Category: ಕಾವ್ಯಯಾನ

ಕಾವ್ಯಯಾನ

ಕವಿತೆಯೆಂದರೆ

ಕವಿತೆ ಪ್ರೇಮಶೇಖರ ಕವಿತೆಯೆಂದರೆ ಏನು?ಏನಲ್ಲ? ಕವಿತೆಯೆಂದರೆ ಕತ್ತಲೆಬೆಳಕಿನಾಟದ ಜೀವನರಂಗಮಂಚ. ಕವಿತೆಯೆಂದರೆ ಸಮುದ್ರತೀರದ ಸತ್ತ ಮೀನುಅರಳಿಸುವ ಮಲ್ಲಿಗೆಸುವಾಸನೆ, ಕವಿತೆಯೆಂದರೆ ಹೆಣ್ಣುನಾಗರಇಟ್ಟ ನೂರೊಂದು ಮೊಟ್ಟೆಗಳೊಡೆದು ಬಂದನವಿಲುಗರಿಗಳು. ಕವಿತೆಯೆಂದರೆ ಪ್ರೇಯಸಿಕೊಟ್ಟ ಮುತ್ತುಒಡೆದುಹೋಗಿಧಾರಾವಾಹಿಯಾದ ನಿರೀಕ್ಷೆ. ಕವಿತೆಯೆಂದರೆ ಬೀಸಣಿಗೆಯ ಬಣ್ಣದ ರೆಕ್ಕೆಯ ಗಿಣಿಮರಿಗೆ ಮಾತು ಕಲಿಸಹೊರಟಮಗು. ಕವಿತೆಯೆಂದರೆ ನಾಳೆಹಾರಿ ಹೋಗುತ್ತದೆಎಂದು ಗೊತ್ತಿದ್ದರೂ ಇಂದುಗುಟುಕು ನೀಡುವತಾಯಿಹಕ್ಕಿ. ಕವಿತೆಯೆಂದರೆ ಅಕ್ಷತಯೋನಿಒಂಬತ್ತು ಹೆತ್ತು ಮೂಲೆಯಲ್ಲಿಕೂತ ಅಡುಗೂಲಜ್ಜಿಕತೆ. ಕವಿತೆಯೆಂದರೆ ತಾಯಿಹುಲ್ಲೆಯನು ಕೊಂದುತಿಂದುಎಳೆಹುಲ್ಲೆಗೆ ತಾಯಿಯಾಗಿ ಹಾಲೂಡಿಸಿದ ಹೆಣ್ಣುಹುಲಿ. ಕವಿತೆಯೆಂದರೆಕೊನೆಗೂ ಏನುಂಟು?ಏನಿಲ್ಲ? ಅಹ್ ಕವಿತೆಯೇ ಅಂತಿಮವಾಗಿ ನೀನೇ ಎಲ್ಲ,ನಾನೆಲ್ಲೂ ಇಲ್ಲ. **********************

