Category: ಕಾವ್ಯಯಾನ

ಕಾವ್ಯಯಾನ

ಕವಿತೆ.

ಕವಿತೆ ವಾಯ್.ಜೆ.ಮಹಿಬೂಬ ನೀ ಬರುವಾ ಹಾದಿಯೊಳಗೆಗಿರಿಮಲ್ಲೆ ಹಾಸಲೇನ ?ನಾ ನೆರಳಾಗಿ ನಿಲ್ಲಲೇನ !? ನೀ ಹಾಡೋ ರಾಗದಲ್ಲಿಧ್ವನಿಯಾಗಿ ಕೇಳಲೇನ ?ನಾ ರಸವಾಗಿ ಸುರಿಯಲೇನ ? ನೀ ಕುಡಿವ ಪ್ರಾಣ ಹನಿಗೂಮದುವಾಗಿ ಬೆರೆಯಲೇನ ?ನಾ ತತ್ರಾಣಿಯಾಗಲೇನ ? ನಿನ್ನ ನವಿಲುಗರಿಕೆ ಜಡೆಗೆಪಚ್ಚೆ ಮಲ್ಲೆ ತೊಡಿಸಲೇನ-?ದಳ ಕಮಲ ಹೊದಿಸಲೇನ-? ಕರುನಾಡ ಕಣ್ಣ ಹೆಣ್ಣೆಮಗುವಾಗಿ ಪಡೆಯಲೇನನಾ ಗುರುವಾಗಿ ಕರೆಯಲೇನ ? *****************************

ಭಾವಗಳ ಹಕ್ಕಿ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಭಾವಗಳ ಹಕ್ಕಿಗೆ ಹಾರುವುದೇ ಕೆಲಸಒಮ್ಮೆ ಆ ಮರ..ಒಮ್ಮೆ ಈ ಮರ..ಮಗದೊಮ್ಮೆ…..ಮತ್ತೊಂದು. ಗಮನಿಸಿದ್ದೇನೆ ನಾನು ಬಗೆ ಬಗೆ ಹಕ್ಕಿಗಳಸಂಜೆ ಹೊತ್ತು ನನ್ನ ಕೈತೋಟದಲ್ಲಿಭಿನ್ನ…ಭಿನ್ನ…ಒಂದೊಂದೂ. ಕೆಲವು ಗುಂಪು ಗುಂಪುಗಳವಾದರೆಕೆಲವದೋ….ಬರೀ ಗದ್ದಲ,ಇನ್ನು ಕೆಲವು ಮೌನವಾಗಿದ್ದರೆ..ಮತ್ತೂ ಕೆಲವು ಬರೀ…ಒಂಟಿ. ಬಣ್ಣ ಬಣ್ಣದ ರಂಗೋಲಿಯಂತೆ ಕೆಲವಾದರೆ,ಹಸಿರು ಮಧ್ಯೆ ಐಕ್ಯವಾದಂತೆ ಕೆಲವುನಾವಿರುವುದೇ ಹೀಗೆಂಬ ಮಾಸು ಬಣ್ಣದವು ಕೆಲವಾದರೆ,ಒಂಟಿಯಾಗಿರುವ ಕಪ್ಪು ಹಕ್ಕಿ ಮೇಲೇ….ನನಗೆ ಒಲವು. ತುಂಬೆ ಗಿಡದಲ್ಲೂ ಕೊಂಬೆ ಕೊಂಬೆಗೆ ಹಾರುವ ಪುಟ್ಟ ಹಕ್ಕಿ,ಒಂದು ಹೋದಲ್ಲೆಲ್ಲ ಇನ್ನೊಂದೂ ಹೋಗುವ ಜೋಡಿ […]

