Category: ಕಾವ್ಯಯಾನ

ಕಾವ್ಯಯಾನ

ಕಾವ್ಯಯಾನ

ನಿಶ್ಯಬ್ದ ವೀಣಾ ರಮೇಶ್ ಕತ್ತಲೆಯ ಬಿಳಿ ಮಂಚದಲಿ ಮಲಗಿರುವೆ ಕನಸುಗಳು ಬೀಳುತ್ತಿವೆ ಎಬ್ಬಿಸಬೇಡಿ ನೆನಪುಗಳೆ, ಸದ್ದು ಮಾಡದಿರಿ ಎದೆಯ ಬಡಿತದ ಸದ್ದು ಇಲ್ಲಿಗೂ ಕೇಳಿಸುತ್ತಿದೆ ಮತ್ತೆ ಬೆಳಕಾದರೆ ನನಗಿಲ್ಲ ಬಿಡುವು ಮತ್ತೆ ನೀ ನಸು ನಾಚಿ ಬಂದರೆ ಬಾವನೆಗಳ ಹರಿವು, ನನ್ನೊಳಗೂ ನೀನು ಹೊರಗೂ ನೀನು ನಿನ್ನ ಕನಸುಗಳ ಹೊದಿಕೆ ಬೇಕಾಗಿತ್ತು,ಮತ್ತೆ ನೆನಪುಗಳು ದಾಳಿ ಮಾಡದಿರಲಿ ಸೂರ್ಯೋದಯದ ಮೊದಲು ನಿನ್ನ ನಗುವಿನ ನಂದಾದೀಪ ನೋಡಬೇಕು ನಾನು ಬಂದು ಬಿಡು ಕಾರಣವಿಲ್ಲದೆ ಮತ್ತೆ ತೆರಳಬೇಡ ಸದ್ದಿಲ್ಲದೆ. ***********

ಕಾವ್ಯಯಾನ

ಸಾಕ್ಷಿ ವೀಣಾ ನಿರಂಜನ್ ರೆಕ್ಕೆಯಿಲ್ಲದ ಹಕ್ಕಿಯೊಂದು ಹಾರುವುದ ಕಂಡಿರಾ ಹಾಯಿಯಿಲ್ಲದ ದೋಣಿಯೊಂದು ಚಲಿಸುವುದ ಕಂಡಿರಾ ನೆರಳಿಲ್ಲದ ಜೀವವೊಂದು ನಡೆಯುವುದ ಕಂಡಿರಾ ಬಿಸಿಲು, ಗಂಧ, ಗಾಳಿ ಸೋಂಕದ ನೆಲೆಯೊಂದ ಕಂಡು ನಿಟ್ಟುಸಿರು ಬಿಟ್ಟಿತು ಕವಿತೆ ಚಿತ್ರ ಕಟ್ಟಿ ಕೊಟ್ಟ ಶಬ್ದಗಳೆಲ್ಲ ಒಣಗಿ ಬಿಟ್ಟವು ಎಲ್ಲಿತ್ತೊ? ಹೇಗಿತ್ತೊ? ಮಾಯದ ಚಿಟ್ಟೆಯೊಂದು ಹಾರಿ ಬಂದು ಅವಳ ನೆತ್ತಿ ಮೂಸಿ ಮುತ್ತನಿಟ್ಟಿತು ಕನಸುಗಳು ಅರಳಿದವು ನೆನಪುಗಳು ಮರುಕಳಿಸಿದವು ನೆಲ ನಗ ತೊಡಗಿತ್ತು! ********

ಕಾವ್ಯಯಾನ

ಅಸ್ತಿತ್ವ ಮೇಗರವಳ್ಳಿ ರಮೇಶ್ ನಾನೊಬ್ಬ ಸಾಧಾರಣ ಮನುಷ್ಯ!ಬರೀ ಮನುಷ್ಯನಲ್ಲತನ್ನನ್ನು ಜನ ಗುರುತಿಸ ಬೇಕೆಂಬ ಹಂಬಲದಒಬ್ಬ ಕವಿಯೂ ಇದ್ದಾನೆ ನನ್ನೊಳಗೆ! ಹಾಗೆ ನೋಡಿದರೆ ನಾನೂ ಬರೆದಿದ್ದೇನೆಹಲವಾರು ವರ್ಷಗಳಿಂದ ನೂರಾರು ಕವಿತೆಗಳನ್ನ.ಪತ್ರಿಕೆಗಳಲ್ಲೂ ಬೆಳಕು ಕಂಡಿವೆ ಹಲವಾರು ಕವಿತೆಗಳು.ನನ್ನದೊಂದು ಕವಿತಾ ಸಂಕಲನವೂ ಹೊರಬಂದಿದೆ!ಆದರೂ ನಾನು ಗುರುತಿಸಲ್ಪಡುವುದಿಲ್ಲ!ಎದುರು ಬಂದವರು ಸುಮ್ಮನೇ ನಕ್ಕು ಮುಂದೆ ಸಾಗಿ ಬಿಡುತ್ತಾರೆನಾನು ಏನೂ ಅಲ್ಲವೆಂಬಂತೆ!ಸಾಹಿತ್ಯ ದಿಗ್ಗಜರ ಕಣ್ಣಲ್ಲಂತೂನಾನೊಬ್ಬ ನಗಣ್ಯ ಕವಿ! ಮೊನ್ನೆ ಮೇಗರವಳ್ಳಿಗೆ ಹೋದವನುಬೆಳಗಿನ ವಾಕಿಂಗ್ ಮಾಡುತ್ತಾ ಸಾಗಿದ್ದೆನಿಃಶಬ್ದ, ಪ್ರಶಾಂತ ಪರಿಸರದ ನಡುವೆ ಸಾಗುವ ಹಾದಿ ಗುಂಟ!ಥಟ್ಟನೇ ಕಾಣಿಸಿತಾಗ […]

