Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಅಹಂ ಜ್ಞಾನಿಗಳು ಹರೀಶ್ ಗೌಡ ಗುಬ್ಬಿ ಅಹಂ ಜ್ಞಾನಿಗಳು ತನ್ನವರ ಏಳ್ಗೆಯಂ ಸಹಿಸದವರು ನೀವು ಬಿದ್ದವರ ಕಂಡೊಡನೆ ನಕ್ಕವರು ನೀವು ಅವರಿವರ ಕಾಲ್ಗೆಳಗೆ ಕಾಲೆಳೆದವರು ನೀವು ಉದ್ದುದ್ದ ಬೀಗುತ್ತ ಉದ್ಗಾರ ಮಾತಿನಲಿ ಪರನಿಂದೆ ಗೈದವರು ನೀವಲ್ಲವೇ. ನೀ ನುಡಿದುದಂ ನಡೆಯಬೇಕೆನುತಲಿ ಅಡ್ಡಡ್ಡ ದಾರಿಗಳಂ ತುಳಿದವರು ನೀವು ಸರಿ ಮಾರ್ಗದ ದಾರಿಹೊಕನಂ ಕರೆದು ಗೊಟರಿನೊಳಗೆ ನೂಕಿದವರು ನೀವು ಅಹಂ ಜ್ಞಾನವಂ ಮೈತುಂಬಿದವರು ನೀವಲ್ಲವೆ. ಗಳಿಸಿದ ಹೆಸರಂ ಬಳಸಿ ಆತ್ಮದೊಳು ಕಸವಂ ತುಂಬಿ ಅಮಾಯಕರ ನೋವಾಗಿ ಕುಳಿದು ಕುಪ್ಪಳಿದವರು ನೀವು […]

ಕಾವ್ಯಯಾನ

ಆನಿ ಜಯಾ ಮೂರ್ತಿ ಪಂಜರದ ಹಕ್ಕಿ ಅಲ್ಲ ನೀನು ಸ್ವತಂತ್ರ ಹಕ್ಕಿ ನೀ ಹಾರುವೆ ಎಲ್ಲಿಬೇಕಲ್ಲಿ ಒಡೆಯ ನ ಭುಜದಲ್ಲಿ ಒಡತಿಯ ಕೈಯಲ್ಲಿ ಮನೆಯ ಮೂಲೆಯಲ್ಲಿ ನೀನು ಸಾಮಾನ್ಯ ಹಕ್ಕಿಯಲ್ಲ ಎಲ್ಲಿಂದ ಧರೆಗಿಳಿದೆ ವಾಸಿಸಲು ಇಲ್ಲಿ? ಇಂದ್ರನ ಸ್ವರ್ಗದಿಂದ ಇಳಿದೆಯಾ? ಅಪ್ಸರೆ ಗಂಧರ್ವರಿಂದ ಹಾಡಲು ಕಲಿತೆಯ? ನಾರದರ ತಂಬೂರಿ ಶ್ರುತಿ  ಜೊತೆಯ? ನಿನ್ನ ಹಾಡಿನ ಶೈಲಿ ಪುರಂದರ ತ್ಯಾಗರಾಜ ಶಯ್ಲಿ ನಿನ್ನ ಸ್ವರ ಹೋಲುವುದಿಲ್ಲಿ ಆಲಾಪನೆ, ಪಲ್ಲವಿ, ಚರಣ ದಲ್ಲಿ ಸ್ವರ ಆ ದೇವನ ಪ್ರಾರ್ಥನೆ ರೀತಿಯಲ್ಲಿ […]

