Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಮಗುವಾದ ನೆಲ ಬಿದಲೋಟಿ ರಂಗನಾಥ್ ಬಿತ್ತಿದ ಬೀಜ ಮೊಳಕೆ ಒಡೆದು ನಗುವಾಗಸಿರಿಯು ಮಡಿಲು ತುಂಬಿತುಮಗುವಾದ ನೆಲಮಮತೆಯ ಕರುಳ ಹೂ ಬಿಟ್ಟಿತು ಎದೆಯೊಳಗಿನ ತಲ್ಲಣ ಕಣ್ಣು ಚಾಚಿ ನೋಡುತ್ತಿರಲುಖುಷಿಯ ಸಮುದ್ರ ನಕ್ಕುನಕ್ಷತ್ರಗಳು ಅಂಗೈಯೊಳಗೆ ಆಡಿದವು ಮೊಳಕೆಯ ಕುಡಿ ಸಾಗುತಿರಲುಮಳೆಯ ಸ್ಪರ್ಶಕೆ ಕಳೆಗಟ್ಟಿಮೆದು ನೆಲದ ಭಾವ ಕಲ್ಲುಗಳೊಂದಿಗೆ ಮಾತಾಡಿತು ಬೆವರ ಹನಿಯು ಬಿದ್ದುಬಿತ್ತು ಹುತ್ತ ನೆಲ ಬಸಿರಾಗುವುದೆಂದರೇಹೊಳೆ ಸೀಳಿನಲಿ ಬೊಗಸೆ ನೀರು ಕುಡಿದ ಸಂತಸಮೈಯೊಳಗೆ ಚಂದ್ರ ನಡೆದ ಗುರುತು ***********

ಕಾವ್ಯಯಾನ

ಗಝಲ್ ಮಾಲತಿ ಹೆಗಡೆ ನೂರು ಆಸೆ ನೂರು ಕನಸ ಹತ್ತಿಕ್ಕುತ ನಡೆದೆಯೇಕೆ?ಕೋಪತಾಪದಲ್ಲಿ ಬಳಲಿ ಬಿಕ್ಕುತ್ತ ನಡೆದೆಯೇಕೆ? ಹೆತ್ತ ಕೂಸಿನ ವಾತ್ಸಲ್ಯವ ಕಳಚಿ ನಿರ್ಮೋಹ ಮೆರೆದೆಉತ್ತರ ಕೊಡದ ಮೌನ ಕಕ್ಕುತ್ತ ನಡೆದೆಯೇಕೆ? ಸಿಕ್ಕ ಬದುಕ ಕಟ್ಟಲರಿಯದೇ ಸಿಕ್ಕು ಸಿಕ್ಕಾಗಿಸಿ ಸೊರಗಿದೆನಕಾರಾತ್ಮಕ ವಿಚಾರದಲ್ಲೇ ಸೊಕ್ಕುತ್ತ ನಡೆದೆಯೇಕೆ? ಹುಟ್ಟಿದವರಿಗೆಲ್ಲ ಒಂದು ದಿನ ಬರುವುದು ಸಾವು ನಿಶ್ಚಿತಅರೆ ಆಯುಷ್ಯದಲ್ಲೇ ಸೋಲು ಮುಕ್ಕುತ್ತ ನಡೆದೆಯೇಕೆ? ಮುದ್ದುಕಂದನಿಗೆ ಅಮ್ಮನಾಗಿ ಹೆಮ್ಮೆಯ ದೇವತೆಯಾಗಿದ್ದೆನಕ್ಷತ್ರವಾಗುವ ಹುಚ್ಚಿನಲಿ ನೋಯುತ್ತ ನಡೆದೆಯೇಕೆ? ************

