ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಕಾವ್ಯಯಾನ

ಟಿ.ಪಿ.ಉಮೇಶ್ ಚಿತ್ರದುರ್ಗ “ಮರದ ಮೌನ”

ಕಾವ್ಯ ಸಂಗಾತಿ ಟಿ.ಪಿ.ಉಮೇಶ್ “ಮರದ ಮೌನ” ನನ್ನನ್ನುನೆರಳಿನ ಗಾಢತೆಯಿಂದ ಅಳೆಯುತ್ತೀರಿಬೇರುಗಳ ಆಳವನ್ನುಯಾರೂ ಗಮನಿಸುವುದಿಲ್ಲ! ನಾನು ನಿಂತಿರುವುದುನಿಮಗೆ ಸುಲಭವೆನಿಸುತ್ತದೆ;ನೆಲದೊಳಗೆ ಪ್ರತಿದಿನಕುಸಿಯದೆ ಹಿಡಿದಿಟ್ಟುಕೊಳ್ಳುವಬೇರಿನ ಹೋರಾಟ ನಿಮಗೆ ಕಾಣುವುದಿಲ್ಲ ನನ್ನ ಕೊಂಬೆಗಳಲ್ಲಿಹಕ್ಕಿಗಳು ಗೂಡು ಕಟ್ಟಿದಾಗಅದು ಅವುಗಳ ಮನೆಯೆನ್ನುತ್ತೀರಿ;ಗಾಳಿ ಅವನ್ನು ಕೆಡವಿದಾಗನನ್ನನ್ನೇ ಶಾಪಗ್ರಸ್ತವೆನ್ನುತ್ತೀರಿ! ನಾನು ಉದುರಿಸಿದ ಎಲೆಗಳುನನ್ನ ಸೋಲಲ್ಲ ಕೇಳಿರಿ;ಹೊಸ ಋತುವಿಗೆ ಬರೆದಮುನ್ನುಡಿಯಷ್ಟೇ ನೋಡಿರಿ! ನನ್ನ ಹಣ್ಣುಗಳ ಸಿಹಿಯನ್ನುನಿಮ್ಮ ನಾಲಿಗೆ ನೆನಪಿಡುತ್ತದೆ;ಆ ಸ್ವಾದಕ್ಕೆ ಕಾರಣವಾದನನ್ನ ಕಹಿ ಬೇರುಗಳನ್ನುಯಾರೂ ನೆನಪಿಸಿಕೊಳ್ಳುವುದಿಲ್ಲ! ಕಲ್ಲೆಸೆದ ಕೈಗಳಿಗೂನೆರಳನ್ನೇ ಕೊಟ್ಟಿದ್ದೇನೆ!ಆದರೂ ನನ್ನ ಮೌನವನ್ನುದುರ್ಬಲತೆಯೆಂದು ಕರೆಯುತ್ತೀರಿ! ನಾನು ಆಕಾಶದ ಕಡೆಎತ್ತರವಾಗಿ ಬೆಳೆದಂತೆಯೇಭೂಮಿಯ ಆಳಕ್ಕೆವಿನಯದಿಂದ ಇಳಿದಿದ್ದೇನೆ! ಕೊನೆಗೆ ನನ್ನನ್ನು ಇಂಚಿಂಚು ಕಡಿದುಮೇಜು ಬಾಗಿಲು ಚಿತೆಯನ್ನಾಗಿ ಮಾಡುತ್ತೀರಿ;ರೂಪಗಳು ಬದಲಾಗುತ್ತವೆ!ನನ್ನ ಮರತ್ವ ಮಾತ್ರ ಸಾಯುವುದಿಲ್ಲ! ನೀವು ಕಾಣುವುದುಮರದಂತಹ ನನ್ನ ಸಪೂರ ದೇಹ!ನಾನು ಬದುಕುವುದುಬೇರುಗಳ ಗಾಢ ನಿಗೂಢ ಮೌನ! ನಿಮ್ಮ ನೋಟಕ್ಕೆನಾನು ಕೇವಲ ಮರದಂತ ಸ್ವತ್ರು!ನನ್ನ ಆತ್ಮದ ಸಮಾಧಾನಕ್ಕೆಲೋಕದ ಸತ್ಯ ವ್ಯವಹಾರಕ್ಕುನಾನೇ ಒಂದು ಭೂಮಿ ಸಂಪತ್ತು! ಟಿ.ಪಿ.ಉಮೇಶ್ ಚಿತ್ರದುರ್ಗ

ಟಿ.ಪಿ.ಉಮೇಶ್ ಚಿತ್ರದುರ್ಗ “ಮರದ ಮೌನ” Read Post »

ಕಾವ್ಯಯಾನ

ಇಂದಿರಾ ಮೋಟೆಬೆನ್ನೂರ “ಅದೆಂತಹ ಹೆಸರನಿಟ್ಟೆ”

ಕಾವ್ಯ ಸಂಗಾತಿ ಇಂದಿರಾ ಮೋಟೆಬೆನ್ನೂರ “ಅದೆಂತಹ ಹೆಸರನಿಟ್ಟೆ” ಕಟು ಪದದಿ ಕುಟುಕಿ ಪ್ರೀತಿಯಿಂದ ನಗುವ ಹೂಮನದ ಸ್ನೇಹ ಗಾನಕೆ ಅದೆಂತಹ ಹೆಸರನಿಟ್ಟೆಹಾಡಿ ಹರಸಿ ಹೃದಯದುಂಬಿ ಕುಣಿವ ಭಾವ ತಾನಕೆ ಅದೆಂತಹ ಹೆಸರನಿಟ್ಟೆ ನೂರು ಸಲ ದೂರ ನೂಕಿದರೂ  ಉಸಿರೆತ್ತದ ಹದುಳ ಜೀವ ಮಿಡಿದ ಮಧುರ ಗಾನವದುಮಾತಿನ ಚೂರಿಯಿಂದ ಇರಿದು ಕೊಂದು ಪವಿತ್ರ ನೇಹ ಪಾನಕೆ ಅದೆಂತಹ ಹೆಸರನಿಟ್ಟೆ ಕಾವ್ಯಯಾನದ ಪಥಿಕ ಮೃದು ಮಧುರ ಎದೆಹಾಸ ತುಂಬೆಲ್ಲ ಮಾತಿನ ಮುಳ್ಳುಗಳ ನೇವರಿಕೆಮಲ್ಲಿಗೆ ಮನದ ಮೌನ ದೋಣಿಯ ಪ್ರೀತಿ ಪಯಣ ಯಾನಕೆ  ಅದೆಂತಹ  ಹೆಸರನಿಟ್ಟೆ ತೊಟ್ಟು ನೀನಿತ್ತ ಗಾಯಗಳ ಆಭರಣ ಮೈ ನೇವರಿಸಿ ಹೃದಯ ಭಿತ್ತಿಯಲ್ಲಿ ಕಾಪಿಟ್ಟು ಕೊಂಡಿರುವೆ.ಕೊಟ್ಟ ನೋವುಗಳ ಸರಮಾಲೆ ಹೊತ್ತು ನಿನ್ನೆಡೆಗೆ ಬರುವ ಒಲವ ಹೆಜ್ಜೆ ಪಾದಕೆ ಅದೆಂತಹ ಹೆಸರನಿಟ್ಟೆ. ಬೆಳದಿಂಗಳ ಕಸಿದು ಕಾರ್ಗತ್ತಲು ನೀವಿದ ಶಶಿಗೆ ಗೊತ್ತಿಲ್ಲವೇ  ತಾನು ನೀಡಿದ ನೋವುಇಂದುವಿನ ಅಂತರಂಗದಿ ಅರಳಿದ  ಹೂಗೆಜ್ಜೆ ನಾದಕೆ ಅದೆಂತಹ ಹೆಸರನಿಟ್ಟೆ – ಇಂದಿರಾ  ಮೋಟೆಬೆನ್ನೂರ. ಬೆಳಗಾವಿ.

