Category: ಕಾವ್ಯಯಾನ

ಕಾವ್ಯಯಾನ

ಜೋಡಿ ಹೃದಯಗಳು

ಕವಿತೆ ಜೋಡಿ ಹೃದಯಗಳು ತೇಜಾವತಿ ಹೆಚ್. ಡಿ. ಆದಿಯಿಂದ ಅಂತ್ಯದವರೆಗೂಎಂದೆಂದಿಗೂ ಸಂಧಿಸದಸಮನಾನಂತರ ರೇಖೆಗಳು ಅವು ಪರಸ್ಪರ ಜೋಡಿಜೀವಗಳಂತೆಜೀವಿಸುವವು ಅನಂತದವರೆಗೆ ಒಂದನ್ನಗಲಿ ಮತ್ತೊಂದುಅರೆಘಳಿಗೆಯೂ ಬಿಟ್ಟಿರದ ಬಂಧ ಹೆಗಲಿಗೆ ಹೆಗಲು ಕೊಟ್ಟು ಬದುಕ ರಥ ಎಳೆಯುವ ಜೋಡೆತ್ತುಗಳು ಅವು ಸಮಭಾರ ಹೊತ್ತು ಸಹಜೀವನ ನಡೆಸುವಸರಳ ರೇಖೆಗಳು ಸಾಗುವ ಪಥದಲ್ಲಿ ನೂರು ಅಪಘಾತ ಸಂಭವಿಸಿದರೂನಂಬಿಕೆಯ ಹೊರೆತುಮತ್ಯಾವ ಬೇಡಿಕೆಗಳನ್ನೂನಿರೀಕ್ಷಿಸದ ನಿಸ್ವಾರ್ಥ ಜೀವಗಳು ಬೇಕಂತಲೇ ತೂರಿಬರುವ ನೆರೆಗಳೆದುರುಕೇವಲ ಆತ್ಮಶಕ್ತಿಯಿಂದಲೇ ಎದುರು ಈಜುವ ನಕ್ಷತ್ರಮೀನುಗಳು ಗಟಾರದೊಳಗಿನ ರಾಡಿಯೆಲ್ಲಾ ಮೇಲೇರಿಶನಿ ಬೇತಾಳನಂತೆ ಹೆಗಲಿಗೇರಿದರುಮೈಡೊದವಿ ಚಿಮ್ಮವ ಸಿಹಿಬುಗ್ಗೆಗಳು..ಉಸಿರುಗಟ್ಟುವ ಕೊನೆಯ […]

ಗಜಲ್

ಗಜಲ್ ಅರುಣಾ ನರೇಂದ್ರ ಮತ್ತೇರಿಸುವ ಮಧು ಇಂದು ನೆತ್ತರಿನ ಬಣ್ಣವಾಯಿತೇಕೆತುಟಿ ಸೋಕುವ ಮುಂಚೆ ಬಟ್ಟಲು ಉರುಳಿ ಹೋಯಿತೇಕೆ ಹೃದಯ ಒಡೆದು ಚೂರಾದರಾಗಲಿ ಮಧುಶಾಲೆ ಕೈ ಮಾಡಿ ಕರೆದಿದೆತುಂಬಿ ತುಳುಕುವ ಹೂಜಿ ಎದುರಿಗಿದೆ ಮುಖದ ನಗು ಮಾಯವಾಯಿತೇಕೆ ಯಾರೇನೇ ಅಡಿಕೊಳ್ಳಲಿ ಬಿಡು ನೋವು ಮರೆಸುವ ಔಷಧಿ ಜೊತೆಗಿದೆ ಗಾಲಿಬ್ಸಾಕಿ ಸುರಿದು ಕೊಟ್ಟ ಸಂಜೀವಿನಿ ಕೈ ಸೇರುವ ಮುನ್ನ ನೆಲದ ಪಾಲಾಯಿತೇಕೆ ಎಲ್ಲರೂ ನನ್ನ ನೋಡಿ ದೂರ ಸರಿಯುತ್ತಾರೆ ಸಜನಿ ಎದೆಯ ಬೇನೆ ನಿನಗಷ್ಟೇ ಗೊತ್ತುದರ್ದಿಗೆ ಮುಲಾಮು ಸವರಿ ಕೈಗಿತ್ತ […]

