Category: ಕಾವ್ಯಯಾನ

ಕಾವ್ಯಯಾನ

ದ್ವಿಪದಿಗಳು

ದ್ವಿಪದಿಗಳು ಸಿದ್ಧರಾಮ ಕೂಡ್ಲಿಗಿ ಖಾಲಿಯಾದ ಕಣ್ಣುಗಳಲಿ ತೇಲುತ್ತವೆ ಕಂಬನಿದುಂಬಿದ ಮೋಡಗಳು ಒಮ್ಮೊಮ್ಮೆ ಭೋರ್ಗರೆಯುತ್ತವೆ ಒಮ್ಮೊಮ್ಮೆ ಕಣ್ಣಂಚಿನಲೇ ನಿಲ್ಲುತ್ತವೆ – ಬಂಜೆ ನೆಲಕೂ ಆಗಾಗ ಕನವರಿಕೆ ಒಡಲು ತುಂಬುವ ಸರದಾರ ಬರಬಹುದೆಂದು – ಬರಿದಾದ ತಲೆಯಲಿ ಚಿಂತೆಯ ಹದ್ದುಗಳದೇ ಗಲಾಟೆ ಬೇಟೆ ಸಿಕ್ಕರೆ ಭೂರಿ ಭೋಜನ ಇಲ್ಲದಿರೆ ಬರೀ ಗಾನ ಬಜಾನ – ಮತ್ತೊಬ್ಬರ ಬೂಟಿನಲಿ ಮೂಗು ತೂರಿಸುವ ಹೆಜ್ಜೆಗಳು ತಮಗೊಂದು ಅಸ್ತಿತ್ವವಿದೆಯೆಂದು ಎಂದೂ ಯೋಚಿಸವು – ಮುಗುಳ್ನಗೆಗಳು ಹಾರಾಡುತ್ತವೆ ಚಿಟ್ಟೆಯಂತೆ ಪ್ರೀತಿ ಇದ್ದಲ್ಲಿ ಕೂರುತ್ತವೆ ಇಲ್ಲದಿದ್ದಲ್ಲಿ ಮುಂದೆ […]

ಗಜಲ್

ಗಜಲ್ ಅಕ್ಷತಾ ಜಗದೀಶ ಬಾಳಲ್ಲಿ ಆನಂದದ ಹೊಳೆ ಹರಿಸಿದೆ ನೀ ಕಂದಸಾಗರದ ಆಳದಲಿ ದೊರಕಿದ ಮುತ್ತಿನಂತೆ ಆನಂದ ನೀ ಅತ್ತರು ಅದು ಸಂಗೀತದ ನಾದ ಕಂದನಕ್ಕಾಗ ಅದುವೇ ಮಾತ್ರ ಸ್ವರ್ಗದಾನಂದ ತೊದಲು ನುಡಿಯಲಿ ನುಡಿವೆ ನೀ ಕಂದನಿನ್ನೊಡನಾಟವದುವೇ ಎನಗೆ ಚಂದ ಬಾಳಲ್ಲಿ ನಂದಾದೀಪವಾದೇ ನೀ ಕಂದಸಂತೋಷದ ಅಲೆಯಾಗಲಿ‌ ಈ‌ ಅನುಬಂಧ ಪುಟ್ಟ ಪುಟ್ಟ ಹೆಜ್ಜೆ ನೀ ಇಡುವಾಗ‌ ಕಂದಮನೆ ಆಗಿದೆ ಮಂತ್ರಾಲಯದಂತೆ ಮಹದಾನಂದ. ************************

