Category: ಕಾವ್ಯಯಾನ

ಕಾವ್ಯಯಾನ

ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ

ಕವಿತೆ ಬಾಪೂ ಜೊತೆ ಇಂದು ಇಳಿ ಮದ್ಯಾಹ್ನ ಪ್ರಜ್ಞಾ ಮತ್ತಿಹಳ್ಳಿ ಬಾ ಬಾಪೂ ಇಲ್ಲೇ ಕೂಡುಇಕ್ಕಟ್ಟಾದರೂ ಅಂಗಳಕ್ಕಿಳಿಯಲುವೈರಾಣು ಭಯಗುಂಡು ಕನ್ನಡಕವನುಅರ್ಧ ಮುಚ್ಚಿದರೂಮಾಸ್ಕ್ ತೆಗೆಯಬೇಡಬೆಳಿಗ್ಗೆಯೇ ನಿನ್ನ ಪಟಕ್ಕೆ ಹೂಹಾರ ಮಂಗಳಾರತಿಸಾಮೂಹಿಕ ಭಜನೆ ರಘುಪತಿಮುಗಿಸಿ ಬಂದ ಮೇಲೆಯೇ ನಾಷ್ಟಾ ತಿಂದೆಆದರೀ ಸಲಏನೋ ಕಲಮಲ ಕಳೆದ ವಾರ ನಿನ್ನ ಆತ್ಮಕತೆ ಓದಿಎಲ್ಲರ ನೋವನು ಬಲ್ಲವನೊಬ್ಬನಹುಡುಕುತ್ತ ಹೊರಟಿದ್ದೆನಡುರಾತ್ರಿ ಕಂದೀಲು ಹಚ್ಚಿದದೋಣಿಗಳು ತುಯ್ಯುವ ಅಲೆಯಲ್ಲಿನಿಧಾನಕ್ಕೆ ಹೊರಟಿದ್ದವು.ನಿದ್ದೆ ಜಗ್ಗುವ ರೆಪ್ಪೆಗಳ ಅಗಲಿಸುತ್ತಹುಟ್ಟು ಹಾಕುವ ಬೆಸ್ತರು ಎಂದೂಮಲಗದ ಮೀನುಗಳ ಹಂಬಲಿಸುತಿದ್ದರುಕೈ ಮಗ್ಗ ನಂಬಿ ಬಟ್ಟೆ ಕತ್ತರಿಸುವಹೆಂಗಸರು ಕೂಳಿಲ್ಲದೇ […]

ಗಝಲ್

ಗಝಲ್ ಮುತ್ತು ಬಳ್ಳಾ ಕಮತಪುರ ಗಾಂಧಿ ನಾಡಿನಲಿ ಮಾತುಗಳು ಮೌನ ಅರ್ಥ ಕಳೆದುಕೊಂಡಿವೆ |ಗಾಂಧಿ ನಾಡಿನಲಿ ಕನಸುಗಳು ಹೊಸಕಿ ಬಿಸಾಕಿ ಹಾಕಲಾಗುತ್ತಿವೆ || ಬಾಪೂಜಿ ದೇಶದಲಿ ನಾಲಿಗೆ ಹರಿತವಾದರೆ ಕತ್ತರಿಸಲಾಗುತ್ತದೆ |ಇಲ್ಲಿ ಎಲ್ಲವೂ ಭಕ್ತಿಯ ಪರಾಕಾಷ್ಠೆ ಉಧೋಒಪ್ಪಿತ ನಿರ್ಧಾರಗಳಿವೆ || ಮಲಗಿದವರ ಎಬ್ಬಿಸಬಹುದು ಸತ್ತಂತೆ ನಟಿಸುವ ದುರುಳರು ತುಂಬಿದ್ದಾರೆ |ಕಟ್ಟೆ ಪಂಚಾಯತಿ ನ್ಯಾಯ ತೀರ್ಮಾನ ಕಚ್ಚೆ ಹರುಕರೆ ತುಂಬಿಕೊಂಡಿವೆ || ಉಳ್ಳವರ ಕಾಯ್ದೆಗೆ ಹೆಣ್ಣು ಭೋಗ ವಸ್ತು ಆಕೆಯ ರಕ್ತವೇ ಗುಲಾಲು |ರಾತ್ರಿಯೂ ಕೆಲಸಗಳು ನಡೆಯುತ್ತಿವೆ ಸತ್ತ […]

