Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ನೀ ಬದಲಾದರೆ ನಾಗರಾಜ್ ಹರಪನಹಳ್ಳಿ ಆಕೆ ಎದುರಾದಾಗ ಹೀಗೆಒಂದು ಪ್ರಶ್ನೆ‌ ಎಸೆದಳುನೀ ಬದಲಾದರೆ…. ನಾ‌ ಸ್ವಲ್ಪ ಹೊತ್ತು ಮಾತಾಡಲಿಲ್ಲ ಆಕೆ ಒತ್ತಾಯಿಸಿದಳುತುಟಿಗೆ ಮುತ್ತಿಟ್ಟು ಮತ್ತೆ ಕೇಳಿದಳುನೀ ಬದಲಾದರೆ ?? ದೀರ್ಘ ನಿಟ್ಟುಸಿರು ಬಿಟ್ಟೆಹಾಗೂ ಹೇಳಿದೆ ;ಕನ್ನಡಿಯ ಎದುರು ನಿಂತು ಪ್ರಶ್ನಿಸಿಕೊ ಎಂದೆ ಮತ್ತೆ ಅವಳೆಡೆಗೆ ಹೊರಳಿಕತ್ತು ಬಳಸಿ ,ಹೆರಳಿನ ಹಿಂಬಾಗಕೆ ಮುತ್ತಿಟ್ಟು ಹೇಳಿದೆ;ಸೂರ್ಯನ ಗಮನಿಸುಆಕಾಶ ಗಮನಿಸುಬಯಲ ಓದುವುದ ಕಲಿಸಮುದ್ರದ ಎದುರು ನಿಂತುಅದರ ರೋಧನವ ಅರಿ ಮನುಷ್ಯರ ಬದುಕಿನ‌‌ ದೇಹದ‌ ನಶ್ವರತೆಯ ಅವಲೋಕಿಸು ಹಾಗೂ ….ಹಾಗೂನನ್ನ ಕಣ್ಣುಗಳ ದಿಟ್ಟಿಸುನನ್ನ […]

ಕಾವ್ಯಯಾನ

ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲು ರಚ್ಚೆ ಹಿಡಿದ ಮಗುವಿನಂತೆ ಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆ ತಾಳಬಲ್ಲೆನೇ ಸವಾರಿ? ಕಣ್ಣಂಚಲಿ ಮುತ್ತಿಕ್ಕುತ್ತಿದೆ ಸೋನೆ ಸುಡುವ ಹರಳಿನಂತೆ ಒರೆಸಿಕೊಳ್ಳಲೇ ಸುಮ್ಮನೆ? ಎಷ್ಟೊಂದು ಸಂಕಟದ ಸಾಲಿದೆ ಸೋಲೆಂಬ ಮೂಟೆಯೊಳಗೆ ನಟ್ಟ ನಡು ಬಯಲಿನಲಿ ಒಂಟಿ ಮತ್ತು ಒಂಟಿ ಮಾತ್ರ ಹರಿಯಬಲ್ಲದೇ ಹರಿದಾರಿ? ನಡೆಯುತ್ತದೆಯೇ ದಿಕ್ಕು ಮರೆತ ನೌಕೆ? ಸುತ್ತ ಹತ್ತೂರಿಂದ ಬಂದ ಪುಂಡ ಗಾಳಿ ಹೊತ್ತೊಯ್ದು ಬಿಡುವುದೇ ನೆಟ್ಟ ಹಗಲಿನ ಕಂಪು? ಯಾವ ದಾರಿಯ ಕೈ […]

