ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ವಿಮಲಾರುಣ ಪಡ್ಡoಬೈಲು,”ಗೀಚಿನಿಂದರಳಿದ ಗೀತೆ”

ಕಾವ್ಯ ಸಂಗಾತಿ ವಿಮಲಾರುಣ ಪಡ್ಡಂಬೈಲು ಗೀಚಿನಿಂದರಳಿದ ಗೀತೆ ಆ ಪುಟ್ಟ ಕೈಯಲಿ  ಅಂದುತೋಚಿ ಗೀಚಿದ ಸಾಲುಬಿಳಿಹಾಳೆ ಮೇಲೇರಿ ಕವಿತೆಯಾಗಲುಮನದಿ ಮೂಡಿದ  ಆ ಭಾವ ಬಲು ಹಿತ. ಸೂರ್ಯ-ಚಂದಿರ-ಚುಕ್ಕಿ-ತಾರೆಗಳಪಿಸುಮಾತು ಎದೆಗಿಳಿಯಲುನನ್ನ  ದಿಟ್ಟಿಸಿ  ನಕ್ಕಿದ್ದವುನೈಜ ಭಾವದ ನನ್ನ ತಾಳ-ಮೇಳಕೂ ವರ್ಣ ಕುಹಕವೋ ಮೋಹಕವೋ ತಿಳಿಯದಾದೆ!ಆದರೂ ಕವಿತೆ ಗಾನವಾದಾಗ  ನಾ ಸಂಭ್ರಮಿಸಿದ ಆ ದಿನಗಳೆಷ್ಟು ಚೆಂದ.. ಹಿತ್ತಲಲ್ಲರಳಿದ ಜಾಜಿ ಸೇವಂತಿಗೆ ಗುಲಾಬಿಕಂಪು ಸೂಸುತ್ತ ಹನಿಯ ಬಿಗಿದಪ್ಪಿರಲುಮೌನಗರ್ಭದಿ ಕೂಸು ಮಿಸುಕಾಡಿದಂತಾಯ್ತುಖಾಲಿ ಕಾಗದದಿ ಜೀವ ತಳೆದಾಯ್ತುನಾನೋ ಅದರ ಬೆನ್ನು ತಟ್ಟಿದ್ದೆಅಥವಾ ಅದು ನನ್ನೊಳಗಿನ ಸ್ಪಂದನೆಗೆಸ್ಪರ್ಶಸಿತ್ತೋ?ಒಂದಂತೂ ದಿಟಅರಿಯದ ಆ ಮುಗ್ಧ ಮಹಾದಾನಂದ. ಚಿಮಣಿ ದೀಪ ಸುತ್ತ ಸೆಳಕು ಚೆಲ್ಲಿರಲುಉರಿವ ಸೌದೆಯ  ಉರಿಯಲಿಅಮ್ಮನ  ಬೆವರು  ಬಸಿದಿರಲುತುತ್ತು ಉಣ್ಣಿಸಿದ ಖುಷಿಗೆಆತ್ಮತೃಪ್ತಿಯ ಎರಕ ಹೊಯ್ದನಾ ಬರೆದ ಎರಡು ಸಾಲುಅವಳಿಗದೆಷ್ಟು ಸಂತೃಪ್ತಿ!ಹಿಗ್ಗಿತ್ತು ನನ್ನ ಹೃದಯ. ಅಪ್ಪನ ಹೆಗಲೇರಿ ನೋಡಿದ ಜಾತ್ರೆಅಕ್ಕತಂಗಿಯರೊಡಗೂಡಿ ಆಡಿದ ಆಟಮರದ ನೆರಳಲ್ಲಿ ಬಿತ್ತಿದ ಬೀಜಗಳುಬರಹದ ಬೇರಾಗಿ ಅವು ಕವಿತೆಯಾಗಿಬೀಸುವ ಕುಳಿರ್ಗಾಳಿ ನೀ ಕವಿಯೆಂದುಪಿಸುಗುಟ್ಟಿದ ಆ ದಿನವೆಷ್ಟು ಚೆಂದ … ಅಂದು ಗೀಚಿದ್ದೆ ಗೀತೆ ಅದೆಂಥಾ ಆನಂದಇಂದು ಭಾವಗಳ ಹೆಣೆದಷ್ಟು ನಿರ್ಭಾವಜೋಂಪು ನಿದಿರೆಯಲಿ ಮುದುಡಿದ ಪದಗಳಭಾವವಾಗಿ ನನ್ನತ್ತ ಹರಿಯ ಬಿಡು ಕವಿತೆನಿನ್ನಾಗ ಜಗ ಮೆಚ್ಚುವುದು ಸುನೀತೆ. ವಿಮಲಾರುಣ ಪಡ್ಡoಬೈಲು

ವಿಮಲಾರುಣ ಪಡ್ಡoಬೈಲು,”ಗೀಚಿನಿಂದರಳಿದ ಗೀತೆ” Read Post »

ಇತರೆ

“ಅಲ್ಲಮ ಪ್ರಭು ವಚನ ವಿಶ್ಲೇಷಣೆ” ವಿಜಯಲಕ್ಷ್ಮಿ ಹಂಗರಗಿ

ವಚನ ಸಂಗಾತಿ ವಿಜಯಲಕ್ಷ್ಮಿ ಹಂಗರಗಿ “ಅಲ್ಲಮ ಪ್ರಭು ವಚನ ವಿಶ್ಲೇಷಣೆ” ಸತಿಯ ಕಂಡು ಬೃತಿಯಾದ ಬಸವಣ್ಣ ಸತಿಯ ಕಂಡು ಬೃತಿಯಾದ ಬಸವಣ್ಣ ಸತಿಯ ಕಂಡು ಬೃತಿಯಾದ ಬಸವಣ್ಣಬೃತಿಯಾದ ಬ್ರಹ್ಮಚಾರಿಯಾದ ಬಸವಣ್ಣಬ್ರಹ್ಮಚಾರಿಯಾಗಿ ಭವಗೆಟ್ಟನಯ್ಯ ಬಸವಣ್ಣಗೃಹೇಶ್ವರ ನಿಮ್ಮಲ್ಲಿ ಬಾಲ ಬ್ರಹ್ಮಚಾರಿಯಾಗಿ ಬಸವಣ್ಣ ಒಬ್ಬನೇ-ಅಲ್ಲಮ ಪ್ರಭುಗಳು. ಪ್ರಾಪಂಚಿಕ ಬದುಕಿನ ವಿಷಯಾದಿಗಳ, ಆಮಿಷ, ಆಸೆ ಆಕರ್ಷಣೆಗಳ ಕಂಡು ಬಸವಣ್ಣ ವೃತ್ತಿಯಾದನು. ಅವುಗಳನ್ನು ಹೊರತುಪಡಿಸಿ ಶುದ್ಧನಾದ ಆಚಾರವಂತ ಗುಣವಂತ ವೃತವನ್ನು ಹಿಡಿದನು. ಕಾಮ ಕ್ರೋಧ ಮೋಹ ಲೋಭ ಮದ ಮತ್ಸರ ಮುಂತಾದ ಅರಿ ಷಡ್ ವರ್ಗಗಳ ಬೆಂಕಿಗೆ ಸಿಲುಕದೆ ತನ್ನ ನಿಯಮ   ವೃತವನ್ನು ಆಚರಿಸಲು ಸತಿಯೇನೆಂಬ ವ್ಯಾಮೋಹದಿಂದ ದೂರವಿರಲು ಬೃತೀಯಾದ (ವೃತಿ) ಬಸವಣ್ಣ.ಬೃತಿಯಾದ ಬ್ರಹ್ಮಚಾರಿಯಾದ ಬಸವಣ್ಣವೃತ್ತಿಯಾದ ಬಸವಣ್ಣ ಬ್ರಹ್ಮಚಾರಿಯಾಗಿ ಇಂತಹ ಸಂಸಾರಿಕ ಮೋಹಕ್ಕೆ ಸಿಲುಕದೆ ಭವ ಭವದಲ್ಲಿ ಬೆಂದು ಬಳಲಿ ಮುಕ್ತಿ ಕಾಣದೆ ಪರದಾಡುವದಕ್ಕಿಂತ,ಪ್ರಾಪಂಚಿಕ ಬದುಕಿನಲ್ಲಿ ಪಾರಮಾರ್ಥಿಕ ದೀಕ್ಷೆ ಪಡೆದ ಬಸವಣ್ಣ ಜ್ಞಾನಮಾರ್ಗದಲ್ಲಿ ನಡೆದನು. ಬ್ರಹ್ಮಚಾರಿ ಎನ್ನುವುದು ಕೇವಲ ಸನ್ಯಾಸತ್ವಕ್ಕೆ ಸೀಮಿತ ಪದವಲ್ಲ. ಸೃಷ್ಟಿ ಸ್ಥಿತಿ ಲಯದ ಜೊತೆಗೆ ಕಾಯ ಮನಸ್ಸು ಆತ್ಮಗಳ ನಿರಂತರ ಮಿಲನಗಳ ಶೋಧನೆಯ ಬ್ರಹ್ಮಚಾರಿತನ. ಹಾಗೆ ವ್ರತವ ಹಿಡಿದು ಬ್ರಹ್ಮಚಾರಿಯಾದ ಬಸವಣ್ಣ.ಬ್ರಹ್ಮಚಾರಿಯಾಗಿ ಭವಗೆಟ್ಟಣಯ್ಯಾ ಬಸವಣ್ಣಅಪೂರ್ವ ಬ್ರಹ್ಮಚಾರಿತನ ಸ್ವೀಕರಿಸಿದ ಬಸವಣ್ಣನವರು ಭವದಿಂದ ಮುಕ್ತರಾದರು. ಭವದಲ್ಲಿ ಸಿಲುಕದೆ ಭತ್ತನಾದರು ಬಸವಣ್ಣನು. ತನ್ನ ಭವದ ಪಾಶ ಕಳೆದುಕೊಂಡು ಭಕ್ತಿ ಮಾರ್ಗದಲ್ಲಿ ನಿತ್ಯಮುಕ್ತರಾದರು ಬಸವಣ್ಣ.ಗುಹೇಶ್ವರ ನಿಮ್ಮಲ್ಲಿ ಬಾಲಬ್ರಹ್ಮಚಾರಿ ಯಾದ ಬಸವಣ್ಣ ಒಬ್ಬನೇಬಸವಣ್ಣನವರು ಮದುವೆಯಾಗಿ ಮಂತ್ರಿ ಪದವಿ ಪಡೆದು ಐಶ್ವರ್ಯ ಅಂತಸ್ತು ಇದ್ದರೂ ಅವುಗಳನ್ನು ತ್ಯಜಿಸಿ ಭೃತ್ಯಚಾರದ ಭಕ್ತ ಪದವಿಯಿಂದ ನಿರ್ಲಪ್ತರಾದರು.ಇಂತಹ ಘನ ಮಹಿಮರು ಗುಹೇಶ್ವರ ಲಿಂಗದಲ್ಲಿ ಬಾಲ ಬ್ರಹ್ಮಚಾರಿಯಾಗಿ ಬಸವಣ್ಣ ಒಬ್ಬನೇ. ಹುಟ್ಟಿನಿಂದ ವಿರಕ್ತ ಭಾವಸಮತೆ ಧ್ಯಾನ ಮುಕ್ತಿಯತ್ತ ಆಸಕ್ತನಾದವರು ಬಸವಣ್ಣನವರು ಬಾಲ ಬ್ರಹ್ಮಚಾರಿ ಹುಟ್ಟು ಬ್ರಹ್ಮಚಾರಿ ಆಗಿ ಬದುಕಿದವರು. ವ್ಯವಸ್ಥೆಯ ಎಲ್ಲ ಬಂಧನಗಳನ್ನು ಸಂಕೋಲೆಗಳನ್ನು ಕಿತ್ತುಹಾಕಿ, ಆಡಂಬರಗಳನ್ನು ಧಿಕ್ಕರಿಸಿ ಮುಕ್ತ ಸಾರ್ವಕಾಲಿಕ ಸಮಾನತೆ ಸಮಾಜ ಕಟ್ಟಲು ಬಾಲ್ಯದಿಂದಲೇ ಸಂಕಲ್ಪ ಮಾಡಿದವರು ಸೃಷ್ಟಿಯಲ್ಲಿ ಬಸ್ವಣ್ಣನೊಬ್ಬರೇ ಎಂದು ಅಲ್ಲಮಪ್ರಭುಗಳು ಬಸವಣ್ಣನವರ ದಿವ್ಯ ವ್ಯಕ್ತಿತ್ವದ ಗುಣ ಗಾನ ಮಾಡುತ್ತಾರೆ. ವಿಜಯಲಕ್ಷ್ಮಿ ಹಂಗರಗಿ

“ಅಲ್ಲಮ ಪ್ರಭು ವಚನ ವಿಶ್ಲೇಷಣೆ” ವಿಜಯಲಕ್ಷ್ಮಿ ಹಂಗರಗಿ Read Post »

