ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಇತರೆ, ಲಹರಿ

“ಒಂಟಿ ಚಪ್ಪಲಿಯ ಗೋಳಾಟ”ಕಲ್ಪನಾ ಎಸ್‌ ಪಾಟೀಲ್‌ ಅವರ ಒಂದು ಲಹರಿ ಬರಹ

ಲಹರಿಸಂಗಾತಿ ಕಲ್ಪನಾ ಎಸ್‌ ಪಾಟೀಲ್‌ “ಒಂಟಿ ಚಪ್ಪಲಿಯ ಗೋಳಾಟ” ನಾಲ್ಕು ದಿನ ಅಂತ ಊರಿಗೆ ಹೋಗಿದ್ದೆಮರಳಿದಾಗ ಅನಿಸ್ತಿತ್ತು ಏನೋ ಇಲ್ಲಲಾಮನೆ ಮುಂದ ಅಂಗಳದಾಗ,ಏನಿಲ್ಲ,?ಏನಿಲ್ಲ ಅಂತ ಒಳಗ ಕಾಲಿಡೊದ್ರಾಗ ಒಂಟಿ ಚಪ್ಪಲಿ ಗೋಳಾಡತಿತ್ತು.ಗೊಳೋ ಅಂತ ಅಳತಿತ್ತು  ಕುಂಯ್ಯೋss ಮರೋss ಅಂತ ಆಗಾಗ ನಿಟ್ಟುಸಿರು ಬಿಡತಾನೆ ಇತ್ತು. ನಾ ಏಕಾಂಗಿ ಆಗೇನಿ ಅಂತ ಬಿಕ್ಕಿ ಬಿಕ್ಕಿ ಅಳೋದನ್ನ  ನೋಡಿ.. ಏನಾಯಿತು? ಯಾಕೆ ಈ ರೋದನೆ? ಬಿಸಿಲ ಜಾಸ್ತಿ ಆಯಿತಾ?ಮನಸ್ಸು ಪ್ರಶ್ನೆ ಹಾಕಿತು,ತಕ್ಷಣ ನೆರಳಲ್ಲಿ ಬಿಡೋಕ ಬಲಕಾಲು ಮುಂದೆ ಬಂದು, ಗಬಕ್ಕನ ಹಿಂದೆ ಸರಿದು ಸುಮ್ನ ನಿಲ್ಲತು.ಯಾಕ ನಿನಗೇನಾತು? ನೀ ಯಾಕ ನಿಂತಿ ನೆರಳಾಗ ಬಿಡಾಕತ್ತಿದ್ದ್ಯಲ್ಲ.?ಅಲ್ಲಿವರೆಗೂ ಅದು ಎಡಗಾಲಿನ ಚಪ್ಪಲಿ, ಅಂತ ನನ್ನ ತಲೆಗೆ ಹೊಳದಿರಲಿಲ್ಲ. ಹೌದಲ್ಲ.ಹೌದು, ಎಲ್ಲಿ ನನ್ನ ಜೊತೆಗಾರ? ನೀನು ಹೋದಾಗಿನಿಂದ ನಾನು ಒಂಟಿಯಾಗಿದ್ದೀನಿ ಅಂತ ಗೋಳಾಡಾಕತ್ತು. ನಾವಿಬ್ಬರೂ ಎಂದೂ ಅಗಲತಿರಲಿಲ್ಲ,  ಎಲ್ಲಿ ಹೋದರೂ ಇಬ್ಬರೂ ಜೊತೆಯಾಗೆ ಹೋಗತಿದ್ದವಿ. ಒಟ್ಟಿಗೆ ಇರತಿದ್ದವಿ.ಅದ ಯಾವ ನಾಯಿ ನಮ್ಮನ್ನ ಬ್ಯಾರೆಮಾಡಿದೆಯೋ? ಮುಗಿತಿನ್ನು ನನ್ನ ಕತಿ,ನೀನು ನನ್ನ ದೂರ ಮಾಡತಿ.ಕಸದಾಗ ಎಸಿತಿ?ನನ್ನ ನೋವು ನಿನಗೆಲ್ಲಿ ಕಾಣಿಸಬೇಕು.  ನನ್ನ ನೀನ ತಯಾರ ಮಾಡಿ, ಆದ್ರೂ ನನಗ ಮಾತು ಬರುದಿಲ್ಲ.ಅದೇನೋ ಅಂತೀರಲ್ಲ ನೀವು ಮಿಸ್ ಮ್ಯಾಚಂತ ಹಂಗ ಮಾಡಕೊ.ನಾ ಎಲ್ಲಿ ಹೋಗುದಿಲ್ಲ ಅಂತು.ಹುಂ, ಆಯಿತ ಆಯಿತ ಸರಿ ನೋಡತಿನಿ ತಡೆ.ಮಿಸ್ ಮ್ಯಾಚಂತ,ಆಹಹಹಾ…ಈ ನಮ್ಮ ಕರಿಯಗ ಚಪ್ಪಲಿಯಂದ್ರ ಬಾಳ  ಪ್ರೀತಿ. ನನಗ ಅವನ ಮ್ಯಾಲ ಸಂಶಯ ಬರಾಕತ್ತಿತ್ತು.ನನ್ನ ನೋಡಿ ಎದೆ ಎತ್ತರಕ್ಕ ಜಿಗಿದ, ಮುಖ ನೆಕ್ಕಿ ಅರಿವಿ ಜಗ್ಗಿ ನನ್ನ ಯಾಕ ಬಿಟ್ಟ ಹೋಗಿದ್ದೆ? ಅಂತ ಕೇಳತಿತ್ತು.ಲೇ ಕರಿಯ ಚಪ್ಪಲಿ ಎಲ್ಲ್ಯಲೇ? ನಾ ನೋಡಿಲ್ಲ ಅಂತ ವರದಿ ಒಪ್ಪಿಸಿತು.ಬಾಳಷ್ಟು ಓಣ್ಯಾಗ ಹೋಗವ್ರನ್ನ ಸ್ನೇಹಿತರನ್ನ ಮಾಡಿಕೊಂಡಿದ್ದ. ಮನಿಯೆಲ್ಲ ಹುಡಕಾಡಿ, ಒಳಗ ಎಲ್ಲ ಹುಡಕಾಡಿದೆ.ಈಗರ ಬಂದಿ, ಕುಂಡರು, ನೀರು  ಕುಡಿ ಅಂದಳು ಆಯಿ. ಸಿಗತೈತಿ ಇಲ್ಲೆ, ಎಲ್ಲ್ಯರ ಬಿದ್ದಿರತೈತಿ.ನನಗೂ ಅದ ಸಿಗೂತನ ಸಮಾಧಾನ ಇರಲಿಲ್ಲ. ಯಾಕೋ ಬಾಳ ಕೆಟ್ಟ ಅನಿಸಾಕತ್ತಿ,  ನಾನು- ನನ್ನ ಸ್ನೇಹಿತರಿಂದ ದೂರಾದಂಗ ಅನಿಸಾಕತ್ತ.