ಗಝಲ್

ಗಝಲ್ ರೇಷ್ಮಾ ಕಂದಕೂರ. ಹಸಿವಿನಿಂದ ಕಂಗೆಟ್ಟವರ ತೊಳಲಾಟ ನೋಡದಾಗಿದೆಕೃಶ ದೇಹದ ಅಧೋಗತಿಯ ಪರಿಸ್ಥಿತಿ ನೋಡದಾಗಿದೆ ಕಮರಿದೆ ಭರವಸೆಯ ಬೆಳಕು ಮಂದಾಗ್ನಿಯಲಿಹಣೆಬರಹದ ಕ್ರೂರತನ ಮದವೇರಿದನು ನೋಡದಾಗಿದೆ ತುತ್ತಿನ ಚೀಲ ತುಂಬಿಸಲು ಕಗ್ಗಂಟಾಗಿ ಹೋಗಿದೆಆ ದೇವನ ದೂಷಿಸತ ದಿನ ದೂಡುವದನು ನೋಡದಾಗಿದೆ ತಿಂದು ತೇಗಿ ಬಿಸಾಕುವ ಜನಕೆ ತಿಳಿಯಬಾರದೇಕೊಳ್ಳುಬಾಕ ಮನೋಭಾವದಿ ಮೆರೆಯುವವರ ನೋಡದಾಗಿದೆ ಪರಿಹಾರಕೆ ರೇಷಿಮೆಯ ಮನ ಮರುಗಿ ತಡಕಾಡಿದೆಪಿಷ್ಟ ಹೊತ್ತು ಕುಚೇಷ್ಟೆ ಮಾಡುವವರ ನೋಡದಾಗಿದೆ. ****************************

ಅವಳು ಮತ್ತು ಅಗ್ಗಿಷ್ಟಿಕೆಯು..!!

ಕವಿತೆ ವೀಣಾ ಪಿ. ಧೋ………. ಎಂದೆನುತೆ ಸುರಿಮಳೆಯ ದಾರ್ಢ್ಯತೆಯ ಗಡ-ಗಡನೆ ನಡುಗಿಸುವ ತಣ್ಣೀರ ಧಾವಂತಕೆ ತೊಯ್ದ ಕಾಯವ ಮುಚ್ಚಿಟ್ಟ ಸೀರೆಯ ಸೆರಗಿನಂಚನು ಹಿಂಡುತಲಿ ಗುಡುಗು-ಮಿಂಚಿನ ಸೆಡವಿಗೆ ಭಯಗೊಂಡ ಹುಲ್ಲೆಯಂತಾದ ಭಾವದಲಿ ಬರದೂರ ಬಯಲಿಂದ ಕಟ್ಟಿಗೆಯನಾಯಲು ಕಾನನಕೆ ಬಂದಾಕೆ ಸಂಜೆ ಮಳೆಗೆ ಸಿಲುಕಿರಲು ಕತ್ತಲಾವರಣದಂಜಿಕೆಗೆ ದೂರದಂಚಿನ ಬೆಳಕು ಅರಸುತ್ತಲೋಡುತ್ತ ಅದಾವುದೋ ಹಿತ್ತಲಿನ ಹೊಚ್ಚನೆಯ ತಾವತ್ತ ಹೊರಳಿಸಿರೆ ಅಂಜುತಲಿ ಜಿಂಕೆ ಕಣ್ಗಳನು ಬೆಳದಿಂಗಳಂತಿವಳ ಸೆಳೆದು ಕಾವು ಕೊಡುವೆನೆಂದೆಂಬ ಕಾಮದಲಿ ಅಗ್ಗಿಷ್ಟಿಕೆಯೊಂದು ಉರಿಜ್ವಾಲೆಯಾಡಂಬರ ತೋರುತಿರೆ.. ತಾ ತೋಯ್ದ ಗತಿ ಮರೆತು ಚಡಪಡಿಕೆ […]