ಇತರೆ

“ಹಲವು ಸಿನಿಮಾಗಳ ಕಥಾಸಂಗಮ ಬಿಗ್ ಬಾಸ್ ಗಿಲ್ಲಿನಟ” ಗೊರೂರು ಅನಂತರಾಜು

ಮಾಧ್ಯಮ ಸಂಗಾತಿ ಗೊರೂರು ಅನಂತರಾಜು “ಹಲವು ಸಿನಿಮಾಗಳ ಕಥಾಸಂಗಮ ಬಿಗ್ ಬಾಸ್ ಗಿಲ್ಲಿನಟ” ಗಿಲ್ಲಿ ನಟ ಗೆದ್ದಿದ್ದಾರೆ. ದಡದಪುರದ ಹಳ್ಳಿಯ ರೈತಾಪಿ ಕುಟುಂಬದ ಹುಡುಗ ಗೆಲುವಿನ ದಡ ಸೇರಿದ್ದಾರೆ. ಗಿಲ್ಲಿ ಗೆಲುವನ್ನು ಹಾಗೆ ಮೆಲುಕು ಹಾಕುತ್ತಾ ಹೋದೆ. ಹಲವು ಸಿನಿಮಾ ದೃಶ್ಯಗಳು ನೆನಪಾದವು. ಸಿನಿಮಾ ಕಥೆಗೂ ಬಾಸ್ ಬಾಸ್ ಶೋಗೂ ವ್ಯತ್ಯಾಸ ಇದೆ. ಅಂತೆಯೇ ಸಾಮ್ಯತೆಯೂ ಇದೆ. ಆದರೂ ಟಿವಿ ವೀಕ್ಷಕರಾದ ನಮಗೆ ಎರಡೂ ಒಂದೇ. ಸಿನಿಮಾದಲ್ಲಿ ಕಟ್ ಅಂಡ್ ಆಕ್ಷನ್ ಇರುತ್ತದೆ. ಇಲ್ಲಿ ಇರುವುದಿಲ್ಲ ಅಷ್ಟೇ. ನಮ್ಮ ಬಾಲ್ಯ ಜೀವನದಲ್ಲಿ ಟಿವಿ ಇರಲಿಲ್ಲ. ಆಗೆಲ್ಲಾ ನಮಗೆ ಮನರಂಜನೆ ನೀಡುತ್ತಿದ್ದಿದ್ದು ಸಿನಿಮಾಗಳೇ. ಗಿಲ್ಲಿಯಂತೆ ಸಿನಿಮಾ ನೋಡುವ ಚಟಕ್ಕೆ ಬಿದ್ದು ಓದಿನಲ್ಲಿ ಹಿಂದೆ ಬಿದ್ದು ಜಸ್ಟ್ ಪಾಸ್ ಸ್ಟೂಡೆಂಟ್‌ಗಳು ನಾವು. ಸಿನಿಮಾವೊಂದರಲ್ಲಿ ಪ್ರೇಮಕತೆಯನ್ನು ಕೇಂದ್ರವಾಗಿಸಿ ಪೋಷಕ ಪಾತ್ರಗಳಿಂದ ಸಾಂಸರಿಕ ಕಥೆಯನ್ನು ಹೆಣೆಯಲಾಗುತ್ತ ಬಂದಿರುವುದನ್ನು ಕಾಣಬಹುದು. ಒಬ್ಬ ಹೀರೋನನ್ನು ಸೃಷ್ಟಿಸುವವಳು ಹೀರೋಯಿನ್. ಪ್ರೇಮಕಾವ್ಯದ ಹಾಡುಗಳು, ಮರ ಸುತ್ತವ ಪ್ರೇಮಿಗಳು, ಇವರ ಹಾಡು ನೃತ್ಯದ ದೃಶ್ಯಗಳಿಗೆ ಹಿನ್ನಲೆಯಲ್ಲಿ ಪ್ರಕೃತಿ ಸಿರಿಯ ಸೊಬಗನ್ನು ಸೆರೆ ಹಿಡಿಯುವುದು ಸಿನಿಮಾದ ಒಂದು ಭಾಗ. ಇಲ್ಲಿ ನಾವು ಪುಟ್ಟಣ ಕಣಗಾಲ್‌ರನ್ನು ನೆನೆಯಲೇ ಬೇಕು. ಒಳ್ಳೆಯ ಹೀರೋ ಎನಿಸಿಕೊಳ್ಳಬೇಕಿದ್ದರೆ ಅವನೆದರು ವಿಲನ್ ಇಲ್ಲವಾದರೇ ಹೀರೋ ಜೀರೋ ಹೌದಷ್ಟೇ. ಇದಷ್ಟೇ ಆದರೆ ಸಿನಿಮಾ ರಂಜಿಸುವುದೇ..? ಇಲ್ಲಾ ಅಲ್ಲೊಬ್ಬ ಗಿಲ್ಲಿ ನಟನಂತಹ ಹಾಸ್ಯ ನಟ ಇರಬೇಕು. ಈ ಫಾರ್ಮುಲಾಗಳಲ್ಲೇ ಸಿನಿಮಾ ರೀಲು ಸುತ್ತಿಕೊಂಡು ಬಂದಿವೆ. ಇಂತಹ ಫಾರ್ಮುಲಾಗಳು ಬಿಗ್ ಬಾಸ್‌ನಲ್ಲಿ ಗೋಚರಿಸುತ್ತವೆ. ಇಲ್ಲಿಯ ಲವ್ ತರಹದ ಸ್ಟೋರಿ ರೆಡಿಮೇಡ್ ಅಗಿರಲಿಲ್ಲಾ. ಆದರೂ ಜನರಿಗೆ ಇಷ್ಟವಾಯ್ತು. ರಾಜಕುಮಾರ್ ಭಾರತಿ ಅಭಿನಯದ ಬಂಗಾರದ ಮನುಷ್ಯ ಭಲೆ ಜೋಡಿ ಸಿನಿಮಾ ನೋಡಿದಂತಾಯಿತು. ಸಂಪತ್ತಿಗೆ ಸವಾಲ್ ಸಿನಿಮಾದಲ್ಲಿ ಜಗಳಗಂಟಿ ಮಂಜುಳ ಮತ್ತು ರಾಜಕುಮಾರ್ ನಟನೆಯನ್ನು ನೆನಪಿಸಿದ್ದು ಗಿಲ್ಲಿನಟ ಅಶ್ವಿನಿಗೌಡರ ಜಗಳದ ಜುಗಲ್‌ಬಂದಿ. ಗಿಲ್ಲಿ ರಘು ಜೋಡಿ ಸಾಧು ಕೋಕಿಲ ದೊಡ್ಡಣ್ಣರ ಹಾಸ್ಯ ಜೋಡಿ ಎನಿಸಿತು. ಇನ್ನೂ ಮಕ್ಕಳಿಗೆ ಟಾಮ್ ಅಂಡ್ ಜರ‍್ರಿ ಕಾರ್ಟೂನ್ ಫಿಲಂ ನೋಡಿದಷ್ಟೇ ಖುಷಿ. ಗಿಲ್ಲಿ ಎಂಬ ಎರಡಕ್ಷರದ ಹೆಸರು ಮಕ್ಕಳ ನಾಲಿಗೆಯಲ್ಲಿ ನಲಿಯಿತು. ರಕ್ಷಿತಾಶೆಟ್ಟಿ ಗಿಲ್ಲಿ ನಡುವಿನ ಬಾಂಧವ್ಯ ಸಿನಿಮಾ ಕಥೆಯ ಅಣ್ಣ ತಂಗಿಯರಂತೆ ಗೋಚರಿಸಿತು. ರಾಜಕುಮಾರ್ ಅಭಿನಯದ ಮೇಯರ್ ಮುತ್ತಣ್ಣ ಸಿನಿಮಾದಲ್ಲಿ ಜಡೆಯಂತೆ ಕೂದಲು ಬಿಟ್ಟ ಮುತ್ತಣ್ಣನನ್ನು ಊರು ಬಿಟ್ಟು ಓಡಿಸಲಾಗುತ್ತಿದೆ. ಮುತ್ತಣ್ಣ ಬೆಂಗಳೂರಿಗೆ ಬಂದು ಮೇಯರ್ ಆದಂತೆ ಗಿಲ್ಲಿ ವಿನರ್ ಆಗಿದ್ದಾರೆ. ಅಲ್ಲಿ ಭಾರತಿ ಮುತ್ತಣ್ಣನ ಜಡೆ ಕಟ್ ಮಾಡಿದರೆ ಇಲ್ಲಿ ಕಾವ್ಯ ಶೈವ ಗಿಲ್ಲಿಗೆ ತಲೆ ಬಾಚಿಕೊಳ್ಳಲು ಬಾಚಣಿಕೆ ಪ್ರಸೆಂಟ್ ಮಾಡುತ್ತಾರೆ. ಆದರೂ ತಲೆ ಬಾಚಿಕೊಳ್ಳದೇ ಇದ್ದಾಗಲೇ ಗಿಲ್ಲಿ ಚೆನ್ನಾಗಿ ಕಾಣಿಸುತ್ತಿದ್ದರು ಎಂದಿತು ಒಂದು ಹುಡುಗಿ. ಆಗಿನ ವಿಲನ್ ನಾಗಪ್ಪನಂತೆ ವೀಕ್ಷಕರಿಗೆ ಗೋಚರಿಸಿದ್ದು ಧ್ರುವಂತ್. ಬಂಗಾರದ ಪಂಜರ ಸಿನಿಮಾದಲ್ಲಿ ಕುರಿ ಕಾಡು ಹಳ್ಳಿಯ ಬದುಕಿನೊಂದಿಗೆ ಹೊಂದಿಕೊಂಡ ಪಾತ್ರ ನಗರಕ್ಕೆ ಬಂದು ಎಷ್ಟೇ ಶ್ರೀಮಂತಿಕೆ ಐಷರಾಮಿ ಬದುಕು ಇದ್ದರೂ ಹೊಂದಿಕೊಳ್ಳಲಾಗದೇ ಹಳ್ಳಿಯ ಬದುಕೇ ನನಗಿಷ್ಟ ಎಂದು ಒದ್ದಾಡುತ್ತದೆ. ಬಂಗಾರದ ಪಂಜರದಲ್ಲಿ ಕೂಡಿ ಹಾಕಿದಂತೆ ಬಿಗ್ ಬಾಸ್ ಮನೆಯಲ್ಲೂ ಕೂಡಿ ಹಾಕಿ ಒಂದಿಷ್ಟು ಟಾಸ್ಕ್ ನೀಡಿ ಉಳಿದಂತೆ ಅಲ್ಲಿ ನಡೆಯುವ ಗಲಾಟೆ ಗದ್ದಲ, ವಿರಸ ಸರಸ ಸಲ್ಲಾಪ ದೃಶ್ಯಗಳನ್ನೇ ಹೆಕ್ಕಿ ತೆಗೆದು ತೋರಿಸಲಾಗುತ್ತದೆ. ನಾವಾದರೂ ಅಷ್ಟೇ ಒಂದು ಒಳ್ಳೆಯ ಭಾಷಣ ಇದೆ ಕೇಳಲು ಬನ್ನಿ ಎಂದರೆ ಬರುವರೇ ? ಅದೇ ಎಲ್ಲಾದರೂ ಜಗಳ ನಡೆಯುತ್ತಿರಲಿ ಅದನ್ನು ನಿಂತು ನೋಡುವವರೇ ಹೆಚ್ಚು. ಜಗಳ ಮನುಷ್ಯನನ್ನು ಕುತೂಹಲದಿಂದ ಆಕರ್ಷಿಸುವುದು ಇದಕ್ಕೆ ಕಾರಣ. ಹಳ್ಳಿಯ ಅರಳಿಕಟ್ಟೆಯಲ್ಲಿ ಊರಿನ ಜಗಳ ವಿಷಯ ಚರ್ಚೆಗೆ ಬರುವುದು ಸರ್ವೆ ಸಾಮಾನ್ಯ. ಸೀರಿಯಸ್ ಆದ ಜಗಳದ ವಿಷಯವನ್ನು ವಿಡಂಬಿಸಿ ಹೇಳುವುದು ಒಂದು ಕಲೆ. ಅದು ಸಮಯಪ್ರಜ್ಞೆ. ತಮಾಷೆಯಾಗಿ ಮಾತನಾಡುವ ವ್ಯಕ್ತಿಯ ಸುತ್ತಾ ಜನ ಸೇರಿ ನಗುವುದು ಸಹಜವೇ. ಮನೆ ಜಗುಲಿಯಲ್ಲಿ ಹೆಂಗಸರು ಅವರಿವರ ಮನೆ ವಿಷಯ ಮಾತನಾಡಿಕೊಳ್ಳುತ್ತಾ ಅವರೆಕಾಯಿ ಸುಲಿಯುತ್ತಿರುವುದನ್ನು ನೋಡುವುದಿಲ್ಲವೇ? ಹಿಂದೆ ನಾನೊಂದು ಹನಿಗವನ ಬರೆದಿದ್ದೆ.ನಮ್ಮೂರಿನ ಕೆಲ ಹೆಂಗಸರುಕಟು ವಿಮರ್ಶಕರುದಿನ ಚಾವಡಿಯಲ್ಲಿನೆರೆಮನೆ ಕತೆಯನ್ನುಕಟುವಾಗಿ ವಿಮರ್ಶಿಸುತ್ತಿರುತ್ತಾರೆಹಾಸ್ಯವಾಗಿ ಮಾತನಾಡುವುದು ಒಂದು ಕಲೆಗಾರಿಕೆ. ಇನ್ನೊಬ್ಬರ ನಡೆನುಡಿಯನ್ನು ಅನುಕರಿಸಿ ಅಣಕಿಸಿ ಮಿಮಿಕ್ರಿ ಮಾಡುವುದು ನೋಡಿದ್ದೇವೆ. ಅದು ಒಂದು ಕಲೆ. ಹಾಸ್ಯದ ಒಂದು ಪ್ರಕಾರ. ಇದು ಗಿಲ್ಲಿಯಲ್ಲಿದ್ದ ಒಂದು ಗುಣ ಲಕ್ಷಣ. ಅವರ ಮುಖವಾಡವಿಲ್ಲದ ಗ್ರಾಮೀಣ ಭಾಷೆ ನಡೆನುಡಿ ಗ್ರಾಮೀಣ ಜನರಿಗೆ ಇಷ್ಟವಾಯಿತು. ಪ್ರಾರಂಭದಲ್ಲಿ ನಾನು ಬಿಗ್ ಬಾಸ್ ನೋಡದೇ ಮಲಗಿಬಿಡುತ್ತದೆ. ಒಂಬತ್ತೂವರೆಗೆ ಮಲಗುವುದು ನನ್ನ ದಿನಚರಿ. ಐದಾರು ವಾರಗಳ ನಂತರ ನಿಧಾನವಾಗಿ ನೋಡುತ್ತಾ ಕಡೆಕಡೆಗೆ ಪೂರ್ತಿ ನೋಡಿಯೇ ಮಲಗುತ್ತಿದ್ದೆ. ಗಿಲ್ಲಿಯ ಸುತ್ತಲೇ ಕ್ಯಾಮರಗಳು ಗಿರಕಿ ಹೊಡೆಯಲು ಗಿಲ್ಲಿನಟನ ಹಾಸ್ಯಪ್ರಜ್ಞೆಗೆ ಆಕರ್ಷಿತನಾದೆ. ಸಾಮಾಜಿಕ ಜಾಲ ತಾಣಗಳಲ್ಲಿ ಗಿಲ್ಲಿ ಗೆಲ್ಲುವ ಮಾತು ಜೋರಾಗಿ ಅವರ ಹಿಂದಿನ ಕಾಮಿಡಿ ಶೋ ಶಾರ್ಟ್ ಫಿಲಂಗಳನ್ನು ನೋಡಿದೆ. ಎಲ್ಲೋ ಒಂದು ಕಡೆ ನರಸಿಂಹರಾಜು, ಮಿಸ್ಟರ್ ಬೀನ್, ಚಾರ್ಲಿ ಚಾಪ್ಲಿನ್, ಸಾಧು ಕೋಕಿಲರ ಹಾಸ್ಯಾಭಿನಯ ಸ್ಮರಿಸಿ ಅವೆಲ್ಲವೂ ಗಿಲ್ಲಿ ನಟನೆಯಲ್ಲಿ ಗೋಚರಿಸಿದವು. ಒಂದು ಕಾಲದಲ್ಲಿ ನಮ್ಮ ಹಳ್ಳಿಗೆ ತೊಗಲುಗೊಂಬೆ ಮೇಳದವರು ಬಂದು ಮನರಂಜನೆ ನೀಡುತ್ತಿದ್ದರು. ಊರಲ್ಲಿ ಜಾತ್ರೆ ಹಬ್ಬಕ್ಕೆ ಹುಡುಗರು ನಾಟಕ ಕಲಿಯುತ್ತಿದ್ದರು. ಕಲಿಯುವುದಕ್ಕೆ ಮೂರು ತಿಂಗಳು ಊರಲ್ಲಿ ಮನರಂಜನೆ. ನಂತರ ಸಿದ್ಧತೆ ಪ್ರದರ್ಶನದ ಸಂತೋಷದ ಕ್ಷಣಗಳನ್ನು ವರ್ಷವಿಡಿ ನೆನಪಿಸಿಕೊಳ್ಳುತ್ತೇವೆ. ನಾಟಕ ಅಂದು ದೊಡ್ಡ ಮನರಂಜನೆ. ನಾಟಕ ರಂಗದಿಂದಲೇ ಬಂದ ಕಲಾವಿದರು ಸಿನಿಮಾ ರಂಗದಲ್ಲಿ ಪ್ರಸಿದ್ಧರಾದರು. ಆದರೆ ಸಿನಿಮಾವೇ ನಾಟಕಕ್ಕೊ ದೊಡ್ಡ ತೊಡಕಾಯಿತು. ಟಿವಿ ಮನೆಗೆ ಬಂತು. ಬಿಟ್ಟಿ ಸಿನಿಮಾ ಮನೆಯಲ್ಲೇ ನೋಡುವಾಗ ದುಡ್ಡು ಕೊಟ್ಟು ನೋಡಲು ಜನ ಥಿಯೇಟರ್‌ಗೆ ಬರುತ್ತಿಲ್ಲ. ನ್ಯೂಸ್ ಚಾನಲ್‌ಗಳು ಮಹಿಳೆಯರಿಗೆ ಪ್ರಿಯವಾಗದೇ ಧಾರಾವಾಹಿಗೆ ಮೊರೆಹೋದರು. ಧಾರಾವಾಹಿ ಕಲಾವಿದರು ಬಿಗ್‌ಬಾಸ್‌ಗೆ ಬಂದರು. ಇವರಿಗೆ ಪ್ರತಿಸ್ಫರ್ಧಿಗಳಾಗಿ ಮಾತಿನ ಮಲ್ಲರು, ಸಾಮಾಜಿಕ ಜಾಲತಾಣದ ಜಾಣರು, ಗಾಯಕರು ಮಿಕ್ಸಿಂಗ್ ಆದರು. ಉಪ್ಪು, ಕಾರ, ಹುಳಿ, ಬೆಳ್ಳುಳ್ಳಿ ಬೆರೆತು ರುಚಿಯಾದ ಊಟ ಅಡಿಗೆ ಮನೆ ಬೆಳಕಿಗೆ ಬಂತು. ನಲ್ಲಿ ಮೂಳೆ ತಿಂದು ಗಿಲ್ಲಿ ಗೆದ್ದರು. ಜಾಣ ವಿದ್ಯಾರ್ಥಿಯಂತೆ ಯಾರ ತಂಟೆಗೂ ಹೋಗದೆ ಟಾಸ್ಕ್ನಲ್ಲಿ ಫಸ್ಟ್ ಕ್ಲಾಸ್ ಬಂದರೂ ಧನುಷ್ ವೀಕ್ಷಕರ ಹೃದಯ ಗೆಲ್ಲಲು ವಿಫಲರಾದರು. ಗಿಲ್ಲಿ ಗೆಲುವಿಗೆ ಕಾವ್ಯ ಶೈವ, ಅಶ್ವಿನಿಗೌಡ, ರಘು, ರಕ್ಷಿತ ಶೆಟ್ಟ ಮತ್ತು ರಜತ್ ಅವರ ಪಾತ್ರ ಅದು ನೆಗಟಿವ್ ಆಗಿರಲಿ ಪಾಸಿಟಿವ್ ಆಗಿರಲಿ ಪರೋಕ್ಷವಾಗಿ ನೆರವಾಗಿದೆ. ಅದು ಒಂದು ಧಾರವಾಹಿಯಂತೆ, ಸಿನಿಮಾದಂತೆ ಜನರಿಗೆ ಮನರಂಜನೆ ನೀಡಿದೆ. ಮೊದಲೇ ಪರೀಕ್ಷೆಗೆ ಸಿದ್ಧವಾಗಿ ಬಂದಿದ್ದ ಗಿಲ್ಲಿನಟ ಸಂದರ್ಭ ಸನ್ನಿವೇಶಗಳನ್ನು ತಮ್ಮ ಅನುಕೂಲಕ್ಕೆ ಸೂಕ್ತವಾಗಿ ಬಳಸಿಕೊಂಡು ಹಾಸ್ಯ ವಿಡಂಬನೆ ಮಾತಿನಿಂದಲೇ ಜನಮನ ಗೆದ್ದರು. ಗೊರೂರು ಅನಂತರಾಜು,