ಕಾವ್ಯಯಾನ

ಗಝಲ್ ರತ್ನರಾಯಮಲ್ಲ ಬಾಳಲ್ಲಿ ಎಡರು ತೊಡರುಗಳು ಬಂದಾಗ ನಿನ್ನ ಸಹಾಯ ಬೇಕು ಸಾಮಾಜಿಕ ವ್ಯವಸ್ಥೆಯು ಎದುರಾದಾಗ ನಿನ್ನ ಸಹಾಯ ಬೇಕು ಈ ಜೀವನದಲ್ಲಿ ನಿನ್ನನ್ನು ಹೊರತುಪಡಿಸಿ ಬೇರೆ ಯಾರೂ ಇಲ್ಲ ಅನುದಿನವು ನಾನು ಹೊಸ್ತಿಲು ದಾಟುವಾಗ ನಿನ್ನ ಸಹಾಯ ಬೇಕು ರಜನಿಗೆ ರಜನೀಚರ ಬೆಂಗಾವಲಾಗಿರುವನು ರವಿ ಮೂಡೊವರೆಗೆ ಕರಾಳ ಅಂಧಕಾರವು ನನಗೆ ಅಪ್ಪಿದಾಗ ನಿನ್ನ ಸಹಾಯ ಬೇಕು ಅನುರಾಗದ ನಿಷ್ಠೆಯಿಂದ ನಾನು ನಿನ್ನನ್ನು ಹಿಂಬಾಲಿಸುತಿದ್ದೇನೆ ಜೀವನದಲ್ಲಿ ಉಸಿರಿನೊಂದಿಗೆ ಆಡುವಾಗ ನಿನ್ನ ಸಹಾಯ ಬೇಕು ನಾವು ಮೊದಲೇ ಭೇಟಿಯಾಗಿದ್ದೆವೆಂದು […]

ಕಾವ್ಯಯಾನ

ಮೌನ ಭಾಷೆ ಸರೋಜಾ ಶ್ರೀಕಾಂತ್ ಅದಾವುದೋ ದೂರದ ಭಾವಗಳೂರಿಗೆ ಬರಸೆಳೆದ ಗಳಿಗೆಯಲ್ಲೇ..! ಮತ್ತಾವುದೂ ನೆನಪಾಗದಂತೆ ಮರೆಸಿ ಕಾಡಿದವನು ಕ್ಷಣದಲ್ಲೇ..!! ತಣ್ಣನೆಯ ತಂಗಾಳಿಯಲ್ಲೂ ನುಸುಳಿ ನಸು ನಾಚಿಸಿದವನಿವನೆ..! ಹೊಂಬಿಸಿಲಿನ ಹೊನ್ನ ರಶ್ಮಿಯಲ್ಲೂ ತುಸು ಸಂಚರಿಸಿದವನಿವನೇ..!! ಹಸಿರಸಿರಿನ ತುಂತುರು ಹನಿ ಹನಿಯಲ್ಲೂ ನಿನ್ನಿರುವಿನ ರೋಮಾಂಚನ..! ಅರಳಿದ ಸುಮದೊಳಗಿನ ಘಮವೂ ನಿನ್ನರಿವಿನ ಅನಾವರಣ..!! ಸ್ಪರ್ಶದುಸಿರಿಗೆ ಸಂಪ್ರೀತಿಯ ಹೂಬಾಣ ಬಿಟ್ಟು ಪ್ರೇಮದ ಹೆಸರಿಟ್ಟವ ನೀನೆ..! ಮೊದಲೊಲವಿನ ಮೌನ ಭಾಷೆಗೆ ಮರುಧ್ವನಿಯ ಮಾತು ಶುರು ನಿನ್ನಿಂದಲೇ..!! *********

