Category: ಕಾವ್ಯಯಾನ

ಕಾವ್ಯಯಾನ

ನಾನು ನಾನೆಂದು ಬೀಗಿ

ಕವಿತೆ ನಾನು ನಾನೆಂದು ಬೀಗಿ ಅಭಿಜ್ಞಾ ಪಿ ಎಮ್ ಗೌಡ ಎಲ್ಲೆಲ್ಲೂ ಚಿತಾಗಾರಸ್ಮಶಾನಗಳ ದರ್ಬಾರುಬಲುಜೋರು ಜೋರು.!ಬೀದಿ ಬೀದಿಗಳಲ್ಲಿಸಾಲುಸಾಲು ಶವಗಳ ದಿಬ್ಬಣಚಿತಾಭಸ್ಮದ ಕಾಯಕಲ್ಪಕೆಮುಖಮಾಡಿ ನಿಂತಿವೆ…. ವಿಧಿಯಿಲ್ಲದೆಮುಷ್ಕರ ಹೂಡಲುಹೆಣಗಳ ರಾಶಿಗಳುಸ್ಮಶಾನದವಿಳಾಸಕಾಗಿ ಅರ್ಜಿ ಹಾಕುತಿವೆ…ಅಹಿಂಸೆಯ ಅಹವಾಲುದೇವರ ಅವಗಾಹನೆಗೆಕೊಡಲು ತಾ ಮುಂದು ನಾ ಮುಂದೆಂದು… ಅವಕ್ಕಾದಭಂಡಗೇಡಿ ರಣಹದ್ದುಗಳುಬಾಯ್ಬಿಡದ ಗಿಡುಗಗಳ ಮಾಂತ್ರಿಕತೆಚಾಟಿ ಏಟಿನ ಮಾತಿಗೆಪುದುರುಗುಟ್ಟಿವಿಲವಿಲಗುಟ್ಟಿರಲು… ಒಡ್ದೋಲಗದಮಾರ್ಯಾದೆ ಹರಾಜಾಗುತಿದೆಸಣ್ಬುದ್ಧಿ ಸ್ವಾರ್ಥದೊಳುರಕ್ತ ಬೀಜಾಸುರರ ಸಾಮ್ರಾಜ್ಯಕಂಪಿಸುತಿದೆಎಂಟದೆಯ ಭಂಟನಂತಿರುವಭೂಪನಿಂದ… ರುಜುವಾತು ಮಾಡುತಿದೆಉಚ್ಛಿಷ್ಠಕಾಗಿ ಕೈಚಾಚಿದಪುಂಡತನದ ವಕೌಸಗಳ!ಆಸೆಬುರುಕಕೀಚಕಗಳನು ಚಂಡಾಡಿಹುರುಳಿಸಲು ಸಜ್ಞಾಗುತಿದೆ…. ನಾನು ನಾನೆಂದು ಮರೆದದುಷ್ಟ ನೀಚನಹಂಕಾರಮಣ್ಣುಮುಕ್ಕುತಿದೆ….ಗಹಗಹಿಸುತಿವೆ ಕಾಷ್ಠಗಳುಶಪಿಸುತಿದೆ ಧರಣಿ.!ವಹ್ನಿಯೊಂದಿಗೆ ಸಲಿಲವುಸಾಥು ಕೊಟ್ಟು ನಗುತಿರಲುಅವನಳಿವಿನಂಚು […]