ಚೈತ್ರಾ ಕಾವ್ಯಗುಚ್ಛ

ಚೈತ್ರಾ ಶಿವಯೋಗಿಮಠ ಕಾವ್ಯಗುಚ್ಛ ಕೊರೋನಾ ಖೈದಿ ದಿನ ರಾತ್ರಿಗಳಿಗೆ ವ್ಯತ್ಯಾಸವೇ ಇಲ್ಲಉದಯಾಸ್ತಮಾನಗಳ ನಡುವೆಭೂಮ್ಯಾಕಾಶದ ಅಂತರ.ಗಡಿಯಾರದ ಮುಳ್ಳುಗಳುಅಪೌಷ್ಟಿಕತೆಯಿಂದ ನರಳುತ್ತಿವೆಚಲನೆ ಅದೆಷ್ಟು ಕ್ಷೀಣವೆಂದರೆಒಂದು ಹೆಜ್ಜೆ ಇಡಲೂ ಆಗದ,ಕೀಲಿಲ್ಲದ ಮುದುಕಿಯ ಹಾಗೆಕೈಲಾಗದಿದ್ದರೂ ಬೊಬ್ಬಿಡುವುದಕೇನೂಕಡಿಮೆ ಇಲ್ಲ ‘ಟಿಕ್’ ಎಂಬ ಶಬ್ದಮಾತ್ರ ಕಿವಿಯೊಳಗೆ ಕಾದ ಸೀಸಹೊಯ್ದಷ್ಟು ಕಠೋರ. ಆಗೊಮ್ಮೆ-ಈಗೊಮ್ಮೆನರ್ಸಗಳ ಅಡ್ಡಾಡುವಿಕೆ ಮಾತ್ರನಾನಿನ್ನೂ ಮನುಷ್ಯರ ನಡುವಿರುವುದಕೆಪುರಾವೆ.ಖಾನೆಯೊಳಗೆ ಖಾಲಿತನ ತುಂಬಿಉಸಿರಾಟದ ಭದ್ರತೆ ಕಾಯ್ದುಕೊಂಡು ಏಳು ದಿನಗಳನ್ನಏಳು ವರ್ಷಗಳಂತೆ ಕಳೆದು ಬರುವ ಖೈದಿ! ಕಣ್ಣಾಮುಚ್ಚಾಲೆ ತಪ್ಪಿಸಿಕೊಳ್ಳುವುದಕ್ಕೆ ಹೇಳುತ್ತಿದ್ದ ಕುಂಟುನೆಪಗಳಿಂದು ಬಂಧಿಸುವುದಕ್ಕೆಬರುವ ಭಟನಂತೆ.ಜ್ವರವೆಂದು ನರಳುವ ಹಾಗಿಲ್ಲರಾಕ್ಷಸನಂತೆ ಹಗಲಿರುಳೆನ್ನದೆ ದುಡಿದುಒಂದೆರಡು ದಿನವೂ […]

ಚೇತನಾ ಕುಂಬ್ಳೆ ಕಾವ್ಯಗುಚ್ಚ

ಚೇತನಾ ಕುಂಬ್ಳೆ ಕಾವ್ಯಗುಚ್ಚ ನಿರೀಕ್ಷೆ ನಿನ್ನ ಕೈಹಿಡಿದು ನಡೆದ ದಾರಿಯಲ್ಲಿಹೆಜ್ಜೆಗುರುತುಗಳು ಇನ್ನೂ ಮಾಸಿಲ್ಲನಿನ್ನ ಹೆಸರ ನೆಪದಲ್ಲಿ ಅಂಗೈಯಲ್ಲಿ ಹಚ್ಚಿದಮದರಂಗಿಯ ಬಣ್ಣ ಇನ್ನೂ ಅಳಿಸಿಲ್ಲ ಸಮಯವನ್ನು ದೂಷಿಸುತ್ತಾದಿನ ರಾತ್ರಿಯೆನ್ನದೆಕಾದಿದ್ದೆ ಕಾತರಿಸಿದ್ದೆಬಯಸಿದ್ದೆ ನಿನ್ನ ಸೇರಲು ಕಣ್ಗಳಿಂದುದುರಿದ ಹನಿಗಳುಮಣ್ಣಿನಲ್ಲಿ ನರಳುತ್ತಿದೆತನು ಮನ ತಣ್ಣಗಾಗಿದೆನಿನ್ನ ಬಿಸಿಯುಸಿರ ಬಿಸುಪಿಲ್ಲದೆ ಅದೆಷ್ಟು ಚುಚ್ಚು ಮಾತುಗಳನ್ನಾಲಿಸಿದ್ದೆಎಷ್ಟೊಂದು ಕೆಂಗಣ್ಣುಗಳಿಗೆ ಗುರಿಯಾಗಿದ್ದೆಎದೆ ಸೀಳುವಂತ ನೋವಿದ್ದರೂಬಲವಂತದಿ ತುಟಿಗಳಲ್ಲಿನಗುವ ತರಿಸಿದ್ದು ನಿನಗಾಗಿಯೇ ಜೊತೆಗಿದ್ದ ಒಂದಷ್ಟು ಕ್ಷಣಗಳುನೋವನ್ನು ಮರೆಸುತ್ತವೆನಿನ್ನ ನೆನೆಯುವಾಗಲೆಲ್ಲನೀನಿತ್ತ ನೆನಪುಗಳು ಸಂತೈಸುತ್ತವೆ ಈಗಲೂ ಕಣ್ಣ ನೋಟಗಳುಬಾಗಿಲಿನತ್ತ ಸರಿಯುವುದು ನಿಲ್ಲಲಿಲ್ಲನಿನ್ನಲ್ಲಿಟ್ಟ ನಂಬಿಕೆಗಳುಇನ್ನೂ ಸುಳ್ಳಾಗಲಿಲ್ಲ ಕಾರಣ […]

