ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 9483261944, ಇಮೇಲ್ :- sangaatipatrike@gmail.com
ಇತರೆ

ಗೊರೂರು ವಸಂತಿ ಮೂರ್ತಿ (ಕೆನಡಾ) ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಸುಪುತ್ರಿ ಅವರ ಬರಹ “ದಂತ ದೇವತೆ”

ವಿಶೇಷ ಸಂಗಾತಿ ಗೊರೂರು ವಸಂತಿ ಮೂರ್ತಿ (ಕೆನಡಾ) ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಸುಪುತ್ರಿ ಅವರ ಬರಹ “ದಂತ ದೇವತೆ” {ಪಾಶ್ಚಾತ್ಯ ದೇಶಗಳಲ್ಲಿ ಒಂದು ದಂತ ಕಥೆ ಜನಪ್ರಿಯವಾಗಿದೆ.  ಮಕ್ಕಳ ಹಾಲು ಹಲ್ಲುಗಳು ಬಿದ್ದಾಗ ಆ ಹಲ್ಲನ್ನು ದಿಂಬಿನ ಕೆಳಗೆ ಇಟ್ಟು ಮಲಗಿದರೆ ದಂತ ದೇವತೆ ಎಂಬ ಕಾಲ್ಪನಿಕ ಯಕ್ಷಿಣಿ (tooth fairy) ಬಂದು ಅದನ್ನು ತೆಗೆದುಕೊಂಡು ಅದರ ಜಾಗದಲ್ಲಿ ಹಣ ಇಟ್ಟು ಹೋಗುತ್ತಾಳೆ.  ಈ ಲೇಖನ ಆ ದಂತಕಥೆಯ ಮೇಲೆ ಆಧಾರಿತವಾಗಿದೆ.} ಮಗು ಹುಟ್ಟುವಾಗ ಅದರ ಬಾಯಲ್ಲಿ ಒಂದು ಹಲ್ಲೂ ಇರುವುದಿಲ್ಲ.  ಇದು ಮಾನವನಿಗೆ ಮಾತ್ರ ಅನ್ವಯಿಸುವ ಒಂದು ವೈಶಿಷ್ಟ್ಯ. ಮಿಕ್ಕ ಪ್ರಾಣಿಗಳಿಗೆಲ್ಲಾ ಅವು ಹುಟ್ಟುವಾಗಲೇ ಬಾಯಿನಲ್ಲಿ ಹಲ್ಲು ತಯಾರಿಮಾಡಿಕೊಂಡೇ ಬರುತ್ತವೆ.  ದೇವರು ಈ ರೀತಿ ತಾರತಮ್ಯವನ್ನು ಏಕೆ ಮಾಡಿದ್ದಾನೆ ಎಂದು ನೀವು ಕೇಳಬಹುದು.  ಅದಕ್ಕೆ ಅನೇಕ ಕಾರಣಗಳು ಇವೆ. ಅದಿರಲಿ, ಪುಟ್ಟ ಮಗುವಿನ ಬಾಯಲ್ಲಿ ಹಲ್ಲು ಕಾಣುವುದಕ್ಕೆ ಹೆಚ್ಚು ಕಡಿಮೆ ಒಂದು ವರ್ಷವೇ ಬೇಕಾಗುತ್ತದೆ.  ಹಿಂದಿನಕಾಲದಲ್ಲಿ ಮಗುವಿಗೆ ಹಲ್ಲು ಬರುವವರೆಗೆ ಅದಕ್ಕೆ ಸಿಕ್ಕುತ್ತಿದ್ದುದು ಬರಿಯ ತಾಯಿಯಹಾಲು ಅಥವಾ ಹಸುವಿನ ಹಾಲು; ದ್ರವ್ಯ ಪದಾರ್ಥಗಳು ಮಾತ್ರ. ಈಚೆಗೆ ಚಿಕ್ಕ ಮಗುವಿಗೆ ತಿನ್ನಿಸಬಹುದಾದ ಖಾದ್ಯ ಪದಾರ್ಥಗಳು ಮಾರಾಟಕ್ಕೆ ಬಂದಿವೆ.  ಮಗುವಿಗಾಗಿಯೇ ತಯಾರಿಸಿದ ಬಿಸ್ಕೆಟ್ಗಳು, ಹಣ್ಣು, ತರಕಾರಿಗಳನ್ನು ಅರೆದು ಸಣ್ಣ ಚಮಚದಲ್ಲಿ ಮಗುವಿಗೆ ತಿನ್ನಿಸುವ ತಿನಿಸುಗಳು, ಇವೆಲ್ಲ ರೂಢಿಗೆ ಬಂದಿವೆ.  ಅಲ್ಲದೇ ಮಗುವನ್ನು ಪುಷ್ಟಿಯಾಗಿ ಬೆಳೆಸಬೇಕೆಂಬ ಉದ್ದೇಶದಿಂದ ಪೋಷಕರು ಮನೆಯಲ್ಲಿಯೇ ಹಣ್ಣು ಮತ್ತು ತರಕಾರಿಗಳನ್ನು ಬೇಯಿಸಿ ಅರೆಯುವ ಮೆಶೀನ್ (ಬ್ಲೆಂಡರ್)ನಲ್ಲಿ ಹಾಕಿ ಮಗುವಿಗೆ ತಿನ್ನಿಸುವ ಅಭ್ಯಾಸ ಕೂಡ ಬಳಕೆಗೆ ಬಂದಿದೆ.  ಇದರಿಂದ ಮಗುವಿಗೆ ಹೆಚ್ಚು ಪುಷ್ಟಿಯಾದ ಆಹಾರ ದೊರೆತು ಅದರ ಬೆಳವಣಿಗೆಗೆ ಉತ್ತೇಜನವನ್ನು ಕೊಡುತ್ತದೆ.  ಅಲ್ಲದೇ ಬರಿಯ ಹಾಲನ್ನೇ ಕುಡಿಯುತ್ತಿದ್ದಾಗ ಮಗುವಿಗೆ ಊಟದಲ್ಲಿ ಅಭಿರುಚಿ ಬೆಳೆಯುತ್ತಿರಲಿಲ್ಲ.  ಊಟದ ಸಮಯ ಬಂದಾಗ ಮಗು ಉತ್ಸಾಹ ತೋರಿಸುತ್ತಿರಲಿಲ್ಲ.  ತಾಯಂದಿರಿಗೆ ಇದೊಂದು ತಲೆನೋವು.  ಮಗುವನ್ನು ರಮಿಸಿ, ಪುಸಲಾಯಿಸಿ, ಅಲ್ಲಿ ಇಲ್ಲಿ ಓಡಿಯಾಡಿಸುತ್ತಾ ಹಕ್ಕಿ, ಹೂವು, ಸೂರ್ಯ, ಚಂದ್ರರನ್ನು ತೋರಿಸುತ್ತಾ ಕಥೆ ಹೇಳಿ ಊಟವನ್ನು ಮಗುವಿನ ಹೊಟ್ಟೆಗೆ ಸೇರಿಸುವವೇಳೆಗೆ ತಾಯಿ ಕುಸ್ತಿಮಾಕುಸ್ತಿಮಾಡಿದವಳಂತೆ ಸುಸ್ತಾಗಿ ಬಿಡುತ್ತಾಳೆ.  ಊಟದ ಸಮಯ ಬೇಸರದ ಸಮಯವಾಗುತ್ತದೆ.  ಆದರೆ ಮಗುವಿಗೆ ಹಲ್ಲು ಬರುವ ಮೊದಲೇ ಅದು ಚೂರು ಉಪ್ಪು, ಹುಳಿ, ಸಕ್ಕರೆಗಳ ಸ್ವಾದವನ್ನು ಅನುಭವಿಸಿ ಚಪ್ಪರಿಸಿದ್ದರೆ ಅದಕ್ಕೆ ಊಟದಲ್ಲಿ ಖುಷಿ ಇರುತ್ತದೆ.  ಆಹಾರವನ್ನು ಕಂಡಕೂಡಲೆ ಕೈಹಾಕಿ ಬಾಯಿಗೆ ಹಾಕಿಕೊಳ್ಳುತ್ತದೆ.  ಹೀಗೆ ಆಹಾರದಲ್ಲಿ ಅಭಿರುಚಿಯನ್ನು ಪಡೆದ ಮಗು ಬೆಳೆಯುತ್ತಾ ಬೆಳೆಯುತ್ತಾ ತಿಂಡಿಪೋತನಾಗುತ್ತದೆ.  ಕೈಕಾಲು ಪುಷ್ಟವಾಗಿ ಬೆಳೆದು ಆರು ತಿಂಗಳ ಮಗು ಮಕ್ಕಳ ಕುರ್ಚಿಯಲ್ಲಿ ಭರ್ತಿಯಾಗಿ ಕುಳಿತು ಪುಟ್ಟ ಗಣೇಶನಂತೆ ಮುದ್ದಾಗಿ ಕಾಣಿಸುತ್ತದೆ. ಮುಖ್ಯವಾಗಿ ಮೊದಲ ಎರಡು ವರ್ಷದಲ್ಲಿ ಮಗು ಸಿಕ್ಕಿದ್ದನ್ನೆಲ್ಲ ರುಚಿನೋಡಿ ಆನಂದಿಸುತ್ತದೆ.  ಇದರ ಆನಂದಕ್ಕೆ ಉಂಟಾಗುವ ತಡೆ ಎಂದರೆ ಮಗುವಿಗೆ ಆರೋಗ್ಯ ಕೆಡಬಹುದೆಂಬ ಭಯದಿಂದ ಪೋಷಕರು ಸಾಕು ಎಂದಾಗ.  ಮಗುವಿಗೆ ಎರಡು ವರ್ಷವಾಗುತ್ತಾ ಬಂದಾಗ ಅದಕ್ಕೆ ಊಟದ ದಾಹ ಸ್ವಲ್ಪ ಕಡಿಮೆಯಾಗುತ್ತದೆ.  ಆಗಲೇಬೇಕು.  ಇಲ್ಲದಿದ್ದರೆ ಅದು ಅಡ್ಡಾದಿಡ್ಡಿಯಾಗಿ ಬೆಳೆದು ಒಂದು ದೈತ್ಯಾಕಾರದ ವ್ಯಕ್ತಿ ಆಗುವ ಸಂಭವವಿದೆ. ಕೆನಡದಲ್ಲಿ ನನ್ನ ಪಾಶ್ಚಾತ್ಯ ಸ್ನೇಹಿತ ದಂಪತಿಗಳು ಮೇರಿ ಮತ್ತು ಪಾಲ್ ಎಂಬುವವರಿದ್ದಾರೆ. ಅವರಿಗೆ ಐದು ವರ್ಷದ ಒಬ್ಬ ಮುದ್ದಾದ ಮಗ ಇದ್ದಾನೆ.  ಅವನನ್ನು Junior Paul ಅಥವಾ JP ಯೆಂದು ಕರೆಯುತ್ತಾರೆ.  JP ಬಹಳ ಬುದ್ಧಿವಂತನಾದ ಹುಡುಗ.  ಖುಷಿಗಾರ. ಎಲ್ಲರೊಂದಿಗೆ ಸ್ನೇಹದಿಂದ ಬೆರೆಯುತ್ತಾನೆ. ನನ್ನನ್ನು “ಮಿಸೆಸ್ ಮುರಟಿ” ಎಂದು ಸಂಬೋಧಿಸುತ್ತಾನೆ.  JPಗೆ ಐದು ವರ್ಷವಾದಾಗ kindergarten ಗೆ ಸೇರಿಸಿದರು.  JP ಖುಷಿಯಾಗಿ ಸ್ಕೂಲ್ ಗೆ ಹೋಗಿಬರುತ್ತಿದ್ದ.  ಮನೆಗೆ ಬಂದಕೂಡಲೇ ಅಮ್ಮನ ಪಕ್ಕದಲ್ಲಿ ಕುಳಿತು ತಡೆಬಡೆ ಇಲ್ಲದೆ ಮಾತನಾಡಿ ಶಾಲೆಯಲ್ಲಿ ನಡೆದಿದ್ದನ್ನೆಲ್ಲ ಅಮ್ಮನಿಗೆ ವರದಿ ಒಪ್ಪಿಸುತ್ತಿದ್ದ.  ಅವನು ಮನೆಗೆ ಬರುವವೇಳೆಗೆ ಸರಿಯಾಗಿ ಮೇರಿ ತನ್ನ ಮನೆಕೆಲಸಗಳನ್ನು ಮುಗಿಸಿ ಸ್ವಲ್ಪ ವಿರಾಮಕ್ಕಾಗಿ ಕುಳಿತುಕೊಳ್ಳುವ ಸಮಯ.  ಅವಳು ಕುಳಿತು ಮುಗುಳುನಗುತ್ತಾ ಎಲ್ಲವನ್ನೂ ಕೇಳಿಸಿಕೊಳ್ಳುವಳು. ಮಧ್ಯೆ ಮಧ್ಯೆ ಸ್ವಲ್ಪ ಕಣ್ಣನ್ನೂ ಮುಚ್ಚುವಳು.  JP ಒಂದೊಂದು ದಿನ ತಾಯಿಗೆ ಸುಸ್ತಾಗಿದೆ ಎಂದು ಯೋಚಿಸಿ, “ನೀನು ಕಣ್ಣು ಮುಚ್ಚಿ ಮಲಗು. ನಾನು ಮಾತನಾಡುವುದಿಲ್ಲ.” ಎಂದು ತನ್ನ ತುಟಿಗಳನ್ನು ಬಿಗಿಯಾಗಿ ಮುಚ್ಚಿ ತೋರಿಸುತ್ತಾನೆ.  ತಾನೇ ಅವಳ ಕಣ್ಣಿನ ರೆಪ್ಪೆಯಮೇಲೆ ತನ್ನ ಪುಟ್ಟ ಕೈಇಟ್ಟು ಅವಳ ಕಣ್ಣು ಮುಚ್ಚುತ್ತಾನೆ.  ಮೇರಿ ತನ್ನ ಕಣ್ಣನ್ನು ಮುಚ್ಚಿ ನಿದ್ದೆಮಾಡುವವಳಂತೆ ನಟಿಸುತ್ತಾಳೆ.  ತಕ್ಷಣವೇ ಪುಟ್ಟ JP ಕೊಟ್ಟ ಭಾಷೆಯನ್ನು ಮರೆತು ಹರಟೆ ಹೊಡೆಯಲು ಶುರುಮಾಡುತ್ತಾನೆ. ಸ್ಕೂಲ್ ನಲ್ಲಿ JPಗೆ ಒಬ್ಬ ಸ್ನೇಹಿತನಿದ್ದಾನೆ.  ಅವನ ಹೆಸರು ಜಾನ್ (John) ಎಂದು. ಜಾನ್ JP ಗಿಂತ ಆರು ತಿಂಗಳು ದೊಡ್ಡವನು.  JP ಗೆ ಜಾನ್ ಒಬ್ಬ ಹೀರೋ.  ಜಾನ್ಗೆ ಗೊತ್ತಿಲ್ಲದ ವಿಚಾರವೇ ಇಲ್ಲ ಎಂದು ಅವನ ಭಾವನೆ. ಜಾನ್ ಹೇಳಿದ್ದೇ ವೇದವಾಕ್ಯ.  ಪ್ರತಿದಿನವೂ ಸ್ಕೂಲ್ ನಿಂದ ಬಂದಮೇಲೆ ಜಾನ್ ಹೀಗೆ ಹೇಳಿದ ಜಾನ್ ಹಾಗೆ ಹೇಳಿದ ಎಂದು ಮೇರಿಗೆ ವರದಿ ಒಪ್ಪಿಸುತ್ತಾನೆ. ಒಂದು ದಿನ JP ಮನೆಗೆ ಬಂದಕೂಡಲೇ ಅಮ್ಮನ ಪಕ್ಕದಲ್ಲಿ ಕುಳಿತು ತುಂಬಾ ಉತ್ಸಾಹದಿಂದ ನನ್ನ ಸ್ನೇಹಿತ ಜಾನ್ಗೆ ಬಾಯಲ್ಲಿ ಒಂದು ಹಲ್ಲು ಅಲ್ಲಾಡುತ್ತಿದೆ.  ಜಾನ್ ತಾಯಿ ಅವನ ಬಾಯಲ್ಲಿರುವ ಎಲ್ಲ ಹಲ್ಲುಗಳೂ ಒಂದೊಂದಾಗಿ ಬಿದ್ದುಹೋಗುತ್ತವೆ ಎಂದು ಹೇಳಿದಳಂತೆ.  JP ಅಮ್ಮನ ಮುಖವನ್ನು ನೇರವಾಗಿ ನೋಡುತ್ತಾ “ಅದು ಸುಳ್ಳು ರೈಟ್?” ಎಂದು ತಲೆ ಅಲ್ಲಾಡಿಸುತ್ತಾ ಕೇಳಿದ.  ಮೇರಿ ಮಗನ ಮುಖವನ್ನು ದಿಟ್ಟಿಸಿ ನೋಡಿದಳು.  JPಯ ಮುಖ ಮತ್ತು ಕಣ್ಣುಗಳಲ್ಲಿ ಸ್ವಲ್ಪ ಭಯ ಕಾಣಿಸುತ್ತಿತ್ತು.  ಧ್ವನಿಯೂ ಅದನ್ನೇ ಸೂಚಿಸಿತು.  ಮೇರಿ ತಕ್ಷಣವೇ ಅವನನ್ನು ತಬ್ಬಿ ಮುತ್ಟುಕೊಟ್ಟು ದೊಡ್ಡದಾಗಿ ನಗುತ್ತಾ, “ಅದು ಹಾಗಲ್ಲ.  ಮಗು ಚಿಕ್ಕದಾಗಿದ್ದಾಗ ಅದು ಬರೀ ಮೃದುವಾಗಿರುವ ಪದಾರ್ಥಗಳನ್ನು ತಿನ್ನುತ್ತದೆ.  ಹಾಲನ್ನು ಕುಡಿಯುತ್ತದೆ.  ಆಗ ಅದಕ್ಕೆ ಬರೀ  ಮೆದುಪದಾರ್ಥಗಳನ್ನು ತಿನ್ನುವ ಹಲ್ಲು ಬಾಯಿನಲ್ಲಿರುತ್ತದೆ.  ಆ ಹಲ್ಲಿಗೆ ಮಿಲ್ಕ್ ಟೀತ್  (ಹಾಲು ಕುಡಿಯುವ ಹಲ್ಲು ) ಎಂದು ಹೆಸರು.   ಆದರೆ ನೀನು ಈಗ ದೊಡ್ಡವರು ತಿನ್ನುವ ಎಲ್ಲ ಆಹಾರವನ್ನೂ ತಿಂದು ಕಟ್ಟುಮಸ್ತಾಗಿ ಶಕ್ತಿಶಾಲಿಯಾಗಿ ಬೆಳೆಯಬೇಕು. ನೀನು ನಿನ್ನ ಡ್ಯಾಡಿಗಿಂತ ಎತ್ತರವಾಗಿ ಬೆಳೆಯಬೇಕು.  ಬಾಸ್ಕೆಟ್ ಬಾಲ್, ವಾಲಿಬಾಲ್ ಎಲ್ಲ ಆಡಬೇಕಲ್ಲವೇ?  ಅದರಿಂದಲೇ ಈ ಬೇಬಿ ಹಲ್ಲುಗಳು ಬಿದ್ದಕೂಡಲೇ ದಂತದೇವತೆಯು ನಿನಗಾಗಿಯೇ ಮಾಡಿರುವ ಮುತ್ತಿನಂತೆ ಅಂದವಾಗಿರುವ ಹಲ್ಲುಗಳನ್ನು ಕೊಡುತ್ತಾಳೆ. ಎಂದು ತುಂಬಾ ಪ್ರೀತಿಯಿಂದ ವಿವರಿಸಿದಳು.  ಕೂಡಲೇ JP ಕುಳಿತಲ್ಲಿಂದ ಎದ್ದು ನಿಂತು ಕುಪ್ಪಳಿಸಿ ಕೈಯನ್ನು ಆಕಾಶದೆಡೆಗೆ ಎತ್ತಿ ನಾನು ಇಷ್ಟು ಎತ್ತರ ಬೆಳೆಯುತ್ತೇನೆ, ಹೀಗೆ ಬಾಸ್ಕೆಟ್ ಬಾಲ್ ಆಡುತ್ತೇನೆ ಎಂದು ಕೈ ಬೀಸಿ ಎದೆ ತಟ್ಟಿಕೊಂಡ.  ಮೇರಿಗೆ  ಹಿಡಿಸಲಾರದಷ್ಟು ಸಂತೋಷವಾಯಿತು.  ಅವಳು ಮಗನನ್ನು ಎತ್ತಿ ಮುದ್ದಾಡಿದಳು. ಆಮೇಲೆ JP ಸ್ಕೂಲ್ನಿಂದ ಮನೆಗೆ ಬಂದಮೇಲೆ ಪ್ರತಿದಿನವೂ ಜಾನ್ ನ ಹಲ್ಲಿನ ಕಥೆಯೇ.  ಈ ದಿನ ಜಾನ್ ಹಲ್ಲಿನಲ್ಲಿ ಸ್ವಲ್ಪ ರಕ್ತ ಬಂತು.  ಇನ್ನೊಂದು ದಿನ ಜಾನ್ ಕೈ ಬೆರಳನ್ನು ಬಾಯಲ್ಲಿ ಹಾಕಿ ಹಲ್ಲನ್ನು ಬೀಳಿಸುವುದಕ್ಕೆ ಪ್ರಯತ್ನಿಸಿದ.  ಆದರೆ ಟೀಚರ್ “ಹಾಗೆ ಮಾಡಬಾರದು.  ಅದಾಗಿಯೇ ಬೀಳುವವರೆಗೆ ಕಾಯಬೇಕು” ಎಂದರು. ಹೀಗೆ ಎರಡುವಾರ ಕಳೆದಮೇಲೆ ಜಾನ್ ನ ಹಲ್ಲು ಬಿದ್ದಿತು.  ಅವನು ಅದನ್ನು ತನ್ನ ಕೈನಲ್ಲಿ ಹಿಡಿದುಕೊಂಡು ಟೀಚರ್ ಬಳಿಗೆ ಬಂದು ತೋರಿಸಿದ.  ಆಕೆ ಅದನ್ನು ಒಂದು ಪೇಪರ್ ಕವರಿನಲ್ಲಿ ಹಾಕಿ “ನೀನು ಇದನ್ನು ನಿನ್ನ ತಾಯಿಯ ಕೈನಲ್ಲಿ ಜೋಪಾನವಾಗಿ ಕೊಡು.  ಈ ಕವರನ್ನು ನಿನ್ನ ದಿಂಬಿನ ಕೆಳಗೆ ಇಟ್ಟು ಮಲಗಬೇಕು.  ನೀನು ನಿದ್ದೆ ಮಾಡುತ್ತಿರುವಾಗ ದಂತದೇವತೆ ಬಂದು ಅದನ್ನು ತೆಗೆದುಕೊಂಡು ಹೋಗುತ್ತಾಳೆ.  ನಿನ್ನ ತಲೆದಿಂಬಿನ ಕೆಳಗೆ ದುಡ್ಡು ಇಡುತ್ತಾಳೆ.  ನೀನು ನಿನ್ನ ಬೇಬೀ ಹಲ್ಲನ್ನು ಚೆನ್ನಾಗಿ ನೋಡಿಕೊಂಡು ಅವಳಿಗೆ ವಾಪಸ್ಸು ತಲಪಿಸಿದ್ದಕ್ಕೆ ಅವಳಿಗೆ ಸಂತೋಷವಾಗಿದೆ ಎಂದು ಅರ್ಥ” ಎಂದು ಹೇಳಿದಳು.  ಇದನ್ನೆಲ್ಲಾ ಕಣ್ಣಾರೆ ನೋಡಿದ JP ಗೆ ಆಶ್ಚರ್ಯಯವೋ ಆಶ್ಚರ್ಯ.  ದಂತದೇವಿ ದುಡ್ಡು ಕೊಡುತ್ತಾಳೆಯೇ?  ಹಾಗಾದರೆ ನನ್ನ ಹಲ್ಲೂ ಬೇಗ ಬಿದ್ದರೆ ನನಗೂ ದುಡ್ಡು ಸಿಗುತ್ತದೆ ಎಂದು ಖುಷಿಪಟ್ಟ.  ಸ್ಕೂಲ್ನಿಂದ ಮನೆಗೆ ಓಡಿಬಂದು “ನನ್ನ ಹಲ್ಲು ಬಿದ್ದಾಗ ನನಗೂ ದುಡ್ಡು ಸಿಗುತ್ತದೆಯೇ ಎಂದು ಮೇರಿಯ ಮುಖವನ್ನು ಕಾತರದಿಂದ ನೋಡಿದ.  ಅವಳು “ಖಂಡಿತ ದಂತದೇವಿ ಎಲ್ಲರಿಗೂ ದುಡ್ಡು ಕೊಡುತ್ತಾಳೆ.  ನೀನು ಅವಳು ಕೊಟ್ಟ ಹಲ್ಲನ್ನು ಅವಳಿಗೆ ಹಿಂತಿರುಗಿಸುತ್ತಿರುವುದು ಅವಳಿಗೆ ತುಂಬಾ ಸಂತೋಷವನ್ನುಂಟು ಮಾಡುತ್ತದೆ.  ಅದಕ್ಕೇ ಎಲ್ಲ ಮಕ್ಕಳಿಗೂ ದುಡ್ಡು ಸಿಕ್ಕುತ್ತದೆ.” ಎಂದು ಪೂರ್ಣ ವಿಶ್ವಾಸದಿಂದ ಹೇಳಿದಳು.  ಈಗ  JP ಗೆ ಹಲ್ಲು ಬೀಳುವ ಭಯ ಹೊರಟುಹೋಯಿತು.  ಎಷ್ಟುಬೇಗ ಹಲ್ಲು ಬಿದ್ದರೆ ಅಷ್ಟು ಒಳ್ಳೆಯದು.  ನನಗೆ ದಂತದೇವಿಯಿಂದ ದುಡ್ಡು ಸಿಗುತ್ತದೆ ಮತ್ತು ಅವಳಿಗೆ ನನ್ನ ವಿಚಾರದಲ್ಲಿ  ಸಂತೋಷವಾಗುತ್ತದೆ ಎಂದು ನಿರೀಕ್ಷಿಸತೊಡಗಿದ. ಹೀಗೆ ಒಂದೆರಡು ವಾರ ಕಳೆದಮೇಲೆ JP ಒಂದು ದಿನ ಸ್ಕೂಲ್ನಿಂದ ವಾಪಸ್ಸು ಬರುವಾಗ ಬಿರುಗಾಳಿಯಂತೆ ಓಡಿಬಂದು ಅಮ್ಮನ ಮೇಲೆ ಬಿದ್ದು   ತಬ್ಬಿಕೊಂಡ.  ಅವನು ಬಿದ್ದ ರಭಸಕ್ಕೆ ಮೇರಿ ಹಿಂದಕ್ಕೆ ವಾಲಿದಳು.  ಕಾರಣ ಇಷ್ಟೇ. JPಯ ಹಲ್ಲು ಅಲ್ಲಾಡುತ್ತಿದೆ.  ಆದಿನ JP ಎಲ್ಲರಿಗೂ ತನ್ನ ಅಲ್ಲಾಡುತ್ತಿರುವ ಹಲ್ಲನ್ನು ಮತ್ತೆ ಮತ್ತೆ ಅಲ್ಲಾಡಿಸಿ ತೋರಿಸಿದ.  ಸಂಜೆಎಲ್ಲಾ ಹಲ್ಲಿನ ವಿಚಾರವೇ.  ಅದು ಬಿದ್ದುಹೋಗಿ ಹೊಸಹಲ್ಲು ಬರುವ ವಿಚಾರವಾಗಿ JP, ಮೇರಿ ಮತ್ತು ಪಾಲ್ ಯಥೇಚ್ಚವಾಗಿ ಚರ್ಚೆ ಮಾಡಿದರು.  ಮೇರಿ ಗೂಗಲ್ನಲ್ಲಿ ಸಂಶೋಧನೆ ಮಾಡಿ JP ಮತ್ತು ಪಾಲ್ ಮುಂದೆ ಮಾಹಿತಿಯನ್ನು  ಓದಿದಳು.  ಎಲ್ಲರಿಗೂ ಖುಷಿ ಆಯಿತು.  ಆಮೇಲೆ JP ದಿನವೂ ಹಲ್ಲನ್ನು ಮುಟ್ಟುವುದು, ಅಲ್ಲಾಡಿಸುವುದು ಶುರು ಮಾಡಿದ.  ಮೇರಿ ಸ್ವಲ್ಪ ಧ್ವನಿ ಎತ್ತರಿಸಿ “JP!! ನೀನು ಸದಾ ಹಲ್ಲನ್ನು ಮುಟ್ಟುತ್ತಿರುವುದು ಸರಿಯಲ್ಲ.  ಅದನ್ನು ನಿಲ್ಲಿಸು” ಎಂದು ಖಚಿತವಾದ ಧ್ವನಿಯಲ್ಲಿ ಹೇಳಿದಳು.  ಅದೂ ಸಫಲವಾಗದಿದ್ದಾಗ, “ನೀನು ಅಲ್ಲಾಡಿಸಿ ಹಲ್ಲನ್ನು ಬೀಳಿಸಿದರೆ ದಂತ ದೇವತೆಗೆ ಇಷ್ಟವಾಗುವುದಿಲ್ಲ.  ಆ ಹಲ್ಲು ಬಿದ್ದಾಗ ಅವಳು ನಿನಗೆ ದುಡ್ಡು ಕೊಡುವುದಿಲ್ಲ.” ಎಂದು ಬೆದರಿಸಿದಳು.  ಅಂತೂ ಇಂತೂ JPಯ ಹಲ್ಲು ಸಡಿಲವಾಗಿ ಒಂದೇ ಒಂದು ಎಳೆಯಲ್ಲಿ ಅವನ ಒಸಡಿಗೆ ಅಂಟಿಕೊಂಡಿತ್ತು.  JP ಸ್ಕೂಲ್ಗೆ ಹೋಗುವಾಗ “ಅಮ್ಮ ಈದಿನ ನನ್ನ ಹಲ್ಲು ಬೀಳುತ್ತದೆ.  ನೋಡು ಅದು ಒಂದು ಚೂರು ಮಾತ್ರ ಅಂಟಿಕೊಂಡಿದೆ ಎಂದು ಬಾಯಿಬಿಟ್ಟು ತನ್ನ ಹಲ್ಲನ್ನು ಮೇರಿಗೆ ತೋರಿಸಿದ.  ಅವಳು ಮುಗುಳು ನಕ್ಕು, “ಅದನ್ನ ಮುಟ್ಟಬೇಡ” ಎಂದು ಎಚ್ಚರಿಸಿದಳು. JPಯ ಸ್ಕೂಲ್ನಲ್ಲಿ ಬೆಳಿಗ್ಗೆ 10:30ಕ್ಕೆ ಆಟಕ್ಕೆ ಬಿಡುವು.  ಬೆಲ್ ಆದಕೂಡಲೇ ಎಲ್ಲ ಮಕ್ಕಳೂ ಹೊರಗೆ ಓಡಿಹೋಗಿ ಆಟದ ಮೈದಾನದಲ್ಲಿ ಜೂಟಾಟ, ಮೆಟ್ಟಲು ಹತ್ತುವುದು, ಜಾರೋಬಂಡೆ, sandbox (ಮರಳು ಪೆಟ್ಟಿಗೆ), ಇವುಗಳಲ್ಲಿ ಆಟವಾಡಿ ಮತ್ತೆ ಬೆಲ್ ಆದಕೂಡಲೇ ಒಳಕ್ಕೆ ಹೋಗಬೇಕು.  ಬೆಲ್ ಶಬ್ದ ಕೇಳಿದಕೂಡಲೇ ಎಲ್ಲ ಮಕ್ಕಳೂ ಹಿಂದಿನಬಾಗಿಲಿಗೆ ಹೋಗಿ ಅಲ್ಲಿ ಟೀಚರ್ ಅಟ್ಟೆಂಡನ್ಸ್ ತೆಗೆದುಕೊಂಡು ಮಕ್ಕಳನ್ನು ಒಳಕ್ಕೆ ಬಿಡುತ್ತಾಳೆ.  ಈದಿನ ಮಾತ್ರ JP ಬಾಗಿಲಿನ ಕಡೆ ಓಡಲಿಲ್ಲ.  ಟೀಚರ್ “ಯಾಕೆ JP ಬಂದಿಲ್ಲ” ಎಂದು ವಿಚಾರಿಸಿದಾಗ JPಯ ಸ್ನೇಹಿತ

