Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಶಬರಿ ಡಾ.ಗೋವಿಂದ ಹೆಗಡೆ ಯಾವುದೋ ಬೇಡರ ಹುಡುಗಿ ಹೆಸರಿಲ್ಲದೇ ಮರೆಗೆ ಸಲ್ಲುವ ಬದಲು ‘ಶಬರಿ’ ಎನಿಸಿ ತಪಕೆ ಹೆಸರಾಗಿ ನಿಂತಿದ್ದು ರಾಮನ ಮಹಿಮೆಯೇ ಶಬರಿಯದೇ ಕನಸ ಕಂಡಿರಬಹುದೇ ಹುಡುಗಿ ಕುದುರೆಯೇರಿ ಬರುವ ಯಾವುದೋ ಉತ್ತರದ ರಾಜಕುವರನದು ಹುಡುಗಿ ಹೆಣ್ಣಾಗಿ ಹಣ್ಣಾಗಿ ಹಪ್ಪು ಮುದುಕಿಯಾಗುವವರೆಗೂ ಕಾದು ಕಾದು ಪಾತ್ರ ಬದಲಿಸಿ ಹರಿದಿರಬೇಕು ನದಿ ಕಾದ ಕಾಯುವ ಕಾವಿನಲ್ಲಿ ಕಾಮನೆಗಳು ಕರಗಿ ನೋಡುವ ಊಡುವ ಬಯಲ ಬಯಕೆ ಉಳಿದು ಕಣ್ಣು ಮುಚ್ಚುವ ಮೊದಲು ಕಂಡೇನೇ ಎಂದು ಕಣ್ಣ ಕೊನೆಯಲ್ಲೆ ಜೀವವನಿರಿಸಿ […]

ಕಾವ್ಯಯಾನ

ಉರಿಪಾದವ ಊರಿನಿಂತ ಹೆಜ್ಜೆಗೆ ಎಸ್.ಕೆ.ಮಂಜುನಾಥ್ ಇಟ್ಟಿಗೆ ಕಲ್ಲು ಹೊತ್ತು ಕಟ್ಟಿದ ಯಾವ ಮಹಲು ನಮ್ಮದಲ್ಲ ನೆರಳನು ನೀಡುತ್ತಿಲ್ಲ ಕೈಬೀಸಿ ಕರೆದ ನಗರ ಕತ್ತು ಹಿಡಿದು ನೂಕಿತ್ತಲ್ಲ ಹಸಿವೆಂದು ಬಂದೆವು ಹಸಿವಿಗಾಗಿ ದುಡಿದೆವು ಮತ್ತೆ ಮತ್ತೆ ಹಸಿವ ಹೊಟ್ಟೆ ಬೆನ್ನ ಮೇಲೆ ಹೊರೆಯ ಕಟ್ಟೆ ಹಸಿವಿನಿಂದ ಅಳುವ ಮಗು ಬೀದಿಬದಿಯ ಅನ್ನದೊಡೆಯ ಕಾಣದಾದನು ಎಲ್ಲಿಗೋದನು ಕರೆತಂದು ಬಿಟ್ಟ ಯಾವ ಬಸ್ಸು ರೈಲು ಕಾಣುತ್ತಿಲ್ಲ ಈ ಹೆಜ್ಜೆಗೂ ಈ ದಾರಿಗೂ ನಂಟು ಇನ್ನು ಮುಗಿದಿಲ್ಲ ಹಸಿವ ಗಂಟುಮೂಟೆ ಕಟ್ಟಿಕೊಂಡು ತಲೆಯ […]