ನೀನೆಂದರೆ ಆಕಾಶದಾಚೆಯ ಖುಷಿ

ನೀನೆಂದರೆ ಆಕಾಶದಾಚೆಯ ಖುಷಿ ಪ್ರೇಮಾ ಟ.ಎಂ.ಆರ್. ನೀ ಮಡಿಲಲ್ಲಿ ಮಲಗಿದ್ದೆನಿನ್ನ ಮೆತ್ತಗೆ ಸವರಿದೆ ನಾನುಆಕಾಶ ಮುಟ್ಟಿದ ಖುಶಿಯೇಉಹುಂ ಅದು ಕಡಿಮೆಯೇ ಹೋಲಿಕೆಗೆಮುಗಿಲ ಚುಕ್ಕಿನೀನು ಬೊಗಸೆಯೊಳಗಿದ್ದೆನಿನ್ನ ಕಣ್ಣೊಳಗೆ ಬರೀ ನಾನಿದ್ದೆನಿನ್ನ ಕೆಂಪು ಬೆರಳುಗಳ ಪುಟ್ಟ ಬಿಗಿಮುಷ್ಠಿಯೊಳಗೆ ನಾನು ಹುದುಗಿ ಕೂರಬೇಕೆಂದುಕೊಂಡೆ ನಿನಗೆ ಎದೆಯೂಡುತ್ತಿದ್ದೆ ನಾನುಜಗದಾವ ನೋವುಗಳೂ ನಿನ್ನಮುಟ್ಟಕೂಡದೆಂಬ ಕಕ್ಕುಲಾತಿಯಲ್ಲಿನಿನಗೆ ಹಾಲನ್ನದ ತುತ್ತು ಇಕ್ಕುತ್ತಿದ್ದೆಚಂದ್ರ ಚಂದ ನಗೆ ನಗುತ್ತಿದ್ದನಿನಗೆ ಜುಟ್ಟು ಕಟ್ಟುತ್ತಿದ್ದೆ ನಾನುಇನ್ನೊಂದು ಹಡೆವ ಬಯಕೆನನ್ನ ಕಾಡದಿರಲೆಂದುನಿನಗೆಂದೇ ಇರುವ ವಾತ್ಸಲ್ಯಹಂಚಿ ಹೋಗದಿರಲೆಂದು ಅಂದು ನೀ ಕಿತ್ತಾಡಿದ ಪಾತ್ರೆ ಸ್ಟೆಂಡ್ ಚಪ್ಪಲಿಗೂಡು […]

ಹಂಗೇಕೆ..?

ಕವಿತೆ ಹಂಗೇಕೆ..? ವೀಣಾ ಪಿ. ಹಂಗೇಕೆ..?ಇಹದ ಅಂಗೈಯಹುಣ್ಣಿಗೆಕನ್ನಡಿಯ ಹಂಗೇಕೆ..? ಮೆರುಗು ಮೌನದಮಂದಿರಕೆಮಾತಿನ ಹಂಗೇಕೆ..? ಶುದ್ಧ ಶ್ವೇತದಒನಪಿಗೆರಂಗಿನ ಹಂಗೇಕೆ..? ಗತಿಯ ಗಮ್ಯದನಡುಗೆಗೆಗತದ ಹಂಗೇಕೆ..? ಅಗ್ನಿಗೆದೆಯೊಡ್ಡಿ ಗೆದ್ದಪಾವನೆಗೆಪತಿತತೆಯ ಹಂಗೇಕೆ..? ರಾಗ-ದ್ವೇಷಗಳಳಿದವಿರಕ್ತೆಗೆಅನುರಕ್ತಿಯ ಹಂಗೇಕೆ..? ಬಂಧನವ ಕಳಚಿಟ್ಟ ದಿಟ್ಟಪರಿವ್ರಾಜೆಗೆಸಂಘದ ಹಂಗೇಕೆ..? ಬದ್ಧ ಬದುಕ ಧನ್ಯಾತ್ಮಭಾವಕ್ಕೆಸಾವಿನಾಚಿನ ಮುಕ್ತಿಯ ಹಂಗೇಕೆ..? ***********************************