ಇಂದಿರಾ ಮೋಟೆಬೆನ್ನೂರ “ಅದೆಂತಹ ಹೆಸರನಿಟ್ಟೆ” Read Post »

ಕಾವ್ಯಯಾನ

ಎ.ಎಸ್. ಮಕಾನದಾರ ಗದಗ “ಆ ಕಾಲಕ್ಕೆ ಕಾಯುವೆ”

ಕಾವ್ಯ ಸಂಗಾತಿ ಎ.ಎಸ್. ಮಕಾನದಾರ ಗದಗ “ಆ ಕಾಲಕ್ಕೆ ಕಾಯುವೆ” ಮಸೀದೆಯ ಅಜಾನ್ಚರ್ಚ್ ನಲ್ಲಿ  ಕೇಳಬೇಕು ಚರ್ಚ್ ನಲ್ಲಿಯ ಪ್ರಾರ್ಥನೆಮಂದಿರ ದಲ್ಲಿ  ಜರುಗಬೇಕು ಮಂದಿರ ದಲ್ಲಿ ಸೇರಿದ ಜನಸಾಮೂಹಿಕ ಪ್ರಾರ್ಥನೆ ಸಲ್ಲಿಸಬೇಕು ನನ್ನ ಕಾಯಕರ್ಪುರ ವಾಗಬೇಕು ಮಂದಿರ ಮಸೀದೆಚರ್ಚ್ ನಲ್ಲಿ ಬೆಳಗಬೇಕು ನರನಾಡಿಗಳುನೀಲಾಂಜನಕೆ ಬತ್ತಿ ಯಾಗಬೇಕು ರಕುತ ಎಣ್ಣಿಯಾಗಬೇಕುಮನಸು ಬೆಣ್ಣಿಯಂತೆ ಕರಗಬೇಕು ಆ ಕಾಲಕ್ಕಾಗಿ ನನ್ನಕಣ್ಣುಗಳು ಕಾಯಬೇಕು ಎ.ಎಸ್. ಮಕಾನದಾರ ಗದಗ

ಎ.ಎಸ್. ಮಕಾನದಾರ ಗದಗ “ಆ ಕಾಲಕ್ಕೆ ಕಾಯುವೆ” Read Post »

ಕಾವ್ಯಯಾನ

ಡಾ. ಶ್ರೀಶೈಲ ಮಾದಣ್ಣವರ ಅವರ ಗಜಲ್

ಕಾವ್ಯ ಸಂಗಾತಿ ಡಾ. ಶ್ರೀಶೈಲ ಮಾದಣ್ಣವರ ಗಜಲ್ ಮುಗಿಲ ವೀಣೆ ಮೀಟಿದವರಾರು ನುಡಿಸುತಿದೆ ಮೇಘ ರಾಗಹೃದಯ ಕೋಣೆಯ ತಟ್ಟಿದವರಾರು ಹರಿಸುತಿದೆ ಅನುರಾಗ ಸುರಿವ ಮಳೆ ಮೋಡಗಳಲಿ ಮಿಂಚುತಿದೆ ಬೆಳಕಿನ ಕೋಲುಬಾನಿನ ಎದೆಗಿಳಿದವರಾರು ಬೆಳಗಿಸುತಿಹರು ಪ್ರೀತಿ ಚಿರಾಗ ಹರಿದ ಹನಿ ಹನಿಗಳಿಗೂ ಹೂ ಅರಳಿಸುವ ಹಂಬಲಗಳುಮುತ್ತು ಮಣಿ ಬಿತ್ತಿದವರಾರು ಹರಡುತಿದೆ ಪ್ರೇಮ ಪರಾಗ ಉಂಡ ನೆಲವು ಹಸಿಯಾಗಿದೆ ಪ್ರೀತಿ ಇಂಗಿ ಒಡಲಿನೊಳಗೆಎದೆಹಾಲು ಉಣಿಸಿದವರಾರು ತೊದಲಿನಲೂ ಹೊಸರಾಗ ಹಸಿರು ಉಸಿರು ಬೆಳೆಸಿಕೊಂಡು ನಗುತಿದೆ ನೋಡು ಪರಿಸರಬಾಳು ತೆನೆಗಟ್ಟಿಸಿದವರಾರು ಬದುಕು ಈಗ ಬಲು ಸರಾಗ ಡಾ. ಶ್ರೀಶೈಲ ಮಾದಣ್ಣವರ

ಡಾ. ಶ್ರೀಶೈಲ ಮಾದಣ್ಣವರ ಅವರ ಗಜಲ್ Read Post »

ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-29 ಸವಿತಾ ದೇಶಮುಖ ಜಯದೇವಿತಾಯಿ ಲಿಗಾಡೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ಸಲ್ಲಿಸಿದ ಮಹಾನ್‌ ಚೇತನ ಕನ್ನಡ ಕೋಟಿ ಪ್ರಕಾಶನ ನಿರ್ಮಾಣ ಗಡಿನಾಡ ಸೊಲ್ಲಾಪುರದಲಿ ಕನ್ನಡ ಕೋಟಿ ಪ್ರಕಾಶನ ಸ್ಥಾಪನೆ ಸ್ವಾತಂತ್ರ್ಯಾನಂತರ ಭಾರತದ ರಾಜ್ಯಗಳ ಪುನರ್ರಚನೆಗೆ ಭಾಷೆಯನ್ನು ಪ್ರಮುಖ ಆಧಾರವನ್ನಾಗಿ ಪರಿಗಣಿಸುವ ಚರ್ಚೆ ಆರಂಭವಾಯಿತು. ಇದೇ ಸಂದರ್ಭದಲ್ಲಿ ಗಡಿ ಪ್ರದೇಶಗಳಾದ ಸೊಲ್ಲಾಪುರ, ಅಕ್ಕಲಕೋಟೆ, ಜತ್ತ, ನಿಪ್ಪಾಣಿ, ಬೀದರ ಮೊದಲಾದ ಭಾಗಗಳಲ್ಲಿ ಭಾಷಾ ಆಧಾರಿತ ಗುರುತಿನ ಪ್ರಶ್ನೆ ತೀವ್ರ ಸ್ವರೂಪ ಪಡೆದಿತು.ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಸೊಲ್ಲಾಪುರವನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆತಂಕ ಕನ್ನಡಿಗರಲ್ಲಿ ಮೂಡಿತ್ತು.  ಕನ್ನಡಿಗರಲ್ಲಿದ್ದ ಅಜಾಗರೂಕತೆ ಹಾಗೂ ಸಂಘಟನೆಯ ಕೊರತೆಯನ್ನು ಕೆಲವರು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸಿದರು.ಆ ಸಮಯದಲ್ಲಿ ದೇಶದಾದ್ಯಂತ ಜನಗಣತಿ ಕಾರ್ಯ ಆರಂಭವಾಗಿತ್ತು. ಜನಗಣತಿಯಲ್ಲಿ ಜನರು ತಮ್ಮ ಮಾತೃಭಾಷೆಯನ್ನು ಯಾವ ಭಾಷೆಯೆಂದು ದಾಖಲಿಸುತ್ತಾರೋ, ಅದರ ಆಧಾರದ ಮೇಲೆಯೇ ಮುಂದಿನ ಭಾಷಾವಾರು ರಾಜ್ಯಗಳ ರಚನೆಗೆ ಮಹತ್ವದ ಆಧಾರ ಸಿಗುವ ಸಾಧ್ಯತೆ ಇತ್ತು. ಹೀಗಾಗಿ ಗಡಿನಾಡಿನ ಕನ್ನಡಿಗರಲ್ಲಿ ಕನ್ನಡ ಭಾಷೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿತ್ತು.  ಒಳನಾಡಿನ ಕನ್ನಡಿಗರಿಗಿಂತ ಗಡಿನಾಡಿನ ಕನ್ನಡಿಗರು ಹೆಚ್ಚಿನ ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು.ಇಂಥ ಸಂದರ್ಭದಲ್ಲಿ ಕೆಲವು ಮಹಾರಾಷ್ಟ್ರ ಪರ ಸಂಘಟನೆಗಳು ಮುಗ್ಧ ಹಾಗೂ ಅಶಿಕ್ಷಿತ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ನಡೆಸಿದವು. ಮರಾಠಿಯನ್ನು ಮಾತೃಭಾಷೆಯಾಗಿ ದಾಖಲಿಸಿದರೆ ಹೆಚ್ಚಿನ ಸೌಲಭ್ಯಗಳು ದೊರೆಯುತ್ತವೆ ಎಂಬ ಸುಳ್ಳು ಪ್ರಚಾರ ಮಾಡಲಾಯಿತು. ಇದರಿಂದ ಕನ್ನಡಿಗರ ಅಸ್ತಿತ್ವಕ್ಕೆ ಧಕ್ಕೆಯಾಗುವ ಅಪಾಯ ಎದುರಾಯಿತು.ಇಂಥ ಗಂಭೀರ ಪರಿಸ್ಥಿತಿಯನ್ನು ಅರಿತ ಜಯದೇವಿ ತಾಯಿಯವರು ತಮ್ಮ ಸ್ವಂತ ಖರ್ಚಿನಲ್ಲಿ ಕನ್ನಡ ಕೋಟಿ ಎನ್ನುವ  ಪ್ರಕಾಶನವನ್ನು ಪ್ರಾರಂಭಿಸಿದರು.ಅವರ ಜೊತೆ ಕನ್ನಡ ಪರ ಹೋರಾಟಗಾರರು ಮತ್ತು ಸಮಾಜಮುಖಂಡರು ಜನರಲ್ಲಿ ಕನ್ನಡಾಭಿಮಾನ ಬೆಳೆಸಲು ಮುಂದಾದರು. ಜನರಿಗೆ ಕನ್ನಡದ ಇತಿಹಾಸ, ಸಂಸ್ಕೃತಿ, ಸಾಹಿತ್ಯ ಹಾಗೂ ಭಾಷೆಯ ಮಹತ್ವವನ್ನು ಮನವರಿಕೆ ಮಾಡಿಕೊಟ್ಟರು. ಮನೆ ಮನೆಗೆ ತೆರಳಿ, ಸಭೆ-ಸಮಾರಂಭಗಳನ್ನು ಆಯೋಜಿಸಿ, ಕನ್ನಡವೇ ತಮ್ಮ ಮಾತೃಭಾಷೆ ಎಂದು ಜನಗಣತಿಯಲ್ಲಿ ದಾಖಲಿಸಿಕೊಳ್ಳುವಂತೆ ಮನವಿ ಮಾಡಿದರು.ಈ ಜಾಗೃತಿ ಅಭಿಯಾನದ ಪ್ರಮುಖ ಭಾಗವಾಗಿ ಸೊಲ್ಲಾಪುರದಲ್ಲಿ “ಕನ್ನಡ ಕೋಟಿ” ಎಂಬ ಪ್ರಕಾಶನ ಸ್ಥಾಪಿಸಲಾಯಿತು. ಇದರ ಉದ್ದೇಶ ಗಡಿಭಾಗದ ಕನ್ನಡಿಗರನ್ನು ಒಗ್ಗೂಡಿಸುವುದು, ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸುವುದು, ಮರಾಠೀಕರಣದ ಪ್ರಯತ್ನಗಳನ್ನು ಪ್ರಜಾಸತ್ತಾತ್ಮಕವಾಗಿ ಎದುರಿಸುವುದು ಹಾಗೂ ಕನ್ನಡಿಗರಲ್ಲಿ ಆತ್ಮವಿಶ್ವಾಸ ಮೂಡಿಸುವುದಾಗಿತ್ತು.ಕನ್ನಡ ಕೋಟಿಯ ಮೂಲಕ ಕನ್ನಡ ಶಾಲೆಗಳ ರಕ್ಷಣೆ, ಕನ್ನಡ ಸಾಹಿತ್ಯ ಕಾರ್ಯಕ್ರಮಗಳು, ಸಾಂಸ್ಕೃತಿಕ ಉತ್ಸವಗಳು, ಸಾರ್ವಜನಿಕ ಸಭೆಗಳು ಮತ್ತು ಜಾಗೃತಿ ಬರಹಗಳನ್ನು ಹೊರತಂದರು….ಜನಗಣತಿಯಲ್ಲಿ ಕನ್ನಡವನ್ನೇ ತಮ್ಮ ಮಾತೃಭಾಷೆಯಾಗಿ ದಾಖಲಿಸಿಕೊಳ್ಳುವಂತೆ ವ್ಯಾಪಕ ಪ್ರಚಾರ ನಡೆಸು ಪ್ಲಾಮಪ್ಲೇಟ್ಸ್ಗಳನ್ನು, ಬುಕ್ಲಿಟ್ಸ್ ಗಳನ್ನು ಪ್ರಕಟಿಸಲಾಯಿತು. ಹಳ್ಳಿ ಹಳ್ಳಿಗೆ ಹೋಗಿ ಹಂಚಲಾಯಿತು. ಗಡಿಭಾಗದ ಕನ್ನಡಿಗರಲ್ಲಿ ಹೊಸ ಚೈತನ್ಯ ಮೂಡಿಸಿ, ಕನ್ನಡ ಭಾಷೆ ಗಡಿಭಾಗದ ಜನರಲ್ಲಿ ಬಲವಾದ ಅಡಿಪಾಯ ಹಾಕಿದವು. ಹೀಗೆ ಸೊಲ್ಲಾಪುರದಲ್ಲಿ ಸ್ಥಾಪನೆಯಾದ ಕನ್ನಡ ಕೋಟಿ ಪ್ರಕಾಶನವು ಗಡಿನಾಡಿನ ಕನ್ನಡಿಗರ ಭಾಷಾ ಹಕ್ಕು, ಸಾಂಸ್ಕೃತಿಕ ಅಸ್ತಿತ್ವ ಹಾಗೂ ಸ್ವಾಭಿಮಾನವನ್ನು ಕಾಪಾಡುವ ಮಹತ್ವದ ಚಳವಳಿಯಾಗಿ ರೂಪುಕೊಡುವಲ್ಲಿ, ಭಾಷಾವಾರು ರಾಜ್ಯಗಳ ರಚನೆಯ ಇತಿಹಾಸದಲ್ಲಿ ಗಡಿನಾಡಿನ ಕನ್ನಡ ಜಾಗೃತಿಗೆ ಕೊಟ್ಟ ಕೊಡುಗೆ ಸ್ಮರಣೀಯವಾಗಿದೆ. “ಸುಲಭ ಕನ್ನಡದೊಳು | ಸಲ್ಲಲಿತ ವಚನಾದಿ |ಸಲ್ಲಿಸಿದರು ಅನುಭವ ದಾಸೋಹ – ನಮ್ಮವರು ಕಲಿಸಿದರು ಸರಳ ಶೈಲಿಯನು ||”ಎನ್ನು ತ ಜಯದೇವಿ ತಾಯಿಯವರು ಕನ್ನಡ ಸಾಹಿತ್ಯದ ಶರಣರು ಮತ್ತು ದಾಸರು ಕನ್ನಡ ಭಾಷೆಗೆ ನೀಡಿದ ಅಪೂರ್ವ ಕೊಡುಗೆ”ಸುಲಭ ಕನ್ನಡದೊಳು” ಎಂದರೆ ಎಲ್ಲ ಸಾಮಾನ್ಯ ಜನರಿಗೆ ಅರ್ಥವಾಗುವ ಸರಳ ಕನ್ನಡದಲ್ಲಿ.ಸುಂದರವಾದ, ಲಲಿತವಾದ ವಚನಗಳು ಹಾಗೂ ಇತರ ಸಾಹಿತ್ಯ ಕೃತಿಗಳನ್ನು ಶರಣರು ತಮ್ಮ ಆಧ್ಯಾತ್ಮಿಕ ಅನುಭವಗಳನ್ನು ಯಾವುದೇ ಪ್ರತಿಫಲದ ನಿರೀಕ್ಷೆಯಿಲ್ಲದೆ ಜನರಿಗೆ ಹಂಚಿದರು. ಅದೇ ಅವರ ಅನುಭವ ದಾಸೋಹ.