Category: ಕಾವ್ಯಯಾನ

ಕಾವ್ಯಯಾನ

ಮತ್ತೆ ಮಳೆಯಾಗಿದೆ ನಿನ್ನೊಲವಿನ ವರ್ಷಧಾರೆಗೆನನ್ನೊಳಗಿನ ನವಿಲುಗರಿದೆದರಿ ನರ್ತಿಸುತಿದೆಖುಷಿಗೆ ಪಾರವೇ ಇಲ್ಲದಂತೆ !ಮತ್ತೆ ಮಳೆಯಾಗಿದೆಕನಸು ಹೊಸದಾಗಿದೆ.. ಫಸಲಿಲ್ಲದ ಬಂಜರುಭೂಮಿಮುಂಗಾರಿನ ಸ್ಪರ್ಶಕೆ ತಾ ಚಿಗುರೊಡೆದಿದೆಒಡಲಕಾವ ತಣಿಸಿ ಹನಿಯ ಸಿಂಚನಕೆಬೀಜ ಮೊಳೆತು ಜೀವ ಅಂಕುರಿಸಿದೆ ಸತ್ತಬೇರುಗಳೆಲ್ಲ ಉಕ್ಕಿ ಮರುಕನಸುಸುಪ್ತ ಚೇತನದಲ್ಲಿ ಜಾಗೃತವಾಗಿದೆನಿಸ್ತೇಜದಿ ಜಡವಾಗಿದ್ದ ಬೇರುವರ್ಷ ಪೋಷಕಕ್ಕಾಗಿ ಹಂಬಲಿಸಿದೆ ಬೆಳೆದು ವೃಕ್ಷವಾಗಲೀಗ ಅದಕೊಂದುದೃಢರಕ್ಷಣೆಯ ಆಸರೆ ದೊರೆತಿದೆಜಾತಿಮತದಾಚೆಗಿನ ಸಹಬಾಳ್ವೆಯಲಿ ತಾನುಬೆಳೆದು ಹೆಮ್ಮರವಾಗ ಹೊರಟಿದೆ. ***** ಹೆಚ್.ಡಿ.ತೇಜಾವತಿ

ಮತ್ತೆ ಮರೆಯಾಗುವ ತವಕವೇತಕೆ ಮೋಡಗಳೆ ಮೋಡಗಳೆ      ಏಕಿಷ್ಟು  ಅವಸರ       ಹೊರಟಿರುವಿರೇತಕೆ       ತಿರುಗಿ ನೋಡದೇ .        ಬಾನಂಗಳದಲಿ         ಚಿತ್ತಾರ ಮೂಡಿಸಿ        ಮತ್ತೆ ಮರೆಯಾಗುವ        ತವಕವೇತಕೆ?         ಒಂದು ಹನಿಯೂ          ಸುರಿಸದೆ.           ಬಾಯಾರಿದ          ಭೂಮಿಯು ಬಾಯ್ತೆರೆದು ನಿಂತಿದೆ ನೀವು ಸುರಿಸುವ ಹನಿಗಳಿಗಾಗಿ. ಕವಲೊಡೆದಿದೆ ಮಣ್ಣು ಜೀವಜಲದ ಆಸೆಯಿಂದ ಅತ್ತಲೊ ಇತ್ತಲೊ ಒಮ್ಮೆ ಜೊರಾಗಿ ಗಾಳಿ ಬಿಸುತಿರಲು ಹೊರಟೆ ಬಿಟ್ಟಿರಾ ಗಾಳಿಯ ಜೊತೆಯಾಗಿ. ಭೂಮಿಯದು ನಳನಳಿಸುತಿದೆ ಹಸಿರು […]

