Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ನನ್ನೊಳಗಿನ ನೀನು ದೀಪಾ ಗೋನಾಳ ಏನೋ ಹೇಳಬೇಕಿತ್ತು ಹೇಳುವುದು ಬೆಟ್ಟದಷ್ಟಿತ್ತು ಸಂತಸದ ಮೂಟೆ‌ಹೊತ್ತು ನಿನ್ನ ಬಾಗಿಲು ತಟ್ಟಿದೆ ನೂಕಿಕೊಂಡು ರಭಸವಾಗಿ ಒಳನುಗ್ಗಿದೆ, ಅವಸರ ಸಲ್ಲದು ನಿಧಾನ ಎಂದವನ ಧ್ವನಿಯಲ್ಲಿ ಕೋಪ ಮಿಶ್ರಿತ ಪ್ರೀತಿಯಿತ್ತು ಇನ್ನೇನು ಎಲ್ಲ ಹೇಳಿ ಗೆಲುವ ಹಂಚಿ ತೇಗಬೇಕು ಮಾತಿನ ನಡುವಿನ ಅಂತರದಲ್ಲಿ ಅವಾಂತರವೆದ್ದಿತು ಹೋಗು ಇನ್ನೊಮ್ಮೆ ಹುಡುಕಿ ತಾ ಎಂದಿ, ಬಂದೆ, ತಿರುವಿನಲ್ಲಿ ನಿಂತು ಬಿಕ್ಕಳಿಸಿ ತಂದ ಮೂಟೆಯ ತಲೆಯಲ್ಲೆ ಉಳಿಸಿ ಹೊರಟೆ, ಎಲ್ಲಿಗೆ!? ನನ್ನ ಜೀವ ತಲ್ಲಣಿಸುತ್ತಿತ್ತು ಹಿಡಿ ಮಾತು ಹುಡಿಯಾಗಿ […]

ಕಾವ್ಯಯಾನ

ನೀನೆಂದರೆ ಮೋಹನ್ ಗೌಡ ಹೆಗ್ರೆ ನೀನೆಂದರೆ ಬರಿ ಬೆಳಕಲ್ಲ ಕುರುಡು ಕತ್ತಲೆಯ ಒಳಗೆ ಮುಳ್ಳು ಚುಚ್ಚಿದ ಕಾಲಿನ ನೋವ ಗುರುತಿಸುವ ಮಹಾಮಾತೆ ಜಗದ ತದ್ವಿರುದ್ಧಗಳ ಸಮದೂಗಿಸಿ, ಅಳುವ ಕಣ್ಣೀರಿಗೆ ಬಾಡಿ ಹೋದ ಮೊಲೆಯ ತೊಟ್ಟಿಂದ ಅಮೃತವ ಉಣಬಡಿಸುವ ಕರುಣಾಳು…. ನೀನೆಂದರೆ ಬರಿ ಕಷ್ಟಜೀವಿಯಲ್ಲ ಕಷ್ಟಗಳನೆ ಅಂಜಿಸುವ ಮಹಾತಾಯಿ ಬರೆಯದೇ ಇರುವ ಖಾಲಿ ಪುಸ್ತಕದೊಳಗೆ ನಾನೊಬ್ಬನೇ ಓದಬಹುದಾದ ಕೋಟಿ ಕಥೆ ನಿನ್ನ ಮುಖ ಯಾವ ಚಟಕ್ಕೂ ಹಾತೊರೆಸದ ದಿಗ್ಬಂಧನದ ಮಹಾ ಮಂಟಪ ಸಹಸ್ರ ಸಂಕಷ್ಟಗಳ ಹಡೆದ ನಿನ್ನ ಪಾದದಲ್ಲೆ […]

ಕಾವ್ಯಯಾನ

ಜೀವ ಕನಿಷ್ಠವಲ್ಲ ಮದ್ದೂರು ಮಧುಸೂದನ ಕಾಣದ ಜೀವಿಯ ಕರಾಮತ್ತಿಗೆ ದೀಪದ ಹುಳುಗಳಾಂತದ ಭಾರತ ವಿಲವಿಲದ ನಡುವೆ ಸಾವಿನ ದಳ್ಳುರಿ ಧಗ ಧಗಿಸಿ ಆವರಿಸುತ್ತಿದ್ದರೂ ಧರ್ಮದ ಅಪೀಮು ತಿಂದವರ ದಿಗಿ ದಿಗಿ ನೃತ್ಯ ನಿಂತಿಲ್ಲ.. ಜಾತಿ ಮತ ಧರ್ಮಗಳ ಸ್ಪೃಶ್ಯ ಅಸ್ಪೃಶ್ಯಗಳ ಸೋಂಕಿತರ ನಡುವೆ ಅವರವರ ಧರ್ಮದ ಉಳುವಿಗೆ ವಿಧ ವಿಧ ಲೆಕ್ಕಚಾರದ ಅಸಹ್ಯವೂ ಸಹ್ಯ ಧರ್ಮದ ಕಿನ್ನರಿ ಮುಂದೆ ಸಾವು ತುಟ್ಟಿಯಲ್ಲ ಬಿಡಿ! ನನ್ನ ಒಂದು ಕಣ್ಣು ಕಿತ್ತಾದರೂ ವಿರೋಧಿಗಳ ಎರೆಡೆರಡು ಕಣ್ಣು ಕೀಳುವ ಕುಹಕ ಕೇಕೆ […]

