ಕಾವ್ಯಯಾನ
ಮೊಗ್ಗುಗಳು ತುಟಿ ಬಿಚ್ಚೆ ಕೆ.ಸುಜಾತ ಗುಪ್ತ ನಾ ಪ್ರಕೃತಿ ಪ್ರೇಮಿಯಾಗಿ ಸೂಕ್ಷ್ಮವಾಗಿ ಗಮನಿಸೆ ಪ್ರಕೃತಿಯ ಸೊಬಗು ನೂರ್ಮಡಿ ಹೆಚ್ಚಿತ್ತು… ಭಾವುಕತೆಯಲಿ ಪ್ರಕೃತಿಯ ಮಡಿಲಲ್ಲಿ ಕುಳಿತು ನನ್ನ ನಾ ಮರೆತು ಲಲ್ಲಗೆರೆಯಲು ಹರುಷದಿ ಸ್ಪಂದಿಸಿ ನಸು ನಕ್ಕಿತ್ತು ಪ್ರಕೃತಿ.. ಬಿರಿದು ಪರಿಮಳವ ಸೂಸಲು ರವಿ ಕಿರಣದ ಸ್ಪರ್ಶದ ನಿರೀಕ್ಷೆಯಲ್ಲಿರಲು ಮೊಗ್ಗುಗಳು, ಮಂಜಿನ ಮುಂಜಾನೆಯಲಿ ಭೂದರನ ಮರೆಯಲಿ ರಾಜೀವ ಸಖ ಇಣುಕೆ, ಸಜ್ಜಾಗಿ ನಿಂತು ವಯ್ಯಾರದೆ ಅವನೆಡೆಗೆ ಓರೆನೋಟ ಬೀರಿದ ಮೊಗ್ಗುಗಳು ನಸು ನಾಚಿ ತುಟಿ ಬಿಚ್ಚಿ ಲಯಬದ್ದವಾಗಿ …ಹಾಯ್ […]
Read More
ಮಾಡು ನೀ ಪ್ರಯತ್ನ ಪ್ಯಾರಿಸುತ ಯತ್ನ,ಯತ್ನ ಮಾಡು,ಮಾಡು ನಿನ್ನ ಪ್ರಯತ್ನ ಆಗಲೇ ನನಸಾಗಿಸುವುದು ಆ ನಿನ್ನ ಸಪ್ನ ರಾತ್ರಿ ಕಂಡ ಕನಸುಗಳೆಲ್ಲ ಕನಸುಗಳೇ ಅಲ್ಲ ಮಲಗಲಾವುದು ಬಿಡೋದಿಲ್ಲವಲ್ಲ ಅದುವೇ ನಿನ್ನ ಸಪ್ನ, ಮಾಡು ನೀ ಪ್ರಯತ್ನ ಒಳ್ಳೆ ಬದುಕು ಕಾಣಲು ವಿದ್ಯೆಯೊಂದು ಸಾಲದು ಒಂದೇ ಗುರಿಯ ನಿಗದಿಸಿ ಯತ್ನ ಮಾಡು ಸಿಗುವುದು ಕಾಲ ತುಂಬಾ ಓಡುವದು ನೀನು ಯಾಕೆ ನಿಲ್ಲುವದು ಗುರಿಯ ಕಡೆ ಓಡುತಿರೇ ಸಾಧನಾಶಿಖರವೇ ನಿನ್ನದು ಬಡವ ಬಲ್ಲವ ಎಲ್ಲ ಒಂದೇ ಗುರಿಯನ್ನು ಸಾಧಿಸಲು ಕುಂಟು […]
Read More
ವಿಭಿನ್ನ ರೇಶ್ಮಾ ಗುಳೇದಗುಡ್ಡಾಕರ್ ಕೋಟೆ ಕಟ್ಟುವೆ ಭಾವನೆಗಳ ನಡುವೆಎಂದವ ಹೆಣವಾಗಿ ಬಿದ್ದನುಒಡೆದ ಕನಸುಗಳ ಅವಶೇಗಳಮಧ್ಯೆ …. ಮಾನವತೆಯ ಹರಿಕಾರನೋಂದಮನಗಳ ಗುರಿಕಾರ ಎಂದುನಕಲಿ ಫೋಸು ಕೊಟ್ಟವನುಎಡಬಿಡದೆ ಭಾಷಣಗಳಸುರಿಮಳೆಗೈದವನು ಬಹಳ ದಿನಬಾಳಿಕೆ ಬರಲಿಲ್ಲ ಸತ್ಯಗಳ ಮುಂದೆ …. ಮಾತಿನಲ್ಲೆ ಬಂದೂಕು ಇಟ್ಟವನುಮುಗ್ದ ಮಂದಿಯ ಚಿತ್ತ ಕದಲಿದನುಅನಾಯಾಸವಾಗಿ ಗೆಲುವು ಪಡೆಯಲುನಿರಂತರವಾಗಿ ಹೆಣಗುತಿರುವನುಗುಂಪುಗಳ ನಡುವೆ …. ಹಿಡಿ ಮಣ್ಣಿಗೆ ಸಾರವ ಪರೀಕ್ಷಿಸುವವರುಬದುಕಿನ ಸಾರವ ಹೊತಿಟ್ಟುಮುಖವಾಡಗಳಿಗೆ ಬಣ್ಣ ಹಚ್ಚುವರು ಸರಳತೆಯೇ ಉಸಿರು ಎಂದುಆದರ್ಶಗಳೇ ಬದುಕು ಎಂದುಅಹಿಂಸೆಯೇ ದೇವರೆಂದವರುಇಂದು ಎಂದೆಂದು “ಮಹಾತ್ಮ “ನೇ ಅಗಿರುವರು …… […]
Read More
ನದಿಯಾಚೆ ಊರಿನಲ್ಲಿ ಕಾಯುತ್ತಿದ್ದೇನೆ ಮೂಗಪ್ಪ ಗಾಳೇರ ಅನಾಥ ಶವವಾಗಿ ಮಲಗಿರುವ ನನ್ನ ಒಂದೊಂದು ಕನಸುಗಳು ಇನ್ನೂ ಉಸಿರಾಡುತ್ತಿವೆ ಎಂದರೆ ನೀ ಬಿಟ್ಟು ಹೋದ ನೆನಪುಗಳು ಚುಕ್ಕಿ ಚಂದ್ರಮರಂತೆ ಅಜರಾಮರ ಎಂದರ್ಥ| ಉಸಿರಾಟಕ್ಕೂ ಉಸಿರಿಗು ಕನಸುಗಳಿಗು ನೆನಪುಗಳಿಗು ವ್ಯತ್ಯಾಸ ತಿಳಿಯದೆ ಶವವಾದ ಈ ಹೃದಯಕ್ಕೆ ಈ ಕವಿತೆಗಳೇ ಔಷಧಿ ಎಂದರೆ ತಪ್ಪಿಲ್ಲ ಒಮ್ಮೆ ನೀ ಹಿಂದಿರುಗಿನೋಡಿದರೆ ಗೊತ್ತಾಗುತ್ತಿತ್ತು ನಾನೆಟ್ಟ ಹೂವಿನ ಗಿಡಗಳು ನೂರಾರು ಜಾತಿಯದ್ದಾಗಿದ್ದರೂ ಅವುಗಳಿಂದ ಸೂಸುವ ಕಂಪು ಒಂದೆಂದು ಒಂದೊಮ್ಮೆ ನೀ ಮುಂದಿಟ್ಟ ಹೆಜ್ಜೆ ತಿರುಗಿಸಿ ಹಿಂದಿಟ್ಟರೆ […]
Read More
ಸೀರೆ ಮತ್ತು ಬಟ್ಟೆ ಡಾ.ಗೋವಿಂದ ಹೆಗಡೆ ಸೀರೆ ಮತ್ತು ಬಟ್ಟೆ ಆದರೂ ಈ ಸೀರೆ ಎಂಥ ಯಕ್ಷಿಣಿ! ಮೈತುಂಬ ಹೊದ್ದ ಸೆರಗಾಗಿ ಗಜಗೌರಿ ಎನಿಸಲೂ ಸೈ ಮಾಟದ ಬೆನ್ನು ಸೊಂಟ ಆಕರ್ಷಕ ಹೊಕ್ಕುಳ ಸುಳಿ ತೋರಿಸಿ ಹಸಿವು ಕೆರಳಿಸಲೂ ಸೈ ‘ನಾವೇನು ಸೀರೆ ಉಟ್ಟಿಲ್ಲ’ ಎಂದೆಲ್ಲ ಪೌರುಷ ತೋರಿಸುವಂತಿಲ್ಲ ಈಗ ನೀರೆಗೂ ಸೀರೆ ಕಡ್ಡಾಯವಲ್ಲ! ಆಯ್ಕೆಗಳಿವೆ ಅವಳಿಗೆ ಆದರೂ ‘ಸೆರಗು ಸೊಂಟಕ್ಕೆ ಸುತ್ತಿ’ ‘ವೀರಗಚ್ಚೆ ಹಾಕಿ’ ಎಂದೆಲ್ಲ ನಾರೀಶಕ್ತಿಯನ್ನು ಬಣ್ಣಿಸುವುದುಂಟು ಗಂಡ ಅರ್ಧ ಸೀರೆಯನ್ನು ಹರಿದು ಸುತ್ತಿಕೊಂಡು […]
Read More
