Category: ಕಾವ್ಯಯಾನ

ಕಾವ್ಯಯಾನ

ಕರೆ ಮಾಡಬೇಡಿ…ಪ್ಲೀಸ್

ಕವಿತೆ ಸುಜಾತ ಲಕ್ಷ್ಮೀಪುರ. ಒಂದೇ ಸಮನೆ ಎಡಬಿಡದೆಝಣಗುಟ್ಟುವ ಪೋನುಕೋಪ ನೆತ್ತಿಗೇರಿಸಿ ಸಿಟ್ಟು ಮತ್ತು ಅಳುಒತ್ತರಿಸಿಕೊಂಡು ಬಂದುಕಣ್ಣೀರಾಗಿ ಹರಿದರೂಬಿಕ್ಕಳಿಕೆ ಹಾಗೇ ಉಳಿದಿದೆ. ದಯವಿಟ್ಟು ಕರೆ ಮಾಡಬೇಡಿನಾನು ಎಷ್ಟು ಬಾರಿ ಹೇಳಲಿಹೌದು ನಾನು ಕರೋನಾ ಸೋಂಕಿತಳು.ಸೋಂಕಿತಳೆ. ಮತ್ತೆ ಮತ್ತೆ ವಿಳಾಸ ಖಾತರಿಆಗಬೇಕೇಕೆ!??‌ಹೊರಟಿಲ್ಲಾ ಇನ್ನೂ ವಿಳಾಸವಿಲ್ಲದ ಊರಿಗೆ. ದೇಹದ‌ ನೋವಿಗೇನೋಗುಳಿಗೆಗಳಿವೆ…ಯಾರಾದರೂ ಕಳಿಸಿಕೊಡಿವಿಳಾಸ ತಿಳಿಸುವೆಸೋಂಕಿತಳೆಂಬ ಹೆಸರು ಕಿತ್ತಾಕುವ ಗುಳಿಗೆ. ಹಾಲು,ತರಕಾರಿ,ದಿನಸಿತಂದು ಕೊಡುವವರಿಲ್ಲದೆಕಿಟಕಿ ಸರಳುಗಳ ಆಚೆ ಸತ್ತ ಮನಸ್ಸಿನ ಮಂದಿ ನೋಡುತ್ತಾ ಕಾಲದೂಡುತ್ತಿದ್ದೇನೆ. ನಾನೀಗ ವೈರಾಣುವಿನ ವಿರುದ್ದಗಟ್ಟಿಯಾಗಿ ನಿಂತಿದ್ದೇನೆ.ಪದೇ ಪದೇ ಕರೆಮಾಡಿಪ್ರಶ್ನಿಸಬೇಡಿ ನಿರುಮ್ಮಳವಾಗಿರಲು ಬಿಟ್ಟುಬಿಡಿ. […]

ಜಂಜಾಟದ ಬದುಕು

ಕವಿತೆ ಪೂಜಾ ನಾರಾಯಣ ನಾಯಕ ಬೆಳಗೆದ್ದು ಎತ್ತೆತ್ತ ನೋಡಿದರೂ ಕಾಣದಾ ದಿಕ್ಕುಕಂಡರೇನಂತೆ, ಅತ್ತ ಪೋದರೆ ಸಿಗದಾ ಹಕ್ಕುಕಡಿವಾಣವಿಲ್ಲದೇ ಕಡಲಂತೆ ಬೋರ್ಗರೆವ ಆಸೆಗಳ ಈಡೇರಿಕೆಗೋಸುಗನಿತ್ಯವೂ ದಿನಪೂರ್ತಿ ಜಂಜಾಟಮತ್ತದೇ ವಿಫಲ ಯತ್ನ. ತಲೆಪೂರ್ತಿ ತುಂಬಿದಾ ನಿಬಿಡ ಹಗಲುಗನಸುಗಳುನಿಬ್ಬಣದಂತೆ ಸಾಗುತಿವೆಕಂಡೆಲ್ಲ ಕನಸುಗಳು ದೀಪ ನಂದಿದಂತೆ ನಂದಿಹೋಗುತಿವೆಸಹಿಸಲಾಗದ ಸಂಕಟಎತ್ತೆತ್ತಲಿಂದಲೋ ಕುಠಾರದ ಮೊನಚಂತೆ,ಕುಹಕ ಮಾತುಗಳೇಳುತಿವೆಸುಡುತಿಹುದು ನನ್ನೆದೆಯ ವಾರಿಧಿಯು ಬೆಂಕಿಯಾಜ್ವಾಲೆಯಂತೆ.ತಪ್ತ ಹೃದಯಕೆ ತಿರಸ್ಕಾರಎಲ್ಲೆಲ್ಲೂ, ಮತ್ತೆಲ್ಲ ಯತ್ನ ನೆಲಕಚ್ಚಿಹೋದಾಗ ಕೊನೆಗೇಗೋ ಹೋಗುವುದು ಮುಂದಕ್ಕೆ ಬದುಕು ಹುರುಪು-ಗಿರುಪುಗಳಿಲ್ಲ ಬದುಕಲ್ಲಿನಶ್ವರವೇ ಕೊನೆಗೂ ಎಂಬ ಸಾರಕ್ಕೆ ಶಿರಬಾಗಿದಿಕ್ಕು-ಹಕ್ಕುಗಳಿಲ್ಲದೇಕಡಿವಾಣ-ಗಿಡಿವಾಣಗಳಿಲ್ಲದೇ ಬೋರ್ಗರೆವ ಆಸೆಗಳ ಈಡೇರಿಕೆಗೆನಿತ್ಯವೂ […]

