೆಗೆ ಮತ್ತು ಮುಂದಿನ ಹಂತದ ಶಿಕ್ಷಣಕ್ಕೆ ಅಗತ್ಯವಾದ ಜ್ಞಾನವನ್ನು ಬೆಳೆಸುತ್ತದೆ. ಕಲಿಕೆಯ ಗುಣಮಟ್ಟ ಮತ್ತು ವಿಷಯದ ಜ್ಞಾನದ ಮಟ್ಟವನ್ನು ಅರ್ಥ ಮಾಡಿಕೊಳ್ಳುವಲ್ಲಿ ಪರೀಕ್ಷೆಗಳು ಸಹಾಯ ಮಾಡುತ್ತವೆ. ಓದಲು ಮತ್ತು ಜ್ಞಾನವನ್ನು ಹೆಚ್ಚಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದಷ್ಟೇ ಅಲ್ಲದೆ ಪ್ರೇರಣೆಯನ್ನು ಒದಗಿಸುತ್ತದೆ ಪರೀಕ್ಷೆಯು ಕೇವಲ ಅಂಕಗಳಿಗಾಗಿ ಅಲ್ಲ ಬದಲಾಗಿ ಜ್ಞಾನವನ್ನು ಅಭಿವೃದ್ಧಿಪಡಿಸುವ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳುವ ಒಂದು ಪ್ರಕ್ರಿಯೆಯಾಗಿದೆ. ಹಾಗೂ ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವುದರಿಂದ ತಪ್ಪದೇ ಸಮಯಕ್ಕೆ ಸರಿಯಾಗಿ ಹಾಜರಾಗುವುದು ಅಷ್ಟೇ ಮುಖ್ಯವಾಗಿರುತ್ತದೆ ಮತ್ತು ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ ಹಾಗಾಗಿ ಪರೀಕ್ಷೆಗಳು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ ಹಾಗೂ ಪರೀಕ್ಷೆಗಳು ವಿದ್ಯಾರ್ಥಿಯ ಜೀವನದಲ್ಲಿ ಮಹತ್ವವಾದಗಳು *ಉದಾಹರಣೆಗೆ*ಶಿಕ್ಷಣ ಎಷ್ಟು ಮುಖ್ಯ ಎನ್ನುವುದನ್ನು ನೋಡುವುದಾದರೆ ಹೀಗೆ ಒಂದು ಊರಿನಲ್ಲಿ ಗಿರೀಶ ಮತ್ತು ಹರೀಶ್ ಎನ್ನುವ ಇಬ್ಬರು ಗೆಳೆಯರಿದ್ದರು.ಇಬ್ಬರೂ ಓದಿದಲ್ಲಿ ಅಷ್ಟೇ ಜಾಣನಿದ್ದರೂ ಕೂಡ ಗಿರೀಶನಿಗೆ ಅನಾರೋಗ್ಯದ ಕಾರಣದಿಂದ ಪರೀಕ್ಷೆಯಲ್ಲಿ ಹಾಜರಾಗದೆ ಹಿಂದುಳಿದ ತೊಡಗಿದ ಆಗ ಹರೀಶನು ಆತನಿಗೆ ಉತ್ತಮ ಅಂಕ ಗಳಿಸಲು ತನಗೆ ತಿಳಿದಂತಹ ಎಲ್ಲಾ ಸಲಹೆಗಳನ್ನು ನಿತ್ಯವೂ ಹೇಳುತ್ತಾ ಬಂದನು ಆಗ ಆತನು ಕೂಡ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಮತ್ತು ಅವರಿಬ್ಬರು ಕೂಡಿ ತಮ್ಮ ಗ್ರಾಮದಲ್ಲಿ ಇರುವಂತಹ ಅನಕ್ಷರಸ್ಥರನ್ನು ಸೇರಿಸಿನಿತ್ಯವೂ ಸಂಜೆ ಸಮಯದಲ್ಲಿ ಅವರುಗಳಿಗೆ ಉತ್ತಮ ಜ್ಞಾನವನ್ನು ನೀಡುತ್ತಾ ಬಂದರು ಆಗ ಊರಿಗೆ ಊರೇ ಸಾಕ್ಷರತಾ ಗ್ರಾಮವಾಗಿ ಪರಿವರ್ತನೆಗೊಂಡಿತು.ಅದಕ್ಕೆ ಹೇಳುವುದು *ವಿದ್ಯೆ ಕದಿಯಲಾರದ ಸಂಪತ್ತು*ಹೀಗೆ ಪ್ರತಿಯೊಬ್ಬರ ಜೀವನದಲ್ಲಿ ಕೂಡ ಪರೀಕ್ಷೆಗಳು ಅವರ ಜೀವನವನ್ನೇ ಬದಲಾಯಿಸುವಂತಹ ಮಹತ್ವದ ಪಾತ್ರವನ್ನು ವಹಿಸುತ್ತವೆ ಹೀಗಾಗಿ ವಿದ್ಯಾರ್ಥಿಗಳು ತಮ್ಮ ಮುಂದಿನ ಭವಿಷ್ಯಕ್ಕಾಗಿ ಕೇವಲ ಅಂಕಗಳಿಗಾಗಿ ಅಷ್ಟೇ ಅಲ್ಲದೆ ಜ್ಞಾನಕ್ಕಾಗಿ ಓದುವುದು ಅಷ್ಟೇ ಮುಖ್ಯ ಸಮಯವನ್ನು ವ್ಯರ್ಥ ಮಾಡದೆ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಪರೀಕ್ಷೆಗಳು ಪ್ರಮುಖ ಸಾಧನಗಳಾಗಿವೆ. ನಾಗರತ್ನ. ಹೆಚ್ ಗಂಗಾವತಿ

“ಪರೀಕ್ಷೆಗಳು ಕೇವಲ ಅಂಕ ಗಳಿಸುವ ಸಾಧನವಲ್ಲ” ನಾಗರತ್ನ. ಹೆಚ್ ಗಂಗಾವತಿ Read Post »

You cannot copy content of this page

Scroll to Top