ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

“ಬೈಸಿಕಲ್ಲು” ವಿಶ್ವ ಸೈಕಲ್ ದಿನಕ್ಕೊಂದು ಕವಿತೆ ಸುಜಾತಾ ರವೀಶ್ ಮೈಸೂರು

ಕಾವ್ಯ ಸಂಗಾತಿ “ಬೈಸಿಕಲ್ಲು” ವಿಶ್ವ ಸೈಕಲ್ ಸುಜಾತಾ ರವೀಶ್ ಮೈಸೂರು ಹಿಂದೊಂದು ಕಾಲದ ಪ್ರತಿಷ್ಠೆಯ ಲಾಂಛನಇಂದು ಹೆಸರೇ ಇದರದು ಬಡವರ ವಾಹನಗಾಲಿಯ ಆವಿಷ್ಕಾರದೊಂದಿಗೆ ಇದರ ಉಗಮಸೈಕಲೇರಿದರೆ ಎಷ್ಟು ಮಜಾ! ಆಹಾ ಆರಾಮ! ಬೇಡದು ಹೆಚ್ಚಿನ ಖರ್ಚಿನ ಇಂಧನಕೇಳದು ದುಬಾರಿ ಸರ್ವೀಸು ಉಸ್ತುವಾರಿಗಳತುಳಿದು ತುಳಿದು ರಟ್ಟೆ ಕಾಲುಗಳಿಗೆ ಬಲಹತ್ತಿರ ಸುಳಿಯದು ಬೊಜ್ಜು ರೋಗ ರುಜಿನ ಇಲ್ಲ ಸೈಕಲ್ ಸವಾರಿ ಮಾಡಲು ಬಯಸದ ಮನಸುಕೆಲವರಿಗಂತೂ ಉಳಿದೇ ಬಿಟ್ಟಿದೆ ಇದಾಗಿ ಕನಸುಅಗೆಯುತ್ತಾ ಹೋದರೆ ಬಾಲ್ಯದ ನೆನಪುಗಳ ಗಣಿಸಿಗುವುದು ಎಲ್ಲರಿಗೂ ಸೈಕಲ್ ಕಲಿಕೆಯ ಮೆಲುಕ ಮಣಿ ಆಗುತ್ತಾ ಹೋದಂತೆ ಮನುಜರು ಸೋಮಾರಿವಿರಳವಾಯಿತು ಸೈಕಲ್ ಉಪಯೋಗ ಸವಾರಿವ್ಯಾಯಾಮ ಆರೋಗ್ಯ ನೀಡುತ್ತಿದ್ದ ಆ ಉಪಕಾರಿಈಗ ತುಕ್ಕು ಹಿಡಿದ ಕಂಬಿಗಳ ಆಸ್ತಿಪಂಜರ ಬರೀ. ಸಮಯದ ಪರಿವರ್ತನೆಯ ನಿಯಮಗಳಸಾರುವಂತಿದೆ ನಶ್ವರ ಜೀವನದ ತತ್ವಗಳಹೇಳುತ್ತಲಿದೆ ಏಳು ಬೀಳುಗಳ ಪಾಠಗಳವಿಪರ್ಯಾಸಗಳ ವೈಚಿತ್ರ್ಯ ವೈರುಧ್ಯಗಳ ಕಥೆಗಳ ಹೆಚ್ಚುತ್ತಿರುವ ಪರಿಸರ ಮಾಲಿನ್ಯಕ್ಕೆ ಇದು ವರಕಾಣದ ಕೇಳದ ರೋಗಗಳಿಗೆ ಕೊಡುವ ಉತ್ತರಬನ್ನಿ ಎಲ್ಲಾ ಉಪಯೋಗಿಸೋಣ ಸೈಕಲ್ಲುಕಡಿಮೆ ಮಾಡೋಣ ಪೆಟ್ರೋಲು ಡಾಕ್ಟರ ಬಿಲ್ಲು ಸುಜಾತಾ ರವೀಶ್ ಮೈಸೂರು

“ಬೈಸಿಕಲ್ಲು” ವಿಶ್ವ ಸೈಕಲ್ ದಿನಕ್ಕೊಂದು ಕವಿತೆ ಸುಜಾತಾ ರವೀಶ್ ಮೈಸೂರು Read Post »

ಕಾವ್ಯಯಾನ

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಎದೆ ಹಾಲು”

ಕಾವ್ಯ ಸಂಗಾತಿ ಡಾ. ಹೆಚ್. ನಟರಾಜ್ ಆರ್ಯ “ಎದೆ ಹಾಲು” ನವಮಾಸ ಕತ್ತಲೊಳಗೆರಕ್ತ ದೀಪ ಹೊತ್ತಿತು,ಕರುಳು ಬಳ್ಳಿಯ ಸೇತುವೆಯಲಿಜೀವ ಹನಿ ತೇಲಿತು. ಪ್ರಸವ ನೋವಿನ ಅಲೆಗಳಲಿಸಾವಿನ ಬಾಗಿಲ ತಟ್ಟಿತು,ಮೊದಲ ಅಳುವ ನಾದದೊಡನೆಮಮತೆ ಹೊಳೆ ಹರಿಯಿತು. ಎದೆ ಹಾಲಿನ ಬಿಳಿಹರಿವುಕರಗಿದ ರಕ್ತ ಜ್ಯೋತಿ,ಮಗುವ ತುಟಿ ನಗುವಿನಲಿಮತ್ತೆ ಮೊಳೆದ ಜೀವಶಕ್ತಿ. ಕನ್ನಡಿ ಮಿಂಚಿನ ಮೋಹದಲಿಮಡಿಲ ಜೋಗುಳ ಮಂಕಾಯಿತು,ಮೊಬೈಲಿನ ನೀಲಿ ಕಣ್ಣಲಿಬಾಲ್ಯ ಮೌನವಾಗಿ ಕರಗಿತು. ಕರುಳು ಬಳ್ಳಿಯ ನoಟ್ಟಿoದುಕಸಬುಟ್ಟಿ ದಾರಿ ಹಿಡಿಯಿತು,ಕಣ್ಣೀರ ಹನಿಯ ಆಳದಲಿಮಮತೆ ದೀಪ ಉಳಿಯಿತು. ತಾಯಿಯೆಂದರೆ  ಚಂದ್ರನಲ್ಲ,ಸುಟ್ಟು ಕರಕಾದ ದೀಪ,ಕರಗಿದ ಉಸಿರ ಬೂದಿಯಲಿಬಾಲ್ಯ ದಾರಿಯ ರೂಪ. ಡಾ. ಹೆಚ್. ನಟರಾಜ್ ಆರ್ಯ.

ಡಾ. ಹೆಚ್. ನಟರಾಜ್ ಆರ್ಯ ಅವರ ಕವಿತೆ “ಎದೆ ಹಾಲು” Read Post »

ಕಾವ್ಯಯಾನ

ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಇಳಿದುಬಿಡು”

ಕಾವ್ಯ ಸಂಗಾತಿ ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಇಳಿದುಬಿಡು“ ಇಳಿದು ಬಿಡು ಮಳೆ  ಬೇಗನೆ, ಸುಡುವ ಧರೆಗೆ ತಂಪು ನೀಡು.ಕಾದು ಕುಳಿತಿವೆ  ಜೀವ ಜಾಲ,ಕಾಯುತ್ತಿವೆ ಸಿಹಿ ಹನಿಗಳ ಮುತ್ತು ರತ್ನ . ಬತ್ತಿದ ಕೆರೆ ತೊರೆಗಳ ತುಂಬಿಸು,ನಗೆ ಅರಳಲಿ ಗಿಡ.ಮರ ಬಳ್ಳಿಗಳಲಿ ಒರೆಸು  ಕಣ್ಣೀರು ಸರಿಸಿ ಸಾಲದ ಮೂಟೆ,ಹಸಿರ ಹಂದರವ ಎಲ್ಲೆಡೆ ಕಟ್ಟಿ. ಚಲಿಸುವ ಕಾರ್ಮೋಡಗಳು ಒಂದಾಗಿ ಬನ್ನಿ,ತೆಪ್ಪನೆ ಮಳೆ  ಸುರಿದು ಜಗವ ನಲಿಸಿ.ಮಣ್ಣು ಹುಡಿ ಭಂಡಾರ ತೂರಿ  , ಜನ್ಮ ಆಸೆಯ ಮತ್ತೆ ಚಿಗುರಿಸಿ. ನಿನ್ನ ತಂಪ ಆ ಸಿಹಿ ಸಿಂಚನ,ಸೃಷ್ಟಿಯ ಒಡಲಿಗೆ ಜೀವ ಗಾನ!ಸದ್ದಿಲ್ಲದೆ  ಹೊರಟು ಬಿಡುನಿನ್ನ ದಾರಿ  ಬದುಕು ಪಾವನ ಡಾ ಶಶಿಕಾಂತ ಪಟ್ಟಣ ರಾಮದುರ್ಗ

