Category: ಕಾವ್ಯಯಾನ

ಕಾವ್ಯಯಾನ

ಗಂಗಾವತಿ

ಕವಿತೆ ಗಂಗಾವತಿ ಜ್ಯೋತಿ ಬಳ್ಳಾರಿ ಗಂಗಾವತಿ ಎಂದರೆ,ಬರೀ ಊರಲ್ಲ,ದೇಶಕ್ಕೆ ಅನ್ನ ನೀಡುವ ನಾಡು,ನಮ್ಮ ಭತ್ತದ ನಾಡು. ಗಂಗಾವತಿ ಎಂದರೆ,ಬರೀ ಇತಿಹಾಸವಲ್ಲ,ರಾಮಾಯಣಕ್ಕೆ ಸಾಕ್ಷಿಯಾದ,ಆಂಜಿನೇಯ ಜನಿಸಿದ ನಾಡು.ಗತ ಇತಿಹಾಸ ಸಾರುವಮೊರೆರ ತಟ್ಟೆಗಳ ಬೀಡು. ಗಂಗಾವತಿ ಬರಿ ಊರಲ್ಲಪರನಾರಿ ಸಹೋದರ,ಗಂಡುಗಲಿ ಕುಮಾರರಾಮ,ಗಂಡು ಮೆಟ್ಟಿದ ನಾಡು,ಆಧ್ಯಾತ್ಮದ ಗುರು ಹೆರೂರುವಿರುಪನಗೌಡರ ಹುಟ್ಟಿದ ಬೀಡು. ಗಂಗಾವತಿ ಎಂದರೆ,ಬರೀ ಹೆಸರಲ್ಲ,ಜನರ ಉಸಿರಲ್ಲೂ,ಆರಾಧ್ಯದೈವ ಚನ್ನಬಸವ ತಾತನ ಪೂಜಿಸುವಬೀಡು.ತಾಯಿ ಗ್ರಾಮದೇವತೆ ದುರ್ಗಾದೇವಿ ಆಶೀರ್ವದಿಸಿದ ಊರು. ಗಂಗಾವತಿ ಎಂದರೆ,ಬರೀ ಪ್ರಾಂತ್ಯವಲ್ಲ,ಕವಿ, ಇತಿಹಾಸಕಾರರ ನೆಲೆಬೀಡು,ಹಾಸ್ಯ ಚಕ್ರವರ್ತಿ ಪ್ರಾಣೇಶ್,ಇತಿಹಾಸ ತಜ್ಞ ಕೋಲ್ಕಾರರ ತವರೂರು. ಗಂಗಾವತಿ […]