ಕಾವ್ಯಯಾನ

ಕೌದಿ ಸ್ಮಿತಾ ರಾಘವೇಂದ್ರ ಮಂಚದ ಅಂಚಿನ ಮೂಲೆಯಲ್ಲೋನಾಗಂದಿಗೆಯ ಹಾಸಿನಲ್ಲೋತುಕ್ಕು ಹಿಡಿದ ಟ್ರಂಕಿನೊಳಗೋ ಭದ್ರವಾಗಿಯೇ ಇರುವ ಗಂಟು. ಆಗಾಗ ಸುಮ್ಮನೇ ಎಳೆದು ತಂದುಗಂಟಿಗೆ ಕೈ ಹಚ್ಚಿದಾಗೆಲ್ಲತರಾತುರಿಯ ಕೆಲಸವೊಂದು ಹಾಜರುಸಮಯ ಹೊಂದಿಸಿಕೊಂಡುಬಿಚ್ಚಿಕೊಳ್ಳುತ್ತವೆ ರಾಶಿ ರಾಶಿ ನೆನಪುಹರಿದಿಲ್ಲ,ಹುಕ್ಕು ಕಿತ್ತಿಲ್ಲ,ಮಾಸಿದ್ದೂ ಇಲ್ಲಮುದ್ದೆಯಾದ ಗೆರೆಗಳ ತುಂಬಆಪ್ಯಾಯ ಕಂಪುಮತ್ತೆ ಹೆಗಲೇರುವ ಒನಪು ಸಂಜೆ ಹೊತ್ತಿಗೆ ಸಾಕೆನ್ನಿಸುತ್ತದೆಇಳಿಸಂಜೆಯ ಬದುಕಿನಂತೆ.ಬಿಡಿಸಿಕೊಳ್ಳಲಾಗದ ನಂಟಿನಂತೆ ಬಣ್ಣ ಬಣ್ಣದ ಅರಿವೆಗಳ ಅರಿಯಬೇಕುಇನ್ನೂಬದುಕು ಸವೆದ ಪುಟಗಳ ಮಸುಕು ಅಕ್ಷರಗಳಂತೆತೊಟ್ಟು ಸಂಭ್ರಮಿಸಿದ ಹಲವು ಭಾವಬಿಡಲಾಗದು ಬಳಸಲಾಗದುಆದರೂ ಇರಬೇಕು ಜೊತೆಯಾಗಿಮುದುಡಿದ ಕನಸುಗಳು. ಹೊಸ ಭಾವ ತುಂಬುವ ಹುರುಪಿನಲಿಯಾವುದೋ […]

ಕಾವ್ಯಯಾನ

ನೆನಪುಗಳಲ್ಲಿ ಅವಳು ಲಕ್ಷ್ಮೀ ಪಾಟೀಲ್ ಅವಳ ಏಕಾಂತ ತೆರೆಯುತ್ತದೆ ನಿತ್ಯ ಕೈ ಮುಟ್ಟಿಕೂದಲು ಹಿಡಿದರೆ ಎದುರು ಮರದ ಕೆಳಗೆಸಂಧ್ಯಾ ರಾಗದ ಸಂಜೆ ಅದೇ ಮರ ಕೈ ಮಾಡಿ ಕರೆಯುತ್ತದೆ ಕೂದಲ ಸಿಕ್ಕು ಬಿಡಿಸಿಕೊಳ್ಳಲುನೀಟಾಗಿ ನೆನಪುಗಳ ತಲೆ ಬಾಚಲುಏಕಾಂತಕ್ಕೆ ಜೊತೆ ಹುಡುಕಿ ಧ್ಯಾನಿಸಲು ಸಂಧ್ಯಾರಾಗದೆ ದುರು ತಾನು ಮತ್ತೊಂದು ಕವಿತೆಯಾಗಲು !ಬರೆಯದ ಭಾವ ಗಳೆಲ್ಲ ಸಿಕ್ಕುಗಳಂತೆ ಮುತ್ತುವವು ಧ್ಯಾನಸ್ಥಳಾಗುವಳಾಗ ಕವಿತೆಯ ಸುತ್ತ !ಎಷ್ಟೊಂದು ಕವಿತೆ ಬದುಕಿದೆನಲ್ಲ ಬರೆಯಲು ಬಂದಿದ್ದರೆಪೈಪೋಟಿಯಲ್ಲಿ ಕವಿತೆ ಗೆಲ್ಲಿಸಬಹುದಿತ್ತುಈ ಹೇನು ಹರಿದಾಡಿಸಿಕೊಳ್ಳುವ ಹಿಂಸೆಗೆಮುಕ್ತಿ ಸಿಗಬಹುದಿತ್ತು ಎಂದುಕೊಳ್ಳುವಳುಈ […]

