ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ರಂಗಭೂಮಿ

ರಂಗ ಪ್ರಯೋಗ”ಭಾರತದ ಪಾಡು ಮುತ್ತುಪಾಡಿಯ ಹಾಡು ಮನಸೆಳೆದ ಸ್ವಾತಂತ್ರ್ಯದ ಓಟ ನಾಟಕ”-ಗೊರೂರು ಅನಂತರಾಜು, ಹಾಸನ.

ರಂಗ ಸಂಗಾತಿ ಗೊರೂರು ಅನಂತರಾಜು, ಹಾಸನ. ರಂಗ ಪ್ರಯೋಗ “ಭಾರತದ ಪಾಡು ಮುತ್ತುಪಾಡಿಯ ಹಾಡು ಮನಸೆಳೆದ ಸ್ವಾತಂತ್ರ್ಯದ ಓಟ ನಾಟಕ” ಹಾಸನದ ಹಾಸನಾಂಬ ಕಲಾಕ್ಷೇತ್ರದಲ್ಲಿ ಶಿವಮೊಗ್ಗದ ರಂಗಾಯಣ ಕಲಾವಿದರು ಬೋಳುವಾರು ಮಹಮದ್ ಕುಂಞ ಅವರ ಕಾದಂಬರಿ ಆಧಾರಿತ ಸ್ವಾತಂತ್ರö್ಯದ ಓಟ ನಾಟಕವನ್ನು ಕಳೆದ ಭಾನುವಾರ ಪ್ರದರ್ಶಿಸಿ ಪ್ರೇಕ್ಷಕರ ಮನ ಸೆಳೆದರು.  ಪ್ರಸಿದ್ಧ ಕಥೆಗಾರರು, ಕಾದಂಬರಿಕಾರರು,  ನಾಟಕಕಾರರು ಆದ ಬೋಳುವಾರು ಮಹಮದ್ ಕುಂಞಯವರು ಕನ್ನಡ ಸಾಹಿತ್ಯದಲ್ಲಿ ಮುಸ್ಲಿಂ ಸಂಸ್ಕೃತಿ ಮತ್ತು ಬದುಕನ್ನು ಸೃಜನಶೀಲ ಗದ್ಯಕ್ಕೆ ಪರಿಚಯಿಸಿದವರು.  ತಮ್ಮ ಕಥೆಗಳ ಮೂಲಕ ಮುಸ್ಲಿಂ ಸಮುದಾಯದ ನಂಬಿಕೆ, ಆಚರಣೆ ಮತ್ತು ಸಾಮಾಜಿಕ ವಾಸ್ತವತೆಗಳನ್ನು ಚಿತ್ರಿಸಿದ್ದಾರೆ. ಇವರ ಸ್ವಾತಂತ್ರö್ಯದ ಓಟ ಒಂದು ಮೈಲುಗಲ್ಲು ಕಾದಂಬರಿ, ಇದಕ್ಕೆ ೨೦೧೬ರಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ೧೯೪೭ರಲ್ಲಿ ದೇಶ  ವಿಭಜನೆಯಿಂದ ಪ್ರಾರಂಭವಾಗುವ ಕಥಾವಸ್ತು ೬೦ ವರ್ಷ ಕಾಲ ಚಾಂದ್ ಅಲಿ ಎಂಬ ವ್ಯಕ್ತಿಕೇಂದ್ರಿತ ಕಥೆಯಾಗಿ ಆ ಕಾಲಘಟ್ಟದ ನೈಜ ಬದುಕನ್ನು ಚಿತ್ರಿಸುತ್ತದೆ. ಭಾರತ ಪಾಕಿಸ್ತಾನ ಗಡಿಯ ವಾಘಾದಲ್ಲಿ ಆರಂಭವಾಗುವ ಕಥೆ ಕೊನೆಗೆ ಅಲ್ಲಿಯೇ ಮುಕ್ತಾಯಗೊಳ್ಳುವ  ಜಾತ್ಯಾತೀತ ಪರಿಕಲ್ಪನೆಯಲ್ಲಿ ರೂಪು ತೆಳೆದಿದೆ.   ಗೋಮಾರದಹಳ್ಳಿ ಮಂಜುನಾಥ್  ನಾಟಕಕ್ಕೆ ರೂಪಾಂತರಿಸಿದ್ದು, ರಂಗಪಠ್ಯ, ವಿನ್ಯಾಸ ಮತ್ತು ನಿರ್ದೇಶನ  ನಟರಾಜ್ ಹೊನ್ನವಳ್ಳಿಯವರದು.  ಸಹ ನಿರ್ದೇಶನ ಸಲ್ಮಾ ದಂಡಿನ್.  ಈ ಹಿಂದೆ ನಟರಾಜ್ ಹೊನ್ನವಳ್ಳಿಯವರು ಇದೇ ಕಲಾಭವನದಲ್ಲಿ ಪ್ರದರ್ಶಿಸಿದ್ಧ  ಪಿ.ಲಂಕೇಶರ ಗುಣಮುಖ ನಾಟಕವನ್ನು ಅದ್ಭುತವಾಗಿ ಪ್ರದರ್ಶಿಸಿದ್ದರು. ಆಗ ನೋಡಿ ಬರೆದಿದ್ದು ನನ್ನ ರಂಗಪ್ರಯೋಗ (೨೦೧೧) ಕೃತಿಯಲ್ಲಿ ದಾಖಲಾಗಿದೆ.ಒಂದು ಸಾವಿರದ ಒಂದು ನೂರಾ ಹನ್ನೊಂದು ಪುಟಗಳ ಸುಧೀರ್ಘ ಕಾದಂಬರಿಯನ್ನು ಮೂರೂವರೆ ಗಂಟೆಯಲ್ಲಿ  ಪ್ರೇಕ್ಷಕರಿಗೆ ಇಷ್ಟವಾಗುವ ನಾಟಕವಾಗಿ ರೂಪಿಸುವಲ್ಲಿ   ನಿರ್ದೇಶಕರ ಜಾಣ್ಮೆ, ಕಲಾವಿದರ ತಲ್ಲೀನ ನಟನೆ, ರಂಗ ಸಂಗೀತ, ವಸ್ತç ವಿನ್ಯಾಸ, ರಂಗ ಪರಿಕರ,  ಬೆಳಕು ಈ ಎಲ್ಲವೂ ಒಗ್ಗೂಡಿದೆ.  ನಾಟಕದ ಪೂರ್ವಾರ್ಧ ದೇಶ ವಿಭಜನೆ, ಅದರ ಪರಿಣಾಮಗಳನ್ನು ಹೇಳಿದರೆ ಉತ್ತರಾರ್ಧ ಭಾಗವು ಮುತ್ತುಪಾಡಿಯ ಗ್ರಾಮ್ಯ ಕತೆಯನ್ನು ಮನಮುಟ್ಟವಂತೆ ಹೇಳುತ್ತದೆ. ದೇಶ ವಿಭಜನೆ ಪೂರ್ವ ಪಾಕಿಸ್ತಾನದ ಲಾಹೋರ್ ನಲ್ಲಿ ಸಿಖ್ ಮಾಲಿಕತ್ವದ ಕಬ್ಬಿಣದ ಕುಲುಮೆಯಲ್ಲಿ ಕೆಲಸ ಮಾಡುವ ಅನಾಥ ಹುಡುಗ  ಚಾಂದ್ ಆಲಿ ನಾಟಕದ ಕೇಂದ್ರ ಪಾತ್ರ. ದೇಶ ವಿಭಜನೆಗೆ ದುರಂತ ಸಾಕ್ಷಿಯಾಗಿ ಕಂಡುಬರುವ ಈ ಪಾತ್ರ  ನಾಟಕದುದ್ದಕ್ಕೂ ಪ್ರಧಾನ ಭೂಮಿಕೆಯಲ್ಲಿ  ಮೂರು ಹಂತಗಳಲ್ಲಿ  ಹದಿನೈದರ ವಯೋಮಾನದ ಹುಡುಗ, ಮದುವೆ ವಯಸ್ಸಿನ ಪ್ರಾಯಕ್ಕೆ ಬಂದ ಯುವಕ, ಇಳಿವಯಸ್ಸಿನ  ವೃದ್ಧ ಹೀಗೆ ಬರುವ ಪಾತ್ರಗಳನ್ನು ಮೂರು ಕಲಾವಿದರ ಪ್ರಸ್ತುತಿಯಲ್ಲಿ ತನ್ನ ಸುತ್ತಲಿನ ಸನ್ನಿವೇಶ ಸಮಯಕ್ಕೆ ತಕ್ಷಣಕ್ಕೆ ಉದ್ಭವಿಸುವ ವಿದ್ಯಮಾನಗಳಿಗೆ ಬಾಗಿಯಾಗುತ್ತಾ  ಕಥೆಯ ಪಾತ್ರ ಸಾಗುತ್ತದೆ. ಇಲ್ಲಿ  ಭಾವನಾತ್ಮಕ ಸಂಬAಧಗಳು  ಭಾವ್ಯಕ್ಯ ಭಾರತವನ್ನು ಎತ್ತಿ ಹಿಡಿಯುತ್ತವೆ. ನಾಟಕದ ಪೂರ್ವಾರ್ಧದ ದೇಶ ವಿಭಜನೆ ಕಾಲದ ಘಟನೆಗಳು ಭಾವಾವೇಶಗಳ ರೋಚÀಕತೆ ಇಲ್ಲದೆ ತಣ್ಣಗೆ ನಿರೂಪಿಸುತ್ತಾ ಸಾಗುತ್ತದೆ. ತನ್ನ ಕುಟುಂಬದವರಿAದ ಬೇರ್ಪಟ್ಟು ಜೀವ ಉಳಿಸಿಕೊಳ್ಳುವ ಭರದಲ್ಲಿ ಭಾರತ ಪ್ರವೇಶಿಸುವ ಸಿಖ್ ಕುಟುಂಬದ ತನ್ವೀರ್, ಮೊಹಿಂದರ್ ಬಾಭಿ ಜೊತೆಗೆ   ಚಾಂದ್ ಅಲಿ ಕೂಡ ಭಾರತ ಪ್ರವೇಶಿಸುತ್ತಾನೆ. ತಾನು ಲಾಹೋರ್‌ಗೆ ವಾಪಸ್ಸು ಹೋಗಬೇಕೆನ್ನುವ ಚಾಂದ್ ಅಲಿಯ ಆಸೆಗೆ ಅನೇಕ ಸಿಕ್ಕುಗಳು ಎದುರಾಗಿ ನಲುಗುತ್ತಾನೆ. ಬದುಕಿನ ತಿರುವಿನಲ್ಲಿ ಉತ್ತರ ಭಾರತದಿಂದ ದಕ್ಷಿಣದ ಮುತ್ತುಪ್ಪಾಡಿಗೆ ಬರುವ   ಅನೇಕ ಅನಿರೀಕ್ಷಿತ ಘಟನೆಗಳು ಜರುಗುತ್ತವೆ. ಅಚಾನಕ್ ಹೊನ್ನು, ಹೆಣ್ಣು, ಆಸ್ತಿಯ ಅದೃಷ್ಟವು ಒಲಿದು ಬರುತ್ತದೆ. ನಾಟಕದ ಅಂತ್ಯದಲ್ಲಿ ಅದೇ ವಾಘಾ ಗಡಿಯಲ್ಲಿ ವಿಭಜನೆ ಕಾಲದಲ್ಲಿ ಕಳೆದು ಹೋದವರ ಪುನರ್ ಮಿಲನದೊಂದಿಗೆ ನಾಟಕ ಸುಖಾಂತ್ಯಗೊಳ್ಳುತ್ತದೆ. ಉತ್ತರಾರ್ಧ ಮಹಾತ್ಮ ಗಾಂಧೀಜಿಯ ಕನಸಿನ ಗ್ರಾಮ ಸ್ವರಾಜ್ಯ ಗ್ರಾಮವಾಗಿ ಮುತ್ತುಪಾಡಿ ಕಾಣಿಸಿಕೊಳ್ಳುತ್ತದೆ. ಈ ನಡುವೆ ನಾಟಕದ ಮಧ್ಯೆ ನಡೆಯುವ ಗಾಂಧಿಹತ್ಯೆಗೆ ಚಾಂದ್ ಆಲಿ ಮೂಕಸಾಕ್ಷಿಯಾಗುತ್ತಾನೆ.   ನನ್ನ ದೇವರು ಸತ್ತು ಹೋದ ಎಂದು ಹೇಳುವುದು ಮಾರ್ಮಿಕವಾಗಿದೆ. ಇಲ್ಲಿ  ಗಾಂಧಿ ಪಾತ್ರವನ್ನು ರಂಗಕ್ಕೆ ತರದೆ ನಿರ್ದೇಶಕರು ಜಾಣ್ಮೆ ತೋರಿದ್ದಾರೆ. ಚರಕವನ್ನು ಬಿಳಿಯ ಬಟ್ಟೆಯಲ್ಲಿ ಸುತ್ತಿ ಹೊರಡುವ ಚಂದನ್ ಹೆಸರಿನಲ್ಲಿ ದಾಖಲಾಗಿ ಭಾರತಕ್ಕೆ ಬಂದ ಚಾಂದ್ ಅಲಿ ಗಾಂಧೀಜಿಯ ಗ್ರಾಮಸ್ವರಾಜ್ಯದ ಕನಸಿನ ಕೂಸಾಗಿ ಪ್ರತಿಬಿಂಬಿಸುತ್ತಾನೆ.   ನಾಟಕದ ಉತ್ತರಾರ್ಧ  ಮುತ್ತುಪ್ಪಾಡಿ ಎಂಬ ಗ್ರಾಮದ  ಸಾಮರಸ್ಯದ ಬದುಕಿನ ಸೊಗಸಾದ ಕತೆ ಸ್ವತಂತ್ರ ಆಯಾಮದಲ್ಲಿ  ತೆರೆದುಕೊಳ್ಳುತ್ತದೆ. ಇಲ್ಲಿ ನಿರ್ದೇಶಕರು ಚಾಂದ್ ಅಲಿಯನ್ನೇ ಪ್ರಧಾನ ಎಳೆಯಾಗಿಸಿ ದೃಶ್ಯರೂಪಕದಲ್ಲಿ ಸರಾಗವಾಗಿ ನಾಟಕ ಸಾಗಿಸುವ ದಿಶೆಯಲ್ಲಿ ಬೇಕಾದ ಉಪಕಥೆಗಳನ್ನು ಆರಿಸಿಕೊಂಡಿದ್ದಾರೆ. ಹೀಗೆ ಸೇರಿದ  ಉಪಕಥೆಯಲ್ಲಿ ಬ್ಯಾರಿ ಮೂಸಜ್ಜ, ಆತನ ಹೆಂಡತಿ ಕೈಜುನ್ನಿಸಾ ಮತ್ತು ಮನೆ ಬಿಟ್ಟು ಹೋಗಿ  ಸೂಫಿ ಫಕೀರನಾಗಿರುವ  ಇವರ ಮಗ ಬದ್ರುದ್ಧೀನ್ ಪ್ರಮುಖರು. ಚಾಂದ್ ಅಲಿಯನ್ನು ಫಕೀರ ಬದ್ರುದ್ಧೀನ್ ತನ್ನದೇ ಮನೆಗೆ ಬಿಟ್ಟು ಹೋಗುವುದು ನಾಟಕೀಯ ತಿರುವು.  ಮುಂದೆ  ಮೂಸಜ್ಜ ಸತ್ತು ನಂತರದಲ್ಲಿ ಉದ್ಭವವಾಗುವ ಇಸ್ಲಾಂ ಧರ್ಮದ ನಂಬಿಕೆಗಳು. ಆಸ್ತಿಗಾಗಿ ಕಣ್ಣಾಕುವ ಊರಿನ ಪಾತ್ರಗಳು. ಸಭೆ, ತೀರ್ಮಾನ, ಮದುವೆ ಸಂಪ್ರದಾಯ ಎಲ್ಲವೂ ರಂಗದ ಮೇಲೆ ಬಂದು ಹೋಗುತ್ತವೆ. ಮಗನಿಲ್ಲದ ಮನೆಯಲ್ಲಿ ಉಳಿದುಕೊಂಡವನೇ ಆಸ್ತಿ ಒಡೆಯನಾಗಿ ಮತ್ತು ಈ ಕಾರಣಕ್ಕಾಗಿಯೇ ಮಾತೃಭೂಮಿಗೆ ವಾಪಸ್ಸು ಹೋಗಲಾಗದೆ ಅಲ್ಲಿಯೇ ಉಳಿಯಬೇಕಾಗಿ ಬರುವ ಅಲಿಯ  ಉಭಯ ಸಂಕಟಗಳು ಒಂದು ಕಡೆಯಾದರೇ, ಮಗನಂತೆ ಕಂಡ ಬದ್ರುದ್ಧೀನ್ ತಾಯಿ ಖೈಜುನ್ನಿಸಾಳ ಸಾವು, ಸಾವಿನ ಹೊತ್ತಲ್ಲೇ ಮತ್ತೆ ಮನೆಗೆ ಬಂದ ಫಕೀರ ಬದ್ರುದ್ದೀನ್ ಆಸ್ತಿಯನ್ನು ಅಲಿಗೆ ತ್ಯಾಗ ಮಾಡಿ ಉಪದೇಶ ಹೇಳಿ ಹೋಗುವುದು ಹೀಗೂ ಉಂಟೆ..! ಎನಿಸುತ್ತದೆ.  ಖೈಜುನ್ನಿಸಾ, ರಾಘಣ್ಣ, ಪಂಡಿತ, ಸುಮತಿ, ಅನಂತು, ಲತೀಫ್, ಪೋಡಿಯಪ್ಪ   ಹೀಗೆ ಬರುವ ಪಾತ್ರಗಳೆಲ್ಲಾ ಮುತ್ತುಪ್ಪಾಡಿ ಎಂಬ ಹಳ್ಳಿಯ ಸಾಮರಸ್ಯದ ಬದುಕನ್ನು ಸಾಕ್ಷೀಕರಿಸುತ್ತವೆ.  ನಾಟಕದ ಅಂತ್ಯದಲ್ಲಿ ಚಾಂದ್ ಅಲಿ ಕಡೆಗೂ  ತನ್ನಲ್ಲಿದ್ದ ಸಿಖ್ ಕುಟುಂಬದ ಒಡವೆ ಗಂಟನ್ನು ಅವರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆಯುತ್ತದೆ.  ಇಡೀ ನಾಟಕದ ಶಕ್ತಿ ಕೇಂದ್ರ ಅದರ ಸಂಗೀತ ಮತ್ತು ವಸ್ತç ವಿನ್ಯಾಸ. ಭಜನ್, ಕವ್ವಾಲಿ, ಕಬೀರ ದೋಹೆಗಳು ರಂಗಸಂಗೀತವಾಗಿ ಹಾಡುಗಳು ಮತ್ತು ರಂಗದಲ್ಲಿ ನೃತ್ಯಗಳು ಹಿಡಿದಿಡುತ್ತವೆ. ಗೊರೂರು ಅನಂತರಾಜು, ಹಾಸನ.ಮೊ: ೯೪೪೯೪೬೨೮೭೯.ವಿಳಾಸ: ಹುಣಸಿನಕೆರೆ ಬಡಾವಣೆ, ೨೯ನೇ ವಾರ್ಡ್, ೩ನೇ ಕ್ರಾಸ್, ಹಾಸನ-೫೭೩೨೦೧. 