“ನಮ್ಮವರು ಕಲಿಸಿದರು ಸರಳ ಶೈಲಿಯನು”  ನಮ್ಮ ಕನ್ನಡದ ಶರಣರು, ದಾಸರು ಮತ್ತು ಕವಿಗಳು ಅಲಂಕಾರಿಕ, ಕಠಿಣ ಭಾಷೆಯ ಬದಲು ಸರಳ, ಸುಲಭ ಮತ್ತು ಜನಸಾಮಾನ್ಯರಿಗೆ ಅರ್ಥವಾಗುವ ಶೈಲಿಯಲ್ಲಿ ಸಾಹಿತ್ಯ ರಚಿಸುವ ಪರಂಪರೆಯನ್ನು ಬೆಳೆಸಿದರು. ಕನ್ನಡದ ಶರಣರು ಮತ್ತು ದಾಸರು ಸರಳ ಕನ್ನಡದಲ್ಲಿ ವಚನಗಳು ಹಾಗೂ ಭಕ್ತಿಸಾಹಿತ್ಯವನ್ನು ರಚಿಸಿ, ತಮ್ಮ ಜೀವನಾನುಭವಗಳನ್ನು ಜನರೊಂದಿಗೆ ಹಂಚಿಕೊಂಡು, ಕನ್ನಡ ಸಾಹಿತ್ಯವನ್ನು ಜನಸಾಮಾನ್ಯರ ಭಾಷೆಯನ್ನಾಗಿ ರೂಪಿಸಿದ ಮಹತ್ವದ ಸೇವೆಯನ್ನು ಕೊಂಡಾಡುತ…. ಜನಸಾಮಾನ್ಯರಿಗೆ ತಲುಪಬೇಕಾದರೆ ಸರಳ ಕನ್ನಡ ಭಾಷೆಯಲ್ಲಿ ಸಾಹಿತ್ಯವನ್ನು ನಿರ್ಮಿಸಿ ಜನರಿಗೆ ಹಂಚುವ ಕಾರ್ಯಕ್ಕಾಗಿ….. ೧೯೫೦ ರಲ್ಲಿ ಕನ್ನಡ ಕೋಟಿ ಪ್ರಕಾಶನ ಪ್ರಾರಂಭಿಸಿದರು ಅದಕ್ಕೆ ಅಧ್ಯಕ್ಷರಾಗಿ ಡಾ. ಶಂಕರ ಮೂಗಿ ಅವರು ಸುಪ್ರೀಂ ಕೋರ್ಟಿನ ನ್ಯಾಯವಾದಿಗಳು(ನನ್ನ ತಂದೆ) ನಿರ್ವಹಿಸಿದರು.  ಭಾಷಾ ಜಾಗೃತಿಯ ಕ್ರಾಂತಿಕಾರಿ ಹೆಜ್ಜೆ೧೯೫೦ನೇ ವರ್ಷ ಗಡಿಭಾಗದ ಕನ್ನಡಿಗರ ಪಾಲಿಗೆ ಅತ್ಯಂತ ಮಹತ್ವದ ತಿರುವಿನ ವರ್ಷವಾಗಿತ್ತು. ಭಾಷಾವಾರು ರಾಜ್ಯಗಳ ರಚನೆಯ ಚರ್ಚೆ ದೇಶಾದ್ಯಂತ ನಡೆಯುತ್ತಿದ್ದ ಸಂದರ್ಭದಲ್ಲಿ ಗಡಿಭಾಗಗಳಲ್ಲಿ ಕನ್ನಡ ಭಾಷೆಯ ಅಸ್ತಿತ್ವವೇ ಪ್ರಶ್ನಾರ್ಥಕವಾಗಿತ್ತು.ಇಂತಹ ಸಂಕಷ್ಟದ ಸಂದರ್ಭದಲ್ಲಿ ನಾಡು, ನುಡಿ ಮತ್ತು ಕನ್ನಡಿಗರ ಸ್ವಾಭಿಮಾನವನ್ನು ಉಳಿಸುವ ದೃಢ ಸಂಕಲ್ಪದೊಂದಿಗೆ ಡಾ. ಜಯದೇವಿ ತಾಯಿಯವರು ಮುಂಚೂಣಿಗೆ ಬಂದರು. ಜಯದೇವಿ ತಾಯಿಯವರಿಗೆ ಕನ್ನಡವೆಂದರೆ  ಸಂಸ್ಕೃತಿ ಮತ್ತು ಆತ್ಮಗೌರವದ ಪ್ರತೀಕವಾಗಿತ್ತು. ಭಾಷೆ ಉಳಿದರೆ ಸಂಸ್ಕೃತಿ ಉಳಿಯುತ್ತದೆ, ಸಂಸ್ಕೃತಿ ಉಳಿದರೆ ಜನಾಂಗ ಉಳಿಯುತ್ತದೆ ಎಂಬ ದೃಢ ನಂಬಿಕೆಯನ್ನು ಅವರು ಹೊಂದಿದ್ದರು. ಗಡಿಭಾಗದ ಕನ್ನಡಿಗರಲ್ಲಿ ಭಾಷಾಭಿಮಾನ ಬೆಳೆಸುವ ಉದ್ದೇಶದಿಂದ  ಸೊಲ್ಲಾಪುರದಲ್ಲಿ ತಮ್ಮ ಸ್ವಂತ ಹಣದಿಂದ “ಕನ್ನಡ ಕೋಟಿ” ಪ್ರಕಾಶನ ಸ್ಥಾಪಿಸಿದರು. ಆ ಕಾಲದಲ್ಲಿ ಯಾವುದೇ ದೊಡ್ಡ ಆರ್ಥಿಕ ನೆರವು ಅಥವಾ ಸರ್ಕಾರಿ ಬೆಂಬಲವಿಲ್ಲದೆ ಇಂತಹ ಸಂಘಟನೆಯನ್ನು ಕಟ್ಟುವುದು ಅತ್ಯಂತ ಸಾಹಸದ ಕೆಲಸವಾಗಿತ್ತು. ಆದರೆ ಜಯದೇವಿ ತಾಯಿಯವರ ಅಚಲ ಸಂಕಲ್ಪದ ಮುಂದೆ ಆರ್ಥಿಕ ಅಡೆತಡೆಗಳು ಅಡ್ಡಿಯಾಗಲಿಲ್ಲ.ಕನ್ನಡ ಕೋಟಿಯ ಮುಖ್ಯ ಉದ್ದೇಶ ಕನ್ನಡ ಭಾಷೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು, ಕನ್ನಡಿಗರನ್ನು ಸಂಘಟಿಸುವುದು ಹಾಗೂ ಗಡಿಭಾಗದಲ್ಲಿ ಕನ್ನಡದ ಅಸ್ತಿತ್ವವನ್ನು ದೃಢಪಡಿಸುವುದಾಗಿತ್ತು. ಗ್ರಾಮದಿಂದ ಗ್ರಾಮಕ್ಕೆ ತೆರಳಿ ಕನ್ನಡದ ಮಹತ್ವವನ್ನು ವಿವರಿಸುವುದು, ಸಭೆ-ಸಮಾರಂಭಗಳನ್ನು ಆಯೋಜಿಸುವುದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಬಗ್ಗೆ ಜನರಲ್ಲಿ ಅಭಿಮಾನ ಬೆಳೆಸುವುದು, ಯುವಕರನ್ನು ಕನ್ನಡ ಚಳವಳಿಯಲ್ಲಿ ತೊಡಗಿಸಿಕೊಳ್ಳುವುದು ಈ ಸಂಸ್ಥೆಯ ಪ್ರಮುಖ ಕಾರ್ಯಗಳಾಗಿದ್ದವು. ಜನಗಣತಿ ಸಂದರ್ಭದಲ್ಲಿ ಜನರು ತಮ್ಮ ಮಾತೃಭಾಷೆಯಾಗಿ ಕನ್ನಡವನ್ನೇ ದಾಖಲಿಸಿಕೊಳ್ಳುವಂತೆ ವ್ಯಾಪಕ ಜಾಗೃತಿ ಮೂಡಿಸಲಾಯಿತು. ಕನ್ನಡವನ್ನು ಮರೆತು ಬೇರೆ ಭಾಷೆಯನ್ನು ದಾಖಲಿಸಿಕೊಳ್ಳುವುದು ತಮ್ಮ ಸ್ವಂತ ಗುರುತನ್ನು ಕಳೆದುಕೊಳ್ಳುವುದಕ್ಕೆ ಸಮಾನ ಎಂಬ ಅರಿವನ್ನು ಜನರಲ್ಲಿ ಮೂಡಿಸುವಲ್ಲಿ ಕನ್ನಡ ಕೋಟಿ ಪ್ರಮುಖ ಪಾತ್ರವಹಿಸಿತು.ಜಯದೇವಿ ತಾಯಿಯವರು ನಡೆಸಿದ ಈ ಭಾಷಾ ಉತ್ತೇಜಕ ಪ್ರಯೋಗವು  ಗಡಿನಾಡಿನ ಕನ್ನಡಿಗರಲ್ಲಿ ಆತ್ಮವಿಶ್ವಾಸವನ್ನು ಬೆಳೆಸಿದ ಸಾಮಾಜಿಕ ಮತ್ತು ಸಾಂಸ್ಕೃತಿಕ ಚಳವಳಿಯಾಗಿತ್ತು. ಕನ್ನಡದ ಮೇಲಿನ ಅಭಿಮಾನವನ್ನು ಜನಮನಗಳಲ್ಲಿ ಪುನರುಜ್ಜೀವನಗೊಳಿಸಿದ ಈ ಪ್ರಯತ್ನ ಮುಂದಿನ ಕನ್ನಡ ಹೋರಾಟಗಳಿಗೆ ಭದ್ರ ಬುನಾದಿಯಾಯಿತು. ಹೀಗೆ, ಸೊಲ್ಲಾಪುರದಲ್ಲಿ ಸ್ಥಾಪನೆಯಾದ ಕನ್ನಡ ಕೋಟಿ  ಪ್ರಕಾಶನ ಸಂಸ್ಥೆ ಜಯದೇವಿ ತಾಯಿಯವರ ದೂರದೃಷ್ಟಿ, ಧೈರ್ಯ ಮತ್ತು ಕನ್ನಡಪ್ರೇಮದ ಜೀವಂತ ಸಂಕೇತವಾಗಿ  ತಮ್ಮ ವೈಯಕ್ತಿಕ ಸಂಪತ್ತನ್ನು ಸಮಾಜದ ಹಿತಕ್ಕಾಗಿ ಮೀಸಲಿಟ್ಟು ಕನ್ನಡ ಭಾಷೆಯ ಉಳಿವಿಗಾಗಿ ಅವರು ಮಾಡಿದ ಈ ಕಾರ್ಯ ಕನ್ನಡ ಇತಿಹಾಸದಲ್ಲಿ ಅಕ್ಷರಶಃ ಚಿರಸ್ಥಾಯಿಯಾಗಿ ಉಳಿದಿದೆ. “ನನ್ನಿಯಿದು ಕಂಡದ್ದು ನುಡಿ | ತಾನಾಗಿ ಬಂದದ್ದು |ಜೇನು ಸವಿದಂತೆ ತುಂಬಿದ – ಪದಗಳದನಿ ದನಿಗೂಡಿಸಿ ಹಾಡುವೆನು || ಎನ್ನುತ ಜಯದೇವಿ ತಾಯಿಯವರುಈ ತ್ರಿಪದಿಯಲ್ಲಿ ತನ್ನ ಮನಸ್ಸಿನಲ್ಲಿ ಸಹಜವಾಗಿ ಮೂಡಿದ ಭಾವನೆಗಳು ಕನ್ನಡದಲ್ಲಿಯೇ…. ಅವು ಯಾರ ಒತ್ತಾಯದಿಂದಲೂ ಬಂದದ್ದಲ್ಲ.. ಸ್ವಯಂಸ್ಫೂರ್ತಿಯಿಂದ ಉದಿಸಿದವು. ಆ ಭಾವನೆಗಳು ಜೇನಿನ ಸವಿಯಂತೆ ಮಧುರವಾಗಿದ್ದು, ಪದಗಳ ರೂಪದಲ್ಲಿ ಹೊರಹೊಮ್ಮಿವೆ. ಆ ಮಧುರ ಪದಗಳಿಗೆ ಧ್ವನಿಯನ್ನು ಸೇರಿಸಿ ಹಾಡುವ ಮೂಲಕ ತಮ್ಮ ಸಂತೋಷ, ಕೃತಜ್ಞತೆ ಹಾಗೂ ಭಾವನೆಗಳನ್ನು ಲೋಕಕ್ಕೆ ಹಂಚಿಕೊಳ್ಳುವ ಸಂಕಲ್ಪವನ್ನು ತಾಯಿಯ ವರು ವ್ಯಕ್ತಪಡಿಸುತ್ತಾರೆ.(ಮುಂದುವರೆಯುವುದು) ಸವಿತಾ ದೇಶಮುಖ

