ನಿಮ್ಮ ಲೇಖನಗಳನ್ನು ಇ-ಮೇಲ್ ಅಥವಾ ವಾಟ್ಸಪ್ ಮುಖಾಂತರ ನಮ್ಮ ಸಂಗತಿ ವೆಬ್ಸೈಟ್ ಕಳಿಸಬಹುದು ವಾಟ್ಸಪ್‌ :- 7019100351, ಇಮೇಲ್ :- sangaatipatrike@gmail.com
ಕಾವ್ಯಯಾನ

ಮಕ್ಕಳದಿನದ ಸಂಭ್ರಮ

ಮಕ್ಕಳ ಕವಿತೆಗಳು ಸಂತೆಬೆನ್ನೂರು ಫೈಜ್ನಾಟ್ರಾಜ್ ನಮ್ಮ ಚಂದ್ರ ನಮ್ಮ ಚಂದ್ರ ಬಾನಿಗೊಬ್ಬ ಚಂದಿರ ದೇಶಕ್ಕೊಬ್ಬ ಚಂದಿರ ಅವನೇ ಸುಭಾಸ್ ಚಂದಿರ//ಬಾ// ಶಕ್ತಿ ಕೊಡಿ ರಕ್ತ ಕೊಡಿ ಸ್ವತಂತ್ರ ಕೊಡುವೆ ಎಂದನು ಸ್ವಾರ್ಥ ಬಿಡಿ ನಿಸ್ವಾರ್ಥ ದುಡಿ ದೇಶಕದುವೆ ಹೆಮ್ಮೆ ಎಂದನು//ಬಾ// ಜೈ ಹಿಂದ್ ಜೈ ಹಿಂದ್ ಜೈಕಾರ ಕೂಗುತ ಎಂದಿಗೂ ಮುನ್ನುಗ್ಗಿ ಏನೇ ಬರಲಿ ಒಗ್ಗಟ್ಟಿರಲಿ ದೇಶಭಕ್ತರು ಒಂದಾದರೆ ಅದೇ ಸುಗ್ಗಿ //ಬಾ// ಒಂದೆ ನಾಡು ಒಂದೆ ತಾಯಿ ನಾವೆಲ್ಲರೂ ಭಾರತಾಂಬೆ ಮಕ್ಕಳು ಹಿಂದು-ಮುಸ್ಲಿಂ ಯಾರೇ ಇರಲಿ ದೇಶದಲ್ಲಿ ನಾವೆಲ್ಲ ಒಂದೆ ಒಕ್ಕಲು! //ಬಾ// ————————- ಸುಭಾಸ್ ಜೀ ನಿಮಗೆ ಸಲಾಂ ಸುಭಾಸ್ ಜೀ ನಿಮಗೆ ಸಲಾಂ ಭಾರತಮಾತೆಯ ಪುತ್ರನೇ ಸಲಾಂ //ಸು// ಆಜಾದ್ ಹಿಂದ್ ಕಟ್ಟಿದ ಸೇನಾನಿ ನೀನು ಜೈ ಹಿಂದ್-ಎಂದು ಅಬ್ಬರಿಸಿದ ಶೂರ ನೀನು ಮರೆಯಲಾರೆವು ನಾವು ನಿನ್ನ ಎಂದಿಗೂ ನಮ್ಮ ಹೃದಯದಲ್ಲಿರುವೆ ನೀನು ಎಂದಿಗೂ //ಸು// ಸ್ವತಂತ್ರಕ್ಕಾಗಿ ದೇಶ-ದೇಶ ತಿರುಗಿದೆ ನೀನು ಬ್ರಿಟಿಶರನ್ನು ಹೊರ ಹಾಕಲು ಹವಣಿಸಿದೆ ನೀನು ದೂರಾದೆ ಗೆಳೆಯ ನೀನು  ತಿಳಿಯದಂತೆ ಸುಮ್ಮನೆ ಅರ್ಪಿಸುವೆವು ನಿನಗೆ ಇದೋ ಇದೋ ನಮ್ಮನೆ! //ಸು// —————————————— ಹೊಸ ಲೆಕ್ಕ ಒಂದು ಎರೆಡು ಮೂರು ಬಾಳಲಿ ಕಷ್ಟ ನೂರಾರು ನಾಕು ಐದು ಆರು ಎಲ್ಲಾ ಮೆಟ್ಟಿಲ ನೀ ಏರು ಏಳು ಎಂಟು ಒಂಭತ್ತು ಗೆಲ್ಲು ಜೀವನದ ಆಪತ್ತು! ಹತ್ತು ಹನ್ನೊಂದು ಹನ್ನೆರೆಡು ಸಾಧನೆಯ ಬೆನ್ನತ್ತಿ ಹೊರಡು ಹದಿಮೂರು ಹದಿನಾಲ್ಕು ಹದಿನೈದು ಶಿಕ್ಷಣ ಕಲಿತರೆ ಅಪಾಯ ಏನೂ ಬರದು!—————————————————— ಬಳ್ಳಿ ಮತ್ತು ಮರದ ಮಾತುಕತೆ ಆಕಾಶಕ್ಕೆ ಮುಖ ಮಾಡಿ ಒಂದು ಮರ ನಿಂತಿತ್ತು ಮರದ ಮೈಗೆ ಫ್ರೆಂಡಾಗಿ ಬಳ್ಳಿ ಹಬ್ಬಿತ್ತು ಬಳ್ಳಿ ಜೊತೆ ಮರಕ್ಕಂತು ಗುಡ್ ಫ್ರಂ ಶಿಪ್ಪು ಇವರಿಬ್ಬರನ್ನು ನೋಡಿ ಉಳಿದವರು ಗಪ್ ಚಿಪ್ಪು! ಹಬ್ತಾ ಹಬ್ತಾ ಬಳ್ಳಿ ಮೇಲೆ ಹೋಗಿತ್ತು ಪಕ್ಕದಲ್ಲೇ ಇದ್ದ ಲೈಟ್ ಕಂಬ ಮುಟ್ಟಿತ್ತು ಅಯ್ಯೋ ಅಯ್ಯೋ ಬಳ್ಳಿ ಅದರಲ್ಲಿದೆ ಕರೆಂಟು ಹುಷಾರು ಹೆಚ್ಚು ಕಮ್ಮಿ ಆದರೆ ನೀನ್ ಜೊತೆ ನಾನು ಢಮಾರು ಇಲ್ಲಪ್ಪ ಮರ-ರಾಯ ಹೆದರಬೇಡ ಅರಾಮಾಗಿರು ಜೀವನ ಅಂದ್ರೆ ಎಲ್ಲಾ ಇರುತ್ತೆ ಖುಷಿಯಾಗಿರು ಆದ್ರೂ ಕರೆಂಟಂದ್ರೆ ಭಯ ಅಲ್ವಾ ನೀ ಯಾಕ್ ಅಪ್ಪಿದೆ? ನೀನು ನನ್ನ ಫ್ರೆಂಡ್ ನಿನ್ ಧೈರ್ಯ ನಾನ್ ಒಪ್ಪಿದೆ ನಾವು ಒಳ್ಳೆಯವರಾದ್ರೆ ಲೋಕನೆ ಒಳ್ಳೆದಂತೆ ಸ್ನೇಹದಿಂದ ಇದ್ದರಂತು ಎಲ್ಲಾನು ಗೆಲ್ಲಬಹುದಂತೆ!——————————————————

