Category: ಕಾವ್ಯಯಾನ

ಕಾವ್ಯಯಾನ

ರೈತನ ಮಗ ನಾ

ಕವಿತೆ ರೈತನ ಮಗ ನಾ ಚಂದ್ರು.ಪಿ.ಹಾಸನ ನಾನೊಬ್ಬ ನಿಮ್ಮೆಲ್ಲರ ಅಚ್ಚ ಕನ್ನಡಿಗಹಳ್ಳಿಯ ಸೀದಾ ಸಾದಾದ ಹುಡುಗಸಿಂಪಲ್ಲಾಗೈತೆ ರೀ ನನ್ನ ಲೈಫ್ ಸ್ಟೈಲುನೋವಾದ್ರೂ ಕೊಡ್ತೀನೊಂದು ಸ್ಮೈಲು ಯಾವಾಗ್ಲು ನಾನಾಗಿರ್ತೀನಿ ಮೌನಿಒಮ್ಮೊಮ್ಮೆ ಹಿಡಿತಿರ್ತೀನಿ ಲೇಖನಿಬರೆಯೋಕ್ ಕುಂತ್ರೆ ಹುಚ್ಚನಂಗಾಗ್ತೀನಿಸುಮ್ ಸುಮ್ನೆ ತೋಚಿದ್ದು ಗೀಚ್ತೀರ್ತೀನಿ ಏನೇನೋ ಹುಚ್ಚ್ ಹುಚ್ಚಾಸೆ ಇಟ್ಕೊಂಡುಸುಮ್ನಿರ್ತೀನಿ ತಲೆ ತುಂಬಾ ಕೆಡ್ಸ್ಕೊಂಡುಅಣುಕಿಸಿದವರ ಮನಸ್ನಲ್ಲೇ ಬೈಕೊಂಡುಉತ್ತರಿಸೋಕ್ಕೆ ಸಮ್ಯಾನ್ನ ಕಾಯ್ಕೊಂಡು ಹಳ್ಳಿಯ ಸೊಗಡಲ್ಲಿ ದಿಲ್ಲೀಯಾ ಕಾಣ್ತೀನಿಕೊಳ್ಳೀಯಾ ಹಿಡಿದಾದ್ರೂ ಗುರಿ ಮುಟ್ತೀನಿಸೋತೆಜ್ಜೇಗಳೊಂದೇ ಮೆಟ್ಲಾಗುಸ್ಕೊಂಡುಸಾಗ್ತೀನಿ ಎದ್ಯಾಗೊಂದ ಛಲವಿಟ್ಕೊಂಡು ದೇಸಕ್ಕೆ ಅನ್ನ ಕೊಡೋ ರೈತಾನ ಮಗಾನಾಮೋಸಕ್ತಲೆಕೊಡೋದಿಲ್ರೀ ಜಾಯ್ಮಾನಾನಂಜಿಲ್ದಾ […]

ನೆರಳು-ಬೆಳಕು

ಕವಿತೆ ನೆರಳು-ಬೆಳಕು ಕಾತ್ಯಾಯಿನಿ ಕುಂಜಿಬೆಟ್ಟು ಕಣ್ಣುಗಳಿಂದ ಉದುರುವನಕ್ಷತ್ರಗಳನ್ನುಆಕಾಶಕ್ಕೆ ಸಿಕ್ಕಿಸುತ್ತಿರುವಶಾಂತ ಇರುಳು… ಮರ ಗಿಡ ಬಳ್ಳಿಗಳುತಮ್ಮ ನೆರಳನು ಬಿಟ್ಟುಲೋಕ ಸಂಚಾರಕೆಹೊರಡುತ್ತವೆ ಕಡಲು ಭೋಗ೯ರೆಯುತಮರಳ ತೀರಕೆನೊರೆನೊರೆ ಹಾಲುಣಿಸುತ್ತನೆರಳಾಗಿಬಿಡುತ್ತದೆ ಹಕ್ಕಿಗಳು ಬೆಳಕು ರೆಕ್ಕೆಗಳನ್ನುಬಿಚ್ಚಿ ಹಾರುತ್ತ ಹಾರುತ್ತಕಪ್ಪು ನೆರಳುಗಳಾಗಿಚುಕ್ಕಿಗಳಾಗಿ ಮರೆಯಾಗುತ್ತವೆ ಈ ದೇಹದಿಂದ ಬೆಳಕೊಂದುಲೋಕ ಸಂಚಾರಕೆ ಹೊರಟಾಗನೆರಳು ನಿದ್ರಿಸುತ್ತದೆಮುಂಜಾನೆ ಮತ್ತೆ ಅದು ಮರಳಿನನ್ನನ್ನು ಪ್ರವೇಶಿಸುವವರೆಗೂ…ಒಂದು ದಿನ ಸಂಚಾರದಲ್ಲೇ ಮೈಮರೆತ ಅದುನನ್ನನ್ನೇ ಮರೆತುಬಿಡಬಹುದುನಾನು ಅದರ ನೆನಪಲ್ಲೇ ಇರುವಾಗಇನ್ನಾರದ್ದೋ ನೆರಳು ಕೊಳ್ಳಿ ಹಿಡಿದುಬೆಳಕು ಹಚ್ಚುವೆನೆಂದು ಬೆಂಕಿ ಹಚ್ಚಬಹುದು ಇರುಳಲ್ಲಿ ಸೂಯ೯ನ ನೆರಳುನಿದ್ರಿಸುತ್ತದೆಭೂಮಿಯ ನೆರಳು ತನ್ನನ್ನು ಭೂಮಿ […]

