ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ನಿಮ್ಮೊಂದಿಗೆ

“ಇಂದಿರಾ ಲಂಕೇಶ್ ನಿಧನ”

ವ್ಯಕ್ತಿ ಸಂಗಾತಿ ಇಂದಿರಾ ಲಂಕೇಶ್ ನಿಧನ “ಹುಳಿ ಮಾವು ಮತ್ತು ನಾನು” ಕೃತಿಯ  ಲೇಖಕಿ ಮತ್ತು ಸಾಹಿತಿ ,ಪತ್ರಕರ್ತ  ಪಿ. ಲಂಕೇಶ್ ಅವರ ಧರ್ಮಪತ್ನಿ ಶ್ರೀಮತಿ ಇಂದಿರಾ ಲಂಕೇಶ್ (84) ಅವರು ಇಂದು  ನಿಧನರಾಗಿದ್ದಾರೆ.  ‘ಲಂಕೇಶ್ ಪತ್ರಿಕೆ’ಯ ಯಶಸ್ಸಿನ ಹಿಂದಿನ ಶಕ್ತಿಯಾಗಿದ್ದ ಅವರು, ‘ಹುಳಿಮಾವು ಮತ್ತು ನಾನು’ ಕೃತಿಯ ಮೂಲಕವೂ ಗುರುತಿಸಿಕೊಂಡಿದ್ದರು. ಕನ್ನಡ ಸಾರಸ್ವತ ಲೋಕದ ಮಹತ್ವದ ಲೇಖಕ ,  ಹಿರಿಯ ಪತ್ರಕರ್ತ ಹಾಗೂ ಖ್ಯಾತ ಬರಹಗಾರ ಪಿ. ಲಂಕೇಶ್ ಅವರ ಧರ್ಮಪತ್ನಿ, ಲೇಖಕಿ ಶ್ರೀಮತಿ ಇಂದಿರಾ ಲಂಕೇಶ್ (84) ಅವರು ಸೋಮವಾರ (ಜೂನ್ 15, 2026) ಮುಂಜಾನೆ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ.  ಬೆಂಗಳೂರಿನ ರಾಜಾಜಿನಗರದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದು, ಇವರ ನಿಧನದಿಂದ ಕನ್ನಡ ಸಾಹಿತ್ಯ ಮತ್ತು ಪತ್ರಿಕೋದ್ಯಮದ ಒಂದು ಮಹತ್ವದ ಪರಂಪರೆಯ ಕೊಂಡಿ ಕಳಚಿದಂತಾಗಿದೆ.  ಗೌರಿ ಲಂಕೇಶ್ ( ಪತ್ರಕರ್ತೆ, ಸಾಮಾಜಿಕ ಹೋರಾಟಗಾರ್ತಿ) ,ಕವಿತಾ ಲಂಕೇಶ್ (ಚಿತ್ರನಿರ್ದೇಶಕಿ), ಇಂದ್ರಜಿತ್ ಲಂಕೇಶ್ (ಚಿತ್ರನಿರ್ದೇಶಕ ಹಾಗೂ ಪತ್ರಕರ್ತ) ಸೇರಿದಂತೆ ಅಪಾರ ಬಂಧು-ಮಿತ್ರರು ಹಾಗೂ ಅಭಿಮಾನಿ ಬಳಗವನ್ನು ಅಗಲಿದ್ದಾರೆ. ತಾಯಿ ಇಂದಿರಾ ಲಂಕೇಶ್ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ, ಸಾಹಿತ್ಯ ಹಾಗೂ ಚಲನಚಿತ್ರ ರಂಗದ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಲಂಕೇಶ್ ಪತ್ರಿಕೆಯ ಯಶಸ್ಸಿನ ಹಿಂದಿನ ಮಹಾಶಕ್ತಿಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ‘ಲಂಕೇಶ್ ಪತ್ರಿಕೆ’ಯ ಆರಂಭದ ದಿನಗಳಿಂದಲೂ ಇಂದಿರಾ ಲಂಕೇಶ್ ಅವರು ಪತಿ ಪಿ. ಲಂಕೇಶ್ ಅವರಿಗೆ ಬೆನ್ನೆಲುಬಾಗಿ ನಿಂತಿದ್ದರು. ಕೇವಲ ವೈವಾಹಿಕ ಜೀವನದಲ್ಲಷ್ಟೇ ಅಲ್ಲದೆ, ಪತ್ರಿಕೆಯ ಆಡಳಿತ, ಮುನ್ನಡೆ ಹಾಗೂ ಪ್ರಕಾಶನದ ಜವಾಬ್ದಾರಿಯನ್ನು ತೆರೆಮರೆಯಲ್ಲಿ ಯಶಸ್ವಿಯಾಗಿ ನಿರ್ವಹಿಸಿದ ಹೆಗ್ಗಳಿಕೆ ಇವರದ್ದಾಗಿದೆ. 2000 ಇಸವಿಯಲ್ಲಿ ಪಿ. ಲಂಕೇಶ್ ಅವರ ನಿಧನದ ನಂತರ ಮತ್ತು ತದನಂತರದ ದಿನಗಳಲ್ಲಿ ಹಿರಿಯ ಪುತ್ರಿ, ದಿ. ಗೌರಿ ಲಂಕೇಶ್ ಅವರ ಅಗಲಿಕೆಯ ನಂತರವೂ ಧೃತಿಗೆಡದ ಇಂದಿರಾ ಅವರು, ಕುಟುಂಬ ನಿರ್ವಹಣೆ ಜೊತೆಗೆ,  ಸಾಹಿತ್ಯ  ಮತ್ತು ಪತ್ರಿಕೋದ್ಯಮದ ಪರಂಪರೆಯನ್ನು ಮುನ್ನಡೆಸಿದ್ದರು. ನಾಗರಾಜ್‌ ಹರಪನಹಳ್ಳಿ

“ಇಂದಿರಾ ಲಂಕೇಶ್ ನಿಧನ” Read Post »

ಇತರೆ, ಜೀವನ

“ಸಂಬಂಧಗಳ ಬಿರುಕು – ನಮ್ಮಿಂದಲೇ ಸರಿಪಡಿಸೋಣ” ವನಜ ಮಹಾಲಿಂಗಯ್ಯ ಮಾದಾಪುರ

ಸಂಬಂಧಗಳ ಸಂಗಾತಿ ವನಜ ಮಹಾಲಿಂಗಯ್ಯ “ಸಂಬಂಧಗಳ ಬಿರುಕು – ನಮ್ಮಿಂದಲೇ ಸರಿಪಡಿಸೋಣ” *ಬೆಳಗಾಗೆದ್ದು Good Morning ಕಳಿಸೋ ನೂರು ಜನ ಇದಾರೆ. ಆದ್ರೆ ರಾತ್ರಿ ನಿದ್ದೆ ಬರದೇ ಒದ್ದಾಡಿದಾಗ ಮಾತಾಡೋ ಒಬ್ಬನೂ ಇಲ್ಲ.* ಇದೇ ಇವತ್ತಿನ ಸಂಬಂಧಗಳ ಸ್ಥಿತಿ.ಯಾಕೆ ಹೀಗಾಯ್ತು? ಮುಂದೆ ಓದುತ್ತಾ ಹೋಗಿ.ಮೊಬೈಲ್ ಮೊದಲಾಯ್ತು, ಮನುಷ್ಯ ಎರಡನೆಯವನಾದ*ಒಂದೇ ಮನೆಯಲ್ಲಿ ನಾಲ್ಕು ಜನ ಇದ್ರೂ ನಾಲ್ಕು ಮೂಲೆಯಲ್ಲಿ ಕುಳಿತು ನಾಲ್ಕು ಮೊಬೈಲ್ ನೋಡ್ತಾರೆ. ಅಪ್ಪನಿಗೆ ಮಗ ಏನ್ ಓದ್ತಿದ್ದಾನೆ ಗೊತ್ತಿಲ್ಲ. ಮಗನಿಗೆ ಅಮ್ಮನ ಆರೋಗ್ಯದ ಚಿಂತೆ ಇಲ್ಲ. ಊಟದ ಟೇಬಲ್‌ನಲ್ಲಿ ಮಾತಿಗಿಂತ ರೀಲ್ಸ್ ಮುಖ್ಯವಾಯ್ತು. “ಸಂಪರ್ಕ ಇದೆ, ಸಂಬಂಧ ಇಲ್ಲ.”. ಸಲುಗೆ ಸ್ವಾತಂತ್ರ್ಯವಾಯ್ತು ಹೇಗೆ ಅಂದರೆ,“ನನ್ನ ಲೈಫ್, ನನ್ನ ರೂಲ್ಸ್” ಅಂತ ಮಕ್ಕಳು ಅಂದ್ರೆ, “ನಮ್ಮ ಕಾಲದಲ್ಲಿ ಹೀಗಿರಲಿಲ್ಲ” ಅಂತ ಹೆತ್ತವರು ಅಂದ್ರೆ. ಇಬ್ಬರ ಮಧ್ಯೆ ಗೋಡೆ ಬೆಳೆಯುತ್ತೆ. 8-9 ತಿಂಗಳು ಹೊತ್ತು ಹೆತ್ತ ತಾಯಿಯ ಮಾತಿಗಿಂತ 3 ದಿನದ ಹಿಂದೆ Insta ದಲ್ಲಿ ಪರಿಚಯವಾದವನ ಮೆಸೇಜಿಗೆ ಬೆಲೆ ಜಾಸ್ತಿ ಆಯ್ತು. “ಹೆತ್ತವರ ಪ್ರೀತಿ ಹಳೇದಾಯ್ತು, ಅಪರಿಚಿತರ ಮಾತು ಹೊಸದಾಯ್ತು.” ಈಗ ಎಲ್ಲವೂ Instant. ನೂಡಲ್ಸ್ 2 ನಿಮಿಷ, ಪ್ರೀತಿ 2 ದಿನ. ಸಣ್ಣ ಜಗಳಕ್ಕೆ Block, ಸಣ್ಣ ತಪ್ಪಿಗೆ Disconnect. ಸಂಬಂಧ ಕಟ್ಟೋಕೆ ವರ್ಷ ಬೇಕು, ಮುರಿಯೋಕೆ ಒಂದು Status ಸಾಕು. “ಕ್ಷಮಿಸೋ ಮನಸ್ಸು ಸತ್ತು, ಅಹಂ ಬೆಳೆದು ನಿಂತಿದೆ.”“ಹೋಲಿಕೆ ರೋಗ ಇದ್ದಂತೆ”“ಅವನ ಮಗ BMW ತಂದ, ನನ್ನವನು ಯಾಕೆ ತರಲಿಲ್ಲ?” ಅಂತ ಅಪ್ಪ. “ಅವಳ ಗಂಡ ವಿದೇಶಕ್ಕೆ ಕರ್ಕೊಂಡು ಹೋದ, ನೀನು ಯಾಕೆ ಹೋಗಲಿಲ್ಲ?” ಅಂತ ಹೆಂಡತಿ. ಪಕ್ಕದ ಮನೆ ಹುಲ್ಲು ಯಾವಾಗಲೂ ಹಸಿರು. “ನಮ್ಮ ಬಳಿ ಇರೋದರ ಬೆಲೆ ಮರೆತು, ಇಲ್ಲದ್ದಕ್ಕೆ ಹಂಬಲಿಸೋಕೆ ಶುರು ಮಾಡಿದ್ವಿ.”ದುರಂತ ಏನು ಗೊತ್ತಾ?ಮನೆ ತುಂಬಾ ಜನ ಇದ್ದರೂ ಒಂಟಿತನ. ಅಪ್ಪ ಅಮ್ಮ ದುಡಿದು ದುಡಿದು ಮಕ್ಕಳಿಗೆ ಎಲ್ಲಾ ಕೊಟ್ಟರೂ, ಕೊನೆಗೆ ವೃದ್ಧಾಶ್ರಮ. ಮಕ್ಕಳು ಪ್ರೀತಿಗಾಗಿ ಪರದಾಡಿ, ಕೊನೆಗೆ ಮೋಸ ಹೋಗಿ ಜೀವ ಕಳೆದುಕೊಳ್ಳೋದು. *ಗೋಡೆ ಕಟ್ಟೋಕೆ ಗೊತ್ತಿದ್ದ ನಮಗೆ, ಸೇತುವೆ ಕಟ್ಟೋಕೆ ಮರೆತು ಹೋಯ್ತು. ದಿನಾ 15 ನಿಮಿಷ ಮೊಬೈಲ್ ದೂರ ಇಟ್ಟು ಮನೆಯವರ ಜೊತೆ ಕೂತು ಮಾತಾಡಿ. ಊಟ ಒಟ್ಟಿಗೆ ಮಾಡಿ.   ಬುದ್ಧಿ ಹೇಳೋಕಿಂತ ಮೊದಲು, ಮಕ್ಕಳ ಮನಸ್ಸಿನ ಮಾತು ಕೇಳಿ. ಹೆತ್ತವರ ನೋವು ಅರ್ಥ ಮಾಡಿಕೊಳ್ಳಿ.  :ತಪ್ಪು ಮಾಡದ ಮನುಷ್ಯ ಇಲ್ಲ. ಒಂದು ತಪ್ಪಿಗೆ ಸಂಬಂಧವನ್ನೇ ಕಡಿದುಕೊಳ್ಳಬೇಡಿ.  ಸಮಯ ಕೊಡಿ, ದುಡ್ಡು, ಬಟ್ಟೆ, ಬೈಕ್ ಕೊಟ್ರೆ ಸಾಲದು. ನಿಮ್ಮ ಸಮಯ, ನಿಮ್ಮ ಪ್ರೀತಿ ಕೊಡಿ.  ಮೆಚ್ಚುಗೆ ಸೂಚಿಸಿ: “ಥ್ಯಾಂಕ್ಸ್ ಕಣೋ”, “ಚೆನ್ನಾಗಿ ಮಾಡಿದ್ದೀಯ” ಅನ್ನೋ ಎರಡು ಮಾತು ಸಂಬಂಧ ಗಟ್ಟಿ ಮಾಡುತ್ತೆ. ಕೊನೆಯ ಮಾತು:ಸಂಬಂಧ ಅಂದ್ರೆ AC ರೂಮಲ್ಲಿಡೋ ಹೂವಿನ ಹಾಗಲ್ಲ. ಬಿಸಿಲು, ಮಳೆ, ಗಾಳಿ ಎಲ್ಲಾ ತಾಗಬೇಕು. ಜಗಳ ಬರಬೇಕು, ಮುನಿಸು ಬರಬೇಕು, ಆದ್ರೆ ಬಿಟ್ಟು ಹೋಗೋ ಯೋಚನೆ ಬರಬಾರದು.*ಮೊಬೈಲ್‌ನಲ್ಲಿ ಸಾವಿರ Friend Request ಇರಬಹುದು. ಆದ್ರೆ ಕಷ್ಟ ಅಂದಾಗ ಹೆಗಲು ಕೊಡೋದು ರಕ್ತ ಸಂಬಂಧ, ಮನಸ್ಸಿನ ಸಂಬಂಧ ಮಾತ್ರ.*ಸಂಬಂಧಗಳು ಸರಿಯಿಲ್ಲ ಅಂದ್ರೆ, ಸರಿ ಮಾಡೋಕೆ ಶುರು ಮಾಡೋಣ. ಇವತ್ತಿಂದ, ಈಗಿಂದ, ನಮ್ಮಿಂದಲೇ. ವನಜಾ ಮಹಾಲಿಂಗಯ್ಯ

“ಸಂಬಂಧಗಳ ಬಿರುಕು – ನಮ್ಮಿಂದಲೇ ಸರಿಪಡಿಸೋಣ” ವನಜ ಮಹಾಲಿಂಗಯ್ಯ ಮಾದಾಪುರ Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-121 ಒಬ್ಬ ಅಮ್ಮನ ಕಥೆ ರುಕ್ಮಿಣಿನಾಯರ್ ಅಮ್ಮನ ಆರೋಗ್ಯದ ಸತ್ಯ ಅರಿತತಂಗಿಯ ಗೋಳಾಟ ಸ್ವಲ್ಪ ಹೊತ್ತು ಇಬ್ಬರೂ ಅಮ್ಮನ ಜೊತೆ ಮಾತನಾಡುತ್ತಾ ಕಾಲ ಕಳೆದರು. ಡಾಕ್ಟರ್ ರೌಂಡ್ಸ್ ಗೆ ಬರುವ ಹೊತ್ತಾಯ್ತು ಎಂದು ವಾರ್ಡಿನ ಆಯಾ ಕೂಗಿ ಹೇಳಿದಾಗ ಅಕ್ಕ-ತಂಗಿ ಇಬ್ಬರೂ ಹೊರಗೆ ನಡೆದರು. ಆಸ್ಪತ್ರೆಯ ಹೊರಾಂಗಣದಲ್ಲಿ ಮೆಟ್ಟಿಲ ಮೇಲೆ ಕುಳಿತು ಪರಸ್ಪರ ಒಬ್ಬರ ಮುಖ ಒಬ್ಬರು ನೋಡಿಕೊಂಡರು. ಅಕ್ಕ ಇಷ್ಟೊಂದು ಮೌನವಾಗಿರುವುದನ್ನು ನೋಡಿ ಅಮ್ಮನ ಆರೋಗ್ಯದಲ್ಲಿ ಏನೋ ದೊಡ್ಡ ಸಮಸ್ಯೆ ಇರಬಹುದು ಎಂದು ತಂಗಿ ಊಹಿಸಿದಳು. ಆದರೂ ಅಕ್ಕ ಹೇಳುವವರೆಗೂ ಕಾಯ್ದಳು. ಸ್ವಲ್ಪ ಹೊತ್ತಿನ ನಂತರ ಅಕ್ಕನೇ ಮೌನ ಮರಿದಳು…. “ನಿನಗೆ ಗೊತ್ತು ತಾನೆ ಅಮ್ಮನಿಗೆ ಡಯಾಬಿಟಿಸ್ ಇರುವುದು…. ಅದಕ್ಕಾಗಿ ಅಮ್ಮ ನಿರಂತರವಾಗಿ ಇನ್ಸುಲಿನ್ ತೆಗೆದುಕೊಳ್ಳುತ್ತಿರುವುದು….. ಹಾಗೂ ಮೂರು ತಿಂಗಳಿಗೊಮ್ಮೆಯಾದರೂ ಆಸ್ಪತ್ರೆಗೆ ತಪಾಸಣೆಗೆ ಬರುವುದು….ಆದರೆ….. ಅದರ ಜೊತೆಗೆ ಅದ್ಯಾವಾಗ ಬಿ.ಪಿ ಬಂದು ಅಮ್ಮನ ಒಡಲನ್ನು ಸೇರಿತು ಎಂಬುದು ಅಮ್ಮನಿಗೂ ನಮಗೂ ತಿಳಿಯಲಿಲ್ಲ”…. ಎಂದು ಅಲ್ಲಿಗೆ ನಿಲ್ಲಿಸಿ, ತಂಗಿಯ ಮುಖವನ್ನು ಒಮ್ಮೆ ದಿಟ್ಟಿಸಿದಳು. ಅಚ್ಚರಿಯಿಂದ ತಂಗಿ ಅಕ್ಕನ ಮುಖವನ್ನು ನೋಡಿದಳು. ಆಗ ಅಕ್ಕ ‘ಹೌದು’ ಎನ್ನುವಂತೆ ತಲೆ ಆಡಿಸಿದಳು…. “ಮಧುಮೇಹ ಮತ್ತು ರಕ್ತದೊತ್ತಡ ಎರಡೂ ಅಣ್ಣತಮ್ಮಂದಿರು ಇದ್ದಂತೆ ಎಂದು ವೈದ್ಯರು ಹೇಳಿದರು….. ಒಂದು ಬಂದ ನಂತರ ನಿಧಾನವಾಗಿ ಮತ್ತೊಂದು ಜೊತೆಗೂಡುತ್ತದೆ ಎಂದು ಕೂಡ ಹೇಳಿದರು…. ಈಗ ನಮ್ಮ ತಾಯಿಗೆ ಇರುವ ಆರೋಗ್ಯ ಸಮಸ್ಯೆ ಗಂಭೀರವಾದದ್ದು…..  ಮಧುಮೇಹ ಹಾಗೂ ರಕ್ತದೊತ್ತಡದಿಂದಾಗಿ ನಮ್ಮ ತಾಯಿಯ ಶರೀರದ ಒಳಗಿರುವ ಅಂಗಾಂಗಗಳು, ಎಂದರೆ ಹೃದಯ, ಯಕೃತ್ತು ಮೂತ್ರಪಿಂಡಗಳು ಎಲ್ಲವೂ ಊದಿಕೊಂಡಿವೆ…. ಅವು ಸರಿಯಾಗಿ ತಮ್ಮ ಕಾರ್ಯವನ್ನು ನಿರ್ವಹಿಸುತ್ತಿಲ್ಲ… ಹಾಗಾಗಿ ರಕ್ತ ಶುದ್ಧಿ ಆಗುತ್ತಿಲ್ಲ…. ಎಂದು ವೈದ್ಯರು ತಿಳಿಸಿದ್ದಾರೆ…. ಎಂದಳು.  ಅಕ್ಕ ಹೇಳಿದ ಸಂಗತಿಯನ್ನು ಕೇಳುತ್ತಾ ತಂಗಿಯ ಮುಖ ಬಾಡಿತು…. ಅಕ್ಕಾ ಇದಕ್ಕೆ ಔಷಧೋಪಚಾರಗಳು ಇಲ್ಲವೇ?….ಎಂದು ತಂಗಿ ಕೇಳಿದಾಗ…. ಇಲ್ಲಾ… ಕಣೇ…. ಎಂದವಳ ಧ್ವನಿ ಭಾರವಾಗಿತ್ತು…… ಯಾಕಕ್ಕಾ?…..ಅದು ಹೇಗೆ? ….ಎಂದು ಕೇಳಿದಾಗ…. ಶರೀರದ ಒಳ ಅಂಗಗಳು ವೈಫಲ್ಯವಾದರೆ ಯಾವ ಔಷಧಿಗಳೂ ಪರಿಣಾಮ ಬೀರುವುದಿಲ್ಲ… ತಾತ್ಕಾಲಿಕ ಉಪಶಮನಗಳು ದೊರೆಯುತ್ತವೆ ಅಷ್ಟೇ…. ಆದರೆ ಪೂರ್ಣವಾಗಿ ಗುಣಮುಖವಾಗುವುದಿಲ್ಲ…. ಹಾಗಾಗಿ ವೈದ್ಯರು ಹೇಳಿದರು,”…. ಎಂದು ತನ್ನ ಮಾತನ್ನು ಮುಂದುವರೆಸದೆ ಅರ್ಧಕ್ಕೇ ನಿಲ್ಲಿಸಿ, ತಂಗಿಯ ಮುಖವನ್ನೇ ತದೇಕ ಚಿತ್ತದಿಂದ ನೋಡಿದಳು.‌ ಮುಂದೆ ಮಾತು ಬಾರದೇ ಗಂಟಲು ಕಟ್ಟಿತು. ಕಣ್ಣುಗಳಲ್ಲಿ ಧುತ್ತನೇ ನೀರು ತುಂಬಿಕೊಂಡವು. ತಂಗಿಗೆ ಹೇಗೆ ಹೇಳಲಿ ಇರುವ ಸತ್ಯವನ್ನು? ಅವಳು ಖಂಡಿತಾ ಸಹಿಸಲಾರಳು. ದೇವರೇ ನನಗೊಂದಿಷ್ಟು ಶಕ್ತಿ ಕೊಡು. ನನ್ನಲ್ಲಿರುವ ಶಕ್ತಿ ಉಡುಗಿ ಹೋಗುತ್ತಿದೆ. ಇಂತಹಾ ಘೋರ ಸತ್ಯವನ್ನು ನಾನವಳಿಗೆ ಹೇಗೆ ಹೇಳಲಿ? ಎಂದು ಚಿಂತಾಕ್ರಾಂತಳಾಗಿ ಒಂದು ಕ್ಷಣ ಕಣ್ಣು ಮುಚ್ಚಿದಳು. ಕಣ್ಣುಗಳಲ್ಲಿ ತುಂಬಿದ್ದ ನೀರು ಕೆನ್ನೆಯ ಮೇಲೆ ಇಳಿಯಿತು.  ತಂಗಿಯು ಕುಳಿತಲ್ಲಿಂದ ನಿಧಾನವಾಗಿ ಎದ್ದು ಬಂದು ಅಕ್ಕನ ಕೆನ್ನೆಯ ಮೇಲೆ ಹರಿದ ಕಣ್ಣೀರನ್ನು ಒರಸಿ, ಅಕ್ಕನ ಮುಖವನ್ನು ಬೊಗಸೆಯಲ್ಲಿ ಹಿಡಿದು…”ಅಕ್ಕಾ ….ಏನಾಯ್ತು ಹೇಳು…. ಕಷ್ಟ ಸುಖ, ನೋವು ನಲಿವು, ಏನೇ ಇರಲಿ ನಾವು ಪರಸ್ಪರ ಹೇಳಿಕೊಂಡು ಮನಸ್ಸನ್ನು ಹಗುರಾಗಿಸಿಕೊಂಡಿದ್ದೇವೆ….. ಒಬ್ಬರಿಗೊಬ್ಬರು ಸದಾ ಜೊತೆಯಲ್ಲಿ ಇದ್ದೇವೆ…. ನೀನು ಇರುವ ಸ್ಥಿತಿಯನ್ನು ಕಂಡು ಪರಿಸ್ಥಿತಿಯ ಗಂಭೀರತೆ ನನಗೂ ಅರ್ಥವಾಗುತ್ತಿದೆ…. ನೀನು ಹೀಗೆ ಮಾತನಾಡದೆ ದುಃಖಿಸುತ್ತಿದ್ದರೆ ನನ್ನ ಮನ ಇನ್ನೂ ವ್ಯಾಕುಲಗೊಳ್ಳುತ್ತದೆ…. ಪರಿಸ್ಥಿತಿ ಏನೇ ಇರಲಿ ಅದನ್ನು ನಾವು ಎದುರಿಸಲೇಬೇಕು…. ದಯವಿಟ್ಟು ಏನಾಯ್ತು ಎಂದು ಹೇಳು ಅಕ್ಕಾ”…. ಎಂದು ತಂಗಿ ಹೇಳಿದಾಗ ಅವಳ ದುಃಖವು ಇನ್ನೂ ಹೆಚ್ಚಾಯಿತು. ತಂಗಿಯ ಕೈಯನ್ನು ಬಿಗಿಯಾಗಿ ಹಿಡಿದುಕೊಂಡು ತನ್ನ ಪಕ್ಕ ಕುಳಿತುಕೊಳ್ಳುವಂತೆ ಸನ್ನೆ ಮಾಡಿ…. “ನೀನು ಈಗ ಮನಸ್ಸನ್ನು ಗಟ್ಟಿ ಮಾಡಿಕೊಳ್ಳಬೇಕಾಗಿದೆ…. ವೈದ್ಯರು ಹೇಳಿದಾಗ ನನಗೆ ಆಕಾಶವೇ ತಲೆಯ ಮೇಲೆ ಬಿದ್ದಂತೆ ಅನುಭವವಾಯಿತು… ಈಗ ನಿನಗೆ ಇಂತಹ ಸಂಕಟದ ವಿಷಯವನ್ನು ಹೇಗೆ ಹೇಳಲಿ ಎಂಬುದೇ ನನ್ನ ಯೋಚನೆಯಾಗಿದೆ…. ಆದರೂ ಹೇಳದೇ ಬೇರೆ ದಾರಿ ಇಲ್ಲ”…. ಎಂದಾಗ ತಂಗಿ…._ಅದೇನೇ ಇರಲಿ ಹೇಳು” …ಎಂದಳು….. _ವೈದ್ಯರು ಹೇಳಿದರು…. ನಮ್ಮ ತಾಯಿ ಇನ್ನು ಕೇವಲ ಆರು ತಿಂಗಳಷ್ಟೇ…. ನಮ್ಮೊಂದಿಗೆ ಇರುತ್ತಾರೆ”… ಎಂದಳು.‌ ಅಕ್ಕ ಹೇಳಿದ ಮಾತು ತಂಗಿಗೆ ಸರಿಯಾಗಿ ಅರ್ಥವಾಗಲಿಲ್ಲ…. _ಬಿಡಿಸಿ ಹೇಳಕ್ಕ…. ನನಗೆ ಏನೂ ಅರ್ಥವಾಗುತ್ತಿಲ್ಲ….”ಎಂದಳು. ….”ಅಂದರೆ…. ನಮ್ಮ ತಾಯಿ ಜೀವಂತವಾಗಿರುವುದು ಇನ್ನು ಕೇವಲ ಆರು ತಿಂಗಳು ಮಾತ್ರ….. ಈ ಮಾತನ್ನು ಕೇಳಿದ ತಂಗಿ ಗರಬಡಿದಂತೆ ಅಲುಗಾಡದೆ ಹಾಗೆ ಕುಳಿತುಬಿಟ್ಟಳು. ತನ್ನ ಕಿವಿಗಳನ್ನು ತಾನೆ ನಂಬದಾದಳು. ತಾನು ಕೇಳುತ್ತಿರುವುದು ಏನು? ಅಕ್ಕ ಇದೇನು ಹೇಳುತ್ತಿದ್ದಾಳೆ? ಇದು ನಿಜವಲ್ಲ ಎಂದುಕೊಳ್ಳುತ್ತಾ, ಅಕ್ಕನ ಎರಡೂ ಭುಜಗಳನ್ನು ಹಿಡಿದು ಬಲವಾಗಿ ಅಲುಗಾಡಿಸುತ್ತಾ… “ನೀನು ಏನು ಹೇಳುತ್ತಿರುವೆ? ಸುಮ್ಮನೆ ಏನೇನೋ ಹೇಳಬೇಡ….. ಅಮ್ಮನಿಗೆ ಏನೂ ಆಗಿಲ್ಲ…. ಈಗ ನೋಡು ಸ್ವಲ್ಪ ಹೊತ್ತಿಗೆ ಮುಂಚೆ ನಮ್ಮ ಜೊತೆ ಎಷ್ಟು ಚೆನ್ನಾಗಿ ಮಾತನಾಡುತ್ತಿದ್ದಳು…. ಏನೋ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ ಅಷ್ಟೇ…. ವೈದ್ಯರು ಹಾಗೆ ಹೇಳಿರಲಿಕ್ಕಿಲ್ಲ…. ಬಹುಶಃ ನೀನು ಸರಿಯಾಗಿ ಕೇಳಿಸಿಕೊಂಡಿಲ್ಲ ಎಂದು ಅನಿಸುತ್ತದೆ…. ಇಷ್ಟು ಬೇಗ ನಮ್ಮನ್ನಗಲಿ ಅಮ್ಮ ಎಲ್ಲಿಗೂ ಹೋಗುವುದಿಲ್ಲ….. ನಿನ್ನ ವಿದ್ಯಾಭ್ಯಾಸ ಮುಗಿದು ನೀನು ಕೆಲಸಕ್ಕೆ ಸೇರಿಕೊಳ್ಳುವುದನ್ನು …. ನಾವೆಲ್ಲರೂ ಸಂತೋಷದಿಂದ ಕಳೆಯುವ ಕಾಲವನ್ನು ಅಮ್ಮ ನೋಡಬೇಕಿದೆ….. ತಂಗಿ ನವೋದಯ ವಿದ್ಯಾಲಯದಿಂದ ಈ ವರ್ಷ 10ನೇ ತರಗತಿ ಮುಗಿಸಿ, ಅವಳು ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿ ಮುಂದೆ ಹೆಚ್ಚಿನ ವಿದ್ಯಾಭ್ಯಾಸ ಮುಂದುವರೆಸುವುದನ್ನು ಅಮ್ಮ ನೋಡಬೇಕಿದೆ…. ದೇವರು ಅಷ್ಟು ನಿಷ್ಕರುಣಿಯಲ್ಲ…. ವೈದ್ಯರನ್ನು ಭೇಟಿಯಾಗಿ ಮತ್ತೊಮ್ಮೆ ಕೇಳು….. ಅಮ್ಮನ ಆರೋಗ್ಯ ಸುಧಾರಿಸಲು ಏನಾದರೂ ಔಷಧೋಪಚಾರ ಇರಬಹುದೇ?….ಸ್ವಲ್ಪಕಾಲವಾದರೂ ಅಮ್ಮ ನಮ್ಮೊಟ್ಟಿಗೆ ಬದುಕಿರಲು ಅವಕಾಶವಿದೆಯೇ ಎಂದು…. ಅಕ್ಕಾ ದಯವಿಟ್ಟು ವೈದ್ಯರನ್ನು ಮತ್ತೊಮ್ಮೆ ಭೇಟಿ ಮಾಡಿ ಕೇಳು ಎಂದು ಬೆಕ್ಕಿ ಬಿಕ್ಕಿ ಅಳುತ್ತಾ ದಂಬಾಲು ಬಿದ್ದಳು. ರುಕ್ಮಿಣಿ ನಾಯರ್

