Category: ಕಾವ್ಯಯಾನ

ಕಾವ್ಯಯಾನ

ಗಜಲ್

ಗಜಲ್ ನಯನ. ಜಿ‌. ಎಸ್ ನೋವುಗಳ ಕಾವಿನಲಿ ಬೆಂದು ಬಳಲದಿರು ಕರೆಯುತಿದೆ ಬಾಳಿನ ರಹದಾರಿವ್ಯಥೆಗಳೊಳು ಸಿಲುಕುತ ನಿತ್ಯ ಕುಗ್ಗದಿರು ಆದರಿಸುತಿದೆ ಬಾಳಿನ ರಹದಾರಿ ! ಉಳಿವು ಅಳಿವುಗಳು ಸೃಷ್ಟಿಯ ನಿಯಮ ಅರಿತು ಬದುಕು ಉತ್ಸಾಹದಿನಿರಾಸೆಗಳ ಗುಂಗಿನಲಿ ಮುಳುಗದಿರು ಸೆಳೆಯುತಿದೆ ಬಾಳಿನ ರಹದಾರಿ ! ಎಡೆಬಿಡದೆ ಸುರಿಸಿದ ಶ್ರಮದ ಬೆವರನು ಹಾಳು ಗೆಡವದಿರು ಮನವೇಪ್ರತಿಫಲವು ಇರಲು ನೊಂದು ದೂರ ತಳ್ಳದಿರು ಸಾಗುತಿದೆ ಬಾಳಿನ ರಹದಾರಿ ! ಬುದ್ಧಿ ಜೀವಿಯು ಮನುಜ ಎಂಬುದ ಅರಿತು ತಿಳಿ ಸ್ಥಿತಿ ಗತಿಯ ಸೂಕ್ಷ್ಮದಿಭವಿಷ್ಯವಿದೆ […]

ಗಜಲ್

ಗಜಲ್ ರಾಹುಲ ಮರಳಿ ಮನಸಿನ ಹಿಡಿತ ತಪ್ಪಿ ಭಾವನೆಗಳ ಬರವಾಗಿದೆ‌‌ ಸಾಕಿಹೃದಯದಿ ಭಾವನೆಗಳಿಲ್ಲದೆ ಮನಸಿಗೆ ಘಾಸಿಯಾಗಿದೆ ಸಾಕಿ ಬೇಕು ಬೇಕೆಂಬ ಹಪಹಪಿಯಲಿ ಇದ್ದ ವೈಭವ ಅನುಭವಿಸುತಿಲ್ಲಸಾಕು ಎಂಬ ತೃಪ್ತಿ ಸುಖದ ಸುಪತ್ತಿಗೆಯಾಗಿದೆ ಸಾಕಿ ಅನ್ಯರ ಕಷ್ಟ ನೋಡುತಿರೆ ಕರಳು ಚುರ್ ಎನ್ನುವುದುಎನ್ನ ಹೃದಯ ಕಿವುಚಿದರೂ ಕೇಳವರಿಲ್ಲದಂತಾಗಿದೆ ಸಾಕಿ ಕೊಂಚ ಮದಿರೆ ದೊರೆತರೆ ನಶೆಯಲಿ ಹಾಯಾಗಿರಬಹುದುಮನದ ತುಮುಲಗಳನು ಹೊರಹಾಕಲು ಕಾವ್ಯ ರಚಿಸಬೇಕಾಗಿದೆ ಸಾಕಿ ಪ್ರೀತಿ ಪ್ರೇಮ ಸ್ನೇಹಗಳೆಂಬ ಸಂಬಂಧಗಳನು ಮನ ನಂಬಿದೆಜೀವಕವಿ ನೋವಿಂದ ಬಳಲಿದರೂ ಉಸಿರಾಡುವಂತಾಗಿದೆ ಸಾಕಿ