Read Post »

ನಿಮ್ಮೊಂದಿಗೆ

ಉಷಾರಾಣಿ ಗುರುಪ್ರಸಾದ ಕವಿತೆ “ನಿರಾಸೆ”

ಕಾವ್ಯ ಸಂಗಾತಿ ಉಷಾರಾಣಿ ಗುರುಪ್ರಸಾದ  “ನಿರಾಸೆ” ಕನಸುಗಳ ಗೋಪುರಕೆ ಕಲ್ಲು ಬಿದ್ದಂತೆ,ಹಚ್ಚಿದ ದೀಪತಾನಾಗಿಯೇ ಆರಿದಂತೆ,ನಂಬಿಕೆಯ ದಾರಿಯಲಿ ಮುಳ್ಳು ಸಿಕ್ಕಂತೆ,ಮನಸೀಗ ಮೌನವಾಗಿದೆ, ಏನೂ ತೋಚದಂತೆ. ಆಸೆಯ ಚಿಗುರೊಡೆದು ನಿಂತ ಕೊಂಬೆಗೆ,ಬರಗಾಲದ ಬಿಸಿಲು ತಗುಲಿದ ಹಾಗೆ,ನೆನೆದ ಸುಖದ ದಿನಗಳೆಲ್ಲ ದೂರ ಸರಿದು,ಹೃದಯದ ಮೂಲೆಲಿ ನೋವು ಮನೆ ಮಾಡಿದೆ. ಯಾರನ್ನು ನೋಯಿಸಲಿ, ಯಾರಿಗೆ ದೂಷಿಸಲಿ?ನನ್ನದೇ ವಿಧಿಯ ಆಟ ಹೇಗೆ ನಗಲಿ?ಪ್ರತಿ ಬಾರಿ ಗೆಲುವಿನ ದಡ ಮುಟ್ಟುವ ಮುನ್ನ,ನಿರಾಸೆಯ ಅಲೆಯು ಬಂದು ಮುಳುಗಿಸುವುದೆನ್ನ. ಆದರೂ ಒಂದು ಭರವಸೆ ಮೂಡದಿರದು,ಕತ್ತಲೆಯ ನಂತರ ಬೆಳಕು ಬಾರದಿರದು,ಇಂದಿನ ಈ ನಿರಾಸೆಯಕಹಿ ಕಣ್ಣೀರು,ನಾಳೆಯ ಯಶಸ್ಸಿಗೆಹಾದಿ ರಾಜಮಾರ್ಗ .ಉಷಾರಾಣಿ ಗುರುಪ್ರಸಾದ 

ಉಷಾರಾಣಿ ಗುರುಪ್ರಸಾದ ಕವಿತೆ “ನಿರಾಸೆ” Read Post »

