Category: ಕಾವ್ಯಯಾನ

ಕಾವ್ಯಯಾನ

ಪಯಣ

ಕವಿತೆ ಪಾರ್ವತಿ ಸಪ್ನ ಹೊಗಳಿದರೆ ಹಿಗ್ಗದೆತೆಗಳಿದರೆ ಕುಗ್ಗದೆಅಪ್ಪಳಿಸುವ ಮಾತಿನಅಲೆಗಳಿಗೆ ಜಗ್ಗದೆನಿನ್ನ ಹಾದಿಯಲ್ಲೇನಿಲ್ಲದೆ..ನೀ ಸಾಗಿಬಿಡು..!! ಕಾಲಿಗೊಂದು ಮುಳ್ಳುಕೈಯಿಗೊಂದು ಕಲ್ಲುನಾಲಿಗೆಯಲ್ಲಿ ಸುಳ್ಳುಅಚ್ಚರಿಯೇನಿಲ್ಲ..ಲೋಕವೇ ಡೊಂಕುಮಾತೆಲ್ಲಾ ಕೊಂಕುಇರಲಿಬಿಡು.. ನಿನ್ನಷ್ಟಕ್ಕೇನೀ….ಸಾಗಿಬಿಡು…!! ತಪ್ಪು ಹುಡುಕುವಬೆಪ್ಪನಿಗೆ..ತುಪ್ಪ ಸವರಿದರೂಮೊಸರಲ್ಲೂ ಕಲ್ಲಂತೆ,,ಕಾಣದ ಗಾಳಿಯದುಬೊಗಸೆಯಲ್ಲಿ ಹಿಡಿದಂತೆ,,ಸುಮ್ಮನೆ ನಡೆದುಬಿಡುನಿನ್ನ ಹಾದಿಯಲ್ಲಿ ಸಾಗಿಬಿಡು…!! ಎಲ್ಲವೂ ಜಂಜಾಟಪ್ರತಿಕ್ಷಣ ಒಂದು ಪಾಠಸಮಯ ಗುರುವುಕಲಿಸುವುದು ನೋಡುಅವನ ಆಟಕ್ಕೆ ನೀ ಕುಣಿದುಬಿಡುತಿರುಗಿ ಮತ್ತೆ ನೋಡದಿರುವ್ಯಥೆಯನ್ನೆಲ್ಲಾ ತೂರಿಬಿಡುನಿನ್ನ ಗುರಿಯ ಸೇರಿಬಿಡು…!! ********************

ಇಲ್ಲದೆಯೂ ಎಲ್ಲವನ್ನೂ ಬಯಸುತ್ತೇನೆ

ಕವಿತೆ ಸ್ಮಿತಾ ಭಟ್ ಅಬ್ಬರಿಸಿ ಬರುವ ನಿನ್ನ ಮಾತಿನಹೊಡೆತಕ್ಕೆ ಸಿಲುಕಿದ ಒಂಟಿ ದೋಣಿಮತ್ತೊಂದು ಪ್ರಶಾಂತ ನಿಲುವಿಗಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕೊಚ್ಚಿ ಕಾಣದಾಗಲೆಂದು ಬಯಸುತ್ತೇನೆ ಬುಡಮೇಲಾದ ನಂಬಿಕೆಯಮತ್ತೆ ಊರಿ ಅದಕ್ಕೇ ಚಿಗುರೊಡೆವಸಮಯಕ್ಕಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕುರುಹೂ ಇಲ್ಲದಂತೆ ನಶಿಸಿ ಹೋಗಲು ಬಯಸುತ್ತೇನೆ. ಹೊಸದೇನೋ ಘಟಿಸುತ್ತದೆ ಎಂಬ ಬಯಕೆಯಲಿಹಳೆಯ ಪೋಷಾಕುಗಳನೇ ಮತ್ತೆ ಮತ್ತೆ ಹೊದ್ದುಅಸತ್ಯದ ನಗುವಿನಲಿ ಯಾಕೋ ಕಾಯಬೇಕೆನಿಸುತ್ತಿಲ್ಲಸಕಲವನೂ ತೊರೆದು ನಿರಾಳವಾಗಲು ಬಯಸುತ್ತೇನೆ. ಯಾವ ಕಿಂಡಿಯೂ ಉಳಿದಿಲ್ಲಕಿರಣದ ಸ್ಪರ್ಶವ ಅನುಭವಿಸಲುಹೊರದಾರಿಗೆ ಯಾರೋ ಬಾಗಿಲು ತರೆಯುವುದಕ್ಕಾಗಿ ಯಾಕೋ ಕಾಯಬೇಕೆನಿಸುತ್ತಿಲ್ಲಗೂಡಿನ ಮಾಡು ಸರಿಸಿ ದಿಗಂತದಲಿಹಂಗು ತೊರೆದು ಹಾರಲು ಬಯಸುತ್ತೇನೆ […]