ಹೊರಗಡೆ ಹೋಗಿ ಮನೆಯ ಹಿಂದೆ, ಅಗ್ಗಲ-ಮಗ್ಗಲ ಒಂದು ಸುತ್ತ ಹೊಡೆದು ಸ್ವಲ್ಪ ದೂರ ಹೊದಾಗ ಅಲ್ಲಿ ಒಂದು ಚಪ್ಪಲಿ ಕಾಣಿಸಿತು, ಹತ್ತಿರ ಹೋಗಿ ನೋಡಿದ್ರ ಬಲಗಾಲಿನ ಚಪ್ಪಲಿ ಅನಾಥವಾಗಿ ಬಿದ್ದಿತ್ತು. ಇದರದು ಅದ ಗೋಳು. ಅಯ್ಯೋ, ಯಾರಿಗೆ ಹೇಳಲಿ ನನ್ನ ಗೋಳು? ನಮಗೂ ಮನುಷ್ಯರ ತರ ಮಾತಾಡೋಕ ಬರತಿದ್ರ, ಕೂಗಬಹುದಿತ್ತು. ಚೀರಿ ಹೇಳಬಹುದಿತ್ತು.  ಗಂಟಲೆ ಇಲ್ಲ. ತಮ್ಮ ಪಾದಗಳನ್ನ ಸುರಕ್ಷಿತವಾಗಿಟ್ಟುಕೊಳ್ಳಾಕ ನಮ್ಮನ್ನ ಸೃಷ್ಟಿ ಮಾಡಿಕೊಂಡ ಮನ್ಷ್ಯಾ ಆವಾಗವಾಗ, ಕಳೆದುಕೊಂಡಾಗಲೂ “ಹೋಗಲಿ ಬಿಡ ಪೀಡಾ ಹೋತಂತ” ಅಂತಿರಿ. ನೀವು ಕಳೆದು ನಮ್ಮನ್ನ ಪೀಡಾ ಅಂತಿರಿ. ಇದು ಖರೇನ, ಹಿಂಗ ಎಷ್ಟ ಸಲ ನಮ್ಮ ಮನ್ಯಾನವ್ರು, ಮದುವೆಗೆ, ಮಣ್ಣಿಗೆ ಹೋದಾಗ, ಯಾರೋ ಹಳೆಯ ಹರಿದ,ಸವೆದ,ಬಣ್ಣ ಮಾಸಿದ, ಉಂಗುಟ ಕಿತ್ತಿದ ಜೋಡುಗಳನ್ನ ಬಿಟ್ಟು ಇವರ ಹೊಸ ಜೋಡನ್ನ ಧರಿಸಿ ಹೋಗಿದ್ದಾಗ ಬರಿಗಾಲಲ್ಲಿ ಮನೆಗೆ ಬಂದಾಗ ಹಂಗ ಹೇಳಿದ್ದ ನೆನಪಾಯಿತು. ಅಷ್ಟರಾಗ, ಇದು ಓsss ನೀವೇನು ನನ್ನ ಹುಡಕ್ಕೊಂಡ ಬಂದ್ರಾ ಅಂತ ಕೇಳತು.ಹುಂ ಅಂದೆ..ನೀವು ಊರಗೆ ಹೋಗಬೇಕಾದ್ರ ನಮ್ಮನ್ನ ಎತ್ತಿಟ್ಟು ಹೋಗೊದಲ್ಲ! ನಮಗೇನು ಎದ್ದ ಹೋಗಾಕ ನಿಮ್ಮ ತರಹ ಕಾಲಿದ್ದಾವಾ… ನಮಗ ಜೀವ ಇಲ್ಲದಂಗ ಸೃಷ್ಟಿ ಮಾಡಿರಿ.ಬೇರೆ ಬೇರೆ ದೇಶದಾಗ ಮಕ್ಕಳಿಂದ ಹಿಡಿದು ದೊಡ್ಡವರು ಧರಿಸೊ ಜೋಡಗಳೊಳಗ ಬಣ್ಣ ಬಣ್ಣದ ವಿದ್ಯುತ್ ಲೈಟ್ , ಮ್ಯುಜಿಕ್ ಹಾಕತಾರ. ನಮ್ಮನ್ನ ಇಡಾಕ ಚಂದ ಚಂದ ಕಪಾಟ ಮಾಡಸ್ತಾರ. ನೀವು ಅದಿರಿ ಕೋಟಿಗಟ್ಟಲೆ ರೊಕ್ಕ ಖರ್ಚ ಮಾಡಿ ಮನೆ ಕಟ್ಟಸ್ತಿರಿ, ಹೊರತು ನಮಗ ಜಾಗ ಮಾತ್ರ ಇರುದಿಲ್ಲ. ಹಾಂ, ಇನ್ನೊಂದೇನದ ಹೊರಗಿನಿಂದ ಬರುವವರಗೆ ನಾವು ಮೊದಲ ಕಾಣಿಸಬಾರದಂತಿರಿ. ಹೇಳಿ ಮಾಡಸಿದ ಜೋಡಿ ಸಿಗುದಂದ್ರ ನಾವ ಅಲ್ಲೇನ,  ಮತ್ತೇನ ಸಿಗತೈತಿ ನಿಮಗ?ಅಂದಾಗ ನನಗ “ಹೇಳಿ ಮಾಡಿಸಿದ ಜೋಡು ಸಿಗುವುದು ಚಪ್ಪಲಿಯಲ್ಲಿ ಮಾತ್ರ ಉಳಿದೆಲ್ಲ ಹೊಂದಾಣಿಕೆ” ಅಂತ ಎಲ್ಲೋ ಓದಿದ್ದ ನೆನಪಾಯಿತು. ನಾನಂದೆ ಹೋಗಲಿ ಬಿಡು, ಈಗ ಸುಮ್ಮನ ನಡಿ ಅಂತ ಒಂಟಿಯಾದ ಜೋಡನ್ನ ಧರಿಸಿ ಮನೆಗೆ ಬಂದು ಒಂಟಿಯಾಗಿದ್ದರ ಪಕ್ಕ ಬಿಟ್ಟಾಗ, ಎರಡು  ಬಾಳ ಖುಷಿ ಪಟ್ಟಂತೆ ಭಾಸವಾಗತಿತ್ತು. ಎರಡು ಕೋಪ,ಇರಿಸುಮುರಿಸನ್ನ ಬಿಟ್ಟು ಎಲ್ಲ ಬೇಗ ಮರೆತು ಶಾಂತ ಅದವು. ನನ್ನ ಮನಸ್ಸು ಹೇಳಿತು, ನೋಡು ನೀವು ನರಮಾನವರು ಇರತಿರಿ, ಎನಾದ್ರೂ ಆದ್ರ ಲಗೂ ಮರೆಯೊದಿಲ್ಲ,  ದುಃಖಿಸ್ತಿರಿ,  ಮತ್ತ ಮತ್ತ ನೆನೆಸಿಕೊಂಡು ಅಳತಿರಿ. ಏನೋ, ಆದರೂ ಮನುಷ್ಯ ಅನ್ನೋ ವಿಚಿತ್ರ ಪ್ರಾಣಿನ ಆ ಭಗವಂತ ಅದೆಷ್ಟು ತಾಳ್ಮೆಯಿಂದ ಸೃಷ್ಟಿ ಮಾಡಿದ್ದಾನಲ್ಲ ಅಂತು. ಹುಂ, ಅದಕ್ಕ ಅಲ್ಲ ನನ್ನಲ್ಲಿ ಅಷ್ಟ ತಾಳ್ಮೆ ಐತಿ ಅಂದೆ, ಅದು ಶಾಂತವಾಗಿ ನಸುನಕ್ಕಿತು. ನನಗೂ ಖುಷಿ ಆಯಿತು. “ಹುಂ, ಚಪ್ಪಲಿ ಸಿಕ್ಕಿತಲ್ಲ, ಬಾ ಇನ್ನsss  ಒಳಗ, ಬಿಸಿಲ ಬಾಳೈತಿ ಹೊರಗ” ಅಂತ ಆಯಿಯ ಕೂಗು ಕೇಳಿಸಿ ಒಳ ನಡೆದೆ. ಕಲ್ಪನಾ ಎಸ್ ಪಾಟೀಲ ಕಾವ್ಯಧರೆ