ಡಾ ಶಶಿಕಾಂತ ಪಟ್ಟಣ ರಾಮದುರ್ಗ “ಇಳಿದುಬಿಡು” Read Post »

ಅನುವಾದ, ಕಥಾಗುಚ್ಛ

ತೆಲುಗು ಕಥೆ “ಶೋಭನ್‌ ಬಾಬು-ಗಣೇಶ್‌ ಬೀಡಿ” ತೆಲುಗುಮೂಲ ಜಿ.ಉಮಾಮಹೇಶ್ವರ್‌ , ಕನ್ನಡಕ್ಕೆ ರಂಗನಾಥ ರಾಮಚಂದ್ರ ರಾವು

ಅನುವಾದ ಸಂಗಾತಿ ಶೋಭನ್‌ ಬಾಬು-ಗಣೇಶ್‌ ಬೀಡಿ ತೆಲುಗುಮೂಲ ಜಿ.ಉಮಾಮಹೇಶ್ವರ್‌ಕನ್ನಡಕ್ಕೆ ರಂಗನಾಥ ರಾಮಚಂದ್ರ ರಾವು ಶ್ರೀಶೈಲದಂತಹ ಆಧ್ಯಾತ್ಮಿಕ ಕ್ಷೇತ್ರದ ಅಂಚಿನಲ್ಲಿ ಇರುವುದರಿಂದಲೋ ಅಥವಾ ಮಧ್ಯಮ ವರ್ಗದ ನೌಕರರ  ಕುಟುಂಬಗಳು ಅಧಿಕವಾಗಿ ಇರುವುದರಿಂದಲೋ ಮತ್ತು ಸುನ್ನಿಪೆಂಟದಲ್ಲಿ  ಭಕ್ತಿ ಕಾರ್ಯಕ್ರಮಗಳು, ಮತ್ತು ಹಬ್ಬಗಳ ಸಂಭ್ರಗಳು ಚೆನ್ನಾಗಿ ಇರುತ್ತಿದ್ದವು. ವಿನಾಯಕಚವಿತಿಗೆ, ರಾಮನವಮಿಗೆ ಚಪ್ಪರಗಳನ್ನು ಹಾಕುವವರು. ಒಂಬತ್ತು ದಿನಗಳ ಹಬ್ಬದ ಗಡಿಬಿಡಿಯಲ್ಲಿ ನಾಟಕಗಳು, ಹರಿಕಥೆಗಳು, ಬುರ್ರಕಥೆಗಳು ಅದರಲ್ಲಿ ಭಾಗವಾಗಿದ್ದವು. ಚಿಕ್ಕಮಕ್ಕಳಿಗೆ ಹಾಡುಗಳು, ಏಕಪಾತ್ರಾಭಿನಯಗಳು, ನೃತ್ಯಸ್ಪರ್ಧೆಗಳಲ್ಲಿ ಬಹುಮಾನಗಳು ವಿತರಿಸುವವರು. ಶಿವರಾತ್ರಿಗೆ ಸಿನಿಮಾ ಹಾಲುಗಳಲ್ಲಿ ತ್ರೀ ಶೋಸ್ ಹಾಕುವವರು. ಧನುರ್ಮಾಸದಲ್ಲಿ ನಗರ ಸಂಕೀರ್ತನೆಗಳು ಚಳಿಯನ್ನು ಜಯಿಸುತ್ತವೆ. ಸಂಕ್ರಾಂತಿಗೆ ಅಘೋಷಿತ ರಂಗೋಳಿ ಸ್ಪರ್ಧೆಗಳು ನಡೆಯುತ್ತಿದ್ದವು. ಯಾರ ರಥ ಎಷ್ಟು ದೂರ ಸಾಗಿತೋ ಎಂದು ಅಳೆಯುತ್ತಿದ್ದರು. ದೊಡ್ಡ ದೊಡ್ಡ ರಂಗೋಳಿಗಳಿಗೆ ವಿಶೇಷ ಪ್ರಶಂಸೆಗಳು ದೊರೆಯುತ್ತಿದ್ದವು. ಅಕ್ಕಾತಂಗಿಯರು,ತಾಯಿ-ಆತ್ತೆಗಳು ರಂಗೊಳಿಗಳು ಹಾಕುತ್ತಿದ್ದಾರೆ  ಅಣ್ಣ-ತಮ್ಮಂದಿರು, ತುಂಟ ಮಕ್ಕಳು ಸ್ವಂತ ರಂಗೊಳಿಗಳಿಗೆ ಕಾಪಾಲಾ ಕಾಯುತ್ತಾ, ಹೊರಗಿನ ರಂಗೊಳಿಗಳನ್ನು ವಿಶ್ಲೇಷಿಸುತ್ತಾ ತಿರುಗಾಡುತ್ತಿದ್ದರು. ಸುನ್ನಿಪೆಂಟಗೆ ಸಂಬಂಧಿಸಿದವರೆಗೂ ಸತ್ಯನಾರಾಯಣಸ್ವಾಮಿ ದೇವಸ್ಥಾನ, ರಾಮಮಂದಿರಗಳು ಭಕ್ತಿ ಮತ್ತು ಆಧ್ಯಾತ್ಮಿಕ ಕೇಂದ್ರಗಳಾಗಿವೆ.ಶ್ರೀಶೈಲದಲ್ಲಿ ಸಹಜ ಸಿದ್ಧವಾಗಿ ಕೆಲವುರು ಸಾಧುಗಳು, ಸನ್ಯಾಸಿಗಳು ಯಾವಾಗಲೂ ಕಂಡು ಬರುತ್ತಿರುತ್ತಾರೆ. ಇವರಲ್ಲದೆ, ಹೊರ ಪ್ರದೇಶಗಳಿಂದಲೂ ಕೆಲವರು ಬಂದು ಇಲ್ಲಿ ಯಾವುದೋ ಸತ್ರದಲ್ಲಿ ಊಟ ಮಾಡುತ್ತಾ, ಕಾಲ ಕಳೆಯುತ್ತಾ   ಬದುಕುವವರು ಅನೇಕರು ಇರುವವರು. ಮುಮುಕ್ಷುವುರಾದ ಸಾಧುಗಳು ಯಾರೋ, ಭಿಕ್ಷುಕುರಾದ ಸನ್ಯಾಸಿಗಳು ಯಾರೋ ಕಂಡುಹಿಡಿಯುವುದು ತುಂಬಾಕಷ್ಟ. ಉಡುಗೆ ತೊಡುಗೆಗಳಿಂದ, ಹಾವಭಾವಗಳಿಂದ, ಮಾತಿನ ಪದ್ಧತಿ ಸುಮಾರಾಗಿ ಒಂದೇ ವಿಧವಾಗಿ ಇರುತ್ತದೆ.ಒಮ್ಮೆ ಪೂರ್ಣಾನಂದ ಸ್ವಾಮಿ ಎಂಬ ಸ್ವಾಮಿಗಳು ತಮ್ಮ ಪತ್ನಿಸಮೇತ ಶ್ರೀಶೈಲಕ್ಕೆ ಬಂದರು.  ಅಯ್ಯಪ್ಪಸ್ವಾಮಿಯ ದೇವಸ್ಥಾನದಲ್ಲಿ ಕೆಲವು ದಿನಗಳು, ಮತ್ತು ಸತ್ಯನಾರಾಯಣ ಸ್ವಾಮಿಯ ದೇವಸ್ಥಾನದಲ್ಲಿ ಕೆಲವು ದಿನಗಳು ಪ್ರವಚನಗಳನ್ನು ಹೇಳುತ್ತಾ ಸುಮಾರು ಮೂರುತಿಂಗಳ ಕಾಲವು ಅವರು ಸುನ್ನಿಪೆಂಟದಲ್ಲಿ ಕಳೆದರು. ಹಾಗಾಗಿ ಪೂರ್ಣಾನಂದಸ್ವಾಮಿಗಳು ಶ್ರೀಶೈಲದಲ್ಲಿದ್ದ ಮೂರುತಿಂಗಳಲ್ಲಿ ಒಂದುತಿಂಗಳು ನಮ್ಮ ಮನೆಯಲ್ಲಿಯೇ ಇದ್ದರು. ಪೂರ್ಣಾನಂದಸ್ವಾಮಿಗಳು, ತಾವು ವೇದಾಂತಂ ಲಕ್ಷ್ಮಯ್ಯನವರ ಶಿಷ್ಯರೆಂದು, ಅವರ ಊರು ಕಡಪಜಿಲ್ಲೆಯ ಮಾಮಿಡಾಲಪಲ್ಲೆ ಎಂದೋ, ಇನ್ನೂ ಯವುದೋ ಊರು ಎಂದು ಹೇಳಿದ್ದು ನೆನಪಿದೆ. ಪ್ರತಿದಿನ, ಸಾಯಂಕಾಲ ಆರರಿಂದ ಏಳರ ವರೆಗೆ ಅವರು  ಉಪದೇಶ ಮಾಡುತ್ತಿದ್ದರು. ಆಗ ಹೆಂಗಸರೆಲ್ಲ ಆ ಸಮಯಕ್ಕೆ  ಸೇರಿ ಸ್ವಲ್ಪ ಹೊತ್ತು ಕಾಲಕ್ಷೇಪ ಮಾಡುತ್ತಿದ್ದರು. ಭಾನುವಾರಗಳಲ್ಲಿ ಮಾತ್ರ ಮಧ್ಯಾಹ್ನ ಮೂರರಿಂದ ನಾಲ್ಕರವರೆಗೂ ಹೇಳುತ್ತಿದ್ದರು.