ಕಾವ್ಯಯಾನ

ನಾನು ಕೆಟ್ಟವಳು ಶೀಲಾ ಭಂಡಾರ್ಕರ್ ನಿನ್ನ ಪ್ರೀತಿಯ ಪರಿಮಾಣದಲ್ಲಿಒಂದಿಷ್ಟು ಆಚೆ ಈಚೆಯಾದಾಗನಾನು ಕೆಟ್ಟವಳು. ನನ್ನನ್ನು ಬದಿಗೆ ತಳ್ಳಿಇನ್ಯಾರನ್ನೋ ತಲೆ ಮೇಲೆಕೂರಿಸಿಕೊಂಡಾಗ,ನಾನು ಕೆಟ್ಟವಳು. ಅತಿಯಾಗಿ ಸಿಟ್ಟು ಬಂದಾಗನಿನ್ನ ಚುಚ್ಚಿ ನೋಯಿಸಿಖುಷಿ ಪಡುವಾಗನಿಜವಾಗಲೂನಾನು ಕೆಟ್ಟವಳು. ಇಷ್ಟೇ.. ನಾನು ಕೆಟ್ಟವಳಾಗುವುದುಇವಿಷ್ಟೇ ಸಂದರ್ಭಗಳಲ್ಲಿ. ನಾನು ಕೆಟ್ಟವಳಾದಮರುಕ್ಷಣವೇಮನವರಿಕೆಯಾಗಿಮತ್ತೆ ನಿನ್ನೆಡೆಗೆ ಬಂದಾಗ, ನೀನು ಎಂದಿನಂತೆಮುದ್ದಿಸುವಿಯಲ್ಲ..!ಆಗ ಮಾತ್ರ..ನೀನೇ ಕೆಟ್ಟವನು. ************

ಕಾವ್ಯಯಾನ

ಪ್ರೇಮವೆಂದೂ ಹೇರಲ್ಪಡುವುದಿಲ್ಲ ಪೂರ್ಣಿಮಾ ಸುರೇಶ್ ಪ್ರೇಮವೆಂದೂ ಹೇರಲ್ಪಡುವುದಿಲ್ಲ.ಮತ್ತೆಮತ್ತೆ ನಿನ್ನೆಗಳನುಕರೆತಂದುಎದುರು ನಿಲ್ಲಿಸಿಯುದ್ಧ ಹೂಡುವೆಯೇಕೆ.. ಒಪ್ಪುವೆಜೊತೆ ಸೇರಿಯೇಬುತ್ತಿ ಕಟ್ಟಿದ್ದೆವುನಾಳೆಗೆ ನಡೆವ ನಡೆಎಡವಿದ ಹೆಜ್ಜೆತಿರುವುಗಳುಗಂಧ ಮಾರುತದಸೆಳೆತದಾರಿ ಕವಲಾಗಿನೀನುನೀನಾಗಿ ನಾನು ಒಂಟಿಯಾಗಿಅನಿವಾರ್ಯ ಹೆಜ್ಜೆಗಳು ಅದೆಷ್ಟು ಮಳೆ..ಸುರಿಸುರಿದುಒದ್ದೆ ಒದ್ದೆ ಒಳಕಂಪನ ಹೊರನಡುಕತೊಯ್ದ ಹಸಿವೆಗೆಹಳಸಿಹೋದತಂಗಳು ಬುತ್ತಿಚಾಚಿದ ಕೈ ಬೊಗಸೆಖಾಲಿ ಖಾಲಿ ಹೌದುಅದು ತಿರುವೊಂದರ ಆಕಸ್ಮಿಕಮನಸುಗಳ ಡಿಕ್ಕಿನಡೆದ ಹಾದಿಯ ಬೆವರಿನ ವಾಸನೆಮುಡಿದ ಹೂವಿನ ಘಮತನ್ಮಯತೆಯನುನಮ್ಮೊಳಗೆ ಅರಳಿಸಿತ್ತು ಬಿಗಿದ ತೆಕ್ಕೆ ಸಡಿಲಿಸಲೇ ಬೇಕುಉದುರಿ ಬಿದ್ದ ಹೂ ಎಸಳುಗಳು ಕೊಡವಿಕೊಂಡೆಅಂಟಿದಬೆವರು ಕಳಚುವ ಮಳೆಗೆನಾನೂ ಕಾದೆ ಬೇಡ. ತಂಗಳು ಬಿಡಿಸದಿರುಇರಲಿ ಬಿಡು […]

