Category: ಕಾವ್ಯಯಾನ

ಕಾವ್ಯಯಾನ

ಮುಗುಳು

ಕವಿತೆ ಮುಗುಳು ಎಸ್ ನಾಗಶ್ರೀ ಏನೂ ಹೇಳದೆಯೂತಿಳಿದು ಹೋಗುವುದುನಿನಗೆ ಮಾತ್ರವೇ ಹೇಳುಅರೆಬರೆ ಉಳಿದ ಭಾವಗಳಚಿಲ್ಲರೆ ಮೂಟೆಕಟ್ಟಿಸಂತೆಯೊಳಗೆ ಸೋರಿಹೋಗುವಮುಸ್ಸಂಜೆಯೊಂದರಲ್ಲಿಮೆಲ್ಲ ಮೂಡುವ ಮುಗುಳು ಆಗಸದಲಿ ಬಿದಿಗೆ ಚಂದ್ರಎಂದೋ ಮರೆತ ಹಾಡೊಂದುಪಲ್ಲವಿಸುವುದು ಮಂದ್ರದಲಿತೀರದ ಉಸುಕಲ್ಲಿಮರಳುಗೂಡಿನ ಹೊಸಕನಸುಕೊಚ್ಚಿಹೋಗುವ ಹಲವಲ್ಲಿಶೋಕವೂ ಸೇರಿದ್ದು ನೋಡು ಮತ್ತೆ ಮತ್ತೆ ನಗುವೊಂದುಎದೆಯೊಳಗೆ ಹುಟ್ಟುವುದುಬೇಲಿಹೂವಿನ ರಂಗುಬಂಧನವ ಮರೆಸುವುದುಸಣ್ಣಗಿನ ಮಿಡುಕು ಧೈರ್ಯದಲಿಅಡಗಿಹೊಸದೊಂದು ಆಸೆಪ್ರತಿದಿನದ ಕಡೆಗೆಬದುಕಿದ್ದರೆ ಹೀಗೆ ಸಾಕುಮೌನಕೂ ನಗೆಯ ಬೆಳಕು ***************

ನಿರಾಕರಣೆ

ಕವಿತೆ ನಿರಾಕರಣೆ ಕಾವ್ಯ ಎಸ್. ನನ್ನ ಮರೆತ ಹೊನ್ನ ಮೆತ್ತ ಹೊತ್ತುನನ್ನ ತೊರೆದು ಯೋಚಿಸಿದಆ ಘಳಿಗೆಗಳ ಚಲನಗಳುಕಳಚುತ್ತಿವೆ, ಇಂದು-ನಾಳೆಗಳ ಅಂಗಿಯಯಾರ ಕತ್ತಲು ಯಾರ ಒಡಲ್ಲಲ್ಲಿಜಿನುಗಿ ಹಾವಾಗುತ್ತಿರುವುದೋಕಡಲ ತುಂಬೆಲ್ಲ ಬರುವ ನಿನ್ನ ನೆನಪಿನಆರಿದ ಮಲ್ಲಿಗೆಯ ಕೆಂಡಗಳುಎಷ್ಟು ಹೊತ್ತು ಸುಡಬಲ್ಲವು ನನ್ನಕರಕಲಾಗಿಸಲು ಅಥವಾ ಕಪ್ಪು ಬಣ್ಣ ಹಚ್ಚಲುಬೇಕ ಸಮಯದ ಎಲ್ಲೆಗಳುಬೂದಿಯ ಮಣ್ಣಲ್ಲಿ ಒಲೆಯ ತೂತುಗಳಾಗಿಹರಿದು ಹೋಗಲಿಎಷ್ಟೆಂದು ಉರಿಯ ಕಾವಿಗೆ ತಲೆ, ಕಾಲು ಕೊಡಲಿಆತ್ಮಶಕ್ತಿಯ ಅಂತರಾಗದ ಹಾಹಾಕಾರ ಮುಗಿಲೆದ್ದಿದೆಒಡಲಿನ ಭಾರ ಹೆಚ್ಚಿ ನಜ್ಜಾಗುತ್ತಿದೆಆಳಗರ್ಭದಲ್ಲಿ ಅಡಗಿ ನೆರೆ ಉಕ್ಕದಿರಲಿಅಲ್ಲೇ ಬೆನ್ನು ಮೇಲಾಗಿಸಿ, ಸಮುದ್ರರಾಜನತೋಳಲ್ಲಿ […]

ಧಿಕ್ಕಾರ… ಧಿಕ್ಕಾರ…!!