ತಮಟೆ ಬೇಕಾಗಿದೆ

ಕವಿತೆ ತಮಟೆ ಬೇಕಾಗಿದೆ ಎನ್.ರವಿಕುಮಾರ್ ಟೆಲೆಕ್ಸ್ ನನ್ನ ತಮಟೆ ಹರಿದು ಹೋಗಿದೆ ಎದೆಯಗಲ ಚರ್ಮ ಬೇಕಾಗಿದೆಸತ್ತ ದನದ್ದು…. ತಮಟೆ ಸದ್ದಿನೊಳಗೆದುಃಖ ದೂರುಗಳ ಜಗಕೆಆಡಿ ಹಗುರಗೊಳ್ಳಬೇಕಿದೆ ಜುಂಗು ಕಿತ್ತು ರಂಪಿಗೆ ಆಡಿಸಿಅಡಗಲ್ಲಿನಲ್ಲಿತಟ್ಟಿ ಹದ ಮಾಡಿಹದಿನಾರು ಎಳೆ ಬಿಗಿದುಎಳೆ ಬಿಸಿಲಿಗಿಡಿದುಅಲುಗು ಅಲುಗಿಗೂ…ಕಂಟ ಕಾವು ರಣಬಾಜಿ,ಹುಲಿ ಹೊಡೆತಎರಡೇಟು…ಗಸ್ತಿನೋವು ನೀಗಿಸಿಕೊಳ್ಳಬೇಕಿದೆಶತಮಾನಗಳದ್ದುಈಗೀಗ ವರ್ತಮಾನದ್ದೂ…. ಸತ್ತದನವೊಂದಿದ್ದರೆಕೊಟ್ಟು ಬಿಡಿನನ್ನ ತಮಟೆ ಹರಿದು ಹೋಗಿದೆ.// ಕಾಡುಕತ್ತಲೆಬಿಳಿಯ ತೊಗಲ ದೊರೆ ದೇಶ ತೊಲಗಿದಕರಿಯ ತೊಗಲ ಬಿಳಿಯ ಬಟ್ಟೆದೇಶ ಜನರ ಬಗೆ ಬಗೆದುಸುಲಿತಿದೆ ಹಾಡಹಗಲೆಸುಳ್ಳು ಮಾತು ಕಳ್ಳನಡೆಪೊಳ್ಳು ಧರ್ಮದ ಇಷವಯ್ಯಸತ್ತಂತಿಹರನು ಬಡಿದೆಚ್ಚರಿಸಲುತಮಟೆಯೊಂದು […]

ಗುಪ್ತಗಾಮಿನಿ

ಕವಿತೆ ಗುಪ್ತಗಾಮಿನಿ ಸಂಗಮೇಶ್ವರ ಶಿ.ಕುಲಕರ್ಣಿ ನಿನಗೆ ನಾನ್ಯಾರು?ಕೇಳದಿರು ಹೇಳದಿರುಅಲ್ಲಿ ಕಾಡುವ ಒಗಟುಎದುರಾಗದಿರಲಿನಿನಗೆ ನನಗೆ ಇಬ್ಬರಿಗೂ…. ನನಗೆ ನೀನ್ಯಾರು?ಹೇಳುವೆ ಸಾರಿ ಸಾರಿಆತ್ಮದಲಿ ಆರೂಢವಾಗಿರುವಅಗೋಚರ ಆಕೃತಿ!ಪ್ರತಿಕ್ಷಣದ ಸ್ಮೃತಿ!! ಅಲ್ಲಿ ನೀನು ಇಲ್ಲಿ ನಾನುಅನ್ನುವ ಅಂತರದ ಮಾತೆಲ್ಲಿಆಣೆ ಮಾಡುವೆ ಬೇಕಾದರೆ;ಅಂತರಂಗ ಆಕ್ರಮಿಸಿದಮೊದಲ ದೊರೆಸಾನಿ ನೀನಿಲ್ಲಿ! ಉಬ್ಬುತಗ್ಗಿನ ಚರ್ಮದ-ಹೊದಿಕೆಯ ಮೋಹದಲ್ಲಿಮರೆತುಹೋಗುವ ಪಿಂಡವಲ್ಲ;ಎಲ್ಲ ದಾಟಿ ಅನಂತ ಹುಡುಕುವಅದಮ್ಯ ಚೇತನ! ನನಗೊಂದು ನಿನಗೊಂದುಬೇರೆಯದೇ ಕೋಳ,ಕಳಚಿ ಕೈಬಿಡುವ ಕೈಕಟ್ಟು ಅಲ್ಲ ಬಿಡು.ಇದರ ಮಧ್ಯೆ ನಮ್ಮದುಸಾವಿನಾಚೆಗೂ ಸಾಗುವ ಬಂಧ! ಈ ಜೀವಕ್ಕೆ ಅರ್ಧಜೀವ ನೀನು! ****************************