ರಂಗ ಪ್ರಯೋಗ”ಭಾರತದ ಪಾಡು ಮುತ್ತುಪಾಡಿಯ ಹಾಡು ಮನಸೆಳೆದ ಸ್ವಾತಂತ್ರ್ಯದ ಓಟ ನಾಟಕ”-ಗೊರೂರು ಅನಂತರಾಜು, ಹಾಸನ. Read Post »

ಇತರೆ, ಲಹರಿ

ಜಯಶ್ರೀ.ಜೆ. ಅಬ್ಬಿಗೇರಿ ಅವರ ಲಹರಿ “ದೊಡ್ಡ ಸಿರಿ – ಹೃದಯ ಸಿರಿ”

ಕಾವ್ಯ ಸಂಗಾತಿ ಜಯಶ್ರೀ.ಜೆ. ಅಬ್ಬಿಗೇರಿ “ದೊಡ್ಡ ಸಿರಿ – ಹೃದಯ ಸಿರಿ” ಒಬ್ಬ ವ್ಯಕ್ತಿ ಅವನ ಗೆಳೆಯನ ಮನೆಗೆ ಬಂದಿದ್ದ. ‘ಈ ಮನೆ ಯಾರದು?’ ಎಂದು ಗೆಳೆಯನಿಗೆ ಕೇಳಿದ. ವ್ಯಕ್ತಿ ಹೇಳಿದ ‘ಇದು ನನ್ನದೇ ಮನೆ ಎಂದು. ಅದನ್ನು ಕೇಳಿದ ಅಡುಗೆ ಮನೆಯಲ್ಲಿದ್ದ ಆ ವ್ಯಕ್ತಿಯ ಪತ್ನಿ ಮುಗುಳುನಗೆಯನ್ನು ಬೀರಿ ಸುಮ್ಮನಾದಳು. ಏಕೆಂದರೆ ಆ ಮನೆಯನ್ನು ಆಕೆಯ ತಂದೆ ಅಂದರೆ ಮಾವ ಕಾಣಿಕೆಯಾಗಿ ನೀಡಿದ್ದ. ಆದ್ದರಿಂದ ಆತನ ಪತ್ನಿ ಮುಗುಳ್ನಗೆ ಬೀರಿ ತನ್ನದೆಂದು ಹೇಳುತ್ತಾನೆ ಹೇಳಲಿ ಎಂದು ಮೌನವಾದಳು. ಹಾಗೆಯೇ ಎಲ್ಲವನ್ನೂ ನಾವು ನಿಸರ್ಗದಿಂದ ಪಡೆದು, ಈ ಮನೆ ನನ್ನದು ಈ ಹೊಲ ನನ್ನದು ಕಣ್ಣಿಗೆ ಕಂಡಿದ್ದೆಲ್ಲ ನನ್ನದು ಎಂದು ಹೇಳುತ್ತೇವೆ. ‘ನಾನು ಆಗರ್ಭ ಶ್ರೀಮಂತ.’ ಎಂದು ಜಂಭದಿoದ ಹೇಳಲು ಮುಂದಾಗುತ್ತೇವೆ. ಇದನ್ನು ಕೇಳಿದ ನಿಸರ್ಗದೇವತೆ ಮರಳು ಮಾನವ ಏನೂ ತಿಳಿಯದೇ ಹೇಳುತ್ತಾನೆಂದು ಮೌನ ವಹಿಸುತ್ತಾಳೆ. ಕೂಡಿಡುವ ಸ್ವಭಾವ ಬರುವಾಗ ಏನೂ ತಂದಿಲ್ಲ ಹೋಗುವಾಗ ಏನೂ ಒಯ್ಯುವುದಿಲ್ಲ ಅಂತ ಗೊತ್ತಿದ್ದರೂ  ಭೂಮಾತೆಯ ಗರ್ಭವನ್ನು ಬಗೆದು ಕಾಡುಗಳನ್ನು ಕಡಿದು ಪ್ರಾಣಿಗಳನ್ನು ತನ್ನ ಲಾಭಕ್ಕೆ ಉಪಯೋಗಿಸಿಕೊಂಡು ಸ್ವಾರ್ಥ ಜೀವನ ನಡೆಸುವ ಪ್ರಕೃತಿ ಮಾತೆ ಮುನಿಸಿಕೊಂಡಾಗ ಮನುಷ್ಯನದ್ದು ಏನೂ ನಡೆಯುವುದಿಲ್ಲ. ಸೃಷ್ಟಿಯಲ್ಲಿರುವ ಯಾವ ಪ್ರಾಣಿಗಳು ತನಗೆ ಹೊಟ್ಟೆ ತುಂಬಿದ ಮೇಲೆ ಯಾವ ಪ್ರಾಣಿಗಳನ್ನು ಭೇಟಿ ಆಡಲು ಹೋಗುವುದಿಲ್ಲ. ತನ್ನ ಗಾತ್ರಕ್ಕಿಂತ ೧೫೦ ಪಟ್ಟು ಜಾಸ್ತಿ ಭಾರವನ್ನು ಹೊರುವ ಇರುವೆ ಸಕ್ಕರೆ ಡಬ್ಬದ ಸುತ್ತ ಸುತ್ತುತ್ತಿದ್ದರೂ ಸಕ್ಕರೆ ಡಬ್ಬಿಯನ್ನು ಹೊತ್ತಯ್ಯುವ ಯೋಜನೆ ಹಾಕುವುದಿಲ್ಲ. ಮಳೆಗಾಲದಲ್ಲಿ ಆಹಾರ ಅಭಾವ ಕಾಡುವುದೆಂದು ಮುಂದಾಲೋಚನೆಯಿoದ ಸಂಗ್ರಹ ಮಾಡುತ್ತದೆ. ಆದರೆ ಮುಂದಿನ ಪೀಳಿಗೆಗೆ ಆಗುವಷ್ಟು  ಬೇಕೆಂದು ದುರಾಸೆಯಿಂದ ಹೆಚ್ಚೆಚ್ಚು ಕೂಡಿಡುವುದಿಲ್ಲ. ಆದರೆ ಮನುಷ್ಯ ಮಾತ್ರ ಬೇಡವಾದಾಗಲೂ ತಿನ್ನುವ, ಅವಶ್ಯಕತೆ ಇಲ್ಲದಿರುವಾಗಲೂ ಕೊಳ್ಳುವ, ತನಗೆ ಎಲ್ಲವೂ ಸಿಗಬೇಕೆನ್ನುವ, ತನ್ನ ಹತ್ತಿರ ಎಲ್ಲವೂ ಅತ್ಯಧಿಕ ಪ್ರಮಾಣದಲ್ಲಿರಬೇಕೆಂದು ಕೂಡಿಡುವ ಸ್ವಭಾವ ಹೊಂದಿದ್ದಾನೆ.   ಹಣವಿದ್ದರೆ? ಅರೆ! ಇದೇನು ಶ್ರೀಮಂತಿಕೆ ಯಾರಿಗೆ ಬೇಡ ಹೇಳಿ ಅಂತಿರೇನು? ಪ್ರತಿಯೊಬ್ಬರೂ ಅದನ್ನು ತಮ್ಮದಾಗಿಸಿಕೊಳ್ಳಬೇಕೆಂದೇ ಹಗಲು ರಾತ್ರಿ ಹಂಬಲಿಸುತ್ತಾರೆ. ಬಹುಶಃ ಅದರ ಹಿಂದೆ ಬೀಳದವರು ಬಹುತೇಕ ಇಲ್ಲವೆಂದರೂ ಅತಿಶಯೋಕ್ತಿ ಏನಲ್ಲ. ಸಿರಿತನ ಒಂದಿದ್ದರೆ ಸಾಕು ಮನದಲ್ಲಿಯ ಬಯಕೆಗಳನ್ನೆಲ್ಲ ಈಡೇರಿಸಬಹುದು. ನಮ್ಮವರಿಗೆ ಏನೇನು ಬೇಕೋ ಅದನ್ನು ಅವರು ಬಾಯಿ ತೆಗೆಯುವ ಮುನ್ನವೇ ಕಣ್ಮುಂದೆ ಹಿಡಿಯಬಹುದು. ನಮ್ಮಲ್ಲಿ ಹಣವಿದ್ದರೆ ಎಲ್ಲ. ಇಲ್ಲದಿದ್ದರೇನೂ ಇಲ್ಲ ಎನ್ನುವ ಮನೋಭಾವ ಬೇರೂರಿ ಬಿಟ್ಟಿದೆ. ಲಕ್ಷ್ಮೀದೇವಿಯ ಮಹಿಮೆಗೆ ಮರಳಾಗದವರು ಯಾರಿದ್ದಾರೆ?  ಹಣವಂತನ ಜೀವನದಲ್ಲಿ ಯಾವ ಸಮಸ್ಯೆಗಳೂ ಇರುವುದಿಲ್ಲ ಎಂಬ ಸುಳ್ಳು ಸಂಗತಿ ಬೇರೆ ತಲೆಯಲ್ಲಿ ಅಚ್ಚಳಿಯದಂತೆ ಅಚ್ಚೊತ್ತಿದೆ. ಶ್ರೀಮಂತಿಕೆ ಶ್ರೀಮoತಿಕೆ ಅನ್ನುವುದು ಗೆಲುವಿನಂತೆ ವ್ಯಾಖ್ಯಾನಿಸುವುದು ಸುಲಭವಲ್ಲ. ಏಕೆಂದರೆ ಒಬ್ಬೊಬ್ಬರು ಒಂದೊoದು ಅರ್ಥ ಕೊಡುತ್ತಾರೆ. ಸಾಮಾನ್ಯವಾಗಿ ಬಹುತೇಕರು ಹೇಳುವುದು ಕೈ ತುಂಬ ಹಣ ಕೈಗೊಂದು ಆಳು ಕಾಲಿಗೊಂದು ಆಳು ಇದ್ದರೆ ಅವರು ಶ್ರೀಮಂತರು. ಮನೆಯಲ್ಲಿ ಲಕ್ಷ್ಮೀ ನೆಲೆಸಿರಬೇಕು. ಸಿರಿ-ಸಂಪತ್ತು ಆಸ್ತಿ ಐಶ್ವರ್ಯ ಹಣಕಾಸಿನ ಸಮೃದ್ಧತೆ ಯಾವುದಕ್ಕೂ ಕೊರತೆ ಇರಬಾರದು. ಲೆಕ್ಕ ಹಾಕದೇ ಖರ್ಚು ಮಾಡುವಷ್ಟು ಹಣವಿರಬೇಕು. ಐಷಾರಾಮಿ ಬದುಕು ಸಾಗಿಸಲು ಯಾವುದೇ ಅಡೆತಡೆ ಇರಬಾರದು. ಏನೇ ಬೇಕಾದರೂ ಕೊಂಡುಕೊಳ್ಳುವ ಶಕ್ತಿ ಇರಬೇಕು. ಬಯಸಿದ್ದನ್ನೆಲ್ಲ ಚಿಟಿಕೆ ಹೊಡೆಯುವಷ್ಟರಲ್ಲಿ ಪಡೆಯವುದು. ಬಂಧು ಬಾಂಧವರ ಮುಂದೆ ನಾವು ಹೆಂಗಿದಿವಿ ನೋಡಿ ಅಂತ ಗರ್ವದಿಂದ ಮೆರೆಯಬೇಕು. ಮಾನದಂಡ ಹೀಗೆ ಶ್ರೀಮಂತಿಕೆಯ ಬಗೆಗೆ ವಿವಿಧ ರೀತಿಯ ಅಭಿಪ್ರಾಯಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ. ಇದನ್ನೆಲ್ಲ ನೋಡಿದಾಗ ಶ್ರೀಮಂತಿಕೆ ಎಂಬುದು ಕೇವಲ ಹಣಕಾಸಿನ ಶ್ರೀಮಂತಿಕೆಯೇ? ಎಂಬ ಪ್ರಶ್ನೆ ಹುಟ್ಟುತ್ತದೆ. ಶ್ರೀಮಂತಿಕೆಯನ್ನು ಅಳೆಯಲು ಹಣಕಾಸಿನ ಒಂದೇ ಒಂದು ಮಾನದಂಡ ಸಾಕೇ? ಎಂಬ ಪ್ರಶ್ನೆಯೂ ಅದರ ಬೆನ್ನ ಹಿಂದೆಯೇ ಹುಟ್ಟಿಕೊಳ್ಳುತ್ತದೆ. ದೈಹಿಕ, ಮಾನಸಿಕ  ಸ್ಥಿತಿಗತಿ ಇವು ಯಾವವೂ ಲೆಕ್ಕಕ್ಕೆ ಬರುವುದಿಲ್ಲವೇ ಎಂಬ ಸಂದೇಹವೂ ಬರುತ್ತದೆ.ಆರೋಗ್ಯ ಸಂಪತ್ತುಮೇಲ್ನೋಟಕ್ಕೆ ಹಣಕಾಸಿನ ಸ್ಥಿತಿಗತಿ ಸಿರಿವಂತಿಕೆಯನ್ನು ನಿರ್ಧರಿಸುತ್ತದೆ ಹೌದಾದರೂ ವಾಸ್ತವವಾಗಿ ಹೇರಳ ಹಣವೊಂದೇ ಶ್ರೀಮಂತಿಕೆಯಲ್ಲ. ಕುಬೇರನ ವಂಶಸ್ತನೇ ಇರಬೇಕು ಎನ್ನುವಷ್ಟು ಶ್ರೀಮಂತಿಕೆ ಇದ್ದರೂ ದೇಹ ರೋಗದ ಗೂಡಾಗಿದ್ದರೆ ಬಯಸಿದ್ದನ್ನು ಬಾಯಿಗೆ ಹಾಕದೇ ಕೊರಗಬೇಕಾಗುತ್ತದೆ. ಕಣ್ಮುಂದೆ ಏನೆಲ್ಲ ಇದ್ದರೂ ತಿನ್ನುವ ಭಾಗ್ಯ ಅವನಿಗಿರುವುದಿಲ್ಲ. ಅವನ ಪಾಲಿಗೆ ಔಷಧಿಯೇ ಆಹಾರ ಇಲ್ಲಿ ನಾನು ಹೇಳ ಹೊರಟಿದ್ದು ಇಷ್ಟೆ  ಹಣದಿಂದ ಔಷಧಿಯನ್ನು ಕೊಳ್ಳಬಹುದು ಆದರೆ ಆರೋಗ್ಯವನ್ನು ಕೊಂಡುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ಹಿರಿಯರು ಹೇಳಿದ್ದು ಆರೋಗ್ಯ ಸಂಪತ್ತಿಗಿoತ ದೊಡ್ಡ ಸಂಪತ್ತಿಲ್ಲವೆoದು.  ಹಣವಿದ್ದೂ , , , , ಹಣಕಾಸಿನ ಅನುಕೂಲತೆ ಇದ್ದು, ಆರೋಗ್ಯ ಚೆನ್ನಾಗಿದ್ದು ಮನಸ್ಸಿಗೆ ನೆಮ್ಮದಿ ಇಲ್ಲದಿದ್ದರೆ ಬದುಕು ಸಾಕ್ಷಾತ್ ನರಕ ದರ್ಶನ. ಹಣದಿಂದ ಒಂದೊಳ್ಳೆ ಹಾಸಿಗೆಯನ್ನು ಕೊಳ್ಳಬಹುದು. ಆದರೆ ನಿದ್ದೆಯನ್ನಲ್ಲ. ಒಳ್ಳೆಯ ಮನೆ ಕೊಂಡುಕೊಳ್ಳಬಹುದು. ಆತ್ಮೀಯರ ಪ್ರೀತಿ ವಿಶ್ವಾಸ ಕೊಂಡುಕೊಳ್ಳಲು ಸಾಧ್ಯವಿಲ್ಲ. ಹಣವಿದ್ದು ಅದನ್ನು ಉಳಿಸುವ ಬೆಳೆಸುವ ಜ್ಞಾನವಿರದಿದ್ದರೆ  ಸಿರಿವಂತಿಕೆ ಅಧೋಗತಿ ಕಾಣುವುದು ಖಂಡಿತ. ಹಣದಿಂದ ಪುಸ್ತಕವನ್ನು ಕೊಳ್ಳಬಹುದೇ ಹೊರತು ಜ್ಞಾನವನ್ನಲ್ಲ. ಇವೆಲ್ಲ ಉದಾಹರಣೆಗಳಿಂದ ತಿಳಿದು ಬರುವುದೇನೆಂದರೆ ಹಣವೊಂದೇ ಸಿರಿವಂತಿಕೆಯಲ್ಲ. ಯಾರಿಗೆ ಯಾವುದು ಇಲ್ಲವೋ ಅದನ್ನು ಪಡೆದುಕೊಳ್ಳಲು ಹೋರಾಡಿ ಪಡೆಯುವುದು ಶ್ರೀಮಂತಿಕೆ. ಕೃಷಿ ಮನುಷ್ಯರಿಗೆ ಹೋಲಿಸಿದರೆ ಲಕ್ಷಾಂತರ ಪಟ್ಟು ಚಿಕ್ಕದಿರುವ ಇರುವೆಯ ಬದುಕಿನಿಂದ ನಾವು ಕಲಿಯಬೇಕಾದ್ದು ಬಹಳ ಇದೆ. ಯಶಸ್ವಿ ಸಹಬಾಳ್ವೆ, ವ್ಯವಸ್ಥಿತ, ಅತ್ಯಂತ ಸಮರ್ಥ ಜೀವನ ಕೌಶಲವನ್ನು ಅಳವಡಿಸಿಕೊಳ್ಳಬೇಕಿದೆ. ಇತ್ತೀಚಿನ ಶೋಧಗಳ ಪ್ರಕಾರ ಪ್ರಸ್ತುತ ಧರೆಯಲ್ಲಿ ಸುಮಾರು ೧೨೦೦೦ ಇರುವೆ ಪ್ರಭೇದಗಳಿವೆ. ೮೦೧ ಕೋಟಿ ಜನರ  ಪ್ರತಿಯೊಬ್ಬರಿಗೂ ಸರಾಸರಿ  ಹನ್ನೆರಡುವರೆ ಲಕ್ಷ ಇರುವೆಗಳು. ಇಷ್ಟು ದೊಡ್ಡ ಸಂಖ್ಯೆಯಲ್ಲಿವೆ. ಈ ಅಲ್ಪಗಾತ್ರದ ಜೀವಿ ಬೆರಗು ಹುಟ್ಟಿಸುವ ಕೌತುಕಗಳಿಂದ ಕೂಡಿದೆ. ಪ್ರಕೃತಿಗೆ ಇರುವೆಗಳಿಂದ ಮಹತ್ತರ ಕೊಡುಗೆಯೂ ಇದೆ. ಇಡೀ ಜೀವಲೋಕದಲ್ಲಿ ಕೃಷಿ ಕೆಲಸ ಕೈಗೊಳ್ಳುವ ಏಕೈಕ ಮನುಷ್ಯೇತರ ಪ್ರಭೇದ ಇರುವೆ ಲೋಕದಲ್ಲಿದೆ. ರೈತ ಇರುವೆ ಎಂದೇ ಹೆಸರಾಗಿರುವ ಈ ಇರುವೆಗಳು ನಿಧಿಷ್ಟ ಸಸ್ಯಗಳ ಎಲೆಗಳನ್ನು ಕತ್ತರಿಸಿ ಸಾಗಿಸಿ ಗೂಡಿನಲ್ಲಿ ರಾಶಿ ಹಾಕುತ್ತವೆ. ಆ ಎಲೆ ರಾಶಿಯ ಮೇಲೆ ವಿಶಿಷ್ಟ ಶಿಲೀಂದ್ರಗಳನ್ನು ಬಿಟ್ಟು ಆಹಾರ ತಯಾರಿಸಿಕೊಳ್ಳುತ್ತವೆ. ಆಧುನಿಕ ಮನುಷ್ಯ ಪ್ರಕೃತಿ ಪ್ರೇಮಿಯಾಗಿ ಬಾಳಬೇಕಿದೆ. ಕಾರಣ ಪರಿಸರ ಸ್ನೇಹಿ ಬದುಕನ್ನು ಬದುಕುವ ಇರುವೆಗಳಂತೆ ನಾವು ಆಪತ್ಕಾಲಕ್ಕೆ ಮಾತ್ರ ಕೂಡಿಡುವ ಸ್ವಭಾವವನ್ನು ಬೆಳೆಸಿಕೊಳ್ಳಬೇಕು. ನಮ್ಮ ಬಳಿ ಎಷ್ಟು ಹಣವಿದೆ ಎಂದು ನಮಗೆ ತಿಳಿರುತ್ತದೆ. ಆದರೆ ನಮ್ಮ ಬಳಿ ಎಷ್ಟು ಸಮಯವಿದೆ ಎಂದು ನಮಗೆ ತಿಳಿದಿಲ್ಲ. ಸಮಯ ಬರುವ ಮುನ್ನ ಶ್ರೀಮಂತಿಕೆಯ ಭ್ರಮೆಯಲ್ಲಿ ಬದುಕುವುದನ್ನು ಬಿಡಬೇಕು. ಜಗತ್ತಿನ ಎಲ್ಲ ಸಮಸ್ಯೆಗಳಿಗೆ ಎಲ್ಲವೂ ನನಗೆ ಬೇಕು ಎಂಬ ಭಾನೆಯೇ ಕಾರಣವಾಗಿದೆ. ಈ ಭಾವ ನಾಶವಾದಾಗ ಮಾತ್ರ ಉತ್ತಮ ಸಮಾಜದ ನಿರ್ಮಾಣ ಸಾಧ್ಯ. ಮನಸ್ಸು ಸುಮಧುರ ಸ್ಥಿತಿಯಲ್ಲಿದ್ದಾಗ ಆರೋಗ್ಯಕರ ಭಾವನೆಗಳು ಹೊರಹೊಮ್ಮುತ್ತವೆ. ದೊಡ್ಡ ಸಿರಿ ಶ್ರೀಮಂತರೆoದು ಅಟ್ಟಹಾಸ ಮೆರೆದವರು ಯಾರೂ ಜನಮಾನಸದ ನೆನಪಿನಲ್ಲಿ ಉಳಿದಿಲ್ಲ. ಹೃದಯ ಸಿರಿವಂತರು ಮಾತ್ರ ಜನರ ಹೃದಯಗಳನ್ನು ಗೆದ್ದಿದ್ದಾರೆ. ಭಾವ ಮಾಧುರ್ಯದ ಶ್ರೀಮಂತಿಕೆಯಿoದ ಕೂಡಿರುವ ಜೀವನ  ಜನಪ್ರಿಯವಾಗುತ್ತದೆ ಎಂಬುದನ್ನು ಮರೆಯುವಂತಿಲ್ಲ. ಸಿರಿವಂತಿಕೆ ಕೇವಲ ಪಡೆಯುವುದರಲ್ಲಿಲ್ಲ. ಅವಶ್ಯವಿರುವವರಿಗೆ ದಾನ ಮಾಡುವುದರಲ್ಲಿದೆ. ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರಲ್ಲಿದೆ. ದ ಮನಗಳನ್ನು ಪೋಣಿಸೋಣ. ಇನ್ನಾದರೂ ಎಚ್ಚೆತ್ತುಕೊಂಡು ಹೃದಯಸಿರಿಯೇ ದೊಡ್ಡ ಸಿರಿಯೆಂದು ಸರಿಯಾಗಿ ತಿಳಿದುಚೂರಾಕೊಂಡು  ಒಬ್ಬರಿಗೊಬ್ಬರು ಅಕ್ಕರೆಯ ಸಕ್ಕರೆಯ ತಿನಿಸುತ್ತ ಮಾನವೀಯತೆಯ ಸಿರಿವಂತಿಕೆಯನ್ನು ಮೆರೆಯೋಣವಲ್ಲವೇ? ಜಯಶ್ರೀ.ಜೆ. ಅಬ್ಬಿಗೇರಿ