ರೇಖಾಭಟ್ ಕಾವ್ಯಗುಚ್ಛ

ರೇಖಾಭಟ್ ಕಾವ್ಯಗುಚ್ಛ ಮರುಹುಟ್ಟು ಇಳಿಯಬೇಕು ನೆನಪಿನಾಳಕೆಮುದಗೊಳ್ಳಬೇಕುಎದುರಿಗೆ ಹಾಸಿ ಹರವಿಕೊಂಡುಚೆನ್ನ ನೆನಪುಗಳಆಯಸ್ಸು ಹೆಚ್ಚಿಸಬೇಕುಮೆತ್ತಗಾದ ಹಪ್ಪಳ ಸಂಡಿಗೆಗಳುಬಿಸಿಲಿಗೆ ಮೈಯೊಡ್ಡಿಗರಿಗರಿಯಾಗಿ ಡಬ್ಬಿ ಸೇರುವಂತೆನೆನಪುಗಳು ಸದಾ ಬೆಚ್ಚಗಿರಬೇಕು ಒತ್ತಿ ತಡೆ ಹಿಡಿದ ನೋವಿಗೂಆಗಾಗ ಬಿಕ್ಕಲುರಂಗ ಸಜ್ಜಿಕೆ ಬೇಕುತುಂಬಿಕೊಂಡ ಮಂಜು ನಂಜುಪೂರ್ತಿ ಹೊರಹೋಗಬೇಕು ಬಾಚಿ ಕರೆಯಬೇಕುನೆನಪೆಂಬ ನೆಂಟನನ್ನುನಿನ್ನೆಯ ನಂಟಿನ ಗಂಟುಗಳಬಿಡಿಸುತ್ತ ಹರಟಬೇಕುಅಂಟಿಯೂ ಅಂಟದಿರುವನೆನಪಿಗೆ ಮೀಸಲಾದಸಾಕ್ಷ್ಯಗಳಹೊರಗೆಳೆದು ಹೊದೆಯಬೇಕು ಇರಬೇಕು ನಿನ್ನೆಗಳಿಗೂನೆನಪುಗಳೆಂಬ ಮರುಹುಟ್ಟುಆಗಾಗ ಹಾಯುತಿರಲಿಇಲ್ಲಸಲ್ಲದ ನೆಪವಿಟ್ಟು.. ಅರ್ಥವಾಗದಿದ್ದರೆ ಹೇಳಿ ಅವನು ನನ್ನ ಕಂಗಳಲ್ಲಿಹೊಳೆಯುತ್ತಾನೆಹೊಳೆಯೂ ಆಗುತ್ತಾನೆಇಷ್ಟು ಸಾಕಲ್ಲವೇ ನಿಮಗೆಅವನು ನನಗೇನೆಂದು ತಿಳಿಯಲು ಅವನ ನಗುವ ಕಂಡು ನಾನುಪೂರ್ತಿ ಖಾಲಿಯಾಗುತ್ತೇನೆಆ […]

ಕೆಲವರು ಹಾಗೆ

ಕವಿತೆ ರೇಷ್ಮಾ ಕಂದಕೂರ. ಕೆಲವರು ಹಾಗೆಕೆಲಸ ಸಾಧಿಸುವ ತನಕ ಒಡನಾಡಿಗಳುನಂತರ ಸರಿದುಹೋಗುವ ನರನಾಡಿಗಳು ಕೆಲವರು ಹಾಗೆಗೆಲ್ಲುವ ಕುದುರೆಯಿಂದ ಓಡುತಸಲಾಮು ಮಾಡಿ ಬೇಳೆ ಬೇಯಿಸಿಕೊಳ್ಳುವರು ಕೆಲವರು ಹಾಗೆಮೋಹದ ಬಲೆಯ ಬೀಸಿಕಬಳಿಕೆಯ ನಂತರ ತಿರುಗಿನೋಡದವರು ಕೆಲವರು ಹಾಗೆಮುಂದೊಂದು ನಡೆಯಲಿಹಿಂದೆ ಧೂರ್ತರಾಗಿ ಗುದ್ದುಕೊಡುವರು ಕೆಲವರು ಹಾಗೆನಿಷ್ಟಾವಂತರಂತೆ ನಟಿಸಿಒಳಗೊಳಗೆ ಕೊರೆಯುವ ಕೀಟದಂತವರು ಕೆಲವರು ಹಾಗೆಸತ್ಯ ಗೊತ್ತಿದ್ದರು‌ಸುಳ್ಳಿನ ಬಿಡಾರ ಹೂಡುವರು ಕೆಲವರು ಹಾಗೆನೇಮ ನಿತ್ಯ ಮಾಡುತಕಳ್ಳನೋಟ ಬೀರುವರು ಕೆಲವರು ಹಾಗೆಜೊತೆಗಾರರಂತೆ ಮುಖವಾಡದಿಗುಪ್ತಚರರಂತೆ ಸಂಚನು ಹೂಡುವರು ಕೆಲವರು ಹಾಗೆಗೊತ್ತಿದ್ದರು ಅವರು ನಮ್ಮವರುಎಂಬ ಭ್ರಮೆಯಲಿ ಸಹಿಸಿಕೊಳ್ಳುವರು. *****

