Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಬೋಧಿಸತ್ವನೊಂದಿಗೆ ಯಶೋಧರೆ —(ಯಶೋಧರೆಯ ಸ್ವಗತ ) ಲಕ್ಷ್ಮೀ ಪಾಟೀಲ್ ಅರಮನೆಯ ನೆನಪಾಗಿ ಬಂದೆಯಾ ಸಿದ್ಧಾರ್ಥಹೇಳದೆ ಹೋದರೆ ಸಿಗುವುದೇ ಜ್ಞಾನೋದಯ?ನಮಿಸಲಾರೆ ಮಂಡಿಯೂರಿ ನಿನಗೆಲೋಕದ ಗುರುವೆಂದು ನನಗೀಗಲೂ ನೀ ಸಿದ್ಧಾರ್ಥ ಗಾಢ ನಿದ್ದೆಯ ತಡವದೆ ಆ ರಾತ್ರಿ ನೀ ಹೇಳದೆ ಹೋದೆನನ್ನ ಮುಂದಿನ ಕತ್ತಲೆ ಕಳೆದೆ ನಿದ್ರೆ ಜಾರಿಸಿದೆಇಲ್ಲೊಂದು ಜ್ಞಾನೋದಯಕ್ಕೆ !ಮನೆ -ಮನದಾಚೆಗೊಂದು ಮಿಣುಕು ದೀಪ ಉಳಿಸಿದೆಬುದ್ದ ನಿನಗೊಂದು ಕೃತಜ್ಞತೆ ನಾನು ಹೆಂಡತಿಯಾಗಿ ಉಳಿದಿಲ್ಲರಾಹುಲ ಮಗನಾಗಿ ಉಳಿದಿಲ್ಲನಿನ್ನ ಭಿಕ್ಕು ಸಂಘದಲ್ಲಿ ನಾವು ಬಿಕ್ಕುಗಳಲ್ಲಈ ಅರಮನೆಯಲ್ಲಿ ಹುಟ್ಟಿ ಬೆಳೆದ ನೀನೀಗಅರಮನೆಯ ಮುಂದೆ […]

ಕಾವ್ಯಯಾನ

ಮುಖವಾಡಗಳ ಕವಿತೆಗಳು  ಸುಜಾತಾ ರವೀಶ್ ಮುಖವಾಡ ಧರಿಸಿ ಧರಿಸಿ ಬೇಸರವೆನಿಸಿ ತೆಗೆಯಹೋದಳು ಒಂದು ದಿನ  ಎಳೆದರೂ ಇಲ್ಲ ತೊಳೆದರೂ ಇಲ್ಲ  ಚಾಕುವಿನಿಂದ ಕೆತ್ತಿದರೂ ಬರಲಿಲ್ಲ  ಕೊನೆಗೆ ಡಾಕ್ಟರ ಬಳಿ ಹೋದಾಗ ತೆಗೆಯಲಾಗದು ಜೀವಕಪಾಯ ಎಂದರು!  ಗತ್ಯಂತರವಿಲ್ಲ ಮಾಡುವುದೇನು?  ಸಾಯಲು ತೆಗೆದಿಡುವುದಾ ಬದುಕಲು ಹಾಕಿಕೊಳ್ಳುವುದಾ  ತೆಗೆದಿಟ್ಟು  ಸತ್ತು ಬದುಕುವುದಾಹಾಕಿಕೊಂಡು ಬದುಕಿ ಸಾಯುವುದಾನಿರ್ಧರಿಸಲಾಗುತ್ತಿಲ್ಲ ಅವಳಿಗೀಗ ಕಚೇರಿಯ ರಾಜಕಾರಣ ಕೆಲಸದ ಕಸಿವಿಸಿಚಿಟ್ಟೆನಿಸುವ ತಲೆನೋವು ಏನೋ ಒಂದು ಬೇಯಿಸಿಟ್ಟರೆ “ಥೂ..ಉಪ್ಪುಮಯ ಪಲ್ಯ ನನ್ನ ಬೇಗ ಮೇಲೆ ಕಳಿಸಿ ಬಿಡ್ತೀಯಾ “ ಕಟ್ಟಿಕೊಂಡಾಗಿನಿಂದ ಸುರಿಸಿದ ಕಣ್ಣೀರುಉಪ್ಪಾಗಿ ಕ್ಷಾರವಾಗಿದೆ ಇವಳ ಸ್ವಗತ ಮಾತಿಗೇನು ಕಮ್ಮಿ ಇಲ್ಲ ಖಾರಕ್ಕೆ ಮೆಣಸಿನ […]