ಜಯಶ್ರೀ.ಜೆ. ಅಬ್ಬಿಗೇರಿ ಅವರ ಲಹರಿ “ದೊಡ್ಡ ಸಿರಿ – ಹೃದಯ ಸಿರಿ” Read Post »

ನಿಮ್ಮೊಂದಿಗೆ

ಅನಿತಾ ಕೃಷ್ಣಮೂರ್ತಿ ಕವಿತೆ “ನನ್ನ ಅಮ್ಮ”

ಕಾವ್ಯ ಸಂಗಾತಿ ಅನಿತಾ ಕೃಷ್ಣಮೂರ್ತಿ “ನನ್ನ ಅಮ್ಮ” ನನ್ನೆಲ್ಲಾ ಕನಸುಗಳಿಗೆ ರೆಕ್ಕೆ ಕಟ್ಟಿ,ರಾಶಿ ರಾಶಿ ಪ್ರಯತ್ನಗಳು ಫಲಿಸಲೆಂದು ದೇವರಲ್ಲಿ ಹರಕೆ ಹೊತ್ತು,ಉಪವಾಸ–ವ್ರತ ಮಾಡಿ ನನ್ನ ಬದುಕನ್ನು ಸಾರ್ಥಕತೆಯ ದಾರಿಯತ್ತ ದೂಡಿದಳು…ಅವಳು ನನ್ನ ಅಮ್ಮ  ಅವಳ ಪ್ರಾರ್ಥನೆಗಳಲ್ಲಿ ನನ್ನ ಭವಿಷ್ಯ ಇತ್ತು,ಅವಳ ತ್ಯಾಗಗಳಲ್ಲಿ ನನ್ನ ಯಶಸ್ಸು ಇತ್ತು,ಅವಳ ನಂಬಿಕೆಯಲ್ಲಿ ನನ್ನ ಜೀವನದ ಬೆಳಕು ಇತ್ತು… ಸೋತಾಗ ಸೋಲಿಗೆ ಹೆದರಿ,ಖಿನ್ನತೆಯತ್ತ ಮುಖ ಮಾಡಿ ನರಳಲುಬಾನೆತ್ತರ ಭರವಸೆ ತುಂಬಿ,ತೂಗಾಡುವ ಮಂಚದಲ್ಲಿರಿಸಿ,ತೊಡೆಯ ಮೇಲೆ ಮಲಗಿಸಿ,ಮಮತೆಯ ಸ್ಪರ್ಶದಿಂದ ಹುರಿದುಂಬಿಸಿದಳು…ಅಮ್ಮ.  ಹೇಗೆ ತೀರಿಸಲಿ ಋಣವ,ಮತ್ತೊಮ್ಮೆ ಮಗುವಾಗಿ ಜನ್ಮವೆತ್ತಲೇ…ಅವಳಿಗೇ ತಾಯಿಯಾಗಿ ಮಡಿಲಾಗಲೇ,ಅಕ್ಕನಾಗಿ ಅಪ್ಪುಗೆಯ ಕೊಡಲೇ,ತಂಗಿಯಾಗಿ ತುಂಟಾಟವಾಡಲೇ,ಯಾವ ಬಂಧವಾಗಿ ಬಂದರೂ ಸರಿ,ಅವಳ ಪ್ರೀತಿಯ ನೆರಳಲ್ಲಿ ಮತ್ತೆ ಬದುಕಲೇ…  ಸರಿ ಸಾಟಿ ಯಾರಿಹರು ಆ ಕರುಣೆಗೆ,ದೇವರಿಗಿಂತ ಹೆಚ್ಚಾದ ಜೀವಕೆ…ನೋವನ್ನೆಲ್ಲ ನಗುವಿನಲ್ಲಿ ಮರೆಮಾಚಿ,ತನ್ನ ಕನಸುಗಳನ್ನೇ ತ್ಯಾಗಮಾಡಿ,ನಮ್ಮ ಬದುಕಿಗೆ ಬೆಳಕಾದ ಮಹಾತಾಯಿಗೆ…ಈ ಜನ್ಮ ಸಾಲದು ಕೃತಜ್ಞತೆ ಸಲ್ಲಿಸಲು…  ಅನಿತಾ ಕೃಷ್ಣಮೂರ್ತಿ      

ಅನಿತಾ ಕೃಷ್ಣಮೂರ್ತಿ ಕವಿತೆ “ನನ್ನ ಅಮ್ಮ” Read Post »

