Category: ಕಾವ್ಯಯಾನ

ಕಾವ್ಯಯಾನ

ನೂತನಾ ಕಾವ್ಯಗುಚ್ಛ

ನೂತನಾ ದೋಶೆಟ್ಟಿ ಕಾವ್ಯಗುಚ್ಛ ಬಟ್ಟಲ ತಳದ ಸಕ್ಕರೆ ಬಟ್ಟಲಲ್ಲಿ ಆಗಷ್ಟೇ ಕಾಯಿಸಿದಬಿಸಿ ಹಾಲುಜೊತೆಗೆ ತುಸು ಸಕ್ಕರೆಹಿತವಾದ ಮಿಲನವಸವಿಯುವ ಪರಿ ಸುಖವೇ ಸಾಕಾರವಾಗಿಬೆಳದಿಂಗಳೊಡಗೂಡಿದತಂಗಾಳಿಯ ಪಯಣಮೆತ್ತನೆಯ ಹಾಸುಕರೆವ ಕೆಂಪು ಹೂಗಳ ಗುಂಪುಕಾಮನ ಬಿಲ್ಲಿಗೂ ಬಣ್ಣ ತುಂಬುವುದೇ? ಬಟ್ಟಲು ಬರಿದಾದಾಗತಳದಲ್ಲುಳಿದ ತುಸುಸಕ್ಕರೆಯನ್ನೇತುದಿ ಬೆರಳಿನಿಂದ ಸವರಿಮೆಲ್ಲಗೆ ಹೀರಿದಾಗಖಾಲಿಯಾಗುವ ಭಯ ಕಾಲನ ದಾರಿಗುಂಟಸವೆಯಬೇಕಾದ ಹಾದಿಮೂಡಿ ಮಸುಕಾಗಿರುವಹೆಜ್ಜೆ ಗುರುತುಬಟ್ಟಲ ತಳದಸಕ್ಕರೆಯಂತೆ. ನಿನಗೆ ನೀನೇ ಸರಿಸಾಟಿ ಮನಸೊಂದುಮಲ್ಲಿಗೆ ಹೂಅಂಗಳದ ಬೆಳ್ಳಿ ರಂಗೋಲಿಅರಳಿದಾಗಬಣ್ಣ ಬಣ್ಣದ ಹೂಗಳಓಕುಳಿಬಿರಿದು ನಕ್ಕಾಗಬಾನ ಚಿಕ್ಕೆಗಳಚೆಲ್ಲಾಟದ ಪರಿ ಮನಸ್ಸೊಂದುಕೋಗಿಲೆಯ ಕೊರಳ ಇಂಪುಕರೆವ ಮಾಘದ ಮಧುರ ಪೆಂಪುಮೌನದ […]

ನಾಗರಾಜ ಹರಪನಹಳ್ಳಿ

ನಾಗರಾಜಹರಪನಹಳ್ಳಿ ಕಾವ್ಯಗುಚ್ಛ ಬೆರಳ ತುದಿಗೆ ಕರುಣೆ ಪಿಸುಗುಡುವತನಕ ಕಟ್ಟೆಯ ಮೇಲೆ ಕುಳಿತದ್ದಕ್ಕಕೊಲೆಯಾಯಿತುಉಗ್ಗಿದ ಖಾರದ ಪುಡಿಗೆಇರಿದ ಚೂರಿಗೆಕಣ್ಣು ಕರುಣೆ ಇರಲಿಲ್ಲ ಅಂತಿಂತಹ ಕಟ್ಟೆಯಲ್ಲಮಲ್ಲಿಕಾರ್ಜುನನ ಕಟ್ಟೆಇರಿದವ ಅಹಂಕಾರಿಇರಿಸಿಕೊಂಡದ್ದು ಸಮಾನತೆಒಂದು ಸವರ್ಣಧೀರ್ಘ ಸಂದಿಮತ್ತೊಂದು ಲೋಪಸಂದಿ ಕಣ್ಣು ಕಟ್ಟಿದ ,ಬಾಯಿ ಮುಚ್ಚಿದ ಈ ನಾಡಿನಲ್ಲಿ ಏನೂ ಆಗಬಹುದು ಸ್ವತಃ ದೊರೆ ದೀರ್ಘಾಸನದಲ್ಲಿಶವಾಸನದಲ್ಲಿರುವಾಗಅಹಂಕಾರ ಊರ ಸುತ್ತಿದರೆಅಚ್ಚರಿಯೇನಿಲ್ಲ ಇಲ್ಲಿ ಎಲ್ಲರೂ ಬಾಯಿಗೆ ಬೀಗಜಡಿದು ಕೊಂಡಿರುವಾಗನಿತ್ಯವೂ ಸಮಾನತೆಯ ಹಂಬಲ ಕೊಲೆಯಾಗುತ್ತಿರುತ್ತದೆಮತ್ತೊಮ್ಮೆ ಕರುಣೆಭೂಮಿಯಲ್ಲಿ ಮೊಳಕೆಯೊಡೆದು ಸಸಿಯಾಗಿ ಗಿಡವಾಗಿ ,ನಡೆದಾಡುವ ಮರ ಬರುವತನಕನದಿಯೇ ಮನುಷ್ಯನಾಗಿ ಚೂರಿಯ ಅಹಂಕಾರದ ರಕ್ತ ತೊಳೆಯುವತನಕಇರಿದ […]