ಕ್ಷಮಿಸಿ ಬಿಡು ಬಸವಣ್ಣ

ಕವಿತೆ ಕ್ಷಮಿಸಿ ಬಿಡು ಬಸವಣ್ಣ ಡಾ.ಶಿವಕುಮಾರ್ ಮಾಲಿಪಾಟೀಲ ನೀ ಹಾಕಿದ ಸಮಾನತೆಯಭದ್ರ ಬುನಾದಿ ಮೇಲೊಂದುಅಸಮಾನತೆಯ ಸೋರುವ ಗುಡಿಸಲು ಹಾಕಿದ್ದೇವೆ— ಕ್ಷಮಿಸಿಬಿಡು ಬಸವಣ್ಣ. ನೀನು ಗಳಿಸಿದ ನೈತಿಕಆಸ್ತಿಯ ಮಾರಿಮಹಾಮನೆಯ ಜಂತಿಮುರಿದು ಉರುವಲಾಗಿಬಳಸುತ್ತಿದ್ದೇವೆ— ಕ್ಷಮಿಸಿಬಿಡು ಬಸವಣ್ಣ. ನಿನ್ನ ಜನ್ಮದಿನದಂದೆಆಸ್ತಿ, ಬಂಗಾರ ಖರೀದಿಸಿಅಕ್ಷಯ ನಿಧಿ ತುಂಬಿಸಿಕೃತಕ ಜಗತ್ತು ಕಟ್ಟುತ್ತಿದ್ದೇವೆ–ಕ್ಷಮಿಸಿಬಿಡು ಬಸವಣ್ಣ ದೇಶ ವಿದೇಶಗಳಲಿ ನಿನ್ನ ಮೂರುತಿ ಸ್ಥಾಪಿಸಿ,ನಿನ್ನ ವಚನಗಳನ್ನುಎಲ್ಲಾ ಭಾಷೆಗಿಳಿಸಿ,ಕಲ್ಯಾಣ ನಾಡನ್ನೆಕಟ್ಟುವುದ ಮರೆತಿದ್ದೇವೆ— ಕ್ಷಮಿಸಿಬಿಡು ಬಸವಣ್ಣ ನಿನ್ನ ವಚನಗಳನ್ನು ಹೇಳುತ್ತ ಕೇಳುತ್ತ ವಚನ ಭ್ರಷ್ಟರಾಗಿ,ಕಾಯಕವೇ ಕಷ್ಟವೆಂದುನಿನ್ನನ್ನು ಕೂಡಲಸಂಗಮದಲ್ಲಿ ದಿನವೂ ಮುಳುಗಿಸುತ್ತಿದ್ದೇವೆ–ಕ್ಷಮಿಸಿಬಿಡು ಬಸವಣ್ಣ […]

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1) ವಾತ್ಸಲ್ಯ ತಾಯಿ ಸೆರಗುಅಂಬರವು ನಾಚಿತುವಾತ್ಸಲ್ಯ ಸಿರಿ. 2) ವಿಸ್ಮಿತ ಸುಖ ಕನಸು :ಕಂದಮ್ಮನ ಮೊಗದಿ :ದೇವ ವಿಸ್ಮಿತ. 3) ಚೆಲವು ಇಳೆ ಚೆಲವು :ಹಸಿರಿನ ಸಿರಿಯು,ನೆಮ್ಮದಿ ಬಿಡು. 4) ಮಧು ಮುತ್ತಿನ ಮಧು :ಮತ್ತೇರಿತು ದುಂಬಿಗೆ,ಶೃಂಗಾರ ಮಾಸ 5) ಹೃದಯ ಖಾಲಿ ಆಗಿತ್ತು :ಕನಸಿಲ್ಲದ ಮನ,ಬೆಂದ ಹೃದಯ. 6) ಸೀಮಂತ ಧರೆ ಸೀಮಂತ :ಹಕ್ಕಿಯ ಗಾನ ಸಭೆ,ನಾಚಿದ ಪ್ರಭೆ. 7) ಹೊಂಬಿಸಿಲು ಕಿರುನಗೆಯು :ಹೊಂಬಿಸಿಲು ಬಾಳಿಗೆ,ಸ್ವರ್ಗವು ಇಲ್ಲೇ. 8) ಹೂ ಬನ […]

ಕಾಡುವ ಹಕ್ಕಿ.

