Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ನೀ ಬರುವೆಯ ಒಮ್ಮೆ ಉಷಾ ಸಿ ಎನ್ ಬದುಕ ಜಂಜಾಟದಲ್ಲೀಗ, ಅಲೆಗಳ ಸಂಭ್ರಮದ ವಿಹಂಗಮ ನೋಟದಿ ಕಷ್ಟಸುಖಗಳ ಮೆಲುಕುಹಾಕುತ್ತಾ ಒಬ್ಬಂಟಿಗಳಾಗಿ ಬಿಟ್ಟಿದ್ದೇನೆ..!! ನಿನ್ನ ನೆನಪುಗಳ ಬದಿಗೊತ್ತಿ ಮರೆಮಾಚಿ ಕೈ ಚೆಲ್ಲಿದ್ದೇನೆ. ಹೊಸ ಬದುಕ ಹೊಸೆಯಲು ತುರಾತುರಿ ತಯಾರಿ ನಡೆಸಿದ್ದೇನೆ. ನೆನಪುಗಳಿಗೆ ಮುಕ್ತಿ ಸಿಕ್ಕಿತೆಂಬ, ಕ್ಷಣಿಕ ಸಂತಸ ಕೂಡ ಮೊಳಕೆಯೊಡಿಯುತ್ತಿಲ್ಲ..!! ಅದೆಲ್ಲೊ ಮೂಲೆಯಲ್ಲಿ ಅವಿತು ಕುಳಿತ ನೆನಪುಗಳು ಬರಸೆಳೆದು ಬರುತ್ತಿವೆ ನನ್ನತ್ತಲೇ!! ನನ್ನಂತರಾಳದ ಭದ್ರತೆಯ ಸರದಾರ, ಭರವಸೆಯ ಹರಿಕಾರ ವಿರಹದ ಕಾದಾಟಕೆ ಪೂರ್ಣವಿರಾಮವಿಟ್ಟು!! ಬಂದು ಬಿಡು ಒಮ್ಮೆ ಬದುಕು […]

ಕಾವ್ಯಯಾನ

 ಎಲ್ಲಾ ಒಲವುಗಳು ಉಳಿಯುವುದಿಲ್ಲ  ವಸುಂಧರಾ ಕದಲೂರು ಪಡೆದುಕೊಳ್ಳಲಾಗದ ಒಲವು ನೋವಾಗಿ ಕಾಡುವಾಗ ಸಂತೈಸಿಕೋ ಮನವ.. ಏಕೆಂದರೆ, ಎಲ್ಲಾ ಒಲವುಗಳು ನಮ್ಮದಾಗಿ ಉಳಿಯುವುದಿಲ್ಲ. ಭೋರೆಂದು ಸುರಿದ ಮಳೆಯ ಹನಿ ಇಳೆಯ ಗರ್ಭಕ್ಕಿಳಿಯದೇ ಆವಿಯಾಗಿ ಬಿಡುವುದು ಕಡಲ ಅಲೆ ದಡಕ್ಕೆ ಅಪ್ಪಳಿಸಿದ ಚಿಪ್ಪೊಳಗೆಂದೂ ಮುತ್ತು ಕೂಡದು ಗಡಿಯಾರವೂ ಹಿಂದೆ ತಿರುಗಲಾರದ ಸಂಕಟಕ್ಕೆ ಆಗಾಗ್ಗೆ ನಿಸೂರ ನಿಟ್ಟುಸಿರಿಟ್ಟು ನಿಂತು ಬಿಡುವುದು ಚಿಗುರೊಡೆಯದ ಬೀಜಗಳ ಕತೆ ಗೊಬ್ಬರದ ಹಾಡಿನಲ್ಲಿ ಕೊನೆಯಾಗುವುದು ಒಲವು ಕನಸ ಕನವರಿಕೆಯಲ್ಲರಳಿ ಸುಗಂಧ ಸೂಸುವ ಮುನ್ನ ಭಗ್ನ ಸ್ವಪ್ನವಾಗಿಬಿಡುವುದು ಬರೆಯಲಾಗದ […]