ಫಾಲ್ಗುಣ ಗೌಡ ಅಚವೆ

ಫಾಲ್ಗುಣ ಗೌಡ ಅಚವೆ ಕಾವ್ಯಗುಚ್ಛ ಅವ್ಯಕ್ತ ಎದುರಿಗಿದ್ದ ಚಿತ್ರವೊಂದುನೋಡ ನೋಡುತ್ತಿದ್ದಂತೆಪೂರ್ಣಗೊಂಡಿದೆ ಹರಿವ ನೀರಿನಂತಇನ್ನೇನನ್ನೋ ಕೆರಳಿಸುವಕೌತುಕದ ರೂಪಮೂಡಿದಂತೆ ಮೂಡಿ ಮರೆಯಾದಂತೆಆಡಿದಂತೆ ಆಡಿ ಓಡಿ ಹೋದಂತೆಮೈ ಕುಲುಕಿ ಮನಸೆಳೆವ ಹೆಣ್ಣಿನಂತೆಕತ್ತಲಾದರೂ ಅರಳಿಯೇ ಇರುವಅಬ್ಬಲಿ ಹೂವಂತೆಅದರ ಶೋಕಿ ಆಕರ್ಷಣೆಒಳ ಮಿನುಗು ಅಚ್ಚರಿಯೆಂದರೆಅದರ ಹಿಂದೊಂದುಅದರದೇ ರೂಪಸದ್ದಿಲ್ಲದೇ ಅಚ್ಚಾದಂತೆಮಾಡಿದೆಪರಕಾಯ ಪ್ರವೇಶ! ದಂಡೆಯಲ್ಲಿ ಎಲ್ಲ ನೆನಪುಗಳ ಮೂಟೆ ಕಟ್ಟಿಬಾವಿಗೆಸೆದಂತೆಬಾಕಿ ಇರುವ ಲೆಖ್ಖವನ್ನೂಚುಕ್ತಾ ಮಾಡದೇಅಲ್ಲೆಲ್ಲೋ ಮೌನ ದೋಣಿಯಲ್ಲಿಪಯಣ ಹೊರಟೆಒಸರುವುದು ನಿಂತ ನಲ್ಮೆಯೊಸಗೆಯ ಮನಸುನೀರವ ನಿರ್ವಾತ ನಿರ್ವಾಣದೆಡೆಗೆಕೊಂಡೊಯ್ದಿದೆ ದಂಡೆಯಲಿ ಮುಸುಕುವಉಸುಕಿನಲೆಯಲಿ ಕುಳಿತುಕಣ್ಣು ಮುಟ್ಟುವವರೆಗೂ ನೋಟಬರವ ಕಾಯುತ್ತಿದೆನೀ ಸಿಕ್ಕ ಸಂಜೆಯ […]