ಕಾವ್ಯಯಾನ

ಗಝಲ್ ರತ್ನರಾಯ ಮಲ್ಲ ಮನಸು ಮರುಗುತಿದೆ ಗಾಲಿಬ್ಕನಸು ಬಳಲುತಿದೆ ಗಾಲಿಬ್ ಒಂಟಿತನವು ಮನೆ ಮಾಡಿದೆತನುವು ಸೊರಗುತಿದೆ ಗಾಲಿಬ್ ಖಿನ್ನತೆಯು ಗೂಡು ಕಟ್ಟಿದೆಹೃದಯ ನರಳುತಿದೆ ಗಾಲಿಬ್ ಬುದ್ಧಿ ಮಂಕಾಗಿದೆ ಇಂದುಮನವು ಎಡವುತಿದೆ ಗಾಲಿಬ್ ಇರುಳಲಿ ಕುಳಿತಿಹನು ‘ಮಲ್ಲಿ’ಬದುಕು ಕರಗುತಿದೆ ಗಾಲಿಬ್ ********

ಕಾವ್ಯಯಾನ

ಹೂಗನಸು ಬಾಲಕೃಷ್ಣ ದೇವನಮನೆ ಹಿತವಾದ ಹೂಗನಸಲಿಸಂಚಾರಿ ಮಧುರ ಭಾವದುಂಬಿತಿಳಿಯಾದ ಬಾನಲ್ಲಿ ರೆಕ್ಕೆ ಹರಡಿಇಳೆಗೆ ಚಂದ್ರನನೇ ಹೊತ್ತುತಂದಿದೆ ಕತ್ತಲೆ ಮೈಗೆ ಮುಸ್ಸಂಜೆಬಳಿದ ರಂಗು ಹಾಗೇ ಉಳಿದಿದೆತಬ್ಬಿಕೊಳುವ ತೆರೆಯ ಆಟದಂಡೆಯಲಿ ಇನ್ನೂ ಮುಂದುವರಿದಿದೆ… ಎಲೆಯುದುರಿದ ಶಿಶಿರಕೆತಂಗಾಳಿ ಬೀಸಿ ಚೈತ್ರ ಬಂದಿದೆಹೂ ದಳದ ಮೇಲೆಇಬ್ಬನಿ ಸಾಲು ಸಂತೆ ತೆರೆದಿದೆ ಚಿಗುರು ಮೊಗ್ಗಿನ ಮನಸುಪರಿಮಳದ ಪಯಣ ಹೊರಟಿದೆತುಂತುರು ಹನಿಗಳ ಹಿಂಡು ರೆಪ್ಪೆ ತೆರೆದುಹೂಗನಸಿಗೆ ಬೆಳಕು ಹರಿದಿದೆ **********