Read Post »

ಕಾವ್ಯಯಾನ

ಸವಿತಾ ದೇಶಮುಖ ಅವರ ಕವಿತೆ “ಪ್ರೀತಿ ಕಳೆದುಹೋಗಿದೆ…”

ಕಾವ್ಯ ಸಂಗಾತಿ ಸವಿತಾ ದೇಶಮುಖ “ಪ್ರೀತಿ ಕಳೆದುಹೋಗಿದೆ…” ಮನೆ ಮೂಲೆ ಮೂಲೆಯಲಿ ಹುಡಕಿದೆನಿನ್ನ ಪುಟ್ಟ ಹೆಜ್ಜೆಯ ಸದ್ದು ಕೇಳದೆಆತುರದಿ ಓಡಿಬರುವ ನಿನ್ನ ನೋಟದ,ನೆನಪಾಗಿ ಹೃದಯ ತುಂಬಿ ಕಾಡುತ್ತಿದೆ.!!೧!! ತಿಂಡಿ ಬಟ್ಟಲೂ ಹಾಗೆಯೇ ಉಳಿದಿದೆ,ಕಾಯುತ ನಿನ್ನ ದಾರಿ ನೋಡುತ್ತಿದೆ.ಎಲ್ಲಿ ಹೋದೆ ಕಣ್ಮರೆಯಾಗಿ ಹೊರಟೆನಿನ್ನಿಲ್ಲದೆ ಮನವು ಖಾಲಿಯಾಗಿದೆ.!!೨!! ಮಡಿಲ ಮೇಲೆ ಮಲಗಿದ ಕ್ಷಣಗಳು,ಮನದಾಳದಿ ಜೀವಂತವಾದ ದಿನಗಳುಮುದ್ದಿನ ಮ್ಯಾವ್ ಮ್ಯಾವ್ ಕೇಳಿದ ಕ್ಷಣಕಣ್ಣಂಚಿನಲಿ ಕಂಡ ನಿನ್ನ ತುಂಟಾಟಗಳು!!೩!! ಕರೆಗೆ ಕಿವಿಗೊಡದೆ ಗಾಳಿಗೆ ತೂರಿದ ಓಟಬೇಡವೆಂದರು ಮತ್ತೆ ನನ್ನ ಮನೆಗೆ ಬಂದ ಆಟನಿನ್ನ ಪುಟ್ಟ ಪಾದಗಳ ಗುರುತು ಕಂಡರೆ,ನಲಿ ನಲಿದಾಡಿದ ದಿನಗಳ ನೆನಪಿನ ಕಾಟ!!೪!! ದುಃಖದ ಮೋಡಗಳ ದೂರವಾಗದದುಅದೇತ್ತೋ ದೂರ ಮರೆಯಾಗಿ ಹೋದೆನೀ ನೇಟ್ಟಿದ ಪ್ರೀತಿ ಕಳೆದು ಹೋಗದು,ನೆನಪುಗಳ ಬೆಳಕು ಎಂದಿಗೂ ಆರದು. !!೫!! ಹೃದಯ ನಿನ್ನನು ದೂರ ತಿಳ್ಳಿದರೂ ನೀಕಲಿಸಿದ ಪ್ರೀತಿ ಹಿಡಿಸಿದೆ ಮನಸ್ಸಿಗೆ,ಆ ನಿನ್ನ ಮುದ್ದು ಕಣ್ಣುಗಳು, ನಿಷ್ಕಲ್ಮಶಆ ಪುಟ್ಟ ಮುಖ, ನನ್ನ ದಿನದ ನಗು!!೬!! ಆ ಚೂಪಾದ ಕಿವಿಗಳು ಹೆಜ್ಜೆಯ ಸದ್ದಿಗೆಎಚ್ಚರವಾಗಿ ನಿಲುವ ನಿನ್ನ ಮೈಮಾಟದಸೊಬಗು, ಸವಿಯಲು ಹಬ್ಬವಾಗಿತ್ತು ನನಗೆನೀ ಬಂದರೆ ಮನೆ ತುಂಬಾ ಜೀವ ತುಂಬಿತ್ತ !!೭!! ನೀ ಹೋದರೆ ಮೌನವೇ ಉಳಿಯುತ್ತಿತ್ತು.ಮತ್ತೆ ಮತ್ತೆ ಬಂದು ಪ್ರೀತಿ ಹರಿಸಿದ ಬೆಕ್ಕುನೋಡದೆ ಮನದ ಬಾಗಿಲು ಮುಚ್ಚಿದೆ.ಆದರೆ ನೀ ಮಾತ್ರ ಹಠಮಾರಿ ಮಗು, ಮತ್ತೆ ಮತ್ತೆ ಬಂದು ಹೃದಯ ತಟ್ಟಿದ್ದೆ.ಆ ನಿನ್ನ ಮುದ್ದು ಮುದ್ದಾದ ಕಣ್ಣುಗಳು…ಎರಡು ಪುಟ್ಟ ನಕ್ಷತ್ರಗಳು ಹೊಳಪುಒಮ್ಮೆ ನೋಡಿದರೆ ಸಾಕೆನಸದು ….. ಕಲ್ಲಿನ ಮನಕರಗುತ್ತು ಆ ಪುಟ್ಟ ಮುಖ,ಹಾಲಿನ ನೊರೆ ಮೃದು, ಚೂಪಾದ ಕಿವಿಗಳು,ಮಾತು ಕೇಳುತಿರೆ ನೆಟ್ಟಗೇ ನಿಲುವ ಆಟಮೈ ತುಂಬಿದ್ದ ಬಣ್ಣವೋ ದೇವರು ಬಿಡಿಸಿದ ಚಿತ್ರವೊಂದು! ಕಂದು ಮೋಡದ ನಡುವೆಕಪ್ಪು ಮಳೆಯ ಗೆರೆಗಳಂತೆ, ನಿನ್ನ ಮೈಮಾಟಕಣ್ಣಿಗೆ ಹಬ್ಬವಾಗಿತ್ತು.ಪುಟ್ಟ ಹೆಜ್ಜೆಗಳ ಸದ್ದು,ಮೃದುವಾದ ಬಾಲದ ನಾಟ್ಯ ಹೇಳ್ತಿರೋದು, ಸುತ್ತ ಸುತ್ತುವ ನಿನ್ನ ಪ್ರೀತಿ, ಮಾತಿಲ್ಲದಮಮತೆಯ ಭಾಷೆಯಾಗಿತ್ತು.ನಾನು ದೂರಸರಿದರು,ಮತ್ತೇ ಮತ್ತೇ ಬಂದೆ… ಅಂದುಅರಿಯಲಿಲ್ಲ ಅದು ಕೊನೆಯ ಬೆಟ್ಟೆಂದು.. ಈಗ ಮನೆ ತುಂಬಾ ನಿಶ್ಯಬ್ದ, ನಿನು ಪ್ರತಿಮೂಲೆಯಲ್ಲೂ ಜೀವಂತವಾಗಿರುವೆ ಹಾಗೆಮುದ್ದಾದ ಚೇಷ್ಟೆಗಳೆಲ್ಲ ಕಂಗಳ‌ ನೀರುಅದೆಂದು ನಿನ್ನ ಮೋಹದಿ ಸಿಲುಕಿದೆ…. ಎಲ್ಲೋ ಒಂದು ಕಡೆ ನೀ ಇದ್ದರೆ, ಒಮ್ಮೆಮಾತ್ರ ಬಂದು ನೋಡು ಜೀವಾ.ಕಣ್ಣಗಳ ನೋಟಕ್ಕೆ ಕಾಯುತ್ತಿವೆ,ಮನದ ಮನೆಯ ಬಾಗಿಲು ತೆರೆದು ಮತ್ತೇ ಬರುವಿಗಾಗಿ ಕಾಯುತ್ತಿರುವೆ ಸವಿತಾ ದೇಶಮುಖ

ಸವಿತಾ ದೇಶಮುಖ ಅವರ ಕವಿತೆ “ಪ್ರೀತಿ ಕಳೆದುಹೋಗಿದೆ…” Read Post »

ಕಾವ್ಯಯಾನ, ಗಝಲ್

ಡಾ ರೇಣುಕಾತಾಯಿ ಸಂತಬಾ ರೇಮಾಸಂತರವರ ಗಜಲ್

ಕಾವ್ಯ ಸಂಗಾತಿ ಡಾ ರೇಣುಕಾತಾಯಿ ಸಂತಬಾ  ರೇಮಾಸಂತರವರ ಗಜಲ್ ನೀ ಒಪ್ಪದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ನೀ ಸುಮ್ಮನಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಅಂತರಾತ್ಮ ನಿನ್ನ ಪ್ರೀತಿಗೆ ಶರಣಾಗಿ ಬಿಟ್ಟೇತಿ,ನೀ ಕಾಣದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ರಾಧೆಯಾಗಿ ನಿನ್ನ ದನಿ ಪೂಜಿಸುತ್ತೇನಿ ಗೊತ್ತೇನ,ನೀ ನೋಡದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಸದ್ದಿಲ್ಲದ ಮನಸ್ಸಿನ್ಯಾಗ ಮೆತ್ತಗ ಬಂದಬಿಟ್ಟಿ,ನೀ ಒಲಿದಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ತಾಯಿಗೆ ಗೊತ್ತಿಲ್ಲದ ನಾ ಹೃದಯದೊಳಗಿಟ್ಟಿನಿ,ನೀ ದೂರವಿದ್ದರೂ ನಾ ನಿನ್ನ ಬಯಸುತ್ತೇನೋ ಸಖಾ.ll ಡಾ ರೇಣುಕಾತಾಯಿ ಸಂತಬಾ ರೇಮಾಸಂತ    

ಡಾ ರೇಣುಕಾತಾಯಿ ಸಂತಬಾ ರೇಮಾಸಂತರವರ ಗಜಲ್ Read Post »

