ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಜೀವನ

“ರಹಸ್ಯ ಪ್ರೇಮ ವಿವಾಹ ಒಳ್ಳೆಯದಲ್ಲ”ವಿಶೇಷ ಲೇಖನ ವನಜ ಮಹಾಲಿಂಗಯ್ಯ

ವೈವಾಹಿಕ ಸಂಗಾತಿ ವನಜ ಮಹಾಲಿಂಗಯ್ಯ “ರಹಸ್ಯ ಪ್ರೇಮ ವಿವಾಹ ಒಳ್ಳೆಯದಲ್ಲ” “ರಹಸ್ಯ ಪ್ರೀತಿ, ಮದುವೆ ಒಳ್ಳೆಯದಲ್ಲ.”ದುಶ್ಯಂತ ಶಾಕುಂತಳೆಯನ್ನು ಮದುವೆಯಾಗಿರುವುದನ್ನೆ  ಮರೆತುಬಿಟ್ಟಿದ್ದಾನೆ. ಅಲ್ಲಿ ಶಕುಂತಳೆ ಗರ್ಭವತಿಯಾಗಿದ್ದಾಳೆ. ಅವಳನ್ನು ದುಷ್ಯಂತನ ಬಳಿಗೆ ಬಿಟ್ಟುಬರಲು ಕಣ್ವಮಹರ್ಷಿಗಳು ಶಿಷ್ಯ ನೊಂದಿಗೆ ಶಕುಂತಲೆಯನ್ನು ಅರಮನೆಗೆ ಕಳುಹಿಸುತ್ತಾರೆ.ಅಲ್ಲಿ ದುಷ್ಯಂತ ಹಾಗು ಶಿಷ್ಯ ಶಾಂಘ್ರವನಿಗೂ ಮಾತು ಕತೆ ನಡೆಯುತ್ತದೆ. ಶಂಕುತಳೆ ನಿನ್ನ ಹೆಂಡತಿಯೆಂದು ಕಣ್ವರ ಶಿಷ್ಯ ಎಷ್ಟು ಹೇಳಿದರೂ ದುಷ್ಯಂತ ಒಪ್ಪುವುದಿಲ್ಲ. ಆಗ ಶಾಂಘ್ರವನಿಗೆ ಶಕುಂತಳೆಯ ಮೇಲೆ  ಕೋಪ ಬರುತ್ತದೆ.ಕಾರಣ  ಇವಳ ಒಂದು ಕ್ಷಣದ ಅವಿವೇಕದಿಂದ ಎಂತಹ ಅಪಹಾಸ್ಯಕ್ಕೆ ಗುರಿಯಾದಳೆಂದು. ಆಗ ಒಂದು ಮಾತನ್ನು ಹೇಳುತ್ತಾನೆ.ಯಾರಿಗೂ ಗೊತ್ತಿಲ್ಲದಂತೆ ಪ್ರೀತಿಸುವಾಗ ಅಥವಾ ರಹಸ್ಯವಾಗಿ ಮದುವೆಯಾಗುವಾಗ  ಆ ವ್ಯಕ್ತಿಯ ಬಗ್ಗೆ ಚನ್ನಾಗಿಪರೀಕ್ಷೆ ಮಾಡಿರಬೇಕು. ಅವರ ಸ್ವಭಾವ ಸರಿಯಾಗಿ ತಿಳಿಯದಿದ್ದರೆ ಪ್ರೀತಿಯೂ ಸಹ ದ್ವೇಷವಾಗಿ ಮಾರ್ಪಾಡಾಗಲು ತುಂಬಾ ಸಮಯವಾಗುವುದಿಲ್ಲ.ದುಷ್ಯಂತ ಹಾಗು ಶಂಕುತಳೆ ಗುಟ್ಟಾಗಿ ಸೇರಿದವರು. ಅವರಿಬ್ಬರ ಸಂಬಂಧಕ್ಕೆ  ಯಾವ ಸಾಕ್ಷಿಯೂ ಇರಲಿಲ್ಲ. ಇದ್ದ ಒಂದು ಉಂಗುರವೂ ಕಳೆದುಹೋಗಿದೆ. ಅವರಿಬ್ಬರ ಮದುವೆಯಾಗಿದ್ದು ಹಿರಿಯರಿಗೆ ಗೊತ್ತಿದ್ದರೆ ಶಕುಂತಳೆಯನ್ನು ಹೆಂಡತಿಯೆಂದು ದುಷ್ಯಂತ ಒಪ್ಪಿಕೊಳ್ಳಬೇಕಿತ್ತು. ರಹಸ್ಯವಾಗಿ ಮದುವೆಯಾಗಿದ್ದರಿಂದ ಶಕುಂತಳೆಯ ಪೋಷಕರು ಅಸಹಾಯಕರು.   ಅಂದು ಕಾಳಿದಾಸ ಈ ನಾಟಕ ಬರೆದ ಸಮಯ ಈಗಿನ ಸಮಯಕ್ಕೂ ತುಂಬಾ ಅಂತರ ವಿದ್ದರೂ ಪರಿಸ್ಥಿತಿ ಮಾತ್ರವೇ ಬದಲಾಗಿಲ್ಲ. ಇಂದಿನ ಮಕ್ಕಳು ಗುಟ್ಟಾಗಿ ಪ್ರೀತಿಸಿ ಓಡಿಹೋಗಿ ಮದುವೆಯಾಗಿ ಮುಂದಿನ ದಿನಗಳಲ್ಲಿ ಎಡವಟ್ಟಾಗಿ ತುಂಬಾ ನೋವು ಅನುಭವಿಸುತ್ತಾರೆ. ಪಾಲಕರಿಗೂ ಕಷ್ಟ ಕೊಡುತ್ತಾರೆ.ಅದರಲ್ಲೂ ಹೆಚ್ಚು ಕಷ್ಟಕ್ಕೆ ಗುರಿಯಾಗುವವರು ಅಪ್ಪ ಅಮ್ಮ.ಪ್ರಾಯದ ಬಿಸಿಯಲ್ಲಿ  ಪ್ರೀತಿಯ ಗುಂಡಿಗೆ ಬೀಳಲು ಒಂದು ಕ್ಷಣ ಸಾಕು. ಆದರೆ ಒಬ್ಬರನ್ನು ಒಬ್ಬರು ಅರಿತುಕೊಳ್ಳದೇ ಆಕರ್ಷಣೆಗೆಪ್ರೀತಿಸಿದರೆ ಅದು ಹೆಚ್ಚುಕಾಲ ಉಳಿಯವುದು ಅಕ್ಷರಶಃ ಸುಳ್ಳು.  ಯಾವ ವ್ಯಕ್ತಿಯ ಗುಣ ಸರಿಯಾಗಿ ಗೊತ್ತಿರುವುದಿಲ್ಲವೋ ಅಂತಹ ವ್ಯಕ್ತಿಯು ವೈರಿಯಾಗುತ್ತಾನೆ. ಅಂದಾಗಲಿ ಇಂದಾಗಲಿ ಸಂಬಂಧಗಳೇ ಸಾಕ್ಷಿಯನ್ನು ಹೇಳುತ್ತವೆ.  ನಾವಿಬ್ಬರೂ ಮದುವೆಯಾಗಿದ್ದೇವೆ ಎಂದರೆ  ಸಾಕ್ಷಿ ತೋರಿಸಲು ಕೋರ್ಟು ಕೇಳುತ್ತದೆ. ಅಂದು ದುಷ್ಯಂತನು  ಶಕುಂತಳೆಗು ಅದನ್ನೆ ಕೇಳಿದ್ದು.  ಅದಕ್ಕೆ ಗುಟ್ಟಾಗಿ ಮದುವೆ ಮಾಡಿಕೊಂಡು ಹೆತ್ತವರಿಗೂ ಸಂಬಂಧಿಕರಿಗೂ ಅವಮಾನ ಮಾಡಬೇಡಿ. ಜೀವ ಚಿಕ್ಕದು, ಜೀವನ ದೊಡ್ಡದು.  ಎಲ್ಲರ ಒಪ್ಪಿಗೆಯಿಂದ ನಡೆದ ಮದುವೆಗಳಲ್ಲಿ ಏನಾದರೂ ತೊಂದರೆಯಾದರೆ ಹೇಳಲು  ನಿಮ್ಮವರು ಎಲ್ಲರೂ ಇರುತ್ತಾರೆ.ಗುಟ್ಟಾಗಿ ಮದುವೆಯಾಗಿ ಆತ್ಮಹತ್ಯಗೆ ಶರಣಾಗಿ ಹೆತ್ತವರ ಮನಸ್ಸು ನೋಯಿಸಬೇಡಿ. ಅಂದು ದುಷ್ಯಂತ ಶಕುಂತಳೆಯ ಮದುವೆ ಸಾಕ್ಷಿಯಾಗಿದ್ದುದು ಒಂದು ಉಂಗುರ, ಹಾಗು ಕಣ್ವಾಶ್ರಮದಲ್ಲಿದ್ದ ಒಂದು ಜಿಂಕೆ ಮಾತ್ರವೆ.  ಆದರೆ ಉಂಗುರ ಕಳೆದಿತ್ತು .  ಪಾಪ ಜಿಂಕೆ ಸಾಕ್ಷ್ಯ ಯಾರು ಕೇಳುತ್ತಾರೆ?    ಇತ್ತಿಚೆಗೆ ನಡೆಯುತ್ತಿರುವ ಘಟನೆಗಳು ಮೈ ಜುಮ್ಮೆನಿಸುತ್ತದೆ. ತುಂಡು ತುಂಡಾಗಿ ಕತ್ತರಿಸಿ ಬಿಸಾಕಿದ ಹುಡುಗಿಯ  ಕತೆ. ಬೇಡ ಮಕ್ಕಳೆ ಯಾರೂ ಅಂತಹ ತಪ್ಪು ಮಾಡಿ  ಜೀವಕಳೆದುಕೊಳ್ಳಬೇಡಿ. ಮದುವೆಯ ವಿಷಯದಲ್ಲಿ ದುಡುಕಬೇಡಿ.  ಗುಟ್ಟು ಮಾಡಬೇಡಿ. ಹೆತ್ತವರಿಗೆ ಅವರ ಜವಾಬ್ದಾರಿ ಗೊತ್ತಿರುತ್ತದೆ. ವನಜ ಮಹಾಲಿಂಗಯ್ಯಅಧ್ಕಕ್ಷರುವಿಶ್ವವಿನೂತನ ಮಹಿಳಾ ಸಮಾಜ ದಾವಣಗೆರೆ