ಮಕ್ಕಳದಿನದ ಸಂಭ್ರಮ Read Post »

ಕಾವ್ಯಯಾನ

ಕಾವ್ಯಯಾನ

ಅಂಬೇಡ್ಕರ್ ಕೆಂಪಗೆ ಕಣ್ಣು ಬಿಟ್ಟಿದ್ದಾರೆ ! ಬಿದಲೋಟಿ ರಂಗನಾಥ್ ನಮ್ಮ ನಾಡಿಮಿಡಿತದಲ್ಲಿರುವ ಅಂಬೇಡ್ಕರ್ ಕೆಂಪಗೆ ಕಣ್ಣು ಬಿಟ್ಟಿದ್ದಾರೆ ಅವರೇ ಜನ್ಮವಿತ್ತ ಸಂವಿಧಾನದ ಕೂಸು ಅವರದಲ್ಲವೆಂದವರ ವಿರುದ್ಧ. ಅಲ್ಪತಿಳಿದವರ ಕುತಂತ್ರ ಬೆಳೆಯುವ ಮಕ್ಕಳ ಮನಸುಗಳ ನೆಲದ ಮೇಲೆ ವಿಷ ಬೀಜ ಕುದಿಯುವ ರಕ್ತದಲಿ ಅಂಬೇಡ್ಕರ್ ಕಣ್ಣೀರು.! ಸುಡುತ್ತದೆ ಕೋಮುವಾದಿಗಳ ಲೇಖನಿಯನ್ನು ಹೊಲಸು ಮನಸನ್ನು ನೀವೆ ತೋಡುವ ಖೆಡ್ಡಕ್ಕೆ ನೀವೆ ಮುಗ್ಗರಿಸುವಿರಿ ಭೀಮನು ನಡೆದ ನೆಲ ಬೆವರುತ್ತಿದೆ ಅಪಮಾನ ಅವಮಾನದ ಕರುಳು ಸುಡುತ್ತ ಮನದಲಿ ಕುಂತ ಶಾಂತಿಯ ಪಾರಿವಾಳಕ್ಕೆ ರಕ್ತಪಾತದ ಕನಸು ಬೀಳುತ್ತಿದೆ ಇತಿಹಾಸ ತಿರುಚುವ ನಿಮ್ಮಗಳ ಕೈಯಲ್ಲಿ ಎಲ್ಲೋ ಮುಳ್ಳುಗಳು ನೆಲೆಯೂರಿರಬೇಕು ನಾಲಿಗೆಯು ಹುಣ್ಣಾಗಿರಬೇಕು ಮನಸು ಕೊಳಕಾಗಿ ಗಬ್ಬೆದ್ದು ನಾರುತ್ತಿರಬೇಕು .! ಅವನುಂಡ ನೋವು ನಮ್ಮದು ಕರುಳು ಕಲೆತ ಮನಸುಗಳಿಗೆ ಬೆಂಕಿ ಯಾಕೆ ಸೂಡುತ್ತೀರಿ ನರವಿಲ್ಲದ ನಾಲಿಗೆ ಮೇಲಿರುವ ಸುಳ್ಳಿನ ಬೀಜ ಮೊದಲು ಸುಡಿ ಹಾಲುಗೆನ್ನೆಯ ಮಕ್ಕಳ ಬೆಳಕಿನ ಮನಸಿಗೆ ಕತ್ತಲನ್ನೇಕೆ ಮೆತ್ತುತ್ತೀರಿ ? ಅಂಬೇಡ್ಕರ್ ಸರ್ವಕಾಲಿಕ ನಾಯಕ ಅವನೇ ಬರೆದ ಸಂವಿಧಾನವಿಲ್ಲದೇ ಹೋಗಿದ್ದರೆ ನಿಮ್ಮ ಗರಿ ಗರಿ ಬಟ್ಟೆಗಳು ಮಣ್ಣು ಮೆತ್ತಿ ಗೆದ್ದಲಹುಳು ಮುಕುರುತ್ತಿದ್ದವು. ಭೀಮನು ತುಳಿದ ಮಣ್ಣಹೆಜ್ಜೆ ನೆರಳಿಗೂ ಯೋಗ್ಯತೆಯಿಲ್ಲದ ಕುಬ್ಜ ಮನಸುಗಳೇ ಯಾರೋ ಹಾಕಿದ ಹಾರ ಹಾವಾಗುವ ಮುನ್ನ ಹಿಂಪಡಿಯಿರಿ ನೀವು ಬಿತ್ತಿದ ಸುಳ್ಳಿನ ಕೈಪಿಡಿ ಇಲ್ಲವೋ ಈ ನೆಲದ ಮನಸುಗಳ ನಿಟ್ಟುಸಿರು ವಿಧಾನ ಸೌಧದ ಕಲ್ಲುಗಳ ಮೇಲೆ ಕೂತು ಕುರ್ಚಿ ಕಾಲುಗಳೇ ಮುಗುಚಿ ಊನಾಗಿ ಹುಣ್ಣಾಗಬಹುದು.!

