Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

‘ಒಲವ ವಿಜ್ಞಾಪನೆ ವಸುಂಧರಾ ಕದಲೂರು ಹೀಗೆ…ಮಾತು ಮಾತಿಗೂ ಮಾರುತ್ತರ ಬೇಡಎನ್ನವೆಯಲ್ಲಾ ನನ್ನ ಸೋಗೆಮಾತೇ ಆಡದಲೆ ನಾ ನಿನಗೆಅರ್ಥ ಮಾಡಿಸುವುದು ಹೇಗೆ ಚೆಂದದಲಿ  ಮಾತನಾಡದೆಬಿಮ್ಮನೆ ಬಿಗುಮಾನದಲಿನೀ ನಿನ್ನ ಪಾಡಿಗೆ, ನಾ ನನ್ನಷ್ಟಕೆಇರಲೇನು ಸೊಗಸು ಹೇಳು ಮುನಿಸು ಮೋಡ ಕರಗಿಸೋನೆ ಸುರಿದು ಕುದಿ ಮನಸುತಂಪಾಗಿ, ಹಸಿರು ಚಿಗುರಿತೆನೆ ತುಂಬಿ ಬಾಗುದಿರಲೇನು ಚೆಂದ ಮೌನಕ್ಕೂ ಬೇಸರ ಬಂತೀಗಮನಸು ಸೋಲುತಿದೆ ಬಾ ಬೇಗಈ ಬಾಳಿನಾಚೆ ಇನ್ನೇನಿದೆನಾನಿನಗೆ ನೀನನಗೆಂದು ಒಲವಾಗಿದೆ *****

ಕಾವ್ಯಯಾನ

ಗಝಲ್ ಹೇಮಗಂಗಾ ಲೌಕಿಕ ಸುಖಗಳು ತೃಣಸಮಾನವೆಂದು ಹೊರಟವಳು ನೀನು ಎಲ್ಲ ತ್ಯಜಿಸಿ ವೈರಾಗ್ಯವನೇ ಆಭರಣದಂತೆ ಧರಿಸಿದವಳು ನೀನು ಮೋಹಿಸಿದ ಕೌಶಿಕನೊಡನೆ ಬಾಳು ಮುಳ್ಳಿನ ಮಂಚವಾಯಿತು ಅರಮನೆಯ ವೈಭೋಗದತ್ತ ಚಿತ್ತವಿಡದೇ ನಡೆದವಳು ನೀನು ಹಸಿವೆ, ನಿದಿರೆ, ಅಂಜಿಕೆಗಳಾವುವೂ ಕಾಡಲಿಲ್ಲ ನಿನ್ನ ಹೇಗೆ ? ಚೆನ್ನಮಲ್ಲಿಕಾರ್ಜುನನ ಅರಸುತ್ತಾ ಕಾನನದಿ ಅಲೆದವಳು ನೀನು ಅಗಣಿತ ಅನುಭವದ ಮೂಸೆಯಲಿ ಪುಟಕ್ಕಿಟ್ಟ ಚಿನ್ನವಾದೆ ಹೆಣ್ಣೂ ಗಂಡಿಗೆ ಸಮಾನವೆಂಬ ತತ್ವ ಜಗಕೆ ಸಾರಿದವಳು ನೀನು ಆಧ್ಯಾತ್ಮವನಪ್ಪಿ ಮೊದಲಿಗಳಾದೆ ಶಿವಶರಣೆಯರ ಸಾಲಿನಲ್ಲಿ ವಚನಕ್ಷೇತ್ರದ ಹೇಮ ಮುಕುಟಕೆ ರತ್ನವಾದವಳು […]

ಕಾವ್ಯಯಾನ

ಮಳೆ ವಸುಂಧರಾ ಕದಲೂರು ಕಿಟಕಿ ಸರಳಾಚೆಸುರಿವ ಮಳೆ ಕಂಡುಮೂಗೇರಿಸುತ್ತೇನೆಮಣ್ಣ ಘಮಲಿಗೆ.. ಬಿದ್ದ ಹನಿಯೆಲ್ಲಾಸಿಮೆಂಟು ರೋಡಿನಲಿಉರುಳಾಡಿ ಕೊಚ್ಚೆಮೋರಿ ಸೇರುವಾಗಎಲ್ಲಿಂದ ಬರಬೇಕುಮಣ್ಣ ವಾಸನೆ.. ಊರ ಮನೆಯಲ್ಲಿಪುಟ್ಟ ತೊರೆಯಾಗಿಮಳೆ ನೀರು ತುಂಬಿಹರಿಯುತ್ತಿದ್ದ ಮೋರಿಗಳುಘಮ್ಮೆನುತ್ತಿದ್ದವು… ಪುಟ್ಟ ಫ್ರಾಕಿನ ಹುಡುಗಿಬಿಟ್ಟ ಕಾಗದದ ದೋಣಿಹೊತ್ತೋಯ್ದು ಮರೆಯಾದನೆನಪೂ ಘಮ್ಮೆಂದಿತು.. ಊರ ಮಳೆ ಕೇರಿ ಮಳೆನೆಲದ ಮಳೆಯಾಗಿತ್ತು.ಹರಿದು ಕಡಲ ಸೇರಿದಟ್ಟ ಮುಗಿಲಾಗಿ ಘಮ್ಮೆಂದಿತು… ಈ ನಗರ ಮಳೆ ಮಾತ್ರಒಂದು ನೆನಪೂ ತುಂಬುವುದಿಲ್ಲ.ಭೋರೆಂದು ಸುರಿದ ಮಳೆಗೆಮಣ್ಣಿಲ್ಲದ ನೆಲವೂ ಇಂಗುವುದಿಲ್ಲಮಣ್ಣಿಲ್ಲದೆ ಘಮಲು ಅಡರುವುದಿಲ್ಲ ********

