Category: ಕಾವ್ಯಯಾನ

ಕಾವ್ಯಯಾನ

ಕಾವ್ಯ ಯಾನ

ಆ ಕರಾಳ ಇರುಳು ಮಧು ವಸ್ತ್ರದ್ ನಾವು ಮುಂಬಯಿ ಮಾಯಾ ನಗರದ ದಿಟ್ಟನಿವಾಸಿಗಳು.. ಮರೆಯೆವು ಎಂದೂ 26-11ರ ಆ ಕರಾಳ ಇರುಳು.. ಉತ್ಸಾಹದ ಕೆಲಸದೊತ್ತಡದ ಗಜಿಬಿಜಿಯ ದಿನಗಳು.. ಅರಿವಿಲ್ಲದೆ ಬಲಿಯಾದರು ತಪ್ಪನೆಸಗದ ಮುಗ್ಧಜನಗಳು.. ಶತ್ರುಗಳು ನುಗ್ಗಿದರು ಮೋಸದಿ ಸಮುದ್ರಮಾರ್ಗದೊಳು.. ಯಾರಿಗೂ ಕಾಣಲಿಲ್ಲ ಆ ನೀಚ ಕಪಟಿಗಳ ನೆರಳು.. ಅಕಸ್ಮಾತ್ತಾಗಿಎರಗಿದ ಭೀಕರ ಗುಂಡು ಸಿಡಿಮದ್ದುಗಳು.. ಜೀವತೆತ್ತರನೇಕ ಕಾರ್ಯನಿರತ ಪೋಲಿಸ್ ಕರ್ಮಚಾರಿಗಳು.. ಸೋತುಬಳಲಿದವುಮುಂಬೈನ ಎತ್ತರದ ಕಟ್ಟಡಗಳು.. ಮೌನವಾದವು ಫುಟ್ ಪಾತ್ ಗಳು..ಖಾವುಗಲ್ಲಿಗಳು.. ಹೋಟೆಲ್ ತಾಜ್ಒಳಾಂಗಣದಿ ಪೋಲಿಸರ ಕಸರತ್ತು ಗಳು ಮೂರುದಿನಗಳವರೆಗೆ […]

ಮಕ್ಕಳ ಪದ್ಯ

ಪಟ್ ಪಟೆಕಾಯಿ ಚಟ್ ಪಟ ಎಂದು! ವಿಜಯಶ್ರೀ ಹಾಲಾಡಿ ಪಟ್ ಪಟೆಕಾಯಿ ಚಟ್ ಪಟ ಎಂದು ಹಾಡು ಕಟ್ತಿತ್ತು ಮೆತ್ತನೆ ಹೆಜ್ಜೆಯ ಬೆಳ್ಳಿ ಬೆಕ್ಕು ಕದ್ದು ಕೇಳ್ತಿತ್ತು ಪಟ್ ಪಟೆಕಾಯಿ ಚಟ್ ಪಟ ಎಂದು ನಕ್ಕು ಉರುಳಿತ್ತು ಮುಳ್ಳಿನ ಮರೆಯ ಓತಿಕ್ಯಾತವು ಫೋಟೋ ಹಿಡಿದಿತ್ತು ಪಟ್ ಪಟೆಕಾಯಿ ಚಟ್ ಪಟ ಎಂದು ಅಳುತಾ ಕೂತಿತ್ತು ಓಡುತ ಬಂದ ಇರುವೆಯಣ್ಣ ಗಲ್ಲ ಸವರಿತ್ತು ಪಟ್ ಪಟೆಕಾಯಿ ಚಟ್ ಪಟ ಎಂದು ಗೊರಕೆ ಹೊಡೆದಿತ್ತು ನಿದ್ದೆ ಬಾರದೆ ಬಾಲವ ಸುತ್ತಿ […]

