Category: ಕಾವ್ಯಯಾನ

ಕಾವ್ಯಯಾನ

ನಿನಗಿಂತ ದೊಡ್ಡವರು…..

ಕವಿತೆ ನಿನಗಿಂತ ದೊಡ್ಡವರು….. ಯಮುನಾ.ಕಂಬಾರ ತುಟಿ ಬಿಚ್ಚದೇ ಬಾಯ್ಮುಚ್ಚಿಕೊಂಡುತೆಪ್ಪಗೆ ಮೌನದಲಿ,ಒಮ್ಮೆ ದುಃಖ ಒಮ್ಮೆ ಸುಖ ಅಟ್ಟಿಸಿಕೊಂಡುಕಾಲ ಹಾಕುವ ಕಾರಣಿಕಳೇ….!!. ಕ್ರೌರ್ಯ , ಕೋಪ ತಾಪಗಳಗರ್ಭದಲ್ಲಿ ಅಡಗಿ ಕುದಿಗೊಂಡರೂಮತ್ತೆ ಮತ್ತೆ ಅದೇ ಮೌನಅದೇ ಶಾಂತಿ ,ಅದೇ ಆ ಸುರಿಯುವ ಕಾಂತಿ !! ನಿನ್ನ ಸಹನೆಗೆ ತಾಳ್ಮೆಗೆಇಲ್ಲ – ಸಾಟಿಇತಿಹಾಸದ ಕತ್ತಲಲ್ಲಿ – ಕರಗಿವೆಸಾವಿರ ಸಾವಿರ ಮರೆಯದ ಮಾಣಿಕ್ಯದ ದೀಪ್ತಿ !! ಆಗಲೂ ಈಗಲೂ ಧುಮ್ಮಿಕ್ಕಿ ಪುಟಿಯುತಿವೆ – ಸಾಯದ ಅಮರ ಅಕ್ಷರಗಳು:” ದುರಾಸೆ ದುಃಖಕ್ಕೆ ಮೂಲಅಹಿಂಸೆ ಬದುಕಿನಸೂತ್ರಕಾಯಕವೇ ಕೈಲಾಸ […]

ಬೆಳಗಬೇಕಾದರೆ..!

ಕವಿತೆ ಬೆಳಗಬೇಕಾದರೆ..! ಸುಮನಸ್ವಿನಿ. ಎಂ ನೋವ ನುಂಗಲು ಹಿಂಜರಿಯದೇಘರ್ಷಿಸಿಕೊಳ್ಳಬೇಕುಬೆಳಕ ಹೊತ್ತಿಸಬೇಕಾದರೆ… ಸುಟ್ಟುಕೊಳ್ಳುವ ಅಂಜಿಕೆಯಿಲ್ಲದೇನಿರ್ಭಯ ಗೀರಿಕೊಳ್ಳಬೇಕುಬೆಳಗಬೇಕಾದರೆ… ಕರಗಿಹೋಗಲು ಕಳವಳಗೊಳದೇಪ್ರಾಂಜಲ ದಹಿಸಬೇಕುಪ್ರಜ್ವಲಿಸಬೇಕಾದರೆ… ಬೂದಿಯಾಗಲು ಹೆದರದೇಹೊತ್ತಿ ಉರಿಯಬೇಕುಬೆಳಕಾಗಬೇಕಾದರೆ… ಮಾಯವಾಗೋ ಭಯವ ಮೀರಿನಿರಂತರ ಧಗಧಗಿಸಬೇಕುಶಾಶ್ವತ ಮಿನಗುತಿರಬೇಕಾದರೆ… ******************************************