ligade
ಅಂಕಣ ಸಂಗಾತಿ, ಜಯದೇವಿ ತಾಯಿ ಲಿಗಾಡೆ ಜೀವನ

ಧಾರಾವಾಹಿ ಸಂಗಾತಿ-22 ಸವಿತಾ ದೇಶಮುಖ ಜಯದೇವಿ ತಾಯಿ ಲಿಗಾಡೆ ಜೀವನಗಾಥೆ ಕರ್ನಾಟಕ ಏಕೀಕರಣ ಮತ್ತು ಕನ್ನಡ ಸಾಹಿತ್ಯಕ್ಕೆ ಗಣನೀಯ ಕೊಡುಗೆ ನೀಡಿದ ಮಹಾನ್‌ ಚೇತನ ಜನ ಸೇವೆಯೇ ಜೀವನದ ಧ್ಯೇಯವಾಗಿದ್ದ ಜಯದೇವಿ ತಾಯವರ ಜೀವನವು ತ್ಯಾಗ, ಸೇವೆ ಮತ್ತು ಮಾತೃತ್ವದ ಅದ್ಭುತ ಸಂಗಮ.ಅವರು ತಮ್ಮ ವೈಯಕ್ತಿಕ ಸುಖದುಃಖಗಳನ್ನು ಮರೆತು ಸಮಾಜದ ಒಳಿತಿಗಾಗಿ ಸದಾ ಶ್ರಮಿಸುತ್ತಿದ್ದರು. ಕುಟುಂಬದ ಜವಾಬ್ದಾರಿ ಹೊತ್ತು ಮಕ್ಕಳನ್ನು ಪ್ರೀತಿಯಿಂದ ಸಾಕಿ ಸಲಹುತ್ತಾ….. ಬಡವರು, ನಿರ್ಗತಿಕರು ಹಾಗೂ ಸಹಾಯದ ನಿರೀಕ್ಷೆಯಲ್ಲಿದ್ದ ಜನರಿಗೆ ಆಶಾಕಿರಣವಾಗಿದ್ದರು. ಪತಿಯ ವಿಯೋಗದ ನಂತರ ಜೀವನದ ಭಾರ ಇನ್ನಷ್ಟು ಹೆಚ್ಚಾದರೂ ಅವರು ಎಂದಿಗೂ ಕುಗ್ಗಲಿಲ್ಲ…ಐದು ಮಕ್ಕಳನ್ನು ಬೆಳೆಸಿ ಅವರಿಗೆ ಉತ್ತಮ ಸಂಸ್ಕಾರ, ಶಿಕ್ಷಣ ಮತ್ತು ಜೀವನ ಮೌಲ್ಯಗಳನ್ನು ಕಲಿಸುವ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದರು. ಮಕ್ಕಳ  ಮನಸ್ಸುಗಳಲಿ ಪ್ರೀತಿ, ಕರುಣೆ ಮತ್ತು ಮಾನವೀಯತೆಯತೆ ತುಂಬಿಸಿದರು. ತಾಯಿಯವರ ಮನೆ ಎಂದರೆ…. ನೆರವು ಕೇಳಿ ಬರುವವರಿಗೆ ಸದಾ ತೆರೆದ ಬಾಗಿಲಾಗಿತ್ತು. ಹಸಿದವರಿಗೆ ಅನ್ನ, ಸಂಕಷ್ಟದಲ್ಲಿರುವವರಿಗೆ ಧೈರ್ಯ, ನಿರಾಶೆಯಲ್ಲಿರುವವರಿಗೆ ಆಶ್ವಾಸನೆ ನೀಡುವುದು ಅವರ ಸಹಜ ಗುಣವಾಗಿತ್ತು. ಊರಿನಲ್ಲಿ ಯಾರಿಗಾದರೂ ಕಷ್ಟ ಬಂದರೆ ಮೊದಲು ನೆನಪಾಗುತ್ತಿದ್ದ ಹೆಸರು ಜಯದೇವಿ ತಾಯಿಯವರದ್ದೇ.ತಮ್ಮ ಮಕ್ಕಳಿಗೆ  ತಮ್ಮ ಜೀವನದ ಮೂಲಕವೇ ಪಾಠ ಕಲಿಸಿದರು. “ಮನುಷ್ಯನ ಬದುಕಿನ ನಿಜವಾದ ಅರ್ಥ ಇನ್ನೊಬ್ಬರ ಕಣ್ಣೀರು ಒರೆಸುವುದರಲ್ಲಿ ಇದೆ” ಎಂಬ ಸಂದೇಶವನ್ನು ತಮ್ಮ ನಡೆನುಡಿಗಳ ಮೂಲಕ ತೋರಿಸಿದರು. ಮಕ್ಕಳಲ್ಲು ಕೂಡ ಸೇವಾಭಾವವನ್ನು ಜೀವನದ ಮೌಲ್ಯವಾಗಿ ಅಳವಡಿಸಿದರು. ಅವರ ಜೀವನ  ಶಕ್ತಿಯ, ಸಹನೆಯ ಮತ್ತು ನಿಸ್ವಾರ್ಥ ಪ್ರೀತಿಯ ಮಹಾಕಾವ್ಯ. ತಮ್ಮ ಜೀವನದ ಪ್ರತಿಯೊಂದು ಕ್ಷಣವನ್ನು ಕುಟುಂಬ ಮತ್ತು ಸಮಾಜದ ಒಳಿತಿಗಾಗಿ ಅರ್ಪಿಸಿದ ಅವರು ನಿಜಕ್ಕೂ “ತಾಯಿ” ಎಂಬ ಪದಕ್ಕೆ ಅರ್ಥ ತುಂಬಿದ ಮಹನೀಯರು. *ಬೇಡಿಲ್ಲ ಫಲ ಪದವಿ |ಬೇಡಿಲ್ಲ ಸ್ಥಾನಮಾನಬೇಡಿಲ್ಲ ಮಂತ್ರಿ ತಂತ್ರಿಯಾಗಲು -ಜಯದೇವಿತಾಯಿ ಆದಳು ಕನ್ನಡದ* || ಎನ್ನುವಂತೆ ಕನ್ನಡದ ತಾಯಿಯಾಗಿ ನಿಸ್ಸಹಾಯಕರ ಬಂಧುವಾಗಿ,ತಮ್ಮ ಮಕ್ಕಳಿಗೆ ನೆರಳಾಗಿ ನಿಂತ ತಾಯಿ, ಸಮಾಜದ ನೋವಿಗೆ ಮದ್ದಾಗಿ ಬದುಕಿದ ತಾಯಿ!!!!,  ಇನ್ನೂ ಜಯದೇವಿ ತಾಯಿಯವರ ಮೂರನೇ ಮಗ *ಬಸವರಾಜ* ಚಿಕ್ಕಂದಿನಿಂದಲೇ ಎಲ್ಲರಲ್ಲೂ ವಿಭಿನ್ನವಾಗಿದ್ದರು. ಮನೆಯಲ್ಲಿದ್ದ ಇತರ ಮಕ್ಕಳಂತಲ್ಲ…..ಮಗುವಾಗಿದ್ದಾಗ ಶಾಂತವಾಗಿ ಮಲಗಿರುತ್ತಿದ್ದರು ಹಸಿವೆ ಆದಾಗ ಮಾತ್ರ ಅಳುತ್ತಿದ್ದರು ಹೀಗಾಗಿ ತಾಯಿಯವರಿಗೆ ಹೆಚ್ಚಾಗಿ ಮಗನ ಕಾಳಜಿ ಮಾಡದು ಬೇಕಾಗಿ ಬರಲಿಲ್ಲ ಅಂತ ಹೇಳುತಿದ್ದರು. ಡಾ. ಬಸವರಾಜ್ ಲಿಗಾಡಿ ಮಧ್ಯದಲ್ಲಿ ಲಲ್ಲೇಶ್ವರಿ ತಾಯಿ, ಬಸವರಾಜರ ಧರ್ಮಪತ್ನಿ ಡಾ. ಮಧುಮಾಲ ಇತರರಂತೆ ಗಲಾಟೆ, ಹಠ, ಆಟ-ಪಾಟಗಳಲ್ಲಿ ಮುಳುಗದೆ ಶಾಂತವಾಗಿದ್ದರು. ಅವರ ಕಣ್ಣುಗಳಲ್ಲಿ ಒಂದು ವಿಚಿತ್ರ ಶಾಂತಿ ಇತ್ತು. ಮುಖದಲ್ಲಿ ಸದಾ ಮೃದುವಾದ ನಗು. ತಾಯಿಯವರು ಎಷ್ಟೇ ದುಃಖದಲ್ಲಿದ್ದರೂ ಬಸವರಾಜನ ಆ ಶಾಂತ ವದನವನ್ನು ನೋಡಿದ ಕ್ಷಣ ಮನಸ್ಸಿಗೆ ಒಂದು ನೆಮ್ಮದಿಗೆ ಇಳಿಯುತ್ತಿದ್ದರು. ಮನೆಯಲ್ಲಿ ಯಾರಿಗಾದರೂ ನೋವಾದರೆ ಮೊದಲಿಗೆ ಓಡಿ ಹೋಗಿ “ಏನಾಯ್ತು?” ಎಂದು ಕೇಳುವ ಕರುಣೆ ಅವರೋಳಗೆ ಬೆಳೆದಿತ್ತು.  ಚಿಕ್ಕವರಿದ್ದಾಗಲೇ “ನಾನು ದೊಡ್ಡವನಾದ ಮೇಲೆ ಡಾಕ್ಟರ್ ಆಗಬೇಕು… ನೋವಿನಲ್ಲಿರುವ ಮಕ್ಕಳನ್ನು ಉಳಿಸಬೇಕು…” ಎಂದು ತಾಯಿಯವರ ಬಳಿ ಹೇಳುತ್ತಿದ್ದ. ಅವರ ಆಟಿಕೆಯ ಸಾಮಾನುಗಳೆಂದರೆ ಇಂಜೆಕ್ಷನ್ ತೆತಸ್ಕೋಪ್ಗಳೇ ಆಗಿದ್ದವು ಅಂತ ತಾಯಿಯವರು ಹೇಳುತ್ತಿದ್ದರು.ನಾವು ಬಯಸಿದ್ದನ್ನೇ ಮುಂದೆ ಆಗುತ್ತೇವೆ ಅನ್ನುವದು‌ ಬಲು ಸತ್ಯ ಎನ್ನುವರು!!…..ಸಕಾರಾತ್ಮಕವಾಗಿ ಅಥವಾ ನಕಾರಾತ್ಮಕತೆಯಿಂದಾಗಲಿ ನಾವು ಏನನ್ನು ಬಯಸುತ್ತೇವೋ ಜೀವನದಲ್ಲಿ ಅದೇ ಆಗುವದು ಅನ್ನುವ ಸ್ಥಿತಿ ಗತಿಗಳ ‌ಬಗ್ಗೆ ಹೇಳುಲು.. ಈ ಉದಾಹರಣೆಯನ್ನು ಹೇಳುತ್ತಿದ್ದರು. ಬಸವರಾಜರು ಬೆಳೆದಂತೆ , ವೈದ್ಯಕೀಯ ಶಿಕ್ಷಣಕ್ಕೆ ಸೇರಿದರು..ಆ ದಿನ ತಾಯಿಯವರು ಸಂತೋಷದಿಂದ  “ನನ್ನ ಮಗ ಇನ್ನು ಜೀವ ಉಳಿಸುವ ದೇವರ ಕೈ ಆಗ್ತಾನೆ” ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದರು. ಡಾ. ಬಸವರಾಜರ ಇನ್ನೋರ್ವ ಪತ್ನಿ ಮಧ್ಯದಲ್ಲಿ ಶೈಲಜಾ  ಮುಂದೆ ಬಸವರಾಜ ಮಕ್ಕಳು ಆಗದವರಿಗೆ ಉಪಚಾರವನ್ನು ಮಾಡಲಾರಂಭಿಸಿದರು. ಬಂಜೆತನ ನಿವಾರಣೆ ತಜ್ಞರಾದರು. *ನುಡಿಗಳ ಸ್ಮರಿಸುವೆ| ನಡೆಯಲಿ ಅಳವಡಿಸಿ ಎಡವಿದರೆ ಕೈಹಿಡಿದೆತ್ತು – ಹಡೆದವ್ವದಡೆಗೆ ಕರೆದೊಯ್ಯೇ ಮಗುವಿಗೆ*||ಎನ್ನುವ  ಮನೋಭಾವವನ್ನು ಬಸವರಾಜರು ಹೊಂದಿದ್ದರುಅಂತೇಯೇ ಜಯದೇವಿ ತಾಯಿಯವರ ವೃದ್ಧಾಪ್ಯದಲ್ಲಿ ಬಸವರಾಜರು ನೆರಳಾಗಿ ನಿಂತರು. ತಾಯಿಯವರಿಗೆ ನೋವಾಗದಂತೆ ಪ್ರತಿಯೊಂದು ಹೆಜ್ಜೆಯಲ್ಲೂ ಕಾಳಜಿ ವಹಿಸಿದರು. ರಾತ್ರಿ ಎಷ್ಟೇ ಕೆಲಸ ಇದ್ದರೂ ತಾಯಿಯ ಕೋಣೆಗೆ ಹೋಗಿ “ಅಮ್ಮ ಆರೋಗ್ಯ ಹೇಗಿದೆ?” ಎಂದು ಕೇಳದೇ ನಿದ್ರೆ ಮಾಡುತ್ತಿರಲಿಲ್ಲ. *ಹೊತ್ತು ಇಳಿಯುತಿದ್ದಂತೆ |ಗೊತ್ತು ಗುರಿಕಾಣು ಮತ್ತೆ ಹುಟ್ಟಿ ಬರದು- ಜನುಮಹೆತ್ತವ್ವನ ಬಿಡದೆ ಜಪಿಸು* ||ಎನ್ನುವಂತೆ ತಾಯಿಯವರ ಕೊನೆಯ ದಿನಗಳಲ್ಲಿಯೂ ಬಸವರಾಜ ಅವರ ಕೈ ಹಿಡಿದುಕೊಂಡೇ ಇದ್ದರು. ಮಗನ ಆ ಮಮತೆಯ ಸ್ಪರ್ಶದಲ್ಲಿ ಜಯದೇವಿ ತಾಯಿಯವರು ತಮ್ಮ ಜೀವನದ ಎಲ್ಲಾ ಹೋರಾಟಗಳಿಗೂ ಅರ್ಥ ಸಿಕ್ಕಂತಾಗಿತ್ತು. *ತಾಯಿಯೇ ದೇವರು| ತಾಯಿಯೇ ಗುರಿತಾಯಿ ಕಲಸಿದರು ನಡೆ ನುಡಿ -ಚೆನ್ನಆಯಿತು ಅದು ಮುಕ್ತಿಯ ಧಾಮ *|| ಎನ್ನುವಂತೆ ಬದುಕಿದವರು ಲಲ್ಲೇಶ್ವರಿ ತಾಯಿಯವರು (ನನ್ನ ತಾಯಿ) ತಾಯಿಯವರ ನೆರಳಲಿ ಬದುಕಿದ ಬಾಳಿದ ಮಗಳ ಮಹಾ ಸೇವೆಯ ಬಗ್ಗೆ ಜಯದೇವಿ ತಾಯಿಯವರು ಎಲ್ಲರೆದು ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದರು. ಅವರ ಉಸಿರಾಗಿ, ಅವರ ಹೆಜ್ಜೆಯ ಮೇಲೆ ಹೆಜ್ಜೆ ಹಾಕುತ್ತ ಬದುಕಿದವರು ಕೊನೆಯ ಮಗಳು ಲಲ್ಲೇಶ್ವರಿ ತಾಯಿ. ತಾಯಿಯಲ್ಲಿಯೇ ತಮ್ಮ ಲೋಕವನ್ನು ಕಂಡವರು. *ಅಂದಾಜು ಮೃದ ನುಡಿ |ಚಂದಾದ ಮುಖಮಂದಿರ ಮಂದಮತಿಗೆ -ಲಭಿಸಿ ಸೇವೆಮಾತಾಯಿ ಎಂದೆಂದೂ ಬಿಡೇನು ಪಾದ*|| ಎನ್ನುತ ಲಲ್ಲೇಶ್ವರಿಯವರಿಗೆ ತಾಯಿಯ ಒಂದು ಕಣ್ಣೋಟ ಸಾಕು, ಅವರ ಮನದ ಮಾತನ್ನು ಅರಿಯುತ್ತಿದ್ದರು.  ಏನನ್ನೂ ಕೇಳುವ ಮುನ್ನವೇ ಅವರ ಅವಶ್ಯಕತೆಗಳನ್ನು ಪೂರೈಸುತ್ತಿದ್ದರು. ತಾಯಿಯವರ ನಗು ಅವರ ಸಂತೋಷವಾಗಿತ್ತು; ಅವರ ನೋವು ಅವರ ಹೃದಯದ ನೋವಾಗಿತ್ತು. ಹಗಲು ರಾತ್ರಿ ಎನ್ನದೆ, ಸುಖ ದುಃಖ ಎನ್ನದೆ, ತಮ್ಮ ಬದುಕನ್ನೇ ತಾಯಿಯ ಸೇವೆಗೆ ಅರ್ಪಿಸಿಕೊಂಡಿದ್ದರು. *ತನು ಮನದ ಸೇವೆ| ಉಸಿರಿರುವ ತನಕಬೇಸರವಿಲ್ಲ ಕಿಂಚಿತ್ತ -ಹಡೆದವ್ವಉಸಿರು ಹಾಕಲಾರೆ ಕಡೆ ತನಕ* || ಎನ್ನುತ್ತಿದ್ದರು ನನ್ನ  ತಾಯಿ ಲಲ್ಲೇಶ್ವರಿಯವರುತಾಯಿಯವರು. ಪ್ರತಿ ಘಳಿಗೆಯಲ್ಲೂ ಅವರ ಕೈ ಹಿಡಿದು ನಡೆಸುತ್ತಿದ್ದರು. ತಾಯಿಯವರು ಆಯಾಸಗೊಂಡಾಗ ತಮ್ಮ ಮಡಿಲನ್ನೇ ಆಸರೆಯನ್ನಾಗಿ ಮಾಡುತ್ತಿದ್ದರು. ತಾಯಿಯವರ ಆರೋಗ್ಯದಲ್ಲಿ ಏರಿಳಿತಗಳು ಬಂದಾಗ, ಅವರ ಕಣ್ಣಲ್ಲಿ ನಿದ್ರೆ ಇರುತ್ತಿರಲಿಲ್ಲ… ಒಂದೇ ಸಮನೆ ದೇವರಲ್ಲಿ ತಾಯಿಗೆ ನೋವು ಕೊಡಬೇಡವೆಂದು  ಬೇಡಿಕೊಳ್ಳುತ್ತಿದ್ದರು. *ಅರೆ ನಿಮಿಷ ಬಿಟ್ಟಿಲ್ಲ |ನೆರಳಾಗಿ ಬೆಳೆದೆವುಬೇರೆ ಸ್ವತಂತ್ರ ಪಡೆದಿಲ್ಲ -ತಾಯಿಯಹರಣ ಒಂದು ದೇಹವೆರಡು*|| ಎನ್ನುವಂತೆ ಲಲ್ಲೇಶ್ವರಿಯವರು ತಾಯಿ ಇಲ್ಲದೆ ಒಂದು ಕ್ಷಣವೂ ಬದುಕಿರಲಾರಿ ಅನ್ನುವ ಸ್ಥಿತಿಯಲ್ಲಿ ಅವರು ಬದುಕುತ್ತಿದ್ದರು.ತಾಯಿಯವರ ಕೊನೆಯ ದಿನಗಳಲ್ಲಿ ಲಲ್ಲೇಶ್ವರಿ ತಾಯಿಯವರ ಸೇವೆ ಇನ್ನಷ್ಟು ಅಪೂರ್ವವಾಯಿತು. ಅವರು ಮಗಳಾಗಿ , ತಾಯಿಗೆ ತಾಯಿಯಾಗಿ ಮಗುವನ್ನು ನೋಡಿಕೊಳ್ಳುವಂತೆ ಮಮತೆಯಿಂದ ಜಯದೇವಿ ತಾಯಿಯವರನ್ನು ನೋಡಿಕೊಂಡರು. ಔಷಧಿ ನೀಡುವುದರಿಂದ ಹಿಡಿದು, ಊಟ ಮಾಡಿಸುವವರೆಗೂ, ರಾತ್ರಿ ನಿದ್ರೆಯಲ್ಲೂ ಎಚ್ಚರವಿದ್ದು ಅವರ ಆರೋಗ್ಯವನ್ನು ಗಮನಿಸುತ್ತಿದ್ದರು. *ಅಹೋರಾತ್ರಿ ನೆನೆದೆ| ಮಹಾತಾಯಿ ಸೇವೆಇಹಪರವ ಗೆಲಿದೆ ಕಟಾಕ್ಷ -ಸೇವೆಯಲಿಗೆಲಿದೆ ಜನನ ಮರಣವನು* ||ಎನ್ನುತ್ತಿದ್ದರು ಲಲ್ಲೇಶ್ವರಿಯವರು. ಇಲ್ಲಿ ಜಯದೇವಿ ತಾಯಿಯವರು ಒಂದು ಘಟನೆಯನ್ನು ಯಾವಾಗಲೂ ನೆನಪಿಸುತ್ತಿದ್ದರು . ಆಗ ಲಲ್ಲೇಶ್ವರಿ ಅವರಿಗೆ ಕೇವಲ ಮೂರು ಅಥವಾ ನಾಲ್ಕು ವರ್ಷಗಳಿರಬಹುದು…..ಜಯದೇವಿ ತಾಯಿಯವರ ಆರೋಗ್ಯ ಹುಷಾರಿಲ್ಲದೆ ಹಾಸ್ಪಿಟಲ್ ನಲ್ಲಿ ಅಡ್ಮಿಟ್ ಆದ  ದಿನಗಳಲ್ಲಿ ನಡೆದ ಈ ಘಟನೆ ಕೇಳಿದರೆ ಹೃದಯವೂ ಕರಗುತ್ತದೆ.ಆಸ್ಪತ್ರೆಯ ಹಾಸಿಗೆಯ ಮೇಲೆ ಜಯದೇವಿ ತಾಯಿಯವರು ಅಸಹನೀಯ ನೋವಿನಿಂದ ನರಳುತ್ತಿದ್ದರು. ದೇಹದ ಯಾತನೆ ಹೆಚ್ಚಾದಾಗ  ಆ ಕ್ಷಣದಲ್ಲಿ  ತಮ್ಮನ್ನು ತಾವು ಮರೆತು, ಪುಟ್ಟ ಮಗುವಿನಂತೆ,“ಅವ್ವಾ… ಅವ್ವಾ…”ಎಂದು ತಮ್ಮ ಜನ್ಮದಾತೆಯನ್ನು ಕರೆಯುತ್ತಿದ್ದರು. ಆ ಕರೆಯಲ್ಲಿ ನೋವಿತ್ತು, ಹಂಬಲವಿತ್ತು, ತಾಯಿಯ ಮಡಿಲಿಗಾಗಿ ಹಾತೊರೆಯುವ ಮಗುವಿನ ಹೃದಯವಿತ್ತು. ಆ ದೃಶ್ಯವನ್ನು ಕಂಡ ಲಲ್ಲೇಶ್ವರಿಯವರ ಹೃದಯ ಕರಗಿತು. ಆ ಕ್ಷಣದಲ್ಲಿ  ತಾಯಿಯಾಗಿ ನಿಂತರು..ತನ್ನ ತಾಯಿಯ ಕಣ್ಣೀರನ್ನು ಒರೆಸುತ್ತಾ, ತಲೆಯನ್ನು ಮೃದುವಾಗಿ ಸವರುತ್ತಾ, ಮೂರು ವರ್ಷದ ಮಗುವೊಂದು ತನ್ನ ತಾಯಿಯನ್ನು ಸಮಾಧಾನಪಡಿಸಲು ಮುಗ್ಧತೆಯಿಂದ,“ಅವ್ವಾ, ಅಳಬೇಡ. ನಿನ್ನ ತಾಯಿ ಬರುವವರೆಗೂ ನಾನೇ ನಿನ್ನ ತಾಯಿಯಾಗಿರುತ್ತೇನೆ. ಏನು ಬೇಕಾದರೂ ನನಗೆ ಹೇಳು…”ಎಂದು ಹೇಳಿದರು.ಆ ಮಾತು ಕೇಳಿದಾಗ ಅಲ್ಲಿ ಇದ್ದವರ ಕಣ್ಣುಗಳಲ್ಲೂ ನೀರು ತುಂಬಿತು…. ಸಂಬಂಧಗಳೆಲ್ಲ ತಲೆಕೆಳಗಾಗಿದ್ದವು. ತಾಯಿ ಮಗುವಾಗಿದ್ದರು,ಮಗಳು ತಾಯಿಯಾಗಿದ್ದರು.ಲಲ್ಲೇಶ್ವರಿ ತಾಯಿಯವರು ತಮ್ಮ ಕೈಯಿಂದ ನೀರು ಕುಡಿಸಿದರು. ನೋವಿನಿಂದ ನಲುಗಿದ್ದ ತಾಯಿಯ ಬೆವರನ್ನು ಒರೆಸಿದ್ದರು. ಅಂದಿನ‌ದಿನದಿಂದ ಕೊನೆಯ ದಿನ ವರೆಗೂ ತಾಯಿಯಾಗಿಯೇ ಅವರು ಜಯದೇವಿ ತಾಯಿಯವರಿಗೆ ಆಸರೆಯಾದರು.ಅವರ ಪ್ರತಿಯೊಂದು ಸ್ಪರ್ಶದಲ್ಲೂ ಮಮತೆಯಿರುತಿತ್ತು.ಪ್ರತಿಯೊಂದು ಮಾತಿನಲ್ಲೂ ಧೈರ್ಯವಿತ್ತು,  ಸೇವೆಯಲ್ಲೂ ಭಕ್ತಿಯಿತ್ತು.ಒಂದು ಸಮಯದಲಿ ಜಯದೇವಿ ತಾಯಿಯವರು ಲಲ್ಲೇಶ್ವರಿಯನ್ನು ಮಡಿಲಲ್ಲಿ ಹೊತ್ತು ಬೆಳೆಸಿದ್ದರು. ಈಗ ಕಾಲಚಕ್ರ ತಿರುಗಿ, ಲಲ್ಲೇಶ್ವರಿಯವರೇ ಜಯದೇವಿ ತಾಯಿಯವರನ್ನು ಮಮತೆಯ ಮಡಿಲಲ್ಲಿ ಹೊತ್ತುಕೊಂಡಿದ್ದರು. *ತನು ಸವಿಸಿ ಸೇವೆಯಲ್ಲಿ| ಮನನಿಲಿಸಿ ಧ್ಯಾನದಿ ತನುಮನ ಒಂದಾಗಿ ದುಡಿಸಿದೆ -ನನ್ನವ್ವನಾನೆಂಬುದು ಅಳಿದು ನೀನಾದೆ*|| ತಾಯಿಯ ನೋವನ್ನು ತಮ್ಮ ನೋವನ್ನಾಗಿ, ತಾಯಿಯ ಕಣ್ಣೀರನ್ನು ತಮ್ಮ ಕಣ್ಣೀರನ್ನಾಗಿ, ಪ್ರತಿ ಉಸಿರಿನ  ಪ್ರಾರ್ಥನೆಯಾದರು. *ಕಡೆತನ ಭಂಗ |ಬರದೇ ಅಡಿಗಡಿಗೆ ಎಚ್ಚರಬಿಡದಂತೆ ತವ ಸೇವೆ -ನನ್ನವ್ವಮೂಡಿಗೆ ಧರಿಸಿರಿ ತವ ಪಾದ*|| ಜನ್ಮ ನೀಡಿದ ತಾಯಿಗೆ ಮರಳಿ ತಾಯಿಯಾಗುವ ಭಾಗ್ಯ ಕೆಲವೇ ಆತ್ಮಗಳಿಗೆ ಸಿಗುತ್ತದೆ.  ಅಪರೂಪದ ಭಾಗ್ಯವನ್ನು ಲಲ್ಲೇಶ್ವರಿ ತಾಯಿಯವರು ತಮ್ಮ ಪ್ರೀತಿ, ಸೇವೆ ಮತ್ತು ತ್ಯಾಗದ ಮೂಲಕ ಸಾರ್ಥಕಗೊಳಿಸಿದರು. ಜಯದೇವಿ ತಾಯಿಯವರ ಕೊನೆಯ ದಿನಗಳಲ್ಲಿ ಮಮತೆಯ ಮೂರ್ತಿ, ಸೇವೆಯ ಮಗಳಾಗಿ,  ತಾಯಿಯ ಬದುಕಿನ  ಆಶ್ರಯವಾಗಿದ್ದರು. ಅವರ ಜೀವನವನ್ನು ನೋಡಿದಾಗ, “ಮಗಳು ಎಂದರೆ ಕೇವಲ ಜನ್ಮ ನೀಡಿದ ಸಂತಾನವಲ್ಲ….ತಾಯಿಯ ಹೃದಯದ ತುಂಡು” ಎಂಬ ಮಾತು ನೆನಪಾಗುತ್ತದೆ.ತಾಯಿಯವರ ಜೀವನದ ಕೊನೆಯ ಕ್ಷಣಗಳಲ್ಲೂ ಲಲ್ಲೇಶ್ವರಿ ತಾಯಿಯವರ ಕಾಳಜಿ ಮತ್ತು ಸೇವೆ ಗಂಗೆಯಂತೆ ನಿರಂತರವಾಗಿ ಹರಿಯುತ್ತಿತ್ತು… ಅಪಾರ ಪ್ರೀತಿ, ಭಕ್ತಿ ಮತ್ತು ಕೃತಜ್ಞತೆಯಿಂದ ಮೂಡಿದ ಅಮೃತಧಾರೆ.*ನೀನಿಲ್ಲದ ತಾಣ |ಇಲ್ಲ ಇನ್ನೆಲ್ಲಿನೀನೆ ತುಳುಕಿರುವೆ ಒಳ ಹೊರಗೆ -ತಾಯವ್ವನಾನು ನೀನು ಬೆರೆತು ಒಂದಾಗಿ*|| ಎನ್ನುವಂತೆ ಜಯದೇವಿ ತಾಯಿಯವರು  ಮತ್ತು ಲಲ್ಲೇಶ್ವರಿ ತಾಯಿಯವರ ನಡುವಿನ ಬಾಂಧವ್ಯ ಸಾಮಾನ್ಯ ತಾಯಿಮಗಳ ಸಂಬಂಧವಾಗಿರಲಿಲ್ಲ. ಅದು ಎರಡು ದೇಹಗಳಲ್ಲಿ ನೆಲೆಸಿದ್ದ ಒಂದೇ ಆತ್ಮದ ಪ್ರೀತಿಯಾಗಿತ್ತು. ಕೊನೆಯ ದಿನಗಳಲ್ಲಿ ಜಯದೇವಿ ತಾಯಿಯವರ ಆರೋಗ್ಯ ಹದಗೆಟ್ಟ ದಿನಗಳಲ್ಲಿ ವೈದ್ಯರು, ಸಿಬ್ಬಂದಿ ಮತ್ತು ಅವರ ಹತ್ತಿರದವರು ಒಂದು ವಿಷಯವನ್ನು ಗಮನಿಸಿದ್ದರು. ಲಲ್ಲೇಶ್ವರಿ ತಾಯಿಯವರ ಜೀವನವೇ ಜಯದೇವಿ ತಾಯಿಯವರ ಸುತ್ತ ಸುತ್ತುತ್ತಿತ್ತು. .ಆ ಕಾರಣದಿಂದಲೇ ತಾಯಿಯವರ ಸ್ಥಿತಿಯನ್ನು ಕಂಡ ವೈದ್ಯರು ಕೂಡ ಒಂದು ತುರ್ತು ಸಭೆ ಕರೆದು“ತಾಯಿಯವರ ಬಗ್ಗೆ ನಮ್ಮ ಕಾಳಜಿ ಎಷ್ಟಿದೆಯೋ, ಅಷ್ಟೇ ಕಾಳಜಿ ಲಲ್ಲೇಶ್ವರಿ ತಾಯಿಯವರ ಬಗ್ಗೆಯೂ ಇದೆ. ಇವರಿಬ್ಬರ ಪ್ರೀತಿ ಎಷ್ಟು ಆಳವಾಗಿದೆ ಎಂದರೆ, ತಾಯಿಯವರ ಅಗಲಿಕೆಯ ಆಘಾತವನ್ನು ಅವರು ಹೇಗೆ ತಡೆದುಕೊಳ್ಳುತ್ತಾರೆ ಎಂಬ ಚಿಂತೆ ನಮಗಿದೆ. ಅವರನ್ನು ಸ್ವಲ್ಪವಾದರೂ ಮಾನಸಿಕವಾಗಿ ಸಿದ್ಧಗೊಳಿಸಬೇಕು…”ಎಂದು ಮಾತನಾಡಿದ್ದರೆಂದು ಕೇಳಿದಾಗ ಅನೇಕರಿಗೆ ಆಶ್ಚರ್ಯವಾಗುತ್ತಿತ್ತು.ಅದು ಸಾಮಾನ್ಯ ಪ್ರೀತಿಯಲ್ಲ…ಅದು ಉಸಿರಿಗೂ ಉಸಿರಿನ ಸಂಬಂಧವಾಗಿತ್ತು.ಜಯದೇವಿ ತಾಯಿಯವರು ಕೂಡ ಈ ವಿಷಯವನ್ನು ಅರಿತಿದ್ದರು. ಆದ್ದರಿಂದ ಅವರು ಆಗಾಗ ಲಲ್ಲೇಶ್ವರಿ ತಾಯಿಯವರನ್ನು ಕರೆದು ಪ್ರೀತಿಯಿಂದ,“ಮಗಳೇ, ನಾನು ಯಾವಾಗಲೂ ದೇಹದಲ್ಲಿ ಇರಲಾರೆ. ನಾನು ಹೋದ ಮೇಲೂ ನೀನು ಕುಗ್ಗಬಾರದು. ಗಟ್ಟಿಯಾಗಿ ನಿಲ್ಲಬೇಕು. ನಮ್ಮ ಪರಂಪರೆಯನ್ನು, ನಮ್ಮ ಮೌಲ್ಯಗಳನ್ನು, ನಮ್ಮ ಸೇವೆಯ ಮಾರ್ಗವನ್ನು ಮುಂದುವರಿಸಬೇಕು…”ಎಂದು ಹೇಳುತ್ತಿದ್ದರು.ಆದರೆ ಆ ಮಾತು ಕೇಳಿದ ಕೂಡಲೇ ಲಲ್ಲೇಶ್ವರಿ ತಾಯಿಯವರ ಮನಸ್ಸು ತಲ್ಲಣಗೊಳ್ಳುತ್ತಿತ್ತು.“ಅವ್ವಾ, ಆ ಮಾತು ಹೇಳಬೇಡ! ನೀನು ಇಲ್ಲದಿರುವುದನ್ನು ನಾನು