ಇತರೆ

“ಅಪ್ಪನ ಮಡಿಲು”ವಿಶೇಷ ಬರಹ ಪೃಥ್ವಿರಾಜ್ ಟಿ ಬಿ

ವಿಶೇಷ ಸಂಗಾತಿ ಪೃಥ್ವಿರಾಜ್ ಟಿ ಬಿ “ಅಪ್ಪನ ಮಡಿಲು” ಅಪ್ಪನ ಮಡಿಲು…ಅದು ಕೇವಲ ಒಬ್ಬ ತಂದೆಯ ಮಡಿಲಲ್ಲ.ಅದು ನನ್ನ ಬದುಕಿನ ಮೊದಲ ಆಶ್ರಯ,ಮೊದಲ ಪಾಠಶಾಲೆ,ಮೊದಲ ದೇವಾಲಯ.ನಾನು ಈ ಜಗತ್ತಿಗೆ ಬಂದಾಗ ನನಗೆ ಯಾವುದರ ಅರಿವೂ ಇರಲಿಲ್ಲ. ಬೆಳಕು, ಕತ್ತಲೆ, ಮುಖಗಳು, ನಗು, ಅಳು—ಯಾವುದೂ ನನಗೆ ಅರ್ಥವಾಗಲಿಲ್ಲ. ಕಿವಿಗೆ ಬಿದ್ದ ಶಬ್ದಗಳೇ ನನ್ನ ಮೊದಲ ಪರಿಚಯ. ಆ ಶಬ್ದಗಳ ಅರ್ಥ ಗೊತ್ತಾಗುವ ಮೊದಲೇ ನಾನು ಬದುಕಿನೊಳಗೆ ಕಾಲಿಟ್ಟಿದ್ದೆ.ಅದು ನನ್ನ ಜನನ.ಆ ಕ್ಷಣದಿಂದಲೇ ಆರಂಭವಾಯಿತು ಒಂದು ಪಯಣ—ನಾನು ಅರ್ಥಮಾಡಿಕೊಳ್ಳುವ ಮೊದಲು ನನ್ನನ್ನು ಅರ್ಥಮಾಡಿಕೊಳ್ಳುತ್ತಿದ್ದ ಬದುಕಿನ ಪಯಣ.ಬದುಕು ಯಾವಾಗಲೂ ನಮಗೆ ತಿಳಿಸಿ ನಡೆಯುವುದಿಲ್ಲ.ಅದು ನಮ್ಮನ್ನು ಎತ್ತಿಕೊಂಡು ಹೋಗುತ್ತದೆ.ಕೆಲವೊಮ್ಮೆ ಮುದ್ದಾಗಿ,ಕೆಲವೊಮ್ಮೆ ಕ್ರೂರವಾಗಿ.ನಮ್ಮ ಮನೆ ಚಿಕ್ಕದಾಗಿತ್ತು. ನಾಲ್ಕು ಗೋಡೆಗಳು, ಒಂದು ಚಿಕ್ಕ ಅಡುಗೆಮನೆ, ಒಂದು ಹಳೆಯ ಬಾಗಿಲು. ಆದರೆ ಆ ಮನೆಯೊಳಗೆ ಅಪಾರವಾದ ಉಷ್ಣತೆ ಇತ್ತು. ಅಪ್ಪ, ಅಮ್ಮ, ನಾನು ಮತ್ತು ನನ್ನ ತಂಗಿ—ನಾಲ್ವರೂ ಸೇರಿ ನಮ್ಮದೇ ಒಂದು ಪುಟ್ಟ ಲೋಕವನ್ನು ಕಟ್ಟಿಕೊಂಡಿದ್ದೆವು.ಅಪ್ಪ ಮನೆಯ ಹೊರಗಿನ ಜಗತ್ತಿನ ಹೊರೆ ಹೊತ್ತವರು.ಅಮ್ಮ ಮನೆಯೊಳಗಿನ ಜಗತ್ತಿನ ಶಕ್ತಿಯು.ತಂಗಿ ಅಪ್ಪನ ಜೀವದ ತುಣುಕು.ನಾನು ಎಲ್ಲವನ್ನೂ ಮೌನವಾಗಿ ನೋಡುತ್ತಾ ಬೆಳೆದುಬಂದ ಮಗ.ಅಪ್ಪ ನಮ್ಮನ್ನು ಯಾವಾಗಲೂ ಕೊರತೆಯಿಂದ ದೂರ ಇಡಲು ಪ್ರಯತ್ನಿಸುತ್ತಿದ್ದರು. ಹಣ ಇದ್ದರೂ ಇಲ್ಲದಿದ್ದರೂ, ನಗುವಿನ ಕೊರತೆ ನಮ್ಮ ಮನೆಯಲ್ಲಿರಲಿಲ್ಲ. ಅವರ ಜೀವನದ ಉದ್ದೇಶ ಒಂದೇ—ಮಕ್ಕಳಿಗೆ ನೋವು ತಟ್ಟಬಾರದು.ಅಪ್ಪನ ಕೈಗಳು ಕಠಿಣವಾಗಿದ್ದರೂ, ಹೃದಯ ಮೃದುವಾಗಿತ್ತು.ಅವರು ಹೆಚ್ಚು ಮಾತನಾಡುವುದಿಲ್ಲ. ಆದರೆ ಅವರು ಮಾಡಿದ ಕೆಲಸಗಳೇ ಮಾತಾಡುತ್ತಿತ್ತು.ನಾನು ಚಿಕ್ಕಂದಿನಿಂದಲೇ ಹಠ ಹಿಡಿದು ಅಳುವ ಮಕ್ಕಳಲ್ಲಿ ಒಬ್ಬನಲ್ಲ. ಏನಾದರೂ ಬೇಕು ಎಂದರೆ ಅಪ್ಪನ ಮುಖ ನೋಡುತ್ತಿದ್ದೆ. ಅವರ ಕಣ್ಣುಗಳಲ್ಲಿ “ಇಲ್ಲ” ಅಂದರೆ, ಅದು ನನ್ನಿಗೆ ಅಂತಿಮ ಉತ್ತರ. ಅವರ ಮೌನದಲ್ಲೇ ನನಗೆ ಉತ್ತರ ಸಿಗುತ್ತಿತ್ತು.ಹಂಚಿಕೊಂಡು ತಿನ್ನುವುದು, ಇತರರ ನೋವನ್ನು ಅರ್ಥಮಾಡಿಕೊಳ್ಳುವುದು, ಅಗತ್ಯಕ್ಕಿಂತ ಹೆಚ್ಚು ಬೇಡ ಅನ್ನಿಸುವುದು—ಇವೆಲ್ಲ ನನ್ನಲ್ಲಿ ಸಹಜವಾಗಿಯೇ ಬೆಳೆದ ಗುಣಗಳು. ಬಹುಶಃ ಅದು ಅಪ್ಪನಿಂದ ನನಗೆ ಬಂದ ಉಡುಗೊರೆ.ಅಪ್ಪನ ಮಡಿಲು ನನಗೆ ದೇವಾಲಯದಂತಿತ್ತು.ಅಲ್ಲಿ ಕುಳಿತರೆ ಜಗತ್ತು ಮೌನವಾಗುತ್ತಿತ್ತು.ಅಪ್ಪ ತಲೆಗೆ ಕೈ ಇಟ್ಟರೆ, ನನ್ನೊಳಗಿನ ಭಯಗಳು ಕರಗುತ್ತಿತ್ತು.ಅವರು ನನ್ನ ಮೊದಲ ದೇವರು.ಮೊದಲ ಹೀರೋ.ನನ್ನ ಬಾಲ್ಯ ಸಂಪೂರ್ಣ ಸಂತೋಷದಿಂದ ತುಂಬಿತ್ತು ಎಂದು ಹೇಳಿದರೆ ಅದು ಅರ್ಧ ಸತ್ಯ. ಹೊರಗೆ ನೋಡಿದರೆ ಎಲ್ಲವೂ ಸರಿಯೇನೋ ಎಂಬಂತೆ ಕಾಣುತ್ತಿತ್ತು. ಆದರೆ ಮನೆಯೊಳಗೆ ಮೌನವಾಗಿ ಬೆಳೆಯುತ್ತಿದ್ದ ಕೆಲ ನೋವುಗಳು, ಅರ್ಥವಾಗದ ನಿಶ್ಶಬ್ದಗಳು ನನ್ನೊಳಗೆ ಪ್ರಶ್ನೆಗಳಾಗಿ ಉಳಿಯುತ್ತಿತ್ತು.ಅಪ್ಪ–ಅಮ್ಮನ ನಡುವೆ ಮಾತಿಲ್ಲದ ದಿನಗಳು.ನಗು ಇದ್ದರೂ, ಹೃದಯಗಳು ದೂರವಾಗುತ್ತಿರುವ ಕ್ಷಣಗಳು.ಆ ನೋವುಗಳನ್ನು ನಾನು ಪದಗಳಲ್ಲಿ ಅರ್ಥಮಾಡಿಕೊಳ್ಳುವ ಮೊದಲೇ ಮನಸ್ಸಿನಲ್ಲಿ ಸಂಗ್ರಹಿಸಿಕೊಂಡಿದ್ದೆ.ನಾನು ಐದನೇ ತರಗತಿಯಲ್ಲಿ ಓದುತ್ತಿದ್ದಾಗ, ನಮ್ಮ ಬದುಕಿನ ಮೇಲೆ ಬಿರುಗಾಳಿ ಬಂತು.ಅಪ್ಪ ಮತ್ತು ಅಮ್ಮ ದೂರವಾದರು.ಗೋಡೆಗಳು ಹಾಗೆಯೇ ಇದ್ದವು.ಬಾಗಿಲು, ಕಿಟಕಿ, ನೆಲ— ಯಾವುದು ಬದಲಾಗಿರಲಿಲ್ಲಆದರೆ ಮನೆಯ ಆತ್ಮ ಒಡೆದಿತ್ತು.ಅಮ್ಮ ಮನೆ ಬಿಟ್ಟು ಹೋದ ದಿನ ಮನೆ ಮೌನವಾಗಿತ್ತು. ಆ ಮೌನವು ಕಿವಿಗೆ ಕೇಳಿಸದ ಶಬ್ದವಾಗಿ ನನ್ನ ಮನಸ್ಸಿನಲ್ಲಿ ಕೂಗುತ್ತಿತ್ತು.“ಅಮ್ಮ ಏಕೆ ಹೋದಳು?”ಈ ಪ್ರಶ್ನೆಗೆ ಉತ್ತರ ಯಾರಲ್ಲೂ ಇರಲಿಲ್ಲ.ಅಮ್ಮ ಎಂದರೆ ದೇವರು ಎನ್ನುತ್ತಾರೆ.ಆದರೆ ನನ್ನ ಬದುಕಿನಲ್ಲಿ ‘ಅಮ್ಮ’ ಎಂಬ ಪದ ನೋವಿನ ಅರ್ಥ ಹೊತ್ತುಕೊಂಡಿತ್ತು.ಎಲ್ಲಾ ತಾಯಂದಿರು ಮಕ್ಕಳಿಗಾಗಿ ತ್ಯಾಗ ಮಾಡುತ್ತಾರೆ ಎಂಬ ಮಾತು ನನ್ನಿಗೆ ಸುಳ್ಳಾಗಿ ಕಾಣಿಸಿತು.ನನ್ನ ತಾಯಿ ತನ್ನ ಸುಖವನ್ನು ಆರಿಸಿಕೊಂಡಳು.ಮಕ್ಕಳ ಕಣ್ಣೀರನ್ನು ನೋಡದೆ.ದೇವರ ಮುಂದೆ ನಾನು ಒಂದು ಮೌನ ಪ್ರಾರ್ಥನೆ ಮಾಡಿಕೊಂಡೆ—“ದೇವರೆ, ಈ ತರದ ತಾಯಿ ಯಾರಿಗೂ ಕೊಡಬೇಡ.”ಇದು ಎಲ್ಲಾ ತಾಯಂದಿರ ವಿರುದ್ಧದ ಮಾತಲ್ಲ.ಇದು ನನ್ನ ಬದುಕಿನ ಸತ್ಯ. ಮೌನದಲ್ಲಿ ಬದುಕಿದ ತಂದೆ ಅಮ್ಮ ಮನೆ ಬಿಟ್ಟು ಹೋದ ನಂತರ ನಮ್ಮ ಮನೆ ಮೌನವನ್ನು ಕಲಿತಿತು.ಆ ಮೌನ ಮಾತಾಡುತ್ತಿರಲಿಲ್ಲ, ಆದರೆ ಎಲ್ಲವನ್ನೂ ಹೇಳುತ್ತಿತ್ತು.ಅಪ್ಪ ಮೊದಲ ಕೆಲವು ದಿನಗಳು ಏನೂ ಆಗದಂತೆ ನಡೆದುಕೊಂಡರು.ಅವರು ಅಳಲಿಲ್ಲ.ಕೋಪಗೊಂಡಿಲ್ಲ.ಪ್ರಶ್ನೆ ಕೇಳಲಿಲ್ಲ.ಆದರೆ ನಾನು ಗಮನಿಸಿದ್ದೆ—ಅಪ್ಪನ ನಗು ನಿಧಾನವಾಗಿ ಕಡಿಮೆಯಾಗುತ್ತಿತ್ತು. ಸಮಾಜ ಮಾತ್ರ ಮೌನವಾಗಿರಲಿಲ್ಲ.“ಹೆಂಡತಿ ಹೋದಳು” ಅನ್ನೋದು ನಮ್ಮ ಮನೆಯ ಪರಿಚಯವಾಗಿ ಬಿಟ್ಟಿತು.ಕೆಲವರು ಸಹಾನುಭೂತಿ ತೋರಿಸಿದರು.ಹೆಚ್ಚಿನವರು ಕುತೂಹಲ ತೋರಿಸಿದರು.ಕೆಲವರು ಮೌನವಾಗಿ ನಿಂದಿಸಿದರು.ಅಪ್ಪನಿಗೆ ಸಲಹೆಗಳು ಬಂತು—“ಮಕ್ಕಳಿಗಾಗಿ ಮರುಮದುವೆ ಮಾಡಿ”“ಒಬ್ಬ ಹೆಣ್ಣು ಮನೆಗೆ ಬಂದರೆ ಎಲ್ಲವೂ ಸರಿಯಾಗುತ್ತದೆ”“ಮಕ್ಕಳು ತಾನೇ ಹೊಂದಿಕೊಳ್ಳುತ್ತಾರೆ”ಆದರೆ ಅಪ್ಪನ ಉತ್ತರ ಒಂದೇ.ಅದು ಗಟ್ಟಿಯಾಗಿರಲಿಲ್ಲ.ಆದರೆ ಅಚಲವಾಗಿತ್ತು.“ನನ್ನ ಮಕ್ಕಳ ಮನಸ್ಸಿಗೆ ನೋವಾಗಬಾರದು.”ಅಪ್ಪನಿಗೆ ತಮ್ಮ ಬದುಕಿನ ಬಗ್ಗೆ ಚಿಂತೆಯೇ ಇರಲಿಲ್ಲ.ಅವರ ಪ್ರಶ್ನೆ ಒಂದೇ—ನನ್ನ ಮಕ್ಕಳು ಸುರಕ್ಷಿತರಾಗಿದ್ದಾರೆಯೇ?ಮರುಮದುವೆ ಅಂದ್ರೆ ಕೇವಲ ಒಂದು ಸಂಬಂಧ ಅಲ್ಲ.ಅದು ಮಕ್ಕಳ ಬದುಕಿನೊಳಗೆ ಮತ್ತೊಬ್ಬರ ಪ್ರವೇಶ.ಆ ಪ್ರವೇಶ ಒಳ್ಳೆಯದಾಗುತ್ತದೆಯೋ, ಗಾಯವಾಗುತ್ತದೆಯೋ—ಅಪ್ಪನಿಗೆ ಅದರ ಭಯ ಇತ್ತು.ಆ ಭಯವೇ ಅವರನ್ನು ಜೀವನಪೂರ್ತಿ ಒಬ್ಬಂಟಿಯಾಗಿಸಿದರೂ, ಮಕ್ಕಳಿಗಾಗಿ ಅವರು ಒಪ್ಪಿಕೊಂಡರು.ಅಪ್ಪ ಅಮ್ಮನ ಕೊರತೆಯನ್ನು ನಮಗೆ ತೋರಿಸಲಿಲ್ಲ.ಅಡುಗೆ ಮನೆಯಲ್ಲಿ ಅವರೇ ನಿಂತರು.ಬಟ್ಟೆ ತೊಳೆಯುವುದು, ಊಟ ಮಾಡಿಸುವುದು, ಶಾಲೆಗೆ ಕಳುಹಿಸುವುದು—ಎಲ್ಲವನ್ನೂ ಅವರು ಮೌನವಾಗಿ ಮಾಡುತ್ತಿದ್ದರು.ಅಪ್ಪನ ಕೈಗಳಿಂದ ಬಂದ ಊಟದಲ್ಲಿ ಅಮ್ಮನ ಕೈರೇಖೆಗಳು ಕಾಣಿಸದಿದ್ದರೂ, ತ್ಯಾಗ ಸ್ಪಷ್ಟವಾಗಿತ್ತು.ತಂಗಿ ದೊಡ್ಡದಾಗುತ್ತಾ ಹೋಗುತ್ತಿದ್ದಳು.ಅವಳಿಗೆ ಅಪ್ಪ ತಾಯಿ ಎರಡೂ ಆಗಿದ್ದರು.ಅವಳ ಕೂದಲನ್ನು ಬಿಚ್ಚಿ ಜಡೆ ಹಾಕುವುದು, ಅವಳ ಕಣ್ಣೀರನ್ನು ಒರೆಸುವುದು—ಅಪ್ಪ ಕಲಿತರು.ಅವಳು ನಗಿದರೆ ಅಪ್ಪ ಬದುಕಿದ್ದಂತೆ.ಅವಳು ಮೌನವಾದರೆ ಅಪ್ಪನ ಹೃದಯ ನಡುಗುತ್ತಿತ್ತು.ನಾನು ಅಷ್ಟರಲ್ಲಿ ಮೌನದಿಂದ ಜವಾಬ್ದಾರಿಯತ್ತ ಸಾಗುತ್ತಿದ್ದೆ.ನನ್ನೊಳಗೆ ಅಪ್ಪನಂತಾಗಬೇಕು ಅನ್ನೋ ಆಸೆ ಬೆಳೆದುಬಂದಿತ್ತು.ಅವರ ನೋವನ್ನು ಕೇಳದೆ ಅರ್ಥಮಾಡಿಕೊಳ್ಳಬೇಕು ಎಂದು ಕಲಿತಿದ್ದೆ.ಅಪ್ಪ ಮಾತಾಡದ ದಿನಗಳಲ್ಲಿ ನಾನು ಅವರ ಪಕ್ಕ ಕುಳಿತುಕೊಳ್ಳುತ್ತಿದ್ದೆ.ಮಾತು ಬೇಡ.ಹಾಜರಾತಿಯೇ ಸಾಕಾಗುತ್ತಿತ್ತು.ಕಾಲ ಸಾಗಿತು.ತಂಗಿ ಕಾಲೇಜಿಗೆ ಹೋದಳು.ಅಪ್ಪ ಅವಳ ಮೇಲೆ ಅಪಾರ ನಂಬಿಕೆ ಇಟ್ಟಿದ್ದರು.ಅಷ್ಟು ನಂಬಿಕೆ ಅಂದ್ರೆ—ಮನೆಯ ಹಣದ ಜವಾಬ್ದಾರಿಯನ್ನೇ ಅವಳ ಕೈಗೆ ಕೊಟ್ಟಿದ್ದರು.ಲೆಕ್ಕ ಕೇಳಲಿಲ್ಲ.ಅನುಮಾನ ಮಾಡಲಿಲ್ಲ.“ನನ್ನ ಮಗಳು ತಪ್ಪು ಮಾಡೋದಿಲ್ಲ”ಅದು ಅಪ್ಪನ ವಿಶ್ವಾಸ.ಆ ವಿಶ್ವಾಸವೇ ಮುಂದೆ ಅಪ್ಪನ ಹೃದಯವನ್ನು ಹೆಚ್ಚು ನೋಯಿಸಿದ ಸಂಗತಿ ಅನ್ನೋದು ಆ ಕ್ಷಣದಲ್ಲಿ ಯಾರಿಗೂ ಗೊತ್ತಿರಲಿಲ್ಲ.ನಾನು ಡಿಗ್ರಿ ಓದುತ್ತಿದ್ದೆ.ಬದುಕಿನ ಹೊಣೆಗಾರಿಕೆ ನನ್ನತ್ತ ನಿಧಾನವಾಗಿ ಜಾರುತ್ತಿತ್ತು.ಅಪ್ಪ ವಯಸ್ಸಾಗುತ್ತಿದ್ದರು.ಆದರೆ ಅವರ ಮನಸ್ಸು ಮಾತ್ರ ನಮ್ಮ ಭವಿಷ್ಯದಲ್ಲೇ ಸಿಲುಕಿತ್ತು.ಆ ದಿನ ಬಂತು.ತಂಗಿಗೆ ಕೊನೆಯ ಪರೀಕ್ಷೆ.ನಾನೇ ಅವಳನ್ನು ಕಾಲೇಜಿಗೆ ಬಿಟ್ಟು ಬಂದೆ.“ಪರೀಕ್ಷೆ ಮುಗಿದ ಮೇಲೆ ಬೇಗ ಮನೆಗೆ ಬಾ” ಎಂದು ಸಹಜವಾಗಿ ಹೇಳಿದ್ದೆ.ಅವಳು ನಗುತ್ತಾ ತಲೆ ಆಡಿ ಹೋಗಿದ್ದಳು.ಸಂಜೆಯಾಯಿತು.ರಾತ್ರಿ ಆಯಿತು.ಅವಳು ಬರಲಿಲ್ಲ.ಅಪ್ಪ ಮೊದಲಿಗೆ ಗಾಬರಿಯಾಗಲಿಲ್ಲ.“ಇನ್ನೂ ಬರ್ತಾಳೆ” ಅಂದರು.ಆದರೆ ಸಮಯ ಸಾಗಿದಂತೆ ಮೌನ ಗಟ್ಟಿಯಾಗುತ್ತಿತ್ತು.ಆಮೇಲೆ…ಅಪ್ಪನ ಫೋನ್‌ಗೆ ಒಂದು ವಾಟ್ಸ್‌ಆ್ಯಪ್ ಮೆಸೇಜ್ ಬಂತು.ಒಂದು ಫೋಟೋ.ಆ ಫೋಟೋದಲ್ಲಿ—ಅಪ್ಪನ ಮುದ್ದಿನ ಮಗಳುಮದುವೆಯ ಉಡುಪಿನಲ್ಲಿಬೇರೊಬ್ಬನ ಕೈ ಹಿಡಿದು ನಿಂತಿದ್ದಳು.ಅಪ್ಪ ಆ ಫೋಟೋವನ್ನು ನೋಡಿದರು.ಒಮ್ಮೆ ನೋಡಿದರು.ಮತ್ತೊಮ್ಮೆ ನೋಡಿದರು.ಅವರು ಕುಸಿದಿಲ್ಲ.ಅವರು ಕೂಗಿಲ್ಲ.ಅವರು ಶಪಿಸಲಿಲ್ಲ.ಆದರೆ ಅವರ ಕಣ್ಣುಗಳಲ್ಲಿ ನಂಬಿಕೆ ಒಡೆದ ಶಬ್ದವಿತ್ತು.ಅದು ನಾನು ಜೀವನದಲ್ಲಿ ಮೊದಲ ಬಾರಿ ನೋಡಿದ ಅಪ್ಪ.ಆ ದಿನ ಅಪ್ಪ ಒಳಗೊಳಗೆ ಕುಸಿದರು.ಅವರ ನೋವಿಗೆ ಮಾತು ಸಿಗಲಿಲ್ಲ.ಮೌನವೇ ಅವರ ಭಾಷೆಯಾಯಿತು.ಆದರೂ…ಅಪ್ಪ ಸಂಪೂರ್ಣವಾಗಿ ಮುರಿಯಲಿಲ್ಲ.ಅವರು ನನ್ನತ್ತ ನೋಡಿದರು.ಆ ದೃಷ್ಟಿಯಲ್ಲಿ ಒಂದು ಪ್ರಶ್ನೆ ಇತ್ತು—“ನೀನು ಇದ್ದೀಯಾ?”ನಾನು ಉತ್ತರ ಕೊಟ್ಟಿಲ್ಲ.ಆದರೆ ಅವರ ಪಕ್ಕ ಕುಳಿತೆ.ಅದು ಸಾಕಾಗಿತ್ತು. ಪೃಥ್ವಿರಾಜ್ ಟಿ ಬಿ