“ರಹಸ್ಯ ಪ್ರೇಮ ವಿವಾಹ ಒಳ್ಳೆಯದಲ್ಲ”ವಿಶೇಷ ಲೇಖನ ವನಜ ಮಹಾಲಿಂಗಯ್ಯ Read Post »

ಕಾವ್ಯಯಾನ

ಹಮೀದ್ ಹಸನ್ ಮಾಡೂರು “ಸುಕನ್ಯೆ”

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ಸುಕನ್ಯೆ” ಅಂದ್ಕೊಂಡುನಾನವಳ ಕಂಡ ಆ ದಿನಪ್ರೀತಿಸ ತೊಡಗಿದೆ ಮನಸಾರೆ,! ಅವಳ ಸೌಂದರ್ಯಕ್ಕೆಮರುಳಾಗಿ ಕಿರು ನಗೆ ಸೂಸಿ ಬಿಟ್ಟೆಕಣ್ಣೋಟಕೆ ಅವಳ, ಅಲ್ಲಿಂದ ಕಾಲ್ಕಿತ್ತೇ,! ಭಯಪಟ್ಟು ಬೆವರಿಳಿಸಿದೆಕೋಪಿಸುವಳೋ ಎಂಬ ಭಯದಿಹೆಜ್ಜೆಯ ವೇಗ ಹೆಚ್ಚಿಸಿ,ಮುನ್ನಡೆದು ಬಿಟ್ಟೆ,! ಮತ್ತೇ ಮತ್ತೇ….ಕಣ್ಣಾರಳಿಸಿದಾರಿ ಕೇರಿಯೊಳು ಸುತ್ತಿ ಅಲೆದುಹೃದಯಕ್ಕೆ ಸಿಕ್ಕಿಸಲಾವಳ ಆಸೆಯ ಪಟ್ಟೆ,! ಸುಕನ್ಯೆ ಅವಳೆಂದು….ಪ್ರೀತಿಸಿ ಸರಸ ಅವಳ ಬಯಸಿದೆಸ್ತ್ರೀ ಅವಳಲ್ಲವೆಂದು ಅರಿತಾಗ ಕೊರಗಿದೆ.! ಮತ್ತೇ ಮತ್ತೇ ಅವಳ…ಸೌಂದರ್ಯಕ್ಕೆ ಮರುಳಾಗಿ ನಾಹುಚ್ಚನಂತೆ ತನ್ನ ತಾನು ಮರೆತು ಬಿಟ್ಟೇ. ಹಮೀದ್ ಹಸನ್ ಮಾಡೂರು.