ಮಾರುವೇಷ

ಕವಿತೆ ಮಾರುವೇಷ ಪ್ರೊ.  ಚಂದ್ರಶೇಖರ ಹೆಗಡೆ ಪಾತಾಳದಿಂದೆದ್ದು ಭೋಂಕನೆಬೇಟೆಯಾಡುವ ವಿಧಿಯೇಶ್ವಾನದಲ್ಲಡಗಿ ಹೊಟ್ಟೆ ಹೊರೆವಹಂಗಿನರಮನೆಯ ವಾಸವೇಕೆ ?ವಾಹನದೊಳಗಿಳಿದು ಬಲಿ ಬೇಡುವಭಿಕ್ಷಾಟನೆಯ ಡಾಂಭಿಕತೆಯೇಕೆ ?ಹೃದಯದೊಳಪೊಕ್ಕು ನಿಲ್ಲಿಸುವಮೋಸದ ಮಾರುವೇಷವೇಕೆ ? ಹೊರಬಂದು ಎದುರಾಗಿಬಿಡು ಒಮ್ಮೆನಿಜರೂಪ ಸತ್ಯ ನಾಮವ ತಳೆದುಕಣ್ತುಂಬಿಕೊಳ್ಳಲಿ ಜಗವು ಮೊರೆದುಪ್ರಾರ್ಥಿಸಿದಣಿವಿಲ್ಲದ ಕಾಯಕಕೆ ಶರಣುಶರಣೆಂದೆನುತ!ಎದೆಯೊಳಗಿನ ದಯೆ ಕರುಣೆಗಳಹುಡುಕಿ ಕೊರಗುತ ಯಾರಿಗೂ ಜಗ್ಗದ ಭೀಮಬಲವೆಲ್ಲಿಯದು ?ವಶ ಮಾಡಿಕೊಳ್ಳುವ ಅವಲೋಕಿನಿಯೆಲ್ಲಿಯದು ?ಬಿಡುವ ಬಾಣದ ತುದಿಗೆಎಂದೂ ನೀಗದ ಹಸಿವಿನೊಡಲುಎಲ್ಲಿ ಬರಿದಾಗುವುದೋ ಇಂದುಯಾವ ತಾಯಿಯ ಮಡಿಲು ಪಯಣ ಹೊರಟವರ ಮನದಲ್ಲೊಂದುನಿತ್ಯ ಅಳುಕುಯಾರಿಗೆ ಗೊತ್ತು ನಿನ್ನೊಳಗಿನವಂಚನೆಯ ಹುಳುಕುಕಾಣದ ಲೋಕದೊಳಗೇಕೆ […]

ಶಾಯರಿ

ಶಾಯರಿ ಭಾರತಿ ರವೀಂದ್ರ ಕಾಡಿಗೆ ಕಣ್ಣುಗಳನ್ನಮುದ್ದಿಸಲಿ ಹ್ಯಾಗೆ ಹೇಳು, ನನ್ನೊಡತಿಕರಿ ಮೋಡ ಕೋಪಿಸಿಕೊಂಡುಸುರದಾವ ಪ್ರವಾಹ ಬಂದಾಂಗ. ಬಂದರ ಬರಲೇಳುಸಾವಿರ ಸಂಕಟಗಳಸುರಿ ಮಳಿನಿನ್ನ ಪಿರೂತಿ ಸಾಥ್ಇರುವಾಗ ನಂಗ್ಯಾಕೆ ಭೀತಿ ******************************************

ನೀವು ಎದೆಗೆ ಗುಂಡು ಹೊಡೆದರೆ.

ಕವಿತೆ ನೀವು ಎದೆಗೆ ಗುಂಡು ಹೊಡೆದರೆ ಅಲ್ಲಾಗಿರಿರಾಜ್ ಕನಕಗಿರಿ ನೀವು ಜಲ ಫಿರಂಗಿಸಿಡಿಸಬಹುದು ನಮ್ಮ ಮೈ ಮೇಲೆ.ನಾವು ಮುಂಗಾರು ಮಳೆಯ ಆರ್ಭಟವೆಂದು ಭಾವಿಸುತ್ತೇವೆ.ಏಕೆಂದರೆ ನೀರು ನಮ್ಮ ವೈರಿಯಲ್ಲ. ನೀವು ಲಾಠಿ ಬೂಟುಗಳಿಂದದಾಳಿ ಮಾಡಬಹುದು ನಮ್ಮ ಮೈ ಮೇಲೆ.ನಾವು ನಮ್ಮ ಅನ್ನ ಉಂಡ ಮಕ್ಕಳ ಸಲಿಗೆ,ಪ್ರೀತಿಯೆಂದು ಭಾವಿಸುತ್ತೇವೆ.ಏಕೆಂದರೆ ಮಕ್ಕಳು ನಮ್ಮ ವೈರಿಗಳಲ್ಲ. ನೀವು ಅಶ್ರುವಾಯು ಸಿಡಿಸಿಕಣ್ಣು ಕತ್ತಲು ಮಾಡಬಹುದು ನಮ್ಮ ಕನಸುಗಳ ಮೇಲೆ.ನಾವು ಮಂಜುಕವಿದ ವಾತಾವರಣವೆಂದು ಭಾವಿಸುತ್ತೇವೆ.ಏಕೆಂದರೆ ಪ್ರಕೃತಿ ಎಂದೂ ನಮ್ಮ ವೈರಿಯಲ್ಲ. ಆದರೆ….. ಆದರೆನೀವು ದಲ್ಲಾಳಿಗಳ ಮಾತು […]

