Category: ಕಾವ್ಯಯಾನ

ಕಾವ್ಯಯಾನ

ಮನೋ ಇಂಧನ

ಕವಿತೆ ವಿದ್ಯಾ ಶ್ರೀ ಎಸ್ ಅಡೂರ್ ಸೀಟಿ ಹೊಡೆಯುತ್ತದೆ ಕುಕ್ಕರ್…ತಾಳದೇತನ್ನ ಅಡಿಯಲ್ಲಿ ಉರಿಯುತ್ತಿಯುವ ಬೆಂಕಿ.ನಾನೂಹೊರಹಾಕುತ್ತೇನೆ ನೋವು ನಲಿವುಗಳಪೆನ್ನು ಕಾಗದ ಹಿಡಿದು ,ಮನವನ್ನು ಕೆದಕಿ ಕೆದಕಿ . ಹಣೆಮೇಲಿನ ನೆರಿಗೆ, ಕಣ್ಣಂಚಿನ ಹನಿತುಟಿಯ ಮೇಲ್ಮುಖ ….ಕೆಳಮುಖ ಬಾಗುವಿಕೆಯಾವುದೂ ಅರ್ಥವಿಲ್ಲದ್ದಲ್ಲ….ಆಕಸ್ಮಿಕವಲ್ಲಪ್ರತಿಯೊಂದಕ್ಕೂ ಇದೆ ಬೇರೆ ಬೇರೆಯೇ ಪೀಠಿಕೆ. ಮನದ ಮ್ಲಾನತೆಯೋ, ಆಹ್ಲಾದಕತೆಯೋಮುಖದ ಮೇಲೆ ಕಾಣಬೇಕಾದರೆ…ಬೇಕುಏನಾದರೂ ಒಂದು ಇಂಧನ….ಅದಕ್ಕೇ..ಕುಕ್ಕರ್ ನ ಉದಾಹರಣೆ ಒಂದೇ..ಸಾಕು. ಮನವೆಂಬುದು ಒಂದು ಕುಲುಮೆಯೇ ಸರಿ..ಬೇಯುತ್ತಿರುತ್ತದೆ ಅಲ್ಲಿ ಬೇರೆ ಬೇರೆ ವಿಷಯಯಾವುದು ಮೊದಲು, ಯಾವುದು ಮತ್ತು, ಹೇಳುವಹಾಗಿಲ್ಲ,ಹೊರಹಾಕುತ್ತದೆ ನೋಡಿಕೊಂಡು ಸಮಯ…. […]

ಮೌಢ್ಯ

ಕವಿತೆ ವೀಣಾ ರಮೇಶ್ ಮಾನದಂಡವಿಲ್ಲದ ಮೂಢ ಸಂತೆಯೊಳಗೆಬದುಕು ವ್ಯಾಪಾರ ವಾಗುತ್ತಿದೆ .ನಂಬಿಕೆಯ ನಡುವೆ ಮೂಢತ್ವ ಬಿತ್ತಿಮೊಳಕೆಯೊಡೆದುಬೇರು ಚಾಚಿಮೌಢ್ಯ ಹೆಮ್ಮರವಾಗಿದೆ ಬೆತ್ತಲಾಗಬೇಡ ಬತ್ತಿದಕನಸುಗಳಿಗೆಪೊಳ್ಳು ಕಟ್ಟು ಪಾಡುಗಳಹೆಗಲೇರಿ ಶವವಾಗಬೇಡ. ನಿನ್ನ ಕನಸುಗಳ ಚಲುವಿಗೆಸುಜ್ಞಾನ ತೊಡಿಸಿಜ್ಞಾನ ದಾರದಿಂದ ಬಿಗಿದುಅಭಿಜ್ಞಾನದೆಡೆಗೆ ಹರಿಸಿ ಅಹಂಕಾರದ ಕತ್ತಲೆಯಮರೆಸಿ ಆತ್ಮದ ಹಣತೆಯಲಿಅಂತರಾತ್ಮದ ನವಿರು ಸ್ಪರ್ಶ ಬೆಳಕು ನೀಡಲಿ **********************************