ಚಿಲುಮೆ ಮಳೆಹನಿಗಡಿಯಾರದ ಮೂರು ಮುಳ್ಳುಗಳಿದ್ದಂತೆಕಾಲಕಾಲಕ್ಕೆ ತಿರುಗುತಿವೆಋತುಗಳು ಭಾಗವಾಗಿ ಬೇಸಿಗೆಯಲ್ಲಿ ಅದುಮಿಟ್ಟಶಿಶ್ನಮಳೆಯಲಿ ಚಿಗುರೊಡೆದುಪುಟಿದೇಳುತ್ತದೆ ಚಳಿಯಲಿಹಿಡಿತ ಮೀರಿ ಮುಪ್ಪಾಗದ ಯೋನಿಸ್ವಾಗತಿಸುತ್ತಿದೆಕಾಲದ ನಾಚಿಕೆ ಬದಿಗಿಟ್ಟುಅಲೆಯುತ್ತಿದೆ ಪಕ್ವಗೊಂಡ ಅಪ್ರಜ್ಞೆಬೆಡ್ ರೂಮ್ ಬಾತ್ ರೂಮ್ ಗಳಪರಿಧಿ ಆಚೆ ಮಿಡುಕಾಡುತ್ತಿದೆ ಮಳೆಹನಿಸರಿಸೃಪಗಳು ತಲೆಯೆತ್ತಿಹೆಡೆಯೆತ್ತಿತಣಿಸಿಕೊಂಡಂತೆ ಮೋಹಚಂದಿರನ ರಾತ್ರಿಯಲಿಪುಟಿವ ನೀರ ಚಿಲುಮೆಯಂತೆ ********* ದೇವು ಮಾಕೊಂಡ

ಮಳೆಗಾಲದ ಕನವರಿಕೆ ಮಳೆಗಾಲದ ರಾತ್ರಿಗಳಿಗೆಮಾರನೇ ದಿನಕ್ಕೆ ತಂಗಳುನಿದ್ದೆಯುಳಿಸುವ ಬಾಬತ್ತುಹೇಗೆ ಮಲಗಿದರೂಮುಂಜಾವಿನ ಕಾಲುಸೆಳೆತತಲೆಬಾಲವಿಲ್ಲದ ಉದ್ದುದ್ದಕನಸುಗಳ ಮುಸುಗುಒಂದೊಳ್ಳೆ ಸವಿಘಟ್ಟಕ್ಕೆಒಯ್ದು ನಿಲ್ಲಿಸಿದ ಕ್ಷಣವೇಫಳಾರನೆ ಗುಡುಗು- ಸಿಡಿಲುಯಾರ ಮನೆಯ ಮಾಳಿಗೆಯಮೇಲೋ ಕುಳಿತು ಗೊಳೋಅಳುವ ಬೆಕ್ಕುಅತ್ತಿತ್ತ ಹೊರಳಿದರೆಮಳೆಯಲ್ಲೇ ನಡುಗುತ್ತಾ ನೆನೆಯುತ್ತಾಸ್ವಿಗ್ಗಿ ಡೆಲಿವರಿ ಕೊಟ್ಟವನಕಣ್ಣೇಕೆ ನೋಡಲಿಲ್ಲ?ಮನೆಯೊಳಗೆ ಕರೆದುಬಿಸಿ ಕಾಫಿ/ ಕಷಾಯ ಕೊಟ್ಟುಕಳಿಸಬಹುದಿತ್ತೇನೋ!ಅಮ್ಮ ಹಸಿದ ಬೀದಿನಾಯಿಗೂಬಿಸಿಬಿಸಿ ಬೋಡುಪ್ಪಿಟ್ಟುಕೆಲವೊಮ್ಮೆ ಚೂರಿಷ್ಟು ಕಾಫಿಮೆಟ್ಟಿಲ ಕೆಳಗೆರಡು ಗೋಣಿತಾಟುಹೊಂಚುತ್ತಿದ್ದು ನೆನಪಾಗಿಮತ್ತೆಲ್ಲೋ ಎಳೆದು ನಿಲ್ಲಿಸುವಕಣ್ಣಮುಚ್ಚಾಲೆ ನೀರು ಕುಡಿ- ಕಾಲ್ತೊಳೆದುಮುದುರಿ ಮಲಗುಮತ್ತೆ ಹೊರಳಾಡಿಗಂಟೆ ಎಂಟಾಯ್ತೆಂದುದಡಬಡಿಸಿ ಓಡುಛೇ ಮಳೆಗಾಲದ ರಾತ್ರಿಗೆಏಕಿಂಥ ಮರುಳು? ಮಳೆಯೊಂದಿನ ಹನಿಯಾಗಿನದಿ, ಕೆರೆ, ಜಲಧಾರೆಯಾಗಿನೆನಪುಗಳ […]

