Category: ಕಾವ್ಯಯಾನ

ಕಾವ್ಯಯಾನ

ಮಣ್ಣಿಗೆ ವಿದಾಯ ಹೇಳುತ್ತೇವೆ!

ಕವಿತೆ ಮಣ್ಣಿಗೆ ವಿದಾಯ ಹೇಳುತ್ತೇವೆ! ಅಲ್ಲಾಗಿರಿರಾಜ್ ಕನಕಗಿರಿ ಗುಟ್ಕಾ- ತಂಬಾಕು ಬೀರ್ – ಬ್ರಾಂಡಿಮಾರುವವರು ದೇಶವಾಳುತ್ತಿದ್ದಾರೆ.ಅವರ ವಸ್ತುವಿಗೆ ಅವರೇ ಬೆಲೆ ನಿಗದಿ ಮಾಡಿಕೊಂಡು. ಆದರೆ ನಾವು ಇಡೀ ದೇಶಕ್ಕೆ ಅನ್ನ ಕೊಡುತ್ತೇವೆ.ಬೆಳೆಗೂ ಬದುಕಿಗೂ ಬೆಲೆ ಇಲ್ಲದೆ ಬೀದಿ ಪಾಲಾಗಿದ್ದೇವೆ. ಅನ್ನ ಉಂಡವರು ಒಂದು ಸಲ ಯೋಚಿಸಿ ನೋಡಿ.ಅನ್ನದಾತನ ನೋವು ಸಾವು ಸಂಕಟ ಏನೆಂದು. ಇಲ್ಲವೆಂದರೆ ನಾವೇ ಮಣ್ಣಿಗೆ ವಿದಾಯ ಹೇಳುತ್ತೇವೆ.ಮಕ್ಕಳ ಹೆಗಲ ಮೇಲೆ ಇಡಬೇಕೆಂದ ನೇಗಿಲು,ನಿಮ್ಮ ಮ್ಯೂಸಿಯಂನಲ್ಲಿ ಇಟ್ಟು ಸಲಾಂ ಹೊಡೆಯುತ್ತೇವೆ ***************************

ಎದೆಯಲ್ಲಿ ಅಡಗಿದ ಬೆಳಕು

ಕವಿತೆ ಎದೆಯಲ್ಲಿ ಅಡಗಿದ ಬೆಳಕು ಡಾ ರೇಣುಕಾ ಅರುಣ ಕಠಾರಿ ನನಗೆ ನಾನಾಗುವಾಸೆನಿನ್ನನೂ ಒಳಗೊಂಡು ನೋವಿನ ನಡುವೆಯೂನನ್ನೆದೆಯಲಿ ಹೂವರಳಿಸಿನಕ್ಷತ್ರ ಪುಂಜಗಳ ಕಣ್ತಂಬಿಸಿಆ ಆಕಾಶದಲ್ಲಿ ದಾರಿ ಕಾಣುವಾಸೆ ಹೆಚ್ಚಾಗಿದೆ. ನನ್ನ ಪ್ರೀತಿ-ನೀತಿದುಃಖ-ದುಮ್ಮಾನಗಳ ನಡುವೆಆಸೆ ನಿರಾಸೆಗಳ ಕೇಂದ್ರದ ಸಾಗರದಲ್ಲಿಯುಬದುಕಿನ ಸಾಂದ್ರ ನೀನೇ. ಪುಟಿದೇಳುವುದು ಒಮ್ಮೊಮ್ಮೆ ನಿನ್ನಲೂಆರ್ಭಟ ದುರಂಕಾರಎದೆಯಲ್ಲಿ ಅಡಗಿದಶ್ರೇಷ್ಠತೆಯ ಹಾವ ಭಾವದಲ್ಲಿಅಲ್ಲಗಳಿದಾಗಲೆಲ್ಲ ನಾನುಅನುದಿನವು ಸಾಯುತಲಿರುವೆ. ಆಗಾಗಸಂಜೆಯ ತಂಗಾಳಿಯ ಬೊಗಸೆಯಲಿಕೆನ್ನೆಗಳ ತುಂಬಿಸಿಎದೆಗೇರಿಸಿಕೊAಡಾಗನಿನ್ನೆದೆಯ ಬಡಿತದ ಸದ್ದುಗಳಲೆಕ್ಕ ಹಾಕುವೆನು. ಪ್ರತಿ ಮಿಡಿತವೂಬದುಕಿನಜಮಾ ಖರ್ಚಿನ ಪುಟಗಳೇ.ಪುಟಗಳ ಲೆಕ್ಕವೆ ಮೀರಿ ನಿಂತಿರುವಚಿಲುಮೆಯ ಸಾಕ್ಷತ್ಕಾರ ನೀನು. ಇದಕ್ಕೆಎಲ್ಲವುಗಳ ನಡುವೆನಿನ್ನನೂ […]

