ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಪುಸ್ತಕ ಸಂಗಾತಿ

ಡಾ| ಶ್ರುತಿ ಮಧುಸೂದನ್ ಅವರ ಕಥಾ ಸಂಕಲನ “ಪೇರಳೆ ಕಾಕು” ಅವಲೋಕನ ತಿಲಕಾ ನಾಗರಾಜ್ ಹಿರಿಯಡಕ

ಪುಸ್ತಕ ಸಂಗಾತಿ ತಿಲಕಾ ನಾಗರಾಜ್ ಹಿರಿಯಡಕ ಡಾ| ಶ್ರುತಿ ಮಧುಸೂದನ್ “ಪೇರಳೆ ಕಾಕು” ಜೀವನದಲ್ಲಿ ಸದಾ ಜೊತೆಗಿದ್ದು, ನಿಸ್ವಾರ್ಥದಿಂದ, ಮುನ್ನಡೆಸೋ ಗೆಳೆಯ ಅಥವಾ ಗೆಳತಿ ಯಾರಾದರೂ ಇದ್ದಾರೆ ಅಂದ್ರೆ ಅದು ಪುಸ್ತಕ ಮಾತ್ರ. ಪುಸ್ತಕ ಯಾವತ್ತೂ ನಮಗೆ ಮೋಸ ಮಾಡೋದಿಲ್ಲ. ಬದಲಾಗಿ, ನಮ್ಮ ಜ್ಞಾನವನ್ನು ಹೆಚ್ಚಿಸುತ್ತದೆ, ನಮ್ಮನ್ನು ಪ್ರಬುದ್ಧರನ್ನಾಗಿಸುತ್ತದೆ. ನಾನಿಂದು ನಿಮಗೆಲ್ಲ ಪರಿಚಯಿಸ ಹೊರಟಿರುವ ಪುಸ್ತಕದ ಹೆಸರು “ಪೇರಳೆ ಕಾಕು”.           ಪೇರಳೆ ಕಾಕು ರುದ್ರಾಗ್ನಿ ಡಾ| ಶ್ರುತಿ ಮಧುಸೂದನ್ ಅವರ ಕಥಾ ಸಂಕಲನ. ಇಲ್ಲಿ ಒಟ್ಟು 13 ಕಥೆಗಳಿದ್ದು ಒಂದಕ್ಕಿಂತ ಒಂದು ಭಿನ್ನವಾಗಿದೆ.  ಪುಟಗಳನ್ನು ತೆರೆಯುತ್ತಾ ಹೋದಂತೆ ಎಲ್ಲಾ ಕತೆಗಳು ನಿಮ್ಮನ್ನು ತನ್ನ ತೆಕ್ಕೆಗೆ ಎಳೆದುಕೊಂಡು ಓದಿಸಿಕೊಂಡು ಹೋಗುತ್ತವೆ. ನೀವೇನಾದ್ರು ಈ ಪುಸ್ತಕ ಹಿಡಿದಿರೋ ಅದ್ಭುತವಾದ ಕಥಾಲೋಕದಲ್ಲಿ ಸಂಚರಿಸುತ್ತಿರುವ  ಅನುಭವ ನಿಮ್ಮದಾಗುತ್ತದೆ. ಅಷ್ಟರಮಟ್ಟಿಗೆ ರುದ್ರಾಗ್ನಿ ತಮ್ಮ ಪದಗಳ ಮೂಲಕ ಜಾದು ಮಾಡಿದ್ದಾರೆ.ಪೇರಳೆ ಕಾಕು, ರಾಸತಿ,  ಸಾರ, ತಾರಾ, ರಾವತಿ, ಪಾಂಡು, ಧಾತ್ರಿ ಹೀಗೆ ಹಲವು ಪಾತ್ರಗಳು ಕಥೆ ಓದಿ ಮುಗಿದ ಮೇಲೂ ಮತ್ತೆ ಮತ್ತೆ ಕಾಡುತ್ತವೆ. ಛೆ! ಎಂದು ನೀಡುಸುಯ್ಯುವಂತೆ ಮಾಡುತ್ತವೆ. ಹಾಗಾದ್ರೆ ಎಲ್ಲವೂ ದುಖಾಂತ್ಯ ಕಥೆಗಳೇನು? ಅಂದ್ಕೊಂಡ್ರ ಅಲ್ಲ ಇಲ್ಲಿ ಸುಖಂತ್ಯ ಕಥೆಗಳು ಇವೆ. ಗಂಡ ತರುವ ಸಂಭಳವನ್ನು ಹೊಟ್ಟೆ ಬಟ್ಟೆ ಕಟ್ಟಿ ಜತನದಿಂದ ಖರ್ಚು ಮಾಡೋ ಸೌರಭ, ಗಂಡ ಮಕ್ಕಳಿಗಾಗಿ ತನ್ನ ಕನಸನ್ನೆ ಮರೆತು ಬದುಕುವ ಆರತಿ ಅಂತ ಪಾತ್ರಗಳು ನಮ್ಮ ನಿಮ್ಮ ನಡುವೆಯೇ ಇದ್ದಾರೆ ಅನ್ನಿಸುತ್ತದೆ.       ಹಾಂ ಎಲ್ಲವನ್ನೂ ನಾನೇ ಹೇಳ್ತಾ ಹೋದ್ರೆ ಏನಿದೆ… ನಿಮಗೂ ರುದ್ರಗ್ನಿಯ ಪದಗಳ ಲೋಕದಲ್ಲಿ ಸಂಚರಿಸಬೇಕೆ? ಹಾಗಾದ್ರೆ ಯಾಕೆ ತಡ? 9591889261ಈ ಸಂಖ್ಯೆಯನ್ನು ಸಂಪರ್ಕಿಸಿ ಒಂದೊಳ್ಳೆ ಪುಸ್ತಕವನ್ನು ನಿಮ್ಮದಾಗಿಸಿಕೊಳ್ಳಿ. ತಿಲಕಾ ನಾಗರಾಜ್ ಹಿರಿಯಡಕ

ಡಾ| ಶ್ರುತಿ ಮಧುಸೂದನ್ ಅವರ ಕಥಾ ಸಂಕಲನ “ಪೇರಳೆ ಕಾಕು” ಅವಲೋಕನ ತಿಲಕಾ ನಾಗರಾಜ್ ಹಿರಿಯಡಕ Read Post »