ಕವಿತೆ ಧಿಕ್ಕಾರ… ಧಿಕ್ಕಾರ…!! ಡಾ. ಮಲ್ಲಿನಾಥ ಎಸ್. ತಳವಾರ ಭೋಗದ ವಸ್ತುವೆಂದು ಭಾವಿಸಿದ ಈ ಸಮಾಜಕ್ಕೊಂದು ಧಿಕ್ಕಾರಹೆರಿಗೆಯ ಯಂತ್ರವೆಂದು ಭಾವಿಸಿದ ಗಂಡುಕುಲಕ್ಕೊಂದು ಧಿಕ್ಕಾರ ನಯ ನಾಜೂಕಿನ ಬಲವಂತದ ಫೋಷಾಕು ತೊಡಿಸಿದರು ಹೆತ್ತವರುತಾಳ್ಮೆಯ ಅನಗತ್ಯ ಮಾಲೆ ಕೊರಳಿಗೆ ಹಾಕಿದರು ಬೆಳ್ಳಿ ಕೂದಲಿನವರುಬಿಟ್ಟು ಕೊಡುವುದರಲ್ಲಿಯೇ ತೃಪ್ತಿ ಪಡೆಯಬೇಕೆಂದರು ಬಂಧುಗಳುಗಂಡಿಗಿಲ್ಲದ ಮೌಲ್ಯ ನಮ್ಮ ಮೇಲೆ ಹೇರಿದ ಪುಸ್ತಕಗಳಿಗೊಂದು ಧಿಕ್ಕಾರ ಕಾಮದ ಕಂಗಳಲಿ ನುಂಗುವ ತೋಳಗಳಿವೆ ನಮ್ಮ ನೆರೆಹೊರೆಯಲ್ಲಿಮುಖವಾಡದಿ ಉಬ್ಬು-ತಗ್ಗುಗಳ ಕಂಡು ಜೊಲ್ಲು ಸುರಿಸುವ ನಮ್ಮವರಿದ್ದಾರೆಹಣ ಚೆಲ್ಲಿ ಕನಸುಗಳನ್ನು ದೋಚುವ ಧನಿಕರು ಇದ್ದಾರೆ […]

ಸ್ವಗತ

ಕವಿತೆ ಸ್ವಗತ ಮಮತಾ ಶಂಕರ್ ದೂರದಲ್ಲಿ ನಾನು ನೀನುಒಂದಾಗಿ ಕಂಡರೂ ಒಂದಾಗದ ನಿಜದೂರದ ಕಣ್ಗಳಿಗೆ ಸುಳ್ಳೆಲ್ಲವೂ ಸತ್ಯವೇ….ನೀನು ಮೇಲೆ ತನ್ನ ಪಾಡಿಗೆ ತಾನಿರುವ ಗಗನಸೂರ್ಯ ಮೋಹಿತೆ ಭೂಮಿಗೆ ತನ್ನ ಕಕ್ಷೆಯಲ್ಲೇ ಯಾನ ನೀನು ಒಮ್ಮೊಮ್ಮೆ ಉರಿಯೆದ್ದುಸುರಿಸುವೆ ಕೆಂಡ ಮೈಮನಗಳಿಗೆ ;ನಾನೋ ಹಪಹಪಿಸುವೆ ಒಂದೆರಡುತಂಪನಿಗಳಿಗೆಹುಚ್ಚೆದ್ದು ಮಳೆ ಸುರಿಸುವೆ ಅದೆಒಲವೆಂದು ಬಾನೆದೆಯ ಸೀಳಿ ;ಕಡಲುಕ್ಕಿಸಿ ನದಿ ಸೊಕ್ಕಿಸಿ ತಳಮಳಿಸುವೆಬಿಕ್ಕಳಿಸುತ ನಾನಿಲ್ಲಿ…… ನಿನ್ನಿಂದ ಅದೆಷ್ಟು ಬಾರಿ ಬಿರುಮಳೆಗೆಬಿರುಗಾಳಿಗೆ ಬಿರುಬಿಸಿಲಿಗೆ ತುತ್ತಾದರೂ ನಾನುನಿನಗುಂಟೆ ಈ ಒಡಲೊಳಗಿಂದಕಣಕಣವು ನೋವಾಗಿ ಚಿಗುರಿ ಮರಹೂ ಕಾಯಿ ಹಣ್ಣಾಗುವ […]