ಕಾವ್ಯಯಾನ

ಮನದಾಳದ ಬಯಕೆ ರತ್ನಾ ಬಡವನಹಳ್ಳಿ ಸದ್ದಿಲ್ಲದೆ ಸರಿದ ಸುಂದರ ದಿನಗಳು ಸುದ್ದಿ ಮಾಡಿದ್ದರಿಯದಿಹ ವಾರಗಳು ತಂಗಳೆನಿಸದ ತಿಳಿನೀರಂತಹ ತಿಂಗಳುಗಳು ಹರುಷದ ಸವಿ ಸಿಂಚನಗೈದ ವರುಷಗಳು ಮೆಲುಕು ಹಾಕಲು ಕಾಯಬಹುದು ನಾ ಮುಂದೊಂದು ದಿನ ಬುದ್ದಿಯಗರ್ಭದಲಿ ಮೊಳಕೆಯೊಡೆದು ಮನಸು ಅಂಬೆಗಾಲಿಟ್ಟ ಅಕ್ಷರಗಳಲಿರದೆ ಮುನಿಸು ಪದಗಳಾಗಿ ಹೆಣೆದ ಬಾಡದಿಹ ಹಾರ ಸೊಗಸು ಕನ್ನಡಾಂಬೆಯ ಕೊರಳಲಂಕರಿಸಿ ಮೆರೆವ ಕನಸು ನಂಬಿಕೆಯ ನೆರಳಲಿ ನನಸಾಗಬಹುದು ಮುಂದೊಂದು ದಿನ ಕಿಚ್ಚಾವರಿಸದ ಹಚ್ಚ ಹಸಿರು ಕಾನನ ಸ್ವಚ್ಛ ಮನಗಳ ನಡುವೆ ಹೂವಾದ ಜೀವನ ಧಾವಂತಗಳಲಿ ನಲುಗದೆ […]

ಕಾವ್ಯಯಾನ

ಸಖಿ ಸತ್ಯಮಂಗಲ ಮಹಾದೇವ ಈ ಬೆಳಗಿನ ಏಕಾಂತ ಅದೇಕೊ ಮುದ ನೀಡಲಿಲ್ಲ ಸಖಿ ನಟ್ಟನಡುರಾತ್ರಿಯ ಕಡುಕತ್ತಲಲ್ಲಿ ನಿನ್ನ ಮೊಗವೊಂದೆ ಸಾಕು ಬೆಳದಿಂಗಳಂತೆ ಯಮುನಾ ತೀರದಲಲೆಯುತ ಒಂಟಿ ನಡಿಗೆಯ ಪ್ರಯಾಣ ಅದೆಷ್ಟು ನೀರಸ ಸಖಿ ಮಧುರ ಮಂಜುಳ ನಾದವೂ ಸಪ್ಪೆ ತೆರೆಯೇರಿ ಬೀಸುವ ತಂಗಾಳಿಯೂ ರುಚಿಯಿಲ್ಲ ಮೈಗೆ ನಿನ್ನ ಹೆಸರೊಂದೇ ಸಾಕು ಅದೆಷ್ಟೋ ದೂರದ ನಿನ್ನ ಸನಿಹದಂತಿರಿಸುವುದು ಪದವನರಿತ ಮನಸ್ಸಿಗೆ ಪರಿಚಯ ಬೇಕೆ ಬಣ್ಣವಾಗುವ ಕನಸುಗಳಿಗೆ ರೆಕ್ಕೆಗಳ ಬಿಡಿಸಿ ಹಾರುವುದ ಕಲಿಸಬೇಕೆ ಸಖಿ ನಿನ್ನ ಉಸಿರ ಜಾಡು ಕಣ್ಣಳತೆಯಲಿ […]