ಕಾವ್ಯಯಾನ

ಗುಪ್ತಗಾಮಿನಿ ವಿದ್ಯಾ ಶ್ರೀ ಎಸ್ ಅಡೂರ್. ಸಾಗರವ ಸೇರುವ ನದಿಯಾಗಿದ್ದೆ ನಾನು ಬಳುಕುತ್ತಿದ್ದೆ,ಕುಲು ಕುಲು ನಗುತ್ತಿದ್ದೆ. ನದಿಯೆಲ್ಲ ಬತ್ತಿ ನೀರೇ ಇಲ್ಲ ಈಗ ಯಾರಿಗೂ ಕಾಣದಂತೆ ಗುಪ್ತಗಾಮಿನಿ ಯಾಗಿದ್ದೇನೆ. ರೆಕ್ಕೆ ಬಿಚ್ಚಿ ಎತ್ತರೆತ್ತರಕ್ಕೆ ಹಾರುವ ಹಕ್ಕಿ ಯಾಗಿದ್ದೆ ನಾನು ಹಾಡುತ್ತಿದ್ದೆ,ನಲಿನಲಿದಾಡುತ್ತಿದ್ದೆ ಹಾರಾಡಲು ರೆಕ್ಕೆಗಳೇ ಇಲ್ಲ ಈಗ ಅನಂತ ದಿಗಂತ ವನ್ನು ಕಂಡು ,ಮೂಕವಾಗಿ ರೋಧಿಸುತ್ತಿದ್ದೇನೆ. ಅಂದಚೆಂದದಿ ಕಂಪಬೀರುವ ಹೂವಾಗಿದ್ದೆ,ನಾನು ಬೀಸುವ ತಂಗಾಳಿಗೆ ತೊಯ್ದಾಡುತ್ತಿದ್ದೆ ಕಂಪ ಬೀರಲು ಹೂವುಗಳೇ ಇಲ್ಲ ಈಗ ತಂಗಾಳಿಗೆ ಮೈ ಒಡ್ಡುವ ಮನಸಿಲ್ಲದೇ ನೋಯುತಿದ್ದೇನೆ. […]

ಕಾವ್ಯಯಾನ

ಭಾವನೆಗಳು ಮಾತನಾಡುತ್ತಿವೆ ಕಲ್ಪನೆಗಳ ಸಾಗರದಲಿ ಹುದುಗಿ ಹೊಕ್ಕಿದ್ದ ಶಿಲ್ಪವನು ಹೆಕ್ಕಿ ನನಸಾಗಿಸುವಾಸೆಯಲಿ ನೂರೂರಗಳ ಸುತ್ತಿ ಸುತ್ತಿ ಮೌನಿಯಾದ ಶಿಲ್ಪಿಯೊಬ್ಬ ಬಾಯಾರಿ ದಣಿದಿರಲು ತಿರುಕನ ಕನಸು ಹಾರೈಸಿದಂತೆ ಚಂದಿರನ ಬೆಳದಿಂಗಳ ಮೀರಿ ಅಮೃತ ಸಮಾನ ಶಿಲೆಯೊಂದು ಹರ್ಷದಾ ವರವಾಗಿ ಗೋಚರಿಸಿ ವನವಾಸದಲಿಹ ಲಕ್ಷ್ಮಣನ ಕಾಯ್ದು ಕನವರಿಸಿ ಕಲ್ಲಾಗಿ ತಪಗೈವಂತೆ ಊರ್ಮಿಳೆ, ಹಸಿವು ನಿದ್ದೆಗಳ ಗೆದ್ದು ಕಾಲನ ಕುಣಿಕೆಯ ಮರೆತು ಹಗಲಿರುಳು ಹವಣಿಸುತಲಿ ಶಿಲೆಯನು ದೃಷ್ಟಿಸುತಲಿ ಅಂತರಾತ್ಮದಿ ಅಡಗಿಹ ಅರಿವನು ಹದಗೊಳಿಸಿ ಕಲ್ಪನೆ ಶಿಲ್ಪವನೆ ಉಸಿರಾಡಿ ಇಂದ್ರಿಯಗಳ ನಿಗ್ರಹಿಸಿ ಅತೀಂದ್ರಿಯ […]