ಎರಡು ಮಳೆ ಕವಿತೆಗಳು ಮಳೆ ಸುರಿದೇ ಇದೆ ಮಳೆ ಬಾನ ಸಂಕಟವೆಲ್ಲ ಕರಗಿಕಣ್ಣೀರಾಗಿ ಇಳಿದಿದೆಯೇ ಹೊಳೆಇಳೆಯ ಅಳಲಿಗೆ ಎದೆ ಕರಗಿಸುರಿಸಿದೆಯೇ ನಭ ತನ್ನೊಲವ ಬಾನು ಬುವಿ ಒಂದಾಗಿಸಿದೂರಗಳ ಇಲ್ಲವಾಗಿಸಿಕಳೆಕೊಳೆ ಗುಡಿಸಿ ತೊಳೆತೊಳೆದು ತೊರೆ ಹರಿಸಿಸುರಿದಿದೆ ಮಳೆ ಬಿಸಿಲಬೇಗೆಗೆ ಬತ್ತಿ ಆಳಆಳ ನೆಲದಲ್ಲಿ ನೀರ ಪಸೆಗೆಚಾಚಿ ಚಾಚಿ ತುಟಿ ಬಸವಳಿದಬೇರಿಗೆ ಈಗ ಜೀವನ ಸೆಲೆಬಾನ ಕರುಣೆಗೆ ತಲೆಯೊಲೆದುತುಟಿಯೊಡ್ಡಿ ಹಿಗ್ಗುವ ಎಲೆ-ಎಲೆ !ಮೊಗ್ಗು ಹೂವು ಕೊಂಬೆಯ ಹಕ್ಕಿಮಣ್ಣಹುಳು ಎಲ್ಲಕ್ಕೂ ಈಗಜೀವ ಚೈತನ್ಯದ ಆವಾಹನೆ- ಅಲೆ ಉಳುವ ಊಡುವ ಮೂಡುವಚಿಗಿತು ಹೊಡೆ […]

ಮಳೆ ಮಳೆನೆಲ‌ ಮುಗಿಲಿನ ಅನುಸಂಧಾನಪ್ರೀತಿಯಂತೆ ಮಳೆ ಮೋಡ ಕಪ್ಪು ಮೋಡ ಮುಗಿಲ ಚುಂಬಿಸಿ, ಕಡಲ ಮಾತಾಡಿಸಿ, ಗಿರಿಯ ಸವರಿ ,ಕಣಿವೆ ಹೊದ್ದು ಸಾಗಿದವು…ಮಳೆ ; ಎಲ್ಲಲ್ಲೂ ಮಳೆಪ್ರೀತಿಯ ವರ್ಷಧಾರೆ ಆಕೆ ಆತ ದೂರದಲ್ಲಿ ಕುಳಿತುಮಾತಾಡಿದರು ;ಮಳೆಯ ಜೊತೆಹೃದಯಗಳು ಒದ್ದೆಯಾದವುಕಣ್ಣೀರು ಮಳೆಯ ಹನಿಗಳ ಬೆರೆತವು ಮಳೆ ಲೋಕವನ್ನೆಲ್ಲಾ ಸುತ್ತಾಡಿತುಪ್ರೇಮಿಗಳೆಲ್ಲಾ ಮಳೆಯ‌ ಎದುರುಗೊಂಡರು , ಸಂಭ್ರಮಿಸಿದರು; ಹಳೆಯ ಖುಷಿ ನೆನೆದರು, ನೋವು ಸಹ ನೆನಪಿಸಿಕೊಂಡರು;ಕೊನೆಗೆ ಮಳೆ‌ ಸಂತೈಸಿ ಹೊರಟು ಹೋಯಿತು ಮಳೆ ನದಿಯಾಯಿತುಕುಟಿಲಪಥ ಕಾನನವ ದಾಟಿಕಡಲಬಳಿ ಬಂತು…ಅದು‌‌ ಕೊನೆಯ ಅನುಸಂಧಾನಯುಗ […]