ಕಾವ್ಯಯಾನ

ಅಮ್ಮ ಶಿವಲೀಲಾ ಹುಣಸಗಿ ಭುವಿಗೆ ಬಿದ್ದ ದೇಹಕೆ ಸೊಕಿಲ್ಲ ಹನಿ ಕೆಸರು ಅಂಗೈಯಗಲ ಬೆಳೆದ ಮಾಂಸದ ಮುದ್ದೆಗೆ. ನವಮಾಸಗಳ ಜೀವದುಸಿರ ಬಸಿರ ಹೊತ್ತವಳು ತಾಯತನದ ಸುಖವ ಹಂಬಲಿಸಿದವಳು.. ಸಾವುನೋವಿನಲಿ ಮರುಜನ್ಮ ಪಡೆದವಳು.. ತನುವಿನೊಳು ಅಡಗಿದ ತನ್ನಾತ್ಮ ಕಂಡು ನಕ್ಕವಳು. ಎದಗಪ್ಪಿಕೊಂಡು ಅಮೃತವ ಉಣಸಿದವಳು. ಕರುಳ ಬಳ್ಳಿಯ ಕಡಿದು ಮಡಿಲೊಳೆರಗಿದವರೂ ನಸು ನಕ್ಕು ಸೆರಗ ಗಂಟಲಿ ಬಿಗಿದು ಅಂಬೆಗಾಲಿಡಲು ಹೆಜ್ಜೆಯ ಮೂಡಿಸಿದವಳು ಬೇಕು ಬೇಡಗಳ ಕಾಡಿಬೇಡಿ ಪಡೆದವರು ತುತ್ತನುಂಡು ತೊಳತೆಕ್ಕೆಯಲಿ ಮಲಗಿದವರು ತೊದಲು ನುಡಿಯ ತುಂಬ ಆವರಿಸಿದವಳು ‘ಅಮ್ಮಾ’ […]

ಕಾವ್ಯಯಾನ

ಅವ್ವ ಲಕ್ಷ್ಮಿ ದೊಡಮನಿ ನಮ್ಮನೆ ಮುತ್ತೈದಿಯಾದಾಕಿ ಅವ್ವ ನೀನಂದ್ರ ನನ್ಜೀವ ಅಪ್ಪನ ಅರ್ಧಾಂಗಿಯಾದಾಕಿ ಅವ್ವ ನೀನಂದ್ರ ನನ್ಜೀವ ಚಳಿಗಾಲದಾಗ ಸೂರ್ಯಾನು ವ್ಯಾಳಿ ಮೀರ್ತಾನ ಆದ್ರ ಹೊತ್ತೀಗ ಕೈತುತ್ತಿಡುವಾಕಿ ಅವ್ವ ನೀನಂದ್ರ ನನ್ಜೀವ ನನ್ನ ಚಿಕ್ಕಂದನ್ನ ಚಿನ್ನದ ಚಣಗಳಿಂದ ಹೆಣಿದು ಒಲವು ಸುರಿಸಿದಾಕಿ ಅವ್ವ ನೀನಂದ್ರ ನನ್ಜೀವ ಜೇನುಗೂಡಿನ ಛಾವಣಿ ನಿಸರ್ಗ ಕೋಪಕ ನಡುಗಿದ್ರೇನ ಸೆರಗು ಅಲ್ಲಾಡಿಸದಾಕಿ ಅವ್ವ ನೀನಂದ್ರ ನನ್ಜೀವ ಕಾಡೋ ಒಲಿ,ಉರಿಸೋ ಹೊಗಿ, ಅಳಿಸೋ ಬಡತನವ ಸೋಲಿಸಿ ನಗುವಾಕಿ ಅವ್ವ ನೀನಂದ್ರ ನನ್ಜೀವ ಊಟದ ನಡುವ […]