ಇತರೆ, ಪರಿಸರ

“ನನ್ನ ಪಡೆಯಲು, ನನ್ನನ್ನೇ ಕೊಲ್ಲುತ್ತಿರುವರು”(ಭೂತಾಯಿಯ ಮನದಾಳದ ಮಾತು)ಪೃಥ್ವಿರಾಜ್ ಟಿ ಬಿ

ಪರಿಸರ ಸಂಗಾತಿ ಪೃಥ್ವಿರಾಜ್ ಟಿ ಬಿ “ನನ್ನ ಪಡೆಯಲು, ನನ್ನನ್ನೇ ಕೊಲ್ಲುತ್ತಿರುವರು” (ಭೂತಾಯಿಯ ಮನದಾಳದ ಮಾತು) “ನನ್ನ ಪಡೆಯಲು, ನನ್ನನ್ನೇ ಕೊಲ್ಲುತ್ತಿರುವರು”(ಭೂತಾಯಿಯ ಮನದಾಳದ ಮಾತು)ಮಾನವನ ಇತಿಹಾಸವನ್ನು ನಾವು ಓದಿದಾಗ, ಒಂದು ನೋವು ತುಂಬಿದ ಸತ್ಯ ನಮ್ಮ ಮುಂದೆ ಬರುತ್ತದೆ—ಅದು ಯುದ್ಧ. ಯುದ್ಧಗಳು ಕಾಲಕಾಲಕ್ಕೆ ರೂಪ ಬದಲಿಸಿಕೊಂಡರೂ, ಅದರ ಮೂಲ ಕಾರಣ ಒಂದೇ: ಸ್ವಾರ್ಥ, ಅಧಿಕಾರದ ಆಸೆ, ಸಂಪನ್ಮೂಲಗಳ ಮೇಲಿನ ಹಕ್ಕು. ಆದರೆ ಈ ಎಲ್ಲದಕ್ಕೂ ಮೌನ ಸಾಕ್ಷಿಯಾಗಿರುವಳು ಭೂತಾಯಿ. ಮಾನವನು ತನ್ನ ಬದುಕನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೂ, ಅದೇ ಪ್ರಯತ್ನದಲ್ಲಿ ಭೂತಾಯಿಯನ್ನೇ ಗಾಯಗೊಳಿಸುತ್ತಿರುವುದು ಅತ್ಯಂತ ದುಃಖದ ಸಂಗತಿ. “ನನ್ನ ಪಡೆಯಲು, ನನ್ನನ್ನೇ ಕೊಲ್ಲುತ್ತಿರುವರು” ಎಂಬ ಮಾತು ಭೂತಾಯಿಯ ಮನದಾಳದ ಕಿರುಚಾಟ. ಇದು ಕೇವಲ ಕಾವ್ಯಾತ್ಮಕ ವಾಕ್ಯವಲ್ಲ; ಇಂದಿನ ಜಗತ್ತಿನ ವಾಸ್ತವಿಕ ಚಿತ್ರಣ. ಯುದ್ಧಗಳ ಮೂಲ ಕಾರಣಗಳು ದೇಶಗಳ ನಡುವೆ ನಡೆಯುತ್ತಿರುವ ಯುದ್ಧಗಳಿಗೆ ಹಲವಾರು ಕಾರಣಗಳಿವೆ. ಭೂಮಿಯ ಮೇಲಿನ ಹಕ್ಕು, ಖನಿಜ ಸಂಪನ್ಮೂಲಗಳ ಮೇಲಿನ ಹಿಡಿತ, ನೀರಿನ ಕೊರತೆ, ರಾಜಕೀಯ ಪ್ರಭಾವ—ಇವೆಲ್ಲವೂ ಯುದ್ಧಗಳಿಗೆ ಕಾರಣವಾಗುತ್ತವೆ. ಉದಾಹರಣೆಗೆ, ತೈಲ ಸಂಪತ್ತುಳ್ಳ ಪ್ರದೇಶಗಳಲ್ಲಿ ಯುದ್ಧಗಳು ಹೆಚ್ಚಾಗಿ ನಡೆಯುತ್ತವೆ. ಏಕೆಂದರೆ ಆ ಸಂಪತ್ತು ಆರ್ಥಿಕ ಶಕ್ತಿಯನ್ನು ನಿರ್ಧರಿಸುತ್ತದೆ. ಆದರೆ ಪ್ರಶ್ನೆ ಏನೆಂದರೆ: ಈ ಸಂಪತ್ತಿನಿಗಾಗಿ ಯುದ್ಧ ಮಾಡುತ್ತಿರುವವರು ಯಾರ ಮೇಲೆ ಯುದ್ಧ ಮಾಡುತ್ತಿದ್ದಾರೆ? ಉತ್ತರ ಸರಳ—ಅದೇ ಭೂಮಿಯ ಮೇಲೆ. ಅವರು ಪಡೆಯಲು ಬಯಸುತ್ತಿರುವುದು ಭೂಮಿಯ ಸಂಪತ್ತು; ಆದರೆ ಅದನ್ನೇ ಪಡೆಯಲು ಭೂಮಿಯನ್ನೇ ಹಾಳು ಮಾಡುತ್ತಿದ್ದಾರೆ. ಭೂತಾಯಿಯ ನೋವು ಯುದ್ಧವೆಂದರೆ ಕೇವಲ ಮನುಷ್ಯರ ನಾಶವಲ್ಲ. ಅದು ಪರಿಸರದ ನಾಶ. ಬಾಂಬ್ ಸ್ಫೋಟಗಳು, ರಾಸಾಯನಿಕ ದಾಳಿಗಳು, ಅಣ್ವಸ್ತ್ರಗಳ ಬಳಕೆ—ಇವುಗಳ ಪರಿಣಾಮವಾಗಿ ಮಣ್ಣು ವಿಷಕಾರಿ ಆಗುತ್ತದೆ, ನೀರು ಮಾಲಿನ್ಯಗೊಳ್ಳುತ್ತದೆ, ಗಾಳಿ ಕಲುಷಿತವಾಗುತ್ತದೆ. ಹಿರೋಷಿಮಾ ಮತ್ತು ನಾಗಾಸಾಕಿ ಮೇಲೆ ನಡೆದ ಅಣುಬಾಂಬ್ ದಾಳಿಗಳ ಪರಿಣಾಮವಾಗಿ, ದಶಕಗಳವರೆಗೆ ಆ ಪ್ರದೇಶದಲ್ಲಿ ಜನರು ರೋಗಗಳಿಂದ ಬಳಲಿದರು. ಇದು ಕೇವಲ ಮಾನವೀಯ ನಷ್ಟವಲ್ಲ, ಪರಿಸರದ ಮೇಲಿನ ದೀರ್ಘಕಾಲದ ಪರಿಣಾಮವೂ ಆಗಿದೆ. ಯುದ್ಧ ನಡೆಯುವ ಪ್ರದೇಶಗಳಲ್ಲಿ ಅರಣ್ಯಗಳು ನಾಶವಾಗುತ್ತವೆ. ಮರಗಳು ಕಡಿದುಹಾಕಲ್ಪಡುತ್ತವೆ. ಪ್ರಾಣಿಗಳು ತಮ್ಮ ವಾಸಸ್ಥಾನ ಕಳೆದುಕೊಳ್ಳುತ್ತವೆ. ನದಿಗಳು ರಕ್ತದಿಂದ ಮತ್ತು ರಾಸಾಯನಿಕಗಳಿಂದ ಕಲುಷಿತವಾಗುತ್ತವೆ. ಇದು ಭೂತಾಯಿಯ ಹೃದಯಕ್ಕೆ ಬಿದ್ದ ಗಾಯಗಳಂತೆ. ಆಧುನಿಕ ಯುದ್ಧಗಳ ಭಯಾನಕತೆ ಇಂದಿನ ಯುದ್ಧಗಳು ತಂತ್ರಜ್ಞಾನದಿಂದ ತುಂಬಿವೆ. ಡ್ರೋನ್ ದಾಳಿಗಳು, ಕ್ಷಿಪಣಿಗಳು, ಸೈಬರ್ ಯುದ್ಧ—ಇವು ಎಲ್ಲವೂ ಆಧುನಿಕ ಯುದ್ಧದ ಭಾಗ. ಆದರೆ ಇದರ ಪರಿಣಾಮ ಇನ್ನೂ ಭೀಕರವಾಗಿದೆ. ಅಣ್ವಸ್ತ್ರಗಳು ಮಾನವಕುಲಕ್ಕೆ ಅತಿ ದೊಡ್ಡ ಅಪಾಯ. ಒಂದು ಅಣುಬಾಂಬ್ ಸ್ಫೋಟವೇ ಲಕ್ಷಾಂತರ ಜೀವಗಳನ್ನು ಕ್ಷಣಾರ್ಧದಲ್ಲಿ ನಾಶಮಾಡಬಹುದು. ಅದರ ಪರಿಣಾಮವಾಗಿ ಭೂಮಿಯ ಮೇಲೆ ದೀರ್ಘಕಾಲದ ವಿಕಿರಣ ಉಂಟಾಗುತ್ತದೆ. ಇದರಿಂದ ಭೂತಾಯಿ ಪ್ರಶ್ನಿಸುತ್ತಾಳೆ: “ನೀವು ನನ್ನನ್ನು ಉಳಿಸಬೇಕೆಂದು ಹೇಳುತ್ತೀರಿ, ಆದರೆ ನನ್ನನ್ನೇ ನಾಶ ಮಾಡುತ್ತಿರುವಿರಿ. ಇದು ಯಾವ ನ್ಯಾಯ?” ಮಾನವನ ಸ್ವಾರ್ಥ ಮಾನವನು ತನ್ನ ಸೌಲಭ್ಯಕ್ಕಾಗಿ ಎಲ್ಲವನ್ನೂ ತ್ಯಜಿಸಲು ಸಿದ್ಧನಾಗಿದ್ದಾನೆ. ಆದರೆ ಈ ಸೌಲಭ್ಯಗಳು ಯಾವ ಬೆಲೆಗೆ ಬರುತ್ತಿವೆ? ಯುದ್ಧಗಳ ಮೂಲಕ ಸಿಕ್ಕ ಸಂಪತ್ತು ತಾತ್ಕಾಲಿಕ. ಆದರೆ ಅದರ ಪರಿಣಾಮ ಶಾಶ್ವತ. ಯುದ್ಧಗಳಿಂದ ದೇಶಗಳು ಆರ್ಥಿಕವಾಗಿ ಹಿನ್ನಡೆಯಾಗುತ್ತವೆ. ಜನರು ಮನೆ ಕಳೆದುಕೊಳ್ಳುತ್ತಾರೆ. ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ. ಸಮಾಜದಲ್ಲಿ ಅಶಾಂತಿ ಉಂಟಾಗುತ್ತದೆ. ಆದರೆ ಇದಕ್ಕಿಂತಲೂ ದೊಡ್ಡ ನಷ್ಟವೆಂದರೆ, ಮಾನವೀಯತೆ ಕಳೆದುಹೋಗುವುದು. ಯುದ್ಧದಲ್ಲಿ ಗೆದ್ದವರು ಯಾರು? ಸೋತವರು ಯಾರು? ಕೊನೆಗೆ ನೋವು ಅನುಭವಿಸುವವರು ಎಲ್ಲರೂ. ಭೂತಾಯಿಯ ಕಿರುಚಾಟ ಭೂತಾಯಿ ಮೌನವಾಗಿದ್ದರೂ, ಅವಳ ನೋವು ಸ್ಪಷ್ಟವಾಗಿ ಕಾಣಿಸುತ್ತದೆ. ಹವಾಮಾನ ಬದಲಾವಣೆ, ಗ್ಲೋಬಲ್ ವಾರ್ಮಿಂಗ್, ಪ್ರಕೃತಿ ವಿಕೋಪಗಳು—ಇವೆಲ್ಲವೂ ಭೂತಾಯಿಯ ಪ್ರತಿಕ್ರಿಯೆಗಳು. ಯುದ್ಧಗಳು ಈ ಸಮಸ್ಯೆಗಳನ್ನು ಇನ್ನಷ್ಟು ಗಂಭೀರವಾಗಿಸುತ್ತವೆ. ಕಾರ್ಬನ್ ಉತ್ಸರ್ಗ ಹೆಚ್ಚಾಗುತ್ತದೆ. ಪರಿಸರ ಸಮತೋಲನ ಹಾಳಾಗುತ್ತದೆ. ಭೂತಾಯಿ ಕೇಳುತ್ತಾಳೆ: “ನಾನು ನಿಮ್ಮ ಮನೆ. ನೀವು ನನ್ನನ್ನು ಏಕೆ ಹಾಳು ಮಾಡುತ್ತಿದ್ದೀರಿ?” ಶಾಂತಿಯ ಅಗತ್ಯತೆ ಈ ಎಲ್ಲ ಸಮಸ್ಯೆಗಳ ಪರಿಹಾರ ಒಂದೇ—ಶಾಂತಿ. ಯುದ್ಧವು ಯಾವ ಸಮಸ್ಯೆಯಿಗೂ ಶಾಶ್ವತ ಪರಿಹಾರ ನೀಡುವುದಿಲ್ಲ. ಸಂವಾದ, ಸಹಕಾರ, ಪರಸ್ಪರ ಗೌರವ—ಇವುಗಳ ಮೂಲಕ ಮಾತ್ರ ಸಮಸ್ಯೆಗಳನ್ನು ಪರಿಹರಿಸಬಹುದು. ದೇಶಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮಾತುಕತೆಯ ಮೂಲಕ ಪರಿಹರಿಸಬೇಕು. ಅಂತರರಾಷ್ಟ್ರೀಯ ಸಂಸ್ಥೆಗಳು ಶಾಂತಿ ಕಾಪಾಡುವಲ್ಲಿ ಪ್ರಮುಖ ಪಾತ್ರವಹಿಸಬೇಕು. ಶಿಕ್ಷಣವು ಕೂಡ ಮಹತ್ವದ ಪಾತ್ರವಹಿಸುತ್ತದೆ. ಜನರಲ್ಲಿ ಶಾಂತಿ, ಸಹಾನುಭೂತಿ, ಪರಿಸರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಬೇಕು. ಭವಿಷ್ಯದ ಜವಾಬ್ದಾರಿ ಭವಿಷ್ಯ ನಮ್ಮ ಕೈಯಲ್ಲಿದೆ. ನಾವು ಯಾವ ರೀತಿಯ ಜಗತ್ತನ್ನು ಬಯಸುತ್ತೇವೆ? ಯುದ್ಧಗಳಿಂದ ತುಂಬಿದ ಜಗತ್ತಾ, ಅಥವಾ ಶಾಂತಿಯಿಂದ ಕೂಡಿದ ಜಗತ್ತಾ? ಪ್ರತಿ ವ್ಯಕ್ತಿಯೂ ತನ್ನ ಮಟ್ಟದಲ್ಲಿ ಪ್ರಯತ್ನ ಮಾಡಬೇಕು. ಪರಿಸರವನ್ನು ಕಾಪಾಡಬೇಕು. ಯುದ್ಧದ ವಿರುದ್ಧ ಧ್ವನಿ ಎತ್ತಬೇಕು. ಶಾಂತಿಯ ಪರವಾಗಿ ನಿಲ್ಲಬೇಕು. ಸಮಾರೋಪ “ನನ್ನ ಪಡೆಯಲು, ನನ್ನನ್ನೇ ಕೊಲ್ಲುತ್ತಿರುವರು” ಎಂಬ ಭೂತಾಯಿಯ ಮಾತು ನಮ್ಮೆಲ್ಲರಿಗೂ ಎಚ್ಚರಿಕೆಯ ಘಂಟೆ. ನಾವು ನಮ್ಮ ತಪ್ಪುಗಳನ್ನು ಅರಿತುಕೊಳ್ಳಬೇಕು. ಯುದ್ಧಗಳ ಮೂಲಕ ನಾವು ಯಾವುದನ್ನೂ ಪಡೆಯುವುದಿಲ್ಲ; ನಾವು ಕಳೆದುಕೊಳ್ಳುವುದೇ ಹೆಚ್ಚು. ಭೂತಾಯಿಯನ್ನು ಉಳಿಸುವುದು ನಮ್ಮ ಜವಾಬ್ದಾರಿ. ನಾವು ಅವಳನ್ನು ರಕ್ಷಿಸಿದರೆ, ಅವಳು ನಮ್ಮನ್ನು ರಕ್ಷಿಸುತ್ತಾಳೆ. ಆದುದರಿಂದ, ಶಾಂತಿಯನ್ನು ಆರಿಸೋಣ. ಮಾನವೀಯತೆಯನ್ನು ಉಳಿಸೋಣ. ಭೂತಾಯಿಯ ಕಿರುಚಾಟವನ್ನು ಕೇಳೋಣ—ಮತ್ತು ಅದಕ್ಕೆ ಸ್ಪಂದಿಸೋಣ. ಇದು ಕೇವಲ ಲೇಖನವಲ್ಲ; ಇದು ಒಂದು ಕರೆ—ಬದುಕನ್ನು ಉಳಿಸುವ ಕರೆ. ಪೃಥ್ವಿರಾಜ್ ಟಿ ಬಿ