ಮೌನದಲಿ ಕವಿತೆಯಾದವಳು

ಕವಿತೆ ಮೌನದಲಿ ಕವಿತೆಯಾದವಳು ವಿದ್ಯಾಶ್ರೀ ಅಡೂರ್ ಕವಿತೆಯಾದಳು ಆಕೆ ತಿಳಿದವರು ತಿಳಿದ ತರಹುಡುಕ ಹೋಗಲು ಬಗೆಯ ಬೇಗೆ ಬೆಂಬತ್ತಿತುಟಿತುದಿಯ ಕಿರುನಗೆಯ ಅರಿತವನ ಮನದ ಸ್ಥರಜಿಗಿವ ಜಿಂಕೆಯಂತೆ ಕವನವನ್ನು ಬಿತ್ತಿ ಹಣೆ ಮೇಲೆ ಆಕೆಯ ಗೆರೆಗಳನು ಕಂಡಾತಬರೆದಿಹನು ಪುಟಪುಟದ ಸಾಲುಗಳ ಹೆಚ್ಚಿತನ್ನನ್ನೇ ಬಣ್ಣಿಪನು, ಬಂದಿಹೆನು ತಾನೆಂದುಆಕೆಯ ಮನದೊಳಗೆ ದೀಪವನು ಹಚ್ಚಿ ಕಣ್ಣಂಚ ಹನಿಗಳನು ಮುತ್ತಂತೆ ಪೋಣಿಸುತರಂಗುಬಳಿದು ಅದಕೆ ಕಟ್ಟಿಹನು ಬೆಲೆಯಹಾದಿಬೀದಿಯ ಜನರು ಕೊಳ್ಳುವ ಸರಕಾಯ್ತುಅಳಿಸದೇ ಹೋಯ್ತವಳ ಕಣ್ಣೀರ ಸೆಲೆಯ ಮಾತಿನ ಪೇಟೆಯಲಿ ಬೆಲೆಯಿಲ್ಲ ಮೌನಕ್ಕೆಕುಗ್ಗಿಹಳು ಸಾಗರದ ಬಿಂದುವಾಗಿಮಾತಿರದ ಮೌನದಲಿ […]

ಹಾಯ್ಕುಗಳು

ಹಾಯ್ಕುಗಳು ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಗಹಗಹಿಸಿದೆನರನರವು ನಿತ್ರಾಣವೈಧ್ಯನ ಬಾಣ ಹಾಳಾದ ಗೋರಿಕೂಗಿ ಕರೆದಿದೆ ಕವಿಯಕಾವ್ಯ ಗೀಚಲು. ಗೋರಿಯ ಮೇಲೆಕೊನೆಯ ದಿನ-ಹಚ್ಚಿದಕಣ್ಣೀರ ದೀಪ. ಹಸಿದ ಹೊಟ್ಟೆಅವ್ವ-ಕಾವಿನ ಜೀವತುಂಬಿದೊಲವು. ನಿದ್ರೆಯಲೆದ್ದುರುದ್ರ ಲೀಲೆ ಕುಣಿತಕಾಂಚಣ ರಾಣಿ ಗಾಳಿಯ ಗುಟ್ಟುಬದುಕಿನಡಿ ಹೇಡಿಜೊಳ್ಳಿನ ಸುಳ್ಳು ಹೊನ್ನ ಬಳ್ಳಿಹೊತ್ತ ಹಾದಿಯ ಬುತ್ತಿಕನ್ನಡ ಪದ. ಒಂದೇ ‘ಎನಲು’ಗುಡಿ ಚರ್ಚು ಮಸೀದಿನಲಿವು ನಾಡು. ಎಳೆ ಹಸುಳೆತೊದಲು ನುಡಿದವುಮಾಗೀ-ಚಳಿಗೆ ಶಿಶಿರ ಋತುಭೂದೇವಿ-ಹೆಡಿಗೆಹುಗ್ಗಿ ಹೋಳಿಗೆ. ಮುಗುದೆ ‘ಒಲ್ಲೆ’ಮೂಕ ಮಾತಿನ ಎದಿಗೆನಲ್ಲನುರಿಗಾವು ಎಲೆಲೆ-ಬಾಳುಹಿತ ಮಿತಕೆ ಸೋಲುನೆಲೆ-ನೆರಳು ಕಾಗೆ ಗೂಗೆ ಬಾವ್ಲಿಬೇತಾಳ-ತಾಳಮೇಳರಾಜಕೀಯ. ಒಡಲೊಳಗಿದೆಕೊಳೆತನಾರು ಬೆಳೆಕಲ್ಮಶ […]