ಮಾಗಿಯ ಪದ್ಯಗಳು

ಕವಿತೆ ಮಾಗಿಯ ಪದ್ಯಗಳು ಪ್ರೇಮಲೀಲಾ ಕಲ್ಕೆರೆ ಕೌದಿ ಕವುಚಿಕಂಬಳಿ ಹುಳುವಾದರೂಅಡಗಲೊಲ್ಲದ ಚಳಿ ಬೆಳಗಾಗ ಬರುವಚುರುಕು ಬಿಸಿಲಿನ ನೆನಪೇಬಿಸಿ ಹುಟ್ಟಿಸಬಲ್ಲದುಒಳಗೆ ಉರಿಮುಖದ ಸೂರ್ಯ, ನಿನ್ನ ಆಗಮನಅದೆಷ್ಟು ಬೆಚ್ಚಗೆಜಡ ಮಾಗಿಗೆ !! 2 ತುಂಟ ಸೂರ್ಯ,ಎಲ್ಲಿ ಅಡಗಿದ್ದೆ ನೀನು ?ಇಷ್ಟೊಂದು ತಡವೇಕೆಮನೆಗೆ ಬರಲು ?? ಗುಟ್ಟೇನಿದೆ ,ಆ ನಿಶೆಯ ಜೊತೆನಿನ್ನ ಚೆಲ್ಲಾಟಜಗಕೇ ಗೊತ್ತು! ತರವಲ್ಲ ಬಿಡು,ತರವಲ್ಲ ಬಿಡು, ಆ ಕಪ್ಪುನಿಶೆಯಲಿಏನುಂಟು ಚೆಲುವು?ಬಿತ್ತಿದ್ದ ಬೆಳೆಯುವಇಳೆಗೆ ಮಿಗಿಲು?? ******************************************

“ಅಂತರ್ಬಹಿರಂಗ”

ಕವಿತೆ “ಅಂತರ್ಬಹಿರಂಗ“ ಉದಯ ಧರ್ಮಸ್ಥಳ ನಿದ್ದೆಯ ಮುಂಜಾವಿನಲ್ಲಿಮುಂಜಾವಿನ ನಿದ್ದೆಯಲ್ಲಿಮಂಪರು ಭಾವಗಳೊಂದಷ್ಟುಮತಿಯ ತೋಪಿನಲ್ಲಿಗತಿ ಲಯದ ಸಾಲು ತುರುಕಿದ ಕಾಡತೂಸುಗಳಂತೆಶಬ್ದಗಳಲ್ಲದೆಮೌನ ಅಕ್ಷರದುಂಡೆಗಳು ! ಎತ್ತೆತ್ತಲೋ ಎಸೆದೆರಗುವಂತಾಗಿಧಮಿಲ್ ಧಮಿಲ್ ಧಮಿಲ್ಹೊರಗುಗುಳುವಾಗಹಿಡಿದುದಾಖಲಾಗಿಸುವಾಗಅರೆಬಿರಿದ ಕಣ್ಣೆಡೆಯಿಂದದೃಷ್ಟಿ ಕಾಣುವ ಪಂಕ್ತಿ ಪದಅದೇನೋ ಅಪರೂಪದಆಗೀಗ ಬರುವ ಅತಿಥಿಯಂತೆನಕ್ಕಣರಳಿಸಿ ಬೀಸಿದ ಓರೆನೋಟ ! ಧಿಂಗಣ‌ ಕುಣಿದ ರಂಗದಂಗಳದವೇಶಗಳಾಗಿ ಬಣ್ಣಬಣ್ಣ ಕಟ್ಟಿದೊಗಲೆ ದೊಗಲೆಯೊಳಗೆಅಂಡು ಬಿಗಿದ ಹಳೆಬಟ್ಟೆಯ ಹಿಂಡುಮೇಲೆ ಮಿರಮಿರನೆ ಝಗಮಗಿಸುವರಾಜನುಡುವ ರಂಗುರಂಗಿನ ಪೋಷಾಕಿನೊಳಗಿಂದಜೀವ ಲಕಲಕ ಲಕಾ ಭಾಷೆಯುಚ್ಛಾರ ! ಅದೇನೋ ಮೊರದಗಲತಡ್ಪೆ ಕಿರೀಟದ ಬಣ್ಣದ ವೇಶಅರಚಿ ಅರಚಿ ಬೆದರಿಸಿಅರ್ಥವಾಗದಿದ್ದರೂಅರ್ಥ ಮಾತಾಡುವಂತೆ ಕಂಡರೆಅದು […]

ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ

ಕವಿತೆ ದಿಕ್ಕಿಲ್ಲದ ಹಕ್ಕಿಯ ಮುಂದೆ ಹಿಂದೆ ಪ್ರೇಮಶೇಖರ ಹೀಗೇಎತ್ತಲಿಂದಲೋ ಹಾರುತ್ತಾಇತ್ತ ಬಂದ ಗುರುತಿಲ್ಲದ ಹಕ್ಕಿ,ಇಲ್ಲೇ ಕೂತಿದೆ ಬೆಳಗಿನಿಂದಲೂ. ಲಲಿತೆ ಕಾಳು ಹಾಕಿದ್ದಾಳೆ,ಪುಟ್ಟಿ ನೀರಿಟ್ಟಿದ್ದಾಳೆ,ನಾನು ಕೋಲು ಹಿಡಿದುಪುಸ್ಸಿಯನ್ನು ಕಾಯುತ್ತಿದ್ದೇನೆ. ಪುಟ್ಟ ಹಕ್ಕಿಕಾಳು ತಿನ್ನುತ್ತಿಲ್ಲ,ನೀರು ಕುಡಿಯುತ್ತಿಲ್ಲ,ಬಾಯಿ ತೆರೆದು ಕೂಗುತ್ತಲೂ ಇಲ್ಲ. ಅಕ್ಕಪಕ್ಕದ ಮನೆಯವರು ಬಂದರು,ತಲೆಗೊಂದು ಮಾತು ಅಂದರು-ಅದು ಹಾರಿಬಂದ ದಿಕ್ಕುನೋಡಿದಿರಾ? ಮನೆಯೊಳಗೆ ನುಗ್ಗಿದಗಳಿಗೆ ಗಮನಿಸಿದಿರಾ? ಲಲಿತೆ ಅವರಿಗೆಲ್ಲ ಚಹ ಮಾಡುತ್ತಿದ್ದಾಳೆ,ಪುಟ್ಟಿ ವಾಷ್‍ಬೇಸಿನ್ ತೋರಿಸುತ್ತಿದ್ದಾಳೆ,ಪುಟ್ಟಹಕ್ಕಿ ಸುಮ್ಮನೆ ನೋಡುತ್ತಿದೆ,ನನ್ನ ಕೈಯಲ್ಲಿನ್ನೂ ಕೋಲು ಆಡುತ್ತಿದೆ.ಅವರು ಚಹಾ ಜತೆ ಹಕ್ಕಿಯನ್ನು ನೆಂಜಿಕೊಳ್ಳುತ್ತಿದ್ದಾರೆ. ಕಿವಿಚಿದರೆ ಕೂಸಿಗಾದರೂಒಂದೊತ್ತಿನ ಪಲ್ಯವೂ […]

