ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-127 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ತರಗತಿಗೆ ತಡವಾಗಿ ಹೋದ ಮಗಳು ತನ್ನನ್ನು ಅಪ್ಪಿಕೊಂಡ ಮಗಳ ತಲೆಯನ್ನು ನೇವರಿಸುತ್ತಾ…. ಏನಾಯ್ತು ಮಗಳೇ, ಇಷ್ಟೊಂದು ಸಂತೋಷದಲ್ಲಿರುವೆ? … ಎಂದು ಸುಮತಿ ಕೇಳಲು,…. “ಅಮ್ಮಾ …ನಿನಗೆ ಇನ್ನೂ ಉತ್ತಮ ಮಟ್ಟದ ಚಿಕಿತ್ಸೆಯನ್ನು ಕೊಡಿಸಹುದೆಂದು ಡಾಕ್ಟರ್ ಹೇಳಿದ್ದಾರೆ….. ನಾವು ಆದಷ್ಟು ಬೇಗ ಬೆಂಗಳೂರಿಗೆ ಹೋಗೋಣ…. ಅಲ್ಲಿನ ಕಿಡ್ನಿ ಫೌಂಡೇಶನ್ ಗೆ ನಿನ್ನನ್ನು ಕರೆದುಕೊಂಡು ಹೋಗುತ್ತಿದ್ದೇವೆ”….ಎಂದು ಮಗಳು ಹೇಳಿದಾಗ…. “ಏನು ಹೇಳುತ್ತಿದ್ದಯಾ? ನಾವು ಬೆಂಗಳೂರಿಗೆ ಹೋಗುವುದೇ?… ಬೆಂಗಳೂರಿಗೆ ಹೋಗಬೇಕಾದರೆ ಹಾಗೂ ಅಲ್ಲಿ ಚಿಕಿತ್ಸೆ ಪಡೆಯಬೇಕಾದರೆ ಹೆಚ್ಚಿನ ಹಣದ ಅಗತ್ಯವಿರುತ್ತದೆ…. ನಮ್ಮಲ್ಲಿ ಅಷ್ಟು ಹಣವಿಲ್ಲ…. ಸುಮ್ಮನೇ ತೊಂದರೆಗಳಿಗೆ ನಮ್ಮನ್ನು ಒಡ್ಡಿಕೊಳ್ಳುವುದು ಬೇಡ”…. ಎಂದು ಸುಮತಿ ಹೇಳಿದಾಗ ಮಗಳು ತಾಯಿಯ ಹಸ್ತವನ್ನು ತನ್ನ ಕರದಲ್ಲಿ ಭದ್ರವಾಗಿ ಹಿಡಿದು….” ಅಮ್ಮಾ …. ನೀನೇನೂ ಚಿಂತಿಸಬೇಡ… ನೀನು ಚಿಕಿತ್ಸೆ ಪಡೆಯುವುದಕ್ಕೆ ತಯಾರಾಗು…. ಬೆಂಗಳೂರಿಗೆ ಹೋಗಲು ನಮಗೆ ಸಹಾಯ ಮಾಡುತ್ತೇವೆ ಎಂದು ಸಣ್ಣ ಸಾಹುಕಾರರು ಮತ್ತು ಅಮ್ಮ ಇಬ್ಬರೂ ಭರವಸೆ ನೀಡಿದ್ದಾರೆ…. ನಾನು ವೈದ್ಯರನ್ನು ಕಂಡು ಈ ಬಗ್ಗೆ ಮಾತನಾಡುತ್ತೇನೆ ಮತ್ತು ನಿನ್ನನ್ನು ಡಿಸ್ಚಾರ್ಜ್ ಮಾಡಲು ವಿನಂತಿಸಿಕೊಳ್ಳುತ್ತೇನೆ…. ಆದಷ್ಟು ಬೇಗ ನಾವು ಬೆಂಗಳೂರಿಗೆ ಹೋಗೋಣ…. ಈ ಬಗ್ಗೆ ತಂಗಿಯ ಜೊತೆಗೂ ಮಾತನಾಡಿದ್ದೇನೆ…ಅವಳು ಸರಿ ಹೋಗಿ ಬನ್ನಿ ನಾನು ಇಲ್ಲಿಯೇ ಇದ್ದು ಅಮ್ಮನ ಪರವಾಗಿ ಶಾಲೆಗೆ ಹೋಗಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುತ್ತೇನೆ ಎಂದು ಹೇಳಿದ್ದಾಳೆ…. ಅಕ್ಕನ ಮನೆಗೆ ಹೋಗಿ, ಬಾವ ನಮ್ಮ ಜೊತೆಗೆ ಬರುವಂತೆ ವಿನಂತಿಸಿಕೊಳ್ಳುತ್ತೇನೆ…. ಖಂಡಿತ ಅವರು ಒಪ್ಪುತ್ತಾರೆ”… ಎಂದಳು ಸುಮತಿಗೆ ಸಂತೋಷವಾಯಿತು. ತಾನು ಪ್ರತಿದಿನವೂ ಅನುಭವಿಸುತ್ತಿರುವ ಸಂಕಟ, ನೋವು ಇನ್ನಾದರೂ ಕಡಿಮೆಯಾಗುತ್ತದೆ ಎನ್ನುವ ಸಮಾಧಾನವೂ ಆಯಿತು. ಆದರೆ ಬೆಂಗಳೂರಿಗೆ ಹೋದರೆ ನಾವು ಎಲ್ಲಿ ಉಳಿದುಕೊಳ್ಳುವುದು? ಎನ್ನುವ ಚಿಂತೆ ಕಾಡಿತು…. “ನೀನು ಹೇಳಿದ್ದು ಎಲ್ಲವೂ ಸರಿ ಮಗಳೇ…. ಆದರೆ ಅಲ್ಲಿ ಹೋದರೆ ನಾವು ಎಲ್ಲಿ ಉಳಿದುಕೊಳ್ಳುವುದು?”… ಎಂದು ಸುಮತಿ ಕೇಳಿದಾಗ…. “ಅಮ್ಮಾ …ಬೆಂಗಳೂರಿನಲ್ಲಿ ನಮ್ಮ ಹಿರಿಯ ಮಾವ ( ಸುಮತಿಯ ಹಿರಿಯ ತಮ್ಮ) ಕುಟುಂಬ ಸಮೇತ ಅಲ್ಲಿಯೇ ಇದ್ದಾರಲ್ಲವೇ ?… ಅವರು ಯಾವ ಬಡಾವಣೆಯಲ್ಲಿ ವಾಸವಾಗಿದ್ದಾರೆ ಎನ್ನುವ ಬಗ್ಗೆ ದೊಡ್ಡಮ್ಮನನ್ನು ಕೇಳಿ ತಿಳಿದುಕೊಳ್ಳುತ್ತೇನೆ…. ಅವರ ವಿಳಾಸ ಪಡೆದು ಅಲ್ಲಿಗೆ ಹೋದರಾಯಿತು”…. ಎಂದಳು ಮಗಳು. ಅವಳು ಹೇಳಿದ್ದು ಸರಿ ಎನಿಸಿತು ಸುಮತಿಗೆ. ಹಾಸನದಿಂದ ಬೆಂಗಳೂರಿಗೆ ತನ್ನ ತಮ್ಮ ವರ್ಗವಾಗಿ ಹೋದ ನಂತರ ಸುಮತಿ ಒಮ್ಮೆಯೂ ಅವನನ್ನು ಭೇಟಿಯಾಗಿರಲಿಲ್ಲ. ಹಾಗಾಗಿ ತಮ್ಮನನ್ನು ನೋಡಬಹುದು ಮತ್ತು ಆಸ್ಪತ್ರೆಗೆ ಹೋಗಿ ಬರಲು ನಮಗೆ ಅವನು ಖಂಡಿತಾ ಸಹಾಯ ಮಾಡಿಯೇ ಮಾಡುತ್ತಾನೆ ಎನ್ನುವ ಭರವಸೆಯೂ ಮೂಡಿತು…. “ಸರಿ ಹಾಗೆಯೇ ಆಗಲಿ ಮಗಳೇ…. ನಾಳೆ ಬೆಳಗ್ಗೆ ಡಾಕ್ಟರ್ ರೌಂಡ್ಸ್ ಗೆ ಬರುವಾಗ ಈ ಬಗ್ಗೆ ಅವರೊಂದಿಗೆ ಮಾತನಾಡು”…. ಎಂದು ಸುಮತಿ ಮಗಳಿಗೆ ಹೇಳಿದಳು.  ನಾಳೆ ಬೆಳಗ್ಗೆ ಕಾಲೇಜು ಮುಗಿದ ನಂತರ ದೊಡ್ಡಮ್ಮನ ಮನೆಗೆ ಹೋಗಿ ಮಾವನ ಅಡ್ರೆಸ್ ಪಡೆಯುವುದು ಎಂದು ಆ ಹುಡುಗಿ ತೀರ್ಮಾನಿಸಿದಳು.  ಸಂಜೆ ಆಶ್ರಮಕ್ಕೆ ಹೋಗಿ ಬಂದು ರಾತ್ರಿ ಅಮ್ಮನ ಜೊತೆಗೆ ಆಸ್ಪತ್ರೆಯಲ್ಲಿ ಉಳಿದುಕೊಂಡ ಹುಡುಗಿಗೆ ರಾತ್ರಿಯೆಲ್ಲಾ ನಿದ್ರೆ ಬರಲಿಲ್ಲ. ಒಂದೊಂದೇ ಲೆಕ್ಕಾಚಾರ ಮನದಲ್ಲಿ. ಏನೇನೋ ಆಲೋಚನೆಗಳು ಸುಳಿದು ಅವಳ ನಿದ್ರೆಗೆಡಿಸಿದ್ದವು. ಮೊದಲೇ ತೀರ್ಮಾನಿಸಿದಂತೆ ಬೆಳಗ್ಗೆ ಬೇಗನೆ ಎದ್ದು ಆಶ್ರಮಕ್ಕೆ ಹೋದಳು. ಅಲ್ಲಿ ತನ್ನ ಕೆಲಸಗಳನ್ನೆಲ್ಲಾ ಮುಗಿಸಿ ಕಾಲೇಜಿಗೆ ಹೊರಟಳು. ಅಂದು ಕಾಲೇಜಿಗೆ ತಡವಾಯಿತು. ಗಡಿಬಿಡಿಯಲ್ಲಿ ತರಗತಿಯ ಕಡೆಗೆ ಹೋಗುತ್ತಿದ್ದಾಗ ಅದಾಗಲೇ ಲೆಕ್ಚರರ್ ತರಗತಿಯೊಳಗೆ ಪ್ರವೇಶಿಸಿ ಪಾಠ ಮಾಡುತ್ತಿದ್ದರು. ಹಾಗಾಗಿ ತರಗತಿಯ ಆಚೆಯೇ ನಿಂತಳು ಆ ಹುಡುಗಿ. ಪಕ್ಕದ ತರಗತಿಗೆ ಹೋಗಲು ಬಂದ ಅವಳ ಕಸಿನ್ ತರಗತಿಯ ಹೊರಗೆ ನಿಂತಿರುವ ಅವಳನ್ನು ಕಂಡು ಅವಳ ಬಳಿಗೆ ಬಂದು…. “ಏನಾಯ್ತು?…. ಏಕೆ ಇಷ್ಟು ತಡವಾಗಿ ಕಾಲೇಜಿಗೆ ಬಂದಿರುವೆ?… ಸದಾ ಬೇಗನೆ ಬರುತ್ತಿದ್ದ ನಿನಗೆ ಇಂದು ಏನಾಯಿತು?”… ಎಂದು ಕೇಳಿದ. ಅವಳ ಕಸಿನ್ ಕೂಡ ಇದೇ ಡಿಗ್ರಿ ಕಾಲೇಜಿನಲ್ಲಿ ಹೊಸದಾಗಿ ಲೆಕ್ಚರರ್ ಆಗಿ ಸೇರ್ಪಡೆಗೊಂಡಿದ್ದ.‌ ಕಸಿನ್ ಕೇಳಿದ ಪ್ರಶ್ನೆಗೆ…. “ನನ್ನ ತಾಯಿಯ ಆರೋಗ್ಯ ಸರಿ ಇಲ್ಲ…. ಅವಳನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಿದ್ದೇನೆ”…. ಎಂದು ಹೇಳುತ್ತಾ ಈವರೆಗೂ ನಡೆದ ಎಲ್ಲಾ ವಿಚಾರವನ್ನೂ ಆತನಿಗೆ ತಿಳಿಸಿದಳು. ಅತ್ತೆಗೆ ಹುಷಾರಿಲ್ಲ ಎನ್ನುವುದನ್ನು ಅರಿತ ಆತನ ಮನಸ್ಸಿಗೆ ತುಂಬಾ ಬೇಸರವಾಯಿತು…. “ಒಂದು ಕೆಲಸ ಮಾಡು…. ತರಗತಿಗಳು ಮುಗಿದ ನಂತರ ನೀನು ಆಸ್ಪತ್ರೆಗೆ ಹೋಗುವಾಗ ನನಗಾಗಿ ಸ್ವಲ್ಪ ಹೊತ್ತು ಇಲ್ಲಿಯೇ ಕಾದಿರು…. ನನ್ನ ತರಗತಿ ಮುಗಿದ ನಂತರ ನಾವಿಬ್ಬರೂ ಜೊತೆಯಾಗಿಯೇ ನಮ್ಮ ಮನೆಗೆ ಹೋಗೋಣ…. ಅತ್ತೆಯನ್ನು ನೋಡಲು ನಿನ್ನ ಜೊತೆಗೆ ನಾನೂ ಬರುತ್ತೇನೆ”.. ಎಂದು ಹೇಳಿ, ಅವಳ ತರಗತಿಯ ಬಾಗಿಲನ್ನು ಡಸ್ಟರ್ನಿಂದ ಮೆಲ್ಲಗೆ ತಟ್ಟಿದನು.  ತರಗತಿಯನ್ನು ತೆಗೆದುಕೊಳ್ಳುತ್ತಿದ್ದ ಲೆಕ್ಚರರ್ ಬಾಗಿಲ ಕಡೆಗೆ ನೋಡಿದಾಗ ತನ್ನ ಗೆಳೆಯ ತನ್ನ ತರಗತಿಯ ವಿದ್ಯಾರ್ಥಿನಿಯೊಂದಿಗೆ ಹೊರಗಡೆ ನಿಂತಿರುವುದು ಕಂಡಿತು….” ಒಂದು ನಿಮಿಷ ಇರಿ ಮಕ್ಕಳೇ…. ಇದೋ ಬಂದೆ”…. ಎಂದು ಹೇಳುತ್ತಾ, ಗೆಳೆಯನಿಗೆ ಹಸ್ತಲಾಘವ ಕೊಟ್ಟು,… “ಇದೇನು ಹುಡುಗೀ…, ತರಗತಿಗೆ ಬರದೇ ಇಲ್ಲೇಕೆ ನಿಂತಿರುವೆ? ….. ದಿನವೂ ತರಗತಿಗೆ ಸರಿಯಾದ ಸಮಯದಲ್ಲಿ ಹಾಜರಾಗುತ್ತಿದ್ದ ನಿನಗೆ ಇಂದೇನಾಯಿತು?…. ಎಂದಾಗ ಆತನ ಗೆಳೆಯ ತನ್ನ ಕಸಿನ್ ಬಗ್ಗೆ ಎಲ್ಲಾ ವಿವರವನ್ನೂ ತಿಳಿಸಿದ. ಆ ಲೆಕ್ಚರರ್ ಹುಡುಗಿಯನ್ನು ನೋಡಿ ಅನುಕಂಪದಿಂದ…. “ಸರಿ ಹೋಗು…. ತರಗತಿಯಲ್ಲಿ ಕುಳಿತುಕೋ”… ಎಂದು ಹೇಳಿ, ಮತ್ತೆ ಸಿಗೋಣ ಎಂದು ಗೆಳೆಯನಿಗೆ ಹೇಳುತ್ತಾ ಕೈ ಬೀಸಿ, ಲೆಕ್ಚರರ್ ತರಗತಿಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಲು ಪ್ರಾರಂಭಿಸಿದರು. ಅವಳ ಗೆಳತಿಯರು ಮತ್ತು ಇತರೇ ವಿದ್ಯಾರ್ಥಿಗಳು ಅವಳನ್ನು ಪ್ರಶ್ನಾರ್ಥಕವಾಗಿ ನೋಡಿದರು. ಆದರೆ ಇವಳ ಗಮನ ಯಾರಡೆಗೂ ಇರಲಿಲ್ಲ. ತರಗತಿಗಳೆಲ್ಲವೂ ಮುಗಿದ ನಂತರ ಇಂದು ತಾನು ಮಾಡಬೇಕಾದ ಕೆಲಸಗಳ ಬಗ್ಗೆ ಯೋಚಿಸುತ್ತಿದ್ದಳು. ತರಗತಿಯಲ್ಲಿ ಪಾಠದ ಕಡೆಗೆ ಕೂಡ ಗಮನ ಹರಿಸಲು ಅವಳಿಂದ ಸಾಧ್ಯವಾಗಲಿಲ್ಲ. ತರಗತಿಗಳಿಲ್ಲವೂ ಮುಗಿದ ಕೂಡಲೇ ಕಾಲೇಜಿನ ಆವರಣದಲ್ಲಿದ್ದ ಮರದ ಕೆಳಗೆ ಕುಳಿತು ತನ್ನ ಕಸಿನ್ ಬರುವಿಕೆಗಾಗಿ ಕಾಯುತ್ತಿದ್ದಳು. ಕಸಿನ್ ಬಂದು ಕೂಡಲೇ ಎದ್ದು ಆತನ ಜೊತೆಗೆ ಅವನ ಮನೆಯ ಕಡೆಗೆ ಹೆಜ್ಜೆ ಹಾಕಿದಳು. ದಾರಿಯುದ್ದಕ್ಕೂ ಮೌನವಾಗಿದ್ದ ಆ ಹುಡುಗಿಯನ್ನು ಕಂಡು ಆತನ ಮನ ಮರುಗಿತು. 