ಕಾವ್ಯಯಾನ

ನೇಪಥ್ಯ ಎಮ್ . ಟಿ . ನಾಯ್ಕ.ಹೆಗಡೆ ಆ ನೀಲಿ ಬಾನು, ಮಿನುಗು ತಾರೆಬೆಳೆದು ಕರಗುವ ಚಂದ್ರಈ ಭೂಮಿ – ಅದರ ಕಣಿವೆಮೊರೆವ ಕಡಲು….ಆ ತಂಗಾಳಿ, ಮುಂದೆ ಬಿರುಗಾಳಿನದಿಯ ಓಟ, ಆ ನಾದದುಂಬಿ ಗಾನಗಾಳಿಗಂಟಿದ ಬದುಕಿನಎಕ್ಕೆ ಬಿತ್ತಗಳೆಲ್ಲಾಬಿತ್ತುತ್ತಾ ಹೊರಟದ್ದುಯಾವ ಕತೆ ? ಯಾರ ಕತೆ ? ಗತಿಸಿದ ಸಾಮ್ರಾಜ್ಯಕರಗಿದ ಅರಮನೆಉರುಳಿದ ಕಿರೀಟಕ್ಕೆ–ಲ್ಲ, ಹಿನ್ನೆಲೆ ಏನು ಕತೆ ? ಬಂದ ಗುರುತುಗಳಿಹುದುನಿಂದ ಗುರುತುಗಳಿಹುದುಹೋದ ಗುರುತುಗಳಿಹುದುಆದರೆ —ಬಂದವರು ಬಂದಂತೆಹೋದುದು ಯಾಕೆ ? ಆ ಬಾನು , ಈ ಭೂಮಿ ,ಅದರ […]

ಕಾವ್ಯಯಾನ

ರಸಧಾರೆ, ಮತ್ತಿತರೆ ಕವನಗಳು ವಸುಂಧರಾ ಕದಲೂರು ಹಸಿರೆಲೆ ಕಾನನಹಸುರಲೆ ಮಲೆಯೋ ಹೊಸ ಬಗೆ ನರ್ತನಹರುಷದ ನೆಲೆಯೋ ಹುಮ್ಮಸಿನ ಮನವೋಹುರುಪಿನ ಚೆಲುವೋ ಹರಸುವ ಖುಷಿಗೆಹಾತೊರೆವ ಕ್ಷಣವೋ ಸಂಭ್ರಮ ಸಂತಸಮಳೆ ಹನಿ ಜೊತೆಗೆ ಸುರಿದಿದೆ ಹರಿದಿದೆಜೀವರಸಧಾರೆಚೈತನ್ಯದೆಡೆಗೆ ‘ಮತ್ತಿತರೆ’ ಅತ್ತಲೂ ಇತ್ತಲೂಸುತ್ತಲೂ ಕತ್ತಲೆ ಬತ್ತಿದ ಹೊಳೆಬಾರದ ಮಳೆಬಿತ್ತದ ಇಳೆಕಟ್ಟಿದೆ ಕೊಳೆಸುಟ್ಟಿದೆ ಕಳೆ ಕದಡಿದ ಕನಸಿಗೆಹೊಸತರ ಕನವರಿಕೆ ಬೇಸರದ ಭಾರಕೆಬರಿ ಭಾವ ನಿಸೂರ ಇತ್ತಲಾಗಿ ಹೊತ್ತೂಹೋಗದು ಅತ್ತಲಾಗಿಚಿತ್ತವೂ ಸ್ವಸ್ಥವಾಗದು ಹಾಗಾಗಿಬೇಕಿಲ್ಲ ಯಾವುವೂಇತರೆಇನ್ನಿತರೆ ಮತ್ತಿತರೆ. ************