ವಿರಾಗಿ ತ್ಯಾಗಿ

ಕವಿತೆ ವಿರಾಗಿ ತ್ಯಾಗಿ ಡಾಲಿ ಕೊಡನವಳ್ಳಿ ಚಕ್ರವರ್ತಿ ಭರತ…ನಿನಗಿಂತವಿರಾಗಿ ತ್ಯಾಗಿ ಬಾಹುಬಲಿಗೆಈ ಕನ್ನಡ ನೆಲ ತಲೆಬಾಗಿತಲೆ ಎತ್ತಿ ನೋಡಿದರೂ ನಿಲುಕದ ಪ್ರತಿಮೆಯನ್ನೇಕಡೆದು ನಿಲ್ಲಿಸಿದ್ದು ಯುದ್ದ ಗೆದ್ದು ಸೋತವನಏನಿಲ್ಲವೆಂದು ಹೊರಟವನಕೈಬೀಸಿ ಕರೆದುಗಿರಿನೆತ್ತಿಯ ಮೇಲಿರಿಸಿಮಸ್ತಕಕೆ ಬೆಳ್ಮುಗಿಲ ಮುಕುಟವಿರಿಸಿತಾರೆಗಳ ನೇವಣಿಯನೇರಿಸಿಅಂಬರಕೆ ಚುಂಬಿಸಿದವನನ್ನೇಕರುನಾಡುದೊರೆಯಾಗಿ ಸ್ವೀಕರಿಸಿತು ಮುರಿದು ಬೀಳುವ ಮಹಲಿನಹಂಗು ತೊರೆದವಗೆಗಿರಿಶಿಖರಗಳೇ ಕಂಬವಾಗಿಮೋಡಗಳೇ ಮೇಲ್ಛಾವಣಿಯಾಗಿನಾಡ ಗರ್ಭಗುಡಿಯಲ್ಲಿಸದ್ಗತಿ ಸಂದವನಪ್ರಾಪಂಚಿಕ ಸುಖ ಗೆದ್ದವನಪ್ರಕೃತಿಯ ಕಣಕಣವೂಪಾಲಿಸಿತಿಲ್ಲಿ ಬೆಳಗುಳ ನಂದನಪ್ರತಿದಿನ ನಿನ್ನದೇಪ್ರತೀಕ್ಷೆ ಪೃಥ್ವಿಗೆ.ಎಳೆಸಂತೆ ಕಂಗೊಳಿಸುವ ನಿನ್ನೀನವಿರು ಭಾವ ಹೊತ್ತ ಕುಸುಮ.ಗಂಧವತಿ ವಸುಧೆಯ ಗಂಧ ಘಮಹೊನ್ನ ಹಣತೆಯಲಿಜ್ಯೊತಿ ಬೆಳಗುವ ಶಶಿ ಸೂರ್ಯಆದಿ […]

ಸ್ವಾತಿಮುತ್ತು

ಕವಿತೆ ಸ್ವಾತಿಮುತ್ತು ಅಕ್ಷತಾ ಜಗದೀಶ. ಎನಿತು ಸುಂದರ ನೋಡುತಿಳಿನೀಲ ಮುಗಿಲು….ಮುತ್ತು ನೀಡುವಂತಿದೆಬಾನಂಚಿನ ಕಡಲು.. ಕಡಲಿಗು‌ ಮುಗಿಲಿಗುಇದೆಂತಹ ಬಂಧ..ಅರಿಯಲಾರದಂತಹಅಂತರಂಗದ ಅನುಬಂಧ.. ಕಾಲಗಳು ಉರುಳಿದರುಯುಗಗಳೇ ಕಳೆದರುಕಾಣುವುದು ತಿಳಿನೀಲಿ ಬಿಂಬಮಾಸಿಹೋಗದ ಆ ಪ್ರತಿಬಿಂಬ.. ಭಾವದೊಳಗೆ ಸನಿಹ ಕಡಲುವಾಸ್ತವದೊಳು ದೂರ ‌ಮುಗಿಲುಸತ್ಯದ ಒಳಗಿನ ಮಿಥ್ಯ..ನೆನಪಿಸುತಿದೆ‌ ಅಲೆಗಳು‌ ನಿತ್ಯ.. ಬಾನಿಂದ ಜಾರಿದೆ ಮಳೆ ಹನಿಕೇಳುತಿದೆ ಮರಳಿ ಕಡಲ ದನಿಮತ್ತೆ ಪ್ರೀತಿ ಮೂಡುವ ಹೊತ್ತುಕಡಲಾಳದಲಿ ಎಲ್ಲೆಲ್ಲೂ ‌ಸ್ವಾತಿಮುತ್ತು…. ****************************

ಹರಿದ ಬಟ್ಟೆ….