ಕಾವ್ಯಯಾನ

ಮಳೆ ಹಾಡು… ಆಶಾ ಜಗದೀಶ್ ತಾರಸಿಯಿಂದ ಇಳಿಯುತ್ತಿರುವಒಂದೊಂದೇ ಹನಿಗಳನ್ನುನಿಲ್ಲಿಸಿ ಮಾತನಾಡಿಸಿಮೆಲ್ಲಗೆ ಹೆಸರ ಕೇಳಿಹಾಗೇ ಮೆಟ್ಟಿಲ ಮೇಲೆನಯವಾಗಿ ಕೂರಿಸಿಕೊಂಡುಈಗ ಬಿಟ್ಟು ಬಂದವನ ನೆನಪೋಬಂದು ಸೇರಿದವನ ನೆನಪೋಒಮ್ಮೆ ಕೇಳಬೇಕಿದೆ ಜಡಿ ಹಿಡಿದು ಸುರಿವಾಗಯಾರ ಮೇಲಿನ ಮೋಹಆವೇಶವಾಗಿ ಆವಾಹಗೊಳ್ಳುತ್ತದೆಜೀವ ಮರಗುಟ್ಟುವ ಶೀತಲೆತೆಯೊಳಗೆಬೆಂಕಿಯೊಂದನ್ನು ನಂದದಂತೆಹೇಗೆ ತಾನೆ ಬಚ್ಚಿಟ್ಟುಕೊಂಡಿರುವೆಎಂದಾದರೂ ಒಂದು ಸಣ್ಣ ಪ್ರಶ್ನೆಗೆಉತ್ತರ ಕೇಳಿಟ್ಟುಕೊಳ್ಳಬೇಕಿದೆ ಮುಚ್ಚಿದ ಕಿಟಕಿಯ ದಾಟಿ ಹಾಯುವತಂಗಾಳಿ ಮೈ ಸೋಕುವಾಗೆಲ್ಲಒಂದು ಮಳೆಹನಿಯ ಹಟದ ಮುಂದೆಯಾವುದೂ ಸಮವಲ್ಲ ಎನಿಸಿಬಿಡುತ್ತದೆಮತ್ತೆ ಮತ್ತೆ ಇಷ್ಟಿಷ್ಟೆ ಚೈತನ್ಯ ಒಟ್ಟಾಗಿಸಿಕೊಂಡುಹನಿಯುವ ಇಚ್ಛಾಶಕ್ತಿಗೆ ಜಗವೇ ಬಾಗಿದೆಅಂತಲೂ ಋತುಚಕ್ರ ತಿರುಗಿದಾಗಲೆಲ್ಲಾಅನಿಸುತ್ತಲೇ ಇರುತ್ತದೆ […]

ಅನುವಾದ ಸಂಗಾತಿ

ಗುಟ್ಟು ಮೂಲ: ಶರತ್ ಚಂದ್ರ ಬರ್ (ಬೋಡೊ) ಕನ್ನಡಕ್ಕೆ: ನಾಗರಾಜ ಹರಪನಹಳ್ಳಿ ಯಾವ ಕಣ್ಣೀರಿನಲ್ಲಿಹೃದಯ ಮಿಡಿತದ ಸಂದೇಶವಿಲ್ಲವೋ ಯಾವ ಕಣ್ಣೀರಿನಲ್ಲಿಪವಿತ್ರವಾದ ಸತ್ಯವಿಲ್ಲವೋಯಾವ ಕಣ್ಣೀರಿನಲ್ಲಿಒಡೆದ ಹೃದಯದ ಸದ್ದು ಇಲ್ಲವೋಆ ಕಣ್ಣೀರು ಅಪ್ಪಟ ಕಣ್ಣೀರಲ್ಲ ಯಾವ ನಗುವಿನಲ್ಲಿ ಮೌಲ್ಯದ ಬೆಳಗು ಇಲ್ಲವೋಯಾವ ನಗುಕಲ್ಮಶದ ಪರದೆಯಲ್ಲಿ ಅಡಗಿದೆಯೋಅಂತಹ ನಗು ಸಂತಸದ ನಗುವಲ್ಲ ಯಾವ ಪ್ರೀತಿ ತನ್ನಷ್ಟಕ್ಕೆ ತಾನು ಅರಳುವುದಿಲ್ಲವೋಯಾವ ಪ್ರೀತಿಯಲ್ಲಿ ಬೆಸುಗೆಯ ಗುಣವಿಲ್ಲವೋಅಂತಹ ಪ್ರೀತಿಆದರಣೀಯ ಪ್ರೀತಿಯಲ್ಲ ಯಾವ ಕಾಣಿಕೆಯಲ್ಲಿಮರಳಿ ಪಡೆವ‌ ವ್ಯಾಮೋಹವಿದೆಯೋಯಾವ ಕಾಣಿಕೆಯಲ್ಲಿಪ್ರಶಂಸೆಯನ್ನು ಪಡೆವ‌ ಅಪೇಕ್ಷೆಯಿದೆಯೋಅಂತಹ ಕಾಣಿಕೆ ಕಾಣಿಕೆಯಲ್ಲ………………….. ನಾಗರಾಜ್ ಹರಪನಹಳ್ಳಿ

