Category: ಕಾವ್ಯಯಾನ

ಕಾವ್ಯಯಾನ

ನಿಷ್ಠೆ,ನಂಬಿಕೆ, ಪ್ರೀತಿ,ಮಮತೆಗಳೆಲ್ಲ ಕಪ್ಪ ಕೇಳುತ್ತಿವೆ
ದುಡಿದ ಕೈ ಈಗ ಹತಾಶೆಯ ಗಾಯದಲಿ ದಣಿದಿದೆ

ಆ ನಿಸ್ತೇಜ ಕಣ್ಣುಗಳಲ್ಲಿ ಬಿರಿದ ನೆಲ, ಕಮರಿದ ಫಸಲು
ನಿನ್ನ ಹೆಣದ ಮೇಲೆ ಚದುರಂಗ ಆಡುತ್ತಾರೆ ಎಲ್ಲರೂ

ಕೋಟಿ ವಿದ್ಯೆಯ ಬಿಟ್ಟು ಮೇಟಿ ಹಿಡಿಯಲು ಬಂದ ಮಗನ ಭವಿಷ್ಯ ಗಾಳಿಗಿಟ್ಟ ಹಣತೆ
ಮನೆ ಮಂದಿಯಲ್ಲ ಬೆವರು ಬಸಿದರೂ ಹಸಿರಾಗದ ಅಕ್ಕಡಿ ಸಾಲು ಈಟಿಯಾಗಿ ತಿವಿದಿದೆ

ರೈತಗಜಲ್ ಹಸಿರುಸಿರಿನ ಸಿರಿ ನೀನು ಧರಣಿ ಮೇಲೆ ದಯೆಬಾರದೆ ಮಳೆರಾಯಾಹರಸುವ ಹೆಸರೇ ನೀರು ಸುರಿಯುತ್ತ ಇಳೆಯ ಬೆರೆಯಬಾರದೆ ಮಳೆರಾಯಾ ನೇಗಿಲು ಕಾಯಕವಿಲ್ಲದೆ ಕುಳಿತಿದೆ ಸುಣ್ಣವಿರದ ಗೋಡೆಯನ್ನು ಅಂಟಿಕೊಂಡುರೈತನ ಹೊಲ ಉಳುವ ಜೋಡೆತ್ತನ್ನಾದರೂ ಬದುಕಿಸಬಾರದೆ ಮಳೆರಾಯಾ ಅಟ್ಟ ಬಿಟ್ಟು ಹಸಿದ ಹೊಟ್ಟೆ ಸೇರಿವೆ ಬೀಜಕ್ಕಿಟ್ಟ ಕಾಳೆಂಬುದನ್ನೂ ಮರೆತುಗುಟ್ಟಾಗುಳಿಯದ ಸಾಲಕ್ಕಾದರೂ ಬಡ್ಡಿಯಾಗಬಾರದೆ ಮಳೆರಾಯಾ ಮಣ್ಣ ಮಕ್ಕಳೆಲ್ಲ ನೊಂದು ಬೆಂದು ಕಣ್ಣೀರು ಹಾಕುತ್ತಿಹರುನಿನ್ನಿರುವಿಕೆಯ ಸಣ್ಣ ಸುಳಿವೊಂದು ತೋರಬಾರದೆ ಮಳೆರಾಯಾ ಬವಣೆಗೆಲ್ಲ ಪ್ರೀತಿಯುಣಿಸಿ ಧರೆಯೊಡಲಿಗೆ ವರವಾಗಿ ಬಾಸಕಲಕ್ಕಾಧಾರವೇ ಜಲವೆನ್ನುವ ‘ಸರೋಜ’ಳ ಮನವಿ ಸ್ವೀಕರಿಸಬಾರದೆ […]

ಅಸ್ಪೃಶ್ಯರಾಗಿದ್ದೇವೆ!

ನಾವೆಲ್ಲರೂ ಈಗ ಸಮಾನರಾಗಿದ್ದೇವೆ
ನಾಲ್ಕು ಗೋಡೆಗಳ ನಡುವೆ ಬಂಧಿಗಳಾಗಿದ್ದೇವೆ
ನಮ್ಮ ತಪ್ಪಿಲ್ಲದೆಯೂ, ಬೇರೊಬ್ಬರ ತಪ್ಪಿಗೆ ಶಿಕ್ಷೆಯನ್ನು ಅನುಭವಿಸುವ ಬಲಿಪಶುಗಳಾಗಿದ್ದೇವೆ

ಕೆಸರುಂಡ ಕೈಗಳಿವು ಮೊಸರಿನ ಸಂಗವ ತೊರೆದಿವೆ
ನಿಟ್ಟುಸಿರ ತಾಪ ಕೊನರುತ್ತಿದೆ ಬಿರುಕು ಬಿಟ್ಟ ಪಾದದಲಿ

ಬೆಳೆದ ಬೆಳೆಗೆ ಈಗಲಾದರೂ ಬೆಲೆ ಬರುವುದೆಂದು ಕಾದಿದ್ದೇನೆ
ಕಷ್ಟ ಕೋಟಲೆ ಆಗಲಾದರೂ ಕಳೆವುದೆಂದು ನಿರೀಕ್ಷಿಸಿದ್ದೇನೆ

Back To Top