ಒಂದುದಿನ ಯಾವುದೋ ಕೆಲಸಕ್ಕೆ ನನ್ನ ತಾಯಿಯನ್ನು ಕರೆದುಕೊಂಡು ಬರಬೇಕೆಂದು ಅಪ್ಪ ಹೇಳಿದರೇ ನಾನು ದೇವಸ್ಥಾನಕ್ಕೆ ಹೋಗಿದ್ದೆ. ಇನ್ನೊಂದು ಐದು ನಿಮಿಷಗಳಲ್ಲಿ ಮುಗಿಯುತ್ತದೆ. ಕೂತ್ಕೋ ಅಂದರೆ, ನಾನೂ ಕೂತ್ಕೊಂಡು ಕೇಳುತ್ತಿದ್ದೇನೆ. ಅವರು ಶ್ಯಾಸೆದ ಬಗ್ಗೆ, ಶ್ಯಾಸೆ ಮೇಲಿನ ಧ್ಯಾಸದ ಬಗ್ಗೆ, ಮೌನವಾಗಿ ಮಾಡುವ ಧ್ಯಾನದ ಬಗ್ಗೆ ಹೇಳುತ್ತಾ  ಅಧ್ಯಾತ್ಮಿಕ ಸಂಬಂಧವಾದ ಮಾತುಗಳೇನೊ ಹೇಳಿತ್ತಿದ್ದರು.ನಾನು ಏನೋ  ಯೋಚಿಸುತ್ತಾ ಕೂತಿದ್ದಾರೆ ನಾಗಮಣಿ ಅತ್ತೆ ನನ್ನನ್ನು ಹತ್ತಿರಕ್ಕೆ ಕರೆದು –“ಈ ಸ್ವಾಮಿ ಇಷ್ಟೊಂದು ಮಾತುಗಳು ಹೇಳ್ತಾನೆ, ಆದರೆ, ಇವರಿಗೆ ಸಿನಿಮಾ ಹುಚ್ಚು ಹೋಗಿಲ್ಲ” ಎಂದಳು.ವಾಸ್ತವಕ್ಕೆ ಈ ಚರ್ಚೆಯಲ್ಲಿ ಚಲನ ಚಿತ್ರಗಳ ಪ್ರಸ್ತಾವನೆ ಏಕೆ ಬಂದವೋ ನನಗೆ ಅರ್ಥವಾಗಿಲ್ಲ. ಆ ಅತ್ತೆ ಸಿನಿಮಾಗಳು ಚೆನ್ನಾಗಿ ನೋಡುತ್ತಾಳೆ. ಚೆನ್ನಾಗಿ ಫಾಲೋ ಆಗುತ್ತಾಳೆ  ಕೂಡಾ. ಇವರಿಗೆ ಸಿನಿಮಾಹುಚ್ಚು ಎಂದು ಹೇಗೆ ನಿರ್ಧರಿಸಿದ್ದಾಳೋ  ತಿಳಿಯದೆ ನಾನು ತಲೆ ಕೆಡಿಸಿಕೊಂಡಾಗ, ಅವರೇ ನನ್ನನ್ನು ಮತ್ತಿಷ್ಟೂ ಹತ್ತಿರಕ್ಕೆ ಕರೆದು-“ಬೇಕಿದ್ದರೆ ಕೇಳು, ಅವರು ಮಾತು ಮಾತಿಗೆ ಶೋಭನ್ ಬಾಬು, ಶೋಭನ್ ಬಾಬು ಎನ್ನುತ್ತಿದ್ದಾನೆ”ನಾನು ಸ್ವಲ್ಪ ಕಿವಿಕೊಟ್ಟು ಶ್ರದ್ಧೆ ಯಿಂದ ಕೇಳಿದಾಗ, ಹಾಗೆ ಅನಿಸಿತು, ಆದರೆ ಅದಲ್ಲ ಅಂತಲೂ ಅನಿಸಿತು. ನನಗೆ ತೆಲುಗು ಭಾಷೆಯೆಂದರೆ ಒಲವು, ಮನೆಯಲ್ಲಿದ್ದ ಪುಸ್ತಕಗಳನ್ನು(ಪೂರ್ಣಾನಂದಸ್ವಾಮಿ ಅವರವು ಕೂಡಾ) ನೋಡಿದ್ದೇನೆ. ಅದರಿಂದ ಮತ್ತಿಷ್ಟೂ ಶ್ರದ್ಧೆಯಿಂದ ಕೇಳಿದರೆ  ಆಗ  ಸ್ಫುರಿಸಿತು ಆ ಪದವು, ಅದರ ಅರ್ಥ್!ಆ ಅತ್ತೆ ಮತ್ತೆ ಕರೆದು  “ಗಮನಿಸಿದ್ದೀಯಾ?” ಎಂದು ಕೇಳಿದಳು.ಆಗ ನಾನು ಅವಳಿಗೆ ಹೇಳಿದೆ –“ಅತ್ತೆ, ಅದು ನೀವು ಅಂದುಕೊಂಡಂತೆ ಶೋಭಾನ್ ಬಾಬು ಅಲ್ಲ – ಸೋಹಂ ಭಾವ – ಅಂದರೆ ನಾನೇ ದೇವರು ಎಂಬ ಭಾವನೆ ” ಎಂದು ಹೇಳಿದರೆ  ಅವಳ ಮುಖ ಸಂಪೂರ್ಣವಾಗಿ ಕಳೆಗುಂದಿತ್ತು. ನಂಬಿದಂತೆ ಕಾಣಿಸಲಿಲ್ಲ. ಮನೆಗೆ ಬಂದಮೇಲೆ ನನ್ನ ಅಕ್ಕಗೆ ಹೇಳಿದೆ. ಈಗಲೂ  ಆ ವಿಷಯವನ್ನು ನೆನೆದರೆ  ತಡೆಯಲಾರದಷ್ಟು ನಗು ಬರುತ್ತದೆ.ಇನ್ನೊಂದು ಸಲ ಸನ್ಯಾಸಿಯೊಬ್ಬರು ಮಹದೇವಪ್ಪನವರನ್ನು ಭೇಟಿಮಾಡಿ  ತಾನು ಬಂದು ವ್ರತವನ್ನು ಸಂಕಲ್ಪಿಸಿದ್ದೇ ನೆಂದು ಅದು ಮುಗಿಯುವ ತನಕ ಅವರ ಸಹಾಯ ಬೇಕೆಂದು ಕೇಳಿದ. ಬೋಳ ಶಂಕರನಂತಹ  ಮಹದೇವಪ್ಪ ಮಾಮಾ ಆ ವ್ರತವು ಏನು, ಅದು ಮುಗಿಸಲು ಎಷ್ಟು ದಿನಗಳು ಬೇಕಾಗುತ್ತವೋ  ಅದಕ್ಕೆ  ಏನೇನು ಬೇಕಾಗುತ್ತವೋ ಏನೂ  ಕೇಳದೆ ಅವರಿಗೆ ಅಭಯ ಕೊಟ್ಟರು.  ಅಯ್ಯಪ್ಪಸ್ವಾಮಿಯ ದೇವಸ್ಥಾನದಲ್ಲಿ ಆಶ್ರಯವೂ ಕೊಡಿಸಿದರು. ಒಂದುವಾರ ಅವರಿಗೆ ಎರಡು ಸಲ ಊಟ ಕಳುಹಿಸುವ ಸರದಿ ನಮ್ಮದಾಗಿತ್ತು.ದೇವಸ್ಥಾನದ ಈಶಾನ್ಯದ  ಮೂಲೆಯಲ್ಲಿ ಸ್ವಲ್ಪ ಖಾಲೀ ಜಾಗವಿತ್ತು. ಅಲ್ಲಿಯೇ ಅವರು ತಮ್ಮ ಚೀಲ ಇಟ್ಟುಕೊಂಡು, ಅಲ್ಲಿಯೇ ಇದ್ದ ನಲ್ಲಿಯ ಬಳಿ ಸ್ನಾನ ಮಾಡುತ್ತಿದ್ದರು. ಅವರು ಅಷ್ಟೊಂದು ಪೂಜೆ ಪುಂಸ್ಕಾರಗಳು ಮಾಡಿದಂತೆ ಕಾಣಿಸುತ್ತಿರಲಿಲ್ಲ. ಯಾವಾಗಲೂ ಮೌನವಾಗಿ ಏನೋ ಯೋಚಿಸುತ್ತಿದ್ದವನಂತೆ ಇರುವವನು. ಆಗಾಗ, ಕೆಲವೊಮ್ಮೆ ಗೋಡೆಗೆ ಒರಗಿ ಮಲಗಿದ್ದೇನೋ  ಧ್ಯಾನ ಮಾಡುತ್ತಿದ್ದಾನೋ ತಿಳಿಯದ ಸ್ಥಿತಿಯಲ್ಲಿ ಇರುತ್ತಿದ್ದ.