ಗೊರೂರು ವಸಂತಿ ಮೂರ್ತಿ (ಕೆನಡಾ) ಗೊರೂರು ರಾಮಸ್ವಾಮಿ ಅಯ್ಯಂಗಾರ್ ಅವರ ಸುಪುತ್ರಿ ಅವರ ಬರಹ “ದಂತ ದೇವತೆ” Read Post »

ಕಾವ್ಯಯಾನ, ಗಝಲ್

ಜ್ಯೋತಿ ಮಾಳಿ ಬೆಳಗಾವಿ ಅವರ ಗಜಲ್

ಕಾವ್ಯ ಸಂಗಾತಿ ಜ್ಯೋತಿ ಮಾಳಿ ಬೆಳಗಾವಿ ಗಜಲ್ ಒಡವೆ ತೊಡುವ ಆಸೆಯಲಿ  ಕಿವಿ ಚುಚ್ಚಿಸಿಕೊಳ್ಳುತಿರುವೆನುಮರೆಯಾಗಲೆಂದು ಮಣ್ಣಿನಲಿ ಮುಖ ಮುಚ್ಚಿಸಿಕೊಳ್ಳುತಿರುವೆನು ಇರುವ ಗಾಯಗಳ ಲೆಕ್ಕ ಸಾಲದಾಯಿತು ಈ ಜೀವನಕೆನಯವಂಚಕರ  ನಾಲಿಗೆಯಲಿ ಬಾಳ ಕೊಚ್ಚಿಸಿಕೊಳ್ಳುತಿರುವೆನು ಪುಟ ತಿರುವಿದಷ್ಟು ಪೂರ್ಣ ವಿರಾಮವಿರದ ಸಾಲುಗಳಿವೆಬೇಡವಾಗಿರುವ ಬದುಕಿನಲಿ ವಿಧಿ ಮೆಚ್ಚಿಸಿಕೊಳ್ಳುತಿರುವೆನು ಬೆವರು ಬಸಿದರೆ ಸಾಲದೇನು ಈ  ಹಾಳು ಜನುಮಕೆರಕುತ ಸುರಿಸಿ  ಭಕುತಿಯಲಿ ದೈವ ನೆಚ್ಚಿಸಿಕೊಳ್ಳುತಿರುವೆನು ನಡೆದ ದಾರಿಯಲಿ ನರಳುತಿವೆ  ಜ್ಯೋತಿ  ಹೆಜ್ಜೆ ಗುರುತುಗಳುಸುಮ್ಮನಿರದೆ  ಗದ್ದಲದಲಿ ಹಾವು ಕಚ್ಚಿಸಿಕೊಳ್ಳುತಿರುವೆನುಜ್ಯೋತಿ ಮಾಳಿ ಬೆಳಗಾವಿ