ಗಜಲ್

ಯಾರಿಗೆ ಯಾರು ಸಂಗಾತಿ? ವಿನುತಾ ಹಂಚಿನಮನಿ ಬಾಳಿನ ಬಂಡಿ ಎಳೆಯುವ ಕನಸಿನ ಕುದುರೆಗಳೇ ಯೋಚಿಸಿ ಹೇಳಿ ನಾಲ್ಕು ದಿನದ ಬದುಕಿನಲಿ ಯಾರಿಗೆ ಯಾರು ಸಂಗಾತಿ ಹೇಳಿ ಮರಕೆ ಕೋಮಲ ಲತೆಯೇ ಸಂಗಾತಿ ಹೃದಯಕೆ ಮಧುರ ಭಾವನೆಗಳೆ ಸಂಗಾತಿ ಲತೆಯ ಭಾವನೆ ಮರ ಅರಿಯದಾದರೆ ಹೃದಯದ್ದೇನು ತಪ್ಪು ಹೇಳಿ ಚಂದಿರನಿಗೆ ಹೊಳೆವ ತಾರೆಗಳೆ ಸಂಗಾತಿ ಸುಂದರ ತನುವಿಗೆ ನಿರ್ಮಲ ಮನವೇಸಂಗಾತಿ ನಕತ್ರಗಳಿಲ್ಲದ ಆಗಸದಲ್ಲಿ ಚಂದ್ರ ಏಕಾಂಗಿಯಾದರೆ ನಿಷ್ಟೆಯಿಲ್ಲದ ಮನದ ಮಾಲಿಕ ಕುರೂಪಿಯಲ್ಲವೇ ಹೇಳಿ ಹೂವಿಗೆ ಹಾರುವ ದುಂಬಿಯೇ ಸಂಗಾತಿ […]

ಕಾವ್ಯಯಾನ

ಸಾವಿರದ ಸಾವಿರ ಕವಿತೆ ರವಿ ರಾಯಚೂರಕರ್ ಬಳಲಿ ಬೇಕೆಂದು ಬಿಕ್ಕಳಿಸಿ ಅತ್ತವನು ಎದೆಗಂಟಿ ನುಡಿ ನುಡಿದು ಆಸೆಯ ಗೋಪುರಕೆ ಹೊಸ ಕನಸುಗಳ ತುಂಬಿ ನೆಲಕಳಚಿ ಬಿದ್ದವನು ನೀನಲ್ಲವೇ ಹಸಿದು ಕುಳಿತಾಗ ಕುಟುಕಿ ಕಾಳನಿಟ್ಟು ನಿಟ್ಟುಸುರ ಹೆಜ್ಜೆಯಲಿ ಊರ ತಿರುಗಿದ ಬಿಕ್ಕು ಪ್ರಾಯದ ಪೊರೆ ಹರಿದು ಹದಿಹರೆಯದ ಒಲವನೆರದವನು ನೀನಲ್ಲವೇ ಬರಿ ಅರ್ಥಗಳನೆ ಈ ಮೌನಕೆ ತುಂಬಿ ಹಾಗೆ ತುಳುಕುವ ಸಾವಿರದ ಸಾವಿರ ಕವಿತೆಗಳ ಹಣತೆ ಹಚ್ಚಿ ಬೆಳಗಾಗುವವರೆಗೆ ಉರಿದು,ಸುಟ್ಟು, ಬೂದಿಯಾಗಿ ಈ ಕಣ್ಣ ಕಾಡಿಗೆಯಾದವನು ನೀನಲ್ಲವೇ ಶತಮಾನದ […]