“ಹಲವು ಸಿನಿಮಾಗಳ ಕಥಾಸಂಗಮ ಬಿಗ್ ಬಾಸ್ ಗಿಲ್ಲಿನಟ” ಗೊರೂರು ಅನಂತರಾಜು Read Post »

ಇತರೆ

“ಕಿಲಾಪತ್ ಸೇನಾನಿಗರು.1921” ಹಮೀದ್ ಹಸನ್ ಮಾಡೂರು ಅವರ ಕವಿತೆ

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ಕಿಲಾಪತ್ ಸೇನಾನಿಗರು.1921” ಸ್ವಾತಂತ್ರ್ಯದ….ವೀರಾಧಿ ವೀರರಿವರು,ಮಲೆಬಾರ ಮಣ್ಣಿನ ಧೀರರು,ಕಿಲಫತ್ ಕದನದ ಯೋಧರಿವರು,ಕೇರಳದ ಮಾಪಿಲ ಕಾಕರು,ಮಲಬಾರಿನ ಕೆಚ್ಚೆದೆಯ ಸೇನಾನಿಗರು,!    ಅಂದು ಆ ನಮ್ಮವರು,   ಹಿರಿಯರು ಕಿರಿಯರೆಲ್ಲರು,   ಎದೆಯೊಡ್ಡಿ ಹೋರಾಡಿದವರು,   ಜನ್ಮಭೂಮಿಗೆ ಸ್ವಾತಂತ್ರ್ಯ ತಂದವರು,   ಕಿಚ್ಚಿನ ಮಾಪಿನ ಕಾಕರು,   ಮಲಬಾರಿನ ಕೆಚ್ಚೆದೆಯ ಸೇನಾನಿಗರು,!   ಬಿಳಿಯರ ಬಿಲಗಳ…ಮುತ್ತಿಟ್ಟು ಘರ್ಜಿಸಿದವರು,ಸ್ವಾತಂತ್ರ್ಯಕ್ಕಾಗಿ ಬಲಿಯಾದವರು,ಬಂದೂಕಿಗೆ ಎದೆಕೊಟ್ಟ ದೇಶ ಭಕ್ತರುಭಾರತದ ಮಾಪಿಲ ಸುಪುತ್ರರು,ಮಲಬಾರಿನ ಕೆಚ್ಚೆದೆಯ ಸೇನಾನಿಗರು,!    ಸ್ವಾತಂತ್ರ್ಯದ ಕಿಚ್ಚಲಿ…   ಸೆಣದಾಡಿ ಗೆದ್ದ ಕಿಲಾಪತರು,   ಸ್ವಾತಂತ್ರ್ಯ ಭಾರತದ ಕನಸಿಗರು,   1921ರ ಧೀರಾ ಕಿಲಾಪತ್ ಸೇನಾನಿಗರು,   ಕೇರಳ ಮಣ್ಣಿನ ಮಾಣಿಕ್ಯರು   ಮಲಬಾರಿನ ಕೆಚ್ಚೆದೆಯ ಸೇನಾನಿಗರು,!   ಸ್ವಾತಂತ್ರ್ಯದ ಧ್ಯೇಯಕೆ…ಒಕ್ಕೊರಲ ಕೂಗಿಗೆ ಬ್ರಿಟಿಷರು,ಸೋಲ ಉಣಿಸಿ, ಬೆಚ್ಚಿಸಿ ಬಿಟ್ಟವರು,ಬ್ರಿಟೀಷರ ಕೋವಿಗೆ ಜೀವ ತೆತ್ತವರುಎದೆಯೊಡ್ಡಿದ ಬಲಿದಾನಿಗಳು,ಮಲಬಾರಿನ ಕೆಚ್ಚೆದೆಯ ಸೇನಾನಿಗರು.! ಹಮೀದ್ ಹಸನ್ ಮಾಡೂರು.

“ಕಿಲಾಪತ್ ಸೇನಾನಿಗರು.1921” ಹಮೀದ್ ಹಸನ್ ಮಾಡೂರು ಅವರ ಕವಿತೆ Read Post »