ಜ್ಯೋತಿ ಮಾಳಿ ಬೆಳಗಾವಿ ಅವರ ಗಜಲ್ Read Post »

ಕಾವ್ಯಯಾನ

ಡಾ. ದಾನಮ್ಮ ಝಳಕಿ ಅವರ ಕವಿತೆ “ಮತ್ತೆ ಹಾರಿತು ಹಕ್ಕಿ”

ಕಾವ್ಯ ಸಂಗಾತಿ ಡಾ. ದಾನಮ್ಮ ಝಳಕಿ “ಮತ್ತೆ ಹಾರಿತು ಹಕ್ಕಿ” ಮುರಿದ ರೆಕ್ಕೆಗಳ ನೋವನುಮರೆತಂತೆ ಕಂಡ ಆ ಹಕ್ಕಿ,ಗಾಳಿಯ ಕ್ರೂರ ಕೈಗಳಲ್ಲಿ ಸಿಲುಕಿನೆಲಕ್ಕೊಮ್ಮೆ ಬಿದ್ದಿತ್ತು. ಆಕಾಶವೆಂದರೆ ಕನಸು,ಹಾರಾಟವೆಂದರೆ ಬದುಕು,ಎಂದು ತಿಳಿದ ಅದರ ಕಣ್ಣಲ್ಲಿಅಂದು ಕತ್ತಲೆ ತುಂಬಿತ್ತು. ಗೂಡಿನ ಮೂಲೆಗೊಮ್ಮೆ ಕುಳಿತುಗಾಯಗಳನ್ನೇ ಎಣಿಸುತ್ತ,“ಇನ್ನು ಹಾರಲಾರೆನೋ?” ಎಂಬಮೌನದ ಪ್ರಶ್ನೆಯೊಂದಿತ್ತು. ಬೆಳಗಿನ ಮೊದಲ ಕಿರಣಅದರ ರೆಕ್ಕೆಗೆ ಮುತ್ತಿಟ್ಟಾಗ,ಒಣಗಿದ್ದ ಕನಸಿನೊಳಗೊಂದುಹೊಸ ವಸಂತ ಮೂಡಿತು. ಗಾಳಿಯೇ ಮತ್ತೆ ಕರೆದಿತು“ಬಾ, ಹೆದರಬೇಡ!” ಎಂದಿತು,ಬಿದ್ದ ನೆಲವನ್ನೇ ಮೆಟ್ಟಿಲಾಗಿಸಿಆ ಹಕ್ಕಿ ಮೇಲೇರಿತು. ಒಮ್ಮೆ… ಎರಡು ಬಾರಿ…ರೆಕ್ಕೆಗಳು ನಡುಗಿದವು,ಆದರೂ ಸೋಲಿನ ನೆನಪುಗಳ ಮೇಲೆಧೈರ್ಯದ ಗೀತೆ ಬರೆದವು. ಈ ಬಾರಿ ಕೇವಲ ಆಕಾಶಕ್ಕಲ್ಲ,ತನ್ನೊಳಗಿನ ಭಯದಾಚೆಗೆ;ಈ ಬಾರಿ ಕೇವಲ ಬದುಕಿಗಲ್ಲ,ಬದುಕಿನ ಅರ್ಥದಾಚೆಗೆ. ಬಿರುಗಾಳಿಗಳು ಬಂದರೂಇನ್ನು ಅದು ನಿಲ್ಲುವುದಿಲ್ಲ,ಮುರಿದ ರೆಕ್ಕೆಗಳ ಇತಿಹಾಸವನ್ನೇಸೋಲಿನ ಕಥೆ ಎನ್ನುವುದಿಲ್ಲ. ಬೀಳುವುದು ಅಂತ್ಯವಲ್ಲ,ಕಣ್ಣೀರು ದೌರ್ಬಲ್ಯವಲ್ಲ;ಮತ್ತೆ ಎದ್ದು ಹಾರುವ ಕ್ಷಣವೇಜೀವನದ ನಿಜವಾದ ಜಯಗಾಥೆ! ಆಕಾಶ ವಿಶಾಲವಾಗಿತ್ತು,ದಿಕ್ಕುಗಳು ಕೈಬೀಸಿ ಕರೆದವು,ಬಂಧನಗಳೆಲ್ಲ ಕೆಳಗಿಳಿದಾಗಸ್ವಾತಂತ್ರ್ಯ ಹಾಡಾಗಿ ಮೊಳಗಿತು. ಮತ್ತೆ ಹಾರಿತು ಹಕ್ಕಿ…ಮುರಿದ ರೆಕ್ಕೆಗಳನ್ನೇ ಬಲವಾಗಿಸಿಕೊಂಡು,ಸತ್ತ ಕನಸುಗಳನ್ನೇ ಜೀವವಾಗಿಸಿಕೊಂಡು,ತನ್ನ ಸೋಲನ್ನೇ ಮೆಟ್ಟಿಲಾಗಿಸಿಕೊಂಡು— ಮತ್ತೆ ಹಾರಿತು ಹಕ್ಕಿ…ಈ ಬಾರಿಆಕಾಶವನ್ನೇ ತನ್ನದಾಗಿಸಿಕೊಂಡುಕೇವಲ ಹಕ್ಕಿಯಾಗಿ ಅಲ್ಲ,ಸೋಲಿನ ಸಮಾಧಿಯ ಮೇಲೆಗೆಲುವಿನ ಗೀತೆ ಹಾಡುವಸ್ವಾತಂತ್ರ್ಯದ ಪ್ರತೀಕವಾಗಿ ಡಾ. ದಾನಮ್ಮ ಝಳಕಿ

ಡಾ. ದಾನಮ್ಮ ಝಳಕಿ ಅವರ ಕವಿತೆ “ಮತ್ತೆ ಹಾರಿತು ಹಕ್ಕಿ” Read Post »

ಅಂಕಣ ಸಂಗಾತಿ, ಅರ್ಜುನ ಉವಾಚ

ಧಾರಾವಾಹಿ ಸಂಗಾತಿ-41 ಡಾ.ವಿಶ್ವನಾಥ್‌ ಎನ್ ನೇರಳೆಕಟ್ಟೆ ಅರ್ಜುನ ಉವಾಚ ಮಕ್ಕಳಿಗೆ ಜನುಮವಿತ್ತು ಮಾತೆ ಎನಿಸಿಕೊಂಡಳು ಸೀತೆ ಲಕ್ಷ್ಮಣನ ಶಿರವದು ಕಣ್ಣಿಂದ ಮರೆಯಾದ ಒಡನೆಯೇ ಬಾಯಾರಿಕೆಯಿಂದ ಕಂಗೆಟ್ಟು ಬಳಲಿದಳು ಸೀತೆ. ಭಯ ಶೋಕಗಳು ಅವಳನ್ನು ಆವರಿಸಿದವು. ಬುಡದಿಂದಲೇ ಕೊಲ್ಲಲ್ಪಟ್ಟ ಬಳ್ಳಿಯಂತೆ ಭೂಮಿಯ ಮೇಲೊರಗಿದಳು ಭೂಮಿಯ ಮಗಳು.ರಾಮಕರುಣೆಗೆ ಈಡಾಗದ ಅವಳ ಮೇಲೆ ಕಾರುಣ್ಯ ಕಣ್ಣೋಟ ಹರಿಸಿದ್ದು ಅಲ್ಲಿದ್ದ ಪಕ್ಷಿ ಪ್ರಾಣಿಗಳು. ಸೀತಾಮಾತೆಯ ಸೋತ ಪರಿಯನ್ನು ಕಂಡ ಮೃಗ- ಖಗಗಳು ಅವಳ ಬಳಿಬಂದವು. ತಮ್ಮ ತಮ್ಮ ವೈರತ್ವವನ್ನೇ ಮರೆತವು. ಆಹಾರ ಬೇಕೆನಿಸಲಿಲ್ಲ ಅವುಗಳಿಗೆ ಆ ಸಮಯಕ್ಕೆ. ಅಲ್ಲಿದ್ದ ಗಿಡ- ಮರ- ಬಳ್ಳಿ- ಕಲ್ಲುಗಳಲ್ಲಿಯೂ ಶೋಕಭಾವ ಮೂಡಿತು. ಒಳ್ಳೆಯ ಗುಣದವಳ ಅಳಿವನ್ನು, ಅಳುವನ್ನು ಸಹಿಸದಾಯಿತು ಅಲ್ಲಿಯ ಪರಿಸರ.ದುಂಬಿಗಳ ನಾದವದು ನಿಂತೇಹೋಯಿತು. ನವಿಲುಗಳ ಕುಣಿತದ ಉತ್ಸಾಹ ಇನ್ನಿಲ್ಲವಾಯಿತು. ಚಕ್ರವಾಕ ಪಕ್ಷಿಗಳಿಗೆ ಬೆರೆಯುವ ಮನಸ್ಸಿಲ್ಲ. ಹಂಸಗಳಿಗೆ ನಡೆಯುವುದರೆಡೆಗೆ ಗಮನವಿಲ್ಲ. ಮೌನವಾದವು ಗಿಳಿಗಳು. ಮೌನಿಗಳಾದವು ಕೋಗಿಲೆಗಳು. ಜಿಂಕೆ. ಆನೆ, ಸಿಂಹ ಇವೆಲ್ಲವೂ ಸೀತೆಯ ಶೋಕಕ್ಕೆ ಸ್ಪಂದಿಸಿದವು, ತಂತಮ್ಮ ರೀತಿಯಲ್ಲಿ.ಪರಿತಾಪದಲ್ಲಿದ್ದ ಸೀತೆಯ ಹೃದಯತಾಪವದು ಅಳಿದುಹೋಗುವಂತೆ ಚಾಮರವ ಬೀಸಿದವು ಚಮರೀ ಮೃಗಗಳು. ಸೀತೆಯ ಕಣ್ಣೀರು ಇನ್ನಿಲ್ಲವಾಗುವಂತೆ ನೀರ ಹನಿಗಳನ್ನು ಚಿಮುಕಿಸಿದವು ನೀರ ಹಕ್ಕಿಗಳು.ಗಂಗಾನದಿಯ ಅಲೆಯ ಮಧ್ಯೆ ಸಿಲುಕಿ ಹೊರಬರದಂತಾಗಿದ್ದರೂ, ಗಂಗೆಯೊಡಲಲ್ಲಿದ್ದ ಕಮಲ ಸುವಾಸನೆಯನ್ನು ಪೂರ್ಣ ಹೊತ್ತು ತರಲಾಗದಿದ್ದರೂ ಸೀತೆಗೆ ಸುಖವನ್ನು ನೀಡಲೇಬೇಕೆಂದು ಬಯಸಿದ ತಂಗಾಳಿಯದು ಗಂಗೆಯ ನೀರಿನ ತಂಪನ್ನು ಹೊಂದಿದ, ಗಂಗೆಯ ಪದುಮ ಗಂಧದಿAದ ಕೂಡಿದ ಗಂಗಾಳಿಯಾಗಿ ಬಂದು ತಲುಪಿತು ಸೀತಾಮಾತೆಯ ಮುಖವನ್ನು, ಮೃದು ಮಧುರ ಭಾವದಲ್ಲಿ ಸ್ಪರುಷಿಸಿ.ಚೇತರಿಸಿಕೊಂಡಳು ಸೀತೆ. ತನಗಿನ್ನು ದಾರಿಯೇನಿದೆ ಎಂದು ಅತ್ತಿತ್ತ ನೋಡಿದಳು. ಶಿಥಿಲವಾಗಿತ್ತು ಅವಳ ಅಂಗಾAಗಗಳು. ಶರೀರವೆಲ್ಲಾ ಧೂಳು ಹಿಡಿದಿತ್ತು. ಮುಡಿ ಬಿಚ್ಚಿಹೋಗಿತ್ತು. ಅದಾವುದೂ ಗಣನೆಗೆ ಬರಲಿಲ್ಲ ಅವಳಿಗೆ ಆ ಕ್ಷಣದಲ್ಲಿ. ಮಿಥಿಲೇಂದ್ರ ವಂಶದಲ್ಲಿ ಜನಿಸಿದ ತಾನು ದಶರಥನ ಸೊಸೆ ಎನಿಸಿಕೊಂಡಿದ್ದರೂ ಈ ಬಗೆಯಲ್ಲಿ ಕಾಡಿನಲ್ಲಿ ದಿಕ್ಕೆಟ್ಟು ಅಲೆಯುವಂತಾಯಿತಲ್ಲಾ! ಎಂದು ರೋಧಿಸಿದಳು, ಕಲ್ಲಿನ ಎದೆಯದು ಕರಗುವಂತೆ.ಈ ಕ್ಷಣವೇ ತೊರೆದುಬಿಡುತ್ತೇನೆ ಈ ಪ್ರಾಣವನ್ನು ಎಂಬ ಯೋಚನೆ ಬಂತು ಅವಳಲ್ಲಿ. ಮರುಕ್ಷಣವೇ, ಭ್ರೂಣಹತ್ಯಾದೋಷಕ್ಕೆ ಗುರಿಯಾಗುವ ಅಳುಕು ಅವಳನ್ನು ಕಾಡಿತು. ಹೀಗೆ ಬಗೆಬಗೆಯಲ್ಲಿ ಪ್ರಲಾಪಿಸುತ್ತಾ ಕಾಡಿನಲ್ಲಿ ಅಲೆದಾಡುತ್ತಿದ್ದಳು ಪೃಥ್ವಿತನುಜೆ.ಆ ಸಮಯದಲ್ಲಿಯೇ ಯಜ್ಞಕ್ಕೆ ಬೇಕಾದ ಸ್ತಂಭವನ್ನು ಅರಸುತ್ತಾ ಆ ವನಕ್ಕೆ ಬಂದವರು ರಾಮಧ್ಯಾನದಲ್ಲಿ ಚಿತ್ತವನ್ನು ಹುತ್ತಗಟ್ಟಿಸಿಕೊಂಡಿದ್ದ ವಾಲ್ಮೀಕಿ ಮಹರ್ಷಿಗಳು. ಸೀತೆಯ ರೋಧನವದು ಅವರ ಕರ್ಣವನ್ನು ಕೆಣಕಿತು. ಹೆಂಗಳೆಯ ಅಳು ಕೇಳಿ ತಲ್ಲಣಿಸಿದರು ಮುನಿವರ್ಯ. ಮೊರೆತದ ಸ್ವರವನ್ನನುಕರಿಸಿ ಚಲಿಸಿದ ಅವರಿಗೆ ಕಾಣಿಸಿದಳು ಸೀತೆ. ‘ಯಾರಿವಳು? ಏಕಿದ್ದಾಳೆ ಈ ಅರಣ್ಯದಲ್ಲಿ ಒಂಟಿಯಾಗಿ?’ ಎಂಬ ಕೌತುಕ ಮೂಡಿತು ಅವರಲ್ಲಿ.ಮಾತನಾಡಿಸಿದರು. ತಾನು ವಾಲ್ಮೀಕಿ ಎನ್ನುವುದನ್ನು ಹೇಳಿಕೊಂಡರು. ಶೋಕಭಾವವನ್ನು ಮೀರಿದ ಹರುಷ ಭಾವ ಮೂಡಿತು ಸೀತೆಯಲ್ಲಿ. ನಡೆದದ್ದೆಲ್ಲವನ್ನೂ ಮುಚ್ಚುಮರೆಯಿಲ್ಲದೆ ಬಿಚ್ಚಿಟ್ಟಳು ಬುವಿಸುತೆ. ಒಳಗಣ್ಣು ತೆರೆದು ಸೀತೆಯ ಗರ್ಭಸ್ಥಳವನ್ನು ವೀಕ್ಷಿಸಿದ ಮುನಿಗಳಿಗೆ ಅವಳು ಅವಳಿ ಮಕ್ಕಳ ಮಾತೆಯಾಗುವಳೆನ್ನುವುದು ತಿಳಿದುಬಂತು. ಅದನ್ನೇ ಹೇಳಿದರು ಅವಳಲ್ಲಿ. ತನ್ನ ಆಶ್ರಮಕ್ಕೆ ಬರುವಂತೆ ಸೂಚಿಸಿದರು. ಗರ್ಭಿಣಿಯ ಬಯಕೆಗಳೆಲ್ಲವನ್ನೂ ಪೂರೈಸುವ ಹೊಣೆ ತನ್ನದೆಂದರು. ಅವರ ದೃಢವಾದ ನುಡಿಗಡಲು ಸೀತೆಯ ಶೋಕವನ್ನು ಮುಳುಗಿಸಿತು. ಧೈರ್ಯಸ್ಥೆಯಾದಳು ಸೀತೆ. ಅವರೊಡನೆ ನಡೆದಳು ಆಶ್ರಮದೆಡೆಗೆ, ಶ್ರಮವಿಲ್ಲದೆ.ಎಲೆಗಳಿಂದ ಮಾಡಲಾದ ಕುಟೀರ. ಋಷಿಪತ್ನಿಯರ ಉಪಚಾರ. ಋತುಗಳ ಭೇದವೆಣಿಸದೆಯೇ ಬೆಳೆಯುವ ಗಿಡ ಮರಗಳು. ವೈರತ್ವ ಭಾವವನ್ನು ಮರೆತು ಬೆರೆಯುವ ಖಗ- ಮೃಗಗಳು. ಸೊಗಸೆನಿಸಿತು ಸೀತೆಗೆ ಆಶ್ರಮದ ಅ-ಶ್ರಮ ಬದುಕು.ಮುನಿಸತಿಯರ ಸಹವಾಸದಲ್ಲಿಯೇ ಸೀತೆಯ ಬಸುರಿಗೆ ನವಮಾಸ ತುಂಬಿತು. ಗರ್ಭದಲ್ಲಿರುವ ಶಿಶುಗಳನ್ನು ಭೂಮಿಗೆ ಇಳಿತರುವ ಕ್ಷಣವನ್ನು ನಿರುಕಿಸುತ್ತಿದ್ದಳು ಸೀತೆ.ಒಂದಿರುಳು ಅವಳ ತವಕವದು ಸಾಕಾರವಾಯಿತು. ಅವಳಿ ಶಿಶುಗಳು ಬಂದರು ಭೂಮಿಗೆ, ಭೂಸುತೆಯ ಗರ್ಭದಿಂದೀಚೆಗೆ. ಆಶ್ರಮದ ಪ್ರೌಢ ಸ್ತಿçÃಯರು ಅವಳ ಆರೈಕೆ ಮಾಡಿದರು. ಮುನಿವಟುಗಳು ತವಕದಿಂದ ಸುದ್ದಿಯನ್ನು ತಲುಪಿಸಿದರು ವಾಲ್ಮೀಕಿ ಮಹರ್ಷಿಗಳಿಗೆ.ಸಾನಂದದಿAದ ಬಂದು ಕಂದAಗಳ ಮೊಗಗಳನ್ನು ಕಂಡ ಮುನಿಗಳು ದರ್ಭೆಯ ಚೂರಿನಿಂದ ನೀರನ್ನು ಪ್ರೋಕ್ಷಿಸಿ, ದರ್ಭೆಯ ಚೂರನ್ನೇ ಸೂಚಿಸುವ ಕುಶ ಲವ ಎಂಬ ಹೆಸರುಗಳನಿಟ್ಟರು ಅವಳಿ ಮಕ್ಕಳಿಗೆ.ಚೆಲುವು ಎರಡು ರೂಪವನ್ನು ಪಡೆಯಿತೋ! ಶುಭ್ರತೆ ಎರಡು ಕವಲಾಗಿ ಒಡೆಯಿತೋ! ಗೆಲುವು ಗೆಳೆತನವನ್ನು ಗಳಿಸಿತೋ! ಕೀರ್ತಿ ಅಮೃತ ಧಾರೆಯಲ್ಲಿ ಹರಡಿ ಎರಡಾಯ್ತೋ! ಎಂಬAತೆ ಆ ಎಳೆಯ ಶಿಶುಗಳು ತೋರಿದರು ಆಶ್ರಮವಾಸಿಗಳ ಕಣ್ಣಿಗೆ.ಬೆಳೆಯತೊಡಗಿದರು ಕುಶಲವ ಇಬ್ಬರೂ, ಋಷಿಮುನಿಗಳ ಪ್ರೀತಿಯೊಲವನ್ನು ಪಡೆಪಡೆದು. ಕಾಲಕಾಲಕ್ಕೆ ಆಗಬೇಕಾದ ಸಂಸ್ಕಾರಗಳನ್ನೆಲ್ಲವನ್ನೂ ಕೊಡಿಸಿದರು ವಾಲ್ಮೀಕಿ ಮುನಿ ಅವರಿಗೆ. ಹನ್ನೆರಡು ವರುಷಗಳಾದಾಗ ಉಪನಯನ ಶಾಸ್ತç ಮಾಡಿಸಿದರು. ಶಸ್ತಾçಭ್ಯಾಸ ಮತ್ತು ಶಾಸ್ತಾçಭ್ಯಾಸ ಎರಡೂ ನಡೆದವು ಏಕಕಾಲಕ್ಕೆ. ರಾಮನೇ ತಮ್ಮ ತಂದೆಯೆAದು ಅರಿಯದ ಆ ಮಕ್ಕಳು ರಾಮಾಯಣವನ್ನು ಅನುದಿನವೂ ಹಾಡುತ್ತಿದ್ದರು ಭಕ್ತಿಭಾವದಿಂದ. ಡಾ.ವಿಶ್ವನಾಥ್‌ ಎನ್ ನೇರಳೆಕಟ್ಟೆ

Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-132 ರುಕ್ಮಿಣಿ ನಾಯರ್ ಒಬ್ಬ ಅಮ್ಮನ ಕಥೆ ಹಾಸನ ಜಿಲಾಸ್ಪತ್ರೆಗೆ ಸುಮತಿ ಬೆಂಗಳೂರಿನಿಂದ ಹೊರಟ ಸುಮತಿ ಮತ್ತು ಮಗಳು ಹಾಗೂ ಹಿರಿಯ ಅಳಿಯ ಸಕಲೇಶಪುರವನ್ನು ತಲುಪಿದರು. ಮೂವರೂ ಆಶ್ರಮ ತಲುಪಿದರು. ತನ್ನ ಕೋಣೆಯೊಳಗೆ ಆಯಾಸಗೊಂಡಿದ್ದ ಅಮ್ಮನನ್ನು ಮಲಗಿಸಿ, ಬಾವನಿಗೆ ಧನ್ಯವಾದ ಹಾಗೂ ಕೃತಜ್ಞತೆಗಳನ್ನು ತಿಳಿಸಿ….. “ನೀವು ಮನೆಗೆ ಹೋಗಿ ಬಾವ…. ಅಕ್ಕ ಇಬ್ಬರು ಪುಟ್ಟ ಮಕ್ಕಳೊಂದಿಗೆ ಮನೆಯಲ್ಲಿದ್ದಾರೆ…. ಮಕ್ಕಳು ನಿಮ್ಮನ್ನು ಬಿಟ್ಟು ಇರುವುದಿಲ್ಲ….. ಅಮ್ಮನನ್ನು ಹಾಸನದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ನಾನು ದಾಖಲು ಮಾಡುತ್ತೇನೆ”…. ಎಂದಳು. ನಾದಿನಿಯ ಜವಾಬ್ದಾರಿಯುತ ನಡೆಯ ಸಾಮರ್ಥ್ಯವನ್ನು ಅರಿತಿದ್ದ ಬಾವ…. ಹಾಗೆಯೇ ಆಗಲಿ…. ಆದರೆ ಇನ್ನೇನಾದರೂ ಸಹಾಯ ಬೇಕಿದ್ದರೆ ತಡ ಮಾಡದೇ ತಪ್ಪದೇ ನನಗೆ ತಿಳಿಸು…. ನಾನು ಖಂಡಿತ ಬರುತ್ತೇನೆ”…. ಎಂದು ನಾದಿನಿಗೆ ಹೇಳಿ, ಆಯಾಸದಿಂದ ಮಲಗಿದ್ದ ಅತ್ತೆಯ ಬಳಿಗೆ ಹೋಗಿ…. “ಅತ್ತೇ…. ನಿಮ್ಮ ಮಗಳು ಒಬ್ಬಳೇ ಇಬ್ಬರು ಪುಟ್ಟ ಮಕ್ಕಳನ್ನು ಸಂಭಾಳಿಸುತ್ತಾ ಮನೆಯಲ್ಲಿದ್ದಾಳೆ…. ಅದೂ ಅಲ್ಲದೇ ನಾನು ಕೆಲಸಕ್ಕೆ ಕೂಡ ಹೋಗಬೇಕಾಗಿದೆ…. ನಾದಿನಿ ನಿಮ್ಮನ್ನು ಆಸ್ಪತ್ರೆಗೆ ದಾಖಲು ಮಾಡಿಸುತ್ತೇನೆ ಎಂದು ಹೇಳಿದ್ದಾಳೆ…. ನಾನು ಮತ್ತು ನಿಮ್ಮ ಮಗಳು ಆಗಾಗ ಬಂದು ನಿಮ್ಮನ್ನು ಭೇಟಿ ಮಾಡುತ್ತೇವೆ….. ಆರೋಗ್ಯದ ಬಗ್ಗೆ ಹೆಚ್ಚು ಚಿಂತಿಸಿ ಕೊರಗಬೇಡಿ…. ಆದಷ್ಟು ಬೇಗ ಗುಣಮುಖರಾಗಿ ನಿಮ್ಮ ಮೊಮ್ಮಕ್ಕಳ ಜೊತೆ ಕಾಲ ಕಳೆಯುವಿರಂತೆ…. ನಾನಿನ್ನು ಹೊರಡಲೇ?”…ಎಂದು ಹೇಳುತ್ತಾ ಅತ್ತೆಯ ಅನುಮತಿಗಾಗಿ ಅಲ್ಲಿಯೇ ನಿಂತನು. ಅಳಿಯನ ಮಾತುಗಳನ್ನು ಆಲಿಸಿದ ಸುಮತಿ….”ಹೌದು ಅಳಿಯಂದಿರೇ…. ನೀವೀಗ ಮನೆಗೆ ಹೋಗಲೇಬೇಕು…. ನನ್ನ ಮುದ್ದು ಮೊಮ್ಮಕ್ಕಳು ನಿಮಗಾಗಿ ಕಾಯುತ್ತಿರುತ್ತಾರೆ…. ನೀವು ಕೆಲಸಕ್ಕೂ ಹೋಗಬೇಕಿದೆ….. ಇಲ್ಲಿ ಮಗಳು ಇದ್ದಾಳಲ್ಲವೇ ಅವಳು ಎಲ್ಲವನ್ನೂ ನೋಡಿಕೊಳ್ಳುತ್ತಾಳೆ….. ನೀವು ನಿಶ್ಚಿಂತರಾಗಿರಿ…. ನನ್ನ ಮೊಮ್ಮಕ್ಕಳನ್ನು ನೋಡುವ ಬಯಕೆಯಾಗಿದೆ ನೀವು ಬರುವಾಗ ಅವರನ್ನು ಕರೆದುಕೊಂಡು ಬನ್ನಿ”…. ಎಂದು ಹೇಳಿ ಸುಮತಿ ಅಳಿಯನನ್ನು ಬೀಳ್ಕೊಟ್ಟಳು. ಅನಾರೋಗ್ಯದ ತೀವ್ರತೆಯ ಕಾರಣ ಸುಮತಿಗೆ ಕಣ್ಣುಗಳು ಸರಿಯಾಗಿ ಕಾಣಿಸುತ್ತಿರಲಿಲ್ಲ. ಯಾರ ಮುಖವೂ ಸ್ಪಷ್ಟವಾಗಿ ಕಾಣುತ್ತಿರಲಿಲ್ಲ. ಬರಿಯ ಆಕೃತಿ ಮಾತ್ರ ಅಸ್ಪಷ್ಟವಾಗಿ ಗೋಚರಿಸುತ್ತಿತ್ತು. ಧ್ವನಿಯಿಂದ ಎಲ್ಲರನ್ನೂ ಗುರುತು ಹಿಡಿಯುತ್ತಿದ್ದಳು. ಸುಮತಿಯ ಎರಡನೇ ಮಗಳಿಗೆ ಆಶ್ರಮದಲ್ಲಿದ್ದ ಗೆಳತಿಯ ಸಹಾಯ ಬಹುದೊಡ್ಡ ಆಧಾರವಾಗಿತ್ತು. ತಡ ಮಾಡದೇ ತಾಯಿಯನ್ನು ಹಾಸನದ ಆಸ್ಪತ್ರೆಗೆ ಕರೆದುಕೊಂಡು ಹೊರಟಳು. ಆಶ್ರಮದ ಮಕ್ಕಳಿಗೆ ರಜೆ ಇದ್ದ ಕಾರಣ ಎಲ್ಲರೂ ಅವರವರ ಮನೆಗಳಿಗೆ ತರಳಿದ್ದರು. ಹಾಗಾಗಿ ಆಶ್ರಮದಲ್ಲಿದ್ದ ಗೆಳತಿಯು ಸ್ವಲ್ಪ ದಿನದ ಮಟ್ಟಿಗೆ ತಾನು ಮನೆಗೆ ಹೋಗಿ ಬರುತ್ತೇನೆ ಎಂದು ಹೊರಟಳು….”ಆಶ್ರಮದ ಬೀಗದ ಕೀಲಿಯನ್ನು ಸೆಕ್ರೆಟರಿ ಅವರಿಗೆ ಕೊಟ್ಟಿರುತ್ತೇನೆ…. ನೀನು ಆಸ್ಪತ್ರೆಯಿಂದ ಬರುವಾಗ ಅವರಿಂದ ಕೀಲಿಯನ್ನು ಪಡೆದುಕೋ…. ನಿನಗೆ ಪರೀಕ್ಷೆ ಇದೆಯಲ್ಲವೇ?…. ನಿನಗೆ ಏನಾದರೂ ಅಗತ್ಯಗಳು ಇರುತ್ತವೆ”… ಎಂದು ಹೇಳಿ ತನ್ನ ಊರಿನ ಕಡೆಗೆ ಹೊರಟಳು.  ಸುಮತಿಯ ಎರಡನೇ ಮಗಳು ತನ್ನ ತಾಯಿಯೊಂದಿಗೆ ಹಾಸನಕ್ಕೆ ಹೊರಡುವ ಮುನ್ನ ಆಶ್ರಮದ ಬಳಿ ಇದ್ದ ಮೆಡಿಕಲ್ ಸ್ಟೋರ್ ಒಂದರ ಟೆಲಿಫೋನ್ ಬೂತಿಗೆ ಹೋಗಿ, ತೋಟದ ಆಫೀಸಿನಲ್ಲಿರುವ ಫೋನ್ ನಂಬರಿಗೆ ಕರೆ ಮಾಡಿದಳು. ಕರೆಗೆ ಪ್ರತ್ಯುತ್ತರ ನೀಡಿದ್ದು ತೋಟದ ಮ್ಯಾನೇಜರ್ ಆದುದರಿಂದ ಅವರಿಗೆ ಎಲ್ಲ ವಿಷಯವನ್ನು ತಿಳಿಸಿದಳು. ತೋಟದ ಸಾಹುಕಾರಮ್ಮನವರು ವಿದೇಶಕ್ಕೆ ಹೋಗಿರುವುದಾಗಿ ಮ್ಯಾನೇಜರ್ ತಿಳಿಸಿದರು. ಹಾಗಾಗಿ ವಿಷಯವನ್ನೆಲ್ಲ ತನ್ನ ತಂಗಿಗೆ ತಿಳಿಸಲು ವಿನಂತಿಸಿಕೊಂಡಳು. ತಾಯಿಗೆ ಆಯಾಸವಿದ್ದ ಕಾರಣ ನಡೆಯಲು ಆಗುತ್ತಿರಲಿಲ್ಲ. ಹಾಗಾಗಿ ಆಟೋದಲ್ಲಿ ಬಸ್ಟ್ಯಾಂಡಿಗೆ ಕರೆದುಕೊಂಡು ಬಂದಳು. ಅಲ್ಲಿ ಹಾಸನಕ್ಕೆ ಹೋಗುವ ಬಸ್ ನಿಂತಿತ್ತು. ಮೊದಲು ತಾಯಿಯನ್ನು ಬಸ್ಸಿನಲ್ಲಿ ನಿಧಾನವಾಗಿ ಜಾಗರೂಕತೆಯಿಂದ ಹತ್ತಿಸಿ ಕಿಟಕಿಯ ಬಳಿಯ ಸೀಟಿನಲ್ಲಿ ಕುಳ್ಳಿರಿಸಿ, ತಾನು ಕೆಳಗಿಳಿದು ಬಟ್ಟೆಬರೆ ಇರುವ ಬ್ಯಾಗನ್ನು ಎತ್ತಿಕೊಂಡು ಬಂದು ಮೇಲಿನ ಸ್ಟ್ಯಾಂಡ್ ನಲ್ಲಿ ಇರಿಸಿ ಸುಮತಿಯ ಬಳಿ ಕುಳಿತುಕೊಂಡಳು. ಬಸ್ ಹಾಸನದ ಕಡೆಗೆ ಹೊರಟಿತು. ಹಾಸನ ಬಸ್ ಸ್ಟ್ಯಾಂಡ್ ತಲುಪಿದ ನಂತರ ಅಲ್ಲಿಂದ ಮತ್ತೊಂದು ಆಟೋದಲ್ಲಿ ತಾಯಿಯನ್ನು ಕರೆದುಕೊಂಡು ಜಿಲ್ಲಾಸ್ಪತ್ರೆಯ ಕಡೆಗೆ ಹೊರಟಳು. ಜಿಲ್ಲಾ ಆಸ್ಪತ್ರೆ ತಲುಪಿದಾಗ ಡಾಕ್ಟರ್ ಬರುವ ಸಮಯವಾಗಿತ್ತು.  ನಿಧಾನವಾಗಿ ತಾಯಿಯನ್ನು ಆಟೋದಿಂದ ಇಳಿಸಿ, ಮೆಲ್ಲನೆ ನಡೆಸಿಕೊಂಡು ಹೋಗಿ ಹೊರರೋಗಿಗಳ ವಿಭಾಗದ ಹತ್ತಿರ ಇದ್ದ ಬೆಂಚಿನಲ್ಲಿ ಕುಳ್ಳಿಸಿದಳು. ಸರತಿಯ ಸಾಲಿನಲ್ಲಿ ಹೆಚ್ಚು ಜನರಿರದ ಕಾರಣ ಸ್ವಲ್ಪ ಹೊತ್ತಿನಲ್ಲಿ ಡಾಕ್ಟರನ್ನು ನೋಡುವ ಅವಕಾಶ ದೊರೆಯಿತು. ತಾಯಿಗೆ ಅಲ್ಲೇ ಕುಳಿತುಕೊಳ್ಳಲು ಹೇಳಿ ಮಗಳು ಮೊದಲು ತಾನು ಒಬ್ಬಳೇ ಡಾಕ್ಟರ್ ಕೊಠಡಿಯನ್ನು ಪ್ರವೇಶಿಸಿದಳು. ಅಲ್ಲಿನ ಡಾಕ್ಟರ್ (ಫಿಜ಼ಷಿಯನ್) ಮೊದಲು ಸಕಲೇಶಪುರದಲ್ಲಿದ್ದವರಾಗಿದ್ದರು. ಅವರು ಆಸ್ಪತ್ರೆಯ ಮೇಲಾಧಿಕಾರಿಯಾಗಿ ಭಡ್ತಿ ಹೊಂದಿ ಇಲ್ಲಿಗೆ ವರ್ಗಾವಣೆಗೊಂಡಿದ್ದರು. ಸುಮತಿಗೆ ಹಲವು ವರ್ಷಗಳಿಂದ ಈ ವೈದ್ಯರೇ ಚಿಕಿತ್ಸೆ ಕೊಡುತ್ತಿದ್ದ ಕಾರಣ ಮಗಳ ಪರಿಚಯವು ಅವರಿಗಿತ್ತು…. “ಏನಮ್ಮಾ ಹುಡುಗಿ…. ನಿನ್ನ ತಾಯಿ ಹೇಗಿದ್ದಾರೆ”… ಎಂದು ಕೇಳಿದರು. ಅದಕ್ಕುತ್ತರವಾಗಿ ವೈದ್ಯರಿಗೆ ವಂದಿಸಿದ ಅವಳು… “ಸರ್ ನಿಮ್ಮ ಬಳಿ ಒಂದು ಮುಖ್ಯವಾದ ವಿಷಯವನ್ನು ನಾನು ಪ್ರಸ್ತಾಪಿಸಬೇಕಿದೆ…. ದಯವಿಟ್ಟು ನನಗೆ ನೀವು ಸಹಾಯ ಮಾಡಬೇಕು”…. ಎಂದಳು….. “ಅದೇನು ಹೇಳಮ್ಮಾ”…. ಎಂದು ವೈದ್ಯರು ಕೇಳಿದಾಗ ಬೆಂಗಳೂರಿನಲ್ಲಿ ನಡೆದ ಅಷ್ಟೂ ಘಟನೆಯನ್ನು ವಿವರಿಸಿದಳು. ವೈದ್ಯರಿಗೆ ಸುಮತಿಯ ಬಗ್ಗೆ ತಿಳಿದು ಬಹಳ ಬೇಸರ ಮತ್ತು ಸಂಕಟವಾಯಿತು. ಆಕೆಯ ಪರಿಸ್ಥಿತಿಯನ್ನು ಅವರು ಚೆನ್ನಾಗಿ ಬಲ್ಲವರಾಗಿದ್ದರು…. “ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಯಿತು…. ನನ್ನಿಂದ ನಿಮಗೇನು ಸಹಾಯವಾಗಬೇಕು ತಿಳಿಸು ಮಗು”…. ಎಂದರು…. “ಸರ್…. ಬೆಂಗಳೂರಿನಲ್ಲಿ ದೊರಕುವ ಚಿಕಿತ್ಸೆ ಈ ಆಸ್ಪತ್ರೆಯಲ್ಲಿ ದೊರೆಯುತ್ತದೆ ಎಂದು ಅಮ್ಮನಿಗೆ ಸುಳ್ಳು ಹೇಳಿ ಇಲ್ಲಿಗೆ ಕರೆದುಕೊಂಡು ಬಂದಿದ್ದೇನೆ…. ಅವರಿಗೆ ಸತ್ಯ ಸಂಗತಿಯನ್ನು ನಾನು ತಿಳಿಸಿಲ್ಲ….. ತಿಳಿಸುವ ಮನಶಕ್ತಿಯೂ ನನ್ನಲಿಲ್ಲ…. ದಯವಿಟ್ಟು ತಾವು ಈ ಆಸ್ಪತ್ರೆಯಲ್ಲಿ ನನ್ನ ತಾಯಿಯನ್ನು ದಾಖಲು ಮಾಡಿ ಸ್ವಲ್ಪ ದಿನ ಚಿಕಿತ್ಸೆ ಕೊಡುವಿರಾ?” ….. ಎಂದು ಅಂಗಲಾಚುವಂತೆ ಬೇಡಿಕೊಂಡಳು.