“ಒಂಟಿ ಚಪ್ಪಲಿಯ ಗೋಳಾಟ”ಕಲ್ಪನಾ ಎಸ್‌ ಪಾಟೀಲ್‌ ಅವರ ಒಂದು ಲಹರಿ ಬರಹ Read Post »

ಕಾವ್ಯಯಾನ

ವಾಣಿ ಶಿವಕುಮಾರ್‌ ಅವರ ಕವಿತೆ ” ಜೀವದ ಗೆಳತಿ”

ಕಾವ್ಯ ಸಂಗಾತಿ ವಾಣಿ ಶಿವಕುಮಾರ್‌ “ಜೀವದ ಗೆಳತಿ” pic adobeai̧chatgpt ಕಣ್ಣಲ್ಲಿ ಮೂಡಿದ ಕಾಂತಿಯ ಹೊನಲು,ಮನದಲ್ಲಿ ಪ್ರೀತಿಯ ಮೊಗ್ಗು ಅರಳಲು,ಜೀವದ ಗೆಳತಿ ನೀನಾಗಿ ಬಂದರೆ,ಬಂದಿಯು ನಿನ್ನ ತೋಳಿನಾಸರೆ.. ಚಂದಿರನೂ ನಾಚಿ ಮೋಡದಿ ಮರೆಯಾದ,ಹೃದಯ ತಾಳಕೆ ಬೆಸೆಯಿತು ಗೆಜ್ಜೆನಾದ,ಶೃಂಗಾರದ ಮೈಸಿರಿಗೆ ದೃಷ್ಟಿ ತಾಕದಂತೆ,ನನ್ನ ಕಣ್ಣುಗಳೇ ನಿನಗೆ ಕಾವಲಿನಂತೆ.. ಒಲವು ಚೆಲುವಿನ ಚಿತ್ತಾರ ಬರೆದಿದೆ,ಕಾಮನಬಿಲ್ಲಾಗಿ ರಂಗನು ಹರಿಸಿದೆ,ಭತ್ತದ ಎಸಳನು ನವಿರಾಗಿ ಬಿಡಿಸುತಾ,ಗುಲಾಬಿ ತಿರುಳನು ಸವೆದು ಮರ್ಧಿಸುತ,-ಸಣ್ಣ ಆಲಾಪನೆ-ಜಗವ ಮರೆಯುತ, ಉಸಿರ ಬೆಸೆಯುತ,ಸಾಗುವ ಜೊತೆಗೆ ಹೆಜ್ಜೆಯನೂರುತ.. ಕಣ್ಣಲ್ಲಿ ಮೂಡಿದ ಕಾಂತಿಯ ಹೊನಲು,ಮನದಲ್ಲಿ ಪ್ರೀತಿಯ ಮೊಗ್ಗು ಅರಳಲು,ಜೀವದ ಗೆಳತಿ ನೀನಾಗಿ ಬಂದರೆ,ಬಂದಿಯು ನಿನ್ನ ತೋಳಿನಾಸರೆ.. ವಾಣಿ ಶಿವಕುಮಾರ್

ವಾಣಿ ಶಿವಕುಮಾರ್‌ ಅವರ ಕವಿತೆ ” ಜೀವದ ಗೆಳತಿ” Read Post »

ಕಾವ್ಯಯಾನ

ಡಾ.ಹೆಚ್.ನಟರಾಜ್‌ ಅರ್ಯ ಅವರ ಕವಿತೆ “ಬೆಳದಿಂಗಳ ರಾತ್ರಿ ಕಂಡ ಕನಸು”

ಕಾವ್ಯ ಸಂಗಾತಿ ಡಾ.ಹೆಚ್.ನಟರಾಜ್‌ ಅರ್ಯ “ಬೆಳದಿಂಗಳ ರಾತ್ರಿ ಕಂಡ ಕನಸು” ಬೆಳದಿಂಗಳ ಬೆಳ್ಳಿ ಹಾದಿಯಲ್ಲಿ,ಮನಸು ಮೌನವಾಗಿ ತೇಲಿತು;ನೆರಳಿನ ಮಧ್ಯೆ ನಿಂತ ಕನಸು,ನನ್ನ ಕೈ ಹಿಡಿದು ನಡೆಯಿತು. ಕತ್ತಲ ಕಾಡು ದಟ್ಟವಾದರೂ,ಚಂದ್ರ ಕಣ್ಣು ಮಿಟುಕಿಸಿತು;ದಿಕ್ಕಿಲ್ಲದ ಹೆಜ್ಜೆ ಮುಂದೆ,ಕನಸೇ ದಾರಿಯಾಗಿ ನಿಂತಿತು. ಒಣ ಮಣ್ಣಿನ ನಿಶ್ಶಬ್ದದಲ್ಲಿ,ಒಂದು ಮೊಳೆ ತಲೆ ಎತ್ತಿತು;“ದಯೆ ಬಿದ್ದ ಬೀಜವಾದರೆ,ಬಾಳೇ ಮರವಾಗಿ ಬೆಳೆಯಿತು.” ಹಸಿದ ಕಣ್ಣಿನ ತೇವದಲ್ಲಿ,ದೇವರ ಮೌನ ಕಾಣಿಸಿತು;ಒರೆಸಿದ ಒಂದು ಕಣ್ಣೀರಲ್ಲಿ,ಒಂದು ದೀಪವೇ ಹೊತ್ತಿತು. ಸುಲಭ ಸಿಹಿಯ ಮೃದುವಾದ ಧ್ವನಿ,ದೂರದಿಂದ ಕರೆಯಿತು;ಬೆವರಿನ ಉಪ್ಪು ಬಿದ್ದ ಜಾಗದಲ್ಲಿ,ಸತ್ಯದ ಬೆಳೆ ಮೊಳೆಯಿತು. ಕಲ್ಲಿನ ಹೃದಯದೊಳಗೂ,ಒಂದು ಹನಿ ದಯೆ ಬೀಳಿತು;ಹಿಮಾಲಯದ ಅಹಂಕಾರವೂ,ಮೌನವಾಗಿ ನೀರಾಯಿತು. ಬೀಜವಾಗಿ ಬಿದ್ದ ಸಣ್ಣ ಕೈಹಿಡಿತ,ಕಾಲದಲ್ಲಿ ಮರವಾಗಿ ನಿಂತಿತು;ಆ ಮರದ ನೆರಳಲ್ಲಿ ಒಂದು ದಿನ,ಕೊಟ್ಟ ಕೈಯೂ ಮರೆತು ಹೋಯಿತು. ಬೆಳದಿಂಗಳ ಮೌನ ರಾತ್ರಿ,ಕನಸು ಬಂದು ಮಾತಾಡಿತು“ಒಂದು ಮನದಲ್ಲಿ ಬೆಳಕು ಹತ್ತಿದರೆ,ಲೋಕವೆಲ್ಲ ಪ್ರಭಾತವಾಯಿತು.” ಡಾ.ಹೆಚ್.ನಟರಾಜ್‌ ಅರ್ಯ