ಇತರೆ

‌”ಸ್ತ್ರೀ ಮತ್ತು ಬೇಂದ್ರೆ ಸಾಹಿತ್ಯ” ವಿಶೇಷ ಲೇಖನ, ಡಾ.ಯಲ್ಲಮ್ಮ ಕೆ

ಸಾಹಿತ್ಯ ಸಂಗಾತಿ ಡಾ.ಯಲ್ಲಮ್ಮ ಕೆ ‌”ಸ್ತ್ರೀ ಮತ್ತು ಬೇಂದ್ರೆ ಸಾಹಿತ್ಯ” ನಾನು ಮತ್ತೆ ಮತ್ತೆ ಏನನ್ನಾದರೂ ಬರೆಯಲೇಬೇಕು ಎಂದುಕೊಂಡಾಗಲೆಲ್ಲ.., ಬರಿಲಿಕ್ಕೇನಿದೆ? ಎಂಬ ಪ್ರಶ್ನೆ ಧುತ್ತೆಂದು ಕಣ್ಮುಂದೆ ಬಂದು ನಿಲ್ಲುತ್ತದೆ! ಈಗಾಗಲೇ ಸಾಕಷ್ಟು ಜನ ಬರೆದು-ಹೊಟ್ಟೆ ಹೊರೆದು ಹಾಕಿದ್ದು ಎದುರಿಗೆ ಗುಡ್ಡೆಬಿದ್ದಿರುವಾಗ ನಾನಿನ್ನೂ ಓದೋದು ಬಾಳಷ್ಟಿದೆ ಅನಿಸುವ ಹೊತ್ತಲೇ ನನ್ನ ಆತ್ಮೀಯರಲ್ಲೋರ್ವರು ಯಾವುದೋ ಸಮಯ-ಸಂದರ್ಭದ ನಿಮ್ಮಿತ್ತ ಲೇಖನವೊಂದನ್ನು ಬರೆದುನೀಡುವಂತೆಯೂ, ಹಾಗೆನೇ ವಿಷಯವಸ್ತುವೊಂದನ್ನು ಸೂಚಿಸಿದರು ಕೂಡ; ಉದಾ: ಬೇಂದ್ರೆ ಸಾಹಿತ್ಯದಲ್ಲಿ ಸ್ತ್ರೀ ಎಂದಿಟ್ಟುಕೊಳ್ಳೋಣ. ಇಲ್ಲಿ ಬೇಂದ್ರೆ ಎಂಬ ಹೆಸರನ್ನು ತೆಗೆದು ಕನ್ನಡದ ಖ್ಯಾತನಾಮ ಯಾವೊಬ್ಬ ಕವಿ-ಸಾಹಿತಿಯ ಹೆಸರು ಸೇರಿಸಿದರೂ ಸರಿಯೆ! ಪತ್ರಿಕಾ ವರದಿ, ದತ್ತಕಾರ‍್ಯ ರೂಪದ, ಅಕಾಡೆಮಿಕ್ ರೀತೀಯಲ್ಲಿ ಸಂಶೋಧನಾ ಲೇಖನಗಳನ್ನು ಯಾರೂ ಕೂಡ ಬರೆಯಬಹುದೆಂದು ಯೋಚಿಸುತ್ತಿರುವಾಗಲೇ.., ಒಂದು ಸಾಮಾನ್ಯ ಸರಳ ಸೂತ್ರವೆಂಬಂತೆ – ತಾಯಿ, ಪ್ರೇಯಸಿ, ಗೃಹಿಣಿ, ಮೃದು ಸ್ವಭಾವ, ಮಮತೆ ಮತ್ತು ವಾತ್ಸಲ್ಯದ ಪ್ರತಿರೂಪದ, ಗುಣವತಿ, ಸಹನಶೀಲೆ, ಕ್ಷಮಯಾ ಧರಿತ್ರಿ, ದೈವೀಶಕ್ತಿರೂಪಿಣಿ ಎಂಬ ಸ್ತ್ರೀರೂಪಗಳು ಎಲ್ಲ ಕಾಲ ಮತ್ತು ಕವಿ-ಸಾಹಿತ್ಯದಲ್ಲೂ ಕಂಡುಬರುವಂತಹ ಗಮನೀಯ ಅಂಶಗಳು ಎಂದೆನ್ನಬಹುದೇ? ಇಲ್ಲವೇ ಸ್ತ್ರೀ ವಾಸ್ತವ ಬದುಕಿನ ಅನಾವರಣ-ಚಿತ್ರಣವೆಂದೆನ್ನಬಹದೇ?ಚಾರ್ಲ್ಸ್ ಡಾರ್ವಿನ್‌ನ ಸಿದ್ಧಾಂತದನ್ವಯ ಆದಿಮಾನವನಿಂದ್ಹಿಡಿದು ಆಧುನಿಕ ಮತ್ತು ಆಧುನಿಕೋತ್ತರ ಮಾನವನ ಜೀವವಿಕಸನದ ಹಾದಿಯನ್ನೊಮ್ಮೆ ಸಿಂಹಾವಲೋಕನ ಕ್ರಮದಿ ಗ್ರಹಿಸಿದಾಗ ಮಾತು ಮತ್ತು ಬುದ್ಧಿಬಲದ ದೆಸೆಯಿಂದ ಪ್ರಾಣಿಪ್ರಪಂಚದಿಂದ ಭಿನ್ನವೆನಿಸಿಕೊಂಡು ಮುನ್ನಡೆಯ ಹಾದಿಯಲ್ಲಿ ಜೈವಿಕ ಆಧಾರದಿ ಗಂಡು-ಹೆಣ್ಣೆಂಬ ಭೇದ, ಬಲಿಷ್ಠರು-ಅಶಕ್ತರು ಎಂಬ ವರ್ಗ ಸಂಘರ್ಷದಿ ಮೇಲೂ-ಕೆಳಗೂ, ಕೆಳಗೂ-ಮೇಲಾಗಿ ಸಾಗುತ್ತಲೇ ಸಂಘಜೀವಿ ಮನುಷ್ಯ ಸುತ್ತಣ ತನ್ನದೇ ಆದ ಗುಂಪು ಅಥವಾ ಸಮುದಾಯ ಅದಕ್ಕೊಂದು ಆಚಾರ-ವಿಚಾರ, ರೀತಿ-ನೀತಿ-ನಿಯಮಗಳೆಂಬ [ವಿವಾಹ, ಕುಟುಂಬ, ಜಾತಿ, ಮತ, ಧರ್ಮ] ಸಾಮಾಜಿಕ ಚೌಕಟ್ಟನ್ನು ನಿರ್ಮಿಸಿಕೊಂಡ; ಈ ಚೌಕಟ್ಟಿನೊಳಗಡೆ ಸ್ತ್ರೀ ತನಗೊದಗಿದ ಪಾತ್ರಗಳನ್ನು ಅತ್ಯಂತ ಮನೋಜ್ಞವಾಗಿ ಅನುಭವಿಸುತ್ತ.., ಅಭಿನಯಿಸುತ್ತ ತನ್ನ ಬದುಕಿನ ಪಾಡನ್ನೇ ಹಾಡನ್ನಾಗಿಸಿ ಹಾಡುತ್ತ ಹೆಜ್ಜೆಯ ಹಿಂದೆ ಹೆಜ್ಜೆಯ ಗೆಜ್ಜೆನಾದವಗೈಯುತ ಸಾಗುತ್ತಲೇ ಗಂಡಿನ ಅವಜ್ಞೆಗೆ ಗುರಿಯಾದಳೆಂದು ಪ್ರತ್ಯೇಕವಾಗಿ ಹೇಳಬೇಕಿಲ್ಲ.ಈ ಅವಜ್ಞೆಯ ದೆಸೆಯಿಂದಾಗಿಯೇ ಸ್ತ್ರೀ ಮನುಕುಲ-ವಂಶೋದ್ಧಾರದ ತಂತ್ರವಾಗಿಯೂ, ಮಕ್ಕಳನ್ನು ಹೆರುವ ಯಂತ್ರವಾಗಿಯೂ, ಬೋಗ-ಲಾಲಸೆಯ ವಸ್ತುವಾಗಿಯೂ, ಬಿಕರಿಯ ಸರಕಾಗಿಯೂ; ಬಾಲ್ಯ, ಯವ್ವೌನ ಮತ್ತು ಮುಪ್ಪನ್ನು ಕ್ರಮವಾಗಿ ತಂದೆ-ಗಂಡ ಮತ್ತು ಮಕ್ಕಳ ಸಂರಕ್ಷಣೆಯಲ್ಲಿಯೇ ಬಾಳಿ ಬದುಕಬೇಕಾದ ದುಸ್ಥಿತಿಯನ್ನು ತಲುಪಿದ ಸಂದರ್ಭ – ವಚನ ಮತ್ತು ದಾಸ ಸಾಹಿತ್ಯದ ಜ್ಞಾನಪ್ರಕಾಶದಿ ಅಂದಕಾರವ ಕಳೆದು ಬೆಳಕಿನ ಯುಗಾದಿಯೆಡೆಗೆ ಪಯಣಿಸಿ.., ನವ್ಯ, ನವೋದಯ, ಪ್ರಗತಿಶೀಲ, ದಲಿತ ಮತ್ತು ಬಂಡಾಯ, ತರುವಾಯ ಅಸ್ಮಿತೆಯ ಕುರುಹಾಗಿ ಬೆಳೆದುಬಂದ ಸ್ತ್ರೀವಾದಿ ಸಾಹಿತ್ಯ ಇತ್ಯಾದಿ ಪ್ರಕಾರಗಳು ಬೆಳೆದುಬಂದದ್ದು ಕಣ್ಮುಂದಿನ ಇತಿಹಾಸ.ಕನ್ನಡ ಭಾಷೆ ಮತ್ತು ಸಾಹಿತ್ಯದ ಸಂದರ್ಭದಿ ಸ್ತ್ರೀ-ಹೆಣ್ಣನ್ನು ನೋಡುವುದಾದರೆ.., ಮುಖ್ಯವಾಗಿ ಹೆಣ್ಣನ್ನು ಪುರುಷ ಅಥವಾ ಪುರುಷ ಪ್ರಧಾನ ಸಮಾಜ ಕಂಡಿರುವ ದೃಷ್ಟಿ, ಹೆಣ್ಗಳ್ಳಿನ ಪುರುಷ ಹೆಣ್ಣನ್ನು ಕಂಡಿರುವ ದೃಷ್ಟಿ, ಹೆಣ್ಣನ್ನು ಹೆಣ್ಣು ಕಂಡಿರುವ ದೃಷ್ಟಿ ಎಂದು ಈ ಮೂರು ಆಯಾಮಗಳಲ್ಲಿ ಅವಲೋಕಿಸುವುದು ಉತ್ತಮ ಮಾರ್ಗವಾದೀತು ಎಂದು ನನಗನಿಸುತ್ತೆ. ನಾವು ಹೀಗೆ ಆಲೋಚಿಸುವಾಗ ಜನ್ಮದತ್ತವಾಗಿ ವರವಾಗಿಯೋ ಶಾಪವಾಗಿಯೋ ನಮಗಂಟಿಕೊಂಡು ಬಂದಿರುವ ಪೂರ್ವಾಗ್ರಹಗಳು ಯಾವುದೇ ಒಂದು ವಸ್ತು-ವಿಷಯ-ಸಂಗತಿಯ ಕುರಿತಾಗಿ ಕೇಳುವಾಗ, ಮಾತನಾಡುವಾಗ, ಓದುವಾಗ, ಬರೆಯುವಾಗ; ಚರ್ಚಿಸಲು, ತರ್ಕಿಸಲು, ವಿಶ್ಲೇಷಿಸಲು ತೊಡಗಿದಾಗ ಶೂನ್ಯದಿಂದ ಏನನ್ನೂ ಸೃಷ್ಟಿಸಲಾಗದು ಎಂಬ ಮಾತಿಗೆ ಮಣೆಹಾಕುತ್ತ.., ಹಲ-ಕೆಲವು ಪೂರ್ವಾಗ್ರಹಗಳನ್ನು ಹೊತ್ತುಕೊಂಡೇ ಮುನ್ನಡೆಯುತ್ತೇವೆ; ನೀವು ಏನೇ ಮಾತಾಡಿದರೂ ಆ ಮಾತಿನ ಲಯ ಮತ್ತು ದಾಟಿ, ಏನೇ ಬರೆದರೂ ಆಬರಹದ ಓಘ ಅಥವಾ ಶೈಲಿಯಿಂದಲೇ ಎಡ-ಬಲ-ಮಧ್ಯಂತರಗಳೆಂಬ ಕವಲಿಗೆ ಸಿಕ್ಕಿಹಾಕಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ. ಈ ಒಂದು ಖಯಾಲಿಯಿಂದ ಹೊರಬಂದರೇ ಮಾತ್ರ ಈ ಮೂರು ಆಯಾಮಗಳಲ್ಲಿ ಸ್ತಿçÃಯನ್ನು ಸಮಗ್ರವಾಗಿ ಗ್ರಹಿಸಬಹುದು ಎಂಬುದು ನನ್ನ ಮನದಿಂಗಿತವಾಗಿದೆ. ಹೆಣ್ಣನ್ನು ಪುರುಷ ಅಥವಾ ಪುರುಷ ಪ್ರಧಾನ ಸಮಾಜ ಕಂಡಿರುವ ದೃಷ್ಟಿ:ಅನುಕೂಲ ಮತ್ತು ಅನನಕೂಲ, ಸಮ್ಮತಿ-ಅಸಮ್ಮತಿಯ ಹಿನ್ನಲೆಯಲ್ಲಿ ಹೆಣ್ಣು ಒಲಿದರೆ ನಾರಿ ಮುನಿದರೆ ಮಾರಿ, ಹೆಣ್ಣಿಗೆ ಹಣ್ಣೇ ಶತ್ರು, ಎರಡು ಜಡೆಯನ್ನು ಕೂಡಿಸಲಾಗದು, ಹೆಣ್ಮಕ್ಕಳ ಬುದ್ಧಿ ಮೊಣಕಾಲ ಕೆಳಗೆ ಎಂದು ಜರೆಯುವ, ಹೆಣ್ಣು ಗಂಡಿನ ಬಾಳಿಗೆ ಕಣ್ಣಾಗುವ ಅದೇ ಹೆಣ್ಣು ಹುಣ್ಣಾಗುವ ಇಬ್ಬದಿತನದ ಧೋರಣೆಯ ಪೂರ್ವಾಗ್ರಹಗಳಿಂದ, ಕಣ್ಣಿಗೆ ಮಣ್ಣೆರೆಚುವ ಮಾತುಗಳ ಪ್ರೇರೇಪಣೆಯಿಂದ ನೋಡಿದಾಗ; ತಾಯಿಯಾದವಳು ಮಗ-ಸೊಸೆಯನ್ನು, ಮಗಳು-ಅಳಿಯನನ್ನು ಕಾಣುವ ಬಗೆ, ಅತ್ತೆ ಒಡೆದ ಕಂಚಿಗೆ ಬೆಲೆಯಿಲ್ಲ ಎಂಬ ಮನೋಧೋರಣೆ, ಅದೇ ಸೊಸೆ – ಅತ್ತೆ-ಮಾವ-ನಾದಿನಿ-ಮೈದುನನ್ನು ಕಾಣುವ ಬಗೆಗೂ ಅದೇ ತನ್ನ ಅಣ್ಣ-ತಮ್ಮ, ಅಕ್ಕ-ತಂಗಿಯರನ್ನು ಕಾಣುವ ಬಗೆಗೂ ತುಂಬ ವ್ಯತ್ಯಾಸವನ್ನು ಕಾಣಬಹುದು. ಅಂಗೀಯ ಮ್ಯಾಲಂಗಿ ಚಂದೇನೋ ನನ ರಾಯ ಎಂಬ ಗರತಿಯು ಸವತಿಯನ್ನು ಕಾಣುವ ಬಗೆ, ಗಂಡನಾದವನು ಮತ್ತೊಬ್ಬಾಕೆಯ ಸಂಗಡದಲ್ಲಿರುವುದನ್ನು ತಿಳಿದು ಆಕೆಯನ್ನು ಕಾಣುವ ಬಗೆ, ತಾಯಿ ಸತ್ತಮ್ಯಾಲೆ ತಂದೆ ಚಿಗಪ್ಪ ಅಂತ! ಮಲತಾಯಿ ಆ ತಬ್ಬಲಿ ಮಕ್ಕಳನ್ನು ಹಾಗೂ ತನ್ನ ಹೊಟ್ಟೆಯ ಮಕ್ಕಳನ್ನು ಕಾಣುವ ಬಗೆಯನ್ನು ಕತೆ, ಕವಿತೆ, ಕಾದಂಬರಿಗಳಲ್ಲಿ ಅಷ್ಟೇ ಅಲ್ಲದೇ ಕಿರುತೆರೆ ಮತ್ತು ಹಿರಿತೆರೆಗಳಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದು ಈ ಮೇಲಿನ ಆಯಾಮದಲ್ಲಿ ನೋಡಬಹುದಾಗಿದೆ.ಹೆಣ್ಣನ್ನು ತಾಯ್ಗಳ್ಳಿನ ಅಥವಾ ಹೆಣ್ಗಳ್ಳಿನ ಪುರುಷ ಕಂಡಿರುವ ದೃಷ್ಟಿ:ಹೆಣ್ಣು ಅಂದಂದಿನ ಕಾಲಘಟ್ಟದಿ ಕೌಟುಂಬಿಕ ಮತ್ತು ಸಾಮಾಜಿಕ ಜನ-ಜೀವನದಲ್ಲಿ ಅನುಭವಿಸಿದ ಯಮ-ಯಾತನೆಗಳನ್ನು ತುಂಬ ಹತ್ತಿರದಿಂದ ಕಂಡುಂಡ ತಾಯ್ಗಳ್ಳಿನ ಅಥವಾ ಹೆಣ್ಗಳ್ಳಿನ ಹೃದಯ ಆದ್ರವಾಗಿ ಮಿಡಿದ ಭಾವನೆಗಳ ಒಟ್ಟಂದದಿ ಚಿತ್ರಿತವಾದ ಸ್ತ್ರೀ–ತಾಯಿ, ಪ್ರೇಯಸಿ, ಸದ್ಗೃಹಿಣಿಯಾಗಿ ಕಂಡಿರುವಂತದ್ದು. ಒಟ್ಟಾರೆಯಾಗಿ ಬೇಂದ್ರೆ ಸಾಹಿತ್ಯವನ್ನು ಅವಲೋಕಿಸಿದಾಗ ಈ ಮೇಲಿನ ಆಯಾಮದಲ್ಲಿ ಮೂಡಿಬಂದಿರುವಂತದ್ದು ಎಂಬುದರಲ್ಲಿ ಎರಡು ಮಾತಿಲ್ಲ.ಸೌಂಧರ‍್ಯವೆಂಬುದುಕಣ್ಣಿನ ತುತ್ತಲ್ಲಕಣ್ಣಿಗೂ ಕಣ್ಣಾಗಿಒಳಗಿಹುದುರೂಪ-ಲಾವಣ್ಯಕೆಅಳೆಯಲುಬಾರದುಅವುಗಳೇಇದರೊಂದು ಕಣವಿಹವು.