ಒಂದು ಪ್ರೇಮ ಕವಿತೆ

ಕವಿತೆ ಎಚ್.ಕೆ.ನಟರಾಜ್ ನಿಜಕ್ಕೂ ನಿನ್ನ ಮೇಲೆ ತುಂಭಾ ಮನಸಾಗಿದೆಹೇಗೇ ಹೇಳಲಿ. ನೀನೊಪ್ಪದೆ ಬಯ್ದರೆತಿರಸ್ಕರಿಸಿದರೆಆ ನೋವ ಹೇಗೆ ಸಹಿಸಲೀಈ ಮನದಾಳದೊಲವಿಗೆಏನೆಂದು ಹೆಸರಿಡಲಿ.ನಿದ್ದೆಗಳಿಲ್ರದ ರಾತ್ರೀಇರುಳ ನಿಶೆಯೂ ನಿನ್ನ ಮುಗುಳ್ನಗೆಯಹೊನಲಲ್ಲಿ ಬೆಳಕಾಗಿ ಕಾಡುತ್ತದೆನೀ ನನ್ನ ಒಲವು ತಾನೆ.ಹೇಳೇಕಾವ್ಯವನೆ ಉಲಿವ ಜಾಣೆಹೃದಯ ಕುದಿವ ಕುಲುಮೆ ಕೆಂಡವಿರಹದುರಿಯ ಹೊಂಡ..ಅಗ್ನೀಕುಂಡವಾಗಿದೆ.ಸವೆಸಿ ಬಂದ ದಾರಿಯಲ್ಲೆಲ್ಲಾ..ನಿನ್ನ ಗುರುತಿನ ನೆನಪುಗಳ ಬಳ್ಳಿ…ವೃಕ್ಷ… ಘಮಲಿನ ಪುಷ್ಪಹೇಗೆ ದಾಟಲಿ ಈ ಬದುಕ.. ಪ್ರೀತಿಯದೆಯಲ್ಲರಳಿದ ಉತ್ಥಾನದ ನೆನಪಹೇಗೆ ಬಂದರೂ.. ಸುತ್ತಿ ನಿಂತರೂಬಳಸಿ ಬಂದರೂ ಕಾಡುವುದು…ನಿಜಕ್ಕೂ ನಿನ ಮೇಲೆ ಮನಸಾಗಿದೆಕನಸುಗಳಲ್ಲಿ ಕಾಡದೆ ಬಂದು ಮುದ್ದಿಸಿಬಿಡೆ ನಿನದೇ […]

ಎಂಥಾ ಮಳೆ

ಕವಿತೆ ವಸುಂಧರಾ ಕದಲೂರು ಅಬ್ಬಾ..ಎಂಥಾ ಮಳೆಸುರಿದೂ ಸುರಿದೂಸುರಿದೂ ಸುರಿದೂತಟಕ್ಕನೆ ನಿಂತರೂತೊಟಕ್ ತೊಟಕ್ ಎಂದುತೊಟ್ಟಿಕ್ಕುತಾಮಲೆ ಕಾಡು ಮನೆ ಮಾಡುಮರದ ನೆತ್ತಿ ಗಿಡದ ಬೇರುಎಲ್ಲಾ ನೆನೆಸಿತು ಅಬ್ಬಾ…ಎಂಥಾ ಮಳೆಸುರಿದೂ ಸುರಿದೂಸುರಿದೂ ಸುರಿದೂನದಿ ತೊರೆ ಕೆರೆ ಝರಿಹಳ್ಳ ಕೊರಲು ಕೊಳ್ಳತುಂಬಿಸಿ ಚೆಲ್ಲಿ ತುಳುಕಿಸಿಹರಿದು ಹರಿದು ಹಾರಿತುಅಬ್ಬಾ… ಎಂಥಾ ಮಳೆಅಂಚಲಿ ಕೊರೆದು ಕೊಚ್ಚಿಆಳಕೆ ಸುರಿದು ಚಚ್ಚಿಒಂದೇ ಸಮನೆ ಹೊಡೆದುಹಾಸಿ ಬೀಸಿ ಬೆಚ್ಚಿ ಬೀಳಿಸಿತು.ಅಬ್ಬಾ…ಎಂಥಾ ಮಳೆಅಳತೆ ಮೀರಿ ಸುರಿದುಎಲ್ಲೆ ತೂರಿ ಹರಿದುದಿಕ್ಕು ತಪ್ಪಿಸಿ ಲೆಕ್ಕ ಒಪ್ಪಿಸಿದಿಢೀರನೆ ಧಡಾರನೆಮಿಂಚು ಗುಡುಗುಸಿಡಿಲು ನಡುಗುಬಡಿದೆಬ್ಬಿಸಿ ಮಗ್ಗಲು ಮುರಿಸಿಒಳ್ಳೆ ಪಾಠ […]

ಬೆಳೆಯೋಣ ಬನ್ನಿ..