ಕಾಡುವ ಹಕ್ಕಿ ಅಬ್ಳಿ,ಹೆಗಡೆ ಹಾಡು ಹಕ್ಕಿಯೊಂದು  ನಿತ್ಯಕಾಡುತಿದೆ  ‘ಹಾಡು ನೀನು’ಎಂದು.          ಗಂಟಲೊಣಗಿದರೆ         ಕಂಠನುಲಿಯದದು         ಹಾಡಲೇಗೆ ಇಂದು..?    ಮರ್ಮವರಿಯದೆ   ಧರ್ಮ,ಕರ್ಮಗಳ   ನಡುವೆ ಬಂಧಿ ನಾನು.          ಹಾರಲಾಗದಿದೆ         ಭಾರ ರೆಕ್ಕೆಯಿದೆ         ಹೊರಗೆ ಬಂದರೂನು.    ನೋವು,ಹಿಂಸೆಗಳು   ಸುತ್ತ ಕುಣಿಯುತಿವೆ   ಕೊಳ್ಳಿ ದೆವ್ವದಂತೆ.           ಹಸಿರು ಪ್ರಕ್ರತಿಯಾ          ತಂಪು,ಸೊಂಪುಗಳು          ಒಡಲ ಬೆಂಕಿಯಂತೆ.    ಹರಿವನದಿಯಂತೆ   ಬದುಕು ಸರಿಯುತಿದೆ   ಸೆಳವು ಈಜಲಾರೆ.            ಖುಷಿಯ ಬಾನಿನಲಿ           ಹಾಡಿ,ತೇಲುವದು           ಎಂತೋ…?ಹೇಳಲಾರೆ.    ಭಾವ ಬತ್ತಿಹುದುಖುಷಿಯು ಸತ್ತಿಹುದು   ಬರದು ಮಧುರಗೀತೆ.            […]

ಕನ್ನಡಾಂಬೆ

ಕವಿತೆ ಕನ್ನಡಾಂಬೆ ಚಂದ್ರಮತಿ ಪುರುಷೋತ್ತಮ್ ಭಟ್ ಕರುನಾಡ ತಾಯೆ ಭುವನೇಶ್ವರೀ ಅಮ್ಮಾ ಕರುಣೇಶ್ವರೀಕರವ ಮುಗಿದು ಕೇಳುವೆನು ಕರುಣಿಸು ಬಾ ಕರುಣಾಮಯೀ ಬಲಗೈಯಲ್ಲಿ ದೀಪ ಹಿಡಿದ ಜ್ಞಾನದಾತೆ ಅಮ್ಮಾ ನೀನುಎಡಗೈಯಲ್ಲಿ ಪತಾಕೆ ಹಿಡಿದ ನ್ಯಾಯದೇವಿ ಅಮ್ಮಾ ನೀನು ಫಲಪುಷ್ಪ ಭರಿತಳಾಗಿ ಗಿರಿಯನೇರಿ ನಿಂತ ಅಮ್ಮಾ ನೀನುನಮ್ಮೆಲ್ಲರ ಪೊರೆಯುತಿರುವ ಅನ್ನದಾತೆ ಅಮ್ಮಾ ನೀನು ಅದೆಂಥ ಸ್ವರ್ಗ ಸುಖವು ಅಮ್ಮಾ ಜನ್ಮ ಕೊಟ್ಟ ನಿನ್ನ ಮಡಿಲುಮೇಲುಕೀಳು ಎಣಿಸದೆ ದಯಾಮಯಿಯಾದ ಅಮ್ಮಾ ನೀನು ಅದೆಷ್ಟು ಅಂದ ಚೆಂದ ನನಗೆ ನಿನ್ನ ಅಮ್ಮಾ ಎಂದು […]

