Category: ಕಾವ್ಯಯಾನ

ಕಾವ್ಯಯಾನ

“ಬೆಳಕಾಗಲಿ ಬದುಕು”

ಕವಿತೆ ಬೆಳಕಾಗಲಿ ಬದುಕು ಪ್ರೊ.  ಚಂದ್ರಶೇಖರ ಹೆಗಡೆ ಪಲವಿನ್ನೂ ಹಸಿ ಹಸಿಯಾಗಿದೆ ಬನ್ನಿ ಗಿರಾಕಿಗಳೇ ಮುಖವಿಟ್ಟು ಆಸ್ವಾದಿಸಿಬಿಡಿ ಖಾಲಿಯಾಗಿರುವ ಎದೆಯ ಗೂಡಿನೊಳಗೊಮ್ಮೆ ಮಸಾಲೆಯ ಒಗ್ಗರಣೆಯೊಳಗೆ ಬೇಯಿಸಿ ಘಮಘಮಿಸಿಬಿಡಿ ಕಮಟಾಗಿ  ಹಳಸಿಹೋಗುವ ಮುನ್ನ ಯಾರ ಹೆಸರಿನ ಷರಾ ಬರೆದಿದೆಯೋ  ಕತ್ತಿಯಂಚಿನಲಿ ಕತ್ತರಿಸಿಕೊಂಡು  ಹೆಣವಾಗಿರುವ ಜೀವಕೋಶಗಳ ಮೇಲೆ  ಸಾವೊಂದು ಬದುಕಾಗಿದೆ ನನಗೆ ಬದುಕೊಂದು ಸಾವಾಗಿದೆ ಕೊನೆಗೆ ಪಯಣವಿನ್ನು ಯಾರದೋ ಮನೆಗೆ ನೇತುಹಾಕಿರುವ ಅಂಗಡಿಯೊಳಗೆ  ಒಡಲುಗೊಂಡದ್ದೆಲ್ಲವೂ ಬಿಕರಿಗೆ ಕಾಲು ಕೈ ಕಣ್ಣು ತೊಡೆಗಳೆಲ್ಲ ಮಾಗಿದ ಹಣ್ಣುಗಳ ಬನದ ಬೆಲ್ಲ ತನುವ ತುಂಬಿಕೊಳ್ಳಿ […]

ಗಜಲ್

ಗಜಲ್ ರವಿ.ವಿಠ್ಠಲ. ಆಲಬಾಳ. ತುಸು ಹೊತ್ತು ಕಳೆದೆ ,ತುಸು ದೂರ ನಡೆದೆ ,ಸಾಕಿಂದಿಗೆ ಈ ಪ್ರೀತಿಮೋಹಕ ನಗುವಿನಲಿ ಚೆಲುವೆಲ್ಲ ನೋಡಿದೆ ,ಸಾಕಿಂದಿಗೆ ಈ ಪ್ರೀತಿ. ಭಣಗುಡುವ ಎದೆಯಿಂದು ಉಲ್ಲಾಸವನು ತುಂಬಿ ತುಳುಕಿಸಿದೆತುಟಿಕೆಂಪಿನಲಿ ಹೊಸ ಮಿಂಚು ಕಾಣುತಿದೆ ,ಸಾಕಿಂದಿಗೆ ಈ ಪ್ರೀತಿ. ಕಳೆಕಟ್ಟಿಕೊಂಡು ಕಾಣುವ ಕನಸುಗಳಿಗೆ ಸಾವಿರದ ನೆನಕೆ ತಿಳಿಸುವೆಸವಿ ದಿನಗಳ ಕ್ಷಣವನು ತಿರುವಿ ಹಾಕುತಿದೆ ಸಾಕಿಂದಿಗೆ ಈ ಪ್ರೀತಿ . ಏನೆಲ್ಲ ಹೇಳಿದೆ,ಏನೆಲ್ಲ ಕೇಳಿದೆ ,ಬರೀ ಮಾತುಗಳಾಗೇ ಉಳಿದಿವೆದೂರವಿದ್ದರೂ ಸರಿಯೇ ,ನಿನ್ನ ಬಿಂಬ ಇಲ್ಲಿದೆ ಸಾಕಿಂದಿಗೆ ಈ […]