ಪಾತ್ರೆಗಳು ಪಾತ್ರವಾದಾಗ

ಕವಿತೆ ಪಾತ್ರೆಗಳು ಪಾತ್ರವಾದಾಗ ಶಾಲಿನಿ ಆರ್. ಬೇಳೆ ಬೇಯಿಸೋಕೆಪಾತ್ರೆ ಬೇಕೆ ಬೇಕು!ಹೊಟ್ಟೆ ತುಂಬಿಸೋಕೆಮನದ ಅಗಣಿತಭಾವಗಳತಣಿಸೋಕೆ? ಹುಟ್ಟಿದ ಹಸಿವಿಗೆತಿನುವ ಹಂಬಲಕೆರುಚಿ ನೋಡೋಕೆಕಾದ ಮನಗಳಿಗೆಉಣ ಬಡಿಸೋಕೆಹೇಗಾದರೂ ಸರಿ! ಹದವಾದ ರುಚಿತರಿಸಬೇಕು,ಬೆಂದ ಬೇಳೆಗಳಬತ್ತಿಸಿ,ಕರಗಿಸಿಗುರಾಡಿ ,ಬಾಡಿಸಿಮತ್ತಷ್ಟು ನೀರುಣಿಸಿನೆಪಕ್ಕೊಂದು ಪಾತ್ರೆಯಿರಿಸಿ! ಹಸಿದವರಿದ್ದರೆಹೇಳಿ?ಬೆಂದ ಬೇಳೆಗಳ ರುಚಿಗೆ!ಹಸಿವಿಲ್ಲದವರನ್ನುಕರೆತನ್ನಿ ,ಹಸಿವ ಇಂಗಿಸಲೋ?ಇಲ್ಲವಾದರೆ,ರುಚಿ ಸವಿಯಲು! ಸ್ವಲ್ಪ ಹುಳಿ,ಖಾರಒಗ್ಗರಣೆ ಸಾಕು!ಇನ್ನಿತರ ಮಸಾಲಪದಾರ್ಥಗಳುಬೇಕಿದ್ದರೆಪಾತ್ರಕ್ಕೊಪ್ಪುವಂತೆ!ರುಚಿಗೆ ಇಂತಿಷ್ಟೇ ಉಪ್ಪು,ಮುಖ ಕಿವುಚದಂತೆ ಮತ್ತೆ! ಹಿತ ಮಿತವಾದಪದಾರ್ಥಗಳುಪಾತ್ರಗಳ ಸೋಕಿನಾಲಿಗೆಯ ರುಚಿ!ಮನಕಿಳಿದ ಗೆಲುವೋ?ಬೆಂದ ಬೇಳೆಯದೋಮನದಗಲದಪಾ(ತ್ರೆ)ತ್ರ ದೋ??? ****************************************************