ಡಾ.ಹೆಚ್.ನಟರಾಜ್‌ ಅರ್ಯ ಅವರ ಕವಿತೆ “ಬೆಳದಿಂಗಳ ರಾತ್ರಿ ಕಂಡ ಕನಸು” Read Post »

ಕಾವ್ಯಯಾನ, ಗಝಲ್

ಡಾ.ರೇಖಾ ಉದಯ ಅವರ ಗಜಲ್

ಕಾವ್ಯ ಸಂಗಾತಿ ಡಾ.ರೇಖಾ ಉದಯ ಗಜಲ್ ಅದಾವ ಮೋಹದ ಮಾಯೆ ಸೆಳೆದಿದೆ ನಿನ್ನೆಡೆಕಣ್ಣೊಳಗಿನ ಒಲವಿನ ನೋಟ ಕರೆದಿದೆ ನಿನ್ನೆಡೆ ಗಾಳದಲ್ಲಿ ಸಿಕ್ಕ ಮೀನಂತಾಗಿದೆ ನನ್ನೀ ಜೀವನನಂಬಿಕೆಯೇ ಒಲವೆಂಬ ಜಾಡು ಹಿಡಿದಿದೆ ನಿನ್ನೆಡೆ ನಯವಾದ ಮಾತುಗಳೇ ಮುದ ನೀಡಿದವು ಎನಗೆಶರದಿ ಸೇರುವ ತವಕದಿ ಮನ ನಡೆದಿದೆ ನಿನ್ನೆಡೆ ತಿಳಿಯದಂತಿರಬೇಕು ಮಾಡಿದ ತಪ್ಪುಗಳಿಗೆ ಅಲ್ಲವೇಭ್ರಮೆಯ  ತೊರೆದು ನಂಬಿಕೆಯ ಪಡೆದಿದೆ ನಿನ್ನೆಡೆ ರೇಖೂ ಸೋಕಿಸಿಕೊಳ್ಳದಿರು ಕರಿ ನೆರಳ ಛಾಯೆಯಸೋಲಿನ ಭೀತಿಯ ಬಿಟ್ಟು ಭರವಸೆ ಬೆಳೆದಿದೆ ನಿನ್ನೆಡೆ ಡಾ.ರೇಖಾ ಉದಯ

ಡಾ.ರೇಖಾ ಉದಯ ಅವರ ಗಜಲ್ Read Post »

ಕಾವ್ಯಯಾನ

ಎಮ್ಮಾರ್ಕೆ ಅವರ ಹೊಸ ಗಜಲ್

ಕಾವ್ಯ ಸಂಗಾತಿ ಎಮ್ಮಾರ್ಕೆ ಗಜಲ್ ಬೋಳುಮರವೂ ಭರವಸೆ ತೋರುತಿದೆ ಈಗಚಿಗುರೆಲೆ ಹೊಸತು ಸಂದೇಶ ಸಾರುತಿದೆ ಈಗ ಖಾಲಿ ಕೊಂಬೆ ಮೇಲೀಗ ಕೋಗಿಲೆ ದರ್ಬಾರುಕುಹೂ ಕುಹೂ ಕೂಗೋ ರಾಗ ಕೇಳುತಿದೆ ಈಗ ನೋವು-ನಲಿವುಗಳಿದ್ದಾಗಲೇ ಬಾಳಿಗೊಂದರ್ಥಬೇವು ಬೆಲ್ಲ ರುಚಿಯ ಜಿಹ್ವೆ ನೋಡುತಿದೆ ಈಗ ಸೃಷ್ಠಿ‌ ತಾ ಸೊಬಗು ತೋರೇ ಅದೆಂಥ ಗಾರುಡಿಕ್ರೋಧಿನಾಮ ಘಳಿಗೆ ಶುಭ ಕೋರುತಿದೆ ಈಗ ಕುಂಬಾರನಿಗೆ ಯುಗಾದಿಯೇ ಹೊಸ ವರ್ಷವುರತ್ನಪಕ್ಷಿಯೇ ಕಣ್ಣ ಮುಂದಣ ಹಾರುತಿದೆ ಈಗ ಎಮ್ಮಾರ್ಕೆ

ಎಮ್ಮಾರ್ಕೆ ಅವರ ಹೊಸ ಗಜಲ್ Read Post »

ಕಾವ್ಯಯಾನ

ಮಾಲಾ ಚಲುವನಹಳ್ಳಿ ಅವರ‌ ಗಜಲ್

ಕಾವ್ಯ ಸಂಗಾತಿ ಮಾಲಾ ಚಲುವನಹಳ್ಳಿ ಗಜಲ್ ನಡೆಯುವ ಹಾದಿಯಲ್ಲಿ ಹೂವು ಚೆಲ್ಲಿ ಕೈ ಹಿಡಿದು ನಡೆಸುವೆನು ಸಖತಡೆಯುತ ಅಡೆತಡೆಯ ಸಹಬಾಳ್ವೆಗೆಹೂ ಮಳೆಯ ಸುರಿಸುವೆನು ಸಖ ಸಮ್ಮತಿ,ಅಸಮ್ಮತಿಗಳ ಅಸಮತೋಲನಸಂಸಾರದಲ್ಲಿ ಸಹಜವಲ್ಲವೇನುನಮ್ಮದೇ ನಿಸ್ವಾರ್ಥದ ಚೌಕಟ್ಟಿನಲ್ಲಿನಿನ್ನ ಮೈ ಮರೆಸುವೆನು ಸಖ ಹರೆಯವೆಂದರೆ ಬಣ್ಣದ ಚಿತ್ತಾಕರ್ಷಕಅರಿಯದ ಮೂಢನಲ್ಲ ನೀಕರೆಯುವ ಕಾಮನೆಗಳ ಜೊತೆ ಪ್ರೇಮ ಸೌಧದಿ ನಿನ್ನ ಇರಿಸುವೆನು ಸಖ ಶಬ್ದವಾಗಲಾರದ ಭಾವಗಳು ಅದೆಷ್ಟೋಎದೆಯೊಳಗೆ ನಗಾರಿಯಾಗಿವೆಸ್ಥಬ್ಧವಾದ ಮಾತುಗಳೂ ತಾಕಲಾಟವನಡೆಸುವುದ ಅರ್ಥೈಸುವೆನು ಸಖ ಭವಿಷ್ಯದ ಹಾದಿ ತೆರೆದುಕೊಂಡಿರುವಈ ಘಳಿಗೆ ತವಕ ನೂರಾಗಿದೆನವಿರಾದ ಕನಸುಗಳು ಮಾಲಾಳ ಎದೆಯಹಾಡಾಗಿರುವುದ ತಿಳಿಸುವೆನು ಸಖ ಮಾಲಾ ಚೆಲುವನಹಳ್ಳಿ

ಮಾಲಾ ಚಲುವನಹಳ್ಳಿ ಅವರ‌ ಗಜಲ್ Read Post »

ಕಾವ್ಯಯಾನ

ಮಹಾಂತೇಶ್.ಬಿ.ನಿಟ್ಟೂರು “ಯುದ್ಧ ಅಂದ್ರೆ ಸುಮ್ನೆ ಏನು?”

