Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ಹಮ್ಮು ಬಿ.ಎಸ್.ಶ್ರೀನಿವಾಸ್ ಬಲ್ಲವನೆಂಬ ಭ್ರಾಮಕ ಹಮ್ಮು ತಲೆತಿರುಗಿಸುವ ಅಮಲು ಏನೂ ಅರಿಯದ ಪಾಮರನ ಪ್ರಾಮಾಣಿಕ ಅಳಲು ಅಮಾಯಕತ್ವವೆ ಮೇಲು ಅಗ್ಗದ ಉಪದೇಶಕ್ಕಿಂತ ನಡೆದು ತೋರಿಪುದು ಮೇಲು ನಿಜಸಾಧಕರಿಗೆ ಸವಾಲು ಸಲ್ಲದು, ನಾ ಕಂಡಿದ್ದೇ ಸತ್ಯವೆಂಬುದು ಅಹಮಿಕೆ ಡೌಲು ಬಲ್ಲವರು ಹೇಳುವರು ಸತ್ಯ ಒಂದೇ ಆದರೂ ಧೃಷ್ಟಿಕೋನ ನೂರಾರು ಹಿಮಾಲಯದ ಶಿಖರಕ್ಕೂ ಏರುವ ದಾರಿ ಹಲವಾರು ಮಾತಿನೀಟಿಯಲಿ ಪರರ ಘಾತಿಸುತ ಸಮನಾರಿಲ್ಲ ಎನಗೆಂದು ಬಿಂಕದಿ ಮೆರೆದು ಬೀಗಿದರೆ ಮೆಚ್ಚುವನೆ ಪರಮಾತ್ಮನು ಮೇಲೇರಿದರೆ ಕೆಳಗಿನದು ಕುಬ್ಜವಾಗುವುದು ಸಹಜ ಕೆಳಗಿರುವವರ ಕೈಹಿಡಿದು […]

ಕಾವ್ಯಯಾನ

ಗಝಲ್ ಸಮಬಾಳು ಸಹಬಾಳ್ವೆ ಸಮತೆಯ ರೀತಿ ಗಣತಂತ್ರ ವೆಂದರೆ ಶಾಂತಿ ಸಹಿಷ್ಣುತೆ ಸಹನೆ ಪ್ರೀತಿ ಗಣತಂತ್ರವೆಂದರೆ ಪಾರತಂತ್ರ್ಯದ ಕತ್ತಲು ಅಳಿದರಷ್ಟೇ ಸಾಕೇ ಸ್ವಯಮಾಡಳಿತ-ಸಂವಿಧಾನದ ಕ್ರಾಂತಿ ಗಣತಂತ್ರವೆಂದರೆ ಎಷ್ಟೊಂದು ವೇಷ ಭಾಷೆ ಸಂಸ್ಕೃತಿ ವೈವಿಧ್ಯಗಳು ಎಲ್ಲರೆದೆ ಹೂಗಳನು ಪೋಣಿಸುವ ನೀತಿ ಗಣತಂತ್ರವೆಂದರೆ ಸಮಾನ ಆಶೋತ್ತರಗಳು ಸುರಾಜ್ಯದ ಕನಸು ಎಲ್ಲರ ಮುಗಿಲುಗಳ ವಿಸ್ತರಿಸುವ ಪ್ರಣತಿ ಗಣತಂತ್ರವೆಂದರೆ ಹೊರಗಿನ ಶತ್ರುಗಳ ಜೊತೆಗೆ ಒಳಗಿನ ವಿಕೃತಿಗಳು ಹುಸಿಗಳ ಮೀರುವ ನಿಜ ಬದುಕಿನ ಕಾಂತಿ ಗಣತಂತ್ರವೆಂದರೆ ನಮ್ಮ ರಾಷ್ಟ್ರ ನಮ್ಮ ಜೀವ ಭಾವ ಸದಾ […]

