Category: ಕಾವ್ಯಯಾನ

ಕಾವ್ಯಯಾನ

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾಯಕದ ದಿನ ನಗರ ಸತ್ತು‌ ಹೋಗಿದೆ ನಾಗರಾಜ ಹರಪನಹಳ್ಳಿ ಕಾಯಕದ ದಿನ ನಗರ ಸತ್ತು‌ ಹೋಗಿದೆ ಕಾಯಕ‌ ಜೀವಿಗಳ ದಿನ ನಗರ ಸತ್ತು‌ ಹೋಗಿದೆ ಬೆವರು ಸುರಿಸಿ‌ ಬದುಕುವ ಜನರ‌ ಹೊರದಬ್ಬಿದೆ ಮಹಲುಗಳ ಕಟ್ಟಿ ಗುಡಿಸಲಲಿ ಬದುಕಿದ ಜನ ಗುಳೆಬಂದ ನಾಡಿಗೆ ಹಸಿವು ಹೊತ್ತು ಮರಳಿದ್ದಾರೆ ಮಡಲಲ್ಲಿ ಕಣ್ಣೀರು ನಿಟ್ಟುಸಿರು ತುಂಬಿಕೊಂಡು ಭೂಮಿ ಬಿಟ್ಟು ಬಂದದ್ದಕ್ಕೆ ಪರಿತಪಿಸಿದ್ದಾರೆ ಈ‌ ಬಿಸಿಲಿಗೂ ಕರುಣೆಯಿಲ್ಲ ಕಾಯಕದ ಮಂತ್ರ ಕೊಟ್ಟ ಬಸವಣ್ಣ, ದುಡಿಮೆಯಲ್ಲಿ ಪಾಲು ಕೇಳಿದ ಕಾರ್ಲಮಾರ್ಕ್ಸ ಮಣ್ಣಲ್ಲಿ ಮಣ್ಣಾಗಿ […]

ಕಾರ್ಮಿಕ ದಿನದ ವಿಶೇಷ-ಕವಿತೆ

ಕವಿತೆ ಕಾರ್ಮಿಕರು ನಾವು ಡಾ.ಪ್ರಸನ್ನ ಹೆಗಡೆ ಕಾರ್ಮಿಕರು ನಾವು ಕಾರ್ಮಿಕರು ನಾವು ಯಂತ್ರದ ವೀಣೆಯ ತಂತಿಯ ಮೀಟುವ ವೈಣಿಕರು ನಾವು ಕಾರ್ಮಿಕರು ನಾವು ಆರ್ಥಿಕ ದೋಣಿಯ ಚಂದದಿ ನಡೆಸುವ ನಾವಿಕರು ನಾವು ಕಾರ್ಮಿಕರು ನಾವು ಒಡೆಯನ ಕನಸಿನ ಬೀಜವ ಬಿತ್ತುವ ಜೀವಿಗಳು ನಾವು ಕಾರ್ಮಿಕರು ನಾವು ಹಗಲಿರುಳೆನ್ನದೆ ನಿಲ್ಲದೆ ನಡೆಯುವ ಕಾಲನ ಕಾಲುಗಳು ನಾವು ಕಾರ್ಮಿಕರು ನಾವು ಮಳೆಬಿಸಿಲೆನ್ನದೆ ಕಾರಣ ಒಡ್ಡದೆ ದುಡಿಯುವ ಜನ ನಾವು ಕಾರ್ಮಿಕರು ನಾವು ಗಣಿಯೊಳಗಿಳಿದು ಕುಲುಮೆಯೊಳ್ಬೆಂದು ಹೊನ್ನಾಗುವ ಜನ ನಾವು ಕಾರ್ಮಿಕರು […]

ಕಾವ್ಯಯಾನ

ಸುರಿಮಳೆ ವೀಣಾ ರಮೇಶ್ ಧೋ ಎಂದಿದೆ ನಗುಮಳೆ ಮನಸಿನ ಸುಂದರ ನಗರಿಯಲಿ ನಿನ್ನ ನಸುನಗುವಿನ ಸಿಹಿ ಸಿಂಚನದ ಕಳೆ ಬಿಸಿಯೇರಿದ ವಿರಹದ ಕಾವಿಗೆ ಒಂದಷ್ಟು ತಂಪು ನೀಡಿದೆ,,ಎಡಬಿಡದೆ ಸುರಿವ ನಿನ್ನ ನಗುವಿನ ನರ್ತನದಲಿ ಮನದ ಇಳೆ ನನ್ನ ಮೈ ಮನಗಳು ಒದ್ದೆಯಾಗಿವೆ ತುಸು ಮೆಲ್ಲ ಬೀಸಿದೆ ನೆನಪಿನ ತಂಗಾಳಿ ಕತ್ತಲೆಯ ಮೌನವಷ್ಟೇ ಸೀಳಿದೆ ತಬ್ಬಿ ಈ ಸುಳಿಗಾಳಿ ಮತ್ತದೇ ಸಿಹಿ ಹನಿಗಳು ಆಳಕೆ ಸುರಿದಿದೆ, ನಾ ತೇಲಿ ಹೋಗುವಷ್ಟು ಹರ್ಷ ಧಾರೆಯಲಿ ನೆನೆಯದಂತೆ ಬಚ್ಚಿಟ್ಟು ಕೊಂಡಿರುವೆ ನೆನಪುಗಳು […]