“ಅಪ್ಪನ ಮಡಿಲು”ವಿಶೇಷ ಬರಹ ಪೃಥ್ವಿರಾಜ್ ಟಿ ಬಿ Read Post »

ಕಾವ್ಯಯಾನ

ವಾಣಿ ಯಡಹಳ್ಳಿಮಠ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಅದೆಷ್ಟು ಮುದ್ದಿಸಿ ಹಿಡಿದರೂ,ಮೂಷ್ಟಿಯಲ್ಲಿನ ಮರಳು ಸೋರಿದಾಗ ನೀ ನೆನಪಾದೆರಾತ್ರಿಯಿಡೀ ನಿಟ್ಟಿಸುತ ಕೂತರೂ,ಬೆಳಕಾದಂತೆ ಚಂದ್ರ ಮರೆಯಾದಾಗ ನೀ ನೆನಪಾದೆ ಹೊರೆಯೆನಿಸಿದರೂ ಎಂದೂ ಹೊರಗೆಲ್ಲೂ ಹೇಳಿಕೊಳ್ಳಲಿಲ್ಲಹಗಲನು ಹೊಂಗನಸಿನಂತೆ ಬದುಕಿದರೂ ,ಕತ್ತಲಾದಂತೆ ರವಿಯು  ಕರಗಿದಾಗ ನೀ ನೆನಪಾದೆ ಪ್ರತಿದಿನವೂ ಮಮತೆಯಿಂದ, ನಗು ನಗುತಾ ನೋಡಿಕೊಂಡೆಅಡಿಗಡಿಗೆ ನೀರುಣಿಸಿ ಪೋಷಿಸಿದರೂ, ಗಿಡವು ಹೂ ಬಿಡದಾದಾಗ ನೀ ನೆನಪಾದೆ ನನ್ನದೆನ್ನುವ ಮೋಹದಲಿ ಪ್ರತಿ ಹೊಡೆತವನೂ ಅಪ್ಪಿಕೊಳ್ಳುತಾ ಹೋದೆಸುನಾಮಿಯಿಂದ ಭೋರ್ಗರೆದು ಸಾಗರ ಅತ್ತರೂ, ಆ ಬಂಡೆ ಅನುನಯಿಸದಾಗ ನೀ ನೆನಪಾದೆ ತನ್ನ ಶಾಂತ ಕಂಗಳನೇ ತಂಗುದಾಣದಂತೆ  ನೀಡಿದಳು ವಾಣಿ,ಬೇಡೆಂದರೂ ಕೃತಘ್ನನಂತೆ ಅನ್ಯರೆದುರು ಕಂಬನಿ ಸುರಿದಾಗ ನೀ ನೆನಪಾದೆ ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ ಅವರ ಗಜಲ್ Read Post »

ಕಾವ್ಯಯಾನ

ರೇಖಾ ಉದಯ ಅವರ ಗಜಲ್

ಕಾವ್ಯ ಸಂಗಾತಿ ರೇಖಾ ಉದಯ ಗಜಲ್ ಹರಿಯುವ ನದಿಗೆ ತಡೆಗೋಡೆ ಕಟ್ಟುವವರು ಯಾರು?ಕಷ್ಟಗಳಿಗೆ ಹೆದರಿದರೆ ಗುರಿ ಮುಟ್ಟುವವರು ಯಾರು? ಬಂದದ್ದು ಬರಲಿ ಶಿವನ ದಯೆಯೊಂದಿರಲಿ ಗೆಳೆಯಬೆನ್ನಹಿಂದೆ ನಡೆಸುವ ಹುನ್ನಾರಗಳ ಮೆಟ್ಟುವವರು ಯಾರು? ಮಾನವೀಯತೆ ಬಂಧ ಕಳಚಿ ಬಿದ್ದದ್ದು ಕಂಡಿಲ್ಲವೇ?ಹೆದರಿ ಮೆಟ್ಟಿದರೆ ಧೈರ್ಯದ ಬಾಗಿಲು ತಟ್ಟುವವರು ಯಾರು? ಮಾತಿನ ಗಾಳದಲ್ಲಿ ಮೀನು ಹಿಡಿಯುವವರ ನೆಚ್ಚದಿರು.ಸ್ವಾರ್ಥದ ಮಹಲಿನಲ್ಲಿ ಪ್ರೇಮದೊಲವನ್ನು ಒಟ್ಟುವವರು ಯಾರು? ರೇಖೂ ಹೆದ್ದಾರಿಯ ನಡವಲ್ಲೂ ಅಪಘಾತಗಳು ಸಹಜವಲ್ಲವೇ?ನೀನು ಹಿಂಜರಿದರೆ ಕೆಟ್ಟ ಕ್ರಿಮಿಗಳನ್ನು ಅಟ್ಟುವವರು ಯಾರು? ರೇಖಾಂಕಿ 

ರೇಖಾ ಉದಯ ಅವರ ಗಜಲ್ Read Post »