ಕವಿತೆ ಸುಜಾತ ಲಕ್ಷ್ಮೀಪುರ. ಮನುಜ ಮನುಜನೆದೆಯಲಿಪ್ರೀತಿ ನೀತಿಯ ಸಸಿ ನೆಟ್ಟುಸಹಕಾರ ಸಮಾನತೆ ನೀರೆರೆದುಮನುಷ್ಯತ್ವದ ಹೂ ಹಣ್ಣು ಕಾಯಿ ಬೆಳೆದುಬಯಲ ಮಕ್ಕಳೆಲ್ಲಾ ಸೇರಿ ಸವಿಯೋಣ ಬನ್ನಿ. ನಿತ್ಯ ನಡೆ ನುಡಿ ಆಚಾರದಲಿಸದ್ಭಾವನೆಯ ಸಿಂಪಡಿಸಿಸರ್ವೋದಯದ ಸಕಾರವನೆ ಉಸಿರಾಡುತ್ತಾಸಕಲ ಜೀವರಾಶಿಯ ಲೇಸು ಬಯಸೋಣ ಬನ್ನಿ ಕಟ್ಟೋಣ ನಾವುಎಲ್ಲರ ಹೃದಯಗಳಿಗೂಅಂತಃಕರಣದ ಸ್ನೇಹ ಸೇತುವೆನಾನು ನೀನಳಿದು ನಾವು ಆದಸಮಷ್ಟಿಯ ಸರ್ವಹಿತದಲಿ. ಸದಾ ಜೀಕೋಣ ಬನ್ನಿಒಬ್ಬರಿಗೊಬ್ಬರು ಕೈ ಕೈಯಿಡಿದು.ನಾವೆಲ್ಲಾ ಒಂದೇ ನಾವು ಜೀವ ಚೈತನ್ಯರು.ಸಾರಿ ಸಾರಿ ಘೋಷಿಸುತ್ತಾಸುತ್ತೋಣ ಬನ್ನಿಮಾನವಪ್ರೇಮದ ನಂದನವನ. *****************************

ನಮಗೊಂದು ಪ್ರಕೃತಿಯು..!

ಕವಿತೆ –ರಮಣ ಶೆಟ್ಟಿ ರೆಂಜಾಳ. ನಮಗೊಂದು ದೇಹವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ಪರಿ ಪರಿಯ ನೋವ !ನಮಗೊಂದು ಮನವಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ನಾನಾ ಪರಿ ಚಿಂತೆಯ !ನಮಗೊಂದು ಜಿಹ್ವೆಯಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ವಿಧ ವಿಧ ರುಚಿಯ !ನಮಗೊಂದು ನಾಸಿಕವಕೊಟ್ಟನು ಆ ದೇವ,ಆಘ್ರಾಣಿಸಬಿಟ್ಟನು ಇಹಪರದ ವಾಸನೆಯ !ನಮಗೆರಡು ಕಂಗಳಕೊಟ್ಟನು ಆ ದೇವ,ಕೊಟ್ಟದರಲ್ಲಿಟ್ಟನು ಚಂಚಲ ನೋಟವ !ನಮಗೆರಡು ಕಿವಿಗಳಕೊಟ್ಟನು ಆ ದೇವ,ಕೇಳಲೆಂದನವ ತರಹಾವರಿ ಶಬ್ಧವ !ನಮಗೆರಡು ಕೈ ಕಾಲುಗಳಕೊಟ್ಟನು ಆ ದೇವ,ಗಂಟುಗಳಲಿಟ್ಟು ವೃದ್ಧಾಪ್ಯಕೆನೋವ ನಿರಖು ಠೇವಣಿಯ !ನಮಗೊಂದು ಜೀವನವಕೊಟ್ಟನು ಆ ದೇವ,ಅನುಭವಿಸಲೆಂದು […]