ವಸುಂಧರಾ ಕಾವ್ಯಗುಚ್ಛ

ವಸುಂಧರಾ ಕದಲೂರು ಕಾವ್ಯಗುಚ್ಛ ಮುಖ್ಯ- ಅಮುಖ್ಯ ಮೇಲುಕೀಳಾಟದ ಯಾವತ್ತೂಯುದ್ಧ ಬೇಕಿಲ್ಲ. ಈ ಹೊತ್ತಿನ ತುತ್ತು;ಎಂದಿಗೆ ಒಲೆ ಹೊತ್ತಿ ಅನ್ನವೋಗಂಜಿಯೋ ಬೆಂದರಾಗುತ್ತಿತ್ತು, ಈಸತ್ಯದ ಬಾಬತ್ತೇ ನಮಗೆ ಮುಖ್ಯ. ಚದುರಂಗದಾಟ ಎಂದೆಣಿಸಿ, ದಾಳಉದುರಿಸಿ, ಗಾಳ ಹಾಕಿ -ದಾಳಿಮಾಡಿ, ಕೋಟೆಗೋಡೆಗಳನು ಕಟ್ಟುತ್ತಾಕೆಡವುತ್ತಾ, ಸಿಂಹಾಸನಾರೋಹಣ,ಪದಾಘಾತ- ಅಧಃಪತನ ಯಾರಿಗಾದರೇನು?ನಮಗೆ ಅಮುಖ್ಯ. ಯುದ್ಧವೆಂದರೆ ಕಂದನ ತೊಟ್ಟಿಲಮೇಲೆ ತೂಗುಬಿದ್ದ ಘಟಸರ್ಪ; ಕಕ್ಕಿದರೂಕುಕ್ಕಿದರೂ ಆಪತ್ತೇ. ಬದುಕು ಕಸಿದಂತೆ,ಆಸೆ ಕುಸಿದಂತೆ ಮಾಡುವೀ ಅಜೀವನ್ಮುಖಿಯುದ್ಧ ನಮಗೆ ಅಮುಖ್ಯ. ಹೂವಿನೊಡಲ ಮಕರಂದಕೆ ಎರವಾಗುವದುಂಬಿಯಾಡುವ ಯುದ್ಧ; ಮಳೆಮೋಡದತಡೆಗೆ ಬೆಟ್ಟ ಸಾಲು ಹೂಡುವ ಹುಸಿ ಯುದ್ಧ,ಹಸಿದ […]