ಹಮೀದ್ ಹಸನ್ ಮಾಡೂರು “ಸುಕನ್ಯೆ” Read Post »

ಕಾವ್ಯಯಾನ

ರತ್ನರಾಯಮಲ್ಲ ಅವರ‌ ಗಜಲ್

ಕಾವ್ಯ ಸಂಗಾತಿ ರತ್ನರಾಯಮಲ್ಲ ಗಜಲ್ ಸರಳವೆಂತಾರೆ ಬದುಕು ಸರಳವಲ್ಲ ನೋಡಬೇಕು ಸರಳವಾಗಿಯೋಚನೆಗಳಿಗೆ ಕೊನೆಯಿಲ್ಲ ವಿರಾಮ ನೀಡಬೇಕು ಸರಳವಾಗಿ ಸುಗಮವಾಗದು ಬುದ್ಧಿವಂತಿಕೆ ಹೃದಯವಂತಿಕೆಗಳ ಸಂಗಮವಾಸ್ತವದಲಿ ಕನಸುಗಳಿಗೆ ರಾಗ ಕಟ್ಟಿ ಹಾಡಬೇಕು ಸರಳವಾಗಿ ಅವರವರ ವಿಷಯದಲಿ ಸಾಕಷ್ಟಿದೆ ನೋಡಲು ನಮ್ಮ ವಿಷಯದಲಿಇತರರಿಗಿಂತ ಮೊದಲು ನಮ್ಮನ್ನು ನಾವು ಕಾಡಬೇಕು ಸರಳವಾಗಿ ಜೀವನ ಸಾಕೆನಿಸುವುದಕಿಂತ ಮುಂಚೆ ಬೇಕಾದಂತೆ ಬಾಳಬೇಕುಆಸೆಗಳು ಸಾಯಿಸುವ ಮುಂಚೆ ಗೋರಿ ತೋಡಬೇಕು ಸರಳವಾಗಿ ಗೊಂದಲಗಳಿರುವುದು ದುನಿಯಾದಲಿ ಅಲ್ಲ ನಮ್ಮ ಚಿಂತನೆಗಳಲಿಮಲ್ಲಿಗೆಯ ಸುಮದಂತೆ ವಿಚಾರಗಳನು ಹೂಡಬೇಕು ಸರಳವಾಗಿ ರತ್ನರಾಯಮಲ್ಲ

ರತ್ನರಾಯಮಲ್ಲ ಅವರ‌ ಗಜಲ್ Read Post »

ಕಾವ್ಯಯಾನ

ಡಾ ವಿಜಯಲಕ್ಷ್ಮಿ ಪುಟ್ಟಿ ಅವರ ಕವಿತೆ “ಬಚ್ಚಿಟ್ಟುಕೋ”

ಕಾವ್ಯ ಸಂಗಾತಿ ಡಾ ವಿಜಯಲಕ್ಷ್ಮಿ ಪುಟ್ಟಿ “ಬಚ್ಚಿಟ್ಟುಕೋ” ಎದೆಯೊಳಗೆ ನನ್ನ ಬಚ್ಚಿಟ್ಟುಕೊ,ಉಸಿರ ಪಿಸುಮಾತ ಹಾಗೆ,ಕಣ್ಣಿನಲಿ ನನ್ನ ಕಾಯ್ದಿರಿಸಿಕೊ, ರೆಪ್ಪೆಗಳ ಕಾವಲ ಹಾಗೆ ​ನನ್ನೆಲ್ಲ ನೋವುಗಳ ಮರೆಸಿಬಿಡು, ನಿನ್ನೊಂದು ಕಿರುನಗೆಯಲಿ,ಮತ್ತೆ ಹುಟ್ಟಿ ಬರುವೆ ನಾನು, ಮುಂಜಾವಿನ ಹೊಸ ಕಿರಣದ ಹಾಗೆ ​ಹೃದಯದ ಈ ಬಡಿತದಲಿ ಕೇಳಿಸಲಿ ಬರೀ ನಿನ್ನದೇ ಹೆಸರುಜೊತೆಯಾಗಿ ನಡೆದು ಬರುವೆ ನಾನು, ನಿನ್ನ ನೆರಳಿನ ಹಾಗೆ ​ಜಗದ ಈ ಜಂಜಾಟದಲಿ ನಾ ಕಳೆದು ಹೋದರೂ ಚಿಂತೆಯಿಲ್ಲಮರಳಿ ಸೇರುವೆ ನಿನ್ನ ಮಡಿಲನು, ಸಂಜೆಯ ಹಕ್ಕಿಯ ಹಾಗೆ ​ ಬರೆಯುವೆ ನಿನ್ನ  ಪ್ರೀತಿಯ ಹೆಸರ  ಪುಟ ಪುಟದ ಸಾಲಿನಲಿಅಳಿಯದಂತೆ ಉಳಿದುಬಿಡು ನೀನು, ಕವಿತೆಯ ಮೌನದ ಹಾಗೆ … ಡಾ ವಿಜಯಲಕ್ಷ್ಮಿ ಪುಟ್ಟಿ

ಡಾ ವಿಜಯಲಕ್ಷ್ಮಿ ಪುಟ್ಟಿ ಅವರ ಕವಿತೆ “ಬಚ್ಚಿಟ್ಟುಕೋ” Read Post »

ಅಂಕಣ ಸಂಗಾತಿ, ಭಾರತದಮಹಿಳಾ ಮುಖ್ಯಮಂತ್ರಿಗಳು

ಅಂಕಣ ಸಂಗಾತಿ
ಭಾರತದಮಹಿಳಾ ಮುಖ್ಯಮಂತ್ರಿಗಳು
ಸುರೇಖಾ ರಾಠೋಡ್

ಬಿಹಾರದ ಮೊದಲ ಮಹಿಳಾ ಮುಖ್ಯಮಂತ್ರಿ ರಾಬ್ರಿ ದೇವಿ
(ಅಧಿಕಾರ ಅವಧಿ: ೭ವರ್ಷ ೧೯೦ ದಿನಗಳು)

Read Post »