ಗಜಲ್‌

ಗಜಲ್ ಪ್ರಭಾವತಿ ಎಸ್ ದೇಸಾಯಿ ಪ್ರೀತಿ ಧಿಕ್ಕರಿಸಿದವನಿಗಾಗಿ‌ ನೆನೆಯುತ್ತಿರುವೆ ನಾನೇಕೆ ಹೀಗೆಒಂದು ನುಡಿ ಆಡದವನಿಗಾಗಿ ಕೂಗುತ್ತಿರುವೆ ನಾನೇಕೆ ಹೀಗೆ ಬರುವನೆಂದು ಪಾರಿಜಾತ ಹೂಗಳನ್ನು ಹಾಸಿದ್ದೆ ಹಾದಿಗುಂಟಒಳಗೆ ಹೆಜ್ಜೆ ಇಡದವನಿಗಾಗಿ ಕಾಯುತ್ತಿರುವೆ ನಾನೇಕೆ ಹೀಗೆ ಹೊಂಗೆ ಮರದಲ್ಲಿ ದುಂಬಿಗಳ ಚಲ್ಲಾಟ ಕಂಡು ಉದ್ವೇಗಗೊಂಡೆಇರುಳೆಲ್ಲಾ ಅವನಿಗಾಗಿ ಕನವರಿಸುತ್ತಿರುವೆ ನಾನೇಕೆ ಹೀಗೆ ಹಂದರದ ಬಳ್ಳಿಯಲಿ ತುಂಬಿ ನಲಿಯುತಿದೆ ಸಿಹಿ ಬಂಡು ಹೀರುತ್ತಾತುಟಿಗೆ ಮಧು ಹಚ್ಚದವನಿಗಾಗಿ ಭಜಿಸುತ್ತಿರುವೆ ನಾನೇಕೆ ಹೀಗೆ ಒಂಟಿ ಕೋಗಿಲೆ ವಸಂತಾಗಮಕೆ ಸಂತಸದಲಿ ಹಾಡುತಿದೆ” ಪ್ರಭೆ “ಮಿಡಿಯದ ಹೃದಯ ಮಿಲನಕ್ಕಾಗಿ […]

ಕೊನೆ ಆಗುವ ಮೊದಲು

ಕವಿತೆ ಕೊನೆ ಆಗುವ ಮೊದಲು ಅಕ್ಷತಾ‌ ಜಗದೀಶ ಬಿಸಿಲು‌‌ ಕುದುರೆ ಬೆನ್ನತ್ತಿಓಡಿದೆ ಮನವು ಕಾಲ್ಕಿತ್ತಿಬಯಸಿದ್ದು‌ ಎಲ್ಲಿಯು ಸಿಗದೆ ಹೋಯ್ತುಕಾದ ಜೀವಕೆ ಈಗ ಸುಸ್ತಾಯ್ತು… ಕಾಲವದು‌ ಕಣ್ಮುಂದೆ ಕರಗುತಿದೆಕೈಗೆ ಸಿಲುಕದೆ ಮರೆಯಾಗುತಿದೆಎಲ್ಲವೂ ‌ಬಹುಬೇಗ ಸಾಗುತಿದೆನಾನೇಕೋ ನಿಧಾನವಾದೆನೋ ಎನಿಸುತಿದೆ……. ಎಲ್ಲೋ ಒಂದು ಸಣ್ಣ ‌ಹೊಳಪುಪದೇ ಪದೇ ಅದೇ ಹಳೆ ನೆನಪುಬಾಡಿ ಹೊಗುವ ಮೊದಲೆ ಹೂ..ಮುಡಿ ಸೇರಲಾರದ ನೋವು.. ಮರುಭೂಮಿಯಲ್ಲಿ ಕಾಣಬಹುದೇ ಒರತೆ…ಸಣ್ಣ ಆಸೆ ಇಟ್ಟು‌ ಬರೆದೆ ಈ ಕವಿತೆಕಳಿಸಿ‌ಕೊಡುವೆ ದೇವ ಈ ಬರಹ‌ ನಿನಗೆಹೊಸ‌ ಚಿಲುಮೆ ‌ಉಕ್ಕಲಿ‌ಬಾಳಿಗೆ‌ ಪೂರ್ಣವಿರಾಮ ಇಡುವ […]

