Category: ಕಾವ್ಯಯಾನ

ಕಾವ್ಯಯಾನ

ಅವ್ಯಕ್ತ

ಕವಿತೆ ಅವ್ಯಕ್ತ ಡಾ.ಪ್ರೀತಿ. ಕೆ. ಎ  ಹೇಳಿಬಿಡಬಹುದಿತ್ತು ನಾನುನಿನ್ನ ಪ್ರತಿಯೊಂದು ಮಾತುನನ್ನಲ್ಲಿ ಅನುರಾಗದ ಅಲೆಗಳನ್ನುಎಬ್ಬಿಸುವುದೆಂದು ನಿನ್ನ ಸಾಮೀಪ್ಯವು ನನಗೆಎಷ್ಟೊಂದು ಮುದನೀಡುವುದೆಂದು ಹೇಳಿಬಿಡಬಹುದಿತ್ತು ನಾನುನಿನ್ನ ಹೊಗಳಿಕೆಯೊಂದುಇಂದಿಗೂ ಕೂಡನನ್ನ ಕೆನ್ನೆಯ ರಂಗೇರಿಸುವುದೆಂದು ನನ್ನ ನಗೆಯ ಹಿಂದಿನಕಾರಣವು ನೀನಷ್ಟೇಆಗಿರುವೆಯೆಂದು ಹೇಳಿಬಿಡಬಹುದಿತ್ತು ನಾನುನಿನ್ನ ಒಂದೇ ಒಂದು ಸ್ಪರ್ಶನನ್ನೊಳಗಿನ ಭಾವ ತಂತಿಯನ್ನುಮೀಟುವುದೆಂದು ನಿನ್ನ ಬಾಹುಗಳಲ್ಲಿನನ್ನನ್ನೇ ನಾನುಕಳೆದುಕೊಳ್ಳುತ್ತೇನೆಂದು ಹೇಳಿಬಿಡಬಹುದಿತ್ತು ನಾನುನೀನು ನನ್ನೊಡನಿದ್ದ ಕ್ಷಣನನಗೆ ಮತ್ತೇನೂನೆನಪಾಗುವುದಿಲ್ಲವೆಂದು ಎದೆ ಬಡಿತ ನಿಲ್ಲುವ ತನಕನನ್ನ ಹೃದಯ ನಿನ್ನ ಹೆಸರನ್ನಷ್ಟೇಕೂಗುವುದೆಂದು ಆದರೂ ಹೇಳಲಿಲ್ಲಏಕೆಂದರೆ ನನಗೆ ಗೊತ್ತುನಿನ್ನೆಡೆಗಿನ ನನ್ನ ಪ್ರೀತಿಹೇಳಿದರಷ್ಟೇ ನಿನಗೆ ಗೊತ್ತಾಗುವಷ್ಟುಬಲಹೀನವಲ್ಲವೆಂದು […]

ಪ್ರಕೃತಿ

ಕವಿತೆ ಪ್ರಕೃತಿ ಭಾಗ್ಯ ಸಿ ಮನುಜ ಜೀವನದ ಅವಿಭಾಜ್ಯ ಅಂಗ ಪ್ರಕೃತಿಜತನದಲಿ ಕಾಪಾಡಿಕೊಳ್ಳುವುದಾಗಬೇಕು ನಮ್ಮ ಪ್ರವೃತ್ತಿಗಾಳಿ,ಬೆಳಕು,ನೀರು ಎಲ್ಲಾ ಪ್ರಕೃತಿಯ ಒಡಲಲಿ ನಗುತಿರೆಮನುಜನ ಜೀವನವು ವಜ್ರದಂತೆ ಹೊಳೆಯುತ್ತಿರೆ ವಿಪರೀತ ಬಯಕೆಗೆ ಪರಿಸರ ಬಲಿಪ್ರಾಣಿ ಪಕ್ಷಿಗಳ ಆಸರೆಗಿಟ್ಟ ಕೊಡಲಿಸಣ್ಣ ಮಳೆಗೂ ಕುಸಿಯುತ್ತಿದೆ ಬೆಟ್ಟ ಗುಡ್ಡಜಲಪ್ರಳಯ, ಚಂಡಮಾರುತ ಸೀಳಿದೆ ಅಡ್ಡಡ್ಡ ಬಳಲಿಕೆ ನಿವಾರಣೆಗೆ ಬೇಕು ನೀರುಪಂಚಭೂತಗಳ ನಿರ್ವಹಣೆ ಹೊತ್ತವರಾರುಪ್ರಕೃತಿಯ ಒಡಲ ಸೀಳಿ ತಲೆಯೆತ್ತಿವೆ ಕಟ್ಟಡಗಳುಅವೈಜ್ಞಾನದ ಫಲವಾಗಿ ಉರುಳುತ್ತಿವೆ ತಲೆಗಳು ಅಪ್ಪಿಕೋ ಚಳುವಳಿಯ ರೂವಾರಿ ತಾಯಿಹದಿನೇಳನೆ ಶತಮಾನದ ಅಮೃತಾದೇವಿ ಬಿಷ್ಣೋಯಿಅಧಿಕಾರವಲ್ಲ ಅಸ್ತಿತ್ವವಿದೆ ನಮಗೆ […]