ಕೆಂಪು ತೋರಣ ಕಟ್ಟುತ್ತೇವೆ

ಕೆಂಪು ತೋರಣ ಕಟ್ಟುತ್ತೇವೆ ಅಲ್ಲಾಗಿರಿರಾಜ್ ಕನಕಗಿರಿ ಈಗ ನಾವುಕಿರು ದಾರಿಯಿಂದ ಹೆದ್ದಾರಿಗೆ ಬಂದಿದ್ದೇವೆ.ರಾಜಧಾನಿಯ ಸಾಹುಕಾರರ ಮನೆಯ,ಕುಂಡಲಿಯಲ್ಲಿ ಕೆಂಪು ಗುಲಾಬಿ ಬಾಡಿಹೋಗಿವೆಯಂತೆ.ಹೂ ಗಿಡದ ಬೇರಿಗೆ ರಕ್ತ ಕುಡಿಸಲು ಹೊರಟಿದ್ದೇವೆ. ಈಗ ನಾವುಊರು ಕೇರಿ ಧಿಕ್ಕರಿಸಿ ಬಂದಿದ್ದೇವೆ.ನಮ್ಮ ಅನ್ನ ಕಸಿದು ಧಣಿಗಳಾದವರ,ಮನೆಯ ತಲ ಬಾಗಿಲು ತೋರಣ ಒಣಗಿ ಹೋಗಿವೆಯಂತೆ.ನಮ್ಮ ತೊಡೆ ಚರ್ಮ ಸುಲಿದುಕೆಂಪು ತೋರಣ ಕಟ್ಟಲು ಹೊರಟಿದ್ದೇವೆ. ಈಗ ನಾವುಜೀವದ ಹಂಗು ತೊರೆದು ಬಂದಿದ್ದೇವೆ.‘ಮರಣವೇ ಮಹಾನವಮಿಯೆಂದು’ದಿಲ್ಲಿ ಗಡಿ ಮುಚ್ಚಿಕೊಂಡವರ ಮನೆ ಮುಂದೆನಮ್ಮ ಹೋರಾಟದ ಹಾಡು ಬರೆಯಲು,ಕಳ್ಳು ಬಳ್ಳಿ ಕಟ್ಟಿಕೊಂಡು ಹೊರಟಿದ್ದೇವೆ. […]

ಶವ ಬಾರದಿರಲಿ ಮನೆ ತನಕ

ಕವಿತೆ ಶವ ಬಾರದಿರಲಿ ಮನೆ ತನಕ ಎ. ಎಸ್. ಮಕಾನದಾರ ನಿನ್ನ ಮನೆಯ ಅಂಗಳ ತನಕವೂನನ್ನ ಶವದ ಡೋಲಿ ಬಾರದಿರಲಿ ಹೂವಿನ ಚದ್ದರಿನ ತುಂಬಾ ಗುಲಾಬಿ ಅಂಟಿಸಿತರಾವರಿ ಜರದ ರೀಲು ಸುತ್ತಿ ಮೇಲಷ್ಟು ಇತ್ತರ್ ಸುರಿಯದಿರಲಿ ಆತ್ಮ ಸಾಕ್ಷಿ ನ್ಯಾಯಾಲಯಕೆಶರಣಾಗಿದ್ದೇನೆ. ಶಿಕ್ಷೆಗೆ ಗುರಿಯಾಗಿದ್ದೇನೆ ಅವಳಿಗೆ ಪ್ರೀತಿಸಿದ್ದು ನನ್ನ ತಪ್ಪಾದರೆನನ್ನನ್ನೂ ಪ್ರೀತಿಸಿದ ಅವಳ ತುರುಬು ತುಂಬಾ ಹೂ ಆರಡಿ ಜಾಗೆ ಮೂರು ಹಿಡಿ ಮಣ್ಣಿಗಾಗಿಕಾಲುಗೆರೆ ಸವೆದಿವೆ ಮೊಣಕಾಲು ಚಿಪ್ಪು ಒಡೆದಿದೆವಚನ ಭ್ರಷ್ಟನಲ್ಲ. ದೇಶ ಭ್ರಷ್ಟನೂ ಅಲ್ಲದಅವಳ ನಲ್ಲನಿಗೆ ಪುಟ […]