Read Post »

ನಿಮ್ಮೊಂದಿಗೆ

ಕಾವ್ಯ ಸುಧೆ ಅವರ ಕವಿತೆ “ಭಾವಯಾನ “

ಕಾವ್ಯ ಸಂಗಾತಿ ಕಾವ್ಯ ಸುಧೆ “ಭಾವಯಾನ “ ತುಂಬಿದ ನಿನ್ನೊಲವ ಜೋಳಿಗೆಯಿಂದನನಗೂ ತುಸು ಉಣಬಡಿಸಬಾರದೇಕನಸು ಮುನಿಸು ಸಮವಾಗಿ ಜೋಡಿಸುಶುರುವಾಗಲಿ ನಮ್ಮಿ ಭಾವಯಾನ ಜೊತೆಗಿರಲು ಬೇಕಷ್ಟಿಷ್ಟು ಸಡಿಲತೆಇರಬೇಕು ಎಚ್ಚರಿಕೆ ಇನಿತುನೆನಪಲೆ ನಗುವ ಕಲಿಯಲಿ ಮನಮಧುರ ಸಂಯಮವೇ ಹೆಸರದಕೆ ಅದೇನಿದ್ದರೂ ನಿನ್ನ ನಂತರನಿನ್ನ ಅನುರಾಗವೇ ನಿರಂತರಹಾಕಲ್ಹೇಗೆ ಮನಕೆ ಕಡಿವಾಣಭೇದಿಸುವುದೇ ಪ್ರೇಮದ ನಿಯಮ….!! ಕಾವ್ಯ ಸುಧೆ.

ಕಾವ್ಯ ಸುಧೆ ಅವರ ಕವಿತೆ “ಭಾವಯಾನ “ Read Post »

ಕಾವ್ಯಯಾನ

ಬಾಗೇಪಲ್ಲಿ  ಅವರ ಕವಿತೆ “ಗಾಜು”

ಕಾವ್ಯ ಸಂಗಾತಿ ಬಾಗೇಪಲ್ಲಿ   “ಗಾಜು” ನಂಬಿಕೆ ಗಾಜಿ ನಂತೆನಮ್ಮನೋಟ ಒಳ ತೂರಿ ಹೋಗುವಷ್ಟು ಸ್ಪಷ್ಟ ಸ್ವಚ್ಛ ಜಾಗ್ರತೆ ರಹಿತ ನಮ್ಮ ಸ್ಪರ್ಶ ನೆನಪಿಡಲು ಅದು ಬಲು ಸೂಕ್ಷ್ಮ ಮೊದಲ ಬಾರಿಯ ಅಂತ ಸ್ಪರ್ಶಕೆ ಒಡೆಯದೆ ಉಳಿದಿದೆಎಲ್ಲಿಯವರೆಗೆ? ಒಂದು ಸಾಮಾನ್ಯ ದಿನ ಬಹು ಸಣ್ಣ ಒತ್ತಡಕೆ ಅದರಲಿ ಬಿರುಕು ಕಾಣಲೂ ಬಹುದುನಮ್ಮ ಸಂಬಂಧಗಳೂ ಬಹುಶಃ ಹಾಗೆಯೇ! ಅದು ನಮಗರಿವಿಗೆ ಬರುವುದು ಸರಿಪಡಿಸ ಹೋದಾಗಅದು ಆಗಲೇ ಬಿರಕು ಬಿಟ್ಟಿದೆ ಎಂದು.(ಮು.ಪು ವಿನ ಆಂಗ್ಲ ಬರಹದ ಕನ್ನಡೀಕರಣ.) ಬಾಗೇಪಲ್ಲಿ  

ಬಾಗೇಪಲ್ಲಿ  ಅವರ ಕವಿತೆ “ಗಾಜು” Read Post »