ಗಝಲ್ ಸಂಗಾತಿ

ಗಝಲ್ ಡಾ.ಗೋವಿಂದ ಹೆಗಡೆ ನಿನ್ನ ಕಣ್ಣೋಟ ತಾಕಿ ಇಲ್ಲಿ ಬೆಳಕು ಹರಿದಿದೆ ನಿನ್ನ ಕರಸ್ಪರ್ಶದಲ್ಲಿ ಪುಲಕ ಹೊನಲಾಗಿದೆ ಮಿಂಚು ಗೂಳಿ ಮೈಯನಿಡೀ ಉತ್ತು ಬಿತ್ತಿದೆ ಫಸಲು ಹೇಗಿರಬಹುದು ಕಾತರ ಕುಡಿಯಾಗಿದೆ ಎಂತಹ ಕರಿ ದುಗುಡ ಮಡುವಾಗಿತ್ತಿಲ್ಲಿ ನಿನ್ನ ಕೈ ಸೋಕಿದ್ದೇ ತಡ ಎಲ್ಲ ಬದಲಾಗಿದೆ ಸುಧೆಯನುಂಡವರು ಮಾತ್ರ ಅಮರರೇನು ನೀನು ತಂದ ಅನುರಾಗಕ್ಕೆ ಸಾವೆಲ್ಲಿದೆ ಹಿಗ್ಗನ್ನು ಬಿತ್ತಿ ಸುಗ್ಗಿ ಮಾಡುವ ರೀತಿ ನಿನ್ನದೇ ಸೌದಾಮಿನಿ ನೀನು ಈಗ ಕಣಜ ತುಂಬಿದೆ ************

ಕಾವ್ಯಯಾನ

ಒಲವಿನಾಟ ಮಧುವಸ್ತ್ರದ್ ಕೃಷ್ಣಾ..ಒಲವಿನಾಟವ ಆಡು ಬಾ ಕಾದಿರುವಳು ಬೆಡಗಿ.. ಹೃದಯ ಕಸಿದು ಮನವ ಬೆಸೆದು ಎಲ್ಲಿರುವೆ ನೀ ಅಡಗಿ.. ಕರ್ಪೂರಗೊಂಬೆ ರೂಪಸಿ ರಂಭೆ ಕಾಯುತಿಹಳು ಸೊರಗಿ.. ಸೋಕಿದೊಡೆ ನಿನ್ನ ಪ್ರೇಮಜ್ವಾಲೆ ನೀರಾಗುವಳು ಕರಗಿ.. ಸನಿಹ ನೀನಿರೆ ಮೆಲ್ಲುಸಿರಾಯ್ತು ಪ್ರಣಯ ಕವನ‌.. ಸೂಸಿತು ತಂಗಾಳಿ ಹಾಡುತಲಿ ಒಲವಿನ ಸವಿಗಾನ.. ತರುಲತೆ ತೂಗಿಬಾಗಿ ನೀಡಿಹವು ಪ್ರೇಮ ಸಿಂಚನ‌‌.. ವನದೇವಿ ನಕ್ಕು ಹಾರೈಸಿಹಳು ನಮ್ಮ ಶುಭಮಿಲನ.. ತನುಮನ ಕಾತರದಿ ಕಾದಿಹವು ನಿನ್ನಾಗಮನದ ಕ್ಷಣ.. ಹೊಳೆದಿಹ ಕೆಂದಾವರೆ ಮೊಗಕೆ ಮುತ್ತಿನಾಭರಣ.. ಬಳುಕುವ ದೇಹಸಿರಿಗೆ […]

ಅನುವಾದ ಸಂಗಾತಿ

“ಗಂಡು ಪ್ರೇಮದಲ್ಲಿದ್ದಾಗ” ಸಿರಿಯನ್ ಕವಿ: ನಿಜಾರ್ ಕಬ್ಬಾನಿ ಕನ್ನಡಕ್ಕೆ:ಕಮಲಾಕರ ಕಡವೆ ಗಂಡಸು ಪ್ರೇಮದಲ್ಲಿದ್ದಾಗಹಳೆಯ ಶಬ್ದಗಳ ಹೇಗೆ ಉಪಯೋಗಿಸಿಯಾನು?ಪ್ರೇಮಿಯ ಅಪೇಕ್ಷೆಯಲ್ಲಿಇರುವ ಹೆಣ್ಣುಭಾಷಾತಜ್ಞರು, ವ್ಯಾಕರಣತಜ್ಞರುಗಳಜೊತೆ ಮಲಗ ಬೇಕೇನು? ನಾನು ಏನೂ ಹೇಳಲಿಲ್ಲನನ್ನ ಪ್ರೀತಿಯ ಹೆಣ್ಣಿಗೆ.ಬದಲಿಗೆ, ಪ್ರೇಮಕ್ಕೆ ಇರುವ ವಿಶೇಷಣಗಳನ್ನುಸೂಟಕೇಸಿನಲ್ಲಿ ತುಂಬಿಕೊಂಡುಎಲ್ಲ ಭಾಷೆಗಳಿಂದ ದೂರ ಓಡಿಹೋದೆ. ಮೂಲ: WHEN A MAN IS IN LOVE” When a man is in lovehow can he use old words?Should a womandesiring her loverlie down withgrammarians and […]