ಕಾವ್ಯಯಾನ

ರೆಕ್ಕೆ ಮುರಿದಾಗ… ಚೇತನಾ ಕುಂಬ್ಳೆ ಲೋಹದ ಹಕ್ಕಿಯೊಂದು ರೆಕ್ಕೆ ಮುರಿದುಕೊಂಡು ಪ್ರಪಾತಕ್ಕೆ ಬಿದ್ದಾಗ, ಅಲ್ಲಿ ಉರುಳಿ ಬಿದ್ದು ಅಸುನೀಗಿದ್ದು ಬರೇ ಜೀವಗಳು ಮಾತ್ರ ಆಗಿರಲಿಲ್ಲ. ಹಲವು ಕುಟುಂಬಗಳ ಆಧಾರಸ್ತಂಭಗಳಾಗಿತ್ತು. ಅಲ್ಲಿ ಕಳೆದುಕೊಂಡದ್ದು ಸ್ನೇಹ ಸಂಬಂಧಗಳ ಕೊಂಡಿಯಾಗಿತ್ತು. ಒಬ್ಬರಿಗೆ ಪ್ರೀತಿಯ ಒಡಹುಟ್ಟಿದವರು ಮತ್ತೊಬ್ಬರಿಗೆ ಸ್ನೇಹಿತರು ಮಗದೊಬ್ಬರಿಗೆ ಬಾಳಿಗೆ ಬೆಳಕಾಗಿದ್ದ ಹೆತ್ತವರು ಕೆಲವರಿಗೆ ಜೀವದುಸಿರಾಗಿದ್ದ ಬಾಳಸಂಗಾತಿಗಳು, ಕರುಳಬಳ್ಳಿಗಳು ಮತ್ತೂ ಕೆಲವರಿಗೆ ಸಂಬಂಧಿಕರು ಲೋಹದ ಹಕ್ಕಿಯೊಂದು ರೆಕ್ಕೆ ಮುರಿದುಕೊಂಡು ಪ್ರಪಾತಕ್ಕೆ ಬಿದ್ದಾಗ, ಅಲ್ಲಿ ನುಚ್ಚುನೂರಾದದ್ದು ಕೇವಲ ದೇಹಗಳೂ ಎಲುಬುಗಳೂ ಮಾತ್ರವಾಗಿರಲಿಲ್ಲ ಹೆಣೆದಿಟ್ಟ […]

ಕಾವ್ಯಯಾನ

ತಂಗಾಳಿ! ಕೆ.ಬಿ.ವೀರಲಿಂಗನಗೌಡ್ರ ಅವಳೆಂದರೆ.. ತೊರೆದವನಿಗೆ ಅರಳಿಮರವಾದವಳು ಅವಳೆಂದರೆ.. ಕೂಡಬೇಕೆಂದವನಿಗೆ ಅನುಭವಮಂಟಪವಾದವಳು ಅವಳೆಂದರೆ.. ಹೋರಾಟಗಾರನಿಗೆ ಊರುಗೋಲಾಗಿ ನಿಂತವಳು ಅವಳೆಂದರೆ.. ಸಮತೆಯೆಂದವನಿಗೆ ತಕ್ಕಡಿ ಹಿಡಿದು ನಿಂತವಳು ಅವಳೆಂದರೆ.. ಎದೆಯದನಿಗೆ ಸ್ವಾತಿ ಹನಿಯಾದವಳು ಅವಳೆಂದರೆ.. ಬೆಳೆಸಲೆಂದೇ ಬೇರಾಗಿ ಕೆಳಗಿಳಿದವಳು ಅವಳೆಂದರೆ.. ಕಾಣದ ತಂಗಾಳಿ ಅರ್ಥವಾಗದ ಅಮೂರ್ತ. *******