ಇತರೆ

ನಮ್ಮನ್ನು ಅಗಲಿದ ಲೇಖಕಿ ಆಶಾ ರಘು ಅವರಿಗೆ ಸಂಗಾತಿಯ ಶ್ರದ್ದಾಂಜಲಿಗಳು

ನಮ್ಮನ್ನು ಅಗಲಿದ ಲೇಖಕಿ ಆಶಾ ರಘು ಅವರಿಗೆ ಸಂಗಾತಿಯ ಶ್ರದ್ದಾಂಜಲಿಗಳು ಸಂಗಾತಿಗೆ ಹೆಚ್ಚು ಬರೆಯದೇ ಹೋದರು ತಮ್ಮ ಬರಹಗಳಬಗ್ಗೆತಮ್ಮ ಪುಸ್ತಕಗಳ ಬಗ್ಗೆ ಜೊತೆಗೆ ತಮಗಿಷ್ಟವಾದ ಸಾಹಿತ್ಯ ಚಟುವಟಿಕೆಗಳ ಬ ಗ್ಗೆ ನಮ್ಮೊಂದಿಗೆ ಸದಾ ಮಾಹಿತಿ ಹಂಚಿಕೊಳ್ಳುತ್ತಿದ್ಷದರುಈಗವರು ನಮ್ಮೊಂದಿಗಿಲ್ಲ ಎನ್ನುವುದನ್ನು ನಮಗೆ ನಂಬಲಾಗುತ್ತಿಲ್ಲ. ಅವರ ಆತ್ಮಕ್ಕೆ ಶಾಂತಿದೊರೆಯಲೆಂದು ಸಂಗಾತಿ ಪತ್ರಿಕೆ ಪ್ರಾರ್ಥಿಸುತ್ತದೆ ಸಂಪಾದಕೀಯ ಮಂಡಳಿ,ಸಂಗಾತಿ ಸಾಹಿತ್ಯ ಪತ್ರಿಕೆ

ನಮ್ಮನ್ನು ಅಗಲಿದ ಲೇಖಕಿ ಆಶಾ ರಘು ಅವರಿಗೆ ಸಂಗಾತಿಯ ಶ್ರದ್ದಾಂಜಲಿಗಳು Read Post »