ಕಾವ್ಯಯಾನ, ಗಝಲ್

ಮಾಜಾನ್ ಮಸ್ಕಿ ಅವರ ಗಜಲ್

ಕಾವ್ಯ ಸಂಗಾತಿ ಮಾಜಾನ್ ಮಸ್ಕಿ ಗಜಲ್ ವಿದಾಯ ಹೇಳಲೇ ಕವಲೊಡೆದ ದಾರಿಗೆದೂರ ಸರಿಯಲೇ ಒಲವಿರದ ದಾರಿಗೆ ಘಮವಿಲ್ಲದ ಪಾರಿಜಾತ ನೊಂದಿದೆಕಳಚಿ ಹೋಗಲೇ ನಾಕವಿರದ ದಾರಿಗೆ ಪಡೆದುದೆಲ್ಲ ನಶ್ವರವಾಗಿ ಮೌನವಾದೆಮರೆತು ಬಿಡಲೇ ಸುಖವಿರದ ದಾರಿಗೆ ಕಲ್ಪನೆಯ ಭಾವನೆಗಳ ಬಳ್ಳಿ ರೋಧಿಸಿದೆಹರಿದು ತೊರೆಯಲೇ ನಲಿವಿರದ ದಾರಿಗೆ ತಪ್ಪಿದೆ ಯಾನದ ಹರಿಗೋಲು ಮಾಜಾಕಳೆದು ಕೂಡಲೇ ಕರುಣೆವಿರದ ದಾರಿಗೆ ಮಾಜಾನ್ ಮಸ್ಕಿ

ಮಾಜಾನ್ ಮಸ್ಕಿ ಅವರ ಗಜಲ್ Read Post »

ಇತರೆ, ಶಿಕ್ಷಣ

“ಶಿಕ್ಷಣದ ದೃಷ್ಟಿಕೋನ ಬದಲಾಗಲಿ” ವಿಶೇಷ ಲೇಖನ ಅಮು ಭಾವಜೀವಿ ಮುಸ್ಟೂರು.