ಕಥಾಗುಚ್ಛ

“ಏಕ ಪೋಷಕತ್ವ” ವಿಶೇಷ ಲೇಖನ, ಡಾ.ರೇಖಾ ಉದಯ್

ವಿಶೇಷ ಸಂಗಾತಿ ಡಾ.ರೇಖಾ ಉದಯ್ “ಏಕ ಪೋಷಕತ್ವ” ನದಿಗಳ ಕೊನೆಗೆ ಸೇರುವುದು ಸಮುದ್ರವನ್ನೇ ಎಂದು ಹೇಳುವುದು ಸಹಜವಾದ ಮಾತು. ಆದರೆ ಕೆಲವು ನದಿಗಳು ಸಮುದ್ರ ಸೇರದೆ ಕೆರೆ-ತೊರೆಗಳಾಗಿ ವಸುಂಧರೆಯ ಚೆಲುವನ್ನು ಹೆಚ್ಚಿಸುತ್ತವೆ. ಈ ಮಾತನ್ನು ಏಕೆ ಹೇಳುತ್ತಿರುವೆ ಎಂದರೆ ಸಿಂಗಲ್ ಪೇರೆಂಟ್ಸ ಅಥವಾ ಏಕ ಪೋಷಕತ್ವ ಇದು ಇತ್ತೀಚಿನ  ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳುತ್ತಿರುವ ಮತ್ತು ನೋಡುತ್ತಿರುವ ವಿಷಯವಾಗಿದೆ. ನಾನು ತುಂಬಾ ಹತ್ತಿರದಲ್ಲಿ ನೋಡಿರುವುದಕ್ಕೆ ಈ ವಿಚಾರ ಬರೆಯಲು ತೆಗೆದುಕೊಂಡೆ ಎಲ್ಲೋ ಕೇಳಿದಾಗ, ಮತ್ತೆಲ್ಲೂ ಓದಿದಾಗ, ಯಾರನ್ನೋ ನೋಡಿದಾಗ ಮನಸ್ಸಿಗೆ ಅಷ್ಟು ನಾಟದೆ ಇರಬಹುದು. ಆದರೆ ನಮ್ಮ ಆತ್ಮೀಯರು ಇಂತಹ ಪರಿಸ್ಥಿತಿಗಳನ್ನ ಎದುರಿಸಿದಾಗ ಸಹಜವಾಗಿ ನೋವಾಗುತ್ತದೆ. ಮಾನಸಿಕ ಯಾತನೆ ಉಂಟಾಗುತ್ತದೆ.ಜೊತೆಗಾರ ಅಥವಾ ಜೊತೆಗಾತಿ ಇದ್ದು ಅನೇಕ ಸಮಸ್ಯೆಗಳನ್ನ ಇಂದು ಎದುರಿಸುತ್ತಿರುವಾಗ ಒಂಟಿಯಾಗಿ ಎಲ್ಲವನ್ನೂ ಎದುರಿಸುವುದು ಇದೆಯಲ್ಲ ಅದು ಹೇಳಲಸಾಧ್ಯ ಹಿಂಸೆ, ಅದರಲ್ಲೂ ಒಬ್ಬ ಹೆಣ್ಣುಮಗಳು ಸಿಂಗಲ್ ಪೇರೆಂಟ್ಸ್  ಆದಾಗ ತಂದೆ ಪ್ರೀತಿ, ತಾಯಿ ಪ್ರೀತಿ ಒಬ್ಬಳೇ ನೀಡುತ್ತಾ ಅನೇಕ ಸವಾಲುಗಳನ್ನು ಎದುರಿಸುತ್ತಾ ಹೋರಾಡಬೇಕು. ವಿಚ್ಛೇದನ, ಸಂಗಾತಿ ಸಾವು, ಅಥವಾ ದತ್ತು ತೆಗೆದುಕೊಂಡು ಸಾಕುವುದು,ಇದರ ಹಂತವಾಗಿರುತ್ತದೆ        “ಯಾವ ಹಾದಿಯಲ್ಲಾದರು ನಡೆ, ನಿನ್ನ ಆತ್ಮವಿಶ್ವಾಸವೇ ನಿನಗೆ ದಾರಿ ದೀಪ” ಎಂಬ ಕುವೆಂಪುರವರ ಮಾತು ಸ್ಪೂರ್ತಿ ನೀಡುತ್ತದೆ. ಜೀವನ ಪಥದಲ್ಲಿ ಒಂಟಿಯಾಗಿ ಸಾಗುವಾಗ ಮಗುವಿನ ಸುಖ ಸಂತೋಷ, ವಿದ್ಯಾಭ್ಯಾಸ ಆರೋಗ್ಯ ಹೀಗೆ ಹತ್ತು ಹಲವಾರು ಜವಾಬ್ದಾರಿ ಹೊರುವ ದೀಪ ಸ್ತಂಭವಿದ್ದಂತೆ, ಬಿರುಗಾಳಿಯೇ ಬರಲಿ ,ಸುನಾಮಿ ಅಲೆಗಳೇ ಅಪ್ಪಳಿಸಲಿ  ಮಗುವಿನ ಭವಿಷ್ಯಕ್ಕಾಗಿ ಎಲ್ಲವನ್ನು ಎದುರಿಸುತ್ತಲೆ ಸಾಗುತ್ತಾಳೆ.ಒಮ್ಮೆ ತಮ್ಮ ಸಂಬಂಧಗಳಿಂದ ಹೊರ ಬಿದ್ದು ಸಿಂಗಲ್ ಪೇರೆಂಟ್ ಎಂಬ ಹಣೆ ಪಟ್ಟಿ ಬಿದ್ದ ಮೇಲೆ ಅವಳ ಅಸ್ತಿತ್ವವನ್ನೇ ಅಲ್ಲಾಡಿಸಿ ಅವಳ ಜಂಘಾಬಲ ಉಡುಗಿಸಿ ಬಿಡುತ್ತಾರೆ ಸುತ್ತಮುತ್ತಲಿನವರು. ಗಂಡ ಇಲ್ಲದೆ ಇರುವ ಮಹಿಳೆಯರು  ಮೇಲೆ ಒಂದು ತೆರನಾದ ಅನುಕಂಪ, ಅಯ್ಯೋ ಪಾಪ ಹೀಗಾಗಬಾರದಿತ್ತು ,ಮಗು ಚಿಕ್ಕದು ಎಂಬ ಕಾರಣಗಳಿಂದ, ಒಂದು ಕಡೆಯಿಂದ ಮಾನಸಿಕ ಬೆಂಬಲ ಅಥವಾ ಆರ್ಥಿಕ ಬೆಂಬಲ ಕೂಡ ದೊರೆಯಬಹುದು, ಅವಳ  ಕಷ್ಟಕ್ಕೆ ಎಲ್ಲರೂ ಸಾತ್ ಕೊಡಬಹುದು.  ಆದರೆ ಎಲ್ಲರಿಗೂ ಹೀಗೆ ಆಗಬೇಕು ಎಂಬುವ ಹಾಗಿಲ್ಲ, ಅವಳಿಗೆ ತವರು ಮನೆಯಲ್ಲಿ, ಗಂಡನ ಮನೆಯಲ್ಲಿ ಸ್ಥಾನ ಸಿಗದೇ ಒಂಟಿಯಾಗಿ ಸಮಾಜದ ಕೊಂಕು ನುಡಿಗಳನ್ನ ,ಸಮಸ್ಯೆಗಳನ್ನ ಎದುರಿಸುತ್ತಾ ಮಗುವನ್ನು ಬೆಳೆಸಿ ಒಳ್ಳೆಯ ಶಿಕ್ಷಣ ,ಆರೋಗ್ಯ ಕೊಟ್ಟು ಪಾಲನೆ ಪೋಷಣೆ ಮಾಡುವುದು ಒಂದು ದೊಡ್ಡ ಸವಾಲು ಎಂಬುದು ಸುಳ್ಳಲ್ಲ.ವಿಚ್ಛೇದಿತ ಮಹಿಳೆಗೆ ಇಂತಹ ಸಂಪೂರ್ಣ ಬೆಂಬಲ ಸಿಗಲಾರದು ಏಕೆಂದರೆ ಡಿವೋಸ೯ ತಗೋತಾ ಇರೋದೇ ಮೊದಲು ಕುಟುಂಬದ ಹಿರಿಯರ ಕೆಂಗಣ್ಣಿಗೆ ಗುರಿಯಾಗಿರುತ್ತಾರೆ, ಹೊಂದಿಕೊಂಡು ಹೋಗುವುದರ ಬಗ್ಗೆ ಸಾಕಷ್ಟು ತಿಳಿ ಹೇಳಿರುತ್ತಾರೆ. ಸಮಸ್ಯೆಗಳನ್ನು ಬಗೆಹರಿಸಿರುತ್ತಾರೆ. ಆದರೆ ಅವಳ ದಿಟ್ಟ ನಿರ್ಧಾರ ಕೆಲವರಲ್ಲಿ ಅಸಮಾಧಾನ ಉಂಟು ಮಾಡಿರುತ್ತದೆ. ಇಂತಹ ಸಂದರ್ಭದಲ್ಲಿ ಅವಳು ಏಕಾಂಗಿ ಹೋರಾಟ ನಡೆಸಲೇ ಬೇಕಾಗುತ್ತದೆ ತನ್ನ ದುಡಿಮೆಯೊಂದಿಗೆ ಮಗುವಿನ ಆಗುಹೋಗುಗಳ ಜವಾಬ್ದಾರಿ ಹೆಗಲೇರುತ್ತದೆ. ಎಲ್ಲಾ ಸಮಸ್ಯೆಗಳನ್ನ ಒಂಟಿಯಾಗಿ ನಿಭಾಯಿಸುತ್ತಾ ಆರ್ಥಿಕವಾಗಿ, ಮಾನಸಿಕವಾಗಿ ,ಸಾಮಾಜಿಕವಾಗಿ, ಸದೃಡರಾಗಬೇಕಾಗುತ್ತದೆ. ಮಗು ದೊಡ್ಡದಾಗುತ್ತಾ ಬಂದಂತೆ ಮಗುವಿನ ಬದುಕಿನ ಮಜಲುಗಳನ್ನು ತಿಳಿಸಬೇಕಾಗುತ್ತದೆ. ಎಲ್ಲ ರೀತಿಯ ಪ್ರೀತಿಯ ಹೂಮಳೆ ಸುರಿಸಬೇಕಾಗುತ್ತದೆ, ಕೆಲವೊಮ್ಮೆ ಇದೆಂತಹ ಬದುಕು ಅನ್ನಿಸದಿರದು. ಮಗುವಿಗಾಗಲಿ, ತನಗೆ ಆಗಲಿ ಆರೋಗ್ಯ ಸಮಸ್ಯೆಗಳು ಉಂಟಾದಾಗ ಆಸ್ಪತ್ರೆ, ಮನೆ, ಮಗು ,ಹಣ ಇವೆಲ್ಲವು ಪೇಡಂಭೂತವಾಗಿ ಕಾಡುತ್ತದೆ .ಇತ್ತೀಚೆಗೆ ಸಿಂಗಲ್ ಪೇರೆಂಟ್ ಎಂಬುದು ಟ್ರೆಂಡ್ ಆಗಿದೆ, ಇದೆಲ್ಲ ಕಾಮನ್ ಎಂಬ ಮಾತು ಎಲ್ಲರ ಬಾಯಲ್ಲೂ ಸಹಜವಾಗಿ ಬರತೊಡಗಿದೆ. ಹಿರಿಯರ ವಿರೋಧ ಸದಾ ಇದಕ್ಕೆ ಇದ್ದೇ ಇರುತ್ತದೆ ,ಅವರ ಮನಸ್ಸು ಇಂಥವುಗಳಿಗೆ ಒಪ್ಪದು, ಆದರೆ ಜಮಾನ ಬದಲಾಗಿದೆ. ಭಾವನೆಗಳ ನೆಲಗಟ್ಟಿನ ಮೇಲೆ ಬದುಕು ಸಾಗುತ್ತಿಲ್ಲ. ನಾನು ಎಂಬ ಅಹಂ ತಾಂಡವವಾಡುತ್ತಿದೆ.ಅಡ್ಜೇಸ್ಟ ಆಗಬೇಕಾ?,ನಾನೇ ಆಗಬೇಕಾ? ಯಾಕೆ  ಆಗಬೇಕು, ನಾನು ದುಡಿತಾ ಇಲ್ವಾ,ಎಂಬ ಪ್ರಶ್ನೆಗಳ ಸುರಿಮಳೆ, ಇಬ್ಬರಲ್ಲೂ ಅಹಂ ಹೆಚ್ಚಾದಂತೆ ಸಂಬಂಧಗಳ ನಡುವೆ ಬಿರುಕು ಸರ್ವೇಸಾಮಾನ್ಯ. ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬಂತೆ ಇವರಿಬ್ಬರ ಜಗಳ ಮನಸ್ತಾಪಗಳಿಂದ ಮಗು ಖಿನ್ನತೆಗೆ ಒಳಗಾಗಬಹುದು. ಅಥವಾ ದುರ್ಮಾರ್ಗ, ದುರಭ್ಯಾಸಗಳಗತ್ತ ವಾಲಬಹುದು.ಪರಿಸ್ಥಿತಿಗಳನ್ನು ಅರ್ಥೈಸಿಕೊಂಡು ಸಮಾಧಾನದಿಂದ ಕುಳಿತು ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡುವುದರಲ್ಲಿ ತಪ್ಪೇನಿದೆ!? ಕುಳಿತು ಮಾತನಾಡಿಕೊಂಡು ಸಮಸ್ಯೆ ಬಗೆಹರಿಸುವತ್ತ ಗಮನಹರಿಸಬೇಕು ಒಂದು ವೇಳೆ ಇದು ಅಸಾಧ್ಯ ಎಂದಾಗ ಅನಿವಾರ್ಯ. ಆದರೆ ಮಕ್ಕಳ ಬೆಳವಣಿಗೆಯಲ್ಲಿ ಇಬ್ಬರ ಪಾತ್ರ ಎಷ್ಟು ಮುಖ್ಯವಾದದ್ದು .ಒಂಟಿಯಾದಾಗ ಆ ಜವಾಬ್ದಾರಿ ದ್ವಿಗುಣವಾಗುತ್ತೆ ಮಗುವಿನ ಮನಸ್ಥಿತಿಗೆ ಸ್ಪಂದಿಸುತ್ತಾ ಅವರಲ್ಲಿ ಒಂದು ಸಕಾರಾತ್ಮಕ ಸದೃಢ ಭಾವನೆ ಬೆಳೆಸಿ ಒಂಟಿಯಾಗಿದ್ದರು ಎಷ್ಟು ಚೆನ್ನಾಗಿ ಮಗುವನ್ನು ಬೆಳೆಸಿದ್ದಾರೆ, ತಮ್ಮ ಜೀವನ ರೂಪಿಸಿಕೊಂಡಿದ್ದಾರೆ ಎಂದು ಬಾಯಿ ಮೇಲೆ ಬೆರಳು ಇಡುವಂತಾಗಬೇಕು, ಆಡಿಕೊಳ್ಳುವವರ ಬಾಯಿಗೆ ಬೀಗ ಹಾಕಬೇಕು ಅಷ್ಟೇ…. ಡಾ.ರೇಖಾ ಉದಯ 