ಗಜಲ್

ಗಜಲ್ (ಸಂಪೂರ್ಣ ಮತ್ಲಾ ಗಜಲ್) ಸಿದ್ಧರಾಮ ಹೊನ್ಕಲ್ ನನ್ನ ಸಖಿ ಈ ಜಗದಿ ಅಪರೂಪ ಏನನೂ ಬೇಡಳುಕೊಡುವೆ ಅಂದಾಕ್ಷಣವೇ ಕೋಪದಿ ಕ್ಷಣ ಮುನಿವಳು ಏನು ಕೊಟ್ಟರು ಕಡಿಮೆ ಅವಳಿಗೆ ಅಂತಹ ಗುಣದವಳುಮುಳ್ಳು ತರಚುವ ಮೃದು ಮಧುರ ಗುಲಾಬಿ ಅಂಥವಳು ಬೇಡ ಕೊಟ್ಟಷ್ಟು ಆಸೆ ಬೆಳಿವವು ಅಂದು ಕೊಂಡಿಹಳುಆಸೆಯೇ ಇಲ್ಲದ ಅಪ್ಪಟ ಬಂಗಾರು! ನನಗೆ ಸಿಕ್ಕಿಹಳು ತಾ ಕೊಡುವದರಲು ಹೀಗೆ ಬಲೂ ಕಂಜೂಸಿ ಮನದವಳುಮಾತೇ ಮುತ್ತಾಗಿಸಿದವಳು ಬೇಗ ಮುತ್ತು! ಸಹ ನೀಡಳು ಅಭಿಮಾನದಿ ಪ್ರೀತಿ ಪ್ರೇಮದ ಹೊಳೆಯ ಹರಿಸುವಳುಹೊಟ್ಟೆ […]

ಕಾರ್ಮಿಕ

ಕವಿತೆ ಕಾರ್ಮಿಕ ಆನಂದ ಆರ್ ಗೌಡ ತಾಳೇಬೈಲ್ ಹೊತ್ತಿನ ಹಸಿವು ನೀಗಿಸಲುಸವೆದ ಶ್ರಮ ಬೆಮರಾಗಿ ಮುತ್ತಿಡುತ್ತಿದೆವಾಸವಿಯ ಹಣೆಗೆ ನಿನ್ನ ಅಳುಕು ನಿನ್ನ ಫೋಟೋಜಗವೇ ತೆಗೆದು ತುರುಕಿದೆ ಗ್ಯಾಲರಿಗೆನೀನು ನೀನೆಂದು ಸಾರಲು ನೀ ಮಾತ್ರ ಕೋಲೆಬಸವಕೊಟ್ಟ ಬಟ್ಟೆಗೆ ಇಟ್ಟ ಕೂಲಿಗೆ ಬಸವಳಿದರೂಅವರ ಇನಾಮಿಗೆ ಸಲಾಮು ನಿನ್ನದು ಶ್ರಮದ ಫಲ ತಟ್ಟೆ ತುಂಬಲಿಲ್ಲಕೊಟ್ಟ ಪಂಚೆ ಮಾನ ಮುಚ್ಚುತ್ತಿಲ್ಲಕಾಯಕಕಂಟಿದ ಚಟ ಚಟ್ಟವೇರಲು ಕಾದಿದೆ ಈ ಜೀತ ಜೀವ ಹಿಂಡಿದರುಮುಕ್ತಿ ಪಡೆಯಲು ಪ್ರೇರಕವಾಗಿಲ್ಲಮೋಕ್ಷವೇ ಹಸಿವಾಗಿ ಪ್ರೇತವಾಗಿ ಕಾಡಿದೆ ಬೆವರ ಕೈಗಳು ತೊಳೆವ ಕೊಳೆಯುಸಿರಿಯ […]

ಜ್ಯೋತಿ

ಹಾಯ್ಕುಗಳು ಜ್ಯೋತಿ ಭಾರತಿ ರವೀಂದ್ರ ಬಾ ಓ ಬೆಳಕೆಬಾಳಿನ ಕತ್ತಲೆಯ ತೆರೆಸರಿಸಿ. ನೀಗು ನೀ ಮನಗಳಮೂಢತೆಯ ಅಂಧಕಾರವನು ತೊಲಗಿಸೋಮತಿಯನು . ನಾನು ನಾನೆಂಬದುರಭಿಮಾನವನುದೂರ ಮಾಡೋ ಬೇಗ ನೀ ಬಂದುಬೆಳಗಿಸು ಹೃದಯಜ್ಯೋತಿಯನು. ***********************************