ಕಾವ್ಯಯಾನ

ಗಜಲ್ ಸಿದ್ಧರಾಮ ಹೊನ್ಕಲ್ ಇಂಥವರ ನೆನಪಾದಾಗಲೆಲ್ಲ ನಿಟ್ಟುಸಿರೊಂದು ತಾನೇ ತಾನಾಗಿ ಹೊರಬರುತ್ತದೆ ಸಾಕಿ ಕಂಡಾಗಲೆಲ್ಲ ಗಂಟಲು ಕಟ್ಟಿ ಮಾತೆ ಮಥಿಸಿ ಮೌನ ಹೆಪ್ಪುಗಟ್ಟುತ್ತದೆ ಸಾಕಿ ಯಾರ ತಪ್ಪಿಗೆ ಯಾರ ಆಯುಷ್ಯಕ್ಕೆ ಯಾರು ಹೊಣೆ ಪಾಪ!ವವರು ಸಾಕಿ ಕುಂಕುಮ ಹೂ ಬಳೆ ಕೊನೆಗೆ ನಸು ನಗೆಯು ಮರೀಚಿಕೆಯಾಗುತ್ತದೆ ಸಾಕಿ ಸಂತೆಯೊಳಗೊಂದು ಮನೆಯ ಮಾಡಿ ಸುಮ್ಮನೆ ಶಬ್ದಕ್ಕೂ ಹೆದರಿ ಬಾಳುವದು ಇದೆಯಲ್ಲ ಅದು ಕಡುಕಷ್ಟ ಸಾಕಿ ಹದಿ ಬದೆಯ ಬಯಕೆಗಳ ತುಳಿದು ಹಸಿರುಟ್ಟು ಸಹ ಬರಡು ಮರದಂತೆ ಬದುಕಾಗುತ್ತದೆ ಸಾಕಿ […]

ಕಾವ್ಯಯಾನ

ಗಜಲ್ ದೀಪಾಜಿ ಎದೆಯ ಮೇಲಿನ ಹಚ್ಚೆಗೆ ಅಗ್ಗಿಷ್ಟಿಕೆಯ ಕೆಂಡಹಚ್ಚಿ ಉಜ್ಜಿಕೊಂಡವನಲ್ಲವೇ ನೀನು ಎದೆ ಒಳಗಿನ ಇವಳನ್ನ ತೆಗೆದು ಹಾಕಲೆತ್ನಿಸಿ ಸೋತವನಲ್ಲವೇ ನೀನು ಹಿಡಿದು ತಂದ ಕೆಂಗುಲಾಬಿ ಕೆಳಗಿನ ಮುಳ್ಳ ಎಣಸ ತೊಡಗಿದ್ದ ಕುಸುಮಪ್ರೇಮಿ ಅಂತದೆ ಸುಮದ ಪರಿಮಳಕ್ಕೆ ಸೋತು ಬಿಗಿದಪ್ಪಿದ ದಿನಗಳ ಮರೆತವನಲ್ಲವೆ ನೀನು.. ಅಂಗೈಲಿ ಹಿಡಿದ ಮಧು ಪಾತ್ರೆಯೊಳಗಿನ ಬಿಂಬ ಕಲಕಿತೆಂದು ರೋಧಿಸಿದೆ ಏನು ಮಧುಹೀರಿ ಮಲಗಿದ ನಲ್ಲೆಯ ತುಟಿಗಳನೆ ಕಚ್ಚಿ ಕಡೆಗಣಿಸಿದವನಲ್ಲವೇ ನೀನು ಬಲವಂತಕ್ಕೆ ಪ್ರೀತಿಸಕೂಡದೆಂದು ಪಾಠಮಾಡುತ್ತಿದ್ದೆ ನೋಡು ಮರೆತು ಬಿಡು ಇನ್ನೂ ಜತೆಯಾಗಿ […]