“ಏಕ ಪೋಷಕತ್ವ” ವಿಶೇಷ ಲೇಖನ, ಡಾ.ರೇಖಾ ಉದಯ್ Read Post »

ಕಾವ್ಯಯಾನ

ಡಾ.ಡೋ.ನಾ.ವೆಂಕಟೇಶ ಕವಿತೆ “ಝಲಕು”

ಕಾವ್ಯ ಸಂಗಾತಿ ಡಾ.ಡೋ.ನಾ.ವೆಂಕಟೇಶ “ಝಲಕು” ಬರೆಯುವುದಕ್ಕೆ ಏನಿಲ್ಲ ಎಲ್ಲ ಬರೀ ಮೌನಎದೆಯೊಳಗೆ ಬೆಟ್ಟನೆತ್ತಿ ಮೇಲೆ ಹಸಿರು ಕಾಡುಬರೆಯುವುದಕ್ಕೆ ಏನಿಲ್ಲ ಕಣ್ಣ ಹೊಳಪುಶುಭ್ರಾಕಾಶದ ಝಲಕುಆಸೆ ತುಂಬಿದ ಮೆಲುಕುಬರೆಯುವುದಕ್ಕೆ ಏನಿಲ್ಲ ಬಿಟ್ಟು ಹೋದ ಹಾದಿಗುಂಟ ಪುವಾಸನೆಆಘ್ರಾಣಿಸುವ ಶಕ್ತಿಬರಡುಬಿಡು  ಬರೆಯಲೇನಿಲ್ಲ ಹೀಗೇ ಮಾತಿಲ್ಲ ಕಥೆಯಿಲ್ಲಜನ್ಮಗಳಾಚೆ ಧಾರಾವಾಹಿ!ಇಂದು ಇಂದಿಗೆ ನಾಳೆಯಿಲ್ಲ. ಹೀಗೇ ಬಿಡು ಬರೆಯಲೇನಿಲ್ಲ!! ಡಾ.ಡೋ.ನಾ.ವೆಂಕಟೇಶ

ಡಾ.ಡೋ.ನಾ.ವೆಂಕಟೇಶ ಕವಿತೆ “ಝಲಕು” Read Post »

ಇತರೆ

“ನಮ್ಮ ಬದುಕಿನ ಬ್ಯಾಟರಿಯ ಚಾರ್ಜಿಂಗ್… ನಮ್ಮದೇ ಜವಾಬ್ದಾರಿ” ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ್

