Category: ಕಾವ್ಯಯಾನ

ಕಾವ್ಯಯಾನ

ಗಜ಼ಲ್

ಗಜ಼ಲ್ ಎ . ಹೇಮಗಂಗಾ ‘ನಾನು , ನನ್ನದೆಂ’ದು ಎಷ್ಟು ಬಡಿದಾಡಿದರೂ ಸೇರಲೇಬೇಕು ಗೋರಿಯನ್ನು‘ನಾನೇ ಎಲ್ಲವೆಂ’ದು ಎಷ್ಟು ಸೆಣಸಾಡಿದರೂ ಸೇರಲೇಬೇಕು ಗೋರಿಯನ್ನು ನಿಲ್ಲದೇ ನಡೆದಿಹ ಬಾಳ ನಾಟಕದಿ ನೀನೂ ಬರಿಯ ಪಾತ್ರಧಾರಿಯಷ್ಟೆನಿರ್ಗಮಿಸುವ ಕ್ಷಣದಿ ಇರಬೇಕೆಂದರೂ ಸೇರಲೇಬೇಕು ಗೋರಿಯನ್ನು ಎಲ್ಲರನೂ ತನ್ನೊಳಗೆ ಮಣ್ಣಾಗಿಸುವ ಮಣ್ಣಿಗೆ ಭೇದ ಭಾವವೆಲ್ಲಿದೆಅಂತಕನಿಗೆ ಮಣಿದು ಅರಸನಾದರೂ ಸೇರಲೇಬೇಕು ಗೋರಿಯನ್ನು ಹಣ, ಪ್ರತಿಷ್ಠೆ ಯಾವುದೂ ಬರದು ನಿನ್ನೊಡನೆ ಮಸಣದಿ ಮಲಗಿರಲುಕೋಟೆ ಕಟ್ಟಿ ಅಧಿಕಾರದಿ ಮೆರೆದರೂ ಸೇರಲೇಬೇಕು ಗೋರಿಯನ್ನು ಮೂರು ದಿನದ ಬಾಳಿನಾಟದಿ ಎಲ್ಲಕೂ ಕೊನೆಯೊಂದಿದೆ ಹೇಮಚಿರಂಜೀವಿ […]

ಹೆಜ್ಜೆಗಳ ಸದ್ದು

ಕವಿತೆ ಹೆಜ್ಜೆಗಳ ಸದ್ದು ವೀಣಾ ರಮೇಶ್ ನೀಬರುವ ದಾರಿಯಲಿ ಹೆಜ್ಜೆಗಳ ಸದ್ದುನನ್ನೆದೆಯ ರಂಗಮಂದಿರದಲ್ಲಿಗೆಜ್ಜೆ ಕಾಲ್ಗಳ ಸದ್ದು ಕುಣಿದು ಬಿಡು ಇನ್ನಷ್ಟುನನ್ನ ಭಾವನೆಗಳುಹುಚ್ಚೆದ್ದು ಕುಣಿಯಲಿಸಾಲು ಸಾಲು ಗೆಜ್ಜೆಗಳಲಿಸಾಲು ಸಾಲು ನೆನಪುಗಳು ನೀ ಇಡುವ ಗಗ್ಗರದಲಿಗಿರಕಿಯಾಡುವ ನನ್ನ ಕನಸುಗಳುಗುಂಗುರುಗಳ ನಡುವೆಉಂಗುರ ಅಪ್ಪಿದತುಂಟ ಬೆರಳುಗಳು,ತಪ್ಪಿದ ತಾಳಗಳು ನನ್ನೆದೆಯ ರಂಗ ವೇದಿಕೆಯಲಿನೀ ಬರೆದು ಗೀಚಿದ ಸರಸದಪಿಸುಮಾತುಗಳು ತಪ್ಪು ಹೆಜ್ಜೆಗಳಲಿಕುಣಿಯುತ್ತಿದೆಉನ್ಮಾದ,ಉದ್ವೇಗಗಳುನಾದ, ನೀನಾದಗಳುನೂಪುರದಗಲ್ ಗಲ್ ತಾಳದಲಿನೀ ತರುವ ಹೆಜ್ಜೆಗಳು ****************