ಕಣ್ಣುಗಳು ನನ್ನದಲ್ಲ

ಕವಿತೆ ಜಹಾನ್ ಆರಾ ಎಚ್. ಕೋಳೂರು ನಾನು ನಿನ್ನನ್ನು ನೋಡಿದ್ದೇನೆಆದ್ರೆ ಕಣ್ಣುಗಳು ನನ್ನದಲ್ಲ ದಶರಥನ ಮಹೋನ್ನತ ಯೋಚನೆಯಲ್ಲಿಮಂಥರೆಯ ಮೋಸದಲಿಊರ್ಮಿಳೆಯ ಉದಾಸೀನತೆ ಯಲ್ಲಿಲಕ್ಷ್ಮಣನ ನೆರಳಿನಲ್ಲಿಹನುಮಾನನ ಸೇವೆಯಲಿರಾವಣನ ಶೌರ್ಯದಲ್ಲಿಹೌದು ಅದೇ ಸೀತೆಯ ಕಂಬನಿಯಲ್ಲಿ ನಿನ್ನನ್ನು ಮತ್ತೆ ನೋಡುತಿದ್ದೇನೆಮತ್ತೆ ಮತ್ತೆ ಕಣ್ಣುಗಳು ನನ್ನದಲ್ಲ ಧರ್ಮದ ಚದರಿನಲ್ಲಿಜನ್ಮ ಭೂಮಿಯ ಹಂಗಿನಲಿರಾಜಕೀಯದ ದಾಳದಲಿಕೋರ್ಟುಗಳ ವಿವಾದಗಳಲಿದಾನಿಗಳ ದಾನದಲಿಮೌಢ್ಯದ ಹಾದಿಯಲ್ಲಿಮಾಧ್ಯಮದ ಗದ್ದಲದಲ್ಲಿ ನಿನ್ನ ಸೃಷ್ಟಿದ ವಾಲ್ಮೀಕಿಕಡತಗಳ ಹಿಡಿದುಇನ್ನೂ ಹೊರಗೆ ನಿಂತಿದ್ದಾನೆಅವನ್ನು ವಿಚಾರಿಸುನೀ ಮತ್ತೆ ಬರುವ ಅಗತ್ಯ ಇತ್ತೆ ಎಂದು? ಸಾವು ನೋವುಗಳ ಮೇಲೆ ಹಿಡಿತತಪ್ಪಿರುವಾಗ ದೇವರಾಗುವಬದಲು ವೈದ್ಯನಾಗುಮಂದಿರ […]

ಪಯಣ

ಕವಿತೆ ಪಾರ್ವತಿ ಸಪ್ನ ಹೊಗಳಿದರೆ ಹಿಗ್ಗದೆತೆಗಳಿದರೆ ಕುಗ್ಗದೆಅಪ್ಪಳಿಸುವ ಮಾತಿನಅಲೆಗಳಿಗೆ ಜಗ್ಗದೆನಿನ್ನ ಹಾದಿಯಲ್ಲೇನಿಲ್ಲದೆ..ನೀ ಸಾಗಿಬಿಡು..!! ಕಾಲಿಗೊಂದು ಮುಳ್ಳುಕೈಯಿಗೊಂದು ಕಲ್ಲುನಾಲಿಗೆಯಲ್ಲಿ ಸುಳ್ಳುಅಚ್ಚರಿಯೇನಿಲ್ಲ..ಲೋಕವೇ ಡೊಂಕುಮಾತೆಲ್ಲಾ ಕೊಂಕುಇರಲಿಬಿಡು.. ನಿನ್ನಷ್ಟಕ್ಕೇನೀ….ಸಾಗಿಬಿಡು…!! ತಪ್ಪು ಹುಡುಕುವಬೆಪ್ಪನಿಗೆ..ತುಪ್ಪ ಸವರಿದರೂಮೊಸರಲ್ಲೂ ಕಲ್ಲಂತೆ,,ಕಾಣದ ಗಾಳಿಯದುಬೊಗಸೆಯಲ್ಲಿ ಹಿಡಿದಂತೆ,,ಸುಮ್ಮನೆ ನಡೆದುಬಿಡುನಿನ್ನ ಹಾದಿಯಲ್ಲಿ ಸಾಗಿಬಿಡು…!! ಎಲ್ಲವೂ ಜಂಜಾಟಪ್ರತಿಕ್ಷಣ ಒಂದು ಪಾಠಸಮಯ ಗುರುವುಕಲಿಸುವುದು ನೋಡುಅವನ ಆಟಕ್ಕೆ ನೀ ಕುಣಿದುಬಿಡುತಿರುಗಿ ಮತ್ತೆ ನೋಡದಿರುವ್ಯಥೆಯನ್ನೆಲ್ಲಾ ತೂರಿಬಿಡುನಿನ್ನ ಗುರಿಯ ಸೇರಿಬಿಡು…!! ********************