ಸೌಂಧರ‍್ಯ ಎಂದರೆ ಅದು ಬರೀ ಕಣ್ಣು ಸೆರೆಹಿಡಿಯುವ ಹೊರದೃಶ್ಯವಲ್ಲ, ಕಣ್ಣು ನೋಡುವುದಕ್ಕಿಂತ ಗಾಡವಾಗಿ, ಮನಸ್ಸು, ಹೃದಯದಿಂದ ಮಾತ್ರವೇ ಗ್ರಹಿಸಬಹುದಾದ ಒಳಗಿನ ಗುಣವೇ ನಿಜವಾದ ಸೌಂಧರ‍್ಯ. ಅದನ್ನು ನಾವು ತೂಕ, ಬಣ್ಣ, ಮುಖದ ರೀತಿ ಇತ್ಯಾದಿಗಳಿಂದ ಅಳೆಯಲು ಸಾಧ್ಯವಿಲ್ಲ, ನಾವು ಕಾಣುವ ರೂಪ-ಲಾವಣ್ಯವು ಆ ನಿಜವಾದ ಸೌಂಧರ‍್ಯದ ಒಂದು ಚಿನ್ನದ ಕಣ, ಸಣ್ಣ ಭಾಗ ಮಾತ್ರವೇ ಆಗಿದೆ. ನಿಜವಾದ ಸೌಂಧರ‍್ಯ ಕಣ್ಣಿಗೂ ಮೀರಿದ, ಹೃದಯದಿ ಅನುಭವವಾಗುವ, ಒಳಗಿನ ಮೌನ-ಮೌಲ್ಯಗಳಲ್ಲಿ ಅಡಗಿದೆ. ಮನುಷ್ಯನ ಸೌಂಧರ‍್ಯ ಬಾಹ್ಯ ರೂಪದಲ್ಲಿಲ್ಲ; ಹೃದಯ, ಗುಣ, ಸ್ವಭಾವ, ಆಂತರ‍್ಯದ ಪ್ರಕಾಶ – ಇವುಗಳೇ ನಿಜವಾದ ಸೌಂರ‍್ಯ ಎಂಬರ್ಥದಿ ಬೇಂದ್ರೆಯವರು ಸ್ತ್ರೀಯನ್ನು ಚಿತ್ರಿಸಿದ್ದಾರೆ. ಮಾತಿನಲ್ಲಿರುವಂಥಮೌನದ ಧ್ವನಿಯಿಂದವಿವ್ಹಲತೆಬೆಳೆಯುವುದಿಬ್ಬರಲಿಇಬ್ಬರ ಮನವಾಗಇಬ್ಬಗೆಯಾಗುವುದುಒಬ್ಬರಿಗೂ ಸುಖವಿಲ್ಲಬದುಕಿನಲಿ.ಮಧುರವಾದ ಸಂಬಂಧದಲ್ಲಿ ಹೇಳದಿರುವ ಮೌನ, ಒಡೆದ ಮಾತುಗಳು, ವ್ಯಕ್ತಗೊಳ್ಲದ ನೋವು-ನಲಿವು, ಇವು ಎರಡು ಹೃದಯ[ಮನಸ್ಸು]ಗಳನ್ನು ದೂರ ಮಾಡುತ್ತವೆ. ಮಾತುಕ[ವಿ]ತೆ, ನೇರ ಸಂಭಾಷಣೆಯಿರದ ಸಂಬಂಧದಲ್ಲಿ ಇಬ್ಬರೂ ಸುಖವನ್ನು ಕಾಣಲಾಗದು, ಗಂಡ-ಹೆಂಡಿರ ಗಂಧಾ ತೀಡಿದ್ಹಂಗ ಇರಬೇಕಾ, ಗಂಡ-ಹೆಂಡತಿ ಜಗಳ ಉಂಡು ಮಲಗುವ ತನಕ ಎಂಬ ಜನಪದರ ಗಾದೆಮಾತು ಸುಳ್ಳಾಗೇ.., ಅದು ವಿಚ್ಛೇದನದಿ ರ‍್ಯಾವಸಾನಗೊಳ್ಳುತ್ತದೆ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ.ಪಾದ ಪದ್ಧತಿಯಲ್ಲಿಪದ ಕೂಡಿ ಬರುವಾಗಯಾರಾರೆ ಗುರು-ಲಘು ಎಣಿಸುವರೆ?ಯಾ ರಾಗವೆಂದರುಯಾ ರಾಗ ಕೇಳುವರುಅನುರಾಗವನುರಣಿಸಿತಣಿಸುತಿರೆ!.ಪದಗಳ ನಿಯಮ, ಛಂದಸ್ಸು, ಗುರು-ಲಘು, ರಾಗ-ತಾಳ ಇವೆಲ್ಲವೂ ಕೇವಲ ತಾಂತ್ರಿಕ ಇತಿ-ಮಿತಿಗಳು, ಆದರೆ ಸಂಕಷ್ಟದ ಬದುಕಿನ ಪಾಡೇ ಹಾಡಾಗಿ ಹೃದಯದಿ ಹುಟ್ಟುವ ಪದವು [ಅನುರಾಗ, ಭಾವ, ಪ್ರೀತಿ, ನಿಸ್ಸಳ ಸ್ಪಂದನೆ] ಪಾದ ಪದ್ದತಿಯಲ್ಲಿ ಅಂದರೆ ಕಾಲ್ನಡಿಗೆಯ ರೂಪದಿ ಎಡ-ಬಲವೆಂದೆಣಿಸದೆ ಜತೆಗೂಡಿ ಮುನ್ನಡೆಯುತ್ತಿರಾಗ.., ಗುರು-ಲಘು ಎಣಿಸುವರೆ? ಇಲ್ಲಿ ನಿಯಮಗಳಿಗಿಂತ ಭಾವ ತೀವ್ರತೆಯೇ ಕವಿತೆಯ ಜೀವವಾಗಿ, ರಾಗಕೆ ಶ್ರವಣ, ಮನಸ್ಸಿಗೆ ತಣಿ[ಮುದ]ವನ್ನು ನೀಡುತ್ತದೆ ಎಂಬರ್ಥದಿ ಗಂಡು-ಹೆಣ್ಣಿನ ಅನುರಾಗ-ದಾಂಪತ್ಯ ಜೀವನಕ್ಕೆ ಮುನ್ನಡಿ ಬರೆಯುತ್ತ..,ನಾನು ಬಡವಿ ಆತ ಬಡವಒಲವೆ ನಮ್ಮ ಬದುಕುಬಳಸಿಕೊಂಡೆವದನೆ ನಾವುಅದಕು ಇದಕು ಎದಕು.ಆತ ಕೊಟ್ಟ ವಸ್ತು ಒಡವೆನನಗೆ ಅವಗೆ ಗೊತ್ತುತೋಳುಗಳಿಗೆ ತೋಳ ಬಂದಿಕೆನ್ನೆ ತುಂಬ ಮುತ್ತು.ಕುಂದು ಕೊರತೆ ತೋರಲಿಲ್ಲಬೇಕು ಹೆಚ್ಚಿಗೇನು?ಹೊಟ್ಟೆಗಿತ್ತ ಜೀವ ಫಲವತುಟಿಗೆ ಹಾಲು ಜೇನು.ಎಂದು ಒಲವೆ ನಮ್ಮ ಬದುಕು ಎಂಬೀ ಕವಿತೆಯ ಮೂಲಕ ಸಮರಸವೇ ಜೀವನವೆಂಬ ಸಾಮರಸ್ಯದ ಬದುಕಿಗೆ ಕನ್ನಡಿ ಹಿಡಿಯುತ್ತಾರೆ.ಪುಟ್ಟ ವಿಧವೆ:ಬಾಲ್ಯವಿವಾಹ, ಸತಿ ಪದ್ಧತಿ ನಿಷೇಧ, ಮಹಿಳಾ ಶಿಕ್ಷಣ, ವಿಧವಾ ಪುನರ್ವಿವಾಹ, ಮಹಿಳಾ ಹಕ್ಕುಗಳ ಪರ ಹೋರಾಟ, ಮಹಿಳಾ ಸ್ವಾತಂತ್ರ್ಯ, ಸ್ವಾವಲಂಬನೆ, ಸ್ವಾಭಿಮಾನಕ್ಕೆ ಒತ್ತಾಯ, ಗ್ರಾಮಗಳಲ್ಲಿ ಮಹಿಳಾ ಆರೋಗ್ಯ ಮತ್ತು ಅರಿವು ಎಂಬಿತ್ಯಾದಿ ವಿಚಾರಗಳ ದಿಸೆಯಲ್ಲಿನ ಸಮಾಜ ಸುಧಾರಣೆಯ ಮೊದಲ ಪ್ರಮುಖ ಧ್ವನಿಯೆಂದರೆ – ರಾಜಾ ರಾಮ್‌ಮೋಹನ್ ರಾಯ್, ತದನಂತರದಿ ಈಶ್ವರಚಂದ್ರ ವಿದ್ಯಾಸಾಗರ, ಮಹಾತ್ಮ ಗಾಂಧಿ, ಜ್ಯೋತಿರಾವ್ ಫುಲೆ ಮತ್ತು ಸಾವಿತ್ರಿ ಬಾಯಿ ಫುಲೆ, ಅನ್ನಿಬೆಸೆಂಟ್, ದ್ವಾರಕನಾಥ್ ಗಂಗೂಲಿ, ಕಸ್ತೂರಬಾ ಗಾಂಧಿ, ಕರ್ನಾಟಕದಲ್ಲಿ ಟಿ.ನರಸಿಂಹಾಚಾರ‍್ಯ, ಡಿ.ವಿ.ಗುಂಡಪ್ಪ ಈ ಎಲ್ಲ ಮಹನೀಯರ ಹೋರಾಟದ ಫಲವೆಂಬಂತೆ; ಹರಬಿಲಾಸ್ ಸರ್ಡಾ ಅವರು ಮಂಡಿಸಿದ – ೧೯೨೯ ರ ಸರ್ಡಾ ಕಾಯ್ದೆ / ಅhiಟಜ ಒಚಿಡಿಡಿiಚಿge ಖesಣಡಿಚಿiಟಿಣ ಂಛಿಣ  – ಇದು ಭಾರತೀಯ ಬಾಲ್ಯವಿವಾಹ ನಿಯಂತ್ರಣದ ಮೊದಲ ಕಾನೂನು ಜಾರಿಯಾಯಿತು.ಈ ಹಿನ್ನಲೆಯಲ್ಲಿ ಹೆಣ್ಣಿನ ವೈದವ್ಯದ ಬಾಳಿನ-ಗೋಳಿನ ಕತೆಯನ್ನು ನೋಡಲಾಗದೆ ಇದನ್ನು ಕಾನೂನಾತ್ಮಕವಾಗಿ ಸಂಪೂರ್ಣವಾಗಿ ತೊಡೆದುಹಾಕಲು ಶ್ರಮಿಸಿದವರು ಪ್ರಾತಃ ಸ್ಮರಣೀಯರು. ಇಂತದ್ದೇ ಒಂದು ನೈಜ ಘಟನೆ ಬೇಂದ್ರೆಯವರ ಮನಕಲಕಿದ್ದರ ಪರಿಣಾಮ – ಪುಟ್ಟವಿಧವೆ ಕವಿತೆಯಲ್ಲಿ ಚಿತ್ರಿಸಿದ್ದಾರೆ;ಆಕೆಯಿದ್ದಳು ಕೂಸು; ಈತನಿನ್ನೂ ಹುಡುಗಅವರ ತಾಯ್ತಂದೆಗಳ ಹಿಗ್ಗು ಎಷ್ಟು!ಧರ್ಮದಾ ಹೆಸರಿನಲಿ ಅವರ ಕೈಕೂಡಿಸಲುಇವರಿಗೆನಿಸಿತು ಹರ್ಷ ಹಬ್ಬದಷ್ಟು.ಹತ್ತು ದಿವಸಕೆ ಹಾಳು ಮುತ್ತೈದೆತನ ಹೋಗಿವೈದವ್ಯ ಸಂಪತ್ತು ಪಡೆದಳಾಕೆ;ಮನೆಯವರು ವೈದಿಕರು, ಊರು ಧರ್ಮದ ತವುರು;ಶಾಸ್ತ್ರವಿರೆ ಬೇರೆಯ ವಿಚಾರವೇಕೆ?ಕುರುಡು ಧರ್ಮಕ್ಕೆ ಸ್ಮಾರಕವು ನಿಂತಂತಾಕೆಮೈಮರೆತು ನಿಂತಾಗ ಗೂಗೆ ಹಾಡಿತ್ತು,ಮುದ್ರೆಯೊತ್ತುವ ಕಣ್ಣು ಮೋರೆ ನೋಡಿತೊಮ್ಮೆಊರ ಕೃಷ್ಣನ ಕಥೆಗೆ ಕೋಡು ಮೂಡಿತ್ತು.ಈ ಒಂದು ಕವಿತೆ: ತಂದೆ-ತಾಯಂದಿರ ಜವಾಬ್ದಾರಿ, ಕನ್ಯಾದಾನ, ಕೌಟುಂಬಿಕ ರಕ್ಷಣೆ, ಅನಿಶ್ಚಿತತೆಯ ಬಾಳು, ಅಕಾಲಿಕ ಮರಣ, ವೈದವ್ಯ ಪ್ರಾಪ್ತಿ, ಸಾಮಾಜಿಕ ಪಿಡುಗಾಗಿ ಪರಿಣಮಿಸಿದ್ದು, ನಮ್ಮ ಅಜ್ಞಾನಕ್ಕೆ ಹೆಣ್ಣಿನ ಬಾಳು ಆಹುತಿಯಾದುದರ ಕುರುಹಾಗಿ ಪುಟ್ಟ ವಿಧವೆ ನಮ್ಮ ಕಣ್ಮುಂದೆ ನಿಲ್ಲುತ್ತಾಳೆ, ಕಂಬನಿ ಮಿಡಿಯುವಂತೆ ಮಾಡುತ್ತಾಳೆ,ಹುಬ್ಬಳ್ಳಿಯಾಂವಾ:ಬೇಂದ್ರೆಯವರ ಪ್ರತಿಕಾ ಓದಿನ ಅಭಿರುಚಿ ಎಷ್ಟಿತ್ತೆಂದರೆ.., ಅದೊಂದು ಗೀಳಾಗಿ ಅಂಟಿಕೊಂಡಿತ್ತೆಂದು ಹೇಳಬಹುದೆನೋ, ಹುಬ್ಳಿಯಿಂದ ವಾರಕ್ಕೆ ಮೂರು ದಿನ ಅಚ್ಚಾಗಿ ಹೊರಡುತ್ತಿದ್ದ ಪತ್ರಿಕೆ ಅನಿವರ‍್ಯ ಕಾರಣಗಳಿಂದ ಅಚ್ಚಿನ ಮನೆಯಲ್ಲಿ ಬೆಚ್ಚಗೆ ಕುಳಿತದ್ದರಿಂದ; ಪತ್ರಿಕೆ ಬಾರದೇ ಇದ್ದಾಗ, ಓದದೇ ಇದ್ದಾಗ ಆಗುನ ಮನಸ್ಸಿನ ಚಡಪಡಿಕೆ; ಇಲ್ಲಿ ಸಾಗಂತ್ಯ ತೊರೆದು ಹೋದ ಇನಿಯನ ನೆನವರಿಕೆ, ಕನವರಿಕೆ ಭಾವ ತೀವ್ತೆಯಿಂದ ಹೊರಹೊಮ್ಮಿದ ಕವಿತೆ ಈ ಹುಬ್ಬಳ್ಳಿಯಾಂವಾ ಎಂದು ಹೇಳಬಹುದು.ಮಾತು ಮಾತಿಗೆ ನಕ್ಕನಗಿಸಿ ಆಡಿಸ್ಯಾಡಾಂವಾಏನೋ ಅಂದರ ಏನೋ ಕಟ್ಟಿ ಹಾಡ ಹಾಡಾಂವಾ.ಇರು ಅಂದರ ಬರತೇನಂತ ಎದ್ದು ಹೊರಡಾಂವಾಮಾರೀ ತೆಳಗ ಹಾಕಿತೆಂದರ ಇದ್ದು ಬಿಡಾಂವಾ ಚಹಾದ ಜೋಡಿ ಚೂಢಾಧಾಂಗ ನೀ ನನಗಂದಾಂವಾಚೌಡಿಯಲ್ಲ ನೀ ಚೂಡಾಮಣಿಯಂತ ರಮಿಸ ಬಂದಾಂವಾಕಣ್ಣಿನಾಗಿನ ಗೊಂಬೀಹಾಂಗ ಎದ್ಯಾಗ ನಟ್ಟಾಂವಾಇನ್ನೂ ಯಾಕ ಬರಲಿಲ್ಲವ್ವಾ ಹುಬ್ಬಳ್ಳಿಯಾಂವಾ?ಇಲ್ಲಿ ಗಂಡಿನ ಅನುರಾಗದಿ ಮಿಂದೆದ್ದ ಹೆಣ್ಣಿನ ಮನದಾಳದ ಇರಿಸು-ಮುರಿಸು, ಮುನಿಸು, ಸರಸ-ಸಲ್ಲಾಪ-ಸಂಭಾಷಣೆಯ ನೆನಹು, ಇನಿಯನ ಬರವಿನ ನಿರೀಕ್ಷೆ, ಕಾತರ, ಕಾವಳ ಭಾವದಿ ಬರುವ ಹಾದಿಯ ಎದುರು ನೋಡುತ್ತಾ ನಿಂತ ಪ್ರೇಯಸಿಯ ಮನದಾಳದಿ ಬಚ್ಚಿಟ್ಟ ಭಾವನೆಗಳನ್ನು ನಮ್ಮೆದುರಿಗೆ ಬೇಂದ್ರೆಯವರು ಬಿಚ್ಚಿಟ್ಟಿದ್ದಾರೆ.ಹುಣ್ಣಿವಿ ಚಂದಿರನ ಹೆಣ:ಮಗ ಸತ್ತ ಸುದ್ದಿ ತಿಳಿದು ದಿಗ್ಭ್ರಮೆಗೊಂಡು, ಕಂಬನಿಗರೆಯದೆ ಕಲ್ಲಾಗಿ ಮೂಲೆಹಿಡಿದು ಕೂತ ಹೆಂಡತಿಯ ಮುಖಭಾವವನ್ನು – ನೀ ಹೀಂಗ ನೋಡಬ್ಯಾಡ ನನ್ನ ನಿನ್ನ ನೇರ ದಿಟ್ಟಿಯನ್ನು ಎದುರಿಸುವ ಶಕ್ತಿ ನನಗಿಲ್ಲ, ಎಂದು ಪರಿಪರಿಯಾಗಿ ಸಂತೈಯಿಸುತ್ತ – ನಕ್ಯಾಕ ಮರಸತೀ ದುಃಖ? ಎದೆ ಬಡಿಸಿ ಕೆಡವು ಬಿರಿಗಣ್ಣು ಬ್ಯಾಡ