Read Post »

ಕಾವ್ಯಯಾನ

ವಿಮಲಾರುಣ ಪಡ್ಡಂಬೈಲು “ಬಣ್ಣದ ಧಿರಿಸು”

ಕಾವ್ಯ ಸಂಗಾತಿ ವಿಮಲಾರುಣ ಪಡ್ಡಂಬೈಲು “ಬಣ್ಣದ ಧಿರಿಸು” ಬಚ್ಚಿಟ್ಟ ಬಣ್ಣದ ಧಿರಿಸಿಗೆಹಚ್ಚಿಟ್ಟ ಹಣತೆಯ ಕಣ್ಣವನುಸಾಲು ದೀಪಗಳಹೊನ್ನ ಕಿರಣದ ತಾರೆ ತಂದವನುತನ್ನ ಮನದಲ್ಲಿ ಭಿತ್ತಿದ ಭಾವಗಳ ಹಸೆಗೆಸಾವಿರ ಚುಕ್ಕೆಗಳ ಇಟ್ಟವನು. ಹಸಿರುಸಿರ ಸೀರೆಯೊಳುನೂತ ನೂಲುಗಳೇ ಸಾಕುಚಿತ್ತಾರ ತಂದಭಾವಭಿತ್ತಿಯ ಬಣ್ಣಗಳ ಹೇಳಲು. ಬಿದ್ದ ಮಳೆಗೆ ಮೊಳೆತ‌ ನೆಲದಹಸಿ ಪ್ರೀತಿಯಂಥವನಮೋಹಕ್ಕೋ ಮೋದಕ್ಕೋಒಲುಮೆಗೋ ನಲುಮೆಗೋಪ್ರೀತಿ ಪ್ರೇಮದ ಅರ್ಥವ ಹೇಳಲುಯಾವ ಹೆಸರಿಡಲಿ? ಸುಳಿ ಮಿಂಚ ಮಿಣುಕು ಕಂಗಳಮಾಯಕಾರನಮೊಗದಲ್ಲಡಗಿದ ಕೋಲ್ಮಿಂಚಮುಗುಳು ನಗೆಯನೇನೆಂದು ಬಣ್ಣಿಸಲಿ? ಉಜ್ವಲ ಬದುಕಿನಅನಂತ ಕ್ಷಣಗಳ ಸಾಕ್ಷೀಕರಿಸಲುಸಂತಸ ಹಂಚಿಸಮೀಪ ಬರಲು ತವಕಿಸುವಜೀವದುಜ್ಜೀವದಲಿನಾನಿರುವೆನೆಂದುಹೇಗೆ ಹೇಳಲಿ? ಉಟ್ಟ ಸೀರೆಯ‌ ಅಂಚಿನಲಿಸೆರಗ‌ ಸಿಕ್ಕಿಸಿಕೊಂಡಂತಿರುವಮುಚ್ಚಿಟ್ಟ ಮನ ನನ್ನದುಎಲ್ಲವು ಬಚ್ಚಿಟ್ಟ ಭಾವದೊಳಡಗಿವೆಎಂದು ಹೇಳದಿದ್ದರೂಜೊತೆಗಿರುವ ಭಾವ ಕೊಡುವ ಭರದಲಿಸೋತು ಹೋದವಳು…. ವಿಮಲಾರುಣ ಪಡ್ಡoಬೈಲು

ವಿಮಲಾರುಣ ಪಡ್ಡಂಬೈಲು “ಬಣ್ಣದ ಧಿರಿಸು” Read Post »