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ ಹೃದಯ ಕಣ್ಣೀರು ಕೊನೆ:ಹೃದಯವು ನಿಂತಿತುದುಃಖದ ಭಾರ. ಮನಸ್ಸು ಮನಸೇ ಜೋಕೆಕದ್ದಾರು ಆತ್ಮವನುಪ್ರೀತಿ ಹೆಸರು. ಅಮ್ಮ ತೊಗಲು ಬೊಂಬೆ :ಜೀವ ಕೊಟ್ಟ ದೇವತೆಅಮ್ಮನು ತಾನೇ. ಲಜ್ಜೆ ಸಂಜೆ ಕಡಲುಬಾನು ಭೂಮಿ ಮಿಲನಲಜ್ಜೆಯ ಕೆಂಪು. ಮೌನ ಮಾತು ಮೌನಕ್ಕೆಸೋತು ಶರಣಾಯಿತುಕಣ್ಣ ಭಾಷೆಲಿ. ಶಿಲೆ ಶಿಲೆಗೂ ಪ್ರೀತಿಸುರಿಯೋ ಸೋನೆಯಲಿಕರಗೋ ಮನ ಜಾತ್ರೆ ಮಾಯೆಯ ಜಾತ್ರೆಯಾರು ಯಾವ ಪಾಲಿಗೆಸಿಕ್ಕಿದ್ದೇ ಸಿರಿ. ಬಾಳು ಬಾಳ ಹಾದಿಲಿಮುಳ್ಳು ಕೂಡಾ ಹೂವಂತೆತೃಪ್ತಿ ಮನಕೆ. ಹೂವು ಮುಳ್ಳಿನ ಭಾಸಹೂಗಳು ಚುಚ್ಚಿದಾಗಪ್ರೀತಿಯೇ ಹೀಗೆ. ಕವಿ ಕವಿ […]

ಕಾಡುವ ಕನಸುಗಳು

ಕವಿತೆ ಕಾಡುವ ಕನಸುಗಳು ರಶ್ಮಿ ಹೆಗಡೆ ಒಮ್ಮೊಮ್ಮೆ ಕಾಡುವ ರಂಗುರಂಗಾದ ಕನಸುಗಳುಬಣ್ಣದಲ್ಲಿ ಮಿಂದ ಮುಸ್ಸಂಜೆಯ ರವಿಯಂತೆಕಣ್ಣಿಗೆ ಇನ್ನೇನು ಚಂದ ಎನ್ನುವಷ್ಟರಲ್ಲಿಮುಳುಗಿ ಮಂಗಮಾಯವಾಗುವುದೇಕೆ? ಯಾರಿಂದಲೋ ಬಾಡಿಗೆ ತಂದ ಭಾವನೆಗಳಲ್ಲಅವೆಲ್ಲವೂ ನನ್ನ ನೆನಪಿನ ಗರ್ಭದಲ್ಲಿಯೇ ಅಡಗಿಬೆಚ್ಚಗೆ ಕುಳಿತು ಸಮಯ ಮೀರಿದ ಮೇಲೆಎದೆಯ ಗೂಡಿನಿಂದ ಹೊರಬಂದವುಗಳೇ! ರೆಕ್ಕೆ ಬಿಚ್ಚಿ ಸ್ವಚ್ಛಂದವಾಗಿ ಹಾರಬೇಕಾದಆ ನೆನಪಿನ ಪಕ್ಷಿಗಳು ಇಂದು ಮತ್ತೆಮನದ ಪಂಜರದಲ್ಲೇ ಬಂಧಿಯಾಗಿವೆಅದಕ್ಕೆ ಸ್ವಾತಂತ್ರ್ಯ ಸಿಗಬೇಕಾದ್ದು ನನ್ನಿಂದಲೇ! ಶಿಥಿಲಗೊಂಡ ಭಾವಸೇತುವೆಯಲ್ಲಿಇಂದು ಹರೆಯವೂ ಇಲ್ಲ,ಹುಮ್ಮಸ್ಸೂ ಇಲ್ಲಎಂದೋ ಆಗಾಗ ನೆನಪ ಮಳೆ ಸುರಿದಾಗಎದೆಯಡಿಗೆ ನೀರು ಉಕ್ಕಿ ಹರಿವುದನು […]

