Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಭಾರತ ದರ್ಶನ ಅರುಣಾ ರಾವ್ ದೇಗುಲ ದರ್ಶನ ಮಾಡುವ| ನಾವ್ ದೇಗುಲ ದರ್ಶನ ಮಾಡುವ|ವಿಶ್ವ ಭೂಪಟದೆ ಭಾರತವೆಂಬ| ದೇಗುಲ ದರ್ಶನ ಮಾಡುವ|| ಭವ್ಯ ಹಿಮಾಲಯ ಶಿಖರವೆ ನಿನ್ನ| ಮಂದಿರ ಗೋಪುರವು|ಅರಬ್ಬಿ ಹಿಂದೂ ಬಂಗಾಳ ಕೊಲ್ಲಿ| ಗುಡಿಯ ಪರಿಧಿಗಳು|ಹಿಂದೂ ಮುಸ್ಲಿಂ ಜೈನ ಕೈಸ್ತ| ಆಧಾರ ಸ್ಥಂಭಗಳುಜಯ ಜಯ ಭಾರತ ಎಂಬುದೇ| ಇಲ್ಲಿಯ ಮಂತ್ರದ ಘೋಷಗಳು|| ಭಿತ್ತಿ ಬಿತ್ತಿಗಳು ಸಾರುವವಿಲ್ಲಿ| ಸಾಹಸ ಕಥೆಗಳನು|ಕಲ್ಲು ಕಲ್ಲುಗಳು ಹೇಳುವವಿಲ್ಲಿ| ನಡೆದಿಹ ಹಾದಿಯನು|ಗರ್ಭ ಗುಡಿಯು ನಮ್ಮಯ ಮನಗಳು| ಬಿಡು ಸಂದೇಹವನು|ಜಯ ಜಯ ಭಾರತ ಎನ್ನುತ| […]

ಹೀಗೊಂದು ವಿರಹ ಗೀತೆ

ಕವಿತೆ ಹೀಗೊಂದು ವಿರಹ ಗೀತೆ ಒತ್ತಿ ಉಕ್ಕುವ ಮನಕೆ ತಂಪೆರೆವ ಬಿಸುಪಿಲ್ಲಎಲ್ಲಿಂದ ಬರಬೇಕು, ನಾನು ಬಡವಿ…..ಬಿಸುಪಿಲ್ಲದಾ ಭಯಕೆ ತೆರೆಯದಾತನ ತೋಳುಅದನರಿತ ಮೇಲೂ.. ಆತ ಬಡವ… ಹರೆಯದಲಿ ಹೀಗಿರಲಿಲ್ಲ, ಚೆನ್ನಿತ್ತು ಚೆಲುವಿತ್ತುಒಲವಿತ್ತು ನಾ -ನೀನು ಬೇಧವಿರದೇನಿನ್ನೊಳಗೆ ನಾನು, ನನ್ನೊಳಗೆ ನೀನೆಂಬುವುದುಮುದವಿತ್ತು ಸಂಗೀತ ಲೋಪವಿರದೇ ಈಗ ನಿಶ್ಶಬ್ದದಲಿ ಈಟಿಯಂತೆಯೆ ಇರಿವನಿನ ಮೌನ ಸಹಿಸುವುದು ಕಷ್ಟ ಎನಗೆಇಷ್ಟ ಇರದಿದ್ದರೂ ನನ ಮಾತು ಜೋರಾಗಿಗುಡುಗು ಸಿಡಿಲುಗಳಂತೆ ಶಬ್ದ ಕೊನೆಗೆ ಕೊಟ್ಟರೆ ಕಳೆದುಬಿಡುವಂತೆಂಬ ನಿನ ಪ್ರೀತಿಇಟ್ಟರೆ ಹಳಸಿಬಿಡುವಂತೆ ನಾನೂಇಟಿಗೆ ಗಾರೆಯ ಹಾಕಿ ಕಟ್ಟುವುದೆ ಗೋಡೆಯನುಈಚೆ […]

ಕವಿಗಿನ್ನೇನು ಬೇಕು?