ಕಾವ್ಯಯಾನ

ಪ್ರೀತಿಯೆಂದರೆ.. ವಿಶಾಲಾ ಆರಾಧ್ಯ ಈ ಪ್ರೀತಿಯೆಂದರೆ ಹೀಗೇನೇಒಮ್ಮೆ ಮೂಡಿತೆಂದರೆ ಮನದಿಸರ್ರನೆ ಧಮನಿಯಲಿ ಹರಿದಾಡಿಮನಸ ಕದವ ತೆರೆದುಕನಸ ತೂಗು ಬಲೆಯಲಿಜಮ್ಮನೆ ಜೀಕುವಜೋಕಾಲಿಯಾಗುತ್ತದೆ..!! ಈ ಪ್ರೀತಿಯೆಂದರೆ ಹೀಗೇನೇಹರಿವ ಹೊನಲಂತೆ ಕಲ್ಲೇನುಮುಳ್ಳೇನು ಹಳ್ಳಕೊಳ್ಳವ ದಾಟಿಪರಿಧಿ ಪಹರೆಯ ಕೊತ್ತಲ ದಾಟಿಸೇರಿ ಕುಣಿಯುತ್ತದೆ ಮಾನಸಸರೋವರದ ಅಲೆಗಳ ಮೀಟಿ..!! ಪ್ರೀತಿ ಎಂದರೆ ಹೀಗೇನೇಕಂಗಳ ಬೆಸುಗೆಗೆ ಕಾವಾದ ಹೃದಯದೆಕಾಪಿಟ್ಟು ಹೆಪ್ಪಾದ ಮುಗಿಲಿನಂತೆಕಾದಲಿನ ತುಡಿತಕೆ ಒಮ್ಮೆ ಸ್ಪಂದನಿಸಿಕೂಡಿತುಂಬಿದ ಮುಗಿಲು ಸುರಿವ ವರುಣಧಾರೆಯ ಮುತ್ತ ಹನಿಗಳಂತೆ..!! *****************

ವಿಭಾ ಪುರೋಹಿತ ಕಾವ್ಯಗುಚ್ಛ

ವಿಭಾ ಪುರೋಹಿತ ಕಾವ್ಯಗುಚ್ಛ ವೆಂಟಿಲೇಟರ್ ಮತ್ತು ರಕ್ಷೆ ಭ್ರಾತೃತ್ವದ ಬಾಂಧವ್ಯ ದೆಳೆಯಲ್ಲಿಫ್ಯಾಷನ್ ಗಿಫ್ಟುಗಳ ಮೋಹದನೂಲುಆತ್ಮೀಯತೆ ಗೌಣ ಪ್ರದರ್ಶನಕ್ಕೆಕ್ಲಿಕ್ಕಾಗುವ ಕೆಂಪು ಕೇಸರಿ ಹಳದಿರಕ್ಷೆ ತಾಯಿ ಕರುಳ ಬಣ್ಣ ಅಂಟಿದೆಅದೇಕೋ ಅವಳ ಕುಡಿಗಳ ಬೆರಳು ಕೆಂಪಾಗಿವೆ! ಎಪ್ಪತ್ತು ವರ್ಷಗಳಿಂದಎದೆಯಲ್ಲಿ ಬೆಂಕಿ ಇಟ್ಟು ಕೊಂಡಿದ್ದಾಳೆ ಇತಿಹಾಸ ಗಡಿರೇಖೆಯೆಳೆದಾಗಸಹಸ್ರೋಪಾದಿಯಾಗಿ ಕಂಗಾಲಾದವರನ್ನೆಲ್ಲತನ್ನವರೆಂದು ತೆಕ್ಕೆಬಡಿದುಕೊಂಡಳುಆತ್ಮಸಾಕ್ಷಿಯಾಗಿ ಕಾಲಿಟ್ಟವರೆಷ್ಟೋ ? ಒಂದೇ ಬಳ್ಳಿಯ ಹೂಗಳಂತೆ ಮುಡಿಗಿಟ್ಟಳುಸುಮ್ಮನಿರದ ಶಕುನಿಗಳ ಕ್ಯಾತೆಗೆಹಣ್ಣಾಗಿದ್ದಾಳೆ ಪುಪ್ಪಸನೆಂಬ ಪುತ್ರರಕ್ಕಸರುಉಸಿರಾಡಲು ಬಿಡುತ್ತಿಲ್ಲ ವೆಂಟಿಲೇಟರ್ ಅಭಾವ ,ಕೆಲವೇ ಶುಶ್ರೂಷಕರಸಿಟ್ರಝೀನ್,ಡೊಲೊಗಳಿಂದ ತುಸು ಉಸುರುವಂತಹ ಗತಿಯಿದೆಬೇಕಾಗುವ ವೆಂಟಿಲೇಟರ್ ಸುಲಭದ್ದಲ್ಲ ‘ನಾವು ಭಾರತೀಯರು’ […]