ಇತರೆ, ಜೀವನ

“ಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ!!” ಜಯಶ್ರೀ.ಜೆ.ಅಬ್ಬಿಗೇರಿ

ಬದುಕಿನ ಸಂಗಾತಿ ಜಯಶ್ರೀ.ಜೆ.ಅಬ್ಬಿಗೇರಿ “ಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ!!” ಸುತ್ತು ಬಳಸಿ ಮತ್ತೆ ಮತ್ತೆ ಸಮಸ್ಯೆಗಳೆಲ್ಲ ನನ್ನ ಪಾಲಿಗೆ ಏಕೆ ಬರುತ್ತಿವೆ? ಉಳಿದವರೆಲ್ಲ ಹಾಯಾಗಿದ್ದಾರೆ ನನಗೆ ಮಾತ್ರ ಹೀಗಾಗುತ್ತಿದೆ. ಎಂದು ಬಹಳಷ್ಟು ಸಲ ಅಂದುಕೊಳ್ಳುತ್ತೇವೆ.. ಪ್ರೀತಿ ಪಾತ್ರರು ಮರಣಿಸಿದಾಗ, ಬಹಳಷ್ಟು ಇಷ್ಟ ಪಟ್ಟದ್ದು ಸಿಗದೇ ಇದ್ದಾಗ, ಅಂದುಕೊoಡದ್ದು ಅಂದುಕೊoಡoತೆ ಆಗದೇ ಇದ್ದಾಗ ನನ್ನ ಬದುಕಿನಲ್ಲಿ ದುರಂತಗಳ ಸರಮಾಲೆ ಬೆನ್ನು ಬಿಡದ ಬೇತಾಳನಂತೆ ಬೆನ್ನು ಹತ್ತಿವೆ. ನನಗೇ ಏಕೆ ಹೀಗೆ ಆಗುತ್ತೆ? ಎನ್ನುವ ಪ್ರಶ್ನೆ ತಲೆ ಹೊಕ್ಕು ಕಟ್ಟಿಗೆ ಹುಳು ಕೊರೆಯುವಂತೆ ಕೊರೆಯುತ್ತದೆ. ಪದೇ ಪದೇ ತೊಂದರೆ ಕೊಡುವ, ನಮ್ಮನ್ನು ಏಳ್ಗೆ ಆಗದಂತೆ ತಡೆಯುವ ಈ ಪ್ರಶ್ನೆಯಿಂದ ಬಚಾವಾಗುವುದು ಹೇಗೆ? ಎಂದು ಯೋಚಿಸುತ್ತೇವೆ. ಅಲ್ಲವೇ? ಈ ಕಾಡುವ ಯೋಚನೆಗೆ ಪೂರ್ಣ ವಿರಾಮ ಹಾಕಲು ಸಹಕಾರಿಯಾಗುವ ಅಂಶಗಳತ್ತ ಒಮ್ಮೆ ಗಮನ ಹರಿಸಿ.ಸುತ್ತ ಕಣ್ಣು ಹರಿಸಿ ದುರಂತಗಳು ಸಂಭವಿಸಿದಾಗ, ವಿಷಮ ಗಳಿಗೆಯಲ್ಲಿ ಭವಿಷ್ಯದ ದಾರಿಯೇ ಕಾಣದೇ ಕತ್ತಲೆಯಲ್ಲಿ ಕುಳಿತಾಗ ನನಗೇಕೆ ಹೀಗೆ? ಎನ್ನುವ ಮನಸ್ಥಿತಿಯಿಂದ ಹೊರಬಂದು ನಿಮ್ಮಸುತ್ತ ಮುತ್ತಲಜನ-ಜೀವನದೆಡೆಗೆ ಕಣ್ಣು ಹರಿಸಿ ಇತರರು ನಿಮ್ಮಂತೆ ಸಮಸ್ಯೆಯಲ್ಲಿದ್ದರೂ ಅದನ್ನು ದೊಡ್ಡದಾಗಿಸಿದೇ ನಗುವ ಮೊಗವ ಹೊತ್ತು ಕೆಲಸ ಕಾರ್ಯಗಳಲ್ಲಿ ತೊಡಗಿಕೊಂಡಿರುತ್ತಾರೆ. ಆದ ನೋವಿನ ಕಡೆ ಹೆಚ್ಚು ಗಮನ ಕೊಡದೇ ನೋವುಂಡರೂ ನಗುವ ಪ್ರಯತ್ನ ಮಾಡುತ್ತಾರೆ. ಇತರರ ದುಃಖಕ್ಕೆ ಕಿವಿಗೊಡುವದರಲ್ಲಿ ಸಂತೃಪ್ತಿ ಕಾಣುತ್ತಾರೆ. ‘ನಾನು ಬರಿಗಾಲಲ್ಲಿ ನಡೆಯಬೇಕಿದೆ ನನ್ನ ಬಳಿ ಪಾದರಕ್ಷೆಗಳಿಲ್ಲ ಎಂದು ಕಣ್ಣೀರಿಡುತ್ತಿರುವಾಗ ಕಾಲಿಲ್ಲದವನನ್ನು ಕಂಡೆ ನನ್ನ ನೋವು ನೋವೇ ಅಲ್ಲ ಅನಿಸಿತು. ದೇವರಿಗೆ ಕೃತಜ್ಞನಾಗಿರಬೇಕು ನಾನು.’ ಎಂದೊಮ್ಮೆ ವಿಲಿಯಮ್ ಶೇಕ್ಸ್ಪಿಯರ್ ಹೇಳಿದ ಮಾತು ಎಷ್ಟೊಂದು ಮಾರ್ಮಿಕವಾಗಿದೆ. ದುರಂತವೆoದರೆ ನಾವು ನಮ್ಮ ಸುತ್ತ ರೇಷ್ಮೆ ಹುಳುವಿನಂತೆ  ಗೂಡು ಕಟ್ಟಿಕೊಂಡು ಯಾರೋ ನಮ್ಮನ್ನು ಮೇಲೇಳದಂತೆ ತಡೆಯುತ್ತಿದ್ದಾರೆ ಎಂದು ಗೋಳಿಡುವುದುಕಣ್ಣು ಹೊರನೋಟಗಳನ್ನು ನೋಡಲಿ.  ಅಂತರಗಣ್ಣಿನಿoದ ಪರಾಮರ್ಶಿಸಲಿ. ಆಗ ನಿಮಗೆ ಬಂದ ಸಂಕಟ ಏನೂ ಅಲ್ಲವೇ ಅಲ್ಲ ನನಗಿಂತ ಕಷ್ಟದಲ್ಲಿರುವವರು ತುಂಬಾ ಜನರಿದ್ದಾರೆ. ನನಗೆ ದೇವರು  ಅಂಥ ದುಸ್ಥಿತಿ ಬರದಂತೆ ಕಾಪಾಡಿದ್ದಾನೆ ಎಂದೆನಿಸುವುದು.ದುಃಖದಿoದ ಹೊರಬಂದು ಅದೇ ಅನುಭವ ಪಡೆದ ಇತರರ ಬಗ್ಗೆ ಯೋಚಿಸಿ. ಅವರೊಂದಿಗೆ ಮಾತನಾಡಿ ಆಗ ಅವರ ಬಗೆಗೆ ನಿಮಗೆ ಅನುಕಂಪ ತಾದ್ಯಾತ್ಮತೆ ಮೂಡುತ್ತದೆ.ನೀವಿನ್ನೂ ಅನುಕೂಲಕರ ಪರಿಸ್ಥಿತಿಯಲ್ಲಿರುವಿರಿ ಎಂದೆನ್ನಿಸುವುದು.   ದುರ್ಘಟನೆ ಆಹ್ವಾನಿಸದಿರಿ ಎಲ್ಲ ದುರಂತಗಳು  ಒಮ್ಮಿಂದೊಮ್ಮೆಲೇ ಧುತ್ತನೇ ಘಟಿಸುವುದಿಲ್ಲ. ಕೆಲವೊಂದು ನಮ್ಮ ಸ್ವಯಂ ಕೃತ ತಪ್ಪುಗಳಿಂದ ಉದಾಸೀನತೆಯಿಂದ ಘಟಿಸುತ್ತವೆ. ಅವುಗಳನ್ನು ನಾವೇ ಕೈ ಹಿಡಿದು ತಂದು ನಮ್ಮ ಬಾಳಲ್ಲಿ ಮಣೆ ಹಾಕಿ ಕೂಡ್ರಿಸಿ ಕೊಳ್ಳುತ್ತೇವೆ.ನಮಗರಿವಿಲ್ಲದಂತೆ ಗೆದ್ದಲು ಹುಳುವಿನಂತೆ ನಮ್ಮ ಅಸ್ತಿತ್ವವನ್ನು ಇಲ್ಲದಂತೆ ಮಾಡಲು ದಿನವೂ ಕಾರ್ಯನಿರತಆಗಿರುತ್ತವೆ ತುರ್ತು ಜರೂರು ಮಹತ್ವದ ವಿಷಯಗಳನ್ನು ಪರಿಗಣಿಸಿ ಕ್ರಿಯಾಶೀಲರಾದರೆ, ನಡೆಯುವ ದುರ್ಘಟನೆಗಳ ಅವಕಾಶದ ಬಾಗಿಲು ಮುಚ್ಚಿದರೆ ಸದಾ ಕಾಲಕ್ಕೂ ಮುಚ್ಚಿ ಹೋಗುತ್ತವೆ. ಇನ್ನು ನಿಮ್ಮ ನಿಯಂತ್ರಣದಾಚೆಗೆ ನಡೆವ ದುರಂತಗಳಿಗೆ ಪ್ರತಿಯಾಗಿ  ಸಹನ ಶಕ್ತಿಯಿಂದ ದಿಟ್ಟತನದಿಂದ ಪ್ರತಿಕ್ರಿಯಿಸಿದರೆ ಸಮಸ್ಯೆ ಉಲ್ಬಣಗೊಳ್ಳುವ ಪರಿಸ್ಥಿತಿ ನಿರ್ಮಾಣವಾಗುವುದಿಲ್ಲ.ಏಳು ಬಾರಿ ಟೂರ್ ಡೇ ಫ್ರಾನ್ಸ್ ಗೆದ್ದ  ಲ್ಯಾನ್ಸ್ ಆರ್ಮಸ್ಟಾ ಹೀಗೆ ಹೇಳುತ್ತಾರೆ.‘ಬಹಳಷ್ಟು ಜನರು ಕೊನೆಗೆ ಇಟ್ಟುಕೊಳ್ಳುವ ಶೇಕಡಾ ಒಂದು ಮೀಸಲು ಶಕ್ತಿಯು ಕ್ರೀಡಾಪಟು ಬಳಸಲು ದಿಟ್ಟತನ ತೋರುವ ಹೆಚ್ಚುವರಿ ಶಕ್ತಿಯಾಗಿದೆ.’