ಕವಿತೆ ಕವಿಗಿನ್ನೇನು ಬೇಕು? ಮಾಲತಿ ಶಶಿಧರ್ ಕವಿತೆಯೊಳಗೊಂದು ಭಾವಬೆರೆತು ಹಾಲಿನಲ್ಲಿ ಲೀನವಾದಜೇನಿನಂತೆ ಸವಿಯಾಗಿರಲುಕವಿಗಿನ್ನೇನು ಬೇಕು? ಭಾವ ಭಾಷೆಗಳ ಮಿಲನಪ್ರಸವವಾಗಲು ಕವಿತೆಮಡಿಲಲ್ಲಿ ಕಣ್ದೆರೆಡುನಗುವ ಹಾಲುಗಲ್ಲದಕೂಸಿನಂತೆಕವಿಗಿನ್ನೇನು ಬೇಕು? ಮನ ಭಾವಗಳ ಬಂಧವದುಅರಿವಿನೊಳಗಿಟ್ಟ ಗಂಧದ ಕೊರಡುಸುಗಂಧ ಎಲ್ಲೆಡೆ ಹಬ್ಬಿಮುದವ ಹಂಚುತಿರಲುಕವಿಗಿನ್ನೇನು ಬೇಕು? ಎದೆಯೊಳಗಿನ ತದ್ಭವಗಳೆಲ್ಲಾಹೆಣೆದುಕೊಂಡು ತತ್ಸಮಗಳಪಂಕ್ತಿಗಳಾಗಿ ಅರಳಿದರೆಮೊಗ್ಗೊಂದು ಬಿರಿದು ಮುಗುಳುನಗುವಂತೆಕವಿಗಿನ್ನೇನು ಬೇಕು?? ಕವಿತೆ ಲೋಕದ ಕನ್ನಡಿಎಡಬಲಗಳಾಚೆ ಚಂದ ತೋರುವಪದ ಲಾಸ್ಯ ಮೃದು ಹಾಸ್ಯಜೀವ ಭಾವಗಳ ಜಲದೋಟನಿಲದೆ ಓಡುತ ಲೋಕವ ಶುದ್ಧಿಮಾಡಲುಕವಿಗಿನ್ನೇನು ಬೇಕು??ಕವಿತೆ ಇದ್ದರೆ ಸಾಕು… ***********************

ಗಾಳಿ ಪಟ

ಕವಿತೆ ಗಾಳಿ ಪಟ ರೇಷ್ಮಾ ಕಂದಕೂರ. ಕೆಲವೊಮ್ಮೆ ಏರುಇನ್ನೊಮ್ಮೆ ಇಳಿತಹರಿಯ ಬಿಡದಿರುಸಮತೋಲನದ ಬಾಲಂಗೋಚಿ ಗಾಳಿ ಬಂದ ಕಡೆ ಮುಖ ಮಾಡಿಘಾಸಿಗೊಳಿಸುವೆ ಮನವಅತ್ತಿಂದಿತ್ತ ಸುಳಿಯುತಬಾನ ಚಿತ್ತಾರದಿ ತೇಲುತಿದೆ ಬಾನಂಚಿಗೆ ಸಾಗುವ ಕನಸಿಗೆಬಣ್ಣ ಹಚ್ಚುತ ಸಾಗಿದೆಮಕ್ಕಳ ಮನ ತಣಿಸುತಕುಣಿದಿದೆ ಎಲ್ಲ ಮರೆತು ತಾಗದಿರಲಿ ಕುಗ್ಗುವ ಮಾತುಸಿಗದಿರಲಿ ಆಡಿಕೊಳ್ಳುವವರಿಗೆಮೇಲೇರುವ ಧಾವಂತಕೆನೂರೆಂಟು ವಿಘ್ನಸಾವರಿಸಿ ಮೇಲೇರುತಲಿರು ಬೇಕಾ ಬಿಟ್ಟಿತನ ಬೇಡಸಾಕೆಂದು ಕುರದೇಗುರಿಯ ಸಾಕಾರಕೇಗುರುತರ ಜವಾಬ್ದಾರಿಯಲಿ ಏರಿದವ ಕೆಳಗಿಳಿಯಲೇ ಬೇಕುಸೂರೆ ಮಾಡಿದವ ಸೆರೆಯಾಗುವಎಲ್ಲವನು ಸುಸ್ಥಿತಿಯಲಿ ನೋಡುಬಾಳ ಬೆಳಗುವೆ ನಿರಾತಂಕದಿ. **************************************