ಮಾಲತಿ ಶಶಿಧರ್ ಕಾವ್ಯಗುಚ್ಛ

ಮಾಲತಿ ಶಶಿಧರ್ ಕಾವ್ಯಗುಚ್ಛ ಥೇಟ್ ನೀನು ಥೇಟ್ನನ್ನ ಕವಿತೆಯಂತೆಗೆಳೆಯ.ಒಮ್ಮೊಮ್ಮೆನಾನೆ ಬರೆದಿದ್ದರೂನನಗೇ ಅರ್ಥವಾಗದಹಾಗೆ.. ನೀನು ಥೇಟ್ನನ್ನ ನಗುವಿನಂತೆಗೆಳೆಯಕಿವಿಗಳೊರೆಗೂತುಟಿಯಗಲಿಸಿದರುನಕ್ಕಂತೆ ಕಾಣದಹಾಗೆ.. ನೀನು ಥೇಟ್ನನ್ನ ಮುಂಗುರುಳಂತೆಗೆಳೆಯಕಂಗಳಿಗೆ ಬಿದ್ದಾಗಲೆಲ್ಲಾಕಣ್ಣೀರು ಬರಿಸುವಹಾಗೆ.. ನೀನು ಥೇಟ್ನನ್ನ ಮೂಗು ನತ್ತಿನಂತೆಗೆಳೆಯಮುಂದೆಯೇಎಷ್ಟೇ ಅತ್ತರುಕೈಚಾಚಿ ಕಣ್ಣೀರುಮಾತ್ರ ಒರೆಸದಹಾಗೆ.. ಅಳಲು ಮುಗಿಲ ಹಿಂದೆ ಅವಿತು ಕುಳಿತಿರುವ ಬೆಳಕೇಸೀಳಿಕೊಂಡು ಬಂದು ನನ್ನನ್ನಾವರಿಸಿಬಿಡು.. ಮೋಡದಲ್ಲಿ ಮರೆಯಾಗಿರುವ ಹನಿಯೇಹೊಡೆದು ಜೇನ ಮಳೆ ಸುರಿಸಿಬಿಡು.. ಆಗಸವನೇ ಬಿಗಿದಪ್ಪಿಕೊಂಡಿರುವ ಚುಕ್ಕಿಯೇಕೈಬಿಟ್ಟು ಅಕ್ಷತೆಯಾಗಿ ಮೇಲೆ ಉದುರಿಬಿಡು… ಅಡವಿಯಲಿ ಅಡಗಿರುವ ಕಾಡ್ಗಿಚ್ಛೇಬಂದು ಚಿಂತೆಗಳ ಸುಟ್ಟುಬಿಡು… ನೀರಿನಲ್ಲಿ ಲೀನವಾಗಿರುವ ಸುನಾಮಿಯೇಬಂದು ನನ್ನಳಲ ನುಂಗಿಬಿಡು.. […]