ಶಿಕ್ಷಣ ಸಂಗಾತಿ ಅಮು ಭಾವಜೀವಿ ಮುಸ್ಟೂರು “ಶಿಕ್ಷಣದ ದೃಷ್ಟಿಕೋನ ಬದಲಾಗಲಿ” ಅಂಕ ಆಧಾರಿತ ಶಿಕ್ಷಣಕ್ಕಿಂತ ಕೌಶಲ್ಯ ಮತ್ತು ವೃತ್ತಿಪರತೆ ಆಧಾರಿತ ಮೂಲ ಶಿಕ್ಷಣವನ್ನು ಕೊಟ್ಟಾಗ ಮಾತ್ರ ಈ ಶಿಕ್ಷಣ ವ್ಯವಸ್ಥೆ ಸುಧಾರಿಸಬಹುದೇನೋ. ಅಂಕ ಮಾಡಲು ಯೋಗ್ಯತೆ ಇಲ್ಲದವನು ಅದನ್ನು ಕೊಂಡುಕೊಂಡು ಅದೆಷ್ಟೋ ಪ್ರತಿಭಾವಂತರಿಗೆ ತೊಂದರೆ ಮಾಡುವ ಬದಲು ವೃತ್ತಿ ಕೌಶಲ್ಯ ಆಧಾರಿತ ಕಲಿಕೆ ಪ್ರತಿಭಾವಂತರನ್ನು ಸೃಷ್ಟಿಸುತ್ತದೆ. ಕೌಶಲ್ಯ ಮತ್ತು ಪ್ರತಿಭೆಯನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ ಅದನ್ನು ಸ್ವತಃ ರೂಡಿಸಿಕೊಳ್ಳುವಂತದ್ದು. ಕೆಲಸಕ್ಕೆ ತಕ್ಕ ಕೌಶಲ್ಯ ಕೌಶಲ್ಯಕ್ಕೆ ತಕ್ಕ ಅನುಭವ ಅನುಭವಕ್ಕೆ ತಕ್ಕ ಪರಿಶ್ರಮ ಸಿಕ್ಕಾಗ ಸಮಾಜದಲ್ಲಿ ದುಡಿಯುವ ವರ್ಗಕ್ಕೆ ಬಲ ತುಂಬಿದಂತಾಗುತ್ತದೆ.    ಬರೀ ಅಂಕ ಗಳಿಕೆಯ ಹಿಂದೆ ಓಡುತ್ತಿರುವ ಇಂದಿನ ಯುವ ಸಮುದಾಯ ಅತ್ತ ಅಂಕ ಗಳಿಸಲು ಬರದಾಡುತ್ತಿದ್ದರೆ ಇತ್ತ ಪಟ್ಟಭದ್ರರು ತಮ್ಮವರ ಹಿತಕ್ಕಾಗಿ ಕೋಟ್ಯಂತರ ಮಕ್ಕಳ ಭವಿಷ್ಯಕ್ಕೆ ಕೊಡಲಿ ಪೆಟ್ಟು ನೀಡಿ ತಾವು ಮಾತ್ರ ತಮ್ಮ ಹಣ ಅಧಿಕಾರ ಪ್ರಭಾವ ಬಳಸಿ ಎಲ್ಲಾ ಅವಕಾಶಗಳನ್ನು ತಮ್ಮದಾಗಿಸಿಕೊಂಡು ಮೆರೆಯುತ್ತಿದ್ದಾರೆ. ಪ್ರತಿಭಾವಂತ ಬಡ ವಿದ್ಯಾರ್ಥಿಗಳು ಅವಕಾಶ ವಂಚಿತರಾಗಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಯಂತಹ ಕೆಟ್ಟ ನಿರ್ಧಾರಕ್ಕೆ ಕೈಹಾಕಿ ಹೆತ್ತವರಿಗೆ ಇನ್ನಿಲ್ಲದ ನೋವು ಕೊಡುವ ಪರಿಸ್ಥಿತಿಗೆ ತಂದು ಬಿಟ್ಟಿದೆ ಈ ವ್ಯವಸ್ಥೆ. ಶಿಕ್ಷಣ ಸ್ವಉದ್ಯೋಗಿಗಳನ್ನು ಸೃಷ್ಟಿ ಮಾಡಬೇಕೆ ವಿನಹ ಸರ್ಕಾರ ಸಂಘ ಸಂಸ್ಥೆಗಳ ಬಾಗಿಲಲ್ಲಿ ನಿಂತು ಕೆಲಸಕ್ಕಾಗಿ ಅಂಗಲಾಚುವ ದೈನಿಶಿ ಸ್ಥಿತಿಯಲ್ಲಿ ಮಕ್ಕಳನ್ನು ತಂದು ನಿಲ್ಲಿಸಿದೆ.    ಸ್ಪರ್ಧಾತ್ಮಕ ಪರೀಕ್ಷೆಗಳು ವಿದ್ಯಾರ್ಥಿಗಳನ್ನು ಸೃಜನಶೀಲರನ್ನಾಗಿ ಮಾಡುವ ಬದಲು ಪುಸ್ತಕದ ಹುಳುಗಳನ್ನಾಗಿಸಿ ಸ್ವಂತಿಕೆಯನ್ನೇ ಮರೆಸಿ ಕೇವಲ ಅಂಕ ್ರ್ಯಾಂಕ್ಗಳ ಹಿಂದೆ ಓಡುವಂತೆ ಮಾಡಿದೆ. ಇಲ್ಲಿ ವಿಫಲನಾದನವನಿಗೆ ಮತ್ತೊಂದು ಅವಕಾಶವನ್ನು ಸೃಷ್ಟಿಸಿಕೊಳ್ಳುವ ಬದಲು ಕೈ ತಪ್ಪಿದ ಅವಕಾಶದ ಚಿಂತೆಯಲ್ಲಿಯೇ ಬದುಕು ಭವಿಷ್ಯಗಳ ಎರಡನ್ನು ಕತ್ತಲೆ ಮಾಡಿಕೊಂಡು ಹೆತ್ತವರಿಗೆ ಸರಿಯಾಗಿ ಜನ್ಮಕ್ಕಾಗುವಷ್ಟು ನೋವನ್ನು ನೀಡಿ ಸೊರಗಿ ಹೋಗುತ್ತಿದೆ. ತಂತ್ರಜ್ಞಾನ ಮುಂದುವರೆದಂತೆಲ್ಲ ಸತ್ಯತೆ ಮತ್ತು ಪ್ರಾಮಾಣಿಕತೆಗೆ ಅವಕಾಶ ಇರುವುದಿಲ್ಲ. ಅಲ್ಲಿ ಏನಿದ್ದರೂ ತಾಂತ್ರಿಕತೆಗೆ ನಾವೆಷ್ಟು ಸಮರ್ಥರು ಎಂಬುದನ್ನು ಸಾಬೀತುಪಡಿಸಬೇಕಷ್ಟೆ. ತಾಂತ್ರಿಕತೆಯಲ್ಲಿ ಪ್ರಾವೀಣ್ಯತೆ ಇಲ್ಲದವನು ಹಣ ಅಧಿಕಾರಗಳ ಪ್ರಭಾವ ಬಳಸಿ ಅದನ್ನು ಕೊಂಡುಕೊಳ್ಳಲು ತನ್ನದಾಗಿಸಿಕೊಳ್ಳಲು ಪ್ರಯತ್ನಿಸುವುದು ಇಂದಿನ ದುರಂತ. ಅದರ ಜೊತೆಗೆ ನೂರಾರು ಕನಸುಗಳನ್ನು ಕಟ್ಟಿಕೊಂಡ ಮಧ್ಯಮ ವರ್ಗದ ಪೋಷಕರು ಮತ್ತು ವಿದ್ಯಾರ್ಥಿಗಳ ಪಾಲಿಗೆ ಭವಿಷ್ಯವನ್ನು ಕತ್ತಲಾಗಿಸಿಬಿಡುತ್ತದೆ.     ಶಿಕ್ಷಣ ಜ್ಞಾನವನ್ನು ಕೊಡಬೇಕು ಅಂಕಗಳನ್ನಲ್ಲ. ಜ್ಞಾನ ಬದುಕನ್ನು ಅನ್ವೇಶಿಸಿ ಸರಿ ತಪ್ಪುಗಳ ವಿಶ್ಲೇಷಿಸಿ ಜೀವನದ ಮಟ್ಟವನ್ನು ಸುಧಾರಿಸಿಕೊಳ್ಳಲು ಅನುವು ಮಾಡಿಕೊಡಬೇಕು. ಓದಿನಲ್ಲಿ ಮುಂದಿರುವವರಿಗೆ ಬದುಕಿನ ಪರ್ಯಾಯ ಹಾದಿಗಳು ಗೊತ್ತೇ ಇರುವುದಿಲ್ಲ. ಕುದುರೆಗೆ ಕಣ್ಣು ಕಟ್ಟಿದಂತೆ ಓಡುವುದಷ್ಟೇ ಅವನ ಗುರಿಯಾಗಿರುತ್ತದೆ. ಕೈಗೆಟುಕದ ಉನ್ನತ ಗುರಿಗಿಂತಲೂ ಅಂಗೈಯಲ್ಲಿರುವ ಬೆಣ್ಣೆಯನ್ನೇ ತುಪ್ಪವಾಗಿಸುವ ಕೌಶಲ್ಯವನ್ನು ಇಂದಿನ ಶಿಕ್ಷಣ ಮಕ್ಕಳಿಗೆ ಕಲಿಸಿ ಕೊಡಬೇಕಾಗಿದೆ. ತಂತ್ರಜ್ಞಾನದ ಆವಿಷ್ಕಾರ ಮನುಷ್ಯನನ್ನು ಸೋಮಾರಿಯಾಗಿಸಿದೆ. ಅವನ ಶ್ರಮದ ಕೆಲಸಗಳನ್ನೆಲ್ಲ ನುಂಗಿ ಹಾಕಿ ಗುಂಡಿ ಬತ್ತಿದರೆ ಸಾಕು ಆಗಬೇಕಾದ ಕೆಲಸಗಳೆಲ್ಲ ನಿರ್ದಿಷ್ಟ ಸಮಯದಲ್ಲಿ ಮುಗಿಸಿ ಕೊಡುತ್ತಿರುವಾಗ ಮನುಷ್ಯನ ದೈಹಿಕ ಶ್ರಮ ಕೌಶಲ್ಯ ಎಲ್ಲವೂ ಮೂಲೆಗುಂಪಾಗಿ ನಿರುದ್ಯೋಗಿಗಳು ಉತ್ಪಾದನೆಯಾಗುತ್ತಿದ್ದಾರೆ. ಇದರಿಂದ ಭವಿಷ್ಯದಲ್ಲಿ ದೇಶದ ಪ್ರಗತಿಯ ಮೇಲೆ ಬಹುದೊಡ್ಡ ಹೊಡೆತವನ್ನು ನೀಡಲಿದೆ.      ಶಿಕ್ಷಣ ವ್ಯವಸ್ಥೆ ವ್ಯಾಪಾರಿಕರಣವಾದ ಈ ಕಾಲಘಟ್ಟದಲ್ಲಿ ಪ್ರತಿಭೆಗಳು ಹುಟ್ಟುವುದು ಅಷ್ಟು ಸುಲಭವಲ್ಲ. ಉಳ್ಳವರ ಎದೆಗೊದ್ದು ಪ್ರತಿಭಾವಂತ ಅವಕಾಶಗಳನ್ನು ಗಿಟ್ಟಿಸಿಕೊಳ್ಳುವುದು ಅಸಾಧ್ಯವಾದ ಮಾತು. ಅದರಲ್ಲೂ ಇಂದಿನ ರಾಜಕೀಯ ವ್ಯವಸ್ಥೆ ಕೇವಲ ಗುಲಾಮರನ್ನು ಸೃಷ್ಟಿಸುವ ತಮ್ಮ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಳ್ಳುವ ಸಾಧನಗಳನ್ನಾಗಿ ಬಳಸಿಕೊಳ್ಳುತಿದೆ ವಿನಹ ಕೌಶಲ್ಯ ಪೂರ್ಣ ಸಮಾಜ ನಿರ್ಮಾಣ ಮಾಡುವುದು ಅವರರಿಗೂ ಬೇಕಿಲ್ಲ. ಎಷ್ಟು ಸಾಧ್ಯವೋ ಅಷ್ಟು ಬೇಗ ಹಣ ಗಳಿಸಿಕೊಂಡು ತಾನು ಮಾತ್ರ ಉದ್ದಾರವಾಗುವ ಮನಸ್ಥಿತಿಯಲ್ಲಿ ಇಂದಿನ ಶಿಕ್ಷಣ ಸಂಸ್ಥೆಗಳು ಕಾರ್ಯಪ್ರವೃತ್ತವಾಗಿವೆ. ಹೀಗಿರುವಾಗ ಓದಿದ ಎಲ್ಲರಿಗೂ ಕೆಲಸ ಸಿಗುವುದು ಅಸಾಧ್ಯ. ಇಂದಿನ ಶಿಕ್ಷಣ ವ್ಯವಸ್ಥೆ ಸೃಷ್ಟಿಕರ್ತನನ್ನಾಗಿಸುವ ಬದಲು ಕೇವಲ ಅನುಯಾಯಿಯಾಗಿ ಅನುಸರಿಸುವ ಅಮಾಯಕರನ್ನು ತಯಾರಿಸುವ ಕಾರ್ಖಾನೆಗಳಾಗಿವೆ.     ಯುವ ಸಮುದಾಯ ಒಂದು ಮಹಾನ್ ಶಕ್ತಿ. ಮನಸು ಮಾಡಿದರೆ ಏನು ಬೇಕಾದರೂ ಸಾಧನೆ ಮಾಡಬಹುದು. ಆದರೆ ಇಂದು ಅದನ್ನು ಮಾರ್ಗದರ್ಶಿಸುವ ಹಾಗೂ ಅದಕ್ಕೆ ಸರಿಯಾದ ಗುರಿ ನಿಗದಿಪಡಿಸುವ ಗುರುವಿನ ಕೊರತೆ ಎದ್ದು ಕಾಣುತ್ತದೆ. ಯುವಶಕ್ತಿಗೆ ಅಸಾಧ್ಯವಾದುದು ಯಾವುದು ಇಲ್ಲ ಆದರೆ ಸಾಧ್ಯವಾಗಿಸುವ ನಿಟ್ಟಿನಲ್ಲಿ ಅದನ್ನು ಒಗ್ಗೂಡಿಸಿಕೊಂಡು ಮುನ್ನಡೆಯ ಬೇಕಾದ ಅನಿವಾರ್ಯತೆ ಹಿಂದೆಂದಿಗಿಂತಲೂ ಇಂದು ತುಂಬಾ ಅನಿವಾರ್ಯವಾಗಿದೆ. ಇಲ್ಲಿ ಆಡಿಸುವವರ ಯೋಗ್ಯತೆ ಒಟ್ಟುಗೂಡಿಸುವಲ್ಲಿನ ವಿಫಲತೆಯನ್ನು ಎತ್ತಿ ತೋರಿಸುತ್ತದೆ. ವ್ಯವಸ್ಥೆಯ ಮೇಲೆ ಅತಿಕ್ರಮಣ ಮಾಡುವ ಬದಲು, ಸಂಘರ್ಷಕ್ಕೆ ಎಡೆ ಮಾಡಿ ಕೊಡುವ ಬದಲು ವ್ಯವಸ್ಥೆಯೊಳಗಿರುವ ಹುಳುಕುಗಳನ್ನು ಸರಿಪಡಿಸಲು ಬೇಕಾದ ಚಾಕಚಕ್ಯತೆಯನ್ನು ಹೊಂದಿದಾಗ ಮಾತ್ರ ಸಮಾಜದ ಸ್ವಾಸ್ಥ್ಯ ಉಳಿಸಿಕೊಂಡು ವ್ಯವಸ್ಥೆಯ ಓರೆ ಕೋರೆಗಳನ್ನು ತಿದ್ದಿ ಅರ್ಹರಿಗೆ ಅವಕಾಶಗಳ ಬಾಗಿಲನ್ನು ತೆರೆಸುವ ಶಿಕ್ಷಣ ವ್ಯವಸ್ಥೆ ಅದನ್ನು ಮುನ್ನಡೆಸುವ ಗುರುವಿನ ಮಾರ್ಗದರ್ಶನ ಅತಿ ಅವಶ್ಯಕವಾಗಿ ಬೇಕಾಗಿದೆ. ಅಮು ಭಾವಜೀವಿ ಮುಸ್ಟೂರು.