ಅಬಲೆಯ ಹಂಬಲ

ಕವಿತೆ ಅಬಲೆಯ ಹಂಬಲ ಅಶೋಕ ಬಾಬು ಟೇಕಲ್ ರಾಮನ ನೆಲವಾದರೂ ಅಷ್ಟೇರಹೀಮನ ನೆಲವಾದರೂ ಅಷ್ಟೇಕಾಮುಕನೆಂಬ ಕೆಂಡದಕಣ್ಣುಗಳ ಅಮಲಿಗರಿಗೆಅಬಲೆಯರ ಹಸಿ ಬಿಸಿ ರಕ್ತಹೀರ ಬೇಕಷ್ಟೇ… ಮನಿಶಾ, ಆಸೀಫಾ ಆದರೇನುನಿರ್ಭಯಾ ರಕ್ಷಿತ, ದಿಶಾಆದರೂ ಸರಿಯೇ ಇವರಿಗೆ ನಡು ರಸ್ತೆಯಲಿಹಾಡ ಹಗಲೇ ಹದ್ದು ಮೀರಿದಗೂಳಿಗಳಂತೆ ಬಂದೆರಗಿಹಾಲುಗಲ್ಲ ಹಸುಳೆಯಎದೆಯ ನಾಯಿಯಂತೆನೆಕ್ಕಿ ಬೆತ್ತಲಾಗಿಸಿಕಾಮ ತೃಷೆ ಮುಗಿಸಿಕಣ್ಣಿಲ್ಲದ ಕಾನೂನಿನಸಾಕ್ಷಿಯ ಕಟಕಟೆ ಒಳಗೂಕಥೆ ಹನಿಸಿ ಕಾಂಚಾಣದಬಿಸಿ ಮುಟ್ಟಿಸಿ ಕ್ಷಮಾದಾನದ ಅರ್ಜಿಯಲಿನಿರ್ದೋಷಿ ಪಟ್ಟ..! ಇನ್ನೆಷ್ಟು ದಿನ ಧರ್ಮಮತ ಪಂಥಗಳ ಕಡೆಬೊಟ್ಟು ಮಾಡಿ ಬೀಗುವಿರಿರಾಮ ರಹೀಮ‌ ಜೀಸಸ್ಏನಾದರೂ ಹೇಳಿಯಾರೆಅತ್ಯಾಚಾರ ಎಸಗಿರೆಂದು […]

ಗಝಲ್

ಗಝಲ್ ಪ್ರಭಾವತಿ ಎಸ್ ದೇಸಾಯಿ ಅರಳಿದ ಸುಮ ದೇವರಿಗೆ ಅಪಿ೯ತವಾಗಲಿ ಬಾಡುವ ಮುನ್ನವೀಣೆ ತಂತಿ ಮೀಟಿ ಶ್ರುತಿ ಸರಾಗವಾಗಲಿ ಹಾಡುವ ಮುನ್ನ ಜಗದ ನಿಂದೆ ಅಪಹಾಸ್ಯ ಗಳಿಗೆ ನೊಂದು ಅನುಮಾನಿಸದಿರುಜೀವಿಗಳ ಪ್ರೀತಿ ಬೆಸುಗೆ ಗಟ್ಟಿಯಾಗಲಿ ಕೂಡುವ ಮುನ್ನ ನೆರಳಿರದ ಹಾದಿಯಲಿ ಬದುಕಿನ ಬಂಡಿ ಸಾಗಿದೆ ಅನವರತಬಾಳಿನ ಕಹಿ ನೆನಪ ದಿನಗಳು ಮರೆಯಾಗಲಿ ಕಾಡುವ ಮುನ್ನ ವಿರಹ ದಳ್ಳುರಿಯಲಿ ನಿತ್ಯ ದಹಿಸುತಿವೆ ಪ್ರೇಮಿಗಳ ಉಸಿರುಅನುರಾಗ ಚುಂಬನಕೆ ಹೃದಯ ಹಗುರಾಗಲಿ ಬೇಡುವ ಮುನ್ನ ಕೋಶ ಕೀಟಕೆ ರೆಕ್ಕೆಗಳ ಹಚ್ಚಿ ಕೊಂಡು […]