ಕಾವ್ಯಸಂಗಾತಿ ಮಹಾಂತೇಶ್.ಬಿ.ನಿಟ್ಟೂರು “ಯುದ್ಧ ಅಂದ್ರೆ ಸುಮ್ನೆ ಏನು?” ಪ್ರತಿಷ್ಠೆಗಾಗಿ ಪಣಬಲಾಬಲಕ್ಕಾಗಿ ಬಣ;ಹೊಡೆದಾಡಿ ಬಡಿದಾಡಿಒಂದಿವಸ ರಣಾಂಗಣದಲ್ಲಿಹೆಂಗೆಂಗೋ ಬಿದ್ದ ಹೆಣ ಗೆಲ್ಲಲೇಬೇಕು ಎಂದವನಿಗೆ ಸೋಲುಸೋತು ಸುಣ್ಣವಾಗಿ ನೆಲಕ್ಕೆಬೀಳುವಾಗ ಅದೃಷ್ಟವಶಾತ್ ಗೆಲುವು;ಇವೆರಡೂ ನಾಣ್ಯದ ಎರಡು ಮುಖಗಳುಕಂಡೂ ಕಾಣದಂತೆ ಕಳಚಿಬೀಳುತ್ತಿವೆ ಮುಖವಾಡಗಳು ಇತಿಹಾಸದ ಹಾಸುಗಲ್ಲಿನ ಮೇಲೆಬಿದ್ದ ರಕ್ತದ ಕಲೆ ಇನ್ನೂ ಒಣಗಿಲ್ಲ ಭೂಮಿಯನ್ನು ಹತ್ತಾರುಪಟ್ಟು ಸುಡುವಷ್ಟುಮದ್ದು ಗುಂಡು ಬಾಂಬುಗಳಸುಧಾರಿತ ಹೊಸ ತಳಿಗಳು;ವಿಜ್ಞಾನದ ಬಳುವಳಿಗಳು ಆರಂಭದ ಹೊರತು ಅಂತ್ಯಅರಿಯದು ಯುದ್ಧೋನ್ಮಾದ ಸೂರ್ಯೋದಯ, ಚಂದ್ರೋದಯಕ್ಕೆಪರಮಾಶ್ಚರ್ಯ; ನಿನ್ನೆ ಕಂಡ ಬೃಹತ್ಕಟ್ಟಡಗಳು ಇಂದು ನೆಲಸಮಕಾಡು, ಪ್ರಾಣಿ, ಪಕ್ಷಿ ಸಂಕುಲ ಸುಟ್ಟು ಭಸ್ಮ ಸರ್ವನಾಶದ ಕಿಚ್ಚು ಹೊತ್ತಿನರಕದ ಹೆಬ್ಬಾಗಿಲು ತೆರೆಯುತ್ತಿರುವಾಗನಾಳೆ ಮತ್ತೇನೋ…ಮತ್ತಿನ್ನೇನೋ… ಯುದ್ಧ ಅಂದ್ರೆ ಸುಮ್ನೆ ಏನು!? ಮಹಾಂತೇಶ್.ಬಿ.ನಿಟ್ಟೂರು,        

ಮಹಾಂತೇಶ್.ಬಿ.ನಿಟ್ಟೂರು “ಯುದ್ಧ ಅಂದ್ರೆ ಸುಮ್ನೆ ಏನು?” Read Post »

ಕಾವ್ಯಯಾನ

ವಿಜಯಲಕ್ಷ್ಮಿ ಹಂಗರಗಿ ಅವರ ಕವಿತೆ” ಕಾವ್ಯ ದಿನ”

ಕಾವ್ಯ ಸಂಗಾತಿ ವಿಜಯಲಕ್ಷ್ಮಿ ಹಂಗರಗಿ “ಕಾವ್ಯ ದಿನ” ಕಾವ್ಯ ಬರೆಯಲುಸ್ಪೂರ್ತಿಯಾದ ನಿಮಗೆಅಭಿನಂದನೆಗಳುಶುಭಾಶಯ ನನ್ನಅನಂತ ನಮನಗಳು // ನನ್ನ ಕಾವ್ಯಬರೆಯಲುಹುರಿದುಂಬಿಸಿಓದುವ ಕವಿಮನಗಳಿಗೆಲ್ಲಶುಭಾಶಯಶುಭಕಾಮನೆಗಳು // ಕಾವ್ಯ ಬರೆದಕವನ ಸಂಕಲನಪುಸ್ತಕ ಬಿಡುಗಡೆಮಾಡಿದ ಗಣ್ಯರಿಗೆಶುಭಾಶಯಶುಭ ನಮನಗಳು // ಕಾವ್ಯ ಬರೆಯುತ್ತಿರುವಕನ್ನಡ ನಾಡಿನಎಲ್ಲ ಕವಿಗಳಿಗೆಶುಭಾಶಯ ನಿಮಗೆಶುಭ ಹಾರೈಕೆಗಳು // ಮನದ ಭಾವನೆಗಳನ್ನುಕವನದ ರೂಪದಲ್ಲಿಹೊರ ತರುವಎಲ್ಲ ಹೃದಯಗಳಿಗೆಅನಂತ ಧನ್ಯವಾದಗಳು// ಇಂದು ವಿಶ್ವ ಕಾವ್ಯದಿನ ವರುಷವೆಲ್ಲವಿಶ್ವದ ತುಂಬೆಲ್ಲಪ್ರಜ್ವಲಿಸಿ ಪಸರಿಸಲಿಕಾವ್ಯ ಸುಧೆ  ವಿಜಯಲಕ್ಷ್ಮಿ ಹಂಗರಗಿ

ವಿಜಯಲಕ್ಷ್ಮಿ ಹಂಗರಗಿ ಅವರ ಕವಿತೆ” ಕಾವ್ಯ ದಿನ” Read Post »