ಗಝಲ್

ಗಝಲ್ ತೂತು ಬಿದ್ದ ಹಚ್ಚಡದಲ್ಲಿ ಒದ್ದಾಡುತಿದೆದೇವನಿಟ್ಟ ಕನಸುಕಾದ ಹೆಂಚಿನ ರೊಟ್ಟಿಯಂತೆ ಸುಡುತಿದೆದೇವನಿಟ್ಟ ಕನಸು ನಿಗಿನಿಗಿ ಕೆಂಡವಾಗಿ ಮನವು ಕಂಪನೆಕಾಯ್ದು ಹೋಯಿತೇಬನದ ಸುಮದ ಆಸೆಯ ಕಮರಿಸುತಿದೆದೇವನಿಟ್ಟ ಕನಸು ತುತ್ತು ಕೂಳಿಗೂ ನಾನಾ ಬಗೆಯಲಿವೇಷ ತೊಡಿಸಿತೆಢಂಢಂಯೆಂದು ವಾದ್ಯ ಬಾರಿಸುತಿದೆದೇವನಿಟ್ಟ ಕನಸು ಶಾಪಗ್ರಸ್ತ ಅಹಲ್ಯೆಯಂತೆ ಹೃದಯಮುಕ್ತಿ ಬೇಡುತಿದೆಬಡತನದ ಬಾಣಲೆಯಲಿ ಬೇಯುತಿದೆದೇವನಿಟ್ಟ ಕನಸು ಸನ್ಯಾಸಿಯಂತೆ ಸನ್ಮಾರ್ಗ ಅರಸುತಿದೆಅಭಿನವನ ಕಾವ್ಯವಿದೂಷಕನ ತೆರದಿ ಹಾಸ್ಯ ಮಾಡುತಿದೆದೇವನಿಟ್ಟ ಕನಸು ಶಂಕರಾನಂದ ಹೆಬ್ಬಾಳ

ಅನುವಾದಿತ ಅಬಾಬಿಗಳು

ಅನುವಾದ ಸಂಗಾತಿ ಅನುವಾದಿತ ಅಬಾಬಿಗಳು ಆಕರ : ಕಾಲಂ ಸಾಕ್ಷಿಗಾ(ತೆಲುಗು ಅಬಾಬಿಗಳ ಸಂಕಲನ) ಮೂಲ ಲೇಖಕರು : ಷೇಕ್ ಅಬ್ದುಲ್ ಹಕೀಮ್ಕನ್ನಡಾನುವಾದ : ಧನಪಾಲ ನಾಗರಾಜಪ್ಪ ೧೩)ಮನುಷ್ಯ ಮನುಷ್ಯನನ್ನೇ ದ್ವೇಷಿಸುವಂತೆಭೇದಭಾವಗಳನ್ನು ಸೃಷ್ಟಿಸುತ್ತಅಮಾಯಕ ಜನರನ್ನು ಹಿಂಸಿಸುತ್ತಹಕೀಮಾಮೇಕೆಬಣ್ಣದ ಹುಲಿಗಳಾಗಿ ಹೊಂಚುಹಾಕಿದರಲ್ಲಾ! ೧೪)ವೇಷಧಾರಣೆಗಳೇ ಗುರುತುಗಳಾದವೆಮನುಷ್ಯ ಮನುಷ್ಯತ್ವ ಏನಾಯಿತು?ಪಶುವಿಗಾಗಿ ಪರದಾಡುತ್ತಿವೆಯಾ?ಹಕೀಮಾದೇಶದಲ್ಲಿ ಪಶುಗಳು ರಾಜ್ಯವೆ? ೧೫)ದೇಶದಲ್ಲಿ ಕಳ್ಳರು ಹೆಚ್ಚಾಗಿದ್ದಾರೆದೇಗುಲಗಳಲ್ಲಿನ ದೇವರುಗಳೇ ಇವರ ಗುರಿಅಧಿಕಾರಿದಲ್ಲಿ ಹೂ ಇದ್ದರೆ ಇಷ್ಟೇನಾ?ಹಕೀಮಾ

ಬಚ್ಚಿಟ್ಟಿರುವೆ

ಕಾವ್ಯ ಸಂಗಾತಿ ಬಚ್ಚಿಟ್ಟಿರುವೆ ಲಕ್ಷ್ಮಿ ಕೆ ಬಿ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ ಮಳೆ ಚಳಿಗೆನಡುಗದಂತೆಉರಿಬಿಸಿಲಿಗೆ ಒಣಗದಂತೆ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ ಸದಾ ನಗುವಕಾಮನಬಿಲ್ಲಿನ ಬಣ್ಣಮಾಸದಂತೆ ಹೊಳೆವ ನಿನ್ನಕಂಗಳ ಚೆಲುವುಮರೆಯಾಗದಂತೆ ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ ಜಗದ ಬಂಧಮುಗಿಸೋ ಗಳಿಗೆಯಲ್ಲೂಜೊತೆ ನಡೆವಂತೆ ಅಣಿಮಾಡಲು ಬಚ್ಚಿಟ್ಟಿರುವೆನಿನ್ನ ಹೃದಯವನನ್ನ ಹೃದಯದೊಳಗೆ….ಒಲವಿಂದ….