Read Post »

ಅಂಕಣ ಸಂಗಾತಿ, ಮನದ ಮಾತುಗಳು

ಅಂಕಣ ಸಂಗಾತಿ ಜ್ಯೋತಿ ಡಿ ಬೊಮ್ಮಾ ಮನದ ಮಾತುಗಳು ಧರೆ ಹತ್ತಿ ಉರಿದೊಡೆ… ಪ್ರಕೃತಿ ಗೆ ದಿನೆ ದಿನೆ ನಮ್ಮ ಮ್ಯಾಲ ಸಿಟ್ಟು ಹೆಚ್ಚಾಗ್ತಾನೆ ಅದ. ಪ್ರಕೃತಿ ವಿಕೋಪಗಳು ಎಷ್ಟೊಂದು ರೀತಿಯೊಳಗ ಮನುಕುಲಕ್ಕ ಕಾಡತಿದ್ದಾವ.ಅದಕ್ಕ ನಾವೂ ಕಾರಣ ಅನ್ನೊದು ಮರಿಬಾರದು.ಅನಿರೀಕ್ಷಿತ ವಾಗಿ ನೇಪಾಳದಾಗ ಆದ ಪ್ರವಾಹಗಳಂತವನ್ನು ಅದೆಂಗ ತಡಕೊಳ್ಳಬೇಕು ಮನುಷ್ಯ ರು.. ಮಳಿ ಗಾಳಿ ಒಂದು ಇರಲಾರದೆ ಒಮ್ಮೆಲೆ ನೀರು ಮನಿ ಊರು ಎಲ್ಲಾ ಮುಳಗಿಸಿ ಬಿಡತದ ಅಂದರ ಇದು ಅದೇಷ್ಟು ಅನಿರೀಕ್ಷಿತ. ವಿಜ್ಞಾನ ಎಷ್ಟೇ ಮುಂದ ವರೆದ್ರು ಇಂತ ಅವಘಡಗಳು ತಪ್ಪಿಸಲಿಕ್ಕ ಆಗಲ್ಲ.ಕೈಲಾಶ್ ಪರ್ವತ ಯಾತ್ರೆ ಇಷ್ಟು ದಿನ ಬಂದ್ ಆಗಿದ್ದು ಈಗ ಒಂದೆರಡು ವರ್ಷ ಗಳಿಂದ ಶುರು ಆಗ್ಯಾದ.ಪ್ರವಾಸ ಅಂದ್ರ ಬಾಯಿ ಬಿಡುವ ನಾನಗ ಮಾನಸ ಸರೋವರ ಯಾತ್ರ ಮಾಡುವ ಕನಸು ಅದ. ಕೈಲಾಶ್ ಪರ್ವತ ನೋಡಬೇಕು ಅವನ್ನು ಇಚ್ಚೆಗಿಂತ ಪರ್ವತದ ವರೆಗೆ ಹೋಗುವ ದಾರಿಯ ರೋಚಕ ಅನುಭವಕ್ಕ ನನ್ನ ಮನ ಇಷ್ಟಪಡತದ.ನೇಪಾಳ ಪ್ರವಾಸಕ್ಕೆ ಹೋದಾಗ ನನಗ ಅದೇನು ಅಷ್ಟು ಇಷ್ಟ ಆಗಿಲ್ಲ.ಹಿಮಾಲಯ ಪರ್ವತಗಳ ಸಮೀಪ ಹೋಗಬಹುದು , ಸಮೀಪದಿಂದ ಹಿಮಾಲಯ ಪರ್ವತ ನೋಡಬಹುದು ಅನ್ನೊ ಆಸೆಯಿಂದ ಹೋಗಿದ್ಧೆ. ಹಿಮಾಲಯ ಪರ್ವತ ಇರಲಿ , ಪರ್ವತದ ತುದಿನೂ ಕಾಣಲಿಲ್ಲ.ಬೇರೆ ಬೇರೆ ಪರ್ವತಗಳ ತುದಿ ಕಡೆ ಬೆರಳು ಮಾಡಿ ತೊರಿಸುತ್ತ ನಮ್ಮ ಗೈಡ ಅವುಗಳ ಹೆಸರು ಹೆಳತಿದ್ರೆ ಹಿಮಾಲಯ ಪರ್ವತ ಎಲ್ಲಿದೆ ಅಂತ ಕೆಳತಿದ್ಧ.ಅದನ್ನು ನೋಡಬೇಕಾದ್ರೆ ಚೀನಾ ಅಥವಾ ಟಿಬೆಟ್ ಬಾರ್ಡರ್ ಕಡಿ ಹೋಗಬೇಕು , ಇಲ್ಲ ಹೆಲಿಕ್ಯಾಪ್ಟರ್ ನಲ್ಲಿ ಹಿಮಾಲಯ ಮತ್ತು ಇತರ ಪರ್ವತಗಳನ್ನು ಸಮೀಪದಿಂದ ನೋಡಬಹುದು ಅಂತ ಹೆಳ್ದ. ಒಂದು ವೇಳೆ ದುಬಾರಿ ಟಿಕೆಟ್ ಕೊಟ್ಟು ಹೆಲಿಕಾಪ್ಟರನಲ್ಲಿ ಹೋದ್ರೂ ವಾತಾವರಣ ಚನ್ನಾಗಿ ಇರಲಿಲ್ಲಂದ್ರ ವಾಪಸ ಬರಬೇಕಾಗತದ ಅಂತ ಎಚ್ಚರಿಕೆ ಕೊಟ್ಟ.ಯಾರೂ ಆಸಕ್ತಿ ತೋರಿಸಲಿಲ್ಲ . ನನಗೂ ಒಬ್ಬಕಿಗೆ ಹೋಗಲಿಕ್ಕ ದೈರ್ಯ ಸಾಲಲಿಲ್ಲ . ಇಡೀ ನೇಪಾಳ ಪ್ರವಾಸದಾಗ ದೂರದಿಂದ ಕಾಣುವ ಪರ್ವತ ತುದಿ ನೋಡಿ ಬಂದಿದ್ದೆವು. ನೇಪಾಳ ಈಗೀಗ ಅಭಿವೃದ್ಧಿ ಆಗತಿರೋ ದೇಶ.ಸದಾ ಚೀನಾದವರ ಅತಿಕ್ರಮಣದ ದಬ್ಬಾಳಿಕೆ ಸಹಿಸ್ತಾ ಅವರ ನೆರವಿನಲ್ಲಿ ಇರಬೇಕಾದ ಅವಶ್ಯಕತೆ . ಮತ್ತು ಟಿಬೇಟ್ , ಭಾರತ ದಂತ ನೆರೆ ರಾಜ್ಯಗಳು , ಯಾರ ಜೊತೆಗೆ ಗೆಳೆತನ ಇಟ್ಟಕೋಬೇಕು ಅನ್ನೊ ಸಂದಿಗ್ಧ ಪರಿಸ್ಥಿತಿ.  ಪುರುಷರು ದುಡಿಯಲು ವಲಸೆ ಹೋದ್ರೆ ಮಹಿಳೆಯರೇ ಮನೆ ಮಕ್ಕಳು ನೋಡಕೊಂಡು ಇರತಾರೆ. ಎಲ್ಲಾ ಅಂಗಡಿಯೊಳಗ ಹೆಚ್ಚಾಗಿ ಮಹಿಳೆಯರೆ ಕಾಣತಾರ. ಚೀನಾದವರ ನೆರವಿನ ರಸ್ತೆಗಳು ,ಮತ್ತಿತರ ಕಟ್ಟಡಗಳು ಮಾಡಿ ಪ್ರವಾಸ ಅಭಿವೃದ್ಧಿ ಮಾಡತಿದ್ದಾರ. ಇತ್ತೀಚೆಗಷ್ಟೆ ನೇಪಾಳದ ರಾಜಕೀಯ ಯುವಕರ ದೆಸೆಯಿಂದ ಬದಲಾಗಿ ಹೊಸ ರೂಪ ಪಡಿತಿತ್ತು.ಅಂತದ್ದರಾಗ ಈ ಪ್ರವಾಹದ ಅವಘಡ. ಹಾಳಾಗಿದ್ದದ್ದು ಮೊದಲಿನ ರೂಪಕ್ಕ ಬರಬೇಕಂದ್ರ ಮತ್ತ ಕಾಲ ಒಂದು ಶತಮಾನ ಹಿಂದೆ ಹೋದಂಗ. ಪ್ರವಾಸೋದ್ಯಮ ಅಭಿವೃದ್ಧಿ ಯಿಂದ ವಿಶ್ವ ಕ್ಕ ಯಾವರೀತಿ ಪ್ರಯೋಜನ ಅನ್ನುವ ಪ್ರಶ್ನೆ ಕಾಡತದ.ಬರೀ ದೇಶಗಳು ಅಭಿವೃದ್ಧಿ ಮಾತ್ರ ಆಗತಾವ ಅಂತ ಹೆಳಲಿಕ್ಕಾಗಲ್ಲ.ಅದರೊಂದಿಗೆ ಪ್ರಕೃತಿಗೆ ನಾನಾ ರೀತಿಯ ಅನಾನುಕೂಲಗಳನ್ನು ಮಾಡತದ.ಪ್ರವಾಸಿಗರ ಅನುಕೂಲಕ್ಕ ಅವರ ವಸತಿ ಸೌಕರ್ಯ ಕ್ಕೆ ಅನುಕೂಲ ಮಾಡಿಕೊಡಬೇಕಂದ್ರ ಪ್ರಕೃಗೆ ಹಾನಿ ಮಾಡ್ಲೇಬೇಕು.ಗುಡ್ಡ , ಮರ , ಕಡಿದರೆ ಭೂಮಿ ಸವಕಳಿ ಆಗಿ ಕುಸಿದು ಬಿಳತದ. ರಸ್ತೆ , ಸುರಂಗಗಳು , ಹೊಟೆಲ್ ಗಳು ಇವೆಲ್ಲವೂ ಪ್ರವಾಸೋದ್ಯಮ ಕ್ಕೆ ಬಹಳ ಜರೂರಿ ಇರತವ.ಇದಕ್ಕಾಗಿ ಪರಿಸರಕ್ಕ ಕೆಣಕಿದ್ರೆ ಈ ಅವಘಡಗಳು ಸಂಭವಿಸ್ತಾವ. ಉತ್ತರಾಖಂಡ , ಹಿಮಾಚಲ , ಲಡಾಖ್ ನಂತಹ ಪ್ರದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚಾಗಿ ಪ್ರವಾಸಿ ತಾಣ ಆಗತಿದ್ದಾವ.ಬೆಟ್ಟಗಳ ಮ್ಯಾಲ್ ಮನುಷ್ಯರಿಗಾಗಿ ನಿರ್ಮಾಣ ಆಗತಿರೋ ರಸ್ತೆಗಳು ಮತ್ತು ಕಟ್ಟಡಗಳ ನಿರ್ಮಾಣ ದ ಒತ್ತಡ ಆ ಪ್ರಕೃತಿ ತಾಳಕೊಳ್ಳೊದು ಕಷ್ಟ. ವರ್ಷ ವರ್ಷ ಪ್ರವಾಸಿಗರ ಸಂಖ್ಯೆ ಹೆಚ್ಚಾಗತನೆ ಇಧೆ. ಒಂದು ವೇಳೆ ಪ್ರವಾಸೋದ್ಯಮ ಕ್ಕ ಕಡಿವಾಣ ಹಾಕಿದ್ರ ಆ ರಾಜ್ಯಗಳ ಅಭಿವೃದ್ಧಿ ಕುಂಠಿತ ಆಗತದ.ನಮ್ಮ ದೇಶದ ಎಷ್ಟೋ ರಾಜ್ಯಗಳು ಪ್ರವಾಸೊದ್ಯಮದ ಮ್ಯಾಲ ಅವಲಂಬಿತ ಆಗ್ಯಾವ. ಎಲ್ಲಕ್ಕಿಂತ ಹೆಚ್ಚಾಗಿ ವಾತಾವರಣದಲ್ಲಿನ ಬಿಸಿ ಪ್ರಕೃತಿಗೆ ಬಾಳ ಹಾನಿ ಮಾಡಲತದ.ಕಾಶ್ಮೀರ ಕಣಿವೆಯ ಅಮರನಾಥ ಗುಹೆಯ ಮಂಜಿನಿಂದ ಉಂಟಾಗುವ ಶಿವಲಿಂಗ ಕೆಲವೆ ದಿನಗಳಲ್ಲಿ ಕರಗಿ ಹೋಗಲತದ.ಮೊದಲೆಲ್ಲ ನಾಲ್ಕು ತಿಂಗಳು ಲಿಂಗದ ಆಕಾರದಲ್ಲೆ ಇರುವ ಶಿವಲಿಂಗ ಈಗ ತಿಂಗಳಲ್ಲಿ ಕರಗಿ ಬಿಡಲತದಂತ.ಎರಡು ವರ್ಷ ಕೆಳಗೆ ಸೆಪ್ಟೆಂಬರ್ ನಲ್ಲಿ ಅಮರನಾಥ ಪ್ರವಾಸ ಹೋಗಿದ್ಧ. ಅಷ್ಟರಲ್ಲಿ ಮಂಜಿನಿಂದ ಆದ ಶಿವಲಿಂಗ ಕರಗಿ ನೆಲದ ಮ್ಯಾಲೆಲ್ಲ ಹರಡಿತ್ತು.ದಿನಾ ಲಕ್ಷ ಲಕ್ಷ ಜನ ಗುಹೆಯೊಳಗ ಹೋದ್ರ ಅವರ ಉಸಿರಿನ ಬಿಸಿಗಿ ಗುಹೆಯಲ್ಲಿ ತಂಪು ವಾತಾರಣ ಬಿಸಿ ಆಗತದ. ಬಿಸಿ ಹವಾಕ್ಕ ನಾಲ್ಕು ತಿಂಗಳ ಇರೋ ಲಿಂಗ ಒಂದೇ ತಿಂಗಳಲ್ಲಿ ಕರಗಲತದ. ಉತ್ತರಾಖಂಡ ಕೇದಾರ ಬದರಿನಾಥ ಧಾಮಗಳಲ್ಲೂ ಇತ್ತಿಚಿನ ವರ್ಷ ಗಳಲ್ಲಿ ಅತೀ ಜನದಟ್ಟಣೆ ಆಗಲತದ.ಹೋದ ವರ್ಷ ಮೇ ನಲ್ಲಿ ಹೋದಾಗ ಸಾವಿರಾರು ಜನರ ಲೈನ್. ಬೆಟ್ಟಗಳು ಇಷ್ಟು ಜನರ ಒತ್ತಡ ಹ್ಯಾಂಗ್ ತಡಕೋತಾವ.ಯಾವಾಗ ಯಾವ ಬೆಟ್ಟ ಕುಸಿದು ಬಿಳತದೋ ಅಂತ ಆತಂಕದಲ್ಲೆ ಪ್ರವಾಸ ಮುಗಿಸ್ದೆವು. ಭೂಲೋಕದ ಸ್ವರ್ಗ ಎಂದು ಹೆಸರಾಗಿದ್ದ ಕಾಶ್ಮೀರ ಕ್ಕ ಹೋದಾಗ ಅಲ್ಲಿ ನ ಬಿಸಿಲು ನೋಡಿ ಗಾಬರಿ ಆಗಿತ್ತು.ಅಷ್ಟು ತಾಪಮಾನದಲ್ಲಿ ಎರಿಕೆ ಆಗಿತ್ತು ,ಅಲ್ಲಿನ ಸ್ಥಳಿಯರು ಬಿಸಿಲು ತಡಿಲಾರದೆ ಒದ್ದಾಡ್ತಿದ್ರು.ಕಾಶ್ಮೀರ ಅಂದ್ರೆ ಎನೋ ಅಂತ ತಿಳಕೊಂಡ ಹೋದ ನಮಗೆ ಅಲ್ಲಿನ ಬಿಸಿಲು ನಿರಾಶೆ ಮಾಡಿತ್ತು. ಹಿಮಾಚಲ ಪ್ರದೇಶದ ಕುಲು ಮನಾಲಿಗಳು ಜನದಟ್ಟಣೆ ಪ್ರದೇಶ ಆಗಿಬಿಟ್ಟಾವ.ನಾವು ಡಿಸೆಂಬರ್ ನಲ್ಲಿ ಹೋಗಿದ್ದಕ್ಕ ಹಿಮಪಾತ ಆಗ್ತಿತ್ತು.ಪ್ರಕೃತಿ ಸುಂದರ ಅನಿಸಿತ್ತು.ಪ್ರವಾಸಿಗರಿಗಾಗಿ ಗುಡ್ಡ ಕಡಿದು ಸುರಂಗ ಮಾಡುವಾಗ ಆದ ಅವಘಡದಿಂದ ಎಷ್ಟೋ ಜನ ಒಳಗೆ ಸಿಕ್ಕಿಹಾಕಿಕೊಂಡಿದ್ರು. ಲಡಾಖ್ ಗೆ ಈಗೀಗ ಪ್ರವಾಸಿಗರ ಸಂಖ್ಯೆ ಹೆಚ್ಚು ಆಗಲತದ.ಜನದಟ್ಟಣೆ ಹೆಚ್ಚಾದಂಗ ಪರಿಸರ ಮುನಿಯುವದಕ್ಕ ಶುರು ಆಗತದ.ನನಗ ಲಡಾಖ್ ಸುಂದರ ಮತ್ತ ಶಾಂತ ಅನಿಸ್ತು. ಬೆಟ್ಟಗಳ ನಡು ಶಾಂತವಾಗಿದ್ದ ಸ್ಥಳ ನಮ್ಮಂತ ಪ್ರವಾಸಿ ಗರಿಂದ ಅಶಾಂತಗೊಳ್ಳತದ. ಜನದಟ್ಟಣೆ ಯಾವಾಗಲೂ ಎನಾದ್ರು ಒಂದು ಕೆಟ್ಟ ಘಟನೆಗೆ ಕಾರಣ ಆಗ್ತಾನೆ ಇರತದ.ಕಾಲ್ತುಳಿತದಂತ ಪ್ರಸಂಗಗಳು ಮತ್ತ ಮತ್ತ ಆಗ್ತಾನೆ ಇರತಾವ.ಕಾಲ್ತುಳಿತ ಆಗತದ ಅಂತ ಗೊತ್ತಿದ್ರೂ ಮತ್ತು ದಟ್ಟಣೆಯೊಳಗ ಹೋಗಿ ತೂರಿಕೊಳ್ಳತೀವಿ. ಪ್ರಕೃತಿ ವಿಕೋಪಗಳು , ಯುದ್ದಗಳು ಎಷ್ಟು ಕರಾಳ ನೆನಪುಗಳು ಉಳಿಸಿಬಿಡತಾವ , ಬದುಕುಳಿದವರವರ ಬದುಕು ಮೂರಾಬಟ್ಟೆ. ಜೀವನವೀಡಿ ಚಂದದ ಬದುಕಿಗಿ ಹವಣಿಸಿ ಹೆಣಗಿ ಪರಿಶ್ರಮದಿಂದ ಕಟ್ಟಿಕೊಂಡ ಬದುಕು ಕ್ಷಣದಲ್ಲಿ ನಿರ್ನಾಮ ಆದ್ರ ಅದನ್ನು ತಾಳಕೊಳ್ಳೊ ಕಷ್ಟ ವರ್ಣಿಸಲಕ್ಕ ಆಗದ ಮಾತು. ಆದ್ರೂ ಬದುಕಲೇಬೇಕಲ್ಲ.ಸಮಯದ ಆಧಾರದ ಮ್ಯಾಲ. ಮನುಕುಲ ಈಗಲಾದ್ರು ಪ್ರಕೃತಿ ಬಗ್ಗೆ ವಿಚಾರ ಮಾಡಲೇಬೇಕು.ಅಭಿವೃದ್ದಿ ಹೆಸರಲ್ಲಿ ಗುಡ್ಡ , ನೆಲ ಅಗೀತಾ ಹೋದ್ರ ಮುಂದೆ ಇನ್ನೂ ಘೋರ ಪರಿಣಾಮ ಎದುರಿಸಬೇಕಾಗತದ.ನಾವು ಪ್ರವಾಸ ಮಾಡೋರು ಕೂಡ ಎಲ್ಲಾ ಸೌಕರ್ಯ ಐಶಾರಾಮಿ ಆಗಿ ಇರಬೇಕಂತ ಬಯಸ್ತಿವಿ.ನಮ್ಮ ಸೌಕರ್ಯ ಕ್ಕಾಗಿ ಪ್ರಕೃತಿ ಮ್ಯಾಲ ದಬ್ಬಾಳಿಕೆ ಮಾಡೋದು ಮುಂದುವರಿತಾನೆ ಅದ.ಪ್ರಕೃತಿ ಆದ್ರು ಎಷ್ಟಂತ ಸಹಿಸಿಕೊಳ್ಳತದ ಮನುಷ್ಯರ ಹುಂಬತನ. ಜ್ಯೋತಿ ಡಿ ಬೊಮ್ಮಾ