ಅಯ್ಯಪ್ಪಸ್ವಾಮಿ ದೇವಸ್ಥಾನ ನಮ್ಮ  ಕಾರ್ಯಕಲಾಪಕ್ಕೆ ಮುಖ್ಯವಾದ ಜಾಗಾ. ಅದು ದೊಡ್ಡ  ಜನಸಂದಣಿ ಇರುವ ದೇವಸ್ಥಾನ ವಲ್ಲ. ಆ ಪ್ರಾಜೆಕ್ಟ್ ನಲ್ಲಿ ಉದ್ಯೋಗಿಯೊಬ್ಬರು ಆ ದೇವಸ್ಥಾನಕ್ಕೆ ಧರ್ಮ ಕರ್ತ, ಪೂಜಾರಿ  ಎಲ್ಲಾ ಅವನೇ ಆಗಿ ನಡೆಸುತ್ತಿದ್ದನು. ಆ ದೇವಸ್ಥಾನ, ಅವರ ಮನೆ ಪೂಜಾ ಕೋಣೆಗೆ ತುಂಬಾ ದೊಡ್ಡದಾಗಿದಂತೆ,  ಮತ್ತು ಸಾಂಪ್ರದಾಯಿಕ ದೇವಸ್ಥಾನಗಳಿಗೆ ತುಂಬಾ ಚಿಕ್ಕದಾಗಿದಂತೆ ಕಾಣಿಸುತ್ತಿತ್ತು. ಅವರ ಮನೆ ಒಳೆಗೆಯಿಂದ ದೇವಸ್ಥಾನಕ್ಕೆ ದಾರಿಯಿತ್ತು. ದೇವಸ್ಥಾನಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ, ಪೂಜೆ, ನೈವೇದ್ಯ ಎಲ್ಲವನ್ನೂ ಅವರೇ ನೋಡಿಕೊಳ್ಳುತ್ತಿದ್ದರು. ಅವರ ಮಗನ  ಹೆಸರು ಮಣಿಕಂಠ. ಅದೇನೇ ಇರಲಿ, ಶನಿವಾರ ರಾತ್ರಿಯಿಂದ ಭಾನುವಾರ ರಾತ್ರಿಯ ವರೆಗೂ ಅದು ಮಕ್ಕಳ ಆಟಗಳ  ಜಾಗಾವಾಗಿತ್ತು.ಶನಿವಾರ ಸಂಜೆ ಏಳುಗಂಟೆಗೆಲ್ಲಾ , ‘ಈಗಲಪೆಂಟ’ದಿಂದ ಒಬ್ಬ ಮಲಯಾಳ/ ತಮಿಳ ಭಜನ ತಂಡ ಬರುತ್ತಿತ್ತು. ಅಲ್ಲಿಯ ವರೆಗೂ ಅಲ್ಲಲ್ಲಿ ಆಟವಾಡುತ್ತಿದ್ದ ಮಕ್ಕಳೆಲ್ಲರು ಮನೆಗೆ  ಹೋಗಿ ಕೈಕಾಲೂ ತೊಳೆದುಕೊಂಡು ಬಂದು  ಭಜನೆಯಲ್ಲಿ ಭಾಗ ವಹಿಸುವವರು. ಘಂಟೆಸಾಲ ಅವರ ಶುಕ್ಲಾಂಬರಧರಂದಿಂದ ಪ್ರಾರಂಭವಾಗಿ “ಸುಬ್ರಹ್ಮಣ್ಯಂ ಸುಬ್ರಹ್ಮಣ್ಯಂ”, “ಚಂದ್ರಶೇಖರ, ಚಂದ್ರಶೇಖರ” ಎಂಬ ಭಜನೆಗಳ ಮೂಲಕ  “ಒನ್ರಾಮ್ ತಿರುಪ್ಪಡಿ ಶರಣಂ ಪುನ್ನಯ್ಯಪ್ಪ” ಎಂದು  ಸಾಗುವ ಸೋಪಾನದ ಗೀತೆಯೊಂದಿಗೆ ಕೊನೆಗೊಳ್ಳುವುದು.  ಸೋಪಾನಗಳ ಹಾಡು ಉಂಬಾ ಉತ್ಸಾಹದಿಂದ  ತುಂಬಿ ತುಳುಕುತ್ತಿತ್ತು. ಪ್ರತಿಯೊಂದು ಸೋಪಾನಕ್ಕೆ ಒಂದು ಚರಣವಿದೆ. ಪ್ರತಿಚರಣ ಮುಗಿಯುತ್ತಿದ್ದಂತೆ, ಪ್ರಸಾದಕ್ಕೆ ಹತ್ತಿರವಾಗುತ್ತಿದ್ದ ತೃಪ್ತಿ. ನಡುವೆ ಕಾಲಕ್ಷೇಪಕ್ಕಾಗಿ ನಾನು ಶಿವ ಶಿವ ಶಂಕರ…  ಎನ್ನುತ್ತಾ ಭಕ್ತ  ಕನ್ನಪ್ಪ ಗೀತವನ್ನು ಹಾಡುತ್ತಿದ್ದೆ.  ಆ ಭಜನ ತಂಡಕ್ಕೇ ನನ್ನ ಹೆಸರು ಶಿವ ಶಿವ ಶಂಕರ ಎಂದೇ ಗುರುತು. ಕೊನೆಗೆ ಮಂಗಳಾರತಿಯ ನಂತರ ಅರ್ಚಕರು ಬಿಸಿಬಿಸಿ ಚಕ್ಕರ ಪೊಂಗಲಿಯನ್ನು  ಚಿಕ್ಕ ಚಿಕ್ಕ  ದೊನ್ನೆಗಳಲ್ಲೋ , ಎಲೆಗಳಲ್ಲೋ  ಹಂಚುವವರು.  ಅಂದು ರಾತ್ರಿ ಆರತಿ ಮುಗಿಸಿದ ಮೇಲೆ ತಿನ್ನುವ ಆ ಪ್ರಸಾದ ಅದ್ಬುತವಾದ ರುಚಿಯಿಂದ, ಆಹಾ… ಅನ್ನಿಸುವಷ್ಟು ರುಚಿಯಾಗಿ ಇರುತ್ತಿತ್ತು. ಬಹಳಷ್ಟು ಬಾರಿ  ಆ ಪ್ರಸಾದದ ಮೇಲೆ ಅನುರಕ್ತಿಯಿಂದ ದೇವಸ್ಥಾನಕ್ಕೆ ಹೋಗುತ್ತಿದ್ದೇವೆ ಎಂದರೆ  ಅದರಲ್ಲಿ ಸ್ವಲ್ಪವಾದರೂ ಸುಳ್ಳು ಇಲ್ಲ..ಹಾಗೆ ಆದಿವಾರದ ಬೆಳಿಗ್ಗೆ ತಮ್ಮ ತಮ್ಮ ಮನೆಗಳಲ್ಲಿ ತಾವು ತಿಂಡಿ ಮುಗಿಸಿಕೊಂಡು ಎಲ್ಲಿ ಆಟ ಆಡಬಹುದು, ಏನು ಆಡಬೇಕು ಎಂದು ಚರ್ಚಿಸಿತ್ತಿದ್ದೆವು. ಹಾಗೆ ನಾವು ಚರ್ಚಿಸಲು ಹೋಗುವ ಮೊತ್ತ ಮೊದಲಿನ ಪ್ರದೇಶ ಅಯ್ಯಪ್ಪಸ್ವಾಮಿ ದೇವಸ್ಥಾನವು.  ಆ ದಿನವೂ ಎಂದಿನಂತೆ ಎಲ್ಲರೂ ಗುಂಪು ಸೇರಿ ಯಾವಾವು ಆಟಗಳು ಆಡಬೇಕೋ ಚರ್ಚಿಕೊಳ್ಳುತ್ತಿದ್ದರೆ ಸಾಧುವು ನನ್ನನು ಆತ್ತ ಇತ್ತ  ನೋಡಿ  ಇಲ್ಲಿಬಾ ಎಂಬಂತೆ ಕೈ ಸನ್ನೆ ಮಾಡಿದ.  ನನ್ನೇ ಎಂದು ನಿರ್ಧರಿಸಿಕೊಂಡು ನಾನೇ ಅವಾರ ಕಡೆಗೆ ಹೋದ. ಅವರು ನನ್ನನ್ನು ದೇವಸ್ಥಾನದ ಹಿಂಭಾಗಕ್ಕೆ ಕರೆದೊಯ್ದು, ಮೇಲಿನ ಜೇಬಿನಿಂದ ಒಂದು ರೂಪಾಯಿ ನೋಟು ತೆಗೆದು, ‘ಒಂದು ಗಣೇಶ್ ಬೀಡಿ ಕಟ್ಟು ತೆಗೆದುಕೊಂಡು ಬಾ ಮಗು. ಹಾಗೆ ನಿನಗೂ ಬೇಕಾದರೆ,  ಐದುಪೈಸೆಗೆ ಏನಾದರೂ  ಕೊಂಡುಕೋ’  ಎಂದು ಹೇಳಿ ಆ ರೂಪಾಯನ್ನು ಕೈಯಲ್ಲಿ ಇಟ್ಟ.