ಗಜಲ್

ಗಜಲ್ ಶ್ರೀಲಕ್ಷ್ಮಿ ಆದ್ಯಪಾಡಿ. ಕಣ್ಣ ಜಗತ್ತಿನಲ್ಲೇ ಸಾವಿರ ಸಾವಿರ ನಕ್ಷತ್ರಗಳ ಚಿಮ್ಮಿಸಿದವನು ಅವನಿರುವುದೇ ಹಾಗೆ ಮೀಸೆಯ ತುಂಟ ನಗೆಯಲ್ಲೇ ಸಾವಿರ ಕನಸುಗಳ ಹೊಮ್ಮಿಸಿದವನು ಅವನಿರುವುದೇ ಹಾಗೆ ಮೌನವನ್ನಪ್ಪಿದ್ದ ನನ್ನೆದೆಯ ತಂತಿಯನ್ನು ಮತ್ತೆ ಬಿಗಿದು ಹೊಸ ರಾಗ ಮೀಟಿದನು ನನ್ನದೆಯ ಪ್ರತಿ ಬಡಿತದಲ್ಲೂ ನಲಿವಿನ ರಾಗಗಳ ಬೆರೆಸಿದವನು ಅವನಿರುವುದೇ ಹಾಗೆ ಕುದಿಯುತ್ತಿದ್ದ ತಪ್ತ ಎದೆಗೆ ತಂಪಿನ ಹನಿ ಬೆರೆಸಿ ಬದುಕಿನಲ್ಲಿ ಹೊಸ ಕನಸ ಬಿತ್ತಿದನು ಕಮರಿ ಹೋಗಿದ್ದ ಕನಸುಗಳಿಗೆ ಮತ್ತೆ ಹೊಸ ಜೀವ ತುಂಬಿದವನು ಅವನಿರುವುದೇ ಹಾಗೆ ಮೊರೆಯುತ್ತಿದ್ದ […]

ಗಜಲ್

ಗಜಲ್ ಶಮಾ. ಜಮಾದಾರ. ತರಗಲೆಯ ಅಲುಗಾಟದಲಿ ನಿನ್ನ ಕಾಲ್ಸಪ್ಪಳಕೆ ಕಾಯುತಿರುವೆಕೊರಕಲಿನ ಇಳಿಜಾರಿನಲಿ ನಿನ್ನ ದರುಶನಕೆ ಕಾಯುತಿರುವೆ ಲೋಕದ ನಾಲಿಗೆ ಹೊಸದೊಂದು ಪಟ್ಟಕಟ್ಟಿ ನಗುತಿದೆಅಮವಾಸ್ಯೆ ರಾತ್ರಿಯಲಿ ಬೆಳದಿಂಗಳಕೆ ಕಾಯುತಿರುವೆ ಯುಗಗಳಿಂದಲೂ ಪ್ರೀತಿ ನಿರೀಕ್ಷೆಯಲಿ ಪರಿತಪಿಸಿದೆನಿರ್ಭೀತ ಹೊಸಗಾಳಿಯಲಿ ಉಸಿರಾಟಕೆ ಕಾಯುತಿರುವೆ ಮನುಜ ಮಾಡಿದ ಮತಪಂಗಡಗಳು ಬೇಲಿ ಕಟ್ಟುತ್ತಲಿವೆಸೌಹಾರ್ದದ ಹೃದಯಗಳಲಿ ಸಮನ್ವಯಕೆ ಕಾಯುತಿರುವೆ ಎದೆಯ ಗೂಡುಗಳಲಿ ನಗಬೇಕು ನಿಸ್ವಾರ್ಥ ಶಮೆಗಳುಕಳಚಿದ ಬೇಡಿಗಳಲಿ ಅನುಸಂಧಾನಕೆ ಕಾಯುತಿರುವೆ **********************************

ಕಾವ್ಯಯಾನ

ಆಯ್ಕೆ ಪವಿತ್ರ ಎಂ. ‘ಮರ ಬೆಳೆಸಿ’ಧರೆ ಉಳಿಸಿಕೂಗುತಿದೆ ಜಾಹಿರಾತು.ಉರುಳಿಸಿ ಅಗಲಿಸಿಡಾಂಬರರಿಸಿ ಪೋಷಿಸುತಿದೆನಿಯಮದಾದೇಶ.ಅದು ಮತಿಗಾಯ್ಕೆ ಅಗ್ನಿಪರೀಕ್ಷೆಜಾಣ್ಮೆಗಾಯ್ಕೆ ವಿವೇಕಕಾಯ್ಕೆಮಗುವ ಚಿವುಟಿ ಲಾಲಿ ಹಾಡ್ವಕವಲದಾರಿ ಪಯಣ!ತೋರಿಕೆಗೇಕೆ ಧೋರಣೆ?ಜನರಾಯ್ಕೆ ನೀನುಕಾಯ್ವ ಹೊಣೆ ನಿನ್ನದೇ. ***********************

ಪವರ್ ಲೂಮ್…!