ಕಾವ್ಯಯಾನ

ಸ್ವರ ಮಾಧುರ್ಯ ಬಿ ಅರುಣ್ ಕುಮಾರ್ ಹೃದಯ ವೀಣೆ ನಾದ ಅಲೆ ಅಲೆಯಾಗಿ ಮನ ಕಡಲಿಗೆ ತಾಕುತಿದೆ ನೋಡು ಒಳಗೆ ಒಮ್ಮೆ ಕಡಲತೀರ ತೆರೆ ತಾಕಲಾಟ ಭಾವಕೋಶ ಪತಂಗದಾಟ ಬಾನುಲಿ ದಿಗಂತ ಮುಟ್ಟಲು ಹಕ್ಕಿಗಳುಲಿಯುತ ಪುಟ ನೆಗೆತ ಪಂಚ ಇಂದ್ರಿಯ ನಿಗ್ರಹಿಸಿ ಒಂದೊಮ್ಮೆ ಕೇಳಿ ನೋಡು ಕರ್ಣಾನಂದ ಉಕ್ಕಿ ಹರಿದು ಆನಂದಬಾಷ್ಪ ಹೊಮ್ಮುವುದು ಒಲವಿನಾಲಿಂಗನ ಮಿಲನ ನಿಸರ್ಗ ಸ್ತನಪಾನ ಚೈತನ್ಯ ಏಳು ಸಾಗರಗಳ ಎಲ್ಲೆ ಮೀರಿ ಕೋಗಿಲೆ ಕಳಕಂಠ ಬೆರೆಸಿದೆ ನಾಕು ತಂತಿಯಲಿ ಹುಟ್ಟಿದ ಸಪ್ತ ಸ್ವರಗಳ […]

ಕಾವ್ಯಯಾನ

ಗಝಲ್ ತೇಜಾವತಿ ಹೆಚ್.ಡಿ. ಮೌನದ ಮಾತು ಅರ್ಥವಾಯಿತು ನಿನ್ನಿಂದ ಕಾಣದ ಕನಸು ಗೋಚರವಾಯಿತು ನಿನ್ನಿಂದ ಹದವಾದ ಭೂಮಿ ಬಂಜರಾಗಿತ್ತು ನೀನಿಲ್ಲದೆ ಉತ್ತುವ ಕಾರ್ಯ ಅರ್ಥವಾಯಿತು ನಿನ್ನಿಂದ ಪ್ರೀತಿ ಹೃದಯದಿಂದ ಒಸರುತ್ತಿತ್ತು ರಸಜೇನಾಗಿ ಸವಿಯ ಸವಿವುದು ಶುರುವಾಯಿತು ನಿನ್ನಿಂದ ನೆರಳೂ ಹಿಂಬಾಲಿಸಲು ಅದುರುತ್ತಿತ್ತು ನನ್ನನ್ನು ಕಣ್ಣಲ್ಲಿ ಬೆಳಕು ಒಮ್ಮೆಲೇ ಪ್ರಜ್ವಲಿಸಿತು ನಿನ್ನಿಂದ ಕಾಯಕ್ಕೂ ಆತ್ಮಕ್ಕೂ ಹೊಂದಿಕೆ ಇರಲಿಲ್ಲ ಎನ್ನಲ್ಲಿ ಮನದೊಳಗೆ ತೇಜಸ್ಸಿರುವುದು ತಿಳಿಯಿತು ನಿನ್ನಿಂದ *******