ಅಸಹಾಯಕತೆ

ಕವಿತೆ ಎನ್. ಶೈಲಜಾ ಹಾಸನ ಅವೀರ್ಭವಿಸಿದೆ ಮೂರ್ತಅಮೂರ್ತಗಳ ನಡುವಿನ ಸ್ವರೂಪಮುಂದಕ್ಕಿಡುವ ಹಾದಿಹಿಂದಕ್ಕೋಡುತಿದೆ ಅಲ್ಲೊಂದು ಕಡಲುಮೇಲೊಂದು ಮುಗಿಲುದಾಟಿ ನದಿ ತಟವಕಾಡು ಗಿರಿಯ ಹಾದು,ಮುಗಿಲಂಚನು ಮುಟ್ಟುವಾಗಿನ ಸಂಭ್ರಮಗೆಲುವ ಮೀಟಿಪಿಸು ಪಿಸು ಧ್ವನಿಎಲ್ಲಿ? ಎಲ್ಲಿ? ಬೆನ್ನ ಹಿಂದೆ!ಹಿಂತಿರುಗಿದರೆ ಧ್ವನಿ ಮಾಯಮುನ್ನಡೆದರೆಮತ್ತೆ ಧ್ವನಿ, ಮತ್ತೂನಡೆದರೆ ಗಹಗಹಿಸುವವಿಕಟನಗೆಸೋಲೋ ಗೆಲುವೋಮೂರ್ತವೋಅಮೂರ್ತವೋ? *********************

ನಿನ್ನ ನೆನಪು

ಕವಿತೆ ಮಾಲತಿ ಶಶಿಧರ್  ನಿನ್ನ ನೆನಪೊಂದು ಉತ್ತರಗೋಳಾರ್ಧದ ಬೇಸಿಗೆದಿನದಂತೆಎಷ್ಟು ಮುದ ಅಷ್ಟೇ ತಾಪ ಗಾಳಿಯ ಒರಟುಸ್ಪರ್ಶಕ್ಕೆ ಹಿತ್ತಲಿನಚಂಗುಲಾಬಿಯೊಂದುಉದುರಿದಂತೆಹಿತ್ತಿಲ ತುಂಬೆಲ್ಲಾಚದುರಿದಂತೆ.. ಸಣ್ಣ ಇರುಳೊಂದಗುತ್ತಿಗೆ ಪಡೆದಿರುವೆ,ಅಧಿಕ ದಿನಯೊಂದಕ್ಕೆಬಾಡಿಗೆ ಇಟ್ಟಿರುವೆಎರಡೂ ನನ್ನದ್ದೇಆದರೂ ಖಾಸಾ ಅಲ್ಲಾ. ಸಂಜೆ ವೇಳೆಗೆ ರಸ್ತೆಬದಿಯಲ್ಲಿ ಸೆರಗೊಡ್ಡಿ ನಿಂತೆಮುಗಿಲ್ಗಲ್ಲಿನ ನಿರೀಕ್ಷೆಯಲ್ಲಿಸೆರಗು ತುಂಬಿದ್ದು ಮಾತ್ರಕಟು ತಾಪ.. ತೊಟ್ಟ ಚಿನ್ನದ ಬೆಂಡೋಲೆಮಂಕಾಯಿತೆ ಹೊರೆತುಕಾವು ಮಾತ್ರಹೆಚ್ಚುತ್ತಲೇ ಇತ್ತು ನೆನಪಿನಕುಲುಮೆಯಲ್ಲಿ.. ಹಸಿರು ಮರದ ರೆಂಬೆಯೊಂದನೀ ಕತ್ತರಿಸಿದಷ್ಟುಸುಲಭವಾಗಿನೆನಪಿನ ಕೊಂಬೆಯಛೇದಿಸಲಾಗದು,ನ್ಯಾಯೋಚಿತ ಸ್ವಾಧೀನದಕ್ಲೇಶವನು ಸಹಿಸಲಾಗದು. ***********************