ಚಿಂದಿ ಆಯುವ ಕುಡಿಗಳು

ಕವಿತೆ ಚಿಂದಿ ಆಯುವ ಕುಡಿಗಳು ನೂತನಾ ದೋಶೆಟ್ಟಿ ಆಗಸವ ಬೇಧಿಸುವ ಸೂರುಚಂದ್ರನಿಗೂ ಗಾಬರಿಪ್ರೇಯಸಿಯ ಮೈಮೇಲೆಪ್ಲ್ಯಾಸ್ಟಿಕ್ಕಿನ ಗಾಯಬೆಳದಿಂಗಳೂ ಆರಿಸದ ಬೇಗೆ ಓಝೋನಿನ ತೇಪೆಯಲ್ಲಿಇಣುಕುವ ಸೂರ್ಯಸತಿಯ ಜಾಲಾಡುವ ಅವನುಸಹಿಸಲಾಗದ ಧಗೆ ಮತ್ಸರವೇಕೆ?ಅವಳ ಪ್ರಶ್ನೆಒಡಲ ಮಮತೆಯ ಕುಡಿಗಳವುಎದೆ ಭಾರ ಕಳೆಯುವವು ನೀರ ಕಾಣದ ದೇಹಹಣಿಗೆ ಸೋಕದ ತಲೆಸಿಗುವ ರೂಪಾಯಿಗೆಏನೆಲ್ಲ ಬವಣೆ ಸೈರಣೆ! ತಾಯ ಮಮತೆಗೆಪ್ರೇಮಿಗಳ ಹನಿಗಣ್ಣುಹೆತ್ತೊಡಲ ಉರಿಗೆಗೋಳಿಟ್ಟ ರಾತ್ರಿಗಳುಹರಸಿದವು ಕೈಯೆತ್ತಿಚಿಂದಿ ಆಯುವ ಕುಡಿಗಳ ಇರಲೆಂಟು ಜನುಮಎಲೆ ತುಂಬಿ ಉಣಲಿಕನಸುಗಳ ನಿದ್ರಿಸಲಿನಿನ್ನ ಸ್ವಚ್ಛ ಮಡಿಲಲ್ಲಿ **********************

ಮತ್ತೊಮ್ಮೆ ಬೆಳಕು

ಕವಿತೆ ಮತ್ತೊಮ್ಮೆ ಬೆಳಕು ಹುಳಿಯಾರ್ ಷಬ್ಬೀರ್ ಹುಳಿಯಾರ್ ಷಬ್ಬೀರ್ ಅಂದಿನ ಅರೆಬೆತ್ತಲೆ ಫಕೀರನ ಬಿಡದ ನೆರಳು ಇಂದು ಮತ್ತೊಮ್ಮೆ ಆಗಿದೆ ಗೋವರ್ಧನ ಗಿರಿಗೆ ಹಿಡಿದ ಶ್ರೀ ಕೃಷ್ಣನ ಬೆರಳು ಅಂದು ಹರಡಿದ್ದ ಫರಂಗಿಯವರ ಮುಳುಗದ ಸಾಮ್ರಾಜ್ಯದ ಗುಲಾಮಗಿರಿಗುಡಿಸಿ ಹಾಕಿ ಸ್ವಚ್ಛ ಮಾಡಿ,ಜಯಭೇರಿ ಹೊಡೆದಿತ್ತುನಮ್ಮ ಗಾಂಧಿಗಿರಿ. ಇಂದು ಎತ್ತ ಸಾಗುತ್ತಿದೆ ಸ್ವಾತಂತ್ರ್ಯ ಪಡೆದ ಈ ಪುಟ್ಟವಿಶ್ವಧಾಮ…..?ಮೀರ್ ಸಾಧಿಕ್ ರ ದರ್ಬಾರಿನಲ್ಲಿ ನೀತಿ ನಿಯಮಗಳಲ್ಲ ಅಯೋಮಯವೋ ರಾಮ ರಾಮ…. ತೋರಿಕೆಗೆ ಆಚಾರ, ಮಾತೆಲ್ಲ ಬಂಗಾರ ನಡೆ ನೋಡಿದಡೆ ರೂಢಿಗತ ಭ್ರಷ್ಟಾಚಾರಪ್ರಜೆ […]