ಕುಸುಮಾಂಜಲಿ

ಕವಿತೆ ಕುಸುಮಾಂಜಲಿ ಅಭಿಜ್ಞಾ ಪಿ ಎಮ್ ಗೌಡ ಕುಸುಮವು ನಗುತಿರೆನಸುಕಿನ ವೇಳೆಯುಮುಸುಕನು ತೆರೆಯುತ ನಲಿಯುತಿದೆಕಸವರ ವರ್ಣದಿಜಸದಲಿ ಬೀಗುತರಸಮಯ ಸೃಷ್ಟಿಸಿ ಜೀಕುತಿದೆ|| ಕುಹಕವ ಕೇಳದೆಕಹಿಯನು ಮರೆಯುತಮಹಿಯಲಿ ಹಾಸವ ಚೆಲ್ಲುತಿದೆಸಹನೆಯ ದಳವದುಸಹಿಸುತ ಬಿಸಿಲನುಬಹಳಾಕರ್ಷಣೆ ಗಳಿಸುತಿದೆ|| ಶುದ್ಧತೆ ಭಾವವುಬದ್ದತೆಯಿಂದಲೆಸಿದ್ಧತೆ ಹೊಂದುತ ಪಸರಿಸಿದೆಮುದ್ದಿನ ಹೂವಿದುಮದ್ದಲು ಮುಂದಿದೆಸದ್ದನು ಮಾಡದೆ ನಗುತಲಿದೆ|| ಭ್ರಾಂತಿಯ ತೊಲಗಿಸಿಶಾಂತಿಯ ಹರಡುವಕಾಂತಿಯು ದೇವರ ಮುಡಿಯಲ್ಲಿಕಾಂತನು ಕೊಟ್ಟಿಹಕಾಂತೆಗೆ ಸುಮವನುಕಾಂತಿಯು ಗುಂದದೆ ಹೊಳೆಯುತಿದೆ|| ನೋಡುವ ಕಣ್ಣಿಗೆಮಾಡಿದೆ ಮೋಡಿಯಕಾಡುತ ನಿತ್ಯವು ಕಚಗುಳಿಯಬೇಡುವ ಮನಸಿಗೆಕೇಡನು ಬಯಸದೆಬಾಡುವ ನಿರ್ಮಲ ಕುಸುಮವಿದು|| **********************************************

ಹೈಕುಗಳು

ಹೈಕುಗಳು ಕೆ.ಸುನಂದಾ. ಬಾನಲ್ಲಿ ನಕ್ಕಶಶಿ ; ಕಂಡು ತಂಪಾಯ್ತುನೊಂದ ಮನಕ್ಕೆ* ತಳಮಳವತಾಳೆನಾ ; ಕೇಳು ಸಖಿಯಾರಿ ಸುಂದರಿ* ಅಡವಿಯಲ್ಲಿಬಿರಿದ ಮಲ್ಲೆ ಕಾಯ್ವೆನೀ ಯಾರಿಗಿಲ್ಲಿ* ವೃಕ್ಷಗಳಲ್ಲಿಸಾಕ್ಷಾತ್ ದೇವನಿಹನುಎಲ್ಲರ ಭಾಗ್ಯ * ಕಾಣೋ ಕಣ್ಣಿಗೆಸಂಭ್ರಮ ; ಈ ನಿಸರ್ಗಬೇಕು ಜೀವಿಗೆ* ಸೃಷ್ಟಿಯೇ ದೈವತಿಳಿದಂತೆ ಇರುವನಮ್ಮಂತೆ ಅವ* ಪ್ರೀತಿಯ ಗೂಡುಅನುಭವಿಸಿ ಹಾಡುಎನಿಲ್ಲ ನೋಡು ************************************

ಜೀವನ

ಕವಿತೆ ಜೀವನ ಭಾರತಿ ರವೀಂದ್ರ ನೋವು ನಲಿವುಗಳನೆರಳು ಬೆಳಕಿನ ಜೋಕಾಲಿ ಈ ಜೀವನ. ಹುಣ್ಣಿಮೆಯ ಕಂಡುಉಕ್ಕಿ ಬರುವ ಸಾಗರ ದಷ್ಟೇ ಅಗಾಧ ಈ ಜೀವನ. ಸುರಿಯೋ ಸೋನೆಗೆಹೆಜ್ಜೆ ಹಾಕೋ ನವಿಲಿನಕಾಲ್ಗೆಜ್ಜೆಯ ದನಿಯ ಹಾಗೆಸದ್ದೇ ಇಲ್ಲದ ಹೆಜ್ಜೆಯಸಂಗೀತ ದಂತೆ ಈ ಜೀವನ. ಬಡತನದ ಬೇಗೆ ಇರಲಿಸಿರಿತನದ ಸೊಬಗಿರಲಿಪ್ರೀತಿಯ ಹೊನಲಾಗಲಿಈ ಜೀವನ. ಸಂತೃಪ್ತಿಯ ಮನಕೆಸಿರಿತನದ ಸೋಗು ಇರದು ಒಲವೇ ನಲಿವುಈ ಜೀವನ **********************************

Back To Top