“ಶಿಕ್ಷಣದ ದೃಷ್ಟಿಕೋನ ಬದಲಾಗಲಿ” ವಿಶೇಷ ಲೇಖನ ಅಮು ಭಾವಜೀವಿ ಮುಸ್ಟೂರು. Read Post »

ಕಾವ್ಯಯಾನ, ಗಝಲ್

ಜ್ಯೋತಿ ಮಾಳಿ ಬೆಳಗಾವಿ ಅವರ ಗಜಲ್

‌ ಕಾವ್ಯ ಸಂಗಾತಿ. ಜ್ಯೋತಿ ಮಾಳಿ ಬೆಳಗಾವಿ ಗಜಲ್ ಕುಳಿತು ಮಾತನಾಡಿಸಿ ಎದ್ದು ಹೋದ ಜಾಗವೀಗ ಖಾಲಿಖಾಲಿ ಅನಿಸುತಿದೆನಕ್ಕು ನಗಿಸಿ ಮನವನು ಗೆದ್ದು ಹೋದ ಜಾಗವೀಗ ಖಾಲಿಖಾಲಿ ಅನಿಸುತಿದೆ ಹೋದರೆ ಹೋಗಿ ನಿಮಗೂ ಏನೊ ಅನಿವಾರ್ಯತೆಗಳುಇರಬಹುದುಭಾವ ಬಸಿದ ಕವಿತೆಗಳನು ಕದ್ದು ಹೋದ ಜಾಗವೀಗ ಖಾಲಿಖಾಲಿ ಅನಿಸುತಿದೆ ನೊಂದು ಬೆಂದು ನರಳಿದ ಗಾಯಗಳ ಗುರುತು ಸಿಗದಂತೆಅಳಿಸಿ ಹಾಕಿದಿರಿಕಲಕಿದ ಕೊಳ ತಿಳಿಯಾಗಿಸಿ ಇದ್ದು ಹೋದ ಜಾಗವೀಗ ಖಾಲಿಖಾಲಿ ಅನಿಸುತಿದೆ ಬೇಸರಗೊಂಡ  ಜೀವಗಳಿಗೆ ಎಡೆಯ ತುಂಬ ಸಂತಸವನುಮನದಿ ಬಡಿಸಿದಿರಿಹಾಲುಣಿಸಿ ಹಾಲಾಹಲ ಮೆದ್ದು ಹೋದ ಜಾಗವೀಗ ಖಾಲಿಖಾಲಿ ಅನಿಸುತಿದೆ ಹೃದಯ ಹೃದಯಗಳನು ಬೆಸೆದು ಹಂದರವನು ಹಾಕಿ ಕರೆದುಕೂರಿಸಿದಿರಿಜ್ಯೋತಿ ಬೆಳಕಿನಲಿ ತಮವು ಬಿದ್ದು ಹೋದ ಜಾಗವೀಗ ಖಾಲಿಖಾಲಿ ಅನಿಸುತಿದೆ ಜ್ಯೋತಿ ಮಾಳಿ ಬೆಳಗಾವಿ

ಜ್ಯೋತಿ ಮಾಳಿ ಬೆಳಗಾವಿ ಅವರ ಗಜಲ್ Read Post »

ಕಾವ್ಯಯಾನ, ಗಝಲ್

ಸುಕನಸು ಅವರ‌ ಗಜಲ್

ಕಾವ್ಯ ಸಂಗಾತಿ ಸುಕನಸು ಗಜಲ್ ಬಾ ಅಪರಿಚಿತರಾಗೊಣ  ಮತ್ತೊಮ್ಮೆ ಗೆಳೆಯನೀ ಮರೆತು ಸಹ ಸಿಗದಿರು ಇನ್ನೊಮ್ಮೆ ಗೆಳೆಯ ಸದಾ ನಿನ್ಹೆಸರ ಜಪಿಸುವ ಮನಕೇನು ಸಂತೈಸಲಿನೆನಪುಗಳ ಕೊಂದ್ಹೋಗೂ ಬಂದೊಮ್ಮೆ ಗೆಳೆಯ ಜೊತೆ ಇಟ್ಟ ಹೆಜ್ಜೆಗಳ ಲೆಕ್ಕ ಎಲ್ಲಿದೆ ಸಂತೃಪ್ತಿಯಷ್ಟೆಮುಂದೆಂದೂ ಸಿಗದಂತೆ ಶಪಥ ಮಾಡೊಮ್ಮೆ ಗೆಳೆಯ ಮನ ತಬ್ಬಿಬಾಗಿದೆ ತಳ್ಳಿ ಹೋದ ಕಾರಣ ತಿಳಿಯದೆತೊರೆದು ಹೋದ ನೆಪ ಹೇಳಿ ಹೋಗೊಮ್ಮೆ ಗೆಳೆಯ ಸುಮದ ಪರಿಮಳವೆ ಅಪಾರವಾಯಿತು ನವಿರಲ್ಲವಒಲವಿಲ್ಲ ಲಾಲಶೆಯಷ್ಟೆಯೆಂದು ಹೇಳೊಮ್ಮೆ ಗೆಳೆಯ ಸುಕನಸು

ಸುಕನಸು ಅವರ‌ ಗಜಲ್ Read Post »

You cannot copy content of this page

Scroll to Top