ಕಾವ್ಯಯಾನ

ಗಜಲ್ ಡಾ.ಗೋವಿಂದ ಹೆಗಡೆ ಮದಿರೆಬಟ್ಟಲು ಖಾಲಿಯಾಗಿದ್ದಕ್ಕೆ ಅವಳು ಅಳುತ್ತಿದ್ದಾಳೆಎಲ್ಲಿ ಹೇಗೆ ಯಾವಾಗ ಸೋರಿಹೋಯಿತೆಂದು ಹುಡುಕುತ್ತಿದ್ದಾಳೆ ಜನ್ಮ ಜನ್ಮಾಂತರಕ್ಕೂ ತುಂಬಿರುವುದೆಂದು ಎಣಿಕೆಯಿತ್ತುಇಷ್ಟು ಬೇಗ ಎಲ್ಲ ಖಾಲಿ ಆಗಿದ್ದನ್ನು ನಂಬದಂತಿದ್ದಾಳೆ ಕನಸುಗಣ್ಣುಗಳಲ್ಲಿ ಎಷ್ಟೊಂದು ಸುರೆಯ ಸಂಗ್ರಹವಿತ್ತುಪತ್ತೆಯೇ ಇರದೆ ಸೂರೆಯಾಗಿದ್ದಕ್ಕೆ ತಳಮಳಿಸುತ್ತಿದ್ದಾಳೆ ಮಧುಬಟ್ಟಲಲ್ಲೇ ಐಬಿತ್ತೋ ಅಥವಾ ಮಧುವಿನಲೋಬಟ್ಟಲನೆತ್ತಿ ಹಿಂದೆ-ಮುಂದೆ ತಿರುತಿರುಗಿಸಿ ನೋಡುತ್ತಿದ್ದಾಳೆ ಮರಳೇ ಹಾಗೆ ಕಣಕಣವಾಗಿ ಸುರಿದು ಖಾಲಿಯಾಗುತ್ತದೆಗಡಿಯಾರ ತಿರುಗಿಸಬಹುದು, ಕಾಲವನಲ್ಲ ಮರುಳಿಯಾಗಿದ್ದಾಳೆ ಎದೆಯೊಡೆದ ಹುಚ್ಚಿ ಅವಳನ್ನು ಹೇಗೆ ಸಂತೈಸಲಿ ಸಾಕಿಹೇಗೋ ಒಂದು ಮುಕ್ಕೆರೆದು ಬಿಡು,ಚೇತರಿಸುತ್ತಾಳೆ..

ಕಾವ್ಯಯಾನ

ಸಾವಿನ ಸಾಂಗತ್ಯದಲ್ಲಿ ಮಧುಸೂದನ ಮದ್ದೂರು ಸಾವೆಂಬ ಸೂತಕದ ಹಕ್ಕಿ ರಕ್ಕೆ ಬಿಚ್ಚಿ ಹಾರುತ್ತಿದೆ ಯಾವ ಜೀವಗಳೆಂಬೋ ಹಣ್ಣ ಕಚ್ಚಿ ತಿಂದು ರಕ್ಕೆ ಪಟಪಟಿಸಿ ಗಗನದ ಚಿಕ್ಕೆಯಾಗಲಿದೆಯೋ ಬಲ್ಲವರು ಯಾರು ? ಸಾವೆಂಬ ಮಾಂತ್ರಿಕನ ಮಂತ್ರಬೂದಿಯ ಸೆಳತೆಗೆ ಸಿಲುಕಿ ಮಾಯವಾಗುವ ಮಾಯಕಾರರೆಷ್ಟೋ ಬಲ್ಲವರು ಯಾರು? ಸಾವೆಂಬ ಬುಟ್ಟಿಯಲಿ ಕಣ್ಕಟ್ಟಿನ ಯಕ್ಷಿಣಿಕಾರನ ಯಕ್ಷಿಣಿ ಕೋಲಿನ ಮಂತ್ರಕೆ ಅತಳ ಸುತಳ ಪಾತಾಳ ಸೇರುವವರೆಷ್ಟೋ ಬಲ್ಲವರು ಯಾರು? ಬಡವ-ಬಲ್ಲಿದ ಅಧಿಕಾರಸ್ಥ-ವ್ಯವಹಾರಸ್ಥ ಕಲೆಕಾರ-ಓಲೆಗಾರ ಯಾಂತ್ರಿಕ-ಮಾಂತ್ರಿಕ ವಿಜ್ಞಾನಿ-ಅಜ್ಞಾನಿ ಎಂಬೋ ಬೇಧ ಭಾವ ಎಣಿಸದ ಸಾವೆಂಬೋ ಸಾಹುಕಾರನೆದರು […]

Back To Top