“ನನ್ನ ಪಡೆಯಲು, ನನ್ನನ್ನೇ ಕೊಲ್ಲುತ್ತಿರುವರು”(ಭೂತಾಯಿಯ ಮನದಾಳದ ಮಾತು)ಪೃಥ್ವಿರಾಜ್ ಟಿ ಬಿ Read Post »

ಕಾವ್ಯಯಾನ

ಹಮೀದ್ ಹಸನ್ ಮಾಡೂರು”ಯುದ್ದ ನಿರ್ನಾಮ”

ಕಾವ್ಯ ಸಂಗಾತಿ ಹಮೀದ್ ಹಸನ್ ಮಾಡೂರು “ಯುದ್ದ ನಿರ್ನಾಮ” ಮಾನ ಉಳಿಸಿ ದ್ವೇಷಅಳಿಸಲು ಕಾಲವಿನ್ನು ಬೇಕೇನು?ಪ್ರಾಣ ಹುಡುಕಿ ಕೊಂದವರಿಗೆಅಣ್ವಸ್ತ್ರದ ಬಳಕೆಯ ಅಗತ್ಯವೇನು? ನೊಂದ ಆ ಜೀವಗಳು ಶಾಂತಿಬಯಸಿ ಪ್ರತಿಭಟಿಸಿದ್ದು ತಪ್ಪೇನು?ಕೊಂದ ಪಾಪವು, ನೊಂದ ಹೆತ್ತವರಮನಸ್ಸಿನಾಳದ ಘಾಸಿಯನು ಅಳಿಸಿತ್ತೇ? ಹೊಗೆ, ಶಬ್ದ, ಬೆಂಕಿ, ಸೈರನ್‌ದ್ರೋನ್ ಕ್ಷಿಪಣಿಗಳ ನರ್ತನ ನಿಲ್ಲಿಸಿ,ಹಗೆ ಹಳೆಯ ಬಿಟ್ಟು ನಗೆಯ ಸೂಸಿರಿ,ಕೈಯ ಕುಲುಕಿ, ಶಾಂತಿಯ ಮರು ಸ್ಥಾಪಿಸಿ.! ಹಮೀದ್ ಹಸನ್ ಮಾಡೂರು.

ಹಮೀದ್ ಹಸನ್ ಮಾಡೂರು”ಯುದ್ದ ನಿರ್ನಾಮ” Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ “ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣಸಂಗಾತಿ ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ ಸಾವಿಲ್ಲದ ಶರಣರು ಮಾಲಿಕೆ “ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ” ಗೊಗ್ಗವ್ವೆ ಬಾಲ್ಯದಿಂದಲೂ ವಿಶಿಷ್ಟ ಶಿವಭಕ್ತೆ. ಇವಳ ಜೀವನ ಒಂದು ಬಗೆಯ ಹೋರಾಟದಿಂದ ಕೂಡಿದೆ. ಹೆತ್ತವರು ಈಕೆಗೆ ವಿವಾಹ ಮಾಡಲು ಬಯಸಿದಾಗ, ಮದುವೆ ಬಗ್ಗೆ ಆಸಕ್ತಿ ಇರದ ಈಕೆ ‘ಗೊಗ್ಗಳೇಶ್ವರ’ ದೇಗುಲದಲ್ಲಿ ಅಡಗಿ ಕುಳಿತು ವಿವಾಹ ಆಗುವ ಸಂದರ್ಭವನ್ನು ತಪ್ಪಿಸಿಕೊಂಡ ಳಂತೆ. ಇವಳು ಕೇರಳದ ಅವಳೂರಿನ ಗೊಗ್ಗಳೇಶ್ವರ ದೇವಾಲಯದಲ್ಲಿ ಧೂಪದ ಕಾಯಕ ಮಾಡುತ್ತಿದ್ದುದರಿಂದ ಈಕೆಯನ್ನು ‘ಧೂಪದ ಗೊಗ್ಗವ್ವೆ’ಯೆಂದೂ ಕರೆಯುವರು. ಗುಗ್ಗಳ ಧೂಪ ಸಸ್ಯದ ಒಂದು ಪ್ರಕಾರದ ಅಂಟು. ಪೂಜೆ ಸಮಾರಂಭಗಳಲ್ಲಿ ಪರಿಮಳ ಸೂಸುವ ಕಾರ್ಯಕ್ಕೆ  ಬೆಂಕಿಯಲ್ಲಿ ಈ ಧೂಪದ ಪದಾರ್ಥವನ್ನು ಹಾಕಿ ವಾತಾವರಣವನ್ನು ಪ್ರಸನ್ನಗೊಳಿಸುವ ಕೆಲಸ ಕಾಯಕವಾಗಿತ್ತು. ಈಕೆಯ ವಚನಗಳ ಅಂಕಿತ ‘ನಾಸ್ತಿನಾಥಾ’. ಗೊಗ್ಗವ್ವೆ ಜನನ ೧೨ ನೆಯ ಶತಮಾನ ಅಂಕಿತನಾಮ ನಾಸ್ತಿನಾಥಾ ಒಟ್ಟು ವಚನಗಳು. ೬ ಇವರು ೧೨ನೇ ಶತಮಾನದ ವಚನಕಾರರಲ್ಲಿ ಒಬ್ಬರು. ಇವರು ಬಾಲ್ಯದಿಂದಲೆ ಶಿವನ ಆರಾಧಕರಾಗಿದ್ದರು. ಇವರು ಮೂಲತಃ ಕೇರಳ ರಾಜ್ಯದ ಅವಲೂರಿನವರು. ಇವರು ತಮ್ಮ ಮದುವೆಯ ವಯಸ್ಸಿಗೆ ಬಂದಾಗ ಮನೆಯವರು ಇವರ ಮದುವೆ ವಿಷಯದ ಪ್ರಸ್ತಾವನೆ ಇವರ ಮುಂದಿಟ್ಟರು. ಆದರೆ ಇವರಿಗೆ ಮದುವೆಯ ವೈವಾಹಿಕ ಜೀವನ ಆಸಕ್ತಿ ಇಲ್ಲದಿರುವ ಕಾರಣ ಅವರೂರಿನ ಗೊಗ್ಗಳೇಶ್ವರ ದೇವಾಲಯದಲ್ಲಿ ಅಡಗಿ ಕುಳಿತಿದ್ದರಂತೆ.‌ ಮನೆಯವರು ಎಷ್ಟೇ ಕರೆದರು ಇವೆಲ್ಲವೂ ಬೇಡವೆಂದು ಆ ದೇವಾಲಯದಲ್ಲಿಯೇ ಶಿವನಿಗೆ ಪೂಜೆ ಕೈಂಕರ್ಯಗಳನ್ನು ಮಾಡತೊಡಗಿದರು. ಶಿವನಿಗೆ ದಿನಾಲು ಧೂಪ ಹಾಕುವ ಕಾಯಕವನ್ನು ಮಾಡುತಿದ್ದರಂತೆ. ಒಂದು ದಿನ ಸಾಕ್ಷಾತ್ ಪರಶಿವನೇ ಇವರನ್ನು ಪರೀಕ್ಷಿಸಲು ಬಂದಿದ್ದರಂತೆ. ಇವರ ಬಳಿ ಬಂದು ಕೈಲಾಸಕ್ಕೆ ಹೋಗುವ ದಾರಿಯನ್ನು ಕೇಳಿದ್ದರಂತೆ. ಇವರು ಗೊಗ್ಗವ್ವೆಯವರು ಶಿವನಿಗೆ ತಮ್ಮ ಧೂಪದ ಹೊಗೆಯ ಮೂಲಕ ಶಿವನಿಗೆ ಕೈಲಾಸದ ದಾರಿ ತೋರಿಸಿದರಂತೆ. ಇಂತಹ ಒಂದು ಪುರಾಣವು ಬಸವೋತ್ತರ ಕಾಲದಲ್ಲಿ ಸೃಷ್ಟಿಯಾಗಿದ್ದು ಕಂಡು ಬರುತ್ತದೆ.  ಧೂಪ ಹಾಕುವ ಕಾಯಕವನ್ನು  ಮುಂದುವರಿದಂತೆ ಇತ್ತ ಕಲ್ಯಾಣ ಕರ್ನಾಟಕದತ್ತ ಬಂದು ಅನುಭವ ಮಂಟಪದಲ್ಲಿ ಶರಣರೊಂದಿಗೆ  ನೆಲೆಸಿದಳು. ನಾಸ್ತಿನಾಥಾ’ ಅಂಕಿತದಲ್ಲಿ ೬ ವಚನಗಳನ್ನು ರಚಿಸಿದ್ದಾಳೆ. ಅವುಗಳಲ್ಲಿ ಲಿಂಗಾಂಗ ಸಾಮರಸ್ಯ, ಸ್ತ್ರೀ ಪುರುಷ ಸಮಾನತೆಯ ಚಿಂತನೆಗೆ ಅದ್ಯತೆ ನೀಡಲಾಗಿದೆ. ಸರಳ ಭಾಷೆ, ವೃತ್ತಿಪರಿಭಾಷೆಯ ಬಳಕೆಯಿಂದ ವಚನಗಳು ವಿಶೇಷವಾಗಿ ಗಮನ ಸೆಳೆಯುತ್ತವೆ ಇವರು ಭಾಷೆ ಗಡಿಗೂ ಮೀರಿದ ಶಿವಶರಣೆಯಲ್ಲಿ ಒಬ್ಬರು. ಇಲ್ಲಿ ಕರ್ನಾಟಕಕ್ಕೆ ಬಂದು ಇಲ್ಲಿ ನೆಲೆಸಿ ಭಾಷೆ ಸಾಹಿತ್ಯವನ್ನು ಅರಿತು ವಚನಗಳನ್ನು ರಚಿಸಿದರೆಂದರೆ ಇವರ ಸಾಧನೆ ಕಾಯಕ ಅಮೋಘ ಕೊಡುಗೆ.       ಧೂಪದ ಗೊಗ್ಗವ್ವೆಯ ಆರು ವಚನಗಳು ಲಭ್ಯವಾಗಿವೆ. 1 ನೆಯ ವಚನ ಅನಲಕೊಂಡ ಭೋಗಕ್ಕೆ ಪರಿ ಪ್ರಕಾರವುಂಟೇ ? ಶರಧಿಕೊಂಡ ಸಾಗರಕ್ಕೆ ಕುರುಹಿನ ತಲೆಯೇ ? ಲಿಂಗ ಮುಟ್ಟಿದ ಅಂಗಕ್ಕೆ ಮತ್ತೆ ಪುಣ್ಯವುಂಟೇ ? ಹುಸಿ ನಾಸ್ತಿನಾಥಾ! 2  ವಚನ… ಉದ್ದವನೇರುವದಕ್ಕೆ ಗದ್ದುಗೆಯಿಲ್ಲದೆ ಎಯ್ದಬಾರದು, ಚಿದ್ರೋಪನರಿಯುವದಕ್ಕೆ,ಅರ್ಚನೆ,ಪೂಜೆ ನಿತ್ಯ ನಿಯಮವಿಲ್ಲದೆ ಕಾಣಬಾರದು.ಅದು ಸತ್ಯದಿಂದ ಮಾಡಿ,ಅಸತ್ಯವ ಮೆರೆದೆಡೆ ಅದೇ ಸತ್ಯವೆಂಬೆ ನಾಸ್ತಿನಾಥ॥॥ 3ನೇ ವಚನ ॥॥ ಗಂಡು ಮೋಹಿಸಿ,ಹೆಣ್ಣು ಹಿಡಿದೆಡೆ ಒಬ್ಬರ ಒಡವೆ ಎಂದರಿಯಬೇಕು.ಹೆಣ್ಣು ಮೊಹಿಸಿ,ಗಂಡು ಹಿಡಿದೆಡೆ ಉತ್ತರವಾವುದೆಂದರಿಯಬೇಕು.ಈ ಎರಡು ಉಭಯವ ಕಳೆದು ಸುಖಿ ತಾನಾಗಬಲ್ಲೆದು ನಾಸ್ತಿನಾಥನು ಪರಿಪೂರ್ಣನೆಂಬೆ॥॥ 4 ನೇ ವಚನ ಮಾರುತನಲ್ಲಿ ಬೆರೆದ ಗಂಧದಂತೆ,ಸುರತದಲ್ಲಿ ಬೆರೆದ ಸುಖದಂತೆ,ಮಚ್ಚಿನಲ್ಲಿ ಕೊಡುವ ಉಚಿತದಂತೆ ಭಕ್ತರಿಗದೆ ಹಾದಿಎಂಬೇ ನಾಸ್ತಿನಾಥ॥॥ 5 ನೇ ವಚನ ಭಕ್ತರು ಜಂಗಮರಲ್ಲಿ ಕಟ್ಟಿ ಹೋರಬೇಕೆ.. ಧೂಪದ ಹೊಗೆ ಎತ್ತೆ ಹೋದರು ಅದು ಸತ್ಯವೆಂಬೆ ನಾಸ್ತಿನಾಥ॥॥ 6 ನೇ ವಚನ ಮೊಲೆ ಮೂಡಿ ಬಂದೆಡೆ ಹೆಣ್ಣೆಂಬರು, ಮಿಸೆ,ಕಾಸಿ ಬಂದೆಡೆ ಗಂಡೆಂಬರು ಈ ಎರಡು ಉಭಯವು ಹೆಣ್ಣೊ ಗಂಡೊ ಹುಸಿ ನಾಸ್ತಿನಾಥ॥॥  ಕಲ್ಯಾಣದ ಕ್ರಾಂತಿ ನಡೆದಾಗ ಎಲ್ಲ ಶಿವಶರಣರು ಚದುರಿ ಬೇರೆ ಬೇರೆ ಪ್ರದೇಶಗಳಿಗೆ ವಚನಗಳನ್ನು ಹೊತ್ತು ಹೋದರು. ಆದರೆ ಗೊಗ್ಗವ್ವೆ   ಬೀದರ ಜಿಲ್ಲೆಯ ಔರಾದ ತಾಲ್ಲೂಕಿನ ಧೂಪತಮಾಹಾಗಾಂವ ಎಂಬ ಗ್ರಾಮದಲ್ಲಿ ಬಂದು ನೆಲೆಸಿದರು. ಇದೆ ಕಾರಣಕ್ಕೆ  ಈ ಊರಿಗೆ  ಧೂಪತಮಾಹಾಗಂವ ಎಂಬ ಹೆಸರು  ಬರಲು ಇವರೇ ಕಾರಣ. ಐಕ್ಯ ಸ್ಥಳ  ಇವರು ಧೂಪ ಉರಿಸುತಿದ್ದ ಕಾರಣ  ಊರಿನ ಇದ್ದ ಹೆಸರನ್ನು ಬದಲಿಸಿ ಧೂಪತಮಾಹಾಗಂವ ಎಂದು ಮರುನಾಮಕರಣ ಮಾಡಿದ್ದರಂತೆ ಈ ಗ್ರಾಮಕ್ಕೆ ಉಲ್ಲೇಖವಿದೆ. ಇವರು ಐಕ್ಯವಾದ ಸ್ಥಳದಲ್ಲಿ ಒಂದು ದೇವಾಲಯವು ನಿರ್ಮಾಣವಾಗಿದೆ. ಇವಾಗ ಮತ್ತೆ ಆ ದೇವಾಲಯದಲ್ಲಿ ಭವ್ಯವಾದ ತೋಟವನ್ನು ನಿರ್ಮಿಸಿದ್ದಾರೆ. ಇಲ್ಲಿ ಗೊಗ್ಗವ್ವೆ ಕೆರೆ ಎಂತಲೂ ಕೂಡ ಇದೆ.  ತನ್ನ ವಚನಗಳಲ್ಲಿ ಸ್ತ್ರೀ ಸಂವೇದನೆ ಸಮಾನತೆಯ ಮೂಲಕ ಗಂಡು ಹೆಣ್ಣು ಸಮಾನರು ಎಂದು ಪ್ರತಿಪಾದಿಸಿದ ದಿಟ್ಟ ಮಹಿಳೆ ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಸಾವಿಲ್ಲದ ಶರಣರು ಮಾಲಿಕೆ “ದಿಟ್ಟ ಗಣಾಚಾರಿ ಶರಣೆ ಗೊಗ್ಗವ್ವೆ” ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಕಾವ್ಯಯಾನ