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಪಯಣ ಶಂಭುಗೌಡ.ಆರ್.ಗಂಟೆಪ್ಪಗೌಡ್ರ) ಬೆವರ ಬಸಿಯಬಹುದೇ ಹೇಳು ನೀನು ಶ್ರಮದ ಕವಾಟ ತಟ್ಟದೇ “ಬೆಳಕು” ಕತ್ತಲ ಸಮಾದಿಯ ಮೇಲೊಬ್ಬ ಗೊತ್ತಿಲ್ಲದೇ ಇಟ್ಟು ಹೋದ ಮೊಗ್ಗಲ್ಲದ ಹೂ “ಪ್ರೀತಿ” ಮುಚ್ಚಿದ ಕಣ್ಣೊಡಲೊಳಗಿನ ದಿವ್ಯ ಚೇತನ ಬೆಳಕು ಮತ್ತೆ ಪ್ರೀತಿ ಸಂಗತಿ ಎರಡಾದರೂ ಬೆಳಗುವ ತತ್ವವೊಂದೇ, ಬದುಕೊಂದು ಎರಡು ಬಾಗಿಲು ತೆರೆದರೊಂದು ಮುಚ್ಚುವುದು ಮತ್ತೊಂದು ತೆಗೆದು ಮುಚ್ಚುವ ಮಧ್ಯೆ ತನ್ನ ತನವ ಬಚ್ಚಿಟ್ಟು ಪರರ ಮೆಚ್ಚಿಸುವ ಬಣ್ಣದಾಟವೇನು ಬದುಕು ಹೇಳು ನೀನು ; ಕಾಣದವನ ಸೂತ್ರಗಳ ಬೀಜಾಕ್ಷರಗಳು ನಾವು ಒಬ್ಬರನ್ನೊಬ್ಬರು ಕೂಡಲೂ ಬಹುದು ಇಲ್ಲವೇ ಒಬ್ಬರೊಳಗೊಬ್ಬರು ಕಳೆದು ಹೋಗಲೂ ಬಹುದು “ಬದುಕು” ಯಾರೋ ಕಟ್ಟಿಟ್ಟ ಮತ್ಯಾರೋ ಜೀಕುವ ಜೋಕಾಲಿ

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಬಿಕರಿ ಡಾ.ಗೋವಿಂದ ಹೆಗಡೆ ಇಲ್ಲಿ ಪ್ರೀತಿ ಸಿಗುತ್ತದೆ’ ಬೋರ್ಡು ಹಾಕಿ ಕುಳಿತಿದ್ದೇನೆ ಯಾರೊಬ್ಬರೂ ಸುಳಿಯುತ್ತಿಲ್ಲ.. ಅದೇನು, ಕೋವಿಯಂಗಡಿ ಮುಂದೆ ಅಷ್ಟೊಂದು ಸರತಿಯ ಸಾಲು!