ಈ ಹೇಳಿಕೆಯಂತೆ  ನಮ್ಮ ದಿಟ್ಟತನದಿಂದ ತೋರುವ ಹೆಚ್ಚುವರಿ ಶಕ್ತಿಯ ಸದುಪಯೋಗಪಡಿಸಿಕೊಳ್ಳಿ. ಸಹಜವಾಗಿರಿ ಸದಾ ಇತರರೊಂದಿಗೆ ಹೋಲಿಸಿಕೊಳ್ಳುವುದನ್ನು ಕೈ ಬಿಡಬೇಕು. ಈ ಹೋಲಿಕೆ ಇತರರಿಗಿಂತ ಕೆಳ ಮಟ್ಟದಲ್ಲಿದ್ದೇನೆ ಎಂದು ನಿತ್ರಾಣಗೊಳಿಸುವ ಕೀಳರಿಮೆ ಇಲ್ಲವೇ ಮೇಲರಿಮೆಯ ಅಹಂಕಾರವನ್ನು ಹುಟ್ಟು ಹಾಕುತ್ತದೆ. ನಿಮ್ಮ ನಿಜ ಸ್ವರೂಪ ನೀಡದ ಕಲ್ಪಿತ ಭ್ರಮಾಲೋಕವು ಇಲ್ಲದ ತೊಂದರೆಗಳನ್ನು ತಂದು ನಿಮ್ಮ ಬದುಕಿನ ಮಡಿಲಲ್ಲಿ ಚೆಲ್ಲುತ್ತದೆ. ನಿಜದಲ್ಲಿ ತಾನು ತಾನಾಗದ ಹುಸಿ ಲೋಕದಲ್ಲಿ ಸಮಸ್ಯೆಗಳ ಜಾಲವನ್ನು ಮೈ ಮೇಲೆ ಎಳೆದುಕೊಳ್ಳುವಂತೆ ಮಾಡುತ್ತದೆ. ಕೆಲವೊಮ್ಮೆ ನುಡಿಯಲ್ಲಿ ಎಚ್ಚೆತ್ತುಕೊಳ್ಳುತ್ತೇವೆ. ನಡೆಯಲ್ಲಿ ತಪ್ಪುತ್ತೇವೆ. ಜ್ಞಾನ ಕ್ರಿಯೆಗಳು ಸಮನಾಗಿರಿಸಿ ನಡೆಯುವುದು ಹಗ್ಗದ ಮೇಲಿನ ನಡಿಗೆ ಇದ್ದಂತೆ. ಹೂದೋಟದಲ್ಲಿ ಮೈ ಅರಳಿಸಿ ನಿಂತ ಹೂಗಳು ತನಗಿಂತ ದೊಡ್ಡ ಇಲ್ಲ ಚಿಕ್ಕ ಹೂಗಳನ್ನು ನೋಡಿ ಕಣ್ಣ ಹನಿ ಸುರಿಸುವುದಿಲ್ಲ. ತನ್ನಷ್ಟಕ್ಕೆ ತಾನೆ ಬಿಮ್ಮನೇ ಅರಳಿ ಗಾಳಿ ಬೀಸಿದಲ್ಲೆಲ್ಲ ತನ್ನ ಕಂಪು ಸೂಸುವವು. ಬಿರಿದ ಕುಸುಮಗಳಂತೆ ಸಹಜವಾಗಿರಿ. ಛಲ ಬಲ ತುಂಬಿಕೊಳ್ಳಿ ಅಮಾನುಷ, ಭೀಕರ, ಹೃದಯ ವಿದ್ರಾವಕ, ಘೋರ ಹತ್ಯಾಕಾಂಡಗಳಲ್ಲಿ ಸಾವಿನ ಬಾಗಿಲು ತಟ್ಟಿ ಬಂದವರು ಸಮರ್ಥವಾಗಿ ಬದುಕಿ ತೋರಿದವರು  ಸಾಧನೆಯ ಉತ್ತುಂಗಕ್ಕೆ ಏರಿದವರು ಹಸಿರಾದ ಪ್ರೀತಿಯನ್ನು ಇತರರ ಬಾಳಲ್ಲಿ ತಂದವರ ಪಟ್ಟಿಯೇ ಇದೆ. ಇತಿಹಾಸ ಪುಟಗಳಲ್ಲಿ ದಾಖಲಾಗಿರುವ ಇಂಥ ವೀರ ಮಹನೀಯರ ಜೀವನ ಚರಿತ್ರೆಯನ್ನೊಮ್ಮೆ ಓದಿ. ನಿಮ್ಮಲ್ಲೂ ಛಲ ಬಲ ತುಂಬಿಕೊoಡರೆ  ಶೌರ್ಯದ ಖಣಿ ನೀವಾಗುವಿರಿ.   ಕವಿ ಕೆ ಎಸ್ ನಿಸ್ಸಾರ ಅಹ್ಮದ್ ರವರು  ‘ಹುದ್ದೆ ಮುದ್ದೆ ನಿದ್ದೆ ಈ ಬದುಕು ಇಷ್ಟೇ ಪೆದ್ದೆ?ಎಂಬ ಲೇಖನದಲ್ಲಿ ‘ದಿನವಹಿಯ ಊಟ ಬಟ್ಟೆಗಳ ಅಗತ್ಯಗಳನ್ನು ದಾಟದ, ಉಸಿರಾಡಿ ಅಸ್ತಿತ್ವವನ್ನು ಉಳಿಸಿಕೊಳ್ಳುವ ಅನಿವಾರ್ಯತೆಯ ಪುನರಾವರ್ತಿತ ಯಾಂತ್ರಿಕ ಚಟುವಟಿಕೆಯೇ ಅನೇಕಾನೇಕರ ಪಾಲಿಗೆ ಬಾಳ್ವೆ ಎನ್ನಿಸುತ್ತಿದೆ.’ಎಂದು ವಿಷಾದದಿಂದ ಬರೆದಿದ್ದಾರೆ.ಜೀವನದ ಪ್ರತಿ ಸಂಕುಚಿತ ದೃಷ್ಟಿಕೋನ ತೊರೆಯಿರಿ ಎಂಬ ಸಂದೇಶ ನೀಡದ್ದಾರೆ. ಪರಿಹಾರದತ್ತ ಗಮನ ಹರಿಸಿಬಂದ ಸಂಕಟದತ್ತ ನೋಡುತ್ತ ಕುಳಿತರೆ ಅದು ದಿನೇ ದಿನೇ ದೊಡ್ಡದೆನಿಸತೊಡುತ್ತದೆ. ಬೃಹದಾಕಾರವಾಗಿ ಬೆಳೆದು ನಮ್ಮನ್ನೇ ನುಂಗಿ ಬಿಡುವುದೇನೋ ಎಂಬ ಚಿಂತೆ ಆವರಿಸಿಕೊಳ್ಳುತ್ತದೆ. ಸಮಸ್ಯೆಯನ್ನು ಎಲ್ಲರ ಮುಂದೆ ಹೇಳುತ್ತ ತಿರುಗ ಬೇಡಿ. ಏಕೆಂದರೆ ಇಲ್ಲಿ ನಿಮ್ಮ ದುಃಖಗಳ ಪ್ರಚಾರಕ್ಕೆ ಜಾಗವಿಲ್ಲ. ಅದಲ್ಲದೇ ಸಮಸ್ಯೆಗಳಿಲ್ಲದವರು ಯಾರೂ ಇಲ್ಲ. ಸಮಸ್ಯೆಯ ಮೂಲ ಹುಡುಕಿದರೆ ಪರಿಹಾರ ತನ್ನಿಂದ ತಾನೇ ಹೊಳೆಯುತ್ತದೆ.ಒಮ್ಮೊಮ್ಮೆ ಅಚಾತುರ್ಯದಿಂದ ಅಲಕ್ಷö್ಯದಿಂದ ಸಮಸ್ಯೆ ಬೆಳೆದು ನಿಲ್ಲುತ್ತದೆ ಆಗ ಅನುಭವಿಕರನ್ನು ಜ್ಞಾನಿಗಳನ್ನು ಸಂಪರ್ಕಿಸಿದರೆ ಅಡ್ಡಗೋಡೆಯಾಗಿ ನಿಂತಿದ್ದ ನೋವು ತಾನೇ ಮಂಜಿನoತೆ ಕರಗುವುದು.ಕೆಲವೊಂದು ತೊಂದರೆಗಳಿಗೆ ಕಾಲವೇ ಉತ್ತರಿಸುವುದು ಕಾಲಕ್ಕಿಂತ ಉತ್ತಮ ಆರೈಕೆ ಮತ್ತೊಂದಿಲ್ಲ. ದೊಡ್ಡ ದೊಡ್ಡ ಅವಘಡಗಳಲ್ಲಿ ಕುಟುಂಬ ಸದಸ್ಯರನ್ನು  ಕಳೆದುಕೊಂಡವರು ಬೆಳಕಿನ ಆಶಾ ಕಿರಣ ಕಾಣದವರು ಜೀವನವೇ ಬೇಡ ಅಂದುಕೊoಡವರು ಬದುಕು ದುಸ್ತರ ಎಂದುಕೊoಡವರು  ಕಾಲ ಉರುಳಿದಂತೆ ಜೀವನ ಪ್ರೀತಿಗೆ ಸಿಲುಕಿ ಸಂತಸದ ಜೀವನ ಸಾಗಿಸುವುದನ್ನು ಆದರ್ಶವಾಗಿಸಿಕೊಳ್ಳಿ.  ದುಃಖ ದುಮ್ಮಾನ ಅವಮಾನಗಳ ಸರಣಿಯನ್ನೇ ಸವಾಲಾಗಿ ಸ್ವೀಕರಿಸಿ ಬದುಕಿನ ಹೋರಾಟವನ್ನು ಹೇಗೆ ಜಯಸಬೇಕೆಂಬುದನ್ನು ತೋರಿದ ಅಂಬೇಡ್ಕರ್ ಅಬ್ರಾಹಾಂ ಲಿಂಕನ್‌ರoಥವರ ದೊಡ್ಡ ಕೀರ್ತಿಗೆ ಪಾತ್ರರಾದ ಅದರ್ಶಗಳನ್ನು ಮೈಗೂಡಿಸಿಕೊಳ್ಳಲು ಪ್ರಯತ್ನಿಸಿ ನಿಮ್ಮ ವಿಚಾರ ವೈಖರಿಯನ್ನು ಬದಲಿಸಿದರೆ ಎಂದೆoದಿಗೂ ವ್ಯಥೆಯಾಗಿ ಉಳಿಯುವ ದುರಂತವೂ ಪ್ರಬಲರನ್ನಾಗಿಸುವ ಅಚ್ಚರಿ ಬದಲಾವಣೆಯನ್ನು ನೀವೇ ಗಮನಿಸಬಹುದು. ಕೊನೆ ಹನಿಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ ಮನೋಬಲವನ್ನು ಬಾನಿಗೆ ಹಾರಿಸೋಣ. ಬದುಕನ್ನು ಶ್ರೇಷ್ಠ ಪಥಕ್ಕೆ ಹೊರಳಿಸೋಣ.   ಜಯಶ್ರೀ.ಜೆ.ಅಬ್ಬಿಗೇರಿ