ಕಾವ್ಯಯಾನ

ಮಳೆಹಾಡು-2 ಆಶಾ ಜಗದೀಶ್ ಚಿಟಪಟ ಸದ್ದಿಗೆ ಸೋಲದ ಗುಂಡಿಗೆಇದೆಯೇ ಹೇಳು ಮಳೆ ಹನಿಯೇ… ಗೂಡಿನೊಳಗೆ ಬಚ್ಚಿಟ್ಟುಕೊಂಡಗುಬ್ಬಿ ಕಣ್ಣ ಬೆರಗು ನೀನುನೆಂದ ಗರಿಗಳ ಹರವಿ ಒಣಗಿಸಿಕೊಳ್ಳುವಾಗಕಾಡಿದ ಕಾಡುವ ನೆನಪು ನೀನುಶಂಕು ಹೊತ್ತ ಹುಳುವಿನಕೋಡು ನೀನು ಅಂಜಿಕೆ ನೀನುನಾಚಿಕೆ ನೀನು ಮೈಯ್ಯ ಪಸೆಯೂ ನೀನು ನೂರು ವರ್ಷವನ್ನೇ ಕ್ಷಣಿಕ ಎಂದುಕೊಳ್ಳುವನಮ್ಮೆದುರು ಮಳೆಗೆ ಹುಟ್ಟಿ ಸಾಯುವಹುಳುಗಳೆಷ್ಟೋ ಎಷ್ಟೊಂದು ಪಾಠಗಳಬಿಟ್ಟು ಹೋಗುತ್ತವೆ!ಮಳೆಯೇ.. ನಿನ್ನದೊಂದು ಸ್ಪರ್ಷಕ್ಕೆಬಲಿಯಾಗಲೇಂದೇ ಹುಟ್ಟು ಪಡೆಯುತ್ತವೆಮತ್ತೆ ಮತ್ತೆ ಹುಟ್ಟಿ ಸಾಯುತ್ತವೆ ನಾವು ಮಳೆಯೊಂದರ ಹನಿಯನ್ನೂಒಳಗಿಟ್ಟುಕೊಳ್ಳಲಾಗದೆ ಕುಡಿದುಹೊರ ಚೆಲ್ಲುತ್ತೇವೆ…ಆರದ ದಾಹವನ್ನು ಪೊರೆಯುತ್ತಾಮಳೆಯ ಕರೆಯುವ […]

ನಾವು ಪ್ರಜ್ವಲಿಸಬೇಕು’

 ‘ ವಸುಂಧರಾ ಕದಲೂರು ಸೂರ್ಯನನ್ನು ನಮ್ಮಿಂದ ಬಚ್ಚಿಟ್ಟಿದ್ದಾರೆ.ನಾವಂತೂ ಕತ್ತಲಲ್ಲಿ ಕೂರುವಜಾಯಮಾನದವರಲ್ಲ, ಹುಡುಕುತ್ತೇವೆಬೆಳಕಿನ ನಾನಾಮೂಲಗಳನ್ನುನಮ್ಮ ಹಾದಿಗಳಲಿ. ನಮಗೆ ಬೆಳಕು ಬೇಕಿದೆ. ಅವರು ಬಂದೂಕು ತೋರುತ್ತಾರೆಉಸಿರು ಬಿಡಬಾರದೆಂದು ನಮಗೆಭಯವೆಂಬುದು ನಿರ್ಧಾರಕವಲ್ಲ ಕಡೆಗೆನಿರ್ಣಾಯಕವೂ ಅಲ್ಲ. ನಮಗೆ ಉತ್ತರ ಬೇಕಿದೆ. ಹಸಿದ ಬದುಕಿಗೆ ಹಳಸಿದ ಮೇಲೋಗರವೇಮೃಷ್ಟಾನ್ನ ಎಂಬ ಆಸೆಹುಟ್ಟಿಸುವಕನ್ನಕೋರರು ನಮ್ಮ ಕನಸಿನ ತಿಜೋರಿಗೆಹುಡುಕಾಡುತ್ತಾರೆ ಸದಾ ಎಚ್ಚರಿರುವನಾವು ಮಲಗುವುದಿಲ್ಲ. ನಮಗೆ ಜಾಗೃತಿ ಬೇಕಿದೆ ನಿಡುಗಾಲದ ಮೌನಕ್ಕೆ ದನಿಯ ತುಂಬುತ್ತಾ, ಅನುಗಾಲದ ನೋವಿಗೆ ಮುಲಾಮು ಹಚ್ಚುತ್ತಾಸಂತೈಸುವ ನಮ್ಮದೇ ಕೈಗಳನ್ನು ನಾವೀಗಬಲಪಡಿಸಬೇಕಿದೆ, ನಮಗೆ ನಿಯತ್ತಿನ ಹೆಗಲು ಬೇಕಿದೆ. […]