ಕಾವ್ಯಯಾನ

ಪ್ರಿಯತಮೆ ವೀಣಾ ರಮೇಶ್ ಈ ಧರೆಯ ಒಡಲು ಧರಿಸಿದೆ, ಸ್ವರ್ಗದ ಹಸಿರು ತಳಿರು,ತಳೆದಿದೆ ಸೊಬಗಿನ ಸಿರಿಯ ಸೌಂದರ್ಯ ಮೇಳೈಸಿದೆ ಮೌನವಿಲ್ಲಿ ಪ್ರೀತಿಸಿದೆ ಸ್ರಷ್ಟಿಯ ಸಿರಿಯಲಿ ರಸ ವೈಭೋಗ ತೂಗಿದೆ ಮತ್ತೆ ಋತುರಾಜ ಬಂದ ಚಿಗುರು ತಂದ ಚಲುವ ನಗೆಯ  ಅರಳೋ ಮುಗುಳು ಈ ಇಳೆಯ ಹಸಿರಲಿ ನಿನ್ನ ನಗುವಿನ ಸವಾರಿ ಕೇಳೇ ನನ್ನ ವೈಯಾರಿ ಈ ಕಣ್ಣ ನೋಟದ ಬಿಗಿ ಸರಳು,ಸೆರೆಯಾದೆ ನಾ ನಿನಗೆ ಪ್ರತಿಬಿಂಬದ ಪ್ರತಿಕ್ಷಣದ ಪ್ರತಿ ನೆರಳು ಸೆಳೆವ ಕಂಗಳ ಅಂಚಿಗೆ ಮುತ್ತಿಡುವ ಈ […]

ಕಾವ್ಯಯಾನ

ಪ್ರೀತಿಸಲಾಗುವುದಿಲ್ಲವಲ್ಲ ದೀಪಾ ಗೋನಾಳ.. ದ್ವೇಷಿಸುವಷ್ಟು ಸುಲಭವಾಗಿ ಪ್ರೀತಿಸಲಾಗುವುದಿಲ್ಲವಲ್ಲ ಎನೆಲ್ಲ ನೋವು ಹತಾಷೆ, ಸಂಕಟ ಅನುಭವಿಸಿಯು ಅನದೆ ಉಳಿಯಬೇಕಲ್ಲ ಹಾವು ತುಳಿದರೂ ಹೂವು ತುಳಿದದ್ದೆಂದು ಸಂಭಾಳಿಸಬೇಕಲ್ಲ ಕನಸು ಕನವರಿಕೆ ಬೆಸುಗೆ ಹಾಕಿ ಚೆಂದದ ಮಾತ ಹೇಳಿದಾಗಲೂ ಮುನಿಸು ಮಾಡುವ ಗೆಳೆಯನ ಉಳಿಸಿಕೊಳಬೇಕಲ್ಲ ಕಾಡಿಗೆಯಿಟ್ಟ ಕಣ್ಕೆಳಗಿನ ಕಪ್ಪು ವರ್ತುಲಕೆ ಬೆಳ್ಳಂಬೆಳ್ಳಗಿನ ಪೌಡರು ಹಾಕಿ ನಿಂದು, ಒಂದೂದ್ದದ ನಿದ್ದೆ ಮಾಡಿದೆ ಕನಸಿನ ತುಂಬ ನೀನೆ ಎಂದಂದು ಅವನ ಕನಸಿನ ಹೆಣಿಕೆಗೆ ದಾರವಾಗಬೇಕಲ್ಲ ಭುಜ ಹಿಡಿದು ಅಲುಗಿಸಿದಾಗೆಲ್ಲ ಕಳೆದು ಹೋದ ಚಿಂತೆಜಾತ್ರೆಯ ಮುಚ್ಚಿಟ್ಟು […]