Read Post »

ಇತರೆ

“ಬದಲಾವಣೆ ನಮ್ಮಿಂದಲೇ”ವಿಶೇಷ ಲೇಖನ ಡಾ.ಪಿ.ಸುಮತಿ

ವಿಶೇಷ ಸಂಗಾತಿ ಡಾ.ಪಿ.ಸುಮತಿ “ಬದಲಾವಣೆ ನಮ್ಮಿಂದಲೇ” “ನೀನು ಜಗತ್ತಿನಲ್ಲಿ ಯಾವ ಬದಲಾವಣೆಯನ್ನು ನೋಡಬಯಸುವೆಯೋ, ಮೊದಲು ಆ ಬದಲಾವಣೆ ನಿನ್ನಲ್ಲೇ ಆಗಲಿ.”ಎಂಬ ಮಹಾತ್ಮ ಗಾಂಧೀಜಿಯವರ ಮಾತು ಬದಲಾವಣೆ ನಮ್ಮಿಂದಲೇ ಎಂಬ ಮಾತನ್ನು ಪುಷ್ಠಿಕರಿಸುತ್ತದೆ . ಬದಲಾವಣೆ’ ಎಂಬುದು ಜಗತ್ತಿನ ಶಾಶ್ವತ ನಿಯಮ. ಆದರೆ, ಬಾಹ್ಯ ಜಗತ್ತಿನ ಬದಲಾವಣೆಯ ಮುನ್ನ ವ್ಯಕ್ತಿಯ ಅಂತರಂಗದ ಬದಲಾವಣೆ ಅತ್ಯಂತ ಮುಖ್ಯವಾದುದು. “ಬದಲಾವಣೆ ನಮ್ಮಿಂದಲೇ” ಎಂಬ ಪರಿಕಲ್ಪನೆಯು ಆಳವಾದ ತಾತ್ವಿಕ ತಳಹದಿಯನ್ನು ಹೊಂದಿರುವ ಜೀವನ ದರ್ಶನವಾಗಿದೆ. ಸಮಾಜವೆಂಬುವುದು ನಿಂತ ನೀರಲ್ಲ. ಪ್ರತಿ ದಿನ ದಿನವೂ, ಕ್ಷಣ ಕ್ಷಣವೂ ಹೊಸ ಹೊಸ ಬದಲಾವಣೆಗಳು ಆಗುತ್ತಲೇ ಇರಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆಲ್ಲ,ಮನುಷ್ಯನ ವಿಚಾರ ಶಕ್ತಿಯೂ ಬೆಳೆದು, ಇಂದು ಜಗತ್ತು ಕ್ಷಣ ಕ್ಷಣವೂ ಬದಲಾಗುತ್ತಿದೆ, ಬದಲಾವಣೆಯ ಜಗತ್ತಿನೊಂದಿಗೆ ನಾವು ಕೂಡ ವೇಗವಾಗಿ ಹೆಜ್ಜೆ ಹಾಕಬೇಕಾಗಿದೆ. ಈ ನಿಟ್ಟಿನಲ್ಲಿ ಬದಲಾವಣೆಯನ್ನು ಮಾಡಬೇಕಾಗಿದೆ, ಬದಲಾವಣೆಗೆ ನಾವು ಹೊಂದಿಕೊಂಡು ಬದುಕಬೇಕಾಗಿದೆ. ಅಂದರೆ ಬದಲಾಗುತ್ತಿರುವ ಸಮಾಜದ ಜೊತೆ ಜೊತೆಯಲಿ ಹೆಜ್ಜೆ ಹಾಕಿಕೊಂಡು ಮುನ್ನಡೆಯುವಂತಹ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಕು.ಇದು ಒಂದು ರೀತಿಯ ಬದಲಾವಣೆಯಾದರೆ,ಇನ್ನೊಂದು ರೀತಿಯ ಬದಲಾವಣೆಯಿದೆ ಅದು ನಮ್ಮ ಮಾನಸಿಕವಾದ ಬದಲಾವಣೆ ಅರ್ಥಾತ್ ತ್ಯಾಗ ಮಾಡಬೇಕಾದ ನಮ್ಮತನ. ಮನುಷ್ಯ ಸಂಗ ಜೀವಿ, ಸಮಾಜ ಜೀವಿ. ಸಮಾಜದಲ್ಲಿ ಕೂಡು ಜೀವನ ನಡೆಸುತ್ತಿರುವಾಗ ಭಿನ್ನಾಭಿಪ್ರಾಯಗಳು ಬಂದೇ ಬರುತ್ತವೆ. ಅಂತಹ ಸಂದರ್ಭದಲ್ಲಿ ಸಮಷ್ಟಿಯ ಸುಖಕ್ಕಾಗಿ ನಾವು ನಮ್ಮತನವನ್ನು ತ್ಯಾಗ ಮಾಡಬೇಕಾಗುತ್ತದೆ. ಅಂದರೆ ನಾವು ಬದಲಾಗಬೇಕಾಗುತ್ತದೆ. ಬದಲಾವಣೆ ನಮ್ಮಿಂದಲೇ ಆಗಬೇಕಾಗಿದೆ. ಬುದ್ಧಿವಂತನಾದ ಮನುಜ ಇನ್ನೊಬ್ಬರಲ್ಲಿ ಹುಳುಕು ಹುಡುಕುವುದರಲ್ಲಿ ಕಾಲ ಕಳೆಯುತ್ತಾನೆ.ಆದರೆ ತನ್ನಲ್ಲಿರುವ ತಪ್ಪುಗಳನ್ನು ಅರಿತುಕೊಂಡು ತಿದ್ದಿಕೊಳ್ಳುವಲ್ಲಿ ಮನಸ್ಸು ಮಾಡುವುದಿಲ್ಲ. ಇಂತಹ ಸಂದರ್ಭದಲ್ಲಿ ಬದಲಾವಣೆ ನನ್ನಿಂದಲೇ ಎಂಬ ಮಾತು ಅರ್ಥವನ್ನು ಪಡೆದುಕೊಳ್ಳುತ್ತದೆ.ಪ್ರತಿಯೊಬ್ಬರೂ ಪರಿಸ್ಥಿತಿ ಬದಲಾವಣೆ ಆಗಬೇಕೆಂದೂ, ಇನ್ನೊಬ್ಬರು ಬದಲಾಗಲಿ ಎಂದು ಕಾದು ಕುಳಿತರೆ, ಪರಿಸ್ಥಿತಿ ಬದಲಾಗದು. ಅದರ ಬದಲಾಗಿ ಬದಲಾವಣೆ ನನ್ನಿಂದಲೇ ಆಗಲಿ ಎಂದು ಎಲ್ಲರೂ ತಾವು ಬದಲಾದರೆ, ಪರಿಸ್ಥಿತಿ ಖಂಡಿತ ಬದಲಾಗುತ್ತದೆ.ನಾವು ಯೋಚಿಸುವ ರೀತಿ, ಮಾಡುವ ಕೆಲಸ ಮತ್ತು ನಮ್ಮ ನಡವಳಿಕೆಯಲ್ಲಿ ಬದಲಾವಣೆ ತಂದುಕೊಂಡಾಗ ಮಾತ್ರ ಸಮಾಜದಲ್ಲಿ ದೊಡ್ಡ  ಬದಲಾವಣೆ ಸಾಧ್ಯ. ಒಂದು ಸಣ್ಣ ಬದಲಾವಣೆಯೂ ಸಹ ನಮ್ಮಿಂದಲೇ ಆರಂಭವಾಗಬೇಕು. ನಾವು ನಮ್ಮ ಜವಾಬ್ದಾರಿಗಳನ್ನು ಅರಿತು ನಡೆದರೆ, ಸುಂದರ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ.”ಯದ್ಭಾವಂ ತದ್ಭವತಿ” ಅಂದರೆ ನಾವು ಹೇಗೋ, ಜಗತ್ತು ನಮಗೆ ಹಾಗೆಯೇ ಕಾಣುತ್ತದೆ. ನಾವು ಸಮಾಜದಲ್ಲಿ ಶಾಂತಿ, ಪ್ರಾಮಾಣಿಕತೆ ಮತ್ತು ಪ್ರೀತಿಯನ್ನು ನೋಡಬಯಸಿದರೆ, ಮೊದಲು ಆ ಗುಣಗಳು ನಮ್ಮ ಆತ್ಮದಲ್ಲಿ ಜಾಗೃತಗೊಳ್ಳಬೇಕು. ವ್ಯಕ್ತಿಯೊಬ್ಬನ ಮನಸ್ಸಿನ ಪರಿವರ್ತನೆಯೇ ಸಮಾಜದ ಪರಿವರ್ತನೆಗೆ ಮೊದಲ ಹೆಜ್ಜೆಯಾಗಬೇಕು. ವ್ಯವಸ್ಥೆಯನ್ನು ಅಥವಾ ಇತರರನ್ನು ದೂಷಿಸುವುದು ಅತ್ಯಂತ ಸುಲಭದ ಕೆಲಸ. ಆದರೆ, ತಾತ್ವಿಕ ದೃಷ್ಟಿಕೋನದಲ್ಲಿ ಪ್ರತಿಯೊಬ್ಬ ವ್ಯಕ್ತಿಯೂ ತನ್ನ ವ್ಯಕ್ತಿತ್ವಕ್ಕೆ ತಾನೇ ಜವಾಬ್ದಾರನಾಗಿರುತ್ತಾನೆ. ನಾವು ಮಾಡುವ ಪ್ರತಿಯೊಂದು ಸಣ್ಣ ಸತ್ಕಾರ್ಯವೂ ಜಗತ್ತಿನ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. “ನಾನೊಬ್ಬ ಬದಲಾದರೆ ಏನು ಪ್ರಯೋಜನ?” ಎಂಬ ನಕಾರಾತ್ಮಕ ಚಿಂತನೆಯನ್ನು ಬಿಟ್ಟು, ಬದಲಾವಣೆಯ ನನ್ನ ಕರ್ತವ್ಯವನ್ನು ನಾನು ಪ್ರಾಮಾಣಿಕವಾಗಿ ನಿರ್ವಹಿಸುವುದೇ ನಿಜವಾದ ಧರ್ಮ. “ಬದಲಾವಣೆ ಜಗತ್ತಿನ ನಿಯಮ” ಎಂಬುದು ಎಷ್ಟು ಸತ್ಯವೋ, “ಆ ಬದಲಾವಣೆಯ ಜವಾಬ್ದಾರಿ ನಮ್ಮದು” ಎಂಬುದು ಅಷ್ಟೇ ಸತ್ಯ. ಸಮಾಜದಲ್ಲಿ ಬದುಕುವ ಮನುಷ್ಯ ವ್ಯವಸ್ಥೆಯ ಲೋಪದೋಷಗಳನ್ನು, ಸಮಾಜದ ನೈತಿಕ ಅಧಃಪತನವನ್ನು ಕಂಡು ನಿರಂತರವಾಗಿ ದೂರುತ್ತಿರುತ್ತಾನೆ. ಆದರೆ, ಇಡೀ ವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿ ಮತ್ತು ನೈತಿಕ ಹಕ್ಕು ಪ್ರತಿಯೊಬ್ಬ ವ್ಯಕ್ತಿಗಿದೆ ಎಂಬುದನ್ನು ಅರಿತುಕೊಳ್ಳಬೇಕು. ಪ್ರತಿಯೊಬ್ಬರೂ ತನ್ನ ಸ್ವಂತ ಜೀವನದಲ್ಲಿ ಬದಲಾವಣೆಯನ್ನು ತಂದುಕೊಂಡಾಗ ಮಾತ್ರ ಸಮಾಜಿಕ ಜೀವನದಲ್ಲಿ ಬದಲಾವಣೆ ತರಲು ಸಾಧ್ಯ. ಶರಣರು ಹೇಳುವಂತೆ “ಅಂತರಂಗ ಶುದ್ಧಿ ಮತ್ತು ಬಹಿರಂಗ ಶುದ್ಧಿ” ಒಟ್ಟಿಗೆ ಸಾಗಿದಾಗ ಮಾತ್ರ ವ್ಯಕ್ತಿತ್ವ ವಿಕಸನ ಸಾಧ್ಯ. ನಮ್ಮ ಅಹಂಕಾರ, ಜಾತಿವಾದ ಮತ್ತು ಮೂಢನಂಬಿಕೆಗಳನ್ನು ನಾವೇ ತೊರೆದು ನಡೆದಾಗ, ಸಮಾಜ ತಾನಾಗಿಯೇ ಪರಿವರ್ತನೆ ಹೊಂದುತ್ತದೆ. ಯಾವುದೇ ವ್ಯವಸ್ಥೆಯನ್ನು ನಿಂದಿಸುವುದರಿಂದ ಕಹಿತನ ಹೆಚ್ಚುತ್ತದೆಯೇ ಹೊರತು, ಪರಿಹಾರ ಸಿಗದು. ನಮ್ಮ ಆಲೋಚನೆಗಳು, ಮಾತುಗಳು ಮತ್ತು ಕರ್ಮಗಳನ್ನು ನಾವೇ ಜಾಗೃತವಾಗಿ ಗಮನಿಸಿ, ನಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದೇ ಜಗತ್ತನ್ನು ತಿದ್ದುವ ಮೊದಲ ಹೆಜ್ಜೆಯಾಗಿದೆ. ಸಮಾಜ ಎಂಬುದು ವ್ಯಕ್ತಿಗಳ ಸಮೂಹ.ಬಿಂದುಗಳೇ ಸೇರಿ ಸಿಂಧುವಾಗುವಂತೆ, ವೈಯಕ್ತಿಕ ನೈತಿಕತೆಯೇ ಸಾಮಾಜಿಕ ವ್ಯವಸ್ಥೆಯಾಗಿ ಮಾರ್ಪಡುತ್ತದೆ. ಪ್ರಪಂಚದಲ್ಲಿ ಕ್ರಾಂತಿಗಳು ಕೇವಲ ಯುದ್ಧಭೂಮಿಯಲ್ಲಿ ಆಗಲಿಲ್ಲ. ಅವು ಮೊದಲು ಮನುಷ್ಯನ ಆಲೋಚನಾ ಲಹರಿಯಲ್ಲಿ ಮೊಳಕೆಯೊಡೆಯುತ್ತವೆ. ಆದ್ದರಿಂದ, ಸಮಾಜದ ಉದ್ಧಾರಕ್ಕೆ ಕಾಯುವ ಬದಲು, ನಮ್ಮ ಅಂತರಂಗದ ದೀಪವನ್ನು ಮೊದಲು ಬೆಳಗಿಸೋಣ. ಬದಲಾವಣೆ ನಮ್ಮಿಂದಲೇ ಆರಂಭವಾಗಲಿ. ಡಾ.ಸುಮತಿ ಪಿ