ಕೆ.ಬಿ.ವೀರಲಿಂಗನಗೌಡ್ರ ಅವರ ಕವಿತೆ “ಜಮಾ-ಖರ್ಚು”

ಕಾವ್ಯ ಸಂಗಾತಿ ಕೆ.ಬಿ.ವೀರಲಿಂಗನಗೌಡ್ರ ಅವರ “ಜಮಾ-ಖರ್ಚು” ಅವರುನನ್ನನ್ನು ಕಳೆದುಕೊಂಡರುಕಳೆದುಕೊಳ್ಳುವ ನಡಾವಳಿಯನ್ನುಹಿಂದಿನ ರಾತ್ರಿಯೇ ಬರೆದುಕೊಂಡಿದ್ದರುಬೆಳಗು ನನ್ನ ಪಾಲಿಗಷ್ಟೇ ಕಾರ್ಗತ್ತಲಾಗಿತ್ತು ಅವರುನಾಯಿಯಂತೆಬಾಲ ಅಲ್ಲಾಡಿಸಿಕೊಂಡುಬಾಗಿಲಿಗೆ ಬಂದು ನಿಂತೇ ನಿಲ್ತಾನೆನಾವು ಕಳೆದರೂ ಅವ ಕೂಡ್ತಾನೆಂದು ನಡಾವಳಿ ದಿನವೇ ಲೆಕ್ಕಾಚಾರವಾಗಿತ್ತಂತೆ ಅವರುಆಲಯದಿಂದ ದಬ್ಬಿದರುಬಯಲಲಿ ಅಣ್ಣ ಅಕ್ಕ ತಬ್ಬಿದರುತಬ್ಬಲಿತನ ನನಗಂತೂ ಕಾಡಲಿಲ್ಲಕಾಡು ಕಡಲು ಹಾಡು ಸಂತೈಸಿದವು ಅವರುಕಳೆದುಕೊಳ್ಳದಿದ್ದರೆಕೂಡಿಕೊಳ್ಳುವ ಪ್ರೀತಿಯನ್ನುಅಕ್ಷರಶಃ ನಾನು ಅನುಭವಿಸುತ್ತಿರಲಿಲ್ಲಬುದ್ಧ ಬಸವರು ಅರ್ಥವೂ ಆಗತಿರಲಿಲ್ಲ ಇಷ್ಟೇಅವರುಬುದ್ಧಿವಂತರುನನ್ನನ್ನು ಕಳೆದುಕೊಳ್ಳಲುತುಂಬಾ ಬುದ್ಧಿ ಖರ್ಚು ಮಾಡಿದ್ದಾರೆದೇವರು ಅವರಿಗೆ ಅಷ್ಟೂ ಜಮೆ ಮಾಡಲಿನನ್ನಂತಹವರನ್ನು ಮತ್ತೆ ಮತ್ತೆ ಕಳೆದುಕೊಳ್ಳಲಿ. ಕೆ.ಬಿ.ವೀರಲಿಂಗನಗೌಡ್ರ.

ಕೆ.ಬಿ.ವೀರಲಿಂಗನಗೌಡ್ರ ಅವರ ಕವಿತೆ “ಜಮಾ-ಖರ್ಚು” Read Post »

ಕಾವ್ಯಯಾನ

ವೈ.ಎಂ.ಯಾಕೊಳ್ಳಿ ಅವರ ಕವಿತೆ “ಪ್ರೀತಿಸದಿರು..ಜಾತಿಯನೇ ಪ್ರೀತಿಸು”

ಕಾವ್ಯ ಸಂಗಾತಿ ವೈ.ಎಂ.ಯಾಕೊಳ್ಳಿ “ಪ್ರೀತಿಸದಿರು..ಜಾತಿಯನೇ ಪ್ರೀತಿಸು” ಅನಿವಾರ್ಯ ಇದ್ದರೆಅತ್ತು ಬಿಡುಮನದ ಭಾವಗಳಅದೆಷ್ಟು ಹೊತ್ತು‌ಹಿಡಿದಿಡುವಿ ಇಲ್ಲಿ ಒಲವೆಂಬುದುಅಳುವ ಕಲಿಸುವಪಾಠಶಾಲೆಒಲವಿನಲಿ‌ ಇದ್ದವರನುಎಲ್ಲರೂಕೊನೆಗೆ ಹೆತ್ತವರೂಅಳಿಸುವವರೇ ಅದಾವ ಕಾಲದ ದುರ್ದೈವವೋದೇವರುಗಳ   ಶಾಪವೋಇಲ್ಲಿನ ದೇವರುಗಳೂನೂರೊ ,ಹತ್ತೋ‌, ಕನಿಷ್ಠಇಬ್ಬಿಬ್ಬರನ್ನಾದರೂಮದುವೆಯಾಗುವದನ್ನುಒಪ್ಪಿವೆ ಮನದಲಿ ಒಲಿದವರನ್ನುಮೆಚ್ಚುವದು ಎದೆಯಲಿಟ್ಟುಪ್ರೀತಿಸುವದನುತಿರಸ್ಕರಿಸಿವೆ ಒಲಿದ ಕಾರಣಕ್ಕಾಗಿಹೆತ್ತ ಮಕ್ಕಳನ್ನೇನೇಣಿಗೆ ಹಾಕುವವರುಮರ್ಯಾದಾ ಹತ್ಯೆಯಹೆಸರಲ್ಲಿ ಕೊಲ್ಲುವವರೂಇದ್ದಾರೆಜೀವ ಕೊಟ್ಟಾದರೂಜಾತಿ ಉಳಿಸುತ್ತಾರೆಜೀವ ಇಲ್ಲವಾಗಿಸುತ್ತಾರೆ ಈ ದೇಶ ಮನುಷ್ಯಮನುಷ್ಯರನ್ನುಪ್ರೀತಿಸುವ, ಒಲಿಯುವಕಲೆಯ ಕಲಿಸಲೇ ಇಲ್ಲ ವೈ.ಎಂ.ಯಾಕೊಳ್ಳಿ