ನಕ್ಷತ್ರ ನೆಲಹಾಸು

ಕವಿತೆ ನಕ್ಷತ್ರ ನೆಲಹಾಸು ಸ್ವಭಾವ ಕೋಳಗುಂದ ನಕ್ಷತ್ರಗಳ ಹಾದಿಗುಂಟ ಹಾಸಿಸಿಂಗರಿಸಿ ನಿನ್ನ ಕೊಳಲ ಪಾದನೆನಪಿನೆದೆಯ ತುಳಿಯಲಾಶಿಸಿದೆ ಅರ್ಧ ಕತ್ತಲಲಿ ಎದ್ದು ಹೊರಟುನಿನ್ನ ತಬ್ಬಲಿ ಮಾಡಿನಾ ಬುದ್ಧನಾಗಲಾರೆ ಈ ಹಾದಿಗಳೆಲ್ಲಾಎಷ್ಟೊಂದು ಆಮಿಷ ಒಡ್ಡುತ್ತಿವೆಹೃದಯ ಬಂಧಿಯ ಮುಕ್ತಿಗಾಗಿ ನನ್ನೊಳಗಿನ ಸೀತಾಮೀನ ಮೊಟ್ಟೆಯ ಕಾವಲಲಿಸಾವಿರ ಸಂತತಿಯ ಬೆಳಕು ನನ್ನ ಅಸ್ತಿತ್ವದ ಬಿಂದುವಿಗೆನಿನ್ನೊಲವಿನ ಮೊಲೆಹಾಲ ಸ್ಪುರಣಭರವಸೆಯ ಮುತ್ತ ಮಣಿಹಾರ ಹಿಮ ಮಣಿಯ ಮರಳಿನಮರೀಚಿಕೆಯ ಸಾಗರಪಾರಿಜಾತದ ಪರಿಮಳದ ಸಂದೇಶ ಹನಿ ಬೀಜಕ್ಕೆ ಸಾವಿರ ಸಂತಾನನೆಲದ ನಾಲಗೆಯಲಿಸಾವಿನ ಸಂಚಾರಿ ಹಸಿ ಮಣ್ಣ ಮೈಯೊಳಗೆಕನಸ ಕಲ್ಪನೆಯ ಕೂಸುಬಿತ್ತಿ […]