ligade
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-23 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಜಯದೇವಿ ತಾಯಿಯವರ ಜೀವನವೆಂಬ ಮಹಾಗ್ರಂಥದಲ್ಲಿ ಅವರ ಮಕ್ಕಳು ಒಂದೊಂದು ಅಮೂಲ್ಯ ಅಧ್ಯಾಯಗಳಾಗಿದ್ದರೆ…. ಮುಖ್ಯ ಪಾತ್ರಧಾರಿಯಾಗಿ ಆಗಮಿಸಿದ ಅಳಿಯ ಡಾ. ಶಂಕರಣ್ಣ ಮೂಗಿ ಸುಪ್ರೀಂ ಕೋರ್ಟಿನ ನ್ಯಾಯವಾದಿಗಳು (ನನ್ನ ತಂದೆ). ಜಯದೇವಿ ತಾಯಿಯವರ ಪಡೆದ ಹಿರಿಯ ಮಗನಾಗಿ ಪಾತ್ರವನ್ನು ವಹಿಸಿದ್ದು ಅತ್ಯಂತ ವಿಶಿಷ್ಟವಾದುದು. ತಾಯಿಯ ಬದುಕಿನ ಕಷ್ಟ-ಸುಖಗಳ ನಡುವೆ ಮಗನಾಗಿ, ತಾಯಿಯ ನೆರಳಾಗಿ, ಬೆನ್ನೆಲುಬಾಗಿ, ಮಾರ್ಗದರ್ಶಕರಾಗಿ ನಿಂತವರು.ಗಂಡನ ವಿಯೋಗದ ನಂತರ ಮನೆಯ ಜವಾಬ್ದಾರಿಗಳ  ಭಾರವು ಹೇರಿಕೊಳ್ಳಲಾರದಷ್ಟು ಭಾರವಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲು ಪ್ರಾರಂಭಿಸಿದ್ದವು…. ಆ ಸಮಯದಲ್ಲಿ “ಶಿವಯೋಗಿ ಸಿದ್ದರಾಮನು ಕಳಿಸಿಕೊಟ್ಟ ಕೈಯಾಗಿ ಶಂಕರಣ್ಣನವರು.. ಬಂದರೆಂದು” ತಾಯಿ ಯಾವಾಗಲು ಹೇಳುತಿದ್ದರು. ಡಾ. ಶಂಕ್ರಣ್ಣ. ಡಿ .ಮೂಗಿ.ಸುಪ್ರೀಂ ಕೋರ್ಟ್ ನ್ಯಾಯವಾದಿಗಳು (ಸೋವಿಯತ್ ಲ್ಯಾಂಡ್ ನೆಹರು ಅವಾರ್ಡ್ ವಿಜೇತರು) ಶಂಕರ ಮೂಗಿ ಅವರದು ಬೈಲ್ಹೊಂಗಲದ ಪ್ರತಿಷ್ಠಿತ ಮನೆತನ ಹಾಗೂ ಕಿತ್ತೂರು ಇತಿಹಾಸದ ಮೊದಲ ಇತಿಹಾಸಕಾರೆಂದು ಪ್ರಸಿದ್ಧಿಗೊಂಡ ಶ್ರೀ ದೊಡ್ಡಭಾವೆಪ್ಪ ಚನ್ನಬಸಪ್ಪ ಮೂಗಿಯವರ ಮಗನಾಗಿದ್ದರು… ಕಾರಣಾಂತರದಿಂದ ಬೈಲ್ಹೊಂಗಲವನ್ನು ಬಿಟ್ಟು ಸೊಲ್ಲಾಪುರದಲ್ಲಿ ಕೆಲಸಕ್ಕಾಗಿ ಬರಬೇಕಾದ ಸಂದರ್ಭ ಬಂತು… ಸೊಲ್ಲಾಪುರದ ಗಡಿನಾಡಿನ ಮಣ್ಣಿನಲ್ಲಿ ಕನ್ನಡದ ಕಂಪು ಹರಡುತ್ತಿದ್ದ ದಿನಗಳಲ್ಲಿ, “ಜಯದೇವಿ ತಾಯಿ” ಎಂಬ ಹೆಸರೇ ಅನೇಕರ ಹೃದಯದಲ್ಲಿ ಗೌರವದ ಸ್ಥಾನ ಪಡೆದಿತ್ತು. ಕನ್ನಡ ನಾಡು, ನುಡಿ, ಸಂಸ್ಕೃತಿಯ ಮೇಲಿನ ಅವರ ಅಪಾರ ಪ್ರೀತಿ, ಸಮಾಜಸೇವೆಯಲ್ಲಿನ ಅವರ ತ್ಯಾಗ ಮತ್ತು ಸಂಕಷ್ಟಗಳ ಎದುರು ತಲೆಬಾಗದ ಧೈರ್ಯವು ಎಲ್ಲೆಡೆ ಹರಡಿತ್ತು.ಅಂತಹ ಸಮಯದಲ್ಲಿ, “ಗಡಿನಾಡಿನಲ್ಲಿ ಜಯದೇವಿ ತಾಯಿ ಎಂಬ ಕನ್ನಡತಿ ಇದ್ದಾರೆ. ನಿಷ್ಠಾವಂತೆ, ಧೈರ್ಯವಂತೆ, ಜನರ ಕಷ್ಟಗಳಿಗೆ ಸ್ಪಂದಿಸುವ ಅಪರೂಪದ ಮಹಿಳೆ” ಎಂಬ ಮಾತುಗಳನ್ನು ಕೇಳಿದ ಶಂಕರಣ್ಣನವರ ಮನಸ್ಸಿನಲ್ಲಿ ಅವರನ್ನು ಒಮ್ಮೆ ಭೇಟಿಯಾಗಬೇಕೆಂಬ ಹಂಬಲ ಮೂಡಿತು. ಶಂಕ್ರಣ್ಣ ಮತ್ತು ಲಲ್ಲೇಶ್ವರಿಯವರ ಮದುವೆ ಸಂದರ್ಭ ಒಂದು ದಿನ ಅವರು ಜಯದೇವಿ ತಾಯಿಯವರನ್ನು ಕಾಣಲು ಬಂದರು. ಮೊದಲ ಭೇಟಿಯಲ್ಲಿಯೇ ಅವರ ಸರಳತೆ, ವಿನಯತೆ, ದೃಢ ಸಂಕಲ್ಪ ಮತ್ತು ಕನ್ನಡದ ಮೇಲಿನ ಅಭಿಮಾನ ಕಂಡು ಮಂತ್ರ ಮುಗ್ಧರಾದರು.ತಾಯಿಯವರ ಮಾತುಗಳಲಿ ಬದುಕಿನ ಅನುಭವಗಳಿದ್ದವು. ಅವರ ನಗುವಿನಲ್ಲಿ  ಸೌಮ್ಯತೆ ಇತ್ತು ದೈವಿ ಖಳೆಯಿತು …..ಸಾವಿರ ನೋವುಗಳ ಗೆದ್ದ ಆತ್ಮವಿಶ್ವಾಸವಿತ್ತು.ತಾಯಿಯವರು ಸಮಾಜದ ಏಳಿಗೆಗಾಗಿ ನಡೆಸುತ್ತಿದ್ದ ಕಾರ್ಯಗಳು, ಬಡವರ ಮತ್ತು ನಿರ್ಗತಿಕರ ಪರವಾಗಿ ತೋರಿಸುತ್ತಿದ್ದ ಕಾಳಜಿ, ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಮಾಡುತ್ತಿದ್ದ ಸೇವೆಯನ್ನು ಕಂಡು ಶಂಕರಣ್ಣನವರು ತುಂಬಾ ಸಂತೋಷಪಟ್ಟರು.“ಇಂತಹ ಮಹಿಳೆಯರು ಒಂದು ಕುಟುಂಬಕ್ಕೆ‌ ಅಷ್ಟೇ ಇಡೀ ಸಮಾಜದ ಆಸ್ತಿ” ಎಂದು ಅವರು ಮನಸಾರೆ ಹೊಗಳಿದರು ಹಾಗೂ ತಾಯಿಯವರ ಕೈಜೋಡಿಸಲು ಪ್ರಾರಂಭಿಸಿದರು.ಅಂದಿನ ಭೇಟಿ  ಕನ್ನಡ ಪ್ರೀತಿ, ಸಮಾಜಸೇವೆ ಮತ್ತು ಮಾನವೀಯತೆಯ ಎರಡು ಮಹಾನ ಮನಸ್ಸುಗಳ ಸಂಗಮವಾಗಿತ್ತು.ಗಡಿನಾಡಿನಲ್ಲಿ ಕನ್ನಡದ ದೀಪವನ್ನು ಆರದಂತೆ ಕಾಪಾಡುತ್ತಿರುವ ಜಯದೇವಿ ತಾಯಿಯವರ ಜೊತೆಯಾದರು…. ಕಿರಿಯ ಮಗಳು ಲಲ್ಲೇಶ್ವರಿತಾಯಿ ಮೂಗಿ(ಲೇಖಕಿ)  ಜಯದೇವಿ ತಾಯಿಯವರ ವ್ಯಕ್ತಿತ್ವವನ್ನು ಕಂಡ ಶಂಕರಣ್ಣನವರು, “ಧೈರ್ಯ, ನಿಷ್ಠೆ ಮತ್ತು ಭಕ್ತಿ ಎಲ್ಲವು ರೂಪ ತಾಳಿದರೆ ಅದು ಜಯದೇವಿ ತಾಯಿಯವರ ರೂಪವಾಗುತ್ತದೆ” ಎಂದು ಪ್ರಶಂಸಿಸಿದ್ದರೆ ಅಚ್ಚರಿಯೇನಿಲ್ಲ. ತಾಯಿಯಲಿ ಮೂಡುತ್ತಿದ್ದ ಆತಂಕವನ್ನು ಅರ್ಥಮಾಡಿಕೊಂಡು, ಅವರ ಮನಸ್ಸಿಗೆ ಧೈರ್ಯದ ಮಾತುಗಳನ್ನು ತುಂಬುತ್ತಿದ್ದರು. ತಾಯಿಯ ಕನಸುಗಳು ಕುಸಿಯದಂತೆ, ಅವರ ಸಂಕಲ್ಪಗಳು ಮಂಕಾಗದಂತೆ ಎಚ್ಚರಿಕೆಯಿಂದ ಕಾಪಾಡುತ್ತಿದ್ದರು.ಸಾಹಿತ್ಯ ಸೇವೆಯಲ್ಲಿ ಜಯದೇವಿ ತಾಯಿಯವರು ಬೆಳಗುತ್ತಿದ್ದ ದೀಪವಾದರೆ, ಆ ದೀಪಕ್ಕೆ ಎಣ್ಣೆ ಸುರಿದು ಬೆಳಕು ಕಡಿಮೆಯಾಗದಂತೆ ನೋಡಿಕೊಂಡವರು… ಶಂಕರಣ್ಣನವರು.  ಅವರ ಹಿರಿಯ ಮಗನಂತೆ ತಾಯಿಯ ಬರಹಗಳು, ವಿಚಾರಗಳು, ಸಮಾಜಮುಖಿ ಚಿಂತನೆಗಳು ಜನರಿಗೆ ತಲುಪಲು ಬೇಕಾದ ಎಲ್ಲ ಸಹಕಾರವನ್ನು ನೀಡುತ್ತಿದ್ದರು. ತಾಯಿಯ ಪ್ರತಿಯೊಂದು ಸಾಧನೆಯನ್ನು ತಮ್ಮದೇ ಸಾಧನೆಯೆಂದು ಭಾವಿಸಿ ಹೆಮ್ಮೆಪಡುತ್ತಿದ್ದರು.ಆಸ್ತಿಯ ಸಂರಕ್ಷಣೆಯ ವಿಷಯದಲ್ಲಿಯೂ ಅವರ ಪಾತ್ರ ಅಪಾರ. ಪೂರ್ವಜರು ಕಟ್ಟಿದ ಆಸ್ತಿಯನ್ನು  ಸಂಪತ್ತು……..ಅದು ಕುಟುಂಬದ ಗೌರವ ಮತ್ತು ಪರಂಪರೆಯ ಸಂಕೇತವೆಂದು ಭಾವಿಸಿ ಅತ್ಯಂತ ಪ್ರಾಮಾಣಿಕತೆಯಿಂದ ಕಾಪಾಡಿದರು. ಅನೇಕ ಸವಾಲುಗಳು ಎದುರಾದರೂ ಧೈರ್ಯ ಕಳೆದುಕೊಳ್ಳದೆ, ವಿವೇಕದಿಂದ ಎಲ್ಲವನ್ನು ನಿರ್ವಹಿಸಿದರು. ತಾಯಿಯ  ಮಾತಿಗೆ ಓಗೊಟ್ಟು, ಬಂದ ಸಂಕಟಗಳಿಗೆ ಪರಿಹಾರವಾಗಿ ನಿಂತ ಮಗನಾದರು.ಜಯದೇವಿ ತಾಯಿಯವರ ಹೆಜ್ಜೆ ಗುರುತುಗಳು ಸಮಾಜದಲ್ಲಿ ಉಳಿಯಬೇಕೆಂಬ ಉದ್ದೇಶದಿಂದ ತಮ್ಮ ಶಕ್ತಿ, ಸಮಯ ಮತ್ತು ಜೀವನವನ್ನೇ ಸಮರ್ಪಿಸಿದ ಅಪರೂಪದ ಪಡೆದ ಪುತ್ರರಾದರು ಡಾ. ಶಂಕರಣ್ಣ ಮೂಗಿಯವರು. ತಾಯಿಯ ಜೀವನದ ರಥ ಎರಡು ಚಕ್ರಗಳ ಮೇಲೆ ಸಾಗಿದ್ದರೆ, ಒಂದು ಚಕ್ರ ತಾಯಿಯ ಅಚಲ ಸಂಕಲ್ಪವಾಗಿದ್ದರೆ, ಮತ್ತೊಂದು ಚಕ್ರ ಅವರ ಪಡೆದ ಮಗನ ನಿಸ್ವಾರ್ಥ ಸಹಕಾರವಾಗಿತ್ತು.ತಾಯಿಯ ಯಶಸ್ಸಿನ ಹಿಂದೆ ಕಾಣದ ಶಕ್ತಿಯಾಗಿ, ಮಾತಿಲ್ಲದ ತ್ಯಾಗಿಯಾಗಿ, ಅಚಲ ಬೆಂಬಲವಾಗಿ ನಿಂತ ಅವರ ಪಾತ್ರ ಸದಾ ಸ್ಮರಣೀಯ.ಅವರಂತಹ ಅಪರೂಪದ ವ್ಯಕ್ತಿ ದೊರೆತದ್ದು ನನ್ನ ಪುಣ್ಯ ವೆಂದು,…..ತಾಯಿಯವರು ಹೇಳು ವರು…ಅಂತಹ ತಾಯಿಗೆ ಸೇವೆ ಸಲ್ಲಿಸುವುದು ನನ್ನ ಭಾಗ್ಯ ಎಂದು ಶಂಕರಣ್ಣನವರು ಹೇಳುವರು…..!!! ಶಂಕರಣ್ಣನವರ ಒಡನಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಅವರ ಸರಳತೆ, ಸಜ್ಜನಿಕೆ, ಹಿರಿಯರ ಮೇಲಿನ ಗೌರವ, ಸಮಾಜದ ಬಗ್ಗೆ ಇರುವ ಕಾಳಜಿ ಹಾಗೂ ಕುಟುಂಬದ ಜವಾಬ್ದಾರಿ ವಹಿಸಿಕೊಳ್ಳವ ಗುಣಗಳನ್ನು ಜಯದೇವಿ ತಾಯಿಯವರು ಹತ್ತಿರದಿಂದ ಗಮನಿಸುತ್ತಿದ್ದರು.ಅವರ ಮಾತಿನಲ್ಲಿ ವಿನಯವಿತ್ತು, ನಡವಳಿಕೆಯಲ್ಲಿ ಸಂಸ್ಕಾರವಿತ್ತು, ಹೃದಯದಲ್ಲಿ ಸಾಹಿತ್ಯ ಪ್ರೇಮವಿತು.. , ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿಪ್ರಖಂಡ ಪಾಂಡಿತ್ಯವನ್ನು ಹೊಂದಿದ್ದರು ಇಂತಹ ಗುಣವಂತ ಯುವಕನನ್ನು ಕಂಡ ತಾಯಿಯವರ ಮನಸ್ಸಿನಲ್ಲಿ ಒಂದು ಆಶಯ ಮೂಡಿತು.