ಕಾವ್ಯಯಾನ

ಗುಲಾಬಿ ನಕ್ಷತ್ರ ಅಂಜನಾ ಹೆಗಡೆ ಶಾಪಿಂಗ್ ಹೋದಾಗಲೊಮ್ಮೆ ಪರಿಚಯದ ಅಂಗಡಿಯವ ಗುಲಾಬಿ ಬಣ್ಣದ ಚಪ್ಪಲಿ ಹೊರತೆಗೆದ ಬೆಳ್ಳನೆಯ ಪೇಪರಿನೊಳಗೆ ಬೆಚ್ಚಗೆ ಸುತ್ತಿಟ್ಟ ರಾಣಿ ಪಿಂಕ್ ಚಪ್ಪಲಿ! “ಸೈಜ್ ನೋಡಿ ಮೇಡಂ; ನಿಮ್ಮ ಕಾಲಿಗೆ ಹೇಳಿ ಮಾಡಿಸಿದ ಬಣ್ಣ” ಎಂದ ಹಳೆ ಚಪ್ಪಲಿಯ ಕಳಚಿ ಪಾದಗಳನ್ನೊಮ್ಮೆ ಕೈಯಿಂದ ತಡವಿ ಧೂಳು ಕೊಡಹಿ ಅಳೆಯಲು ನಿಂತೆ ಬಣ್ಣ ಗಾತ್ರಗಳ! ಬಳಸಲಾಗದು ಅಳತೆ ದಕ್ಕದೆ ಕುತ್ತಿಗೆಯ ತುಸುಬಾಗಿಸಿ ಬಿಳಿಯ ಸ್ಟ್ರೈಪ್ ಗಳೊಳಗೆ ಬೆರಳುಗಳ ಬಂಧಿಸಿ ದಿಟ್ಟಿಸಿದೆ! ಕನ್ನಡಿಯೊಳಗಿನ ಪಾದಗಳ ಮೇಲೆ ಹೊಳೆದವು […]

ಮಾತೃ ದೇವೋಭವ

ಮಾತೃ ದೇವೋಭವ ಸಂಮ್ಮೋದ ವಾಡಪ್ಪಿ ದೇವ ಬಿತ್ತಿದ ಇಲ್ಲಿ ಎದ್ದು ನಿಲ್ಲಲೆಂದು ಹಸಿರ ಚಿಗುರೊಡೆದು ಮೇಲೇಳಲೆಂದು ಬಸಿರ ಭೂತಾಯಿಯ ಒಡಲ ಹೊರಬಂದು ಉಸಿರ ಬೆಸೆದು ನಸು ನಗುವ ಬೀರಲೆಂದು ಇದು ಜನುಮ ಅಗೋಚರ ಶಕ್ತಿಯಿಂದ ಅಳುವ ದ್ವನಿಯ ಕೇಳುವ ತವಕದಿಂದ ಹುಟ್ಟು ನವಮಾಸದ ತಪದ ದಾರಿಯಿಂದ ಪಯಣ ಆ ಮಾತೆಯ ಲಾಲಿ ಹಾಡಿನಿಂದ ರತ್ನವಾಗಲಿ ಎನುತ ತೊಟ್ಟಿಲ ತೂಗಿದಾಗ ಮಂದಹಾಸದಿ ದೃಷ್ಟಿ ಬೊಟ್ಟು ಒತ್ತಿದಾಗ ಸುಪಥವ ಹಿಡಿದು ನಡೆಸಲು ಹರಸಾಹಸ ಯಶೋದೆಯ ಪರಿಶ್ರಮವೇ ಅವನ ವಿಕಾಸ ಭವದ […]

ಕಾವ್ಯಯಾನ

ಕ್ವಾರೆಂಟೈನ್ ಹಾಯ್ಕುಗಳು. ಪ್ರಮೀಳಾ ಎಸ್.ಪಿ. ಕರೊನಾಕ್ಕೆ ಕಾರಣವಂತೆ ಶಾಂಗ್ಲಿ ಮತ್ತವಳ ಬಾವಲಿ ನರಳುತ್ತಿರೋದು ಮಾತ್ರ ಇಟಲಿಯ ಇಲಿ. ಸತ್ತರಂತೆ ಅಮೆರಿಕಾದಲ್ಲಿ ಅಷ್ಟೊಂದು ಜನ. “ಹೊಯ್” ! ಟೀವಿಯಲ್ಲಿ ಮಾರಾಯ… ಎಂದು ಅಡ್ಡಾಡಿದರು ನಮ್ಮೂರ ಜನ . ಸುರರೇ ಕುಡಿಯುತ್ತಿದ್ದರು ಎಂಬ ನೆಪ ಕುಡುಕರದ್ದು ಕೇಳದಿದ್ದರೂ ನೀಡಿದವರು ಹೇಳಲಾರದ ನೆಪ ‘ಗಲ್ಲ’ದ್ದು. ಕಂಠ ಪೂರ್ತಿ ಕುಡಿದು ಅಪ್ಪ ಅಮ್ಮನಾದರು ಬೆತ್ತಲು ಕಣ್ಣು ಬಿಟ್ಟ ಮಗುವಿನ ಮನದಲ್ಲೀಗ ಕತ್ತಲು. ಕೇಳುವರೆಲ್ಲ ತೆರೆಯಲೆಂದು ಅವರವರ ಆದಾಯದ ಬಾಗಿಲು ತೆರೆಯಿರಿ ಎಂದು ಕೇಳುವುದೇ […]