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಮಗಳು ಲಕ್ಷ್ಮಿಕಾಂತ್ ಮಿರಜಕರ ಮಗಳು ಹುಟ್ಟಿದ್ದಾಳೆ ತಂದಿದ್ದಾಳೆ ಜೊತೆಯಲ್ಲಿಯೇ ಹೆಡೆಮುರುಗಿ ಕಟ್ಟಿ ವಸಂತನನ್ನು ಮನೆಯಲ್ಲೀಗ ನಿತ್ಯ ದೀಪಾವಳಿ ಮನ ತುಂಬಾ ಬೆಳದಿಂಗಳ ಓಕುಳಿ ಮಗಳು ಮುಗುಳ್ನಗುತ್ತಿದ್ದಾಳೆ ಮಾಯವಾಗುತ್ತಿವೆ ಜಗದ ಜಂಜಡಗಳು ಒಂದೇ ಗುಕ್ಕಿಗೆ ಕರಗಿ ಅವಳ ನಿಷ್ಕಲ್ಮಶ ನಗುವಿನ ಮೋಡಿಗೆ ಬಂದು ಬೀಳುತ್ತಿವೆ ಗಗನದ ನಕ್ಷತ್ರಗಳೆಲ್ಲಾ ಅವಳ ಸುಕೋಮಲ ಮೃದು ಪಾದದ ಅಡಿಯಲ್ಲಿ ಮಗಳು ಅಂಬೆಗಾಲಿಡುತ್ತಿದ್ದಾಳೆ ಅವಳ ಎಳೆದೇಹದ ಸ್ಪರ್ಷ ಸಂಚಾರವಾಗುತ್ತಲೇ ಅರ್ಥ ಕಳೆದುಕೊಳ್ಳುತ್ತಿವೆ ದೊಡ್ಡವರ ಸಿನಿಕತನದ ಮಾತುಗಳು ಮಗಳು ಮಾತನಾಡುತ್ತಿದ್ದಾಳೆ ಕಪಟವರಿಯದ ಮಗಳ ತೊದಲುಮಾತುಗಳಿಗಿಂತ ಶ್ರೇಷ್ಟವೇನಲ್ಲ ರಾಮಾಯಣ ,ಕುರಾನ್,ಬೈಬಲ್ ಭಗವದ್ಗೀತೆಯ ಸಾರ ನಿಜ,ಮಗಳು ಇಲ್ಲದೇ ಹೋದರೆ ಬದುಕು ನಿಸ್ಸಾರ! ಮಗಳು ನಡೆಯುತ್ತಿದ್ದಾಳೆ ಒಂದೊಂದೇ ತಪ್ಪುಹೆಜ್ಜೆಗಳ ಸರಿಪಡಿಸಿಕೊಳ್ಳುತ ನಡೆಯುತ್ತಿದೆ ಸರಿದಾರಿಯಲ್ಲಿ ಹಳಿ ತಪ್ಪಿದ್ದ ಜೀವನಯಾನ ಮಗಳೆಂಬ ತಾಯಿಯ ಆಗಮನದಿಂದ ಜೀವಂತಿಕೆಯ ಸಾನಿಧ್ಯದಿಂದ ಮಗಳು ಓಡುತ್ತಿದ್ದಾಳೆ ಸಮಯವೂ ಈಗ ಅವಳ ಹಿಂದೆ ಹಿಂದೆ ಓಡುವ ಬಾಲಂಗೋಚಿ ಸರಿದದ್ದೇ ಗೊತ್ತಾಗುವುದಿಲ್ಲ ಮಗಳೆಂಬ ಚೈತನ್ಯದ ಸನ್ನಿಧಿಯಲ್ಲಿ ಬದುಕೀಗ ರಸನಿಮಿಷಗಳ ಆಗರ ಮನೋಲ್ಲಾಸದ ಸಾಗರ. ********************* ಪರಿಚಯ: ಲಕ್ಷ್ಮಿಕಾಂತ ಮಿರಜಕರ ..ಊರು ಹಾವೇರಿ ಜಿಲ್ಲೆ ಶಿಗ್ಗಾಂವ.ಸದ್ಯ ಮೊಳಕಾಲ್ಮುರು ತಾಲೂಕಿನ ದೇವಸಮುದ್ರದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಪ್ರಭಾರಿ ಪ್ರಾಂಶುಪಾಲರಾಗಿ ಕಾರ್ಯನಿರ್ವಹಣೆ.ಕವನ ಕತೆ ಓದು ಮತ್ತು ಬರೆಯುವುದರಲ್ಲಿ ಆಸಕ್ತಿ..ಶಾಲೆಯ ಮಕ್ಕಳ ಬರಹಗಳನ್ನು ಸಂಪಾದಿಸಿ “ಚಿಲುಮೆ” ಎನ್ನುವ ಪುಸ್ತಕವನ್ನು ಪ್ರಕಟಿದ್ದೇನೆ.ಕವಿತೆಗಳು ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ..