ಕಾವ್ಯಯಾನ

ನೆಲ ಮುಗಿಲು ಫಾಲ್ಗುಣ ಗೌಡ ಅಚವೆ. ಗುಡ್ಡಗಳ ಮಲೆಯನ್ನು ತಬ್ಬಿ ಮಲಗಿದೆ ಬಾನುಮುಸುಕಿ ಮುದ್ದಾಡುತಿದೆ ಮಂಜು ತಾನು ಚಂದಿರನ ರಮಿಸುವ ಅಬ್ಬರದ ಕಡಲಂತೆಹಿಮ ಹೊದಿಕೆ ಹೊದೆಯುತಿದೆ ಇಳೆಯು ತಾನು ಸಂಗೀತದಾಲಾಪ ಅನುರಣಿಸುತಿದೆ ಇಲ್ಲಿಕಲೆಯ ಸಾಕ್ಷಾತ್ಕಾರ ಸಾಕಾರವಿಲ್ಲಿ ದಿಗಂತದಾಚೆಯೂ ವ್ಯಾಪಿಸಿದೆ ಅಗಸವುಅಲೆವ ನದಗಳನೇರಿ ತಾನು ಸೂರ್ಯನನು ಮರೆಸುತ್ತ ಏಕಾಂತವ ಸರಿಸಿಲೋಕಾಂತ ಸಾರಿತಿದೆ ಮರವು ತಾನು ಸಾಲು ಬೆಟ್ಟಗಳೆಲ್ಲ ನಿನ್ನಂತೆ ಕಾಣುತಿವೆಪ್ರಕೃತಿಯಂತಿಹ ನಿನ್ನ ತಬ್ಬಿ ಹಿಡಿದುಹೂಮಳೆಯ ದನಿಯಂತ ಹೂನಗೆಯು ನಿನ್ನದುಮಳೆಯುಂಟು ನಿನ್ನ ಹೆಸರಿನೊಳಗು! *******

ಕಾವ್ಯಯಾನ

ಬರೆಯುವ ನಿತ್ರಾಣದ ತಾಣ ನೂರುಲ್ಲಾ ತ್ಯಾಮಗೊಂಡ್ಲು ಬರೆಯುವುದೆಂದರೆ ಬಿಳಿಯಾದ ಪರ್ವತಗಳ ಮೇಲೆಹಾರುವ ಹಕ್ಕಿಗಳ ರುಜುವಲ್ಲಕೊರಳೆತ್ತಿ ಕೂಗುವ ಕೋಗಿಲೆಯ ರೆಕ್ಕೆ ಪುಕ್ಕಗಳೊಳಗಿನ ಹೇನಿನ ಕಡಿತದ ಕುರಿತು ದಾಖಲಿಸುವುದು ಪಾಡು ಹಾಡಾಗುವ ಮಣ್ಣು ಬೀಜ ಗರ್ಭದ ತಪ್ತತೆ ಆವಾಹಿಸುವುದುಹೂವು ಹಣ್ಣು ಪತ್ರ ಮಾಗಿ ಬಾಗಿ ಶಿಶಿರದಲಿ ನಡುಗಿ ಕೊರಗಿಕೊನೆಗೆ ಪತ್ಝಡ್ ನಲಿ ಉದುರುವಅದರ ಕೊನೆಯುಸಿರ ನಾದವನು ಎದೆಗಿಳಿಸುವುದು ಬರಿ ಬೆಳಗು ಬಣ್ಣಗಳ ಪದಗಳೇ ಬೇಕಿಲ್ಲಸೂರ್ಯ ಚಂದ್ರರ ಕವಿತೆಯ ಬನಿಗೆಕರುಳು ಕತ್ತರಿಸುವ ಕರಾಳ ಇರುಳ ಇಳೆಯಲಿನೆಲ-ನೊಸಲು ಪದಗಳ ನಿಟ್ಟುಸಿರುದುಮುಗುಡಬೇಕು ಕಸುಬುದಾರಿಕೆಯಲಿ ಜನಮನದ […]

