Category: ಕಾವ್ಯಯಾನ

ಕಾವ್ಯಯಾನ

ದೂರ ನಿಂತೇ ಹರಿವ ತೊರೆ ನೂತನ ದೋಶೆಟ್ಟಿ ನೆನಪು ಮೂಡಿಸಿತು ತುಟಿಯಂಚಲಿ ಹೂನಗೆಸೂಸಿ ಕಣ್ಣಂಚಲಿ ಜಿನುಗು ಹನಿಹೊರ ನಡೆಯಿ ನೀವುತು ಮೆಲ್ಲುಸಿರು ತುದಿ ನಾಲಿಗೆಯ ಮೇಲೆ ನಲಿವು ಹೆಸರುಕಣ್ಣ ಪರದೆಯಲ್ಲಡಗಿಹ ಮಂದ ಹಾಸದೂರ ನಿಂತೇ ಹರಿವ ತೊರೆ ಬೇಕೆನ್ನಿಸುವುದಿದೆ ಒಂದು ಹಿಡಿತಅದುಮಿದ ಕೈ ಇಟ್ಟ ಭಾಷೆಮುಚ್ಚಿದೆವೆಗಳ ಮುಂದೆ ಮೂರ್ತ ರೂಪ ಕಣ್ಣ ಹೊಳಪಲಿ ಕಂಡ ಹೊಸ ಅರ್ಥಅಂಗೈಯಲ್ಲಿ ಬಚ್ಚಿಕೊಂಡ ಡವಗುಡುವೆದೆಗೆಶೃತಿ ಸೇರಿದೆ ಭಾಸ ಹೊಸ ನಾಳೆಗಳ ಬಾನಲ್ಲಿ ಬಿಳಿನೊರೆಮಿಂಚುನಗೆಯ ನೆನಪಲ್ಲಿಬಿರಿವ ಹೂಗಳುಎದೆಗೂಡ ಭಾರದಲ್ಲೂ ನಳನಳಿಸುವವು ಹುಟ್ಟಿನ ತರ್ಕದಲ್ಲಿ […]

ಪರಂಪರೆ

ಸುಡುವ ಮುಳ್ಳಿನ ಸುಮ್ಮಾನದ ಸಿಂಹಾಸನದಿಂದ
ಕೆಳಗಿಳಿದು ನೆಲದಾಯಿಯ ಸ್ಪರ್ಶಸುಖ
ಎಂದೂ ಬಯಸಲಿಲ್ಲ

ನಳಿನ. ಡಿ ಅವರ ಎರಡು ಕವಿತೆಗಳು

ನಳಿನ. ಡಿ ಅವರ ಎರಡು ಕವಿತೆಗಳು

ಬರೆಯದೇ ಬದುಕಿದ್ದ ಪದ್ಯಗಳನು
ಬರೆದು ಈಗೀಗ
ಹೃದಯಕೆ ತಂಪು

ನನ್ನ ಸಖಿಯರಿಗೆ…

ಕವಿತೆ ನನ್ನ ಸಖಿಯರಿಗೆ… ಸುರೇಖಾ. ಜಿ.ರಾಠೋಡ. ರಾವಣನನ್ನು ಪ್ರೀತಿಸಲೇ,ಇಲ್ಲಾ ರಾಮನನ್ನು ದ್ವೇಷಿಸಲೇ? ರಾವಣನು ಸೀತೆಯಒಪ್ಪಿಗೆಯಿಲ್ಲದೆ ಅವಳನ್ನುಮುಟ್ಟದಿರವ ಹಠ ತೊಟ್ಟನೋ? ರಾಮನು ಸೀತೆಯನ್ನುಒಪ್ಪಿಕೊಳ್ಳಲು ಅವಳನ್ನುಅಗ್ನಿ ಪರೀಕ್ಷೆಗೆ ಒಳಪಡಿಸಲು ಹಠ ತೊಟ್ಟನೋ? ಹಠ ತೊಟ್ಟ ಈರ್ವರುರಾಜರಲ್ಲಿ ಯಾರನ್ನು ನಾಯುಗ ಪುರುಷ,ಆದರ್ಶಪುರುಷನೆಂದು ಹೇಳಲಿ??ನನ್ನ ಸಖಿಯರಿಗೆ…..! ರಾಮ ಲಕ್ಷ್ಮಣರ ಮುಂದೆಶೂರ್ಪನಖೀಯು ತನ್ನಪ್ರೇಮ ನಿವೇದನೆಯನ್ನುಇಟ್ಟಾಗ, ಪ್ರೇಮದ ಬದಲಿಗೆದಂಡಿಸುವ ರೂಪದಲ್ಲಿಅವಳ ಮೂಗನ್ನು ಕತ್ತರಿಸಿದರು..! ತಮ್ಮ ಪೌರಷತ್ವವನ್ನುತೋರಿಸಿ, ಹೆಣ್ಣನ್ನುಅವಮಾನ, ಅಪಮಾನಗೊಳಿಸಿದಇವರನ್ನು ವೀರರೆಂದು ಕಥೆಹೇಳಲೇ ನನ್ನ ಸಖಿಯರಿಗೆ…!**************************************************