ಕಾವ್ಯಯಾನ

ಗಝಲ್ ವಿನಿ (ಬೆಂಗಳೂರು) ಮಾಮರದಲಿ ಕುಳಿತ ಕೋಗಿಲೆಯ ದನಿ ಮಧುರವಂತೆ ಗೆಳೆಯಾ ಭೃಂಗವದು ಗೂಯ್ ಎನುವ ಝೇಕಾರ ಸೆಳೆದಂತೆ ಗೆಳೆಯಾ ಭೋರೆನುವ ಜಲಪಾತದ ರಮಣೀಯ ದೃಶ್ಯವದು ಮನಮೋಹಕವಂತೆ ಕಾನನದ ರೌದ್ರ ಮೌನವದು ಎದೆನಡುಗಿಸಿದಂತೆ ಗೆಳೆಯಾ ಬೇಲೂರ ಹಳೇಬೀಡಿನ ಶಿಲ್ಪವದು ಶಿಲ್ಪಿಯ ಅದ್ಭುತ ಕೈಚಳಕವಂತೆ ಒಂದೊಂದು ಮದನಿಕೆಯರು ಸೌಂದರ್ಯದ ಪ್ರತೀಕದಂತೆ ಗೆಳೆಯಾ ಪ್ರಕೃತಿಯ ಮಡಿಲಲಿ ಮೈಮರೆತು ಸಂತಸವನು ಆಸ್ವಾದಿಸಿದಂತೆ ಹುಣ್ಣಿಮೆಯ ಪೂರ್ಣಚಂದಮನು ಸೊಗಸಾಗಿ ಕಣ್ಮನ ಸೆಳೆದಂತೆ ಗೆಳೆಯಾ ಸಪ್ತಸ್ವರಗಳ ನಾದದಲಿ ವಿಜಯಳು ದನಿಗೂಡಿಸಿದಂತೆ ಬಾಳ ಪಲ್ಲವಿಗೆ ನಿನ್ನೊಲವಿನ ಸಾಲುಗಳೆ […]

ಕಾವ್ಯಯಾನ

ಹಾರು ಗರಿ ಬಿಚ್ಚಿ ಡಾ.ಗೋವಿಂದ ಹೆಗಡೆ ಏನಾದರೂ ಆಗಬೇಕು ಬಾಂಬಿನಂತಹ ಏನೋ ಒಂದು ಸ್ಫೋಟಿಸಿ ಹೊಗೆಯಲ್ಲಿ ಅಥವಾ ಅಗ್ನಿಗೋಲದಲ್ಲಿ ಮರೆಯಾಗಿ ಬೇಡ, ಚಾಚಿದ ಕಾಲಿಗೆ ಅಲ್ಲೆಲ್ಲೋ ಮರಳಲ್ಲಿ ಓಡುವ ಇರುವೆ ಕಚ್ಚಿ ‘ಹ್ಹಾ’ ಎಂದು ಏನಾದರೂ ನಡೆಯಲಿ ಇಲ್ಲಿ ಈ ನಿಷ್ಕ್ರಿಯತೆಯನ್ನು ಹೇಗೆ ಸಹಿಸುವುದು +++ ನಿಷ್ಕ್ರಿಯತೆ ನಿರಾಕರಣೆಯೇ ಅನುಭವವೇ ಆಭಾಸವೇ ಅಲ್ಲೆಲ್ಲೋ ಕೋಗಿಲೆ ಕೂಗಿದೆ ಹಕ್ಕಿ ಜೋಡಿ ಸಂಜೆ ಆಗಸವ ಸೀಳಿ ಹಾರಿವೆ ಎಲೆಯೊಂದು ಟಕ್ಕೆಂದು ತೊಟ್ಟು ಕಳಚಿದೆ ತುಸು ಆಲಿಸಿದರೆ ಕೊಂಬೆಯೊಳಗೆ ಹರಿವ ಜೀವರಸದ […]

ಕಾವ್ಯಯಾನ

ಕ್ವಾರಂಟೈನ್ ದಿನಗಳಿವು ಶಾಲಿನಿ ಆರ್. ಅಮ್ಮನ ಆ ಮೂರು ದಿನ ಕಾಗೆ ಮುಟ್ಟಿದೆ ಮುಟ್ಟ ಬೇಡ ಎಂದು ದೂರ ಕುಳಿತ ಮುಟ್ಟಿನ ಆ ದಿನ, ಇಂದು ನಾನೆ ಯಾರನ್ನು ಮುಟ್ಟಿಸಿಕೊಳದೆ ದೂರದಿ ನಿಂತು  ದಿನ ದೂಡುತಿರು ಕ್ವಾರಂಟೈನ್ ದಿನ, ತರಕಾರಿ ಕೊಳ್ಳುವಾಗ ಮಾರುವವನಿಗಿಂತ ಮಾರು ದೂರ ನಿಂತು ಕೊಳ್ಳುವ ಕ್ವಾರಂಟೈನ್ ದಿನ, ದಿನಸಿ ಸಾಮಾನಿನ ಖರೀದಿಗೂ ಬಂದಿದೆ ಕೊಡುವ ಕೊಳ್ಳುವವನ ಮಧ್ಯೆ ಲಕ್ಣ್ಮಣರೇಖೆಯ ಕ್ವಾರಂಟೈನ್ ದಿನ ಪ್ರತಿಯೊಬ್ಬರ ಮಧ್ಯೆದಲ್ಲೂ ಸಿಲುಕಿ ನಲುಗುತಿದೆ ಮುಗಿಯಲಾರದೆ ನರಳುತಿದೆ ಕ್ವಾರಂಟೈನ್ ದಿನ, […]

ಕಾವ್ಯಯಾನ

ಮುಗಿಯದ ಹಾಡು ಎನ್.ಶೈಲಜಾ ಹಾಸನ ಇಡುವ ಹೆಜ್ಜೆ ಜೊತೆ ಜೊತೆಹೆಜ್ಜೆ ಕೂಡಿದ ಪಲುಕುಪರಿ ಪರಿಯ ಕುಲುಕುನಾನೆಂತು ಬಣ್ಣಿಸಲಿನೀ ಒಲಿದೆ,ನನ್ನ ಒಲಿಸಿದೆಬೆಸೆದಿದೆ ಬಂಧನಮನವೀಗ ಹೂ ನಂದನ  ಒಲವ ಬಂಧನದಿ ಸುಖವಿದೆಸಿರಿಯಿದೆ,ಮಧುವಿದೆ,ಸವಿಯಿದೆನಡೆದ ಹಾದಿಯಲ್ಲಿಬಣ್ಣಗಳ ಚೆಲುವಿದೆ ಮೌನದ ಹಾಡಲಿನೂರು ಕವಿತೆಕಣ್ಣ ಬೆಳಕಲಿ ಪ್ರೇಮದಣತೆನೋಟದಂಚಿನಲಿಕೋರೈಸುವ ಮಿಂಚುನೋಟದಾಳದಲಿ ನಲ್ಮೆಯ ಜಲಪಾತತುಂಟ ನಗೆಯಲಿಸಾವಿರ ಪುಳಕ ಕನಸುಗಳ ಸಾಕಾರಎದೆಯ ಗೂಡಲಿನಿನ್ನೊಲುಮೆಯಹುಚ್ಚು ನದಿಯಲಿಕೊಚ್ಚಿ ಹೋದವಳುತೇಲಿ ತೇಲಿ ತೇಲುತಲಿಇರುವ ಹುಚ್ಚು ಖೋಡಿಮನಸ್ಸು ನನ್ನದು ಮುಟ್ಟಲಾಗದು,ತಟ್ಟಲಾಗದುಮೆಟ್ಟಲಾಗದುಮುಪ್ಪಾನು ಮುಪ್ಪಿಗೆಒಲುಮೆಯ ಮನಸಿಗೆಗೆಲುವಿನ ಸೊಗಸು ದಾಂಪತ್ಯ ಗೀತೆಗೆಅನುರಾಗದ ಪಲ್ಲವಿಶೃಂಗಾರದ   ಅನುಪಲ್ಲವಿಮುಗಿಯದ ಹಾಡು ಇದು *******