ಕಾವ್ಯಯಾನ

ಗಝಲ್ ಎ ಎಸ್. ಮಕಾನದಾರ ತಲೆ ಬಾಗಿಲಿಗೆ ಕೈಹಚ್ಚಿ ಕಾಯುತಿರುವೆ ಪ್ಯಾರಿಭಾವರಸ ನೊರೆಹಾಲ ತುಂಬುತಿರುವೆ ಪ್ಯಾರಿ ಅಚ್ಚೇರು ಬಂಗಾರದಲಿ ಅಚ್ಚು ಒತ್ತುತ್ತಿರುವೆಸ್ನೇಹ ಅಚ್ಚುಮೆಚ್ಚೆಂದು ಸಾರುತಿರುವೆ ಪ್ಯಾರಿ ಹಾಯಿದೋಣಿಗೆ ನಾವಿಕನಾಗಿ ಸಾಗುತಿರುವೆಚೂರಾದ ಹೃದಯ ತೋರಣ ಕಟ್ಟಿರುವೆ ಪ್ಯಾರಿ ನದಿಗಳ ಜಾಡಿನೊಳಗೆ ಚಹರೆ ಕಾಣುತಿರುವೆವಿಶ್ವಪ್ರೇಮ ಬಾವುಟ ಹಾರಿಸುತ್ತಿರುವೆ ಪ್ಯಾರಿ ಅಂತರಂಗ ಜ್ಯೋತಿಗೆ ಧೋಖಾ ಮಾಡದಿರುಸಾಹೇಬ್ ಮಸ್ತಕಕ್ಕೆ ಇಳಿದು ಬರುವೆ ಪ್ಯಾರಿ **********

ಕಾವ್ಯಯಾನ

ಮಗುವಾದ ನೆಲ ಬಿದಲೋಟಿ ರಂಗನಾಥ್ ಬಿತ್ತಿದ ಬೀಜ ಮೊಳಕೆ ಒಡೆದು ನಗುವಾಗಸಿರಿಯು ಮಡಿಲು ತುಂಬಿತುಮಗುವಾದ ನೆಲಮಮತೆಯ ಕರುಳ ಹೂ ಬಿಟ್ಟಿತು ಎದೆಯೊಳಗಿನ ತಲ್ಲಣ ಕಣ್ಣು ಚಾಚಿ ನೋಡುತ್ತಿರಲುಖುಷಿಯ ಸಮುದ್ರ ನಕ್ಕುನಕ್ಷತ್ರಗಳು ಅಂಗೈಯೊಳಗೆ ಆಡಿದವು ಮೊಳಕೆಯ ಕುಡಿ ಸಾಗುತಿರಲುಮಳೆಯ ಸ್ಪರ್ಶಕೆ ಕಳೆಗಟ್ಟಿಮೆದು ನೆಲದ ಭಾವ ಕಲ್ಲುಗಳೊಂದಿಗೆ ಮಾತಾಡಿತು ಬೆವರ ಹನಿಯು ಬಿದ್ದುಬಿತ್ತು ಹುತ್ತ ನೆಲ ಬಸಿರಾಗುವುದೆಂದರೇಹೊಳೆ ಸೀಳಿನಲಿ ಬೊಗಸೆ ನೀರು ಕುಡಿದ ಸಂತಸಮೈಯೊಳಗೆ ಚಂದ್ರ ನಡೆದ ಗುರುತು ***********

