Category: ಕಾವ್ಯಯಾನ

ಕಾವ್ಯಯಾನ

ಕೊರೊನಾಕಾಲದಕವಿತೆ

ಈಗ ಬೇಕಿರುವುದು
ಬಿಸಿಯುಸಿರು
ನನಗೂ ಮತ್ತೆ ನಿನಗೂ
ಮುಜುಗರ ,ನಾಚಿಕೆಗಳಿದ್ದರೆ
ವಾಪಸ್ಸು ಹೋಗು

ಅವನ ಭಾವಗಳಿಗೆ ಮುಖವಿಲ್ಲ
ಅವನ ಆಸೆಗಳಿಗೆ ಕಣ್ಣಿಲ್ಲ
ಅವನ ಬಯಕೆ ಚಳಿಗಾಲದ ಬಿಸುಪು
ಬೇಸಿಗೆಯ ತಂಪು

ವಿರಹ ವೇದನೆ

ನಿನ್ನ ಅಂತರಂಗದ ನುಡಿ ಕರೆಯುತಿದೆ ನನ್ನನು
ಮನದ ಮಾತಲಿ ಮೌನ ಹುದುಗಿಸಿ
ಏಕೆ? ಸತಾಯಿಸುತಿರುವೆ ಗೆಳತಿ ಬಂದು ಸಂತೈಸು
ನೀ ನಡೆವ ದಾರಿಯಲ್ಲಿ ಹೂಹಾಸಿ ಸ್ವಾಗತಿಸುವೆ//

ಸಾವಿನ ಮೆರವಣಿಗೆ

ಆದರೂ ಕಗ್ಗತ್ತಲ ಕರಾಳ ರಾತ್ರಿಯಲಿ
ಮನೆ ಬೆಳಗುವ ಹಣತೆಯಂತೆ
ಬತ್ತಿಲ್ಲ ಆಶಾವಾದ ಸತ್ತಿಲ್ಲ ಆತ್ಮವಿಶ್ವಾಸ
ಗೆದ್ದೇ ಗೆಲ್ಲುತ್ತೇವೆ ಮತ್ತೆ ಪುಟಿದು

ಗಜಲ್

ಗಜಲ್ ಪ್ರತಿಮಾ ಕೋಮಾರ ಹರಿಯುವ ನದಿಯೂ ಸ್ತಬ್ಧವಾದಂತೆ ಕಾಣುತ್ತಿದೆ ಇಂದುಮಾತಾಡುವ ಮನವೆಲ್ಲಾ ಮೌನ ಹೊದ್ದು ನಡೆಯುತ್ತಿದೆ ಇಂದು ಸೂರ್ಯಚಂದ್ರರ ಆಗಮನವೆಲ್ಲ ನಿಯಮ ಬದ್ಧವಾಗೇ ಇದೆಜಗವು ಮಾತ್ರ ಕತ್ತಲ ಕೂಪದಲ್ಲಿ ಮುಳುಗುತ್ತಿದೆ ಇಂದು ನಿನ್ನೆವರೆಗೂ ಹೂ ಮೊಗದಲ್ಲೆಲ್ಲ ಪ್ರೀತಿ ,ಚೆಲುವು ನಗುತ್ತಿತ್ತು ಎಲ್ಲರ ಒಳಹೊರಗೆ ಬರೀ ಆಕ್ರಂದನವೇ ಕೇಳಿ ಬರುತ್ತಿದೆ ಇಂದು ಭರವಸೆಯ ಬೆಳಕು ನೋವ ಜಡವ ಹತ್ತಿಯಾಗಿಸುವುದು  ನಡುಗುವ ಭಯವೇ ಎಲ್ಲೆಲ್ಲೂ ಸುಳಿದಾಡುತ್ತಿದೆ ಇಂದು ಯಾರದೋ ಹನಿ ಕಣ್ಣೀರು “ಪ್ರತಿ”ಯ ವಿಲವಿಲ ಅನ್ನಿಸುತ್ತಿತ್ತುನಮ್ಮವರ  ಸಾವಿಗೂ ಸ್ಪಂದಿಸಲಾಗದೆ ಎದೆಯು ಕಲ್ಲಾಗುತ್ತಿದೆ […]

ಓಟೂ…..ಓಟು…..

ಕಾಲಾಳುಗಳು ಕಾಣೆಯಾಗಿದ್ದಾರೆ
ಕುದುರೆಗಳು ಲಾಯದಲ್ಲಿದೆ
ಕೆನೆ ಮೆದ್ದಿವೆ
ಕೆನೆಯುತ್ತಿವೆ… ಆಹಾ…
ಅವುಗಳ ಕಿವಿ ತೂತಾಗಿದೆ

ಗಜಲ್

ಗಜಲ್ ರತ್ನರಾಯಮಲ್ಲ ಕಾಳಸಂತೆಯಲಿ ಹಾಸಿಗೆಗಳು ಕೊಳೆಯುತ್ತಿವೆಜೀವದ ಬಡತಿಗಾಗಿ ಆಸ್ಪತ್ರೆಗಳು ಹವಣಿಸುತ್ತಿವೆ ಜನನದಲ್ಲಿ ಮರಣವೂ ಇದೆ ಅಂಜುವವರಾರುಸಾವಿನಲ್ಲೂ ರಾಜಕೀಯ ಪಕ್ಷಗಳು ಚಿಗುರುತ್ತಿವೆ ಪಾಪ-ಪುಣ್ಯ ಬಾಲ್ಯದಿಂದಲೂ ಅನುರಣಿಸುತಿದೆಮಸಣಗಳೂ ಇಂದು ಧನವನ್ನು ಬೆಳೆಯುತ್ತಿವೆ ಆತ್ಮವಿಶ್ವಾಸದ ಫಸಲಿಗೆ ಪರಂಪರೆಯೇ ಇದೆ ಇಲ್ಲಿಮಾಧ್ಯಮಗಳೇ ಭಯ ಬಿತ್ತಿ ದುಡ್ಡು ದೋಚುತ್ತಿವೆ ಮರಣಕ್ಕೆ ಚುಂಬಿಸಲು ಭಯ ಪಡದಿರು ‘ಮಲ್ಲಿ’ಹಣದ ಹಾದರವು ಹೆಣಗಳನ್ನು ಉರುಳಿಸುತ್ತಿವೆ ****************

Back To Top