ಹರಿದ ಬಟ್ಟೆ…. ಸುಜಾತ ಕಂದ್ರವಳ್ಳಿ ನನ್ನದು ಅರ್ಧಂಬರ್ಧ ಹರಿದ ಬಟ್ಟೆಆಧುನಿಕತೆಯನ್ನು ವೈಭವೀಕರಿಸಲೆಂದೇಹರಿದುಕೊಂಡ ಬಟ್ಟೆ….!ಹರಕಲು ಬಟ್ಟೆ ಎನ್ನಲಾರೆ….!ಆದರೂ ಹರಿದ ಬಟ್ಟೆ….! ಆಧುನಿಕತೆಯನ್ನು ತೋರಿಸುವ ಭರದಲ್ಲಿ, ಸಾಂಪ್ರಾದಾಯಿಕತೆಯನ್ನು ಮುಚ್ಚಿಡಲೆಂದೇ ಹರಿದುಕೊಂಡ ಬಟ್ಟೆ……!ಅರ್ಧ ಹೊಟ್ಟೆಗೆ ತಾಗುವಂತ ಹಸಿದ ಬಟ್ಟೆ…ಅಂಬಲಿ ಊಟ ನನ್ನದಲ್ಲವೇ ಅಲ್ಲ…!ಮಾಲ್ಟ್ ಎಂದು ಹೆಸರು ಬದಲಿಸಿಕೊಂಡು ಮೆರೆವ ಹರಿದ ಬಟ್ಟೆ.ನನ್ನದು ಅರ್ಧಂಬರ್ಧ ಹರಿದ ಬಟ್ಟೆ. ಅಮ್ಮನ ಹಳೆ ಸೀರೆಗೆ ಹೊಸ ಮೆರುಗು ಕೊಟ್ಟ ಬಟ್ಟೆ,ಅಪ್ಪನ ಲುಂಗಿಗೆ ಅಲಂಕಾರ ಕೊಟ್ಟ ಬಟ್ಟೆ…,ಲುಂಗಿಯನ್ನೆ ಅಂಗಿಯಾಗಿಸಿದ ಬಟ್ಟೆ…ಸೀರೆಯನ್ನೆ ಹೊದಿಕೆಯಾಗಿ ಸಿಂಗರಿಸಿಕೊಂಡ ಬಟ್ಟೆ,ಆದರೇನಂತೆ ನಾ ಹರಕಲು […]

ಕಾವ್ಯಯಾನ

ಬತ್ತಿದೆದೆ ರೇಷ್ಮಾ ಕಂದಕೂರ ಬತ್ತಿದೆದೆಯಲಿ ಬಿತ್ತದಿರು ಕನಸುಸುತ್ತಲೆಲ್ಲ ಕವಿದ ಕತ್ತಲೆಮುತ್ತಿದೆ ಭರವಸೆಯ ಬೆಳಕನುಕುತ್ತಾಗಿದೆ ಕಿತ್ತು ತಿನ್ನುವ ಹುಳುವಿನಂತೆ ಸತ್ಯದ ಹೊನಲಿಗೂ ಸಂಚಕಾರಮಿತ್ಯದ ಝೇಂಕಾರದ ಸಲಿಗೆಅಪತ್ಯದ ನಡೆ ನುಡಿಯುವವರೆ ಹೆಚ್ಚುನಿತ್ಯ ನೇಮವು ದೂರ ತೀರದಲಿ ತೇಲಿ ಕೋಪ ತಾಪದ ಆರ್ಭಟಕೂಪದಲಿ ಸೇರಿದೆ ಮಾನವೀಯತೆಊಹಾಪೋಹದ ಸುಳಿಗೆವಾಸ್ತವವ ಮರೆ ಮಾಚಿದೆ.

Back To Top