ಕಾವ್ಯಯಾನ

ಕನಸಿನೂರಿನ ಅಪ್ಪ ಐಶ್ವರ್ಯ ಎಲ್.. ಬೆಳಕ ಹೊತ್ತು ಬಂದ ಸೂರ್ಯನೂ ಹೋಗುವ ಹೊತ್ತಾಯಿತು ಹೊರಗೆ ಹೋದ ಅಪ್ಪನು ಬಂದಾನೂ, ಕೈ ತುಂಬ ಬೊಂಬೆ ತಿಂಡಿಗಳ ತಂದಾನೂ ಅವರಿವರ ಮನೆಯ ಅಪ್ಪಂದಿರಂತೆಯೇ ನನ್ನಪ್ಪನೆಂದು ಕಣ್ಣಳತೆಗೆ ಎಟುಕುವವರೆಗೂ ಮನೆಯ ಮುಂದಿನ ಕಂಬವನೇರಿ ಕಾದು ಕುಳಿತೆ, ಬೆಳೆದು ಬುದ್ದಿಬರುವವರೆಗೆ…… ಏರಿದ ಕಂಬಕ್ಕಾದರೂ ಅರಿವಾಗಿರಬಹುದು ಅಪ್ಪನೆಂಬ ಕನಸು ಬೇರೂರಿದ್ದು ನನ್ನೊಳಗೆ, ಅರಿವಾಗಲೇ ಇಲ್ಲ ದೇವರಿಗೆ, ಅಪ್ಪನ ಕರೆದೊಯ್ದೆಬಿಟ್ಟಿದ್ದನು ನಂಗೆ ಬುದ್ದಿಬರುವುದರೊಳಗೆ………. ಜಡಕು ಕೂದಲಿಗೆ ಜುಟ್ಟುಕಟ್ಟಿ, ಕಪ್ಪು ಕಾಡಿಗೆಯಲಿ ಕಾಸಗಲದ ಬೊಟ್ಟಿಟ್ಟು ನನ್ನಿಷ್ಟದ ಫ್ರಾಕನ್ನೆ […]

ಕಾವ್ಯಯಾನ

ಜರೂರು ಬಂದೊದಗಿದೆ ಗೌರಿ.ಚಂದ್ರಕೇಸರಿ ದೇವ ಮಾನವರೆಲ್ಲ ಏನಾದರು? ತಪದಲ್ಲಿರುವರಾ ಇಲ್ಲಾ ಮೌನ ವ್ರತದಲ್ಲಿರುವರಾ? ಇಲ್ಲಾ ನಿದ್ರೆಯಲ್ಲಿ ಕಳೆದು ಹೋದರಾ? ಸೂರ್ಯ ಚಂದ್ರರುದಿಸುವುದು ತಮ್ಮಿಂದ ಎಂದವರು ಸ್ಪರ್ಷ ಮಾತ್ರದಿಂದಲೇ ಕಾಯಿಲೆಗಳ ಮಾಯ ಮಾಡುವೆ ಎಂದವರು ಅಂಗೈ ನೋಡಿ ತಾಳೆ ಹಾಕುವವರು ಪೂಜೆಗೈದು ಪಾಪವ ತೊಳೆಯುವವರು ಏನಾದರು? ಕೂಗು ಕೇಳುತ್ತಿಲ್ಲವೆ ಹಾಹಾಕಾರ ಕಾಣುತ್ತಿಲ್ಲವೆ? ಭೂ ಮಂಡಲವನ್ನೇ ಆವರಿಸಿದೆ ಅನಿಷ್ಠ ಎಲ್ಲೆಲ್ಲೂ ಹಿಡಿ ಅನ್ನಕ್ಕಾಗಿ ಚಾಚಿವೆ ಕೈಗಳು ಕುಣಿಕೆ ಹಿಡಿದು ಕಾದಿದೆ ಸಾವು ಬನ್ನಿ ನಿಮ್ಮ ಜರೂರು ಈಗ ಬಂದೊದಗಿದೆ ಹೊತ್ತಿರುವ […]