ನಿನ್ನ ಮೋಹಕೆ

ಕವಿತೆ ನಿನ್ನ ಮೋಹಕೆ ರೇಷ್ಮಾ ಕಂದಕೂರು ನಿನ್ನ ಮೋಹದ ಅರವಳಿಕೆಮೈಮನವ ಮರೆತ ಹಾಗಿದೆಭಾವೋನ್ಮಾದದ ಬೆಸುಗೆಗೆಬಾಚಿ ತಬ್ಬುವ ಇಳೆಯ ಪ್ರೀತಿಯಂತೆ ಸಾಚಾತನಕೆ ಪರಚಿದ ಗಾಯಮಾಸದ ಕಲೆಯ ಸ್ಥಿತಿಬೆಡಗು ಬಿನ್ನಾಣದ ರಿಂಗಣಲಗ್ಗೆ ಹಾಕುವ ನೆರೆಯ ಹಾವಳಿ ಕಣ್ಣ ಹೊಂಬೆಳಕಿನ ಕಿಡಿಹೊತ್ತಿಸಿದೆ ಅನುರಾಗದ ದೀಪ್ತಿಮೌನಕೂ ಕಸಿವಿಸಿಯಾದಂತೆಆಸರೆಯ ಒಡಲಲಿ ತವಕ ಅನುದಿನವು ಬೇಯುತಿದೆಸಹಚರಕೆ ಹಪಹಪಿಸಿದೆ ಕಂಗೆಟ್ಟುಇರುಳ ಬಾನ ತುಂಬಾ ನಗೆಯ ನಕ್ಷತ್ರಚೆಲುವಿನ ಚೈತ್ರಕೂ ಮರುಹುಟ್ಟು ವಿಸ್ಮಿತ ಪ್ರತಿಯ ಸ್ವರೂಪಸ್ವಪ್ನದಿ ಕಾಡಿದೆ ಬೆಂಬಿಡದೆಜ್ವಾಲಾಮುಖಿಯ ಆವೇಗದ ಸಂಚಾರಬೆರಗಿನ ಜಾಡು ಅನವರತ. ****************

ಗಝಲ್

ಗಝಲ್ ಅಮೃತ ಎಂ ಡಿ ನೋವಲ್ಲೂ ನಲಿವಿನ ಟಾನಿಕಿನ ಗುಟುಕುಂಟು ಗಾಲಿಬ್ಬದುಕೆಲ್ಲವು ಹಗದ ಮೇಲೆ ನಡೆದ ಕುರುಹುಂಟು ಗಾಲಿಬ್ ಹೇಳತಿರದ ಬೇಗೆಯೋದು ಸಜೀವ ದಹನ ಮಾಡಿದೆನಗುವಿನ ಮುಖವಾಡ ಧರಿಸಿ ಜೀವಿಸಿದ್ದುಂಟು ಗಾಲಿಬ್ ನನ್ನೊಳಗಿನ ಸಾಮರ್ಥ್ಯವನ್ನೆಲ್ಲಾ ಈ ಪ್ರೀತಿಯು ಕೊಂದಿದೆಗೈರುಹಾಜರಿಯಲ್ಲೂ ನಿರ್ಲಿಪ್ತ ಹಾಜರಿಯುಂಟು ಗಾಲಿಬ್ ನನ್ನರಸ ಮಧುಶಾಲೆಯಲ್ಲೇ ಜೀವನಪೂರ್ತಿ ಕಳೆದುಬಿಟ್ಟಬಾಳ ನೊಗಕ್ಕೆ ಹೆಗಲ್ಕೊಟ್ಟು ಹೈರಾಣಾಗಿದ್ದುಂಟು ಗಾಲಿಬ್ ಅಮ್ಮುವಿನ ನಸೀಬು ಬ್ರಹ್ಮಂಗು ಕಾರುಣ್ಯ ಪರಿಚಯಿಸಿದೆಅನುಗಾಲದ ಹೋರಾಟವು ಚಿರನಿದ್ರೆಯಲ್ಲುಂಟು ಗಾಲಿಬ್ *****************************************