ರಾಹತ್ ಇಂದೋರಿ

ಅನುವಾದಿತ ಕವಿತೆ ಮೂಲ: ರಾಹತ್ಇಂದೋರಿ ಕನ್ನಡಕ್ಕೆ:ರುಕ್ಮಿಣಿ ನಾಗಣ್ಣವರ ಕಂಗಳಲ್ಲಿ ನೀರು ತುಟಿಗಳಲ್ಲಿ ಕಿಡಿಯನ್ನು ಇರಿಸಿಬದುಕ ಮಾಡಬೇಕೆಂದರೆ ಯೋಜನೆಗಳು ಹಲವು ಇರಿಸಿ ಕಲ್ಲುಮುಳ್ಳುಗಳದೇ ದಾರಿಯಲಿ ಗುರಿ ಏನೂ ದೊಡ್ಡದಲ್ಲಕೂಗಿ ಕರೆಯುತಿದೆ ದಾರಿ ಪಯಣ ಜಾರಿ ಇರಿಸಿ ಒಂದೇ ನದಿಗೆ ಎರಡು ದಡಗಳು ಸ್ನೇಹಿತರೆಬದುಕಿನೊಂದಿಗೆ ಸ್ನೇಹ ಸಾವಿನೊಂದಿಗೆ ಸಖ್ಯ ಇರಿಸಿ ಬಂದು ಹೋಗುವ ಕ್ಷಣಗಳು ಉಸುರುತಿವೆ ಕಿವಿಯಲ್ಲಿಏನೋ ಘಟಿಸುವುದಿದೆ ಎಲ್ಲ ತಯಾರಿ ಇರಿಸಿ ಜರೂರಿ ಇದೆ ಕಣ್ಣುಗಳಲಿ ಕಲ್ಪನೆ ಇರಿಸುವುದುನಿದ್ದೆ ಇರಿಸದಿದ್ದರೂ ಕನಸೊಂದಿಗೆ ಗೆಳೆತನ ಇರಿಸಿ ಬೀಸುವ ಗಾಳಿ ಹೊತ್ತಯ್ಯದಿರಲಿ […]