ಒಂದು ದಿನ ಪ್ರೀತಿಯಿಂದ ಶಂಕರಣ್ಣನವರನ್ನು ಕರೆದು, “ನನ್ನ ಕಿರಿಯ ಮಗಳು ಲಲ್ಲೇಶ್ವರಿಯನ್ನು ನಿಮಗೆ ಕೊಡಲು ನನ್ನ ಮನಸ್ಸಿದೆ. ನೀವು ನಮ್ಮ ಕುಟುಂಬದ ಮಗನಾಗಬೇಕು” ಎಂದು ಹೇಳಿದರು. ತಾಯಿಯವರ ಮಾತು ಕೇಳಿದ ಶಂಕರಣ್ಣನವರ ಮುಖದಲ್ಲಿ ಸಂತಸದ ಹೊಳಪು ಮೂಡಿತು. ಅದು ಅವರಿಗೆ ಸಿಕ್ಕ ಅತ್ಯಂತ ದೊಡ್ಡ ಆಶೀರ್ವಾದವಾಗಿತ್ತು. ತಾಯಿಯವರು ಈ ವಿಷಯವನ್ನು ಲಲ್ಲೇಶ್ವರಿ ತಾಯಿಯವರ ಮುಂದೆ ಹೇಳಿದಾಗ, ತಾಯಿಯ ಮಾತೇ ದೇವರ ಮಾತು ಎಂದು ಭಾವಿಸುತ್ತಿದ್ದ ಲಲ್ಲೇಶ್ವರಿ ತಾಯಿಯವರು ವಿನಮ್ರವಾಗಿ ತಲೆಬಾಗಿದರು.*ನುಡಿಸಿದಂತೆ ನುಡೆವೆನ| ನಡಿಸಿದಂತೆ ನಡೆವೆನನೀ ಇರಿಸಿದಂತೆ ಇರುವೆನ -ನನ್ನವ್ವನಿನ್ನ ಪಾದದ ಧೂಳಿಯಾಗಿ ಹಾರೈನ||* ಎನ್ನುತ ತಮ್ಮ ಜೀವನದ ನಿರ್ಧಾರವನ್ನು ತಾಯಿಯವರ ಕೈಯಲ್ಲಿ ಇಟ್ಟಿದ್ದ ಅವರು, “ನೀವು ಹೇಳಿದಂತೆ ಆಗಲಿ ತಾಯಿ” ಎಂದು ಗೌರವದಿಂದ ಒಪ್ಪಿಗೆ ಸೂಚಿಸಿದರು. ಶುಭ ಸುದ್ದಿ ಎರಡು ಕುಟುಂಬಗಳಲ್ಲೂ ಸಂತಸದ ಅಲೆಯನ್ನು ಹರಡಿಸಿತು. ನಂತರ ಬೈಲಹೊಂಗಲದಲ್ಲಿ ಮದುವೆಯ ಸಿದ್ಧತೆಗಳು ಆರಂಭವಾದವು. ಊರಿನ ಬೀದಿಗಳು ಹಬ್ಬದ ವಾತಾವರಣದಿಂದ ಕಂಗೊಳಿಸಿದವು. ಬಂಧು-ಬಳಗ, ಸ್ನೇಹಿತರು, ಶರಣರು, ಭಕ್ತರು ಎಲ್ಲರೂ ಮದುವೆಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದರು. ಮದುವೆಯ ದಿನ ಬೈಲಹೊಂಗಲವೇ ಒಂದು ಪುಣ್ಯಕ್ಷೇತ್ರದಂತೆ ಕಂಗೊಳಿಸುತ್ತಿತ್ತು. ನಾದಸ್ವರದ ಮಧುರ ಸ್ವರಗಳು ಗಾಳಿಯಲ್ಲಿ ತೇಲುತ್ತಿದ್ದವು. ಮಂಗಳ ವಾದ್ಯಗಳ ಘೋಷದ ನಡುವೆ ವಧುವರರು ಕಲ್ಯಾಣ ಮಂಟಪಕ್ಕೆ ಆಗಮಿಸಿದರು. ಲಲ್ಲೇಶ್ವರಿ ತಾಯಿಯವರು ಸಾಂಪ್ರದಾಯಿಕ ವಸ್ತ್ರಾಭರಣಗಳಲ್ಲಿ ಲಕ್ಷ್ಮೀದೇವಿಯಂತೆ ಕಂಗೊಳಿಸುತ್ತಿದ್ದರು. ಶಂಕರಣ್ಣನವರು ಗಂಭೀರತೆ ಮತ್ತು ವಿನಯದ ಪ್ರತಿರೂಪವಾಗಿ ಕಾಣುತ್ತಿದ್ದರು.ಹಿರಿಯರ ಆಶೀರ್ವಾದಗಳ ನಡುವೆ ಮಂಗಳಸೂತ್ರ ಧಾರಣೆ ನಡೆದ ಕ್ಷಣದಲ್ಲಿ ಎಲ್ಲರ ಕಣ್ಣಲ್ಲೂ ಸಂತಸದ  ಮಿನುಗಿತು. ಜಯದೇವಿ ತಾಯಿಯವರ ಹೃದಯವು ಆನಂದದಿಂದ ತುಂಬಿ ತುಳುಕಿತು. ತಮ್ಮ ಮಗಳ ಜೀವನ ಒಬ್ಬ ಸಜ್ಜನನ ಕೈಯಲ್ಲಿ ಸುರಕ್ಷಿತವಾಗಿದೆ ಎಂಬ ಸಮಾಧಾನ ಅವರ ಮುಖದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿತ್ತು.ಆ ಮದುವೆ ಕೇವಲ ಇಬ್ಬರ ಹೃದಯಗಳ…ಎರಡು ಸಂಸ್ಕಾರವಂತ ಕುಟುಂಬಗಳ , ಆದರ್ಶಗಳ ಪವಿತ್ರ ಮಿಲನವಾಗಿತ್ತು. ಬೈಲಹೊಂಗಲದ ಜನರು ಇಂದಿಗೂ ಆ ಕಲ್ಯಾಣ ಮಹೋತ್ಸವವನ್ನು ನೆನಪಿಸಿಕೊಂಡು, “ಅದು ನಿಜವಾಗಿಯೂ ದೇವರ ಅನುಗ್ರಹದಿಂದ ನಡೆದ ದಿವ್ಯ ವಿವಾಹ” ಎಂದು ಭಾವಪೂರ್ಣವಾಗಿ ಹೇಳಿಕೊಳ್ಳುತ್ತಾರೆ. ಅತಿಥಿಗಳ ಆತಿಥ್ಯವೂ ಅಷ್ಟೇ ಅದ್ದೂರಿಯಾಗಿತ್ತು. ಬಂದ ಪ್ರತಿಯೊಬ್ಬರನ್ನೂ ಗೌರವದಿಂದ ಸ್ವಾಗತಿಸಿ, ಪ್ರೀತಿಯಿಂದ ಊಟೋಪಚಾರ ಮಾಡಲಾಯಿತು. ಮದುವೆ ಮುಗಿದ ನಂತರವೂ ಹಲವಾರು ದಿನಗಳ ಕಾಲ ಬೈಲಹೊಂಗಲದ ಜನರು ಆ ವಿವಾಹದ ಬಗ್ಗೆ ಮಾತನಾಡುತ್ತಲೇ ಇದ್ದರು.“ಮದುವೆ ಅಂದರೆ ಹೀಗೆ ಇರಬೇಕು! ನಾವು ಇಂತಹ ವಿಜೃಂಭಣೆಯ ಕಲ್ಯಾಣವನ್ನು ಜೀವನದಲ್ಲಿ ನೋಡಿಲ್ಲ!” ಎಂದು ಜನರು ಹೇಳಿಕೊಳ್ಳುತ್ತಿದ್ದರು. ಆ ದಿನವನ್ನು ಕಂಡವರು ಇಂದಿಗೂ ನೆನಪಿಸಿಕೊಂಡಾಗ ಅವರ ಕಣ್ಮುಂದೆ ಹೂವಿನ ತೋರಣಗಳಿಂದ ಸಿಂಗರಿಸಲ್ಪಟ್ಟ ಬೈಲಹೊಂಗಲದ ಓಣಿ ಓಣಿಯ ತುಂಬಾ ಕಟ್ಟಿದ ಹಂದರಗಳ ನೆನಪು ಬಾರದೇ ಇರದು.. ಸತಿಪತಿಗಳ ಪವಿತ್ರ ಬಂಧವನ್ನು  ಗೌರವಿಸಿ,   ಪ್ರೀತಿ, ಕಾಳಜಿ ಮತ್ತು ಸೇವಾಭಾವದಿಂದ ನಡೆದುಕೊಂಡರು. ಸುಖದಲ್ಲೂ ದುಃಖದಲ್ಲೂ ಅವರ ನೆರಳಾಗಿ ನಿಂತು, ಪ್ರತಿಯೊಂದು ಹೆಜ್ಜೆಯಲ್ಲಿಯೂ ಜೊತೆಗಿದ್ದು, ಆದರ್ಶ ದಂಪತಿಗಳಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಿದರು.ಅವರಿಬ್ಬರ ಜೀವನವು ಪರಸ್ಪರ ತ್ಯಾಗ ಮತ್ತು ಧರ್ಮನಿಷ್ಠೆಯ ಪ್ರತೀಕವಾಗಿತ್ತು.ಜೀವನದ ಎಲ್ಲಾ ಏಳುಬೀಳುಗಳನ್ನು ಕೈಹಿಡಿದು ದಾಟಿದರು.ಅತ್ಯಂತ ವೈಶಿಷ್ಟ ಪೂರ್ಣ ಜೀವನವು ಇವರದಾಗಿತ್ತುಶಂಕ್ರಣ್ಣ ಮೂಗಿ ಹಾಗೂ ಲ‌ಲ್ಲೇಶ್ವರಿ ತಾಯಿಯವರು ಜೀವನದ ಒಂದು ಹಂತದಲ್ಲಿ ಸಂಸಾರದ ಬಂಧನಗಳನ್ನು ಮೀರಿ ಸನ್ಯಾಸತ್ವವನ್ನು ಸ್ವೀಕರಿಸಿದರು. ಆ ಬಳಿಕ ಅವರು ದಾಂಪತ್ಯ ಜೀವನದ ಭಾವನೆಗಿಂತಲೂ ಉನ್ನತವಾದ ಆಧ್ಯಾತ್ಮಿಕ ಸಂಬಂಧವನ್ನು ಅಳವಡಿಸಿಕೊಂಡರು. ಒಬ್ಬರನ್ನೊಬ್ಬರು  ತಂದೆ-ತಾಯಿಯರಂತೆ ಗೌರವದಿಂದ ಕಾಣುತ್ತಿದ್ದರು. ಲಲ್ಲೇಶ್ವರಿ ತಾಯಿಯವರು ಕೈಯಲ್ಲಿ ರುದ್ರಾಕ್ಷಿ ಕಂಕಣವನ್ನು ಕಟ್ಟಿಕೊಂಡರು.ಸಂಬಂಧದಲ್ಲಿ ಮೋಹ ಮರೆತು ಮಮತೆ, ನಿಸ್ವಾರ್ಥ ಸೇವೆಯಲಿ ತೊಡಗಿದರು. ಪರಸ್ಪರರ ಯೋಗಕ್ಷೇಮವನ್ನು ಕಾಪಾಡುತ್ತ, ತಾಯಿ ಸೇವೆಗಾಗಿ ತಮ್ಮ ಬದುಕನ್ನು ಸಮರ್ಪಿಸಿದರು.  ಅವರ ಪ್ರತಿಯೊಂದು ಹೆಜ್ಜೆಯೂ ಶರಣ ತತ್ವದ ಪ್ರತಿಬಿಂಬವಾಗಿತ್ತು.ಸನ್ಯಾಸ ಮಾರ್ಗದಲ್ಲಿ ನಡೆದು, ಭಕ್ತಿ, ಜ್ಞಾನ ಮತ್ತು ಸೇವೆಯ ಮೂಲಕ ತಮ್ಮ ಅಂತರಂಗವನ್ನು ಶುದ್ಧಗೊಳಿಸಿಕೊಂಡರು. ಅಂತಿಮವಾಗಿ ನಿರ್ವಾಣದತ್ತ ಪಯಣ ಬೆಳೆಸಿದರು. ಅವರ ಜೀವನವು ಸಂಸಾರಿಕ ಮಿತಿಯನ್ನು ದಾಟಿ, ಆತ್ಮಮದ ಶ್ರೇಷ್ಠ ಮಟ್ಟವನ್ನು ತಲುಪಿದ ಉದಾತ್ತ ಉದಾಹರಣೆಯಾಗಿದೆ. ತಾಯಿಯನ್ನೇ  ಗುರುವಾಗಿ ಸ್ವೀಕರಿಸಿ  ಶರಣರ ವೈರಾಗ್ಯವನ್ನು ಕಂಡ ಮಹಾತ್ಮರಾದರು” ಎಂದು ಭಕ್ತಿಭಾವದಿಂದ ಸ್ಮರಿಸ ಬಹುದಾಗಿದೆ.ಅವರ ಜೀವನಗಾಥೆ ಇಂದಿಗೂ ಸೇವೆ, ತ್ಯಾಗ ಮತ್ತು ಆಧ್ಯಾತ್ಮಿಕ ಸಾಧನೆಯ ಆದರ್ಶವಾಗಿ ಉಳಿದಿದೆ. *ಸತಿಪತಿಯ ಭಾವ| ತೊರೆದು ನಿರತಸತೀಶರಣ ಲಿಂಗಪತಿ ಬಾವದಿ- ರಮಿಸಿಭಕ್ತಿ ಭವನದ ವಾಸವಾದೆವು|| * ಎನ್ನುತ ನಂತರ ಬಸವಕಲ್ಯಾಣದಲ್ಲಿ ಜಯದೇವಿ ತಾಯಿಯವರೊಂದಿಗೆ ಶರಣರು ನಡೆದಾಡಿದ ಭೂಮಿಯಲ್ಲಿ ಅವರು ವಾಸವಿದ್ದು, ತಮ್ಮ ಆಧ್ಯಾತ್ಮಿಕ ಮತ್ತು ಸಾಹಿತ್ಯ ಸೇವೆಯನ್ನು ಮುಂದುವರಿಸಿದರು. *ಕರೆದ್ಧ್ಯೊದರು ಕೈಹಿಡಿದು| ಅರಮನೆ ಆಧ್ಯಾತ್ಮಚಿರ ಪರ ಪದವೀಯ ಅರಿತು ನೀಡಿ-ಪತಿದೇವ ಶರಣರ ನಿಜ ನಿವಾಸಕ್ಕೆ ಕರೆದರು ||* ಗಂಡ ಹೆಂಡಂದಿರು ಇಬ್ಬರು ಸನ್ಯಾಸತ್ವವನ್ನು ಪಡೆದು ಬಸವಭೂಮಿಯಲ್ಲಿ ನೆಲೆಸಿದರು ಸತಿಪತಿಗಳ ಜೀವನದ ಕೊನೆಯ ಅಧ್ಯಾಯವೂ ಅವರ ಬದುಕಿನಂತೆಯೇ ಸೇವೆ, ಭಕ್ತಿ ಮತ್ತು ತ್ಯಾಗದ ಸುಗಂಧದಿಂದ ತುಂಬಿಕೊಂಡಿತ್ತು. ಕಿರಿ ಮಗಳು ಮತ್ತು ಅಳಿಯನೊಂದಿಗೆ ಜಯದೇವಿ ತಾಯಿಯವರು ಅನೇಕ ವರ್ಷಗಳ ಕಾಲ ಸಮಾಜಸೇವೆ, ಶರಣ ಸಂಸ್ಕೃತಿಯ ಪ್ರಚಾರ ಮತ್ತು ಮಾನವೀಯ ಮೌಲ್ಯಗಳ ಬಿತ್ತನೆ ಮಾಡುತ್ತಾ ಬದುಕಿದರು.ಬಸವಣ್ಣನವರ ಪವಿತ್ರ ಭೂಮಿಯಾದ ಬಸವಕಲ್ಯಾಣದಲ್ಲಿ ಈ ಮಹನೀಯರು ತಮ್ಮ ಉಸಿರಿನವರೆಗೂ ಧರ್ಮದ ದಾರಿಯಲ್ಲಿ ನಡೆದರು. ಕಾಲಚಕ್ರದ ನಿಯಮದಂತೆ ದೇಹವು ಮಣ್ಣಿನಲ್ಲಿ ಲೀನವಾದರೂ, ಅವರು ಬಿತ್ತಿದ ಆದರ್ಶಗಳು ಇಂದಿಗೂ ಜೀವಂತವಾಗಿವೆ. ಬಸವಣ್ಣನವರ ಪಾವನ ಮಣ್ಣಿನಲ್ಲಿ ಈ ಮೂವರು ಮಹಾತ್ಮರು ಮಣ್ಣಲ್ಲಿ ಮಣ್ಣಾಗಿ, ಶಿವನಲ್ಲಿ ಶಿವವಾಗಿ ಲೀನರಾದರು. ಬಸವಕಲ್ಯಾಣದಲ್ಲಿ ಅವರ ಸಮಾಧಿಗಳನ್ನು ಕಾಣಬಹುದಾಗಿದೆ.ಬಸವಕಲ್ಯಾಣದಲ್ಲಿ ಅವರ ಜೀವನದ ನೆನಪುಗಳನ್ನು ಸಾರುವ ಮೂರು ಸಮಾಧಿಗಳು ಭಕ್ತರ ಕಣ್ಮನ ಸೆಳೆಯುತ್ತವೆ. ಆ ಸಮಾಧಿಗಳು  ಅವು ಅವರ ತ್ಯಾಗ, ಸೇವೆ, ಶರಣ ಸಂಸ್ಕೃತಿ ಮತ್ತು ಮಾನವೀಯ ಮೌಲ್ಯಗಳ ಜೀವಂತ ಸಾಕ್ಷಿಗಳಾಗಿವೆ.ಅಲ್ಲಿಗೆ ಭೇಟಿ ನೀಡುವ ಪ್ರತಿಯೊಬ್ಬರ

Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಶರಣರ ಸಂಗಾತಿ ಸಾವಿಲ್ಲದ ಶರಣರು ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಶಿವಶರಣ ಮಾದಾರ ಚೆನ್ನಯ್ಯನವರು ಹನ್ನೆರಡನೆಯ ಶತಮಾನದಲ್ಲಿ ನಡೆದ ಅಭೂತಪೂರ್ವ ಕ್ರಾಂತಿ ವರ್ಗ ವರ್ಣ ಲಿಂಗ ಬೇಧ ಆಶ್ರಮ ರಹಿತ ಸಾಂಸ್ಥಿಕರಣವಲ್ಲದ ಜಗತ್ತಿನ ಸರ್ವ ಶ್ರೇಷ್ಠ ಕ್ರಾಂತಿಯಾಗಿದೆ. ಬಸವಣ್ಣನವರ ನೇತೃತ್ವದಲ್ಲಿ ನಡೆದ ಈ ಆಂದೋಲನದಲ್ಲಿ ಸಮಾಜದ ಅತ್ಯಂತ ಕಟ್ಟ ಕಡೆಯ ಮಾದಿಗ ಸಮುದಾಯದ ಚೆನ್ನಯ್ಯನು ಪಾಲ್ಗೊಂಡಿದ್ದನು. ಶಿವಶರಣ ಮಾದಾರ ಚೆನ್ನಯ್ಯನವರು 12ನೆಯ ಶತಮಾನದ ಅತ್ಯಂತ ಪ್ರಮುಖ ಶಿವಶರಣ, ಕಾಯಕಯೋಗಿ ಹಾಗೂ ಕನ್ನಡ ಸಾಹಿತ್ಯದ ಆದ್ಯ ವಚನಕಾರರಾಗಿದ್ದಾರೆ. ಭಕ್ತಿ ಮತ್ತು ಕಾಯಕ ನಿಷ್ಠೆಗೆ ಮೇರು ಶಿಖರವಾಗಿದ್ದ ಇವರನ್ನು ಜಗದ್ಗುರು ಬಸವಣ್ಣನವರೇ ತಮ್ಮ ವಚನಗಳಲ್ಲಿ ಅತ್ಯಂತ ಪೂಜ್ಯಭಾವದಿಂದ ಕೊಂಡಾಡಿದ್ದಾರೆ.  ಮಾದಾರ ಚೆನ್ನಯ್ಯನವರ ಜೀವನ ಚರಿತ್ರೆಯ ಸಮಗ್ರ ವಿವರ ಇಲ್ಲಿದೆ: ಪರಿಚಯ ಮತ್ತು ಹಿನ್ನೆಲೆ ಕಲ್ಯಾಣಕ್ಕೆ ಬಂದ ಮೇಲೆ ಮಾದಾರ ಚೆನ್ನಯ್ಯ ಎಲ್ಲಾ ಶರಣರಿಗೂ ಅಂಬಲಿ ಮಾಡಿ ಕೊಡುತ್ತಿದ್ದರು. ಭಕ್ತಿ ಮತ್ತು ಶಿವನಿಗೆ ಅಂಬಲಿ ಉಣಿಸಿದ ಪ್ರಸಂಗ ಕಾಲ್ಪನಿಕ ಕಥೆ  ಚೆನ್ನಯ್ಯನವರು ಕಾಡಿಗೆ ಹೋಗಿ ಹುಲ್ಲು ಕೊಯ್ಯುವ ಕಾಯಕದಲ್ಲಿ ತೊಡಗಿದ್ದಾಗಲೂ ಇಷ್ಟಲಿಂಗ ಧ್ಯಾನದಲ್ಲಿ ಮಗ್ನರಾಗಿರುತ್ತಿದ್ದರು. ಅವರ ನಿಷ್ಕಲ್ಮಶ ಭಕ್ತಿಗೆ ಮೆಚ್ಚಿದ ಶಿವನು ಪ್ರತ್ಯಕ್ಷನಾಗಿ, ಚೆನ್ನಯ್ಯನ ಪತ್ನಿ ತಯಾರಿಸಿದ ಅಂಬಲಿ (ರಾಗಿ ಕೂಳು) ಯನ್ನು ಪ್ರತಿದಿನ ಬಂದು ಸ್ವೀಕರಿಸುತ್ತಿದ್ದನು ಎನ್ನುವ ಪುರಾಣ  ಕಾವ್ಯಗಳು ವರ್ಣಿಸುತ್ತವೆ. ಆದರೆ ಇವುಗಳನ್ನು ತಾತ್ವಿಕ ಚಿಂತನೆಗೆ ಚೆನ್ನಯ್ಯನ ಬದ್ಧತೆ ಸೈದ್ಧಾಂತಿಕ ಸ್ಪಷ್ಟತೆ ನಿಲುವುಗಳ ಬಗ್ಗೆ ಆಶಯ ಎಂದು ಪರಿಗಣಿಸ ಬೇಕು. ಒಮ್ಮೆ ಚೋಳರಾಜನು ತಾನು ಸಿದ್ಧಪಡಿಸಿದ ಮೃಷ್ಟಾನ್ನ ಭೋಜನವನ್ನು ಶಿವನು ಸ್ವೀಕರಿಸದಿದ್ದಾಗ, ಶಿವನಿಗೆ ಕಾರಣ ಕೇಳಿದನು. ಆಗ ಶಿವನು, “ನಾನು ಪ್ರತಿದಿನ ನನ್ನ ಭಕ್ತ ಚೆನ್ನಯ್ಯನ ಅಂಬಲಿಯನ್ನು ಸವಿಯುತ್ತಿದ್ದೇನೆ, ನಿನ್ನ ರಾಜ ವೈಭವದ ಊಟಕ್ಕಿಂತ ಅವನ ಪ್ರೀತಿಯ ಕೂಳೇ ನನಗೆ ಶ್ರೇಷ್ಠ” ಎಂದು ಹೇಳಿದನು. ಈ ಮೂಲಕ ಶಿವನು ಜಗತ್ತಿಗೆ ಚೆನ್ನಯ್ಯನ ಗುಪ್ತ ಭಕ್ತಿಯನ್ನು ಪ್ರಕಟಪಡಿಸಿದನು ಎಂಬ ಪವಾಡ ಕಥೆಗಳಿವೆ. ಕಲ್ಯಾಣ ಕ್ರಾಂತಿ ಮತ್ತು ಬಸವಣ್ಣನವರ ಒಡನಾಟ ಬಸವಣ್ಣನವರ ಸಾಮಾಜಿಕ ಕ್ರಾಂತಿ ಮತ್ತು ಶರಣರ ಅನುಭವ ಮಂಟಪದ ಚಿಂತನೆಗಳಿಂದ ಆಕರ್ಷಿತರಾದ ಮಾದಾರ ಚೆನ್ನಯ್ಯನವರು ಕಲ್ಯಾಣಕ್ಕೆ (ಇಂದಿನ ಬಸವಕಲ್ಯಾಣ) ಬಂದರು. ಅಲ್ಲಿ ತಮ್ಮ ಮೂಲ ಕಾಯಕವಾದ ಪಾದರಕ್ಷೆ (ಚರ್ಮಗಾರಿಕೆ) ತಯಾರಿಕೆಯನ್ನು ಮುಂದುವರಿಸಿದರು. ಬಸವಣ್ಣನವರು ತಮ್ಮ ವಚನಗಳಲ್ಲಿ “ಎನ್ನ ದೆಸೆಯಿಂದ ಮಾದಾರ ಚೆನ್ನಯ್ಯನ ಮನೆಯು …” ಎಂದು ಹೇಳಿಕೊಳ್ಳುತ್ತಾ, ಚೆನ್ನಯ್ಯನವರನ್ನು ತಮಗಿಂತ ಶ್ರೇಷ್ಠ ಭಕ್ತರೆಂದು ಗೌರವಿಸುತ್ತಿದ್ದರು. ಮಾದಾರ ಚೆನ್ನಯ್ಯನ ಮನೆಯಲ್ಲಿ ಉಂಡ ಕಾರಣ ವೇದ ನಡುನಡುಗಿತ್ತು ಎಂದು ಹೇಳಿದ್ದಾರೆ ಬಸವಣ್ಣನವರು. ವಚನ ಸಾಹಿತ್ಯ ಮತ್ತು ವೈಚಾರಿಕತೆ ಸಮಾಜದ ಅಸಮಾನತೆ ಹಾಗೂ ಮೌಢ್ಯತೆಯ ವಿರುದ್ಧ ಧ್ವನಿ ಎತ್ತಿದ ಮಾದಾರ ಚೆನ್ನಯ್ಯನವರ ಪ್ರಮುಖ ವಚನಗಳು ಮತ್ತು ಅವುಗಳ ಭಾವಾರ್ಥಗಳು ಇಲ್ಲಿವೆ: 1. ನಡೆ ಮತ್ತು ನುಡಿಯ ಪ್ರಾಮುಖ್ಯತೆ (ಆಚಾರವೇ ಕುಲ) “ಆಚಾರವೆ ಕುಲ, ಅನಾಚಾರವೆ ಹೊಲೆ” ಎಂಬ ವಚನದಲ್ಲಿ, ಕೇವಲ ಒಳ್ಳೆಯ ಮಾತುಗಳನ್ನಾಡಿ ಕೆಟ್ಟ ನಡವಳಿಕೆ ಹೊಂದಿದ್ದರೆ ಅದುವೇ ‘ಹೊಲೆ’ (ಮೈಲಿಗೆ) ಎಂದು ಚೆನ್ನಯ್ಯನವರು ಸ್ಪಷ್ಟಪಡಿಸುತ್ತಾರೆ. ಕಾಯಕನಿಷ್ಠೆಯು ನಡೆ-ನುಡಿಯ ಸಮಾನತೆಯಲ್ಲಿದೆ ಎಂದು ಪ್ರತಿಪಾದಿಸಿ, ಆಚಾರವೇ ನಿಜವಾದ ಶ್ರೇಷ್ಠ ಕುಲ ಎಂದು ಒತ್ತಿ ಹೇಳುತ್ತಾರೆ.  2. ಸಾಮಾಜಿಕ ಸಮಾನತೆ ಮತ್ತು ಜಾತಿ ಪದ್ಧತಿಯ ಖಂಡನೆ ಸಮಾಜದಲ್ಲಿನ ಹದಿನೆಂಟು ಜಾತಿಗಳ ಭೇದವನ್ನು ತಳ್ಳಿಹಾಕುವ ಅವರು, ಮನುಷ್ಯರ ನಡುವಿನ ಅಸಮಾನತೆಯನ್ನು ಖಂಡಿಸುತ್ತಾರೆ. ಹುಟ್ಟಿನಿಂದ ಯಾರೂ ಕೀಳು ಅಥವಾ ಮೇಲಲ್ಲ, ಕಾಯಕದ ಆಧಾರದ ಮೇಲೆ ಕೇವಲ ಕೆಲಸದ ವಿಂಗಡಣೆಯಷ್ಟೇ ನಡೆದಿದೆ. ಸತ್ಯ ಮತ್ತು ಬ್ರಹ್ಮವನ್ನು ಅರಿತವನೇ ನಿಜವಾದ ಬ್ರಾಹ್ಮಣ ಎಂಬ ವಿಚಾರವನ್ನು ಇವರು ವಚನಗಳಲ್ಲಿ ಮಂಡಿಸಿದ್ದಾರೆ.  3. ಬಾಹ್ಯ ಪೂಜೆ ಮತ್ತು ಆತ್ಮಜ್ಞಾನ ದೇಹವಿರುವ ತನಕ ಕರ್ಮ-ಪೂಜೆಗಳು ಮುಖ್ಯವಾದರೂ, ನಿಜವಾದ ಮುಕ್ತಿ ಸಿಗುವುದು ಬಾಹ್ಯ ಕ್ರಿಯೆಗಳಿಂದಲೋ ಅಥವಾ ಆತ್ಮಜ್ಞಾನದಿಂದಲೋ ಎಂಬ ಜಿಜ್ಞಾಸೆಯನ್ನು ವಚನಗಳಲ್ಲಿ ವ್ಯಕ್ತಪಡಿಸುತ್ತಾರೆ. ಕಾಯದ ಕರ್ಮಕ್ಕಿಂತ ಆತ್ಮಜ್ಞಾನವೇ ಮುಖ್ಯ ಎಂಬುದನ್ನು ಒತ್ತಿಹೇಳಿ, ಭಕ್ತಿಯ ಮಾರ್ಗವನ್ನು ಪ್ರಾರ್ಥಿಸುತ್ತಾರೆ.  ವಚನಗಳ ವೈಶಿಷ್ಟ್ಯ: ಇವರ ಸಮಾಧಿ ಚಾಮರಾಜನಗರ ಜಿಲ್ಲೆಯ ತಮಿಳುನಾಡಿಗೆ ಅಂಟಿಕೊಂಡ ಕುರುಬಗಟ್ಟಿಯಲ್ಲಿ ಕಾಣ ಬಹುದು ಕರ್ನಾಟಕ ಸರ್ಕಾರವು ಇವರ ಕಾಯಕ ನಿಷ್ಠೆ ಮತ್ತು ಸಮಾಜ ಸುಧಾರಣೆಯ ನೆನಪಿಗಾಗಿ ಪ್ರತಿ ವರ್ಷ ಮಾದಾರ ಚೆನ್ನಯ್ಯ ಜಯಂತಿಯನ್ನು ಆಚರಿಸುತ್ತದೆ. ______________________________________ ಡಾ ಶಶಿಕಾಂತ ಪಟ್ಟಣ ರಾಮದುರ್ಗ ಪುಣೆ 

Read Post »

You cannot copy content of this page

Scroll to Top