ಹೀಗೆ

ಕವಿತೆ ಹೀಗೆ ಗೋನವಾರ ಕಿಶನ್ ರಾವ್ ಹೆಣ್ಣೆಂದರೆ,ಪೂಜೆ-ಅಸಡ್ಡೆಉಭಯನೀತಿ,ಕೀಳು,ಅವಮಾನ- ಅತ್ಯಾಚಾರ, ಭರತವರ್ಷೇ,ಭರತಖಂಡೇ ಜಂಬೂ ದ್ವೀಪದಿ,ಗಂಡುಕಾಮಿಗಳ,ಹೀನಾಯ, ನಡೆ,ಪುರುಷಗಣಗಳಿಗೆಲ್ಲಚುಕ್ಕೆಬೊಟ್ಟು ನೆನಪು.ತವರು ಮನೆಗೆ ಬಂದ ಹೆಣ್ಣುವರುಷದಲಿ , ಹುಟ್ಟಿದ ಕೋಣೆತೋರಿಸಲು ತವರಿಗೆಮತ್ತೆ ಹುಟ್ಟಿ ಬೆಳೆದ ಮನೆಯನೇನೋಡುವ ಮತ್ತೆ ಮತ್ತೆ ನೋಡುವಕಹಿ ಚಪಲ, ಮನೆ-ಮನವ ಮುರಿದಿರುವಕ್ರೂರ ಜಗದ ಈ ಕೆಟ್ಟಗಂಡುಗಳ ಸಂತೆ ನಿರ್ಭಯದ ಅಂಗಡಿಯಲಿಸಾವು ಕೊಳ್ಳುವ ಅ ದಂಡುಪಾಠ ಕಲಿಯದೆ ಮತ್ತೆಹತರಾಸ್!! ಕಲಿತದ್ದು ರಾವಣನಿಂದ ?ಕೀಚಕನಿಂದ ?ಅವರು ಮಣ್ಣಾದರೂಇವರು, ಗಲ್ಲಾ ದರೂ……… ಹೀಗಾದರೆ ? ಹೇಗೆ ? ತಡವಾಗಿ ಬಂದ ಉತ್ತರವಿರದಪ್ರಶ್ನೆ,! ಶೇಷ ಪ್ರಶ್ನೆ […]

ಆನೆಯೂ ಅಂಬಾರಿಯೂ

ಕವಿತೆ ಆನೆಯೂ ಅಂಬಾರಿಯೂ ನೂತನ ದೋಶೆಟ್ಟಿ ಪರಿಹಾಸ್ಯಗಳು, ಅಣಕ ಹುಳುಗಳುಕಚ್ಚಿ ಹಿಡಿದಿದ್ದವು ಬಾಲದ ತುದಿಯನ್ನುಆನೆ ನಡೆಯುತಿತ್ತುತನ್ನದೇ ದಾರಿ ಮಾಡಿಕೊಂಡು ದೊಡ್ಡ ಹೊಟ್ಟೆಯ ಹಿಂದಿನ ಪುಟ್ಟ ಬಾಲದಲ್ಲಿಹುಳುಗಳು ನಗೆಯಾಡುತಿದ್ದವುನಡೆದದ್ದೇ ದಾರಿ ಹೇಗಾದೀತು?ಎಲ್ಲ ಆನೆಗಳೂ ಅಂಬಾರಿ ಹೊರಬಲ್ಲವೇ?ಬಾಲದ ಹುಳುಗಳು ಹುಡುಕುತಿದ್ದವುಒಜ್ಜೆ ಹೆಜ್ಜೆಗೆ ಹೊಯ್ದಾಡುತ್ತ ಬೆನ್ನ ಮೇಲೆ ಹರಡಿದರುರೇಶಿಮೆಯ ನುಣುಪು ವಸ್ತ್ರಕಡುಗೆಂಪು ಝರಿಯ ಚಿತ್ತಾರಪಟ್ಟೆ ಪೀತಾಂಬರಗಾಂಭೀರ್ಯದ ಹೆಗಲೇರಿದ ಅಂಬಾರಿ ಹೊರಟ ಗಜರಾಜನ ಸುತ್ತೆಲ್ಲ ಜನಸ್ತೋಮಜೈಕಾರ ಬಹುಪರಾಕುಬಾಲದ ತುದಿಯ ಹುಳುಗಳು ತಲೆಬಾಗಿ ವಂದಿಸಿದವುಜನರತ್ತ ಕೈ ಬೀಸಿದವು ಆನೆ ಮಾತ್ರ ನಡೆಯುತಿತ್ತುಹೆಗಲಲ್ಲಿ ಹೆಮ್ಮೆಯ ಹೊತ್ತು. […]