ನಾನು ಏನೂ ಯೋಚಿಸದೆಯೇ  ಅಂಗಡಿಯ ಕಡೆಗೆ ಓಡಿದೆ. ಮಲ್ಲಿಕಾರ್ಜುನ ಟಾಕೀಸುಗೆ ತಿರುಗುವ ಮೂಲೆಯಲ್ಲಿ ಒಂದು ಅಂಗಡಿ ಇತ್ತು. ಅಲ್ಲೇ ನಾವು ರೂಢಿಯಾಗಿ ಸಾಮಾನುಗಳನ್ನು ತಂದುಕೊಳ್ಳುತ್ತಿದ್ದೆವು. ಆ ಅಂಗಡಿಯಲ್ಲಿ ಇಬ್ಬರು ಸಹೋದರರು ಇರುತ್ತಿದ್ದರು. ನಾವು ಅವರನ್ನು ಚಿಕ್ಕ ಶೆಟ್ಟಿ  ಮತ್ತು ದೊಡ್ಡ ಶೆಟ್ಟಿ ಎಂದು ಕರೆದುಕೊಳ್ಳುತಿದ್ದೆವು.   .ಚಿಕ್ಕ ಶೆಟ್ಟಿ ಎಲ್ಲರೊಂದಿಗೆ ಚೆನ್ನಾಗಿ ಮಾತನಾಡುತ್ತಾ, ಉತ್ತಮ ಗ್ರಾಹಕರ ಪ್ರಜ್ಞೆಯನ್ನು ತೋರಿಸುವವನು. ನಾನು ಬೀಡಿ ಕೇಳಿದೊಡನೆ ಒಂದು ಕಟ್ಟು ಕೊಟ್ಟು ಏನೋ ಕೇಳುತ್ತಿದ್ದಾಗ ನಾನು ಓಡುತ್ತಾ ಬಂದುಬಿಟ್ಟೆ. ದೇವಸ್ಥಾನದಲ್ಲಿ ಗಣೇಶ್ ಬೀಡಿಗಳ ಕಟ್ಟು, ಉಳಿದ ಚಿಲ್ಲರೆ, ಸಾಧುವಿಗೆ ನೀಡಿ, ನನ್ನ ಆಟಗಳಲ್ಲಿ ನಾನು ಮುಳುಗಿಹೋದೆ.ಒಂದು ವಾರದ ನಂತರ, ಅಪ್ಪ ಯಥಾಲಾಪವಾಗಿ  ಪಡಶಾಲೆಯಲ್ಲಿ ಇದ್ದ ನನ್ನನ್ನು ಕರೆದು “ಏನೋ ಬೀಡಿ ಸೇದುತ್ತಿದ್ದೀಯಾ?”  ಎಂದು ಸ್ವಲ್ಪ ಕಟುವಾಗಿಯೇ ಕೇಳಿದರು.  ನನ್ನ ಬಾಯಿಂದ ಮಾತು ಬರಲಿಲ್ಲ. ಅಷ್ಟರಲ್ಲಿ ಅಮ್ಮನೂ ಬಂದಳು. ವಿಷಯ ತಿಳಿದುಕೊಂಡು, “ಛ, ಚ ಅವನು ಏಕೆ ಸೇದುತ್ತಾನೆ? ” ಎಂದು ನನ್ನನ್ನು ಸಮರ್ಥಿಸಿದಳು.ಮತ್ತೆ ತಾನೇ “ಇಷ್ಟಕ್ಕೂ ನಿಮಗೆ ಯಾರು ಹೇಳಿದರು?” ಎಂದು ಕೇಳಿದಾಗ, ಅಪ್ಪ “ಯಾರೋ ಹೇಳಿದರೆ ನಾನೇಕೆ ನಂಬುತ್ತೇನೆ,  ಯಾರ ಹತ್ರ  ಇವನು ಖರೀದಿಸಿದನೋ  ಅವನೇ, ಚಿಕ್ಕಶೆಟ್ಟಿ ಹೇಳಿದ” ಎಂದ.ನನಗೆ ವಿಷಯವು ಅರ್ಥವಾಯಿತು. ನಾನು ಮುಗುಳ್ನಗುತ್ತಾ “ಓಹ್, ಅದಾ, ದೇವಸ್ಥಾನದಲ್ಲಿ ಸ್ವಾಮಿ ಇದ್ದಾನಲ್ಲ, ಕಳೆದ ಭಾನುವಾರ ಅವರು ಖರೀದಿಸಿಕೊಂಡು ಬಾ ಅಂತ ಹೇಳಿದರು. ಆಗ ನಾನು  ಖರೀದಿಸಿದೇ. ನಾನು ಕುಡಿಯಲು ಅಲ್ಲ.”ಎಂದೆ.ಅಪ್ಪ ನಂಬುವಂತೆ ಕಾಣಲಿಲ್ಲ. “ನೀವು ತಪ್ಪು ಮಾಡಿದ್ದು ಅಲ್ಲದೆ, ಅಪರಾಧವನ್ನು ಇನ್ನೊಬ್ಬರಿ ಮೇಲೆ ಹಾಕುವೇ ” ಎಂದು ಅವರು ಪ್ರತಿದಾಳಿ ನಡೆಸಿದರು.ಆ ಮಾತುಗಳಿಗೆ ನನ್ನ ಮುಖವು ಕೆಂಪಾಯಿತು. ದುಃಖವಾಯಿತು. ಕೀಚಲು ಧ್ವನಿಯಲ್ಲಿ ನಮ್ಮಮ್ಮಯೊಂದಿಗೆ, “ಬೇಕಾದರೆ ಈಗಲೇ ದೇವಸ್ಥಾನಕ್ಕೆ ಹೋಗೋಣ. ಅವರಿಂದಲೇ ಮಾತನಾಡಿಸುವೆ” ಎಂದೆ.ನನ್ನ  ನಿರಪರಾಧತ್ವ ಮೇಲೆ ನನಗಿಂತಲೂ ಜಾಸ್ತಿ ನಂಬಿಕೆ ಇರುವ ಅಮ್ಮ ತಕ್ಷಣ-“ಹೋಗಿ ಅವರನ್ನೇ ಕೇಳೋಣ” ಎಂದಳು.ನನ್ನ ತಂದೆಯೂ ಅಂಗಿ ಧರಿಸುತ್ತಾ-“ತಕ್ಷಣ ಹೋಗಿ ಮಹದೇವಪ್ಪ ಮಾಮನವರನ್ನು ಕರೆದುಕೊಂಡುಬಾ ಹೋಗು, ಇಲ್ಲಿ ಇದ್ದಂತೆ ಬರಬೇಕು. ಏಕೆ ಎಂದು ಕೇಳಿದರೆ ಬಂದಾಗಾ ಅಪ್ಪ ಹೇಳುತ್ತರಂತೆ ಎಂದು ಹೇಳು. ನಾವು ದೇವಸ್ಥಾನದ ಹೊರಗೆ ಇರುತ್ತೇವೆ” ಎಂದೆ.ನಾನು ಮಿಂಚಿನ ವೇಗದಿಂದ ಹೋಗಿ ಹತ್ತು ನಿಮಿಷದಲ್ಲಿ ಮಹದೇವಪ್ಪ ಮಾಮಾನ ಜೊತೆ ದೇವಸ್ಥಾನಕ್ಕೆ ಬಂದೆ. ಅಪ್ಪ ಮಾಮನೊಂದಿಗೆ ಏನೋ ಮಾತಾಡಿದರು. ಮಾಮ, ಹಿಂದೆ ಅಪ್ಪ, ಆ ಹಿಂದೆ ಅಮ್ಮ, ನಾನು ದೇವಸ್ಥಾನದ ಒಳಗೆ ಹೋಗಿ ಸ್ವಾಮಿ ಕುಳಿತಿದ್ದ ಜಾಗಕ್ಕೆ ಸೇರೀದೆವು .ನಮ್ಮ ಬರುವಿಕೆಯನ್ನು ನಿಜಕ್ಕೆ ಊಹಿಸದ ಅವರು, ‘ರಾತ್ರಿ ಊಟ ತೆಗೊಂಡು ಯಾರೋ ಭಕ್ತರು ಬರಬೇಕಾದ ಸಮಯದಲ್ಲಿ ಇವರು ಬಂದಿದ್ದರೇನು?’ ಎಂದು ಆಶ್ಚರ್ಯ ಹೋದ. ಸ್ವಲ್ಪ ತಬ್ಬಿಬ್ಬಾದ.ಮಹದೇವಪ್ಪ ಮಾಮ ಅವು ಇವು ಮಾತಾಡಿ-“ನೀವು ಈ ಹುಡುಗನೊಂದಿಗೆ ಹೋದ ವಾರ