ಪಟ್ಟದರಸಿಯೊಂದಿಗೆ ಪಟ್ಟಾಂಗ

ಕವಿತೆ ಪಟ್ಟದರಸಿಯೊಂದಿಗೆ ಪಟ್ಟಾಂಗ ಪ್ರೇಮಶೇಖರ ಪಟ್ಟದಕಲ್ಲಿನ ಪಟ್ಟದರಾಣಿಯೇ ಇಷ್ಟದ ಒಡವೆಯ ಕೊಡಿಸುವೆ ಬಾ. ಕಷ್ಟವೇ ಆದರೂ, ನಿದ್ರೆಯೇ ಹೊದರೂ ತರುವೆನು ಸರವನು ನಿನಗೊಂದ. ಮೈಸೂರಿನ ಶೂರನೇ, ಪ್ರಾಣಕಾಂತನೆ ಒಡವೆಯು ನನಗೆ ಬೇಡಪ್ಪ. ಮಳೆಗಾಲಕೆ ಮೊದಲೇ ಸೋರುವ ಸೂರನು ಚಂದಕೆ ನೀನು ಹೊದಿಸಪ್ಪ. ಸೂರಿನ ಕೆಲಸವ ನಂತರ ಮಾಡುವೆ, ಮೊದಲಿಗೆ ನಿನ್ನ ಕೊರಳನು ತುಂಬುವೆ ಕಿವಿಯಲಿ ಓಲೆಗಳೆರಡನು ಅಂಟಿಸುವೆ, ಜುಮಕಿಗಳೆರಡನು ತಂದೂ ಕೂಡಿಸುವೆ. ಓಲೆಯು ಬೇಡ, ಜುಮಕಿಯೂ ಬೇಡ, ಒಡವೆಯ ಗೊಡವೆಯು ಬೇಡವೇಬೇಡ. ಮಳೆಗೇ ಮೊದಲೇ ಕಣಜವ ತುಂಬಪ್ಪ, […]

ಮೌನ ಬೆಳದಿಂಗಳಂತೆ ನಗುತ್ತದೆ…

ಕವಿತೆ ಮೌನ ಬೆಳದಿಂಗಳಂತೆ ನಗುತ್ತದೆ… ಬಿದಲೋಟಿ ರಂಗನಾಥ್ ಮೌನ ಬೆಳದಿಂಗಳಂತೆ ನಗುತ್ತದೆಮಾತಾಡುವುದಿಲ್ಲಎಷ್ಟೋ ದೂರ ನಡೆದು ಮತ್ತೆ ಬಂದುಕೂರುತ್ತದೆ ಮಡಿಲ ಮಗುವಂತೆ ಚಿಂತೆಗಳಿಗೆ ಬಟ್ಟೆ ತೊಡಿಸಿಶೃಂಗಾರ ಮುಡಿಸುತ್ತದೆಎಷ್ಟೊಂದು ಕೈಗಳು ಪರಚಲು ಬರುತ್ತವೆನಗುತ್ತವೆ ಅಳುತ್ತವೆಸೀಳಾದಿಯ ಮೇಲೆ ನಡೆದುಮುಗಿಲ ಚುಕ್ಕಿಗಳ ಮುಟ್ಟುತ್ತವೆ ಕಣ್ಣವೆಗಳ ಒಳಗಿನ ಧ್ಯಾನಬಾಗಿಲ ತೆರೆದುನಖಶಿಕಾಂತ ಕಾರುವ ಬೆಂಕಿಯ ಜ್ವಾಲೆ ನಂದಿಸಿಹೂ ಮುಡಿಸುತ್ತದೆ ನಡುವೆಅಳುವ ಧ್ವನಿಗೆ ಸೋತುಕಿವಿಗಳಿಗೆ ರೆಕ್ಕೆ ಬಂದುಬಹುದೂರ ನಡೆದು ಬೊಗಸೆ ತುಂಬಿನಿಜತ್ವದ ಸಾರಕೆ ಬುದ್ಧಿಯ ಮೆತ್ತಿನಡೆದು ಬರುವಾಗ ಮೋಡ ಗುಡುಗಿಮಳೆಯ ಬಿಲ್ಲುಗಳು ಬೀರಿದವುಭಾವ ಗುಚ್ಚದ ಎದೆಗೆ. ಮೌನದೊಳಗಿನ […]