ಡಾ.ಅಜಿತ್ ಹರೀಶಿ ಕಾವ್ಯಗುಚ್ಛ

ಡಾ.ಅಜಿತ್ ಹರೀಶಿ ಕಾವ್ಯಗುಚ್ಛ ನಿರೀಕ್ಷೆ ಗೀಜಗನ‌ ಗೂಡಿನಂತಿದ್ದ ಮನಮನೆಯೇ ಮುರಿದ ದಿನಬುಗಿಲೆದ್ದ ಹಗೆಗೆ ಸತ್ತುಒಡಹುಟ್ಟಿದವರ ನೆನೆದು ಅತ್ತುತಿಳಿಯಾದ ಮನವು ಋಜುಒಡೆದದ್ದು ನಾಜೂಕು ಗಾಜುಚೂರುಗಳ ಜೋಡಿಸಲೇಹೃದಯಗಳು ಬೆಸೆಯಲೇಬೇಕು ಸಂಬಂಧ ನಾಳೆಗೊಂದು. ನಕ್ಕು ಹಗುರಾಗುತ್ತಿದ್ದ ಬಾಳುಒಣ ಜಂಭದ ರೀತಿಗೆ ಹಾಳುಮಾತು ಮಸಣವಾಗಿದೆತುಮುಲ ಸರಿಪಡಿಸಲಾಗದೆಭಾವನೆಗಳು ಹೊಂದದೆಮುನಿಸು ಸರಿಸಿಸೋತರೇನಂತೆ ನಗಿಸಿಮರಳಿ ಬಂದರೆ ಮನ್ನಿಸಿಬಾರದಿದ್ದರೆ ಕ್ಷಮಿಸಿಕಾಯ್ದರೆ ನಗು ನಾಳೆಗೊಂದು. ಮೀನಿನ ಹೆಜ್ಜೆ ಕಡಲ ದಾರಿಗುಂಟ ಸಾಗಿದೆನೆಲ ನುಂಗುವವರೆಗೂ ನಡೆದೆಕಾಲ, ನಿನ್ನ ಹೆಜ್ಜೆ ಗುರುತೊಂದೆಅಳಿಸಿ ಸಾಗಿತ್ತು, ಕಾಣಗೊಡದೆ. ಕಾಮ ಮೋಹಾದಿಗಳ ಕಡಿಯಲುಬಹುದೂರದ ದಾರಿಯು ಗೋಜಲುಪ್ರೀತಿತ್ಯಾಗಕ್ಕೂ ಮುಳ್ಳಿನ […]

ಸ್ಮಿತಾ ಅಮೃತರಾಜ್ ಕಾವ್ಯಗುಚ್ಛ

ಸ್ಮಿತಾ ಅಮೃತರಾಜ್ ಕವಿತೆಗಳು ಪುರಾವೆ ಸಾಬೀತು ಪಡಿಸಲುಸೂಜಿ ಕಣ್ಣಿನಿಂದ ಹುಡುಕಿದರೂಕಿತ್ತು ಹೋದ ಒಂದು ಎಳೆನೂಲಿನ ನೇಯ್ಗೆಗೆ ಪುರಾವೆಗಳೇಸಿಗುತ್ತಿಲ್ಲ. ಎದೆಯ ತಳದಲ್ಲಿ ಸೋಸಿಉಳಿದ ಅಪ್ಪಟ ತಿಳಿ ಸತ್ಯವೊಂದುಅಗೋಚರವಾಗಿ ಕದಡಿ ಪ್ರತಿಬಿಂಬಮಸುಕು ಮಸುಕಾದುದ್ದಕ್ಕೆ ಪುರಾವೆಯಕಡತಗಳನ್ನು ಹೇಗೆ ಶೋಧಿಸುವುದು? ಬೆಳ್ಳಗೆ ಹೊಳೆದದ್ದುಕನ್ನಡಿಯಂತೆ ಪ್ರತಿಫಲಿಸಿದ್ದುಹಗಲಿನಷ್ಟು ನಿಚ್ಚಳವಾಗಿ ತೋರಿದ್ದುಎಲ್ಲವೂ ಕನಸಿನಂತೆ ಕರಗಿರುವಾಗಅರ್ಥವಿರದ ಪುರಾವೆ ಒದಗಿಸುವುದುವೃಥಾ ಶ್ರಮವಷ್ಟೆ. ಕಣ್ಣ ರೆಪ್ಪೆಯೊಳಗೆ ಅಚ್ಚೊತ್ತಿ ನಿಂತಸ್ಪಷ್ಟ ಬಿಂಬವೊಂದನ್ನು ಆಕಾರವೇ ಇಲ್ಲವೆಂದುಅಳಿಸಲು ಸಾಧ್ಯವೇ?. ಪದ್ಯ ಹೊಸೆದುರಾಗ ಕಟ್ಟಿ ತೇಲಿ ಬಂದಗಾನ ಗಾಯನದ ಇಂಪುಕವಿತೆ ಹುಟ್ಟಿದ ಕ್ಷಣಗಳಿಗೆಕಾಡಿದ ಭಾವವಷ್ಟೇ ಸಾಕ್ಷಿ. ಸಾಕ್ಷಿಯುಳಿಸದೇಹಕ್ಕಿ […]