ಗಝಲ್

ಗಝಲ್ ರತ್ನರಾಯ ಮಲ್ಲ ಅಕ್ಕಸಾಲಿಗನಲ್ಲಿ ಕಾಲ್ಗೆಜ್ಜೆ ತಂದಿರುವೆನು ಪ್ರೀತಿಯಿಂದಬಲಗಾಲು ಮುಂದೆಯಿಡು ತೊಡಿಸುವೆನು ಪ್ರೀತಿಯಿಂದ ಮಯೂರವು ವಿಹರಿಸಿದಂತಾಗುತಿದೆ ಈ ಹೃದಯದಲ್ಲಿಹಂಸದ ನಡಿಗೆಯನು ಪ್ರೀತಿಸುತಿರುವೆನು ಪ್ರೀತಿಯಿಂದ ಹಕ್ಕಿಗಳ ಕಲರವವು ಆಲಂಗಿಸುತಿದೆ ಈ ಮೈ-ಮನಗಳನ್ನುಶಕುಂತಲೆಯ ನಾಟ್ಯದಿ ಮೈ ಮರೆತಿರುವೆನು ಪ್ರೀತಿಯಿಂದ ಗೆಜ್ಜೆ ಎದೆ ಬಡಿತದೊಂದಿಗೆ ಪ್ರೇಮ ರಾಗವ ನುಡಿಸುತಿದೆನಿದ್ದೆ ಮರೆತು ನಿನ್ನನ್ನೆ ಕನವರಿಸುತಿರುವೆನು ಪ್ರೀತಿಯಿಂದ ‘ಮಲ್ಲಿ’ ನಿನ್ನ ಹೆಜ್ಜೆಯಲ್ಲಿ ಗೆಜ್ಜೆಯನು ಹುಡುಕುತಿರುವನುನಿನ್ನ ಪಾದಗಳನ್ನು ಅಲಂಕರಿಸುತಿರುವೆನು ಪ್ರೀತಿಯಿಂದ **********************************

ಬಾಲ್ಯ

ಕವಿತೆ ಬಾಲ್ಯ ತಿಲಕ ನಾಗರಾಜ್ ಹಿರಿಯಡಕ ಅರೆ! ಎಷ್ಟು ಚೆನ್ನಾಗಿತ್ತಲ್ಲ?ಅಲ್ಲಿ ಯಾವ ನೋವಿನಹಂಗಿರಲಿಲ್ಲ….ಚಿಂತೆಗಳ ಬರೆಯಿರಲಿಲ್ಲಮುದವೀಯುತ್ತಿದ್ದವಲ್ಲಕಾಡು ಮೇಡುಗಳ ಅಲೆದಾಟಗದ್ದೆ ಬಯಲುಗಳ ಓಡಾಟ…ಲಗೋರಿ ಕಣ್ಣಾಮುಚ್ಚಾಲೆಚಿನ್ನಿದಾಂಡು ಉಯ್ಯಾಲೆಕ್ರಿಕೇಟು ಕುಂಟೆಬಿಲ್ಲೆಆಟಗಳಾಡಿ ರಾತ್ರಿಯಲ್ಲಿಕಾಲಿಗೆ ಚುಚ್ಚಿದ ಮುಳ್ಳುಗಳನೋವಿನ ಜೊತೆಹಿರಿಯರ ಬೈಗುಳದ ಜೋಗುಳಒಂದಷ್ಟು ಹಾಯಾದ ನಿದ್ದೆಮರವೇರಿ ಕೊಯ್ದಮಾವಿನ ಕಾಯಿಗಳಬಚ್ಚಿಟ್ಟು ಹಣ್ಣಾಗಿಸಿ ತಿಂದಸ್ವಾದ ನಾಲಗೆಯಲ್ಲಿ ಸದಾ ಅಮರಹಚ್ಚಿಟ್ಟ ಚಿಮಣಿ ದೀಪದಆಚೆಗೆ ಬೀಡಿ ಎಲೆಗಳ ಸುರುಳಿಸುತ್ತುತ್ತಿದ್ದ ಅಮ್ಮನ ಬೆರಳುಗಳುಈಚೆಗೆ ಪುಸ್ತಕಗಳ ಮೇಲೆಕಣ್ಣಾಡಿಸುತ್ತಿದ್ದ ನಾವುಗಳುಒಮ್ಮೊಮ್ಮೆ ಬೇಸರೆನಿಸಿದಾಗಪಠ್ಯ ಪುಸ್ತಕಗಳ ನಡುವೆಇರಿಸಿ ಓದುತ್ತಿದ್ದ ಕತೆ ಪುಸ್ತಕಗಳಮುಖಾಂತರ ಕಲ್ಪನಾ ಲೋಕದಲ್ಲಿಒಂದು ಸಣ್ಣ ವಿಹಾರ..ಮರೆಯಲಾಗದ್ದು, ಮರಳಿ ಬಾರದ್ದುಎಷ್ಟು […]