ನನ್ನಮ್ಮ

ಕವಿತೆ ನನ್ನಮ್ಮ ಶೃತಿ ಎಸ್.ಗೌಡ ನನ್ನಮ್ಮ ಸೀತೆಯಲ್ಲ ಸಾವಿತ್ರಿಯಲ್ಲಕೈ ಹಿಡಿದ ಪತಿಯೊಡನೆವನವಾಸಕ್ಕೂ ಹೋಗಲಿಲ್ಲಅವನಿಗಾಗಿ ಯಮನನ್ನು ಅಡ್ಡಗಟ್ಟಲಿಲ್ಲ ಇದ್ದಲ್ಲಿಯೇ ವನವಾಸ ಮಾಡಿದವಳು ಕುಡಿದ ಮತ್ತಿನಲ್ಲಿ ನಡೆಯಲಾರದೆ ಎಡವಿ ಬಿದ್ದ ಅಪ್ಪನಿಗೆ ತನ್ನ ಹೆಗಲನ್ನು ಆಸರೆಯಾಗಿ ನೀಡಿದವಳು ನನ್ನಮ್ಮ ಆಸರೆ ಬಯಸಲಿಲ್ಲಸಂಸಾರದ ನೊಗ ಹೊತ್ತುನಮಗಾಸರೆಯಾದವಳುತಾನು ನಿಂತು ನಮ್ಮ ನಡೆಸಿತಾನು ಹಸಿದು ನಮಗುಣಿಸಿತನ್ನ ಕಣ್ಣುಗಳಲ್ಲಿಅವಳ ಕನಸುಗಳ ಕಂಡವಳುಸಂಸಾರದ ಹಾದಿಯಲ್ಲಿ ನಿಲ್ಲದೆ ನಡೆದವಳು ನನ್ನಮ್ಮ ಹೆಚ್ಚು ಕಲಿಯಲಿಲ್ಲಗುಡಿಗಳ ಗುಂಡಾರವ ಸುತ್ತಲಿಲ್ಲಸ್ವರ್ಗ ನರಕಗಳ ಕಲ್ಪನೆಯೂ ಅವಳಿಗಿಲ್ಲ ಇರುವಷ್ಟು ದಿನಬಾಳ ಕುಲುಮೆಯಲಿ ಬೆಂದವಳು ಕುಡಿತಕ್ಕೆ ಶರಣಾಗಿ […]

ತಲೆದಿಂಬಿನೊಳಗೆ ಅವಿತ ನಾ

ಕವಿತೆ ತಲೆದಿಂಬಿನೊಳಗೆ ಅವಿತ ನಾ ಡಾ. ರೇಣುಕಾ ಅರುಣ ಕಠಾರಿ ಈಗೀಗ ಸಾಕ್ಷಿಯ ಪ್ರಜ್ಞೆ ಮರೆತ ನಾಸದ್ದಿಲ್ಲದೆ ತಲೆದಿಂಬಿನೊಳಗಿನಿಂದಎದ್ದು ಎದ್ದು ಬರುವ ಕನಸಗಳಿಗೆ ಉತ್ತರ ಕೊಡಬೇಕಿದೆಪ್ರತಿ ಪ್ರಶ್ನೆಗೂ ಅದೇ ಉತ್ತರವೆಂದು ಹೇಳಿದಾಗಲೂ.ಮತ್ತೆ ಅಂತರಾತ್ಮದ ಹೊನಲು ಕೇಕೆ ಹಾಕುತ್ತದೆ. ಕಾಡುವ ಕನಸುಗಳು ಘಳಿಗೆಗೆ ಒಮ್ಮೆನೆನಪಿನ ನೀರುಣಿಸಿ ಈಗೀಗ ಸಾಕುತ್ತಿದ್ದೇನೆ.ಹರಿದು ಬರುವ ನೀರಿಗೆ ಆಣೆಕಟ್ಟು ಕಟ್ಟಿದಂತೆ,ನದಿಯನ್ನು ದಾಟಲು ಸೇತುವೆಯಂತೆ,ಕ್ಷಣಕ್ಷಣವೂ ಉಸಿರು ನುಂಗಿ, ಜೀವಿಸಿ.ಮೊಳಕೆ ಒಡೆದ ಸಸಿಯಂತೆ, ಹೂವು ಅರಳಿಸುವಂತೆಮತ್ತೆ ನನಗೆ ನಾನೇ ಸಾಕ್ಷಿ ರೂಪವಾಗಿ ಬದುಕುತ್ತಿದ್ದೇನೆ ಕನಸಿಗಾಗಿ. ಜೊತೆಯಾಗಿ ಬರುತ್ತೇನೆ,ಉಸಿರಿಗೆ […]