ಕಾವ್ಯಯಾನ

ಇಂದಿನ ಕವಿತೆ ಡಾ.ವೈ.ಎಂ.ಯಾಕೊಳ್ಳಿ ಬೇಡ ಗೆಳೆಯ ನನ್ನ ಕವಿತೆಗಳಲ್ಲಿ ನನ್ನ ಹುಡುಕಬೇಡ ಬರೀ ನನ್ನ ಬಗ್ಗೆ ನಾನು ಬರೆದರೆ ಕವಿಯಾಗಲಾರೆ ಕೂಡ ಪಕ್ಕದ‌ಮನೆಯಲಿ ಹಸಿದವರ ಅರೆಹೊಟ್ಟೆಯ‌ ಬಗ್ಗೆ ಬರೆಯದಿರೆ ನನ್ನ ಕವಿತೆ ಆಗಬಹುದು ಬರೀ ಪದಗಳ ಸಂತೆ ಸುತ್ತಲಿನ ಜಗದಲಿ ನೋವಿಂದ ನಲುಗಿರಲು ನನ್ನ ಮಂದಿ ಚಂದ್ರ ತಾರೆಗಳ ಬಗ್ಗೆ ಹಾಡು ಕಟ್ಟಿದರೆ ನಾ ಎಂಥ ಕವಿಯು ಅಂದಿ ನನ್ನ ಹಾಡು ಜೊತೆಯಾಗಬೇಕು ಗೆಳೆಯ ನನ್ನೂರ ರೈತ ಗೆಳೆಯನ ನೇಗಿಲ ಕುಳಕೆ ರಾಟಿಯ ಎತ್ತುಗಳ ನೊಗದಿ ಬಾವಿಯಾಳವ […]

ಕಾವ್ಯಯಾನ

ನೆನಪ ತಿಜೋರಿ ಶಾಲಿನಿ ಆರ್. ನೆನಪಿಗೊಂದು ಮೊಳೆ ಹೊಡೆಯುತಿದ್ದೇನೆ, ಯಾರಿರದ ಇರುಳಲಿ ಚಂದಿರನ ಬೆಳಕಲಿ, ಮೆಲ್ಲನೆ ಅರಳಿದ ನೈದಿಲೆಗು ಸಂಕೋಚ, ಸದ್ದು ಕೇಳಿಸಿತೇ ಅವನಂಗಳಕು! ಸುದ್ದಿಯಾಗದಿರಲಿದು ಹೊಸ್ತಿಲಾಚೆ, ಮರಳಿ ಮನದ ಮೂಲೆಗೆ ನೆನಪುಗಳ ಜೇಡ ಬಲೆ ಸುಮ್ಮನೆ ಜಿನುಗಿದ ಕಣ್ಣಹನಿಗೂ ದಿಗಿಲು, ನಗುವ ಕತ್ತಲಿಗೂ ಬಿಕ್ಕು ಕೇಳಿಸಿತೇ? ಮತ್ತೆ ನೋಡುತ್ತೇನೆ ಗೋಡೆಯ ಕ್ಯಾಲೆಂಡರ್ ದಿನದ ಅಂಕ, ನಗೆಯ ಅನುರಣಿತ ಬೇಡದೆ ಉಳಿದ ಮಾವಿನ ಚೂರುಗಳು ಮರುಗುವಾಗ ಮನದಾಚೆಯ ಹೆದ್ದಾರಿಲಿ ಭಾರಿ ಮಳೆಯ ಸದ್ದು ತೊಯ್ದರು ತೋಯದ ನಿರ್ಲಿಪ್ತ […]

ಕಾವ್ಯಯಾನ

ಒಡೆದ ಕನ್ನಡಿ ವಿಭಾ ಪುರೋಹಿತ ಒಡೆದ ಕನ್ನಡಿ ಬಿಂಬದಲಿ ಬದುಕು ಹುಡುಕುವ ಹುಚ್ಚು ಎಂದೋ ಬಸವಳಿಯಬೇಕಿತ್ತು ನಿಂತನೀರಿಗೆ ಬಿದ್ದ ತುಂತುರು ಹನಿಗಳ ಪ್ರೇಮ ಮತ್ತೆ ನಗಿಸಿತ್ತು. ಎಷ್ಟು ತುಂಡಾದರೂ ಇಡಿಯಾಗಿ ಬೆಳೆವ ಮಣ್ಣು ಹುಳುವಿನ ಹಟವು ಬೆರಗು ಕಂಡಿತ್ತು ಕಣಕಣದ ಉಸಿರು ಜೀವಂತವಾಗಿ ಬೆಳೆದು ಪ್ರೀತಿ ಹಬ್ಬಿತ್ತು. ಬುಡಕಡಿದ ಮರಗಳಿಗೆ ಚಿಗುರುಣಿಸುವ ಪ್ರಕೃತಿ ವಾತ್ಸಲ್ಯ ವು ದಂಗುಬಡಿಸಿತ್ತು, ನರನಾಡಿಗಳ ನೆಲದ ಮೋಹ ಆಳಕ್ಕಿಳಿದ ಛಲವು ತುಂಬಾ ಕಾಡಿತ್ತು. ಕಡಲಲೆಗಳಾ ಸದ್ದಿನಲ್ಲಿ ವಾಸ್ತವದ ಕೊನೆಯಿರದ ಸಂಕೋಲೆಯಲಿ ಗೆದ್ದು ಬದುಕಿದೆ, […]