ಊರುಗೋಲು ಕಾಫಿ ಮತ್ತು ಅಪ್ಪ

ಕವಿತೆ ವಿಭಾ ಪುರೋಹಿತ್ ಚತುರ್ಮುಖ ಬ್ರಹ್ಮಅವನೊಳಗೊಂದು ಕಾಣ್ದಅಗೋಚರ ಮೈವೆತ್ತ ಹಾಗೆಅವನಿಯೊಳಗಿನ ಜ್ಞಾನಕಣ್ತೆರೆದಂತೆಸುಡುವ ನೋವಿದ್ದರೂ ಎದೆಯೊಳಗೆಉತ್ಸಾಹ ಉತ್ತುವದು ನಗೆಯ ಬಿತ್ತುವುದುಮಹಾತ್ಮ ನ ಲೀಲೆನಾರಾಯಣನಿಲ್ಲದೇ ಅವನಿಯುಂಟೇ?ಅದೃಶ್ಯದಲ್ಲಿ ಸದೃಶನಾಗಿಸೋಫಾಮೇಲೆ ಕುಳಿತಿದ್ದಾನೆರೇಡಿಯೋ ಕೇಳುತ್ತಿದ್ದಾನೆಎರಡುತಾಸಿಗೊಮ್ಮೆ ಕಪ್ಪು ಕಾಫಿಸೋಮರಸ ಸದಾ ಥರ್ಮಾಸಿನೊಳಗೆಕಾಲುಮೇಲೆಕಾಲಿಟ್ಟುಅನುಭವದ ರೇಖೆಗಳನ್ನೆಲ್ಲ ಒತ್ತಿಹಿಡಿದ ಹಸ್ತ ಊರುಗೋಲಿನ ಮೇಲೆಊರಿನ ತಗಾದೆಗೆಲ್ಲ ಕಿವಿಗೊಟ್ಟುಎದೆಗವುಚಿ ಎಲ್ಲರಿಗೂಬೀರಬಲ್ಲನ ಪರಿಹಾರ ಮಂತ್ರರೆಡಿಯಾಗುತಿತ್ತು.ಊರುಗೋಲಿನ ಸುತ್ತ ಫಿರ್ಯಾದಿಗಳುವಿನಂತಿಗಳು ಅಹವಾಲುಗಳಿಗೆಹೊಸದಾಗಿ ತಂದ ಕಂಪ್ಯೂಟರ್ಕೀಲಿಮಣೆ ಕಿಲಕಿಲನೆ ಬಡಿದುಬರೆದುಕೊಂಡೇ ಮತ್ತೆ ಕಾಫಿಗೆಕೈಚಾಚುತ್ತಿತ್ತುಯಾರೇ ಬಂದರೂ ಯಾವಾಗ ಬಂದರೂಬಿಸಿಕಾಫಿ ಜೊತೆ ಆತ್ಮೀಯತೆ ಬಿಸ್ಕತ್ತು ಗಳುಮನದಾಳದಿಂದ ಸಮಸ್ಯೆಗಳನುಹೊತ್ತು ತಂದವರ ಪಾತಾಳಗರಡಿಯಾಗುತ್ತಿತ್ತುನೆನಪಿನಲ್ಲಿ ಮುಳುಗಿದರೆಏನೋ ಗೊತ್ತಿರದ […]