ಆಹುತಿ

ಕವಿತೆ ಆಹುತಿ ಅನಿಲ ಕಾಮತ ದೇಹ ಹಿಂಡಿಹಿಪ್ಪೆಯಾಗಿಸಿದೆಕಾರಿನಲ್ಲಿ ಬಸ್ಸಿನಲ್ಲಿಹಗಲಲ್ಲಿ ನಸುಕಿನಲ್ಲಿಕಾನನದಲ್ಲಿನೀರವ ಅಹನಿಯಲ್ಲಿ ಬೆಳಕು ಸೀಳುವ ಮುನ್ನಬ್ರೇಕಿಂಗ್ ನ್ಯೂಸ್‌ಗಳಿಗೆಆಹಾರಭುವನ ಸುಂದರಿಸ್ಪರ್ಧೆಯಲ್ಲಿದೇಹ ಸೌಂದರ್ಯದ ಬಗ್ಗೆತೀರ್ಪುಗಾರರತಾರೀಪು ಹೆಣ್ಣು ಭ್ರೂಣಪತ್ತೆ ಮಾಡುವತವಕದಲ್ಲಿಸ್ಕೆನ್ನಿಂಗ್ಮಿಷನ್ ಗಳಿಗೆಪುರುಸೊತ್ತಿಲ್ಲ ನದಿಯ ತಟದಲ್ಲಿರೇಲ್ವೆ ಸೇತುವೆಯಕೆಳಗೆಅರೆಬೆಂದ ಶವವಾಗಿಖಾಕಿಗಳಿಗೆ ಮಹಜರುಮಾಡಲು…. ****************

ಮಳೆಗಾಲದ ಬಿಸಿಲುಕವಿತೆ

ಕವಿತೆ ಮಳೆಗಾಲದ ಬಿಸಿಲು ಅಬ್ಳಿ,ಹೆಗಡೆ ಹಗಲ ಶಿಶು ಶಶಿಯೊಡನೆಆಟದಲಿ ಸೋತು.ಮುಗಿಲುಗಳ ಮರೆಯಲ್ಲಿಅಳುತಿಹನು ಕೂತು.ಮಗುವ ಕಾಣದ ತಾಯಿರಮಿಸಿ ತಾ ಕರೆಯೆ-ಕಣ್ಣೊರೆಸಿ ಹೊರ ಬಂದಮಗು-ನಗುವ ‘ಹೊಳೆಯೆ’. ******************************

ಬದುಕು- ಬವಣೆ

ಕವಿತೆ ಬದುಕು- ಬವಣೆ ಸಹನಾ ಪ್ರಸಾದ್ ಗಂಡ ಹೆಂಡಿರ ಸಂಬಂಧಸಂಸಾರಕ್ಕೆ ಇದೇ ಮೆರಗುಉಫ಼್ಫ಼್ ಹೇಳಲಾಗದು ಅನುಬಂಧಜತೆಗಿರುವರು ಸಾಯುವವರೆಗೂ ಆದರೆ ಇರಲೇಬೇಕಿಲ್ಲ ಪ್ರೀತಿವ್ಯಾವಹಾರಿಕವಾದರೂ ನಡೆದೀತುಇದ್ದರೆ ಸಮಾಜದ ಭೀತಿಪ್ರೀತಿಯೂ ಗಿಲೀಟು ಬತ್ತಿ ಹೋದ ಮೇಲೆ ಪ್ರೀತಿಯ ಚಿಲುಮೆಜತೆಗಿರುವುದೂ ಅನಿವಾರ್ಯವಾದಾಗಮುದುಡಿದ ಮನಸ್ಸುಗಳಿಗೆ ಎಲ್ಲಿದೆ ಒಲುಮೆಕಿತ್ತೇ ಹೋಯಿತೇನೋ ಅನಿಸುತ್ತೆ ಹೃದಯದ ಭಾಗ ನಮ್ಮ ಸಮಾಜದಲ್ಲಿ ಇಲ್ಲ ವಿಚ್ಚೇದನಒಮ್ಮೆ ಜತೆಗೂಡಿದರೆ ಮುಗಿಯಿತು ಬದುಕುಒಳ್ಳೆ ಜನ ಸಿಗದಿದ್ದರೆ ಬದುಕೇ ವೇದನಸಹಿಸಿಕೊಳ್ಳಬೇಕು ಖಾಲಿಯಾಗುವವರೆಗೂ ಸರಕು! *************************