ಪವರ್ ಲೂಮ್…!(ನೇಕಾರನ ಸ್ವಗತ) ಡಾ. ಅರಕಲಗೂಡು ನೀಲಕಂಠ ಮೂರ್ತಿ ಹೊತ್ತು ಕೂಡ ಮೂಡದ ಹೊತ್ತಿಗೆಈಜುಗಾರ ತುಂಬು ಹೊಳೆ ಧುಮಿಕಿದ ಹಾಗೆ,ಮೈಮುರಿವ ಆಯಾಸದಲುಒಂದು ದಿನ ತಪ್ಪದ ಹಾಗೆಗುಂಡಿಯೊಳು ಇಳಿದರಾಯ್ತು – ಕಾಲೊದರಿ…‘ತನ್ನ ಪುಟ್ಟ ಎಳೆಯ ಹಾಸುಹೊಕ್ಕಲಿನೂಲಿಗೇ ಅರಿವೆ ನೇಯುವ ಸಿರಿಲಾಳಿಗೋ ಮುಗಿಲಂತೆ ಗುಡುಗಿಹರಿದೋಡುವ ತವಕ!’ ನೇಯುವುದುನಮಗೆ ಅಂತರಂಗದಲಿ ಒಪ್ಪಿಅಪ್ಪಿದ ಕಸುಬುಹಗಲಿರಲಿ ಇರುಳಿರಲಿಅಥವ ನಡುರಾತ್ರಿಯೇ ಇರಲಿಬೆತ್ತಲೆ ಬೆಚ್ಚಗೆ ಮುಚ್ಚುವ ಬದುಕಲಿಮನೆಯ ಒಬ್ಬೊಬ್ಬರಿಗೂ ಕೈತುಂಬ ಕೆಲಸ!ಇಷ್ಟಾದರೂ ಒಂದೆರಡು ನವೆದ ಅಂಗಿತೇಪೆಯಾದ ಪಂಚೆ ನಮ್ಮೊಡಲ ಮುಚ್ಚಲುಒಳಗಿರದು ಒಂದು ಕಾಚ ಎಂದೂ! ದಢಕ್ಕನೆ-ನಮ್ಮ ತುತ್ತಿನ […]

ಗಜಲ್

ಗಜಲ್ ರವಿ.ವಿಠ್ಠಲ.ಆಲಬಾಳ. ಬರೀ ಬತ್ತಿ ಬೇಕಾಗುವುದಿಲ್ಲ ದೀಪ ಬೆಳಗಲುಬರೀ ನೇಹ ಸಾಕಾಗುವುದಿಲ್ಲ ದೀಪ ಬೆಳಗಲು. ಕಡ್ಡಿ ಗೀರಿ ಸುಮ್ಮನಿರಬೇಡಿ ಒಂದು ದೀಪಕ್ಕೆನಿಮ್ಮ ಕೈಗಳಷ್ಟೇ ಆಸರೆಯಲ್ಲ ದೀಪ ಬೆಳಗಲು. ಉರಿಯುವ ದೀಪಕೂ ಗಾಳಿಯ ಅಗತ್ಯವಿದೆಶ್ವಾಸಕೋಶ ಅದಕ್ಕೂಇದೆಯಲ್ಲ ದೀಪ ಬೆಳಗಲು ಮನಸಿನ ಭಾವಗಳಲ್ಲಿ ತಮವೇ ತುಂಬದಿರಲಿಸಂಬಂಧದ ಕೊಂಡಿ ಬೇಕೇಬೇಕಲ್ಲ ದೀಪ ಬೆಳಗಲು ಸುಮ್ಮನೇ ದೀಪ ಹಚ್ಚಿ ದೀಪಾವಳಿ ಎಂದರಾಯಿತೆ?ಮನೆಮನೆಯಲಿ ಸುಖ ಇರಬೇಕಲ್ಲ ದೀಪ ಬೆಳಗಲು. ರವೀ, ಜೀವನದ ಹೆಜ್ಜೆಗುರುತನೆಂದೂ ಮರೆಯಬೇಡಒಂದಿನವಾದರೂ ನಾವು ಗೆಲ್ಲಲೇಬೇಕಲ್ಲ ದೀಪ ಬೆಳಗಲು *******************

Back To Top