ನ್ಯಾಯಕ್ಕಾಗಿ ಕೂಗು

ಕವಿತೆ ನ್ಯಾಯಕ್ಕಾಗಿ ಕೂಗು ನೂತನ ದೋಶೆಟ್ಟಿ ಕೈ ಎತ್ತಿ ಜೈಕಾರ ಹಾಕಿದಾಗಎಲ್ಲರೂ ಒಂದೆಂಬ ಅನುಭವಬಾಯಿಸೋತ ಬಿಡುವಿನಲ್ಲಿಸಣ್ಣ ಗುಸುಗುಸು ಪತ್ರಿಕೆಯವರೆದುರುಪೋಸು ಕೊಟ್ಟವರುಬಾರದ ಭಾಷೆಯಲ್ಲಿ ತೊದಲಿದವರುಮತ್ತೆ ಚುರುಕು ಕ್ಯಾಮರಾಕ್ಕಾಗಿಕಾಲರ್ ಎಳೆದುಕೊಂಡರುನೆರಿಗೆ ಸರಿ ಮಾಡಿಕೊಂಡರುಮಿಂಚಿನ ಸಂಚಾರ ಬೇಡಿಕೆಗಳು ಉರುಹೊಡೆಯಲುಅಲ್ಲಲ್ಲಿ ಚದುರಿದವರುಹಣುಕಿದರುಒಂದಾದರು ದಂಡು, ಮೆರವಣಿಗೆಗಳೆಲ್ಲಮುಗಿದಾಗಜಾತಿ- ಮಾತು, ಊರು- ಕೇರಿಗಳಗುಂಪು ಒಡೆದು ಒಂದಾಗಿ ಬಾಳಿದಇತಿಹಾಸದ ಪುಟಗಳಲಿಪುನರಾವರ್ತನೆಯ ಮಂತ್ರಅನಿವಾರ್ಯ ವರ್ಷಗಳ ಹೊಸ್ತಿಲಲ್ಲಿಮೊರೆಯಿಡುತ್ತಿರುವ ನ್ಯಾಯ. ( 2009ರಲ್ಲಿ ಬರೆದದ್ದು. 73 ನೇ ಸ್ವಾತಂತ್ರ್ಯ ದಿನದ ಹೊಸ್ತಿಲಲ್ಲಿ ನಿಂತು ನೋಡಿದಾಗ ಕಾಲ ಅಲ್ಲಿಯೇ ನಿಂತಿದೆಯೇ ಎಂಬ ಅನುಮಾನ.) ***********************************

ಅಪ್ಪನಿಗೆ ಹೆಚ್ಚೇನು ಆಸೆಗಳಿರಲಿಲ್ಲ’

ಕವಿತ ಅಪ್ಪನಿಗೆ ಹೆಚ್ಚೇನು ಆಸೆಗಳಿರಲಿಲ್ಲ ವಸುಂಧರಾ ಕದಲೂರು ನನ್ನಪ್ಪನಿಗೆ ಹೆಚ್ಚೇನೂ ಆಸೆಗಳಿರಲಿಲ್ಲನಮ್ಮ ಓದಿನ ಕುರಿತೂ…ಹೆಣ್ಣು ಮಕ್ಕಳಿಗೆ ಆದಷ್ಟು ಬೇಗಮದುವೆಯಾದರೆ ಸಾಕು. ಒಳ್ಳೆಯಹುಡುಗ ತನಗೆ ಅಳಿಯನಾಗಿ,ಮಕ್ಕಳಿಗೆ ಬಲವಾದ ಗಂಡನಾಗಿಒಟ್ಟಾರೆ ಚೆಂದಾಗಿ ಬದುಕಿದರೆ ಸಾಕು. ಇಷ್ಟೇ… ನನ್ನಪ್ಪ ಎಂದೂ ಯಾವಹೆಣ್ಣುಮಕ್ಕಳನ್ನು ಹೀಗಳೆಯಲಿಲ್ಲ,ನಿಮ್ಮ ಕೈಲಾಗದ ಕೆಲಸವಿದೆಂದುಹೇಳಿ ನಮ್ಮ ಚೈತನ್ಯವನೆಂದೂಉಡುಗಿಸಲಿಲ್ಲ.ನಾವೊಂದು ಹೊರೆಯೆಂದುನಡೆ ನುಡಿಯಲೆಂದೂ ತೋರಲಿಲ್ಲ.ಗಂಡುಮಕ್ಕಳೊಡನೆ ಹೋಲಿಸಿಜರಿಯಲಿಲ್ಲ. ಜರಿಯ ಲಂಗ ಹೊಲೆಸಿಕೊಡುವುದ ಮರೆಯಲಿಲ್ಲ. ನನ್ನಪ್ಪನಿಗೆಂದೂ ಅಪಾರಆಸ್ತಿ ಗಳಿಸುವ ಹುಕಿ ಹುಟ್ಟಿರಲಿಲ್ಲ.ಬಂಧುಜನ ಪ್ರೀತಿ; ಗಳಿಸಿದ ಸ್ನೇಹವಿಶ್ವಾಸಗಳನು ಜೋಪಾನ- ಜತನಮಾಡುವ ರೀತಿ ಇಷ್ಟೇ ಆತ ಕೊನೆಗೆನಮಗಾಗಿ ಗಳಿಸಿಟ್ಟ […]