ಬದುಕಿನ ಸಂಗಾತಿ ವೀಣಾ ಹೇಮಂತ್‌ ಗೌಡ ಪಾಟೀಲ್ “ನಮ್ಮ ಬದುಕಿನ ಬ್ಯಾಟರಿಯ . ಚಾರ್ಜಿಂಗ್… ನಮ್ಮದೇ ಜವಾಬ್ದಾರಿ” ಈ ಹಿಂದೆ ನಮ್ಮ ಮನೆಗಳಲ್ಲಿ ರಾತ್ರಿಯ ಸಮಯದಲ್ಲಿ ಹಿತ್ತಲಿಗೆ ಹೋಗಲು, ಕರೆಂಟ್ ಇಲ್ಲದ ಸಮಯದಲ್ಲಿ  ರಸ್ತೆಯಲ್ಲಿ ಓಡಾಡಲು,, ಹೊಲಗಳಿಗೆ ಹೋಗಲು ಹೀಗೆ ಹತ್ತಾರು ಕೆಲಸ ಕಾರ್ಯಗಳಿಗೆ ಟಾರ್ಚ್ ಗಳನ್ನು ಬಳಸುತ್ತಿದ್ದರು .ರೂಢಿಯ ಭಾಷೆಯಲ್ಲಿ ಬ್ಯಾಟರಿ ಎಂದು ಇವುಗಳನ್ನು ಕರೆಯುತ್ತಿದ್ದರು. ಜೇಬಿನಲ್ಲಿ ಇಟ್ಟುಕೊಳ್ಳುವ ಅಂಗೈಯಲ್ಲಿ ಹಿಡಿಯುವಷ್ಟು ಪುಟ್ಟದಾದ ಪೆನ್ಸಿಲ್ ಟಾರ್ಚ್ ನಿಂದ ಹಿಡಿದು 50-60 ಅಡಿ ದೂರದವರೆಗೆ ಬೆಳಕನ್ನು ಚೆಲ್ಲುವ ದೊಡ್ಡ ಟಾರ್ಚ್ ಗಳು ಪ್ರತಿಯೊಬ್ಬರ ಮನೆಯ ಕೆಲಸ ಕಾರ್ಯಗಳಿಗೆ ಬಳಕೆಯಾಗುತ್ತಿದ್ದವು. ಅವುಗಳ ಆಕರ ಕೋಶಗಳನ್ನು ಬ್ಯಾಟರಿ ಎಂದು ಕರೆಯುತ್ತಿದ್ದರು. ಸೆಲ್ ಗಳನ್ನು ಬಳಸಿ ಬೆಳಕನ್ನು ಪಡೆಯುವ ಈ ಬ್ಯಾಟರಿಗಳು ಇದೀಗ ಅತ್ಯಂತ ಪುಟ್ಟ ಗಾತ್ರಗಳನ್ನು ಹೊಂದಿದ್ದು ಗಡಿಯಾರದಿಂದ ಹಿಡಿದು ಎಲ್ಲ ಎಲೆಕ್ಟ್ರಾನಿಕ್ ಸಾಮಾನುಗಳಲ್ಲಿ ತಮ್ಮ ಸ್ಥಾನವನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಂಡಿವೆ.ಆದರೆ ಸ್ನೇಹಿತರೆ !ನಿಮಗೆ ಗೊತ್ತೇ ?ನಮ್ಮ ದೇಹ ಒಂದು ಮಾನವ ಬ್ಯಾಟರಿ. ಮನುಷ್ಯನೇ ಒಂದು ಹ್ಯೂಮನ್ ಬ್ಯಾಟರಿ ಎಂದು ವಿಜ್ಞಾನಿಗಳು ಹೇಳುತ್ತಾರೆ. ನಮ್ಮ ದೇಹ ಎಂಬ ಬ್ಯಾಟರಿಯು ನೀಡುವ ಶಕ್ತಿಯಿಂದ ನಾವು ನಮ್ಮ ದೈನಂದಿನ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತೇವೆ. ದೈಹಿಕ ಶಕ್ತಿಯು….ನಮ್ಮ ದೇಹವು ಒಂದು ಇಂಧನವಾಗಿ ಇಡೀ ದೇಹದ ಎಲ್ಲಾ ಅಂಗಗಳು ಸಕ್ಸಮವಾಗಿ ಕಾರ್ಯನಿರ್ವಹಿಸಲು ಅನುಕೂಲ ಮಾಡಿಕೊಡುತ್ತದೆ. ಆಹಾರದ ಮೂಲಕ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಹಾಗೆ ಸಂಚಯವಾದ ಶಕ್ತಿಯನ್ನು ವಿವಿಧ ಅಂಗಗಳ ಕಾರ್ಯ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಬಳಸುತ್ತದೆ. ದೈಹಿಕ ಸಾಮರ್ಥ್ಯವನ್ನು, ದೇಹದ ಚಾಲಕ ಬಲವನ್ನು ಹೆಚ್ಚಿಸುತ್ತದೆ. ನಮ್ಮ ದೇಹದ ಭಾವನಾಶಕ್ತಿಯ ಆಕರ ಹೃದಯವಾಗಿದ್ದು ಇದು ನಮ್ಮ ಮನಸ್ಸಿನ ಭಾವಗಳನ್ನು ನಿಯಂತ್ರಿಸುತ್ತದೆ. ರಕ್ತವನ್ನು ಪಂಪ್ ಮಾಡುವ ಕಾರ್ಯ ಚಟುವಟಿಕೆಯ ಜೊತೆಗೆ ನಮ್ಮ ಮಾನಸಿಕ, ಭಾವನಾತ್ಮಕ ಚಟುವಟಿಕೆಗಳಿಗೆ ಇದುವೇ ಚಾಲಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಬಂಧಗಳನ್ನು ಜೋಡಿಸುವ, ಸೌಹಾರ್ದತೆಯನ್ನು ತುಂಬುವ ಸಾಮರ್ಥ್ಯ ಇದಕ್ಕಿದೆ. ಪ್ರೀತಿ,ಪ್ರೇಮ, ಸ್ನೇಹ, ಕರುಣೆ, ವಿಶ್ವಾಸ, ಸಹಾನುಭೂತಿಗಳಂತಹ ಒಳ್ಳೆಯ ಭಾವಗಳ ಜೊತೆಗೆ ಸಿಟ್ಟು, ಸೆಡವು, ಕ್ರೌರ್ಯ, ಅಸಮಾಧಾನ, ಅಜ್ಞಾನ ಮುಂತಾದ ಭಾವಗಳನ್ನು ಕೂಡ ಇದು ಹೊಂದಿರುತ್ತದೆ. ಇದರಲ್ಲಿ ಯಾವುದನ್ನು ನಾವು ಹೆಚ್ಚು ಪೋಷಿಸುತ್ತೇವೆಯೋ ಅವೇ ಗುಣಗಳು ನಮ್ಮನ್ನು ಆಳುತ್ತವೆ. ಒಳ್ಳೆಯ ಕುಟುಂಬ, ಪಾಲಕರು, ಉತ್ತಮ ಸಂಸ್ಕಾರಗಳು, ಸೌಹಾರ್ದ ಮತ್ತು ಸಾಮರಸ್ಯಗಳನ್ನು ಹೊಂದಿರುವ ಸಾಮಾಜಿಕ ಪರಿಸರ ನಮ್ಮನ್ನು ರೂಪುಗೊಳಿಸುತ್ತದೆ…. ಇದೆಲ್ಲವನ್ನು ತನ್ನ ಮೂಲಕ ಗ್ರಹಿಸುವ ಹೃದಯವು ನಮ್ಮೆಲ್ಲ ಭಾವನಾತ್ಮಕ ಯೋಚನೆಗಳು ಹಾಗೂ ಯೋಜನೆಗಳಿಗೆ ಚಾಲಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ.ಮಾನಸಿಕ ಶಕ್ತಿ …. ಸಾಮಾನ್ಯವಾಗಿ ಬುದ್ಧಿ, ಜ್ಞಾನ ಎಂದೆಲ್ಲ ಕರೆಯಲ್ಪಡುವ ಈ ಶಕ್ತಿಯನ್ನು ನಮ್ಮ ದೇಹದ ಮೆದುಳಿನ ಭಾಗ ಹೊಂದಿದೆ. ಸೃಷ್ಟಿ ಕಾರ್ಯದ ಶಕ್ತಿಯನ್ನು ಮೆದುಳು ಹೊಂದಿದೆ. ನಮ್ಮೆಲ್ಲ ಕಾರ್ಯ ಯೋಜನೆಗಳ ಸೃಷ್ಟಿಯಾಗುವುದು ಮೊದಲು ಇಲ್ಲಿಯೇ. ನಂತರ ವಿವಿಧ ಅಂಗಗಳ ಮೂಲಕ ಅದು ಕಾರ್ಯಗತವಾಗುತ್ತದೆ ಆ ಮಾತು ಬೇರೆ. ನಮ್ಮ ಯೋಚನೆಗಳು, ಯೋಜನೆಗಳು ಸೃಷ್ಟಿಯಾಗುವುದು ನಮ್ಮ ಮೆದುಳಿನಲ್ಲಿಯೇ. ನಮ್ಮ ಗ್ರಹಿಕೆಗಳು ಬೇರೂರುವುದು ಕೂಡ ನಮ್ಮ ಮೆದುಳಿನಲ್ಲಿಯೇ. ನಮ್ಮ ಬದುಕಿನಲ್ಲಿ ನಾವು ಸಾಧಿಸಬೇಕೆಂದಿರುವ ಗುರಿಯನ್ನು ಹೊಂದುವ ಉದ್ದೇಶ ಸೃಷ್ಟಿಯಾಗುವುದು ಕೂಡ ನಮ್ಮ ಮೆದುಳಿನಲ್ಲಿಯೇ. ನಮ್ಮ ಯೋಚನೆಗಳಲ್ಲಿ ಹುಟ್ಟುವ ತಪ್ಪು-ಸರಿ, ಒಳಿತು-ಕೆಡುಕು ಗಳ ಕುರಿತು ಸ್ಪಷ್ಟವಾದ ತಿಳುವಳಿಕೆಯನ್ನು ನಮಗೆ ನೀಡಲು ಮೆದುಳು ಅತ್ಯಂತ ಸಹಾಯಕ.ಸ್ನೇಹಿತರೆ, ಒಂದೊಮ್ಮೆ ನಮ್ಮ ದೇಹ, ಭಾವ, ಬುದ್ಧಿಗಳು ಏಕಾತ್ಮಕವಾದರೆ ಅದು ದಿವ್ಯ ಶಕ್ತಿಯಾಗಿ ಪರಿಣಮಿಸುತ್ತದೆ. ನಮ್ಮ ದೇಹ ಮನಸ್ಸು ಮತ್ತು ಬುದ್ಧಿಗಳನ್ನು ಒಂದು ಸರಳ ರೇಖೆಯಲ್ಲಿ ಹಿಡಿದಿಡುವ ದಿವ್ಯ ಶಕ್ತಿ ಅಷ್ಟಾಂಗ ಯೋಗದಲ್ಲಿದೆ. ಹೌದು ಅಷ್ಟಾಂಗ ಯೋಗದ ಯಮ ನಿಯಮ ಆಸನ ಪ್ರಾಣಾಯಾಮ ಪ್ರತ್ಯಾಹಾರ ಧ್ಯಾನ ಧಾರಣ ಸಮಾಧಿ ಗಳಲ್ಲಿ ಮೊದಲ ಎರಡು ನಿಯಮಗಳು ನಮಗೆ ಸಾಮಾಜಿಕ ಮತ್ತು ವೈಯುಕ್ತಿಕ ಬದುಕಿನಲ್ಲಿ ನಾವು ಪಾಲಿಸಬಹುದಾದ ಶಿಸ್ತಿನ ಪಾಠವನ್ನು ನಮಗೆ ಹೇಳಿ ಕೊಡುತ್ತವೆ. ಆಸನವು ನಮಗೆ ದೇಹವನ್ನು ಸುಲಲಿತವಾಗಿ ಬಳಸುವ ಮೂಲಕ ನಿಯಮಿತವಾದ ಉಚ್ಚ್ವಾಸ ಮತ್ತು ನಿ:ಶ್ವಾಸಗಳ  ಜೊತೆಗೆ ವಿವಿಧ ಬಗೆಯ ಭಂಗಿಗಳನ್ನು ವ್ಯಾಯಾಮದ ರೂಪದಲ್ಲಿ ಅಭ್ಯಾಸ ಮಾಡಲು…ತನ್ಮೂಲಕ ಶಾರೀರಿಕ ಹಾಗೂ  ಮಾನಸಿಕ ಸ್ವಾಸ್ಥ್ಯಕ್ಕೆ ಕಾರಣವಾಗುತ್ತದೆ. ಪ್ರಾಣಾಯಾಮದ ವಿವಿಧ ಕ್ರಿಯೆಗಳು ಮಾನಸಿಕ ಸ್ಥಿತಿಯ ಸಮತೋಲನಕ್ಕೆ ಕಾರಣವಾಗುತ್ತದೆ. ಪ್ರತ್ಯಾಹಾರವು ನಮ್ಮನ್ನು ವಿಚಲಿತಗೊಳಿಸುವ ಇಂದ್ರಿಯಗಳನ್ನು ನಿಗ್ರಹಿಸಲು ಸಹಾಯಕವಾಗುತ್ತದೆ ನಮ್ಮನ್ನು ಆಕರ್ಷಿಸುವ ಎಲ್ಲ ಬಗೆಯ ಲೌಕಿಕ ವಿಷಯಗಳ ಮೇಲೆ ನಿಯಂತ್ರಣವನ್ನು ಹೊಂದುವ ಕ್ರಿಯೆಯೇ ಪ್ರತ್ಯಾಹಾರ. ಅಷ್ಟಾಂಗ ಯೋಗದ ಕೊನೆಯ ಮೂರು ಅಂಗಗಳಾದ ಧ್ಯಾನ ಧಾರಣ ಹಾಗೂ ಸಮಾಧಿಗಳು ಮನುಷ್ಯನನ್ನು ಆಂತರಿಕವಾಗಿ ಬಲಿಷ್ಠಗೊಳಿಸಿ ಲೌಕಿಕ ವಿಷಯಗಳಿಂದ ಒಂದು ಒಳ್ಳೆಯ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸಹಾಯಕವಾಗಿ ಕಾರ್ಯನಿರ್ವಹಿಸುತ್ತವೆ…. ಎಲ್ಲವನ್ನು ಸಮಚಿತ್ತ, ಸಮಭಾವದಿಂದ ನೋಡುವ ಮಾನಸಿಕ ಶಕ್ತಿ ಇವುಗಳನ್ನು ರೂಡಿಸಿಕೊಳ್ಳುವವರ ಪಾಲಾಗುತ್ತದೆ   ಧಾರಣ ಎಂದರೆ ಏಕಾಗ್ರತೆ. ಮಾಡುವ ಯಾವುದೇ ಕೆಲಸದಲ್ಲಿಯೂ ಶ್ರದ್ದೆ ಹಾಗೂ ತನ್ಮಯತೆಯನ್ನು ಹೊಂದಿ ಏಕಾಗ್ರ ಚಿತ್ರದಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು. ಅಷ್ಟಾಂಗ ಯೋಗದ ಮೊದಲ ಏಳು ಅಂಗಗಳನ್ನು ನಾವು ನಿರ್ವಹಿಸಿದಾಗ ನಮಗೆ ದೊರೆಯುವ ಸ್ಥಿತಿಯೇ ಸಮಾಧಿ. ಸಮಾಧಿ ಸ್ಥಿತಿಯಲ್ಲಿ ವ್ಯಕ್ತಿಯು ತನ್ನ ಅಹಮಿಕೆಯಿಂದ,, ಎಲ್ಲ ರೀತಿಯ ಇಂದ್ರಿಯ ಲಾಲಸೆಗಳಿಂದ ಸಂಪೂರ್ಣ ಮುಕ್ತವಾಗಿರುತ್ತಾನೆ ಹಾಗೂ ಈ ಬ್ರಹ್ಮಾಂಡದ ಅನಂತತೆಯಲ್ಲಿ ತನ್ನನ್ನು ತಾನು ಒಂದಾಗಿಸಿಕೊಳ್ಳುತ್ತಾನೆ.ಹೀಗೆ ತನ್ನ ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಬದುಕನ್ನು ಏಕತ್ರಗೊಳಿಸುವ ವ್ಯಕ್ತಿಯ ಬದುಕು ಖಂಡಿತವಾಗಿಯೂ ಬದಲಾಗುತ್ತದೆ. ಆತನ ಸುತ್ತಲೂ ಆತನ ವ್ಯಕ್ತಿತ್ವದ ಪ್ರಭಾವಳಿ ಹರಡುತ್ತದೆ. ಆತನ ನಿರ್ಣಯಗಳು ವೈಯುಕ್ತಿಕತೆಯನ್ನು ಹಿಂದಕ್ಕೆಳಸಿ ಮನುಕುಲದ ಉದ್ಧಾರವನ್ನು ಕುರಿತಾಗಿ ಇರುತ್ತದೆ.ನೋಡಿದಿರಾ ಸ್ನೇಹಿತರೆ ಬದುಕು ನಮ್ಮದು ನಿರ್ಧಾರಗಳು ಕೂಡ ನಮ್ಮವೇ ಆಗಿರಬೇಕು ನಮ್ಮ ಬದುಕಿನ ಚುಕ್ಕಾಣಿಯನ್ನು ನಾವೇ ಹಿಡಿದು ಒಳ್ಳೆಯ ಹವ್ಯಾಸಗಳನ್ನು ನಮಗಾಗಿಸಿಕೊಂಡು ಬದುಕನ್ನು ಬಂಗಾರವಾಗಿಸಿಕೊಳ್ಳುವ ಆಯ್ಕೆ ಹಾಗೂ ಹಕ್ಕು ನಮ್ಮದೇ ಏನಂತೀರಾ? ವೀಣಾ ಹೇಮಂತ್ ಗೌಡ ಪಾಟೀಲ್ 