ಅನುವಾದ

ವೇಲ್ಫುಲ ನಾರಾಯಣ ಅವರ ತೆಲುಗುಕವಿತೆ “ಉದ್ಯಾನ ಗೀತ”ದ ಕನ್ನಡಾನುವಾದ ಕೋಡೀಹಳ್ಳಿ ಮುರಳೀಮೋಹನ್

ಅನುವಾದ ಸಂಗಾತಿ ಉದ್ಯಾನಗೀತ ತೆಲುಗು ಮೂಲ :ವೇಲ್ಪುಲ ನಾರಾಯಣಕನ್ನಡ ಅನುವಾದ : ಕೋಡೀಹಳ್ಳಿ ಮುರಳೀಮೋಹನ್  ಭಾರವಾಗಿ ಸುರಿದ ಹಿಮರಾಶಿಯಮುತ್ತುಗಳಾಗಿಸಿ ರೂಪಾಂತರಿಸಿ,ಮೃದು ಕಿರಣಗಳ ಸೂರ್ಯೋದಯವಮಿನುಗುತ್ತಲೇ ಸ್ವಾಗತಿಸುತಿದೆ. ನಡೆಗೆ ಬಂದವರ ಮಾತುಕತೆಯಲ್ಲಿಸಭ್ಯತೆಯ ಲಹರಿ ಕೇಳುತ್ತಿದೆ,ಸಂತಸದ ನಗುವಿನ ಪರವಶದಿ ನಾದಗಳೆಲ್ಲವೂ ಸಂಗೀತವಾಗುತ್ತಿದೆ.ದಣಿವಿನಲಿ ಮೌನವಾಗಿ ಕುಳಿತರೆಚದುರಿದ ಮನಕೆ ಆಸರೆಯಾಗಿ,ಬಾಳ ಪಯಣದ ಯುದ್ಧಗಳ ಮಧ್ಯೆಶಕ್ತಿಯ ತುಂಬುವ ಶಾಂತಿ ಸರೋವರವಿದು. ಎಲೆಗಳು ಉದುರಿದ ಮರಗಳಲಿನವಚೈತನ್ಯದ ಚಲನೆಯಿದೆ,ಚಿಗುರೊಡೆಯುವ ಕೊಂಬೆಗಳ ನಡುವೆಭವಿಷ್ಯದ ಕೋಗಿಲೆಯ ಕುಹೂಗಾನವಿದೆ. ಸುಂಟರಗಾಳಿಯ ಸವಾಲಿಗೂಬಗ್ಗದ ಬೆನ್ನಲಬಿನ ಧೈರ್ಯವಿದು,ಬಿದ್ದವರ ಎದೆಯಲಿ ಮತ್ತೆ ಏಳುವಪ್ರೇರಣೆಯ ದೀಪವಿದು. ಅನ್ಯಾಯದ ಅಂಧಕಾರವ ಸೀಳುವಆಶೆಗಳ ಅಗ್ನಿಜ್ವಾಲೆಯಾಗಿ,ಬಂಧನದ ಬೇಡಿಗಳನು ಮುರಿದುಬೀಸುವ ಸ್ವಾತಂತ್ರ್ಯದ ಗಾಳಿಯಾಗಿದೆ. ಕಣ್ಣೀರಿನ ಕಾಲುವೆಯ ಕಲ್ಲೋಲದಿಹೊಸ ಕ್ರಾಂತಿಯ ಕಿಡಿ ಎಬ್ಬಿಸಿ,ದೌರ್ಜನ್ಯದ ಅರಣ್ಯವ ಸುಡುವವಿಪ್ಲವದ ವಸಂತವಾಗಲಿ. ಬದುಕಿನ ಓಟದ ಒರಟು ಹಾದಿಯಲಿಪ್ರಕೃತಿಯ ಮಡಿಲ ಅರಳಿದ ಹೂವಾಗಿ,ಪ್ರತಿ ಮುಂಜಾವಿನ ಹೊಸ ಉತ್ಸಾಹದ ಉಸಿರಾಗಲಿ ಈ ‘ಉದ್ಯಾನಗೀತ’. ತೆಲುಗು ಮೂಲ :ವೇಲ್ಪುಲ ನಾರಾಯಣಕನ್ನಡ ಅನುವಾದ : ಕೋಡೀಹಳ್ಳಿ ಮುರಳೀಮೋಹನ್

ವೇಲ್ಫುಲ ನಾರಾಯಣ ಅವರ ತೆಲುಗುಕವಿತೆ “ಉದ್ಯಾನ ಗೀತ”ದ ಕನ್ನಡಾನುವಾದ ಕೋಡೀಹಳ್ಳಿ ಮುರಳೀಮೋಹನ್ Read Post »