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಇರಬಹುದೆ? ಪ್ರಮೀಳಾ ಎಸ್.ಪಿ. ನಿತ್ಯ ನಿರಂತರ ನೆರಳು ನೀಡುವ ಎಲೆ ಯುದುರದ ಮರವಾದರೂ ಇರಲಹುದೇ! ಮುಂಗಾರೂ ಮೂರೇ ದಿನ ಮಲ್ಲಿಗೆಯ ಪರಿಮಳವೂ ಸಪ್ತದಿನಗಳೇ! ಚಂದಿರನು ಬೆಳದಿಂಗಳ ತಿಂಗಳಿಡೀ ಹೊಳಪಾಗಿ ಹರವಲಹುದೇ! ತುಂಬೆಯ ರಸ ಸವಿದ ದುಂಬಿಯೊಂದು ಮತ್ತದರತ್ತ ಇರಲುಬಹುದೇ! ಅದರದರ ಕಾಲಕ್ಕೆ ಭಾವ ಬಕುತಿಯ ತಾಳಕ್ಕೆ ಸಿಕ್ಕಷ್ಟು ದಕ್ಕಿಸುವುದು ನೇಮವಲ್ಲವೇ! ಇಷ್ಟಾದರೂ ಹುಡುಕುತ್ತಲೇ ಇರುವೆ ನಿತ್ಯವೂ ಹಸಿರಾದ ಪ್ರೀತಿಯನು ನಾನು ಮೂರ್ಖಳಾದೆನೆ ಗೆಳೆಯ!

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಖಾಲಿ ದೀಪ ಮತ್ತು ಕತ್ತಲು ಬಿದಲೋಟಿ ರಂಗನಾಥ್ ಕಟ್ಟಿದ ಮಣ್ಣಗೋಡೆಯು ತಪ ತಪನೆ ಬೀಳುತ್ತಿದೆ ನಿದ್ದೆಯಿಲ್ಲದ ರಾತ್ರಿಗಳ ಕನಸು ಆ ಮನೆ  ಪ್ರತಿ ಇಟ್ಟಿಗೆಯ ಮೇಲೂ  ನಿನ್ನ ಶ್ರಮದ ಬೆವರ ವಾಸನೆ ನೀನು ಮಲಗೆದ್ದ ಜಾಗದ ನಿಟ್ಟುಸಿರು ಕಣ್ಣೀರಾಕುತ್ತಿದೆ ನೀನೆ ನೆಟ್ಟ ನಂಬಿಕೆಯ ಗಿಡದ ಬುಡಕ್ಕೆ ಪಾದರಸ ಸುರಿದ ಅವಳು  ಇವತ್ತು ಬೀದಿ ನಾಯಿಯ ಬಾಲ ಅವಮಾನದ ಗಾಯ ನಂಜಾಗಿ ನಸಿರಾಡಿ ಬದುಕುವ ಭರವಸೆಯು ಕುಂದಿ ನೆಲದ ಮೇಲಿಟ್ಟ ಅಷ್ಟೂ ಹೆಜ್ಜೆಗಳು ಕೆಂಡಗಳಾಗಿ ಧಗ ಧಗಿಸಿ ಉರಿದು ಜೀವವನ್ನೇ ಸುಟ್ಟ ನರಳುವಿಕೆಯ ಧ್ವನಿಯಲ್ಲಿ ಮಕ್ಕಳ ಮೇಲಿನ ಪ್ರೀತಿ ಹಸಿ ಹಸಿಯಾಗಿತ್ತು ಮಣ್ಣು ತಿನ್ನುತ್ತಿರುವ ನಿನ್ನದೆ ದೇಹದ ಮೂಳೆಯನ್ನು ಒರಸಿ ನೋಡಿದೆ ಎಷ್ಟೊಂದು ಕನಸುಗಳು ಜೀವಂತವಾಗಿದ್ದವು ರೆಕ್ಕೆ ಪುಕ್ಕ ಎತ್ತಿಕೊಂಡು ಮುಚ್ಚಿದ ರೆಪ್ಪೆಗಳಡಿಯಲ್ಲಿ ಸವೆಯದ ಹಾದಿ ತೆರೆದೇ ಇತ್ತು  ಮಾತಾಡಿಸಿದೆ ತಮ್ಮನೆಂಬ ಹೆಸರು ಎದೆಯೊಳಗೆ ಬಿರಿದು ಮೌನದ ಗುಂಡಿಯಲಿ ಮಾತುಗಳು ಸತ್ತಿರುತ್ತವೆಂಬ ಸಣ್ಣ ಅರಿವೂ ಇಲ್ಲದೆ. ಅಲ್ಲಿಂದ ಎದ್ದು ಮಾರು ದೂರ ನಡೆದೆ  ಬಂದ ದಾರಿಗೆ ಸುಂಕವಿಲ್ಲದೆ. ತಡೆಯದ ಮನಸು ಮತ್ತೆ ತಿರುಗಿ ನೋಡಿತು ಮಣ್ಣ ಹೊದಿಕೆಯ ‘ಮಾಡಿ‘ನೊಳಗೆ ಎಷ್ಟೊಂದು ಶಾಂತತೆಯಲಿ ಮಲಗಿದೆ ಹಾರಿ ಹೋದ ಪ್ರಾಣ ಪಕ್ಷಿಯ ದೇಹ ತಲೆದೆಸೆಯ ಗೂಡ ದೀಪದೊಳಗಿನ ಬತ್ತಿ ಎಣ್ಣೆ ಇರುವವರೆಗೆ ಮಾತ್ರ ಉರಿಯುತ್ತದೆ. ನಂತರ ಉಳಿಯುವುದು ಕೇವಲ ಖಾಲಿ ದೀಪ ಮತ್ತು ಕತ್ತಲು. ***********************************