“ನಮ್ಮ ಬದುಕಿನ ಬ್ಯಾಟರಿಯ ಚಾರ್ಜಿಂಗ್… ನಮ್ಮದೇ ಜವಾಬ್ದಾರಿ” ವಿಶೇಷ ಲೇಖನ ವೀಣಾ ಹೇಮಂತ್‌ ಗೌಡ ಪಾಟೀಲ್ Read Post »

ಕಾವ್ಯಯಾನ, ಗಝಲ್

ವಾಣಿ ಯಡಹಳ್ಳಿಮಠ ಅವರ ಗಜಲ್

ಕಾವ್ಯ ಸಂಗಾತಿ ವಾಣಿ ಯಡಹಳ್ಳಿಮಠ ಗಜಲ್ ಗಜಲ್(ರವಿ ಸರ್ ಅವರ ಗಜಲ್ ಒಂದರಿಂದ ಪ್ರೇರಿತ ) ಬಣ್ಣವಿಲ್ಲವೆಂದು ಬಯ್ಯುವ ಬಿಳಿ ಪುಟದೊಳಗೂ ತುಸು ಚಂದವಿದೆಲೋಪಗಳಿವೆಯೆಂದು ನಾ  ಜರಿವ ಜಗದೊಳಗೂ ತುಸು ಚಂದವಿದೆ ಎಲ್ಲಾ ರಾಗಗಳನು, ಯಾರು ಹಾಡುವವರಿದ್ದಾರಿಲ್ಲಿ ಹೇಳುಯಾರೂ ಗುನುಗುನಿಸದ ಪದ್ಯದೊಳಗೂ ತುಸು ಚಂದವಿದೆ ಆಕಾಶಕ್ಕೂ, ಅನುದಿನ ಆನಂದ ನೀಡಲು ಸಾಧ್ಯವಾಗುವುದೇಕಪ್ಪೆಂದು ಕಡೆಗಣಿಸಿದ ಮೋಡದೊಳಗೂ ತುಸು ಚಂದವಿದೆ ವರ್ಣನೆಗೂ ನಿಲುಕದ  ಮಾತುಗಳಿಗಿಲ್ಲಿ ಬರವಿಲ್ಲ ನಿಜಪದಗಳಿಂದ ಮುನಿಸಿಕೊಂಡ ಮೌನದೊಳಗೂ ತುಸು ಚಂದವಿದೆ ಜಂಜಾಟವಿಲ್ಲದ ಜೀವನ ಬರೀ ಕಲ್ಪನೆಯಷ್ಟೇ ವಾಣಿನೋವು ತುಂಬಿದ ನಯನದೊಳಗೂ ತುಸು ಚಂದವಿದೆ ವಾಣಿ ಯಡಹಳ್ಳಿಮಠ

ವಾಣಿ ಯಡಹಳ್ಳಿಮಠ ಅವರ ಗಜಲ್ Read Post »

ಕಾವ್ಯಯಾನ

ವನಜ ಮಹಾಲಿಂಗಯ್ಯ ಕವಿತೆ “ಮಳೆಯೇ ಬಾ”

ಕಾವ್ಯ ಸಂಗಾತಿ ವನಜ ಮಹಾಲಿಂಗಯ್ಯ “ಮಳೆಯೇ ಬಾ” ಮೋಡಗಳೇ ಎಲ್ಲಿಗೆ ಹೋದಿರಿ,  ನಮ್ಮ ಊರ ನೀವು ಮರೆತೆರಾ?  ಬಾವಿಯಲ್ಲೂ ಒಂದನಿ ನೀರಿಲ್ಲ,  ಕೆರೆಯಲ್ಲೂ  ಹನಿ ನೀರಿಲ್ಲ. ಅಡಿಕೆ ಬಾಳೆ ತೆಂಗು ಒಣಗುತಿದೆಆದರೆ ಅಲ್ಲಿ….ರಾಜಕೀಯ ಕುಣಿದಾಡುತಿದೆಬಡವನ ಕೂಗು ಕೇಳಲವರಿಗೆ ಸಮಯವೆಲ್ಲಿದೆ?ನಿನಗಾದರೂ ಕೇಳಲಿ ರೈತರ ಕೂಗು ಮಳೆಯೇ ಬಾ ಮಳೆಯೇ ಬಾ ಮಳೆಯೇಬಾ ಬೇಗ ಭೂಮಿ ಕಾದಾರಿದೆ. ಬೆಳೆ ಇಲ್ಲದೆ ರೈತ ಅಳುತಿರುವ,ಮಗುವಿಗೆ ನೀರಿಲ್ಲದೆ ತಾಯಿ ಪರಿತಪಿಸುವ,  ಒಣಗಿದ ಮರದ ಕೆಳಗೆ ಹಕ್ಕಿಯೂ ಸುಮ್ಮನಿದೆ,  ಮಳೆಯೇ ಬೇಗ ಬಾ, ನಮ್ಮ ಕಣ್ಣೀರು ಒರೆಸು.  ಬಾ ಮಳೆಯೇ ಬಾ ಮಳೆಯೇಬಾ ಬೇಗ ಭೂಮಿ ಕಾದಾರಿದೆ. ಭೂಮಿ ತಾಯಿ ಬಾಯಾರಿದ್ದಾಳೆ,  ಬಿತ್ತಿದ ಬೀಜ ಕಾಯುತ್ತಿದೆ,  ಒಂದೇ ಒಂದು ಹನಿ ಮಳೆಗಾಗಿ,  ಇಡೀ ಊರೇ ಕೈಮುಗಿದು ನಿಂತಿದೆ. ಮಳೆಯೇ ಬಾ, ಮಳೆಯೇ ಬಾ,  ಜೀವನಕ್ಕೆ ಜೀವ ತುಂಬಲು ಬಾ ಭುವಿಗೆ .ನೀನು ಬಂದರೆ  ನಮಗೆಲ್ಲ ಅನ್ನ ನೀರುನೀ ಬಾರದಿದ್ದರೆ  ನಮಗೆಲ್ಲಿ  ಬದುಕು ಬಾ ಮಳೆಯೇ ಬಾ ಮಳೆಯೇಬಾ ಬೇಗ ಭೂಮಿ ಕಾದಾರಿದೆ. ವನಜ ಮಹಾಲಿಂಗಯ್ಯ 

ವನಜ ಮಹಾಲಿಂಗಯ್ಯ ಕವಿತೆ “ಮಳೆಯೇ ಬಾ” Read Post »