ಬೇರುಗಳು

ಕವಿತೆ ಪೂರ್ಣಿಮಾ ಸುರೇಶ್ ನಸುಕಿನ ಮೌನಹಳೆಯ ಹಾದಿಗೆಹೆಜ್ಜೆ ಜೋಡಿಸಿದೆ ಅದೇಆಚೆ ಬದಿ ಅಶ್ವತ್ಥ ಈ ಬದಿ ಆಲ ಆಲದ ಜಟಿಲ ಬಿಳಲುಗಳುನೇತಾಡಿದ್ದುಮಣ್ಣ ಪಾದಗಳು ತೇಲಿ ಅಗಸವಸ್ಪರ್ಶಿಸಿಮುದಗೊಂಡಿದ್ದುಎಲೆ ಮರೆಯ ಗೂಡಿನ ಹಕ್ಕಿಗಳಗಂದರ್ವವಾಣಿಗೆ ಪ್ರತಿಧ್ವನಿಸಿದ್ದೂಗುಲಾಬಿ ಅಂಗೈ ದೊರಗು ಸೆಳೆತಕೆಕೆಂಪಾಗಿದ್ದುಪುಟ್ಟ ಉರಿ ಸುಡುತ್ತಿದ್ದರೂ ಆಕರ್ಷಣೆ ! ಮತ್ತೆಮತ್ತೆತೂಗಿ ಬಿದ್ದದ್ದುತರಚಿದ್ದು.. ಈ ಅಶ್ವತ್ಥ!ಪುಟ್ಟ ಮನಸಿಗೆ ನಿಲುಕದದೊರಗು ದೇಹಆಗಸದ ಅಖಂಡ ಮೌನಕೆತನ್ನ ಧ್ಯಾನ ತುಣುಕುಗಳ ಸಿಲುಕಿಸಿಅನುಸಂಧಾನಗೈವಎಲೆಗಳು ಸುತ್ತು ಸುತ್ತಿದ್ದುಹತ್ತಿರದ ಪುಟ್ಟಗಿಡದ ಹಸಿರಪರಪರ ಎಳೆದುಹರಿದುಮನೆಯಾಟಕೆ ಅಡುಗೆತಯಾರಾಗಿದ್ದು.. ಕೈಗೆ ಹಸಿರು ರಸಕಾಲಲ್ಲಿ ಮಣ್ಣು ತೇವ ಆಲ-ಅಶ್ವತ್ಥಆಳಕ್ಕಿಳಿಸುತ್ತವೆಬೇರುಒಳಕೂಗುಅಕ್ಷರವಾಗಲು ತುಡಿಯುತ್ತವೆ.ಬೆಳಕಾಗಿ […]