“ಶಾವಾ”ತ್ಮ ಪದಗಳು

ಕವಿತೆ “ಶಾವಾ”ತ್ಮ ಪದಗ ಬಸಿರಿನುಸಿರು ಶಾಂತಿ ವಾಸು ಫಲವತ್ತಾದ ಮುಷ್ಟಿ ಮಣ್ಣು ಬೇಕೆಂದೆ….ಧಾರಿಣಿ, ಹುಟ್ಟಿಸಿ ನೋಡೆಂದಳು…. ನಿರ್ಮಲಾತಿನಿರ್ಮಲ ಜಲ ನೀಡೆಂದೆ….ಧರಿತ್ರಿ, ಹುಟ್ಟಿಸಿ ನೋಡೆಂದಳು…. ತಣಿಸುವ ಮಳೆ ಕಾಣದಾಗಿದೆಯೆಂದೆ…ಇಳೆ, ಹುಟ್ಟಿಸಲಾರೆಯಾ?? ಕೇಳಿದಳು…. ಮಳೆಯ ಎಳೆತರುವ ಕಾನನ ಕೊಚ್ಚಿಹೋಗಿದೆಯೆಂದೆ…ಭೂಮಿಜೆ, ಹುಟ್ಟಿಸಿ ಸಾಕಾಯಿತೇ ಪ್ರಶ್ನಿಸಿದಳು…. ಪ್ರಾಣಿ ಪಕ್ಷಿಗಳು, ಒಂದೊಂದೇ ಅಳಿಯುತ್ತಿವೆಯೆಂದೆ….ಅವನಿ, ಹುಟ್ಟಿಸು ನೋಡೋಣ ಸವಾಲೆಸೆದಳು…. ಮುಂದಿನ ಪರಂಪರೆಗೇನು ಉತ್ತರಿಸಲಿ??? ಎಂದೆ…ಭೂಮಿತಾಯಿ, ಸಕಲವ ಹುಟ್ಟಿಸುವ ಮೊದಲು, ಉಸಿರ “ಪ್ರಕೃತಿ”ಯಲ್ಲಡಗಿಸುವ ಬಸುರಾಗೆಂದಳು *****************************************************************

ನಿನ್ನಿರುವು..

ಕವಿತೆ ನಿನ್ನಿರುವು.. ವೀಣಾ ಪಿ. ನೀನಂದುನನ್ನಮುಡಿಗಿಟ್ಟುಕೊಳಲೆಂದುನಿನ್ನೊಲವಿನಉದ್ಯಾನದಿಂದೆನ್ನಕೈಗಿತ್ತಗುಲಾಬಿಯನುನಾನುಎದೆಗೊತ್ತಿಹೊತ್ತಿಗೆಯಲಿಅವಿತಿಟ್ಟುದಶ ವಸಂತಗಳುರುಳಿನಮ್ಮಿಬ್ಬರ ನಡುವೆತಲುಪಲಾಗದಭುವಿ-ಬಾನಿನಂತರವುಹರವಿಯೂಮಾಸಿಲ್ಲಅದೇಸಮ್ಮೋಹನದೊಲವುಸವಿಪ್ರೇಮ ಪ್ರೇರಣೆಯಕಡುಕೆಂಪಿನಿರುವುಅರಳಲೆಳಸಿಯೂಅರಳದುಳಿದಮೊಗ್ಗಿನಲಿಅಂದಿನಂತೆಯೇ ಇಂದೂ..ನನ್ನ ನವಿರುಭಾವದಾಂತರ್ಯದಲಿನಿನ್ನಿರುವಿನಂತೆ..!! *******************************