ಮರ್ದಿನಿ ಆಗಲಿಲ್ಲ

ಕವಿತೆ ಮರ್ದಿನಿ ಆಗಲಿಲ್ಲ ಡಾ.ಶಿವಕುಮಾರ್ ಮಾಲಿಪಾಟೀಲ ನಾಲ್ಕಾರು ಜನರು ಅತ್ಯಾಚಾರಕ್ಕೆ ಮುಂದಾದಾಗಮನಿಷಾ,ಮಹಿಷಾಸುರ ಮರ್ದಿನಿ ಆಗಲಿಲ್ಲ ನಿನ್ನ ಗರ್ಭದಲ್ಲಿ ಹುಟ್ಟಿದರೂನಿನ್ನನ್ನು ಗರ್ಭಗುಡಿಗೆ ನಿಷೇಧಿಸಿದಾಗ ಹೆಣ್ಣುಕಾಳಿಯಾಗಲಿಲ್ಲ ವರದಕ್ಷಿಣೆಗಾಗಿ ಅವಮಾನಿಸಿಹಿಂಸೆ ಕೊಟ್ಟುಕೊಲೆ ಮಾಡುವಾಗ ಹೆಣ್ಣುದುರ್ಗೆ ಆಗಲಿಲ್ಲ ಹೆಣ್ಣು ಬೇಡವೆಂದುಭ್ರೂಣವನ್ನು ಗರ್ಭದಲ್ಲೇಕತ್ತರಿಸಲು ಬಂದಾಗ ಹೆಣ್ಣು ಚಾಮುಂಡಿ ಆಗಲಿಲ್ಲ ಮಹಾ ಗ್ರಂಥಗಳಲ್ಲಿ ಮರುಳಾಗಿಕಲೆ ,ಶಿಲೆಗಳಲ್ಲಿ ಗೊಂಬೆಯಾಗಿಗುಡಿ ಗುಂಡಾರದಲ್ಲಿ ಕುಂಕುಮ ಭಂಡಾರವಾಗಿ ಹೆಸರಿಗೆಅರ್ಧ ನಾರೇಶ್ವರಿ…ಆಗಿದ್ದು ಮಾತ್ರ ದೇವದಾಸಿ. ಕಾಡು ಮೇಡುಗಳಲ್ಲಿಚೆಲ್ಲಿದ ಹೆಣ್ಣಿನ ರಕ್ತದ ಕಲೆಗಳನ್ನು ನೋಡಿಭೂ ತಾಯಿ ಬಿರುಕೊಡೆಯಲಿಲ್ಲಗಂಗೆ,ತುಂಗೆ,ಕಾವೇರಿ,ಗೋದಾವರಿ ಎಲ್ಲಾ ಹೆಣ್ಣುಹೆಸರಿನ ನದಿಗಳು ಬರಿದಾಗಲಿಲ್ಲ ಸಾಕ್ಷಿಗಳಿದ್ದರೂಅಪರಾಧಿಗಳಿಗೆ […]

ಮನಿಷಾ

ಕವಿತೆ ಮನಿಷಾ ವೀಣಾ ನಿರಂಜನ್ ಮೊದಲೇ ಕುರುಡಿಯಾಗಿದ್ದನ್ಯಾಯ ದೇವತೆಯಮೂಗಿಯನ್ನಾಗಿಸಿದರು ಮಗಳೇನಿನ್ನ ನಾಲಿಗೆ ಕತ್ತರಿಸಿಅವರ ಗಂಡಸುತನಕ್ಕೆ ಧಿಕ್ಕಾರವಿರಲಿ ಅವರ ಬೆಚ್ಚನೆಯ ಮನೆಗಳಲ್ಲಿಬಚ್ಚಿಟ್ಟ ನಿಧಿಯಂತೆ ನೀನೂ ಕೂಡಅರಿತಿದ್ದರೆ ಸಾಕಿತ್ತು ಅವರುಹತ್ತೂ ಕಡೆ ಚಾಚಿದ ವಿಷ ಸರ್ಪಗಳಹೆಡೆ ಮುರಿದು ಕಟ್ಟುತ್ತಿದ್ದರು ಅರಿಯದಾದರೆ ಅವರುನಿನ್ನೊಳಗಿನ ಕುಡಿಯನ್ನುಹೊರಲಾರದಷ್ಟು ಪಾಪದಮೂಟೆ ಹೊತ್ತು ನಡೆದರುಸಾವೂ ಕೂಡ ಸಹಜವಾಗಿಸುಳಿಯಲಾರದಿನ್ನು ಅವರ ಬಳಿ ಇಲ್ಲಿ ವಿಲ ವಿಲ ಒದ್ದಾಡುತ್ತಿದ್ದಾಳೆನ್ಯಾಯ ದೇವತೆನಿನ್ನ ನೆತ್ತರ ಬಿಸಿಯ ಸೋಕಿಉರಿಯುತ್ತಿದ್ದಾಳೆ ನಖಶಿಖಾಂತಸತ್ಯದ ನಾಲಿಗೆಯು ನೇತಾಡುತ್ತಿದೆನಿನ್ನ ನಾಲಿಗೆಯ ಹಾಗೇ ತೀರ್ಪು ಏನಾದರೇನು ಮಗಳೇನಿನ್ನ ಜೀವಕ್ಕೆ ಬೆಲೆ ಕಟ್ಟಲಾದಿತೇಬೇಡ […]