ಜೀಕು ಜೋಕಾಲಿ

ಜೀಕು ಜೋಕಾಲಿ ಕೆ.ಸುನಂದಾ ಸಾಗುತಿರಲೀ ಪಯಣ ನಿಲ್ಲದೇ ಬಾಳಲಿಏಳು ಬೀಳುಗಳೆನಿತು ಬಂದರೂ ಬರಲಿಕಾರ್ಮೋಡ ಕರಗುತ ಸರಿಯಲೇಬೇಕುಹಸನಾದ ಹೊಂಬೆಳಕು ಸೂಸಲೇಬೇಕು ಬದುಕೊಂದು ಆಟ ಸವಿಯ ರಸದೂಟಆಸ್ವಾದಿಸುತ ನಡೆ ಸುಂದರದಾ ನೋಟದೇವನಿತ್ತ ಕಾಣಿಕೆ ಈ ಜಗದ ಚಲನೆಯುನಾವೆಲ್ಲರೂ ಅವನಾಟದ ಗೊಂಬೆಯು ಒಲವಿನ ಹಂದರದಿ ಜೀಕುತ ಜೋಕಾಲಿಏರಿಳಿಯುತ್ತ ಸಾಗು ನೀ ಸಮಭಾವದಲಿಸ್ಥಿರವಲ್ಲವೋ ಬಂಧನಗಳು ಭುವಿಯಲಿಇದ್ದರೂ ಇಲ್ಲದಂತೆ ಇರಬೇಕು ಜಗದಲಿ ಪ್ರೀತಿ ಪ್ರೇಮದ ಮನಸ್ಸುಗಳೆ ಆಲಯವುಅಂತರಾತ್ಮನೇ ಗರ್ಭಗುಡಿಯ ದೇವನುವರ್ಣಿಸಲಾಗದ ಪ್ರಕೃತಿಯ ಪೂಜಿಸುತ್ತನಡೆ ನೀ ಉಪಕಾರ ಸ್ಮರಣೆ ನೆನೆಯುತ್ತ **************************************

ಗಜಲ್

ಗಜಲ್ ಸಿದ್ಧರಾಮ ಕೂಡ್ಲಿಗಿ ಮನದ ದುಗುಡ ಕಳೆಯಲಿಕ್ಕೆ ಇರುವುದೊಂದು ಕಿಟಕಿ ಜಗದ ತಮವ ತೊಡೆಯಲಿಕ್ಕೆ ಇರುವುದೊಂದು ಕಿಟಕಿ – ಅರಿವ ಕುಡಿದು ಎದೆಯ ತೆರೆದು ಮೂಡಿತೊಂದು ಕನಸು ಬಯಲ ಹಕ್ಕಿ ಮೇಲೆ ಹಾರಲಿಕ್ಕೆ ಇರುವುದೊಂದು ಕಿಟಕಿ – ಏನೊಂದೂ ಇರದ ತಾಣದಿಂದ ತೇಲಿ ಬಂತೊಂದು ರಾಗ ರಾಗದೊಳಗೆ ರಾಗ ಮೂಡಲಿಕ್ಕೆ ಇರುವುದೊಂದು ಕಿಟಕಿ – ಸೂರ್ಯ ಚಂದ್ರ ತಾರೆ ಧೂಮಕೇತು ಮತ್ತದೇ ಕಾಲಚಕ್ರ ಜೀವಸೆಲೆಯ ಸುರುಳಿ ಮೂಡಲಿಕ್ಕೆ ಇರುವುದೊಂದು ಕಿಟಕಿ – ನೊಂದು ಬೆಂದು ದಹಿಸಿಕೊಂಡು ಅರಳಿತೊಂದು […]

ಆಗು ಅನಿಕೇತನ…!!