ಪ್ರೀತಿಯ ಸಾಲುಗಳು

ಕವಿತೆ ಬಾಲಕೃಷ್ಣ ದೇವನಮನೆ ಮುಗುಳು ನಗೆಯಲ್ಲಿಹದಗೊಳಿಸಿದಎದೆಯ ಹೊಲದಲ್ಲಿಒಂದೊಂದೇವಾರೆ ನೋಟದಲಿನಾಟಿ ಮಾಡಿದ ಪೈರುತೊನೆದಾಡಿದ ಮಧುರ ಕ್ಷಣ..! ಪ್ರೀತಿಯನ್ನುಮುಲಾಜಿಲ್ಲದ ಹಾಗೆಅವಳು ಒದ್ದು-ಹೋದ ಎದೆಯ ದಾರಿಯಲ್ಲಿಮೂಡಿದ ನೋವಿನ ಹೆಜ್ಜೆಗಳುಯಾವ ಮುಲಾಮಿಗೂಅಳಿಸಲಾಗದೇ ಸೋತರೂಮತ್ತೆ ಮತ್ತೆ ನೆನಪ ಲೇಪಿಸಿಕೊಂಡುಸುಖಿಸುವ ವ್ಯಸನಿ ನಾನು. ಮನಸ್ಸುಗಳು ಉರಿಯುವಈ ರಾತ್ರಿಯಲ್ಲಿಬೀಸುವ ಗಾಳಿಯೂಬೆಂಕಿ ನಾಲಿಗೆ ಸವರುವಾಗಇಷ್ಟಿಷ್ಟೇ… ಇಷ್ಟಿಷ್ಟೇ…ಜಾರಿದ ಗಳಿಗೆಸುಟ್ಟ ನಿದಿರೆಯನ್ನೆಲ್ಲಾಹಗಲಿಗೆ ಗುಡ್ಡೆ ಹಾಕಿದಎಚ್ಚರದ ಬೂದಿಯಲ್ಲಿರೆಪ್ಪೆ ಮುಚ್ಚದ ಇರುಳುಉದುರಿಸಿದ ಕಂಬನಿಒದ್ದೆ ಮಾಡಿದಎದೆಯ ರಂಗಸ್ಥಳದಲ್ಲಿನಿನ್ನ ನೆನಪುಗಳ ಹೆಜ್ಜೆ ಹೂತುಚುಚ್ಚಿ ಚುಚ್ಚಿ ಕೊಲ್ಲುವ ಸಂತಾಪ…!! ನೀನುಹುಕ್ಕುಂ ಕೊಟ್ಟ ಮೇಲೇನಾನುನಿನ್ನೊಲವ ಗದ್ದೆಯಲಿ ಹೆಜ್ಜೆ ಊರಿದ್ದುಮತ್ಯಾಕೆ ಸುಳ್ಳು […]

ನನಗೂ ನಿನ್ನಂತಾಗ ಬೇಕಿತ್ತು!

ಕವಿತೆ ಅನಿತಾ ಪಿ. ತಾಕೊಡೆ ನನಗೂ ನಿನ್ನಂತಾಗಬೇಕಿತ್ತುಅದೆಷ್ಟೋ ಸಲ ನಾನೂ ನಿನ್ನಂತಾಗಲು…ಎದೆಯಾಳದ ಕನಸಿನ ಕಣ್ಣಿಗೆಕಪ್ಪು ಪಟ್ಟಿ ಬಿಗಿಯುತಿದ್ದೆತೀವ್ರವಾದ ಭಾವಗಳು ಎಲ್ಲೆ ಮೀರದಂತೆಇತಿಮಿತಿಯ ರೇಖೆಯನೆಳೆಯುತಿದ್ದೆ ಕೆಲವೊಮ್ಮೆ ಮಾತುಗಳು ಹಳಿ ತಪ್ಪಿದಾಗಕರಾಳ ಮೌನ ಎದೆಯನ್ನು ಸುಡುತಿತ್ತುಅಭದ್ರತೆಯ ನೆಲೆಯೊಳಗೆ ಓಲಾಡಿಸುತಿತ್ತು ಅಂದುಕೊಂಡಂತೆ ಇರಲಾಗದೆಸಣ್ಣ ತಪ್ಪು ವಿರಾಟ ರೂಪ ತಳೆದುಮೂರ್ತರೂಪಕ್ಕಿಳಿಸುವ ಛಲದಿನಕಳೆದಂತೆ ಇಳಿಯುತ್ತಲೇ ಇತ್ತು ನಿನ್ನ ಸಖ್ಯವಾದ ಮೇಲೆನಾನೆನುವ ಅಹಂಭಾವ ಬಿಗುಮಾನಎಲ್ಲವೂ ದೂರ ಸರಿದುನಿನ್ನ ಅನುನಯದೊಳು ಹೂವಾಗಿದ್ದು ಸುಳ್ಳಲ್ಲ ಬೇಕು ಬೇಡಗಳ ನಡುವಿನ ಒಳಪಂಥದಲಿಅದೆಷ್ಟೋ ಬಾರಿ ನಾನೂ ನೀನೂಸೋತು ಗೆಲ್ಲುತಿದ್ದೆವು ಕೆಲವೊಮ್ಮೆ ಮಾತು […]