ಕಾವ್ಯಯಾನ

ನಿನ್ನ ನೆನಪಿನ ಮೀನು..! ಡಾ.ಜಯಪ್ಪ ಹೊನ್ನಾಳಿ(ಜಯಕವಿ) ನಿನ್ನ ನೆನಪಿನ ಮೀನು ಎಷ್ಟೊಂದು ಬಣ್ಣದಲಿ ಆಡುತಿವೆ ಎದೆಗೊಳದ ತಿಳಿಯಾಳದಲ್ಲಿ..! ಕನಸ ರೆಪ್ಪೆಯ ತೆರೆದು ಕನವರಿಕೆಯಲೆ ನೆರೆದು ಮಳೆಬಿಲ್ಲ ಮಿಂದಂತೆ ಮಧು ಮೇಳದಲ್ಲಿ..! ಹೊಸಿಲ ಚುಂಬಿಸುತಿಹುದು ಹೊಂಬಿಸಿಲಿನೊಡಗೂಡಿ ಹೊಸತೊಂದು ಹಾರೈಕೆ ಹಳೆ ನೋವ ಕೊಂದು..! ನಗುವ ನಂದನದೊಲವು ತಂಗಾಳಿ ತೊಟ್ಟಿಲಲಿ ಪರಿಮಳದಿ ತಾ ತುಂಬಿ ನವ ಭಾವ ತಂದು..! ಬಣಗುಡುವ ಬದುಕಲ್ಲಿ ನೀ ಬಂದು ನಕ್ಕಂದು ಮರಳಿ ಬಂದಿತು ಮನಕೆ ಮತ್ತೆ ಮಲೆನಾಡು..! ಜೀವವಾಯಿತು ಜಿಂಕೆ ರೆಕ್ಕೆ ಬಿಚ್ಚಿತು ನವಿಲು […]

ಕಾವ್ಯಯಾನ

ನೆನೆಯುವೆ ಕವಿತೆಯಲಿ ತ್ರಿವೇಣಿ ಜಿ.ಹೆಚ್. ಮಾತು ಮಾತಿಗೂ ಕೋಪ ಮನಸು ಮುನಿದ ರೂಪ.. ಈಗ ಕೇಳು! ರಾಧೆಯ ಮನದಲಿ ಪರಿತಾಪ… ಸರಿಸು ಮೌನವ ಕೊಳಲ ಆಲಾಪದಲಿ. ಆದರೀಗ, ರಾಧೆ ಒಲವ ಹಾಸಿ ನಿನ್ನ ಅರಸಿ ಭಜಿಸಿ ಪೂಜಿಪಳು… ಮರಳಿ ಬಿಡು ಬಿದಿರ ಕೊಳಲು ನುಡಿಸಲು.. ಹುಸಿ ಮುನಿಸು ತಣಿಸಲು ಮಾತು ಮೌನ ಬೆಸೆದು ಒಳಗೆ.. ಶರಣಾಗಲಿ ಮನದೊಳಗೆ. ಮಾಧವ, ಬಾರದೆ ಸರಿಯದಿರು… ಬರೆದು ನೆನೆಯುವೆ ಕವಿತೆಯಲಿ. **********

ಕಾವ್ಯಯಾನ

ನೆನೆವರಾರು ನಿನ್ನ ಮಧು ವಸ್ತ್ರದ್ ಮುಂಬಯಿ ಓ ಅಂಬಿಗಾ..ಬೇಗ ಬೇಗನೆ ಮುನ್ನೆಡೆಸು ದೋಣಿಯ.. ತೀರದಾಚೆಯ ಹಳ್ಳಿ ಹೊಲದಲಿ‌ ಕಾಯುತಿಹನು ನನ್ನಿನಿಯ.. ಅಂಬಿಗಣ್ಣಾ ಶಾಲೆಯ ಸಮಯ ಆಯ್ತು ನಡೆ ಬೇಗ.. ಎಲವೋ ಅಂಬಿಗ ದಡದಾಚೆಯ ಜನರ ಓಟುಬೇಕು ನಡೆ ಈಗ.. ತಮ್ಮ ತಮ್ಮದೇ ಲೋಕದಲಿ ವಿಹರಿಸುತಿಹರು ಎಲ್ಲರು.. ಹೊಳೆಯ ದಾಟಿದ ನಂತರ ಬಡ ಅಂಬಿಗನ ನೆನೆವರಾರು.. ಬಿಸಿಲು ಮಳೆ ಗುಡುಗುಸಿಡಿಲು ಕತ್ತಲಾದರೆ ಸುತ್ತಲು.. ಈಜುಬಾರದವರಿಗೆಲ್ಲ ಆಧಾರ ನೀನೆ ಗುರಿ ಮುಟ್ಟಲು.. ಶಾಂತಚಿತ್ತದಿ ಹೊಣೆಯ ಹೊತ್ತಿದೆ ನಿನ್ನಯ ಬಾಗಿದ ಹೆಗಲು.. […]