ಶಿವನ ನೆನೆಯಲೆಂದು ರೇಖಾ ವಿ. ಕಂಪ್ಲಿ ಸಾವಿರದ ಮೆಟ್ಟಿಲ ಮೇಲೊಂದು ಕನಸು ಕಾಣುವವನ ಭಾವನೆಯ ಮೇಲೊಂದು ನನಸು ಇಟ್ಟನು ದೇವಾ ಹೆಣ್ಣ ಮೇಲೊಂದು ಸೊಗಸು ಮಠ ಒಂದು ಕಟ್ಟಲಿಲ್ಲ ಗಂಡು ಮೇಲೊಂದು ಮನಸು ಆಸೆಗಳ ಅರಿಬಿಟ್ಟ ಅಂಚಿಕೆಯ ಮಾಡದೇ ಅನುದಿನವು ಅವನ(ದೇವರ) ನೆನೆಯಲೆಂದು ಪಾದುಕೆಗಳಿಗೊಂದು ಹೊದುಕೆ ಕೊಟ್ಟವನು ಮನಸೆಂಬ ಹೊದುಕೆಗೆ ಆಳು ನೆನಪುಗಳ ನಿಟ್ಟು ತನ್ನ ಮುಟ್ಟುವ ಗಟ್ಟಿ ಗುಟ್ಟಾಗು ಎಂದು ಮೆಟ್ಟು ಭಾವನೆಯ ನಿನ್ನ ಪಟ್ಟು ಮೀರೆಂದು ತಟ್ಟು ಶಿವನೆದೆಯ ಕರುಣಾಂತರಂಗವನು ಅವನೊಲುಮೆಯ ಸಾಗರದ ಶರಧಿಯನು […]
Read More
ಅಡುಗೆ ಮನೆಯೆಂದರೆ ಸ್ಮಿತಾ ರಾಘವೇಂದ್ರ ಅಡುಗೆ ಮನೆಯೆಂದರೆ ಯುದ್ಧಕ್ಕೆ ಮೊದಲು ಎಲ್ಲವೂ ಶಾಂತವೇ ಯುದ್ದ ಮುಗಿದ ಮೆಲೂ… ಅನಿವಾರ್ಯ ಮತ್ತು ಅವಶ್ಯಕತೆ- ಸಂಭವಿಸುವ ಮುಂಚಿನ ಸಮಜಾಯಿಶಿ. ಅಣಿಗೊಳ್ಳಲು ಹೆಚ್ಚಿನ ತಯಾರಿ ಏನಿಲ್ಲ ಅತ್ತಿಂದಿತ್ತ ತಿರುಗಾಡುತ್ತಲೇ ಮಾತು ಒಗೆದಂತೆ- -ಅಣಿಮಾಡುವ ರಣರಂಗ. ನುಗ್ಗೆಕಾಯಿ ಸಪೂರ ದಂತವರು, ಹೊಟ್ಟೆ ಭಾರದ ದೊಣ್ಣ ಮೆಣಸಿನಂತವರು ಕೆಂಪು ಗಲ್ಲದ ಟೊಮೆಟೊ ಅಂತವರು, ಸೊಪ್ಪಿನಂತೆ ಉದ್ದ ಕೂದಲಿನವರು, ನಾ ನಾ ವಿಧದ ಸೈನಿಕರ ಗುಂಪು, ರಾಜನ ಆಗಮನವನ್ನೇ ಎದುರು ನೋಡುತ್ತ.. ಯಾರು ಮೊದಲು ಮಡಿಯಬಹುದು!? […]
Read More
ಗೆಳತಿ ನಕ್ಕುಬಿಡು ಮೂಗಪ್ಪ ಗಾಳೇರ ನಾನು ನೋಡಿದ ಹುಡುಗಿಯರೆಲ್ಲಾ….. ಪ್ರೇಯಸಿಯರಾಗಿದ್ದರೆ ನಾನು ಗೀಚಿದ ಸಾಲುಗಳೆಲ್ಲಾ ಕವಿತೆಗಳಾಗಬೇಕಿತ್ತಲ್ಲ! ದಡ್ಡಿ….. ನಿನಗಿನ್ನೂ ಹಗಲು ಮತ್ತು ರಾತ್ರಿಯ ವ್ಯತ್ಯಾಸ ಗೊತ್ತಿದ್ದಂತೆ ಕಾಣುತ್ತಿಲ್ಲ! ಕತ್ತಲನ್ನು ನುಂಗಿ ಬೆಳಕಾಯಿತೋ…! ಬೆಳಕನ್ನು ನುಂಗಿ ಕತ್ತಲಾಯಿತೋ…! ನೀನು ನನ್ನ ಜೊತೆ ಇಟ್ಟ ಒಂದೊಂದು ಹೆಜ್ಜೆಯೂ ಹಳೆ ಸಿನಿಮಾದ ಹಾಡುಗಳಂತೆ ನನ್ನೆದೆಯಲ್ಲಿ ಯಾವಾಗಲೂ ಗುನುಗುತ್ತಿರುತ್ತವೆ ಒಮ್ಮೊಮ್ಮೆ ಎದೆಭಾರ ಆದಾಗ ಕವಿತೆಯ ಸಾಲು ಬೇರೆಯಾಗಬಹುದು ಕವಿತೆ ಮಾತ್ರ ಎಂದೆಂದೂ ನೀನೆ ಒಂದೊಮ್ಮೆ ನನ್ನ ಕವಿತೆಯ ಸಾಲುಗಳನ್ನು ಯಾರೋ ಓದುತ್ತಿದ್ದಾರೆಂದರೆ ಅದು […]
Read More
ದೇವರ ದೇವ ಅಂಜನಾ ಹೆಗಡೆ ಕಾಲ ಎಲ್ಲವನ್ನೂ ಮರೆಸುತ್ತದೆ ಎಂದವ ಕಾಲಕ್ಕೆ ಕಿವುಡಾಗಿ ಕಣ್ಣುಮುಚ್ಚಿ ಉಟ್ಟಬಟ್ಟೆಯಲ್ಲೇ ಧ್ಯಾನಕ್ಕೆ ಕುಳಿತಿದ್ದಾನೆ ತಂಬೂರಿ ಹಿಡಿದು ತಂತಿಗಳ ಮೇಲೆ ಬೆರಳಾಡಿಸುತ್ತ ಶ್ರುತಿ ಹಿಡಿಯುತ್ತಾನೆ ಬೆರಳಲ್ಲಿ ಹುಟ್ಟಿದ ಬೆಳಕಿನ ಕಿರಣವೊಂದು ನರಗಳಗುಂಟ ಹರಿದು ಬೆಂಕಿಯಾಗಿ ಮೈಗೇರಿದೆ ಉಸಿರೆಳೆದುಕೊಳ್ಳುತ್ತಾನೆ ದೇವರ ಗೆಟಪ್ಪಿನಲ್ಲಿ ಕಾಲಮೇಲೆ ಕೈಯೂರಿದ್ದಾನೆ ಕಪ್ಪು ಫ್ರೆಮಿನ ದಪ್ಪಗಾಜಿನ ಕನ್ನಡಕ ರೂಪಕವಾಗಿ ಮುಚ್ಚಿದ ಕಿವಿಯ ಮೇಲೆ ಬೆಚ್ಚಗೆ ಕೂತಿದೆ ಕೈಗೆ ಸಿಗದ ಕಣ್ಣಿಗೆ ಕಾಣಿಸದ ಶಬ್ದ ಹಿಡಿಯಲು ಕುಳಿತವನ ಮೈಯೆಲ್ಲ ಕಣ್ಣು…. ಮುಚ್ಚಿದ ಕಣ್ಣೊಳಗೊಂದು […]
Read More
ಷರಾ ಬರೆಯದ ಕವಿತೆ ಡಾ.ಗೋವಿಂದ ಹೆಗಡೆ ಇಂದು ಅವ ತೀರಿದನಂತೆ ತುಂಬ ದಿನಗಳಿಂದ ಅವ ಬದುಕಿದ್ದೇ ಗೊತ್ತಿರಲಿಲ್ಲ ಒಂದು ಕಾಲದಲ್ಲಿ ನೆಲ ನಡುಗಿಸುವ ಹೆಜ್ಜೆಯ ಭಾರಿ ಮೀಸೆಯ ಹುಲಿ ಕಣ್ಣುಗಳ ಅವ ನಡೆಯುತ್ತಿದ್ದರೆ ನನಗೆ ಮಂಚದ ಕೆಳಗೆ ಅವಿತು ಕೊಳ್ಳುವುದನ್ನು ಬಿಟ್ಟು ಬೇರೆ ದಾರಿಯಿರಲಿಲ್ಲ ಆಗ ಕವಿತೆ ಕನಸಲ್ಲೂ ಸುಳಿಯುತ್ತಿರಲಿಲ್ಲ ಮತ್ತೆ ಯಾವಾಗಲೋ “ಅವನಾ? ತುಂಬಾ ಕುಡೀತಾನೆ ರೈಲಿನ ಎಂಜಿನ್ ಹಾಗೆ ಸದಾ ಹೊಗೆ ಬಿಡ್ತಾನೆ” ಹೊಟ್ಟೆ ಊದಿ ಕಣ್ಣು ಹಳದಿಗೆ ತಿರುಗಿ ಲಿವರ್ ಫೇಲ್ಯೂರ್ ನ […]
Read More| Powered by WordPress | Theme by TheBootstrapThemes