“ಮನೋಬಲ ಮುಗಿಲೆತ್ತರಕ್ಕೇರಿಸಿದರೆ ದುರಂತದ ನೋವೂ ನಗಣ್ಯ!!” ಜಯಶ್ರೀ.ಜೆ.ಅಬ್ಬಿಗೇರಿ Read Post »

ಕಾವ್ಯಯಾನ

ನಾಗರಾಜ ಬಿ.ನಾಯ್ಕ ಕವಿತೆ “ಹೂಬೆ ಹೂಬೆ”

ಕಾವ್ಯ ಸಂಗಾತಿ ನಾಗರಾಜ ಬಿ.ನಾಯ್ಕ “ಹೂಬೆ ಹೂಬೆ” ಸೂರು ಕಾಣುವ ಬೆಳಗುಎದ್ದು ಕುಳಿತುಮುಗಿಲು ಮುಟ್ಟುವ ಹಾಡುಮನಸು ಮುಟ್ಟಿಹಂಚಿನ ಮನೆ ಮೇಲೆಚೆಂದ ಬಿಳಿ ಹೊಗೆಯಚಿತ್ತಾರ ಬಿಡಿಸುತ್ತಿತ್ತುಊರ ತುದಿ ದಂಡೆಯಲ್ಲಿದೋಣಿ ಸಾಗಿಮಡಿಕೆಯಲ್ಲಿದ್ದ ಸಾರಿನ ವಾಸನೆ ಊರು ಸುತ್ತುತ್ತಿತ್ತು ಹಳ್ಳಿಯಲ್ಲಿ ಎಲ್ಲವೂಹೂಬೆ ಹೂಬೆಯಾಗಿ ಕಂಡಂತೆಅರಳಿದ ಹೂ ಮಲ್ಲಿಗೆನೆಟ್ಟ ಕೈಗಳಿಗೆ ನಗು ಚೆಲ್ಲಿನಿಂತಿರಲು ಗಾಳಿತಂಗಾಳಿಯಾಗಿ ತಿರುಗಿಮಿಡಿ ಬಿಟ್ಟ ಮಾವುಹೂ ಸೊಬಗು ಚೆಲ್ಲಿಮರದ ಹಕ್ಕಿಗೆ ಹಾಡುಸುಮ್ಮನೇ ಹೇಳಿಸಿತ್ತುಹೊರೆ ಹೊತ್ತ ಬೆವರುಮೊಗ ತುಂಬಿದ ಕನಸುಹಸಿ ಭತ್ತದ ಸಸಿತೆನೆ ಹೊತ್ತ ಮೌನ ಸಾಲುಎಲ್ಲವೂ ಹೂಬೆ ಹೂಬೆಕಂಡಂತೆ ಈಗಲೂ ಹಳ್ಳಿದಣಪೆಯ ಆಚೆಗಿದ್ದದಾಸಾಳ ಗಿಡಕ್ಕೆಹತ್ತಾರು ಹೂಗಳುಬಂದ ಹಕ್ಕಿಗೆಹೂ ನೆರಳ ಕೊಡುವುದಂತೆಅಟ್ಟಲದ ಮರ ಹೂಬಿಟ್ಟಿದೆಯಂತೆಜೇನಿಗೆ ತುಂಬಾಕೆಲಸವಿದೆಯಂತೆಹೂಬೆ ಹೂಬೆಕಾಣುವುದು ಬಳ್ಳಿಯಂತೆಒಂದೆರಡಲ್ಲ ಹಳ್ಳಿಯ ಬಳ್ಳಿಎಲ್ಲೆಡೆ ಹಬ್ಬಿದಂತೆಊರಿಗೆ ಊರೇಗೆಳೆಯರಾದಂತೆ……. ನಾಗರಾಜ ಬಿ.ನಾಯ್ಕ.