ಕಾವ್ಯಯಾನ

ಕವಿತೆ. ದೀಪಾ ಗೋನಾಳ ಏಷ್ಟವಸರಅದೆಷ್ಟು ಗಡಿಬಿಡಿಎಷ್ಟೇ ಬೇಗ ಎದ್ದರೂತಿಂಡಿತಿನ್ನಲೂ ಆಗುವುದೆ ಇಲ್ಲಅನುಗಾಲ ಒಳ ಹೊರಗೆ ಗುಡಿಸಿಹಸನ ಮಾಡುವುದರಲ್ಲೆಅರ್ಧಾಯುಷ್ಯ ,,,ತಿಂದರೊ ಇಲ್ಲವೊ..!?ಕಟ್ಟಿಕೊಟ್ಟ ಡಬ್ಬಿ ಇಟ್ಟುಕೊಂಡರೊ ಇಲ್ಲವೊ..!?ತೊಳೆದ ಬಾಟಲಿಗೆ ನೀರು ತುಂಬಿದ್ದೆ ಒಯ್ದರೊ ಇಲ್ಲವೊ..!?ಹಾಲಿನ ಪಾತ್ರೆಗೆ ಮುಚ್ಚಿದೆನೊ ಇಲ್ಲವೊ..!?ಮೊಸರು ಫ್ರಿಜ್ಜಿಗೆ ದಬ್ಬಿದೆನೊ ಇಲ್ಲವೊ..!?ಬದುಕೆಲ್ಲ ಉದ್ಘರಾದ ಹಾರ..ದಾರಿಯ ತುಂಬ ಹೋಯ್ದಾಟಮನಸ್ಸಿನ ಮಾತು ಕಿವಿಗೆ ಕೇಳುವಷ್ಟು ದೀರ್ಘ ಆಲೋಚನೆ ಒಳಗೊಳಗೆ..ಜೋಲಿ ಹೊಡಿಯುವ ಬಸ್ಸಿನಲ್ಲಿ ಎದುರಿಗೆ ನನ್ನಂತೆ ಅವಸರಕ್ಕೆಎದ್ದೋಡಿ ಬಂದವಳು ಹೇಳುತ್ತಾಳೆ,ಕುಂಕುಮ ಹಚ್ಚೆ ಇಲ್ಲ!!ಓಹ್! ಹೌದು ಕನ್ನಡಿ ಮುಂದೆ ನಿಲ್ಲಲೇ ಇಲ್ಲ, ನನ್ನ ನಾನು […]

ಕಾವ್ಯಸಂಗಾತಿ

ಗಝಲ್ ಬಾಗೇಪಲ್ಲಿ ಕೃಷ್ಣಮೂರ್ತಿ ಬ್ರಹ್ಮಾಂಡದಿ ನೀನು ತೃಣಅದಕೆ ನೀ ಇರುವೆ ಋಣ ಹೇಗೆ ತೀರಿಸುವೆ ಅದನುಯೋಚಿಸು ಒಂದು ಕ್ಷಣ ಸದಾ ಸಲಹಲು ನಿನ್ನಬದಲಾಗಿಸು ನಿನ್ನ ಗುಣ ಅತಿಯಾಸೆಯಿಂದ ನೀನುಮಾಡಿರುವೆ ಎಲ್ಲಾ ರಣ ಸಿಕ್ಕ ಸಿಕ್ಕಲ್ಲೆಲ್ಲಾ ಅಗೆದುಮಾಡಿರುವೆ ಅದಕೆ ವ್ರಣ ಪರಿಸರ ರಕ್ಷಣೆ ಆಗಬೇಕುಸೇರು ನೀನು ಅದರ ಬಣ ಕ್ಷಮೆ ಎನೆ ಭೂಮಿ’ಮಂಕೇ’ಸಕಲರೂ ತೊಡಬೇಕು ರಕ್ಷಣೆಗೆ ಪಣ (ಚೋಟಿ ಬೆಹರ್ ರಚಿಸುವ ಯತ್ನ) **********

Back To Top