ಅದೆ ಕೂಗು

ಕವಿತೆ ಅದೆ ಕೂಗು ಶಂಕರಾನಂದ ಹೆಬ್ಬಾಳ ಮತ್ತೆ ಮತ್ತೆ ಅದೆ ಕೂಗುಕೇಳಿದರೆ ಮೈಜುಂ ಎನ್ನುವ ಕ್ರೌರ್ಯಧಿಕ್ಕಾರವಿರಲಿ ನಿಮ್ಮ ಪುರುಷತ್ವಕ್ಕೆಅಬಲೆಯ ಮೇಲೆ ಪೌರುಷತೋರಿಸಿದ ನಾಚಿಕಗೇಡಿನ ಜನ್ಮ…..!! ಬಾಪುವಿನ ಕನಸು ನನಸಾಗಲಿಲ್ಲಒಡಲ ದಳ್ಳುರಿಯು ಹತ್ತಿ ಉರಿದಿದೆನಿಗಿ ನಿಗಿ ಕೆಂಡದಂತೆ…ಆರ್ತನಾದವ ಕೇಳುವರಿಲ್ಲದೆಕೇಳಿದರು ಮಂಗನಂತೆಕೈ ಬಾಯಿ ಕಣ್ಣು ಮುಚ್ಚಿಕುಳಿತಿದ್ದೆವೆ ಹೇಡಿಯಂತೆ……!! ನಿನ್ನ ದೇಹಕ್ಕೆ ಆಸೆ ಪಟ್ಟವರಿಗೆದಫನ್ ಮಾಡಬೇಕುಕಾಮುಕರ ಕೈಕತ್ತರಿಸಿನಾಯಿನರಿಗಳಿಗೆ ಹಾಕಬೇಕುಸತ್ತವಳು ನೀನಲ್ಲ….!! ಮತ್ತೆ ಮತ್ತೆ ಕೇಳುತಿದೆಅಮಾಯಕ ಹೆಣ್ಣುಮಕ್ಕಳಮೇಲಿನ ದೌರ್ಜನ್ಯದ ಕೂಗು..ನರಕದ ಹುಳುವಾಗಿ ಬಳಲಿದಮನುಜನ ಸಹವಾಸ ಸಾಕು….!! **************************

ಅರೆನಗ್ನ ಕನಸು

ಕವಿತೆ ಅರೆನಗ್ನ ಕನಸು ಕಾವ್ಯ ಎಸ್. ನಿನ್ನ ಅರೆ ಬೆಳಕಿನ ಇಬ್ಬನಿಯ ಮನೆಯಲ್ಲಿ ನಾ ಒದ್ದೆಯಾಗಿ ಒಣಗುತ್ತಿರುವಾಗ ಕೋಲ್ಮಿಂಚಂತೆ ನೀ ಹೊಕ್ಕೆ ಚಳಿಯನ್ನು ತಬ್ಬಲಿಯಾಗಿ ಹೊದ್ದಿದ್ದ ನನಗೆ ಕಣ್ಣುಗಳಿಂದ ಬಿಟ್ಟ ಇರುವೆ ಮೈಯೆಲ್ಲಾ ಸುತ್ತುತ್ತಿದೆ ನಿನ್ನ ಎದುರಿನ ಅಂತರದಲ್ಲಿ ನಾ ಮುದುಡಿದರೆ ತುಟಿಯಂಚಿನ ಮೊಗ್ಗಿನ ತಾವರೆಯು ಮುಡಿಯಲ್ಲಿ ಬಿಸಿ ಉಸಿರಿನ ತಾಪಕ್ಕೆ ಹಬ್ಬಿ ಚುಂಬನದ ಅಂಬರಕ್ಕೆ ಅರಳಿದ ಕೊಡೆಯಾಯಿತು ನಿನ್ನ ಕೆಮ್ಮಣ್ಣು ತುಟಿಯಲ್ಲಿ ನನ್ನ ರೂಪು ಬಿತ್ತಿದಾಗ ನನ್ನೊಳಗೆ ನವಿಲುಗಳು ಗುಂಪುಗಟ್ಟಿ ನೃತ್ಯವಾಡಿದ್ದವು ಹಿಡಿದೆಳೆದ ಒರಟು ರಭಸದ […]

Back To Top