Category: ಕಾವ್ಯಯಾನ

ಕಾವ್ಯಯಾನ

“ಶಾವಾ”ತ್ಮ ಪದಗಳು

ಮನದ ಮಾತು ಶಾಂತಿವಾಸು ಮನಸನ್ನೊಂದು ಮಾತು ಕೇಳು….ಹುಟ್ಟಿನಿಂದ ಕಲಿತು, ಸರಿತಪ್ಪುಗಳನ್ನರಿತು, ಲೋಕಾರೂಢಿಯನುಭವ ಪಡೆದರೇನು? ಕಾರ್ಯಸಿದ್ದಿಗೆ,ಮನಸನ್ನೊಂದು ಮಾತು ಕೇಳು…. ಮನಕ್ಕೊಪ್ಪುವ ಕೆಲಸ ಮಾಡು….ಯಾರೆಷ್ಟು ನಿಂದಿಸಲೇನು? ನಿನ್ನೆತ್ತರವನ್ಹೊಗಳಲೇನು? ತಟಸ್ಥ ಮನಕೆ ಶಕ್ತಿ ತುಂಬಿ ಆತ್ಮತೃಪ್ತಿಯಿಂದ,ಮನಕ್ಕೊಪ್ಪುವ ಕೆಲಸ ಮಾಡು…. ಮನವನೊಮ್ಮೆ ಇಣುಕಿ ನೋಡು….ಎಲ್ಲವೂ ನಿನದಾಗಿ ಕಂಡರೂ, ಬಂದುದು ಕೈತಪ್ಪಿ ಹೋಗಲು ನೆಪವೊಂದಿದೆಯೆಂಬ ಸತ್ಯವರಿತ,ಮನವನೊಮ್ಮೆ ಇಣುಕಿ ನೋಡು…. ಮನಸಿಗೊಂದು ಮಾತು ಹೇಳು…ಜಗದೆಲ್ಲವೂ ನೀನಲ್ಲ, ಜಗದಲ್ಲಿಹುದೆಲ್ಲವೂ ನಿನದಲ್ಲ. ಇರುವರರಿತು, ಬಾಳಲದುವೇ ಬದುಕೆಂದು,ಮನಸಿಗೊಂದು ಮಾತು ಹೇಳು…. *****************************

ಜಿಹ್ವೆ

ಕವಿತೆ ಜಿಹ್ವೆ ಅರುಣ ರಾವ್ ಈ ನಾಲಿಗೆಗೇನು?ಅಂದು ಕೊಂಡದ್ದು ನೋಡಿದ್ದುಊಹಿಸಿಕೊಂಡದ್ದು ಕಲ್ಪಿಸಿಕೊಂಡದ್ದು ನುಡಿದುಬಿಡುತ್ತದೆ ನುಡಿದೇ ಬಿಡುತ್ತದೆತುಸು ತಡೆದರೇನು ನಷ್ಟ? ಎಂದೊಮ್ಮೆಕೇಳಿದರೆ ಸರಸರನೆ ತಿರುಗಿ ಗಿರಗಿರನೆ ಸುತ್ತಿಮೇಲೆ ಕೆಳಗೆ ಹಾರಿ ಉರಿದುರಿದು ಬೀಳುತ್ತದೆ ತಾಳ್ಮೆಯಿಂದಿದ್ದು ಕೊಂಚಯೋಚಿಸಬಾರದೇ ಕ್ಷಣಕಾಲ?ಮನಃಶಾಂತಿಯಾದರೂ ಇರುತಿತ್ತು ಆಗಕೇಳಿದ್ದಷ್ಟೇ ಅಲ್ಲ, ನೋಡಿದ್ದೂ ಸುಳ್ಳಾಗುವ ಕಾಲಇದುವೆ ಎಂದೊಂದರೆಗಳಿಗೆ ನೆನೆಯಬಾರದೆ? ಗಳಿಗೆಗೊಂದರಂತೆ ಮಾತಂತೆ ಕತೆಯಂತೆಅದರಲೊಂದಿಷ್ಟು ಹುರುಳು ಹೂರಣಮತ್ತೆ ಕೆಲವೇನೋ ಕಸ ಕಡ್ಡಿ ಕೊಚ್ಚೆ ಕೂಳೆಕೆಸರೆರೆಚಾಟ ಅರೆಚಾಟ ಅಬ್ಬರಕಲ್ಪನೆಯ ಕೂಸಿನ ಅರೆನಗ್ನ ಕುಣಿದಾಟ ಮುಂದೊಂದು ಹಿಂದೊಂದು ಮತ್ತೊಂದು ಮಗದೊಂದು ಆಗೊಂದು ಈಗೊಂದುನನಗೊಂದು […]