ಹೊಸ ಬಾಳಿಗೆ

ಕವಿತೆ ಹೊಸ ಬಾಳಿಗೆ ಶ್ವೇತಾ ಎಂ.ಯು.ಮಂಡ್ಯ ಹಳತು ಕಳೆದುಹೊಸ ವರ್ಷ ಮರಳಿಎಲ್ಲಿಂದಲೋ ಬಂದುಮತ್ತೆಲಿಗೋ ಸಾಗೋಈ ಬದುಕ ಹಾದಿಯಲಿಹೊಸ ಭರವಸೆಯ ಚಿಗುರಿಸಲಿ ರಾಗಯೋಗ ಪ್ರೇಮಸೌಂದರ್ಯಮೇಳೈಸಿ ಭೂರಮೆಯ ಸಿಂಗಾರಗೊಳಿಸಿರೆಂಬೆಕೊಂಬೆಗಳು ತೂಗಿ ಬಾಗಿನರುಗಂಪು ತಣ್ಣನೆಯ ಗಾಳಿ ಸೂಸಿಆನಂದವನೆ ಹಂಚಿವೆ ಈ ಹರುಷವು ಹೀಗೆ ಉಳಿಯಲಿಖಂಡ ಖಂಡಗಳ ದಾಟಿಅರೆಗೋಡೆ ಮಹಾಗೋಡೆಅರೆತಡಿಕೆ ಮಹಾಮನೆಗಳೊಳಗಿನರೋಗಗ್ರಸ್ತ ಮನಸುಗಳಲಿಸೊರಗದ ಸಂಜೀವಿನಿಯಾಗಲಿ ಮೈಮುದುಡಿ ಚಳಿಯೊಳಗೆಬಿಟ್ಟುಬಿಡದೆ ಕಾಡುವ ಶಾಪಗ್ರಸ್ತ ದಾರಿದ್ರಕ್ಕೆ ಬಲಿಯಾದ ಜೀವಗಳಿಗೆಬೇಡುವ ಕೈಗಳಿಗೆ ನೀಡುವಶಕ್ತಿಯ ನೀ ಇಂದಾದರುಹೊತ್ತು ತಾ ಹೊಸ ವರುಷವೇ ಬದುಕನ್ನೇ ಹಿಂಡಿದ ಕಾಣದ ಮುಖವುಕಾಣದೆ ಹೋಗಲಿ ಹಾಗೆಯೇಈ […]

ಸಹಜ ಪ್ರೇಮ

ಕವಿತೆ ಸಹಜ ಪ್ರೇಮ ದೇವರಾಜ್ ಹುಣಸಿಕಟ್ಟಿ. ಅವಳದು ನನ್ನದು ಅಮರಪ್ರೇಮ ಅಲ್ಲವೇ ಅಲ್ಲ..ಕಾರಣ ಅವಳಿಗಾಗಿ ನಾನುಗೋರಿ ಕಟ್ಟಲಿಲ್ಲ..ವಿಷ ಉಣಿಸಲಿಲ್ಲ ಉಣ್ಣಲಿಲ್ಲ..ಇನ್ನು ಗೋಡೆ ಕಟ್ಟುವಬಾದಶಾಗಳು ಇರಲೇ ಇಲ್ಲಾ… ತಿಂಗಳಿಗೊಮ್ಮೆ ಅವಳಹೆಜ್ಜೆಗಳು ಭಾರವಾಗುತ್ತವೆ..ಆಗೆಲ್ಲ ಮನೆಯ ತುಂಬಾನನ್ನದೇ ಕಾರುಬಾರು..ಉಪ್ಪು ಹುಳಿ ಹೆಚ್ಚು ಕಡಿಮೆಆಗಿರುವ ಅನ್ನ ಸಾಂಬಾರು…ನನ್ನಂತಲ್ಲ ಅವಳು ಉಂಡು ಬಿಡುತ್ತಾಳೆತುಟಿಪಿಟಕ್ ಅನ್ನದೇ ಬಿಡದೇ ಚೂರು… ಮುನಿಸು ಬರುತ್ತೆ ಆಗಾಗ ಸಂತೆಯಲ್ಲಿಜೊತೆಯಾದ ಅಪರಿಚಿತ ಗೆಳೆಯನಂತೆಕಾರಣ ತುಸು ಹೊತ್ತಾಗಿ ರಾತ್ರಿ ಬಾರಿಂದ ಮರಳಿದ್ದು..ತುಸು ನಶೆ ಹೆಚ್ಚಾಗಿ ಪೆಚ್ಚುಪೆಚ್ಚಾಗಿ ಮಾತನಾಡಿದ್ದು..ತುಸು ಸಿಗರೇಟಿನ ಹೋಗೆಹೆಚ್ಚಾಗಿ ಉಸಿರಿದ್ದು….ಇದು ಹೆಚ್ಚೊತ್ತು […]