ಕಾವ್ಯಯಾನ

ಗ್ರಹಣಕ್ಕೆ ಮುನ್ನ ಪ್ರಮಿಳಾ ಎಸ್.ಪಿ ಗ್ರಹಣಕ್ಕೆ ಮುನ್ನ ಕೋಣೆ ಕಿಟಕಿಯ ಸರಳುಗಳ ನಡುವೆ ಚಂದ್ರಮನ ಚಿತ್ರ ಮನದಲ್ಲಿ ಆತುರದ ಕಾವು… ಗ್ರಹಣ ಪ್ರಾರಂಭ ಆಗುವುದಕ್ಕೆ ಮುನ್ನ ಮನೆ ಮಂದಿಗೆಲ್ಲಾ ಊಟ ಬಡಿಸಬೇಕಿದೆ.. ಎದೆಯೊಳಗಿನ ನೋವುಗಳ ಬಚ್ಚಿಟ್ಟು…ಪರದೆ ಮುಂದೆ ಕುಳಿತು ಪುಂಗಿ ಮಾತು ಆಲಿಸಿ ಆಕಳಿಸುವ ಅರಮನೆಯ ಮನಸ್ಸುಗಳ ನಡುವೆ ಆತುರಕ್ಕೆ ಆಟ ವಾಡ ಬೇಕಿದೆ ನಾನು… ಬಳಲಿದ ಕಾಲುಗಳ… ಮೇಲೆ ನಿಂತು ನಿಟ್ಟುಸಿರು ಸೆರಗು ಸುತ್ತಿ ಪ್ರತಿ ಕ್ಷಣಕ್ಕೂ ಬೇಡುತಿದ್ದೇನೆ ಹೊರಗೆ ಹೋದವರು ಹುಷಾರಾಗಿ ವಪಸ್ಸಾಗಲಿ.. ಪರದೆಯಲ್ಲಿ […]

ಕಾವ್ಯಯಾನ

ನಭದ ಕೌತುಕದ ಕಡೆಗೆ ನಾರಾಯಣಸ್ವಾಮಿ ವಿ ನಭದ ಕೌತುಕದ ಕಡೆಗೆ ಮನವ್ಯಾಕೋ ಯೋಚನಲಹರಿಯ ಕಡೆಗೆ ತಿರುಗುತಿದೆ, ಅಜ್ಞಾನದಿಂದ ವಿಜ್ಞಾನದ ಕಡೆ ಸಾಗಿದ ಮನುಜ ಮತ್ತೆಕೊ ಮರಳಿ ಅಜ್ಞಾನದ ಗೂಡಿನ ಸುತ್ತ ಸುಳಿಯುತಿರುವನೆಂದು…….. ಪ್ರಕೃತಿಯ ವಿಸ್ಮಯಕ್ಕೆ ಹೆದರಿ ದೇಗುಲ-ಗೃಹಗಳ ಕದವನೆ ಮುಚ್ಚಿ,ದೂರದರ್ಶನದ ಪರದೆಯೊಳಗೆ ನಭದ ಕೌತುಕವನು ವೀಕ್ಷಣೆ ಮಾಡುತಿಹನು……. ಆಗಸದಲಿ ಘಟಿಸುವ ಸೂರ್ಯಚಂದ್ರರ ವಿಸ್ಮಯ ರೂಪವನು ಕನ್ನಡಿಯೊಳಗಿಂದ ನೋಡಬಹುದೆಂದು,ವಿಜ್ಞಾನಿಗಳು ಸಾರಿ ಸಾರಿ ಹೇಳಿದರೂ ನಂಬಲೇ ಇಲ್ಲ ವಿಜ್ಞಾನವನು…… ಟಿವಿ ಪರದೆಯೊಳಗೆ ಕುಳಿತು ಕಟ್ಟುಕಥೆ ಸಾರುವ ಮಾತಿನಮಲ್ಲರ ಭಾಷಣವು ಹುಟ್ಟಿಸಿತು […]