ಕೊರೊನಾಕಾಲದಕವಿತೆ

ಈಗ ಬೇಕಿರುವುದು
ಬಿಸಿಯುಸಿರು
ನನಗೂ ಮತ್ತೆ ನಿನಗೂ
ಮುಜುಗರ ,ನಾಚಿಕೆಗಳಿದ್ದರೆ
ವಾಪಸ್ಸು ಹೋಗು

ಅವನ ಭಾವಗಳಿಗೆ ಮುಖವಿಲ್ಲ
ಅವನ ಆಸೆಗಳಿಗೆ ಕಣ್ಣಿಲ್ಲ
ಅವನ ಬಯಕೆ ಚಳಿಗಾಲದ ಬಿಸುಪು
ಬೇಸಿಗೆಯ ತಂಪು

ವಿರಹ ವೇದನೆ

ನಿನ್ನ ಅಂತರಂಗದ ನುಡಿ ಕರೆಯುತಿದೆ ನನ್ನನು
ಮನದ ಮಾತಲಿ ಮೌನ ಹುದುಗಿಸಿ
ಏಕೆ? ಸತಾಯಿಸುತಿರುವೆ ಗೆಳತಿ ಬಂದು ಸಂತೈಸು
ನೀ ನಡೆವ ದಾರಿಯಲ್ಲಿ ಹೂಹಾಸಿ ಸ್ವಾಗತಿಸುವೆ//

ಸಾವಿನ ಮೆರವಣಿಗೆ

ಆದರೂ ಕಗ್ಗತ್ತಲ ಕರಾಳ ರಾತ್ರಿಯಲಿ
ಮನೆ ಬೆಳಗುವ ಹಣತೆಯಂತೆ
ಬತ್ತಿಲ್ಲ ಆಶಾವಾದ ಸತ್ತಿಲ್ಲ ಆತ್ಮವಿಶ್ವಾಸ
ಗೆದ್ದೇ ಗೆಲ್ಲುತ್ತೇವೆ ಮತ್ತೆ ಪುಟಿದು

ಗಜಲ್

ಗಜಲ್ ಪ್ರತಿಮಾ ಕೋಮಾರ ಹರಿಯುವ ನದಿಯೂ ಸ್ತಬ್ಧವಾದಂತೆ ಕಾಣುತ್ತಿದೆ ಇಂದುಮಾತಾಡುವ ಮನವೆಲ್ಲಾ ಮೌನ ಹೊದ್ದು ನಡೆಯುತ್ತಿದೆ ಇಂದು ಸೂರ್ಯಚಂದ್ರರ ಆಗಮನವೆಲ್ಲ ನಿಯಮ ಬದ್ಧವಾಗೇ ಇದೆಜಗವು ಮಾತ್ರ ಕತ್ತಲ ಕೂಪದಲ್ಲಿ ಮುಳುಗುತ್ತಿದೆ ಇಂದು ನಿನ್ನೆವರೆಗೂ ಹೂ ಮೊಗದಲ್ಲೆಲ್ಲ ಪ್ರೀತಿ ,ಚೆಲುವು ನಗುತ್ತಿತ್ತು ಎಲ್ಲರ ಒಳಹೊರಗೆ ಬರೀ ಆಕ್ರಂದನವೇ ಕೇಳಿ ಬರುತ್ತಿದೆ ಇಂದು ಭರವಸೆಯ ಬೆಳಕು ನೋವ ಜಡವ ಹತ್ತಿಯಾಗಿಸುವುದು  ನಡುಗುವ ಭಯವೇ ಎಲ್ಲೆಲ್ಲೂ ಸುಳಿದಾಡುತ್ತಿದೆ ಇಂದು ಯಾರದೋ ಹನಿ ಕಣ್ಣೀರು “ಪ್ರತಿ”ಯ ವಿಲವಿಲ ಅನ್ನಿಸುತ್ತಿತ್ತುನಮ್ಮವರ  ಸಾವಿಗೂ ಸ್ಪಂದಿಸಲಾಗದೆ ಎದೆಯು ಕಲ್ಲಾಗುತ್ತಿದೆ […]

ಓಟೂ…..ಓಟು…..

ಕಾಲಾಳುಗಳು ಕಾಣೆಯಾಗಿದ್ದಾರೆ
ಕುದುರೆಗಳು ಲಾಯದಲ್ಲಿದೆ
ಕೆನೆ ಮೆದ್ದಿವೆ
ಕೆನೆಯುತ್ತಿವೆ… ಆಹಾ…
ಅವುಗಳ ಕಿವಿ ತೂತಾಗಿದೆ

Back To Top