“ಬದಲಾವಣೆ ನಮ್ಮಿಂದಲೇ”ವಿಶೇಷ ಲೇಖನ ಡಾ.ಪಿ.ಸುಮತಿ Read Post »

ಕಾವ್ಯಯಾನ

ರೇಷ್ಮಾ ಕಂದಕೂರ ಅವರ ಕವಿತೆ “ಲೆಕ್ಕವೇ ಇಲ್ಲ”

ಕಾವ್ಯ ಸಂಗಾತಿ ರೇಷ್ಮಾ ಕಂದಕೂರ “ಲೆಕ್ಕವೇ ಇಲ್ಲ” ಎದೆ ಗೂಡಲಿ ಬಚ್ಚಿಟ್ಟ ಕನಸುಗಳಿಗೆ ಲೆಕ್ಕವೇ ಇಲ್ಲಬಿರಿದ ಭಾವನೆಗಳ ನೋಟಗಳಿಗೆ ಲೆಕ್ಕವೇ ಇಲ್ಲ ಸುಳಿ ಗಾಳಿಯಲಿ ಒಮ್ಮೆಯೂ ಪಿಸುಗೂಡಬಾರದೆಹಿಡಿದಿಟ್ಟ ಬಯಕೆಗಳು ನೀಲ ನೀಲಿಯಲಿ ಸೇರುವ ಸಾಲಿಗೆ ಲೆಕ್ಕವೇ ಇಲ್ಲ ಮೋಹ ಮಧುವಿಗೆ ವಾಸ್ತವವೇ ಮರೆತು ಬಿಟ್ಟಿರುವೆತೀರದ ಬಯಕೆಗಳ ಹರಿವ ನೀರಿಗೆ ತೇಲುವ ದಾರಿಗೆ  ಲೆಕ್ಕವೇ ಇಲ್ಲ ಮಾಮರ ಕೋಗಿಲೆ ಮೂಕ ಮರ್ಮರ ತಾಳಿದೆಕಟ್ಟಿದ ಗೋಪುರಕೆ ಕಳಸ ಬಿದ್ದು ಶೋಕಗೀತೆಗೆ ಲೆಕ್ಕವೇ ಇಲ್ಲ ಒಲವ ಭಾವದ ವೀಣೆ ತಂತಿ ನುಡಿಸುವುದೇ ಮರೆತು ಬಿಟ್ಟಿದೆಕಹಿ ಬೇವು ಜಗಿಯುತ ರೇಶಿಮೆ ದೂಡುವ ದಿನಗಳಿಗೆ ಲೆಕ್ಕವೇ ಇಲ್ಲ. ರೇಷ್ಮಾ ಕಂದಕೂರ

ರೇಷ್ಮಾ ಕಂದಕೂರ ಅವರ ಕವಿತೆ “ಲೆಕ್ಕವೇ ಇಲ್ಲ” Read Post »