ನಸುಕಿನ ತುಂತುರು

ಕವಿತೆ ನಸುಕಿನ ತುಂತುರು ಸ್ಮಿತಾ ಶ್ಯಾಮ ತುಂತುರು ಹನಿಗಳ ಮುಂಜಾನೆಯ ಮಳೆಸರಿಗಮ ಪದನಿಸ ಹಾಡುತಿದೆಸಪ್ತ ಸ್ವರಗಳ ಸಂಗಮದಲಿ ತೇಲಿದೆಹಸಿರನುಟ್ಟು ಕಂಗೊಳಿಸುತಿಹ ವಸುಧೆ || ಪ|| ಹಕ್ಕಿಗಳಿಂಚರದಿ ಬೆರೆತಿದೆ ಮಳೆಗಾನಹೊಮ್ಮುತಲಿದೆ ಹೊಂಬೆಳಕಿನ ರವಿ ಕಿರಣಪರಿಮಳವನು ಸೂಸುತಲಿವೆ ಹೂಬನಪ್ರಕೃತಿಯ ಸೊಬಗದು ರೋಮಾಂಚನ. ||೧|| ಮುಂಜಾನೆಯ ಮಳೆಯ ಸಿಂಚನತನನ ತನನ ನವಿಲ ನರ್ತನಸಾಗರದ ದಡಕೆ ಅಲೆಯ ಚುಂಬನತಂಪು ಸೂಸುತ ಹಾಯ್ವ ಪವನ. ||೨|| ಸುಪ್ರಭಾತ ಹಾಡುತಲಿದೆ ಪ್ರಾತಃಕಾಲದಿ ವರ್ಷವುಗುಡಿಗೋಪುರಕದುವೆ ನಸುಕಿನ ಅಭಿಷೇಕವುಶುಭ್ರಗೊಂಡಿಹುದು ಮನೆ ಮನೆಯ ಅಂಗಳವುತನುಮನವನು ತುಂಬುತಲಿದೆ ನವೋಲ್ಲಾಸ ಚೇತನವು||೩|| *********************************

ಮುನ್ನಡೆಗೆ ಹಿಂಬಾಗಿ

ಕವಿತೆ ಮುನ್ನಡೆಗೆ ಹಿಂಬಾಗಿ ಹರೀಶ ಕೋಳಗುಂದ ಕಣ್ಣ ಪರದೆಯ ಮೇಲೆ ಓಡುವಬಣ್ಣ ಬಣ್ಣದ ಚಿತ್ರಗಳುಉರುಳುವ ಗಾಲಿಚಕ್ರದ ಪರಿಧಿಯಲಿಸರಿದು ಮರೆಯಾಗುವ ಮೈಲುಗಲ್ಲುಗಳುದೂರ ತೀರದಲ್ಲೆಲ್ಲೋ ಇಳಿಬಿದ್ದು ನೆಲಕಚ್ಚಿದಾಕಾಶಕಾಗಜದೋಣಿಯ ಬಟ್ಟಲಿಗೆ ತೊಟ್ಟಿಕ್ಕುವ ಪಾತಾಳಗಂಗೆಭೂಮಧ್ಯರೇಖೆಗೂ ಭ್ರಮಣದ ನಶೆಇರುಳು ಬೆಳಕಿನಾಟಗೇಲಿ ನಗುವ ಕತ್ತಲುಬೆಂಕಿಯುಗುಳುವ ಮುಗಿಲುತಣ್ಣಗೆ ಸುಡುವ ಹಸಿವ ಜ್ವಾಲೆಕುದಿವ ಮೌನತುಮುಲಗಳ ಅದುಮಿಟ್ಟಂತೆಲ್ಲಾರೆಕ್ಕೆ ಬಡಿವ ತವಕಮಂಜು ಹೊದ್ದು ಮಲಗಿದ ಬೂದಿಯೊಳಗೂಹೆಪ್ಪುಗಟ್ಟಿ ಕುಳಿತ ಅಗ್ನಿಶಿಲ್ಪಜೀವದುಸಿರಿನ ಕಾತರಉರಿವ ಮಂದಾಗ್ನಿಯ ಬುತ್ತಿಗೆ ಕೈಯಿಕ್ಕುವ ತುಡಿತದೊಂದಿಯಾಗದ ಕಟ್ಟಿಗೆಯ ನಿರಾಶಾಭಾವನೋಯುವ ಕರುಳ ಕಣ್ಣ ಹನಿಗೆಚಿಗುರೊಡೆವ ಸಾಂತ್ವನದ ಬೆರಳುಒಂದೋ ಎರಡೋಒಡಕಲು ಬಿಂಬಕ್ಕೆ ಕೈ ಚಾಚಿ […]

ಹೊಸದಾಗುವುದಾದರೆ…!