ಅಂಕಣ ಸಂಗಾತಿ, ಸಾವಿಲ್ಲದ ಶರಣರು

ಸಾವಿಲ್ಲದ ಶರಣರು ಮಾಲಿಕೆ- “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ

ಶರಣ ಸಂಗಾತಿ ಸಾವಿಲ್ಲದ ಶರಣರು ಮಾಲಿಕೆ- ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಕದಿರ ರೆಮ್ಮವ್ವೆ  -ಅವಿರಳ ವಚನಕಾರ್ತೆ. ಅವಳು ಹನ್ನೆರಡನೆಯ ಶತಮಾನದಲ್ಲಿ ಬಸವಾದಿ ಶರಣರ ವಚನ ಕ್ರಾಂತಿಯಲ್ಲಿ   ಪಾಲ್ಗೊಂಡು ರಾಟಿಯಿಂದ ಕದಿರು ತೆಗೆದು ನೂಲುವ ಕಾಯಕದವಳಾಗಿದ್ದವಳು.ತೆಗೆದ ನೂಲನ್ನು ಮಾರಿ ಬಂದ ಹಣದಲ್ಲಿ ಗುರು ಲಿಂಗ ಜಂಗಮ ದಾಸೋಹ ಮಾಡಿ ಬದುಕಿದಳು..ಬಹುತೇಕರು ಈಕೆಯ ಕಾಲವನ್ನು ಬಸವಾದಿ ಪ್ರಮಥರ ಕಾಲವೆಂದು ನಿರ್ಣಯಿಸುತ್ತಾರೆ . ಡಾ ಎಲ್ ಬಸವರಾಜು ಅವರು ಇವಳ ವಚನದಲ್ಲಿ ಬರುವ “ಪರದಳ  ವಿಭಾಡ”  “ಗಜವೇಂಟೆಕಾರ ” ಎಂಬ ಪದಗಳನ್ನು ಗಮನಿಸಿ ಇವಳು ವಿಜಯನಗರದ 1430  ಕಾಲದ ವಚನಕಾರ್ತೆ ಎಂದು ತೀರ್ಮಾನಿಸುತ್ತಾರೆ. ಆದರೆ ಹರಿಹರ ತನ್ನ ರಗಳೆಯಲ್ಲಿ ಕದಿರ ರೆಮ್ಮವ್ವೆಯನ್ನು ಸ್ಮರಿಸಿದ್ದಾನೆ. ಪಾಲ್ಗುರಿಕೆ ಸೋಮನಾಥನು ತನ್ನ ಪಂಡಿತಾರಾಧ್ಯ ಚರಿತ್ರೆಯಲ್ಲಿ ಕದಿರ ರೆಮ್ಮವ್ವೆ ಶರಣೆಯ  ಉಲ್ಲೇಖವಿದೆ. ಅಲ್ಲದೆ ಕದಿರು ಕಾಯಕದ ಕದಿರ ರೆಮ್ಮವ್ವೆಯ ಒಂದು ವಚನದಲ್ಲಿ ಬಸವಣ್ಣ ,ಚೆನ್ನ ಬಸವಣ್ಣ ಪ್ರಭುದೇವರನ್ನು ಸ್ಮರಿಸಿದ್ದಾಳೆ.ಶರಣರ ವಚನಗಳ ಜೊತೆ ಈಕೆಯ ವಚನಗಳು ಮತ್ತು ಸಕಲ ಪುರಾತನರ ವಚನಗಳು ಹಾಗು ಇತರ ಸ್ಥಲ ಕಟ್ಟಿನ ವಚನಗಳಲ್ಲಿ ಸಮಾವೇಶಗೊಂಡಿರುವುದು ಕದಿರು ರೆಮವ್ವೆ  ಬಸವ ಕಾಲಿನ ಶರಣೆ ಎನ್ನಲು ಹೆಚ್ಚು ಪುಷ್ಟಿ ಸಿಗುತ್ತವೆ. 1620  ರ ಶಂಕರ ದೇವನ “ಇಷ್ಟಲಿಂಗ ಚಾರಿತ್ರ್ಯ ” ಅಜ್ಞಾತ ಕವಿಯ   “ನೂರೆಂಟು ಶರಣೆಯರ ಅಷ್ಟಕ “ದಲ್ಲಿ ಕದಿರ ರೆಮ್ಮವ್ವೆ ಯ ಉಲ್ಲೇಖ ಕಂಡು ಬಂದಿದೆ. ಹೀಗಾಗಿ  ಕದಿರ ರೆಮ್ಮವ್ವೆ ಹನ್ನೆರಡನೆಯ ಶತಮಾನದ ಬಸವಾದಿ ಪ್ರಮಥರ ಸಂಕುಲಕೆ ಸೇರಿದ ಶರಣೆ ಎಂದು ಗಟ್ಟಿಯಾಗಿ ನಿರ್ಧರಿಸಬಹುದು.. ಕದಿರ ರೆಮ್ಮವ್ವೆ  ಒಬ್ಬ ನಿಷ್ಠಾವಂತ ನೇಕಾರ ಕುಟುಂಬದ ಕಾಯಕಜೀವಿ. ರಾಟಿಯಿಂದ ನೂಲು ತೆಗೆಯುವುದು ,ನೂಲನ್ನು ಮಾರಿ ಬಂದ ಆದಾಯದಿಂದ ಜಂಗಮ ಸೇವೆ ಕೈಗೊಳ್ಳುವ ಸತ್ಯ ಶುದ್ಧ ಶರಣೆ.ಇವಳ ಗಂಡನ ಬಗ್ಗೆ ಯಾವುದೇ ದಾಖಲೆಗಳಿಲ್ಲ . ಅವಳು ತನ್ನ ಕಾಯಕದ ಜೊತೆಗೆ ನಿತ್ಯ ಅನುಭಾವದ ಗೋಷ್ಠಿಯಲ್ಲಿ ಪಾಲ್ಗೊಂಡು ಲೌಕಿಕ ಪಾರಮಾರ್ಥಿಕ ಚಿಂತನೆಗಳಲ್ಲಿ ಭಾಗವಹಿಸುತ್ತಿದ್ದಳು.ಅವಳ ಎರಡು ವಚನದಲ್ಲಿ ನಿರಾಕಾರದ ಗಂಡನ ಬಗ್ಗೆ ಒಲವು ತೋರಿಸಿದನ್ನು ನೋಡಿದರೆ ಅವಳು ಅವಿವಾಹಿತೆಯಾಗಿರಬಹುದು ಎಂದು ನನ್ನ ಗ್ರಹಿಕೆಯಾಗಿದೆ. ಕದಿರ ರೆಮ್ಮವ್ವೆ  ನಾಲ್ಕು ವಚನಗಳು ಮಾತ್ರ ದೊರೆತಿವೆ.” ಕದಿರ ರೆಮ್ಮಿವೊಡೆಯ  ಗುಮ್ಮೆಶ್ವರ ” ನಾಲ್ಕು ವಚನಗಳಲ್ಲಿ ಎರಡುವಚನಗಳು  ಸತಿ ಪತಿ ದಾಂಪತ್ಯ ಧರ್ಮಕ್ಕೆ ಸಂಬಂಧ ಪಟ್ಟ ಅಲೌಕಿಕ ವಿಚಾರಗಳು ,ಒಂದು ವಚನದಲ್ಲಿ ಶರಣರ ಸ್ತುತಿ ಕಂಡು ಬಂದಿದೆ. ಇನ್ನೊಂದರಲ್ಲಿ ಕಾಯಕದ ಮಹತ್ವ ಅಡಕವಾಗಿದೆ. ಎನ್ನ ಸ್ಥೂಲ ತನುವೆ ಬಸವಣ್ಣನಯ್ಯಾ  ಎನ್ನ ಸೂಕ್ಷ್ಮ ತನುವೆ ಚೆನ್ನ ಬಸವಣ್ಣನಯ್ಯ  ಎನ್ನ ಕಾರಣ ತನುವೆ ಪ್ರಭುದೇವರಯ್ಯಾ  ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ  ಕದಿರ ರೆಮ್ಮಿಯೊಡೆಯ   ಗುಮ್ಮೆಶ್ವರಾ-  ಎನ್ನುವಲ್ಲಿ   ಕದಿರ ರೆಮ್ಮವ್ವೆ  -ತನ್ನ ವಚನದಲ್ಲಿ ಬಸವಣ್ಣ ತನ್ನ ಸ್ಥೂಲ ಶರೀರದ ಗುರುತು. ತನ್ನ ಆಕಾರ ಅನುಭಾವದ ತನುವು. ತನಗೆ ಶರಣೆಯ ಮುದ್ರೆಯನ್ನೊತ್ತಿದ ಬಸವಣ್ಣನು ತನ್ನ ಸ್ಥೂಲ ಶರೀರಕ್ಕೆ ತನುವಾಗುತ್ತಾನೆ ಎಂದು ಹೇಳುತ್ತಾ ಬಸವಣ್ಣನವರ ಕಲ್ಯಾಣ ಸಮತೆಯ ಕ್ರಾಂತಿಯಲ್ಲಿ ಕದಿರ ರೆಮ್ಮವ್ವೆಗೆ ಸ್ಥಾನ ದೊರಕಿಸಿ  ತನ್ನ ಕಾಯ ಶರೀರದ ಸ್ಥೂಲ ತನುವಾದವರು ಬಸವಣ್ಣ ಎಂದು ಅಭಿಮಾನದಿಂದ ಹೇಳುತ್ತಾಳೆ. ಇನ್ನು ತನ್ನ ಸೂಕ್ಶ್ಮ ಶರೀರದ ಕಣ್ಣಿಗೆ ಕಾಣದ ಭಾವ ಸೂಕ್ಷ್ಮತೆಯ ತನುವು ಚೆನ್ನ ಬಸವಣ್ಣ, ಚೆನ್ನಬಸವಣ್ಣನವರ ಷಟಸ್ಥಲ ಅರಿವಿನ ಜ್ಞಾನ ಸ್ಥೂಲ ಶರೀರದ ಮನೋ  ವಿಕಸನಕೆ ಕಾರಣವು. ಇಂತಹ ಸೂಕ್ಷ್ಮ ಶರೀರದ ತನುವು ಚೆನ್ನ ಬಸವಣ್ಣ . ಅದೇ ರೀತಿ ಶರೀರ ಪ್ರಾಣ ಆತ್ಮವು ಕ್ರಮವಾಗಿ  ಸ್ಥೂಲ ,ಸೂಕ್ಷ್ಮ ಕಾರಣವಾಗಿ ತನ್ನ ಆತ್ಮದ ಕಾರಣ ತನುವಿಗೆ ಅಲ್ಲಮರು ಕಾರಣ ಎಂದು ಹೇಳುತ್ತಾ ತನ್ನನ್ನು ಅಲ್ಲಮರ ಆಪ್ತವಲಯದಲ್ಲಿ ಗುರುತಿಸಿಕೊಳ್ಳುತ್ತಾಳೆ. ಕದಿರ ರೆಮ್ಮವ್ವೆ ತನ್ನ ಕಾಯಕದ ಬಗ್ಗೆ ಹೆಮ್ಮೆಯಿಂದ ಹೇಳುತ್ತಾಳೆ. ನಾ ತಿರುಹುವ ರಾಟೆಯ ಕುಲಜಾತಿಯ ಕೇಳಿರಣ್ಣಾ : ಅಡಿಯ ಹಲಗೆ ಬ್ರಹ್ಮ ,ತೋರಣ ವಿಷ್ಣು  ನಿಂದ ಬೋಂಬೆ ಮಹಾರುದ್ರ  ರುದ್ರನ ಬೆಂಬಳಿಯವೆರಡು ಸೂತ್ರ ಕರ್ಣ . ಅರಿವೆಂಬ ಕದಿರು ,ಭಕ್ತಿಯೇನೆಂಬ ಕೈಯಲ್ಲಿ ತಿರುಹಲಾಗಿ ಸುತ್ತಿತ್ತು ನೂಲು ಕದಿರು ತುಂಬಿತ್ತು. ರಾಟೆಯ ತಿರುಹಲಾರೆ -ಎನ್ನ ಗಂಡ ಕುಟ್ಟಿಹ ಇನ್ನೇವೆ  ” ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ  “? ಇದು ತನ್ನ ಬದುಕಿಗೆ ಸಂಬಂಧ ಪಟ್ಟ ಕಾಯಕದ ವಚನವಾಗಿದೆ. ಮೇಲ್ನೋಟಕ್ಕೆ ಇದು ಕಾಯಕದ ವಚನವಾದರೂ ಈ ವಚನದಲ್ಲಿ ಅತ್ಯಂತ ಪಾರಮಾರ್ಥಿಕ ಅರ್ಥವನ್ನು ಕದಿರು ರೆಮ್ಮವ್ವೆ ವ್ಯಕ್ತ ಪಡಿಸಿದ್ದಾಳೆ .ಕದಿರ  ರೆಮ್ಮವ್ವೆ ತನ್ನ ಕುಲ ಕಸುಬು ಹಾಗು ಕೀಳು ಜಾತಿಯ ಉಲ್ಲೇಖ ಮಾಡಿದ್ದಾಳೆ. ಜೊತೆಗೆ ತಿರುಹುವ ರಾಟಿಗೆ ಅದರ ಅಡಿಯ ಹಲಗೆ ಬ್ರಹ್ಮ ಅದಕ್ಕೆ ಕಟ್ಟಿದ ತೋರಣವೇ ವಿಷ್ಣು ,ರಾಟೆಗೆ ಕಟ್ಟಿದ ಬೋಂಬೆ ಮಹಾರುದ್ರ ರುದ್ರನ ಬೆಂಬಲಕೆ ಎರಡು ಸೂತ್ರ ಕರ್ಣಗಳು .ಇಂತಹ ರಾಟೆಯಿಂದ ನೂತಾಗ ಹೊರಡುವ ಅರಿವೇ ಕದಿರು..ಭಕ್ತಿಯಿಂದ ತಿರುಹಲಾಗಿ ನೂಲು ಸುತ್ತಿಕೊಂಡಿತ್ತು,ಮತ್ತು ಕದಿರು ತುಂಬಿತ್ತು . ಕದಿರ ತುಂಬಿದ ಮೇಲೆ ಮತ್ತೆ ರಾಟೆಯ ತಿರುಹಲಾರೆ.ಇಲ್ಲಿ ಬ್ರಹ್ಮ ವಿಷ್ಣು ರುದ್ರ ಮಹಾರುದ್ರ ಎಂಬ ದೈವೀ ಕಲ್ಪನೆಯನ್ನೇ ತಾನು ನೂಲುವ ಕದಿರಿನ  ಹಲಗೆಯನ್ನು ಬ್ರಹ್ಮವೆಂತಲೂ ,ಕಾರಣ ಹಲಗೆ ಗಟ್ಟಿಯಾಗಿದ್ದರೆ ತಾನಷ್ಟೇ ಕದಿರು ತೆಗೆಯುವವರು ಅದರ ಮೇಲೆ ಕುಳಿತು ನೂಲಬಹುದು ಅದು ಕದಿರಿನ    ಉತ್ಪತ್ತಿಯ ಆರಂಭ  (ಸೃಷ್ಟಿ ).ಅದೇ ರೀತಿ ಕದಿರಿಗೆ ಕಟ್ಟುವ ತೋರಣವು ವಿಷ್ಣು -ಇದು ಸ್ಥಿತಿ ಪ್ರಜ್ಞೆಯಾಗಿದೆ. ಲಯದ ಸಂಕೇತವಾದ ರುದ್ರನು ಕದಿರಿನ ಹೆಮ್ಮೊಳೆ-ಲೋಹದ ತುಂಡು ಕದಿರು ತೆಗೆಯುವ ಸಾಧನ. (spikes ) .ಇಲ್ಲಿಂದ ಉತ್ಪತ್ತಿಯಾಗುವ ಅರಿವೇ ಕದಿರು .ಭಕ್ತಿಯ ಕೈಯಲ್ಲಿ ರಾಟಿ ತಿರುಹಲಾಗಿ  ನೂಲು ಸುತ್ತಿಕೊಳ್ಳಹತ್ತಿತು ಮತ್ತು ಕದಿರು ತುಂಬಿ ಬಿಟ್ಟಿತು. ಪ್ರಾಪಂಚಿಕ ಪಾರಮಾರ್ಥಿಕ ನಿಲುವುಗಳನ್ನು ಸಮನ್ವಯಿಸುವ  ಪ್ರಯತ್ನ ಇದಾಗಿದೆ..ಅಗತ್ಯಕ್ಕಿಂತ ಹೆಚ್ಚಿನ ಆದಾಯ ತಿರಸ್ಕರಿಸಿದ ಶರಣೆ ರೆಮ್ಮವ್ವೆ ಹಾಗೇನಾದರೂ ಹೆಚ್ಚಿಗೆ ಕದಿರ ತೆಗೆದು ಆದಾಯಮಾಡಿಕೊಂಡರೆ ತನ್ನ ಲಿಂಗವೆಂಬ ಗಂಡ ತನ್ನನ್ನು ಕುಟ್ಟಿಹ ಶಿಕ್ಷಿಸುವ ಎಂದು ತನ್ನನ್ನು ತಾನೇ ಎಚ್ಚರಿಸಿಕೊಳ್ಳುತ್ತಾಳೆ.ತನ್ನ ಸಾಂಸಾರಿಕ ಬದುಕಿನಲ್ಲಿ ಪಾರಮಾರ್ಥಿಕ ಚಿಂತನೆ ಮಾಡುತ್ತಾ ಜೀವನ ಸಾಗಿಸಿದ ದಿಟ್ಟ ಶರಣೆ ಕದಿರ ರೆಮ್ಮವ್ವೆ. “  ಕದಿರು ರೆಮ್ಮವ್ವೆ – ಎರಡು ವಚನಗಳು ತನ್ನ ಪ್ರಾಪಂಚಿಕ ಬದುಕಿನ ಕುರಿತಾಗಿ ಎಂದು ಮೇಲು ನೋಟಕ್ಕೆ ಕಂಡರೂ ಅದರ ಹಿಂದಿನ ಆಧ್ಯಾತ್ಮಿಕ ಬೆಡಗನ್ನು ರೆಮ್ಮವ್ವೆ ಸೊಗಸಾಗಿ ವರ್ಣಿಸಿದ್ದಾಳೆ. ನಿರಾಕಾರ ಚೈತನ್ಯವೇ ತನ್ನ ಗಂಡವೆಂದು ಅಕ್ಕ ಮಹಾದೇವಿಯ ಹಾಗೆ ನಿರೂಪಿಸಿದ ವಚನಗಳ ಕಾಣಬಹುದು. ಎಲ್ಲರ ಹೆಂಡಿರು ತೊಳಸಿಕ್ಕುವರು;   ಎನ್ನ ಗಂಡಂಗೆ ತೊಳಸುವುದಿಲ್ಲ.   ಎಲ್ಲರ ಗಂಡಂದಿರಿಗೆ ಬಸಿವರು;   ಎನ್ನ ಗಂಡಂಗೆ ಬಸಿವುದಿಲ್ಲ. ಎಲ್ಲರ ಗಂಡಂದಿರಿಗೆ ಬೀಜವುಂಟು;   ಎನ್ನ ಗಂಡಂಗೆ ಅಂಡದ ಬೀಜವಿಲ್ಲ.   ಎಲ್ಲರ ಗಂಡಂದಿರು ಮೇಲೆ;   ಎನ್ನ ಗಂಡ ಕೆಳಗೆ, ನಾ ಮೇಲೆ.   ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.  ಪ್ರತಿಯೊಬ್ಬ ಹೆಂಡತಿ ತಾನು ಪತಿಯ ದಾಸಿಯಾಗುವಳು .ಆದರೆ ಕದಿರ ರೆಮ್ಮವ್ವೆ ತಾನು ದಾಸಿಯಾಗುವದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾಳೆ.ಎಲ್ಲ ಗಂಡಂದಿರರಿಂದ ಹೆಂಡತಿ ಬಸಿರಾಗುವಳು.ಆದರೆ ತಾನು ತನ್ನ ಗಂಡನಿಗೆ ಕೇವಲ ಬಸಿರಾಗುವುದಕ್ಕೆ ಬದುಕಿಲ್ಲ ಎಂದಿದ್ದಾಳೆ. ತನ್ನ ಗಂಡ ಕೇವಲ ವಿಷಯಾದಿಗಳ ಹುಟ್ಟು ಸಾವಿಗೆ ಕಾರಣವಾಗುವ ವ್ಯಕ್ತಿಯಲ್ಲ ಎಂದು ನಿರೂಪಿಸಿದ್ದಾಳೆ.ಎಲ್ಲ ಗಂಡರಿಗೆ  ಉತ್ಪತ್ತಿಯ ಬೀಜವಿದೆ ಆದರೆ ತನ್ನ ಗಂಡನಿಗೆ ಅಂಡದ ಅಂದರೆ ಕೇವಲ ಉತ್ಪತಿಗೆ ಬೇಕಾದ ಬೀಜ (fertile )  ಇಲ್ಲವೆನ್ನುತ್ತಾಳೆ.ಎಲ್ಲರ ಗಂಡ ಮೇಲೆ ಎಂದು ಸಾರುವ ಭಾರತೀಯ ಮಹಿಳೆಯರಿಗೆ ಕದಿರ ರೆಮ್ಮವ್ವೆ  ಸವಾಲಾಗುತ್ತಾಳೆ.ತನ್ನ ಗಂಡ ಕೆಳಗೆ ತಾನು ಮೇಲೆ ಎಂದು ಹೆಮ್ಮೆಯಿಂದ ಹೇಳುವ ಕದಿರ ರೆಮ್ಮವ್ವೆ ತಾನು ಲಿಂಗ ಭೇದ ನಿರಾಕರಿಸಿ ನಿರಾಕಾರ ಸ್ವರೂಪದ ಸಾಕಾರದ ಲಿಂಗವೇ ತನ್ನ ಗಂಡ ಎಂದು ಹೇಳಿಕೊಳ್ಳುತ್ತಾಳೆ. ಎಲ್ಲರ ಗಂಡಂದಿರು ಪರದಳವಿಭಾಡರು;   ಎನ್ನ ಗಂಡ ಮನದಳವಿಭಾಡ.  ಎಲ್ಲರ ಗಂಡಂದಿರು ಗಜವೇಂಟೆಕಾರರು;   ಎನ್ನ ಗಂಡ ಮನವೇಂಟೆಕಾರ.   ಎಲ್ಲರ ಗಂಡಂದಿರು ತಂದಿಕ್ಕಿಸಿಕೊಂಬರು;   ಎನ್ನ ಗಂಡ ತಾರದೆ ಇಕ್ಕಿಸಿಕೊಂಬ.   ಎಲ್ಲರ ಗಂಡಂದಿರಿಗೆ ಮೂರು,   ಎನ್ನ ಗಂಡಂಗೆ ಅದೊಂದೆ;   ಅದೊಂದೂ ಸಂದೇಹ,ಕದಿರರೆಮ್ಮಿಯೊಡೆಯ ಗುಮ್ಮೇಶ್ವರಾ.  ಕದಿರ ರೆಮ್ಮವ್ವೆ ತನ್ನ ಮತ್ತು ಇತರ ಭವಿಗಳ ಗಂಡಂದಿರ ಗುಣ ಸ್ವಭಾವಗಳನ್ನು ವಿವರಿಸುತ್ತಾ,ತನ್ನ ಗಂಡನಿಗೂ ಮತ್ತು ಇತರ ಮಹಿಳೆಯರ ಗಂಡಂದಿರರಿಗೂ   ಇರುವ ವ್ಯತ್ಯಾಸವನ್ನು ಮತ್ತೆ ಮತ್ತೆ ಕೆಣಕಿದ್ದಾಳೆ   . ಎಲ್ಲರ ಗಂಡಂದಿರರು ಪರರ ಅಳಲನ್ನು ವಿನಾಶ ಮಾಡಿದರೆ ,ತನ್ನ ಗಂಡ ತನ್ನ ಮನದ ಅಳಲನ್ನು ನಾಶ ಮಾಡುತ್ತಾನೆ .ಎಲ್ಲರ ಗಂಡರು ಆನೆಯನ್ನು ಭೇಟೆಯಾಡಿದರೆ. ತನ್ನ ಗಂಡ ವಿಷಯಾದಿಗಳನ್ನು ತುಂಬಿದ ಮನದ ಭೇಟೆಯಾಡುವವನು.ಉಳಿದ ಗಂಡಂದಿರರು ತಂದದ್ದನ್ನು ತಿನ್ನುವವರು .ತನ್ನ ಗಂಡ ತಾರದೆ ತಿನ್ನುವವನು.ಎಲ್ಲರ ಗಂಡಂದಿರರು ಸೃಷ್ಟಿ ಸ್ಥಿತಿ ಲಯ -ಸ್ಥೂಲ ಸೂಕ್ಷ್ಮ ಹಾಗು ಕಾರಣ ಶರೀರಕ್ಕೆ  ಅಂಟಿಕೊಂಡವ್ರು. ತನ್ನ ಗಂಡ ಮಾತ್ರ ಕಾರಣ ಶರೀರಕ್ಕೆ ನಿಂತ ಚೈತನ್ಯ ಚೇತನವೆನ್ನುತ್ತಾಳೆ ಕದಿರ ರೆಮ್ಮವ್ವೆ.. ತುಂಬಾ ಗಹನವಾದ ವಿಷಯವನ್ನು ಸಲೀಲಾಗಿ ಹೇಳುವ ಶರಣೆಯ ವಚನದಲ್ಲಿ ಅಕ್ಕ ಮಹಾದೇವಿಯ ಚೆನ್ನ ಮಲ್ಲಿಕಾರ್ಜುನನ್ನು ನೆನಯುವ ಧ್ವನಿ ಧೋರಣೆ ಎದ್ದು ಕಾಣುತ್ತದೆ.ಕದಿರ ರೆಮ್ಮವ್ವೆಯ ವಚನಗಳಲ್ಲಿ ತಾನು ಪ್ರಾಪಂಚಿಕ ಬದುಕಿಗೆ  ಮಾತ್ರ ಸೀಮಿತವಲ್ಲ ತಾನು ಆಧ್ಯಾತ್ಮಿಕ ಪಾರಮಾರ್ಥಿಕ ಸುಖವನ್ನು ಉಣ್ಣಲು ಬಂದವಳು ಎಂದಿದ್ದಾಳೆ. ಹೀಗೆ ಲಿಂಗ ಭೇದವಳಿದು ತಾನೇ ಲಿಂಗವಾದ ಬಗೆಯನ್ನು ಅರ್ಥಪೂರ್ಣವಾಗಿ ವಿವರಿಸಿದ ಅತ್ಯಂತ ಜ್ಞಾನಿ ಅವಿರಳ ವಚನಕಾರ್ತೆ   ಕದಿರ ರೆಮ್ಮವ್ವೆ . ಕದಿರ ರೆಮ್ಮವ್ವೆಯ ಸಿಕ್ಕ ನಾಲ್ಕು ವಚನಗಳು ಅತ್ಯಂತ ಉತ್ಕೃಷ್ಟ ಚಿಂತನೆಯಿಂದ ಕೂಡಿವೆ.ಅವಳ ವಚನದ ಅಂಕಿತವು ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ”. ಗುಮ್ಮೆಶ್ವರ-ಇದು ಗುಹೇಶ್ವರ  ಅಂಕಿತದ ಸಾಮ್ಯತೆ ಇದ್ದು  ಪಾಠಾಂತರ   ಸಮಯದಲ್ಲಿ ಇದು ಗುಮ್ಮೆಶ್ವರ ಆದ ಎಲ್ಲಾ ಸಾಧ್ಯತೆಗಳಿವೆ. ಕದಿರ ರೆಮ್ಮವ್ವೆ ಅಲ್ಲಮ ಪ್ರಭುವಿನ ಗರಡಿಯಲ್ಲಿ ಬೆಳೆದಳವಳು . ತನ್ನ ಒಂದು ವಚನದಲ್ಲಿ ತಾನು ಗುರು ಅಲ್ಲಮರ ಕಾರುಣ್ಯವೆಂದು ಹೇಳಿಕೊಂಡಿದ್ದಾಳೆ. —– ಎನ್ನ ಕಾರಣ ತನುವೆ ಪ್ರಭುದೇವರಯ್ಯಾ         ಇಂತಿವರ ಕರುಣದಿಂದಲಾನು ಬದುಕಿದೆನಯ್ಯಾ .            ಕದಿರ ರೆಮ್ಮಿಯೊಡೆಯ  ಗುಮ್ಮೆಶ್ವರಾ ಎಂದು ಹೇಳಿ ತನ್ನ ಗುರುವಿನ ಮೇಲಿನ ಅಭಿಮಾನ ಗೌರವ ಮತ್ತು ಪ್ರೀತಿಯನ್ನು ವ್ಯಕ್ತ ಪಡಿಸಿದ್ದಾಳೆ. ಈ ಕಾರಣದಿಂದ ಅವಳು ಅಲ್ಲಮ ಪ್ರಭುಗಳ ಆಪ್ತ ವಲಯದ ಸಹಾಯಕಿ, ಶಿಷ್ಯೆ ಎಂದು ಪರಿಗಣಿಸಬಹುದು. ನನ್ನ  ಈ ತರ್ಕಕ್ಕೆ ಗ್ರಹಿಕೆಗೆ ಇನ್ನೊಂದು ಕೆಲವು ಕಾರಣಗಳಿವೆ . ಅವುಗಳಲ್ಲಿ ಕಲ್ಯಾಣ ಕ್ರಾಂತಿಯ ಮೊದಲು ಮತ್ತು ನಂತರ ಕೆಲ ಶರಣರು ಕಲ್ಯಾಣವನ್ನು ತೊರೆದರು ಎಂದು ನಮಗೆ ತಿಳಿದು ಬರುತ್ತದೆ. ಹೀಗೆ ಕಲ್ಯಾಣ ರಕ್ತ ಕ್ರಾಂತಿಯ ಮೊದಲೆ ಕಲ್ಯಾಣ ತೊರೆದವರಲ್ಲಿ ಅಕ್ಕ ಮಹಾದೇವಿ  ಮತ್ತು  ಅಲ್ಲಮರು . ಚರಿತ್ರೆ ಇತಿಹಾಸದಲ್ಲಿ  ಲಭ್ಯವಿರುವ ಘಟನಗಳನ್ನಾಧರಿಸಿ ಶರಣರ ಮಾರ್ಗದ ಸಂಭಾವ್ಯತೆಯನ್ನು  ನಿರ್ಧರಿಸಲಾಯಿತು. ಕಳೆದ ಮೂವತ್ತು ವರ್ಷದಿಂದ ನಾನು ಶರಣರ ಸಮಾಧಿಗಳನ್ನು ಅತ್ಯಂತ ಕೂತಹಲದಿಂದ ಸಮೀಕ್ಷೆ ಮಾಡುವ ಸಂದರ್ಭದಲ್ಲಿ ಅಲ್ಲಮ ಪ್ರಭುಗಳು ತೇರದಾಳದಲ್ಲಿ ಐಕ್ಯರಾಗಿದ್ದಾರೆ ಅಲ್ಲಿ ಪ್ರಭುದೇವರ ಗದ್ದುಗೆ ಇದೆಯೆಂದು    ಚಿಕ್ಕ ಬಾಲಕನಿಂದಲೂ ಕೇಳಿಸಿಕೊಂಡು ಬಂದಿದ್ದೆ.ಆದರೆ ತೇರದಾಳದಲ್ಲಿ ಅಲ್ಲಮರು ಕಲ್ಯಾಣ ತೊರೆದನಂತರ ಕೆಲಕಾಲ ತಂಗಿದ್ದರು ಎಂದು ಮುಂದೆ ಶ್ರೀಶೈಲಕ್ಕೆ  ಹೋಗುತ್ತಾರೆ ಎಂದುತಿಳಿದು ಬರುತ್ತದೆ. ಅಲ್ಲಮ ಪ್ರಭುಗಳು ಬಸವಣ್ಣನವರು ಸ್ಥಾಪಿಸಿದ ಲಿಂಗಾಯತ