ಇತರೆ, ಜೀವನ

“ಬೆಳಗುವ ಬಾಳಿಗೆ ಕರಗುವ ಮನಸ್ಸು” ಜಯಶ್ರಿ ಜೆ ಅಬ್ಬಿಗೇರಿ

ಜೀವನ ಸಂಗಾತಿ ಜಯಶ್ರೀ.ಜೆ. ಅಬ್ಬಿಗೇರಿ ಬೆಳಗುವ ಬಾಳಿಗೆ ಕರಗುವ ಮನಸ್ಸು ಪ್ರತಿದಿನದ ಓಟದಲ್ಲಿ ನಮ್ಮಲ್ಲಿ ಬಹುತೇಕರು ಇತರರ ಭಾವನೆಗಳನ್ನು ಕಷ್ಟಗಳನ್ನು ತಿಳಿಯುವ ಗೋಜಿಗೆ ಹೋಗುವುದೇ ಇಲ್ಲ. ಏಕೆಂದರೆ ಎಲ್ಲರಿಗೂ ತಮ್ಮತಮ್ಮ ಹಿತಾಸಕ್ತಿ ಮಾತ್ರ ಮುಖ್ಯ. ದಾವಂತದ ಈ ದಿನಗಳಲ್ಲಿ ಎಲ್ಲದಕ್ಕೂ ಅವಸರ ಬೇರೆ. ಹೀಗಾಗಿ ಬೇರೆಯವರಿಗೆ ಮಿಡಿಯುವುದನ್ನು ಮರೆಯುತ್ತಿದ್ದೇವೆ. ಈಗಿನ ಸಮಯದಲ್ಲಿ ಸಂಬoಧಗಳು ಹಳಸಿ ಹೋಗುವುದಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು: ನಮ್ಮಲ್ಲಿ ದಯೆ ಅಥವಾ ಕರುಣೆಯ ಕೊರತೆ ಎದ್ದು ಕಾಣುತ್ತಿರುವುದು. ಇದರೊಂದಿಗೆ ಇನ್ನೊಂದು ವಿಷಯವೆಂದರೆ ನಾವು ಬಾಹ್ಯ ಸೌಂದರ್ಯಕ್ಕೆ ಜೋತು ಬಿದ್ದಿದ್ದೇವೆ. ಬ್ರಾಂಡೆಡ್ ಉಡುಪುಗಳು ಉನ್ನತ ಪದವಿಗಳು ನಮ್ಮನ್ನು ಗುರುತಿಸುವಂತೆ ಮಾಡಬಹುದು ಆದರೆ ನಮ್ಮನ್ನು ಜನರ ಹೃದಯದಲ್ಲಿ ಶಾಶ್ವತವಾಗಿ ಉಳಿಸುವುದು ನಮ್ಮಲ್ಲಿರುವ ದಯಾಗುಣ ಒಂದೇ. ಬೆಳಗುವ ಬಾಳಿಗೆ ದಯೆಯನ್ನು ಬೆಳೆಸಿಕೊಳ್ಳುವುದು ಇಂದಿನ ತುರ್ತಾಗಿದೆ. ದಯೆ ಎಂದರೇನು? ದಯೆ ಎನ್ನುವುದು ಕೇವಲ ಯಾರಿಗಾದರೂ ಹಣ ಇಲ್ಲವೇ ವಸ್ತುಗಳನ್ನು ದಾನ ಮಾಡುವುದು ಎಂದು ಸಾಮಾನ್ಯವಾಗಿ ವ್ಯಾಖ್ಯಾನಿಸಲಾಗುತ್ತದೆ. ಆದರೆ, ನಿಜವಾದ ದಯೆಯು ಮುಂದಿನವರ ಕಷ್ಟವನ್ನು ತನ್ನದೇ ಕಷ್ಟ ಎಂದು ಭಾವಿಸುವುದಾಗಿದೆ. ನಮ್ಮ ಸಹಜೀವಿಗಳಿಗೆ ಅಂದರೆ ಪ್ರಾಣಿ ಪಕ್ಷಿಗಳಿಗೆ ಪ್ರೀತಿ ತೋರುವುದು. ಬೇರೆಯವರ ನೋವಿಗೆ ಸ್ಪಂದಿಸುವುದು ಮತ್ತು ಮುಂದಿನವರು ಹೇಳುವ ಮುನ್ನವೇ ಸ್ವಯಂಪ್ರೇರಿತವಾಗಿ ಒಳ್ಳೆಯದನ್ನು ಮಾಡುವುದೇ ದಯೆ ಆಗಿದೆ. ‘ದಯೆಯ ಯಾವುದೇ ಕೆಲಸವು ಎಷ್ಟೇ ಚಿಕ್ಕದಾಗಿದ್ದರೂ, ಅದು ಎಂದಿಗೂ ವ್ಯರ್ಥವಾಗುವುದಿಲ್ಲ.’ ಅಷ್ಟಕ್ಕೂ ದಯಾಗುಣದಲ್ಲಿ ನಿಸ್ವಾರ್ಥ ಭಾವ ಇರುತ್ತದೆ. ಅಂದರೆ ಇಲ್ಲಿ ಪ್ರತಿಯಾಗಿ ಏನನ್ನೂ ಅಪೇಕ್ಷಿಸದೇ ಒಳ್ಳೆಯದನ್ನು ಮಾಡುವುದು ಒಳಗೊಂಡಿದೆ. ಮನಷ್ಯನನ್ನು ಮನುಷ್ಯನನ್ನಾಗಿಸುವ ದಿವ್ಯ ಶಕ್ತಿಯೂ ಇದಕ್ಕಿದೆ. ಅಷ್ಟೇ ಅಲ್ಲ ಅದು ಸಮಾಜವನ್ನು ಒಂದುಗೂಡಿಸುವ ಅತ್ಯದ್ಭುತ ಶಕ್ತಿಯೂ ಆಗಿದೆ.ನಮ್ಮ ಕಷ್ಟ ಕಾಲದಲ್ಲಿ ದಯಾಳುಗಳು ಸ್ಪಂದಿಸಿದಾಗ ನಮಗೂ ಅವರ ಹಾಗೆ ಬೇರೆಯವರ ನೋವಿಗೆ ಮಿಡಿಯಬೇಕೆಂದು ಅನ್ನಿಸದೇ ಇರದು. ಆದರೆ ದಯೆಯನ್ನು ಹೇಗೆ ಬೆಳೆಸಿಕೊಳ್ಳುವುದೆಂದು ತಿಳಿಯುವುದೇ ಇಲ್ಲ. ನಿತ್ಯ ಬದುಕಿನಲ್ಲಿ ಕೆಲ ಬದಲಾವಣೆಗಳನ್ನು ತಂದುಕೊಳ್ಳುವ ಮೂಲಕ ನೀವೂ ದಯಾಳುಗಳಾಗಬಹುದು. ಬದುಕಿನ ಮೌಲ್ಯವನ್ನು ಹೆಚ್ಚಿಸಿಕೊಳ್ಳಬಹುದು. ಅದಕ್ಕೆ ಇಲ್ಲಿವೆ ಕೆಲವು ಸರಳ ತಂತ್ರಗಳು. ಸಹಾನುಭೂತಿ ನಮಗೆ ಗೊತ್ತಿಲ್ಲದಂತೆ ಬೇರೆಯವರನ್ನು ಟೀಕಿಸದಿದ್ದರೆ ನಿಂದಿಸದಿದ್ದರೆ ಉಂಡ ಅನ್ನ ಕರಗುವುದೇ ಇಲ್ಲವೆಂಬ ಕೆಟ್ಟ ಸ್ವಭಾವವನ್ನು ಅಂಟಿಸಿಕೊoಡಿರುತ್ತೇವೆ. ಇದು ಸಾಲದೆಂಬoತೆ ಕೋಪದಿಂದ ಪರಿಸ್ಥಿತಿಯನ್ನು ನಮಗೆ ಪೂರಕವಾಗುವಂತೆ ಮಾಡಿಕೊಳ್ಳಲು ನೋಡುವುದು. ಹಾಗೆ ಟೀಕಿಸುವ ಸ್ವಭಾವ ಬೇರೆಯವರಿಗೆ ಅದೆಷ್ಟು ನೋವನ್ನು ಉಂಟು ಮಾಡುತ್ತದೆಂಬುದು ನಮಗೆ ಗೊತ್ತಾಗುವುದೇ ಇಲ್ಲ. ದಯಾಳುಗಳಾಗಬೇಕೆಂದರೆ, ಯಾರನ್ನಾದರೂ ಟೀಕಿಸುವ ಮುನ್ನ ಅವರ ಪರಿಸ್ಥಿತಿಯಲ್ಲಿ ನಾನು ಇದ್ದಿದ್ದರೆ ಎಂದು ಯೋಚಿಸಬೇಕು. ಬೇರೆಯವರ ಪರಿಸ್ಥಿತಿಯನ್ನು ಅವರ ಸ್ಥಾನದಲ್ಲಿ ನಿಂತು ನೋಡುವುದೇ ಸಹಾನುಭೂತಿ. ಈ ರೀತಿಯ ಸಹಾನುಭೂತಿ ದಯೆಯನ್ನು ಹೆಚ್ಚಿಸುತ್ತದೆ. ದ್ವೇಷದ ಬದಲು ಪ್ರೀತಿಯಿಂದ ಪರಿಸ್ಥಿತಿಯನ್ನು ನಿಭಾಯಿಸಲು ಇದು ಕಲಿಸುತ್ತದೆ. ದಲೈ ಲಾಮಾ ಉಲ್ಲೇಖದಂತೆ ‘ಸಾಧ್ಯವಾದಾಗಲೆಲ್ಲ ದಯೆ ಉಳ್ಳವರಾಗಿರಿ ಮತ್ತು ದಯೆ ತೋರಿಸುವುದು ಯಾವಾಗಲು ಸಾಧ್ಯವಿರುತ್ತದೆ.’ ಆಲಿಸಿ ಇತ್ತೀಚಿಗೆ ನಾವೆಲ್ಲ ಬೇರೆಯವರ ಮಾತುಗಳನ್ನು ಸರಿಯಾಗಿ ಕೇಳಿಸಿಕೊಳ್ಳುವುದನ್ನು ಬಿಟ್ಟು ಬಿಟ್ಟಿದ್ದೇವೆ. ಎದುರಿಗಿನವರು ಏನೋ ಹೇಳುತ್ತಿದ್ದರೆ ನಾವು ಮೊಬೈಲ್‌ನಲ್ಲಿ ಬ್ಯುಸಿ ಇರುತ್ತೇವೆ. ಇಲ್ಲವೇ ಏನೂ ಸಂಬoಧವಿಲ್ಲದoತೆ ಕುಳಿತು ಬಿಡುತ್ತೇವೆ. ಉತ್ತಮ ಸಂವಹನವೆoದರೆ ಕೇವಲ ಮಾತನಾಡುವುದಲ್ಲ, ಎದುರಿಗಿನವರ ಮಾತನ್ನು ತಾಳ್ಮೆಯಿಂದ ಕೇಳುವುದು. ಬೇರೆಯವರು ತಮ್ಮ ನೋವನ್ನು ಹೇಳಿಕೊಳ್ಳುತ್ತಿರುವಾಗ ಅವರ ಮಾತನ್ನು ಮಧ್ಯದಲ್ಲೇ ಕತ್ತರಿಸದೇ ಪೂರ್ಣವಾಗಿ ಕೇಳಿಸಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು. ನಾನು ಹೇಳಿದ್ದನ್ನು ಎಲ್ಲರೂ ಕೇಳಿಸಿಕೊಳ್ಳಬೇಕು. ಆದರೆ ಬೇರೆಯವರು ಹೇಳಿದ್ದನ್ನು ಕೇಳಿಸಿಕೊಳ್ಳುವ ವ್ಯವಧಾನವಿಲ್ಲ ಎಂದರೆ ಸ್ವಾರ್ಥವಾಗಿ ಬಿಡುತ್ತದೆ. ಆದ್ದರಿಂದ ಇತರರನ್ನು ಸಾವಧಾನದಿಂದ ಆಲಿಸುವುದನ್ನು ಬೆಳೆಸಿಕೊಳ್ಳಬೇಕು.ಸಕಾರಾತ್ಮಕತೆಸಾಮಾಜಿಕ ಜಾಲತಾಣದಲ್ಲಿ ಯಾರನ್ನೋ ಟ್ರೋಲ್ ಮಾಡುವುದು ಕೀಳುಮಟ್ಟದ ಕಾಮೆಂಟ್ ಮಾಡುವುದು ಹೆಚ್ಚಾಗಿದೆ. ಇದರ ಬದಲು ಸಕಾರಾತ್ಮಕ ಕಾಮೆಂಟ್‌ಗಳನ್ನು ಹಾಕುವ ಮೂಲಕ ಡಿಜಿಟಲ್ ಲೋಕದಲ್ಲಿ ದಯಾಗುಣವನ್ನು ಮೆರೆಯಬಹುದು. ಮಾಯಾ ಎಂಜಿಲೋ ಅವರ ಉಲ್ಲೇಖವು ಇಲ್ಲಿ ಸೂಕ್ತವೆನಿಸುತ್ತದೆ. ‘ಜನರು ನೀವು ಹೇಳಿದ್ದನ್ನು ಮರೆಯಬಹುದು, ನೀವು ಮಾಡಿದ್ದನ್ನು ಮರೆಯಬಹುದು, ಆದರೆ ನೀವು ಅವರಿಗೆ ಹೇಗೆ ಅನಿಸುವಂತೆ ಮಾಡಿದ್ದೀರಿ ಎಂಬುದನ್ನು ಅವರು ಎಂದಿಗೂ ಮರೆಯುವುದಿಲ್ಲ. ಎಂದು ನಾನು ಕಲಿತಿದ್ದೇನೆ.’ ಪ್ರಕೃತಿ ಪ್ರಕೃತಿ ಸುಂದರ ಬದುಕಿಗೆ ಬೇಕಾಗಿದ್ದನ್ನೆಲ್ಲ ನಮಗೆ ನೀಡಿದೆ. ಹೀಗಾಗಿ ನಾವೂ ಸಹ ಪ್ರಕೃತಿಯ ಮೇಲೆ ಕರುಣೆ ತೋರಬೇಕು. ಅನಗತ್ಯವನ್ನು ಗಿಡ-ಮರಗಳನ್ನು ಕತ್ತರಿಸದಿರುವುದು. ಹಸಿದ ಮೂಕ ಪ್ರಾಣಿಗಳಿಗೆ ಆಹಾರ ನೀಡುವುದು. ಹಸಿದವರಿಗೆ ಅನ್ನ ನೀಡುವುದು, ಕಷ್ಟದಲ್ಲಿರುವವರಿಗೆ ಧೈರ್ಯ ತುಂಬುವುದು. ಹಿರಿಯರನ್ನು ಗೌರವಿಸುವುದು. ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರಿಡುವುದನ್ನು ಮರೆಯಬಾರದು. ಕ್ಷಮಾ ಗುಣ ಮಾರ್ಕ್ ಟ್ವೆನ್ ಹೇಳಿದ ಉಲ್ಲೇಖವು ಅತ್ಯದ್ಭುತವಾಗಿದೆ.’ ದಯೆ ಎನ್ನುವುದು ಕಿವುಡರು ಕೇಳಬಲ್ಲ, ಕುರುಡರು ನೋಡಬಲ್ಲ ಒಂದು ಅದ್ಭುತ ಭಾಷೆ.’ ಬೇರೆಯವರು ಮಾಡಿದ ತಪ್ಪುಗಳನ್ನು ಮನಸ್ಸಿನಲ್ಲಿಟ್ಟುಕೊಂಡು ದ್ವೇಷ ಸಾಧಿಸುವುದಾಗಲಿ, ಇಲ್ಲವೇ ಕೊರಗುವುದರಿಂದ ಏನೂ ಪ್ರಯೋಜನವಿಲ್ಲ. ಸಾದ್ಯವಾದಷ್ಟು ಬೇಗನೆ ಮರೆತು ಕ್ಷಮಿಸಬೇಕು. ಬೇರೆಯವರ ತಪ್ಪುಗಳನ್ನು ಸಾರ್ವಜನಿಕವಾಗಿ ನಿಂದಿಸದೆ ಖಾಸಗಿಯಾಗಿ ಮೃದುವಾಗಿ ತಿದ್ದಿ ಹೇಳಬೇಕು. ಅಂತೆಯೆ ನಿಮ್ಮ ಮೇಲೆ ನಿಮಗೆ ಪ್ರೀತಿ ದಯೆ ಇರುವುದು ಮುಖ್ಯವಾಗುತ್ತದೆ. ಎಂದೋ ಮಾಡಿದ ತಪ್ಪಿಗೆ ಇವತ್ತಿಗೂ ಕೂಡ ನಮ್ಮನ್ನು ನಾವು ದೂಷಿಸಿಕೊಳ್ಳುವುದು ಸರಿಯಲ್ಲ. ಭೂತಕಾಲದ ತಪ್ಪುಗಳಿಗಾಗಿ ದೂಷಿಸಿಕೊಳ್ಳುತ್ತಿದ್ದರೆ ಮನಸ್ಸು ಕಲುಷಿತಗೊಳ್ಳುತ್ತದೆ. ಆದ್ದರಿಂದ ಕ್ಷಮಾ ಗುಣವನ್ನು ಅಳವಡಿಸಿಕೊಳ್ಳಬೇಕು. ಅದು ಶಾಂತಿಯನ್ನು ನೀಡುತ್ತದೆ.ಭಾವನಾತ್ಮಕತೆಎದುರಿಗಿದ್ದವರು ತಪ್ಪು ಮಾಡಿದಾಗ ಅವರನ್ನು ಬೈಯುವ ಬದಲು ಅವರಿಗೆ ಸಮಾಧಾನದಿಂದ ಮಾತನಾಡಿಸಿ ಏನಾದರೂ ತೊಂದರೆ ಇರಬಹುದೇ ಎಂದು ಯೋಚಿಸಬೇಕು. ಅವರ ಭಾವನೆಗಳನ್ನು ಅರ್ಥೈಸಿಕೊಳ್ಳಲು ಮುಂದಾಗಬೇಕು. ನಿಮ್ಮ ಮಾತು ನಿಮ್ಮ ವ್ಯಕ್ತಿತ್ವಕ್ಕೆ ಕನ್ನಡಿ ಹಿಡಿಯುತ್ತದೆ. ಆದ್ದರಿಂದ ಮಾತು ಮೃದುವಾದಷ್ಟು ಒಳಿತು.  ‘ನುಡಿದರೆ ಮುತ್ತಿನ ಹಾರದಂತಿರಬೇಕು. ಎಂಬ ನುಡಿಯಂತೆ ನಮ್ಮ ಮಾತುಗಳು ಇತರರನ್ನು ಪ್ರೋತಾಹಿಸುವಂತಿರಬೇಕು. ಮಾತು ಮುಂದಿನವರಿಗೆ ಚೂರಿ ಇರಿಯುವಂತಿದ್ದರೆ ಅವರು ಎಂದೂ ನಿಮ್ಮನ್ನು ಕ್ಷಮಿಸುವುದಿಲ್ಲ. ನಿಮ್ಮ ಮಾತು ಮುಂದಿನವರಿಗೆ ನೋವುಂಟು ಮಾಡದಿದ್ದರೆ ನಿಮ್ಮ ವ್ಯಕ್ತಿತ್ವವನ್ನು ಎಲ್ಲರೂ ಗೌರವಿಸುತ್ತಾರೆ.  ಗೌತಮಬುದ್ಧ ಹೇಳಿದಂತೆ ‘ಕೋಪವನ್ನು ಪ್ರೀತಿಯಿಂದ ಗೆಲ್ಲಿ, ಕೆಡುಕನ್ನು ಒಳಿತಿನಿಂದ ಗೆಲ್ಲಿ, ಜಿಪುಣತನವನ್ನು ದಾನದಿಂದ ಗೆಲ್ಲಿ, ಸುಳ್ಳನ್ನು ಸತ್ಯದಿಂದ ಗೆಲ್ಲಿ.’ ಬದುಕಲು ಬಿಡೋಣ ವಿಜ್ಞಾನ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಮನುಷ್ಯನಲ್ಲಿ ದಯೆ ಇಲ್ಲದಿದ್ದರೆ ಆತ ಜೀವಂತ ಶವಕ್ಕೆ ಸಮಾನ. ಅಂಥ ಸಮಾಜಕ್ಕೆ ಬೆಲೆಯೂ ಇರುವುದಿಲ್ಲ. ಮಹಾತ್ಮಾ ಗಾಂಧೀಜಿ ಹೇಳಿದಂತೆ ‘ಎಲ್ಲಿ ದಯೆ ಮತ್ತು ಪ್ರೀತಿ ಇರುತ್ತದೆಯೋ, ಅಲ್ಲಿ ದೇವರು ಇರುತ್ತಾನೆ.’ ದಯೆ ಹಣಕ್ಕಿಂತಲೂ ಮುಖ್ಯ ಹೀಗಾಗಿ ದಯೆ ತೋರಲು ಶ್ರೀಮಂತ ಇರಬೇಕೆಂದೇನೂ ಇಲ್ಲ. ಒಳ್ಳೆಯ ಮನಸ್ಸಿದ್ದರೆ ಸಾಕು. ಅಗತ್ಯವಿದ್ದವರಿಗೆ  ಸಣ್ಣ ಪುಟ್ಟ ಸಹಾಯದಿಂದಲೂ ದಯೆ ತೋರಬಹುದು. ದಾರಿ ತಪ್ಪಿದವರಿಗೆ ದಾರಿ ತೋರಿಸಬಹುದು. ಪ್ರಕೃತಿ ಮೇಲೆ ಪವಿತ್ರ ಭಾವ ಹೊಂದಬೇಕು. ಪರರ ಕಷ್ಟಗಳನ್ನು ಕಂಡು ಕರಗುವ ಮತ್ತು ಫಲಾಪೇಕ್ಷೆಯಿಲ್ಲದೇ ಸಹಾಯ ಮಾಡಲು ಮುಂದಾಗುವ ಮನಸ್ಸನ್ನು ಬೆಳಸಿಕೊಳ್ಳಬೇಕು. ‘ಬದುಕೋಣ ಬದುಕಲು ಬಿಡೋಣ.’ ಎಂಬ ತತ್ವವನ್ನು ಪಾಲಿಸಿದರೆ ಜೀವನ ನಂದನವನವಾಗುವುದು ಜಯಶ್ರೀ.ಜೆ. ಅಬ್ಬಿಗೇರಿ