ಕವಿತೆ ಹೊಸದಾಗುವುದಾದರೆ…! ಅನಿತಾ ಪಿ. ಪೂಜಾರಿ ತಾಕೊಡೆ ಎರಡು ಸಾವಿರದ ಇಪ್ಪತ್ತೊಂದರ ಪುಟಗಳಲಿಏನಾದರೂ ಹೊಸದಾಗುವುದಾದರೆಆ ಹೊಸತಿನೊಳು ಬದಲಾಗುವುದಾದರೆ…! ಸ್ವಾರ್ಥದ ಕಿಚ್ಚಿಳಿದು ಸೌಹಾರ್ದತೆ ಬೆಸೆದುಕ್ರೌರ್ಯವಳಿದು ಮಾನವೀಯತೆ ಮೊಳೆಯಲಿನಾನೆಂಬ ಅಹಂ ಮರೆತು ನಾವು ನಮ್ಮವರೆಂದುಉಳ್ಳವನು ಇಲ್ಲದವನ ಆಂತರ್ಯವನು ತಿಳಿಯಲಿ ಕಾರಣಗಳು ಸಂಬಂಧಗಳ ದೂರೀಕರಿಸದೆ ಸಕಾರಣಗಳು ಒಡೆದ ಮನಸ್ಸುಗಳನು ಕೂಡಿಸಲಿಬುದ್ಧಿಯು ಅತಿಯಾಸೆಯ ಕೈಗೆ ಸಿಲುಕದೆನೆಮ್ಮದಿಯ ಬದುಕಿಗಷ್ಟೆ ಸೀಮಿತವಾಗಿರಲಿ ಬೇಕು ಬೇಡಗಳ ನಡುವೆ ಸ್ವಾರ್ಥದೆಳೆಗಳು ಬಂದು ಅಂತರ ನಿರಂತರವಾಗದಿರಲಿಆಪ್ತ ಪರಮಾಪ್ತತೆಯ ಆಂರ್ತರ್ಯದ ಒಲವುಪದಗಳಲಿ ಹೊಳೆದು ಮಾಸುವ ಬಣ್ಣವಾಗದಿರಲಿ ಈ ವರ್ಷದಲಿ ಹೊಸತು ಹೀಗೂ ಒಂದಿರಲಿವೈರಾಣುವಿನಲ್ಲಿ ವಿನಾಶದ […]

ದಾಟಿದೆವು ನಾವೂ… ಎರಡಿಪ್ಪತ್ತರ ವರುಷ

ದಾಟಿದೆವು ನಾವೂ… ಎರಡಿಪ್ಪತ್ತರ ವರುಷ ಅನಿತಾ ಪಿ. ಪೂಜಾರಿ ತಾಕೊಡೆ ಹಾಗೆಯೇ ಕಳೆದು ಹೋಗಿಲ್ಲ…!ಇದ್ದಲ್ಲಿ ಇರುವ ಹಾಗೆಯೇಇರುವಷ್ಟಕ್ಕೆ ಹೊಂದಿಸಿಕೊಳ್ಳುವ ನೆಲೆಯಲಿಚಿತ್ರ ವಿಚಿತ್ರದೊಳ ಸತ್ಯವನು ಅರುಹಿಜೀವ ಜೀವನದ ಒಳಮರ್ಮವನುಕಲಿಸಿಯೇ ತೀರಿತಲ್ಲಾ ಎರಡಿಪ್ಪತ್ತರ ಈ ವರುಷ ‘ಒಂದು ವರ್ಷದ ಲೆಕ್ಕಬಿಟ್ಟೇ ಬಿಡಬೇಕು’ ಎಂದವರೆಲ್ಲ ಕೇಳಿ…!ಹಾಗೆಯೇ ಕಳೆದು ಹೋಗಿಲ್ಲ ಈ ವರ್ಷಜಗದಗಲ ಗಣ್ಯ ನಗಣ್ಯಗಳ ಚಿತ್ರಪಟಗಳನುತಿರುಗಾ ಮುರುಗಾ ಮಾಡಿಹಿತ ಅಹಿತಗಳ ನಡುವೆ ತೂಗಿಸಿಮುಖ್ಯ ಅಧ್ಯಾಯವನೇ ತೆರೆದಿರಿಸಿತ್ತಲ್ಲಾ…! ಕಾಸು ಮೋಜಿನ ಪರಾಕಾಷ್ಠೆಯಲಿಕಳೆದು ಹೋದವರನೂಅಡ್ದ ದಾರಿಯನಪ್ಪಿಕೊಂಡು ಬೀದಿ ಬೀದಿ ಸುತ್ತುವವರನೂಅತಂತ್ರದ ಸುಳಿಯಲಿಟ್ಟು ಉಪ್ಪು ಖಾರ […]