ವೈ.ಎಂ.ಯಾಕೊಳ್ಳಿ ಅವರ ಕವಿತೆ “ಪ್ರೀತಿಸದಿರು..ಜಾತಿಯನೇ ಪ್ರೀತಿಸು” Read Post »

ಕಾವ್ಯಯಾನ

ಸುಮತಿ ನಿರಂಜನ ಅವರ ಕವಿತೆ “ದೂರದ ಪಯಣ”

ಕಾವ್ಯ ಸಂಗಾತಿ ಸುಮತಿ ನಿರಂಜನ “ದೂರದ ಪಯಣ” ಬಂದಿಹೆವು ಬಹುದೂರ ಗೆಳತೀನೋಡೊಮ್ಮೆ ಹಿಂದೆ…ಇದೆ ಹಾದಿಯಲಿ ಹಾದು ಹೋದವರು…ಜೀತದೆತ್ತುಗಳೂ ನಮ್ಮವಂತೆಯೆಘಣ ಘಣ ಗಂಟೆಯ ಮಾಲೆಘಮ ಘಮ ಮಲ್ಲಿಗೆ ಕೊರಳಲೆಅರಿಶಿನ ಕುಂಕುಮ ನೊಸಲಲಿಕೊಂಬಿಗೆ ಗೊಂಡೆಯ ಚೆಂಡು… ಒಳಗೆ…ಉಸಿರೊತ್ತುವ ವಜ್ರದ ನತ್ತುಕೊರಳೆಳೆವ ಮುತ್ತಿನ ಹಾರಕೈ ತುಂಬ ಬಳೆಭಾರಮಣ ಭಾರ ಒಡ್ಯಾಣಗುಟ್ಟು ಬಿಟ್ಟು ಕೊಡುವುದಣ್ಣಬೆಳ್ಳಿ ಬಿಗಿ ಕಾಲಂದುಗೆಕಳ್ಳ ಕಾಕರ ಭಯಮಾನನಷ್ಟದ ಭಯಸೊಲ್ಲೆತ್ತಿದರೆ ಗೋಣುಮುರಿವರೆನ್ನುವ ಭಯಪಟ್ಟೆಸೀರೆಯನುಟ್ಟು ಮುದುರಿಕುಳಿತವರು ಮೂಲೆಯಲಿಸೆರಗೊಳಗೆ ಸದ್ದಾಗದಂತ್ತವರುತಮ್ಮ ಸಾರ್ಥದ ಗಮ್ಯವೆತ್ತ ?ಉಸಿರೆತ್ತಿ ಕೇಳಲಾರದೆಹೊದ್ದ ಮುಸುಕಿನೊಳಗೆಕಾಲಕ್ಕೆ ಸಂದುಹೋದವರು ಇಂದು –ನಮಗಿಲ್ಲ ಒಡವೆ ಹೆಣ ಭಾರಬಿಚ್ಚು ನಗುವೆ ನಮ್ಮ ಕಂಠೀಹಾರಧೈರ್ಯ ಸ್ಥೈರ್ಯವೆ ಷೋಡಶ ಸಿಂಗಾರಕಾವ ದೇವರದು ವಿದ್ಯೆಬುದ್ಧಿಯ ಸಾರಹರಿದು ಬಂದೆವು ಗೆಳತೀಆ ಕಪ್ಪು ಭೀತಿಯ ಪರದೆಹೀರೋಣವೀ ಸ್ವಚ್ಛಂದ ಗಾಳಿಹೂಡೋಣ ನಮ್ಮ ಎತ್ತುಗಳ ನಾವೆಕಟ್ಟೋಣ ನಮ್ಮ ಇಹಪರಾರ್ಥವ ನಾವೆಸವೆಸೋಣ ಏರುಪೇರಿನ ದಾರಿಸೇರೋಣ ನಮ್ಮ ಗಂತವ್ಯ ನಾವೇ ಸುಮತಿ ನಿರಂಜನ 

ಸುಮತಿ ನಿರಂಜನ ಅವರ ಕವಿತೆ “ದೂರದ ಪಯಣ” Read Post »