‌”ಸ್ತ್ರೀ ಮತ್ತು ಬೇಂದ್ರೆ ಸಾಹಿತ್ಯ” ವಿಶೇಷ ಲೇಖನ, ಡಾ.ಯಲ್ಲಮ್ಮ ಕೆ Read Post »

ಕಾವ್ಯಯಾನ

ʻಆತ್ಮಾಭಿಮಾನʼ ಡಾ ತಾರಾ ಬಿ ಎನ್.

ಕಾವ್ಯ ಸಂಗಾತಿ ಡಾ ತಾರಾ ಬಿ ಎನ್. ʻಆತ್ಮಾಭಿಮಾನʼ ನನ್ನೊಳಗಿನ ನಾದವದು,ನನ್ನ ನಿಲುವಿನ ನೆರಳದು,ಬಾಗದ ತಲೆಗೂ ಮುರಿಯದ ಮನಕೂಹೆಸರು ಕೊಟ್ಟ ಶಕ್ತಿಯದು ಆತ್ಮಾಭಿಮಾನ. ಬಿರುಗಾಳಿಯ ನಡುವೆ ನಿಂತುಬೇರು ಬಿಟ್ಟ ಮರದಂತೆ,ಎಷ್ಟು ಹೊಡೆತ ತಿಂದರೂನೆಲ ಬಿಟ್ಟು ಸರಿಯದ ನಂಬಿಕೆಯಂತೆ.ಅದು ಗರ್ವವಲ್ಲ, ಅಹಂಕಾರವೂ ಅಲ್ಲ.ಇತರರನ್ನು ಕುಗ್ಗಿಸುವ ದುರಹಂಕಾರವಲ್ಲ, ತನ್ನ ಮೌಲ್ಯವನ್ನು ಅರಿತುತಾನೇ ತಾನಾಗಿರುವ ಧೈರ್ಯವದು.ಕಟ್ಟಿದ ಕನಸುಗಳು ನುಚ್ಚುನೂರಾದಾಗಲೂಕಣ್ಣೀರ ಮಧ್ಯೆ ನಗು ಉಳಿಸಿದಂತೆ,“ನಾನು ಸೋಲಿಲ್ಲ” ಎನ್ನುವನಿಶ್ಶಬ್ದ ಘೋಷಣೆಯೇ ಆತ್ಮಾಭಿಮಾನ. ಸತ್ಯದ ದಾರಿಯಲ್ಲಿ ನಡೆಯುವಾಗಒಂಟಿತನ ಬಂದರೂ ಭಯವಿಲ್ಲ,ನನ್ನ ನಡೆ ನನ್ನದೆ ಎನ್ನುವಸ್ಥೈರ್ಯ ತುಂಬುವ ದೀಪವದು. ಬಡತನದ ಬಟ್ಟೆ ಧರಿಸಿದರೂಮನಸ್ಸು ರಾಜಸವಾಗಿರಬಹುದು,ಅಭಿಮಾನವಿಲ್ಲದೆ ಶ್ರೀಮಂತಿಕೆಖಾಲಿ ಮಂಟಪವಾಗಿರಬಹುದು.ತಲೆಯೆತ್ತಿ ನಡೆಯಲು ಕಲಿಸುವುದು, ನ್ಯಾಯದ ಪರ ನಿಲ್ಲಲು ಪ್ರೇರೇಪಿಸುವುದು,ಯಾರ ಹಂಗೂ ಇಲ್ಲದಬೇರೆ ಯಾರ ಅನುಮತಿಯಿಲ್ಲದೆನನ್ನ ಮೌಲ್ಯವನ್ನು ಘೋಷಿಸುವುದು.ಆತ್ಮಾಭಿಮಾನ ನನ್ನ ಶಿರಸ್ಸಿನ ಕಿರೀಟವದು,ನನ್ನ ಜೀವನದ ದೀಪವದು,ಬಿದ್ದಾಗಲೂ ಏಳುವಂತೆ ಮಾಡುವನನ್ನೊಳಗಿನ ಶಾಶ್ವತ ಶಕ್ತಿ.ಅನುಪಮ ಅವ್ಯಕ್ತ   ಶಕ್ತಿಯಮೌಲ್ಯಾದರ್ಶದ ಜ್ಞಾನಶಿಸ್ತುನನ್ನೊಳಗಿನ ಶಾಶ್ವತ ಶಕ್ತಿ. ಡಾ ತಾರಾ ಬಿ ಎನ್.