ಅಂಕಣ ಸಂಗಾತಿ, ಒಬ್ಬ ಅಮ್ಮನ ಕಥೆ

ಧಾರಾವಾಹಿ ಸಂಗಾತಿ-115 ಒಬ್ಬ ಅಮ್ಮನ ಕಥೆ ರುಕ್ಮಿಣಿ ನಾಯರ್ ಸುಮತಿಯ ಆರೋಗ್ಯದಲ್ಲಿ ವ್ಯತ್ಯಾಸ ಲೋಟದ ತುಂಬಾ ನೀರನ್ನು ತುಂಬಿಕೊಂಡು ಬಂದು ಆ ಹುಡುಗಿ ಸುಮತಿಯ ಕೈಕೆ ಕೊಟ್ಟಳು. ಸುಮತಿ ನೀರನ್ನು ಗಟಗಟನೆ ಕುಡಿದಳು ಆದರೆ ಒಮ್ಮೆಲೇ ವಾಕರಿಕೆ ಬಂದಂತಾಗಿ ಮುಖ ಕಿವುಚಿಕೊಂಡಳು. ಒಂದೇ ಸಮನೆ ನೀರನ್ನು ಕುಡಿದಿದ್ದಕ್ಕಾಗಿ ತಾಯಿಗೆ ಹೀಗೆ ಆಗುತ್ತಿರಬೇಕು ಎಂದು ಮಗಳು ತಾಯಿಯ ಬೆನ್ನನ್ನು ಮೆತ್ತಗೆ ಸವರಿದಳು. ಸುಮತಿಯ ಪರಿಸ್ಥಿತಿಯನ್ನು ಕಂಡು ಮಗಳಿಗೆ ಒಳಗೊಳಗೆ ಏನೋ ಚಿಂತೆ. ಅಮ್ಮನಿಗೆ ಆರೋಗ್ಯದಲ್ಲಿ ಏನೋ ವ್ಯತ್ಯಾಸವಾಗಿದೆ ಎಂದು ಮಗಳಿಗೆ ಅನಿಸಿತು. ಸುಮತಿಯನ್ನು ಒಮ್ಮೆ ಸೂಕ್ಷ್ಮವಾಗಿ ಗಮನಿಸಿದಳು. ಮುಖ ಸ್ವಲ್ಪ ಊದಿರುವಂತೆ ಕಾಣಿಸಿತು. ಕಣ್ಣಿನ ಸುತ್ತಲೂ ಸ್ವಲ್ಪ ಬಾತು ಕೊಂಡಂತೆ ಇದೆ. ಕೈಕಾಲು ಸಹ ಸ್ವಲ್ಪ ಊದಿಕೊಂಡಿದೆ. ಆದಷ್ಟು ಬೇಗ ತಾಯಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಬೇಕೆಂದು ತೀರ್ಮಾನಿಸಿ.,…. ಅಮ್ಮ ನಾನು ಬೇಗ ಸ್ನಾನ ಮುಗಿಸಿ ಬರುತ್ತೇನೆ…. ಎಂದು ಹೇಳಿ, ಹತ್ತನೇ ತರಗತಿಯಲ್ಲಿ ಓದುತ್ತಿರುವ ಮಕ್ಕಳನ್ನು ಕರೆದು….”ಬೇಗ ತಿಂಡಿ ಮಾಡಿ, ನಾನು ನನ್ನ ತಾಯಿಯನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಬೇಕಿದೆ”…. ಎಂದಳು. ಮಕ್ಕಳು ಸರಿ ಎಂದು ತಲೆ ಆಡಿಸಿ ತಿಂಡಿ ಮಾಡಲು ಅಡುಗೆ ಮನೆಗೆ ಹೋದರು. ಅಡುಗೆಯವರು ಊರಿಗೆ ಹೋಗಿದ್ದ ಕಾರಣ ಸದ್ಯಕ್ಕೆ ಮಕ್ಕಳೇ ತಿಂಡಿ ಮಧ್ಯಾಹ್ನಕ್ಕೆ ಅಡುಗೆ ಮಾಡಿಕೊಳ್ಳುತ್ತಿದ್ದರು. ಜೊತೆಗೆ ಸುಮತಿ ಮಗಳು ಸಹಾಯ ಕೂಡ ಸಹಾಯ ಮಾಡುತ್ತಿದ್ದಳು. ಮನಸ್ಸಿನಲ್ಲಿ ಸ್ವಲ್ಪ ಆತಂಕವನ್ನು ತುಂಬಿಕೊಂಡೇ ಮಗಳು ಬೇಗನೆ ಸ್ನಾನ ಮುಗಿಸಿದಳು. ಅನಾಥಾಶ್ರಮದ ಮಕ್ಕಳು ತಾಯಿ ಮಗಳು ಇಬ್ಬರಿಗೂ ಚಪಾತಿ ಟೊಮೇಟೊ ಚಟ್ನಿ ಮಾಡಿ ತಿನ್ನಲು ಕೊಟ್ಟರು. ಸುಮತಿಗೆ ಹೆಚ್ಚು ನಡೆಯಲು ಸಾಧ್ಯವಿಲ್ಲ ಎಂದು ಮಗಳಿಗೆ ಅನಿಸಿತು. ಅನಾಥಾಶ್ರಮದ ಹುಡುಗನೊಬ್ಬನನ್ನು ಕರೆದು ದಾರಿಯಲ್ಲಿ ಹೋಗುವ ಯಾವುದಾದರೂ ಆಟೋರಿಕ್ಷಾವನ್ನು ನಿಲ್ಲಿಸಿ ಅನಾಥಾಶ್ರಮ ಅಂಗಳಕ್ಕೆ ಕರೆದುಕೊಂಡು ಬರುವಂತೆ ಹೇಳಿದಳು. ಸ್ವಲ್ಪ ಹೊತ್ತಿನಲ್ಲೇ ಆಟೋ ಬಂದಿತು. ತಾಯಿಯನ್ನು ಕರೆದುಕೊಂಡು ಮಗಳು ಆಟೋ ಹತ್ತಿದಳು. ದೊಡ್ಡ ಮಕ್ಕಳನ್ನು ಉದ್ದೇಶಿಸಿ…. “ಎಲ್ಲರಿಗೂ ತಿಂಡಿಯನ್ನು ಕೊಟ್ಟು ರೆಡಿಯಾಗಿ, ಬಾಗಿಲಿಗೆ ಬೀಗ ಹಾಕಿಕೊಂಡು ಹತ್ತಿರದಲ್ಲಿರುವ ಡಮ್ ಅಂಡ್ ಢಫ್ ಶಾಲೆಯ ಮೇಲ್ವಿಚಾರಕರ ಕೈಲಿ ಕೀಲಿಯನ್ನು ಕೊಟ್ಟು ಶಾಲೆಗೆ ಹೋಗಿ”…. ಎಂದು ತಿಳಿಸಿದಳು. ಹತ್ತಿರದಲ್ಲಿಯೇ ಸಕಲೇಶಪುರದ ಸರ್ಕಾರಿ ಆಸ್ಪತ್ರೆ ಇದ್ದ ಕಾರಣ ಆಟೋ ಬೇಗನೆ ಆಸ್ಪತ್ರೆಯನ್ನು ತಲುಪಿತು. ಸುಮತಿಯನ್ನು ಆಟೋದಿಂದ ನಿಧಾನವಾಗಿ ಇಳಿಸಿ, ಆಸ್ಪತ್ರೆಯ ವರಾಂಡದ ಬೆಂಚಿನ ಮೇಲೆ ಕುಳ್ಳಿರಿಸಿ, ಕಂಪೌಂಡರ್ ಹತ್ತಿರ ಹೋಗಿ ಚೀಟಿಯನ್ನು ಬರೆಸಿಕೊಂಡು ಬಂದಳು. ನಂತರ ಸುಮತಿಯ ಕೈ ಹಿಡಿದು ನಿಧಾನವಾಗಿ ನಡೆಸಿಕೊಂಡು ಫಿಜಿಷಿಯನ್ ವೈದ್ಯರ ಕೊಠಡಿಯ ಬಳಿಗೆ ಹೋದಳು. ಅಲ್ಲಿಯೇ ಇದ್ದ ಬೆಂಚಿನ ಮೇಲೆ ಸುಮತಿಗೆ ಕುಳಿತುಕೊಳ್ಳಲು ಹೇಳಿ ಸರತಿಯ ಸಾರಿನಲ್ಲಿ ತಾನು ನಿಂತಳು. ಅಟೆಂಡರ್ ಕರೆದಾಗ ತಾಯಿಯನ್ನು ನಿಧಾನವಾಗಿ ಎಬ್ಬಿಸಿ ಒಳಗೆ ಕರೆದುಕೊಂಡು ಹೋದಳು. ಸುಮತಿಯನ್ನು ಕಂಡ ಕೂಡಲೇ ವೈದ್ಯರು…. “ಏನು ಸುಮತಿಯವರೇ ಹೇಗಿದ್ದೀರಾ?