ಕಾವ್ಯಯಾನ

ಸ್ತ್ರೀ ಹೆಜ್ಜೆ ಕವಿತಾ ಸಾರಂಗಮಠ ಸ್ತ್ರೀ ಹೆಜ್ಜೆ ಲಂಗ ದಾವಣಿ ತೊಟ್ಟ ಬಾಲೆಯರು ವಿರಳ.. ಹಿಡಿದಿದೆ ಫ್ಯಾಶನ್ನಿನ ಮರುಳ.. ಮಾಯವಾಗಿವೆ ಉದ್ದ ಜಡೆ ಮೊಗ್ಗುಗಳ.. ಕೇಶ ಕತ್ತರಿಸಿ ನಡೆಯುವರು ಸರಳ..! ಅನುಕರಣೆ ಹೆಸರಲಿ ನಡೆದಿದೆ ಅಂಧರ ಆಟ.. ತೋರುತಿದೆ ತೆಳು ಧಿರಿಸಿನಲಿ ಅವಳ ಮೈಮಾಟ.‌. ಹಗಲಿರುಳೂ ಅವಳ ಪೀಡಿಸುತ್ತಿದೆ ಕಾಮುಕರ ಕೂಟ..! ಮಾಧ್ಯಮಗಳಲ್ಲಿ ಜಾಹಿರಾತುಗಳ ದರಬಾರು.. ಮಹಿಳೆಯರ ಮನೆ-ಮನಗಳಲ್ಲಿ ಅವುಗಳದ್ದೇ ಸಂಚಾರು.. ಹೋಗುತಿರುವ ಅವಳದೇ ಮಾನಕೆ ಇಲ್ಲವೇ ಇಲ್ಲ ಕೊಂಚ ವಿಚಾರ..! *********

ಕಾವ್ಯಯಾನ

ಸೀರೆಯ ಸಹವಾಸ ತ್ರಿವೇಣಿ ಜಿ.ಹೆಚ್ ಸೀರೆಯ ಸಹ ವಾಸ. ಸೆರಗು ನಿರಿಗೆಗಳ ಸಮೀಕರಿಸಿ ಉಬ್ಬಿದೆದೆ ಕಂಡೂ ಕಾಣಿಸದಂತೆ ಮಣಿಸಿ ನಡುವೆ ‌”ನಡು”ವಿನ ಆಕಾರವ ಅಂದಗಾಣಿಸಿದರೂ ಜಗ್ಗುವ ಬೊಜ್ಜು. ಒಂದೊಂದು ಸೀರೆ ಉಟ್ಟಾಗಲೂ ಮತ್ತೆಷ್ಟೋ ನೆನಪುಗಳ ಕದ ಬಡಿದು ಅಳಿಸಲಾಗದವನ್ನಲ್ಲೇ ಮುಚ್ಚಿಟ್ಟು… ಕಣ್ಣ ಕನಸುಗಳನ್ನೂ ಬೆಚ್ಚಗಿಟ್ಟು… ಜರಿ ಅಂಚಿನ ಸೀರೆ, ಅಲ್ಲಲ್ಲಿ ಸಣ್ಣ ಹೂಬಳ್ಳಿಯಂಚು, ನವಿರು ಭಾವ ಒಲವ ಮೆಲುಕು. ಚಿತ್ತಾಕರ್ಷಕ ಚಿತ್ತಾರ. ಉಟ್ಟು ತೊಟ್ಟು ಸಂಭ್ರಮಿಸಿದ ಆ ಘಳಿಗೆ. ಅಷ್ಟೊಂದು ಸುಲಭವಲ್ಲ ಸೆರಗ ತುದಿಯಲ್ಲಿ ಕನಸು ಕಟ್ಟಿಕೊಂಡೇ […]