ಏಕಾಂತವೆಂಬ ಹಿತ

ಕವಿತೆ ಏಕಾಂತವೆಂಬ ಹಿತ ಶ್ರೀದೇವಿ ಕೆರೆಮನೆ ಇಷ್ಟಿಷ್ಟೇ ದೂರವಾಗುವನಿನ್ನ ನೋಡಿಯೂ ನೋಡಲಾಗದಂತೆಒಳಗೊಳಗೇ ನವೆಯುತ್ತಿದ್ದೇನೆಹೇಳಿಯೂ ಹೇಳಲಾಗದಒಂಟಿತನವೆಂಬ ಕೀವಾದ ಗಾಯಕ್ಕೀಗಮಾಯಲಾಗದ ಕಾಲಮುಲಾಮು ಸವರಲು ನಿರಾಕರಿಸುತ್ತಿದೆಅಸಹಾಯಕಳಾಗಿ ನೋಡುತ್ತಿದ್ದೇನೆನಮ್ಮಿಬ್ಬರ ನಡುವೆಕ್ಷಣ ಕ್ಷಣಕ್ಕೂ ಹೆಚ್ಚುತ್ತಿರುವ ಅಂತರವನ್ನು ಎಂದೋ ಆಡುವ ಎರಡೇ ಎರಡುಮಾತಿನ ನಡುವೆಯೇಒತ್ತರಿಸಿ ಬರುವ ಯಾವುದೋ ರಾಜಕಾರ್ಯಮಾತು ಹಠಾತ್ತನೆ ನಿಂತುಒಂದು ನಿಮಿಷ ಎಂದು ಹೊರಟ ನಿನಗೆಕಾಲ ಗಳಿಗೆಗಳ ಹಂಗಿಲ್ಲಕಾದು ಕುಳಿತ ನನಗೆ ಮಾತ್ರಪ್ರತಿ ಕ್ಷಣವೂ ವರುಷವಾಗುತ್ತಿರ ಭಯ ಮತ್ತೆ ಮಾತನಾಡುವ ಸಮಯಕ್ಕಾಗಿನಾನು ಜಾತಕಪಕ್ಷಿಯಾಗಿ ಕಾಯುತ್ತಿದ್ದರೆಎಂದೂ ಮುಗಿಯದ ನಿನ್ನ ಕೆಲಸಗಳುಈ ಜನ್ಮದಲ್ಲಿ ಮಾತನಾಡಲು ಬಿಡದಂತೆಸದಾ ಸತಾಯಿಸುತ್ತವೆ […]

ಷರತ್ತು

ಕವಿತೆ ಷರತ್ತು ಮಾಂತೇಶ ಬಂಜೇನಹಳ್ಳಿ ಈಗ ಮಳೆ ಬಿಟ್ಟಿದೆ.ಅವಳ ನೆನಪುಗಳ ಹದವಾಗಿ,ಎದೆಯ ಬಾಣಲೆಯೊಳಗೆ,ಕಮ್ಮಗೆ ಹುರಿಯುವ ಸಮಯ.. ಚಿಟಪಟವೆಂದು ಒಂದಷ್ಟು,ಜೋಳದ ಕಾಳುಗಳಂತೆನೆನಪ ಬಿಸಿಗೆ ಸಿಡಿದಾವು.ಸಾವಧಾನಕ್ಕಾಗಿ ನೆನೆವ ಉರಿ ತಗ್ಗಿಸುವುದು,ಹೃದ್ಯೋಧರ್ಮ.. ನಿಗವಿಡುತ್ತೇನೆ. ಮಳೆಗೂ ಗೊತ್ತು ಧೋ!!ಎಂದುಒಂದೇ ಸಮನೆ ಸುರಿದರೆ,ಒಬ್ಬ ಪ್ರೇಮಿ ಅವಳಿಗಾಗಿ ಪರಿತಪಿಸುವುದಿಲ್ಲವೆಂದೂ,ನೆನಪಿಸುವುದಕ್ಕೆ ನೆಲ ರಾಚುವಹನಿಗಳ ಕರತಾಡನ ಸುಖಾ ಸುಮ್ಮನೆ ಅಡ್ಡಿಯಾದೀತೆಂದು. ಗರಕ್ಕನೆ ನಿಂತು ಬಿಟ್ಟರೆ ಅಬ್ಬಬ್ಬಾ!ಹುಬ್ಬೆ ಮಳೆ ಸುರಿದು ಸಮ ರಾತ್ರಿಗೆ,ಮಲಗಿದ ಬೆಳಗಿಗೆ ಮೃದು ನೆಲದಲ್ಲಿ,ಮನೋಸೆಳೆವ ಅಣಬೆಗಳಂತೆ ಉಬ್ಬುವಆಕೆಯ ನೆನಪುಗಳು ದಾಂಗುಡಿಯಾಗುತ್ತವೆ. ಮುಂದಿನದ್ದು ನಿರತ ಅನುಭವಿಸುವ,ನಾನು ಮಾತ್ರ ನನ್ನೊಳಗೆ,ಆಕೆಯ […]

ಕೈ ಚೀಲ

ಕೈ ಚೀಲ ಬಿ.ಶ್ರೀನಿವಾಸ ಆ ಹುಡುಗನ ಹೆಸರಿಡಿದು ಯಾರೂ ಕರೆಯುವುದಿಲ್ಲ.ಎಲ್ಲರೂ ಕರೆಯುವುದೇ ‘ಕೈಚೀಲ’ ಎಂದೆ.ತನ್ನ ಕುಂಟುಗಾಲಿನಲಿ ಹೋಗುವಾಗ ಯಾರಾದರೂ “ಕೈ ಚೀಲಾ…”ಕೂಗಿದರೆ ಸಾಕು ತಕ್ಷಣ ನೋಡುತ್ತಾನೆ.ಅವನಿಗೆ ಬಹಳವೆಂದರೆ ಐದೋ ಆರೋ ವರುಷವಿದ್ದೀತು. ಅವ್ವನ ಬಿಟ್ಟರೆ ಅವನಿಗೆ ಬೇರೆ ಜಗತ್ತು ಇಲ್ಲ. ಬಣ್ಣದ ಸಂಜೆಗಳೆಂದರೆ ಅವನಿಗಿಷ್ಟ. ಯಾಕೆಂದರೆ ಅವನವ್ವ ಸಂಜೆಯಾದಂತೆಲ್ಲ ಸುಂದರವಾಗಿ ಕಾಣುವಂತೆ ಅಲಂಕರಿಸಿಕೊಳ್ಳುತ್ತಾಳೆ. ಆ ಪಾಂಡ್ಸ ಪೌಡರಿನ ಪರಿಮಳ ಸಂಜೆಗಳನ್ನು ಅರಳಿಸುತ್ತದೆ. ಸಲೀಸಾಗಿ ಅವ್ವನ ಕೈ ಹಿಡಿದು ನಡೆಯುತ್ತಾನೆ. ಅಷ್ಟರಲ್ಲಿ ಯಾರಾದರೂ ಕೈ..ಚೀ..ಲಾ..!ಪಿಸುಗುಟ್ಟಿದರೂ ಸಾಕು ಅವನು ಅಲ್ಲಿಗೆ […]

Back To Top