ನಾಗರೇಖಾ ಕಾವ್ಯಗುಚ್ಚ

ನಾಗರೇಖಾ ಗಾಂವಕರ್ ಕಾವ್ಯಗುಚ್ಚ ಅಸ್ವಸ್ಥ ಮಂಚದ ಮೇಲೆ ಬೆಳದಿಂಗಳ ರಾತ್ರಿಯಲ್ಲಿಕೊಳ್ಳಿ ದೆವ್ವವೊಂದುಮನೆಯ ಮೂಲೆಯೊಳಗೆ ನುಸುಳಿಬಂದಂತೆತಬ್ಬಿದ ಜಾಡ್ಯ.ಆಸ್ಪತ್ರೆಯ ಮಂಚದ ಮೇಲೆಸೂರು ನೋಡುತ್ತಾ ಬೆದರಿ ಮಲಗಿದಾಗ,ಮೊಣಕೈಗೆ ದಪ್ಪ ಬೆಲ್ಟೊಂದನ್ನುಸುತ್ತಿ, ನರ ಹುಡುಕಲು ಬೆರಳಿಂದಮೊಟಕುವ ದಪ್ಪ ಕನ್ನಡಕದ ನರ್ಸಮ್ಮತತ್ತರಿಸಿ ಬಿದ್ದ ರಕ್ತನಾಳಗಳು ಜಪ್ಪಯ್ಯ ಎನ್ನದೇಅಂಟಿಕೊಂಡು ಸೀರಿಂಜಿಗೂರಕ್ತ ನೀಡಲು ಒಲ್ಲೆ,ಎನ್ನುವಾಗಲೇಕಂಬನಿಯ ತುಟಿಯಲ್ಲಿನುಡಿಯುವ ಕಣ್ಣುಗಳುಒಸರಿದ ರಕ್ತದ ಅಂಟಿದ ಕಲೆಗಳು ಆಯಾಸದ ಬೆನ್ನೇರಿ ಬಂದಗಕ್ಕನೇ ಕಕ್ಕಬೇಕೆನ್ನುವ ಇರಾದೆತರಗುಡುತ್ತಿದ್ದ ದೇಹವನ್ನುಸಂಭಾಳಿಸಲಾಗದೇ ಇರುವಾಗಲೇಮುಲುಗುಡುವ ದೇಹಗಳು ಖಾನೆ ಖಾನೆಗಳಲ್ಲಿಬೇನೆ ತಿನ್ನುವ ವೇದನೆಯ ನರಳಾಟನೋವು ತಿಳಿಯದಂತೆ ಬರಲಿನಿರಾಳ ಸಾವು. ಸಾವೆಂದರೆ ಸಂಭ್ರಮದ […]

ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ

ಡಾ.ಪ್ರೇಮಲತ ಬಿ. ಕಾವ್ಯ ಗುಚ್ಚ ನೆನಪುಗಳೇ…… ಬೆಳ್ಳಂಬೆಳಗು ನಸುನಕ್ಕುಮತ್ತೆ ಬಂದಿಹೆನೆಂಬ ಹೊತ್ತಲ್ಲಿಹೊಸ್ತಿಲಲಿ ನಿಂತು ಕಣ್ಣಾಲೆ ತುಂಬಿವರ್ತಮಾನವ ಕದಡದಿರಿಅಂಗಳದ ತುಂಬೆಲ್ಲ ಹಕ್ಕಿಗಳ ಚಿಲಿಪಿಲಿನೋವು ನಲಿವುಗಳ ಚಿತ್ತಾರದ ರಂಗೋಲಿಹಾಲುಕ್ಕಿ ಹರಿದ ಬದುಕಿನಲಿಒಂದೊಂದೇ ಪಾರಿಜಾತಗಳು ಜಾರಿ ಉದುರಿಭೂತದ ನೆರಳುಗಳಿಗೆ ಇಂದುಹೊಸರೆಕ್ಕೆ ಕಟ್ಟಿಅಗಲಿಕೆಯ ನೋವು, ವಿರಹದ ಕಾವುತುಂಬಿಹ ಬೆಂಗಾಡಿನಮಾಯೆ ಮರುಳಿಗೆ ಹೊತ್ತೊಯ್ಯದಿರಿಬರಗಾಲದ ಬಿರು ಬಿಸಿಲಿಗೆನಿಡುಸುಯ್ದ ಈ ಇಹಕ್ಕೆಮರಳಿ ಅರಳುವ ಬಯಕೆನೀರು ಹುಯ್ಯುವವರಿಲ್ಲಒಂಟಿ ಮರಕ್ಕೆಸಂಜೆ ಗಾಳಿಯ ಹಿತಆಳಕ್ಕೆ ಇರಿದ ಕೆಂಪಿನಲಿಮನಸ್ಸರಳಿ ಹಿತವಾಗಿ ನರಳುತ್ತದೆಅವನೆದೆ ಕಾವಿನಲಿ ಕರಗುತ್ತದೆಸೆಟೆದ ನರನಾಡಿಗಳು ಅದುರಿಹಗುರಾಗಿ ಬಿಡುತ್ತವೆಕೂಡಿ ಕಳೆದುಹೋಗುವ ತವಕದಲಿಕಣ್ಣೆವೆ ಭಾರವಾಗುವ […]

Back To Top