ತೆಲುಗು ಕಥೆ “ಶೋಭನ್‌ ಬಾಬು-ಗಣೇಶ್‌ ಬೀಡಿ” ತೆಲುಗುಮೂಲ ಜಿ.ಉಮಾಮಹೇಶ್ವರ್‌ , ಕನ್ನಡಕ್ಕೆ ರಂಗನಾಥ ರಾಮಚಂದ್ರ ರಾವು Read Post »

ಕಾವ್ಯಯಾನ

ಭಾರತಿ ರವೀಂದ್ರ ಅವರ ಹಾಯ್ಕುಗಳು

ಕಾವ್ಯ ಸಂಗಾತಿ ಭಾರತಿ ರವೀಂದ್ರ ಹಾಯ್ಕುಗಳು ಅನುದಿನವುನವ ನವೀನ ಕಂದನಲಿಯುವಾಗ ಆಟ ಚಂದವು,ತೋದಲ್ನುಡಿ ಸಂಗೀತಮಗು ಆಡಲು ಇರುವಂತಿಗೆಅರಳಿದಾಗ, ಮನಮನೆ ಸೌರಭ. ಈಶ ಗೌರೀಶರಕ್ಷಿಸು ಭಗವಂತಬಿಸಿಲ ಬೇಗೆ ಉತ್ತರ ಇದೆಪ್ರತಿ ಗೂಢ ಪ್ರಶ್ನೆಗೆಅರಿಸು ನೋಡು ಊಸರವಳ್ಳಿಬಣ್ಣವು ಕೆಲವರನಡೆ ನುಡಿಲಿ ಎದೆಯಾಳದಿದಾವನಲ, ನಯನನಗುತಿರಲು, ಏಕೆ ಮನಸ್ಸೆ?ನಿನ್ನದಲ್ಲದ ಸಿರಿಯುಎಂದೂ ಸಿಗದು ಐಶ್ವರ್ಯ ಅಂಧಕಾಣನು ಯಾವದನ್ನೂದೇವರೇ ಗತಿ ಒಲವೇ ಸಿರಿಅರಿತ ಮನಗಳುಜೊತೆ ಸಾಗಲು ಓರೆ ನೋಟಕೆಸೋತು ಶರಣು, ನವ್ಯಪ್ರೇಮ ಕವನ ಔಷಧ ನೋಡುನಿನ್ನ ನಗು ಕಂಡಾಗನೋವು ಶಮನ ಭಾರತಿ ರವೀಂದ್ರ

ಭಾರತಿ ರವೀಂದ್ರ ಅವರ ಹಾಯ್ಕುಗಳು Read Post »

ಕಾವ್ಯಯಾನ

ಸುಮನಾ ರಮಾನಂದ,ಕೊಯ್ಮತ್ತೂರು “ಮುಸ್ಸಂಜೆ ನೋಟ”

ಕಾವ್ಯ ಸಂಗಾತಿ ಸುಮನಾ ರಮಾನಂದ,ಕೊಯ್ಮತ್ತೂರು “ಮುಸ್ಸಂಜೆ ನೋಟ” ಅಂದದ ವರ್ಷಧಾರೆ ಬರುತಿದೆಚೆಂದದ ಈ ಮುಸ್ಸಂಜೆಯಲಿ!ನೊಂದ ಬುವಿಯದನಪ್ಪಿ..ಮಿಂದಂತಿದೆ ಮಣ್ಣ ಘಮಲಿನಲಿ!! ಬಂಗಾರ ಬಣ್ಣದ ಬೆಳಕಿಂದರಂಗಾಗಿದೆ ಧರೆ ಹಸಿರಿನಲಿ!ಹಿಂಗಾರಿನ ಮುಸಲಧಾರೆಯ..ಗುಂಗಿನಲಿದೆ ಇಳೆ ಹರುಷದಲಿ!! ತೆಂಗಿನ ಗರಿಗಳ ಓಲಾಟದಿರಂಗಿನ ಚಿತ್ತಾರ ಗಗನದಲಿ!ಭೃಂಗವದು ಹೂವನ್ನು ಕಾಡುವಂತೆ..ತಂಗಾಳಿ ತೀಡಿದೆ ಸಂಜೆಯಲಿ!! ಬೆರಗಿನ ಚಟಪಟ ಮಳೆಹನಿಯುಮೆರುಗಿನಿಂದಾಗಮಿಸಿ ಅವನಿಯಲಿ!ಮೂಡಿಸಿ ಚಿತ್ತಾರವನಾಗಸದಿ..ಸೊಬಗು ತಂದಿದೆ ಬೈಗಿನಲಿ!! ಸುಮನಾ ರಮಾನಂದ,ಕೊಯ್ಮತ್ತೂರು

ಸುಮನಾ ರಮಾನಂದ,ಕೊಯ್ಮತ್ತೂರು “ಮುಸ್ಸಂಜೆ ನೋಟ” Read Post »

ಕಾವ್ಯಯಾನ

ಶಂಕರರಾವ ಉಭಾಳೆ ದೇವದುರ್ಗ ” ಯಾರದು?”

ಕಾವ್ಯ ಸಂಗಾತಿ ಶಂಕರರಾವ ಉಭಾಳೆ ದೇವದುರ್ಗ ” ಯಾರದು?” ಒಲೆ ಮಣ್ಣಿನದುಮಣ್ಣು ಕೆರೆಸಾಲಿನದುಕೆರೆ ಗೌಡನದು ಹಸಿವಿಗಾಗಿ ರೊಟ್ಟಿರೊಟ್ಟಿಗಾಗಿ ಜೋಳಜೋಳಕ್ಕಾಗಿ ಹೊಲಹೊಲ ಗೌಡನದು ಎತ್ತು ಗೌಡನದುಬಂಡಿ ಗೌಡನದುಉತ್ತಿ ಬಿತ್ತಿದ ಹೊಲದ ಶ್ರಮ ನನ್ನದುಬೆಳೆಯ ಅಧಿಕಾರ ಗೌಡನದು ಬಾವಿ ಗೌಡನದುನೀರು ಗೌಡನದುಹೊಲ ಗದ್ದೆ ಗೌಡನದುಓಣಿ ಕೇರಿಗಳೆಲ್ಲ ಗೌಡನದುಗ್ರಾಮಹೋಬಳಿತಾಲೂಕುಜಿಲ್ಲೆರಾಜ್ಯಗೌಡನದುಹಾಗಾದರೆನನ್ನದೇನಿದೆ…? ಶಂಕರರಾವ ಉಭಾಳೆ ದೇವದುರ್ಗ

ಶಂಕರರಾವ ಉಭಾಳೆ ದೇವದುರ್ಗ ” ಯಾರದು?” Read Post »

ಕಾವ್ಯಯಾನ

ಮನ್ಸೂರ್ ಮುಲ್ಕಿ “ಅಲ್ಲೆಲ್ಲೊ ನೀನೇ!”