ನಾಗರಾಜ ಬಿ.ನಾಯ್ಕ ಕವಿತೆ “ಹೂಬೆ ಹೂಬೆ” Read Post »

ಕಾವ್ಯಯಾನ, ಗಝಲ್

ಮಾಜಾನ್‌ ಮಸ್ಕಿ ಅವರ ಗಜಲ್

ಕಾವ್ಯ ಸಂಗಾತಿ ಮಾಜಾನ್‌ ಮಸ್ಕಿ ಗಜಲ್ ಬೆಳದಿಂಗಳ ನಗು ನೀನಾಗಿರುವೆಬದುಕಿನ ಬೆಳಗು ನೀನಾಗಿರುವೆ ಸಾವಿರಾರು ವೇದನೆ  ತುಂಬಿವೆನಲಿವಿನ ಗುನುಗು ನೀನಾಗಿರುವೆ ಸುಂದರ ಕನಸಿನ ಹೂದೊಟದಲ್ಲಿಸುಗಂಧದ ಸೊಬಗು ನೀನಾಗಿರುವೆ ಹಚ್ಚ ಹಸಿರಿನ ಬದುಕು ಇದಲ್ಲವೇಪ್ರಕೃತಿಯ ಬೆರಗು ನೀನಾಗಿರುವೆ ಮಾಜಾಳ ಹೃದಯ ನೀಲಾಕಾಶದಂತೆನಕ್ಷತ್ರಗಳ ಮಿನುಗು  ನೀನಾಗಿರುವೆ ಮಾಜಾನ್ ಮಸ್ಕಿ

ಮಾಜಾನ್‌ ಮಸ್ಕಿ ಅವರ ಗಜಲ್ Read Post »

ಕಾವ್ಯಯಾನ

ಎ.ಹೇಮಗಂಗಾ ಅವರ ತನಗಗಳು

ಕಾವ್ಯ ಸಂಗಾತಿ ಎ.ಹೇಮಗಂಗಾ ತನಗಗಳು ಚಿಕ್ಕದೊಂದು ರಂಧ್ರವೂಬಲಶಾಲಿಯೇ ಹೌದುತೇಲುವ ಹಡಗನ್ನುಮುಳುಗಿಸುವುದದು ಸಾಗರದ ಮೇಲಿದೆಪುಟ್ಟ ಹಿಮ ಪರ್ವತಆಳದಲ್ಲಿದೆ ಇನ್ನೂಕಾಣಲಾಗದು ಕಣ್ಣು ಭೂಮಂಡಲ ಅಗಾಧನಶ್ವರ ಜೀವಿ ನಾನುಒಯ್ಯಲಾರೆ ಏನನ್ನೂಸಾವಪ್ಪಲು ನನ್ನನ್ನು ಪ್ರಾರ್ಥಿಸು ದೇವರಲಿಆಸೆ ಫಲಿಸಲೆಂದುಶ್ರಮದಿ ಸಾಧಿಸಲುಆತ್ಮ ಶಕ್ತಿ ನೀಡೆಂದು ಮನುಜ ಬುದ್ಧಿಜೀವಿಕಟ್ಟುತ್ತಾನೆ ಈಗಲೂಹಿಮದ ದಿಮ್ಮಿ ಮನೆಹೆಸರಾಗಿದೆ ‘ ಇಗ್ಲೂ ‘ ಹಕ್ಕಿಯಂತೆ ಹಾರಿವೆಪುಕಾರುಗಳು ಇಂದುರೆಕ್ಕೆ ಪುಕ್ಕ ಪಡೆದುಬಾಯಿಯಿಂದ ಬಾಯಿಗೆ ಚುಮು ಚುಮು ಚಳಿಗೆಕಂಬಳಿ ಹೊದ್ದ ಮಂದಿಆಗಿದ್ದಾರೆ ಮುಂಜಾನೆಮನೆಯೊಳಗೇ ಬಂದಿ ಚಳಿಗಾಲದ ಚಳಿಬೇಸಿಗೆಯಲ್ಲಿ ಬಿಸಿಎರಡು ಹೆಚ್ಚಾದರೂಜನಕ್ಕೆ ತಲೆ ಬಿಸಿ ಬೆಳೆಯಬೇಕು ನೀನುಯಾರೆಷ್ಟೇ ತುಳಿದರೂಗರಿಕೆ ಹುಲ್ಲಿನಂತೆಛಲವ ಬಿಡದಂತೆ ದಣಿವನ್ನು ತೋರದೇದುಡಿಯುವಳು ತಾಯಿನಗುತ್ತಲೇ ಹೊಣೆಯಪೂರೈಸುವಳು ಮಾಯಿ ಸಾವ ತೆಕ್ಕೆಯೊಳಗೆಜೀವಗಳು ನಿರ್ಜೀವಅನಲ ಅನಾಹುತಸೂತ್ರಧಾರಿ ವಿಧಾತ ಬೆಂಕಿಯು ವ್ಯಾಪಿಸಿತುಎಲ್ಲೆಡೆ ಸರಸರಕೊನೆಗೆ ಉಳಿಯಿತುಬಸ್ಸಿನ ಕಳೇಬರ ಎ. ಹೇಮಗಂಗಾ     

ಎ.ಹೇಮಗಂಗಾ ಅವರ ತನಗಗಳು Read Post »

You cannot copy content of this page

Scroll to Top