ʻಆತ್ಮಾಭಿಮಾನʼ ಡಾ ತಾರಾ ಬಿ ಎನ್. Read Post »

ಕಾವ್ಯಯಾನ

ಹನಿಬಿಂದು ಅವರ ಕವಿತೆ “ಪೋಷಕ ವಾತ್ಸಲ್ಯ”

ಕಾವ್ಯ ಸಂಗಾತಿ ಹನಿಬಿಂದು ಪೋಷಕ ವಾತ್ಸಲ್ಯ ಕೌಸಲ್ಯೆ ಮಾತ್ರವಲ್ಲ ಪ್ರತಿ ತಾಯ ವಾತ್ಸಲ್ಯಪುತ್ರ ಪುತ್ರಿ ಮನೆ ಹಿರಿಯರಿಗೆಭವಿಷ್ಯತ್ತಿನ ಯೋಚನೆ, ಯೋಜನೆ ವೈಶಾಲ್ಯಉಸ್ತುವಾರಿ ಜೊತೆ ಹಣ ಸಕಲರಿಗೆ.. ರಕ್ಷಣೆಯ ಹೊಣೆ ಹೊತ್ತ ಮಾತಾಪಿತರ ನೀತಿಭಕ್ಷಣೆಗೆ ತಂದಿತ್ತರೂ ಒಣ ಭೀತಿಅಗತ್ಯಕ್ಕೆ ತಕ್ಕಂತೆ ಬೇಕಾದುದೆಲ್ಲ ಒದಗಿಸುವ ಸ್ಪೂರ್ತಿದುಡಿತವೆಲ್ಲ ಮಕ್ಕಳಿಗೆ, ಕುಟುಂಬ ಪ್ರೀತಿ ನಿರ್ಲಕ್ಷ್ಯವಿಲ್ಲ ಇಲ್ಲಿ ಪೋಷಣೆ ಗಮನ ಆರೈಕೆಸೂಕ್ತ ವ್ಯವಸ್ಥೆ ನಿತ್ಯ ಒದಗಿಸುವರುಕಲ್ಪಿಸುತ ಸೌಲಭ್ಯಗಳ ಖರ್ಚು ವೆಚ್ಚ ಭರಿಸಿಹಿಂದಿನ ಮುಂದಿನ ನಾಳೆಗಳ ಯೋಜಿಸುವರು ಸವಾಲುಗಳು ಅದೆಷ್ಟೋ ಮನುಷ್ಯ ಬದುಕ ನೋವುಗಳೋಆದರೂ ನಿರ್ಮಿಸುತ ಕನಸ ಮಹಲುಗಳಸಂಪನ್ಮೂಲಗಳ ಕೊರತೆ ಇರಬಹುದು ಅಲ್ಲೆಲ್ಲೋಕುಟುಂಬದ ಸಹಭಾಗಿತ್ಯ ಪ್ರೀತಿ ಬಯಸುವ ಜೀವಗಳು ಹನಿಬಿಂದು

ಹನಿಬಿಂದು ಅವರ ಕವಿತೆ “ಪೋಷಕ ವಾತ್ಸಲ್ಯ” Read Post »

ಅಂಕಣ ಸಂಗಾತಿ

ಗಾದೆ ಮಾತು-ʻಆನಿಗೆ ಆನಿ ಹೋಗತೈತಿ, ಬಾಲಕ್ಕೆ ಯಾಕೆ ಸ್ಯಾಣೇತನ?ʼ‌ ಶರಣಪ್ಪ ತಳ್ಳಿ ಕುಪ್ಪಿಗುಡ್ಡ

ಗಾದೆ ಸಂಗಾತಿ ಗಾದೆ ವಿಶ್ಲೇಷಣೆ ಶರಣಪ್ಪ ತಳ್ಳಿ ಕುಪ್ಪಿಗುಡ್ಡ ʻಆನಿಗೆ ಆನಿ ಹೋಗತೈತಿ, ಬಾಲಕ್ಕೆ ಯಾಕೆ ಸ್ಯಾಣೇತನ?ʼ‌ ​ಕನ್ನಡ ಜನಪದ ಸಾಹಿತ್ಯವು ಜೀವನದ ದೊಡ್ಡ ಸತ್ಯಗಳನ್ನು ಅತ್ಯಂತ ಸರಳ ರೂಪದಲ್ಲಿ ನಮಗೆ ಉಣಬಡಿಸುತ್ತದೆ. ಇಂತಹ ಮುತ್ತಿನಂತಹ ಗಾದೆಗಳಲ್ಲಿ “ಆನಿಗೆ ಆನಿ ಹೋಗತೈತಿ, ಬಾಲಕ್ಕೆ ಯಾಕೆ ಸ್ಯಾಣೇತನ” ಎಂಬುದು ಪ್ರಮುಖವಾದ ಮಾತು.ನಮ್ಮೆಲ್ಲರಿಗೂ ನಮ್ಮದೇ ಆದ ಒಂದು ಸ್ವಂತಿಕೆಯ ವ್ಯಕ್ತಿತ್ವವಿದೆ.ನಮ್ಮತನ ಎಂಬುದು ನಮ್ಮೊಳಗೆ ಅಡಗಿದ್ದರೂ ಸಹ ಅದನ್ನು ಸದ್ವಿನಿಯೋಗ ಮಾಡಿಕೊಳ್ಳಲಾಗದೆ,ನಾವು ನಾವೇ ಸಣ್ಣದಿರುವ ವಿಷಯವನ್ನು ಬಹು ಗಂಭೀರವಾಗಿ ತೆಗೆದುಕೊಂಡು ಎಲ್ಲೋ ಕಳೆದು ಹೋದೆವು ಎಂದು ಗೋಳಾಡಿಬಿಡುತ್ತೇವೆ.ನಮ್ಮಂತೆ ಪ್ರಾಣಿಗಳು ಬದುಕುತ್ತವೆಯೆ?ಅದಕ್ಕೆ ಎರಡು ಮಾತಿಲ್ಲ.,ಹಠವಿಲ್ಲ,ಭರದಲ್ಲಿ ಬದುಕಬೇಕೆಂಬುದಿಲ್ಲ,ಉಲ್ಟಾ ಪಲ್ಟಾ ಮಾಡಬೇಕೆಂಬುದಿಲ್ಲ,ಎಲ್ಲಾ ಪ್ರಾಣಿಗಳಿಗಿಂತ ಭಿನ್ನವಾಗಿ ಬಾಳಬೇಕೆಂಬುದಿಲ್ಲ.ಅದರ ಇಚ್ಛಾಶಕ್ತಿ ಏನೆಂದರೆ ಹೊಟ್ಟೆ ತುಂಬಿಸಿಕೊಳ್ಳುವುದು ಮಾತ್ರವಾಗಿದೆ.ಹೊಟ್ಟೆ ತುಂಬಿದರೆ ಸಾಕು ಮಲಗುವುದೆ ಅದರ ಕೆಲಸ.ಆದರೆ ಈ ಮನುಷ್ಯರಾದ ನಾವುಗಳು ಪರಿವರ್ತನೆಯನ್ನು ಮರೆತು, ಎಂಥ ಕೆಲಸ ಮಾಡಿಬಿಟ್ಟರು?,ಅದೇಕೆ ಹಾಗೆ ಅವರು ಮಾಡಬೇಕಿತ್ತು?, ಮನೆತನವೆ ಹಾಳು ಮಾಡಲು ಅನ್ಯಾಯ ಮಾಡಿದರು?;ಹೀಗೆಲ್ಲಾ ಬೈದಾಡಿ,ರೇಗಾಡಿಬಿಡುತ್ತೇವೆ.ಅವರ ತಪ್ಪಲ್ಲ.ಮೇಲ್ನೋಟಕ್ಕೆ ಕೆಲವು ನಿರ್ಧಾರಗಳು ನಮಗೆ ಹಾಗೆ ಕಾಣುವುದು ಸತ್ಯ.ಆದರೆ ನಿಜವಾದ ಸಂಗತಿ ಹಾಗಿರುವುದಿಲ್ಲ.ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ಕೆಲವೊಮ್ಮೆ ಕೆಲ ಕಹಿ ನಿರ್ಧಾರಗಳನ್ನು ತೆಗೆದುಕೊಂಡು ಬಿಡುತ್ತೇವೆ.ಈ ಗಾದೆಯ ಮಾತಿನಂತೆ,ಇಲ್ಲಿ ‘ಆನಿ’ ಎಂದರೆ ಆನೆ ಅಥವಾ ದೊಡ್ಡ ವಸ್ತು.ಬಹುದೊಡ್ಡದಾದ ಮೊತ್ತ ಎಂದರ್ಥ. ಈ ಗಾದೆಯು ಮನುಷ್ಯನ ಜಿಪುಣತನ, ಆದ್ಯತೆಗಳ ತಪ್ಪು ನಿರ್ಧಾರ ಮತ್ತು ವಿವೇಕಹೀನತೆಯನ್ನು ಮಾರ್ಮಿಕವಾಗಿ ಟೀಕಿಸುತ್ತದೆ. ​ಒಬ್ಬ ವ್ಯಕ್ತಿ ಸಾವಿರಾರು ರೂಪಾಯಿ ಬೆಲೆಬಾಳುವ ಆನೆಯನ್ನೇ ಕಳೆದುಕೊಂಡಾಗ ಅಥವಾ ತನ್ನ ಮನಸಾರೆ ದಾನ ಮಾಡುತನಕ ಸುಮ್ಮನಿದ್ದು, ಕೇವಲ ಒಂದು ಪುಕ್ಕಟೆ ಸಿಗುವ ಅದರ ಕೊರಳಿಗೆ ಕಟ್ಟಿದ ಗಂಟೆಗೆ ಕ್ಯಾತೆ ತೆಗೆಯುತ್ತಾನೆ ಎಂದರೆ ಆತನು ಧರ್ಮದಿಂದ ದಾನ ಮಾಡಿಲ್ಲ. ಅಥವಾ ಅತ್ಯಂತ ಕಡಿಮೆ ಬೆಲೆಯ ಆನೆಯ ‘ಬಾಲ’ದ ವಿಷಯಕ್ಕೆ ಬಂದಾಗ ಜಾಣತನ (ಸ್ಯಾಣೇತನ) ಪ್ರದರ್ಶಿಸುವುದು ಅಥವಾ ಲೆಕ್ಕಾಚಾರ ಮಾಡುವುದು ಎಷ್ಟು ಮೂರ್ಖತನ ಎಂಬುದು ಇದರ ನೇರ ಅರ್ಥ. ಅಂದರೆ, ದೊಡ್ಡ ನಷ್ಟ ಅಥವಾ ದೊಡ್ಡ ನಿರ್ಧಾರಗಳ ಮುಂದೆ ಕ್ಷುಲ್ಲಕ ವಿಷಯಗಳ ಬಗ್ಗೆ ತಲೆಕೆಡಿಸಿಕೊಳ್ಳುವುದು ವ್ಯರ್ಥ.​ ಹಣಕಾಸು ಮತ್ತು ವ್ಯವಹಾರದ ವಿಷಯ ಬಂದಾಗನಾವು ಜೀವನದಲ್ಲಿ ಲಕ್ಷಾಂತರ ರೂಪಾಯಿಗಳನ್ನು ಐಷಾರಾಮಿ ವಸ್ತುಗಳಿಗೆ ಅಥವಾ ಅನಗತ್ಯ ಖರ್ಚುಗಳಿಗೆ ಲಕ್ಕವಿಲ್ಲದಂತೆ ಸುರಿಯುತ್ತೇವೆ. ಆದರೆ ಹಲವು ಬಡ ವ್ಯಾಪಾರಿಗಳು ಮನೆ ಮುಂದೆ ತರಕಾರಿ ಮಾರುವವರ ಜೊತೆ, ಹಣ್ಣು ಹಂಪಲು ಮಾರುವವರ ಬಳಿ ತಕರಾರು,ಆಟಿಕೆ ಸಾಮಾನು ಮಾರುವವರ ಜೊತೆ ಒಂದು,ಎರಡು ರೂಪಾಯಿಗಳಿಗೆ ಚೌಕಾಸಿ ಮಾಡುತ್ತೇವೆ. ಆನೆಯಂತಹ ದೊಡ್ಡ ಖರ್ಚನ್ನು ಒಪ್ಪಿಕೊಂಡ ಮೇಲೆ, ಬಾಲದಂತಹ ಸಣ್ಣ ಮೊತ್ತಕ್ಕೆ ಜಾಣತನ ತೋರಿಸುವುದು ನಮ್ಮ ವ್ಯಕ್ತಿತ್ವದ ಸಣ್ಣತನವನ್ನು ತೋರಿಸುತ್ತದೆ. ದೊಡ್ಡ ಗುರಿಯನ್ನು ಹೊಂದಿದವರು ಸಣ್ಣಪುಟ್ಟ ನಷ್ಟಗಳಿಗೆ ಕುಗ್ಗಬಾರದು.ಸಂಬಂಧ ಮತ್ತು ಜೀವನದ ಮೌಲ್ಯಗಳಲ್ಲೂ ನಮ್ಮ ಮನಸ್ಸು ಹಾಗೆನೆ.ಒಂದು ಸುಂದರವಾದ ಸಂಬಂಧವನ್ನು ಉಳಿಸಿಕೊಳ್ಳಲು ನಾವು ಎಷ್ಟೋ ತ್ಯಾಗಗಳನ್ನು ಮಾಡಿರುತ್ತೇವೆ (ಇದು ಆನೆಯನ್ನು ಕೊಟ್ಟಂತೆ). ಆದರೆ, ಯಾವುದೋ ಒಂದು ಸಣ್ಣ ತಪ್ಪು ಅಥವಾ ಒಂದು ಮಾತಿನ ವಿಷಯಕ್ಕೆ ಜಗಳವಾಡಿ ಆ ಸಂಬಂಧವನ್ನೇ ಮುರಿದುಕೊಳ್ಳುತ್ತೇವೆ (ಇದು ಬಾಲಕ್ಕೆ ಜಾಣತನ ತೋರಿಸಿದಂತೆ). ಇಡೀ ಆನೆಯೇ ಹೋದ ಮೇಲೆ ಬಾಲದ ಬಗ್ಗೆ ಹಠ ಹಿಡಿಯುವುದು ಸಂಬಂಧಗಳಲ್ಲಿ ಬಿರುಕು ತರುತ್ತದೆ ಎಂಬುದ ಅರಿವಿಗೆ ಬರಬೇಕು.​ಸಮಯ ಮತ್ತು ಶ್ರಮದ ಪ್ರತಿಫಲದಲ್ಲೂ ಅಷ್ಟೆ.ಯಾರೋ..ಬಡವರು ಬೆಳಿಗ್ಗೆಯಿಂದ ಸಂಜೆಯವರೆಗೆ  ಹೊಟ್ಟೆಪಾಡಿಗಾಗಿ ಕೆಲಸ ಮಾಡಿರುತ್ತಾರೆ.ಅಂತವರಿಗೆ ತಕ್ಕ ಪ್ರತಿಫಲ ನೀಡುವುದಿಲ್ಲ.ಆದರೆ ಯಾರೋ ಇನ್ನೊಬ್ಬ ಗರ್ಧಿಗಮ್ಮತ್ತಿನಿಂದ, ಜಾಣತನದಿಂದ ಮಾತಾಡಿ ಅರ್ಧಗಂಟೆಯ ಕೆಲಸ ಮಾಡಿದರೆ ಹೆಚ್ಚು ಹಣ ನೀಡಿ ಬಿಡುತ್ತಾರೆ. ಜಿಪುಣತನ ಇರಬಾರದು ಅಂತಲ್ಲ.ಇರಬೇಕು ನಿಜ.ಎಷ್ಟಿರಬಾರದೆಂದರೆ  ದೀನತೆಯನ್ನು ಮರೆತು ಹೋಗುವಷ್ಟಿರಬಾರದು.ಒಂದು ದೊಡ್ಡ ಕೆಲಸವನ್ನು ಮಾಡುವಾಗ ಅಥವಾ ಸಾಧನೆಯ ಹಾದಿಯಲ್ಲಿರುವಾಗ ನಮಗೆ ದೊಡ್ಡ ಸವಾಲುಗಳು ಎದುರಾಗುವುದು ಸರ್ವೆ ಸಾಮಾನ್ಯ.ಆ ಸವಾಲುಗಳನ್ನು ಎದುರಿಸಿ ಗೆದ್ದ ನಂತರ, ತೀರಾ ಸಣ್ಣ ವಿಷಯಗಳಲ್ಲಿ ಸೋಲು ಒಪ್ಪಿಕೊಳ್ಳುವುದು ಅಥವಾ ಅಲ್ಲಿ ಜಿಪುಣತನ ತೋರುವುದು ಸರಿಯಲ್ಲ. ಮನೆ ಕಟ್ಟಲು ಲಕ್ಷಾಂತರ ಹಣ ಖರ್ಚು ಮಾಡಿ,ಗೃಹ ಪ್ರವೇಶದ ದಿನ ಉಂಡ ಎಲೆಗಳ ತೆಗೆದು,ಅಂಗಳದಲ್ಲಿ ಚೆಲ್ಲಿದ ಅನ್ನವನ್ನು ಬಳಿದು ಹಾಕುವವರ ಜೊತೆ ಅಷ್ಟೇ ತಗೊ…ಇಷ್ಟೆ ತಗೋ..ಎನ್ನಬಾರದು. ಕೇವಲ ಕೆಲವು ರೂಪಾಯಿಗಳ ಉಳಿತಾಯಕ್ಕಾಗಿ ಅವರನ್ನು ಬೈದಾಡುವುದು ಸಭ್ಯತೆಯಾಗಲಾರದು.ಶುಭವಾಗಲಿ ಎನ್ನದೆ ಹಾಳಾಗಿ ಹೋಗು ಎಂದು ಬೈದು ಹೋಗುತ್ತಾರಷ್ಟೆ.​ಇವತ್ತಿನ ದಿನ ನಾವು ದೃಶ್ಯ ಮಾಧ್ಯಮಗಳಲ್ಲಿ,ಸಾಮಾಜಿಕ ಜಾಲತಾಣದಲ್ಲಿ,ಕಣ್ಣೆದುರಿನ ​ಸಮಾಜದಲ್ಲಿ ನಿತ್ಯವೂ ನೋಡುತ್ತೇವೆ, ದೊಡ್ಡ ದೊಡ್ಡ ಹಗರಣಗಳು ರಾಜಕೀಯದಲ್ಲಿ ನಡೆದಾಗ ಮೌನವಾಗಿರುವ ವ್ಯವಸ್ಥೆ, ಒಬ್ಬ ಸಣ್ಣ ನೌಕರ ಸಾಮಾನ್ಯ ಮನುಷ್ಯ ಸಣ್ಣ ತಪ್ಪು ಮಾಡಿದಾಗ ಕಾನೂನಿನ ಎಲ್ಲಾ ಪಟ್ಟುಗಳನ್ನು ಬಳಸಿ ಆತನನ್ನು ಶಿಕ್ಷಿಸಲು ಇವತ್ತು ಮೋಬೈಲ್ ನಲ್ಲಿ ದೃಶ್ಯವನ್ನು ಸೆರೆಹಿಡಿದು ಅಧಿಕಾರಿಗಳಿಗೆ ತೋರಿಸಿ  ಆತನಿಗೆ ಶೀಕ್ಷೆ  ಕೊಡಿಸಲು  ಮುಂದಾಗುತ್ತಾರೆ.ಆದರೆ ಅಧಿಕಾರಿ ದೊಡ್ಡ ಹಡಗವನ್ನೆ ನುಂಗಿದ್ದು ಗೊತ್ತಾಗುವುದಿಲ್ಲ.ಇದು ಇವತ್ತಿನ ನಮ್ಮ ವ್ಯವಸ್ಥೆ. “ಆನೆ ಹೋದರೂ ಪರವಾಗಿಲ್ಲ, ಬಾಲ ಮಾತ್ರ ಸಿಗಬೇಕು” ಎನ್ನುವ ವಿಪರ್ಯಾಸದಂತಿದೆ. ನಮ್ಮ ಜಾಣತನವು ದೊಡ್ಡ ಬದಲಾವಣೆಗಳಿಗೆ ಬಳಕೆಯಾಗಬೇಕೇ ಹೊರತು, ಸಣ್ಣತನದ ಪ್ರದರ್ಶನಕ್ಕಲ್ಲ.​​”ಸಣ್ಣ ವಿಷಯಗಳ ಬಗ್ಗೆ ಅತಿಯಾಗಿ ಯೋಚಿಸುವವರು ದೊಡ್ಡ ವಿಷಯಗಳಲ್ಲಿ ಸೋಲುತ್ತಾರೆ.” ಆನೆಯನ್ನು ನಿರ್ವಹಿಸುವ ಶಕ್ತಿ ಇರುವವನಿಗೆ ಬಾಲದ ಬಗ್ಗೆ ಚಿಂತೆ ಇರಬಾರದು. ನಮ್ಮ ಬದುಕು ಉದಾತ್ತವಾಗಿರಬೇಕು. ದೊಡ್ಡ ಗುರಿಯನ್ನು ತಲುಪುವ ಹಾದಿಯಲ್ಲಿ ಸಣ್ಣಪುಟ್ಟ ಅಡೆತಡೆಗಳು ಅಥವಾ ನಷ್ಟಗಳು ಸಹಜ. ಅವುಗಳನ್ನು ನಿರ್ಲಕ್ಷಿಸಿ ಮುಂದೆ ಸಾಗುವುದೇ ನಿಜವಾದ ‘ಸ್ಯಾಣೇತನ’ (ಜಾಣತನ).​ಕೇವಲ ಲಾಭ-ನಷ್ಟದ ಲೆಕ್ಕಾಚಾರದಲ್ಲಿ ಬಾಲಕ್ಕೆ ಗಂಟು ಬೀಳುವ ಬದಲು, ಆನೆಯಂತಹ ವಿಶಾಲ ಮನೋಭಾವವನ್ನು ಬೆಳೆಸಿಕೊಳ್ಳುವುದು ಇಂದಿನ ಅಗತ್ಯವಾಗಿದೆ. ಶರಣಪ್ಪ ತಳ್ಳಿ ಕುಪ್ಪಿಗುಡ್ಡ