ಸಾವಿಲ್ಲದ ಶರಣರು ಮಾಲಿಕೆ- “ಕಾಯಕಯೋಗಿನಿ -ಕದಿರ ರೆಮ್ಮವ್ವೆ”, ಡಾ.ಶಶಿಕಾಂತ್‌ ಪಟ್ಟಣ ರಾಮದುರ್ಗ Read Post »

ಕಾವ್ಯಯಾನ

ನಾಗರಾಜ ಬಿ. ನಾಯ್ಕ “ಮನಸ್ಸಿನ ಸೇತುವೆ”

ಕಾವ್ಯ ಸಂಗಾತಿ ನಾಗರಾಜ ಬಿ. ನಾಯ್ಕ “ಮನಸ್ಸಿನ ಸೇತುವೆ” ನಮ್ಮದೆನ್ನುವ ಪುಟ್ಟಮನಸ್ಸು ಪುಟ್ಟ ದೋಣಿಯಂತೆವಿಹಾರ ಹೊರಡುತ್ತದೆಬದುಕಿನುದ್ದಕ್ಕೂಎಲ್ಲರ ಮನದಿ ಮಲ್ಲಿಗೆಯಾಗಿಬಳ್ಳಿಯಂತೆ ಹಬ್ಬಿನಿಂತಿರುವ ಬದುಕಿಗೆಚಲನೆಯಾಗುತ್ತದೆವಿಶಾಲ ಆಗಸದ ಬಾನಂಚುಮುಟ್ಟುವ ಹಕ್ಕಿಯರೆಕ್ಕೆಯ ಬಡಿತವಾಗಿಮನಸ್ಸು ತುಂಬುತ್ತದೆಗೂಡಂಗಡಿಯ ಮರದಬೆಂಚುಗಳ ಮೇಲೆಕುಳಿತು ಅವಲಕ್ಕಿತಿನ್ನುವಾಗ ಅರಿವಿನ ಮೂಲಕ್ಕೊಂದು ಅಡಿಪಾಯದಚಿತ್ರ ಬರೆಯುತ್ತದೆಹೂವಿನಂದದ ಮಗುವಿನ ನಗುಕವಿತೆಯಾಗಿ ಸಾಲುಗಳಬರೆದು ಬೆಟ್ಟವಾಗುತ್ತದೆಬೆಟ್ಟದ ತುದಿಯಿಂದಹರಿದು ಬಂದ ಝರಿಯೊಂದುಜೀವವಾಗಿ ಊರತುಂಬಾ ಹರಿಯುತ್ತದೆಬೆಳಗು ನಗುವ ಹೂಗಳಕಂಪಿನ ನಡುವೆ ನಿಂತುಗಾಳಿಯಲ್ಲಿ ಸುಳಿದಾಡುತ್ತದೆಮನಸಿನ ಸೇತುವೆ ಮೇಲೆಅನ್ನ ನೀರಿನ ಘನತೆಮನಸು ಮುಟ್ಟುತ್ತದೆಸುಮ್ಮನೇ ಸೈಕಲ್ ಮೇಲೆಕುಳಿತು ಹೋದ ಹಿರಿಯನಹಿಂದೆ ಇರುವ ಭತ್ತದ ಸಸಿಗಳಲ್ಲಿ ಮತ್ತೊಂದುಸೇತುವೆಯ ಮಾತುನೆಲದನಿಯಾಗಿ ಕೇಳುತ್ತದೆಮನಸಿನ ಮನಸಿಗೆಮಾತೇ ಸೇತುವೆಯಾಗಿಮನಸ್ಸು ದಾಟಿಸುತ್ತದೆಮನದ ಖುಷಿಗೆಬಣ್ಣ ತುಂಬಿಮಾಯವಾಗುತ್ತದೆ…….. ನಾಗರಾಜ ಬಿ. ನಾಯ್ಕ

ನಾಗರಾಜ ಬಿ. ನಾಯ್ಕ “ಮನಸ್ಸಿನ ಸೇತುವೆ” Read Post »

ಕಾವ್ಯಯಾನ

ಕಲ್ಪನಾ ಎಸ್‌ ಪಾಟೀಲ “ನಾಚಿದ ಬೆಳದಿಂಗಳು”

ಕಾವ್ಯ ಸಂಗಾತಿ ಕಲ್ಪನಾ ಎಸ್‌ ಪಾಟೀಲ “ನಾಚಿದ ಬೆಳದಿಂಗಳು” ಅಸುನೀಗುತಿದ್ದ ಬೆಳದಿಂಗಳಿಗೆನನ್ನವಳ ಕುರಿತಾಗಿ ಹೇಳುತಿದ್ದೆಒಂಚೂರು ನಗದೆ ಇತ್ತು ಕೊಂಚವೂ ಆಸೆ ತೋರದೆನನ್ನನೇ ನಿರ್ಲಕ್ಷ್ಯ ಮಾಡುತಿತ್ತುಇವನೊಬ್ಬ! ಎನ್ನುತಿತ್ತು ನನ್ನದೇ ನನಗೆ ಹೇಳುವುದೆಷ್ಟೋಉಳಿದಿದೆ ಕೇಳಿಸಿಕೊಳ್ಳುವರಿಲ್ಲಕಗ್ಗತ್ತಲೆಯು ಹಂಗಿಸಿ ನಗುತಿದೆ ಬೆಳದಿಂಗಳ ಮನದಮಾತಿಗೆ ಕಿವಿಯಾದರೂ ಚಂದಿರನಬರುವಿಕೆಯತ್ತಲೆ ಅದರೊಲವಿತ್ತು ನಾನು ನನ್ನ ಒಲವಿನ ದಾರಿ ಹಿಡಿದೆಬೆಳದಿಂಗಳು ನೋವ ಮರೆತುನಸುನಗುತಿತ್ತು ನಾಚುತಿತ್ತು. ಕಲ್ಪನಾ ಎಸ್ ಪಾಟೀಲ

ಕಲ್ಪನಾ ಎಸ್‌ ಪಾಟೀಲ “ನಾಚಿದ ಬೆಳದಿಂಗಳು” Read Post »

ಕಾವ್ಯಯಾನ

ಮಧು ವಸ್ತ್ರದ ಮುಂಬಯಿ “ಮಾನವನಾಗು”

ಕಾವ್ಯಸಂಗಾತಿ ಮಧು ವಸ್ತ್ರದ ಮುಂಬಯಿ “ಮಾನವನಾಗು” ಪುಟ್ಟ ಗಲ್ಲಿಯಾಗು, ಚಿಕ್ಕ, ಚೊಕ್ಕ ಹಳ್ಳಿಯಾಗು, ಹೃದಯಹೀನ ನಗರವಾಗದಿರುಎಳೆಯ ಬಿಸಿಲಾಗು, ನಗುವ ಮುಸ್ಸಂಜೆಯಾಗು,ನೆತ್ತಿ ಉರಿಸುವ ಬಿಸಿಲಾಗದಿರುಹರಿವ ನದಿಯಾಗು, ಭೋರ್ಗರೆವ ಅಬ್ಧಿಯಾಗು, ನಿಂತ ನೀರಂತೆ ಜಡ ಆಗದಿರುಸುಗಂಧದ ಧೂಪವಾಗು, ಬೆಳಕಿನ ದೀಪವಾಗು, ಅಜ್ಞಾನದ ಅಂಧಕಾರ ಆಗದಿರುಹೂವನೀವ ಗಿಡವಾಗು, ತಂಪನೀವ ವೃಕ್ಷವಾಗು, ಕಡಿಯುವ ಕೊಡಲಿ ಆಗದಿರುಪಥಿಕನಾಗು, ಮಾರ್ಗದರ್ಶಿಯಾಗು ಗುರಿಯನು ಹೊಂದದ ಅಲೆಮಾರಿ ಆಗದಿರುಕೋಪವಾಗು, ಮೌನವಾಗು ಮಾತಾಗು ಕಠೋರ ಮಾತಿನ ಪರನಿಂದಕ ಆಗದಿರುಶಕ್ತನಾಗು ಭಕ್ತನಾಗು,ಸಾತ್ವಿಕ ಹೃದಯವಂತನಾಗುನಯವಂಚಕ ಆಗದಿರುಶ್ರಮಿಕನಾಗು ಪ್ರಾಮಾಣಿಕನಾಗು, ಮಾನವನಾಗು, ಅಹಂಕಾರಿ ದಾನವನಾಗದಿರು.. ಮಧು ವಸ್ತ್ರದಮುಂಬಯಿ

ಮಧು ವಸ್ತ್ರದ ಮುಂಬಯಿ “ಮಾನವನಾಗು” Read Post »