ಕಾವ್ಯ ಸಂಗಾತಿ ಮನ್ಸೂರ್ ಮುಲ್ಕಿ “ಅಲ್ಲೆಲ್ಲೊ ನೀನೇ!” ಅಂದೊಮ್ಮೆ ನನಗೆ ನಿನ್ನನ್ನು ಕಂಡುಮಾತಾಡೋ ಬಯಕೆ ಬಂದಿತ್ತು ಅಂದುಅಲ್ಲೆಲ್ಲೋ ನೀನು ಕಣ್ಮರೆಯಾಗಿ,ಸುಳಿವೊಂದು ಸಿಗದೆ ಕಣ್ಣೀರು ತಂದೆ ನಾ ನಿನ್ನ ಕರೆದು ಬಳಿ ಬಂದು ನಿಂದುನಿನ್ನ ಖುಷಿಯ ತಂದೆ ನಿನಗಾಗಿ ಇಂದುನಿನ್ನನ್ನು ಕರೆದು ಮಾತನಾಡೋ ಬಯಕೆ ನನಗಿತ್ತು ಅಂದು ಭಯವೆಲ್ಲ ಎಂದು ಆರೋಪ ಇರದ ಈ ರೂಪ ನಿನಗೆ ಕೊಡಬೇಕು ನಾನು ನಾನಿರುವವರೆಗೆಆ ನಿನ್ನ ನಗುವು ನನಗಾಗೆ ಇರಲು  ಸವಿಯುವೆ ನಾನು ಹಗಲು ಇರುಳು ನಗುವಲ್ಲಿ ಇರುವಂತ ಆ ನಿನ್ನ ಕನಸುಮಲ್ಲಿಗೆ ಹೂವಂತೆ ಅರಳುವ  ಸೊಗಸುಕೋಗಿಲೆ ಹಾಡು ನಾವಿರುವ ನಾಡುಇಂಪಾಗಿ ಕೇಳು ಈ ನನ್ನ ಹಾಡು ಮನ್ಸೂರ್ ಮುಲ್ಕಿ

ಮನ್ಸೂರ್ ಮುಲ್ಕಿ “ಅಲ್ಲೆಲ್ಲೊ ನೀನೇ!” Read Post »

ಕಾವ್ಯಯಾನ

ಹಮೀದ್ ಹಸನ್‌ ಮಾಡೂರು ” ಜಿರಳೆ ದಂಗೆ ಸಾರಿದೆ”

ಕಾವ್ಯ ಸಂಗಾತಿ ಹಮೀದ್ ಹಸನ್‌ ಮಾಡೂರು “ಜಿರಳೆ ದಂಗೆ ಸಾರಿದೆ” ಜಿರಳೆ ಬಂತಯ್ಯ ಜಿರಳೆಎಲ್ಲೆಡೆಯು ಗದ್ದಲ ಎಬ್ಬಿಸಿದುಷ್ಟ ಸ್ವಾರ್ಥಿಗಳ ನಿದ್ದೆಗೆಡಿಸಿಅತ್ತಿತ್ತ ವಾಟ್ಸಾಪ್ ತುಂಬ ಹರಿದಾಡಿಸಿ,! ದುಷ್ಟ ರಾಜಕೀಯ ನೀತಿಗೆಧರ್ಮ ರಾಜಕೀಯ ಕ್ರಾಂತಿಗೆಕೊಳಕು ಬಾಯಿಯ ಮತಿಭ್ರಾಂತಿಗೆಗೆದ್ದಲು ಸಾಮ್ರಾಜ್ಯಶಾಹಿ ಅವನತಿಗೆ,! ಯುವ ಜನಾಂಗದಶೋಷಿತ, ತುಳಿತಕ್ಕೊಳಗಾದಅಲ್ಪಸಂಖ್ಯಾತ,ನೊಂದವರಿಗಾದನ್ಯಾಯದ ಪರ ಹೋರಾಡ ಬಂದಿದೆ,! ಸರ್ವಾಧಿಕಾರಿಗಳ ಮಸ್ತಕನುಸುಳಿ ಮೆದಳಿಗೆ ನೋಯಿಸಿಸತ್ತಂತಿಹರನು ಇದೀಗ ಬಡಿದೆಬ್ಬಿಸಿನ್ಯಾಯಕ್ಕಾಗಿ ಜಿರಳೆ ಧಂಗೆಯ ಸಾರಿದೆ,! ಕುರ್ಚಿಯಾಸೆಗೆಆಡಳಿತೆಯ ದುರಾಸೆಗೆಮನುಜ ಮನಸುಗಳ ಕೊಳಚೆಗೆದೂಡಿ ಬಿಟ್ಟವರ ಬೆನ್ನಟ್ಟುತ್ತ ಬಂದಿದೆ.! ಹಮೀದ್ ಹಸನ್ ಮಾಡೂರು

ಹಮೀದ್ ಹಸನ್‌ ಮಾಡೂರು ” ಜಿರಳೆ ದಂಗೆ ಸಾರಿದೆ” Read Post »