ಆಗು ಅನಿಕೇತನ…!! ಡಾ.ಉದಯ ಧರ್ಮಸ್ಥಳ ಆಹಾ…ಮನುಜ ಮತಿಯೇ…!ಏನೆಂಬೆ ನಿನ್ನ ನಿರ್ಣಯಗಳಿಗೆ…!ಬಡವನಿಗೆ ಮಗನಾಗಿ ಬಂದರೆ ಪ್ರಾರಬ್ದವೆಂಬೆ…ಸಿರಿಮನೆಯ ಸಂತಾನ ಅದೃಷ್ಟವೆಂಬೆ…!ಗೊಡ್ಡು ಪಾಪಿಯವಳಂತೆ ಹೆರದ ಹೆಂಗಸಾಕೆ…!ಹೆಡ್ಡುನಂಬಿಕೆಗಳವು ಹಿಂಬಾಲಿಸುವ ಕಂತೆಯಂತೆ…!ಇದ್ದಕ್ಕಿದ್ದಂತೆ ಎದೆಯೊಡೆದು ಸಾಯೆ ಪುಣ್ಯಮರಣವದಂತೆ…!ಹಲವುದಿನ ನರಳಾಡಿಯೋಡಿದವ ಪಾಪಿಯಂತೆ….!ಹುಚ್ಚು, ಕಾಣದ ಆಚೆ ಸುಖ ದುಃಖಗಳ ಅಲೋಕಗಳಂತೆ…!ನಂಬಿಸುವ ನರಳಿಸುವ ಬಗ್ಗಿಸುವ ಬಾಗಿಸುವ ಹಿಂಸಿಸುವ ಹಿಂಡು ಪುರಾತನ ಸಂತೆ…!ಮನ ಮತಿ ಗತಿ ಜಾತಿ ಭ್ರಾಂತಿ ಭ್ರಮೆಯ ಭ್ರಮಣ ಎಲ್ಲಕ್ಕಿಂತಲೂ ಕತ್ತಲೆಕಳೆವ ಕಾಲವಾಗಲಿ ಸಂಕ್ರಮಣ..!ಕೊರಡು ಕಳೆದೊಗೆಯೆ ಧೃತಿಗದೇನೋ ಕಟ್ಟುಪುರಾಣ…!ಇದ್ದಾಗ ಸಹಕರಿಸುಬಿದ್ದಾಗ ಮೇಲೆತ್ತುಒದ್ದಾಗ ಗುಮ್ಮಿಬಿಡು…!ಸಾವು ಸಹಜ…ಅದಕೂ ಮೊದಲು ಬದುಕೂ ಮುಖ್ಯ […]

ಕರುನಾಡು (ಭೋಗಷಟ್ಪದಿ)

ಕರುನಾಡು (ಭೋಗಷಟ್ಪದಿ) ಶುಭಲಕ್ಷ್ಮಿ ಆರ್ ನಾಯಕ (ಮೂರು ಮಾತ್ರೆಯ ಗಣಗಳು) ಎನಿತು ಅಂದ ನಮ್ಮ ನಾಡುಎನಿತು ಮಧುರ ನಮ್ಮ ನುಡಿಯುವೈಭವದ ಇತಿಹಾಸದ ಚೆಲುವ ಕರುನಾಡುಕೆಚ್ಚೆದೆಯ ಕಲಿಗಳ ನಾಡುಹಚ್ಚ ಹಸಿರ ಸೊಬಗ ಬೀಡುವೀರ ಯೋಧರ ತ್ಯಾಗ ಮೆರೆದಿಹ ಕರುನಾಡು//೧// ಸಾಧು ಸಂತರು ಅವತರಿಸಿಪಾವನಗೊಳಿಸಿದರು ನಾಡಕಟ್ಟಿದರು ಅವರು ಸಮತಾಭಾವದಿ ಬೀಡಪುಣ್ಯನದಿಗಳು ಪ್ರವಹಿಸಿಪಾಪ ತಿಕ್ಕಿ ತೊಳೆದು ಧನ್ಯಮಾಡಿವೆ ನಮ್ಮೆಲ್ಲರ ಕರುನಾಡ ಬೀಡಲಿ//೨// ಮಣ್ಣ ಕಣಕಣದಲಿ ಒಲವುಗೆಲುವ ಗೇಯದಲಿ ಒಲುಮೆಯುಕನ್ನಡಿಗರ ಮನದಲಿ ಮಿಡಿದಿಹುದು ನೋಡಿರಿಮಾನ್ಯವಿರಲಿ ನಾಡು ನುಡಿಗೆಬಳಕೆಯಾಗಲಿ ಕನ್ನಡವುಆರದೆ ಉರಿಯಲಿ ಕನ್ನಡದನಾಡ ದೀಪವು//೩// […]