ನಿನ್ನೊಲವು

ಕವಿತೆ ನಿನ್ನೊಲವು ಭಾರತಿ ರವೀಂದ್ರ ಒಂದೇ ಒಂದು ಸಾರಿನೀ ತಿರುಗಿ ನೋಡಬಾರದೇ…… ದೂರ ನೀ ಹೋದರೂನು ಕಾಯುತಿಹೆ ನಾ ನಿನಗಾಗಿಯೇದೇಹ ನಾನಾದ್ರೂ ಪ್ರಾಣ ನೀನುಎಂದೆಂದೂ ಪ್ರಾಣಸಖ ನೀನು ಕತ್ತಲೆ ತುಂಬಿದ ನನ್ನ ಬದುಕಿಗೆ ನಿನ್ನೊಲವೇ ತಂಬೆಳಕಾಗಿದೆಆ ಹುಣ್ಣಿಮೆಯ ಚಂದಿರನು ನೀನುನಿನಗಾಗಿ ಅರಳೋ ತಾವರೆಯು ನಾನು ಈ ಬಾಳ ಏಕಾಂಗಿ ಪಯಣದಿಕೈಯ ಹಿಡಿದು ಜೊತೆಯಾದೆಜನುಮ ಜನುಮದಿ ಜೊತೆಯುನೀನುನಿನ್ನನಗಲಿದರೆ ಉಳಿಯೇನು ನಾನು ನನ್ನ ನಿನ್ನೆ ಇಂದು ನಾಳೆಗಳಲ್ಲೂಬರೀ ನಿನದೇ ನೆನಪ ಹಾವಳಿನೆಪ ಮಾಡಿ ಬರುವ ನೆನಪು ನೀನುನೆನಪಿಗೋಸ್ಕರವಿರೋ ನೆಪವು ನಾನು […]

ಗಜ಼ಲ್

ಗಜ಼ಲ್ ಎ . ಹೇಮಗಂಗಾ ‘ನಾನು , ನನ್ನದೆಂ’ದು ಎಷ್ಟು ಬಡಿದಾಡಿದರೂ ಸೇರಲೇಬೇಕು ಗೋರಿಯನ್ನು‘ನಾನೇ ಎಲ್ಲವೆಂ’ದು ಎಷ್ಟು ಸೆಣಸಾಡಿದರೂ ಸೇರಲೇಬೇಕು ಗೋರಿಯನ್ನು ನಿಲ್ಲದೇ ನಡೆದಿಹ ಬಾಳ ನಾಟಕದಿ ನೀನೂ ಬರಿಯ ಪಾತ್ರಧಾರಿಯಷ್ಟೆನಿರ್ಗಮಿಸುವ ಕ್ಷಣದಿ ಇರಬೇಕೆಂದರೂ ಸೇರಲೇಬೇಕು ಗೋರಿಯನ್ನು ಎಲ್ಲರನೂ ತನ್ನೊಳಗೆ ಮಣ್ಣಾಗಿಸುವ ಮಣ್ಣಿಗೆ ಭೇದ ಭಾವವೆಲ್ಲಿದೆಅಂತಕನಿಗೆ ಮಣಿದು ಅರಸನಾದರೂ ಸೇರಲೇಬೇಕು ಗೋರಿಯನ್ನು ಹಣ, ಪ್ರತಿಷ್ಠೆ ಯಾವುದೂ ಬರದು ನಿನ್ನೊಡನೆ ಮಸಣದಿ ಮಲಗಿರಲುಕೋಟೆ ಕಟ್ಟಿ ಅಧಿಕಾರದಿ ಮೆರೆದರೂ ಸೇರಲೇಬೇಕು ಗೋರಿಯನ್ನು ಮೂರು ದಿನದ ಬಾಳಿನಾಟದಿ ಎಲ್ಲಕೂ ಕೊನೆಯೊಂದಿದೆ ಹೇಮಚಿರಂಜೀವಿ […]