ಧ್ಯಾನ

ಕವಿತೆ ಸುನೀತ ಕುಶಾಲನಗರ ಎಲ್ಲೆಡೆ ಗವ್ ಎನ್ನುವಾಗಲೂಅದೇನೋ ಧ್ಯಾನಮನೆಯೊಳಗಿದ್ದರೂ ನುಗ್ಗಿಬರುವ ಕವಿತೆ ಆಕಾಶದಂತೆ ಆವರಿಸಿನಿತ್ಯ ಬೆಳದಿಂಗಳುಋತುಚಕ್ರ ಉರುಳಿದಂತೆಋತುಸ್ರಾವ ವ್ಯತ್ಯಾಸಬಣ್ಣದ ಕನಸುಗಳಿಗೆಅದೆಷ್ಟು ಕೂಸುಗಳ ಕೇಕೆಜತೆಯಾದ ಕ್ಷಣ ಕ್ಷಣವೂಕಣ ಕಣಕೂ ಹಿತಮತ್ತೊಮ್ಮೆ ಬದುಕಿಬಿಡೆಂದುಚಾಚುವ ಕೈಕಣ್ಣ ಸುತ್ತಿದ ಬಳೆಯಾಕಾರದಕಪ್ಪನೂ ನೇವರಿಸುವಕೂದಲ ಬಣ್ಣದ ಲೇಪನಕೆಹೊಸ ಹೊಳಪುಭೂತ ಭವಿಷ್ಯದಹಂಗ ತೊರೆವ ವರ್ತಮಾನತೀರಾ ಖಾಸಗಿ ಬದುಕೇಆದರೂ ಸದ್ದಿಲ್ಲದೆಮುಟ್ಟುಗೋಲಾಗುವ ಮುಟ್ಟಿಗೂಹುಟ್ಟುತ್ತಿದೆ ಹೊಸಹುರುಪುದಿನ,ದಿನಾಂಕಗಳಗಡಿದಾಟಿ ಬರುವಲವಲವಿಕೆಯ ಮತ್ತು. ******************

ಕೊನೆಯಲ್ಲಿ

ಕವಿತೆ ನಂದಿನಿ ಹೆದ್ದುರ್ಗ ಕಳಚಿಕ್ಕೊಳ್ಳುತ್ತಲೆ ಹೋಗುತ್ತದೆಹೀಗೇಒಂದೊಂದೇ ಒಂದೊಂದೇ ಬಂಧ. ಬಿಡಿಸಲಾಗದ್ದು ಎನ್ನುವಾಗಲೇಹೊರಡುತ್ತದೆ ಬಿಟ್ಟು ಕಣ್ಮರೆಯಾಗುವುದೋಕಣ್ಣಳತೆಯಲ್ಲೇ ಇದ್ದೂಬೇಕೆನಿಸದೆ ಹೋಗುವುದೊಕಣ್ಣು ಕೈಯಿಗೆ ನಿಲುಕಿದರೂಎದೆಗೆ ಇಳಿಯದೇ ಹೋಗುವುದೊಬೇಕೆನಿಸಿದರೂ ಝಾಡಿಸಿಹೊರಡುವುದೊ.. ಕಳಚುತ್ತಲೇ ಹೋಗುತ್ತದೆ…ಇದ್ದಿತೆಂಬುದರ ಕುರುಹುಕ್ರಮೇಣ ಇಲ್ಲವಾಗಿ.. ಒಂಟಿ ಕೊಂಡಿಯೊಂದುಕೊರಳೆತ್ತಿ‌ ನೋಡುತ್ತಿದೆಈಗಸುತ್ತೆಲ್ಲಾ ಕ್ಷೀಣವಾಗಿ *************************

ಕನಸು

ಕವಿತೆ ಅರುಣಾ ರಾವ್ ಸ್ವಪ್ನದಲ್ಲಿ ಕಂಡೆ ಸುಂದರ ಲೋಕ ಮನೆಗಳು ಮಹಲು ಮಾಲು ಮಂದಿರ ರಸ್ತೆ ಸೇತುವೆ ಮಾರುಕಟ್ಟೆ ಜನ ನೋಡುತ ನಡೆದೆ ಬೀದಿಯ ಗುಂಟ ಸಿನಿಮಾ ನೋಡಲು ನೆರೆದ ತರುಣರು ವಸ್ತ್ರಭಂಡಾರದಿ ಸೀರೆ ಬಳೆಗಳು ಪುಸ್ತಕ ಭಾರವ ಬೆನ್ನಲ್ಲಿ ಹೊತ್ತು ನಗುತ ಸಾಗುವ ಪುಟ್ಟ ಮಕ್ಕಳು ಕಚೇರಿಗಳಿಗೆ ಸಾಗುವ ಜನರು ದೇಗುಲಗಳಲಿ ನೆರೆದ ಭಕ್ತರು ಮದುವೆ, ಮುಂಜಿ ಸಮಾರಂಭಗಳು ಚರ್ಚು ಮಸೀದಿ ಪ್ರಾರ್ಥನೆ ಮೊಳಗು ರಸ್ತೆಯಂಚಿನಲ್ಲಿ ವ್ಯಾಪಾರ ಜೋರು ಹೋಟೆಲುಗಳಲ್ಲಿ ತಿಂಡಿಗೆ ಸಾಲು ಎಲ್ಲರ ಮುಖದಲ್ಲಿ […]