ಮರೆತೆಯೇಕೆ

ಮುಡಿಸಿದ್ದ ಮಲ್ಲಿಗೆಯ ಘಮ ಈಗಿಲ್ಲವಾಗಿದೆ
ಮುಖದಲ್ಲಿ ಮುಪ್ಪನ ನೆರಿಗೆ ಒಡವೆ
ಮನಸ್ಸು ಮಾತ್ರ ಹಚ್ಚ ಹಸಿರು
ದಯೆಯಿಲ್ಲವಾಯಿತೇ ಒಂದಿಷ್ಟದರೂ

ಭಾನುಮತಿಯ ಸ್ವಗತ

ಅರಮನೆಯ ದಾಸಿಯರು
ಪಿಸುಗುಡುತ್ತಿದ್ದಾರೆ ಭಾನುಮತಿ ಸತಿಹೋಗುವಳೋ ಏನೋ
ತಾಯ ಮಾತ ಕೇಳದೇ…

ನಾವು ಮತ್ತು ಸಾವು

ಕವಿತೆ ನಾವು ಮತ್ತು ಸಾವು ಸರಿತಾ ಮಧು ಜನ್ಮದಾರಂಭದಿಂದ ಸಾಗಿ ಸಾವಿನೆಡೆಗಿನ ಪಥಕೆಭಿನ್ನ ನಾಮಗಳನ್ನಿಟ್ಟುಕಟ್ಟಿಕೊಂಡ ವ್ಯೂಹವಿದು ಹುಟ್ಟುವವನು ತನ್ನ ಸಾವನ್ನುಬೆನ್ನಿಗಿಟ್ಟುಕೊಂಡೇ ಮೈತಳೆದಿರುವಾಗ ನೆಪಗಳುಬೇಕಷ್ಟೆ, ಸಾವಿನೆಡೆಗೆ ಸಾವಿಗೆ ಯಾರೂ ಹೊರತಲ್ಲನಾನಾದರೂ ,ನೀನಾದರೂನಿಗದಿಯಾದ ಸಮಯಕೆ ಜಗವ ತೊರೆಯುವುದಷ್ಟೇ ಸ್ವರ್ಗವೋ , ನರಕವೋಬಲ್ಲವರಾರು ? ಹೋದವರುತಿರುಗಿ ಬಂದವರಿಲ್ಲ ಅಂತೆಯೇಸಾವ ಗೆದ್ದವರೂ ಇಲ್ಲಿ ಇಲ್ಲ ಅರಿಯದವರಾರು ಸಾವಿನಾಟವಬಾಳೆಂಬ ಪಗಡೆಯಾಟದಲ್ಲಿದಾಳಗಳು ನಾವು ಉರುಳಿದೆಡೆಗೆ ಸಾಗುವುದಷ್ಟೇ ಅಗೋಚರ ಸೂತ್ರಕೆ ಪಾತ್ರಧಾರಿಗಳು ನಾವುಸಾವೆಂದಿಗೂಅನೂಹ್ಯ ನಮ್ಮ ಪಾಲಿಗೆ!!! *******

ಮೂಗು ಮತ್ತು ಮಾಸ್ಕು

ಎಲ್ಲೇನನ್ನು ಮಾಡಿದರೂ
ಇವನ ಮೂಗು ಹಾಕಿಬಿಡುತ್ತದೆ ಹಾಜರಿ
ಎಲ್ಲವನೂ ಸೆಳೆದು ಬಿಡುತ್ತದೆ
ಮನೆಯ ಗುಟ್ಟೆಲ್ಲ ಇವನ ಮೂಗಿನಡಿಯಲ್ಲಿ

ಕಾಯುವ ಕಷ್ಟ.