ಗಜಲ್

ಗಜಲ್ ಅಶೋಕ ಬಾಬು ಟೇಕಲ್. ನೀ ಮಾಡಿದ ಒಲವಿನ ಗಾಯ ಮಾಗಿಸಿತು ಈ ಮಧು ಬಟ್ಟಲುದೂರ ತೊರೆದ ಭಾವಗಳಿಗೆ ವಿದಾಯ ಹೇಳಿಸಿತು ಈ ಮಧು ಬಟ್ಟಲು ಕ್ಷಣ ಕ್ಷಣದ ರೋದನವನ್ನು ಸಂತೈಸಿ ಲಾಲಿಸಿ ಪಾಲಿಸಿದೆಪ್ರತಿ ದಿನವೂ ಮಮತೆಯ ಮಡಿಲಾಗಿ ಆರಾಧಿಸಿತು ಈ ಮಧು ಬಟ್ಟಲು ಬಾಂದಳದಿ ಕೆಂಪ್ಹರಡುವ ರವಿಯೂ ನಾಚಿ ನಿಬ್ಬೆರಗಾಗುತಿದ್ದಇಳಿಸಂಜೆಗೂ ರಮಿಸಿ ಅಭ್ಯಂಜನ ಮಾಡಿಸಿತು ಈ ಮಧು ಬಟ್ಟಲು ಸುಯ್ ಗುಡುವ ಗಾಳಿಯೂ ಸದ್ದಡಗಿ ಪಲ್ಲಂಗದಲಿ ಮಲಗಿದೆನಿನ್ನ ಭಾವ ಭಂಗಿಯ ಕ್ಷಣ ಹೊತ್ತು ಮರೆಸಿತು ಈ […]

ಪಯಣ

ಕವಿತೆ ಪಯಣ ಅಕ್ಷತಾ‌ ಜಗದೀಶ ಕಾನನದ ಒಡಲಾಳದಲ್ಲಿ ಹುಟ್ಟಿಕಲ್ಲು ಮಣ್ಣುಗಳ ದಾಟಿಕೆಂಪಾಗಿ ತಂಪಾಗಿ…ಕೊನೆಗೆ ಎಲ್ಲರೂ ಬಯಸುವಜಲವಾಗಿ ಹರಿದು..ಸಾಗುವ ದಾರಿಯುದ್ದಕ್ಕೂಹೊಲ ಗದ್ದೆಗಳಿಗೆ ನೀರುಣಿಸಿಮನುಕುಲದ ಮನತಣಿಸಿಜಲಧಾರೆಯಾಗಿ ಧುಮುಕಿ..ಅಂಧಕಾರಕ್ಕೆ ಬೆಳಕಾಗಿಜೀವರಾಶಿಗೆ ಉಸಿರಾಗಿಭೂಮಿ ತಾಯಿಯ ಹಸಿರುಡುಗೆಯಾಗಿಹರಿವ ಓ ನದಿಯೇ…ಏನೆಂದು ಹೆಸರಿಸಲಿ ನಾ ನಿನಗೆಗಂಗೆ, ತುಂಗಾ,ಕಾವೇರಿ, ಶರಾವತಿಸ್ವಾರ್ಥವಿಲ್ಲದ ಓ ಜಲರಾಶಿಕೂಡುವಿರಿ ಆಳವಾದ ಸಾಗರಕೆಅಗಾಧ ಜಲರಾಶಿಯ ಮಿಲನಕೆ..ನಿಸ್ವಾರ್ಥದೊಂದಿಗೆ ಓ ತೊರೆಯೆನಿನ್ನ ಜನನ..ಸಾರ್ಥಕತೆಯೊಂದಿಗೆ ಸಾಗಿತುನದಿಯಾಗಿ ನಿನ್ನ ಪಯಣ…