ಅರ್ಜುನ ಉವಾಚ

ಧಾರಾವಾಹಿ ಸಂಗಾತಿ ಅರ್ಜುನ ಉವಾಚ ವಿಶ್ವನಾಥ್‌ ಎನ್ ನೇರಳೆಕಟ್ಟೆ ಕೃಷ್ಣದರ್ಶನದ ಹಂಬಲವದು ಕುದುರೆಯನು ಕಟ್ಟಿಸಿತು ಚಂಪಕಾನಗರಿಯ ಅರಸ ಹಂಸಧ್ವಜ. ನಿಷ್ಠೆ ನಿಯಮಗಳಿಗೆ ನಿಜಾರ್ಥದ ದೊರೆಯಾಗಿದ್ದವನು. ಇಡಿಯ ಚಂಪಕಾಪುರಕ್ಕೆ ಸರಿಹೊಂದುವ ನಿಯಮಾವಳಿಯನ್ನವನು ರೂಪಿಸಿದ್ದ. ಎಲ್ಲಾ ಪ್ರಜೆಗಳು ಏಕಪತ್ನೀವ್ರತವನ್ನು ಪಾಲಿಸಬೇಕಿತ್ತು. ಕೃಷ್ಣಪೂಜೆಯನ್ನು ಗೈಯ್ಯಬೇಕಿತ್ತು. ದಾನಧರ್ಮಗಳನ್ನು ನಡೆಸಬೇಕಿತ್ತು. ಹೀಗೆ ರಾಜಕೃತ ನಿಯಮಾವಳಿಗಳನ್ನು ಯಾರೂ ಮೀರುವುದಕ್ಕೆ ಸಾಧ್ಯವೇ ಇರಲಿಲ್ಲ. ಪ್ರಜೆಗಳ ಕೆಡುಕಿನ ವರ್ತನೆಯನ್ನು ಸಹಿಸದವನಾಗಿದ್ದ ಹಂಸಧ್ವಜ. ಹಾಗೆಂದು ಕೇವಲ ಪ್ರಜೆಗಳ ಮೇಲೆ ನಿರ್ಬಂಧ ಹೇರಿ ಸುಮ್ಮನಿರುವವನಲ್ಲ ಆತ. ಪ್ರಜೆಗಳಿಗೆ ಇವುಗಳನ್ನು ಬೋಧಿಸುವುದಕ್ಕೂ ಮೊದಲು ತಾನೇ ಪಾಲಿಸಿದವನಾಗಿದ್ದ. ‘ಯಥಾ ರಾಜ ತಥಾ ಪ್ರಜಾ’ ಎಂಬ ಮಾತಿನಂತೆ ಹಂಸಧ್ವಜನ ಸುಗುಣಗಳನ್ನು ಅಲ್ಲಿನ ಪ್ರಜೆಗಳಲ್ಲಿಯೂ ಕಾಣಬಹುದಾಗಿತ್ತು. ಎಲ್ಲರೂ ಏಕಪತ್ನೀವ್ರತಸ್ಥರಾಗಿದ್ದರು. ಕೃಷ್ಣಪೂಜೆಯಲ್ಲಿ ನೆಮ್ಮದಿ ಕಂಡುಕೊಂಡಿದ್ದರು. ತಮ್ಮಲ್ಲಿರುವ ಸಂಪತ್ತಿನಲ್ಲಿ ಒಂದಷ್ಟು ಭಾಗವನ್ನು ಅವಶ್ಯಕತೆ ಇರುವವರಿಗೆ ಕೊಟ್ಟು ಧನ್ಯಭಾವವನ್ನು ಅನುಭವಿಸುತ್ತಿದ್ದರು. ಹೀಗಿತ್ತು ಚಂಪಕಾನಗರಿ, ನಮ್ಮ ಯಾಗದ ಕುದುರೆ ಅಲ್ಲಿಯ ಧರಣಿಯ ಮೇಲೆ ಕಾಲನ್ನಿರಿಸಿದಾಗ.     ಏಳು ಮಂದಿ ತಮ್ಮಂದಿರಿದ್ದರು ಹಂಸಧ್ವಜನಿಗೆ. ಸುದರ್ಶನ, ಸುಧನ್ವ, ಸುಮನಸ, ಸುರಥ ಎಂಬ ನಾಮಾಂಕಿತ ನಾಲ್ಕು ಮಂದಿ ವೀರ ಪುತ್ರರಿದ್ದರು. ಶಂಖ ಲಿಖಿತ ಎಂಬ ಅಣ್ಣತಮ್ಮಂದಿರು ಹಂಸಧ್ವಜನ ಪುರೋಹಿತರೆನಿಸಿಕೊಂಡಿದ್ದರು. ಇವರಿಬ್ಬರಿಗೂ ಶಾಸ್ತçಪಾಲನೆಯ ವಿಚಾರ ಬಂದಾಗ ಬಾಂಧವ್ಯವಾಗಲೀ, ಆತ್ಮೀಯತೆಯಾಗಲೀ ಮುಖ್ಯವಾಗುತ್ತಿರಲಿಲ್ಲ. ಅದೊಂದು ಸಲ ಲಿಖಿತನ ಆಶ್ರಮಕ್ಕೆ ಬಂದ ಶಂಖ ಅವನಲ್ಲಿ ಕೇಳದೆಯೇ ನೆಲದಲ್ಲಿ ಬಿದ್ದಿದ್ದ ಹಣ್ಣನ್ನು ಎತ್ತಿಕೊಂಡು ತಿಂದ. ಶಂಖನ ವರ್ತನೆಯದು ದೋಷ ಎಂದು ತೀರ್ಮಾನಿಸಿದ ಲಿಖಿತ ಸಹೋದರ ಎನ್ನುವುದನ್ನೂ ಪರಿಗಣಿಸದೆ ಶಿಕ್ಷೆ ಕೊಡಿಸಲು ಹಂಸಧ್ವಜನ ಆಸ್ಥಾನಕ್ಕೆ ಕರೆತಂದಿದ್ದ. ಶಂಖನ ಕೈಗಳನ್ನು ಕತ್ತರಿಸಿಹಾಕುವ ಶಿಕ್ಷೆ ಪ್ರಕಟವಾಯಿತು ಹಂಸಧ್ವಜನ ಕಡೆಯಿಂದ. ಹೀಗೆ ಶಿಕ್ಷೆಗೆ ಒಳಗಾದ ಶಂಖನಿಗೆ ತಪೋಬಲದಿಂದ ಮತ್ತೆ ಕೈ ಮೂಡುವಂತೆ ಮಾಡಿದ ಲಿಖಿತ. ಹೀಗೆ ಸರಿ ತಪ್ಪುಗಳ ವಿವೇಚನೆಗಿಳಿದರೆ ಬೇರಾವುದಕ್ಕೂ ಎಡಗೊಡದ ಕಟ್ಟುನಿಟ್ಟಿನ ಚಿತ್ತದ ಅಣ್ಣತಮ್ಮಂದಿರು ಪುರೋಹಿತರೆನಿಸಿಕೊಂಡು ಹಂಸಧ್ವಜನಿಗೆ ಮಾರ್ಗದರ್ಶನ ನೀಡುತ್ತಿದ್ದರು.   ಕುದುರೆಯ ರಕ್ಷಣೆಗಾಗಿ ಚಂಪಕಾನಗರಿಯನ್ನು ಸೇರಿಕೊಂಡ ನಾನು ಪಟ್ಟಣದ ಜನರನ್ನೂ ಹಾಗೆಯೇ ಒಮ್ಮೆ ನೋಡಿದೆ. ಉಣ್ಣುವುದಕ್ಕೆ ಉಡುವುದಕ್ಕೆ ಯಾವ ಕೊರತೆಯೂ ಅಲ್ಲಿನ ಜನರಿಗಿರಲಿಲ್ಲ. ವಸ್ತçಭೂಷಣಗಳಿಂದ, ಅಲಂಕಾರ- ಸುಗಂಧ ದ್ರವ್ಯಗಳಿಂದ ಶೋಭಿಸುತ್ತಿದ್ದರು. ವೀರರು ಎನ್ನುವುದು ಅವರ ನಿಲುವಿನಲ್ಲಿಯೇ ಗೊತ್ತಾಗುವಂತಿತ್ತು.     ಹಾಗೆ ನಾನು ಈಕ್ಷಿಸುತ್ತಿದ್ದಾಗಲೇ ಡಂಗುರದ ದನಿ ಕೇಳಿಬಂತು. ನಮ್ಮ ಕುದುರೆಯನ್ನು ಕಟ್ಟಿಹಾಕುವ ನಿರ್ಧಾರ ಮಾಡಿದ್ದ ಹಂಸಧ್ವಜ. ಅವನು ನಮ್ಮ ಜೊತೆಗಿನ ಯುದ್ಧಕ್ಕೆ ಮನಸ್ಸು ಮಾಡಿದ್ದೇಕೆ ಎಂಬ ವಿಷಯವೂ ಸ್ವಲ್ಪ ಸಮಯದಲ್ಲಿಯೇ ನನ್ನ ಸೇವಕರ ಮೂಲಕ ತಿಳಿದುಬಂತು. ನಮ್ಮ ಯಾಗದ ಕುದುರೆ ಅವನ ನಗರಿಯನ್ನು ಪ್ರವೇಶಿಸಿದ ತಕ್ಷಣವೇ ತನ್ನ ಆಪ್ತ ಸಚಿವರ ಸಭೆಯನ್ನು ಕರೆದನಂತೆ. “ಪಾಂಡವರ ಯಾಗದ ಕುದುರೆಯನ್ನು ಕಟ್ಟಿ ಅರ್ಜುನನ ಜೊತೆ ಸಂಘರ್ಷಕ್ಕಿಳಿದರೆ ಸಾಕ್ಷಾತ್ ಶ್ರೀಕೃಷ್ಣ ಪರಮಾತ್ಮನೇ ನಮ್ಮ ಈ ಭೂಮಿಯಲ್ಲಿ ಪ್ರತ್ಯಕ್ಷನಾಗುತ್ತಾನೆ. ಇಷ್ಟರವರೆಗೂ ನಾವು ಯಾರೂ ಕೃಷ್ಣನನ್ನು ಕಂಡವರಲ್ಲ. ಈಗ ಕಾಣುವ ಸುಯೋಗ ಒದಗಿಬಂದಿದೆ. ಕೃಷ್ಣ ಪ್ರತ್ಯಕ್ಷನಾಗಿ ನಮ್ಮನ್ನು ವಿರೋಧಿಸಿದರೂ ಅದು ನಮಗೆ ಸಂತಸವೇ. ಅದಕ್ಕಾಗಿ ಕುದುರೆಯನ್ನು ಕಟ್ಟಿಹಾಕಬೇಕಿದೆ” ಎಂದನಂತೆ. ಅಂದರೆ, ಕೃಷ್ಣದರ್ಶನದ ಹಂಬಲದಿಂದಲೇ ಅವನು ನಮ್ಮ ಯಾಗದ ಕುದುರೆಯ ಚಲನೆಗೆ ತಡೆಯೊಡ್ಡಿದ್ದ. ರಾಜಾಜ್ಞೆ ಹೊರಟ ಮೇಲೆ ಯುದ್ಧ ನಿಶ್ಚಯ ಎನ್ನುವುದು ನನಗೆ ಸ್ಪಷ್ಟವಾಯಿತು.     ಅವನ ಜೊತೆಗೆ ಯುದ್ಧವನ್ನು ಆರಂಭಿಸುವುದಕ್ಕೂ ಮೊದಲು ಅವನ ಬಲಾಬಲಗಳನ್ನು ಅರಿತುಕೊಳ್ಳುವುದು ಬಲುಮುಖ್ಯ ಎನಿಸಿತು. ತಿಳಿದುಕೊಂಡೆ. ಎಪ್ಪತ್ತು ಮಂದಿ ದಳಪತಿಗಳಿದ್ದರು ಅವನ ಸೇನೆಯಲ್ಲಿ. ಒಬ್ಬೊಬ್ಬ ದಳಪತಿಗಳು ಎಪ್ಪತ್ತೊಂದು ಸಾವಿರ ರಥಗಳಿಗೆ, ಇಪ್ಪತ್ತೊಂದು ಸಾವಿರ ಆನೆಗಳಿಗೆ, ಲಕ್ಷ ಕುದುರೆಗಳಿಗೆ, ಲಕ್ಷ ಸೈನಿಕರಿಗೆ ಅಧಿಪತಿಗಳೆನಿಸಿಕೊಂಡಿದ್ದರು. ಹಿರಿದು ಸೈನ್ಯವನ್ನೇ ಎದುರುಹಾಕಿಕೊಳ್ಳಬೇಕಿದೆ ನಾವು ಎನ್ನುವುದು ದೃಢವಾಯಿತು ನನಗೆ.    ಹಂಸಧ್ವಜನೆAಬ ಪ್ರಜಾಪರ ರಾಜನ ಡಂಗುರವನ್ನು ಅಲ್ಲಿನ ಪ್ರಜೆಗಳು ಒಡನೆಯೇ ಪಾಲಿಸಿದರು. ಚತುರಂಗ ಬಲಗಳು ಸಿದ್ಧಗೊಂಡವು. ಯುದ್ಧ ನಡೆಯುವ ತಾಣದೆಡೆಗೆ ನಡೆದುಬರತೊಡಗಿದವು.    ನನಗೆ ವಿಸ್ಮಯ ಮೂಡಿದ್ದು ಯುದ್ಧಕ್ಕೆ ಬರುತ್ತಿದ್ದ ಸೈನಿಕರ ಮೊಗದ ಭಾವನೆಯನ್ನು ಕಂಡಾಗ. ಸಾಮಾನ್ಯವಾಗಿ ಯುದ್ಧಕ್ಕೆ ಬರುವ ಸೈನಿಕರಲ್ಲಿ ವೀರತ್ವ ಮನೆಮಾಡಿರುತ್ತದೆ. ಜೊತೆಗೆ ಅಂಜಿಕೆಯೂ ಇರುತ್ತದೆ. ಆದರೆ ಚಂಪಕಾನಗರಿಯ ಸೈನಿಕರ ಮೊಗದಲ್ಲಿ ಹರ್ಷಭಾವ ತುಂಬಿ ತುಳುಕುತ್ತಿತ್ತು. ಅದರ ಹಿಂದಿನ ಕಾರಣವನ್ನು ತಿಳಿದುಕೊಂಡೆ. ಕೃಷ್ಣ ಪ್ರತ್ಯಕ್ಷವಾಗದೆ ನನಗೆ ಸೋಲುವವನಲ್ಲ ಹಂಸಧ್ವಜ ಎನ್ನುವುದು ಸೈನಿಕರಿಗೆ ಖಚಿತವಾಗಿತ್ತು. ಕೃಷ್ಣದರ್ಶನ ತಮಗೆ ಲಭಿಸುತ್ತದೆ. ತಮ್ಮ ಜನ್ಮ ಸಾರ್ಥಕವಾಗುತ್ತದೆ ಎಂಬ ಭಕ್ತಿಭಾವದ ಶರಧಿಯಲ್ಲಿ ತೇಲುತ್ತಾ, ಸೊಗಭಾವ ಅನುಭವಿಸುತ್ತಿದ್ದರು ಆ ಸೈನಿಕರು.     ಹೀಗೆ ಯುದ್ಧರಂಗದೆಡೆಗೆ ನಡೆದುಬರುತ್ತಿದ್ದ ಸೈನಿಕರನ್ನು ನೋಡುತ್ತಿದ್ದರು ಉಪ್ಪರಿಗೆಗಳಲ್ಲಿ ನಿಂತ ಅಂಗನೆಯರು. ರಣರಂಗದ ಮೇಲಿನ ಯುದ್ಧಕ್ಕೂ ಮೊದಲು ಶಯನಗೃಹದ ಸರಸಕಾಳಗದೆಡೆಗೆ ಗಂಡನ ಮನಸ್ಸನ್ನು ಸೆಳೆದ ಅದೆಷ್ಟೋ ಕಾಮಿನಿಯರು ಯುದ್ಧ ಮಾಡುವುದಕ್ಕೆ ಬೇಕಾದ ಭರಪೂರ ಉತ್ಸಾಹವನ್ನು ಅವರಲ್ಲಿ ತುಂಬಿ ಕಳುಹಿಸಿಕೊಟ್ಟಿದ್ದರು.     ಯುದ್ಧಕ್ಕೆ ಸಿದ್ಧವಾಗಿ ನಾವೂ ನಿಂತೆವು. ಹಂಸಧ್ವಜನ ಸೇನೆಯೂ ನಿಂತಿತು. ಯಾರದೋ ಆಗಮನಕ್ಕೆ ಕಾಯುತ್ತಿರುವಂತೆ, ಅವನೇಕೆ ಇನ್ನೂ ಬಂದಿಲ್ಲ ಎಂದು ಅತ್ತಿತ್ತ ನೋಡುತ್ತಿರುವಂತೆ ಹಂಸಧ್ವಜನ ವರ್ತನೆಯಿತ್ತು. ರಣಕಹಳೆ ಇನ್ನೂ ಮೊಳಗಿರಲಿಲ್ಲ. ಯಾರಿಗಾಗಿ ಕಾಯುತ್ತಿದ್ದಾನೆ ಹಂಸಧ್ವಜ?! ನನಗೆ ಅರ್ಥವಾಗಲಿಲ್ಲ.                                                  ಡಾ. ವಿಶ್ವನಾಥ ಎನ್ ನೇರಳಕಟ್ಟೆ     

Read Post »