ಕಾವ್ಯಯಾನ

ನನ್ನೂರಿನಲ್ಲಿ ಎಸ್.ಕಲಾಲ್ ನೀ ಬರಲೆಂದೆ ಮರುಭೂಮಿ ಹಸಿರಾಗಿದೆ ನನ್ನೂರಿನಲ್ಲಿ.. ನೀ ನೋಡಲೆಂದೆ ಕಲ್ಲು-ಕಗ್ಗಲ್ಲು ಶಿಲೆಯಾಗಿದೆ ನನ್ನೂರಿನಲ್ಲಿ. ಪಾಳು ಮಸಣದ ಮಲ್ಲಿಗೆಯರಳಿ ಪಾವನವಾಗಿದೆ ನಿನ್ನ ಮುಡಿ ಸೇರಲೆಂದೆ ನನ್ನೂರಿನಲ್ಲಿ.. ಇತಿಹಾಸದ ರಾಜ-ಮಹಾರಾಜರು ಮೆರೆದ ನೆಲ ನಿನ್ನ ಹೆಜ್ಜೆಗೆ ಕಾಯುತ್ತಿದೆ ನನ್ನೂರಿನಲ್ಲಿ.. ಆ ಆಗಸದ ಚಂದಿರನನ್ನು ಗಲ್ಲಿಗೆರಿಸಿದ್ದೇನೆ ನಿನ್ನ ಕದಿಯದಿರಲೆಂದು ನನ್ನೂರಿನಲ್ಲಿ.. ನನ್ನ ಸಾವಿರ ಕನಸಿನ ಹೆಬ್ಬಾಗಿಲು ನೆಟ್ಟಿದ್ದೇನೆ ಬಲಗಾಲಿಟ್ಟು ಬಂದುಬಿಡು ನನ್ನೂರಿನಲ್ಲಿ.. ನೀ ಬರುವ ಹಾದಿಯ ಕಾದು ಕಾದು ಬೀದಿಯಲ್ಲಿ ಹೆಣವಾಗಿವೆ ಮೈಲುಗಲ್ಲುಗಳು ನನ್ನೂರಿನಲ್ಲಿ.. ನಿನ್ನ ಗೆಜ್ಜೆಯ ನಾದವ […]

ಕಾವ್ಯಯಾನ

ನಿಲ್ಲದ ಆಳಲು ಕವಿತಾ ಮಳಗಿ ಎನು ಮಾಡುವುದು.. ನಮ್ಮ್ದು ಬಾಳೆ ಹೀಗೇ ಹೇಗೆ ಸಾಧ್ಯ ನಿಮ್ಮಂತೆ ಇರಲೂ… ಬಿಸಿಲಿರಲಿ ಮಳೆಯಿರಲಿ ಅನುದಿನವು ಹೋರಾಟ ಬಾಳಿಗೆ ಅದುವೇ ಅಭ್ಯಾಸವು.. ಸುಖ ಇಲ್ಲ ಎನ್ನುವ ಮಾತು ನೋವಿನ ಸಂಗತಿ ಇದು ಸತ್ಯ ಎನು ಮಾಡಲು ಸಾಧ್ಯವಿಲ್ಲ…. ನೆಮ್ಮದಿ ಇಲ್ಲ ಕಟಿಬಿಟಿ ಜೀವನ ಕೊನೆ ಇಲ್ಲದ ಭವಣೆಗಳು ಹೇಳಲಿಲ್ಲ ಯಾರಿಗೂ….. ಧನಿಕ ನೀವೆಲ್ಲರೂ ಬದುಕಲ್ಲಿ ಶ್ರೀಮಂತ ನನ್ನ ರಾಜ್ಯದಲ್ಲಿ ನಾನು ನಾವಿಲ್ಲದೆ ಏನೂ ಇಲ್ಲ… ನಮ್ಮಿಂದ ಗುಡಿಗೋಪುರ ನಮ್ಮಿಂದ ಮನೆಮಠ.. ಆದ್ರೂ […]

ಮುಚ್ಚಿದ ಬಾಗಿಲು-ತೆರೆಯದ ಕಿಟಕಿ

ಮಾಲತಿಹೆಗಡೆಯವರ ಹೊಸ ಅಂಕಣ, ಪ್ರತಿನಿತ್ಯ ಪ್ರಕಟವಾಗಲಿದೆ ಮುಚ್ಚಿದ ಬಾಗಿಲು-ತೆರೆಯದ ಕಿಟಕಿ ಭಾಗ-10 ಅನ್ನದಾತಾ ಸುಖಿಭವ.. ಮನೆಯ ಬಾಗಿಲು ಕಿಟಕಿಗಳನ್ನು ಸದಾ ಮುಚ್ಚಿಟ್ಟರೂ ಅಡುಗೆ ಮನೆಯಲ್ಲಿ ತುಂಬಿಟ್ಟ ಡಬ್ಬಿಗಳು ಖಾಲಿಯಾದಾಗ ಬಾಗಿಲು ತೆಗೆದು ಕಿರಾಣಿ ಅಂಗಡಿಗೆ ಧಾವಿಸುತ್ತೇವೆ. ಸೊಪ್ಪು ತರಕಾರಿ ಎಂಬ ವ್ಯಾಪಾರಿಗಳ ಕೂಗು ಕೇಳುದಾಗ ಕಿಟಕಿ ಬಾಗಿಲನ್ನು ಕೊಂಚ ತೆಗೆದು ಅವರು ತಂದಿರುವ ತರಕಾರಿಯಲ್ಲಿ ನಮಗೆ ಬೇಕಾದದ್ದೇನಾದರೂ ಇದೆಯೇ ನೋಡುತ್ತೇವೆ. ಬೇಕಾದ್ದನ್ನೆಲ್ಲ ಖರೀದಿಸಿ ರುಚಿಕಟ್ಟಾಗಿ ಅಡುಗೆ ಮಾಡಿ ಉಣ್ಣುವಾಗ ನಾವು ಇವುಗಳನ್ನೆಲ್ಲ ಬೆಳೆದ ರೈತರ ಬಾಳು ತಣ್ಣಗಿರಲೆಂದು […]