ಗಜಲ್

ಗಜಲ್ ಸಿದ್ದರಾಮ ಹೊನ್ಕಲ್ ಹೇಳಬೇಕಾದ ಮಾತೆಲ್ಲವನು ಹೇಳಿಯಾಯಿತು ಮತ್ತೇನು ಮಾಡಲಿಕೇಳಬೇಕಾದ ಮಾತೆಲ್ಲ ಮತ್ತೆ ಕೇಳಿಯಾಯಿತು ಮತ್ತೇನು ಮಾಡಲಿ ತಿಳಿಯದವರಿಗೆ ತಿಳಿಸಬಹುದು ತಿಳಿದು ಮೌನ ಆದರೇನು ಮಾಡಲಿಮನದ ಬಯಕೆ ಬಾಯಿಬಿಟ್ಟು ಕಂಗಾಲಾಯಿತು ಮತ್ತೇನು ಮಾಡಲಿ ಕಾಯ ಕಾಯಬೇಕು ನಿಜ ಆ ಕಾಯುವಿಕೆಗೆ ಕೊನೆ ಯಾವಾಗಪಿಸುಮಾತು ಬಿಸುಮಾತಾಗಿ ಆಟವಾಯಿತು ಮತ್ತೇನು ಮಾಡಲಿ ಪ್ರೀತಿಯಲಿ ಬಿದ್ದವರೆಲ್ಲ ಹುಚ್ಚರೆಂಬ ಸತ್ಯ ಇಡೀ ಜಗವು ಬಲ್ಲದುಸತ್ಯ ಹುಚ್ಚೆನಿಸಿ ಬಾಗಿಲು ಮುಚ್ಚಿಯಾಯಿತು ಮತ್ತೇನು ಮಾಡಲಿ ಹೇಳಿ ಕೇಳಿ ಬೇಸತ್ತು ಬಸವಳಿದು ಹೋಗಿಹನು ನೀ ಬಲ್ಲೆ ಸಾಕಿತರವಲ್ಲ […]

ಕಾವ್ಯಯಾನ

ರೊಕ್ಕದಿ ದಕ್ಕದೊಡವೆ ಅವಳು ನಿನ್ನ ಹೆತ್ತು ಹೊತ್ತವಳು ಹೆಣ್ಣುವಾತ್ಸಲ್ಯದಿ ಸಲಹಿದವಳು ಹೆಣ್ಣುಅವಳ ಮೇಲೆ ಹಸಿದ ಪಿಶಾಚಿಗಳ ಕಣ್ಣುಕಾಮದಬ್ಬರದಿ ಸಿಲುಕಿ ಆದಾಳೋ ಮಣ್ಣು ಹೆಜ್ಜೆ ಹೆಜ್ಜೆಗೂ ಸಜ್ಜಿಕೆಯನ್ನೇರಿಯಶಸ್ಸಿನ ಮುಕುಟ ಧರಿಸಿದರುಕಾಮ ಪಿಪಾಸುಗಳ ಹಸಿವಲಿನಲುಗಿಹಳು ಕಮರಿಹಳು ಬಡಪಾಯಿ ಹೆಣ್ಣ ತಿನ್ನುವಆಸೆ ಏಕೆ ಪಿಪಾಸುಗಳೇಈ ಘೋರ ತುಂಬಿದ ಕೃತ್ಯಕ್ಕೆಬೀದಿ ನಾಯಿ ಕಣ್ಣೀರಿಡುತ್ತಿದೆ ಅವಳ‌ ಹರಿದು ಸೊಕ್ಕಲ್ಲಿಮುಕ್ಕವೆಯಾಹೊಕ್ಕಳಿನ ನಂಟಿಟ್ಟು ಮುತ್ತಿಕ್ಕಿದಸಂಕುಲದವಳು, ರಕ್ಕಸನು ಹೊಕ್ಕಿದನೇನಿನ್ನ ರೊಕ್ಕದಿ ದಕ್ಕಿಸಲಾರದ ಒಡವೆಯವಳು ಅಳಿಸದಿರು ಕಣ್ಣೀರು ತರಿಸದಿರುನಿನ್ನಾಸೆಯ ಹಸಿವಲ್ಲಿ ದಹಿಸದಿರುಅವಳ ಮನಸು ನೋಯಿಸದಿರುಹಸಿವ ಹಿಂಗಿಸಿ ಉಸಿರಾಡಲು ಬಿಡು **************************************** […]

Back To Top