“ಬೆಳಗುವ ಬಾಳಿಗೆ ಕರಗುವ ಮನಸ್ಸು” ಜಯಶ್ರಿ ಜೆ ಅಬ್ಬಿಗೇರಿ Read Post »

ಕಾವ್ಯಯಾನ

ಚಂಪಾ ಬಿ. ಜಿ. ಅವರ ಕವಿತೆ “ಒಲವಿನೋಲೆ”

ಕಾವ್ಯ ಸಂಗಾತಿ ಚಂಪಾ ಬಿ. ಜಿ. “ಒಲವಿನೋಲೆ” ಮಣ್ಣಿನ ವಾಸನೆ ಹೊತ್ತ ಮೊಗಸಿರಿಮುಗ್ಧ ನಗುವಿನ ಮೋಹನಾಂಗಿನಿನ್ನ ನಡಿಗೆಯ ಲಯಕೆಸುಳಿಗಾಳಿ ತಿಳಿಯಾಗಿತುಂತುರು ಹನಿಯಾಗಿಭುವಿಯೆಲ್ಲಾ ಹರಡಿತೇನೋಇವಳ ಒಡನಾಟವೇಮಧುರ ಸಂಗೀತವಾಗಿಝರಿಯಾಗಿ ಹರಿಯಿತೇನೋಸೂರ್ಯನ ಕಿರಣ ಕೂಡನಾಚಿ ಮೇಘಗಳ ಹಿಂದೆ ಸರಿಯಿತೇನೋನೀ ನಡೆವ ಹಾದಿಯಲಿ ನಿಸರ್ಗವೇಬರೆಯಿತೇನೋ ಒಲವಿನೋಲೆ. ಚಂಪಾ ಬಿ. ಜಿ.

ಚಂಪಾ ಬಿ. ಜಿ. ಅವರ ಕವಿತೆ “ಒಲವಿನೋಲೆ” Read Post »

You cannot copy content of this page

Scroll to Top