ಇಲ್ಲದೆಯೂ ಎಲ್ಲವನ್ನೂ ಬಯಸುತ್ತೇನೆ

ಕವಿತೆ ಸ್ಮಿತಾ ಭಟ್ ಅಬ್ಬರಿಸಿ ಬರುವ ನಿನ್ನ ಮಾತಿನಹೊಡೆತಕ್ಕೆ ಸಿಲುಕಿದ ಒಂಟಿ ದೋಣಿಮತ್ತೊಂದು ಪ್ರಶಾಂತ ನಿಲುವಿಗಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕೊಚ್ಚಿ ಕಾಣದಾಗಲೆಂದು ಬಯಸುತ್ತೇನೆ ಬುಡಮೇಲಾದ ನಂಬಿಕೆಯಮತ್ತೆ ಊರಿ ಅದಕ್ಕೇ ಚಿಗುರೊಡೆವಸಮಯಕ್ಕಾಗಿಯಾಕೋ ಕಾಯಬೇಕೆನಿಸುತ್ತಿಲ್ಲಕುರುಹೂ ಇಲ್ಲದಂತೆ ನಶಿಸಿ ಹೋಗಲು ಬಯಸುತ್ತೇನೆ. ಹೊಸದೇನೋ ಘಟಿಸುತ್ತದೆ ಎಂಬ ಬಯಕೆಯಲಿಹಳೆಯ ಪೋಷಾಕುಗಳನೇ ಮತ್ತೆ ಮತ್ತೆ ಹೊದ್ದುಅಸತ್ಯದ ನಗುವಿನಲಿ ಯಾಕೋ ಕಾಯಬೇಕೆನಿಸುತ್ತಿಲ್ಲಸಕಲವನೂ ತೊರೆದು ನಿರಾಳವಾಗಲು ಬಯಸುತ್ತೇನೆ. ಯಾವ ಕಿಂಡಿಯೂ ಉಳಿದಿಲ್ಲಕಿರಣದ ಸ್ಪರ್ಶವ ಅನುಭವಿಸಲುಹೊರದಾರಿಗೆ ಯಾರೋ ಬಾಗಿಲು ತರೆಯುವುದಕ್ಕಾಗಿ ಯಾಕೋ ಕಾಯಬೇಕೆನಿಸುತ್ತಿಲ್ಲಗೂಡಿನ ಮಾಡು ಸರಿಸಿ ದಿಗಂತದಲಿಹಂಗು ತೊರೆದು ಹಾರಲು ಬಯಸುತ್ತೇನೆ […]