ಕಾವ್ಯಯಾನ

ಹೆಣ್ಣಿನಂತರಾಳ ವಾಣಿ ಮಹೇಶ್ ಮಮತೆಯ ಮಡಿಲಲ್ಲಿ ಮಮತೆಯ ಕಾಣದೆ ಮರುಗುವುದ ಕಲಿತೆ ಮರುಳ ಮನಸು ಅರಿಯದೆಲೆ ಆಸೆಗಳು ಕಂಗಳ ತುಂಬಿವೆ / ಕೊರಳುಬ್ಬಿ ಕಂಗಳ ಕಂಬನಿ ಜಾರಲು.. ಹೆದರಿ ಅಲ್ಲೇ ಅವಿತು ತನ್ನಿರವ ಸೂಚಿಸಿದೆ / ಪ್ರೇಮಮಯಿ ಮಾತೆ ತನ್ನಿರವ ಮರೆತಳು ನಾ ಬರೆದ ರಾಗಕೆ ಸ್ವರವೇ ಇಲ್ಲವಾಗಿಸಿಹಳು ತಂತಿ ಕಡಿದು ಜೀವವೀಣೆ ಜೀವಚ್ಛವವಾಗಿದೆ/ ರಾಗಾಲಾಪಗಳು ಶೋಕದಿ ಬಿಕ್ಕುತಿವೆ ಬಯಸಿದ ಮಮತೆ ದೂರ ಸಾಗಿ ಹೋಗಿದೆ.. ಕಾಣದಾ ಲೋಕಕೆ ನೆನಪು ಹಚ್ಚ ಹಸಿರಾಗಿ ಬೊಬ್ಬಿಡುತಿದೆ / ಮೌನ […]

ಕಾವ್ಯಯಾನ

ಅಂತಃಶುದ್ಧಿಯ ಸಮಯ…!! ಅರ್ಚನಾ ಹೆಚ್ ಜಾತಿ ಧರ್ಮಗಳ ಸುಳಿಯಲರಳಿದ ಕುಸುಮಗಳಿಂದು‌ ಶಿವಪೂಜೆಗೊದಗದೆ ಬರಿದೆ ಬಾಡಿದ ಬೆರಗು..!! ಹೆತ್ತ ಮಡಿಲಲಿ ಮತ್ತೆ ಕೂಸುಗಳು..! ಬದುಕಿದರೂ ಸತ್ತರೂ ಅವಳೊಡಲೇ ಗಮ್ಯ.. ಮಣ್ಣಾಗಬಾರದವುದೆಂಬುದೊಂದೇ ತಾಯಿ ಹರಕೆ..!! ನಾನು ನನ್ನಂದೆಂಬ ತುಂಬು ಗರ್ವದಲಿದ್ದೆ..!!?? ಮತ್ತೆ ಮೇಲಿಹನಾಗ್ರಹ..! ಕಣ್ಣೆವೆಯಿಕ್ಕದೆ ದಿಟ್ಟಿಸಿ ನೋಡು..! ಸ್ವಾರ್ಥ ದುರಾಗ್ರಹದ ಪೀಡೆಯೊಳಾಡಿದ ಮರುಳ ಮಾನವರಿಗಿದೇಟು! ರಣತಂತ್ರ!! ವಿಕೃತ ಮನಸ್ಥಿತಿಗಳಾಟ! ವಿಶ್ವವ್ಯಾಪಿ ಬೀಸಿ ಚಾಟಿಯೇಟು..!! ಧನವೋ! ಋಣವೋ!?? ಶಕ್ತಿಯಾಟದಲಿ ಸತ್ತವರ ಲೆಕ್ಕಗಳು ಸರ್ವವ್ಯಾಪಿ! ಮೃತ್ಯು ಕಡುಕೋಪಿ..!! ಮಾತೃಭೂಮಿಯ ಸೊಗಡು ಭಕ್ತಿ ಮರೆತವಗೆ […]

Back To Top