ಕಾವ್ಯಯಾನ

ಸರಸ ಬಾಲಕೃಷ್ಣ ದೇವನಮನೆ ಹುಣ್ಣಿಮೆಯ ಶೃಂಗಾರದಾಟಕೆಉದ್ರೇಕಗೊಂಡು ಮೊರೆಯುತ್ತಿದೆ ಕಡಲುದಂಡೆಯಲ್ಲಿ…ಎದೆಯಿಂದ ನಾಭಿಯಲಿ ಸುಳಿದುತೊಡೆಸಂಧಿಯಲಿ ಕುದಿಯುತ್ತಿದೆ ಉಸಿರು… ಮೌನವನು ಹೊದ್ದ ತಿಂಗಳುಮುಚ್ಚಿದ ರೆಪ್ಪೆ;  ಕಚ್ಚಿದ ತುಟಿ,ಕಿವಿಯ ಪದರದಲಿ ಮುಲುಕಾಟದಾಲಾಪ,ಕುಳಿರ್ಗಾಳಿ ಸೋಕಿದ ಬೆರಳುಮೈಮುರಿದ ತೋಳುಉಸಿರಿನೇರಿಳಿತಕಿಬ್ಬೊಟ್ಟೆಯಲಿ ಬಿಗಿತ;ನಡುವಿಂದ ಕಾಲ್ಸೆಳೆತ. ಚದುರಿದ ಮರಳುಹಾಸಿಗೆ, ಕೆದರಿದ ಮುಂಗುರುಳುಗೀರಿದ ಬೆನ್ನುಉಕ್ಕಿದ ಬೆವರು ಹರಿದುಒಡಲೊಳಗೆ ಜೀವಜಲ ಪುಟಿದುಗರ್ಭಗಡಲಲ್ಲಿ ಪುಳಕ..! ಮೊರೆತ ತಗ್ಗಿದ ಕಡಲು ಶಾಂತಪ್ರಶಾಂತ ಮುಗುಳು ಧನ್ಯ!! *******

ಕಾವ್ಯಯಾನ

ಗಝಲ್ ಅಮೃತ ಎಂ ಡಿ ಕಣ್ಮುಚ್ಚಿ ನೋವುಗಳನ್ನೇ ಸಹಿಸಿಕೊಳ್ಳುವೆ ಗೆಳೆಯ ನಿನ್ನ ಹೆಸರಲ್ಲಿ ನನ್ನಯ ಉಸಿರುಂಟು ಗೆಳೆಯ ಆಗಾಗ ಉಸಿರಾಡೋ ಗಾಳಿಯಲ್ಲಿ ನಿನ್ನಯ ಹೆಸರನ್ನೇ ಹುಡುಕುವ ಹುಚ್ಚಾಟದ ಅತಿರೇಕವುಂಟು ಗೆಳೆಯ ಶ್ರೀಗಂಧದ ಘಮಲು ಕೂಡ ಪೈಪೋಟಿ ನೀಡುತ್ತಿರುವಾಗ ಚಂದದ ಮೋರೆಗೆ ಎಲ್ಲಿಲ್ಲದ ಅಂದವುಂಟು ಗೆಳೆಯ ನಿನ್ನೊಲವ ನೆರಳಲ್ಲಿ ಮುಳ್ಳು ಹಾದಿಯು ಕೂಡ ಹೂವಿನ ಹಾಸಿಗೆ ಆಗುವುದೆಂಬ ಆಸೆವುಂಟು ಗೆಳೆಯ “ಅಮ್ಮು”ವಿನ ಸಂತೋಷದ ಪರಿಛಾಯೆಯು ನಿನ್ನ ಸಂಪ್ರೀತಿಯ ಸಾಂಗತ್ಯದಲ್ಲೇ ಉಂಟು ಗೆಳೆಯ ************