ಕಲಿಗಾಲದ ಫಲ

ಕವಿತೆ ಅರುಣ್ ಕೊಪ್ಪ ಅಂದು ಖುಷಿಯನ್ನೆಲ್ಲ ಉಸುರಿಹಿಡಿದು ಮುಟ್ಟಿದ್ದಕ್ಕೂತಂತ್ರಜ್ಞಾನದ ಗುಲಾಬು ಜಾಮೂನಿನ ಚಪಲದಲ್ಲಿದ್ದೆವು.ಸ್ವಾರ್ಥದ ಕುದುರೆಯನ್ನೇ ಏರಿ ಸವಾರಿಕಾಂಚಾಣದ ಕರವಸ್ತ್ರವನ್ನೇ ಬಳಸುತ್ತಿದ್ದೆವು. ಪಾದ ಊರದ ನೆಲ ಮೌನದಲ್ಲಿಕಾಲು ದಾರಿಗಳನ್ನು ನುಂಗಿ ಹಾಕಿತ್ತುಬೀದಿ ದೀಪದಲ್ಲೂ ಕಣ್ಣು ಕಾಣದಮೋಜು ಮಸ್ತಿಯಲಿ ರಾತ್ರಿಯನ್ನುಹಗಲಿನಂತೆ ಅನುಭವಿಸುತ್ತಿದ್ದೆವು.ಸಮಯವನ್ನು ಹರಾಜು ಮಾಡಿಅಹಂ ಅಂಗಡಿಯಲ್ಲಿ ಮಾರಾಟಮಾಡುತ್ತಿದೆವು. ಹುಟ್ಟಿದ ಕಿಮ್ಮತ್ತಿಗೆ ಬೀದಿ ವಾಪಾರಿಗಳಮಂತ ಉರಿಸುತ್ತಿದ್ದೆವು.ನಾವೇ ಅನುಭೋಗಿಗಳುಎಂಬ ಸರ್ವ ಜಂಬದಲಿವೃದ್ಧರನ್ನು ಹೇಸಿಗೆಯಾಗಿ ನೋಡುತ್ತಿದ್ದೆವು. ವ್ಯಾಪಾರ ಜಗತ್ತಿನಲ್ಲಿಸಂಬಂಧಕ್ಕೂ ಮಾಪು ಹಿಡಿದುತಾವೇ ಸರಿ ಎಂದೆನುತಕಾಣುವ ಸೊಗದೊಳಗೆಭೂತಗನ್ನಡಿಯ ಹಿಡಿದುಮೊಸರಲ್ಲಿ ಕಲ್ಲು ಹುಡುಕುತ್ತಿದ್ದೆವು ಆದರೆ ಇಂದು ಎಲ್ಲಕಲಿಗಾಲದ […]