ಕಾವ್ಯಯಾನ

ನೀ ಬದಲಾದರೆ ನಾಗರಾಜ್ ಹರಪನಹಳ್ಳಿ ಆಕೆ ಎದುರಾದಾಗ ಹೀಗೆಒಂದು ಪ್ರಶ್ನೆ‌ ಎಸೆದಳುನೀ ಬದಲಾದರೆ…. ನಾ‌ ಸ್ವಲ್ಪ ಹೊತ್ತು ಮಾತಾಡಲಿಲ್ಲ ಆಕೆ ಒತ್ತಾಯಿಸಿದಳುತುಟಿಗೆ ಮುತ್ತಿಟ್ಟು ಮತ್ತೆ ಕೇಳಿದಳುನೀ ಬದಲಾದರೆ ?? ದೀರ್ಘ ನಿಟ್ಟುಸಿರು ಬಿಟ್ಟೆಹಾಗೂ ಹೇಳಿದೆ ;ಕನ್ನಡಿಯ ಎದುರು ನಿಂತು ಪ್ರಶ್ನಿಸಿಕೊ ಎಂದೆ ಮತ್ತೆ ಅವಳೆಡೆಗೆ ಹೊರಳಿಕತ್ತು ಬಳಸಿ ,ಹೆರಳಿನ ಹಿಂಬಾಗಕೆ ಮುತ್ತಿಟ್ಟು ಹೇಳಿದೆ;ಸೂರ್ಯನ ಗಮನಿಸುಆಕಾಶ ಗಮನಿಸುಬಯಲ ಓದುವುದ ಕಲಿಸಮುದ್ರದ ಎದುರು ನಿಂತುಅದರ ರೋಧನವ ಅರಿ ಮನುಷ್ಯರ ಬದುಕಿನ‌‌ ದೇಹದ‌ ನಶ್ವರತೆಯ ಅವಲೋಕಿಸು ಹಾಗೂ ….ಹಾಗೂನನ್ನ ಕಣ್ಣುಗಳ ದಿಟ್ಟಿಸುನನ್ನ […]

ಕಾವ್ಯಯಾನ

ಸೋಲೆಂಬ ಸಂತೆಯಲಿ ದೀಪ್ತಿ ಭದ್ರಾವತಿ ಹೀಗೇಕೆ ಬೆನ್ನು ಬಿದ್ದಿದೆ ಸೋಲು ರಚ್ಚೆ ಹಿಡಿದ ಮಗುವಿನಂತೆ ಹೆಜ್ಜೆ ಇಟ್ಟೆಡೆಗೆ ಕಣ್ಣು ನೆಟ್ಟಿದೆ ತಾಳಬಲ್ಲೆನೇ ಸವಾರಿ? ಕಣ್ಣಂಚಲಿ ಮುತ್ತಿಕ್ಕುತ್ತಿದೆ ಸೋನೆ ಸುಡುವ ಹರಳಿನಂತೆ ಒರೆಸಿಕೊಳ್ಳಲೇ ಸುಮ್ಮನೆ? ಎಷ್ಟೊಂದು ಸಂಕಟದ ಸಾಲಿದೆ ಸೋಲೆಂಬ ಮೂಟೆಯೊಳಗೆ ನಟ್ಟ ನಡು ಬಯಲಿನಲಿ ಒಂಟಿ ಮತ್ತು ಒಂಟಿ ಮಾತ್ರ ಹರಿಯಬಲ್ಲದೇ ಹರಿದಾರಿ? ನಡೆಯುತ್ತದೆಯೇ ದಿಕ್ಕು ಮರೆತ ನೌಕೆ? ಸುತ್ತ ಹತ್ತೂರಿಂದ ಬಂದ ಪುಂಡ ಗಾಳಿ ಹೊತ್ತೊಯ್ದು ಬಿಡುವುದೇ ನೆಟ್ಟ ಹಗಲಿನ ಕಂಪು? ಯಾವ ದಾರಿಯ ಕೈ […]

Back To Top