ಇತರೆ

“ಹಂಚುವ ಗುಣವನ್ನು ಕಾಗೆಯಿಂದ ಕಲಿಯಿರಿ”ಲೇಖನ ಕವಿತಾ ಶ್ರೀನಿವಾಸ್ ನಾಯಕ್ 

ವಿಶೇಷ ಸಂಗಾತಿ “ಹಂಚುವ ಗುಣವನ್ನು ಕಾಗೆಯಿಂದ ಕಲಿಯಿರಿ” ಕವಿತಾ ಶ್ರೀನಿವಾಸ್ ನಾಯಕ್  ​ನಮ್ಮ ಸುತ್ತಮುತ್ತಲಿನ ಪ್ರಕೃತಿಯನ್ನು ನಾವು ಸೂಕ್ಷ್ಮವಾಗಿ ಗಮನಿಸಿದರೆ, ಅಲ್ಲಿನ ಪ್ರತಿ ಜೀವಿಯೂ ನಮಗೆ ಒಂದಲ್ಲ ಒಂದು ಜೀವನ ಪಾಠವನ್ನು ಕಲಿಸುತ್ತಿರುತ್ತದೆ. ಅತೀ ಸಾಮಾನ್ಯ ಪಕ್ಷಿ ಎಂದು ನಾವು ಕಡೆಗಣಿಸುವ ‘ಕಾಗೆ’ಯ ಜೀವನಶೈಲಿಯಲ್ಲೇ ಮನುಷ್ಯನಿಗೆ ಅಗತ್ಯವಾದ ಅತಿ ದೊಡ್ಡ ಗುಣಗಳಿವೆ. ಕಾಗೆ ಎಂದರೆ ಕೇವಲ ಅಶುಭದ ಸಂಕೇತವಲ್ಲ, ಅದು ‘ಸಹಬಾಳ್ವೆ ಮತ್ತು ಹಂಚಿಣ್ಣುವಿಕೆ’ಯ ಸಾಕಾರ ಮೂರ್ತಿ.​ಒಗ್ಗಟ್ಟಿನಲ್ಲಿ ಬಲವಿದೆಕಾಗೆಗಳದ್ದು ಅದ್ಭುತವಾದ ಸಂಘಟನಾ ಶಕ್ತಿ. ಯಾವುದಾದರೂ ಕಾಗೆಗೆ ಆಹಾರ ಸಿಕ್ಕಾಗ, ಅದು ಎಂದಿಗೂ ಒಬ್ಬಂಟಿಯಾಗಿ ತಿಂದು ತೇಗಲು ಬಯಸುವುದಿಲ್ಲ. ಬದಲಾಗಿ, ಆಹಾರ ಕಂಡ ತಕ್ಷಣ ಜೋರಾಗಿ ‘ಕಾವ್ ಕಾವ್’ ಎಂದು ಕೂಗಿ ತನ್ನೆಲ್ಲಾ ಬಳಗವನ್ನು ಕರೆಯುತ್ತದೆ. ತನಗೆ ಸಿಕ್ಕಿದ್ದನ್ನು ತನ್ನವರಿಗೂ ಹಂಚಬೇಕು ಎಂಬ ಅದರ ಈ ಔದಾರ್ಯ, ಸ್ವಾರ್ಥದ ಸುಳಿಗೆ ಸಿಲುಕಿರುವ ಇಂದಿನ ಮನುಕುಲಕ್ಕೆ ನಿಜಕ್ಕೂ ಮಾದರಿ. “ನಾನು ಮತ್ತು ನನ್ನ ಕುಟುಂಬ” ಎಂಬ ಸಂಕುಚಿತ ಮನೋಭಾವದಿಂದ ಹೊರಬಂದು, “ನಮ್ಮವರು” ಎಂಬ ವಿಶಾಲ ಭಾವನೆಯನ್ನು ಬೆಳೆಸಿಕೊಳ್ಳಲು ಕಾಗೆ ನಮಗೆ ಕಲಿಸುತ್ತದೆ.​ಸಂಕಟದಲ್ಲಿ ಜೊತೆಗೂಡುವ ಮನಸ್ಸುಕಾಗೆಗಳ ಸಾಮಾಜಿಕ ಕಳಕಳಿ ಅತಿ ಹೆಚ್ಚು. ಯಾವುದಾದರೂ ಒಂದು ಕಾಗೆಗೆ ತೊಂದರೆಯಾದರೆ ಅಥವಾ ಅದು ಮೃತಪಟ್ಟರೆ, ನೂರಾರು ಕಾಗೆಗಳು ಒಂದೆಡೆ ಸೇರಿ ಕೂಗಾಡುವುದನ್ನು ನಾವು ಗಮನಿಸಿರಬಹುದು. ಇದು ಕೇವಲ ಶಬ್ದವಲ್ಲ, ಅವರ ನಡುವಿನ ಬಲವಾದ ಬಾಂಧವ್ಯದ ಪ್ರತೀಕ. ದುಃಖವನ್ನು ಹಂಚಿಕೊಳ್ಳುವ ಮೂಲಕ ನೋವನ್ನು ಕಡಿಮೆ ಮಾಡುವ ಗುಣ ಅವುಗಳಲ್ಲಿದೆ. ಇಂದು ಮನುಷ್ಯ ತನ್ನ ನೆರೆಯವರ ಕಷ್ಟವನ್ನೂ ಕೇಳದಷ್ಟು ತಂತ್ರಜ್ಞಾನದ ಜಾಲದಲ್ಲಿ ಸಿಲುಕಿದ್ದಾನೆ. ಅಂತಹ ಸಂದರ್ಭದಲ್ಲಿ, ಕಾಗೆಗಳ ಈ ಸಾಮಾಜಿಕ ಬದ್ಧತೆ ನಿಜಕ್ಕೂ ಶ್ಲಾಘನೀಯ.​ತಾನುಂಡು ಇತರರಿಗೂ ಉಣಬಡಿಸುವುದುಭಾರತೀಯ ಸಂಸ್ಕೃತಿಯಲ್ಲಿ “ತಾನುಂಡು ಇತರರಿಗೂ ಉಣಬಡಿಸುವವನೇ ನಿಜವಾದ ಮನುಷ್ಯ” ಎಂದು ಹೇಳಲಾಗಿದೆ. ಕಾಗೆಗಳು ಯಾವುದೇ ಭೇದವಿಲ್ಲದೆ ಎಲ್ಲವನ್ನೂ ಹಂಚಿಕೊಳ್ಳುತ್ತವೆ. ಸ್ವಾರ್ಥದ ಈ ಲೋಕದಲ್ಲಿ, ನಮ್ಮಲ್ಲಿರುವ ಜ್ಞಾನ, ಸಂಪತ್ತು ಅಥವಾ ಪ್ರೀತಿಯನ್ನು ನಾಲ್ಕು ಜನರೊಂದಿಗೆ ಹಂಚಿಕೊಂಡರೆ ಸಮಾಜ ಎಷ್ಟು ಸುಂದರವಾಗಿರುತ್ತದೆ ಎಂಬುದನ್ನು ಕಾಗೆಗಳು ಪ್ರತಿಕ್ಷಣವೂ ಸಾಬೀತುಪಡಿಸುತ್ತಿವೆ. ನಾವು ಕೇವಲ ಭೌತಿಕ ವಸ್ತುಗಳನ್ನು ಹಂಚಿಕೊಳ್ಳುವುದು ಮಾತ್ರವಲ್ಲದೆ, ಕಷ್ಟದಲ್ಲಿರುವವರಿಗೆ ಧೈರ್ಯ ತುಂಬುವ ಮೂಲಕವೂ ‘ಹಂಚುವಿಕೆ’ಯನ್ನು ಚಾಲ್ತಿಯಲ್ಲಿಡಬಹುದು.​ಕಾಗೆಯ ಗುಣ ನಮ್ಮ ಬದುಕಿನ ಭಾಗವಾಗಲಿನಾವು ಕಾಗೆಯನ್ನು ಕೇವಲ ಒಂದು ಪಕ್ಷಿಯೆಂದು ನೋಡದೆ, ಅದರ ‘ಹಂಚಿಣ್ಣುವ’ ಸಂಸ್ಕೃತಿಯನ್ನು ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇಂದಿನ ಧಾವಂತದ ಬದುಕಿನಲ್ಲಿ ನಾವು ಸಣ್ಣ ಸಣ್ಣ ಸಂತೋಷಗಳನ್ನು ಹಂಚಿಕೊಳ್ಳುವುದನ್ನೇ ಮರೆತಿದ್ದೇವೆ. ಮನೆಯಲ್ಲಿ ತಯಾರಿಸಿದ ಅಡುಗೆಯನ್ನು ನೆರೆಹೊರೆಯವರಿಗೆ ನೀಡುವುದಿರಲಿ, ಕನಿಷ್ಠಪಕ್ಷ ನಮ್ಮ ಹತ್ತಿರವಿರುವ ಸಕಾರಾತ್ಮಕ ವಿಚಾರಗಳನ್ನಾದರೂ ಹಂಚಿಕೊಳ್ಳೋಣ. ಸಣ್ಣ ಆಹಾರದ ತುತ್ತನ್ನು ಹಂಚುವ ಕಾಗೆಯ ಗುಣ ನಮ್ಮಲ್ಲಿದ್ದರೆ, ಖಂಡಿತವಾಗಿಯೂ ಹಸಿವು ಮತ್ತು ಒಂಟಿತನವಿಲ್ಲದ ಒಂದು ಸುಂದರ ಸಮಾಜವನ್ನು ನಿರ್ಮಿಸಬಹುದು.​ಕಾಗೆಗಳು ಎಂದಿಗೂ ತನ್ನ ಆಹಾರಕ್ಕಾಗಿ ಜಗಳವಾಡುವುದಿಲ್ಲ, ಅವು ಸಮುದಾಯದ ಪಕ್ಷಿಗಳಾಗಿ ಬದುಕುತ್ತವೆ. “ಕಾಗೆ ಒಂದೇ ಗೂಡಿನ ಪಕ್ಷಿಯಲ್ಲ, ಅದು ಸಮುದಾಯದ ಪಕ್ಷಿ.” ನಾವು ಕೂಡ ಹಾಗೆಯೇ ಆಗೋಣ. ನಾವು ಗಳಿಸುವ ಸಂಪತ್ತು, ಗಳಿಸುವ ಕೀರ್ತಿ ಅಥವಾ ನಾವು ಪಡೆಯುವ ಜ್ಞಾನ—ಯಾವುದೂ ನಾವು ಸತ್ತಾಗ ಜೊತೆಗೆ ಬರುವುದಿಲ್ಲ. ಆದರೆ, ನಾವು ಸಮಾಜಕ್ಕೆ ನೀಡಿದ ಪ್ರೀತಿ ಮತ್ತು ಸಹಕಾರ ಶಾಶ್ವತವಾಗಿ ಉಳಿಯುತ್ತದೆ.​ನಮ್ಮ ಬದುಕು ಕಾಗೆಯಂತಿರಲಿ. ಸದ್ದು ಮಾಡಿ ಬದುಕೋಣ, ಎಲ್ಲರನ್ನೂ ಸೇರಿಸಿಕೊಳ್ಳೋಣ ಮತ್ತು ಬದುಕನ್ನು ಹಂಚಿಕೊಂಡು ಆನಂದಿಸೋಣ. ಈ ಪ್ರಕೃತಿಯಲ್ಲಿ ಪ್ರತಿ ಜೀವಿಯಲ್ಲೂ ಒಂದು ಅರ್ಥವಿದೆ. ಆ ಅರ್ಥವನ್ನು ಅರಿತು ಬದುಕಿದಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ. ಇಂದಿನ ದಿನಗಳಲ್ಲಿ ಪರಸ್ಪರ ದ್ವೇಷ, ಅಸೂಯೆಗಳನ್ನು ಬದಿಗಿಟ್ಟು, ಸಹಬಾಳ್ವೆಯ ಪಾಠವನ್ನು ಕಾಗೆಯಿಂದ ಕಲಿತು, ಒಂದು ಸಾಮರಸ್ಯದ ಸಮಾಜಕ್ಕೆ ನಾಂದಿ ಹಾಡೋಣ.​————— ಕವಿತಾ ಶ್ರೀನಿವಾಸ್ ನಾಯಕ್ ಕಾರ್ಕಳ, ಉಡುಪಿ ಜಿಲ್ಲೆ.

“ಹಂಚುವ ಗುಣವನ್ನು ಕಾಗೆಯಿಂದ ಕಲಿಯಿರಿ”ಲೇಖನ ಕವಿತಾ ಶ್ರೀನಿವಾಸ್ ನಾಯಕ್  Read Post »

You cannot copy content of this page

Scroll to Top