ಕಾವ್ಯಯಾನ

ತಾಳು ಮನವೆ. ಚೈತ್ರಾ ಶಿವಯೋಗಿಮಠ ತಲ್ಲಣಿಸದಿರು ಮನವೆ! ದಟ್ಟೈಸುವ ಕಾರ್ಮೋಡಗಳ ಸುರಿದು ಹಗುರಾಗಿ ಮತ್ತೆ ಕಂಗೊಳಿಸದೆ ನೀಲ ನಭವು??? ತಲ್ಲಣಿಸದಿರು ಮನವೆ! ಕಗ್ಗತ್ತಲ ಒಡಲ ಹರಿದು ಪ್ರಖರವಾಗಿ ಇರುಳ ಗರ್ಭದಿ ಜನಿಸಿ ಬರುವನಲ್ಲವೆ ಇನನು?? ತಲ್ಲಣಿಸದಿರು ಮನವೆ! ಬೊಬ್ಬೆಯಿಟ್ಟು ಚಂಡಿಹಿಡಿದ ಕಂದನ ಹಾಲುಣಿಸಿ ಸಂತೈಸಲು ಬರಲಾರಳೇನು ಅಬ್ಬೆಯು?? ತಲ್ಲಣಿಸದಿರು ಮನವೆ! ಶೀತ ಹೇಮಂತನ ಕೊರೆತವ ಕರಗಿಸಿ ಬಿಸುಪ ಮುದ ನೀಡಲು ಬರುವಳಲವೆ ಗ್ರೀಷ್ಮಳು? ತಲ್ಲಣಿಸದಿರು ಮನವೆ! ಕಾಲಚಕ್ರವದು ನಿಲದೆ ತಿರುಗುವುದು ಅಹಿತವು ಅಳಿದು ಹಿತವು ನಿನಗಾಗಿ ಬಾರದೆ?? […]

ಕಾವ್ಯಯಾನ

ಗಝಲ್ ಸ್ಮಿತಾ ರಾಘವೇಂದ್ರ ಗಜಲ್ ಎಡ ಬಿಡದೇ ಸುಳಿದಾಡುವ ನೋವು ಹಿಂಸೆ ನೀಡುತ್ತದೆ. ಗವ್ ಎನ್ನುವ ತಣ್ಣಗಿನ ಮೌನ ಉಸಿರುಗಟ್ಟಿಸುತ್ತದೆ. ಗಾಳಿಯಲಿ ವಿಹರಿಸುವಾಗ ಭಾವಗಳು ಸದಾ ನಿರಾಳ/ ಬಣ್ಣದ ಚಿತ್ರಗಳ ಹಿಂದಿನ ಅಳಲು ಹೆಪ್ಪುಗಟ್ಟುತ್ತದೆ. ನೋಟಕ್ಕೆ ನಿಲುಕಿದ್ದೆಲ್ಲ ನಂಬಲರ್ಹವೇನು ಇಲ್ಲಿ/ ತಾಳ್ಮೆ ಕಳೆದುಕೊಂಡಾಗ ಸತ್ಯವೂ ಸುಳ್ಳೆನಿಸುತ್ತದೆ ತಡರಾತ್ರಿಯಲಿ ಬೆಚ್ಚಿ ಬೆವರೊಡೆದ ಒದ್ದೆ ನೆನಪು / ಕದ ಮುಚ್ಚುವಾಗ ಅಂತರಂಗ ತುಟಿ ಬಿರಿಯುತ್ತದೆ. ಆಡಿಕೊಂಬವರ ಅನುರಾಗವೋ ಭ್ರಮೆಯ ಮುಸುಕು/ ಆಪ್ತ”ಸ್ಮಿತ”ಕುಹಕವೆನಿಸಿದಾಗ ಎಲ್ಲವೂ ಸ್ತಬ್ಧವಾಗುತ್ತದೆ **************

ಕಾವ್ಯಯಾನ

ಈ ದಾರಿಗಳಿಗೆ ಎಷ್ಟೊಂದು ಮುಖ ಸತ್ಯಮಂಗಲ ಮಹಾದೇವ ಬದುಕು ಒಂದು ಜೀವನ ನೂರು ಮೊಗ ಒಂದು ಮುಖವಾಡ ಹಲವು ಪದ್ಯ ಒಂದೇ ಅನೇಕ ಪದಗಳು ಜೀವ ಒಂದೇ ಜೀವಿಸುವ ದಾರಿ ನೂರು ಆಯ್ಕೆಗೊಂದು ಮುಖ ನಡೆಗೊಂದು ಮುಖ ನೋಟದ ದಾರಿಗೂ ಒಂದು ಮುಖ ಮುಖವಾಡದೊಳಗೆ ಉಸಿರುಕಟ್ಟುವಾಗ ಝಳ ಝಳನೆ ಉದುರುವ ನೀರು ಉಪ್ಪು ನದಿಯ ನೋಡಿ ಖುಷಿ ಇಟ್ಟೆ ಕಾಲು ಒಳಸೆಳೆತದ ದಾವಂತ ಬೊಗಸಯಲ್ಲೆ ಹಿಡಿದು ಕುಡಿದೆ ಜೀವ ಉಳಿಸಿಕೊಂಡೆ ಈಗ ಜೀವ ಆ ನೀರಿನ ಹೆಸರಲ್ಲಿದೆ […]