ಕಾವ್ಯಯಾನ

ಮಾಲತಿ ಶಶಿದರ್ ಒಂದು ಪ್ರೇಮಕವಿತೆ ಒಲವೆಕಗ್ಗತ್ತಲಲ್ಲಿ ಹೊಳೆವ ಬಂಧಕ್ಕಾಗಿ ಹಾತೊರೆದಿರುವೆಕಡಲಾದ ನಿನ್ನ ಒಂದು ಹನಿಯಾಗಿ ಸೇರಿರುವೆ ನಿನ್ನ ಚಲುವಿಗೆ ಪುರಾವೆಯಾಗಬಲ್ಲೆನೇ ನಾನು..ನಮ್ಮಿಬ್ಬರ ಮಿಲನ ಕಂಡು ಮಣ್ಣು, ಮಳೆ ಹನಿ ನಾಚದೆನು ನಿನ್ನೊಲವ ಸ್ಫೂರ್ತಿಯಲಿ ಆಗಸದಲ್ಲಿ ತೇಲಿಹೆನು,ಹೆಗಲ ಮೇಲೆ ಒರಗುವಾಸೆ ದಾಟಿ ಬಳಿಗೆ ಬಂದಿಹೆನು ನನ್ನೊಳಗೆ ಅವಿತಿರುವ ನೀನೊಂದು ಸುಂದರ ಗುಟ್ಟುಏಕಾಂತದಲ್ಲೂ ನಿನ್ನದೇ ಪರಿಮಳ, ನಿನ್ನದೇ ನೆನಪು.. ಬೇಸಿಗೆ ಆಗಸ ವಸಂತವಾಗಿದೇದೂರದ ಕಾಡು ನಿನ್ನೆಸರ ಕೂಗಿದೆ.. ಅಣುವಿನ ವಿದಳನದಂತೆ ನಮ್ಮ ಬಂಧ ದಿನೇ ದಿನೇ ಸಿಡಿದಿದೆಬೆರಳುಗಳ ಹೊಸ ಭಾಷೆಯ […]

ಕಾವ್ಯಯಾನ

ನೂತನ ಅವರ ಹೊಸ ಕವಿತೆ ನೂತನ ದೋಶೆಟ್ಟಿ ಸಾಲುಗಟ್ಟಿದ ವಾಹನಗಳ ಸಂದಿನಲ್ಲಿಚಟಚಟನೆ ಜಿಗಿಯುವ ಪುಟ್ಟ ಕಾಲುಗಳುದೇಹವಿಡೀ ಲೋಹದ ಗೋಲದೊಳಗೆ ತೂರಿಕೈಕಾಲು ಬಿಡಿಬಿಡಿಯಾಗಿ ಹೊರಬರುವ ಆಟ ಮಿಂಚುವ ಕಣ್ಣುಗಳ ಸುತ್ತ ಕಪ್ಪು ಕಾಡಿಗೆಸೆರೆ ಹಿಡಿಯುವ ದಾಹಮಿರಮಿರನೆ ಹೊಳೆವ ಕದಪುಗಳುಬಾಲ್ಯವನ್ನು ನುಂಗಿ ಉಬ್ಬಿ ಗರಿಗರಿಯಾಗುತ್ತಿರುವವು ಒಡ್ಡಿದ ಕೈಮೇಲೆ ಬೀಳುವ ಕನಸ ಕಾಸುಗಳುಸಂಜೆಗತ್ತಲಲ್ಲಿ ಕರಗುವುದ ತಿಳಿದೂಸುಡುಬಿಸಿಲಲಿ ಮೈ ಮಣಿಸುವ ಕಸುವುಸೊಂಟಕ್ಕೆ ಬಿಗಿದ ದಾವಣಿಯುಸಡಿಲವಾಗುವುದಕ್ಕೆ ಪೂರ್ವಹಾದಿಬದಿಯ ದೊಂಬರಾಟದಲ್ಲಿ ತಯಾರಿ ಬಡಿಯುವವನ ತಮಟೆ ತಾಳಕ್ಕೆಬಾಗಿ ಬಳುಕುವ ನೋಡುಕಣ್ಸನ್ನೆ, ಕೈಸನ್ನೆ, ಬಾಯ್ಸನ್ನೆಗಳ ಪಾಠಉಣ್ಣುವ ಅನ್ನದಲಿ ಸುಖ […]

Back To Top