ಗಾದೆ ಮಾತು-ʻಆನಿಗೆ ಆನಿ ಹೋಗತೈತಿ, ಬಾಲಕ್ಕೆ ಯಾಕೆ ಸ್ಯಾಣೇತನ?ʼ‌ ಶರಣಪ್ಪ ತಳ್ಳಿ ಕುಪ್ಪಿಗುಡ್ಡ Read Post »

ಕಾವ್ಯಯಾನ

ಪ್ರೊ .ರಾಜೇಶ್ವರಿ ಶೀಲವಂತ ಪುಣೆ ಅವರ ʻಅಡುಗೆʼ

ಕಾವ್ಯ ಸಂಗಾತಿ ಪ್ರೊ .ರಾಜೇಶ್ವರಿ ಶೀಲವಂತ ಪುಣೆ ʻಅಡುಗೆʼ ಏನೇ ಏನಿವತ್ತು ಊಟಕ್ಕೆ  ಊಟಕ್ಕೇನಮ್ಮಎಲ್ಲರ ಮನೆಯ  ಸಹಜ ಪ್ರಶ್ನೆಅದಕ್ಕವಳದು ಹರ ಸಾಹಸನಿನ್ನೆಯದು ಇಂದಾಗೋಲ್ಲಪ್ರತಿದಿನವೂ ಹೊಸದಿರಬೇಕಲ್ಲಉಪ್ಪು ಖಾರ ಹದವಾಗಿರಲುಅವಳ ಪರಿವೆಯಿಲ್ಲಅದು  ತಪ್ಪಿದರೆ ಅವಳಿಗೇನೆ  ಎಲ್ಲಆ ಸಿಟ್ಟಿನಲ್ಲಿ  ಮಾಡೋಲ್ಲಅವಳು ರೊಟ್ಟಿಬಡೀತಾಳೆ ಸಿಟ್ಟಿನಲ್ಲಿ ತಟ್ಟಿ ತಟ್ಟಿಸೇರಿಸೋಲ್ಲ ಪಲ್ಯಕ್ಕೆ ಉಪ್ಪು ಖಾರಸುರೀತಾಳೆ ಭರ ಭರ ಕೋಪದಬ್ಬರ  ಎಲ್ಲರೂ ಹೋಟಲ ಮೊರೆರುಚಿಯಿರದ  ತಿಂಡಿಗೆ  ಟಿಪ್ಸ ಬೇರೆ  ನೀ ಮಾಡಿದ  ಚಹಾ ನಿನ್ನಷ್ಟೇ ಸಿಹಿಚಪಾತಿ ನಿನ್ನತರಹ ಮೃದುನಿನ್ನ ಕೈ ರುಚಿ ಜೇನಿನಂತೆಅಂತ   ನೀವೂಮ್ಮೆ ಪಿಸುಗುಟ್ಟಿದರದೆ ಅವಳಿಗೆ ಹೆಮ್ಮೆ  ಹೊಸ ಹುಮ್ಮಸ್ಸಿನೊಂದಿಗೆ ಪ್ರವೇಶಿಸುವಳವಳುಅಡುಗೆ ಮನೆಯ ಮತ್ತೊಮ್ಮೆಹೊತ್ತು ನೋಡಿ  ಈ ಎಲ್ಲವನುಒಂದು ದಿನವಾದರೂಮರುದಿನವೇ ತೇನಾಲಿ ರಾಮಕೃಷ್ಣನ ಬೆಕ್ಕಿನಂತೆ  ನೀವು ಪರಾರಿ                ನಿಟ್ಟುಸಿರಿನೊಂದಿಗೆಕೊನೆಗಂದೆಅಬ್ಬಾ!!  ನೀನೆ ಸರಿಸಾಟಿ ಇದಕೆಲ್ಲ. ಪ್ರೊ .ರಾಜೇಶ್ವರಿ ಶೀಲವಂತ ಪುಣೆ

ಪ್ರೊ .ರಾಜೇಶ್ವರಿ ಶೀಲವಂತ ಪುಣೆ ಅವರ ʻಅಡುಗೆʼ Read Post »

You cannot copy content of this page

Scroll to Top