ಕಾವ್ಯಯಾನ

ಒಂದು ಕವಿತೆ ಅಮೃತಾ ಮೆಹಂದಳೆ ಈಗ ನಿನ್ನ ವಿರಾಮ ಸಮಯವಲ್ಲವೇ? ಬಿಡುವಿನಲ್ಲಿ ನೆನೆಯುತ್ತಿರುವೆಯಾ ನನ್ನ ನೀನು? ಲಟಿಗೆ ಮುರಿದ ಬೆರಳು ಸ್ಪರ್ಶಕ್ಕಾಗಿ ಹಂಬಲಿಸಿರಬಹುದೇನು? ಚಾಚಿದ ಕಾಲು ಬಯಸಿತಾ ಸಹನಡಿಗೆಯನ್ನು? ಏನೋ ಹುಡುಕುವ ಕ್ಯಾಮರಾ ಕಣ್ಣು ನನ್ನದೇ ಚಿತ್ರ ಸೆರೆಹಿಡಿಯುತ್ತಿದೆಯೇನು? ತುಟಿಸೋಕಿ ಸುಟ್ಟ ಕಹಿಕಾಫಿ ನಿನ್ನ ಪಾಲಿನ ನಾನಲ್ಲವೇನು? ನನ್ನ ಪ್ರೀತಿಯ ಹಾಡು ನಿನ್ನ ಪಾಡಾಗಿ ಕಿವಿಯ ಸೋಕುತ್ತಿರಬಹುದೇನು? ಇಲ್ಲಿ ಬೀಸಿದ ಗಾಳಿ ಸುತ್ತಿ ಸುಳಿದು ನಿನ್ನಾತ್ಮವ ಪುಳಕಿಸಬಾರದಿತ್ತೇನು? ನನ್ನ ಕಣ್ಣು ಕತ್ತಲು ಕಪ್ಪುಪಟ್ಟಿ ಕಟ್ಟದೆಯೇ.. ಕಿವಿ ಮುಚ್ಚಿಹೋಗಿದೆ […]

ಕಾವ್ಯಯಾನ

ನದಿಯಾಗು. ಶಾಲಿನಿ ಆರ್. ಶಾಲಿನಿ ಆರ್. ಆಸೆಗಳಿವೆ ನೂರಾರು ನೂರಾರು ಬಯಕೆ, ಎತ್ತಲಿಂದೆತ್ತಣಕೂ ನಿನ್ನ ಸೇರುವ ಹರಕೆ, ಹಸಿರುಲ್ಲಿನ ನಡುವೆ ಇಬ್ಬನಿ ಬನಿಯೊಳಗೆ ನಾನಿದಿದ್ದರೆ, ನಿನ್ನ ಪಾದ ಪ್ರಾತಃ ಸ್ಪರ್ಶಕೆ ನಾ ಸದಾ ಕಚಗುಳಿಯಿಡುತಿದ್ದೆ, ನಿನ್ನ ನೋಡುವ ಕನ್ನಡಿ ನಾನಾಗಿರೆ, ನಿನ್ನಂತರಂಗನರಿವ ಬೆರಗು ನಾನಾಗಿ ಬಳಿಯಿರುತಿದ್ದೆ, ನೀ ನಡೆವ ಹಾದಿಗೆ ಮರವು ನಾನಾದೊಡೆ, ನಿನ್ನ ದಣಿವಿಗೆ ನಾ ನೆರಳಾಗ ಬಯಸಿದ್ದೆ, ನೀ ನೋಡುವ ನೋಟದ ಕಣ್ಣು ನಾನಗಿದ್ದರೆ, ಭರವಸೆಯ ಬೆಳದಿಂಗಳ ಕಣ್ಗಿರಿಸಿ ತಣಿಯುತಿದ್ದೆ, ನಿನ್ನ ನಿಜ ಪ್ರೀತಿ […]

Back To Top