ಕಾವ್ಯಯಾನ

ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ ಕಳಚಿ ನಿರ್ಮೋಹ ಮೆರೆದೆಉತ್ತರ ಕೊಡದ ಮೌನ ಕಕ್ಕುತ್ತ ನಡೆದೆಯೇಕೆ? ಸಿಕ್ಕ ಬದುಕ ಕಟ್ಟಲರಿಯದೇ ಸಿಕ್ಕು ಸಿಕ್ಕಾಗಿಸಿ ಸೊರಗಿದೆನಕಾರಾತ್ಮಕ ವಿಚಾರದಲ್ಲೇ ಸೊಕ್ಕುತ್ತ ನಡೆದೆಯೇಕೆ? ಹುಟ್ಟಿದವರಿಗೆಲ್ಲ ಒಂದು ದಿನ ಬರುವುದು ಸಾವು ನಿಶ್ಚಿತಅರೆ ಆಯುಷ್ಯದಲ್ಲೇ ಸೋಲು ಮುಕ್ಕುತ್ತ ನಡೆದೆಯೇಕೆ? ಮುದ್ದುಕಂದನಿಗೆ ಅಮ್ಮನಾಗಿ ಹೆಮ್ಮೆಯ ದೇವತೆಯಾಗಿದ್ದೆನಕ್ಷತ್ರವಾಗುವ ಹುಚ್ಚಿನಲಿ ನೋಯುತ್ತ ನಡೆದೆಯೇಕೆ? ************

ಕಾವ್ಯಯಾನ

ಕೌದಿ ಸ್ಮಿತಾ ರಾಘವೇಂದ್ರ ಮಂಚದ ಅಂಚಿನ ಮೂಲೆಯಲ್ಲೋನಾಗಂದಿಗೆಯ ಹಾಸಿನಲ್ಲೋತುಕ್ಕು ಹಿಡಿದ ಟ್ರಂಕಿನೊಳಗೋ ಭದ್ರವಾಗಿಯೇ ಇರುವ ಗಂಟು. ಆಗಾಗ ಸುಮ್ಮನೇ ಎಳೆದು ತಂದುಗಂಟಿಗೆ ಕೈ ಹಚ್ಚಿದಾಗೆಲ್ಲತರಾತುರಿಯ ಕೆಲಸವೊಂದು ಹಾಜರುಸಮಯ ಹೊಂದಿಸಿಕೊಂಡುಬಿಚ್ಚಿಕೊಳ್ಳುತ್ತವೆ ರಾಶಿ ರಾಶಿ ನೆನಪುಹರಿದಿಲ್ಲ,ಹುಕ್ಕು ಕಿತ್ತಿಲ್ಲ,ಮಾಸಿದ್ದೂ ಇಲ್ಲಮುದ್ದೆಯಾದ ಗೆರೆಗಳ ತುಂಬಆಪ್ಯಾಯ ಕಂಪುಮತ್ತೆ ಹೆಗಲೇರುವ ಒನಪು ಸಂಜೆ ಹೊತ್ತಿಗೆ ಸಾಕೆನ್ನಿಸುತ್ತದೆಇಳಿಸಂಜೆಯ ಬದುಕಿನಂತೆ.ಬಿಡಿಸಿಕೊಳ್ಳಲಾಗದ ನಂಟಿನಂತೆ ಬಣ್ಣ ಬಣ್ಣದ ಅರಿವೆಗಳ ಅರಿಯಬೇಕುಇನ್ನೂಬದುಕು ಸವೆದ ಪುಟಗಳ ಮಸುಕು ಅಕ್ಷರಗಳಂತೆತೊಟ್ಟು ಸಂಭ್ರಮಿಸಿದ ಹಲವು ಭಾವಬಿಡಲಾಗದು ಬಳಸಲಾಗದುಆದರೂ ಇರಬೇಕು ಜೊತೆಯಾಗಿಮುದುಡಿದ ಕನಸುಗಳು. ಹೊಸ ಭಾವ ತುಂಬುವ ಹುರುಪಿನಲಿಯಾವುದೋ […]