ಅಂಕಣ ಸಂಗಾತಿ, ಮನದ ಮಾತುಗಳು

ಅಂಕಣ ಸಂಗಾತಿ ಮನದ ಮಾತುಗಳು ಜ್ಯೋತಿ ಡಿ ಬೊಮ್ಮಾ ಯುದ್ದಕಾಲೇ ವಿಪರೀತ ಬುದ್ದಿ. ನಮ್ಮ ಕಡಿ ಬಿಸಿಲಿನ ಕಾವು ಏರಲತರ ಆ ಕಡಿ ಯುದ್ದದ ಕಾವು ಎರಲತದ.ಯುದ್ದ ಅಂದ್ರ ನಾವು ಸಣ್ಣವರಾಗಿದ್ದಾಗ ಪುಸ್ತಕದಾಗ ಓದಿದ್ದು ಒಬ್ಬ ರಾಜ ಮತ್ತೊಬ್ಬ ರಾಜನ ಮ್ಯಾಲ ಯುದ್ದ ಮಾಡಿ ಅವನ ರಾಜ್ಯ ವಶಪಡಿಸಿಕೊಳ್ಳೊದು ಅಂತ ಓದಿದ್ದೆವು. ಕಲ್ಪನೆ ಮಾಡಕೊಳ್ಳಕೊ ಆಗದ ವಯಸ್ಸು ಅದು. ಆಮ್ಯಾಲ ರಾಮಾಯಣ ಮಹಾಭಾರತ ಧಾರಾವಾಹಿಗಳದಾಗ ಯುದ್ದ ಅಂದ್ರ ಹಿಂಗಿರತದ ಅಂತ ತಿಳಕೊಂಡೆವು.ಆ ಕಡೆಯಿಂದ ಸಾವಿರಾರು ಜನ ಈ ಕಡಿಯಿಂದ ಸಾವಿರಾರು ಜನ , ಯಾರು ಯಾರಿಗಿ ಹೊಡಿಲತಾರ ಕಡಿಲತಾರ ಎಂದು ತಿಳಕೊಳ್ಳೊವಷ್ಟರಲ್ಲಿ ಯುದ್ದ ಮುಗಿದಿರತಿತ್ತು. ಕತ್ತಿ , ಚೂರಿ , ಕೊಡಲಿ ಇಂತಹ ಆಯುಧಗಳಿಂದ ಯುದ್ದ ಮಾಡತಾರ ಅಂದಕೊಂಡಿದ್ದೆವು.ಪೌರಾಣಿಕ ಸಿನಿಮಾದೊಳಗ , ಇತಿಹಾಸ ತಿಳಸೋ ಸಿನಿಮಾದೊಳಗೆಲ್ಲ ಇಂತಹ ಯುದ್ದ ತೊರಿಸ್ತಿದ್ರು. ಮತ್ತ ನಮೂನಿ ನಮೂನಿ ಬಿಲ್ಲು ಬಾಣಗಳು.ರಾಮಾಯಣ ಮಹಾಭಾರತ ಧಾರಾವಾಹಿದೊಳಗ ಅದೇಷ್ಟು ನಮೂನಿ ಬಾಣಗಳು ತೊರಿಸ್ತಿದ್ರು ಅಂದ್ರ , ಬೆಂಕಿ ಉಗೊಳೋ ಬಾಣಗಳು , ಕಬ್ಬಿಣದ ಮಳಿ ಉಗೊಳೊ ಬಾಣಗಳು , ಹುಲಿ ಮುಖದ ಬಾಣಗಳು , ಹಾವಿನ ಮುಖದ ಬಾಣಗಳು. ಅವುಗಳನ್ನು ನೋಡ್ತ ಎಷ್ಟು ಕೂತುಹಲದಿಂದ ಕೂಡ್ತಿದ್ದಿವಂದ್ರ ಧಾರಾವಾಹಿ ಮುಗದ ಮ್ಯಾಲ ಬಾಳ ಬ್ಯಾಸರ ಆಗ್ತಿತ್ತು. ಹೈಸ್ಕೂಲ್ ಗೆ ಬಂದ ಮ್ಯಾಲ ಸಮಾಜ ವಿಜ್ಞಾನ ಪಠ್ಯ ದಾಗ ಓದಿದ ಯುದ್ದಗಳ ಕಲ್ಪನೆ ಸ್ವಲ್ಪ ಅಪ್ಗ್ರೆಡ್ ಆಗಿತ್ತು.ಮೊದಲನೆ ಮಹಾಯುದ್ದದಲ್ಲಿ ಮೊಟ್ಟಮೊದಲ ಬಾರಿಗೆ ಯುದ್ದ ವಿಮಾನಗಳು,  ಯುದ್ದ ನೌಕೆಗಳು , ಟ್ಯಾಂಕರ್ ಗಳು , ಜಲಾಂತರ್ಗಾಮಿ ಗಳು ಬಳಸಲಾಯಿತು . ಅಲ್ಲಿವರೆಗೂ ಯುದ್ದಗಳೆಂದರೆ ಎರಡು ಪಡೆಗಳು ಕೈಯಿಂದ ಹೊಡೆದಾಡಿಕೊಳ್ಳುವದು ಎಂದು ತಿಳಿದಿದ್ದ ನಮಗೆ ಹೊಸ ಯುದ್ಧ ರೀತಿ ತಿಳಿಯಿತು. ಒಂದನೆ ಮಹಾಯುದ್ದ , ಎರಡನೇ ಮಹಾಯಯದ್ದ , ಹಿರೋಷಿಮಾ ನಾಗಾ ಸಾಕಿ ಮೇಲೆ ಹಾಕಿದ ಅಣುಬಾಂಬ್ ಅದರ ಪರಿಣಾಮಗಳು ಇವೆಲ್ಲವೂ ಪಠ್ಯ ದಲ್ಲಿ ಓದಿ ತಿಳಿದ ವಯಸ್ಸಿನಲ್ಲಿ ಯುದ್ದ ಯಾತಕ್ಕಾಗಿ ಮಾಡ್ತಾರೆ ಎಂಬ ಯೋಚನೆ ಅಷ್ಟು ಕಾಡ್ತಿರಲಿಲ್ಲ. ಯುದ್ದ ಮಾಡುವದರ ಮುಖ್ಯ ಉದ್ದೇಶ ಮಹತ್ವಾಕಾಂಕ್ಷೆ ಮತ್ತು ಹಕ್ಕಿನ ಹೋರಾಟಕ್ಕಾಗಿ.ಎರಡೂ ಪಡೆಗಳು ತಮ್ಮ ತಮ್ಮ ಜಾಗದಾಗ ಸರಿ ಅಂತ ನಿರ್ಣಯಿಸಿದ ಮ್ಯಾಲ ಯುದ್ದಕ್ಕ ಮಾಡ್ಲಕ್ಕ ಕಾರಣಗಳು ಬೇಕಾದಷ್ಟು ಸಿಗತಾವ. ನಮ್ಮ ಮನುಕುಲಕ್ಕ ಅಣುಬಾಂಬ್ ಯಾಕ್ ಬೇಕು.ಇದರಿಂದ ಉಪಯೋಗ ಏನು. ಇದು ಜಗತ್ತಿಗಿ ಘಾತಕ ಅಂತ ಗೊತ್ತಿದ್ರು ದೇಶಗಳು ಇದನ್ನು ಯಾಕ ತಯ್ಯಾರಿಸ್ತಾರ. ಎಲ್ಲಾ ದೇಶದವ್ರಿಗೂ ತಮ್ಮ ತಮ್ಮ ದೇಶದ ಬಲ ತೋರಿಸಿಕೊಳ್ಳಕ್ಕ.ದೊಡ್ಡಸ್ತಿಕೆಗಾಗಿ ಮಾತ್ರ. ಒಂದು ದುರ್ಬಲ ಸಂದರ್ಭದಲ್ಲಿ ಅಣುಬಾಂಬ್ ಪ್ರಯೋಗಿಸಿದ್ರು ಅಂತಿಟ್ಟಕೊಳ್ಳೊಣ.ಅದರ ಪರಿಣಾಮ ಎಲ್ರಿಗೂ ಗೊತ್ತು.ಜಪಾನಿನ ನಾಗಾಸಾಕಿ ಪ್ರದೇಶ ಇನ್ನೂ ಆ ಘಟನೆಯಿಂದ ಚೇತರಿಸಿಕೊಳ್ಳತಿಲ್ಲ.ಎಷ್ಟು ತಲೆಮಾರು ದಾಟಿದ್ರು ಅಂಗವಿಕಲತೆ ತೊಲಗಸಲ್ಕಿಕ್ಕೆ ಆಗತಿಲ್ಲ. ಇಂತಹ ಒಡಲೊಳಗೆ ಕೆಂಡ ಇಟ್ಟಕೊಂಡ ದೇಶಗಳು ಎನನ್ನ ಸಾಧಿಸಬಹುದು. ಯುದ್ದಗಳು ನಮ್ಮ ಜಗತ್ತಿನ ಪ್ರಗತಿಯನ್ನು ಐವತ್ತು ವರ್ಷ ಹಿಂದಕ್ಕ ದೂಡತಾವ.ಮನುಷ್ಯ ತನ್ನ ಬುದ್ದಿ ಉಪಯೋಗಿಸಿ ಏನೆಲ್ಲ ಸಾಧಿಸಿ ಗಳಿಸಿದ್ದ ಎಲ್ಲವೂ ಯುದ್ದ ನಾಶ ಮಾಡ್ತದ.ಆದ್ರು ದೇಶಗಳಿಗೆ ತಮ್ಮ ಪ್ರತಿಷ್ಟೆ ಮುಖ್ಯ. ಒಬ್ಬರ ಮೇಲೊಬ್ಬರು ಬಾಂಬ್ ಎಸೆದು ಎಲ್ಲಾ ನೆಲಸಮ ಮಾಡಿ ಹೆಮ್ಮೆಯಿಂದ ಬೀಗತಾರ.ಅದು ಪರಿಣಮ ಬೀರೋದು ಜನಸಾಮಾನ್ಯರ ಮ್ಯಾಲ. ನೆಲ ಆಸ್ತಿ ಜೀವ ಕಳಕೊಂಡವರ ಪಾಡು ಯಾರಿಗೂ ಕಾಣಲ್ಲ.ಬರೀ ದೇಶಗಳ ಸೋಲು ಗೆಲವು ಮಾತ್ರ ವಿಷಯ ಆಗ್ತದ. ಈ ವಿಶ್ವ ಸಂಸ್ಥೆ ಇರುವದು ಎಲ್ಲಾ ದೇಶಗಳು ಪರಸ್ಪರ ಶಾಂತಿ ಸಹಬಾಳ್ವೆಯಿಂದ ತಂಟೆ ತಕರಾರು ಇಲ್ಲದೆ ಬದುಕಲು ತಿಳಿಸುವದಕ್ಕಾಗಿ ಇರತದ. ಈಗ ಈ ಸಂಸ್ಥೆ ಏನು ಮಾಡ್ತಿದೆ ಅಂತ ಪ್ರಶ್ನೆ ಕಾಡತದ.ಒಂದಿಲ್ಲೊಂದು ಯುದ್ದ ನಡಿತಾನೆ ಅವ. ಸುಮ್ಮನೆ ಇದ್ದ ಇರಾನ್ ಮ್ಯಾಲ್ ಅದ್ಯಾಕ ಅಮೇರಿಕಾ ಕಾಲಕೆರಕೊಂಡು ಜಗಳಕ್ಕ ನಿಂತು. ಅಣುಬಾಂಬ್ ಇರಾನ ದೇಶದಾಗಷ್ಟೆ ಅದ ಏನು. ಬೇರೆ ಅದೇಷೋ ದೇಶಗಳದಾಗೂ ಅವ.ಇಸ್ರೆಲ್ , ಪ್ಯಾಲೆಸ್ಟೈನ್ ಜಗಳಕ್ಕ ಒಂದು ಕಾರಣ ಇತ್ತು.ಸಮರ್ಥನೆ ಅವರವರು ಯಾವಾಗ್ಲೂ ಮಾಡಿಕೊಳ್ಳತಾನೆ ಇರತಾರ.ಇದು ಎಲ್ಲಾ ಜಗಳದಾಗೂ ಇರತದ . ಆದ್ರ ಸ್ವಲ್ಪ ವಿವೇಚನೆ ಯಿಂದ ವಿಚಾರ ಮಾಡ್ದರ ಪ್ರಬಲರು ದುರ್ಬಲರ ಮ್ಯಾಲ ಯುದ್ದ ಮಾಡೋದು ಪೌರುಷ ಅನಿಸಿಕೊಳ್ಳಲ್ಲ.ಭಯೋತ್ಪಾದಕ ದಂತ ಕೃತ್ಯ ತಡೆಗಟ್ಟಬೇಕಾದ್ರ ಕೆಲವೊಮ್ಮೆ ಮಾರಕ ನಿರ್ಣಯ ಗಳನ್ನು ತಗೋಬೇಕಾಗತದ.ಭಯೋತ್ಪಾದ ನೆ ತಡೆಗಟ್ಟಲು ಪ್ರಯತ್ನಿಸತಿದ್ದರಂದ್ರೆ ಬೆಂಬಲಿಸೊಣ. ಆದ್ರ ಈ ಅಮೇರಿಕಾ ಕಾಲ ಕೆರದು ಜಗಳಕ್ಕ ಬರೊದು ಖಂಡಿಸಲೇಬೇಕು. ಯುದ್ದ ಗಳು ಎರಡು ದೇಶದ ನಡುವೆ ನಡೆದ್ರು ಪರಿಣಾಮ ಇಡೀ ಜಗತ್ತು ಎದುರಿಸಬೇಕಾಗತದ.ದೇಶಗಳು ಖಂಡಗಳು ದೂರ ದೂರ ಇದ್ರೂ ಗಾಳಿ ಬೆಳಕು ಎಲ್ಲ ಕಡೆ ಹಬ್ಬಿದಂಗ ನಮ್ಮ ದೈನಂದಿನ ಕೆಲಸಗಳಿಗಿ ಬೇಕಾದ ವಸ್ತುಗಳು ಇಡೀ ಜಗತ್ತಿನ ಎಲ್ಲಾ ಭಾಗಗಳಿಗೂ ಹರಿದಾಡತಾವ.ಯುದ್ದಗಳಿಂದ ಇಂತಹ ವಸ್ತು ಗಳ ಆಮದು ರಪ್ತು ಕಾರ್ಯಗಳು ನಿಂತು ಜನಸಾಮಾನ್ಯರು ಹೈರಾಣ ಆಗಬೇಕಾಗತದ. ಯುದ್ದ ನಡಿತಿರೋ ದೇಶಗಳ ಚಿತ್ರಣ ನೋಡಿದ್ರ ಮನಸ್ಸು ವಿಷಾದ ಆಗತದ.ಎಂತೆಂಥ ದೊಡ್ಡ ದೊಡ್ಡ ಕಡ್ಡಡಗಳೆಲ್ಲ ನೆಲಸಮ ಮಾಡ್ತಿದ್ದಾರ.ಈಗ ಒಂದು ಸಮಾಧಾನ ಅಂದ್ರ ಯುದ್ದದ ಸೂಚನೆ ಸಿಗ್ತಂದ್ರ ಜನರಿಗೆ ತಾವಿರುವ ಸ್ಥಳ ಖಾಲಿ ಮಾಡ್ಸಿ ಬ್ಯಾರೆ ಸುರಕ್ಷಿತ ಸ್ಥಳ ಕ್ಕ ಕಳ್ಸತಾರಂತ.ಜೀವ ಉಳದ್ರ ಸಾಕು ಅನ್ನಕೊಂಡ್ರ ತಮ್ಮ ಎಲ್ಲಾ ಜೀವಮಾನದ ಗಳಿಕಿ ಕಳಕೊಂಡು ಅವ್ರ ಬದುಕು ಉಹಿಸಿಕೊಳ್ಳಕ್ಕ ಆಗಲ್ಲ.ಕ್ಷೀಪಣಿಗಳು ಒಬ್ಬರ ದೇಶದ ಮ್ಯಾಲ ಒಬ್ಬರು ಹಾರಿಸಿ ಇಡೀ ಊರೆಲ್ಲ ನೆಲಸಮ ಮಾಡೊದ್ರಾಗ ಯಾವ ಪುರುಷಾರ್ಥ ಅದ..ಸಣ್ಣ ಮಕ್ಕಳು ಕಲಿಯೋ ಸಾಲಿಮ್ಯಾಲ್ ಬಾಂಬ್ ಹಾಕಿ ಮಕ್ಕಳ ಸಾವಿಗಿ ಕಾರಣ ಆಗೊ ದೇಶಗಳ ವಿಕೃತಿಗೆ ಧಿಕ್ಕಾರ. ಅಲ್ಲೆಲ್ಲೊ ಯುದ್ದ ಆಗತಿದ್ರ ಅದರ ಪರಿಣಾಮ ನಮ್ಮ ದೇಶದವ್ರು ಅನುಭವಿಸಬೇಕಾಗ್ಯಾದ.ಬರಿ ನಮ್ಮ ದೇಶ ಅಷ್ಟೇ ಅಲ್ಲ. ಇಡೀ ಮನುಕುಲಕ್ಕೆ ತೊಂದರೆ ಆಗಲತದ.ನಮ್ಮ ಜನರು ಸಿಲಿಂಡರ್ ಸಲುವಾಗಿ ಕಷ್ಡಪಡತಿದ್ದಾರ.ಕಾಡು ಕಡದು ಕಟ್ಟಿಗಿ ಉಪಯೊಗಿಸಿ ಕಾಡು ಹಾಳು ಮಾಡಬ್ಯಾಡ್ರಿ ಅಂತ ಕಾಡಿನ ಅಕ್ಕಪಕ್ಕದ ಜನಕ್ಕ ಸರ್ಕಾರ ಉಚಿತ ಗ್ಯಾಸ ಸಿಲಿಂಡರ್ ವ್ಯವಸ್ಥೆ ಮಾಡಿತ್ತು. ಈಗ ಬಹುತೇಕ ಮನಿ ಗಳಲ್ಲಿ ಕಟ್ಟಗಿ ಉಪಯೋಗಿಸೋದು ಕಮ್ಮಿ ಆಗ್ಯಾದ  ಈ ಯುದ್ದದ ಪರಿಣಾಮದಿಂದ ಗ್ಯಾಸ್ ಅಭಾವವಾಗಿ ಮತ್ತ ಜನ ಕಟ್ಟಿಗಿಗಿ ಮೊರೆ ಹೋಗಬೇಕಾಗ್ಯಾದ.ಈಗ ಮತ್ತೊಮ್ಮೆ ಕೋವಿಡ್ ದಾಗ ಅನುಭವಿಸಿದ ಸಂಕಟ ನೆನಪಿಗೆ ಬರಲತದ.ಈ ಯುದ್ದಗಳು ಹಿಂಗ ಮುಂದುವರೆದ್ರ ಇನ್ನೂ ಎನೇನು ಅಭಾವ ಎದುರಿಸಬೇಕೋ ಎನೋ. ಈ ಯುದ್ದಗಳಿಂದ ಜಗತ್ತಿಗೆ ಉಪಯೋಗ ಇಲ್ಲ.ಆದ್ರೂ ಮತ್ತೊಬ್ಬರ ಜೋಡಿ ಜಗಳ ಆಡೋದೇ ದೊಡ್ಡಸ್ತಿಕೆ ಅನ್ನಕೊಳ್ಳೋ ಮೂರ್ಖರು ಇರೊ ತನಕ ಇವು ಹಿಂಗ ನಡಿತಾವ.ಎಲ್ಲೊ ಕುಂತು ಯುದ್ದಕ್ಕ ಪ್ರೇರಣೆ ನಿಡೋರು ಸುರಕ್ಷಿತ ವಾಗೆ ಇರತಾರ.ಸಾಮಾನ್ಯರ ಪಾಡು ಅನ್ನಲಕ್ಕ ಆಗಲ್ಲ ಆಡಲಕ್ಕ ಆಗಲ್ಲ.ದೇಶಗಳು ದೊಡ್ಡಸ್ತಿಕಿಯಿಂದ ಬೆನ್ನತಟ್ಟಕೊಳ್ಳತಾವ , ದೇಶವಾಸಿಗಳು ಯುದ್ಧದ ಕಾರ್ಮೊಡದೊಳಗ ಕಾಣೆಯಾಗತಾರ. ಜ್ಯೋತಿ , ಡಿ.ಬೊಮ್ಮಾ. ಜ್ಯೋತಿ ಡಿ , ಬೊಮ್ಮಾ ಅವರು ಕಲಬುರಗಿ ಜಿಲ್ಲೆಯವರು. ನಾಲ್ಕು ಕವನ ಸಂಕಲನಗಳು , ಎರಡು ಪ್ರಭಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ.ಪ್ರತಿ ತಿಂಗಳು ಸಂಗಾತಿ ಪತ್ರಿಕೆಗಾಗಿ ಅವರ ದೇಸಿ ನುಡಿಗಟ್ಟಿನಲ್ಲಿ ಅಂಕಣ ಬರಹವನ್ನು ಪ್ರಕಟಿಸುತ್ತಾರೆ.