ಊರುಗೋಲು ಕಾಫಿ ಮತ್ತು ಅಪ್ಪ

ಕವಿತೆ ವಿಭಾ ಪುರೋಹಿತ್ ಚತುರ್ಮುಖ ಬ್ರಹ್ಮಅವನೊಳಗೊಂದು ಕಾಣ್ದಅಗೋಚರ ಮೈವೆತ್ತ ಹಾಗೆಅವನಿಯೊಳಗಿನ ಜ್ಞಾನಕಣ್ತೆರೆದಂತೆಸುಡುವ ನೋವಿದ್ದರೂ ಎದೆಯೊಳಗೆಉತ್ಸಾಹ ಉತ್ತುವದು ನಗೆಯ ಬಿತ್ತುವುದುಮಹಾತ್ಮ ನ ಲೀಲೆನಾರಾಯಣನಿಲ್ಲದೇ ಅವನಿಯುಂಟೇ?ಅದೃಶ್ಯದಲ್ಲಿ ಸದೃಶನಾಗಿಸೋಫಾಮೇಲೆ ಕುಳಿತಿದ್ದಾನೆರೇಡಿಯೋ ಕೇಳುತ್ತಿದ್ದಾನೆಎರಡುತಾಸಿಗೊಮ್ಮೆ ಕಪ್ಪು ಕಾಫಿಸೋಮರಸ ಸದಾ ಥರ್ಮಾಸಿನೊಳಗೆಕಾಲುಮೇಲೆಕಾಲಿಟ್ಟುಅನುಭವದ ರೇಖೆಗಳನ್ನೆಲ್ಲ ಒತ್ತಿಹಿಡಿದ ಹಸ್ತ ಊರುಗೋಲಿನ ಮೇಲೆಊರಿನ ತಗಾದೆಗೆಲ್ಲ ಕಿವಿಗೊಟ್ಟುಎದೆಗವುಚಿ ಎಲ್ಲರಿಗೂಬೀರಬಲ್ಲನ ಪರಿಹಾರ ಮಂತ್ರರೆಡಿಯಾಗುತಿತ್ತು.ಊರುಗೋಲಿನ ಸುತ್ತ ಫಿರ್ಯಾದಿಗಳುವಿನಂತಿಗಳು ಅಹವಾಲುಗಳಿಗೆಹೊಸದಾಗಿ ತಂದ ಕಂಪ್ಯೂಟರ್ಕೀಲಿಮಣೆ ಕಿಲಕಿಲನೆ ಬಡಿದುಬರೆದುಕೊಂಡೇ ಮತ್ತೆ ಕಾಫಿಗೆಕೈಚಾಚುತ್ತಿತ್ತುಯಾರೇ ಬಂದರೂ ಯಾವಾಗ ಬಂದರೂಬಿಸಿಕಾಫಿ ಜೊತೆ ಆತ್ಮೀಯತೆ ಬಿಸ್ಕತ್ತು ಗಳುಮನದಾಳದಿಂದ ಸಮಸ್ಯೆಗಳನುಹೊತ್ತು ತಂದವರ ಪಾತಾಳಗರಡಿಯಾಗುತ್ತಿತ್ತುನೆನಪಿನಲ್ಲಿ ಮುಳುಗಿದರೆಏನೋ ಗೊತ್ತಿರದ […]

ಪ್ರೀತಿಯ ಸಾಲುಗಳು

ಕವಿತೆ ಬಾಲಕೃಷ್ಣ ದೇವನಮನೆ ಮುಗುಳು ನಗೆಯಲ್ಲಿಹದಗೊಳಿಸಿದಎದೆಯ ಹೊಲದಲ್ಲಿಒಂದೊಂದೇವಾರೆ ನೋಟದಲಿನಾಟಿ ಮಾಡಿದ ಪೈರುತೊನೆದಾಡಿದ ಮಧುರ ಕ್ಷಣ..! ಪ್ರೀತಿಯನ್ನುಮುಲಾಜಿಲ್ಲದ ಹಾಗೆಅವಳು ಒದ್ದು-ಹೋದ ಎದೆಯ ದಾರಿಯಲ್ಲಿಮೂಡಿದ ನೋವಿನ ಹೆಜ್ಜೆಗಳುಯಾವ ಮುಲಾಮಿಗೂಅಳಿಸಲಾಗದೇ ಸೋತರೂಮತ್ತೆ ಮತ್ತೆ ನೆನಪ ಲೇಪಿಸಿಕೊಂಡುಸುಖಿಸುವ ವ್ಯಸನಿ ನಾನು. ಮನಸ್ಸುಗಳು ಉರಿಯುವಈ ರಾತ್ರಿಯಲ್ಲಿಬೀಸುವ ಗಾಳಿಯೂಬೆಂಕಿ ನಾಲಿಗೆ ಸವರುವಾಗಇಷ್ಟಿಷ್ಟೇ… ಇಷ್ಟಿಷ್ಟೇ…ಜಾರಿದ ಗಳಿಗೆಸುಟ್ಟ ನಿದಿರೆಯನ್ನೆಲ್ಲಾಹಗಲಿಗೆ ಗುಡ್ಡೆ ಹಾಕಿದಎಚ್ಚರದ ಬೂದಿಯಲ್ಲಿರೆಪ್ಪೆ ಮುಚ್ಚದ ಇರುಳುಉದುರಿಸಿದ ಕಂಬನಿಒದ್ದೆ ಮಾಡಿದಎದೆಯ ರಂಗಸ್ಥಳದಲ್ಲಿನಿನ್ನ ನೆನಪುಗಳ ಹೆಜ್ಜೆ ಹೂತುಚುಚ್ಚಿ ಚುಚ್ಚಿ ಕೊಲ್ಲುವ ಸಂತಾಪ…!! ನೀನುಹುಕ್ಕುಂ ಕೊಟ್ಟ ಮೇಲೇನಾನುನಿನ್ನೊಲವ ಗದ್ದೆಯಲಿ ಹೆಜ್ಜೆ ಊರಿದ್ದುಮತ್ಯಾಕೆ ಸುಳ್ಳು […]