… ಎಂದು ಕೇಳಿದರು. ಸುಮತಿ ವೈದ್ಯರ ಮುಖವನ್ನು ನೋಡಿದಳು. ಅವಳಿಗೆ ವೈದ್ಯರ ಮುಖ ಅಸ್ಪಷ್ಟವಾಗಿ ಕಾಣಿಸಿತು. ಕನ್ನಡಕವನ್ನು ತೆಗೆದು ಸೀರೆಯ ಸರಗಿನಿಂದ ಒರಸಿಕೊಂಡು ಪುನಃ ಹಾಕಿಕೊಂಡಳು… “ಸರ್ ಕೆಲವು ದಿನಗಳಿಂದ ನನ್ನ ಆರೋಗ್ಯ ಸರಿ ಇಲ್ಲ…. ತುಂಬಾ ಆಯಾಸವಾಗುತ್ತಿದೆ… ಏನನ್ನೂ ತಿನ್ನಲು ಸಾಧ್ಯವಾಗುತ್ತಿಲ್ಲ…. ಆಹಾರವನ್ನು ತಿಂದರೆ, ನೀರು ಕುಡಿದರೆ ವಾಂತಿ ಬರುವ ಹಾಗೆ ಆಗುತ್ತಿದೆ”…. ಎಂದಳು. ಸುಮತಿಯನ್ನು ಪರಿಶೀಲಿಸಿದ ವೈದ್ಯರು ಮಗಳನ್ನು ನೋಡುತ್ತಾ…. “ನಾನು ಕೆಲವು ರಕ್ತ ಪರೀಕ್ಷೆ ಹಾಗೂ ಎಕ್ಸರೇ ಪರೀಕ್ಷೆಗೆ ಈ ಚೀಟಿಯಲ್ಲಿ ಬರೆದು ಕೊಡುತ್ತೇನೆ…. ಅಮ್ಮನನ್ನು ಕರೆದುಕೊಂಡು ಹೋಗಿ ಈ ಪರೀಕ್ಷೆಗಳನ್ನು ಮಾಡಿಸಿಕೊಂಡು ಅವುಗಳ ವರದಿಯನ್ನು ತಂದು ನನಗೆ ತೋರಿಸಮ್ಮ”….. ಎಂದು ಹೇಳಿದರು. ಮಗಳು…”ಸರಿ ಸರ್”…. ಎಂದು ಹೇಳುತ್ತಾ ಸುಮತಿಯ ಕೈ ಹಿಡಿದುಕೊಂಡು ನಿಧಾನವಾಗಿ ನಡೆಸಿಕೊಂಡು ರಕ್ತ ಪರೀಕ್ಷೆ ಕೇಂದ್ರದ ಬಳಿಗೆ ಕರೆದುಕೊಂಡು ಹೋದಳು. ರಕ್ತ ಪರೀಕ್ಷೆ ಮಾಡಿಸಿದ ನಂತರ ಎಕ್ಸರೇ ಪರೀಕ್ಷೆ ಮಾಡುವಲ್ಲಿಗೆ ಕರೆದುಕೊಂಡು ಹೋದಳು. ಎಕ್ಸರೇ ಪರೀಕ್ಷಿಸುವಾತ ಎಕ್ಸರೇ ಯಂತ್ರದ ಮುಂದೆ ಸುಮತಿಯನ್ನು ನಿಲ್ಲಿಸಿ, ಪರೀಕ್ಷೆ ಮಾಡಲು ಪ್ರಾರಂಭಿಸಿದರು…. “ಅಮ್ಮಾ ನೀವು ಸೀರೆಯ ಸೆರಗಲ್ಲಿ ಏನನ್ನು ಇಟ್ಟುಕೊಂಡಿದ್ದೀರಿ?…. ಅದನ್ನು ಮಗಳ ಕೈಗೆ ಕೊಡಿ”…. ಎಂದರು. ಆತನ ಮಾತನ್ನು ಕೇಳಿ ಸುಮತಿ…” ಸರ್ ನನ್ನ ಕೈಲಿ ಏನೂ ಇಲ್ಲ”… ಎಂದಳು. ಎಕ್ಸರೇ ಪರೀಕ್ಷಿಸುವಾತ ಸಂಶಯ ಬಂದು ಮತ್ತೆ ಪರೀಕ್ಷಿಸಿದನು. ಏಕೆ ಏನೋ ಅಡ್ಡ ಇರುವಂತೆ ಕಾಣಿಸುತ್ತಿದೆಯಲ್ಲಾ ಎಂದುಕೊಳ್ಳುತ್ತಾ ಮತ್ತೆ ಮತ್ತೆ ಪರೀಕ್ಷಿಸಿದನು. ಎಕ್ಸರೇ ಪರೀಕ್ಷೆ ಮುಗಿದ ನಂತರ ಸ್ವಲ್ಪ ಹೊತ್ತು ಅಲ್ಲಿಯೇ ಹೊರಗೆ ಕಾದು ಕುಳಿತುಕೊಳ್ಳಲು ಹೇಳಿದರು. ಎಕ್ಸರೇ ಪರೀಕ್ಷಿಸುವಾತ ಹೇಳಿದ ಮಾತೇ ಮಗಳ ಕಿವಿಯಲ್ಲಿ ಗುಂಯ್ ಗುಡುತ್ತಿತ್ತು. ಆತ ಏಕೆ ಹಾಗೆ ಹೇಳಿರಬಹುದು? ಎಂದು ಯೋಚಿಸುತ್ತಾ ತಾಯಿಯ ಕೈ ಮೇಲೆ ಕೈ ಇಟ್ಟು…. ಏನು ಇರೋದಿಲ್ಲ ಅಮ್ಮಾ…. ಎಂದು ಹೇಳಿ, ಆತ ಏಕೆ ಹಾಗೆ ಹೇಳಿರಬಹುದು? ಎಂದು ಆಲೋಚಿಸುತ್ತಾ ಕುಳಿತಳು. ಸ್ವಲ್ಪ ಹೊತ್ತು ಕಾದು ಕುಳಿತ ನಂತರ ಎಕ್ಸರೇ ವರದಿ ಬಂದಿತು. ಆತ ಮಗಳನ್ನು ಒಳಗೆ ಕರೆದು…. “ಆದಷ್ಟು ಬೇಗ ನಿನ್ನ ಅಮ್ಮನ ವರದಿಯನ್ನು ವೈದ್ಯರಿಗೆ ತೋರಿಸು… ಹೆಚ್ಚು ತಡ ಮಾಡಬೇಡ”…. ಎಂದು ಹೇಳಿದರು. ಅವರು ಹೇಳಿದ ಮಾತಿನಿಂದ ಮಗಳಿಗೆ ಆತಂಕವಾಯಿತು. ಎಕ್ಸರೇ ಪರೀಕ್ಷಿಸುವವನ ಮುಖವನ್ನು ನೋಡಿದಳು…. “ನಾನು ಇಲ್ಲಿ ಏನನ್ನು ಹೇಳಲು ಸಾಧ್ಯವಿಲ್ಲ…. ಬೇಗ ತೆಗೆದುಕೊಂಡು ಹೋಗಿ ವೈದ್ಯರಿಗೆ ತೋರಿಸು ಅವರು ಎಲ್ಲವನ್ನೂ ನಿಮಗೆ ತಿಳಿಸುತ್ತಾರೆ”…. ಎಂದರು. ಅವರು ಹೇಳಿದ ಮಾತನ್ನು ಕೇಳಿ ಆತಂಕದಿಂದಲೇ ತಾಯಿಯ ಕೈಯನ್ನು ಹಿಡಿದು ನಿಧಾನವಾಗಿ ಎಬ್ಬಿಸಿ ವೈದ್ಯರ ಕೊಠಡಿಯ ಬಳಿಗೆ ಕರೆದುಕೊಂಡು ಹೋದಳು. ಅಟೆಂಡರ್ ಕೈಲಿ ವರದಿಯನ್ನು ಕೊಟ್ಟಾಗ ಆತ ಆ ವರದಿಯನ್ನು ತೆಗೆದುಕೊಂಡು ಹೋಗಿ ವೈದ್ಯರಿಗೆ ತೋರಿಸಿದನು. ಅಟೆಂಡರ್ ಹೊರಗೆ ಬಂದು ತಾಯಿ ಮಗಳು ಇಬ್ಬರನ್ನೂ ವೈದ್ಯರು ಕರೆಯುತ್ತಿದ್ದಾರೆ ಎಂದು ತಿಳಿಸಿದನು. ಇಬ್ಬರೂ ವೈದ್ಯರ ಕೊಠಡಿಯ ಒಳಗೆ ಪ್ರವೇಶಸಿದರು. ಒಳಗೆ ಹೋದಾಗ ವೈದ್ಯರು ಎಕ್ಸರೇ ಫಿಲಂ ಅನ್ನು ಕೂಲಂಕುಶವಾಗಿ ಪರೀಕ್ಷಿಸಿ ನೋಡುತ್ತಿದ್ದರು.ತಾಯಿ ಮತ್ತು ಮಗಳು ಒಳಗೆ ಬಂದಾಗ ಕುಳಿತುಕೊಳ್ಳುವಂತೆ ಹೇಳಿ, ಸುಮತಿಯನ್ನು ಉದ್ದೇಶಿಸಿ…. “ಸುಮತಿ…ಯಾವಾಗನಿಂದ ನಿಮಗೆ ಅಸ್ವಸ್ಥತೆ ಅನಿಸುತ್ತಿತ್ತು? ಎಂದು ಕೇಳಿದರು…. “ಬಹಳ ದಿನಗಳಿಂದ ನನ್ನನ್ನು ಸ್ವಲ್ಪ ಅಸ್ವಸ್ಥತೆ ಕಾಡುತ್ತಿದೆ…. ನಿಮ್ಮ ಸೂಚನೆಯಂತೆ ಇನ್ಸುಲಿನ್ ತೆಗೆದುಕೊಳ್ಳುತ್ತಿದ್ದೇನೆ…. ಮಾತ್ರೆಯನ್ನು ತೆಗೆದುಕೊಳ್ಳುತ್ತಿದ್ದೇನೆ…. ಕೆಲವೊಮ್ಮೆ ಊಟದಲ್ಲಿ ಪಥ್ಯ ನೋಡಿಕೊಳ್ಳಲು ಸಾಧ್ಯವಾಗುತ್ತಿಲ್ಲ”…. ಎಂದಳು.

Read Post »

You cannot copy content of this page

Scroll to Top