Read Post »

ನಿಮ್ಮೊಂದಿಗೆ

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಸಮರಸವು ಮೂಡಲಿ”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಸಮರಸವು ಮೂಡಲಿ” ಈ ನೆಲದ ಭಾಷೆಯಿದುಬುದ್ಧ ಬಸವರ ವಚನಗಳುಸತ್ಯ ಸಮತೆ ಶಾಂತಿ ಪ್ರೀತಿಮನುಜ ಪಥದ ಮಂತ್ರವು ನಾನು ಹುಟ್ಟಿ ನಾವು ಬೆಳೆದುನಾಡ ಗೋಡೆ ಕಟ್ಟ ಬೇಕುವರ್ಗ ವರ್ಣ ಬೇಧ ಅಳೆದುದೇಶ ಒಂದೇ ಎನ್ನ ಬೇಕು ನೇಯ್ಗೆ ಕೃಷಿ ಗ್ರಾಮ ರಾಜ್ಯಬಾಪು ಕನಸಿನ ಭಾರತಭಗತ ಸಿಂಗರ ತ್ಯಾಗ ನೆಲದಬಾಬಾಸಾಹೇಬರ ಭಾರತ ದ್ವೇಷ ಮತ್ಸರ ಕರಗಿ ಹೋಗಲಿಮಮತೆ ಪ್ರೀತಿ ಅರಳಲಿಕೊಲೆ ಹಿಂಸೆ ಮಾಯವಾಗಿಸಮರಸವು ಮೂಡಲಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ 

ಡಾ ಶಶಿಕಾಂತ ಪಟ್ಟಣ ರಾಮದುರ್ಗ ಅವರ ಕವಿತೆ “ಸಮರಸವು ಮೂಡಲಿ” Read Post »

You cannot copy content of this page

Scroll to Top