ಜ್ಞಾನೋದಯದ ನಿದ್ದೆ

ಕವಿತೆ ವಸುಂಧರಾ ಕದಲೂರು ನಡುರಾತ್ರಿಗಳಲಿ ಒಮ್ಮೊಮ್ಮೆ ನಿದ್ದೆಸುಳಿಯದೇ ನರಳಿ,ನರಳಾಡಿಹೊರಳಾಡುವಾಗ ಮನಕೆ ಜಗದಚಿಂತೆಯೂ ಹಿಡಿದು ಚಿಂತನೆಗೆಶುರುವಾಗುತ್ತದೆ. ಇಂತಿಪ್ಪ ಅಶಾಂತಿಗೆ ಶಾಂತಿಯಹುಡುಕುವ ಮನಸ್ಸಾಗುತ್ತದೆ. ಜ್ಞಾನೋದಯಕ್ಕೆ ಮನೆಬಿಟ್ಟುಹೋದವ ನೆನಪಾಗಿ, ನಾನೂ ಎದ್ದುಹೊರಡಿಬಿಡಬೇಕೆಂಬ ತುಡಿತ ಹೆಚ್ಚಾಗಿಪರಿತ್ಯಾಗದ ವೇದಿಕೆ ಹತ್ತಲು ಮನಇನ್ನಿಲ್ಲದಂತೆ ಸಿದ್ಧವಾಗುತ್ತದೆ. ಏಳಬೇಕೆಂದವಳ ನಡು ಬಳಸಿ,ಕೊರಳ ಸುತ್ತಿ ಅಪ್ಪಿರುವ ‘ನಾಲ್ಕುಕೈಗಳ ಬಂಧನ ಬಿಡಿಸಿಕೊಳ್ಳುವುದುಹೇಗೆ?’ ಪ್ರಶ್ನೆ ಧುತ್ತೆಂದು ಕಾಡುತ್ತದೆ. ಲೋಕೋದ್ಧಾರಕ್ಕೆ ಹೊರಡಲಾಗದೆಭವಬಂಧನಕೆ ಸಿಲುಕಿರುವ ನಾನು,ಬದ್ಧತೆಯೇ ಇಲ್ಲದ ಬುದ್ಧಿಗೇಡಿಯೇ?!ಭಯವೂ ಸುಳಿದಾಡುತ್ತದೆ. ‘ಛೇ, ಬಿಡು ಇದನ್ನೆಲ್ಲಾ ಎದ್ದು ನಡೆ’……ಕಳ್ಳ ಮನಸ್ಸಿನ ಚಿತಾವಣೆ. ನಾನೇನೋ ಹೋಗಿಬಿಡುವೆ. ನಾಳೆಇವರೆಲ್ಲಾ ಹುಡುಕಾಡಿದರೆ, […]

ತುಟಿಗಳ ಮೇಲೆ ನಿನ್ನಿಯದೇ ಹೆಸರು

ಕವಿತೆ ನಾಗರಾಜ ಹರಪನಹಳ್ಳಿ ತಲೆಗೂದಲ ಮುದ್ದಿಸಬೇಕುಅವುಗಳ ಒಂದೊಂದೇ ಎಣೆಸುತಪ್ರೀತಿಸಬೇಕು ನಿನಗೆ ಊಹಿಸಲು ಅಸಾಧ್ಯಉಸಿರಲ್ಲಿ ಹೆಸರು ಬೆರೆಸುವಕಲೆ ನನಗೆ ಮಾತ್ರ ಗೊತ್ತು ಪ್ರೀತಿ ಅಂದರೆ ಹುಡುಗಾಟವಲ್ಲಅದು ಕಣ್ಬೆಳಕುಹಾಗಾಗಿಪ್ರತಿನೋಟದಲ್ಲಿ ನನ್ನ ಬಿಂಬ ದೂರ ತಳ್ಳಲಾಗದು ಒಲವುಅದು ಹಠಮಾರಿನಿನ್ನ ತುಟಿಗಳ ಮೇಲೆನಿನ್ನಿನಿಯದೇ ಹೆಸರು ಯಾರು ಏನೇ ಹೇಳಲಿಎಷ್ಟೇ ಹತ್ತಿರದವರಿರಲಿಪ್ರೇಮದ ಮುಂದೆಅವು ನಿಲ್ಲಲಾರವು ಹೃದಯದ ಬಡಿತವೇ ನಿಲ್ಲುವಕ್ಷಣ ಬಂದರೂಕೊನೆಯಲ್ಲಿ ನೆನಪಾಗುವುದುಇನಿಯ ದನಿಯೇ ಒಲವು ಮಳೆಅದನ್ನೆಂದೂ ಭೂಮಿ ನಿರಾಕರಿಸದುನದಿಯ ಎಷ್ಟೇ ಹಿಡಿದಿಟ್ಟರು ಅದರ ಚಲನೆ ಕಡಲಕಡೆಗೆ ನೀ ನಿನ್ನ ಮನಸ ಜೊತೆ ಮಾತಾಡುವುದೇ ಇನಿಯಎದುರಿಟ್ಟುಅದೇ […]