ಕಾವ್ಯಯಾನ

ಗಾಳಿಯ ಉತ್ಸವ ಪ್ರೇಮಶೇಖರ ಗಕ್ಕನೆ ಹಾರಿ ಗಬಕ್ಕನೆ ಹಿಡಿದು ನುಂಗೇಬಿಟ್ಟಿತು ನಮ್ಮೂರ ಕೆರೆಯ ಮೀನೊಂದನು ಸಾವಿರ ಸಾವಿರ ಮೈಲು ದೂರದ ಸೈಬೀರಿಯಾ ದಿಂದ ಹಾರಿ ಬಂದು ಬೆಳ್ಳಂಬೆಳಿಗ್ಗೆ ಕೆರೆ ಏರಿ ಮೇಲಿನ ಅರಳೀಮರದ ಕೊಂಬೆಯೇರಿ ಕೂತ ಸ್ವಾಲೋ ಹಕ್ಕಿಯೊಂದು. ಇಂದು ನವೆಂಬರ್ ಒಂದು. ತುರ್ತಾಗಿ ಹೋಗ ಬೇಕಿದೆ ನಾನೀಗ ರಾಜ್ಯೋತ್ಸವದಾಚರಣೆಗೆ, ನನಗಾಗಿ ಕಾದು ನಿಂತಿದೆ ಕಾರ್ಯಕರ್ತನ ಬೈಕು, ಕೂಗಿ ಕರೆಯುತ್ತಲೂ ಇದೆ ಮೈಕು. ಭದ್ರವಾಗಿದೆ ನನ್ನ ಜೇಬಿನಲಿ ಭಾಷಣದ ಹಾಳೆ, ಸಿಕ್ಕಿನಿಂತಿದೆ ನನ್ನ ಗಂಟಲಲಿ ಸ್ವಾಲೋ ನುಂಗಿದ […]

ಕಾವ್ಯಯಾನ

ಕ್ಷಮಿಸದಿರಿ ಸಂಕಟಗಳನ್ನು ಕವಿತೆ ಮಾಡುವುದು ಕ್ರೂರ ಅನ್ನಿಸಿ ಎಷ್ಟೋ ಸಲ ಸುಮ್ಮನಾಗುತ್ತೇನೆ.. ಇದು ಕವಿತೆಯಲ್ಲ; ಒಡಲ ಉರಿ. ವಿಜಯಶ್ರಿ ಹಾಲಾಡಿ ಆಸ್ಟ್ರೇಲಿಯಾದ ಕಾಳ್ಗಿಚ್ಚಿಗೆಬೆಂದ ನರಳಿದ ನೊಂದಅಳಿಲುಗಳೇ ಮೊಲಗಳೇಜಿಂಕೆಗಳೇ ನವಿಲುಗಳೇಹುಲಿ ಚಿರತೆ ಹಾವುಗಳೇಕ್ರಿಮಿ ಕೀಟ ಜೀವಾದಿಗಳೇಮರ ಗಿಡ ಪಕ್ಷಿಗಳೇಕೆಲಸಕ್ಕೆ ಬಾರದ’ ಕವಿತೆ’ಹಿಡಿದು ನಿಮ್ಮೆದುರುಮಂಡಿಯೂರಿದ್ದೇನೆಕ್ಷಮಿಸದಿರಿ ನನ್ನನ್ನುಮತ್ತುಇಡೀ ಮನುಕುಲವನ್ನು ಹಸಿರು ಹೂವು ಚಿಗುರೆಂದುಈ ನೆಲವನ್ನು ವರ್ಣಿಸುತ್ತಲೇಕಡಿದು ಕೊಚ್ಚಿ ಮುಕ್ಕಿಸರ್ವನಾಶ ಮಾಡಿದ್ದೇವೆಇಷ್ಟಾದರೂಹನಿ ಕಣ್ಣೀರಿಗೂ ಬರಬಂದಿದೆನಮ್ಮ ನಮ್ಮ ಲೋಕಗಳುಮಹಲುಗಳನ್ನು ನಾವಿನ್ನೂಇಳಿದಿಲ್ಲ ಇಳಿಯುವುದೂ ಇಲ್ಲಕ್ಷಮಿಸಲೇಬೇಡಿ ಕೊನೆಗೊಂದು ಅರಿಕೆಪ್ರಾಣಿಪಕ್ಷಿಗಳೇಮತ್ತೊಂದು ಜನ್ಮವಿದ್ದರೆ ನನಗೆದಯಮಾಡಿ ನಿಮ್ಮ ಸಂಕುಲಕ್ಕೆಕರೆದುಕೊಳ್ಳಿ- ಇಲ್ಲವೆಂದಾದರೆನಿಮ್ಮ ಪಾದ […]