ಕಾವ್ಯಯಾನ

ಬೊಗಸೆಯೊಳಗಿನ ಬಿಂದು ಎನ್. ಶೈಲಜಾ ಹಾಸನ ಬಿಟ್ಟು ಬಿಡು ಗೆಳೆಯನನ್ನಷ್ಟಕ್ಕೆ ನನ್ನರೆಕ್ಕೆ ಹರಿದ ಹಕ್ಕಿಹಾರಿಹೋಗುವುದೆಲ್ಲಿಇಷ್ಟಿಷ್ಟೆ ಕುಪ್ಪಳಿಸಿಅಲ್ಲಲ್ಲೆ ಅಡ್ಡಾಡಿನಿನ್ನ ಕಣ್ಗಾವಲಲ್ಲಿಯೇಸುತ್ತಿ ಸುಳಿದುಒಂದಿಷ್ಟೆ ಸ್ವಚ್ಛಗಾಳಿಸೋಕಿದಾ ಕ್ಷಣಧನ್ಯತೆಯ ಪುಳಕತಣ್ಣನೆಯ ನಡುಕಎದೆಯ ತಿದಿಯೊಳಗೆನೀನೇ ಒತ್ತಿದ ಕಾವುಭಾವನೆಗಳ ಬೇಯಿಸಿಮನವೀಗ ಚಿತೆಯೊಳಗೆಬೆಂದ ಕುಂಭಬಿಟ್ಟರೂ ಬಿಡಲಾರೆಎನುವ ಮಾಯೆಅಟ್ಟಾಡಿಸುತ್ತಿದೆಗೆಲುವಿನ ಹಾದಿಯನೀನೇ ಹಾರ ಬಿಟ್ಟರೂರೆಕ್ಕೆ ಇಲ್ಲದ ನಾನುಮತ್ತೇ ನಿನ್ನ ಉಡಿಗೆಬೊಗಸೆಯೊಳಗಿನ ಬಿಂದುಮುಷ್ಠಿಯೊಳಗೆ ಆವಿಎತ್ತತ್ತ ಸರಿದರೂಮತ್ತೆ ಅಲ್ಲಿಗೇಪಯಣದ ಹಾದಿದೂರ ದೂರಕೆ ********

ಕಾವ್ಯಯಾನ

ಅರಿಯದ ಹಾಡು ಡಾ.ವೈ.ಎಂ.ಯಾಕೊಳ್ಳಿ ಗಜದಾಲಯದಲಿ ಮೂಡಿದ ಸುಂದರ ರಾಗ. ತೇಲಿ ಬಂದಿತು ಅಂತಪುರದ ಹಂಸತೂಲಿಕದೊಳಗೆ ಬಗೆಯಿತು ರಾಣಿಯ ಎದೆಯನು ಯಾರಿಗೂ ತಿಳಿಯದ ಹಾಗೆ ತಡೆಯಲೇ ಇಲ್ಲ ಕಾವಲುಭಟರ ಸಾವಿರ ಕಾಲಾಳುಗಳ ಪಡೆ ಕೊಟ್ಟಳು ಮನವನು ಎಂದೂ ನೋಡದ ದನಿಗೆ ಮನವನು ಬಗೆದ ರಾಗವ ಬೆನ್ನತ್ತಿ ಹೊರಟೇ ಬಿಟ್ಟಿತು ನಿಲ್ಲದೆ ಎರಡು ಗಳಿಗೆ ಲೋಕದ ವಿಕಾರ ಧರಿಸಿತ್ತು ಮಾನವನ ಆಕಾರ, ಎಲ್ಲಿದೆ ವಿವೇಚನೆ ಒಲಿದ ಎದೆಗೆ ತಡಮಾಡದೇ ಕೊಟ್ಟಿತು ದಾನ ಹೃದಯವ ಮಾವುತನ ಎದೆಯೊಸಗೆಗೆ ಆಹಾ !ಲೋಕದ‌ ಕಣ್ಣಿಗೆ […]

Back To Top