ನನಗೂ ನಿನ್ನಂತಾಗ ಬೇಕಿತ್ತು!

ಕವಿತೆ ಅನಿತಾ ಪಿ. ತಾಕೊಡೆ ನನಗೂ ನಿನ್ನಂತಾಗಬೇಕಿತ್ತುಅದೆಷ್ಟೋ ಸಲ ನಾನೂ ನಿನ್ನಂತಾಗಲು…ಎದೆಯಾಳದ ಕನಸಿನ ಕಣ್ಣಿಗೆಕಪ್ಪು ಪಟ್ಟಿ ಬಿಗಿಯುತಿದ್ದೆತೀವ್ರವಾದ ಭಾವಗಳು ಎಲ್ಲೆ ಮೀರದಂತೆಇತಿಮಿತಿಯ ರೇಖೆಯನೆಳೆಯುತಿದ್ದೆ ಕೆಲವೊಮ್ಮೆ ಮಾತುಗಳು ಹಳಿ ತಪ್ಪಿದಾಗಕರಾಳ ಮೌನ ಎದೆಯನ್ನು ಸುಡುತಿತ್ತುಅಭದ್ರತೆಯ ನೆಲೆಯೊಳಗೆ ಓಲಾಡಿಸುತಿತ್ತು ಅಂದುಕೊಂಡಂತೆ ಇರಲಾಗದೆಸಣ್ಣ ತಪ್ಪು ವಿರಾಟ ರೂಪ ತಳೆದುಮೂರ್ತರೂಪಕ್ಕಿಳಿಸುವ ಛಲದಿನಕಳೆದಂತೆ ಇಳಿಯುತ್ತಲೇ ಇತ್ತು ನಿನ್ನ ಸಖ್ಯವಾದ ಮೇಲೆನಾನೆನುವ ಅಹಂಭಾವ ಬಿಗುಮಾನಎಲ್ಲವೂ ದೂರ ಸರಿದುನಿನ್ನ ಅನುನಯದೊಳು ಹೂವಾಗಿದ್ದು ಸುಳ್ಳಲ್ಲ ಬೇಕು ಬೇಡಗಳ ನಡುವಿನ ಒಳಪಂಥದಲಿಅದೆಷ್ಟೋ ಬಾರಿ ನಾನೂ ನೀನೂಸೋತು ಗೆಲ್ಲುತಿದ್ದೆವು ಕೆಲವೊಮ್ಮೆ ಮಾತು […]