ಹೆಜ್ಜೆಗಳ ಸದ್ದು

ಕವಿತೆ ಹೆಜ್ಜೆಗಳ ಸದ್ದು ವೀಣಾ ರಮೇಶ್ ನೀಬರುವ ದಾರಿಯಲಿ ಹೆಜ್ಜೆಗಳ ಸದ್ದುನನ್ನೆದೆಯ ರಂಗಮಂದಿರದಲ್ಲಿಗೆಜ್ಜೆ ಕಾಲ್ಗಳ ಸದ್ದು ಕುಣಿದು ಬಿಡು ಇನ್ನಷ್ಟುನನ್ನ ಭಾವನೆಗಳುಹುಚ್ಚೆದ್ದು ಕುಣಿಯಲಿಸಾಲು ಸಾಲು ಗೆಜ್ಜೆಗಳಲಿಸಾಲು ಸಾಲು ನೆನಪುಗಳು ನೀ ಇಡುವ ಗಗ್ಗರದಲಿಗಿರಕಿಯಾಡುವ ನನ್ನ ಕನಸುಗಳುಗುಂಗುರುಗಳ ನಡುವೆಉಂಗುರ ಅಪ್ಪಿದತುಂಟ ಬೆರಳುಗಳು,ತಪ್ಪಿದ ತಾಳಗಳು ನನ್ನೆದೆಯ ರಂಗ ವೇದಿಕೆಯಲಿನೀ ಬರೆದು ಗೀಚಿದ ಸರಸದಪಿಸುಮಾತುಗಳು ತಪ್ಪು ಹೆಜ್ಜೆಗಳಲಿಕುಣಿಯುತ್ತಿದೆಉನ್ಮಾದ,ಉದ್ವೇಗಗಳುನಾದ, ನೀನಾದಗಳುನೂಪುರದಗಲ್ ಗಲ್ ತಾಳದಲಿನೀ ತರುವ ಹೆಜ್ಜೆಗಳು ****************

ಹೀಗೆ

ಕವಿತೆ ಹೀಗೆ ಗೋನವಾರ ಕಿಶನ್ ರಾವ್ ಹೆಣ್ಣೆಂದರೆ,ಪೂಜೆ-ಅಸಡ್ಡೆಉಭಯನೀತಿ,ಕೀಳು,ಅವಮಾನ- ಅತ್ಯಾಚಾರ, ಭರತವರ್ಷೇ,ಭರತಖಂಡೇ ಜಂಬೂ ದ್ವೀಪದಿ,ಗಂಡುಕಾಮಿಗಳ,ಹೀನಾಯ, ನಡೆ,ಪುರುಷಗಣಗಳಿಗೆಲ್ಲಚುಕ್ಕೆಬೊಟ್ಟು ನೆನಪು.ತವರು ಮನೆಗೆ ಬಂದ ಹೆಣ್ಣುವರುಷದಲಿ , ಹುಟ್ಟಿದ ಕೋಣೆತೋರಿಸಲು ತವರಿಗೆಮತ್ತೆ ಹುಟ್ಟಿ ಬೆಳೆದ ಮನೆಯನೇನೋಡುವ ಮತ್ತೆ ಮತ್ತೆ ನೋಡುವಕಹಿ ಚಪಲ, ಮನೆ-ಮನವ ಮುರಿದಿರುವಕ್ರೂರ ಜಗದ ಈ ಕೆಟ್ಟಗಂಡುಗಳ ಸಂತೆ ನಿರ್ಭಯದ ಅಂಗಡಿಯಲಿಸಾವು ಕೊಳ್ಳುವ ಅ ದಂಡುಪಾಠ ಕಲಿಯದೆ ಮತ್ತೆಹತರಾಸ್!! ಕಲಿತದ್ದು ರಾವಣನಿಂದ ?ಕೀಚಕನಿಂದ ?ಅವರು ಮಣ್ಣಾದರೂಇವರು, ಗಲ್ಲಾ ದರೂ……… ಹೀಗಾದರೆ ? ಹೇಗೆ ? ತಡವಾಗಿ ಬಂದ ಉತ್ತರವಿರದಪ್ರಶ್ನೆ,! ಶೇಷ ಪ್ರಶ್ನೆ […]

Back To Top