ಪುಸ್ತಕ ಸಂಗಾತಿ

ರಾಜಶೇಖರ ಕುಕ್ಕುಂದಾ ಅವರ ಕೃತಿ “ಬಿಸಿ ಬಿಸಿ ಬಾತು” ಒಂದು ಅವಲೋಕನ,ಪ್ರಭುರಾಜ ಅರಣಕಲ್

ಪುಸ್ತಕ ಸಂಗಾತಿ ಪ್ರಭುರಾಜ ಅರಣಕಲ್ ರಾಜಶೇಖರ ಕುಕ್ಕುಂದಾ “ಬಿಸಿ ಬಿಸಿ ಬಾತು” ಒಂದು ಅವಲೋಕನ, ತಮ್ಮಪ್ರತಿ ಪದ್ಯಕ್ಕೆ ನವೀಕರಿಸುವ ಕವಿ ನೃಪತುಂಗನನೆಲದ , ಕಲಬುರಗಿ ಜಿಲ್ಲೆಯ ಸೇಡಂತಾಲ್ಲೂಕಿನ ಕುಕ್ಕುಂದಾ ಗ್ರಾಮದರಾಜಶೇಖರಕುಕ್ಕುಂದಾ ಅವರು ಕುರಿತೋದುತ್ತ ‘ಮಕ್ಕಳಕವಿತೆಗೆ’ ಅಪ್ಪಿಕೊಂಡು, ಒಪ್ಪಿಕೊಂಡವರು.- ಚೆಲುವ ಚಂದಿರ, ಗೋಲಗುಮ್ಮಟ, ಪುಟಾಣಿ ಪ್ರಾಸಗಳು, ಸೋನಪಾಪಡಿ, ಶೀರ್ಷಿಕೆಗಳ ನಾಲ್ಕು ಮಕ್ಕಳ ಕವಿತಾ ಸಂಕಲನಗಳನ್ನು ಪ್ರಕಟಿಸಿ, ಕನ್ನಾಡಿನ ಕಾವ್ಯಾಸಕ್ತರ ಗಮನ ಸೆಳೆದಿದ್ದಾರೆ. ‘ಬಿಸಿಬಿಸಿ ಬಾತು’ ಅವರ ಐದನೆಯ ಕೃತಿ. ಇದನ್ನು ಪ್ರಕಟಿಸಿದ್ದು ಬೆಂಗಳೂರಿನ ‘ಅವ್ಯಕ್ತ ಪ್ರಕಾಶಾನದ’ ವಸುವತ್ಸಲೆಯವರು. ಕ್ರೌನ್ 1/4 ಆಕಾರದ, ಕೃತಿಯ ಸುಂದರ ಮುಖಪುಟದವಿನ್ಯಾಸದಲ್ಲಿ – ಕಣ್ಸೆಳೆಯುವ ‘ಕಾಮನಬಿಲ್ಲು’ ಕುಂಚಿಸಿದವರು’ ಸೌಮ್ಯ ಕಲ್ಯಾಣಕರ್ ಅವರು. ‘ಹೋದೆಯಾ ದೂರ ಓ ಜೊತೆಗಾರ ಸೇರಲು ಬಂದಾಗ, ನೀ ಅರಿಯದೆ ಹೋದೆ ಪ್ರೇಮದನಾ ಸಂದೇಶವ ತಂದಾಗ’ ಅನುಭವ ಸಿನೆಮಾದ, ವಾಣಿಜಯರಾಮ್ ಹಾಡಿದ, ಗೀತೆ ರಚಿಸಿದ ಖ್ಯಾತ ಸಂಗೀತ ನಿರ್ದೇಶಕ, ನಟ, ವಿ. ಮನೋಹರ್ ಅವರು ಇಲ್ಲಿನ -26 ಪದ್ಯಗಳಿಗೆ, 7 ಪುಟಾಣಿ ಪ್ರಾಸಗಳಿಗೆ – ಒಟ್ಟು 33 – ಪದ್ಯಗಳ ಭಾವಕ್ಕೆ ಹೋಲುವ ಸುಂದರ ಚಿತ್ರ ಗಳನ್ನು ರಚಿಸಿದ್ದು, ‘ಉತ್ತಮರೇಖಾ ಚಿತ್ರ ಕಲಾವಿದರಾಗಿ’ ಹೊರಹೊಮ್ಮಿದ್ದಾರೆ. ಒಳ ಪುಟದ ವಿನ್ಯಾಸ ಕಲ್ಲೂರ ನಾಗೇಶ ಅವರದು. ‘ ಕವಿಯಾಗಿದ್ದುಕೊಂಡೇ ಮಕ್ಕಳ ಜಾಗದಲ್ಲೂ ನಿಲ್ಲುವುದು ಸಾಧ್ಯವಾದಾಗಷ್ಟೇ “ಬಿಸಿಬಿಸಿ ಬಾತು”ಸಂಕಲನದಲ್ಲಿ ಇರುವವಂಥ ರಚನೆಗಳು ಮೈದಳೆಯುವುದು ಸಾಧ್ಯ’ ವೆಂದು ಬೆನ್ನುಡಿಯಲ್ಲಿ ಲೇಖಕ ಪತ್ರಕರ್ತ ರಘುನಾಥ ಚ. ಹ. ಅವರು ಉಲ್ಲೇಖಸಿದ್ದಾರೆ. “ಮಕ್ಕಳಕಾವ್ಯ ನನಗೆ ಇಷ್ಟವಾದ ಪ್ರಕಾರ. ಇದಕ್ಕೂ ನನಗೂ ಬಾಲ್ಯದಿಂದಲೇ ಬಿಟ್ಟೂಬಿಡದ ನಂಟು. ನನ್ನ ರಚನೆಗಳೆಲ್ಲ ಹೆಚ್ಚಾಗಿ ನಾನು ಕಾಪಿಟ್ಟು ಕೊಂಡುಬಂದ ನನ್ನಹಳ್ಳಿ ಮತ್ತು ಶಹರ ಜೀವನದ ಬಾಲ್ಯದ ಅನುಭವಗಳಿಂದ ಪ್ರೇರಣೆ ಪಡೆದವುಗಳೇ. ಅದೇಕೋ ನಾನು ಮಾತ್ರ ಮಕ್ಕಳ ಕಾವ್ಯ ರಚನೆಗಷ್ಟೇಸೀಮಿತನಾದೆ.”ಎಂದು, ‘ಸವಿಯುವಮುನ್ನ’ ಎಂಬ – ತಲೆಬರಹದ ಲೇಖಕನಮಾತುಗಳಲ್ಲಿ, ಕುಕ್ಕುಂದಾ ಅವರು ಹೇಳಿಕೊಂಡಿದ್ದಾರೆ. ಕವಿಯ ಈ ಹೇಳಿಕೆಯಲ್ಲಿ – ಒಂದು ಹಗುರ ತಳಮಳಿಕೆ ಇಣುಕಿದೆ. ಈ ತಳಮಳಿಕೆಗೆ ತಳ್ಳಿಹಾಕುವ ಒಂದು ಅತ್ಯಾಶ್ಚರ್ಯಕರವಾದ ಖಾಸಾ ಹೊಳಪನ್ನು ಇವರ ಮಕ್ಕಳಕಾವ್ಯ ದಕ್ಕಿಸಿಕೊಂಡಿದೆ ಎಂಬುದನ್ನು ಕನ್ನಡ ಮಕ್ಕಳ ಸಾಹಿತ್ಯವಲಯ, ಹಾಗೂ ಕರ್ನಾಟಕಸಾಹಿತ್ಯಅಕಾಡೆಮಿಕೂಡ ಗುರುತಿಸಿದೆ. ಕನ್ನಡ ಹಾಗೂ ಮರಾಠಿ ಪಠ್ಯ ಪುಸ್ತಕಗಳಲ್ಲಿ, ಮತ್ತು ಶಿಶುಗೀತೆಯ ಆಲ್ಬಮ್ ಗಳಲ್ಲಿ ಇವರ ಕವಿತೆಗಳು ಸೇರಿವೆ.ಪ್ರಜಾವಾಣಿ ಪತ್ರಿಕೆಯ ದೀಪಾವಳಿ ಶಿಶುಕಾವ್ಯ ಸ್ಪರ್ಧೆಯಲ್ಲಿ ಹಲವುಬಾರಿ ಬಹುಮಾನ ಪಡೆದಿವೆ. ಹಲವು ಸಂಸ್ಥೆಗಳ ಪ್ರಶಸ್ತಿಗಳ ಸಂಖ್ಯೆ ದೊಡ್ಡದು.- ಅವುಗಳಲ್ಲಿ ಮುಖ್ಯವೆನಿಸುವ ಪ್ರಸ್ತುತ “ಬಿಸಿ ಬಿಸಿ ಬಾತು” ಕೃತಿಗೆ – 2024 ನೇ ಸಾಲಿನ ಜಿ. ಬಿ. ಹೊಂಬಳ ಮಕ್ಕಳ ಸಾಹಿತ್ಯ ಪ್ರಶಸ್ತಿ, ಮತ್ತು 2024 ನೇ ಅಬ್ದದ ಕರ್ನಾಟಕ ಸಾಹಿತ್ಯ ಅಕಾಡೆಮಿಯಪುಸ್ತಕಬಹುಮಾನಕ್ಕೆ”ಬಿಸಿಬಿಸಿಬಾತು”ಆಯ್ಕೆಯಾಗಿದೆ. ಪ್ರಸ್ತುತ ಕೃತಿಯ ಪದ್ಯಗಳ ಬಗ್ಗೆಮೊದಲಕವಿತೆ ಹಬ್ಬ- ಹೀಗೆ ಪ್ರಾರಂಭವಾಗುತ್ತದೆ.ಹೂವು ಅರಳಿ ನಿಂದಿದೆದುಂಬಿ ಹಾರಿ ಬಂದಿದೆಬಿಸಿಲು ಮಳೆಯು ಕೂಡಿದೆಮಳೆಯಬಿಲ್ಲು ಮೂಡಿದೆ! ಹೌದು, ಬಿಸಿಲು ಮಳೆಯು ಕೂಡಿದಾಗಲೇ, ಇಂದ್ರಚಾಪ ಮೂಡುವುದೆಂಬ ಬಣ್ಣನೆಯಲ್ಲಿ – ಈಕೃತಿಯ ಮುಖಪುಟದಲ್ಲಿನ ಸೌಮ್ಯ ಕಲ್ಯಾಣಕರ್ ಅವರ ‘ಕಾಮನಬಿಲ್ಲು’ ಚಿತ್ತಾರ ಗಮನಿಸಬಹುದು. ಆನೆ – ಕವಿತೆಯಲ್ಲಿ, – ಆನೆ ಬಹಳ ದೊಡ್ಡದು, ಅದರಬಾಲ ಗಿಡ್ಡದು /ಕಣ್ಣು ಸಣ್ಣ ಸಣ್ಣದು, ಚರ್ಮ ಬೂದು ಬಣ್ಣದು; ಉದ್ದದೊಂದು ಸೊಂಡಿಲು, ದಿಮ್ಮಿ ಎತ್ತಿ,ಕೊಳ್ಳಲು,/ ಅಗಲ ಅಗಲ ಕಿವಿಗಳು, ಗಾಳಿಬೀಸಿ ಕೊಳ್ಳಲು; ಹೀಗೆ ಮಕ್ಳಳು ಓದಿ – ನಕ್ಕು ನಲಿಯಲು ಪೂರಕವಾದ ಶಬ್ದ ಪಂಜಗಳು ಕೃತಿಯುದ್ದಕ್ಕೂ ಮನಸೆಳೆಯುತ್ತವೆ. ಸೊಳ್ಳೆ, ನಾಯಿಮರಿ ಬಾಬಾ,ಗಡಿಯಾರ,ನಮ್ಮಮನೆಅಂದ, ದಂತಹಪದ್ಯಗಳುಮಕ್ಕಳಲ್ಲದೆ ಕಾವ್ಯ ಪ್ರಿಯ ದೊಡ್ಡವರಲ್ಲೂ ಉಲ್ಲಾಸ ತುಂಬಬಲ್ಲವು. ‘ನಿದ್ದೆ ಎಲ್ಲಿ ಇರುವುದು’ ಪದ್ಯದಲ್ಲಿ ‘ಕ್ಲಾಸಿನಲ್ಲಿ ಕಾಡಲಿಕ್ಕೆ ಧುತ್ತನೆಂದು ಬರುವುದು /ಪಾಠ ಕೇಳುವಾಗ ತನ್ನ ಆಟ ನಡೆಸುತಿರುವುದು! / ಹಗಲಿ ನಲ್ಲಿ ಚಂದ್ರತಾರೆ ಗಳನು ತೂರಿಬಿಡುವುದು /ಸಿನೆಮದಂತೆ ಕನಸುಗಳನು ತಲೆಗೆ ತೂರಿಬಿಡುವುದು… ಶಾಲೆಯಲ್ಲಿ ಡೆಸ್ಕಿನಮೆಲೆ ಕುಳಿತ ಚಿಣ್ಣರ ಚಿತ್ರಣವಿದು.- ಸಹಜ ಹಾಗೂ ನೈಜತೆಗೆ ಪಕ್ಕಾದ ರಚನೆ; ಬಾರೋ ಬಾರೋ ಮಳೆರಾಯ, ಡ್ರೈವರ ಅಣ್ಣ, ಐಯ್ಯಾಮ್ ವೆರಿ ಸಾರಿ, ಯಾಕೆ ಹೀಗೆ? ಗುಲಾಬ್ ಜಾಮೂನ್, ಪದ್ಯಗಳು ಮಕ್ಕಳ ಮನಸ್ಸನ್ನು ಆಹ್ಲಾದಗೊಳಿಸುತ್ತವೆ. ಈಕೃತಿಯಶಿರೋನಾಮೆಯಪದ್ಯ’ಬಿಸಿಬಿಸಿಬಾತು’ಮಕ್ಕ ಳಲ್ಲದೆ, ಓದುಗರೆಲ್ಲರಬಾಯಿಯಲ್ಲಿ ನೀರೂರಿಸುವ “ರಚನೆ.ಬಿಸಿಬಿಸಿಬಾತು, ಕೇಸರಿಬಾತು ಬಾಯ್ತೆಗಿ ಚಿನ್ನು ಗಪ್ ಚುಪ್ ತಿನ್ನು /ಬಿಸಿಬಿಸಿ ಬಾತು ಟೊಮೆeಟೊe ಬಾತು ಬಾಯ್ತೆಗಿ ಚಿನ್ನು ಗಪಚುಪ್ ತಿನ್ನು -ಎಂದು ತಾಯಿ ತನ್ನ ಪುಟ್ಟಕಂದನಿಗೆ – ಬಿಸಿಬೇಳೆಬಾತು, ವಾಂಗೀ ಬಾತು, ಚೌ ಚೌ ಬಾತು ತಿನ್ನಿಸಿ – ಕೊನೆಗೆ, ತಾಯಿ ಮಗನಿಗೆ – ಬಿಸಿ ಬಿಸಿ ಬಾತು ತಿಂದದ್ದಾತು, ಚಿನ್ನು ಚಿನ್ನು, ನಿದ್ದೆಮಾಡಿನ್ನು!ಎಂಬಲ್ಲಿಗೆ ಕವಿತೆ ಮುಕ್ತಾಯ ಗೊಳ್ಳುತ್ತದೆ.ಇನ್ನೂ ಇಂತಹ ಮನಮಿಡಿಯುವ ಪದ್ಯಗಳು ಈ ಕೃತಿಯಲ್ಲಿವೆ. ರಾಜಶೇಖರ ಎಂಬ ಈ ಎಂಜಿನಿಯರಿಂಗ್ ಮೇಷ್ಟ್ರರ ಪುಟಾಣಿ ಪ್ರಾಸಗಳ ಗಮ್ಮತ್ತೆe ಬೇರೆಯದು. ತನ್ನದೇ ಮುದ್ರೆ ಹೊಂದಿದ ರಚನೆಗಳಿಗೆ ಒತ್ತುಕೊಟ್ಟು – ಪುಟಾಣಿಪ್ರಾಸಗಳಿಗೆ ಮೀಸಲಾದ ಪದ್ಯ ಸಂಕಲನ ಪ್ರಕಟಿಸಿದ್ದಾರೆ. ಈ ಕೃತಿ ಯಲ್ಲಿ ಕಾಡೆಲ್ಲಿ? ಎಂಬ ಮುಕ್ತಕದಲ್ಲಿ -“ಕಾಡಿಗೆ ಹೋಗೋ ರಾಮ – ಸೀತೆ – ಈಗೆಲ್ಲಿ? ಈಗೆಲ್ಲಿ? /ಒಂದು ವೇಳೆ ಇದ್ರು ಅನ್ಕೊ ಕಾಡೆಲ್ಲಿ? ಕಾಡೆಲ್ಲಿ?/.. ಇಲ್ಲಿ – ಕಾಡಿಲ್ಲದ ನಾಡಿನ ಭೀಭತ್ಸ ಚಿತ್ರಣ ವಿದೆ. ‘ಒಂದು ಎರಡು’ – ಪದ್ಯ, ಒಂಭತ್ತು ಹತ್ತರ ವರೆಗೆ ಪವಣಿಸಿಕೊಂಡ ಪರಿ ನೋಡಿ.” ಒಂದು ಎರಡು ಸೇರಿ ಆಟ ಆಡ್ತಿದ್ವು /ಮೂರು ನಾಲ್ಕುಸೆರಿ ಪಾಠ ಕೇಳ್ತಿದ್ವು /ಐದು ಆರು ಸೇರಿ ಊಟ ಮಾಡ್ತಿದ್ವು/ ಏಳು ಎಂಟು ಸೇರಿ ಜಗಳ ಆಡ್ತಿದ್ವು / ಒಭತ್ತು ಹತ್ತು ಸೇರಿ ನಿಂತು ನೋಡ್ತಿದ್ವು! ಇಂತಹ ನಿರ್ವಚನಗಳ ಮೋಡಿಯು – ಬಹುತೇಕ ಪುಟಾಣಿ ಪ್ರಾಸಗಳಲ್ಲಿ ಹಾಸುಹೊಕ್ಕಾಗಿವೆ.ಇರ್ವೆಗೆ ನೆಗಡಿ ಬಂದ್ರೆ? ಪದ್ಯದ ಗುಣ ಲಾವಣ್ಯವು ವೈಚಿತ್ರ್ಯ ಗಳಿಂದ ಕೂಡಿದೆ.ಇರ್ವೆಗೆ ನೆಗಡಿ ಬಂದ್ರೆ ಮೂಗುಹೇಗೆ ಒರ್ಸೋದು /ಮೈ ತಿಂಡಿಬಿಟ್ರೆ ಹೇಗಪ್ಪಾತುರ್ಸೋದು?ಕಿರಿಕಿರಿ ಮಾಡ್ದ್ರೆ ನಿದ್ದೆಹೇಗೆ ಬರ್ಸೋದು? ಹುಷಾರು ಇಲ್ದೆ ಹೋದ್ರೆ ಯಾರನ್ನ ಕರ್ಸೋದು? ಹೇಗಪ್ಪ ಬಾಯಿ ತೆರ್ಸಿ ಗುಳ್ಗೆನುಂಗ್ಸೋದು? ರಕ್ತನಾಳಹುಡ್ಕಿಹುಡ್ಕಿ ಸಲೈನ್ ಏರ್ಸೋದು?…ಇವರ ಆಲೋಚನಾ ಲಹರಿಯಲ್ಲಿ ‘ವಸ್ತುನವೀನತೆ’ ಇದೆ . ಇರುವೆಗೆ ನರನಂತೆ ಪರಿಕಿಸುವಪರಿ – ಇಲ್ಲಿ ಅಚ್ಚರಿ ಗೊಳಿಸುತ್ತದೆ!°°°ಬಾಗಲಕೋಟೆಯ ಬಸವೇಶ್ವರ ಎಂಜಿನಿಯರಿಂಗ್ ಕಾಲೇಜಿನ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಂಯೋಜಿತ ಪ್ರಾಧ್ಯಾಪಕರಾಗಿ ಸುದೀರ್ಘಸೇವೆಸಲ್ಲಿಸಿದ ಕುಕ್ಕುಂದಾ ಅವರು ಪ್ರಸಕ್ತ ವರ್ಷದ ಜುಲೈ 31 ಕ್ಕೆ, ತಮ್ಮ ಸೇವಾ ಹುದ್ದೆಯಿಂದ ನಿವೃತ್ತಿಹೊಂದಲಿದ್ದಾರೆ. ಎಡೆಬಿದದ ಬೋಧಕವೃತ್ತಿ ಯಲ್ಲಿಯಲ್ಲಿದ್ದೂ ಐದು ಕವಿತಾ ಸಂಕಲನ ಪ್ರಕಟಿಸಿ – ತಮ್ಮ ರಚನೆಗಳಲ್ಲಿ ನವೀಕರಣಕ್ಕೆ ಒತ್ತುಕೊಡುತ್ತ ಬಂದ ಈ ಕವಿ ಸದ್ಯ ಕಟ್ಟುಬಿಡಿಸಿಕೊಂಡಿದ್ದು, ಮುಂದಿನ (Re-tired) ಅವಧಿಯಲ್ಲಿನ ಇವರ ಕಾವ್ಯದ ಬೆಳವಣಿಗೆ ಇನ್ನೂ ಹೊಸತಿನಿಂದ ಪಡಿಮೂಡುತ್ತಿರಲಿ ಎಂದು ಮನದುಂಬಿ ಹಾರೈಸುವೆ. ಪ್ರಭುರಾಜ ಅರಣಕಲ್

ರಾಜಶೇಖರ ಕುಕ್ಕುಂದಾ ಅವರ ಕೃತಿ “ಬಿಸಿ ಬಿಸಿ ಬಾತು” ಒಂದು ಅವಲೋಕನ,ಪ್ರಭುರಾಜ ಅರಣಕಲ್ Read Post »

ಕಾವ್ಯಯಾನ, ಗಝಲ್

ಡಾ ಅನ್ನಪೂರ್ಣ ಹಿರೇಮಠ ಅವರ‌ ಗಜಲ್

ಕಾವ್ಯ ಸಂಗಾತಿ ಡಾ ಅನ್ನಪೂರ್ಣ ಹಿರೇಮಠ ಗಜಲ್ ಜ್ವಲಿಸುವ ಪ್ರೀತಿಯ ಸಹಿಸಿ ನುಂಗಲೆಂಗ ಹೇಳುಸುಡುವ ಕೆಂಡವ ಕಟ್ಟಿಕೊಂಡು ತಾಳಲೆಂಗ ಹೇಳು ಬಯಕೆ ಬಾಂದಳ ತೋಟ ನಳನಳಿಸುತಿದೆ ನೋಡುಒಲವಿನೊರತೆಯ ಒತ್ತರವ ತಡೆಯಲೆಂಗ ಹೇಳು ಮನಸು ಕಂಡ ಆಸೆಯೆಲ್ಲಾ ಫಲಿಸದೆಂದು ನಾ ಬಲ್ಲೆಪ್ರೇಮದುಯ್ಯಾಲೆಯ ಏರಿಳಿತ ತಾಳಲೆಂಗ ಹೇಳು ಜೀವ ಜೀವಕಂಟಿದ ನಂಟಿನ ಗಂಟು ಬಿಡಿಸಲುಂಟೆಪ್ರೇಮಾಮೃತವೇ ವಿಷವಾದರೆ ಬಾಳಲೆಂಗ ಹೇಳು ಒಡಲಾಳ ವಿರಹ ಭೋಗ೯ರೆತಕೆ ಸಿಕ್ಕು ತಪ್ತವಾಗಿದೆತುಟಿಯ ಮಧು ಹೆಪ್ಪುಗಟ್ಟಿದರೆ ಉಸುರಲೆಂಗ ಹೇಳು ಸರಸವಿಲ್ಲದ ಕೋಲಾಹಲ ಅವುಡುಗಚ್ಚಿಸಿ ಚುಚ್ಚುತಿದೆಹಾರಬೇಕೆನುವ ಬಯಕೆ ಪುಕ್ಕವ ಕತ್ತರಿಲೆಂಗ ಹೇಳು ಹುಚ್ಚೆದ್ದ ಆಸೆಗಳ ಸೊಕ್ಕನೆಲ್ಲ ಮುರಿಯಲಾಗುತಿಲ್ಲಕುದಿವ ಬೆಚ್ಚನೆಯ ಆ  ಭಾವ ಹೊಚ್ಚಲೆಂಗ ಹೇಳು ಅನುಳೆದೆಯಲ್ಲೆ ಅಚ್ಚಾದ  ಚಿತ್ರ ಕೊಚ್ಚಿ ಕತ್ತರಿಸಲುಂಟೆಚಿತ್ತ ಬಿತ್ತಿಯ ನೆನಪು ವಿಧಿ ಚೋರಗ ಒಪ್ಪಿಸಲೆಂಗ ಹೇಳು// ಡಾ ಅನ್ನಪೂರ್ಣ ಹಿರೇಮಠ

ಡಾ ಅನ್ನಪೂರ್ಣ ಹಿರೇಮಠ ಅವರ‌ ಗಜಲ್ Read Post »

You cannot copy content of this page

Scroll to Top