ಕಲಿಗಾಲದ ಫಲ

ಕವಿತೆ ಅರುಣ್ ಕೊಪ್ಪ ಅಂದು ಖುಷಿಯನ್ನೆಲ್ಲ ಉಸುರಿಹಿಡಿದು ಮುಟ್ಟಿದ್ದಕ್ಕೂತಂತ್ರಜ್ಞಾನದ ಗುಲಾಬು ಜಾಮೂನಿನ ಚಪಲದಲ್ಲಿದ್ದೆವು.ಸ್ವಾರ್ಥದ ಕುದುರೆಯನ್ನೇ ಏರಿ ಸವಾರಿಕಾಂಚಾಣದ ಕರವಸ್ತ್ರವನ್ನೇ ಬಳಸುತ್ತಿದ್ದೆವು. ಪಾದ ಊರದ ನೆಲ ಮೌನದಲ್ಲಿಕಾಲು ದಾರಿಗಳನ್ನು ನುಂಗಿ ಹಾಕಿತ್ತುಬೀದಿ ದೀಪದಲ್ಲೂ ಕಣ್ಣು ಕಾಣದಮೋಜು ಮಸ್ತಿಯಲಿ ರಾತ್ರಿಯನ್ನುಹಗಲಿನಂತೆ ಅನುಭವಿಸುತ್ತಿದ್ದೆವು.ಸಮಯವನ್ನು ಹರಾಜು ಮಾಡಿಅಹಂ ಅಂಗಡಿಯಲ್ಲಿ ಮಾರಾಟಮಾಡುತ್ತಿದೆವು. ಹುಟ್ಟಿದ ಕಿಮ್ಮತ್ತಿಗೆ ಬೀದಿ ವಾಪಾರಿಗಳಮಂತ ಉರಿಸುತ್ತಿದ್ದೆವು.ನಾವೇ ಅನುಭೋಗಿಗಳುಎಂಬ ಸರ್ವ ಜಂಬದಲಿವೃದ್ಧರನ್ನು ಹೇಸಿಗೆಯಾಗಿ ನೋಡುತ್ತಿದ್ದೆವು. ವ್ಯಾಪಾರ ಜಗತ್ತಿನಲ್ಲಿಸಂಬಂಧಕ್ಕೂ ಮಾಪು ಹಿಡಿದುತಾವೇ ಸರಿ ಎಂದೆನುತಕಾಣುವ ಸೊಗದೊಳಗೆಭೂತಗನ್ನಡಿಯ ಹಿಡಿದುಮೊಸರಲ್ಲಿ ಕಲ್ಲು ಹುಡುಕುತ್ತಿದ್ದೆವು ಆದರೆ ಇಂದು ಎಲ್ಲಕಲಿಗಾಲದ […]

ಜ್ಞಾನೋದಯದ ನಿದ್ದೆ

ಕವಿತೆ ವಸುಂಧರಾ ಕದಲೂರು ನಡುರಾತ್ರಿಗಳಲಿ ಒಮ್ಮೊಮ್ಮೆ ನಿದ್ದೆಸುಳಿಯದೇ ನರಳಿ,ನರಳಾಡಿಹೊರಳಾಡುವಾಗ ಮನಕೆ ಜಗದಚಿಂತೆಯೂ ಹಿಡಿದು ಚಿಂತನೆಗೆಶುರುವಾಗುತ್ತದೆ. ಇಂತಿಪ್ಪ ಅಶಾಂತಿಗೆ ಶಾಂತಿಯಹುಡುಕುವ ಮನಸ್ಸಾಗುತ್ತದೆ. ಜ್ಞಾನೋದಯಕ್ಕೆ ಮನೆಬಿಟ್ಟುಹೋದವ ನೆನಪಾಗಿ, ನಾನೂ ಎದ್ದುಹೊರಡಿಬಿಡಬೇಕೆಂಬ ತುಡಿತ ಹೆಚ್ಚಾಗಿಪರಿತ್ಯಾಗದ ವೇದಿಕೆ ಹತ್ತಲು ಮನಇನ್ನಿಲ್ಲದಂತೆ ಸಿದ್ಧವಾಗುತ್ತದೆ. ಏಳಬೇಕೆಂದವಳ ನಡು ಬಳಸಿ,ಕೊರಳ ಸುತ್ತಿ ಅಪ್ಪಿರುವ ‘ನಾಲ್ಕುಕೈಗಳ ಬಂಧನ ಬಿಡಿಸಿಕೊಳ್ಳುವುದುಹೇಗೆ?’ ಪ್ರಶ್ನೆ ಧುತ್ತೆಂದು ಕಾಡುತ್ತದೆ. ಲೋಕೋದ್ಧಾರಕ್ಕೆ ಹೊರಡಲಾಗದೆಭವಬಂಧನಕೆ ಸಿಲುಕಿರುವ ನಾನು,ಬದ್ಧತೆಯೇ ಇಲ್ಲದ ಬುದ್ಧಿಗೇಡಿಯೇ?!ಭಯವೂ ಸುಳಿದಾಡುತ್ತದೆ. ‘ಛೇ, ಬಿಡು ಇದನ್ನೆಲ್ಲಾ ಎದ್ದು ನಡೆ’……ಕಳ್ಳ ಮನಸ್ಸಿನ ಚಿತಾವಣೆ. ನಾನೇನೋ ಹೋಗಿಬಿಡುವೆ. ನಾಳೆಇವರೆಲ್ಲಾ ಹುಡುಕಾಡಿದರೆ, […]

Back To Top