ಹೊತ್ತು ಬಂದಿದೆ

ಕವಿತೆ ಹೊತ್ತು ಬಂದಿದೆ ಗಾಂಧಿ ನೀನುದಿಸಿದನಾಡಿನಲೀ… ತೊನೆವ ತರುಗಳಕತ್ತು ಹಿಚುಕಿಜಲದ ಕಣ್ಣಿಗಿರಿವ ಹೊತ್ತು ಬಂದಿದೆ ಹರಿವರಿವ ನದಿಯದಿಕ್ಕು ದಿವಾಳಿಯಾಗಿಸಿಬರಿದಾಗಿಸುವ ಹೊತ್ತು ಬಂದಿದೆ ಖಗ ಮೃಗ ಹುಳ ಹುಪ್ಪಟೆಗಳನ್ನು ಬಿಡದೇ ಹುರಿದುರಿದು ಮುಕ್ಕುವ ಹೊತ್ತು ಬಂದಿದೆ ಸಾವಿರಾರು ವರುಷಗಳ ತಪೋನಿರತ ಶಿಲಾತಪಸಿಗಳಎದೆಗೆ ಮದ್ದಿಕ್ಕುವ ಹೊತ್ತು ಬಂದಿದೆ ಕಿವಿಗಡಚಿಕ್ಕುವಬೈರಿಗೆಗಳನ್ನಿಕ್ಕಿನೆಲದೊಡಲ ರಕ್ತ ಬಸಿವ ಹೊತ್ತು ಬಂದಿದೆ ಹೊತ್ತಿಗೊತ್ತಿಗೆ ಉರಿವ ದಿನಕರನ ಸಖ ಓಜೋನನ ಛಿದ್ರವಾಗಿಸುವ ಹೊತ್ತು ಬಂದಿದೆ ಚಂದಿರನ ಅಂಗಳದಲ್ಲಿಳಿವಮಂಗಳನ ಕೇರಿಯಲ್ಲಿಸುತ್ತುವ ಹೊತ್ತು ಬಂದರೂ… ವಿಜ್ಞಾನ ಜ್ಞಾನವೋ,ಅಜ್ಞಾನವೋ ಮಂಕುಗವಿದ ಬುದ್ದಿಗೆ ಲದ್ದಿ […]

ಫಿವಟ್ ಕವಿತೆ…

ಕವಿತೆ ಫಿವಟ್ ಕವಿತೆ…. ಹುಳಿಯಾರ್ ಷಬ್ಬೀರ್ 01 ಬರೆಯಲೆಂದುಕುಳಿತಾಗಅವಳನ್ನು ಬರೆದೆನನ್ನನ್ನು ನಾನೇಮರೆತೆ….! 02 ಕಣ್ಣಲ್ಲಿ ಕದ್ದುಮನಸ್ಸಲ್ಲಿಇಳಿಯುವ ಮುನ್ನಗಂಟಲಿಗೆಇಳಿಸಿದ್ದೆನೀ ಕೊಟ್ಟದೊಡ್ಡ ವರ…! 03 ಗುಂಡು ಅವಳುಇಬ್ಬರೂ ನಶೆಯೇಗುಂಡು ತಾತ್ಕಾಲಿಕ ನಶೆಅವಳು ನಶೆಯಪರಾಕಾಷ್ಠೆ….! 04 ಮನಸ್ಸಿಗೆನೈವೇದ್ಯ ಎಣ್ಣೆಯಲ್ಲಿಆಗಬೇಕಂತೆನೋವುನಿರಾಳವಾಗಲುಲೋಟ ಚಿಯರ್ಸ್ಎನ್ನಲು…! 05 ಕುಡಿದಷ್ಟುಮಾತು ಜಾಸ್ತಿ ಆಯಿತುಪದೇ ಪದೇಅವಳ ನೆನಪುಆಯಿತು…! **************************

Back To Top