ಕಾವ್ಯಯಾನ

ಓ ಸಖಿ! ನಿರ್ಮಲಾ ಆರ್. ಹೊಲದಾಗಿನ ಹಸಿರು ಎಷ್ಟು ಚೆಂದ ಓ ಸಖಿ ಪುರ್ರೆಂದು ಹಾರುವ ಹಕ್ಕಿ ತಿನ್ನುತ್ತಿತ್ತು ಮೆಕ್ಕೆ ತೆನೆಯ ಕುಕ್ಕಿ ಕುಕ್ಕಿ ಒಂದು ಬದಿ ಕರಿ ಎಳ್ಳಿನ ರಾಶಿ ಬಣ್ಣದ ಹೂಗಳು ನಲಿಯುತ್ತಿದ್ದವು ಕಂಪ ಸೂಸಿ ಬದುವಿನ ಹೂ ಬಳ್ಳಿ ಸ್ವಾಗತ ಮಾಡುತಿತ್ತು ತನ್ನ ತಾ ಹಾಸಿ ಪ್ರಕೃತಿಯ ಬಣ್ಣಿಸಲು ಪದಗಳಿಲ್ಲ ಸಖಿ ತಂಗಾಳಿಯು ಹಾದು ಹೋಗುತ್ತಿತ್ತು ನಮ್ಮ ಸೋಕಿ ರಾಶೀಯಲ್ಲಿನ ಎಳ್ಳು ತಿನ್ನುತ್ತಿದ್ದೆವು ಮುಕ್ಕಿ ಮುಕ್ಕಿ ಸಂಜೆಗೆ ವಿದಾಯ ಹೇಳಲು ಮೂಡುತ್ತಿತ್ತು ಆಗಸದಲಿ […]

ಕಾವ್ಯಯಾನ

ಅಪ್ಪ ಅಂದರೆ ಆಕಾಶ ದೇವಿ ಬಳಗಾನೂರ ಅಪ್ಪ ಅಂದರೆ ಆಕಾಶ ಅಪ್ಪ ಅಂದ್ರೆ ಅಗೋಚರ ಪ್ರೀತಿಯ ಕಡಲು ನನ್ನಮ್ಮನಂತ ಕರುಣೆಯ ಮಡಿಲು ಮಗಳ ಸಾಧನೆಯು ಪ್ರಜ್ವಲಿಸಲು ಕಾರಣವಾದ ತಿಳಿಮುಗಿಲು ಮಗಳಿಗಾಗಿ ದಣಿದನದೆಷ್ಟೋ ಹಗಲು ಅವಳಿಗಾಗಿಯೇ ಕಾಯ್ದಿರಿಸಿದನು ತನ್ನ ಇರುಳು ಅಪ್ಪ ಅಂದ್ರೆ ಮಗಳ ಪಾಲಿನ ನಾಯಕ ಅವಳ ಬದುಕ ದೋಣಿಯ ನಿಜ ನಾವಿಕ ಮಗಳ ಮುಗ್ದ ನಗುವಿಗಾಗಿ ಕಾದ ಅಮಾಯಕ ಅವಳ ಬದುಕ ರೂಪಣೆಯ ನಿಜ ಮಾಲಿಕ ಅಪ್ಪ ಅಂದ್ರೆ ಮಗಳಿಗಾಗಿಯೇ ಬದುಕೋ ಜೀವ ಅವಳ ಖುಷಿಯಲ್ಲೆ […]

Back To Top