ಕಾವ್ಯಯಾನ Read Post »

ಕಾವ್ಯಯಾನ

ಕಾವ್ಯಯಾನ

ಗುಳಿಗೆ ಮಾರುವ ಹುಡುಗ ಅರುಣ್ ಕೊಪ್ಪ ಇವನು ಬ್ಯಾಗ್ ಹೊತ್ತು ಬೆವರು ಬಿತ್ತಿ ಜಿಪ್ಪು ಸರಿಸುತ್ತಾ ಸ್ಯಾಂಪಲ್ ಹಂಚುವ ಡಾಕ್ಟರ್ ಛೆಂಬರ್ ಲಿ ದಿನವೂ ಜ್ಞಾನಾರ್ಜನೆಯಂತೆ! ಸರತಿ ಸಾಲಿನಲ್ಲಿ ಮಾತು ಬರದವ ಹೊಡೆಯಲು ಹೋಗುತ್ತಲೇ… ಕಾಲು ಕಿತ್ತು ಬೇರೆ ವೈದ್ಯರ ಭೇಟಿಗೆ ಗೀಳಿಡುತ್ತಾನೆ ಇವ ಗುಳಿಗೆ ಮಾರುವ ಹುಡುಗನಂತೆ ಒಳ ಸೇರಿಸಿದ ಅಂಗಿ, ಕಪ್ಪು ಸೊಂಟದ ಪಟ್ಟಿ ಶೂ ಕೂಡ ಹೊಳೆವ ಹಾಗೇ ರೋಗಿಗಳು ಮತ್ತಷ್ಟು ಹಿಡಿ ಶಾಪ ಹಾಕುವ ಉತ್ತೇಜನ ನೀಡುವ ಹಾಗೇ ಅವನ ಡ್ರೆಸ್ ಕೋಡ್ ! ತನಗೂ ಇತರರಿಗೂ ಬದುಕು ಸಾಕುವ ಪಾಲಕ ಸೇವಕ, ಎಂತೆಲ್ಲ ಹಲುಬುತ್ತಾರೆ… ಅಲೆದಾಟದ ಬದುಕಲಿ ಕಾರದ ಕಲ್ಲು ಗೊತ್ತಾಗದೆ ಸವೆದ ಹಾಗೇ, ಇವ ಗುಳಿಗೆ ಮಾರುವ ಹುಡುಗನಂತೆ ಸೈಕಲ್ ತುಳಿಯುತ್ತಾನೆ ಹೆಲ್ಮೆಟ್ ಇಲ್ಲದೆ ಬೈಕ್ ಗುರ್ ಗುಡಿಸಿ ನಡೆಯುತ್ತಾ, ತಟ ತಟನೆ ಮೈ ಧಗಿಸಿ ಶ್ರಮಿಕರ ವರ್ಗದಲಿ ಇವನೂ ಒಬ್ಬ ವೈದ್ಯರ ಸಮಯಕ್ಕೆ ಇವನು ಸರಿಯಾಗಿ ಒಡೆದು ಮೂಡುತ್ತಾನೆ ತಪಸ್ಸಲಿ ದೇವರು ಕಂಡ ಹಾಗೇ ಹಪಾಹಪಿಯ ಭಾವ ಮಂದಹಾಸ ದಿನ ಕಳೆಗಟ್ಟಿದೆ ಅವಗೆ ವ್ಯಾಪಾರ ಜೋರಂತೆ ಇವ ಗುಳಿಗೆ ಮಾರುವ ಹುಡುಗನಂತೆ ಮನಸ್ಸು ಕಂಡಾಗ ಕರೆಯುವ ಕೆಲ ವಿಶೇಷ ತಜ್ಞರು ಬೆಟ್ಟಿಯಾದಾಗಲೆಲ್ಲ ತಿರುಪತಿ ವೆಂಕಟ್ರಮಣ ದರ್ಶನವಾದಂತೆ ನನಗೆ ಎನ್ನುತ್ತಾನೆ. ಒಂದಷ್ಟು ಬಿಡುವಿಲ್ಲದ ಬಿಡುವಿನಲ್ಲಿ ಮಡದಿ ಮಕ್ಕಳು ಬಂದುಗಳಿಗೆ ಇಳಿ ಪ್ರಾಯದಲ್ಲೂ ನಗುವ ಊರಲ್ಲಿ ಸಿಗುವ ತನ್ನ ಹೆತ್ತಮ್ಮನಿಗಾಗಿ ತಂದೆಗಾಗಿ ಇವನು ಗುಳಿಗೆ ಮಾರುವ ಹುಡುಗನಂತೆ ತಿಂಗಳು ಕೊನೆಯಲ್ಲಿ ಹಾಹಾಕಾರದ ಗುಬ್ಬಿಯಂತೆ ಕಡ್ಡಿ ಸೇರಿಸಿ ಗೂಡ ಹೆಣೆದಂತೆ ಸುರಿಗೂ ಇಲ್ಲದ ಆಯುಷ್ಯ ಇನ್ನು ಮನೆ ಎಲ್ಲಿ? ನೀರ ಮೇಲಿನ ಗುಳ್ಳೆಯ ಹಾಗೇ ಸ್ವಾವಲಂಭಿಯ ಒಂದು ರೂಪವಂತೆ ಇವನು ಗುಳಿಗೆ ಮಾರುವ ಹುಡುಗನಂತೆ ಉದ್ಯೋಗ ಅರಸಿ ಬಂದನಂತೆ ಕಾಂಕ್ರೀಟ್ ಕಾಡಿಗೆ, ನಿರುದ್ಯೋಗ ಮೆಟ್ಟಲು ಬದುಕ ಕಟ್ಟಲು ಮೆಟ್ಟಿಲು ಏರುತ್ತಾ ಒಂದೊಂದೇ ಆಫೀಸರ್ ಆಗುತ್ತಾನೆ, ಚಾಲಕನಾಗುತ್ತಾನೆ ಶಿಕ್ಷಕನಾಗುತ್ತಾನೆ, ವಿದ್ಯಾರ್ಥಿಯಾಗುತ್ತಾನೆ ಕೊನೆಗೆ ಹಮಾಲಿಯೂ, ಚೌಕಟ್ಟಿನ ಭಯದಲ್ಲಿ ಬದುಕ ಗೆಲ್ಲುತ್ತಾ ಇವ ಗುಳಿಗೆ ಮಾರುವ ಹುಡುಗನಂತೆ ********************************** (ಔಷಧಿ ಕಂಪನಿ ಪ್ರತಿನಿಧಿಗಳಿಗೆ (ಮೆಡಿಕಲ್ ರೇಪ್ರೆಸೆಂಟಿಟಿವ್ ) ಕವಿತೆ ಅರ್ಪಣೆ )

ಕಾವ್ಯಯಾನ Read Post »

You cannot copy content of this page

Scroll to Top