ರಚ್ಚೆ ಹಿಡಿದ ಮನ

ಕವಿತೆ ರಚ್ಚೆ ಹಿಡಿದ ಮನ ಸ್ವಭಾವ ಕೋಳಗುಂದ ಮಳೆ ನಿಂತ ನೆಲದಲ್ಲಿನಡೆಯುತ್ತಲೇ ಇದ್ದಳುಗುರುತು ಮಾಡಿ ಗುರಿಯೆಡೆಗೆ ಹಸಿಟ್ಟಿಗೆ ಬಿಸಿ ನೀರು ಸುರುವಿತಟ್ಟಿ ಬೆಳರ ಚಿತ್ರದ ಹಚ್ಚೆಬೆಂದ ರೊಟ್ಟಿ ಹಸಿದ ಹೊಟ್ಟಗೆ ಹರಗಿದ ಹೊಲಕ್ಕೆ ಬೀಜ ಬಿತ್ತಿನೀರು ಹಾಯಿಸಿ ಕಳೆ ಕಿತ್ತುಕೊಯ್ಲಿಗೆ ಕಾದು ರಾಶಿ ಪೈರಾಗಿಸಿದ್ದ ರಚ್ಚೆ ಹಿಡಿದ ಕೂಸುನೆಟಿಗೆ ತೆಗೆದು ನೀವಾಳಿಸಿರಂಚು ಬೂದಿಯ ತಿಲಕದ ಕೈಚಳಕ ಗುಡಿಯ ಗಂಟೆಯ ನಾದಕ್ಕೆತಲೆದೂಗಿದ ಎಳೆ ಜೋಳದ ತೆನೆನೊರೆ ಉಕ್ಕಿ ಕೆಚ್ಚಲ ತಂಬಿಗೆ ಸೋರಿತ್ತು ಕೊಟ್ಟಗೆಯ ಕರು ಚಂಗನೆ ಎಗರಿಅಂಗಳದ ರಂಗೋಲಿ […]

ಗಝಲ್

ಗಝಲ್ ಸ್ಮಿತಾ ಭಟ್ ಒಲವಿನ ನಿರೀಕ್ಷೆಯ ಬದುಕ ಮುಗಿಸಿದ್ದೇನೆನಲಿವಿನ ದೀಪದೆದುರು ಕಣ್ಮುಚ್ಚಿ ಕುಳಿತಿದ್ದೇನೆ/ ಯಾರಿಗೆ ಯಾರೂ ಆಸರೆಯಲ್ಲ ಇಲ್ಲಿಸೆರೆಯಾದ ಉಸಿರಿನ ಕೀಲಿ ತೆಗೆದಿದ್ದೇನೆ / ಕ್ಷಮಿಸು ಕಣ್ಣತೇವಕ್ಕೆ ನನ್ನ ಹೊಣೆ ಮಾಡದಿರುಕರವಸ್ತ್ರ ಇರಿಸಿಕೊಳ್ಳುವ ರೂಢಿ ಮರೆತಿದ್ದೇನೆ/ ಮೊಗಕೆ ಒಳಗುದಿಯ ತೋರುವ ಇರಾದೆ ಇಲ್ಲಬರಿದೇ ತರತರದ ಮಾತಾಗಿ ನಗುತ್ತಿದ್ದೇನೆ/ ಬಲಹೀನ ಮನಸು ಏನೂ ಸಾಧಿಸದು ಮಾಧವಾಭವಿತವ್ಯದ ಬಾಗಿಲಿಗೆ ತೋರಣವ ಕಟ್ಟಿದ್ದೇನೆ/ *********************************

Back To Top