ನಡುಮನೆಯ ಕತ್ತಲಲ್ಲಿ

ಕವಿತೆ ಅಬ್ಳಿ,ಹೆಗಡೆ         ನಾನು ಮತ್ತು ದೇವರು         ಇಬ್ಬರೇ ಕುಳಿತಿದ್ದೇವೆ         ನಡುಮನೆಯ ಕತ್ತಲಲ್ಲಿ.         ನನಗಿಷ್ಟ ಇಲ್ಲಿಯ ಕತ್ತಲು.         ಕಾರಣವಿಷ್ಟೇ…..         ಇಲ್ಲಿ ಬೆತ್ತಲಾದರೂ         ಗೊತ್ತಾಗುವದಿಲ್ಲ ಹೊರಗೆ.         ದಟ್ಟ ಕತ್ತಲು-         ಯಾವಾಗಲೂ ರಾತ್ರಿಯೆ.         ಇಲ್ಲಿ ಹಗಲಿನೆಚ್ಚರದಲ್ಲೂ         ಕನಸು ಕಾಣಬಹುದು.         ವಿಹರಿಸಬಹುದು-         ನೀಲಾಕಾಶದಲ್ಲಿ         ಚುಕ್ಕಿ,ಚಂದ್ರಮರೊಟ್ಟಿಗೆ.         ಇಲ್ಲಿ ಯಾವಾಗಲೋ         ಅಪರೂಪಕ್ಕೊಮ್ಮೆ         ತೆರೆದುಕೊಳ್ಳುವದೂ-         ಉಂಟು,ವರ್ಣಮಯ         ಹೊರ ಜಗತ್ತು.         […]

ಇರುವುದನ್ನು ಕಾಣಲಾಗದೆ

ಕವಿತೆ ರಜಿಯಾ ಕೆ ಭಾವಿಕಟ್ಟಿ ನಿಮ್ಮಂತೆ ಇರಲಾಗದೆ ನನ್ನಂತೆ ನಾನುಇರಲಾಗದೆ.ಪರರ ಚಿಂತೆಗೆ ಚಡಪಡಿಸುತಿರೆಮನದ ದುಗುಢ ಇಮ್ಮಡಿಯಾಗುತಲಿ.ದಿನದೂಡುವಂತಾಗಿದೆ. ಇರುವುದನ್ನು ಇಲ್ಲದಂತೆ ಕಂಡು ಇಲ್ಲದನ್ನುಇರುವುದೆಂಬ ಭಾವದಲಿ ಬದುಕು ಬರುಡಾಗಲುಸಿದ್ಧಸ್ಥವಾಗುತಲಿ ದೂರವೇ ನಿಂತು ದಡ ಸೇರಲುಆತುರದ ದೋಣಿ ತವಕಿಸುತಿದೆ. ಜಗದೊಡಲಲಿ ತೆನೆ ಚಿಗುರಿದ ಕ್ಷಣದಲಿಉತ್ತವರು ಯಾರೋ ಬಿತ್ತವರೂ ಯಾರೋಉತ್ತಮರನು ಹುಡುಕುವ ಬರದಲಿ ಮಧ್ಯಸ್ಥಉಳಿದವನೇ ಉಳ್ಳವನಾಗುವ ಇದ್ದವ ಇಲ್ಲದವನಾದ . ಪರಮ ವೈರಿಯನು ಗುರುವೆಂದು ತಿಳಿದವಮುಂದಾದ ಅವಸಾನಕೆ ವಶವಾಗಿ ಮತಿ ಇನವನಾದಒಳಿತಿಗಾಗಿ ಹೊರಟು ಕೆಡಕುಗಳು ಬಲೆಗೆಅವನೇ ವರವಾದ ದುರಂತಗಳ ಸೆಲೆಗೆ ಬದುಕಾದ. ಸಿರಿಗಾಗಿ […]

Back To Top