ಕಾವ್ಯಯಾನ

ನೆನಪುಗಳಲ್ಲಿ ಅವಳು ಲಕ್ಷ್ಮೀ ಪಾಟೀಲ್ ಅವಳ ಏಕಾಂತ ತೆರೆಯುತ್ತದೆ ನಿತ್ಯ ಕೈ ಮುಟ್ಟಿಕೂದಲು ಹಿಡಿದರೆ ಎದುರು ಮರದ ಕೆಳಗೆಸಂಧ್ಯಾ ರಾಗದ ಸಂಜೆ ಅದೇ ಮರ ಕೈ ಮಾಡಿ ಕರೆಯುತ್ತದೆ ಕೂದಲ ಸಿಕ್ಕು ಬಿಡಿಸಿಕೊಳ್ಳಲುನೀಟಾಗಿ ನೆನಪುಗಳ ತಲೆ ಬಾಚಲುಏಕಾಂತಕ್ಕೆ ಜೊತೆ ಹುಡುಕಿ ಧ್ಯಾನಿಸಲು ಸಂಧ್ಯಾರಾಗದೆ ದುರು ತಾನು ಮತ್ತೊಂದು ಕವಿತೆಯಾಗಲು !ಬರೆಯದ ಭಾವ ಗಳೆಲ್ಲ ಸಿಕ್ಕುಗಳಂತೆ ಮುತ್ತುವವು ಧ್ಯಾನಸ್ಥಳಾಗುವಳಾಗ ಕವಿತೆಯ ಸುತ್ತ !ಎಷ್ಟೊಂದು ಕವಿತೆ ಬದುಕಿದೆನಲ್ಲ ಬರೆಯಲು ಬಂದಿದ್ದರೆಪೈಪೋಟಿಯಲ್ಲಿ ಕವಿತೆ ಗೆಲ್ಲಿಸಬಹುದಿತ್ತುಈ ಹೇನು ಹರಿದಾಡಿಸಿಕೊಳ್ಳುವ ಹಿಂಸೆಗೆಮುಕ್ತಿ ಸಿಗಬಹುದಿತ್ತು ಎಂದುಕೊಳ್ಳುವಳುಈ […]

ಕಾವ್ಯಯಾನ

ನಾನು ಕೆಟ್ಟವಳು ಶೀಲಾ ಭಂಡಾರ್ಕರ್ ನಿನ್ನ ಪ್ರೀತಿಯ ಪರಿಮಾಣದಲ್ಲಿಒಂದಿಷ್ಟು ಆಚೆ ಈಚೆಯಾದಾಗನಾನು ಕೆಟ್ಟವಳು. ನನ್ನನ್ನು ಬದಿಗೆ ತಳ್ಳಿಇನ್ಯಾರನ್ನೋ ತಲೆ ಮೇಲೆಕೂರಿಸಿಕೊಂಡಾಗ,ನಾನು ಕೆಟ್ಟವಳು. ಅತಿಯಾಗಿ ಸಿಟ್ಟು ಬಂದಾಗನಿನ್ನ ಚುಚ್ಚಿ ನೋಯಿಸಿಖುಷಿ ಪಡುವಾಗನಿಜವಾಗಲೂನಾನು ಕೆಟ್ಟವಳು. ಇಷ್ಟೇ.. ನಾನು ಕೆಟ್ಟವಳಾಗುವುದುಇವಿಷ್ಟೇ ಸಂದರ್ಭಗಳಲ್ಲಿ. ನಾನು ಕೆಟ್ಟವಳಾದಮರುಕ್ಷಣವೇಮನವರಿಕೆಯಾಗಿಮತ್ತೆ ನಿನ್ನೆಡೆಗೆ ಬಂದಾಗ, ನೀನು ಎಂದಿನಂತೆಮುದ್ದಿಸುವಿಯಲ್ಲ..!ಆಗ ಮಾತ್ರ..ನೀನೇ ಕೆಟ್ಟವನು. ************

Back To Top