ಕಾವ್ಯಯಾನ

ಗಝಲ್ ಎ.ಹೇಮಗಂಗಾ ನಡುರಾತ್ರಿ ಎದ್ದು ಹೋಗುವ ಮುನ್ನ ಒಮ್ಮೆ ಹಿಂತಿರುಗಿ ನೋಡಬೇಕಿತ್ತು ಯಶೋಧರೆಯ ಅಳಲ ಕೊನೆಯ ಬಾರಿಗಾದರೂ ಕೇಳಬೇಕಿತ್ತು ನೀನೇನೋ ಕಷ್ಟ, ಕೋಟಲೆಯ ಸಂಕಟ ಕಳೆಯಲು ಹೊರಟವನು ಸಂಗಾತಿಯಿರದ ಒಂಟಿ ಜೀವದ ನೋವಿಗೆ ಮಿಡಿಯಬೇಕಿತ್ತು ಸಿರಿ ಸಂಕೋಲೆ ಕಳಚಿ ಯಾರ ಗೊಡವೆಯಿರದೇ ನಡೆದುಹೋದೆ ನೀನೇ ಎಲ್ಲವೂ ಎಂದುಕೊಂಡವಳ ಬಾಳು ಬರಡು ಮಾಡಬಾರದಿತ್ತು ಧ್ಯಾನ,. ಚಿಂತನೆಗಳಲ್ಲಿ ತೊಡಗಿದವನಿಗೆ ಸಂಸಾರದ ಬಂಧವೆಲ್ಲಿ ? ನಿನ್ನನೇ ನಂಬಿದ ಜೀವವ ಧಿಕ್ಕರಿಸಿದ ಯಾತನೆ ಅರಿವಾಗಬೇಕಿತ್ತು ಗೌತಮ ಬುದ್ಧನಾಗಿ ಅರಿವಿನ ಗುರುವಾಗಿ ನಂಬಿದವರ ಉದ್ಧರಿಸಿದೆ […]

ಕಾವ್ಯಯಾನ

ಇಷ್ಟೇ ಸಾಕು! ಮಮತ ಕೆಂಕೆರೆ ಮನೆಯಲ್ಲಿ ಇಲ್ಲದಿದ್ದರೂ ಮನಸಲ್ಲಿ ಇದ್ದರೆ ಸಾಕು ನನಸಲ್ಲಿ ಸಿಗದಿದ್ದರೂ ಕನಸಲ್ಲಿ ಬಂದರೆ ಸಾಕು ಹೆಸರಲ್ಲಿ ಸೇರದಿದ್ದರೂ ಉಸಿರು ಮಿಡಿದರೆ ಸಾಕು ಗಳಿಸಿ ಗೌರವ ತರದಿದ್ದರೂ ಗೆಳೆಯನಾಗಿದ್ದರೆ ಸಾಕು ಇಷ್ಟವೆ ಇಲ್ಲವೆಂದಾದರೂ ಕಷ್ಟ ಕೊಡದಿದ್ದರೆ ಸಾಕು ಅಪ್ಪಿ ಮುದ್ದಾಡದಿದ್ದರೂ ಬೆಪ್ಪಳನ್ನಾಗಿಸದಿದ್ದರೆ ಸಾಕು ಜೊತೆಜೊತೆ ಸಾಗದಿದ್ದರೂ ಹಿತವ ಬಯಸಿದರೆ ಸಾಕು ಹೂನಗೆಯ ತುಳುಕಿಸದಿದ್ದರೂ ಹಗೆಯಾಗದಿದ್ದರೆ ಸಾಕು ದೇಹ-ಮೋಹ ಬೆಸೆಯದಿದ್ದರೂ ಜೀವ-ಭಾವ ಬೆಸೆದರೆ ಸಾಕು ದೂರದಲ್ಲಿ ಎಲ್ಲೋ ನೆಲೆಸಿದರೂ ಎದುರಾದಾಗ ವಾರೆನೋಟ ಸಾಕು ********

Back To Top