ಝೆನ್ ಕವಿತೆಗಳು

ಕವಿತೆ ಝೆನ್ ಕವಿತೆಗಳು ಹುಳಿಯಾರ್ ಷಬ್ಬೀರ್ 01 ನನ್ನದು..ತಾತ್ಸಾರದ ಮೌನವಲ್ಲಏಕಾಕಿತನದ ಮೌನವಲ್ಲಉಡಾಫೆಯ ಮೌನವಲ್ಲನಿರರ್ಥಕ ಮೌನವಲ್ಲಸಂಚಿನ ಮೌನವಲ್ಲಶ್ರದ್ಧೆಯ ಮೌನವಲ್ಲಧಿಕ್ಕರಿಸುವ ಮೌನವಲ್ಲಬುದ್ಧನ ಮುಖದ ಮೇಲಿನಪ್ರಶಾಂತವಾದ ಮೌನದ ಮೌನ. 02 ಶುದ್ಧೋಧನತಂದೆಯಾದರೂಬುದ್ಧನ ಕಾಲಿಗೆರಗಿಶುದ್ಧನಾದ ಬದ್ಧನಾದ. 03 ತುಂಬಿದ ಕೊಳದಲ್ಲಿನಅವನ ಪ್ರತಿಬಿಂಬಅಣಕಿಸುತಿತ್ತುನಿನ್ನಾತ್ಮ…?ಸತ್ತಿದೆ ಎಂದುಕೆಣಕುತಿತ್ತು. 04 ಬುದ್ಧ ನಿನ್ನನಿದ್ದೆಯ ಕದ್ದಿದ್ದುವೈರಾಗ್ಯದಾಸೆಯಮೆಟ್ಟಿಲು. 05 ಬಿಕ್ಕುಗಳೇಚರಿಗೆಗೆ ಹೋಗುವುದುಹೊಟ್ಟೆ ತುಂಬಿಸಿಕೊಳ್ಳುವುದಕ್ಕಲ್ಲಬದುಕಿನ ಅನಾವರಣಕ್ಕೆ ಅರ್ಥಅರ್ಥೈಯಿಸಲು. **************************

ಕೇಳಬೇಕಿತ್ತು..!

ಕವಿತೆ ಕೇಳಬೇಕಿತ್ತು..! ಮುತ್ತು ಬಳ್ಳಾ ಕಮತಪುರ ಸಾವಿನ ಮುನ್ನ ನನ್ನಹೇಳಿಕೆ ದಾಖಲಿಸಿಬೇಕಿತ್ತು …..ತಿರುವು ಮುರು ಮಾಡಿನನ್ನ ಸಾವನ್ನೇ ದಾಖಲಿಸಿದರು ..!ಅವರ ಪೆನ್ನಿನ ನಿಬ್ಬು ಮುರಿದಿತ್ತು… ಕೇಳಬೇಕಿತ್ತುಆಗ ನನ್ನ ಮಾತುಗಳುತೊದಲು ನುಡಿಯಾಗಿ ಕಂಡಿತ್ತುಏನು ಹೇಳಬೇಕಿತ್ತು …?ಅಲ್ಲಿ ಮೊದಲೇ ಹೊಂದಾಣಿಕೆಮಾಡಿಕೊಂಡು ಸಾವಿನೊಂದಿಗೆಅಂತ್ಯಗೊಂಡಿತು….. ಸತ್ತವಳು ನಾನಲ್ಲ ,ಸತ್ತವರು ವ್ಯವಸ್ಥೆಯಲ್ಲಿಇದ್ದು ಮಾತನಾಡದ ನೀವುಗಳುಅಸಹಾಯಕಳ ಮೊರೆ ಆಲಿಸಲುಸರ್ವಸಂಗ ಪರಿತ್ಯಾಗಿಗೂ ಮನಸಿಲ್ಲ…ಇನ್ನೂ ಎಲ್ಲಿಯ ರಾಮರಾಜ್ಯ….. ಸತ್ತ ಮೇಲೆ ಆದರೂಅರಿಸಿಣವಾದರೂ ಹಚ್ಚಿದಫನ್ ಮಾಡಬೇಕಿತ್ತುಹಂಚಿ ತಿಂದ ನನ್ನ ದೇಹಸಾಕ್ಷಿ ನೆಪದಲಿ ಮುಟ್ಟಿದಕೈಗಳು ನಂಜಾಗಬಾರದುಅಲ್ಲವೇ….! ಮೊಂಬತ್ತಿ ಹಚ್ಚಬೇಡಿಕರಗಿದಂತೆ ..!ನಾಳೆ‌ ದಿನ […]