ಜೋಡಿ ಹೃದಯಗಳು

ಕವಿತೆ ಜೋಡಿ ಹೃದಯಗಳು ತೇಜಾವತಿ ಹೆಚ್. ಡಿ. ಆದಿಯಿಂದ ಅಂತ್ಯದವರೆಗೂಎಂದೆಂದಿಗೂ ಸಂಧಿಸದಸಮನಾನಂತರ ರೇಖೆಗಳು ಅವು ಪರಸ್ಪರ ಜೋಡಿಜೀವಗಳಂತೆಜೀವಿಸುವವು ಅನಂತದವರೆಗೆ ಒಂದನ್ನಗಲಿ ಮತ್ತೊಂದುಅರೆಘಳಿಗೆಯೂ ಬಿಟ್ಟಿರದ ಬಂಧ ಹೆಗಲಿಗೆ ಹೆಗಲು ಕೊಟ್ಟು ಬದುಕ ರಥ ಎಳೆಯುವ ಜೋಡೆತ್ತುಗಳು ಅವು ಸಮಭಾರ ಹೊತ್ತು ಸಹಜೀವನ ನಡೆಸುವಸರಳ ರೇಖೆಗಳು ಸಾಗುವ ಪಥದಲ್ಲಿ ನೂರು ಅಪಘಾತ ಸಂಭವಿಸಿದರೂನಂಬಿಕೆಯ ಹೊರೆತುಮತ್ಯಾವ ಬೇಡಿಕೆಗಳನ್ನೂನಿರೀಕ್ಷಿಸದ ನಿಸ್ವಾರ್ಥ ಜೀವಗಳು ಬೇಕಂತಲೇ ತೂರಿಬರುವ ನೆರೆಗಳೆದುರುಕೇವಲ ಆತ್ಮಶಕ್ತಿಯಿಂದಲೇ ಎದುರು ಈಜುವ ನಕ್ಷತ್ರಮೀನುಗಳು ಗಟಾರದೊಳಗಿನ ರಾಡಿಯೆಲ್ಲಾ ಮೇಲೇರಿಶನಿ ಬೇತಾಳನಂತೆ ಹೆಗಲಿಗೇರಿದರುಮೈಡೊದವಿ ಚಿಮ್ಮವ ಸಿಹಿಬುಗ್ಗೆಗಳು..ಉಸಿರುಗಟ್ಟುವ ಕೊನೆಯ […]

ಗಜಲ್

ಗಜಲ್ ಅರುಣಾ ನರೇಂದ್ರ ಮತ್ತೇರಿಸುವ ಮಧು ಇಂದು ನೆತ್ತರಿನ ಬಣ್ಣವಾಯಿತೇಕೆತುಟಿ ಸೋಕುವ ಮುಂಚೆ ಬಟ್ಟಲು ಉರುಳಿ ಹೋಯಿತೇಕೆ ಹೃದಯ ಒಡೆದು ಚೂರಾದರಾಗಲಿ ಮಧುಶಾಲೆ ಕೈ ಮಾಡಿ ಕರೆದಿದೆತುಂಬಿ ತುಳುಕುವ ಹೂಜಿ ಎದುರಿಗಿದೆ ಮುಖದ ನಗು ಮಾಯವಾಯಿತೇಕೆ ಯಾರೇನೇ ಅಡಿಕೊಳ್ಳಲಿ ಬಿಡು ನೋವು ಮರೆಸುವ ಔಷಧಿ ಜೊತೆಗಿದೆ ಗಾಲಿಬ್ಸಾಕಿ ಸುರಿದು ಕೊಟ್ಟ ಸಂಜೀವಿನಿ ಕೈ ಸೇರುವ ಮುನ್ನ ನೆಲದ ಪಾಲಾಯಿತೇಕೆ ಎಲ್ಲರೂ ನನ್ನ ನೋಡಿ ದೂರ ಸರಿಯುತ್ತಾರೆ ಸಜನಿ ಎದೆಯ ಬೇನೆ ನಿನಗಷ್ಟೇ ಗೊತ್ತುದರ್ದಿಗೆ ಮುಲಾಮು ಸವರಿ ಕೈಗಿತ್ತ […]

Back To Top