ಕವಿತೆ ಕಾಯುವ ಕಷ್ಟ. ಅಬ್ಳಿ,ಹೆಗಡೆ ಈ ‘ಹಡಿಲು ಬಿದ್ದ’ನೆಲ,ಈ ದಟ್ಟ ಕತ್ತಲು,ಈ ಮೌನ,ಈ,,ಖಾಲಿ ಹಾಳೆ,ಕಾಯುತ್ತಿವೆ….ಉತ್ತು ಬಿತ್ತುವವರ.ಉಳುವದೆಂದರೆ….ಬೇಕಾಬಿಟ್ಟಿ ಅಗೆಯುವದಲ್ಲ.ಮೊದಲು ಒದ್ದೆ-ಯಾಗಿಸಬೇಕುಗಟ್ಟಿ ಮೇಲ್ಪದರ.ಗುದ್ದಲಿ,ಪಿಕಾಸಿಗಿಂತನೇಗಿಲಾದರೆ ಸಲೀಸು-ಭೇದಿಸಿ ಒಳಗಿಳಿಯಲು.ತೀರ ಆಳಕ್ಕೂ ಇಳಿಯದೆಹಿತವಾಗಿ,ಹದವಾಗಿ,ಸಾವಕಾಶ,ನಾಜೂಕಾಗಿ-ಸಾಗುವಾಗಿನಖುಷಿಯೇ ಬೇರೆ.ಆಮೇಲೆ…ಬಿತ್ತಿದಂತೇ ಬೆಳೆ.ನೆಲದೊಳಗೊಂದು ಬೀಜ,ಕತ್ತಲೊಳಗೊಂದುಬೆಳಕ ಸಣ್ಣ ಕಿಡಿ,ಮೌನದೊಳಗೊಂದುಪಿಸು ಮಾತು,ಹಾಳೆಯ ಖಾಲಿ-ಯಲ್ಲೊಂದು ಅಕ್ಷರಮೊಳೆಯುವ ಕನಸ ಖುಷಿ.ಮೊದ,ಮೊದಲುನೋವಾದರೂ,ಕೊನೆ,ಕೊನೆಗೆ….‘ಆಹಾ’ ಸುಖದ ನರಳಿಕೆ.ಆ ಒಂದು ಕ಼ಣಕ್ಕಾಗಿಕಾಯುತ್ತಿವೆ..–ಈ,,ನೆಲ,ಈ..ಕತ್ತಲು,ಈ..ಮೌನ,ಈ..ಖಾಲಿ’ಹಾಳೆ’?,ಮೊದಲ ಮಳೆಯಾಗುವಮೊದಲು ಉಳುವವರಿಗಾಗಿಕಾಯುತ್ತಿವೆ ಎದೆತೆರೆದುಅಂಗಾತ ಮಲಗಿ…!!! ******************************

ದೇವರು ಮಾರಾಟಕ್ಕಿದ್ದಾರೆ…

ಕಾಲ-ಋತುಮಾನಗಳು ಬದಲಾದರು
ಬದಲಾಗಿಲ್ಲ ಅವರ ಬಣ್ಣ
ಪೂಜಿಸುವ ಪುರುಷ ಸಮಾಜದ ಅಹಂ ನಳಿಸಿ
ತೆರೆಸಿಲ್ಲ ನಮ್ಮತ್ತ ಅವರ ಒಳಗಣ್ಣ

Back To Top