ನಾನು ದೀಪ ಹಚ್ಚುತ್ತೇನೆ

ಕವಿತೆ ನಾನು ದೀಪ ಹಚ್ಚುತ್ತೇನೆ ಕಾಡಜ್ಜಿ ಮಂಜುನಾಥ ನಾನು ದೀಪ ಹಚ್ಚುತ್ತೇನೆಮನದ ಕಹಿಗಳು ದಹಿಸಿಹೋಗಲೆಂದು ನಾನು ದೀಪ ಹಚ್ಚುತ್ತೇನೆದ್ವೇಷದ ಯೋಚನೆಗಳುಸುಟ್ಟು ಹೋಗಲೆಂದು ನಾನು ದೀಪ ಹಚ್ಚುತ್ತೇನೆಪ್ರೀತಿಸುವ ಮನಗಳುಹೆಚ್ಚಾಗಲೆಂದು ನಾನು ದೀಪ ಹಚ್ಚುತ್ತೇನೆಜಾತೀಯತೆಯ ಬೀಜಗಳುನಾಶವಾಗಲೆಂದು ನಾನು ದೀಪ ಹಚ್ಚುತ್ತೇನೆಧರ್ಮದ ಹೆಸರಿನಲ್ಲಿ ನಡೆಯುವದೌರ್ಜನ್ಯ ನಿಲ್ಲಲೆಂದು ನಾನು ದೀಪ ಹಚ್ಚುತ್ತೇನೆಬಡವರ ಮನೆಮಗಳ ಮೇಲೆ‌ಅತ್ಯಾಚಾರ ನಿಲ್ಲಲೆಂದು‌ ನಾನು ದೀಪ ಹಚ್ಚುತ್ತೇನೆಧನಿಕರ ದುಡ್ಡಿನ ದರ್ಪಹೊಗೆಯಾಗಿ ಕರಗಲೆಂದು ನಾನು ದೀಪ ಹಚ್ಚುತ್ತೇನೆಉನ್ನತ ಶಿಕ್ಷಣ ಪಡೆದವರು ಮಾಡುವಗುಲಾಮಗಿರಿಯ ನಿಲ್ಲಲೆಂದು ನಾನು ದೀಪ ಹಚ್ಚುತ್ತೇನೆನೊಂದವರಿಗೆ ನ್ಯಾಯಸಿಗಲೆಂದು ನಾನು ದೀಪ […]

ಯಾತ್ರೆ

ಕವಿತೆ ಯಾತ್ರೆ ರಾಜೇಶ್ವರಿ ಚನ್ನಂಗೋಡು ಮುಗಿವಾಗ ನೀನುನನ್ನೆದೆ ಧುತ್ತಂದುನಿಂದುಮುನ್ನಡೆದಿದೆ.ಎದೆಗಿನ್ನೇನು ದಾರಿ?ಇನ್ನೆಷ್ಟು ಮಂದಿ ನನ್ನವರುನನ್ನ ನಾನಾಗಿಸಿದವರುಹೋದಾಗಲೂ ಹೀಗೇ ಮುನ್ನಡೆಯುತಿರುವುದು…ಅರ್ಥಹೀನವೀ ಯಾತ್ರೆಹಿಂದಿದ್ದ ಸುಖವನೆಲ್ಲ ಬಿಟ್ಟು ಮುನ್ನಡೆಯಲೇ ಬೇಕಾದ ಯಾತ್ರೆಅಂದವ ಹುಡುಕಿ ಚಂದವ ಹುಡುಕಿನಡೆದಷ್ಟೂ ಹಿಂದಿನಂದುಗಳೇನೀನಿದ್ದಾಗಿನ ಅವರಿದ್ದಾಗಿನಂದುಗಳೇಸೊಗಸೆಂದರಿತೂಮುಂದಡಿಯಿಡುವ ಯಾತ್ರೆನಾಳೆ ಇವನೂ ಅವಳೂ ಇಲ್ಲದಕಂದರಗಳಿಹವೆಂದರಿತೂನಿಲ್ಲಿಸಲಾಗದ ಯಾತ್ರೆಬೆಳಕಿತ್ತ ನೀನಾರಿದಾಗಇನ್ನಾರೂ ಆರುವ ಮುನ್ನನಾನಾರಿದರೇ ಚೆನ್ನವೆಂದನಿಸುವ ಯಾತ್ರೆಹೇಗೆ ಕಲ್ಪಿಸಿಕೊಳಬೇಕು?ಯಾಕೆ ನಡೆಯಲೆ ಬೇಕೀ ಯಾತ್ರೆ?

Back To Top