ಅಪ್ಪಣ್ಣನಿಗೊಂದು ಮನವಿ

ಕವಿತೆ ಅಪ್ಪಣ್ಣನಿಗೊಂದು ಮನವಿ ಎ.ಎಸ್.ಮಕಾನದಾರ ಅಪ್ಪಣ್ಣಎಷ್ಟೊಂದು ಕತ್ತಿಗಳುಸೇರಿಕೊಂಡಿವೆ ನಿನ್ನ ಹಸಬಿಯೊಳುಆ ಕತ್ತಿಗಳೇ ಮಾಡಿದ ಕ್ಷೌರಹೇಗೆ ಸೂಚಿಸಿ ಬಿಡುತ್ತವೆ. ಆ ಚಾಂದ ದಾಡಿ ಮುಸ್ಲಿಮನದೆಂದುಆ ಜುಟ್ಟು ಬ್ರಾಹ್ಮಣನನದೆಂದುಆ ಕೆಳದಾಡಿ ಸಿಖ್ಖನದೆಂದುಆ ಫ್ರೆಂಚ್ ದಾಡಿ ಕ್ರಿಶ್ಚಿಯನನದೆಂದು ಮೀಸೆ ಬಿಟ್ಟರೊಂದು ಜಾತಿಕೇಶ ಬಿಟ್ಟರೊಂದು ಜಾತಿಮುಡಿ ಕಟ್ಟಿ ದಾಡಿ ಬಿಟ್ಟರೊಂದು ಜಾತಿಎಲ್ಲವನು ಬೋಳಿಸಿಟ್ಟುಹೊಸದೊಂದು ವ್ಯವಸ್ಥೆನಿರ್ಮಿಸಬಾರದಿತ್ತೇ ಅಪ್ಪಣ್ಣ ನೀನುಅಣ್ಣ ಅಕ್ಕ ಅಲ್ಲಮರೊಂದಿಗೆಅನುಭವ ಮಂಟಪದ ಚುಕ್ಕಾಣಿಯಾಗಿದ್ದಿ ಯಾಕಣ್ಣ ಈ ವ್ಯವಸ್ಥೆಗೆಕಡಿವಾಣ ಹಾಕದೆ ಸುಮ್ಮನಾದೆಗಂಡಲ್ಲದೆ-ಹೆಣ್ಣಲ್ಲದೆ ಒಳಗಿರುವಆತ್ಮಕ್ಕೆ ಅನುಭವ ಮಂಟಪದಲಿಅಂತರಂಗ ಶುದ್ಧಿ ಮಾಡಿದ ನೀನೇಬಹಿರಂಗ ಶುದ್ಧಿಗಾಗಿಮಾಡಿದ ಈ ಕ್ಷೌರದಿಂದಅದ್ಹೇಗೆ […]

ಗಾಂಧಾರಿ ಸಂತಾನ

ಕವಿತೆ ಗಾಂಧಾರಿ ಸಂತಾನ ಕಾತ್ಯಾಯಿನಿ ಕುಂಜಿಬೆಟ್ಟು ಆ ಸೂಯ೯ ಹೆರುತ್ತಾನೆನೀಲಿ ನೀಲಿ ಮೋಡ ಪರದೆಗಳಹೆರಿಗೆ ಮನೆಯಲ್ಲಿನೀಳ ನೀಳ ಬೆಳಕು ಶಿಶುಗಳಕಣ್ಣುಗಳಿಗೆ ಕತ್ತಲ ಪಟ್ಟಿ ಕಟ್ಟಿಕೊಂಡುಈ ಗಾಂಧಾರಿಯ ಹಾಗೆ!ಹೊತ್ತದ್ದು ಹೆತ್ತು ವೀರಶತಜನನಿಹೆತ್ತದ್ದು ಸತ್ತು ದುಃಖಶತಜನನಿ!ಬಸಿರ ಹೊಸೆಹೊಸೆದು ಅತ್ತರೂಈಗ ವೇದವ್ಯಾಸನಿಲ್ಲ ಮಡಕೆಯಿಲ್ಲಮಹಾಭಾರತ ಮುಗಿದು ಹೋಗಿದೆಕುರುಕ್ಷೇತ್ರದಲ್ಲಿ ಸಾಲು ಗಭಾ೯ಪಾತ! ಆ ಸೂಯ೯ನದ್ದೋ ಅಕ್ಷಯ ಗಭ೯ !ಪ್ರಸವಬೇನೆಯೇ ಇಲ್ಲದೆ ಹೆರುತ್ತಾನೆತನ್ನ ಬೇನೆಯನ್ನೆಲ್ಲ ಭೂಮಿಯಹೆಂಗಸರ ಗಭ೯ಗಳಿಗೆ ಹಂಚಿಬಿಟ್ಟಿದ್ದಾನೆಹೆರುಹೆರುತ್ತಲೇ ಕಳೆದುಕೊಳ್ಳುತ್ತ ಬಿಕ್ಕಿಬಿಕ್ಕಿ ಕಿರಣಗಳನ್ನು ಹೆತ್ತು ಒಂದು ನಿರಾಳ ಸೊನ್ನೆಯಾಗಿಮುಳುಗುತ್ತಾನೆಇರುಳಿಡೀ ಕಡಲಿಗೆ ಪ್ರಸವ ಬೇನೆಅದರ ಕೊನೆಯ ಬಿಕ್ಕೊಂದು […]

Back To Top