ಪ್ರೀತಿಯ ಹನಿ ಮಳೆಯ ಹನಿಯು ಇಳೆಗೆ ಮುತ್ತಿಕ್ಕಿ ಆದಾಗ ತನುವಿಗೆ ಸಿಂಚನ; ನೆನಪಾಗುವದು ಆ ನಿನ್ನ ಮೊದಲ ಸ್ಪರ್ಶದ ಮೈ ಮನ ರೋಮಾಂಚನ! ನಾ ಬರೆದ ಪ್ರೀತಿಯ ಪದ ಪುಂಜಗಳು ಒದ್ದೆಯಾಗುತಿವೆ ಮಳೆ ನೀರಿಗೆ ಬಿದ್ದು; ನೆನೆದು ಹೋದರೂ ನಿನ್ನ ಧ್ಯಾನದಲ್ಲಿ ಪುಟಿದೇಳುತಿವೆ ಪದಗಳು ಎದ್ದು! ಬಹಿರಂಗದಿ ನಿಲ್ಲದ ವರುಣನ ಆರ್ಭಟದ ಸದ್ದು ಅಂತರಂಗದಿ ನಿನ್ನ ನೆನಪುಗಳ ಮೆಲಕು ಹಾಕುತ ಮಲಗಿರುವೆ ಪ್ರೀತಿಯ ಹೊದ್ದು! ನಿಲ್ಲದ ಮಳೆಯಲಿ ನೀನಿಲ್ಲಿ ಬಂದರೆ ಅದುವೆ ಮಧುರ ಬಂಧನ! ಜೊತೆ ಜೊತೆಗೆ […]

ಮುಂಗಾರು ಮಳೆ ಮುಂಗಾರಿನ ಆಗಮನ ನಮ್ಮೆಲ್ಲರಲ್ಲಿ ನವಚೈತನ್ಯ ಬಿಸಿಲ ಝಳಕ್ಕೆ ಕಂಗಾಲಾಗಿರುವಾಗ ನೀ ಬಂದು ನೀಡುತ್ತಿ ಸಂತಸ! ರಜೆಯ ಮಜದಿಂದ  ಚಿಣ್ಣರು ಶಾಲೆಯತ್ತ ಬೆಳೆಗಳನ್ನು ಫಲವತ್ತಾಗಿಸಲು  ರೈತರು ಗದ್ದೆಯತ್ತ! ಮಾಸಗಳಲ್ಲಿ ಶುರುವಾಗುವ  ಒಂದೊಂದು ಚಟುವಟಿಕೆಗಳು ಚಟುವಟಿಕೆಗಳಿಂದ ಹಚ್ಚ ಹಸಿರಾಗುವ ಪ್ರಕೃತಿ ಪ್ರಕೃತಿಯ ಮಡಿಲಲ್ಲಿ ತೃಪ್ತಿಯಿಂದ ಬೀಗುವ ನಾವುಗಳು ನಾವುಗಳು ಇತ್ತೀಚೆಗೆ ತೋರುವ ಸ್ವಾರ್ಥತೆ ಸ್ವಾರ್ಥತೆಯಿಂದ ನಿಸರ್ಗದ ಮೇಲಿನ ಹಾನಿ ಮನುಜರು ಮಾಡುತಿಹರು ಪಾಪ ನೀ ಕೊಂಚ ತಡವಾದರೂ ಹಾಕುವೆವು ಶಾಪ! ಹೇ ಮುಂಗಾರು ಅದು ನಿನಗಲ್ಲ ಮಾನವನ […]