ಕಾವ್ಯಯಾನ

ಪ್ರೀತಿ ಸಾಗರದಲಿ ಅವ್ಯಕ್ತ ಕಂಡೆನಾ ಸಿರಿಯ ಅಯ್ಸಿರಿಯ ಮಾಲೆ , ಮುದುಡಿದ ಮನದ ಅಂಗಳ ಅರಳುತಲಿ… ಹಚ್ಚಹಸಿರ ಹಾಸಿಗೆಯ ಮೇಲೆ , ಹೊಸದಾಗಿ ಹಾಸಿದ ಬಿಳಿ ಮೋಡಗಳ ಸಾಲೆ. ಅಲ್ಲೊಂದು ಇಲ್ಲೊಂದು ನಿಂತಿರುವ ತಲೆಗಳು, ಕಣ್ಣಾಮುಚ್ಚಾಲೆ ಆಡುತ್ತಾ ನಲಿವ ಕಿರಣಗಳು. ||೧|| ಕೈ ಚಾಚಿ ,ಆಲಂಗಿಸಿ ಕರೆಯುತಲಿ, ಹೇಳಿತೇನೋ ಪಿಸು ಮಾತುಗಳಲಿ, ಎಲ್ಲೆಲ್ಲೂ ನಾನಿರುವೆ ಹಂಚುತ ಸವಿಗಳ, ಪ್ರೀತಿ, ನೆಮ್ಮದಿ, ಸುಖಸಂತೋಷಗಳ. ||೨|| ನನ್ನಲ್ಲಿ ನೀನಿರಲು, ನಿನ್ನಲ್ಲಿ ನಾನಿರಲು ಮಿಡಿಯುವ ಕಂಗಳು, ಮನದಾಳದ ಮಾತುಗಳು, ಪೃಕ್ರತಿಯ ಪ್ರಕೃತಿ […]

ಅನುವಾದ ಸಂಗಾತಿ

ಚೇಳು ಕಡಿದ ರಾತ್ರಿ ಇಂಗ್ಲೀಷ್ ಮೂಲ:ನಿಸ್ಸಿಮ್ ಏಜೇಕಿಲ್ ಕನ್ನಡಕ್ಕೆ: ಕಮಲಾಕರ ಕಡವೆ ನೆನಪಾಗುತ್ತದೆ ನನಗೆ ಒಂದು ಚೇಳುನನ್ನ ಅಮ್ಮನ ಕಡಿದ ರಾತ್ರಿ. ಹತ್ತು ತಾಸುಗಳಕಾಲ ಜಡಿದ ಸುರಿಮಳೆ ಆ ಚೇಳನ್ನುಅಕ್ಕಿ ಮೂಟೆಯಡಿ ಓಡಿಸಿತ್ತು.ವಿಷ ಕಾರಿ ಅದು – ಅಂಧಕಾರ ತುಂಬಿದಕೋಣೆಯಲ್ಲಿ ಫಕ್ಕನೆ ಕುಣಿದ ಕುಟಿಲ ಬಾಲ –ಮತ್ತೆ ಮಳೆಯಲ್ಲಿ ಮರೆಯಾಯಿತು. ನೊಣಗಳ ಹಿಂಡಿನಂತೆ ಬಂದರು ರೈತರುಮಣಮಣಿಸುತ್ತ ನೂರು ಸಲ ದೇವರ ನಾಮಕೇಡು ಕಳೆಯಲಿ ಎಂದು ಕೇಳಿಕೊಳ್ಳುತ್ತ. ಮೊಂಬತ್ತಿ, ಲಾಟೀನುಗಳ ಹಿಡಿದುಮಣ್ಣ ಗೋಡೆಗಳ ಮೇಲೆದೈತ್ಯ ಜೇಡನಂತ ನೆರಳುಗಳ ಮೂಡಿಸುತ್ತಅವರು […]

Back To Top