ಮನೋ ಇಂಧನ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಸೀಟಿ ಹೊಡೆಯುತ್ತದೆ ಕುಕ್ಕರ್…ತಾಳದೇತನ್ನ ಅಡಿಯಲ್ಲಿ ಉರಿಯುತ್ತಿಯುವ ಬೆಂಕಿ.ನಾನೂಹೊರಹಾಕುತ್ತೇನೆ ನೋವು ನಲಿವುಗಳಪೆನ್ನು ಕಾಗದ ಹಿಡಿದು ,ಮನವನ್ನು ಕೆದಕಿ ಕೆದಕಿ . ಹಣೆಮೇಲಿನ ನೆರಿಗೆ, ಕಣ್ಣಂಚಿನ ಹನಿತುಟಿಯ ಮೇಲ್ಮುಖ ….ಕೆಳಮುಖ ಬಾಗುವಿಕೆಯಾವುದೂ ಅರ್ಥವಿಲ್ಲದ್ದಲ್ಲ….ಆಕಸ್ಮಿಕವಲ್ಲಪ್ರತಿಯೊಂದಕ್ಕೂ ಇದೆ ಬೇರೆ ಬೇರೆಯೇ ಪೀಠಿಕೆ. ಮನದ ಮ್ಲಾನತೆಯೋ, ಆಹ್ಲಾದಕತೆಯೋಮುಖದ ಮೇಲೆ ಕಾಣಬೇಕಾದರೆ…ಬೇಕುಏನಾದರೂ ಒಂದು ಇಂಧನ….ಅದಕ್ಕೇ..ಕುಕ್ಕರ್ ನ ಉದಾಹರಣೆ ಒಂದೇ..ಸಾಕು. ಮನವೆಂಬುದು ಒಂದು ಕುಲುಮೆಯೇ ಸರಿ..ಬೇಯುತ್ತಿರುತ್ತದೆ ಅಲ್ಲಿ ಬೇರೆ ಬೇರೆ ವಿಷಯಯಾವುದು ಮೊದಲು, ಯಾವುದು ಮತ್ತು, ಹೇಳುವಹಾಗಿಲ್ಲ,ಹೊರಹಾಕುತ್ತದೆ ನೋಡಿಕೊಂಡು ಸಮಯ…. […]

ಮೌಢ್ಯ

ಕವಿತೆ ವೀಣಾ ರಮೇಶ್ ಮಾನದಂಡವಿಲ್ಲದ ಮೂಢ ಸಂತೆಯೊಳಗೆಬದುಕು ವ್ಯಾಪಾರ ವಾಗುತ್ತಿದೆ .ನಂಬಿಕೆಯ ನಡುವೆ ಮೂಢತ್ವ ಬಿತ್ತಿಮೊಳಕೆಯೊಡೆದುಬೇರು ಚಾಚಿಮೌಢ್ಯ ಹೆಮ್ಮರವಾಗಿದೆ ಬೆತ್ತಲಾಗಬೇಡ ಬತ್ತಿದಕನಸುಗಳಿಗೆಪೊಳ್ಳು ಕಟ್ಟು ಪಾಡುಗಳಹೆಗಲೇರಿ ಶವವಾಗಬೇಡ. ನಿನ್ನ ಕನಸುಗಳ ಚಲುವಿಗೆಸುಜ್ಞಾನ ತೊಡಿಸಿಜ್ಞಾನ ದಾರದಿಂದ ಬಿಗಿದುಅಭಿಜ್ಞಾನದೆಡೆಗೆ ಹರಿಸಿ ಅಹಂಕಾರದ ಕತ್ತಲೆಯಮರೆಸಿ ಆತ್ಮದ ಹಣತೆಯಲಿಅಂತರಾತ್ಮದ ನವಿರು ಸ್ಪರ್ಶ ಬೆಳಕು ನೀಡಲಿ **********************************

Back To Top