ಬಾಲ್ಯದ ಮುಂಗಾರು ಮಳೆ ನನ್ನ ಬಾಲ್ಯದ ಮಳೆಗಾಲ ಈಗ ಮೊದಲಿನಂತಿಲ್ಲ ಬಹುಶಃ ಕಾಲದೊಂದಿಗೆ ಬೆಳೆದು ಮೊದಲಿನ ಮಾತಿಲ್ಲ ಮುಂಗಾರು ಆಗಲೇ ಬಾಗಿಲು ಬಡಿದು ನಿಂತಿದೆ ವರ್ಷ ಋತುವಿನ ಮೊದಲ ಮಳೆಯ ತಂದಂತಿದೆ ಮನೆಯ ಕಿಡಕಿಯಿಂದ ನೋಡಿದರೆ ಆಕಾಶದಲಿ ಕಪ್ಪು ಮೋಡಗಳ ಗರ್ಜನೆಗೆ ನರ್ತಿಸುವ ಮಳೆಹನಿ ಗಾಜಿನ ಮಣಿಗಳು ಗೋಡೆಗೆ ಟಳಾಯಿಸುತಲಿವೆ ಅಬ್ಬರಿಸುವ ಮಳೆಯ ಸಂಗೀತ ಆಲಾಪಿಸುತಲಿದೆ ಕೆಲವೊಮ್ಮೆ ನಾ ಆಡುತಲಿದ್ದೆ ಅವುಗಳೊಂದಿಗೆ ಅದಕಾಗಿ ಅವು ಈಗ ನನ್ನನು ಕರೆಯುತಲಿವೆ ನಾನಾಗ ಕಿರಿಯಳು ಈ ಮಾತು ಹಿರಿದಾಗಿತ್ತು ಆವಾಗ […]

ಮಳೆಯಾಗುತಿದೆ, ಭಾರವಾದ ಮೋಡದ ಮನಸು ಹಗುರಾಗುವುದು ಹೀಗೆ ತಾನೇ, ಒಡಲು ತುಂಬಿದ ರಾಶಿ ಹನಿಗಳನೆಲ್ಲ ಹೊರ ಚೆಲ್ಲಿ ಹಗುರಾಗುವ ಮೊದಲು ಭಾರವಾಗಲೇ ಬೇಕು, ಮನ ಕಟ್ಟಬೇಕು ದಟ್ಟೈಸಬೇಕು ತೀವ್ರತೆಯ ದಾಟಿ ಒಮ್ಮೆಗೆ ಸ್ಪೋಟಗೊಳ್ಳಬೇಕು, ಹನಿಯೊಸರಿದರೆ ತಾನೇ ಚಿಗುರ ಕನಸು, ಹನಿಯಬೇಕು ಹನಿದು ಹಗುರಾಗುವ ಮುನ್ನ ಮೋಡ ಕಟ್ಟಬೇಕು ಭಾರವಾಗಬೇಕು, ಮಳೆಯಾಗಿ ಇಳೆಗಿಳಿದು ಹಗುರಾಗುತಲೆ ಹಸಿರ ಕನಸಿಗೆ ಜೀವ ತುಂಬಬೇಕು, ಭುವಿಗಿಳಿದ ಗುರುತಿಗೆ ಸಹಿಯ ಒತ್ತಬೇಕು… ************ ಅರ್ಪಣಾ ಮೂರ್ತಿ

Back To Top