ನನ್ನಪ್ಪ

ಕವಿತೆ ನನ್ನಪ್ಪ ಕಾವ್ಯ ಎಸ್. ಹಂಗಿಲ್ಲದ ಅಪ್ಪನ ಗುಡಿಸಲಿನ ಅರಮನೆಯಲ್ಲಿನನ್ನಪ್ಪ ಮಲಗಿ ಏದುಸಿರು ಬಿಡುತ್ತಿದ್ದಮಂಚವಿಂದು ಒಂಟಿಕಾಲ ಕೊಕ್ಕರೆಯಾಗಿದೆಅಪ್ಪನ ಉಸಿರಂತೆ ಇಂದು ಸೊಳ್ಳೆಗಳು ಸುಯ್ಗುಡುತ್ತಿವೆಮೂಗಿಗೆ ಆಗಾಗ್ಗೆ ಬಡಿಯುತ್ತಿದ್ದ ಮೋಟು ಬೀಡಿಯಘಾಟು ಹೊಗೆಯ ರೂಪ ಕಳಚಿ, ಹೊಸಬಟ್ಟೆ ಧರಿಸಿಊರು ಸುತ್ತಲು ಹೋಗಿದೆ.ಚರ್ಮ ಸವೆದು ಸವಕಳಿಯಾಗಿ, ಜಗತ್ತಿಗೆ ಅನ್ನನೀಡುವನಾಡ ಬೆನ್ನೆಲುಬಿನ, ಅಸ್ಥಿಪಂಜರದ ಸಾಹುಕಾರ ನನ್ನಪ್ಪ.ಕೆನ್ನೀರ ಹನಿಗಳನ್ನು ಬೆವರಾಗಿಸಿ ಬಸಿದುಜಳಕ ಮಾಡಿ ನುಣುಪಾಗಿ ನರಳುತ್ತಿದ್ದ ನನ್ನಪ್ಪ.ಹೊಟ್ಟೆಯಲ್ಲಿ ಗಾಳಿಚೀಲ ಹೊಕ್ಕಿಸಿ ವಿಚಾರ -ಪ್ರಚಾರಗಳಬಾಗಿಲು ಕಿಟಕಿಗಳ ಕದ ಮುಚ್ಚಿ ಬಿಟ್ಟಿದ್ದ ನನ್ನಪ್ಪ.ತನ್ನ ಜಿಡ್ಡಿಲ್ಲದ ರಕ್ತದಿಂದ ಗುಳ್ಳೆನರಿಗಳನ್ನು […]

ಖಾಲಿಕೈ ಫಕೀರ

ಕವಿತೆ ಖಾಲಿಕೈ ಫಕೀರ. ಅಬ್ಳಿ,ಹೆಗಡೆ ನನಗರಿವಿಲ್ಲದೇ…..ಕಾಣದಲೋಕದ ಕದ ತಟ್ಟಿದೆಬೆಳಕ ಬಾಗಿಲು ತೆರೆಯಲೇ ಇಲ್ಲ.ಕತ್ತಲ ಕೂಪ ಕಳೆಯಲೇ ಇಲ್ಲ.ಬದುಕಲ್ಲಿ ಕಂಡಸಂಖ್ಯ ಕನಸುಗಳಿಗೆಲ್ಲಒಂದು ಅನಿರೀಕ್ಷಿತ ಹ್ರದಯ ಸ್ಪರ್ಶಿವಿದಾಯ ಘೋಷಿಸಿ,ಒಮ್ಮೆಯಾದರೂ ಆತ್ಮೀಯರಕಣ್ಣಂಚ ಒದ್ದೆಯಾಗಿಸಿಆಟ ನಿಲ್ಲಿಸಬೇಕೆಂದರೆ ಅದೂಸಫಲವಾಗಲಿಲ್ಲ.ಕೊನೇ ಬಿಂದುವಿನಲ್ಲಾದರೂಸಾರ್ಥಕ ಬದುಕಿನ ಸಣ್ಣ ತ್ರಪ್ತಿಯೊಂದಿಗಾದರೂ ವಿರಮಿಸಬೇಕೆಂದರೆ ಅದೂ ಕೈಗೂಡಲಿಲ್ಲ. ಸಧ್ಯ ನಾ ಮೊದಲಿನಂತೇ..ಭಾವದ ಭಿಕಾ಼ಪಾತ್ರೆ ಹಿಡಿದುಅಲೆದಾಡುವ ಏಕಾಂಗಿ,ಪ್ರಾರಬ್ಧಕ್ಕೆ ಪಕ್ಕಾದ ಖಾಲಿಕೈಫಕೀರ ಅಷ್ಟೆ….!!!! ************************

Back To Top