ಇತರೆ

“ಮುಂದೆ ಅಪರೂಪವಾಗ ಬಹುದಾದ ಸೈಕಲ್”ವಿಶೇಷಲೇಖನ ಎನ್‌ ವಿ ರಮೇಶ್

ಸೈಕಲ್‌ ಸಂಗಾತಿ ಎನ್‌ ವಿ ರಮೇಶ್ “ಮುಂದೆ ಅಪರೂಪವಾಗ ಬಹುದಾದ ಸೈಕಲ್” ಸನಿಹದಲ್ಲೇ ಮುಂದೊಂದು ಕಾಲ ಬರಬಹುದು ಮನೆಯ ಗೋಡೆಯ ಮೇಲಿನ ಚಿತ್ರಗಳಲ್ಲಿ ಮಾತ್ರ ಕಾಣುವ ಸೈಕಲ್ಲನ್ನು ಮುಂದಿನ ತಲೆಮಾರಿನ ಮಗು ಏನೋ ವಿಚಿತ್ರ ವಸ್ತು ಎಂಬಂತೆ ಕಾಣಬಹುದು. ಏಕೆಂದರೆ ಹಿಂದೆ ಎಲ್ಲರೂ ಸಂಚರಿಸುತ್ತಿದ್ದ, ಬರಬರುತ್ತಾ, ಕೆಲವರು ಮಾತ್ರ ಸವಾರಿ ಮಾಡುತ್ತಿದ್ದ ಸೈಕಲ್ ಇಂದು ಕೇವಲ ಬಡವರು, ಶ್ರಮಜೀವಿಗಳು, ಕ್ರೀಡಾಪಟುಗಳು, ಬೊಜ್ಜು ಕರಗಿಸಲು ಹಲವರು ಬಳಸುತ್ತಿರುವ ವಾಹನವಾಗಿದೆ.ನಾನು ನೀವೆಲ್ಲಾ ಚಿಕ್ಕಂದಿನಲ್ಲಿ, ಅಪ್ಪ, ಅಣ್ಣ, ಅವರ ಗೆಳೆಯರು ಸೈಕಲ್ ಓಡಿಸುತ್ತಿದ್ದುದ್ದನ್ನು ಬೆರಗಾಗಿ ಕಂಡು, ನಾನು ಎಂದು ಸೈಕಲ್ ಓಡಿಸುತ್ತೇನೋ ಎಂದು ತುಂಬಾ ಆಸೆ, ಕಾತುರಗಳಿಂದ ಕಾಯುತ್ತಿದ್ದ ಆ ದಿನಗಳು ನಿಮಗೆ ನೆನಪಿದೆಯೇ? ಅಣ್ಣ, ಅಪ್ಪ, ಮಾವ, ಚಿಕ್ಕಪ್ಪ, ಸೈಕಲ್ಲಿನಲ್ಲಿ ಹೊರಟರೆ, ಆಗಾಗ ಮಕ್ಕಳಾದ ನಮ್ಮನ್ನು ಸೈಕಲ್ ಬಾರ್ ಮೇಲೆ (ಮುಂದುಗಡೆ) ಅಥವಾ ಕ್ಯಾರಿಯರ್ (ಸೈಕಲ್ ಹಿಂಭಾಗ) ಕೂರಿಸಿಕೊಂಡು ಹೋಗುವ ಗಳಿಗೆಗಾಗಿ ಅತ್ಯಂತ ಆಸಕ್ತಿ, ಕುತೂಹಲಗಳಿಂದ ಕಣ್ಣು ದೊಡ್ಡದಾಗಿ ತೆಗೆದು ಕಾಯುತ್ತಿದ್ದ ಆ ನಮ್ಮ ನಿಮ್ಮ ಬಾಲ್ಯದ ನೆನಪುಗಳು ಈಗ ಫೋಟೋದಲ್ಲಿ ಮಾತ್ರ ನೋಡ ಸಿಗುವಂತಹ ದೃಶ್ಯವಾಗಿದೆ. ಕಾಲ ಬದಲಾದಂತೆ ಈಗ ಬಹಳ ಸ್ಥಳಗಳಲ್ಲಿ ನಮ್ಮ ಜೀವನದಿಂದ ಮಾಯವಾಗಿದೆ. ಹಿಂದೆ ಇಂದಿನ ಅನೇಕ ವಾಹನಗಳು ರಸ್ತೆಗೆ ಬಂದಿರದ ಕಾಲದಲ್ಲಿ, ಸೈಕಲ್ ಎಲ್ಲ ಜನರ ದಿನನಿತ್ಯದ ಆವಶ್ಯಕತೆಯ ವಸ್ತುವಾಗಿತ್ತು. ಕಾಲ ಬದಲಾದಂತೆ, ಜನರ ಆಸೆ, ಆಸಕ್ತಿ, ಬಯಕೆ, ಬದಲಾದಂತೆ, ಜನರ ಕೈಯಲ್ಲಿ ಹೆಚ್ಚು ಹೆಚ್ಚು ಹಣ ಕುಣಿದಾಡಿದಂತೆ ಸೈಕಲ್‌ಗೆ ಪರ್ಯಾಯವಾದ ಅನೇಕ ವಾಹನಗಳು ಬಂದಿವೆ. ಸುಮಾರು ಎಪ್ಪತ್ತು ವರ್ಷಗಳ ಕೆಳಗೆ ನನಗೆ ಐದು ವರ್ಷವಾಗಿದ್ದಾಗ, ನಾನು ನನ್ನ ತಂದೆಯ ಸೈಕಲ್ಲಿನ ಮುಂಭಾಗದಲ್ಲಿ ಕುಳಿತು ಹೋಗುತ್ತಿದ್ದಾಗ ಬಲಗೈಗೆ ಸಿಗುತ್ತಿದ್ದ ಸೈಕಲ್ ಬೆಲ್ ಅನ್ನು ಟಣ್ ಟಣ್ ಎಂದು ಬಾರಿಸಿದ್ದು ಈಗಲೂ ನನ್ನ ಕಣ್ಣ ಮುಂದೆ ಕಟ್ಟಿದಂತಿದೆ. ಆ ಕಾಲದಲ್ಲಿ ನಡೆದು ಹೋಗುವವರಿಗಿಂತ, ಬಸ್ಸಿನಲ್ಲಿ ಹೋಗುವವರಿಗಿಂತ ಸೈಕಲ್ ಇಟ್ಟಿದ್ದವರೇ ಸಾಹುಕಾರರು. ಎಂದು ನಮ್ಮ ಆ ಕಾಲದ ಭಾವನೆಯಾಗಿತ್ತು. ಕ್ರಮೇಣ ಕಾಲ ಸರಿದಂತೆ ಸೈಕಲ್ ಹಿನ್ನೆಲೆಗೆ ಹೋಗಿ ನಾನಾ ತರಹದ ವಿವಿಧ ಕಂಪನಿಗಳ ಸ್ಕೂಟರ್, ಬೈಕ್, ಕಾರುಗಳು ಬಂದು ಸೈಕಲ್ ಈಗ ಬೊಜ್ಜು ಇಳಿಸಲು ಜನ ಬಳಸುವ ಒಂದು ಸಾಧನವಾಗಿದೆ. ಕ್ರೀಡಾಪಟುಗಳು ಹಾಗೂ ಶಾರೀರಿಕ ವ್ಯಾಯಾಮ ಬೇಕೆಂದವರು ಇನ್ನೊಮ್ಮೆ ಸೈಕಲ್ಲಿನ ಬೆನ್ನು ಹತ್ತಿದ್ದಾರೆ. ಮಕ್ಕಳಿಗೆ ಮೂರು ಚಕ್ರದ ಸೈಕಲ್‌ಗಳು ಹಿಂದೆ ಜನಪ್ರಿಯವಾಗಿದ್ದವು. ಆಗ ಮದುವೆಯಲ್ಲಿ  ಮಾವ ಬಲುಕಷ್ಟಪಟ್ಟು ಅಳಿಯನಿಗೆ ಕೊಡುತ್ತಿದ್ದ ಸೈಕಲ್ ಉಡುಗೊರೆ ಆಗಿನ ಕಾಲದಲ್ಲಿ ಅದೇ ಬೆಲೆಬಾಳುವ ಕಾಣಿಕೆಯಾಗಿತ್ತು. ಈಗ ಒಮ್ಮೆ ಹೇಳಿ ನೋಡಿ – ಹತ್ತು ವರ್ಷ ದಾಟಿದ ಮಗು ಸಹ, ತನಗೆ ಲೈಸೆನ್ಸ್ ಸಿಗದಿದ್ದರೂ ಬೈಕ್ ಓಡಿಸಲು ಮುಂದೆ ನುಗ್ಗುತ್ತಾನೆ ಹೊರತು ಸೈಕಲ್ ಕಂಡರೆ “ತೂ ಇದರಲ್ಲಿ ನಾನು ಹೋಗುವುದಿಲ್ಲ.” ಟಿ.ವಿಯಲ್ಲಿ, ರಸ್ತೆ ಬೋರ್ಡುಗಳಲ್ಲಿ, ಆಕರ್ಷಕ ಬ್ಯಾನರ್‌ಗಳಲ್ಲಿ, ಸಿನಿಮಾ ಟಾಕೀಸಿನ ಜಾಹೀರಾತಿನಲ್ಲಿ ಕಂಡು ಬರುವ ಚಲನಚಿತ್ರ ನಟ-ನಟಿಯರು, ಖ್ಯಾತ ಕ್ರೀಡಾಪಟುಗಳು, ಬೈಕ್-ಕಾರ್ ಓಡಿಸುವ ರೋಲ್ ಮಾಡಲ್‌ಗಳು ಇವರನ್ನು ಕಂಡು ಮರುಳಾಗಿ, ತಾವು ಯಾವಾಗ ಲಕ್ಷ ಲಕ್ಷ ರೂಪಾಯಿ ಕೊಟ್ಟು ಇಂತಹ ಬೈಕ್ ಕೊಂಡು ಸ್ನೇಹಿತ ಅಥವಾ ಸ್ನೇಹಿತೆ, ಪ್ರಿಯತಮ-ಪ್ರಿಯತಮೆಯೊಂದಿಗೆ ಜಿಗಿದು, ಹಾರಿ, ಓವರ್ ಸ್ಪೀಡಿನಲ್ಲಿ ಯರ‍್ಯಾರಿಗೋ, ಯಾವ್ಯಾವುದಕ್ಕೋ, ಡಿಕ್ಕಿ ಹೊಡೆಯುವ ವೇಗದಲ್ಲಿ ಹಾರುತ್ತೇವೆಯೋ ಎಂಬ ಭ್ರಮಾ ಲೋಕದಲ್ಲಿದ್ದಾರೆ. ಜೇಬಿನಲ್ಲಿ ದುಡ್ಡು ಇಲ್ಲದಿದ್ದರೂ. ಓದು, ಕೆಲಸ, ಇಲ್ಲದಿದ್ದರೂ ಬೈಕ್-ಕಾರುಗಳ ಹಗಲು ಕನಸು ಕಾಣುವ ಕನಸುಗಾರರ ಪ್ರಪಂಚ ಇಂದು ಎಲ್ಲೆಡೆ ಇದೆ. ವಿಶ್ವದಲ್ಲಿ ಒಂದೆಡೆ ಹೆಚ್ಚುತ್ತಿರುವ ಜನಸಂಖ್ಯೆಯ ಅಪಾರ ಬೇಡಿಕೆ, ಪೂರೈಸಲಾಗದ ಬೇಡಿಕೆ, ಕಂಡು ಬರುತ್ತಿದೆ. ಅದರಲ್ಲೂ ಈಗ ವಿಶ್ವದಲ್ಲಿ ಹಲವಾರು ತಿಂಗಳುಗಳಿAದ ನಡೆದಿರುವ ಯುದ್ಧ, ವಿವಿಧ ದೇಶಗಳ ಮಧ್ಯದ ಸಂಘರ್ಷ, ನಾ ಹೆಚ್ಚು ನನ್ನ ಮಾತು ಕೇಳು, ಇದೇ ನನ್ನ ಮಾತು ನಡೆಯಬೇಕು, ಕೇಳದಿದ್ದರೇ ಆಕ್ರಮಣ. ಈ ರೀತಿ ಪರಸ್ಪರ ಹೊಂದಾಣಿಕೆ ಇಲ್ಲದೇ, ತಿಂಗಳಾನುಗಟ್ಟಲೆ ನಡೆದ ಯುದ್ಧ, ಪ್ರತಿಕ್ಷಣ ಏನಾಗುವುದೋ ಎಂಬ ಆತಂಕ, ಭಯ ನಮ್ಮನ್ನೆಲ್ಲಾ ಆವರಿಸಿದೆ. ನಮ್ಮ ದೇಶದಲ್ಲಿ ವಿವಿಧ ಮೂಲಗಳಿಂದ ಉತ್ಪಾದನೆಯಾಗುವ ಇಂಧನ ತೈಲಗಳ ಪೂರೈಕೆಯ ಸಾಮರ್ಥ್ಯ, ಈ ದೇಶದಲ್ಲಿ ಲಭ್ಯವಿರುವ ಇಂಧನ ಇವುಗಳು, ಈ ದೇಶದಲ್ಲಿಯ ಮಿತಿಮೀರಿದ ಬೇಡಿಕೆಯ ಇಂಧನ ಪೂರೈಕೆಗೆ ದೊಡ್ಡ ಜನಸಂಖ್ಯೆಯ ದೊಡ್ಡ ಬೇಡಿಕೆ, ಪೂರೈಸಲಾಗದ, ಅತ್ಯಂತ ಕಷ್ಟದಿಂದ ಪೂರೈಸಬೇಕಾದ ಸ್ಥಿತಿಗೆ ಒಂದು ದೊಡ್ಡ ಚಾಲೆಂಜ್ ಅಥವಾ ಆಹ್ವಾನವಾಗಿದೆ. ನಮ್ಮ ದೇಶದ ಪ್ರಧಾನ ಮಂತ್ರಿಗಳು, ತೈಲ ಇಂಧನ ಪೂರೈಸುವ ಕಂಪನಿಗಳು, ಇದಕ್ಕೆ ಸಂಬAಧಿಸಿದ ಕೇಂದ್ರ ಸರ್ಕಾರದ ಇಲಾಖೆಗಳು ಹಗಲೂ ರಾತ್ರಿ ಪ್ರಯತ್ನಿಸಿದರೂ ಸಂಪೂರ್ಣ ಬೇಡಿಕೆ ಬಯಸಿದ ಕ್ಷಣದಲ್ಲಿ ಕೆಲವು ಕಡೆಗಳಲ್ಲಿ ಸಿಗುತ್ತಿಲ್ಲ. ಆಗ ಅನೇಕ ಸಾಮಾನ್ಯ ಜನ ಸರ್ಕಾರವನ್ನು ಟೀಕಿಸುತ್ತಾರೆ. ಆದರೆ ೯೯% ಪ್ರತಿಶತ ೯೯ ಜನ ಪರ್ಯಾಯ ಮಾರ್ಗಗಳನ್ನು ಬಳಸಲು ಮನಸಾರೆ ಪ್ರಯತ್ನ ಮಾಡುತ್ತಿಲ್ಲ. ವ್ಯಕ್ತಿಗಳು ತಮ್ಮ ಕುಟುಂಬದಲ್ಲೀಯ ಹಣಕಾಸು ಸೇರಿದಂತೆ ವಿವಿಧ ವಸ್ತುಗಳ ಕೊರತೆಯಾದಾಗ ಬಹಳಷ್ಟು ಬಾರಿ ಇದ್ದುದ್ದಕ್ಕೇ, ಇದ್ದಷ್ಟಕ್ಕೇ ಸುಲಭವಾಗಿ ಹೊಂದಿಕೊಳ್ಳುತ್ತಾರೆ. ಆದರೆ ದೇಶದಲ್ಲಿ ಇಂಧನ ಸಮಸ್ಯೆಯಾದಾಗ ಅದಕ್ಕೆ ತಕ್ಷಣ ಹೊಂದಿಕೊಳ್ಳಲು ನಿರಾಕರಿಸುತ್ತಾರೆ. ಬಹುಶಃ ಅದಕ್ಕೇ ಏನೋ, ಪ್ರಕೃತಿ ಮೌನವಾಗಿ ಗಹಗಹಿಸಿ ನಗುತ್ತಾ “ ನನ್ನ ಮಕ್ಕಳೇ, ನೀವು ಹೀಗೆಯೇ ಜೀವನ ಕೇವಲ ಮೋಜು ಮಸ್ತಿ ಎಂದು ತಿಳಿದುಕೊಂಡು ಭೂಮಿಯ ಮೇಲೆ ಭೂಮಿಯ ಅಂತರಾಳದಲ್ಲಿ ಇರುವ ಎಲ್ಲಾ ಸಂಪನ್ಮೂಲಗಳನ್ನೂ ದೆವ್ವ ಕಬಳಿಸುವಂತೆ ರಾಕ್ಷಸವೇಗದಲ್ಲಿ ಕಬಳಿಸುತ್ತಾ ಬರುತ್ತಿದ್ದೀರಲ್ಲವೇ? ನಾನು ನಿಮ್ಮ ವೇಗವನ್ನು ತಡೆಯ ಬಯಸಿದರೇ, ನಿಮ್ಮ ಮಧ್ಯೆ ಇರುವ ಅನುಭವಿ ಹಿರಿಯರು, ದೇಶ ಕಟ್ಟುವವರು, ಹೇಳುವ ಕಿವಿ ಮಾತನ್ನು ಅಲಕ್ಷಿಸಿಸುತ್ತಿದ್ದೀರಿ. ಹೀಗಾಗಿ ನಿಮಗೆ ಒಳ್ಳೆಯ ಮಾತಿನಿಂದ, ಮೃದುವಾಗಿ, ಸೂಕ್ಷö್ಮವಾಗಿ, ಎಷ್ಟು ಬಾರಿ ಹೇಳಿದರೂ ಕಿಂಚಿತ್ತೂ ಕಿವಿಗೆ ಹಾಕಿಕೊಳ್ಳದ ನಿಮ್ಮನ್ನು ಎಚ್ಚರಿಸಲು ಪ್ರಯತ್ನಿಸುತ್ತಿದ್ದೇನೆ. ನನ್ನ ಎಚ್ಚರಿಕೆಯ ಮಾತುಗಳ ಗಂಟೆ ನಿಮಗೆ ಕೇಳಿಸುತ್ತಿಲ್ಲ. ಎಚ್ಚರ…” ಬಹುಶಃ ಭೂದೇವಿ ಹೀಗೆ ಕಿವಿ ಕೇಳಿಸುವವರಿಗೆ ಮಾತ್ರ ಹೇಳುತ್ತಿರಬಹುದು. ನನ್ನಂತವರಿಗೆ ಮಾತ್ರ ಈ ಕರೆ ಕೇಳಿಸಿದೆ.ಪ್ರಿಯ ಯುವಜನರೇ, ನನ್ನ ಮಾತುಗಳನ್ನು ದಯವಿಟ್ಟು ಕೇಳಿ “ಭೂಗರ್ಭದೊಳಗಿಂದ ಅಗೆದು ತೆಗೆದ, ಹೂತು ಹೋಗಿದ್ದ, ಪಳೆಯುಳಿಕೆ ಇಂಧನವಾದ ಪೆಟ್ರೋಲ್, ಡೀಸಲ್, ಮುಂತಾದ ಕಚ್ಛಾತೈಲ ಹಂತ ಹಂತವಾಗಿ ಕರಗುತ್ತಾ ಬರುತ್ತಿದೆ. ಎಂಬ ಲಕ್ಷಣಗಳನ್ನು ನಿಮ್ಮ ಕಣ್ಣಿಗೆ ಕಾಣುವಂತೆ ವಿವಿಧ ರೀತಿ ಭೂದೇವಿ ನಮಗೆ ತೋರಿಸುತ್ತಿದ್ದಾಳೆ.”ಇದಕ್ಕೆ ಪರ್ಯಾಯವಾಗಿ ಜಲಜನಕ ಆಧರಿಸಿದ ಇಂಧನ ಸಮೃದ್ಧವಾಗಿ ಉತ್ಪಾದಿಸಲು ಪ್ರಯತ್ನ ನಡೆಸಿರುವ ಕೆಲವು ವಿಜ್ಞಾನಿಗಳ ಸಂಶೋಧನೆಗಳನ್ನು ನಾನು ಗಮನಿಸಿದ್ದೇನೆ. ಆದರೆ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಜನಸಂಖ್ಯೆ, ಮತ್ತು ಕರಗಲಾರದ ಪರ್ವತದಂತೆ ಹಬ್ಬುತ್ತಿರುವ ಮಾನವರ ಆಸೆಯನ್ನು ಗಮನಿಸಿದಾಗ ಇಂತಹ ಪ್ರಯತ್ನಗಳು ಎಷ್ಟೇ ನಡೆದರೂ ಬಳಕೆದಾರ ಮಾನವರ ಬೇಡಿಕೆ ಕಡಿಮೆಯಾಗುತ್ತಿಲ್ಲ. ಇಂಧನದ ಬೆಲೆ ಎಷ್ಟೇ ಹೆಚ್ಚಾಗಲೀ, ನಾವು ಕೊಂಡೇ ಕೊಳ್ಳುತ್ತೇವೆ ಎಂಬ ಹಠ, ಚೆನ್ನಾಗಿ ಸಂಪಾದಿಸುವ ಯುವಜನರದು. ಮಕ್ಕಳು ಕಣ್ಣು ಬಿಟ್ಟ ತಕ್ಷಣ ಅವರ ತಂದೆ-ತಾಯಿ ಈ ವಾಹನಗಳ ಮೇಲೆ ಕೂರಿಸಿಕೊಂಡು ಹೋಗುವುದರಿಂದ, ನೋಡ ನೋಡುತ್ತಾ ಬೆಳೆದ ಈ ಮಕ್ಕಳು ಯುವ ಜನರಾದ ತಕ್ಷಣ ತಂದೆ-ತಾಯಿಯರನ್ನೂ ಬೈಕ್‌ಗಾಗಿ ಪೀಡಿಸುತ್ತಾರೆ. ನಮ್ಮ ಮನೆ ಬಳಿ ಒಬ್ಬ ಹಿರಿಯರ ಹದಿಹರೆಯದ ಮೊಮ್ಮಗ, ಮೂರನೇ ಅಂತಸ್ತಿನಿAದ ಕೂಗುತ್ತಿದ್ದ. ದೃಶ್ಯ ನನ್ನ ಕಿವಿಗೆ ಕೇಳಿಸಿತು, ನಂತರ ನನ್ನ ಕಣ್ಣಿಗೆ ಕಾಣಿಸಿತು. ಅವನು ಜೋರಾಗಿ ಕೂಗುತ್ತಿದ್ದ “ತಾತ, ನೀನು ನನಗೆ ತಕ್ಷಣ… ಬ್ರಾö್ಯಂಡಿನ ಬೈಕ್ ತೆಗೆದುಕೊಡದಿದ್ದರೆ ನಾನು ಮೇಲಿಂದ ಹಾರಿ ಕೆಳಗೆ ಬೀಳುತ್ತೇನೆ, ಪ್ರಾಣ ಕಳೆದುಕೊಳ್ತೀನಿ ಗಾಡಿ ಇಲ್ಲದಿದ್ದರೆ, ನಾನು ಬದುಕಲಾರೆ”ಸದ್ಯದಲ್ಲಿ ವಿಶ್ವದಲ್ಲಿರುವ ಮುಂದೇನು? ಎಂಬ ಒತ್ತಡದ, ಹೆದರಿಕೆಯ ವಾತಾವರಣದಲ್ಲಿ ನಾನು ಯೋಚಿಸುತ್ತಾ ಕುಳಿತ್ತಿದ್ದಾಗ, ಒಬ್ಬ ವೃದ್ಧರು ಸೈಕಲ್ ಹೊಡೆಯುತ್ತಾ ಬಂದು ನನ್ನ ಬಳಿ ನಿಂತು ಕೇಳಿದರು. “ ನನ್ನ ಹಾಗೆ ನಿನಗೂ ಸೈಕಲ್ ಹೊಡೆಯೋಕೆ ಬರುತ್ತಾ!?” ನಾನು ನಗುತ್ತಾ ಅಂದೆ, “ಅಜ್ಜಾ, ನಾನೂ ನಿನ್ನಂತೆಯೇ ಸೈಕಲ್ ಹೊಡೆಯುತ್ತೇನೆ, ನಡೆದು ಹೋಗುತ್ತೇನೆ,” ಆ ವೃದ್ಧರು ನಗುತ್ತಾ ಆಶ್ಚರ್ಯದಿಂದ ಕೇಳಿದರು “ಯಾಕೆ ನಿನಗೆ ಬೈಕ್ ಕಾರು ಚಾಲನೆ ಮಾಡಲು ಬರುವುದಿಲ್ಲವೇ” ನಾನು ಉತ್ತರಿಸಿದೆ. “ಬರುತ್ತಿತ್ತು ಹಿಂದೆ. ನನ್ನ ಯೌವ್ವನದ ಕಾಲದಲ್ಲಿ ನಾನೂ ಮೋಪೆಡ್ ಕಲಿತು ೨೬ ವರ್ಷ ಓಡಿಸಿದ್ದೇನೆ. ಆದರೆ ವಯಸ್ಸಾಗುತ್ತಿದ್ದಂತೆ, ರಸ್ತೆಯಲ್ಲಿಯ ಜನರ ಹಾಗೂ ವಾಹನ ದಟ್ಟಣೆ, ಆಗಾಗ ಸಂಭವಿಸುವ ರಸ್ತೆ ಅಪಘಾತಗಳನ್ನು ಕಂಡು ವಾಹನ ಪ್ರಯಾಣವನ್ನು ೨೦೧೧ರ ಡಿಸೆಂಬರ್ ಒಂದರಿAದ ನಿಲ್ಲಿಸಿದ್ದೇನೆ. ಹೀಗಾಗಿ ಸೈಕಲ್ ಓಡಿಸುತ್ತೇನೆ. ಅದಕ್ಕಿಂತ ಹೆಚ್ಚಾಗಿ ವಾಕಿಂಗ್ ಹೋಗುತ್ತೇನೆ.” ಎನ್.ವ್ಹಿ.ರಮೇಶ್. ನಿವೃತ್ತ ಕಾರ್ಯಕ್ರಮ ಅಧಿಕಾರಿಗಳುಆಕಾಶವಾಣಿಮೈಸೂರುಮೊ:೯೮೪೫೫೬೫೨೩೮

“ಮುಂದೆ ಅಪರೂಪವಾಗ ಬಹುದಾದ ಸೈಕಲ್”ವಿಶೇಷಲೇಖನ ಎನ್‌ ವಿ ರಮೇಶ್ Read Post »

You cannot copy content of this page

Scroll to Top