ಕಾವ್ಯಯಾನ

ಮರಳಿ ಕಟ್ಟಬೇಕಲ್ಲವೇ ಸಂಮ್ಮೋದ ವಾಡಪ್ಪಿ ಹದವಾದ ಮಣ್ಣ ಅಡಿಯಿಂದ ತೇವವಾದ ಕಣ್ಣು, ನೋವುಂಡ ಒಡಲಿಂದ ಎದ್ದು‌‌ನಿಲ್ಲುತಿದೆ ಒಂದು ಮೊಳಕೆ ಚಿಗುರೊಡೆದು ಟಿಸಿಲಾಗಿ ಹರಡಿದೆ ಬೆಂದ‌ ಧರೆಗೆ ಆಗಸದ ಮುತ್ತು ಈ ಕೂಸಿಗಾಗಿಯೆ‌ ಮೇಲೇಳಲೆಂದು ಕೂಸು ನಗುನಗುತ ಉದರದಿ ಸರಿದು ಕಾಲಿಗೆ ಶಕ್ತಿ ಅಲ್ಪ, ಅಂಬೆಗಾಲಲಿ ಎದ್ದು ಹಗಲಿರುಳು ಓಟ ಕಲಿಸುತಿದೆ ಜೀವನ ಪಾಠ ತಾಯ ಸೆರಗಲಿ ಧೈರ್ಯ, ವಸುದೇವನ ಮೌಲ್ಯ ಎತ್ತರವಾಗುತಿದೆ ಬಾಳು, ಧ್ಯೇಯಗಳ ತುಂಬಿ ಕೌಶಲ್ಯಲ ಅತ್ತ ಇತ್ತ, ಕಲಿಕೆ ಅನುಭವಗಳು, ನವ್ಯ‌ಗ್ರಹಿಕೆ ನಡೆಯು ನುಡಿಯು,ಹೊಸ […]

ಕಾವ್ಯಯಾನ

ಅವಳು ನಾಗರೇಖಾ ಗಾಂವಕರ ಅವಳು -1 ಬಿಂಬಕ್ಕೆ ಸರಿಯಾಗಿ ಪ್ರತಿಬಿಂಬ ಮೂಡಿಸುವ ಕನ್ನಡಿಯ ನಾಜೂಕಿನಿಂದಲೇ ಕಾಯ್ದಿರಿಸಿದ್ದಾಳೆ ಅವಳು ಕನ್ನಡಿ ಹೇಳುತ್ತಲೇ ಇರುವ ಬಿಂಬ ಪ್ರತಿಬಿಂಬದ ಸರಳ ಸೂತ್ರ ಆಕೆಗೇನೂ ಅರ್ಥವಾಗುವುದಿಲ್ಲ. ತಲ್ಲಣಗಳ ತಕ್ಕಡಿ ಹಿಡಿದೇ ಎದುರು ಬದುರಾಗುವ ಮುಖಗಳು ಬಿಂಬ ಪ್ರತಿಬಿಂಬವಾದರೂ ಒಂದನ್ನೊಂದು ಬೆಂಬಲಿಸುವುದೇ ಇಲ್ಲ ಬಿಂಬದ ಎಡಕೈ ಎತ್ತಿದರೆ ಕನ್ನಡಿಯಲ್ಲಿ ಏರುವ ಬಲಗೈ ಕನ್ನಡಿಯ ಬೆನ್ನಿಗಂಟಿದ ಪಾದರಸದ ಲೇಪನ ಅಲ್ಲಲ್ಲಿ ಕಿತ್ತು ಹೋಗಿದೆ ಈಗೀಗ ಬಿಂಬ ಪ್ರತಿಬಿಂಬ ಮೂಡಿಸುವುದು ಕನ್ನಡಿಗೂ ಕಷ್ಟವಾಗಿದೆ. ಆದರೂ ಆ ಕನ್ನಡಿಯಲ್ಲಿಯೇ […]

Back To Top