ಉತ್ತರ ಹೇಳು ಸಖ

ಕಾವ್ಯ ಸಂಗಾತಿ ಉತ್ತರ ಹೇಳು ಸಖ ಶಂಕರಾನಂದ ಹೆಬ್ಬಾಳ ನಿಬಿಡಾರಣ್ಯದಲಿಒಬ್ಬಂಟಿ ನಾನುಬೋಳು ಮರದಂತೆ,ನಿಶ್ಚಲ ಭಾವವಿಷಣ್ಣತೆಯಲಿಗೊಣಗುತಿರುವೆ… ಜಾರಿದ ಸಮಯಕ್ಕೂಗೊತ್ತಾಗಲಿಲ್ಲವೆ..?ಉಳಿದ ನೆನಪುಗಳುತೊಗಲು ಬೊಂಬೆಯಂತೆಥೈತಕ ಕುಣಿಯುತ್ತಿವೆ…. ಬೇಗೆಯಲಿ ದಿಗ್ಗನೆದ್ದುಬಂದಂತೆ ಭಾಸವಷ್ಟೆನಿಂತ ಜಾಗ ಕುಸಿದಂತೆಕೊಂಚ ಅಳುಕುಎದ್ದು ಕುಳಿತೆಬುದ್ದನಂತೆಶಾಂತಿಯಿಲ್ಲದೆ… ಈಗ ಹೊರಟಿದ್ದೇನೆಧ್ರುವಕೆ ವಿಮುಖನಾಗಿ“ದಾರಿಯಾವುದಯ್ಯಾವೈಕುಂಠಕೆ ಎಂದು”ದಾಸ ಮಾರ್ಗವನುಹಿಡಿದು,ಸತ್ಯವನರಸಿಮೋಕ್ಷಾಪೇಕ್ಷಿಯಾಗಿಅಲೆವ ಯೋಗಿನಂತೆನಡೆದಿದ್ದೇನೆ ದಿನದಿನಗಳ ಸವೆಸಿಸವೆದ ಚಪ್ಪಲಿಯಾಗಿದ್ದೇನೆ…. ದುಗುಡವಾವರಿಸಿದುಃಖದೊಳು ತೇಲಿಪರಿಹಾರವಿಲ್ಲದಫಲಾನುಭವಿ ನಾನುಉತ್ತರವೆಲ್ಲಿದ ಸಖನನ್ನ ಮನದ ಪ್ರಶ್ನೆಗೆ….?

ಲೇಖನಿ

ಕಾವ್ಯ ಸಂಗಾತಿ ಲೇಖನಿ ಅನಿತಾ ಸಿಕ್ಕಿತೊಂದು ಜಾದೂ ಲೇಖನಿಹಣೆಬರಹ ಅಳಿಸಿ, ಮತ್ತೊಮ್ಮೆ ಬರೆಯಬಹುದಿತ್ತು, ಆ ವಿಧಾತನ ದನಿ ಅಳುಬರಹ ಒರೆಸಿನೋವು, ನಲಿವಾಗಿಸಿ ಬದುಕುಬದಲಾಯಿಸಬೇಕೆಂದಿತುಆಕಾಂಕ್ಷೆಯ ತಾಸು! ಸಿರಿವಂತಿಕೆ, ಬಡತನದ್ವೇಷ, ಪ್ರೀತಿ, ಮೇಲು ಕೀಳುಕಣ್ಮುಂದೆ ಹಾದುಹೋಗುತ್ತಿತ್ತುಅಂತರಾಳದ ಕನಸು! ರವಿವರ್ಮನ ಕುಂಚದ ಬಣ್ಣತುಂಬಿ, ನವಿರಾದ ಎಳೆಗಳಿಗೆರಂಗುರಂಗಿನ ಹೊಸತನಮೂಡಿಸುವ ಹುಮ್ಮಸ್ಸು! ಅವೇನು ಕಠಿಣ ಕಾರ್ಯವಾಗಲಿಲ್ಲಜೀವ, ಜೀವಂತಿಕೆಯ ಒಳಗೆಮಾರ್ಪಾಟಾಗಿತ್ತು ಹಲವು ಮಜಲು! …. ಆಯಸ್ಸು ಮೆಟ್ಟಿಲೊಳಗೆ ಇಳಿಯಲಾಗದೆಸಾವಿನ ಕ್ಷಣ ಮುಂದೂಡಲಾಗದೆ…

Back To Top