ಕಾವ್ಯಯಾನ

ಸ್ವರ್ಗಸ್ತ ಅಜ್ಜಿಯ ಬಯಕೆ ಸಿ.ಎಚ್.ಮಧುಕುಮಾರ ನಾನೂ ಸ್ವರ್ಗಕ್ಕೆ ಹೋಗಿದ್ದೆ. ಅಲ್ಲಿ ನನ್ನಜ್ಜಿ ಮಾತಿಗೆ ಸಿಕ್ಕರು. ಮೊದಲಿನಂತೆ ದುಂಡನೆಯ ದೇಹವಿಲ್ಲ, ಸೊರಗಿ ಸಣಕಲಾಗಿದ್ದರು. ಅದೂ ಸ್ವರ್ಗದ ನಿವಾಸಿಯಾಗಿ! ಆತುರದಿಂದಲೇ ಪ್ರಶ್ನಿಸಿದೆ: ಯಾಕಜ್ಜಿ? ಒಂದು ಕಡೆ ಕುಂತ್ರು ಕೂರದ ಜೀವ ನಿನ್ನದು ಯಾರು ಎಷ್ಟೇ ಗೊಣಗಿದರೂ ನಿನ್ನಿಷ್ಟದಂತೆಯೇ ಬದುಕಿದವಳು ನೀನು ಇಲ್ಲಾದರೂ ನೆಮ್ಮದಿ ಕಾಣಬಾರದೆ? ಅಜ್ಜಿ ಹೇಳಿತು: ನನಗಿಲ್ಲಿ ಏನೂ ಕೊರತೆಯಿಲ್ಲ. ಮಕ್ಕಳು ಮೊಮ್ಮಕ್ಕಳ ಗಿಜಿಗಿಜಿ ಸದ್ದು ವಾರಗೆಯವರೊಂದಿಗಿನ ಒಡನಾಟ ಮನೆಮಂದಿ, ನೆಂಟರಿಷ್ಟರಿಗೆ ಊಟಕ್ಕಿಕ್ಕಿ ಉಂಡವರು ತೃಪ್ತಿಯಾಗಿ ತೇಗಿದ ಸದ್ದು […]

ಕಾವ್ಯಯಾನ

ಸಿಗಲಾರದ ಅಳತೆ ವಸುಂದರಾ ಕದಲೂರು ನೀನು, ನಿನ್ನ ಕಣ್ಣು ಕೈ ಮನಸ್ಸು ನಾಲಗೆಗಳಲ್ಲಿ ಅಂದಾಜು ಪಟ್ಟಿ ಹಿಡಿದು ಅಳೆದೆ ಅಳೆದೆ ಅಳೆದೆ ಅಳೆಯುತ್ತಲೇ ಇದ್ದೀಯೆ.. ಸರಿ, ಅಳೆದುಕೋ ಹಾಗೆ ಅಳತೆಗೆ ದಕ್ಕುವುದಾದರೆ ನೀ ಅಳೆಯುವುದಾದರೂ ಏನನ್ನು! ಒಂದಷ್ಟು ಅಂದಾಜು ಸಿಗುವ ಗಾತ್ರ- ಗೋತ್ರ; ಉಬ್ಬುತಗ್ಗು ಅವಯವ- ಅವ್ವವ್ವಾ !! ಅಷ್ಟೇ. ಅಷ್ಟಕ್ಕೇ ನಿನಗೆ ದಕ್ಕಿಬಿಟ್ಟರೆ, ರೇ… ಅರೇ ಹೋಗು, ಅಳೆದುಕೋ ನಿನ್ನಾ ಅಳತೆಗೋಲು ಅಂದಾಜು ಶತಮಾನ ಹಳತು ಅದರ ಗೋಲು. ಮಾಡಿಕೊಂಡು ಬಂದದ್ದು ಬರೀ ರೋಲುಕಾಲು. ಅಳೆದೂ […]

Back To Top