ಪಾಕ

ಕವಿತೆ ಡಾ . ಅಜಿತ್ ಹರೀಶಿ. ಎದೆಯೊಳಗೆ ಸಿಕ್ಕಿಬಿದ್ದಪದಗಳು ಸೀಳಿಹೊರಬಂದು ಘೀಳಿಡುತ್ತವೆನಮ್ಮನು ಕಟ್ಟಿಹಾಕಲುನಿನಗಾವ ಹಕ್ಕಿದೆಯೆಂದು…? ಈ ಮುರಿಯದ ಮೌನಆ ಅಕಾಲ ಪ್ರಸವಈ ಮುದವಿಲ್ಲದ ಮನಆ ಕಳೆಗೆಟ್ಟ ಮಳೆಹದ ಬಿದ್ದು ಮೊಳೆಯಲಿ ಅರ್ಧ ಗೀಚಿದ ಕವಿತೆಅಂತ್ಯ ಕಾಣದ ಕತೆಮಧ್ಯೆ ನಿಂತ ಬದುಕಿನಂತೆಮುಂದೇನೆಂಬ ಚಿಂತೆ ಅವಸರಕ್ಕೆ ಬಿದ್ದುಮುಗಿಸುವ ದಾರಿಅದಿಲ್ಲವೋ ಸದ್ದಿಲ್ಲದೆಮಾಡಬೇಕು ತಯಾರಿ…!********************

ಎದೆಯ ಬೆಂಕಿ

ಕವಿತೆ ವೀಣಾ ನಿರಂಜನ ನನ್ನ ಎದೆಯೊಳಗೆ ಬೆಂಕಿಯಿದೆಈ ಬೆಂಕಿಯೇನನ್ನ ಸುಡದಂತೆ ಎಚ್ಚರದಿಂದದಾಟಬೇಕಿದೆ ಹೊರಗೆನಿರೂಪಾಯಳಾದ ನನಗೆನಿರುಪದ್ರವಿ ಕವಿತೆಯೇಉತ್ತರ ಹೇಳಬೇಕುಅಕ್ಷರಗಳು ಬೇಯದಂತೆಶಬ್ದಗಳು ಬೂದಿಯಾಗದಂತೆಈ ಬೆಂಕಿಯಿಂದಲೇಬೆಳಕ ಹೊತ್ತಿಸ ಬೇಕಿದೆ ಕತ್ತಲು ಮಗ್ಗುಲು ಬದಲಾಯಿಸಿನಾಳೆ –ಬೆಳಗಾಗುವುದು ಮತ್ತೆಸುಡುವ ಸೂರ್ಯ ಹೊತ್ತು ತರುತ್ತಾನೆಬೆಳಕಿನ ಪುಂಜ ಎಂದಿನಂತೆ ಎದೆಯ ಬೆಂಕಿಗೆ ನೆರಳಿಲ್ಲ ಎಂದಾದರೆಕವಿತೆ –ನೀನೇಕೆ ಮರವಾಗಿ ನಿಲ್ಲ ಬಾರದುಸುಡುವಾಗ್ನಿ ತಣ್ಣಗಾದೀತುನಿನ್ನ ತಂಗಾಳಿಯ ಸ್ಪರ್ಶದಿಂದಗಾಳಿ, ಬೆಳಕು ಮತ್ತು ಕವಿತೆಈ ಬೆಂಕಿಯೆದುರುಎದೆ ಸೆಟೆಸಿ ನಿಲ್ಲುವುದಾದರೆಪುಟಗೊಂಡ ಆತ್ಮ ಪರಿಶುದ್ಧವಾಗುತ್ತದೆಮತ್ತುಸತ್ಯವಾಗಿಯೂ ಅಲ್ಲಿ ಹೊಸತೊಂದುಕವಿತೆ ಬದುಕನ್ನು ಚುಂಬಿಸುತ್ತದೆಬದುಕಿಗಾಗಿ ಹಂಬಲಿಸುತ್ತದೆ.                    **********************

Back To Top